ಚಿನ್ನದ ಬೆಲೆ 13,500 ರೂನಿಂದ 31,500 ರೂಗೆ ಏರುತ್ತಾ? ಎಡ್ ಯಾರ್ದೆನಿ ಭವಿಷ್ಯ – Kannada News | Gold price prediction by Ed Yardeni, says the rates might cross 10,000 USD per ounce in 4 years

ನವದೆಹಲಿ, ಡಿಸೆಂಬರ್ 22: ಚಿನ್ನದ ಬೆಲೆ (gold rate) ಕಳೆದ ಒಂದು ವರ್ಷದಲ್ಲಿ ಅಸಾಮಾನ್ಯ ರೀತಿಯಲ್ಲಿ ಓಡಿದೆ. ಈ ಭರ್ಜರಿ ಓಟ ಹೀಗೆ ಮುಂದುವರಿಯುತ್ತಾ ಎನ್ನುವುದು ಹಲವರಿಗೆ ಇರುವ ಪ್ರಶ್ನೆಯಾಗಿದೆ. ಯಾರ್ದೇನಿ ರಿಸರ್ಚ್ ಸಂಸ್ಥೆಯ ಮುಖ್ಯಸ್ಥರಾದ ಎಡ್ ಯಾರ್ದೇನಿ ಅವರ ಪ್ರಕಾರ ಚಿನ್ನದ ಬೆಲೆ 2029ರಲ್ಲಿ ಗ್ರಾಮ್​ಗೆ 31,000 ರೂ ದಾಟಿ ಹೋಗಬಹುದು.

ಸದ್ಯ ಅಮೆರಿಕದ ನ್ಯೂಯಾರ್ಕ್​ನ ಕಮಾಡಿಟಿ ಎಕ್ಸ್​ಚೇಂಜ್​ನಲ್ಲಿ (ಸರಕು ವಿನಿಮಯ ಕೇಂದ್ರ) ಚಿನ್ನದ ಬೆಲೆ ಒಂದು ಔನ್ಸ್​ಗೆ 4,400 ಡಾಲರ್ ಇದೆ. 2029ರಲ್ಲಿ ಇದರ ಬೆಲೆ ಒಂದು ಔನ್ಸ್​ಗೆ 10,000 ಡಾಲರ್​ಗೆ ಏರಬಹುದು ಎಂಬುದ ಎಡ್ ಯಾರ್ಡೇನಿ ಅವರು ಮಾಡಿರುವ ಅಂದಾಜು.

ಒಂದು ಔನ್ಸ್ ಎಂದರೆ 28.3495 ಗ್ರಾಮ್. ಒಂದು ಔನ್ಸ್​ಗೆ 10,000 ಡಾಲರ್ ಎಂದರೆ, ಒಂದು ಗ್ರಾಮ್​ಗೆ ಸುಮಾರು 352 ಡಾಲರ್ ಆಗುತ್ತದೆ. ಭಾರತೀಯ ಕರೆನ್ಸಿಯಲ್ಲಿ 31,740 ರೂ ಆಗುತ್ತದೆ. ಎಡ್ ಯಾರ್ದೆನಿ ಭವಿಷ್ಯ ನಿಜವಾದಲ್ಲಿ ಮುಂದಿನ ಮೂರು ವರ್ಷದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ 31,000 ರೂ ಅಥವಾ 32,000 ರೂ ದಾಟಿ ಹೋಗಬಹುದು. ಭಾರತದಲ್ಲಿ ಸದ್ಯ ಒಂದು ಗ್ರಾಮ್ ಚಿನ್ನದ ಬೆಲ 13,500 ರೂನಷ್ಟಿದೆ. ಎರಡೂವರೆ ಪಟ್ಟು ಬೆಲೆ ಅಧಿಕಗೊಳ್ಳಬಹುದು.

ಇದನ್ನೂ ಓದಿ: Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ

2025ರಲ್ಲಿ ಚಿನ್ನದ ಬೆಲೆ ಶೇ. 67ರಷ್ಟು ಹೆಚ್ಚಿದೆ. ಇತ್ತೀಚಿನ ಕೆಲ ವರ್ಷಗಳಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದವರಿಗೆ ಒಳ್ಳೆಯ ಲಾಭ ಸಿಗುತ್ತಾ ಬಂದಿದೆ.

ಭಾರತದ ಷೇರು ಮಾರುಕಟ್ಟೆ ಬಗ್ಗೆ ಯಾರ್ದೆನಿ ನಿರೀಕ್ಷೆ

ಮಾರುಕಟ್ಟೆ ವಿಶ್ಲೇಷಕರಾಗಿರುವ ಎಡ್ ಯಾರ್ದೆನಿ ಅವರು ಭಾರತದ ಈಕ್ವಿಟಿ ಮಾರುಕಟ್ಟೆ ಬಗ್ಗೆ ಬಹಳ ಸಕಾರಾತ್ಮಕವಾಗಿದ್ದಾರೆ. ಹಲವು ವರ್ಷಗಳಿಂದ ಇಲ್ಲಿಯ ಮಾರುಕಟ್ಟೆ ಬಹಳ ಪ್ರಬಲವಾಗಿ ಬೆಳೆದಿದೆ. 2026ರಲ್ಲಿ ಇದು ಸ್ಥಿರಗೊಳ್ಳುವ ವರ್ಷ ಎಂಬುದು ಅವರ ಭಾವನೆ.

ಅಮೆರಿಕದೊಂದಿಗೆ ಟ್ರೇಡ್ ಮಾಡಿಕೊಳ್ಳಲು ಯಶಸ್ವಿಯಾಗಿಬಿಟ್ಟರೆ ಭಾರತದ ಈಕ್ವಿಟಿ ಮಾರುಕಟ್ಟೆ ಹೊಸ ಎತ್ತರಕ್ಕೆ ಹೋಗುತ್ತದೆ ಎಂದು ಹೇಳುವ ಅವರು, ಭಾರತ ಹಾಗೂ ಚೀನಾ ಈ ಎರಡೂ ದೇಶಗಳ ಮಾರುಕಟ್ಟೆಗಳು ಉತ್ತಮ ಅವಕಾಶ ಕೊಡುತ್ತವೆ ಎಂದಿದ್ದಾರೆ. ಹಾಗೆಯೇ, ಅವರು ಆ ಎರಡು ದೇಶಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕೆಂದರೆ ಭಾರತಕ್ಕೇ ಆದ್ಯತೆ ಕೊಡುತ್ತಾರಂತೆ.

