ರಷ್ಯಾ, ಡಿಸೆಂಬರ್ 22: ಮಾಸ್ಕೋದಲ್ಲಿ ಕಾರೊಳಗೆ ಬಾಂಬ್ ಸ್ಫೋಟಗೊಂಡಿದ್ದು, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವನ್ನಪ್ಪಿದ್ದಾರೆ. ಈ ಸ್ಫೋಟದ ಹಿಂದೆ ಉಕ್ರೇನ್ ಪಡೆಗಳ ಕೈವಾಡವಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 2022 ರಲ್ಲಿ ಮಾಸ್ಕೋ ಉಕ್ರೇನ್ಗೆ ಸೈನ್ಯವನ್ನು ಕಳುಹಿಸಿದ ನಂತರ, ರಷ್ಯಾ ಮತ್ತು ರಷ್ಯಾ ನಿಯಂತ್ರಿತ ಉಕ್ರೇನಿಯನ್ ಪ್ರದೇಶಗಳಲ್ಲಿ ರಷ್ಯಾದ ಮಿಲಿಟರಿ ಅಧಿಕಾರಿಗಳು ಮತ್ತು ಕ್ರೆಮ್ಲಿನ್ ಪರ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹಲವಾರು ದಾಳಿಗಳು ನಡೆದಿವೆ.
ಏಪ್ರಿಲ್ನಲ್ಲಿ ಮಾಸ್ಕೋ ಬಳಿ ನಡೆದ ಕಾರು ಸ್ಫೋಟದಲ್ಲಿ ಜನರಲ್ ಯಾರೋಸ್ಲಾವ್ ಮೊಸ್ಕಾಲಿಕ್ ಸಾವನ್ನಪ್ಪಿದ್ದರು. ಡಿಸೆಂಬರ್ 2024 ರಲ್ಲಿ, ಮಾಸ್ಕೋದಲ್ಲಿ ಬೂಬಿ-ಟ್ರಾಪ್ಡ್ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡು ರಷ್ಯಾದ ರಾಸಾಯನಿಕ ಮತ್ತು ಜೈವಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಇಗೊರ್ ಕಿರಿಲೋವ್ ಸಾವನ್ನಪ್ಪಿದ್ದರು.
ಏಪ್ರಿಲ್ 2023 ರಲ್ಲಿ ಸೇಂಟ್ ಪೀಟರ್ಸ್ಬರ್ಗ್ ಕೆಫೆಯಲ್ಲಿ ಪ್ರತಿಮೆ ಸ್ಫೋಟಗೊಂಡು ರಷ್ಯಾದ ಮಿಲಿಟರಿ ಬ್ಲಾಗರ್ ಮ್ಯಾಕ್ಸಿಮ್ ಫೋಮಿನ್ ಸಾವನ್ನಪ್ಪಿದ್ದರು. ಮತ್ತು ಆಗಸ್ಟ್ 2022 ರಲ್ಲಿ, ವಿಚಾರವಾದಿ ಅಲೆಕ್ಸಾಂಡರ್ ಡುಗಿನ್ ಅವರ ಮಗಳು ಡೇರಿಯಾ ಡುಗಿನಾ ಕಾರ್ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದರು.
ಕಲಬುರಗಿ, ಡಿಸೆಂಬರ್ 22: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಸಂಸ್ಥಾನದ ಹಿರೇಮಠದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿಡಿಯೋ ವೈರಲ್ ಆಗಿದೆ. ಕೆಲ ತಿಂಗಳು ಮಠದಿಂದ ದೂರವಾಗಿದ್ದ ಸ್ವಾಮೀಜಿ ಇತ್ತೀಚೆಗೆ ವಾಪಸ್ಸಾಗಿದ್ದರು. ಕುಡಿದು ರಂಪಾಟ ಮಾಡಿದ್ದಕ್ಕೆ ಗ್ರಾಮಸ್ಥರು ಸ್ವಾಮೀಜಿಯನ್ನು ಮಠದಿಂದ ಹೊರಗೆ ಹಾಕಿದ್ದರು. ಮಠಕ್ಕೆ ಹೊಸ ಪೀಠಾಧಿಪತಿ ನೇಮಕ ಚರ್ಚೆ ನಡೆದ ಬೆನ್ನಲ್ಲೇ ವಾಪಸಾದ ಸ್ವಾಮೀಜಿ, ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ವಿರೋಧಿಗಳನ್ನು ಭಯಪಡಿಸಲು ಗುಂಡು ಹಾರಿಸಿದ್ದಾರಾ ಎಂಬ ಅನುಮಾನ ವ್ಯಕ್ತವಾಗಿದೆ.
