Leopard In Bengaluru: 5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಬೆಂಗಳೂರು, ಜುಲೈ 13: ನಗರದ ಯಶವಂತಪುರ ವಿಧಾನಸಭಾ ಕ್ಷೇತ್ರದ ಬ್ಯಾಡರಹಳ್ಳಿ ಮತ್ತು ಭಾರತ ನಗರದಲ್ಲಿ ಕಳೆದ ಐದು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರ ಮತ್ತು ಶುಕ್ರವಾರದಂದು ಒಂದು ಪಾರ್ಕ್ನಲ್ಲಿ ಮತ್ತು ರಸ್ತೆಗೆ ಅಡ್ಡಲಾಗಿರುವ ಖಾಲಿ ಸೈಟ್ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಸ್ಥಳೀಯ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಒತ್ತಾಯದ ಮೇರೆಗೆ ಪೊದೆಗಳನ್ನು ತೆರವುಗೊಳಿಸಿದ ನಂತರವೂ, ಚಿರತೆ ನಿನ್ನೆ ಮತ್ತೆ ಕಾಣಿಸಿಕೊಂಡಿದ್ದು, ಭಯ ಹೆಚ್ಚಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿಯಲು ಒಂದು…