ಇದನ್ನೂ ಓದಿ: ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್

‘ಭಾರತದಲ್ಲಿ ಹೂಡಿಕೆ ಮಾಡುವುದು ನನ್ನ ಆದ್ಯತೆ. ಅದು ಯಾಕೆಂದರೆ, ಚೀನಾದಲ್ಲಿರುವುದಕ್ಕಿಂತ ಉತ್ತಮವಾದ ಕಾನೂನು ಮತ್ತು ಕಾರ್ಪೊರೇಟ್ ಸಿಸ್ಟಂ ಭಾರತದಲ್ಲಿ ಇದೆ’ ಎಂದು ಯಾರ್ದೆನಿ ರಿಸರ್ಚ್ ಸಂಸ್ಥೆಯ ಅಧ್ಯಕ್ಷರೂ ಆದ ಅವರು ವಿಶ್ಲೇಷಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ – Kannada News | Rashika Shetty says Gilli Nata is cunning in Bigg Boss Kannada Season 12 show

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಫಿನಾಲೆ ಸಮೀಪಿಸುತ್ತಿದೆ. ನಟಿ ರಾಶಿಕಾ ಶೆಟ್ಟಿ (Rashika Shetty) ಅವರು ಗಿಲ್ಲಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಾರದ ನಾಮಿನೇಷನ್ ಪ್ರಕ್ರಿಯೆ ವೇಳೆ ಗಿಲ್ಲಿಯನ್ನು ರಾಶಿಕಾ ನಾಮಿನೇಟ್ ಮಾಡಿದ್ದಾರೆ. ಇದಕ್ಕೆ ಅವರು ಕಾರಣ ನೀಡಿದ್ದಾರೆ. ‘ಗಿಲ್ಲಿ ಪ್ರತಿ ದಿನ ಒಂದೊಂದು ಪಾತ್ರ ಮಾಡುತ್ತಿದ್ದಾನೆ. ಅವನು ಬಹಳ ದೊಡ್ಡ ಕುತಂತ್ರಿ’ ಎಂದು ರಾಶಿಕಾ ಶೆಟ್ಟಿ ಅವರು ಹೇಳಿದ್ದಾರೆ. ಇಷ್ಟು ದಿನ ಸೀಕ್ರೆಟ್ ರೂಮ್​​ನಲ್ಲಿ ಇದ್ದ ರಕ್ಷಿತಾ ಶೆಟ್ಟಿ ಮತ್ತು ಧ್ರುವಂತ್ ಅವರು ಈಗ ಪುನಃ ಬಿಗ್ ಬಾಸ್ ಮನೆಗೆ ಬಂದು ಆಟ ಮುಂದುವರಿಸಿದ್ದಾರೆ. ಅತಿಥಿಗಳಾಗಿ ತೆರಳಿದ್ದ ಚೈತ್ರಾ ಕುಂದಾಪುರ ಮತ್ತು ರಜತ್ ಅವರು ಹೊರಗೆ ಬಂದಿದ್ದಾರೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ಬಿಗ್ ಬಾಸ್ ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಜೋರಾಗಿದೆ. ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ಮುಂತಾದವರು ಕೂಡ ಕಠಿಣ ಪೈಪೋಟಿ ನೀಡುತ್ತಿದ್ದಾರೆ. ಡಿಸೆಂಬರ್ 22ರ ಬಿಗ್ ಬಾಸ್ ಸಂಚಿಕೆಯ ಪ್ರೋಮೋ ಇಲ್ಲಿದೆ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕಾರಿನಲ್ಲಿ ವಾಂತಿ ಮಾಡಿ, ನನ್ನಿಂದಲೇ ಕ್ಲೀನ್ ಮಾಡಿಸಿದರು; ಭಾರತೀಯರ ಬಗ್ಗೆ ಸಿಂಗಾಪುರ ಕ್ಯಾಬ್ ಚಾಲಕ ಆರೋಪ – Kannada News | Singapore cab driver says Indian passengers vomited in car forced him to clean up

ನವದೆಹಲಿ, ಡಿಸೆಂಬರ್ 22: ಸಿಂಗಾಪುರದ (Singapore) ಕ್ಯಾಬ್ ಚಾಲಕನೊಬ್ಬ ಇಬ್ಬರು ಭಾರತೀಯ ಪ್ರಯಾಣಿಕರು ತನ್ನ ಕಾರಿನೊಳಗೆ ವಾಂತಿ ಮಾಡಿ, ಆ ಗಲೀಜನ್ನು ಸ್ವಚ್ಛಗೊಳಿಸುವಂತೆ ತನಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾನೆ. ಆ ಚಾಲಕ ನಿನ್ನೆ ಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ಘಟನೆಯನ್ನು ವಿವರಿಸಿದ್ದು, ಅವರಿಬ್ಬರೂ ಬಲವಂತವಾಗಿ ಆ ವಾಂತಿಯನ್ನು ಸ್ವಚ್ಛಗೊಳಿಸಲು ಹೇಳಿದರು ಎಂದು ಪೋಸ್ಟ್ ಮಾಡಿದ್ದಾರೆ.

ಕ್ಯಾಬ್ ಚಾಲಕ ಲೂ ಸ್ಯಾಮ್ ಎಂಬಾತ ತನ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ಡಿಸೆಂಬರ್ 21ರಂದು ಇಬ್ಬರು ಭಾರತೀಯ ಪುರುಷರು ತನ್ನ ಕ್ಯಾಬ್ ಅನ್ನು ಬುಕ್ ಮಾಡಿದ್ದರು ಎಂದು ಹೇಳಿದ್ದಾನೆ. ಅವರು ಕಂಠಪೂರ್ತಿ ಕುಡಿದಿದ್ದರು. ನಂತರ ಕಾರಿನೊಳಗೆ ವಾಂತಿ ಮಾಡಿದರು. ಆ ಗಲೀಜನ್ನು ನಾನೇ ಕ್ಲೀನ್ ಮಾಡಬೇಕೆಂದು ಒತ್ತಾಯಿಸಿ ನನ್ನ ಕೈಯಲ್ಲೇ ಎಲ್ಲವನ್ನೂ ಸ್ವಚ್ಛ ಮಾಡಿಸಿದರು. ನನ್ನನ್ನು ಭಿಕ್ಷುಕ ಎಂದು ಅಪಹಾಸ್ಯ ಮಾಡಿದರು ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದ್ದಾನೆ.

ಇದನ್ನೂ ಓದಿ: ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಭೀಕರ ಬಸ್ ಅಪಘಾತ, 15 ಮಂದಿ ಸಾವು

50ರ ಹರೆಯದ ಸ್ಯಾಮ್, ಡಿಸೆಂಬರ್ 21ರ ಬೆಳಗಿನ ಜಾವ ಇಬ್ಬರು ಪ್ರಯಾಣಿಕರನ್ನು ಕರೆದುಕೊಂಡು ಹೋಗಿದ್ದಾಗ ಈ ಘಟನೆ ನಡೆದಿದೆ. ವಾಂತಿಯನ್ನು ಸ್ವಚ್ಛಗೊಳಿಸಲು ಕನಿಷ್ಠ 45 ನಿಮಿಷಗಳು ಬೇಕಾಯಿತು. ಇದರಿಂದ ಆದಾಯವೂ ಕಡಿಮೆಯಾಯಿತು. ಬೇರೆ ಪ್ರಯಾಣಿಕರನ್ನು ಕರೆದೊಯ್ಯುವಂತಿರಲಿಲ್ಲ. ಕ್ಯಾಬ್ ಅಷ್ಟು ವಾಸನೆ ಬರುತ್ತಿತ್ತು ಎಂದು ಆ ಚಾಲಕ ಹೇಳಿದ್ದಾನೆ. ಇಷ್ಟೇ ಅಲ್ಲದೆ, ಅವರಿಬ್ಬರೂ ಕ್ಯಾಬ್​ ಚಾರ್ಜನ್ನು ಕೂಡ ಪೂರ್ತಿಯಾಗಿ ನೀಡಿಲ್ಲ ಎನ್ನಲಾಗಿದೆ.