ಬಿಗ್ ಬಾಸ್ ಮನೆಯಲ್ಲಿ ಈ ಬಾರಿ ಹಲವು ಸಿನಿಮಾಗಳ ಪ್ರಮೋಷನ್ ಆಗಿದೆ. ಸುದೀಪ್ ನಟನೆಯ ‘ಮಾರ್ಕ್’ ಚಿತ್ರದ ಟ್ರೇಲರ್ ಪ್ರಸಾರ ಕಂಡಿದೆ. ರಾಶಿಕಾ ಶೆಟ್ಟಿ ಅವರ ‘ಪ್ಯಾರ್’ ಸಿನಿಮಾ ಪ್ರಮೋಷನ್ ಕೂಡ ಆಗಿದೆ. ಆದರೆ, ಗಿಲ್ಲಿ ನಟಿಸಿದ ‘ಡೆವಿಲ್’ ಬಗ್ಗೆ ಯಾವುದೇ ಪೋಸ್ಟರ್ ಆಗಲಿ, ವಿಡಿಯೋ ಆಗಲಿ ಪ್ರಸಾರ ಕಂಡಿಲ್ಲ. ಹೀಗೇಕೆ ಎಂಬ ಪ್ರಶ್ನೆಗೆ ರಜತ್ ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಇತ್ತೀಚೆಗೆ ರಜತ್ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಬಂದಿದ್ದಾರೆ. ಅವರು ಒಂದು ತಿಂಗಳ ಕಾಲ ದೊಡ್ಮನೆಯಲ್ಲಿ ಇದ್ದರು. ಕಳೆದ ಸೀಸನ್ ಅಲ್ಲಿ ಮಿಂಚಿದ್ದ ರಜತ್ ಈ ಬಾರಿಯೂ ಬಿಗ್ ಬಾಸ್ ಅಲ್ಲಿ ಮಿಂಚು ಹರಿಸಿದ್ದರು. ಅವರು ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇದ್ದಿದ್ದು ಅತಿಥಿಯಾಗಿ. ಅವರಿಗೆ ಈ ಬಾರಿಯ ಬಿಗ್ ಬಾಸ್ ಹೊಸ ರೀತಿಯ ಅನುಭವ ನೀಡಿದೆ. ಎಲ್ಲಾ ಸ್ಪರ್ಧಿಗಳ ಜೊತೆ ಕಿತ್ತಾಡಿಕೊಂಡಿದ್ದ ರಜತ್ ಗಿಲ್ಲಿ ಜೊತೆ ಚೆನ್ನಾಗಿಯೇ ಇದ್ದರು. ಅವರು ಗಿಲ್ಲಿ ನಟಿಸಿದ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.
‘ಡೆವಿಲ್’ ಸಿನಿಮಾದ ಟ್ರೇಲರ್ನ ಏಕೆ ಪ್ರಸಾರ ಮಾಡಿಲ್ಲ ಎಂಬ ಪ್ರಶ್ನೆಯನ್ನು ರಜತ್ಗೆ ಕೇಳಲಾಯಿತು. ಇದಕ್ಕೆ ಅವರು ನೇರವಾಗಿ ಉತ್ತರ ನೀಡಿದ್ದಾರೆ. ‘ಸಿನಿಮಾ ತಂಡದವರು ಬಂದು ಅಪ್ರೋಚ್ ಮಾಡಿಲ್ಲ. ಅದಕ್ಕೆ ಬಿಗ್ ಬಾಸ್ನಲ್ಲಿ ಡೆವಿಲ್ ಟ್ರೇಲರ್ ಹಾಕಿಲ್ಲ’ ಎಂದಿದ್ದಾರೆ ರಜತ್.
ಬಿಗ್ ಬಾಸ್ ಮನೆಯಲ್ಲಿ ನಿತ್ಯವೂ ಬೆಳಿಗ್ಗೆ ಹಾಡನ್ನು ಪ್ರಸಾರ ಮಾಡಲಾಗುತ್ತದೆ. ಇದಕ್ಕೆ ವಾಹಿನಿಯವರು ಹಾಡಿನ ಹಕ್ಕಿರೋ ಸಂಸ್ಥೆಯ ಜೊತೆ ಮಾತುಕತೆ ನಡೆಸಿ, ಒಪ್ಪಂದ ಮಾಡಿಕೊಂಡ ಬಳಿಕವೇ ಪ್ರಸಾರ ಮಾಡುತ್ತಾರೆ. ಅದೇ ರೀತಿ ಟಿವಿಯಲ್ಲಿ ಟ್ರೇಲರ್ಗಳನ್ನು ಪ್ರಸಾರ ಮಾಡಬೇಕು ಎಂದಾಗ ಅದಕ್ಕೆ ಅದರದ್ದೇ ಆದ ಪ್ರಕ್ರಿಯೆ ಇರುತ್ತದೆ. ಇನ್ನು ತಂಡದವರು ಕೂಡ ಸಂಪರ್ಕಿಸಿಲ್ಲ. ಹೀಗಾಗಿ, ಬಿಗ್ ಬಾಸ್ ಅಲ್ಲಿ ‘ಡೆವಿಲ್’ ಟ್ರೇಲರ್ ಪ್ರಸಾರ ಕಂಡಿಲ್ಲ.‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗಿದೆ. ಈ ಚಿತ್ರ ಈವರೆಗೆ 27 ಕೋಟಿ ರೂಪಾಯಿಗೂ ಹೆಚ್ಚಿನ ಕಲೆಕ್ಷನ್ ಮಾಡಿದೆ.
