ಪೇಪರ ಪಾರಿವಾಳ ತಂದ ಅವಾಂತರ: ಮೊದಲ ಮಹಡಿಯಿಂದ ಬಿದ್ರೂ ಬದುಕುಳಿದ 5ರ ಬಾಲಕ – Kannada News | Koppal: 5 Year Old Child Falls from First Floor, Suffers Head Injury

ಕೊಪ್ಪಳ, ಡಿಸೆಂಬರ್​ 22: ಐದು ವರ್ಷ ಬಾಲಕ (Child) ಮನೆಯ ಮೊದಲನೇ ಮಹಡಿಯಿಂದ ಕೆಳಗೆ ಬಿದ್ದು (Fall) ಗಂಭೀರ ಗಾಯಗೊಂಡಿರುವಂತಹ ಘಟನೆ ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ನಡೆದಿದೆ. ಪವಾಡಸದೃಶವೆಂಬಂತೆ ಬಾಲಕ ಪಾರಾಗಿದ್ದಾನೆ. ಮಹಮ್ಮದ್ ಹ್ಯಾರಿಸ್​ ಸಾವು ಗೆದ್ದುಬಂದ ಬಾಲಕ. ಕೂಡಲೇ ಕೊಪ್ಪಳ ಖಾಸಗಿ ಆಸ್ಪತ್ರೆಗೆ ಪೋಷಕರು ದಾಖಲಿಸಿದ್ದರು. ಆದರೆ ವೈದ್ಯರ ಪರೀಕ್ಷೆ ವೇಳೆ ಮಹಮ್ಮದ್ ಹ್ಯಾರಿಸ್ ತಲೆಯಲ್ಲಿ ಬಿರುಕು ಕಂಡುಬಂದಿದೆ. ಬಾಲಕ ಮೊದಲನೇ ಮಹಡಿಯಿಂದ ಕೆಳೆಗ ಬಿಳ್ಳುವ ದೃಶ್ಯ ಸೆರೆಯಾಗಿದ್ದು, ಎದೆ ಝಲ್ ಅನ್ನಿಸುತ್ತದೆ.

ನಡೆದದ್ದೇನು?

ಕೊಪ್ಪಳ ನಗರದ ಹಮಾಲರ ಕಾಲೋನಿಯಲ್ಲಿ ಐದು ವರ್ಷದ ಬಾಲಕ ಮಹಮ್ಮದ್ ಹ್ಯಾರಿಸ್ ನಿನ್ನೆ ಮಧ್ಯಾಹ್ನ ಮೊದಲನೇ ಮಹಡಿಯಲ್ಲಿ ಪೇಪರ್​ನಿಂದ ಪಾರಿವಾಳ ಮಾಡಿ ಆಟವಾಡುತ್ತಿದ್ದ. ಅದನ್ನು ಗಾಳಿ ತೂರಿ ಹಿಡಿಯಲು ಹೋದಾಗ ಮೊದಲನೇ ಮಹಡಿಯಿಂದ ಕೆಳಗಡೆ ಬಿದ್ದಿದ್ದಾನೆ. ಮಹಮ್ಮದ್ ಕೆಳಗಡೆ ಬಿಳ್ಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ

ಮನೆಯ ಕೆಳಗಡೆ ಮಹಮ್ಮದ್ ಹ್ಯಾರಿಸ್ ಸಹೋದರಿ ಕೂಡ ಆಟವಾಡುತ್ತಿದ್ದು, ಮಹಮ್ಮದ್ ಬಿದ್ದ ತಕ್ಷಣ ಮೇಲೆ ಎತ್ತಿದ್ದಾಳೆ. ಒಳಗಡೆಯಿಂದ ಪೋಷಕರು ಕಿರುಚುತ್ತಾ ಓಡೋಡಿ ಬಂದಿದ್ದಾರೆ. ಕೆಳಗಡೆ ಬಿದ್ದ ಮಗುವನ್ನ ಕೂಡಲೇ ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಮಹಮ್ಮದ್​​ಗೆ 2 ಗಂಟೆಯೊಳಗೆ ಆಪರೇಷನ್ ಮಾಡಿದ್ದಾರೆ. ಸದ್ಯ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಇದನ್ನೂ ಓದಿ: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ

ಒಟ್ಟಾರೆ ಮೊದಲನೇ ಮಹಡಿಯಿಂದ ಬಾಲಕ ಬಿದ್ದರೂ ಪವಾಡಸದೃಶವಾಗಿ ಬದುಕುಳಿದ್ದಾನೆ. ಆತನ ಹಣೆ ಬರಹ ಗಟ್ಟಿಯಿರುವ ಕಾರಣ ಬದುಕಿಳಿದಿದ್ದಾನೆ. ಸದ್ಯ ಮಹಮ್ಮದ್​ಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಿಲಿಯನ್ ದಾಟಿ ಮುನ್ನುಗ್ಗುತ್ತಿರುವ ‘ಲ್ಯಾಂಡ್ ಲಾರ್ಡ್’ ಹಾಡು ‘ನಿಂಗವ್ವ ನಿಂಗವ್ವ’ – Kannada News | Duniya Vijay and Rachita Ram starrer Landlord movie song Ningavva Ningavva released

ನಟಿ ರಚಿತಾ ರಾಮ್ ಹಾಗೂ ನಟ ದುನಿಯಾ ವಿಜಯ್ (Duniya Vijay) ಅವರು ಜೋಡಿಯಾಗಿ ‘ಲ್ಯಾಂಡ್​ ಲಾರ್ಡ್’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ‘ಸಾರಥಿ ಫಿಲ್ಮ್ಸ್’ ಮೂಲಕ ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಜಡೇಶ್ ಕೆ. ಹಂಪಿ ಅವರು ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ‘ನಿಂಗವ್ವ ನಿಂಗವ್ವ’ (Ningavva Ningavva) ಹಾಡು ಬಿಡುಗಡೆ ಆಯಿತು. ಅಜನೀಶ್ ಲೋಕನಾಥ್ ಸಂಗೀತ ನೀಡಿರುವ ಈ ಹಾಡಿಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಮತ್ತು ಅನನ್ಯಾ ಭಟ್ ಕಂಠದಲ್ಲಿ ಈ ಹಾಡು ಮೂಡಿಬಂದಿದೆ.

‘ನಿಂಗವ್ವ ನಿಂಗವ್ವ’ ಹಾಡಿನಿಂದ ‘ಲ್ಯಾಂಡ್​ ಲಾರ್ಡ್’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ. ಈ ಹಾಡಿಗೆ ಭೂಷಣ್ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ‌. ‘ಆನಂದ್ ಆಡಿಯೋ’ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಮೂರೇ ದಿನದಲ್ಲಿ 1.5 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಕಾಣುವ ಮೂಲಕ ಈ ಹಾಡು ಮೆಚ್ಚುಗೆ ಪಡೆಯುತ್ತಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು.

‘ನೆನಪಿರಲಿ’ ಪ್ರೇಮ್-ಜ್ಯೋತಿ, ತರುಣ್ ಸುಧೀರ್-ಸೋನಾಲ್, ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ದಂಪತಿ ಬಂದು ‘ನಿಂಗವ್ವ ನಿಂಗವ್ವ’ ಹಾಡನ್ನು ಬಿಡುಗಡೆ ಮಾಡಿದರು. ಹಾಡು ನೋಡಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ನೀನಾಸಂ ಸತೀಶ್ ಮತ್ತು ಗುರು ದೇಶಪಾಂಡೆ ಅವರು ಅತಿಥಿಗಳಾಗಿದ್ದರು. ‘ಲ್ಯಾಂಡ್​ ಲಾರ್ಡ್’ ಚಿತ್ರಕ್ಕೆ ಸ್ವಾಮಿ ಅವರು ಛಾಯಾಗ್ರಹಣ ಮಾಡಿದ್ದಾರೆ.

ನಿಂಗವ್ವ ನಿಂಗವ್ವ ಹಾಡು:

ಸಿನಿಮಾದ ಬಗ್ಗೆ ದುನಿಯಾ ವಿಜಯ್ ಅವರು ಮಾತನಾಡಿದರು. ‘ಸಾಮಾನ್ಯವಾಗಿ ಹೀರೋಯಿನ್​ಗಳು ಈ ವಯಸ್ಸಿನ ಪಾತ್ರ ಒಪ್ಪಿಕೊಳ್ಳುವುದು ಕಡಿಮೆ. ರಚಿತಾ ರಾಮ್ ಅವರು ಒಪ್ಪಿಕೊಂಡು ಈ ಪಾತ್ರ ಮಾಡಿದ್ದಾರೆ. ನನಗೂ ಕೂಡ ಈ ಸಾಂಗ್ ಬಿಡುಗಡೆ ಆಗುವವರೆಗೂ ನನ್ನ ಪಾತ್ರದ ಬಗ್ಗೆ ಎಲ್ಲರೂ ಏನು ಹೇಳಬಹುದು ಎಂಬ ಕುತೂಹಲವಿತ್ತು. ಈಗ ಎಲ್ಲರೂ ಮೆಚ್ಚುಗೆ ನೀಡುತ್ತಿದ್ದಾರೆ’ ಎಂದು ದುನಿಯಾ ವಿಜಯ್ ಹೇಳಿದರು.

ಇದನ್ನೂ ಓದಿ: ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ರಚಿತಾ ರಾಮ್ ಮಾತನಾಡಿ, ‘ಈ ಸಾಂಗ್ ಉತ್ತಮವಾಗಿ ಮೂಡಿಬಂದಿದೆ‌. ಈ ಹಾಡಿನ ಶೂಟಿಂಗ್ ಸಮಯದಿಂದಲೂ ಯಾವಾಗ ಬಿಡುಗಡೆ ಆಗಬಹುದೆಂದು ಕಾಯುತ್ತಿದೆ’ ಎಂದರು. ‘ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಎಲ್ಲಾ ಹಾಡುಗಳು ಬಹಳ ಚೆನ್ನಾಗಿ ಮೂಡಿಬಂದಿವೆ’ ಎಂದಿದ್ದಾರೆ ನಿರ್ದೇಶಕ ಜಡೇಶ್ ಕೆ. ಹಂಪಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಲಬುರಗಿ: ಕಿದ್ವಾಯಿ ಆಸ್ಪತ್ರೆಯಲ್ಲಿನ ಎಸಿ ಕಳ್ಳತನ: ವೈದ್ಯರ ವಿರುದ್ದವೇ ಗಂಭೀರ ಆರೋಪ – Kannada News | Kalaburagi: AC Theft at Kidwai Hospital; Serious Allegations Against Doctors

ಕಲಬುರಗಿ, ಡಿಸೆಂಬರ್​​ 22: ಕಿದ್ವಾಯಿ (Kidwai) ಈ ಭಾಗದ ಬಡ ಜನರ ಉಪಯೋಗಕ್ಕಿರುವ ಕ್ಯಾನ್ಸರ್ ಆಸ್ಪತ್ರೆ. ಆದರೆ ಆಸ್ಪತ್ರೆಯಲ್ಲಿನ ಕೆಲ ಬೆಲೆ ಬಾಳುವ ವಸ್ತುಗಳನ್ನು ಅಲ್ಲಿನ ಕೆಲ ವೈದ್ಯರೇ ಕಳ್ಳತನ (theft) ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಲಕ್ಷಾಂತರ ಮೌಲ್ಯದ ಎಸಿಗಳನ್ನ ತಮ್ಮ ನಿವಾಸಕ್ಕೆ ಬಳಿಸಿಕೊಂಡಿದ್ದಾರಂತೆ. ವೈದ್ಯಕೀಯ ಶಿಕ್ಷಣ ಸಚಿವರ ತವರಲ್ಲೇ ಗೋಲ್ಮಾಲ್ ನಡೆದಿರುವುದು ಕೇಸರಿ ಪಡೆ ತನಿಖೆಗೆ ಆಗ್ರಹಿಸಿದೆ‌.

ಕಲಬುರಗಿಯ ಕಿದ್ವಾಯಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ದವೇ ಗಂಭೀರ ಆರೋಪ ಕೇಳಿಬಂದಿದೆ. ಏಕೆಂದರೆ ಆಸ್ಪತ್ರೆಯಲ್ಲಿ ಲಕ್ಷಾಂತರ ಮೌಲ್ಯದ ಎ.ಸಿಗಳನ್ನು ತಮ್ಮ ಸ್ವಂತ ಮನೆಗೆ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಕಳೆದ ತಿಂಗಳು ಆಸ್ಪತ್ರೆಯಲ್ಲಿನ 24 ಎ.ಸಿ ಯೂನಿಟ್​ಗಳನ್ನ ಬೇರೆಡೆಗೆ ಸಾಗಿಸಲಾಗಿತ್ತಂತೆ. ಈ ಬಗ್ಗೆ ಅಲ್ಲಿನ ಸಿಬ್ಬಂದಿಗೆ ಗೊತ್ತಾದ್ರು ಬೇರೆಯದ್ದೆ ಕಥೆ ಹೇಳಿದ್ದರಂತೆ. ಯಾವಾಗ ಈ ವಿಚಾರ ಹೊರಗಡೆ ಲೀಕ್ ಆಯಿತೋ ಆವಾಗ ಬೆಂಗಳೂರಿನ ಮುಖ್ಯ ಕಚೇರಿಯವರೆಗೂ ವಿಷಯ ತಲುಪಿದೆ. ಅಲ್ಲಿಂದ ತಕ್ಷಣವೇ ಎಸಿ ಕಳ್ಳತನವಾದ ಬಗ್ಗೆ ದೂರು ದಾಖಲಿಸುವುದಕ್ಕೆ ಸೂಚಿಸಲಾಗಿದೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯಲ್ಲಿನ ಸ್ಕ್ಯಾನಿಂಗ್ ಮಷಿನ್ ಕದ್ದೊಯ್ದು ಮನೆಯಲ್ಲಿಟ್ಟ ಸಿಬ್ಬಂದಿ: ಭ್ರೂಣ ಲಿಂಗ ಪತ್ತೆ ಶಂಕೆ!

ಕಳೆದ ವಾರ ಅಂದರೆ ಡಿಸೆಂಬರ್ 12ರಂದು ಕಲಬುರಗಿಯ ಬ್ರಹ್ಮಪುರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆದರೆ ಅಲ್ಲಿಯೂ ಆಸ್ಪತ್ರೆ ಪ್ರಭಾರ ವೈದ್ಯಾಧಿಕಾರಿ ಡಾ.ಗುರುರಾಜ ದೇಶಪಾಂಡೆ ಕೇವಲ ಎರಡು ಎಸಿಗಳ ಬಿಡಿ ಭಾಗಗಳಷ್ಟೇ ಕಳುವಾಗಿದೆ ಎಂದು ದೂರು ನೀಡಿದ್ದಾರೆ. ಅದೇ ವಿಷಯ ಸದ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಏಕೆಂದರೆ ಯಾವಾಗ ಎಸಿ ಕಳ್ಳತನದ ಬಗ್ಗೆ ಒತ್ತಡ ಹೆಚ್ಚಾಯಿತೋ ಆಗ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಿದ್ದ ಎಸಿಗಳನ್ನ ವಾಪಸ್ ತಂದಿಟ್ಟಿದ್ದಾರಂತೆ. ಹೀಗಾಗಿ ಲಕ್ಷಾಂತರ ರೂ ಎಸಿ ಯೂನಿಟ್​​ಗಳನ್ನ ಆಸ್ಪತ್ರೆಯಿಂದ ತೆಗೆದುಕೊಂಡು ಹೋಗಿದು ಯಾರು, ಇದಕ್ಕೆ ಆಸ್ಪತ್ರೆಯ ಮುಖ್ಯಸ್ಥರೇ ಸಹಕರಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್​ ಆಗ್ರಹಿಸಿದ್ದಾರೆ.

