ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ – Kannada News | Koppal: 5 Year Old Child Falls from First Floor, Suffers Head Injury

ಕೊಪ್ಪಳ, ಡಿಸೆಂಬರ್​ 22: ಐದು ವರ್ಷ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರ ಗಾಯಗೊಂಡಿರುವಂತಹ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್​ ಸಾವು ಗೆದ್ದುಬಂದ ಬಾಲಕ. ಕೂಡಲೇ ಕೊಪ್ಪಳ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡುಬಂದಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆಯಾಗಿದ್ದು, ಎದೆ ಝಲ್ ಅನ್ನಿಸುತ್ತದೆ. ನಡೆದದ್ದೇನು?…

Read More

ಮಿಲಿಯನ್ ದಾಟಿ ಮುನ್ನುಗ್ಗುತ್ತಿರುವ ‘ಲ್ಯಾಂಡ್ ಲಾರ್ಡ್’ ಹಾಡು ‘ನಿಂಗವ್ವ ನಿಂಗವ್ವ’ – Kannada News | Duniya Vijay and Rachita Ram starrer Landlord movie song Ningavva Ningavva released

ನಟಿ ರಚಿತಾ ರಾಮ್ ಹಾಗೂ ನಟ ದುನಿಯಾ ವಿಜಯ್ (Duniya Vijay) ಅವರು ಜೋಡಿಯಾಗಿ ‘ಲ್ಯಾಂಡ್​ ಲಾರ್ಡ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ಸಾರಥಿ ಫಿಲ್ಮ್ಸ್’ ಮೂಲಕ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ‘ನಿಂಗವ್ವ ನಿಂಗವ್ವ’ (Ningavva Ningavva) ಹಾಡು ಬಿಡುಗಡೆ ಆಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡಿಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ….

Read More

ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ – Kannada News | Kalaburagi: AC Theft at Kidwai Hospital; Serious Allegations Against Doctors

ಕಲಬುರಗಿ, ಡಿಸೆಂಬರ್​​ 22: ಕಿದ್ವಾಯಿ (Kidwai) ಈ ಭಾಗದ ಬಡ ಜನರ ಉಪಯೋಗಕ್ಕಿರುವ ಕ್ಯಾನ್ಸರ್ ಆಸ್ಪತ್ರೆ. ಆದರೆ ಆಸ್ಪತ್ರೆಯಲ್ಲಿನ ಕೆಲ ಬೆಲೆ ಬಾಳುವ ವಸ್ತುಗಳನ್ನು ಅಲ್ಲಿನ ಕೆಲ ವೈದ್ಯರೇ ಕಳ್ಳತನ (theft) ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲಕ್ಷಾಂತರ ಮೌಲ್ಯದ ಎಸಿಗಳನ್ನ ತಮ್ಮ ನಿವಾಸಕ್ಕೆ ಬಳಿಸಿಕೊಂಡಿದ್ದಾರಂತೆ. ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಗೋಲ್ಮಾಲ್ ನಡೆದಿರುವುದು ಕೇಸರಿ ಪಡೆ ತನಿಖೆಗೆ ಆಗ್ರಹಿಸಿದೆ‌. ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ದವೇ ಗಂಭೀರ ಆರೋಪ ಕೇಳಿಬಂದಿದೆ. ಏಕೆಂದರೆ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ…

Read More

ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ – Kannada News | Kalaburgi Shanthalinga Swamiji Gun Fire On Air video Goes viral

ಕಲಬುರಗಿ, (ಡಿಸೆಂಬರ್ 22): ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ (Kalaburgi) ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ…

Read More

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್ – Kannada News | Rajath Kishan says he does not want to talk about Chaithra Kundapura for this reason

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ (Chaithra Kundapura) ಅವರು ಸ್ಪರ್ಧಿಸಿದ್ದರು. ಮೊದಲಿಗೆ ಜಗಳ ಮಾಡಿಕೊಂಡಿದ್ದ ಅವರು ನಂತರ ಆಪ್ತರಾದರು. ಚೈತ್ರಾ ಮದುವೆಯನ್ನು ರಜತ್ ಮುಂದೆ ನಿಂತು ಮಾಡಿಸಿದ್ದರು. ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ…

Read More

ಭಾರತದ ಜಿಡಿಪಿ ಲೆಕ್ಕಾಚಾರಕ್ಕೆ ಬೇಸ್ ಇಯರ್ 2011-12 ಅಲ್ಲ, 2022-23; ಇದರಿಂದೇನು ಪ್ರಯೋಜನ? – Kannada News | India’s revised GDP, Inflation series, consultative workshop to be conducted

ನವದೆಹಲಿ, ಡಿಸೆಂಬರ್ 22: ಜಿಡಿಪಿ, ಹಣದುಬ್ಬರ, ಔದ್ಯಮಿಕ ಉತ್ಪಾದನಾ ಸೂಚಿಗೆ ಆಧಾರ ವರ್ಷ ಅಥವಾ ಬೇಸ್ ಇಯರ್ ಅನ್ನು ಭಾರತ ಬದಲಿಸುತ್ತಿದೆ. ಈ ಅಂಶಗಳನ್ನು ಒಳಗೊಂಡಿರುವ ಆರ್ಥಿಕ ದತ್ತಾಂಶದ (Macro economic data) ಹೊಸ ಸರಣಿಯನ್ನು 2026ಕ್ಕೆ ಬಿಡುಗಡೆ ಮಾಡಲಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಯೋಜನಾ ಅನುಷ್ಠಾನ ಮತ್ತು ಸಾಂಖ್ಯಿಕ ಸಚಿವಾಲಯವು ಸಂಬಂಧಪಟ್ಟ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳೊಂದಿಗೆ ಕಾರ್ಯಾಗಾರಗಳನ್ನು ನಡೆಸಲಿದೆ. ದೆಹಲಿಯ ಭಾರತ್ ಮಂಡಪಂ ಅಂಗಣದಲ್ಲಿ ಈ ಬಿಡುಗಡೆ ಪೂರ್ವದ ವರ್ಕ್​ಶಾಪ್ ನಡೆಯಲಿದೆ. ಹಣದುಬ್ಬರ…