ಹುಬ್ಬಳ್ಳಿ, ಡಿಸೆಂಬರ್ 22: ‘ಅವರು ಮನೆಗೆ ನುಗ್ಗಿ ಹೊಡೆಯುತ್ತಿದ್ದರು, ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿ ಹೊಡೆದು ಬಡಿಯುತ್ತಿದ್ದರು. ಆದರೂ ಅಂಗಲಾಚಿದರೂ ಯಾರೊಬ್ಬರೂ ನಮ್ಮ ನೆರವಿಗೆ ಬರಲಿಲ್ಲ’. ಇದು ಧಾರವಾಡ(Dharawad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದ ಮರ್ಯಾದಾ ಹತ್ಯೆ ಬಗ್ಗೆ ಮೃತ ಯುವತಿ ಮಾನ್ಯಾಳ ಪತಿ ವಿವೇಕಾನಂದನ ಕಣ್ಣೀರ ಮಾತು. ಘಟನೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ ವಿವೇಕಾನಂದ, ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೆವು. ಈ ಬಗ್ಗೆ ಕುಟುಂಬದವರಿಂದ ಕಿರುಕುಳ ಅನುಭವಿಸುತ್ತಿದ್ದ ಮಾನ್ಯಾ, ನನ್ನ ಬಳಿ ಆಶ್ರಯ ಪಡೆದಿದ್ದಳು. ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದೆವು ಎಂದಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಓಡಿಹೋಗಿ ಮದುವೆಯಾಗಿದ್ದೆವು. ಹಾವೇರಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದೆವು. ಈ ಮಧ್ಯೆ, ಮಾನ್ಯಾ ಪೋಷಕರು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಾವು ಪೊಲೀಸರ ಮುಂದೆ ಹೇಳಿಕೆ ನೀಡಿ, ಇಷ್ಟಪಟ್ಟು ಮದುವೆಯಾಗಿರುವುದಾಗಿ ತಿಳಿಸಿದ್ದೆವು. ಮಾನ್ಯಾ ಏಳು ತಿಂಗಳ ಗರ್ಭಿಣಿಯಾಗಿದ್ದರಿಂದ ನಿಯಮಿತವಾಗಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುತ್ತಿದ್ದೆ. ಪೋಷಕರು ನಮ್ಮನ್ನು ಹುಡುಕುತ್ತಿದ್ದಾರೆ ಎಂದು ಮಾನ್ಯಾ ಪೊಲೀಸರಿಗೆ ತಿಳಿಸಿದ್ದರು. ಆಗ ಪೊಲೀಸರು ಮಾನ್ಯಾ ಪೋಷಕರನ್ನು ವಿಚಾರಿಸಿದಾಗ, ‘ನಾವು ನಮ್ಮ ಮಗಳನ್ನು ಸತ್ತಳು ಎಂದು ಕೈಬಿಟ್ಟಿದ್ದೇವೆ’ ಎಂದು ಹೇಳಿಕೆ ನೀಡಿದ್ದರು ಎಂಬುದಾಗಿ ವಿವೇಕಾನಂದ ತಿಳಿಸಿದ್ದಾರೆ.
ವಿವೇಕಾನಂದ ಕುಟುಂಬದವರ ಮೇಲೆ ಶನಿವಾರವೇ ನಡೆದಿತ್ತು ಹಲ್ಲೆ
ಘಟನೆ ನಡೆದ ಹಿಂದಿನ, ಅಂದರೆ ಶನಿವಾರ ಸಂಜೆ 5 ರಿಂದ 5:30 ರ ಸುಮಾರಿಗೆ, ಹುಬ್ಬಳ್ಳಿಯ ಗಿರಿಯಾಳ ರಸ್ತೆಯಲ್ಲಿರುವ ಸೇತುವೆ ಬಳಿ ವಿವೇಕಾನಂದ ಅವರ ತಂದೆ ಮತ್ತು ಮಾವನವರ ಮೇಲೆ ಟ್ರ್ಯಾಕ್ಟರ್ನಿಂದ ದಾಳಿ ಮಾಡಲಾಗಿದೆ. ಈ ವಿಷಯ ತಿಳಿದ ವಿವೇಕಾನಂದ ಘಟನಾ ಸ್ಥಳಕ್ಕೆ ಹೋದಾಗ, ಅವರ ಮೇಲೂ ಪ್ರಕಾಶ್ ಗೌಡ, ಅರುಣ್, ಗುಗ್ಗೂರಪ್ಪ, ಮುದುಕಪ್ಪ, ಗುರುಸಿದ್ಧಗೌಡ ಸೇರಿದಂತೆ ಹಲವು ಜನರ ಗುಂಪು ಕಲ್ಲುಗಳಿಂದ ಹಲ್ಲೆ ಮಾಡಿದೆ. ವಿವೇಕಾನಂದ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದರು. ನಂತರ ಅದೇ ಗುಂಪು ವಿವೇಕಾನಂದ ಅವರ ಮನೆಗೆ ಹೋಗಿ, ಅವರ ತಾಯಿ, ತಂದೆ ಮತ್ತು ದೊಡ್ಡಪ್ಪನವರಿಗೂ ಹಲ್ಲೆ ನಡೆಸಿದೆ. ಈ ದಾಳಿಯಲ್ಲಿ ವಿವೇಕಾನಂದ ಅವರ ತಂದೆ ಮತ್ತು ಮಾವನವರ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಅವರ ತಾಯಿಗೂ ರಸ್ತೆಯಲ್ಲೇ ಹೊಡೆದಿದ್ದಾರೆ ಎಂಬ ಆರೋಪ ಇದೆ.