ಎಸಿ ಕಳ್ಳತನ ವಿಚಾರದಲ್ಲಿ ದೊಡ್ಡ ಗೋಲ್ಮಾಲ್ ನಡೆದಿದೆ. ಆಸ್ಪತ್ರೆಯ ಸಿಸಿಟಿವಿಯಲ್ಲಿ ಕಳ್ಳ ಸೆರೆಸಿಕ್ಕರೂ ಪೊಲೀಸರು ಆತನ ವಿಚಾರಣೆ ಮಾಡಿಲ್ಲ. ಎಲ್ಲರೂ ಶಾಮೀಲಾಗಿ ವ್ಯವಸ್ಥಿತವಾಗಿ ಪ್ರಕರಣವನ್ನ ಮುಚ್ಚಿಹಾಕುವುದಕ್ಕೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಇದಿಷ್ಟೇ ಅಲ್ಲದೆ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತವಾಗಿ ಸಿಗುವ ಔಷಧಿಗಳನ್ನ ಕೂಡ ಕಳ್ಳತನ ಮಾಡಿಕೊಂಡು ತಮ್ಮ ಖಾಸಗಿ ಕ್ಲಿನಿಕ್ ತೆಗೆದುಕೊಂಡು ಹೋಗುತ್ತಿದ್ದಾರಂತೆ. ಪ್ರತಿ ತಿಂಗಳು ಬಡ ರೋಗಿಗಳಿಗೆ ಅಂತ ಲಕ್ಷಾಂತರ ರೂ. ಸರ್ಕಾರ ಖರ್ಚು ಮಾಡುತ್ತಿದ್ದರೆ, ಇಲ್ಲಿನ ಆಸ್ಪತ್ರೆಯ ಮುಖ್ಯಸ್ಥರೇ ಕಳ್ಳತನಕ್ಕಿಳಿದರಾ ಎನ್ನುವ ಅನುಮಾನ ಶುರುವಾಗಿದೆ.

ಡಾ.ಗುರುರಾಜ್ ದೇಶಪಾಂಡೆ ಹೇಳಿದ್ದಿಷ್ಟು 

ಇನ್ನು ಈ ಬಗ್ಗೆ ಕ್ವಿದ್ವಾಯಿ ಪ್ರಭಾರ ವೈದ್ಯಾಧಿಕಾರಿ ಡಾ.ಗುರುರಾಜ್ ದೇಶಪಾಂಡೆ ಅವರನ್ನು ಕೇಳಿದರೆ, ಆಸ್ಪತ್ರೆಯ ಎಸಿಗಳು ಕೆಟ್ಟು ಹೋಗಿದ್ದವು, ಅವುಗಳನ್ನ ತೆಗೆದು ಹೊಸ ಎಸಿಗಳನ್ನ ಹಾಕಿದ್ದೇವೆ. ಹಳೇ ಎಸಿಗಳನ್ನ ಮರುಖರೀದಿ ಅಡಿ ಕೊಟ್ಟಿದ್ದೇವೆ. ಆದರೆ ಟೆಂಡರ್​ನಲ್ಲಿ ಮರುಖರೀದಿ ಇರದ ಕಾರಣ ವಾಪಸ್ ತರಿಸಿಕೊಂಡಿದ್ದೇವೆ ಎನ್ನುತ್ತಾರೆ. ಮರುಖರೀದಿಗೆ ಟೆಂಡರ್ ಕರೆಯದೆ ಹೇಗೆ ಎಸಿಗಳನ್ನ ಆಸ್ಪತ್ರೆಯಿಂದ ಹೊರಗಡೆ ತೆಗೆದುಕೊಂಡು ಹೋದರು, ಯಾರು ತೆಗೆದುಕೊಂಡು ಹೋದರು ಎಂದು ಕೇಳಿದರೆ ಅದಕ್ಕೆ ಉತ್ತರವಿಲ್ಲ.

ಇದನ್ನೂ ಓದಿ: ಸೈಬರ್ ಅಪರಾಧ ಲೋಕದ ಅತಿದೊಡ್ಡ ವಂಚನೆ ಬಯಲಿಗೆಳೆದ ದಾವಣಗೆರೆ ಪೊಲೀಸ್! ವಂಚಕನ ಖಾತೆಯಲ್ಲಿ 1000 ಕೋಟಿ ರೂ.ಗೂ ಹೆಚ್ಚು ವಹಿವಾಟು

ಕಲಬುರಗಿ ಕಿದ್ವಾಯಿ ಆಸ್ಪತ್ರೆಯ ಮುಖ್ಯಸ್ಥರ ವಿರುದ್ದವೇ ಬಿಜೆಪಿ ತನಿಖೆಗೆ ಆಗ್ರಹಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆಯಿಂದ ಅಸಲಿ ಕಹಾನಿ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕುಡಿದು ಮಠದಲ್ಲಿ ಸ್ವಾಮೀಜಿ ರಂಪಾಟ: ಮತ್ತಿನಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶ್ರೀ – Kannada News | Kalaburgi Shanthalinga Swamiji Gun Fire On Air video Goes viral

ಕಲಬುರಗಿ, (ಡಿಸೆಂಬರ್ 22): ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಕುಡಿದು ರಂಪಾಟ ಮಾಡಿದ್ದಾರೆ. ಕೆಲ ತಿಂಗಳಿನಿಂದ ನಾಪತ್ತೆಯಾಗಿದ್ದ ಕಲಬುರಗಿ (Kalaburgi) ಜಿಲ್ಲೆ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಮಠದ ಶಾಂತಲಿಂಗ ಶಿವಾಚಾರ್ಯ, ಇದೀಗ ದಿಢೀರ್ ಮಠದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮಠಕ್ಕೆ ಹೊಸ ಪೀಠಾಧಿಪತಿ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿರುವ ಸುದ್ದಿ ತಿಳಿದು ಸ್ವಾಮೀಜಿ ಮಠಕ್ಕೆ ವಾಪಸ್ ಆಗಿದ್ದಾರೆ. ಆದ್ರೆ, ಕುಡಿದು ಮಠದ ಆವರಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ಮೂಲಕ ತಮ್ಮ ವಿರೋಧಿಗಳನ್ನ ಹೆದರಿಸಲು ಗುಂಡು ಹಾರಿಸಿದ್ರಾ ಎನ್ನುವ ಚರ್ಚೆಗಳು ನಡೆದಿದ್ದು, ಸದ್ಯ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್ – Kannada News | Rajath Kishan says he does not want to talk about Chaithra Kundapura for this reason

‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ರಜತ್ ಮತ್ತು ಚೈತ್ರಾ ಕುಂದಾಪುರ (Chaithra Kundapura) ಅವರು ಸ್ಪರ್ಧಿಸಿದ್ದರು. ಮೊದಲಿಗೆ ಜಗಳ ಮಾಡಿಕೊಂಡಿದ್ದ ಅವರು ನಂತರ ಆಪ್ತರಾದರು. ಚೈತ್ರಾ ಮದುವೆಯನ್ನು ರಜತ್ ಮುಂದೆ ನಿಂತು ಮಾಡಿಸಿದ್ದರು. ಅಣ್ಣ-ತಂಗಿ ರೀತಿ ಇದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋಗೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಬಂದಿದ್ದರು. ಈ ಆಟದಲ್ಲಿ ಇಬ್ಬರ ನಡುವೆ ಕಿರಿಕ್ ಆಯಿತು. ರಜತ್ ಕುಟುಂಬದ ಬಗ್ಗೆ ಚೈತ್ರಾ ಮಾತಾಡಿದರು. ಇದರಿಂದ ರಜತ್ (Rajath Kishan) ಗರಂ ಆಗಿದ್ದಾರೆ. ‘ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ ಚೈತ್ರಾ ಬಗ್ಗೆ ಮಾತಾಡಲು ನನಗೆ ಇಷ್ಟ ಇಲ್ಲ. ನಾವೆಲ್ಲ ಏನು ಮಾಡಿದ್ದೇವೆ ಎಂಬುದು ಅವರಿಗೆ ಗೊತ್ತಿರಬೇಕು. ಅವರು ನನ್ನ ಫ್ಯಾಮಿಲಿ ಬಗ್ಗೆ ಮಾತನಾಡಿದ್ದರಿಂದ ಅವರ ಬಗ್ಗೆ ನನಗೆ ಏನೂ ಕೇಳಬೇಡಿ, ನಾನು ಅವರ ಬಗ್ಗೆ ಮಾತನಾಡುವುದೂ ಇಲ್ಲ. ನನಗೆ ಅವರು ಯಾರು ಅಂತಲೇ ಗೊತ್ತಿಲ್ಲ. ನಾನು ಅವರನ್ನು ನನ್ನ ಫ್ಯಾಮಿಲಿ ಎಂದುಕೊಂಡಿದ್ದೆ. ಆದರೆ ಅವರು ನನ್ನ ಫ್ಯಾಮಿಲಿ ಬಗ್ಗೆ ಮಾತಾಡಿದ್ದು ನನಗೆ ಇಷ್ಟ ಆಗಲಿಲ್ಲ’ ಎಂದು ರಜತ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತದ ಜಿಡಿಪಿ ಲೆಕ್ಕಾಚಾರಕ್ಕೆ ಬೇಸ್ ಇಯರ್ 2011-12 ಅಲ್ಲ, 2022-23; ಇದರಿಂದೇನು ಪ್ರಯೋಜನ? – Kannada News | India’s revised GDP, Inflation series, consultative workshop to be conducted

ನವದೆಹಲಿ, ಡಿಸೆಂಬರ್ 22: ಜಿಡಿಪಿ, ಹಣದುಬ್ಬರ, ಔದ್ಯಮಿಕ ಉತ್ಪಾದನಾ ಸೂಚಿಗೆ ಆಧಾರ ವರ್ಷ ಅಥವಾ ಬೇಸ್ ಇಯರ್ ಅನ್ನು ಭಾರತ ಬದಲಿಸುತ್ತಿದೆ. ಈ ಅಂಶಗಳನ್ನು ಒಳಗೊಂಡಿರುವ ಆರ್ಥಿಕ ದತ್ತಾಂಶದ (Macro economic data) ಹೊಸ ಸರಣಿಯನ್ನು 2026ಕ್ಕೆ ಬಿಡುಗಡೆ ಮಾಡಲಿದೆ. ಈ ಪ್ರಕ್ರಿಯೆಯ ಭಾಗವಾಗಿ ಕೇಂದ್ರ ಯೋಜನಾ ಅನುಷ್ಠಾನ ಮತ್ತು ಸಾಂಖ್ಯಿಕ ಸಚಿವಾಲಯವು ಸಂಬಂಧಪಟ್ಟ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳೊಂದಿಗೆ ಕಾರ್ಯಾಗಾರಗಳನ್ನು ನಡೆಸಲಿದೆ. ದೆಹಲಿಯ ಭಾರತ್ ಮಂಡಪಂ ಅಂಗಣದಲ್ಲಿ ಈ ಬಿಡುಗಡೆ ಪೂರ್ವದ ವರ್ಕ್​ಶಾಪ್ ನಡೆಯಲಿದೆ.

ಹಣದುಬ್ಬರ ಲೆಕ್ಕಾಚಾರಕ್ಕೆ ಆಧಾರ ವರ್ಷವಾಗಿ 2024=100 ಅನ್ನು ಇಡಲಾಗಿದೆ. ನ್ಯಾಷನಲ್ ಅಕೌಂಟ್​ಗಳಿಗೆ 2022-23 ಅನ್ನು ಬೇಸ್ ಇಯರ್ ಆಗಿ ಮಾಡಲಾಗಿದೆ. ಐಐಪಿ ಲೆಕ್ಕಾಚಾರಕ್ಕೆ ಬೇಸ್ ಇಯರ್ ಆಗಿ 2022-23 ಇದೆ. ಜಿಡಿಪಿಗೆ ಬೇಸ್ ಇಯರ್ ಆಗಿ 2022-23 ಅನ್ನು ಇಡಲಾಗಿದೆ. ಈ ಬದಲಾವಣೆ ಕುರಿತು ಕಾರ್ಯಾಗಾರದಲ್ಲಿ ಮಾಹಿತಿ ವಿನಿಮಯ ಮತ್ತು ಚರ್ಚೆಗಳು ನಡೆಯುವ ನಿರೀಕ್ಷೆ ಇದೆ.

ಇದನ್ನೂ ಓದಿ: ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್​ಡಿಒ

ಭಾರತದ ಜಿಡಿಪಿ ದರ ಹೆಚ್ಚಲಿದೆಯಾ?

ಭಾರತ ತನ್ನ ಜಿಡಿಪಿ ಲೆಕ್ಕಾಚಾರಕ್ಕೆ ಆಧಾರ ವರ್ಷವಾಗಿ ಬಳಸಲಾಗುತ್ತಿದ್ದ 2004-04 ಅನ್ನು ಇತ್ತೀಚೆಗೆ 2011-12 ಆಗಿ ಬದಲಾಯಿಸಿತ್ತು. ಇದೀಗ 2011-12ರಿಂದ 2022-23ಕ್ಕೆ ಬೇಸ್ ಇಯರ್ ಅನ್ನು ಬದಲಾಯಿಸುವ ಪ್ರಸ್ತಾಪ ಇದೆ. ಬೇಸ್ ಇಯರ್ ಅನ್ನು ಅಪ್​ಡೇಟ್ ಮಾಡುವುದರಿಂದ ಆಗುವ ಅನುಕೂಲವೆಂದರೆ ಇತ್ತೀಚಿನ ವರ್ಷಗಳಲ್ಲಿ ಆದ ಪರಿವರ್ತನೆಗಳನ್ನು ಹಿಡಿದಿಡಲು ಸಾಧ್ಯವಾಗುತ್ತದೆ. ಅಂದರೆ, ಆರ್ಥಿಕ ಚಟುವಟಿಕೆಗಳನ್ನು ಹೆಚ್ಚು ನಿಖರವಾಗಿ ಗುರುತಿಸಬಹುದು.

ಭಾರತವೇನಾದರೂ ತನ್ನ ಬೇಸ್ ಇಯರ್ ಅನ್ನು ಅಪ್​ಡೇಟ್ ಮಾಡಿದರೆ, ದೇಶದ ಜಿಡಿಪಿ ದರ 50ರಿಂದ 100 ಮೂಲಾಂಕಗಳಷ್ಟು ಹೆಚ್ಚುವ ನಿರೀಕ್ಷೆ ಇದೆ. ಭಾರತದ ಒಟ್ಟೂ ಜಿಡಿಪಿ ಸಂಖ್ಯೆ ಹೆಚ್ಚಬಹುದು. ತಲಾದಾಯವೂ ಹೆಚ್ಚಬಹುದು.