ತನ್ನ 7 ಜನರ ಕುಟುಂಬವನ್ನು ಪೋಷಿಸಲು ಸ್ಯಾಮ್ ಟ್ಯಾಕ್ಸಿ ಡ್ರೈವರ್ ಆಗ ಕೆಲಸ ಮಾಡುತ್ತಿದ್ದ. ಕಂಫರ್ಟ್‌ಕ್ಯಾಬ್ ಪ್ರಿಯಸ್ ಹೈಬ್ರಿಡ್ ಓಡಿಸುವ ಸ್ಯಾಮ್​​ ಎರಡು ವರ್ಷಗಳಿಗೂ ಹೆಚ್ಚು ಕಾಲದಿಂದ ಟ್ಯಾಕ್ಸಿ ಡ್ರೈವರ್ ಆಗಿದ್ದಾರೆ. ಕ್ಯಾಬ್ ಅನ್ನು ಗಲೀಜು ಮಾಡಿದ್ದಕ್ಕೆ ಹಣ ಕೇಳಿದರೆ 10 ರೂ. ನೀಡಿ ಅವಮಾನ ಮಾಡಿದರು ಎಂದು ಚಾಲಕ ಹೇಳಿದ್ದಾನೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಮೋಜು ಮಸ್ತಿಗಾಗಿ ಲವರ್​​ ಜತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ ಹಾಕಿದ ಮಿತ್ರದ್ರೋಹಿ ಯುವತಿ – Kannada News | Chikkaballapur: Lover Couple Cheats Friends of Lakhs of Rupees Promising Jobs

ಚಿಕ್ಕಬಳ್ಳಾಪುರ, ಡಿಸೆಂಬರ್​ 22: ಕಿಲಾಡಿ ಪ್ರೇಮಿಗಳ ಜೋಡಿಯೊಂದು ಮೋಜು ಮಸ್ತಿ ಮಾಡಲು  ಪರಿಚಯಸ್ಥ ಸ್ನೇಹಿತೆಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ಅವರಿಂದ ಲಕ್ಷಾಂತರ ರೂ ಹಣ ಪಡೆದು, ಕೆಲಸನ ಕೊಡದೆ, ವಾಪಸ್ ಹಣ ಕೂಡ ಕೊಡದೆ ಪಂಗನಾಮ (Fraud) ಹಾಕಿರುವಂತಹ ಘಟನೆವೊಂದು ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಂಕಣಗುಂದಿ ಗ್ರಾಮದಲ್ಲಿ ನಡೆದಿದೆ.

ಬಾಯ್ ಫ್ರೆಂಡ್​ ಜೊತೆ ಸೇರಿ ಸ್ನೇಹಿತೆಯರಿಗೆ ಪಂಗನಾಮ

ಚಿಕ್ಕಬಳ್ಳಾಪುರ ತಾಲೂಕಿನ ಅಂಕಣಗುಂದಿ ಗ್ರಾಮದ ನಿವಾಸಿ ಅನುಷಾ ಮತ್ತು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ನಿವಾಸಿಯಾಗಿರುವ ಆಕೆಯ ಬಾಯ್ ಫ್ರೆಂಡ್​ ಅರುಣ್ ಜೊತೆ ಸೇರಿ, ತನಗೆ ಪರಿಚಯಸ್ಥ ಸ್ನೇಹಿತೆಯರಿಗೆ ಪಂಗನಾಮ ಹಾಕಿರುವ ಆರೋಪ ಕೇಳಿ ಬಂದಿದೆ. ತನ್ನ ಬಾಯ್ ಫ್ರೆಂಡ್​ ಅರುಣ್​​  ಬೆಂಗಳೂರಿನ ಸಾಯಿ ಸೇಲ್ಪ್ ಡ್ರೈವ್ ಖಾಸಗಿ ಸಂಸ್ಥೆಯಲ್ಲಿ ಸಿಇಒ ಆಗಿದ್ದು, ಕೈ ತುಂಬಾ ಹಣ ಸಂಪಾದಿಸುವ ಕೆಲಸ ಕೊಡಿಸುತ್ತಾರೆ. ಅದಕ್ಕೆ ಹಣ ಕಟ್ಟಬೇಕು ಅಂತ ನಂಬಿಸಿ ಪರಿಚಯಸ್ಥರಿಂದಲೇ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: 97ನೇ ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಕುಖ್ಯಾತ ಕಳ್ಳ; ಶತಕ ವಂಚಿತನಾದ ಖದೀಮ

ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ನಿವಾಸಿ ಎಲ್​​ಎಲ್​ಬಿ ವಿದ್ಯಾರ್ಥಿನಿ ಪ್ರತಿಭಾ ಎನ್ನುವವರಿಗೆ ಒಂದು ಲಕ್ಷ 85 ಸಾವಿರ ರೂ., ಚಿಕ್ಕಬಳ್ಳಾಪುರ ತಾಲೂಕಿನ ಕಣಜೇನಹಳ್ಳಿ ನಿವಾಸಿ ಎಂಸಿಎ ಪದವೀಧರೆ ಹರ್ಷಿತಾ ಎನ್ನುವವರಿಂದ 2 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ.

ಸ್ವತಃ ಅನುಷಾ ಹಣವನ್ನು ತನ್ನ ಖಾಖೆಗೆ ಹಾಕಿಸಿಕೊಂಡಿದ್ದು, ನಂತರ ಅರುಣ್​ಗೆ ಕೊಟ್ಟಿರುವುದು ತಿಳಿದು ಬಂದಿದೆ. ಸದ್ಯಕ್ಕೆ ಪ್ರತಿಭಾ ಹಾಗೂ ಹರ್ಷಿತಾ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ಸತ್ತಂತೆ ನಟಿಸಿ ದರೋಡೆಕೋರರಿಂದ ಬಚಾವ್ ಆದ ಮಹಿಳೆ ​​: ಶಿಡ್ಲಘಟ್ಟದಲ್ಲೊಂದು ವಿಚಿತ್ರ ಕೇಸ್​​

ಇನ್ನು ಇಂಗು ತಿಂದ ಮಂಗ ಆಗಿರುವ ಅನುಷಾ, ವಾಪಸ್ ಹಣ ಕೇಳಿದ್ದಕ್ಕೆ ಅರುಣ್ ಮದುವೆಯನ್ನೇ ಕ್ಯಾನ್ಸಲ್ ಮಾಡಿದ್ದಾನೆ. ಒಂದು ವಾರ ಸಮಯ ನೀಡಿ, ಅವನನ್ನು ಪೊಲೀಸ್ ಠಾಣೆಗೆ ಕರೆಸಿ ಹಣ ವಾಪಸ್ ಕೊಡಿಸುತ್ತೇನೆ ಅಂತ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಯುದ್ಧಕ್ಕೆ ಸಿದ್ಧ: ಸುದೀಪ್ ಮಾತಿನ ನಿಜವಾದ ಅರ್ಥ ಏನು? ವಿವರಿಸಿದ ಕಿಚ್ಚನ ಆಪ್ತ ರಾಜು ಗೌಡ – Kannada News | Kichcha Sudeep friend Raju Gowda talks about Darshan vs Sudeep fans war