ವಿವೇಕಾನಂದ ಮಾತಿನ ವಿಡಿಯೋ
ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾ ನಮ್ಮೊಂದಿಗೆ ಬಹಳ ಚೆನ್ನಾಗಿ ಇದ್ದಳು. ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದೆವು. ಯಾವುದೇ ರೀತಿಯಲ್ಲಿ ಕಡಿಮೆ ಮಾಡಿರಲಿಲ್ಲ. ತಮ್ಮ ತಂದೆ-ತಾಯಿ ಕೂಡ ಆಕೆಯನ್ನು ಅಪ್ಪ-ಅಮ್ಮನಂತೆಯೇ ನೋಡಿಕೊಂಡಿದ್ದರು ಎಂದು ವಿವೇಕಾನಂದ ಹೇಳಿದ್ದಾರೆ. ಪತ್ನಿಯನ್ನು ಕೊಂದವರಿಗೆ ಗಲ್ಲುಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಕೊಲೆಯಾದ ಮಾನ್ಯಾ ಶವವನ್ನು ಸದ್ಯ ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು ಎಸ್ಪಿ ಗುಂಜನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಮ್ಸ್ ಆಸ್ಪತ್ರೆ ಮುಂದೆ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
‘ನಮ್ಮ ಸಿನಿಮಾ ರಿಲೀಸ್ ಆಗುವಾಗ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗುತ್ತಿದೆ’ ಎಂದಿದ್ದರು. ಈ ವಾರ್ಗೆ ತಾವು ರೆಡಿ ಎಂದು ಕೂಡ ಹೇಳಿದ್ದರು. ಈ ಹೇಳಿಕೆ ಚಿತ್ರರಂಗದಲ್ಲಿ ದೊಡ್ಡ ಕಾಡ್ಗಿಚ್ಚನ್ನೇ ಹಬ್ಬಿಸಿದೆ. ದರ್ಶನ್ (Darshan) ಅಭಿಮಾನಿಗಳು ಇದು ದರ್ಶನ್ ಬಗ್ಗೆ ಹೇಳಿದ್ದು ಎಂದು ಅರ್ಥೈಸಿಕೊಂಡರು. ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸುದೀಪ್ಗೆ (Sudeep) ಕೌಂಟರ್ ಕೊಟ್ಟಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ ಸ್ಪಷ್ಟನೆ ನೀಡಿದ್ದಾರೆ. ಸುದೀಪ್ ಆಡಿದ ಮಾತು ಪೈರಸಿ ಮಾಡುವವರ ಬಗ್ಗೆ ಎಂದಿದ್ದಾರೆ.
‘ಸುದೀಪ್ ಹೇಳಿಕೆ ಬಳಿಕ ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್, ಸ್ಟಾರ್ ವಾರ್ ನಡೀತಾ ಇದೆ ಎಂದು ಹೇಳುತ್ತಾ ಇದಾರೆ. ಮತ್ತೊಂದು ಪಡೆಗೆ ಟಾಂಗ್ ಕೊಟ್ಟಿದ್ದಾರೆ ಎಂದಿದ್ದಾರೆ. ಭಾರತದ ಸಿನಿಮಾಗಳು ರಿಲೀಸ್ ಆದಾಗ ಅದನ್ನು ನಾಶ ಮಾಡಲು ಸಾಕಷ್ಟು ಪ್ರಯತ್ನ ನಡೆಯುತ್ತವೆ. ಒಂದು ಪಡೆ ಸಿನಿಮಾ ಭಯೋತ್ಪಾದಕರ ರೀತಿ ವರ್ತಿಸುತ್ತದೆ. ಸುದೀಪ್ ಸೇರಿದಂತೆ ಎಲ್ಲರೂ ಅದರ ವಿರುದ್ಧ ಹೋರಾಡಬೇಕಿದೆ. ಸುದೀಪ್ ಅವರು ಹೇಳಿದ್ದು ಇದನ್ನೇ’ ಎಂದಿದ್ದಾರೆ ಕಿಚ್ಚನ ಆಪ್ತ ಚಕ್ರರ್ತಿ.
‘ಪೈರಸಿ ಮಾಡಲು 22ಕ್ಕೂ ಹೆಚ್ಚು ಆ್ಯಪ್ಗಳು ಇವೆ. ಕ್ಷಣಮಾತ್ರದಲ್ಲಿ ಸಿನಿಮಾ ಡೌನ್ಲೋಡ್ ಆಗುತ್ತದೆ. ಮೊದಲ ಶೋ ಮುಗಿಯುತ್ತಿದ್ದಂತೆ ಸಿನಿಮಾ ಲೀಕ್ ಆಗುತ್ತದೆ. ಮ್ಯಾಕ್ಸ್ ಸಿನಿಮಾ ಸಂದರ್ಭದಲ್ಲಿ ಸಾವಿರಾರು ಲಿಂಕ್ಗಳನ್ನು ನಾನು ಡಿಲೀಟ್ ಮಾಡಿಸಿದ್ದೇನೆ. ಸಿನಿಮಾನ ಕಷ್ಟಪಟ್ಟು ಮಾಡಬೇಕು. ಸಿನಿಮಾ ರಿಲೀಸ್ ಆದಮೇಲೆಯೂ ಯುದ್ಧ ಮಾಡೋದು ಕಲಾ ಲೋಕಕ್ಕೆ ಬಂದ ಶಾಪ. ಇದರ ವಿರುದ್ಧ ಸಿಎಂ, ಸಂಬಂಧ ಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ’ ಎಂದಿದ್ದಾರೆ ಚಕ್ರವರ್ತಿ.