ಇದನ್ನೂ ಓದಿ: ನ್ಯೂಜಿಲೆಂಡ್ ಜೊತೆಗೂ ಟ್ರೇಡ್ ಡೀಲ್ ಮುಗಿಸಿದ ಭಾರತ; ಈ ವರ್ಷದಲ್ಲೇ ಭಾರತಕ್ಕಿದು 3ನೇ ಎಫ್​ಟಿಎ

ಒಂದು ಅಂದಾಜು ಪ್ರಕಾರ ಜಿಡಿಪಿ ತಲಾದಾಯ 1.96 ಲಕ್ಷ ರೂ ಇದ್ದು, ಇದು 2.15 ಲಕ್ಷ ರೂಗೆ ಹೆಚ್ಚಬಹುದು. ಇದು ಇನ್ನೂ ಸ್ವಲ್ಪ ಹೆಚ್ಚಾದರೆ, ವಿಶ್ವಬ್ಯಾಂಕ್​ನ ಮೇಲ್ಮಟ್ಟದ ಮಧ್ಯಮ ಆದಾಯ ಗುಂಪಿಗೆ ಭಾರತ ಸೇರ್ಪಡೆಯಾಗಲು ಸಾಧ್ಯವಾಗುತ್ತದೆ. ಭಾರತದ ಆರ್ಥಿಕತೆಯ ಗಾತ್ರ ಸುಮಾರು 4.4 ಟ್ರಿಲಿಯನ್ ಡಾಲರ್ ಆಗಬಹುದು. ಹಾಗಾದಲ್ಲಿ ಜಪಾನ್ ಅನ್ನು ಹಿಂದಿಕ್ಕಿ ಭಾರತವು ನಂ. 4 ಎನಿಸಬಹುದು. ಜರ್ಮನಿಯ 5 ಟ್ರಿಲಿಯನ್ ಡಾಲರ್ ಗಾತ್ರವನ್ನು ಮುಟ್ಟುವುದು ಭಾರತಕ್ಕೆ ಹೆಚ್ಚು ಕಾಲ ಬೇಕಾಗುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ – Kannada News | Ex Boyfriend leaked Private video: Woman Protest Infront off Chikkaballapur DC Office For Justice

ಚಿಕ್ಕಬಳ್ಳಾಪುರ, (ಡಿಸೆಂಬರ್ 22): ಮಾಜಿ ಪ್ರಿಯಕರನ (Lover) ಕಿತಾಪತಿಯಿಂದಾಗಿ ಯುವತಿಯ ಸಂಸಾರವೇ ಹಾಳಾಗಿದ್ದು, ಯುವತಿ ಬೀದಿಗೆ ಬಿದ್ದಿದ್ದಾಳೆ. ಹೌದು..ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕೆಂಪನಹಳ್ಳಿ ಗ್ರಾಮದ 20 ವರ್ಷದ ಯುವತಿ, ಕಳೆದ 20 ದಿನಗಳ ಹಿಂದೆಯಷ್ಟೇ ಬೆಂಗಳೂರು ಮೂಲದ ಯುವಕನ ಜೊತೆ ಸಪ್ತಪದಿ ತುಳಿದು ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಳು. ಆದ್ರೆ ಹನುಮೂನ್ ಮುಗಿಯುವುದಕ್ಕೂ ಮುನ್ನ ಪ್ರೀಯಕರ ಅಂಬರೀಶ, ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯ ಸೇರಿಕೊಂಡು ಯುವತಿ ಹಾಗೂ ಅಂಬರೀಶ ಬೆಡ್ ರೂಮ್ ಹಂಚಿಕೊಂಡಿರುವ ವಿಡಿಯೋವನ್ನು ಆಕೆಯ ಗಂಡನಿಗೆ ಕಳುಹಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪತಿ, 20 ದಿನದ ಹಿಂದಷ್ಟೇ ಮದ್ವೆಯಾಗಿದ್ದ ಪತ್ನಿಯನ್ನು ಮನೆಯಿಂದ ಆಚೆ ಹಾಕಿದ್ದಾನೆ. ಇತ್ತ ವಿಡಿಯೋ ಹರಿಬಿಟ್ಟ ಪ್ರಿಯಕರ ಸಹ ಸೇರಿಸಿಕೊಳ್ಳುತ್ತಿಲ್ಲ. ಇದರಿಂದ ಯುವತಿಯ ಸಂಸಾರ ಹಾಳಾಗಿದ್ದು, ಪೊಲೀಸ್ ಠಾಣೆಯಲ್ಲಿ ನ್ಯಾಯ ಸಿಗದಿದ್ದಕ್ಕೆ ಇದೀಗ ಯುವತಿ ಜಿಲ್ಲಾಡಳಿ ಕಚೇರಿ ಮೆಟ್ಟಿಲೇರಿದ್ದಾಳೆ.

ನ್ಯಾಯಕ್ಕಾಗಿ ಪ್ರಿಯಕರನ ಮನೆ ಹಾಗೂ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಮಾಡಿದ್ರೂ ನ್ಯಾಯ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಈಗ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಚಳಿ ಗಾಳಿ ಎನ್ನದೆ ಧರಣಿ ಕುಳಿತಿದ್ದು, ತನ್ನ ಬದುಕು ಹಾಳು ಮಾಡಿದ ತನ್ನ ಪ್ರೀಯಕರನ ಜೊತೆ ಮದುವೆ ಮಾಡಿಸಿ ಎಂದು ಅವಲತ್ತುಕೊಂಡಿದ್ದಾಳೆ.

ಇದನ್ನೂ ನೋಡಿ: ಮದ್ವೆಯಾದ 20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಮಾಜಿ ಪ್ರಿಯಕರ

ಪ್ರಿಯಕರನ ಜೊತೆಗಿನ ವಿಡಿಯೋ ನೋಡುತ್ತಿದ್ದಂತೆಯೇ ಪತಿ, ಕೈಹಿಡಿದ ಪತ್ನಿಯ ಮಾಗಲ್ಯ ಕಿತ್ತು ವಾಪಸ್ ತವರು ಮನೆಗೆ ಕಳುಹಿಸಿದ್ದಾನೆ. ಇದರಿಂದ ಅತ್ತ ದರಿ ಇತ್ತ ಪುಲಿಯಂತಾದ ನವವಿವಾಹಿತೆ, ಈಗ ತನಗೆ ನ್ಯಾಯ ಕೊಡಿಸಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಹಗಲು ರಾತ್ರಿ ಧರಣಿ ನಡೆಸಿದ್ದಾಳೆ. ತನ್ನ ಸಂಸಾರಕ್ಕೆ ಕಲ್ಲು ಹಾಕಿದ ಆಕೆಯ ಪ್ರೀಯಕರ ಪಲಿಚೆರ್ಲು ಗ್ರಾಮದ ಅಂಬರೀಶ, ಅಂಬರೀಶನ ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯಳ ಫೋಟೊಗಳನ್ನು ಹಿಡಿದು ನ್ಯಾಯಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಮುಂದೆ ಧರಣಿ ಮಾಡ್ತಿದ್ದಾಳೆ.ಇನ್ನೂ ನೊಂದ ಸಂತ್ರಸ್ಥೆಯ ಧರಣಿಗೆ ಆಕೆಯ ತಾಯಿ, ಅಣ್ಣ, ಬಂಧು ಬಳಗ ಸಾಥ್ ನೀಡಿದ್ದಾರೆ.

ಆದ್ರೆ ಇತ್ತ ಆರೋಪಿತ ಭಾನುಪ್ರೀಯ ಟಿವಿ9ಗೆ ಪ್ರತಿಕ್ರಿಯಿಸಿದ್ದು, ನೊಂದ ಸಂತ್ರಸ್ಥೆ ಹಾಗೂ ಆಕೆಯ ಪ್ರಿಯಕರ ಅಂಬರೀಶ ತನಗೆ ಪರಿಚಯಸ್ಥರು. ಆದ್ರೆ ಆಕೆಯ ಗಂಡನೂ ಗೊತ್ತಿಲ್ಲ, ಅವರ ನಂಬರ್ ಗೊತ್ತಿಲ್ಲ. ನಾನು ಯಾರಿಗೂ ಅವರ ವಿಡಿಯೋ ಕಳುಹಿಸಿಲ್ಲ. ಆದರೂ ನನ್ನ ಫೋಟೋ ಹಿಡಿದು ಧರಣಿ ನಡೆಸಿರುವುದು ಏಕೆ ಎಂದು ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಒಟ್ಟಿನಲ್ಲಿ ಆ ಒಂದು ವಿಡಿಯೋದಿಂದಾಗಿ ಯುವತಿಯ ಸಂಸಾರ ಛಿದ್ರವಾಗಿದ್ದು, ಅತ್ತ ಗಂಡ ಇಲ್ಲ ಇತ್ತ ಪ್ರಿಯಕರನೂ ಇಲ್ಲದೇ ಇದೀಗ ಬೀದಿಗೆ ಬಂದಿದ್ದಾಳೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 5:07 pm, Mon, 22 December 25

Source link

ಶೂಟ್ ಮಾಡಿಕೊಂಡು ಪಂಜಾಬ್‌ನಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಮರ್ ಸಿಂಗ್ ಚಾಹಲ್ ಆತ್ಮಹತ್ಯೆಗೆ ಯತ್ನ – Kannada News | Punjab Former IPS officer Amar Singh Chahal shoots self in Patiala

ಪಟಿಯಾಲ, ಡಿಸೆಂಬರ್ 22: ಪಂಜಾಬ್‌ನ ಮಾಜಿ ಐಪಿಎಸ್  (IPS) ಅಧಿಕಾರಿ ಅಮರ್ ಸಿಂಗ್ ಚಾಹಲ್ ಇಂದು ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಇನ್ನೂ ಗಂಭೀರವಾಗಿದೆ. ಮೂಲಗಳ ಪ್ರಕಾರ ತೀವ್ರವಾದ ಆರ್ಥಿಕ ನಷ್ಟ ಮತ್ತು ಮಾನಸಿಕ ಒತ್ತಡದಿಂದ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸ್ಥಳದಿಂದ ವಶಪಡಿಸಿಕೊಂಡ ಸೂಸೈಡ್ ನೋಟ್ ಪ್ರಕಾರ ಆನ್‌ಲೈನ್ ವಂಚನೆಯಿಂದ ಉಂಟಾದ ತೀವ್ರ ಆರ್ಥಿಕ ನಷ್ಟ ಮತ್ತು ಮಾನಸಿಕ ಯಾತನೆಯನ್ನು ಸೂಚಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಗಳ ಅನುಕ್ರಮವನ್ನು ಖಚಿತಪಡಿಸಿಕೊಳ್ಳಲು ಮತ್ತು ಟಿಪ್ಪಣಿಯ ವಿಷಯಗಳನ್ನು ಪರಿಶೀಲಿಸಲು ಅಧಿಕಾರಿಗಳು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Video: ದಾಖಲೆಗಳ ನೋಡದೆ ಆರ್​ಟಿಒ 4,500 ರೂ. ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ

ಗುಂಡಿನ ದಾಳಿಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿತು ಮತ್ತು ಚಾಹಲ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೈದ್ಯರು ಅವರನ್ನು ಉಳಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಅಂದಹಾಗೆ, ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಆಗಿರುವ ಚಾಹಲ್ 2015ರ ಫರೀದ್‌ಕೋಟ್‌ನ ಬೆಹ್ಬಲ್ ಕಲಾನ್ ಮತ್ತು ಕೊಟ್ಕಾಪುರ ಗುಂಡಿನ ದಾಳಿ ಪ್ರಕರಣಗಳಲ್ಲಿ ಆರೋಪಿಗಳಲ್ಲಿ ಒಬ್ಬರು. 2023ರಲ್ಲಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಲ್.ಕೆ. ಯಾದವ್ ನೇತೃತ್ವದ ಪಂಜಾಬ್ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ) ಚಾಹಲ್ ಸೇರಿದಂತೆ ಹಲವಾರು ಪೊಲೀಸ್ ಅಧಿಕಾರಿಗಳ ವಿರುದ್ಧ ಹಾಗೂ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಸುಖ್‌ಬೀರ್ ಸಿಂಗ್ ಬಾದಲ್ ಅವರ ವಿರುದ್ಧ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು.
ಅಮರ್ ಸಿಂಗ್ ಚಾಹಲ್ ಅವರ ಕುಟುಂಬ ಸದಸ್ಯರು ಅವರು ಆನ್‌ಲೈನ್ ವಂಚನೆಗೆ ಬಲಿಯಾಗಿದ್ದು, 8 ಕೋಟಿ ರೂ. ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅವರು 12 ಪುಟಗಳ ಸೂಸೈಡ್ ನೋಟ್​​​ನಲ್ಲಿ ಕೂಡ ಇದನ್ನು ವಿವರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Weekly Numerology: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 22ರಿಂದ 27ರ ತನಕ ವಾರಭವಿಷ್ಯ   – Kannada News | Weekly Numerology for December 22nd to 27th Number Theory luck and unluck predicted in Kannada

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ವಾರಭವಿಷ್ಯವನ್ನು (Weekly Numerology) ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 22ರಿಂದ 27ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ನಿಮ್ಮ ಸುತ್ತ ಮುತ್ತ ಆಗಿರುವಂಥ ಬದಲಾವಣೆಗಳನ್ನು ತುಂಬ ಸೂಕ್ಷ್ಮವಾಗಿ ಗಮನಿಸಲಿದ್ದೀರಿ. ಈಗಾಗಲೇ ನೀಡಿದ್ದಂಥ ಜವಾಬ್ದಾರಿಗಳಲ್ಲಿ ಅದಲು ಬದಲು ಮಾಡುವ ತೀರ್ಮಾನ ಕೈಗೊಳ್ಳಲಿದ್ದೀರಿ. ನೀವು ಏನು ಆಲೋಚನೆ ಮಾಡುತ್ತಿದ್ದೀರಿ, ಯಾಕೆ ಈ ರೀತಿ ನಿರ್ಧಾರ ಕೈಗೊಳ್ಳುತ್ತಿದ್ದೀರಿ ಎಂದು ಅಂದಾಜು ಮಾಡುವುದಕ್ಕೆ ಸಾಧ್ಯವೇ ಇಲ್ಲದಂತಾಗುತ್ತದೆ. ನೇರವಂತಿಕೆ ಹಾಗೂ ಪಾರದರ್ಶಕತೆ ಹೊಸ ಹುದ್ದೆ- ಜವಾಬ್ದಾರಿಗಳನ್ನು ನಿಮಗೆ ದೊರಕಿಸಿ ಕೊಡಲಿದೆ. ಅಬ್ಬರದ ಮಾತುಗಳನ್ನು ಆಡುವ ಮೂಲಕ, ಎಲ್ಲೆಲ್ಲಿಯದೋ ಉದಾಹರಣೆಗಳನ್ನು ನೀಡುವುದರೊಂದಿಗೆ ಭಯ ಸೃಷ್ಟಿ ಮಾಡಬೇಕು ಎಂದು ನಿಮ್ಮ ಬಳಿ ಬರಲಿದ್ದಾರೆ. ನೀವು ಅಚಲವಾಗಿ ನಂಬಿಕೊಂಡ ಸಂಗತಿಗಳಿಗೆ ಬದ್ಧರಾಗಿರಿ. ನಿಮ್ಮ ಸಾಮರ್ಥ್ಯದ ಸಂಪೂರ್ಣ ಬಳಕೆ ಅಗತ್ಯವೇ ಇಲ್ಲದೆ ದೊಡ್ಡ ಕಾರ್ಯಗಳನ್ನು ಪೂರ್ಣ ಮಾಡುವುದಕ್ಕೆ ನಿಮಗೆ ಸಾಧ್ಯವಾಗಲಿದೆ. ಹೊಟ್ಟೆಯುಬ್ಬರ, ಎದೆಯುರಿ, ಕಣ್ಣು ಕೆಂಪಗಾಗುವುದು ಈ ರೀತಿಯ ಆರೋಗ್ಯ ಸಮಸ್ಯೆಗಳು ಕಾಡಲಿದ್ದು, ವ್ಯಾಪಾರಸ್ಥರಿಗೆ ವಿಚಿತ್ರ ಪದಾರ್ಥಗಳಿಗೆ ಬೇಡಿಕೆ ಪ್ರಸ್ತಾವ ಬರಲಿದೆ.

