DC vs MI IPL 2026 Live Score: ಸತತ 2ನೇ ಗೆಲುವಿನ ಹುಡುಕಾಟದಲ್ಲಿ ಡೆಲ್ಲಿ- ಮುಂಬೈ – Kannada News | Delhi Capitals vs Mumbai Indians IPL 2026 Live Cricket Score DC vs MI Match on 4th April latest news in Kannada

ಐಪಿಎಲ್ 2026 ರ 8 ನೇ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇದರಲ್ಲಿ ಆತಿಥೇಯ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಎರಡೂ ತಂಡಗಳು ಈ ಆವೃತ್ತಿಯನ್ನು ಗೆಲುವಿನೊಂದಿಗೆ ಪ್ರಾರಂಭಿಸಿದ್ದು, ಈಗ ಸತತ ಎರಡನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಅವಕಾಶವನ್ನು ಹೊಂದಿವೆ. ದೆಹಲಿ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದರೆ, ಇತ್ತ ಮುಂಬೈ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದಾಖಲೆ ಗೆಲುವು ಸಾಧಿಸಿತ್ತು.

Source link

RCBಯ 5ನೇ ವಿದೇಶಿ ಆಟಗಾರ… ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​..!

ಐಪಿಎಲ್ 2026ರ ಸೀಸನ್ ಆರಂಭವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಚಿತ್ರ ಸುದ್ದಿ ವೈರಲ್ ಆಗಿತ್ತು. ಅದೇನೆಂದರೆ, “ಈ ಬಾರಿ ಆರ್‌ಸಿಬಿ ತಂಡದಲ್ಲಿ 5 ವಿದೇಶಿ ಆಟಗಾರರು ಆಡುತ್ತಿದ್ದಾರೆ” ಎಂಬುದು. ಐಪಿಎಲ್ ನಿಯಮದ ಪ್ರಕಾರ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೇವಲ ನಾಲ್ವರು ವಿದೇಶಿಯರಿಗೆ ಮಾತ್ರ ಅವಕಾಶವಿದೆ, ಹಾಗಿದ್ದ ಮೇಲೆ ಇದು ಹೇಗೆ ಸಾಧ್ಯ? ಎಂಬ ಪ್ರಶ್ನೆ ನಿಮ್ಮಲ್ಲೂ ಮೂಡಿಬರಬಹುದು.

ಆದರೆ ಅಸಲಿ ವಿಷಯ ಎಂದರೆ, ಇಲ್ಲಿ 5ನೇ ವಿದೇಶಿ ಆಟಗಾರ ಬೇರೆ ಯಾರೂ ಅಲ್ಲ, ಅದು ನಮ್ಮ ವಿರಾಟ್ ಕೊಹ್ಲಿ! ಕೊಹ್ಲಿ ಅವರು ಇತ್ತೀಚೆಗೆ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದರಿಂದ, ಅಭಿಮಾನಿಗಳು ತಮಾಷೆಯಾಗಿ ಅವರನ್ನು “ಓವರ್‌ಸೀಸ್ ಪ್ಲೇಯರ್” (ವಿದೇಶಿ ಆಟಗಾರ) ಎಂದು ಸೋಷಿಯಲ್ ಮೀಡಿಯಾದಲ್ಲಿ ಕಿಚಾಯಿಸಿದ್ದರು.