ಚಕ್ರವರ್ತಿ ವಿಡಿಯೋ
‘ದುಡ್ಡು ಕೊಟ್ಟು ಟಿಕೆಟ್ ಖರೀದಿ ಮಾಡಿದ ಎಲ್ಲರೂ ಸಿನಿಮಾನ ಅಥವಾ ಆ ಕೃತಿಯನ್ನು ವಿಮರ್ಶೆ ಮಾಡುವ ಹಕ್ಕಿರುತ್ತದೆ. ಆದರೆ, ವಿಮರ್ಶೆ ಹೆಸರಲ್ಲಿ ಸಿನಿಮಾನ ಸಾಯಿಸಲಾಗುತ್ತಿದೆ. ಇದಕ್ಕೆ ಒಂದು ಪಡೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಹರಿಬಿಡಲು ಒಂದು ಪಡೆ ಇದೆ. ಈ ರೀತಿಯ ಪಡೆಗಳ ವಿರುದ್ಧ ಯುದ್ಧ ಮಾಡುತ್ತೇನೆ ಎಂದು ಸುದೀಪ್ ಹೇಳಿದ್ದಾರೆ. ಇದು ತಪ್ಪಾ? ಕುಂಬಳ ಕಾಯಿ ಕಳ್ಳ ಎಂದರೆ ಹೆಗಲುಮುಟ್ಟಿಕೊಳ್ಳಬಾರದು’ ಎಂದಿದ್ದಾರೆ ಚಕ್ರವರ್ತಿ.
‘ಪೈರಸಿ ಎಂಬುದು 45, ಮಾರ್ಕ್ಗೆ ಇರುವ ಸವಾಲು. ಡೆವಿಲ್ ಸಿನಿಮಾಗೂ ಇದೇ ಸಮಸ್ಯೆ ಇದೆ. ಅವರಿಗೂ ಪೈರಸಿ ಕಾಟ ತಟ್ಟಿದೆ. ಸುದೀಪ್ ಅವರು ಎಂದಿಗೂ ಒಳ್ಳೆಯದನ್ನು ಬಯಸಿದ್ದಾರೆ’ ಎಂದಿದ್ದಾರೆ ಚಕ್ರವರ್ತಿ. ಈ ಮೂಲಕ ಅದಕ್ಕೆ ಬೇರೆ ಅರ್ಥ ಕಲ್ಪಿಸೋದು ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಟಿ20 ವಿಶ್ವಕಪ್ಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಶುಭ್ಮನ್ ಗಿಲ್ಗೆ ಸ್ಥಾನ ನೀಡಲಾಗಿಲ್ಲ ಎಂಬುದೇ ವಿಶೇಷ. ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾರತ ತಂಡದ ಉಪನಾಯಕನಾಗಿ ಗಿಲ್ ಕಣಕ್ಕಿಳಿದಿದ್ದರು. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ಸರಣಿ ಹಾಗೂ ಟಿ20 ವಿಶ್ವಕಪ್ಗಾಗಿ ಮಾನಸಿಕವಾಗಿ ತಯಾರಿಯನ್ನೂ ಸಹ ಆರಂಭಿಸಿದ್ದರು. ಆದರೆ ಭಾರತ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಬಿಸಿಸಿಐ ಗಿಲ್ಗೆ ಬಿಗ್ ಶಾಕ್ ನೀಡಿರುವ ವಿಚಾರ ಇದೀಗ ಬಹಿರಂಗವಾಗಿದೆ.
ಭಾರತ ತಂಡದ ಘೋಷಣೆಗೂ ಮುನ್ನ ಮುಂಬೈನಲ್ಲಿರುವ ಬಿಸಿಸಿಐ ಕಚೇರಿಯಲ್ಲಿ ಸಭೆ ಸೇರಲಾಗಿತ್ತು. ಈ ಸಭೆಯಲ್ಲಿ ಆಯ್ಕೆ ಸಮಿತಿ ಸದಸ್ಯರು ಹಾಗೂ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಭಾಗವಹಿಸಿದ್ದರು. ಈ ವೇಳೆಯೇ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಕೈ ಬಿಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಅಂದರೆ ಅದಕ್ಕೂ ಮುನ್ನ ಶುಭ್ಮನ್ ಗಿಲ್ ಭಾರತ ಟಿ20 ತಂಡದ ಭಾಗವಾಗಿಯೇ ಇದ್ದರು. ಆದರೆ ತಂಡದ ಘೋಷಣೆಗೂ ಕೆಲವೇ ನಿಮಿಷಗಳ ಮೊದಲು ಗಿಲ್ ಅವರನ್ನು ಕೈ ಬಿಟ್ಟು ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ.
ಅದರಂತೆ ಪತ್ರಿಕಾಗೋಷ್ಠಿಗೂ ನಿಮಿಷಗಳ ಮೊದಲು ಶುಭ್ಮನ್ ಗಿಲ್ಗೆ ಕರೆ ಮಾಡಿ ತಂಡದಿಂದ ಕೈ ಬಿಟ್ಟಿರುವ ವಿಚಾರವನ್ನು ತಿಳಿಸಲಾಗಿದೆ. ಅತ್ತ ಗಿಲ್ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ಹಾಗೂ ಟಿ20 ವಿಶ್ವಕಪ್ಗಾಗಿ ಮಾನಸಿಕವಾಗಿ ತಯಾರಿಯಲ್ಲಿದ್ದರು.
ಇದಾಗ್ಯೂ ಅವರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಲಾಯಿತು. ಈ ಮೂಲಕ ಶುಭ್ಮನ್ ಗಿಲ್ ಅವರನ್ನು ಭಾರತ ಟಿ20 ತಂಡದಿಂದ ಹೊರಗಿಡಲಾಗಿದೆ. ಹೀಗಾಗಿ ಮುಂಬರುವ ಟಿ20 ಸರಣಿಯಲ್ಲಿ ಶುಭ್ಮನ್ ಗಿಲ್ ಭಾರತದ ಪರ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಟಿ20 ವಿಶ್ವಕಪ್ನಲ್ಲೂ ಕಾಣಿಸಿಕೊಳ್ಳುವುದಿಲ್ಲ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ನ್ಯೂಝಿಲೆಂಡ್ ಶುಭಾರಂಭ ಮಾಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯನ್ನು ಕಿವೀಸ್ ಪಡೆ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಗೆಲುವಿನ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿ ಕೂಡ ಬಿಡುಗಡೆಯಾಗಿದೆ.