ಕೃಷಿಕರು:

ಸಮಸ್ಯೆಯ ಮೂಲ ಎಲ್ಲಿದೆ ಎಂದು ಗುರುತಿಸುವಲ್ಲಿ ಯಶ ಕಾಣುತ್ತೀರಿ. ನಿಮಗೆ ಬೇಡ ಎನಿಸಿದ್ದನ್ನು ನೇರವಾಗಿ ಹೇಳುವುದರಿಂದ ಹೆಚ್ಚಿನ ಅನುಕೂಲ ಇದೆ. ಸಂಕೋಚಕ್ಕೆ ಸಿಲುಕಿಕೊಂಡು, ಎಲ್ಲರ ಬಳಿಯೂ ಚೆನ್ನಾಗಿರುವ ಪ್ರಯತ್ನ ಮಾಡಿದಲ್ಲಿ ಆ ನಂತರ ಪರಿತಪಿಸುವಂತೆ ಆಗಲಿದೆ. ಹವಾಮಾನ ವೈಪರೀತ್ಯದಿಂದ ನಿಮಗೆ ಸ್ವಲ್ಪ ಪ್ರಮಾಣದಲ್ಲಿ ನಷ್ಟ ಆಗುತ್ತದೆ. ರಾಜಕೀಯ ಬೆಳವಣಿಗೆಗಳಿಂದ ದೂರ ಇರುವುದು ಕ್ಷೇಮ.

ವೃತ್ತಿನಿರತರು:

ನೀವೇ ಹೀಗೆ ಮಾತನಾಡುತ್ತಿರುವುದಾ ಎಂದು ಇತರರು ಅಚ್ಚರಿ ಪಡುವಷ್ಟರ ಮಟ್ಟಿಗೆ ಬದಲಾವಣೆ ಆಗಲಿದೆ. ನಿಮಗೆ ಬರಬೇಕಾದ ಹಣವನ್ನು ಸಹ ನಿರ್ದಾಕ್ಷಿಣವಾಗಿ ವಸೂಲಿ ಮಾಡಲಿದ್ದೀರಿ. ಇತರರು ನಿಮ್ಮ ಮೇಲೆ ಹಿಡಿತ ಸಾಧಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದಲ್ಲಿ ಅಂಥವರಿಗೆ ಎಚ್ಚರಿಕೆ ನೀಡಲಿದ್ದೀರಿ. ರಾತ್ರಿ- ಹಗಲು ಎನ್ನದೆ ಒಂದು ಕೆಲಸವನ್ನು ಗಡುವಿನೊಳಗೆ ಪೂರ್ಣ ಮಾಡಬೇಕು ಎಂಬ ಒತ್ತಡದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಲಿದೆ.

ವಿದ್ಯಾರ್ಥಿಗಳು:

ಸಣ್ಣ ಅವಕಾಶವನ್ನು ಸಹ ದೊಡ್ಡ ಮಟ್ಟದ ಹೆಸರು ತರುವಂತೆ ಮಾಡಿಕೊಳ್ಳುವಲ್ಲಿ ಸಫಲರಾಗುತ್ತೀರಿ. ನಿಮ್ಮ ಜೊತೆಗೆ ಬಹಳ ಆಪ್ತರಾಗಿರುವವರ ಸಮಸ್ಯೆಯೊಂದನ್ನು ನಿವಾರಿಸಲು ಬಹಳ ಶ್ರಮ ಹಾಕುತ್ತೀರಿ. ಪೋಷಕರಿಗೆ ಇಷ್ಟು ಸಮಯ ಹೇಳದೇ ಇದ್ದ ವಿಚಾರವೊಂದನ್ನು ಅವರ ಬಳಿ ತಿಳಿಸುವುದರಿಂದ ನಿಮ್ಮ ಮೇಲೆ ಅವರಿಗೆ ಇರುವ ವಿಶ್ವಾಸ- ನಂಬಿಕೆ ಹೆಚ್ಚಾಗಲಿದೆ. ಎನ್ ಸಿಸಿ, ಸ್ಕೌಟ್ ಇಂಥವುಗಳಿಗಾಗಿ ಪ್ರಯಾಣಕ್ಕೆ ತೆರಳುವ ಯೋಗ ಇದೆ.

ಮಹಿಳೆಯರು:

ನಿಮ್ಮ ಸಹೋದರ ಅಥವಾ ಸಹೋದರಿ ಬಳಸುವಂಥ ಕೆಲ ಪದಗಳಿಂದ ಆಕ್ರೋಶ ಹೆಚ್ಚಾಗುತ್ತದೆ. ಇದೇ ರೀತಿ ಅನುಭವ ಸೋದರ ಸಂಬಂಧಿಗಳಿಂದ ಸಹ ಆಗಬಹುದು. ಈ ಹಿಂದೆ ಯಾವಾಗಲೋ ನೀವು ಆಡಿದ್ದ ಮಾತನ್ನು ಈಗ ದೊಡ್ಡ ವಿಷಯ ಮಾಡಿ, ಆಕ್ಷೇಪ- ನಿಂದನೆ ಮಾಡಲಿದ್ದಾರೆ. ಗೃಹಾಲಂಕಾರ ವಸ್ತುಗಳ ಖರೀದಿಗಾಗಿ ಹೆಚ್ಚಿನ ಖರ್ಚು ಮಾಡುತ್ತೀರಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ಆಲೋಚನೆಗಳ ಅಕ್ಷಯಪಾತ್ರೆ ಈ ವಾರ ನೀವಾಗಿರುತ್ತೀರಿ. ಹೊಸ ವ್ಯಾಪಾರ- ವ್ಯವಹಾರ ಆರಂಭಿಸುವುದಕ್ಕೆ ನಾನಾ ರೀತಿಯ ಬಜೆಟ್- ಪ್ಲ್ಯಾನಿಂಗ್ ಇಂಥವುಗಳಿಗೆ ಹೆಚ್ಚು ಸಮಯ ಇಡಲಿದ್ದೀರಿ. ಭೂಮಿ- ಜಮೀನು, ಸೈಟಿಗೆ ಸಂಬಂಧಿಸಿದ ದಾಖಲೆಗಳನ್ನು ಸಿದ್ಧ ಮಾಡಿಕೊಳ್ಳುವುದಕ್ಕೆ ಹಣವನ್ನು ಖರ್ಚು ಮಾಡಲಿದ್ದೀರಿ. ಕುಟುಂಬ ಸದಸ್ಯರು ಕೆಲವು ವಿಚಾರಗಳಿಗೆ ನಿಮ್ಮನ್ನೇ ಹೆಚ್ಚು ಅವಲಂಬಿಸುತ್ತಾರೆ. ದೂರದ ಊರುಗಳಿಗೆ ತೆರಳುವ ಯೋಗ ಇದೆ. ನಿಮಗೆ ಸಿಗಲೇಬೇಕಿತ್ತು ಎಂದುಕೊಂಡಿದ್ದ ಆರ್ಡರ್ ಕೊನೆ ಕ್ಷಣದಲ್ಲಿ ಬೇರೆಯವರ ಪಾಲಾಗಲಿದೆ. ಅಧಿಕಾರ- ಪ್ರಭಾವದ ಬಗ್ಗೆ ನಿಮಗಿರುವ ಚಿಂತನೆಯೇ ಬದಲಾಗುವಂಥ ಸಮಯ ಇದಾಗಿರಲಿದೆ. ಜ್ವರ, ತಲೆನೋವು, ಕೀಲು ನೋವಿನ ಸಮಸ್ಯೆ ಬಾಧಿಸಲಿದೆ. ಕೆಲವು ಸಮಯದಿಂದ ನಿಮ್ಮ ಬಳಿಯೇ ಕಾಪಾಡಿಕೊಂಡು ಬಂದಿದ್ದ ರಹಸ್ಯವನ್ನು ಹೇಳಿಬಿಡುತ್ತೀರಿ. ಇದರಿಂದ ನಿಮ್ಮ ವರ್ಚಸ್ಸಿಗೆ ಹಾನಿ ಆಗಲಿದೆ. ಭವಿಷ್ಯಕ್ಕೆ ಎಷ್ಟು ಹಣ ಕೂಡಿಟ್ಟುಕೊಳ್ಳಬೇಕು, ಅದಕ್ಕಾಗಿ ಏನೇನು ಯೋಜನೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಆರ್ಥಿಕ ಸಲಹೆಗಾರರ ನೆರವು ಪಡೆದುಕೊಳ್ಳುತ್ತೀರಿ.

ಕೃಷಿಕರು:

ನಿಮ್ಮ ಆದಾಯದಲ್ಲಿ ಸ್ಥಿರತೆ ತಂದುಕೊಳ್ಳುವುದಕ್ಕೆ ಈಗ ಮಾಡುತ್ತಿರುವ ಕೃಷಿ ಹಾಗೂ ಇತರ ಚಟುವಟಿಕೆಗೆ ಜೊತೆಗೆ ಹೊಸದಾದ ಕೆಲವು ಸಂಗತಿಗಳನ್ನು ಅಳವಡಿಸಿಕೊಳ್ಳಲಿದ್ದೀರಿ. ನಿಮ್ಮ ಸೋದರ ಸಂಬಂಧಿಗಳು ತಮ್ಮ ಜಮೀನನ್ನೂ ನೀವೇ ನಿರ್ವಹಣೆ ಮಾಡಿಕೊಡಿ ಎಂದು ಪ್ರಸ್ತಾವ ಮುಂದಿಡಲಿದ್ದಾರೆ. ತೋಟಗಾರಿಕೆ ಬೆಳೆಗಳನ್ನು ಆದಾಯದ ಮೂಲ ಮಾಡಿಕೊಂಡವರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಹಣ ಕೈ ಸೇರದ ಕಾರಣಕ್ಕೆ ಆತಂಕ ಉಂಟಾಗುತ್ತದೆ.

ವೃತ್ತಿನಿರತರು:

ನೀವು ಹೇಳಿದ್ದೇ ಅಂತಿಮ ಎಂಬಷ್ಟರ ಮಟ್ಟಿಗೆ ಇತರರು ವಿಶ್ವಾಸ ಇಡಲಿದ್ದಾರೆ. ಬಹಳ ಸಮಯದಿಂದ ತಲುಪಬೇಕು ಎಂದುಕೊಂಡಿದ್ದ ಕೆಲವು ಗುರಿಗಳನ್ನು ಈ ವಾರ ತಲುಪಲಿದ್ದೀರಿ. ವಿನಾಕಾರಣ ನಿಮ್ಮ ಮೇಲೆ ಸಿಟ್ಟಿನಿಂದ ಕುದಿಯುತ್ತಿದ್ದ ಕೆಲವರು ತಾವಾಗಿಯೇ ರಾಜೀ- ಸಂಧಾನ ಮಾಡಿಕೊಳ್ಳುವುದಕ್ಕೆ ಮುಂದಾಗಲಿದ್ದಾರೆ. ಪ್ರೀತಿಪಾತ್ರರು ನಿಮಗೆ ಬೆಲೆ ಬಾಳುವ ಉಡುಗೊರೆಗಳನ್ನು ನೀಡುವ ಯೋಗ ಇದೆ.

ವಿದ್ಯಾರ್ಥಿಗಳು:

ಈ ವಾರ ಯಾವ ಕಾರಣಕ್ಕೂ ಮುಖ್ಯ ತೀರ್ಮಾನಗಳನ್ನು ಆತುರದಲ್ಲಿ ಮಾಡಬೇಡಿ. ಗ್ಯಾಜೆಟ್- ಲ್ಯಾಪ್ ಟಾಪ್ ಖರೀದಿಯಂಥದ್ದೇ ಇರಬಹುದು ಅಥವಾ ವಾಹನ ಕೊಳ್ಳುವ ವಿಚಾರ ಇರಬಹುದು, ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೈಗೊಳ್ಳುವಂತಹ ತೀರ್ಮಾನ ಏನೇ ಇದ್ದರೂ ಸಮಾಧಾನದಿಂದ ಆಲೋಚಿಸಿ ಮುಂದಕ್ಕೆ ಹೆಜ್ಜೆ ಇಡಿ. ವಾಹನ ಚಾಲನೆ ಮಾಡುವ ವೇಳೆಯಲ್ಲಿ ರಸ್ತೆಯಲ್ಲಿನ ಹಳ್ಳಗಳ ಕಡೆಗೆ ಹೆಚ್ಚಿನ ಲಕ್ಷ್ಯವನ್ನು ನೀಡಿ.

ಮಹಿಳೆಯರು:

ನಿಮ್ಮ ಆಪ್ತರು ನೀಡಿದಂಥ ಎಚ್ಚರಿಕೆಗಳು ಮತ್ತು ಹೇಳಿದಂಥ ಜಾಗ್ರತೆ ಮಾತುಗಳ ಬಗ್ಗೆ ಉದಾಸೀನ ಮಾಡಬೇಡಿ. ವಸ್ತ್ರಾಭರಣ ಖರೀದಿ ಮಾಡುವಾಗ ಖರ್ಚಿನ ಮೇಲೆ ನಿಗಾ ಇರಿಸಿಕೊಳ್ಳಿ. ಕಂತಿನಲ್ಲಿ ಸಿಗುತ್ತದೆ ಎಂಬ ಕಾರಣಕ್ಕೆ ಅಳತೆ ಮೀರಿ ವೆಚ್ಚ ಮಾಡಬೇಡಿ. ಸಣ್ಣ ಸಣ್ಣ ಹೂಡಿಕೆ ಆರಂಭಿಸುವ ಯೋಗ ಈ ವಾರ ಇದೆ. ಇದಕ್ಕೆ ಸಂಗಾತಿಯ ಸಹಕಾರವೂ ಇರುತ್ತದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಕುಟುಂಬ ಸದಸ್ಯರ ಜೊತೆ ಸಂತೋಷವಾದ ಸಮಯ ಕಳೆಯುವಂಥ ಯೋಗ ಇದೆ. ಕೆಲವರು ವಿದೇಶ ಪ್ರವಾಸಕ್ಕೆ ತೆರಳುವ ಯೋಗ ಸಹ ಇದೆ. ಆತುರದ ತೀರ್ಮಾನ ಯಾವುದರಲ್ಲೂ ಬೇಡ. ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೇಲೆ ವಿಪರೀತ ವಿಶ್ವಾಸ ಇಡುವುದು ದುಬಾರಿಯಾಗಿ ಪರಿಣಮಿಸಲಿದೆ. ಹೋಮ್ ಸ್ಟೇ, ಸರ್ವೀಸ್ ಅಪಾರ್ಟ್ ಮೆಂಟ್ ಹೊಂದಿರುವವರಿಗೆ ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಆಗಲಿದೆ. ಭವಿಷ್ಯದ ದೃಷ್ಟಿಯಿಂದ ನೀವು ಕೈಗೊಂಡ ಯೋಜನೆಗಳು ಈ ವಾರ ಕೈ ಹಿಡಿಯಲಿವೆ. ಮನೆ ಇಂಟೀರಿಯರ್ ಡಿಸೈನಿಂಗ್ ವೃತ್ತಿಯನ್ನಾಗಿ ಮಾಡಿಕೊಂಡವರಿಗೆ ಒತ್ತಡದ ಸನ್ನಿವೇಶಗಳು ಎದುರಾಗಲಿವೆ. ಮುಖ್ಯವಾದ ಕೆಲಸಗಾರರೊಬ್ಬರು ಏನಾದರೊಂದು ಕಾರಣದಿಂದ ಬಾರದೆ ಹೋಗಬಹುದು. ಇದು ನಿಮ್ಮ ಆತಂಕವನ್ನು ಮತ್ತೂ ಹೆಚ್ಚಿಸುತ್ತದೆ. ಬೇರೆಯವರು ಮನವಿ ಮಾಡಿಕೊಂಡ ಕಾರ್ಯಗಳಿಗಾಗಿ ಎದ್ದುಬಿದ್ದು ಪ್ರಯತ್ನ ಮಾಡುವ ಅಗತ್ಯ ಇಲ್ಲ, ನಿಮ್ಮಿಂದ ಸಾಧ‌್ಯವಾದಷ್ಟು ಮಾತ್ರ ಶ್ರಮ ಹಾಕಿ. ನಿಮಗೆ ಅಗತ್ಯ ಇಲ್ಲದ ಕೆಲವು ಗ್ಯಾಜೆಟ್ ಖರೀದಿಸಿ, ಆ ನಂತರ ತುರ್ತಾಗಿ ಹಣ ಬೇಕಾದ ಸಂದರ್ಭದಲ್ಲಿ ಬೇಸರ ಮಾಡಿಕೊಳ್ಳುತ್ತೀರಿ.