ಇದನ್ನೇ  ಆರ್‌ಸಿಬಿ ಇನ್ಸೈಡರ್ ಶೋನಲ್ಲಿ ಮಿಸ್ಟರ್ ನಾಗ್ಸ್ (ದಾನಿಶ್ ಸೇಠ್) ಪ್ರಸ್ತಾಪಿಸಿ ಕೊಹ್ಲಿಯ ಕಾಲೆಳೆದಿದ್ದಾರೆ. ನೀವು ಆರ್​ಸಿಬಿಯ 5ನೇ ವಿದೇಶಿ ಆಟಗಾರನಲ್ಲವೇ ಎಂದು ಕೇಳಿದಾಗ, ಕೊಹ್ಲಿ ನಗುತ್ತಾ, “ನನಗೇನು ಗೊತ್ತು, ನನ್ನನ್ನೇಕೆ ಕೇಳುತ್ತಿದ್ದೀಯಾ? ವಿದೇಶಿ ಆಟಗಾರರನ್ನೇ ಕೇಳು. ನಾನು ವಿದೇಶಿ ಆಟಗಾರನಲ್ಲ” ಎಂದು ಹಾಸ್ಯಮಯವಾಗಿ ಉತ್ತರಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

 

Source link

Indian Railways Jobs 2026: ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ; 6,565 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 2026 ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಬೃಹತ್ ಉದ್ಯೋಗಾವಕಾಶ ವನ್ನು ಘೋಷಿಸಿದೆ. ಒಟ್ಟು 6,565 ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯವು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಈ ಪ್ರಕ್ರಿಯೆಯನ್ನು ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು. ರೈಲ್ವೆ ಮಂಡಳಿಯು ಈಗಾಗಲೇ ಎಲ್ಲಾ ವಲಯಗಳಿಂದ ಖಾಲಿ ಹುದ್ದೆಗಳ ಪಟ್ಟಿಯನ್ನು ಪಡೆದಿದ್ದು, ಮುಂದಿನ ಒಂದು ವಾರದೊಳಗೆ ಅಂತಿಮ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ.

39 ವಿಭಾಗಗಳಲ್ಲಿ ನೇಮಕಾತಿ ಮತ್ತು ಸರಳೀಕರಣ:

ಸೇವೆಯ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ತಾಂತ್ರಿಕ ಕೊರತೆಯನ್ನು ನೀಗಿಸಲು 39 ವಿವಿಧ ವಿಭಾಗಗಳಲ್ಲಿ ಈ ನೇಮಕಾತಿ ನಡೆಯಲಿದೆ. ವಿಶೇಷವಾಗಿ ಮೆಕ್ಯಾನಿಕಲ್ ಮತ್ತು ಎಂಜಿನಿಯರಿಂಗ್ ವಿಭಾಗಗಳಲ್ಲಿ ಹೆಚ್ಚಿನ ತಂತ್ರಜ್ಞರ ಅಗತ್ಯವಿರುವುದರಿಂದ ಈ ಹಂತವು ಅತ್ಯಂತ ನಿರ್ಣಾಯಕವೆಂದು ಪರಿಗಣಿಸಲಾಗಿದೆ. ಈ ಬಾರಿ ನೇಮಕಾತಿಯನ್ನು ಪಾರದರ್ಶಕವಾಗಿಸಲು ಎಲ್ಲಾ ವರ್ಗದ ಹುದ್ದೆಗಳನ್ನು ಸಂಯೋಜಿಸಲಾಗಿದ್ದು, ಅಭ್ಯರ್ಥಿಗಳ ಅರ್ಹತೆ ಮತ್ತು ವೈದ್ಯಕೀಯ ಮಾನದಂಡಗಳ ಆಧಾರದ ಮೇಲೆ ಆಯಾ ವಲಯಗಳಿಗೆ ನೇಮಕ ಮಾಡಲಾಗುತ್ತದೆ.