ನೂತನ ಅಂಕ ಪಟ್ಟಿಯಲ್ಲೂ ಆಸ್ಟ್ರೇಲಿಯಾ ತಂಡ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದು, ಎಲ್ಲಾ ಮ್ಯಾಚ್ಗಳಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಗೆಲುವಿನೊಂದಿಗೆ ನ್ಯೂಝಿಲೆಂಡ್ ತಂಡ ದ್ವಿತೀಯ ಸ್ಥಾನಕ್ಕೇರಿದೆ. ಕಿವೀಸ್ ಪಡೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಆಡಿದ 3 ಮ್ಯಾಚ್ಗಳಲ್ಲಿ ಎರಡು ಗೆಲುವು ಹಾಗೂ ಒಂದು ಡ್ರಾನೊಂದಿಗೆ 77.780 ಶೇಕಡಾವಾರು ಹೊಂದಿದೆ. ಈ ಮೂಲಕ WTC ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಟೀಮ್ ಇಂಡಿಯಾವನ್ನು 2-0 ಅಂತರದಿಂದ ಸೋಲಿಸಿರುವ ಸೌತ್ ಆಫ್ರಿಕಾ ತಂಡ ಮೂರನೇ ಸ್ಥಾನದಲ್ಲಿದೆ. ಆಫ್ರಿಕಾ ಪಡೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ನಾಲ್ಕು ಮ್ಯಾಚ್ಗಳಲ್ಲಿ 3 ಜಯ ಸಾಧಿಸಿದೆ. ಈ ಮೂಲಕ 75 ಶೇಕಡಾವಾರಿನೊಂದಿಗೆ ಸೌತ್ ಆಫ್ರಿಕಾ ತಂಡ ತೃತೀಯ ಸ್ಥಾನವನ್ನು ಅಲಂಕರಿಸಿದೆ.
ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.
ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.
ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ 48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.
ಆ್ಯಶಸ್ ಸರಣಿ ಸೋತಿರುವ ಇಂಗ್ಲೆಂಡ್ ತಂಡವು 27.080 ಶೇಕಡಾವಾರು ಅಂಕಗಳೊಂದಿಗೆ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಬಾಂಗ್ಲಾದೇಶ್ ತಂಡವು 16.67 ಶೇಕಡಾವಾರು ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿದ 7 ಸೋಲನುಭವಿಸಿರುವ ವೆಸ್ಟ್ ಇಂಡೀಸ್ ತಂಡ 4.170 ಶೇಕಡಾವಾರು ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಹುಬ್ಬಳ್ಳಿ, ಡಿಸೆಂಬರ್ 22: ಹುಬ್ಬಳ್ಳಿಯಲ್ಲಿ ನಡೆದ ಹೃದಯ ವಿದ್ರಾವಕ ಮರ್ಯಾದಾ ಹತ್ಯೆ ಪ್ರಕರಣದಲ್ಲಿ, ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾಳ ಪತಿ ವಿವೇಕಾನಂದ ತೀವ್ರ ದುಃಖದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ತಮ್ಮ ಪತ್ನಿಯನ್ನು ಆಕೆಯ ತಂದೆಯೇ ಕೊಲೆ ಮಾಡಿದ್ದು, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ಮಾನ್ಯಾ ಮತ್ತು ವಿವೇಕ್ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.
ಮಾನ್ಯಾಳ ತಂದೆ ಹಿಂದೆ ಹಿಂದೆ ಮುಸ್ಲಿಂ ಹುಡುಗಿಯೊಬ್ಬರನ್ನು ಪ್ರೀತಿಸಿದ್ದರು. ಆವಾಗ ಅವರಿಗೆ ಜಾತಿ ಮುಖ್ಯವಾಗಿರಲಿಲ್ಲ. ಆದರೆ, ಈಗ ತಮ್ಮ ಮಗಳು ಬೇರೆ ಜಾತಿಯ ಹುಡುಗನನ್ನು ಮದುವೆಯಾಗಿದ್ದು ತಪ್ಪಾಯ್ತಾ ಎಂದು ವಿವೇಕಾನಂದ ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಬಾರಿ ಮಧ್ಯಪ್ರವೇಶಿಸಿ, ಎಚ್ಚರಿಕೆ ನೀಡಿದ್ದರೂ ಕೊಲೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ, ಮಾನ್ಯಾ ಶವವನ್ನು ಹುಬ್ಬಳ್ಳಿ ಕಿಮ್ಸ್ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಮೈಸೂರು ಭೇಟಿಯ ವೇಳೆಯೇ ತಾಲೂಕು ಕಚೇರಿಗೆ RDX ಬಾಂಬ್ ಬೆದರಿಕೆ
ಮೈಸೂರು, ಡಿಸೆಂಬರ್ 22: ಇತ್ತೀಚಿಗೆ ಮಂಗಳೂರು, ಭಟ್ಕಳ ಸೇರಿದಂತೆ ರಾಜ್ಯದಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat)ಇ-ಮೇಲ್ಗಳು ಹೆಚ್ಚಿದ್ದು, ಇದೀಗ ಸಿಎಂ ಮೈಸೂರು ಭೇಟಿಯ ನಡುವೆಯೇ ಸರಗೂರು ತಾಲೂಕು ಕಚೇರಿಗೂ ಇದೇ ರೀತಿಯ ಇ-ಮೇಲ್ ಬಂದಿರುವುದು ಆತಂಕ ಸೃಷ್ಟಿಸಿದೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇ-ಮೇಲ್ನಲ್ಲಿ ನಟ ಅಜಿತ್ ಕುಮಾರ್ ಹೆಸರು ಉಲ್ಲೇಖ
ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿರುವ ವೇಳೆಯಲ್ಲಿಯೇ ಮೈಸೂರಿನ ಸರಗೂರು ತಾಲ್ಲೂಕು ಕಚೇರಿಗೆ ಆರ್ಡಿಎಕ್ಸ್ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದೆ. ಮಧ್ಯಾಹ್ನ 1 ಗಂಟೆಗೆ ಸ್ಫೋಟಗೊಳ್ಳುವ ಎಚ್ಚರಿಕೆ ನೀಡಲಾಗಿದ್ದು, ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ನಟ ಅಜಿತ್ ಕುಮಾರ್ ಹೆಸರನ್ನೂ ಸಹ ಮೇಲ್ನಲ್ಲಿ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.