ಕೃಷಿಕರು:

ಯೋಜನೆ ಮತ್ತು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳುವ ನಿರ್ಧಾರಗಳಿಗೆ ಮಹತ್ವ ಹೆಚ್ಚಾಗಿರುತ್ತದೆ. ಬೆಳೆಗಳ ಸಂರಕ್ಷಣೆ ಜೊತೆಗೆ ಮುಂದಿನ ಹಂತದ ಕೃಷಿಗೆ ಸಿದ್ಧತೆ ನಡೆಸುವಿರಿ. ಮಾರುಕಟ್ಟೆಯಲ್ಲಿನ ಬೆಲೆ ನಿಮ್ಮ ನಿರೀಕ್ಷೆಯಷ್ಟು ಇರದ ಕಾರಣಕ್ಕೆ ಸ್ವಲ್ಪ ಅಸಮಾಧಾನ ಆಗಬಹುದು. ನೀರಿನ ವ್ಯವಸ್ಥೆ, ಗೊಬ್ಬರ ಹಾಗೂ ಕಾರ್ಮಿಕ ವೆಚ್ಚದ ಮೇಲೆ ನಿಯಂತ್ರಣ ಅಗತ್ಯ. ತೋಟಗಾರಿಕೆ ಮತ್ತು ಪಶುಸಂಗೋಪನೆ ಮಾಡುವವರಿಗೆ ನಿಧಾನವಾದರೂ ಆದಾಯದಲ್ಲಿ ಸುಧಾರಣೆ ಕಾಣಿಸಿಕೊಳ್ಳಲಿದೆ.

ವೃತ್ತಿನಿರತರು:

ಜವಾಬ್ದಾರಿಗಳು ಹೆಚ್ಚಾಗುವ ಸಾಧ್ಯತೆ ಇದೆ. ವೃತ್ತಿ ನಿರ್ವಹಿಸುವ ಸ್ಥಳದಲ್ಲಿ ನಿಮ್ಮ ನಿರ್ಧಾರಗಳಿಗೆ ಪ್ರಾಮುಖ್ಯ ಸಿಗುತ್ತದೆ. ಬಹುಕಾಲದಿಂದ ಬಾಕಿ ಉಳಿದಿದ್ದ ಕೆಲಸಗಳನ್ನು ಪೂರ್ಣಗೊಳಿಸುವ ಅವಕಾಶ ದೊರೆಯುತ್ತದೆ. ಸಹೋದ್ಯೋಗಿಗಳ ಜತೆಗೆ ಉತ್ತಮ ಹೊಂದಾಣಿಕೆ ಸಾಧಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಸ್ಥಿರತೆ ಇರುತ್ತದೆ. ಕೆಲಸಕ್ಕೆ ಸಂಬಂಧಿಸಿದಂತೆ ಪ್ರಯಾಣಗಳನ್ನು ಮಾಡಲಿದ್ದೀರಿ.

ವಿದ್ಯಾರ್ಥಿಗಳು:

ಈ ವಾರ ಏಕಾಗ್ರತೆ ಮುಖ್ಯವಾಗಿರುತ್ತದೆ. ಓದಿನಲ್ಲಿ ಮನಸ್ಸು ತೊಡಗಿಸುವ ಸಾಧ್ಯತೆ ಇದೆಯಾದ್ದರಿಂದ ಸಮಯವನ್ನು ಸರಿಯಾಗಿ ಬಳಸಿಕೊಳ್ಳುವ ಕಡೆಗೆ ಗಮನ ಇರಲಿ. ಪರೀಕ್ಷೆ ಅಥವಾ ಶಿಕ್ಷಣಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆತುರದಲ್ಲಿ ತೆಗೆದುಕೊಳ್ಳಬೇಡಿ. ಅಗತ್ಯ ಕಂಡುಬಂದಲ್ಲಿ ಹಿರಿಯರು ಹಾಗೂ ಶಿಕ್ಷಕರ ಸಲಹೆ ಪಡೆಯುವುದು ಉತ್ತಮ. ಪೋಷಕರು ನೀಡಿದ ಹಣದ ಬಳಕೆಯನ್ನು ಮಾಡುವಾಗಿ ಎಚ್ಚರಿಕೆ ವಹಿಸಬೇಕು.

ಮಹಿಳೆಯರು:

ಕುಟುಂಬದ ಜವಾಬ್ದಾರಿಗಳು ಹೆಚ್ಚಾಗುವ ವಾರ ಇದು. ಖರ್ಚಿನ ವಿಷಯದಲ್ಲಿ ನಿಮ್ಮ ಅಜಾಗರೂಕತೆಯಿಂದ ಹೀಗಾಯಿತು ಎಂಬ ಆಕ್ಷೇಪದ ಮಾತುಗಳನ್ನು ಕೇಳಿಸಿಕೊಳ್ಳುವಂತೆ ಆಗಲಿದೆ. ಸಣ್ಣ ಉಳಿತಾಯ ಅಥವಾ ಹೂಡಿಕೆ ಮಾಡಿದ್ದ ಮೊತ್ತವನ್ನು ಹಿಂತೆಗೆದುಕೊಂಡು, ಚಿನ್ನ ಅಥವಾ ಬೆಳ್ಳಿ ಒಡವೆಗಳ ಖರೀದಿಗಾಗಿ ಬಳಕೆ ಮಾಡಲಿದ್ದೀರಿ. ಸಂಗಾತಿಯ ಸಹಕಾರದಿಂದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಹೆಚ್ಚಿನ ರಿಟರ್ನ್ಸ್ ಸಿಗುತ್ತದೆ ಎಂಬ ಆಸೆಯಲ್ಲಿ ಹೆಚ್ಚು ರಿಸ್ಕ್ ಇರುವ ಹೂಡಿಕೆಗಳ ಕಡೆಗೆ ನಿಮ್ಮ ಲಕ್ಷ್ಯ ಹೋಗುತ್ತದೆ. ಆ್ಯಪ್ ಗಳು, ಅಡ್ವೈಸರಿ ಸೇವೆಗಳನ್ನು ನೀಡುವ ಬ್ರೋಕರೇಜ್ ಸಂಸ್ಥೆಗಳಿಗೆ ಚಂದಾದಾರಿಕೆ ಪಡೆಯುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ಪ್ರಯಾಣ ಮಾಡುವಂಥವರು ನಿಮಗೆ ಅಲರ್ಜಿ ಇರುವಂಥಾದಲ್ಲಿ ಅಗತ್ಯ ಔಷಧಗಳಲ್ಲಿ ಜತೆಯಲ್ಲಿಯೇ ತೆಗೆದುಕೊಂಡು ಹೋಗುವುದು ಕ್ಷೇಮ. ನಿಮ್ಮಲ್ಲಿ ಕೆಲವರು ಪ್ರಯಾಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ಬರುವ ಸಾಧ್ಯತೆಯೂ ಹೆಚ್ಚಿದೆ. ಜಮೀನು- ಮನೆ ಇರುವಂಥ ಸ್ವತ್ತು ಖರೀದಿ ಮಾಡಬೇಕು ಎಂದು ಬಹಳ ಸಮಯದಿಂದ ಪ್ರಯತ್ನ ಮಾಡುತ್ತಾ ಇರುವವರಿಗೆ ಮನಸ್ಸಿಗೆ ಒಪ್ಪುವಂಥದ್ದು ದೊರೆಯಲಿದೆ. ಶಿಕ್ಷಣ- ರಾಜಕೀಯ ಕ್ಷೇತ್ರದಲ್ಲಿ ಇರುವವರಿಗೆ ಅಧ್ಯಯನ ಪ್ರವಾಸಕ್ಕೆ ತೆರಳುವಂತೆ ಸೂಚನೆ ಬರಲಿದೆ.

ಕೃಷಿಕರು:

ಬೆಳೆಗಳ ಆರೋಗ್ಯ, ಸದ್ಯಕ್ಕೆ ಇರುವಂಥ ನೀರಾವರಿ ವ್ಯವಸ್ಥೆ ಹಾಗೂ ಗೊಬ್ಬರ ಗುಣಮಟ್ಟವನ್ನು ಮರುಪರಿಶೀಲಿಸುವ ಅಗತ್ಯ ಬರುತ್ತದೆ. ಹವಾಮಾನ ಬದಲಾವಣೆಯಿಂದ ಕೆಲವು ಬೆಳೆಗಳಿಗೆ ತೊಂದರೆ ಕಾಣಿಸಿಕೊಳ್ಳಬಹುದು; ತಕ್ಷಣ ಕ್ರಮ ಕೈಗೊಂಡಲ್ಲಿ ನಷ್ಟ ತಪ್ಪಿಸಬಹುದು. ಮಾರುಕಟ್ಟೆ ಸಂಪರ್ಕ ಹೆಚ್ಚಿಸುವ ಪ್ರಯತ್ನ ಫಲ ನೀಡಲಿದೆ. ಸಹೋದರರು ಅಥವಾ ಪಾಲುದಾರರಿಂದ ಜಮೀನು ನಿರ್ವಹಣೆಗೆ ನೆರವು ಸಿಗಲಿದೆ. ಸಾಲ ಪಾವತಿ ವಿಚಾರದಲ್ಲಿ ಸ್ಪಷ್ಟತೆ ಮುಖ್ಯ; ಹೊಸ ಸಾಲವನ್ನು ಮಾಡಬೇಡಿ.

ವೃತ್ತಿನಿರತರು:

ಈ ವಾರ ಸಂವಹನದ ಮಹತ್ವ ಹೆಚ್ಚಾಗಿ ಇರುತ್ತದೆ. ಇತರರ ಕೆಲಸ- ಕಾರ್ಯಗಳ ವಿಧಾನದ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳುವುದರಿಂದ ಒಟ್ಟಾರೆ ಕೆಲಸಗಳು ವೇಗವಾಗಿ ಮುನ್ನಡೆಯುತ್ತವೆ. ಹೊಸ ಪ್ರಾಜೆಕ್ಟ್ ಅಥವಾ ಹೆಚ್ಚುವರಿ ಜವಾಬ್ದಾರಿ ದೊರೆಯುವ ಸಾಧ್ಯತೆ ಇದೆ. ನೀವು ಯಾರಿಗೆ ರಿಪೋರ್ಟ್ ಮಾಡಿಕೊಳ್ಳುತ್ತೀರೋ ಅವರ ಜತೆಗಿನ ವೃತ್ತಿ ಬಾಂಧವ್ಯ ಸುಧಾರಣೆ ಕಾಣಲಿದೆ. ದಿಢೀರ್ ಎಂದು ಕಾಣಿಸಿಕೊಳ್ಳು ಕೆಲಸದ ಒತ್ತಡವನ್ನು ಸಮರ್ಥವಾಗಿ ನಿಭಾಯಿಸಿ.

ವಿದ್ಯಾರ್ಥಿಗಳು:

ಈ ವಾರ ಅಭ್ಯಾಸದ ಕಡೆಗೆ ಮತ್ತು ಪುನರ್ ಮನನ ಮಾಡುವ ಕಡೆಗೆ ಗಮನ ನೀಡುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ. ಪಠ್ಯಕ್ರಮವನ್ನು ಸಣ್ಣ ಭಾಗಗಳಾಗಿ ಹಂಚಿಕೊಂಡು ಓದಿದರೆ ಏಕಾಗ್ರತೆ ಹೆಚ್ಚುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ಶಿಸ್ತು ಅಗತ್ಯ. ಸ್ನೇಹಿತರ ಪ್ರಭಾವದಿಂದ ಗಮನ ಭಂಗ ಆಗುವ ಸಾಧ್ಯತೆ ಇರುವುದರಿಂದ ಟೈಮ್ ಮ್ಯಾನೇಜ್ ಮೆಂಟ್ ಪಾಲಿಸಿ. ಜಂಕ್ ಫುಡ್ ಸೇವನೆಯಿಂದ ದೂರ ಇರುವುದು ಹಾಗೂ ಸ್ಕ್ರೀನ್ ಟೈಮ್ ಕಡಿಮೆ ಮಾಡಿಕೊಳ್ಳುವುದಕ್ಕೆ ಲಕ್ಷ್ಯ ನೀಡಿ.