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ (Mark) ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಿತು. ಅಲ್ಲಿ ಕಿಚ್ಚ ಸುದೀಪ್ (Kichcha Sudeep) ನೀಡಿದ ಹೇಳಿಕೆಯಿಂದ ದರ್ಶನ್ (Darshan) ಅಭಿಮಾನಿಗಳು ಗರಂ ಆಗಿದ್ದಾರೆ. ಆದ್ರೆ ಸುದೀಪ್ ಅವರ ಮಾತಿನ ಉದ್ದೇಶ ಮತ್ತು ಹಿನ್ನೆಲೆ ಏನು ಎಂಬುದನ್ನು ಅವರ ಆಪ್ತ ರಾಜು ಗೌಡ ವಿವರಿಸಿದ್ದಾರೆ. ‘ನಾನು ಮತ್ತು ಸುದೀಪ್ ಅವರು ಜೊತೆಯಲ್ಲಿ ಇದ್ದಾಗ ಅವರಿಗೆ ಒಂದು ಫೋನ್ ಕರೆ ಬಂದಿತ್ತು. ಈ ಬಾರಿ ನಿಮ್ಮ ವಿರುದ್ಧ ಭಾರಿ ಪ್ರಬಲವಾಗಿ ಪೈರಸಿ ಸಂಚು ನಡೆದಿದೆ. ಆದಷ್ಟು ನೀವು ನಿಮ್ಮ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿ ಅಂತ ಆ ಫೋನ್​ ಕರೆಯಲ್ಲಿ ಹೇಳಲಾಯಿತು. ಸುದೀಪ್ ಅವರ ಅಭಿಮಾನಿಗಳ ಹೆಸರಲ್ಲಿ ನಕಲಿ ಸಂಘಗಳನ್ನು ಸೃಷ್ಟಿ ಮಾಡಿಕೊಂಡು ಏನೇನೋ ಹಾಕುತ್ತಿದ್ದಾರೆ. ಆ ವಿಚಾರವನ್ನೇ ಸುದೀಪ್ ಅವರು ವೇದಿಕೆಯಲ್ಲಿ ಮಾತನಾಡಿದ್ದು’ ಎಂದು ರಾಜು ಗೌಡ ಅವರು ಹೇಳಿದ್ದಾರೆ.

‘ನಾವೆಲ್ಲರೂ ಯುದ್ಧಕ್ಕೆ ಸಿದ್ಧ ಅಂತ ಸುದೀಪ್ ಅವರು ಹೇಳಿದ್ದು ಯಾವುದೇ ಒಬ್ಬ ಸ್ಟಾರ್ ನಟರ ವಿರುದ್ಧವಾಗಿ ಅಲ್ಲ. ಯಾವುದೇ ಒಂದು ಸಿನಿಮಾ ಬಗ್ಗೆಯೂ ಅವರು ಹೇಳಿಕೆ ನೀಡಿಲ್ಲ. ಅವರು ಹೇಳಿದ್ದೇ ಬೇರೆ. ಇಲ್ಲಿ ಆಗುತ್ತಿರುವ ಚರ್ಚೆಯೇ ಬೇರೆ. ಪೈರಸಿ ವಿರುದ್ಧ ನಮ್ಮ ಹೋರಾಟ. ನಕಲಿ ಫ್ಯಾನ್ಸ್ ಸಂಘಗಳಿಂದ ಆಗುತ್ತಿರುವ ಅಪಪ್ರಚಾರ ಸರಿ ಅಲ್ಲ ಅಂತ ಸುದೀಪ್ ಹೇಳಿದ್ದು’ ಎಂದಿದ್ದಾರೆ ರಾಜು ಗೌಡ.

‘ದರ್ಶನ್ ವಿರುದ್ಧವಾಗಿ ಸುದೀಪ್ ಅವರು ಹೇಳಿಕೆ ನೀಡಿಲ್ಲ. ಆ ರೀತಿಯ ಸಂದರ್ಭ ಕೂಡ ಇಲ್ಲ. ಯಾರಿಗೆ ತಟ್ಟಬೇಕೋ ತಟ್ಟುತ್ತೆ ಅಂತ ಸುದೀಪ್ ಅವರು ಹೇಳಿದ್ದು ಪೈರಸಿಯವರಿಗೆ. ಪೈಲ್ವಾನ್ ಸಿನಿಮಾ ಬಂದಾಗ ಪೈರಸಿ ಎಷ್ಟು ಕಾಟ ಕೊಟ್ಟಿತ್ತು ಎಂಬುದು ನಿಮ್ಮೆಲ್ಲರಿಗೂ ಗೊತ್ತು. ನಿರ್ಮಾಪಕರು ಕಣ್ಣೀರು ಹಾಕುವಂತಹ ಪರಿಸ್ಥಿತಿ ಬಂದಿತ್ತು. ಅಂದು ಪೈರಸಿ ಮಾಡಿದವರಿಗೆ ಒಂದು ಗತಿ ಕಾಣಿಸಿದ್ದರೆ ಇಂದು ಈ ಪರಿಸ್ಥಿತಿ ಬರುತ್ತಿರಲಿಲ್ಲ. ಪೈರಸಿ ವಿರುದ್ಧ ಸೈಲೆಂಟ್ ಆಗಿ ಇರಬಾರದು, ಕಾನೂನಿನ ಹೋರಾಟ ಮಾಡಬೇಕು ಎಂಬುದು ಸುದೀಪ್ ಅವರ ಮಾತಿನ ಅರ್ಥ’ ಎಂದು ರಾಜು ಗೌಡ ಅವರು ಹೇಳಿದ್ದಾರೆ.

‘ಸುದೀಪ್ ಅವರ ಅಭಿಮಾನಿಗಳು ಅಂತ ಹೇಳಿಕೊಂಡು ಕೆಲವರು ಅಪಪ್ರಚಾರದ ಪೋಸ್ಟ್ ಹಾಕಿದ್ದರು. ಅಂಥವರು ನಿಜವಾಗಿಯೂ ಸುದೀಪ್ ಅಭಿಮಾನಿಗಳಲ್ಲ. ಕಾಂಜಿಪೀಂಚಿ ಪೋಸ್ಟ್ ಹಾಕುವವರು ಸುದೀಪ್ ಫ್ಯಾನ್ಸ್ ಅಲ್ಲ. ಅವರು ಕ್ಲಾಸ್ ಆಗಿರುತ್ತಾರೆ. ಮಾಸ್ ಆಗಿ ಸುದೀಪಣ್ಣನ ಜೊತೆ ನಿಂತಿದ್ದಾರೆ. ಸುಳ್ಳು ಸುದ್ದಿ ಹರಡುವುದು ಸರಿ ಅಲ್ಲ. ಅಂಥವರಿಗೆ ನಾವು ಎಚ್ಚರಿಕೆ ಕೊಟ್ಟಿದ್ದೇವೆ’ ಎಂದಿದ್ದಾರೆ ರಾಜು ಗೌಡ.