ಇದೇ ಮೊದಲೇನಲ್ಲ ಹುಸಿ ಬೆದರಿಕೆ
ಡಿ.12ರಂದು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಂದ ಬಾಂಬ್ ಬೆದರಿಕೆ ಇಮೇಲ್ ಕೆಲಕಾಲ ಆತಂಕ ಸೃಷ್ಟಿಸಿತ್ತು. ಜಿಲ್ಲಾಡಳಿತ ಹಾಗೂ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಶೋಧ ನಡೆಸಿದ್ದು, ತಮಿಳುನಾಡಿನ 13 ವರ್ಷದ ಬಾಲಕಿಯಿಂದ ಬಂದ ಹುಸಿ ಬೆದರಿಕೆ ಎಂದು ತಿಳಿದುಬಂದಿತ್ತು. ಡಿ.15ರಂದು ಗದಗ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪಾಕ್ನ ಐಎಸ್ಐ ಮತ್ತು ಎಲ್ಟಿಟಿಇ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ಗಳಿಂದ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದರು.
ಇದಷ್ಟೇ ಅಲ್ಲದೇ ಉತ್ತರ ಕನ್ನಡದ ಭಟ್ಕಳ ಮತ್ತು ತುಮಕೂರಿನ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರ ಅಧಿಕೃತ ಇ-ಮೇಲ್ ಐಡಿಗೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ತಕ್ಷಣ ಪೊಲೀಸರು ಡಿಸಿ ಕಚೇರಿಗೆ ಧಾವಿಸಿ ಒಳಭಾಗದಲ್ಲಿ ತೀವ್ರ ತಪಾಸಣೆ ನಡೆಸಿದ್ದರು. ಈ ಎಲ್ಲಾ ಇ-ಮೇಲ್ಗಳೂ ಹುಸಿ ಬೆದರಿಕೆಗಳೆಂದು ತಿಳಿದುಬಂದಿದ್ದವು. ಇದೀಗ ಮತ್ತೊಮ್ಮೆ ಮೈಸೂರಿನಲ್ಲಿಯೂ ಬೆದರಿಕೆ ಇ-ಮೇಲ್ ಬಂದಿದ್ದು, ಗೊಂದಲ ಸೃಷ್ಟಿಸಿದೆ.
ಮುಂಬೈ, ಡಿಸೆಂಬರ್ 22: ಪತಂಜಲಿ ಫುಡ್ಸ್ (Patanjali Foods) ಫುಡ್ಸ್ ಷೇರು ಬೆಲೆ ಇಂದು ಸೋಮವಾರ ಅಲ್ಪ ಹಿನ್ನಡೆ ಪಡೆದರೂ ಕಳೆದ ವಾರದಿಂದ ಒಟ್ಟಾರೆಯಾಗಿ ಪಾಸಿಟಿವ್ ದೆಸೆಯಲ್ಲಿದೆ. ಡಿಸೆಂಬರ್ 15 ರಿಂದ, ಕಂಪನಿಯ ಷೇರುಗಳು ಸುಮಾರು 7% ರಷ್ಟು ಗಳಿಸಿದ್ದು, ಹೂಡಿಕೆದಾರರಿಗೆ ಸುಮಾರು ₹3,900 ಕೋಟಿ ಲಾಭವನ್ನು ತಂದುಕೊಟ್ಟಿವೆ. ಇದರಿಂದ ಮತ್ತೊಮ್ಮೆ ಕಂಪನಿಯ ವ್ಯಾಲ್ಯುಯೇಶನ್ ₹61,000 ಕೋಟಿ ರೂ ದಾಟಿಸಿದೆ. ಕಳೆದ ವಾರದ ಕೊನೆಯ ಟ್ರೇಡಿಂಗ್ ದಿನವಾದ ಶುಕ್ರವಾರ (ಡಿ. 19) ಪತಂಜಲಿ ಫುಡ್ಸ್ ಷೇರುಗಳ ಬೆಲೆ ಒಂದು ಹಂತದಲ್ಲಿ 2.75% ವರೆಗೆ ಏರಿಕೆ ಕಂಡಿತ್ತು. ಇಂದು ಸೋಮವಾರ ಬೆಳಗಿನ ವಹಿವಾಟಿನಲ್ಲಿ ಅದರ ಷೇರು ಬೆಲೆ ತುಸು ಇಳಿಕೆ ಕಂಡಿದೆ.