ಮಹಿಳೆಯರು:

ನಿಮ್ಮ ಕೆಲಸಗಳನ್ನು ಆದ್ಯತೆ ಮೇಲೆ ವಿಂಗಡಿಸಿಕೊಳ್ಳುವುದು ಬಹಳ ಒಳ್ಳೆಯದು. ಮನೆಯ ಕೆಲಸಗಳ ಕಡೆಗೆ ಹೆಚ್ಚು ಸಮಯವನ್ನು ಇಟ್ಟು, ವೈಯಕ್ತಿಕ ಆಸಕ್ತಿ ಇರುವಂಥದ್ದು ನಿರ್ಲಕ್ಷ್ಯಕ್ಕೆ ಒಳಗಾಗಲಿದೆ. ಮೂರನೇ ವ್ಯಕ್ತಿಗಳ ಒತ್ತಾಯಕ್ಕೆ ಮಣಿದು, ನಿಮ್ಮ ಖರ್ಚಿನ ಪ್ರಮಾಣ ಅಳತೆ ಮೀರಿ ಹೋಗುತ್ತದೆ. ಚಿನ್ನದ ಚೀಟಿ ಅಥವಾ ಬೇರೆ ಯಾವುದಾದರೂ ಚೀಟಿಗೆ ಹಣ ಕಟ್ಟುವುದಕ್ಕೆ ಶುರು ಮಾಡುವ ಆಲೋಚನೆ ಮೂಡಲಿದೆ. ಸುರಕ್ಷತೆಗೆ ನಿಮ್ಮ ಪ್ರಾಶಸ್ತ್ಯ ಇರಲಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಕೆಲವು ಕಹಿ ಘಟನೆಗಳನ್ನು ಮರೆತು ಮುಂದೆ ಸಾಗುವುದಕ್ಕೆ ಆದ್ಯತೆ ನೀಡಲಿದ್ದೀರಿ. ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಾ ಇರುವವರಿಗೆ ಆತ್ಮವಿಶ್ವಾಸ ಹೆಚ್ಚಾಗುವಂಥ ಬೆಳವಣಿಗೆಗಳು ಆಗಲಿವೆ. ಹೊಸ ಕೋರ್ಸ್ ಗಳಿಗೆ ಸೇರ್ಪಡೆ ಆಗುವುದು, ವಿದೇಶಿ ಭಾಷೆಗಳನ್ನು ಕಲಿಯುವುದು ಈ ರೀತಿಯಾದ ಆಸಕ್ತಿ ನಿಮ್ಮಲ್ಲಿ ಕುದುರಲಿದ್ದು, ಭವಿಷ್ಯದಲ್ಲಿ ಇದರಿಂದ ದೊಡ್ಡ ಅನುಕೂಲ ಆಗಲಿದೆ. ಇತರರಿಗಾಗಿ ಯಾವುದಕ್ಕೂ ಕಾಯಬೇಡಿ. ನಿಮ್ಮ ಜತೆಗೆ ತಾವೂ ಆ ಕೋರ್ಸ್ ಗೆ ಸೇರುವುದಾಗಿ ಹೇಳಿದರು ಎಂಬ ಕಾರಣಕ್ಕೆ ಅವರೂ ಬರಲಿ ಎಂದು ನಿರ್ಧಾರವನ್ನು ಮುಂದಕ್ಕೆ ಹಾಕಬೇಡಿ. ಹೊಸ ವಾಷಿಂಗ್ ಮಶೀನ್, ಡಿಷ್ ವಾಷರ್ ಇಂಥವುಗಳ ಖರೀದಿಗೆ ಹಣ ಹಾಕುವ ಮುನ್ನ ಒಂದಕ್ಕೆ ನಾಲ್ಕು ಬಾರಿ ಆಲೋಚಿಸುವುದು ಉತ್ತಮ. ಪ್ರೀತಿ- ಪ್ರೇಮ ಸಂಬಂಧಗಳಲ್ಲಿ ಅಂದುಕೊಂಡಂತೆಯೇ ಕೆಲವು ಸಕಾರಾತ್ಮಕ ಬೆಳವಣಿಗೆ ಆಗಲಿದೆ. ಬಾಂಧವ್ಯ ಇನ್ನೂ ಗಟ್ಟಿ ಆಗಲಿದೆ.

ಕೃಷಿಕರು:

ನಿಮ್ಮ ಸಹನೆ ಹಾಗೂ ಪರಿಶ್ರಮವು ನಿಧಾನವಾಗಿಯಾದರೂ ಫಲವನ್ನು ಕೊಟ್ಟೇ ಕೊಡುತ್ತದೆ. ಆಧುನಿಕ ದಿನಮಾನದ ಬದಲಾವಣೆಗೆ ತಕ್ಕಂತೆ ಕೃಷಿ ಕ್ರಮಗಳಿಗೆ ಹೊಂದಿಕೊಳ್ಳಬೇಕಾಗುತ್ತದೆ. ಮಾರುಕಟ್ಟೆಯಲ್ಲಿ ನೀವು ಬೆಳೆವ ಕೃಷಿ ಉತ್ಪನ್ನಗಳ ಬೆಲೆಗಳಲ್ಲಿ ಸ್ವಲ್ಪ ಏರಿಳಿತ ಕಂಡರೂ ಆತುರದದಿಂದ ಮಾರಾಟ ಮಾಡುವುದು ಒಳ್ಳೆಯ ನಿರ್ಧಾರ ಆಗುವುದಿಲ್ಲ. ಕುಟುಂಬದವರ ಸಲಹೆ ಮತ್ತು ಸಹಕಾರದಿಂದ ಜಮೀನಿನ ನಿರ್ವಹಣೆಗೆ ನೆರವಾಗುತ್ತದೆ. ಪಶುಸಂಗೋಪನೆ ಮತ್ತು ಹಾಲು ಉತ್ಪಾದನೆಯಿಂದ ಆದಾಯ ಹೆಚ್ಚಲಿದೆ.

ವೃತ್ತಿನಿರತರು:

ಅವಕಾಶಗಳು ಮತ್ತು ಸವಾಲುಗಳು ಎರಡೂ ಜತೆ ಜತೆಯಾಗಿ ಕಾಣಿಸಿಕೊಳ್ಳುತ್ತವೆ. ನಿಮ್ಮ ಕೌಶಲ ಏನು ಹಾಗೂ ಅದರ ಸಾಮರ್ಥ್ಯ ಏನು ಎಂಬುದು ಇತರರಿಗೆ ಮನದಟ್ಟಾಗುವಂತೆ ಮಾಡಲು ಸೂಕ್ತ ವೇದಿಕೆ ದೊರೆಯಲಿದೆ. ಹೊಸ ಪ್ರಾಜೆಕ್ಟ್ ವೊಂದರಲ್ಲಿ ಬಹಳ ಮುಖ್ಯವಾದ ಪಾತ್ರವನ್ನು ವಹಿಸಲಿದ್ದೀರಿ. ನಿಮ್ಮ ಸ್ನೇಹಿತರೂ ಸಹೋದ್ಯೋಗಿಯೂ ಆದವರಿಗೆ ನೆರವು ನೀಡುವ ಕಾರಣಕ್ಕೆ ಹೆಚ್ಚಿನ ಸಮಯ ಹೋಗಲಿದ್ದು, ಕೌಟುಂಬಿಕ ಅಗತ್ಯಗಳ ಕಡೆಗೆ ಗಮನ ನೀಡುವುದು ಕಷ್ಟವಾಗಲಿದೆ.

ವಿದ್ಯಾರ್ಥಿಗಳು:

ನಿಮ್ಮ ಗುರಿಯನ್ನು ಸ್ಪಷ್ಟ ಮಾಡಿಕೊಳ್ಳುವುದು ಮುಖ್ಯ. ನೀವು ಆಯ್ಕೆ ಮಾಡಿಕೊಂಡಿರುವ ವಿಷಯಗಳಲ್ಲಿ ಯಾವುದಕ್ಕೆ ಎಷ್ಟು ಆದ್ಯತೆಯ ಸಮಯ ನೀಡಬೇಕು ಎಂದು ವೇಳಾಪಟ್ಟಿಯೊಂದನ್ನು ಮಾಡಿಕೊಳ್ಳುವುದು ಒಳ್ಳೆಯದು. ಪ್ರಮುಖ ವ್ಯಕ್ತಿಗಳ ಭೇಟಿ ಮಾಡುವುದರಿಂದ ನಿಮ್ಮ ಜೀವನಶೈಲಿಯಲ್ಲಿಯೇ ದೊಡ್ಡ ಬದಲಾವಣೆ ಆಗಲಿದೆ. ಚಟುವಟಿಕೆಯಿಂದ ಇರಬೇಕು ಎಂಬ ಉದ್ದೇಶಕ್ಕೆ ಜಿಮ್, ಯೋಗ, ಸೈಕ್ಲಿಂಗ್ ಇಂಥವುಗಳನ್ನು ಆರಂಭಿಸುವುದಕ್ಕೆ ನಿರ್ಧರಿಸುತ್ತೀರಿ.

ಮಹಿಳೆಯರು:

ಮನೆಯಿಂದಲೇ ಮಾಡುವಂಥ ಕೆಲವು ಕೆಲಸಗಳ ಮೂಲಕ ಆದಾಯ ಬರುವುದಕ್ಕೆ ಶುರುವಾಗುತ್ತದೆ. ಬ್ಯೂಟಿಪಾರ್ಲರ್, ಟೈಲರಿಂಗ್, ಚಾಕಲೇಟ್- ಬಿಸ್ಕೆಟ್ ತಯಾರಿಸುವುದು ಇಂಥವುಗಳಿಗೆ ಹೊಸ ವಿಷಯಗಳನ್ನು ಸೇರಿಸಿಕೊಂಡು ನೀವು ಮಾಡುವ ಉದ್ಯಮ ಒಳ್ಳೆ ಆದಾಯ ತಂದುಕೊಡಲಿದೆ. ಇದಕ್ಕೆ ನಿಮ್ಮ ಕುಟುಂಬ ಸದಸ್ಯರು ಸಹ ಬೆಂಬಲ ನೀಡಲಿದ್ದಾರೆ. ಆತ್ಮವಿಶ್ವಾಸ ಹಾಗೂ ಆದಾಯ ಹೆಚ್ಚಾಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಯಾವುದೇ ಕಾರ್ಯದ ಬಗ್ಗೆ ಸಾಧಕ- ಬಾಧಕಗಳು ಏನಿರುತ್ತವೆ ಎಂಬ ನಿಮ್ಮ ವಿಶ್ಲೇಷಣೆಯಿಂದಾಗಿ ಹಲವು ರೀತಿಯಲ್ಲಿ ಯಶಸ್ಸನ್ನು ಕಾಣುತ್ತೀರಿ. ಲೇವಾದೇವಿ ವ್ಯವಹಾರ ಮಾಡುತ್ತಾ ಇರುವವರು ನಾಜೂಕಿನ ಪರಿಸ್ಥಿತಿಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡು ಸಮಸ್ಯೆಯಿಂದ ಹೊರಗೆ ಬರುತ್ತೀರಿ. ಇಷ್ಟು ಸಮಯ ಹೆಚ್ಚು ಗಮನ ನೀಡಲು ಸಾಧ್ಯವಾಗದೆ ತಡ ಆಗುತ್ತಿದ್ದ ಕೆಲಸ- ಕಾರ್ಯಗಳಿಗೆ ಆದ್ಯತೆ ನೀಡುವುದಕ್ಕೆ ಆರಂಭಿಸುತ್ತೀರಿ. ಅದಕ್ಕೆ ಬೇಕಾದ ಸಂಪನ್ಮೂಲಗಳನ್ನು ಸಹ ಹೊಂದಿಸಿಕೊಳ್ಳುತ್ತೀರಿ. ಪರ್ಫ್ಯೂಮ್ ಮಾರಾಟಗಾರರು, ಬ್ಯಾಂಗಲ್ ಸ್ಟೋರ್ ನಡೆಸುತ್ತಿರುವವರು, ಚಿನ್ನ- ವಜ್ರಾಭರಣ ಮಳಿಗೆ ನಡೆಸುತ್ತಾ ಇರುವವರಿಗೆ ಆದಾಯದಲ್ಲಿ ಗಣನೀಯವಾದ ಏರಿಕೆ ಕಾಣಲಿದೆ. ಮನೆಯಲ್ಲಿ ಕೆಲವು ಪೂಜೆ- ಪುನಸ್ಕಾರಗಳನ್ನು ಆಯೋಜಿಸುವ ತೀರ್ಮಾನ ಮಾಡಲಿದ್ದು, ಅದರಿಂದಾಗಿ ಮಾನಸಿಕವಾಗಿ ನೆಮ್ಮದಿ ದೊರೆಯಲಿದೆ.

ಕೃಷಿಕರು:

ಈ ವಾರ ಜಾಗ್ರತೆ ಮತ್ತು ಲೆಕ್ಕಾಚಾರ ಎರಡೂ ಅಗತ್ಯವಾಗಿರುತ್ತದೆ. ಬೆಳೆಗಳಿಗೆ ಸಂಬಂಧಿಸಿದ ಖರ್ಚುಗಳು ಹೆಚ್ಚಾಗುವ ಸಾಧ್ಯತೆ ಇದ್ದರೂ ಅದಕ್ಕೆ ತಕ್ಕ ಫಲ ಭವಿಷ್ಯದಲ್ಲಿ ದೊರೆಯಲಿದೆ. ಕೃಷಿ ಉಪಕರಣಗಳು, ಯಂತ್ರೋಪಕರಣಗಳ ರಿಪೇರಿ ಅಥವಾ ಹೊಸದರ ಖರೀದಿ ವಿಚಾರ ಚರ್ಚೆಗೆ ಬರಲಿದೆ. ಸುತ್ತಮುತ್ತಲ ರೈತರ ಜೊತೆಗಿನ ಸಹಕಾರದಿಂದ ಕೆಲವು ಸಮಸ್ಯೆಗಳು ಸುಲಭವಾಗಿ ಬಗೆಹರಿಯುತ್ತವೆ. ಬೆಳೆ ವಿಮೆ ಅಥವಾ ಸರ್ಕಾರದಿಂದ ಬರಬೇಕಾದ ಸಹಾಯಧನಕ್ಕೆ ಹೆಚ್ಚಿನ ಶ್ರಮ ಹಾಕಬೇಕಾಗುತ್ತದೆ.

ವೃತ್ತಿನಿರತರು:

ವೃತ್ತಿಯಲ್ಲಿನ ಒತ್ತಡ ಸ್ವಲ್ಪ ಹೆಚ್ಚಾಗಲಿದೆ. ಆದರೆ ನಿಮ್ಮ ಪರಿಶ್ರಮಕ್ಕೆ ಮನ್ನಣೆ ಸಿಗುವ ಸಮಯ ಇದಾಗಿರುತ್ತದೆ. ನಿಮಗಿಂತ ಮೇಲಿನ ಹುದ್ದೆಯಲ್ಲಿ ಇರುವವರ ಜೊತೆಗೆ ಮಾತುಕತೆ ವೇಳೆ ಸಂಯಮ ಇರಲಿ. ಹೊಸ ಜವಾಬ್ದಾರಿಗಳು ಬಂದರೂ ಅದನ್ನು ಯಶಸ್ವಿಯಾಗಿ ನಿಭಾಯಿಸುವಿರಿ. ಹಣಕಾಸಿನಲ್ಲಿ ನಿರೀಕ್ಷಿತ ಆದಾಯ ಸಿಗುತ್ತದೆ, ಆದರೆ ಸಾಲ ಅಥವಾ ಕಂತು ಕಟ್ಟುವ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದ ಬೆಂಬಲವು ಕೆಲವು ನಿರ್ಧಾರ ಕೈಗೊಳ್ಳಲು ಮನಸ್ಸಿಗೆ ಧೈರ್ಯ ನೀಡುತ್ತದೆ.

ವಿದ್ಯಾರ್ಥಿಗಳು:

ನೀವು ಎಷ್ಟು ಪರಿಶ್ರಮ ಹಾಕುತ್ತೀರೋ ಅದಕ್ಕೆ ತಕ್ಕಂತೆ ಉತ್ತಮ ಫಲಿತಾಂಶವನ್ನು ಕಾಣುವುದಕ್ಕೆ ಸಾಧ್ಯವಿದೆ. ಯಾವುದಾದರೂ ಕಾರಣದಿಂದಾಗಿ ಹಿಂದೆ ಉಳಿದುಹೋಗಿದ್ದ ಸಬ್ಜೆಕ್ಟ್ ಗಳಲ್ಲಿ ಹಿನ್ನಡೆಯಿಂದ ಆಚೆ ಬರುವುದಕ್ಕೆ ನೆರವು ದೊರೆಯುತ್ತದೆ. ಪರೀಕ್ಷೆ ಬಗ್ಗೆ ಭಯ ಕಾಡುತ್ತಿದ್ದಲ್ಲಿ ಅದರಿಂದ ಹೊರಬರುವುದಕ್ಕೆ ಸಾಧ್ಯವಾಗಲಿದೆ. ಶಿಕ್ಷಕರು- ಉಪನ್ಯಾಸಕರು ನೀಡುವ ಸಲಹೆ, ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಿ. ಮನರಂಜನೆ ಬೇಕು ಎಂಬ ಕಾರಣಕ್ಕೆ ಅದಕ್ಕಾಗಿಯೇ ಹೆಚ್ಚಿನ ಸಮಯ ಕೊಡುವುದು ಬೇಡ.