ಇದನ್ನೂ ಓದಿ: ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

‘ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಏನು ಮಾತಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಅವರು ಏನಾದರೂ ಸ್ಪಷ್ಟವಾಗಿ ಒಬ್ಬರ ಹೆಸರು ಹೇಳಿ ಮಾತನಾಡಿದ್ದರೆ ಅವರಿಗೆ ಉತ್ತರ ಕೊಡುತ್ತಾರೆ. ದರ್ಶನ್ ವಿರುದ್ಧವಾಗಿ ಸುದೀಪ್ ಅವರು ಹೇಳಿಕೆ ನೀಡಿಲ್ಲ. ಪೈರಸಿ ಎಂಬುದು ಎಲ್ಲ ಸ್ಟಾರ್ ಹೀರೋಗಳಿಗೂ ಸಮಸ್ಯೆ ಆಗಿದೆ. ಹಾಗಾಗಿ ಅಭಿಮಾನಿಗಳು ಸುಮ್ಮನೆ ಮಾತಾಡೋದಲ್ಲ. ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡಬೇಕು ಎಂಬುದೇ ಸುದೀಪ್ ಅವರ ಮಾತಿನ ಅರ್ಥ’ ಎಂದು ರಾಜು ಗೌಡ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್ – Kannada News | Amid Sudeep Darshan Fan War Fans made Vijayalakshmi And Kichcha post viral

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರು ಯಾರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಭಾವಿಸಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಲ್​​ಚಲ್​ ಸೃಷ್ಟಿಸಿದ್ದರು. ಇದಕ್ಕೆ ವಿಜಯಲಕ್ಷ್ಮೀ ಅವರು ತಿರುಗೇಟು ನೀಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರ ಹಳೆಯ ಫೋಟೋ ಹಾಗೂ ಸುದೀಪ್ ಹಳೆಯ ಹೇಳಿಕೆ ವೈರಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಏನಿದು ವಾರ್?

‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಈವೆಂಟ್ ವೇಳೆ ಮಾತನಾಡಿದ್ದ ಸುದೀಪ್, ‘ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ಈ ವೇಳೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ’ ಎಂದು ಹೇಳಿದ್ದರು. ‘ದರ್ಶನ್ ಫ್ಯಾನ್ಸ್ ಮಾರ್ಕ್ ಚಿತ್ರವನ್ನು ಹಾಳು ಮಾಡಲು ಸನ್ನದ್ಧರಾಗಿದ್ದಾರೆ’ ಎಂಬರ್ಥದಲ್ಲಿ ಇದನ್ನು ಕಲ್ಪಿಸಿಕೊಳ್ಳಲಾಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಕೌಂಟರ್ ಕೊಟ್ಟಿದ್ದಾರೆ. ‘ದರ್ಶನ್ ಇಲ್ಲದ ಕಾರಣಕ್ಕೆ ಸುದೀಪ್ ಈ ರೀತಿ ಮಾತನಾಡುತ್ತಿದ್ದಾರೆ’ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು.

ಹಳೆಯ ಫೋಟೋ ವೈರಲ್

ವಿಜಯಲಕ್ಷ್ಮೀ ಹೇಳಿಕೆ ಬೆನ್ನಲ್ಲೇ, ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರು ಸುದ್ದಿಗೋಷ್ಠಿಯಲ್ಲಿ ಒಟ್ಟಾಗಿ ಕುಳಿತಿರೋ ಫೋಟೋನ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಕೃತಜ್ಞತೆ ಮುಖ್ಯ ಎಂಬರ್ಥದಲ್ಲಿ ಪೋಸ್ಟ್​​ಗಳನ್ನು ಹಾಕಲಾಗುತ್ತಿದೆ. ದರ್ಶನ್​ ಅವರಿಗೆ 2013ರಲ್ಲ ‘ಬೃಂದಾವನ’ ಚಿತ್ರದ ಶೂಟಿಂಗ್ ವೇಳೆ ಗಾಯವಾಗಿತ್ತು. ಆಗ ಆಸ್ಪತ್ರೆಯಲ್ಲಿದ್ದಾಗ ಸುದೀಪ್ ಅವರು ಈ ಕುಟುಂಬದ ಬೆಂಬಲಕ್ಕೆ ನಿಂತಿದ್ದರು ಎನ್ನಲಾಗಿದೆ. ದರ್ಶನ್ ಆರಾಮಾಗಿದ್ದಾರೆ ಎಂದು ಹೇಳಲು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ವಿಜಯಲಕ್ಷ್ಮೀ ಜೊತೆ ಭಾಗಿ ಆಗಿದ್ದರು ಎನ್ನಲಾಗಿದೆ. ಆ ಸಂದರ್ಭದ ಫೋಟೋ ಇದು ಎನ್ನಲಾಗಿದೆ.

ವಿಜಯಲಕ್ಷ್ಮೀಗೆ ಸಹಾಯ ಮಾಡಿದ್ರಾ?

ದರ್ಶನ್ ಅವರು ವಿಜಯಲಕ್ಷ್ಮೀ ಮೇಲೆ ಹಲ್ಲೆ ಮಾಡಿದ್ದರು. ಈ ಹಲ್ಲೆ ಬಳಿಕ ವಿಜಯಲಕ್​ಷ್ಮೀ ದರ್ಶನ್ ವಿರುದ್ಧ ಕೇಸ್ ಹಾಕಿದ್ದರು. ಈ ವೇಳೆ ವಿಜಯಲಕ್ಷ್ಮೀ ಅವರು ಸುದೀಪ್ ಅವರಿಂದ ಬೆಂಬಲ ಕೇಳಿದ್ದರೆ ಎಂಬ ಪ್ರಶ್ನೆ ಮೂಡಿತ್ತು. ಈ ಮೊದಲು ಮಾಧ್ಯಮದ ಜೊತೆ ಮಾತನಾಡಿದ್ದ ಸುದೀಪ್, ‘ಯಾರೋ ಒಬ್ಬರು ಬಂದು ಅವರು ನಂಗೆ ಹೊಡೀತಾ ಇದಾರೆ ಎಂದು ಸಪೋರ್ಟ್ ಕೇಳ್ತಾರೆ. ಆ ವ್ಯಕ್ತಿ ಸಪೋರ್ಟ್ ಮಾಡ್ತಾನೆ. ಆದರೆ, ಹೊಡೆದಾಡಿಕೊಂಡವರು ಒಂದಾಗ್ತಾರೆ. ಸಪೋರ್ಟ್ ಮಾಡಿದವನು ಗೂಬೆ ತರ ಕಾಣ್ತಾರೆ’ ಎಂದು ಹೇಳಿದ್ದರು. ಇದು ವಿಜಯಲಕ್ಷ್ಮೀ-ದರ್ಶನ್ ಬಗ್ಗೆ ಹೇಳಿದ ಮಾತು ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಭಿಷೇಕ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಶುಭ್​ಮನ್ ಗಿಲ್