ವಲಯವಾರು ಖಾಲಿ ಹುದ್ದೆಗಳ ಹಂಚಿಕೆ:

ರೈಲ್ವೆಯ ವಿವಿಧ ವಲಯಗಳಲ್ಲಿ ಮಂಜೂರಾದ ಹುದ್ದೆಗಳ ವಿವರ ಇಂತಿದೆ:

  • ಪ್ರಮುಖ ವಲಯಗಳು: ಕೇಂದ್ರ ರೈಲ್ವೆಯಲ್ಲಿ ಅತಿ ಹೆಚ್ಚು ಅಂದರೆ 870 ಹುದ್ದೆಗಳಿವೆ. ದಕ್ಷಿಣ ರೈಲ್ವೆ (785), ಈಶಾನ್ಯ ಗಡಿನಾಡು ರೈಲ್ವೆ (701), ಆಗ್ನೇಯ ರೈಲ್ವೆ (576), ಮತ್ತು ಪಶ್ಚಿಮ ರೈಲ್ವೆ (544) ವಲಯಗಳಲ್ಲಿ ಗಮನಾರ್ಹ ಸಂಖ್ಯೆಯ ಹುದ್ದೆಗಳು ಖಾಲಿ ಇವೆ.
  • ಕರ್ನಾಟಕ ವಲಯ: ನೈಋತ್ಯ ರೈಲ್ವೆ (SWR) ವ್ಯಾಪ್ತಿಯಲ್ಲಿ 240 ತಂತ್ರಜ್ಞ ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
  • ಉತ್ಪಾದನಾ ಘಟಕಗಳು: ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಲ್ಲಿ 236 ಮತ್ತು ಉತ್ತರ ಮಧ್ಯ ರೈಲ್ವೆಯಲ್ಲಿ 268 ಹುದ್ದೆಗಳು ಲಭ್ಯವಿವೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಲೋಕೋ ಪೈಲಟ್ ಹುದ್ದೆಗಳ ಬೃಹತ್ ಅಧಿಸೂಚನೆ:

ತಂತ್ರಜ್ಞ ಹುದ್ದೆಗಳ ಜೊತೆಗೆ ರೈಲ್ವೆ ಇಲಾಖೆಯು ರೈಲು ಚಾಲಕರ ನೇಮಕಾತಿಗೂ ಆದ್ಯತೆ ನೀಡಿದೆ. ವಿವಿಧ ವಲಯಗಳಲ್ಲಿ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳು ಖಾಲಿ ಇದ್ದು, ಈಗಾಗಲೇ ಈ ಕುರಿತು ಪ್ರಾಥಮಿಕ ಸೂಚನೆಯನ್ನು ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೇ 15, 2026 ರಿಂದ ಆನ್‌ಲೈನ್ ಮೂಲಕ ತಮ್ಮ ನೋಂದಣಿಯನ್ನು ಪ್ರಾರಂಭಿಸಬಹುದು.

ಉದ್ಯೋಗಾಕಾಂಕ್ಷಿಗಳಿಗೆ ಹೊಸ ಭರವಸೆ:

ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ಕೇವಲ ಉದ್ಯೋಗ ಸೃಷ್ಟಿಯಷ್ಟೇ ಅಲ್ಲದೆ, ರೈಲ್ವೆ ಕಾರ್ಯಾಚರಣೆಯನ್ನು ಮತ್ತಷ್ಟು ಸುಗಮಗೊಳಿಸಲು ಮತ್ತು ಸುರಕ್ಷತೆಯನ್ನು ಹೆಚ್ಚಿಸಲು ಪೂರಕವಾಗಿದೆ. ಸಾವಿರಾರು ಯುವಕರಿಗೆ ಸರ್ಕಾರಿ ಕೆಲಸದ ಕನಸನ್ನು ನನಸು ಮಾಡಿಕೊಳ್ಳಲು ಈ ನೇಮಕಾತಿ ಅಭಿಯಾನವು ಒಂದು ಸುವರ್ಣ ಅವಕಾಶವಾಗಲಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸದ್ಯಕ್ಕೆ ಔಷಧಿಗಳ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲವಾದರೂ, ಕಚ್ಚಾ ವಸ್ತುಗಳ ಬೆಲೆ ಏರಿಕೆ ಮುಂದಿನ ದಿನಗಳಲ್ಲಿ ಸಮಸ್ಯೆ ಸೃಷ್ಟಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪೆಟ್ರೋಕೆಮಿಕಲ್ಸ್ ಮತ್ತು ಎಕ್ಸಿಪಿಯೆಂಟ್ಸ್ (ಬೈಂಡಿಂಗ್ ಏಜೆಂಟ್, ಸ್ಟಾರ್ಚ್ ಪೌಡರ್) ಬೆಲೆಗಳು ಈಗಾಗಲೇ ಹೆಚ್ಚಾಗಿವೆ. ಎರಡು-ಮೂರು ತಿಂಗಳ ನಂತರ ಮಾರುಕಟ್ಟೆಗೆ ಬರುವ ಹೊಸ ಔಷಧಿಗಳ ಬೆಲೆ ಏರಿಕೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ?