ಮಹಿಳೆಯರು:

ಈ ವಾರ ಉದ್ಯೋಗ, ವೃತ್ತಿ, ಕುಟುಂಬ ಹೀಗೆ ಯಾವುದೇ ವಿಚಾರದಲ್ಲಿಯೂ ನಿರ್ಧಾರ ತೆಗೆದುಕೊಳ್ಳುವಾಗ ಆತ್ಮವಿಶ್ವಾಸ ಹೆಚ್ಚಾಗಿ ಇರಲಿದೆ. ಮನೆ ಮತ್ತು ಹೊರಗಿನ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸುವಿರಿ. ಹಣಕಾಸಿನ ವಿಷಯದಲ್ಲಿ ವಿವೇಕದಿಂದ ನಡೆದುಕೊಳ್ಳುವುದು ಒಳಿತು. ಇತರರ ಸಾಲಕ್ಕೆ ಜಾಮೀನಾಗಿ ನಿಲ್ಲುವುದು ಒಳ್ಳೆಯ ನಿರ್ಧಾರ ಆಗುವುದಿಲ್ಲ. ಸ್ವಂತ ಉದ್ಯೋಗ ಮಾಡುತ್ತಿರುವವರಿಗೆ ಕುಟುಂಬದವರ ಬೆಂಬಲ ಇರುತ್ತದೆ. ಥೈರಾಯ್ಡ್, ಕ್ಯಾಲ್ಷಿಯಂ- ವಿಟಮಿನ್ ಕೊರತೆಯಂಥ ಸಮಸ್ಯೆಗಳು ಈಗಾಗಲೇ ಇದ್ದಲ್ಲಿ ವೈದ್ಯರ ಭೇಟಿ ಆಗಿ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಕೆಲವು ಖರ್ಚು- ವೆಚ್ಚಗಳು ನಿಮ್ಮ ಧೈರ್ಯವನ್ನು ನುಂಗಿಹಾಕುವ ಮಟ್ಟಕ್ಕೆ ಬರಲಿವೆ. ಇವುಗಳ ಪೈಕಿ ಹಲವು ನಿರೀಕ್ಷಿತವೇ ಆಗಿದ್ದರೂ ಅದಕ್ಕಾಗಿ ಮೀಸಲಿಟ್ಟಿದ್ದ ಮೊತ್ತದಲ್ಲಿ ಸ್ವಲ್ಪವಾದರೂ ಕೊರತೆ ಕಂಡುಬರಲಿದೆ. ಸಂಬಂಧಿಗಳ ಬಳಿ ಸಾಲ ಕೇಳುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚಿಸುವುದು ಒಳ್ಳೆಯದು. ಏಕೆಂದರೆ ಇಂಥ ಸನ್ನಿವೇಶದಲ್ಲಿ ಅವಮಾನ- ಮುಜುಗರ ಅನುಭವಿಸುವ ಯೋಗ ಇದೆ. ಹೊಸದಾಗಿ ಉದ್ಯೋಗಕ್ಕೆ ಸೇರಬೇಕು ಎಂದು ಪ್ರಯತ್ನ ಮಾಡುತ್ತಿರುವವರಿಗೆ ಉತ್ಸಾಹದಿಂದ ಏನನ್ನೂ ಮಾಡಲು ಸಾಧ್ಯವಾಗದಂತೆ ಗೊಂದಲ ಸೃಷ್ಟಿ ಆಗುತ್ತದೆ. ನೀವು ಇತರರಿಗೆ ನೀಡುವ ಸಲಹೆ- ಸೂಚನೆಗಳನ್ನು ನಿಮಗೆ ಅನ್ವಯ ಮಾಡಿಕೊಳ್ಳುವ ಕಡೆಗೆ ಗಮನವನ್ನು ನೀಡಿದರೆ ಒಳ್ಳೆಯದು. ಬ್ರ್ಯಾಂಡೆಡ್ ವಸ್ತುಗಳ ಖರೀದಿಗೆ ಹೆಚ್ಚಿನ ಹಣವನ್ನು ಹಾಕಬೇಡಿ. ತಾತ್ಕಾಲಿಕವಾದ ಸೆಳೆತಕ್ಕೆ ಸಿಲುಕಿಕೊಂಡರೆ ಆ ನಂತರ ಪರಿತಪಿಸುವಂತೆ ಆಗಲಿದೆ.

ಕೃಷಿಕರು:

ನೀವು ಗಾಬರಿ ಆಗುವಂತೆ ಆಪ್ತರೇ- ಸ್ನೇಹಿತರೇ ಪದೇ ಪದೇ ಎಚ್ಚರಿಕೆ ಹೇಳುತ್ತಾ ಬಂದರೂ ಆ ಕಡೆಗೆ ನೀವು ಲಕ್ಷ್ಯ ನೀಡುವ ಅಗತ್ಯ ಇಲ್ಲ. ನಿಮ್ಮ ಜ್ಞಾನ, ತಿಳಿವಳಿಕೆ ಹಾಗೂ ಅನುಭವದ ಬಗ್ಗೆ ನಂಬಿಕೆ ಇರಿಸಿಕೊಳ್ಳುವುದು ಅಗತ್ಯ. ಈ ಹಿಂದೆ ನೀವು ಭೂಮಿ ವ್ಯವಹಾರವೊಂದನ್ನು ಮಾಡಿ, ಅದನ್ನು ಅರ್ಧಕ್ಕೇ ನಿಲ್ಲಿಸಿದ್ದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಹೆಚ್ಚಿದೆ. ಮೂರನೇ ವ್ಯಕ್ತಿಗಳನ್ನು ಮಧ್ಯಕ್ಕೆ ಸೇರಿಸಿಕೊಳ್ಳದೆ ನೀವೇ ನೇರವಾಗಿ ಮಾತಕತೆ ಆಡುವುದರಿಂದ ಎಲ್ಲವೂ ಸರಾಗವಾಗಿ ಪೂರ್ಣಗೊಳ್ಳುತ್ತದೆ.

ವೃತ್ತಿನಿರತರು:

ಈ ಹಿಂದೆ ನಿಮಗೆ ಅನುಕೂಲ ಮಾಡುವುದಾಗಿ ಮಾತು ನೀಡಿದ್ದ ಸ್ನೇಹಿತರೊಬ್ಬರು ಒಳ್ಳೆ ಕ್ಲೈಂಟ್ ವೊಬ್ಬರ ಕೆಲಸವನ್ನು ಕೊಡಿಸಲಿದ್ದಾರೆ. ಭವಿಷ್ಯದಲ್ಲಿ ಇದು ತುಂಬ ದೊಡ್ಡ ಮಟ್ಟಕ್ಕೆ ಬೆಳೆಯಲಿದೆ ಎಂಬ ವಿಶ್ವಾಸ ನಿಮಗೂ ಮೂಡಲಿದೆ. ಯಾವುದೇ ನಿರ್ಧಾರ ಕೈಗೊಳ್ಳುವಾಗ ಜಿಗುಟುತನ ಬೇಡ. ಸ್ವಲ್ಪ ಮಟ್ಟಿಗೆ ಉದಾರತೆ ತೋರಿಸಿದರೂ ಅದರಿಂದ ದೊರೆಯುವ ಫಲಿತಾಂಶ ನಿರೀಕ್ಷೆಗೂ ಮೀರಿದಂತೆ ಇರಲಿದೆ. ಒಂದು ಪರಿಸ್ಥಿತಿಯೋ ಸನ್ನಿವೇಶವೋ ಏಕಾಏಕಿ ತೀರ್ಮಾನ ತೆಗೆದುಕೊಳ್ಳದೆ ತಾಳ್ಮೆಯಿಂದ ವ್ಯವಹರಿಸಿ.

ವಿದ್ಯಾರ್ಥಿಗಳು:

ಊಟ- ತಿಂಡಿ, ನಿದ್ದೆ, ಮಾತುಕತೆ ಹೀಗೆ ಒಂದೊಂದಾಗಿ ನಿಮ್ಮ ಕೆಲವು ಅಭ್ಯಾಸ, ಹವ್ಯಾಸಗಳನ್ನು ಬದಲಾವಣೆ ಮಾಡಿಕೊಳ್ಳಲಿದ್ದೀರಿ. ನಿಮ್ಮ ಸಾಮರ್ಥ್ಯದ ಬಗ್ಗೆ ಇತರರು ಆಡಿದ ಹಗುರವಾದ ಮಾತುಗಳನ್ನು ಗಂಭೀರವಾಗಿ ಪರಿಗಣಿಸಿ, ಇಲ್ಲಿಯ ತನಕ ಯಾವುದು ಮಿತಿಯಾಗಿ ಕಾಡಿತ್ತೋ ಅದರಿಂದ ಹೊರಗೆ ಬರಲಿದ್ದೀರಿ. ಸೋಷಿಯಲ್ ಮೀಡಿಯಾ ಬಳಕೆಯನ್ನು ಕಡಿಮೆ ಮಾಡಿಕೊಳ್ಳಿ. ಕಲೆ- ಸಾಹಿತ್ಯ ಇಂಥದ್ದರ ಬಗ್ಗೆ ನಿಮಗೆ ಇರುವ ಆಸಕ್ತಿಗೆ ಹೆಚ್ಚಿನ ಸಮಯವನ್ನು ಮೀಸಲಿಡಿ.

ಮಹಿಳೆಯರು:

ಇನ್ನು ನಿಭಾಯಿಸುವುದಕ್ಕೆ ಆಗುವುದಿಲ್ಲ ಎಂದೆನಿಸಿದ ಕೆಲವು ಸಂಬಂಧ- ವ್ಯಕ್ತಿಗಳಿಂದ ಮುಲಾಜಿಲ್ಲದೆ ಅಂತರವನ್ನು ಕಾಯ್ದುಕೊಳ್ಳಲಿದ್ದೀರಿ. ನಿಮ್ಮ ದಿರಿಸು, ಒಡವೆ, ಹೊರಗಿನ ಜನರಿಗೆ ಹೇಗೆ ಕಾಣಿಸಿಕೊಳ್ಳಬೇಕು ಎಂಬ ವಿಚಾರವಾಗಿ ಬಹಳ ಸಮಯದಿಂದ ನೀವು ಅಂದುಕೊಳ್ಳುತ್ತಾ ಇದ್ದಿರೋ ಆ ರೀತಿಯಾಗಿ ಬದಲಾವಣೆ ಅಳವಡಿಸಿಕೊಳ್ಳುವಿರಿ. ಸ್ವಂತ ಉದ್ಯಮ ಆರಂಭ ಮಾಡಬೇಕು ಎಂದುಕೊಂಡಿರುವವರಿಗೆ ಸ್ವಲ್ಪ ಮಟ್ಟಿಗೆ ಹಿನ್ನಡೆ ಕಾಡಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕಾಡಂಚಿನ ಪ್ರದೇಶಗಳಲ್ಲಿ ವಾಸ ಇರುವವರಿಗೆ ಪ್ರಾಣಿಗಳ ದಾಳಿ ತಲೆನೋವಾಗಿ ಮಾರ್ಪಡಲಿದೆ. ನಿಮ್ಮಲ್ಲಿ ಕೆಲವರು ಉದ್ಯೋಗವೋ ಅಥವಾ ಮತ್ತ್ಯಾವುದಾದರೂ ಕಾರಣದಿಂದ ಸ್ಥಳ ಬದಲಾವಣೆ ಮಾಡುವ ಬಗ್ಗೆ ಆಲೋಚನೆಯನ್ನು ಮಾಡಲಿದ್ದೀರಿ. ನೀವು ಮಾಡಿದ ಕೆಲಸ- ಕಾರ್ಯಗಳ ಬಗ್ಗೆ ಹುಡುಕಿಕೊಂಡು ಕೊಂಕು ಹೇಳುವಂಥ ಕೆಲವು ವ್ಯಕ್ತಿಗಳ ಸ್ವಭಾವದ ಬಗ್ಗೆ ಬೇಸರ ಆಗಲಿದ್ದು, ಅದನ್ನು ಸಂಬಂಧಪಟ್ಟವರಿಗೆ ಹೇಳಿಯೂ ಹೇಳುತ್ತೀರಿ. ಮನೆ- ಸೈಟು ಅಥವಾ ಜಮೀನು ಖರೀದಿಗೆ ಮುಂಗಡ ನೀಡುವಂಥವರು ಕಾಗದ- ಪತ್ರಗಳನ್ನು ಒಂದಕ್ಕೆ ನಾಲ್ಕು ಬಾರಿಗೆ ಎಂಬಂತೆ ಪರಿಶೀಲಿಸಿಕೊಳ್ಳಿ. ಏಕೆಂದರೆ ನಕಲಿ ದಾಖಲೆಗಳನ್ನು ನೀಡಿ, ನಿಮಗೆ ಮೋಸ ಮಾಡುವ ಸಾಧ್ಯತೆ ಹೆಚ್ಚಿದೆ. ಕಡಿಮೆ ಬೆಲೆ ಅಂತಲೋ ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಖರೀದಿಗೆ ಆತುರ ಮಾಡುವುದಕ್ಕೆ ಹೋಗಬೇಡಿ.

ಕೃಷಿಕರು:

ಮೀನು- ಮೊಲದ ಸಾಕಣೆ ಮಾಡುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ಕೆಲವು ತಾಂತ್ರಿಕ ಅಗತ್ಯಗಳನ್ನು ಅಳವಡಿಕೆ ಮಾಡಿಕೊಳ್ಳಲು ಹಣವನ್ನು ಹೂಡಿಕೆ ಮಾಡಲಿದ್ದೀರಿ. ಡೇರಿ ಉತ್ಪನ್ನಗಳ ದೊಡ್ಡ ಮಟ್ಟದ ಮಾರಾಟ ಆರಂಭಿಸಬೇಕು ಎಂದು ಇರುವವರಿಗೆ ಸಂಬಂಧಿಗಳೇ ಹೂಡಿಕೆಗೆ ಬೇಕಾದ ಹಣವನ್ನು ನೀಡುವುದಾಗಿ ಮುಂದೆ ಬರಲಿದ್ದಾರೆ. ನಾಲ್ಕಾರು ರೈತರು ಸೇರಿ, ಸಂಘದ ರೂಪ ಕೊಟ್ಟು ಮಾಡಬೇಕು ಎಂದುಕೊಂಡ ವ್ಯವಹಾರಗಳಲ್ಲಿ ಉತ್ತಮ ಬೆಳವಣಿಗೆ ಕಾಣಲಿದ್ದೀರಿ.