Source link

Video: ಭಾರತಕ್ಕೆ ಬರುವ ಮುಂಚೆ ಈ ವಿಷ್ಯಗಳನ್ನು ತಿಳಿದುಕೊಳ್ಳಲು ಬಯಸ್ತೇನೆ ಎಂದ ರಷ್ಯನ್ ಮಹಿಳೆ – Kannada News | Russian woman says you should know these things before coming to India

ಯಾರೇ ಆಗಲಿ, ಯಾವುದೇ ಊರು, ದೇಶಕ್ಕೆ ತೆರಳಲಿ ಅಲ್ಲಿನ ಆಚಾರ ವಿಚಾರ, ಆಹಾರ ಪದ್ಧತಿ ಹಾಗೂ ಜೀವನ ಶೈಲಿಯ ಬಗ್ಗೆ ತೆರಳುವ ಮುನ್ನ ತಿಳಿದುಕೊಳ್ಳಲು ಮುಂದಾಗುತ್ತಾರೆ. ರಷ್ಯನ್ ಮಹಿಳೆ (Russian woman) ಕೂಡ ಭಾರತಕ್ಕೆ ಬರುವ ಮೊದಲು ನಾನು ಈ ವಿಷಯಗಳನ್ನು ತಿಳಿದುಕೊಳ್ಳಲು ಬಯಸುತ್ತೇನೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಭಾರತದಲ್ಲಿ ನೆಲೆಸುವ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದು, ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅನಸ್ತಾಸಿಯಾ ಶರೋವಾ (Anastasia Sharov) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಹಿಂದಿ ಭಾಷೆಯ ಪ್ರಾಮುಖ್ಯತೆ, ಯುಪಿಐ ಪಾವತಿಗಳ ಸುಲಭತೆ ಮತ್ತು ದಿನಸಿ ವಸ್ತುಗಳ ತ್ವರಿತ ವಿತರಣೆಯ ಬಗ್ಗೆ ಉಲ್ಲೇಖಿಸಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ ನೋಡಿ

ನನ್ನ ಸುತ್ತಲಿನ ಜನರು ಎಂದಿಗೂ ನೇರವಾಗಿ ಇಲ್ಲ ಎಂದು ಹೇಳುವುದಿಲ್ಲ. ಈ ಸಿಗ್ನಲ್‌ಗಳ ಬಗ್ಗೆ ತಿಳಿದುಕೊಳ್ಳಬೇಕು. ಕಡಿಮೆ ದೂರಕ್ಕೂ ವಾಹನದ ಅಗತ್ಯವಿದೆ ಎಂದು ತಿಳಿಸಿದ್ದಾರೆ. ರಾತ್ರಿಯಲ್ಲಿ ಫ್ಯಾನ್‌ನ ಶಬ್ದಕ್ಕೆ ತಾನು ಒಗ್ಗಿಕೊಂಡಿದ್ದೇನೆ, ಫ್ಯಾನ್ ಇಲ್ಲದೆ ಮಲಗಲು ಸಾಧ್ಯವಿಲ್ಲ ಎಂದು ಹೀಗೆ ಹತ್ತಾರು ವಿಷಯಗಳನ್ನು ಪಟ್ಟಿ ಮಾಡಿರುವುದನ್ನು ನೋಡಬಹುದು.

ಇದನ್ನೂ ಓದಿ:ಗೋಲ್ಗಪ್ಪಾ ಸವಿದು ಮುದ್ದಾಗಿ ರಿಯಾಕ್ಷನ್ ಕೊಟ್ಟ ವಿದೇಶಿ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ಯಾವುದೇ ಅಪಪ್ರಚಾರವಲ್ಲ, ದ್ವೇಷವಿಲ್ಲದೆ ಭಾರತದ ಬಗ್ಗೆ ಅತ್ಯಂತ ನಿಖರವಾದ ಸಂಗತಿಗಳು ಎಂದು ಹೇಳಿದ್ದಾರೆ. ಮತ್ತೊಬ್ಬರು, ನೀವು ಮುಂಬೈ, ಕೇರಳ, ಅಸ್ಸಾಂ ಮುಂತಾದ ಭಾರತದ ಕರಾವಳಿ ಪ್ರದೇಶಗಳಿಗೆ ಹೋದರೆ, ನೀವು ಮಾನ್ಸೂನ್ ಅನ್ನು ಅನುಭವಿಸುವಿರಿ ಎಂದಿದ್ದಾರೆ. ಇನ್ನೊಬ್ಬರು, ಬದುಕಿನಲ್ಲಿ ಎಲ್ಲಾ ಅನುಭವಗಳಿಗೆ ತೆರೆದುಕೊಳ್ಳಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Christmas 2025: ಕ್ರಿಸ್ಮಸ್‌ ಹಬ್ಬಕ್ಕೆ ಮನೆಯಲ್ಲೇ ಬಲು ಸುಲಭವಾಗಿ ತಯಾರಿಸಿ ಆರೋಗ್ಯಕರ ಡ್ರೈಫ್ರೂಟ್‌ ಕೇಕ್‌ – Kannada News | Christmas 2025: A healthy dry fruit cake recipe that you can make at home for this Christmas

ಡ್ರೈಫ್ರೂಟ್‌ ಕೇಕ್‌Image Credit source: Getty Images

ಕ್ರಿಸ್ಮಸ್‌ (Christmas) ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಪ್ರಪಂಚದಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಕ್ರಿಸ್‌ಮಸ್‌ ಟ್ರೀ ಇಟ್ಟು ಅದನ್ನು ವರ್ಣರಂಜಿತ ದೀಪಗಳು, ಇತ್ಯಾದಿ ವಸ್ತುಗಳಿಂದ ಅಲಂಕರಿಸುತ್ತಾರೆ. ಜೊತೆಗೆ ವಿಶೇಷ ಖಾದ್ಯಗಳನ್ನೂ ತಯಾರಿಸುತ್ತಾರೆ. ಇನ್ನೂ ಕೇಕ್‌ ಇಲ್ಲದೆ ಈ ಹಬ್ಬ  ಪರಿಪೂರ್ಣ ಆಗೋದೇ ಇಲ್ಲ. ಹೌದು ಈ ದಿನದಂದು, ಹೆಚ್ಚಿನ ಮನೆಗಳಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆಗಳು ನಡೆಯುತ್ತವೆ. ಹೆಚ್ಚಿನವರು ಈ ಕೇಕ್‌ಗಳನ್ನು ಮಾರುಕಟ್ಟೆಯಿಂದ ಖರೀದಿ ಮಾಡುತ್ತಾರೆ. ಇದರ ಬದಲು ಮನೆಯಲ್ಲಿಯೇ ಆರೋಗ್ಯಕರ ರೀತಿಯಲ್ಲಿ ಕೇಕ್‌ ತಯಾರಿಸಬಹುದು. ಇಂದಿನ ಈ ಲೇಖನದಲ್ಲಿ ಸುಲಭವಾಗಿ ಡ್ರೈಫೂರ್ಟ್ಸ್‌ ಕೇಕ್‌ ಹೇಗೆ ತಯಾರಿಸೋದು ಎಂಬುದನ್ನು ನೋಡೋಣ ಬನ್ನಿ.