Read More

ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ – Kannada News | Ex Boyfriend leaked Private video: Woman Protest Infront off Chikkaballapur DC Office For Justice

ಚಿಕ್ಕಬಳ್ಳಾಪುರ, (ಡಿಸೆಂಬರ್ 22): ಮಾಜಿ ಪ್ರಿಯಕರನ (Lover) ಕಿತಾಪತಿಯಿಂದಾಗಿ ಯುವತಿಯ ಸಂಸಾರವೇ ಹಾಳಾಗಿದ್ದು, ಯುವತಿ ಬೀದಿಗೆ ಬಿದ್ದಿದ್ದಾಳೆ. ಹೌದು..ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕೆಂಪನಹಳ್ಳಿ ಗ್ರಾಮದ 20 ವರ್ಷದ ಯುವತಿ, ಕಳೆದ 20 ದಿನಗಳ ಹಿಂದೆಯಷ್ಟೇ ಬೆಂಗಳೂರು ಮೂಲದ ಯುವಕನ ಜೊತೆ ಸಪ್ತಪದಿ ತುಳಿದು ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಳು. ಆದ್ರೆ ಹನುಮೂನ್ ಮುಗಿಯುವುದಕ್ಕೂ ಮುನ್ನ ಪ್ರೀಯಕರ ಅಂಬರೀಶ, ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯ ಸೇರಿಕೊಂಡು ಯುವತಿ ಹಾಗೂ ಅಂಬರೀಶ ಬೆಡ್ ರೂಮ್ ಹಂಚಿಕೊಂಡಿರುವ ವಿಡಿಯೋವನ್ನು…

Read More

ಶೂಟ್ ಮಾಡಿಕೊಂಡು ಪಂಜಾಬ್‌ನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಆತ್ಮಹತ್ಯೆಗೆ ಯತ್ನ – Kannada News | Punjab Former IPS officer Amar Singh Chahal shoots self in Patiala

ಪಟಿಯಾಲ, ಡಿಸೆಂಬರ್ 22: ಪಂಜಾಬ್‌ನ ಮಾಜಿ ಐಪಿಎಸ್  (IPS) ಅಧಿಕಾರಿ ಅಮರ್ ಸಿಂಗ್ ಚಾಹಲ್ ಇಂದು ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಮೂಲಗಳ ಪ್ರಕಾರ ತೀವ್ರವಾದ ಆರ್ಥಿಕ ನಷ್ಟ ಮತ್ತು ಮಾನಸಿಕ ಒತ್ತಡದಿಂದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸ್ಥಳದಿಂದ ವಶಪಡಿಸಿಕೊಂಡ ಸೂಸೈಡ್ ನೋಟ್ ಪ್ರಕಾರ ಆನ್‌ಲೈನ್ ವಂಚನೆಯಿಂದ ಉಂಟಾದ ತೀವ್ರ ಆರ್ಥಿಕ ನಷ್ಟ ಮತ್ತು ಮಾನಸಿಕ ಯಾತನೆಯನ್ನು ಸೂಚಿಸುತ್ತದೆ ಎಂದು…

Read More

Weekly Numerology: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 22ರಿಂದ 27ರ ತನಕ ವಾರಭವಿಷ್ಯ   – Kannada News | Weekly Numerology for December 22nd to 27th Number Theory luck and unluck predicted in Kannada

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Numerology) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 22ರಿಂದ 27ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮ ಸುತ್ತ ಮುತ್ತ ಆಗಿರುವಂಥ ಬದಲಾವಣೆಗಳನ್ನು ತುಂಬ ಸೂಕ್ಷ್ಮವಾಗಿ ಗಮನಿಸಲಿದ್ದೀರಿ. ಈಗಾಗಲೇ ನೀಡಿದ್ದಂಥ ಜವಾಬ್ದಾರಿಗಳಲ್ಲಿ ಅದಲು ಬದಲು ಮಾಡುವ ತೀರ್ಮಾನ ಕೈಗೊಳ್ಳಲಿದ್ದೀರಿ. ನೀವು…

Read More

ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್, ಕೊಹ್ಲಿ ದಾಖಲೆ ಹೇಗಿದೆ? – Kannada News | Vijay Hazare Trophy: Rohit Sharma and Virat Kohli Stats

ಮೊದಲಿಗೆ, ರೋಹಿತ್ ಶರ್ಮಾ ಅವರ ದಾಖಲೆಯನ್ನು ನೋಡೋಣ. 2018 ರ ನಂತರ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ರೋಹಿತ್ ಶರ್ಮಾ, ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ 18 ಪಂದ್ಯಗಳನ್ನು ಆಡಿದ್ದಾರೆ. ಆ 18 ಪಂದ್ಯಗಳಲ್ಲಿ 17 ಇನ್ನಿಂಗ್ಸ್‌ಗಳಲ್ಲಿ, ರೋಹಿತ್ ಶರ್ಮಾ 38.7 ರ ಸರಾಸರಿಯಲ್ಲಿ 581 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ. Source link

Read More