ವೃತ್ತಿನಿರತರು:

ನಿಮ್ಮ ಒಪ್ಪಿಗೆ ಪಡೆದು, ಒಂದಕ್ಕೆ ನಾಲ್ಕು ಬಾರಿ ಖಚಿತ ಮಾಡಿಕೊಂಡು ಮುಂದುವರಿದ ವ್ಯವಹಾರಗಳಿಂದ ಕೊನೆ ಕ್ಷಣದಲ್ಲಿ ಬೇಡ ಎಂದು ಹಿಂದಕ್ಕೆ ಸರಿಯುವುದು ಖಂಡಿತಾ ಒಳ್ಳೆ ಲಕ್ಷಣವಲ್ಲ. ಹೀಗೆ ಹೇಳುವುದಕ್ಕೆ ನಿಮಗೆ ಯಾವುದೇ ಕಾರಣ ಇರಬಹುದು. ಆದರೆ ತುಂಬ ಮುಂದುವರಿದ ನಂತರದಲ್ಲಿ ಈ ರೀತಿ ಮಾಡಬೇಡಿ. ತಂತ್ರಜ್ಞಾನಗಳ ಅಳವಡಿಕೆಗೆ ಹೆಚ್ಚು ಹಣವನ್ನು ಖರ್ಚು ಮಾಡಲಿದ್ದೀರಿ. ಇದರ ಅನುಕೂಲ ದೀರ್ಘಾವಧಿಯಲ್ಲಿ ಸಿಗಲಿದೆ. ನಿಮ್ಮ ಜತೆಗೆ ಕಾರ್ಯ ನಿರ್ವಹಿಸುವವರ ಅಭಿಪ್ರಾಯಕ್ಕೂ ಮನ್ನಣೆಯನ್ನು ನೀಡಿ.

ವಿದ್ಯಾರ್ಥಿಗಳು:

ಎಲ್ಲವನ್ನೂ ನಾನೇ ಮಾಡುತ್ತೇನೆ ಎಂದು ಹೊರಡಬೇಡಿ. ಇತರರಿಂದ ನೆರವು ಪಡೆದುಕೊಳ್ಳುವುದರಿಂದ ಒತ್ತಡ ಕಡಿಮೆ ಆಗುತ್ತದೆ ಹಾಗೂ ಇನ್ನೂ ಅಚ್ಚುಕಟ್ಟಾಗಿ ಕೆಲಸ- ಕಾರ್ಯಗಳು ಆಗುತ್ತವೆ. ಪ್ರತಿಷ್ಠಿತ ಸಾಂಸ್ಕೃತಿಕಿ ಸ್ಪರ್ಧೆಗಳು, ಆಟೋಟದಲ್ಲಿ ಭಾಗವಹಿಸುವುದಕ್ಕೆ ನೀವು ಆಯ್ಕೆ ಆಗುವ ಅವಕಾಶಗಳು ಇವೆ. ಇವುಗಳಲ್ಲಿ ಭಾಗವಹಿಸುವುದರಿಂದ ತಪ್ಪಿಸಿಕೊಳ್ಳಬೇಡಿ. ಏಕೆಂದರೆ ನಿಮ್ಮ ಕೀರ್ತಿ- ಪ್ರತಿಷ್ಠೆಗಳು ಹೆಚ್ಚಾಗುವುದಕ್ಕೆ ಸಹಾಯ ಆಗುತ್ತದೆ. ನೀರು- ಆಹಾರ ಸೇವನೆ ವಿಚಾರದಲ್ಲಿ ಸ್ವಚ್ಛತೆಗೆ ಆದ್ಯತೆಯನ್ನು ನೀಡುವುದು ಮುಖ್ಯ.

ಮಹಿಳೆಯರು:

ನೀವು ಆಡದ ಮಾತುಗಳು ಹಾಗೂ ನೀವು ವ್ಯಕ್ತಪಡಿಸಿದ ಭಾವನೆಗಳು ನಿಮ್ಮ ಮೇಲೆ ಹೇರಿ, ಸ್ನೇಹಿತರು- ಸಂಬಂಧಿಗಳ ಎದುರು ವಿಶ್ವಾಸ ಕುಸಿಯುವಂತೆ ಕೆಲವರು ಮಾಡಲಿದ್ದಾರೆ. ನೀವು ಯಾರನ್ನು ಹಚ್ಚಿಕೊಂಡಿದ್ದೀರಿ, ಹೆಚ್ಚು ಸಮಯ ಯಾರ ಜೊತೆಗೆ ಕಾಣಿಸಿಕೊಳ್ಳುತ್ತೀರಿ ಎಂಬ ಬಗ್ಗೆ ಗಮನ ನೀಡುವುದು ಮುಖ್ಯ. ಸಾಮಾಜಿಕ ಕಾರ್ಯಗಳಲ್ಲಿ ಚಟುವಟಿಕೆಯಿಂದ ಇರುವವರಿಗೆ ದೈಹಿಕ- ಮಾನಸಿಕ ದಣಿವು ಕಾಡಲಿದೆ. ಇಷ್ಟು ಸಮಯ ಗೆಳೆತನದಲ್ಲಿ ಇರುವ ವ್ಯಕ್ತಿಯೊಬ್ಬರು ಪ್ರೇಮ ನಿವೇದನೆ ಮಾಡುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ನೀವು ಏನನ್ನು ಬಿತ್ತುತ್ತೀರೋ ಅದನ್ನೇ ಬೆಳೆಯುತ್ತೀರಿ ಎಂಬ ಬಗ್ಗೆ ಸ್ಪಷ್ಟತೆಯನ್ನು ಇರಿಸಿಕೊಳ್ಳಿ. ಸಂಬಂಧಗಳಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯಿಂದ ನಡೆದುಕೊಳ್ಳಿ. ಈ ಹಿಂದೆ ಯಾವಾಗಲೋ ನಡೆದ ಘಟನೆಯನ್ನು ಮುಂದಿಟ್ಟುಕೊಂಡು ಕಹಿಯಾದ ಮಾತುಗಳನ್ನು ಆಡಬೇಡಿ. ಕಡಿಮೆ ಆದಾಯ ಅಥವಾ ರಿಟರ್ನ್ಸ್ ಬರುತ್ತಿರುವ ಹೂಡಿಕೆಯನ್ನು ತೆಗೆದು, ಹೆಚ್ಚಿನ ರಿಟರ್ನ್ಸ್ ತರುವಂಥ ಕಡೆ ಹೂಡಿಕೆ ಮಾಡಲು ಆದ್ಯತೆಯನ್ನು ನೀಡಲಿದ್ದೀರಿ. ಆಹಾರ ಪದಾರ್ಥಗಳ ಉತ್ಪಾದನೆ ಘಟಕವನ್ನು ಶುರು ಮಾಡುವುದಕ್ಕೆ ಹಣ ಹೂಡುವುದಕ್ಕೆ ನಿರ್ಧಾರ ಮಾಡಲಿದ್ದೀರಿ. ರೊಟ್ಟಿ ತಯಾರಿ, ಚಪಾತಿ ಮಾಡುವುದು ಈ ರೀತಿಯ ಘಟಕಗಳನ್ನು ಆರಂಭಿಸುವ ಸಾಧ್ಯತೆ ಇದೆ. ಸರ್ಕಾರಿ ಉದ್ಯೋಗಿಗಳಿಗೆ ನೀವು ಬಯಸದ ವಿಭಾಗಕ್ಕೆ ಅಥವಾ ಪ್ರದೇಶಕ್ಕೆ ವರ್ಗಾವಣೆ ಆಗಿ, ಅದನ್ನು ರದ್ದು ಮಾಡಿಸಿಕೊಳ್ಳಲು ವಿಪರೀತ ಓಡಾಟ ಆಗಲಿದೆ. ಸಂತಾನಕ್ಕೆ ಪ್ರಯತ್ನಿಸುತ್ತಾ ಇರುವವರಿಗೆ ಶುಭ ಸುದ್ದಿ ದೊರೆಯಲಿದೆ. ಅನವಶ್ಯಕವಾದ ಸಿಟ್ಟನ್ನು ಕಡಿಮೆ ಮಾಡಿಕೊಳ್ಳುವುದು ಬಹಳ ಅಗತ್ಯ.

ಕೃಷಿಕರು:

ಉಳುಮೆ ಮಾಡಿದ ಹಾಗೇ ಪಾಳು ಬಿದ್ದಿರುವಂಥ ಭೂಮಿಯ ಪೈಕಿ ಕೆಲವಷ್ಟನ್ನು ಮಾರಾಟ ಮಾಡುವುದಕ್ಕೆ ಮುಂದಾಗಲಿದ್ದೀರಿ. ಅದಕ್ಕಾಗಿ ಕುಟುಂಬ ಸದಸ್ಯರ ಸಮ್ಮತಿ ಪಡೆದುಕೊಳ್ಳಲು ಪ್ರಯತ್ನ ಮಾಡುತ್ತೀರಿ. ಆಹಾರ ಧಾನ್ಯಗಳ ಬೆಳೆಯನ್ನು ಬೆಳೆಯುತ್ತಾ ಇರುವವರು ಪ್ರತಿಷ್ಠಿತ ಸಂಸ್ಥೆಗಳ ಜೊತೆಗೆ ಮಾರಾಟ ಒಪ್ಪಂದ ಮಾಡಿಕೊಳ್ಳುವಂಥ ಯೋಗ ಇದೆ. ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸ- ಕಾರ್ಯಗಳನ್ನು ಪಟ್ಟು ಹಿಡಿದು ಮಾಡಿಸಿಕೊಳ್ಳುವಲ್ಲಿ ಯಶಸ್ವಿ ಆಗಲಿದ್ದೀರಿ.

ಇದನ್ನೂ ಓದಿ: ನಿಮ್ಮ ರಾಶಿಗನುಗುಣವಾಗಿ ಡಿ. 21 ರಿಂದ 27ರ ವರೆಗಿನ ವಾರಭವಿಷ್ಯ ತಿಳಿಯಿರಿ

ವೃತ್ತಿನಿರತರು:

ಯಾರ ಬಳಿ ಎಷ್ಟು ಮಾಹಿತಿ ನೀಡಬೇಕು ಎಂಬ ಸ್ಪಷ್ಟತೆ ಇರಿಸಿಕೊಳ್ಳುವುದು ಮುಖ್ಯ. ವೃತ್ತಿ ರಹಸ್ಯಗಳು- ಗುಟ್ಟು ಎನಿಸುವಂಥದ್ದು ಎಲ್ಲರ ಜೊತೆಗೂ ಹಂಚಿಕೊಳ್ಳಬಾರದು ಎಂದು ಹಲವು ಬಾರಿ ಅನಿಸಲಿದೆ. ನಿಮಗಿಂತ ಹೆಚ್ಚು ಹೆಸರು ಪಡೆದಿರುವಂಥ ಹಾಗೂ ಕ್ಲೈಂಟ್ ಗಳನ್ನು ಹೊಂದಿರುವಂಥ ಸಂಸ್ಥೆಯ ಮುಖ್ಯಸ್ಥರು ತಮ್ಮ ಜೊತೆಗೂಡಿ ಕೆಲಸ ಮಾಡುವಂತೆ ಆಹ್ವಾನ ನೀಡುವ ಸಾಧ್ಯತೆ ಇದೆ. ಇಂಥವುಗಳನ್ನು ಸಕಾರಾತ್ಮವಾಗಿ ಪರಿಗಣಿಸಿ.

ವಿದ್ಯಾರ್ಥಿಗಳು:

ಕೆಲವು ಪುಸ್ತಕಗಳ ಖರೀದಿಗೆ ಹೆಚ್ಚು ಖರ್ಚನ್ನು ಮಾಡಲಿದ್ದೀರಿ. ಪ್ರವೇಶ ಪರೀಕ್ಷೆಗಳಿಗೆ ಸಿದ್ಧ ಆಗುವ ಸಲುವಾಗಿಯೇ ಟ್ಯೂಷನ್ ಗೆ ಸೇರುವ ಬಗ್ಗೆ ಪೋಷಕರ ಜೊತೆ ಮಾತುಕತೆ ನಡೆಸಲಿದ್ದೀರಿ. ಇದಲ್ಲೆ ಅವರ ಒಪ್ಪಿಗೆ ಸಹ ಸಿಗಲಿದ್ದು, ಭವಿಷ್ಯದಲ್ಲಿ ಇದರಿಂದ ಅನುಕೂಲ ಆಗಲಿದೆ. ಇನ್ನೂ ನಿಧಾನ ಆಗಬಹುದು ಎಂದು ನೀವಂದುಕೊಂಡಿದ್ದ ಕೆಲವು ವಿಚಾರಗಳು ವೇಗವಾಗಿ ಮುಗಿಯಲಿದ್ದು, ಅದಕ್ಕೆ ಬೇಕಾದ ತಯಾರಿಗೆ ಹೆಚ್ಚಿನ ಸಮಯವನ್ನು ಮೀಸಲಿಡಲಿದ್ದೀರಿ.

ಮಹಿಳೆಯರು:

ತಾಯಿ, ಅಕ್ಕ- ತಂಗಿಯರ ಅನಾರೋಗ್ಯ ಸಮಸ್ಯೆಯು ಚಿಂತೆಗೆ ಕಾರಣ ಆಗಲಿದೆ. ಅವರ ಕಡೆಗೆ ಹೆಚ್ಚಿನ ಗಮನ ನೀಡಬೇಕಾದಂಥ ಪರಿಸ್ಥಿತಿ ಬರುವುದರಿಂದ ನಿಮ್ಮ ಮನೆಯ ಕೆಲಸ- ಕಾರ್ಯಗಳು ಹಾಗೇ ಉಳಿದುಕೊಳ್ಳಲಿದೆ. ನಿಮ್ಮ ಬಳಿ ಎಷ್ಟು ಹಣ ಇದೆಯೋ ಆ ಮೊತ್ತಕ್ಕೆ ಮಾತ್ರ ಬಜೆಟ್- ಪ್ಲಾನಿಂಗ್ ಮಾಡಿಕೊಳ್ಳಿ. ಸಾಲ ತಂದು ಯಾವುದೇ ಹೂಡಿಕೆಯನ್ನು ಮಾಡುವುದಕ್ಕೆ ಹೋಗಬೇಡಿ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:08 pm, Mon, 22 December 25

Source link

ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್, ಕೊಹ್ಲಿ ದಾಖಲೆ ಹೇಗಿದೆ? – Kannada News | Vijay Hazare Trophy: Rohit Sharma and Virat Kohli Stats

ಮೊದಲಿಗೆ, ರೋಹಿತ್ ಶರ್ಮಾ ಅವರ ದಾಖಲೆಯನ್ನು ನೋಡೋಣ. 2018 ರ ನಂತರ ಮೊದಲ ಬಾರಿಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ರೋಹಿತ್ ಶರ್ಮಾ, ಇಲ್ಲಿಯವರೆಗೆ ಪಂದ್ಯಾವಳಿಯಲ್ಲಿ 18 ಪಂದ್ಯಗಳನ್ನು ಆಡಿದ್ದಾರೆ. ಆ 18 ಪಂದ್ಯಗಳಲ್ಲಿ 17 ಇನ್ನಿಂಗ್ಸ್‌ಗಳಲ್ಲಿ, ರೋಹಿತ್ ಶರ್ಮಾ 38.7 ರ ಸರಾಸರಿಯಲ್ಲಿ 581 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ, ಅವರು ಒಂದು ಶತಕ ಮತ್ತು ಮೂರು ಅರ್ಧಶತಕಗಳನ್ನು ಗಳಿಸಿದ್ದಾರೆ.

Source link

Exit mobile version