ಕ್ರಿಸ್‌ಮಸ್‌ ಹಬ್ಬಕ್ಕೆ ಮನೆಯಲ್ಲೇ ತಯಾರಿಸಿ ಡ್ರೈ ಫ್ರೂಟ್ ಕೇಕ್:

ಕ್ರಿಸ್‌ಮಸ್‌ ಹಬ್ಬದಲ್ಲಿ ಪ್ಲಮ್ ಕೇಕ್ ತಯಾರಿಸುವುದು ಬಹಳ ಹಿಂದಿನಿಂದಲೂ ಬಂದಿರುವ ಸಂಪ್ರದಾಯ ಆದರೆ ಈ ಬಾರಿ ಹೊಸ ಕೇಕ್‌ ರೆಸಿಪಿಯನ್ನು ಟ್ರೈ ಮಾಡ್ಬೇಕು ಅಂತಿದ್ರೆ, ಈ ಡ್ರೈಫ್ರೂಟ್‌ ಕೇಕ್‌ ರೆಸಿಪಿಯನ್ನು ತಯಾರಿಸಿ.

ಡ್ರೈಫ್ರೂಟ್ಸ್‌ ಕೇಕ್ ತಯಾರಿಸಲು ಬೇಕಾಗುವ ಸಾಮಾಗ್ರಿಗಳು:

  • ಮೈದಾ ಹಿಟ್ಟು – 1 ಕಪ್
  • ಸಕ್ಕರೆ ಪುಡಿ – ಅರ್ಧ ಕಪ್
  • ಬೆಣ್ಣೆ – ಅರ್ಧ ಕಪ್
  • ಹಾಲು – ಅರ್ಧ ಕಪ್
  • ಅಡುಗೆ ಸೋಡಾ – ಅರ್ಧ ಟೀ ಚಮಚ
  • ಬೇಕಿಂಗ್ ಪೌಡರ್ – ಅರ್ಧ ಟೀಚಮಚ
  • ವೆನಿಲ್ಲಾ ಎಸೆನ್ಸ್ – 1 ಟೀಸ್ಪೂನ್
  • ಮಿಶ್ರ ಒಣ ಹಣ್ಣುಗಳು (ಗೋಡಂಬಿ, ಬಾದಾಮಿ, ಒಣದ್ರಾಕ್ಷಿ, ವಾಲ್ನಟ್ಸ್, ಟುಟ್ಟಿ-ಫ್ರೂಟಿ ಇತ್ಯಾದಿ) – 1 ಕಪ್
  • ದಾಲ್ಚಿನ್ನಿ ಪುಡಿ – ಅರ್ಧ ಟೀಚಮಚ

ಇದನ್ನೂ ಓದಿ: ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು

ಕ್ರಿಸ್‌ಮಸ್ ಸ್ಪೆಷಲ್ ಡ್ರೈ ಫ್ರೂಟ್ಸ್ ಕೇಕ್ ಮಾಡುವುದು ಹೇಗೆ?

  • ಮೊದಲು ಡ್ರೈ ಫ್ರೂಟ್ಸ್ ಅನ್ನು ನುಣ್ಣಗೆ ಕತ್ತರಿಸಿ ಇಟ್ಟುಕೊಳ್ಳಿ.
  • ಈಗ, ಒಂದು ಬಟ್ಟಲಿನಲ್ಲಿ ಬೆಣ್ಣೆ ಮತ್ತು ಸಕ್ಕರೆಯನ್ನು ಸೇರಿಸಿ, ಕೆನೆಯ ವಿನ್ಯಾಸ ಬರುವವರೆಗೆ ಬೀಟ್ ಮಾಡಿ. ಮತ್ತು ಅದಕ್ಕೆ ಹಾಲು ಮತ್ತು ವೆನಿಲ್ಲಾ ಎಸೆನ್ಸ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
  • ಇದರ ನಂತರ, ಹಿಟ್ಟು, ಅಡಿಗೆ ಸೋಡಾ, ಬೇಕಿಂಗ್ ಪೌಡರ್ ಮತ್ತು ದಾಲ್ಚಿನ್ನಿ ಪುಡಿಯನ್ನು ಚೆನ್ನಾಗಿ ಶೋಧಿಸಿ, ಬೆಣ್ಣೆ ಸಕ್ಕರೆ ಮಿಶ್ರಣಕ್ಕೆ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.
  • ಈಗ ಈ ಮಿಶ್ರಣಕ್ಕೆ ಕತ್ತರಿಸಿಟ್ಟ ಡ್ರೈಫ್ರೂಟ್ಸ್‌, ಟುಟ್ಟಿ-ಫ್ರೂಟಿ ಸೇರಿಸಿ.
  • ಇದಾದ ಬಳಿಕ ಕೇಕ್ ಟಿನ್‌ಗೆ ಬೆಣ್ಣೆ ಹಚ್ಚಿ, ತಯಾರಾದ ಕೇಕ್ ಕೇಕ್‌ ಹಿಟ್ಟನ್ನು ಅದರಲ್ಲಿ ಹಾಕಿ ಬೇಕ್‌ ಮಾಡಬೇಕು.
  • ಓವನ್‌ನಲ್ಲಿ ಕೇಕ್‌ ತಯಾರಿಸುತ್ತೀರಿ ಎಂದಾದರೆ ಕೇಕ್‌ ತಯಾರಿಸುವ 10 ನಿಮಿಷಗಳ ಮೊದಲು ಓವನ್‌ನನ್ನು 180 ಡಿಗ್ರಿ ಸೆಲ್ಸಿಯಸ್‌ಗೆ ಪೂರ್ವಭಾವಿಯಾಗಿ ಕಾಯಿಸಿ ನಂತರ 35 ರಿಂದ 40 ನಿಮಿಷಗಳ ಕಾಲ ಕೇಕ್‌ ಬೇಯಿಸಿ.
  • ಕುಕ್ಕರ್‌ನಲ್ಲಿ ತಯಾರಿಸಲು, ಮೊದಲು ಕುಕ್ಕರ್‌ನಲ್ಲಿ ಉಪ್ಪು ಸೇರಿಸಿ 10 ನಿಮಿಷಗಳ ಕಾಲ ಬಿಸಿ ಮಾಡಿ. ನಂತರ ಕೇಕ್ ಟಿನ್ ಅನ್ನು ಕುಕ್ಕರ್‌ನಲ್ಲಿ ಹಾಕಿ 45-50 ನಿಮಿಷಗಳ ಕಾಲ ಕಡಿಮೆ ಉರಿಯಲ್ಲಿ ಬೇಯಿಸಿ.
  • ಕೇಕ್ ಬೆಂದ ನಂತರ, ಅದನ್ನು ತಣ್ಣಗಾಗಲು ಬಿಡಿ ಮತ್ತು ಅಂತಿಮವಾಗಿ ಒಣ ಹಣ್ಣುಗಳಿಂದ ಅಲಂಕರಿಸಿದರೆ ಕ್ರಿಸ್‌ಮಸ್‌ ಸ್ಪೆಷಲ್‌ ಡ್ರೈಫ್ರೂಟ್‌ ಕೇಕ್‌ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾಮರಾಜನಗರದಲ್ಲಿ 5 ಹುಲಿಗಳು ಪ್ರತ್ಯಕ್ಷ: ನಿಷೇಧಾಜ್ಞೆ ಜಾರಿ, ಹೊರಬರದಂತೆ ಸೂಚನೆ – Kannada News | Chamarajanagar: Five Tigers Sighted; Section 144 Imposed for Capture Operations