ಪತಂಜಲಿ ಷೇರು ಬೆಲೆ ಏರಿಕೆ
ವಾರದ ಕೊನೆಯ ಟ್ರೇಡಿಂಗ್ ದಿನದಂದು ಪತಂಜಲಿ ಷೇರುಗಳು ಗಮನಾರ್ಹ ಏರಿಕೆ ಕಂಡಿತು. ಟ್ರೇಡಿಂಗ್ ಅವಧಿ ಮುಗಿದಾಗ ಅದರ ಷೇರುಬೆಲೆ 560.65 ರೂನಲ್ಲಿ ಅಂತ್ಯಗೊಂಡಿತು. ಒಟ್ಟಾರೆ ಆ ದಿನ ಶೇ. 1.88ರಷ್ಟು ಏರಿತು. ಒಂದು ಹಂತದಲ್ಲಿ ಅದರ ಬೆಲೆ 566.85 ರೂಗೆ ಏರಿತ್ತು. ಶೇ. 2.75ರಷ್ಟು ಹೆಚ್ಚಳಗೊಂಡು ಗಮನ ಸೆಳೆಯಿತು. 52 ವಾರಗಳ ಕನಿಷ್ಠ ಮಟ್ಟವಾದ 521 ರೂಗೆ ಹೋಲಿಸಿದರೆ ಪತಂಜಲಿ ಷೇರುಬೆಲೆ ಗಮನಾರ್ಹವಾಗಿ ಹೆಚ್ಚಾಗಿದೆ.
ಪತಂಜಲಿ ಷೇರುಬೆಲೆ ಸತತ 4 ದಿನಗಳು ಏರಿಕೆ
ಕಂಪನಿಯ ಷೇರುಗಳು ಸತತ ನಾಲ್ಕು ದಿನ ಏರಿಕೆ ಕಂಡಿರುವುದು ವಿಶೇಷ. ಈ ವಾರಾದ್ಯಂತ ಅದರ ಬೆಲೆ ಸತತವಾಗಿ ಏರುತ್ತಿದೆ. ಬಿಎಸ್ಇ ದತ್ತಾಂಶದ ಪ್ರಕಾರ, ಕಂಪನಿಯ ಷೇರುಗಳು ಡಿಸೆಂಬರ್ 15 ರಂದು ₹531.20 ರೂ ಬೆಲೆ ಪಡೆದಿದ್ದವು. ಡಿಸೆಂಬರ್ 19 ರಂದು ₹560 ಕ್ಕೆ ಏರಿದೆ. ಇದರರ್ಥ ಕಂಪನಿಯ ಷೇರುಗಳು ಸುಮಾರು 6 ಪ್ರತಿಶತದಷ್ಟು ಗಳಿಸಿವೆ. ಆದಾಗ್ಯೂ, ಒಂದು ತಿಂಗಳಲ್ಲಿ, ಕಂಪನಿಯ ಷೇರುಗಳು ಶೇಕಡಾ 4 ಕ್ಕಿಂತ ಹೆಚ್ಚು ಕುಸಿದಿವೆ. ಕಳೆದ ಆರು ತಿಂಗಳಲ್ಲಿ, ಕಂಪನಿಯ ಷೇರುಗಳು ಶೇಕಡಾ 2 ಕ್ಕಿಂತ ಹೆಚ್ಚು ಗಳಿಸಿವೆ. ಕಳೆದ ಐದು ವರ್ಷಗಳಲ್ಲಿ, ಕಂಪನಿಯು ಹೂಡಿಕೆದಾರರಿಗೆ ಸುಮಾರು ಶೇ. 61 ರಷ್ಟು ರಿಟರ್ನ್ ಕೊಟ್ಟಿದೆ.
ಸತತ ನಾಲ್ಕು ದಿನಗಳ ಲಾಭದಿಂದಾಗಿ ಕಂಪನಿಯ ವ್ಯಾಲ್ಯುಯೇಶನ್ ಗಮನಾರ್ಹ ಏರಿಕೆ ಕಂಡಿದೆ. ಡಿಸೆಂಬರ್ 15 ರಂದು ಕಂಪನಿಯ ವ್ಯಾಲ್ಯುಯೇಶನ್ ₹57,785.44 ಕೋಟಿ ಇತ್ತು. ಈಗ ಅದು ₹61,663.54 ಕೋಟಿ ರೂ ತಲುಪಿದೆ ಎಂದು ಡೇಟಾ ತೋರಿಸುತ್ತದೆ. ಇದರರ್ಥ ಈ ಅವಧಿಯಲ್ಲಿ ಕಂಪನಿಯ ವ್ಯಾಲ್ಯೂಯೇಶನ್ ಅಥವಾ ಹೂಡಿಕೆದಾರರ ಲಾಭವು ₹3,878.1 ಕೋಟಿಗಳಷ್ಟು ಹೆಚ್ಚಾಗಿದೆ. ಕಂಪನಿಯು ಸ್ಥಿರವಾಗಿ ಬೆಳೆಯುತ್ತಿದೆ. ಮುಂಬರುವ ದಿನಗಳಲ್ಲಿ ಕಂಪನಿಯ ಷೇರುಗಳು ಮತ್ತಷ್ಟು ಲಾಭವನ್ನು ಪಡೆಯಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.