ದಾವಣಗೆರೆ, ಏಪ್ರಿಲ್ 04: ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕರ್ನಾಟಕ ಸರ್ಕಾರದ ಆಡಳಿತ ವೈಖರಿ ಮತ್ತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ಅದರ ಜೊತೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ಚುನಾವಣೆ ಗೆಲುವಿನ ತಂತ್ರಗಾರಿಕೆ ಕುರಿತು ಎಐ (AI) ನೀಡಿದ ಪ್ರತಿಕ್ರಿಯೆಯನ್ನು ಸಚಿವರು ಬಹಿರಂಗಪಡಿಸಿದರು. ಎಐ, “ನೀವು ಕರ್ನಾಟಕ ಮಾಡೆಲ್ ಚುನಾವಣೆ ಮಾಡಿ. ಪ್ರಪಂಚದಲ್ಲೇ ಕರ್ನಾಟಕ ಮಾಡೆಲ್ ಅನ್ನು ಅನುಸರಿಸಿ” ಎಂದು ಸೂಚಿಸಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಕ್ಕೆ ಸಾಕ್ಷಿ ಎಂದು ಬಣ್ಣಿಸಿದ್ದಾರೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ

ಬೆಂಗಳೂರು, ಏಪ್ರಿಲ್ 04: ನಗರದಲ್ಲಿ ಐಪಿಎಲ್ ಟಿಕೆಟ್ ಕ್ರೇಜ್ (IPL 2026) ಎಲ್ಲೆಡೆ ಹಬ್ಬಿದೆ. ತವರು ನೆಲದಲ್ಲಿ ತಮ್ಮ ಇಷ್ಟದ ಆಟಗಾರರ ಮ್ಯಾಚ್ ನೋಡಲು ಎಲ್ಲರಿಗೂ ಆಸೆಯಿದೆ. ಆದರೆ ಯಾವುದೋ ಅನಧಿಕೃತ ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಟಿಕೆಟ್ ಖರೀದಿಗೆ ಮುಂದಾದರೆ ಮೋಸ ಹೋಗಬೇಕಾಗುತ್ತದೆ. ಇಂತದ್ದೇ ಮೋಸದ ಜಾಲಕ್ಕೆ ಸಿಲುಕಿ ಬೆಂಗಳೂರಿನ ಓರ್ವ ಟೆಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಎಚ್ಚರಿಕೆಯ ಗಂಟೆಯಾಗಿದೆ.