ಚಾಮರಾಜನಗರ, ಡಿಸೆಂಬರ್​ 22: ಕಾಡಿನಲ್ಲಿರಬೇಕಿದ್ದ ಹುಲಿಗಳು (Tiger) ನಾಡಿಗೆ ನುಗ್ಗಿವೆ. ಚಾಮರಾಜನಗರ (Chamarajanagar) ತಾಲೂಕಿನ ನಂಜೆದೇವಪುರ ಗ್ರಾಮದ ಬಳಿ ಬರೋಬ್ಬರಿ ಐದು ಹುಲಿಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ಸದ್ಯ ಜನರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಂಜೆದೇವಪುರ ಸೇರಿ ಮೂರು ಗ್ರಾಮಗಳಲ್ಲಿ ಇಂದಿನಿಂದ ನಾಳೆ ಸಂಜೆ 6ರವರೆಗೂ 144 ಸೆಕ್ಷನ್ ಜಾರಿ ಮಾಡಿ ಚಾಮರಾಜನಗರ ತಹಶೀಲ್ದಾರ್​​​ ಗಿರಿಜಾ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿ

ಈಗಾಗಲೇ 5 ಹುಲಿಗಳಿರುವ ಜಾಗದ ಲೊಕೇಷನ್​​ ಅನ್ನು ಅರಣ್ಯ ಸಿಬ್ಬಂದಿ ಟ್ರ್ಯಾಕ್ ಮಾಡಿದ್ದಾರೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಇರುವುದು ಕೇವಲ ಇಬ್ಬರೇ ಪಶು ವೈದ್ಯರು ಮಾತ್ರ. ಹೀಗಾಗಿ ಹುಲಿಗಳನ್ನು ಸೆರೆ ಹಿಡಿಯಲು ಕಷ್ಟಸಾಧ್ಯ ಎನ್ನುತ್ತಿದ್ದಾರೆ ಅರಣ್ಯ ಸಿಬ್ಬಂದಿ. ಸದ್ಯ ಹುಲಿಗಳ ಸೆರೆ ಕಾರ್ಯಾಚರಣೆ ಹಿನ್ನೆಲೆ  ನಂಜೆದೇವನಪುರ, ವೀರನಪುರ, ಉಡಿಗಾಲ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆ ಮೂಲಕ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಗುಂಪು ಸೇರಬಾರದು, ಮನೆಯಿಂದ ಹೊರಬರದಂತೆ ತಿಳಿಸಲಾಗಿದ್ದು, ಮೂರು ಗ್ರಾಮಗಳ ಜನರು ಸಹಕರಿಸುವಂತೆ ತಹಶೀಲ್ದಾರ್ ಗಿರಿಜಾ ಮನವಿ ಮಾಡಿದ್ದಾರೆ.

ಸ್ಥಳದಲ್ಲೇ ಬೀಡುಬಿಟ್ಟ ಶಾಸಕ ಪುಟ್ಟರಂಗಶೆಟ್ಟಿ

ಇನ್ನು ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯರಿಂದ ಶಾಸಕ ಪುಟ್ಟರಂಗಶೆಟ್ಟಿಗೆ ಅಭಯ ನೀಡಿದ್ದು, ಹೆಚ್ಚಿನ ಆನೆ ಹಾಗೂ ನುರಿತ ಪಶು ವೈದ್ಯರನ್ನ ಕಳಿಸುವ ಆಶ್ವಾಸನೆ ನೀಡಿದ್ದಾರೆ. ನುರಿತ ಪಶು ವೈದ್ಯರ ಕೊರತೆ ಇರುವುದನ್ನು ಶಾಸಕ ಪುಟ್ಟರಂಗಶೆಟ್ಟಿ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ಹುಲಿ ಕಾಟದಿಂದ ಸದ್ಯಕ್ಕಿಲ್ಲ ಮುಕ್ತಿ; ವ್ಯಾಘ್ರಗಳನ್ನು ಹಿಡಿಯಲಾಗದೆ ತಲೆ ಮೇಲೆ ಕೈ ಹೊತ್ತು ಕುಳಿತ ಅರಣ್ಯ ಇಲಾಖೆ

ಸದ್ಯ ಶಾಸಕ ಪುಟ್ಟರಂಗಶೆಟ್ಟಿ ಖುದ್ದು ಅರಣ್ಯ ಸಿಬ್ಬಂದಿಯ ಜೊತೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ಅರಣ್ಯ ಸಿಬ್ಬಂದಿಯ ಜೊತೆ ಪರಿಶೀಲನೆ ವೇಳೆ ಡ್ರೋನ್ ಕ್ಯಾಮೆರಾದಲ್ಲಿ ಕಲ್ಲು ಕ್ವಾರಿಯ ಜಾಗದಲ್ಲಿ ತಾಯಿ ಹುಲಿ ಹಾಗೂ ಮರಿಹುಲಿಗಳ ಪಗ್ ಮಾರ್ಕ್ ಪತ್ತೆ ಆಗಿದೆ. ಇದೇ ಕಲ್ಲು ಕ್ವಾರಿಯಲ್ಲಿ 5 ಹುಲಿಗಳು ಬೀಡು ಬಿಟ್ಟಿವೆ.

ಕೂಂಬಿಂಗ್​​ಗೆ ಚಾಲನೆ

ಇನ್ನು ದುಬಾರೆ ಆನೆ ಶಿಬಿರದಿಂದ ಈಗಾಗಲೇ ಈಶ್ವರ ಹಾಗೂ ಲಕ್ಷ್ಮಣ ಆನೆಗಳು ಸ್ಥಳಕ್ಕೆ ಆಗಮಿಸಿದ್ದು, ಕೂಂಬಿಂಗ್​​​ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ. ನಂಜೆದೇವಪುರ ಗ್ರಾಮಸ್ಥರು ಗಜಪಡೆಗೆ ಪೂಜೆ ಮಾಡಿ ಸ್ವಾಗತಿಸಿದರು. ಈಶ್ವರನ ಮಾವುತರಾಗಿ ವಿಶ್ವನಾಥ್ ಹಾಗೂ ಮಂಜುನಾಥ್​​​​, ಲಕ್ಷ್ಮಣನ ಮಾವುತರಾಗಿ ಸಂಜು ಹಾಗೂ ಸುರೇಶ ಆಗಮಿಸಿದ್ದಾರೆ. ಲಕ್ಷ್ಮಣನಿಗೆ 45 ವರ್ಷಗಳಾಗಿದ್ದು, 50ಕ್ಕೂ ಹೆಚ್ಚು ಕೂಂಬಿಂಗ್​ನಲ್ಲಿ ಭಾಗಿಯಾಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version