ಇನ್​ಸ್ಟಾಗ್ರಾಮ್​ನಲ್ಲಿ ಪರಿಚಯವಾದ ವ್ಯಕ್ತಿ

ಬಿ.ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ ಒಬ್ಬರು ಆನ್‌ಲೈನ್ ಮೋಸಕ್ಕೆ ಒಳಗಾಗಿ 1.46 ಲಕ್ಷ ರೂ. ಕಳೆದುಕೊಂಡಿದ್ದರ ಬಗ್ಗೆ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ವ್ಯಕ್ತಿ ಟಿಕೆಟ್ ಮಾರಾಟಗಾರನಂತೆ ನಟಿಸಿ ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ತನ್ನನ್ನು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡ ಆರೋಪಿಯು, ಐಪಿಎಲ್ ಪಂದ್ಯಕ್ಕೆ ಟಿಕೆಟ್‌ಗಳ ಜೊತೆಗೆ ಊಟದ ಕೂಪನ್‌ಗಳು ಮತ್ತು ವಿಶೇಷ ಸೌಲಭ್ಯಗಳನ್ನು ಒದಗಿಸುವುದಾಗಿ ನಂಬಿಕೆ ಮೂಡಿಸಿದ್ದ. ಆರಂಭದಲ್ಲಿ ಎರಡು ಟಿಕೆಟ್‌ಗಳಿಗೆ 3,700 ರೂ. ದರ ನಿಗದಿ ಮಾಡಿದ್ದರೂ, ನಂತರ ಭದ್ರತಾ ಠೇವಣಿ, ಹೆಚ್ಚುವರಿ ಐಡಿ ಕಾರ್ಡ್ ಹಾಗೂ ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಕೇಳಿದ್ದ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ, ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದ ಎಂದು ನೊಂದ ವ್ಯಕ್ತಿ ಹೇಳಿದ್ದಾರೆ.

ಇದನ್ನೂ ಓದಿ ಬಂದಿದ್ದು ಜಾರ್ಖಂಡ್​ನಿಂದ, ಧರಿಸಿದ್ದು ಆರ್​ಸಿಬಿ ಜೆರ್ಸಿ, ಮಾಡಬಾರದ ಕೆಲಸ ಮಾಡಿ ಪೊಲೀಸ್ ಬಲೆಗೆ ಬಿದ್ದ ಖದೀಮರು!

ಟಿಕೆಟ್​ ಕೊಡಲಿಲ್ಲ, ದುಡ್ಡೂ ಹಿಂದಿರುಗಿಸಲಿಲ್ಲ

ಆರೋಪಿಯ ಮಾತನ್ನು ನಂಬಿದ ವ್ಯಕ್ತಿ ತನ್ನ ಖಾತೆಯ ಜೊತೆಗೆ ತಾಯಿಯ ಖಾತೆಯಿಂದಲೂ ಯುಪಿಐ ಮೂಲಕ ಹಣ ವರ್ಗಾವಣೆ ಮಾಡಿದ್ದು, ಒಟ್ಟು 1.46 ಲಕ್ಷ ರೂ.ಪಾವತಿಸಿರುವುದಾಗಿ ಹೇಳಿದ್ದಾರೆ. ಹಣ ಪಡೆದ ಬಳಿಕ ಟಿಕೆಟ್‌ಗಳನ್ನು ನೀಡಿಲ್ಲ, ಹಣವನ್ನೂ ಹಿಂದಿರುಗಿಸಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗಂಡು ಮಗು ಬೇಕೆಂಬ ಹಠಕ್ಕೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನೇ ಕೊಂದು ಈಜುಕೊಳಕ್ಕೆ ಎಸೆದ ಕಟುಕ ತಂದೆ

ಹೈದರಾಬಾದ್, ಏ.4: ಗಂಡು ಮಗು ಬೇಕೆಂಬ ಅಂಧಾಭಿಮಾನ ಮತ್ತು ವಿಕೃತ ಮನಸ್ಥಿತಿಗೆ ಅಮಾಯಕ ಹೆಣ್ಣು ಜೀವಗಳು ಬಲಿಯಾಗಿರುವ ಘೋರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿ, ನಂತರ ಅದನ್ನು ಅಪಘಾತ ಎಂದು ಬಿಂಬಿಸಲು ಮೃತದೇಹಗಳನ್ನು ಈಜುಕೊಳಕ್ಕೆ ಎಸೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ತನ್ನ ಪತ್ನಿಯೊಂದಿಗೆ ಗಂಡು ಮಗುವಿನ ವಿಚಾರಕ್ಕಾಗಿ ಪದೇ ಪದೇ ಜಗಳವಾಡುತ್ತಿದ್ದನು. ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ, ಗಂಡು ಮಗು ಇಲ್ಲ ಎಂಬ ಕಾರಣಕ್ಕೆ ಪತ್ನಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದನು. ಈ ವಿಕೃತ ಹಂಬಲವು ಅಂತಿಮವಾಗಿ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ.

ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಕೊಂದ ನಂತರ, ಆರೋಪಿಯು ಯಾರೂ ಇಲ್ಲದ ಸಮಯದಲ್ಲಿ ಮೃತದೇಹಗಳನ್ನು ಹತ್ತಿರದ ಈಜುಕೊಳಕ್ಕೆ ಎಸೆದಿದ್ದನು. ಆರಂಭದಲ್ಲಿ ಅವರು ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಮರಣೋತ್ತರ ಪರೀಕ್ಷೆ ಮತ್ತು ಪೊಲೀಸರ ತನಿಖೆಯಿಂದ ಇದು ಆಕಸ್ಮಿಕ ಸಾವಲ್ಲ, ಬದಲಿಗೆ ವ್ಯವಸ್ಥಿತವಾಗಿ ನಡೆದ ಕೊಲೆ ಎಂಬುದು ಸಾಬೀತಾಗಿದೆ.

ಇದನ್ನೂ ಓದಿ: ವಿಕೃತ ಕಾಮಿಯ ಅಟ್ಟಹಾಸ: ‘ನನಗೆ ಎಚ್‌ಐವಿ ಇದೆ’ ಎಂದಿದ್ದಕ್ಕೆ ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!

ಇನ್ನು ಫರ್ಹತ್ ಅವರ ಪತಿ ಅಜರುದ್ದೀನ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ಅವರ ಪತ್ನಿ ಮತ್ತು ಪುತ್ರಿಯರುಕೊಳಕ್ಕೆ ಜಾರಿಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಪೊಲೀಸರಿಗೆ ಬಂದ ಅನುಮಾನದಿಂದ ಹಾಗೂ ಪತಿ ಅಜರುದ್ದೀನ್ ನೀಡಿರುವ ಹೇಳಿಕೆಯೂ ಈ ಪ್ರಕರಣಕ್ಕೆ ಹೊಂದಾಣಿಕೆ ಆಗುತ್ತಿಲ್ಲ ಎಂದು ತನಿಖೆ ನಡೆಸಿದಾಗ, ಇದು ಕೊಲೆ ಎಂದು ಸಾಬೀತಾಗಿದೆ. ಇನ್ನು ಫರ್ಹತ್​​ ತಂದೆ ನೀಡಿದ ದೂರು ಕೂಡ ಇದಕ್ಕೆ ಮತ್ತಷ್ಟು ಬಲವನ್ನು ನೀಡಿತ್ತು. ಕಳೆದ ಕೆಲವು ದಿನಗಳಿಂದ ತಮ್ಮ ಮಗಳು ಮತ್ತು ಅಳಿಯನ ನಡುವೆ ಮಕ್ಕಳ ಬಗ್ಗೆ ಮತ್ತು ಫರ್ಹತ್ ಗರ್ಭಧಾರಣೆಯ ಬಗ್ಗೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು ಎಂದು ಆರೋಪಿಸಿ ಫರ್ಹತ್ ಅವರ ತಂದೆ ಅಲಿ ಪೊಲೀಸರಿಗೆ ದೂರು ನೀಡಿದ್ದರು. ಅಜರುದ್ದೀನ್ ಅವರಿಗೆ ಮತ್ತೊಂದು ಹೆಣ್ಣು ಮಗು ಬೇಡವಾಗಿದ್ದು, ಗರ್ಭಪಾತ ಮಾಡಿಸಿಕೊಳ್ಳುವಂತೆ ಫರ್ಹತ್​​ಗೆ ಒತ್ತಾಯಿಸುತ್ತಿದ್ದರು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು  ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಕಾರಣದಿಂದಾಗಿ ರದ್ದು ಮಾಡಲಾಗಿತ್ತು. ಇದೀಗ ಸರಣಿಯನ್ನು ಮರು ಆಯೋಜಿಸಲು ಉಭಯ ದೇಶಗಳ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸರಣಿ ರದ್ದು ಮಾಡಿದ್ದೇಕೆ?

ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್ ಹಸೀನಾ ಸರ್ಕಾರ ಪತನಗೊಂಡ ನಂತರದ ಪರಿಸ್ಥಿತಿಯಿಂದಾಗಿ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಟಗಾರರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.

ರಾಜತಾಂತ್ರಿಕ ಉದ್ವಿಗ್ನತೆ: ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಹದಗೆಟ್ಟಿರುವುದು ಮತ್ತು ಭಾರತ ಸರ್ಕಾರವು ಈ ಪ್ರವಾಸಕ್ಕೆ ಇನ್ನೂ ಹಸಿರು ನಿಶಾನೆ ನೀಡದಿರುವುದು ಸರಣಿ ವಿಳಂಬಕ್ಕೆ ಕಾರಣವಾಗಿದೆ.

ವೇಳಾಪಟ್ಟಿಯ ಒತ್ತಡ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸರಣಿಗಳ ಒತ್ತಡ ಹೆಚ್ಚಿರುವುದರಿಂದ, ಎರಡೂ ಮಂಡಳಿಗಳು ಪರಸ್ಪರ ಚರ್ಚಿಸಿ ಸರಣಿಯನ್ನು 2026ಕ್ಕೆ ಮರುನಿಗದಿಗೊಳಿಸಲು ಒಪ್ಪಿಕೊಂಡವು.

ಸ್ಥಿರ ಸರ್ಕಾರದ ನಿರೀಕ್ಷೆ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆದು ಸ್ಥಿರ ಸರ್ಕಾರ ಬಂದ ನಂತರವಷ್ಟೇ ಸರಣಿ ನಡೆಸುವುದು ಸೂಕ್ತ ಎಂದು ಬಿಸಿಸಿಐ ಭಾವಿಸಿದ್ದೆವು. ಇದೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿದೆ.

ಸರಣಿಯ ಮುಖ್ಯಾಂಶಗಳು:

ಈ ಪ್ರವಾಸದಲ್ಲಿ ಭಾರತ ತಂಡವು 3 ಏಕದಿನ (ODI) ಮತ್ತು 3 ಟಿ20 (T20I) ಪಂದ್ಯಗಳನ್ನು ಆಡಲಿದೆ. ವಿಶೇಷವೆಂದರೆ, ಬಾಂಗ್ಲಾದೇಶದ ನೆಲದಲ್ಲಿ ಭಾರತ ತಂಡವು ಆಡಲಿರುವ ಮೊದಲ ದ್ವಿಪಕ್ಷೀಯ ಟಿ20 ಸರಣಿ ಇದಾಗಿದೆ.

ಸರಣಿಯ ಸಂಭಾವ್ಯ ವೇಳಾಪಟ್ಟಿ:

  • ಸೆಪ್ಟೆಂಬರ್ 1: 1ನೇ ಏಕದಿನ ಪಂದ್ಯ (ಮೀರ್‌ಪುರ)
  • ಸೆಪ್ಟೆಂಬರ್ 3: 2ನೇ ಏಕದಿನ ಪಂದ್ಯ (ಮೀರ್‌ಪುರ)
  • ಸೆಪ್ಟೆಂಬರ್ 6: 3ನೇ ಏಕದಿನ ಪಂದ್ಯ (ಚಟ್ಟೋಗ್ರಾಮ್)
  • ಸೆಪ್ಟೆಂಬರ್ 9: 1ನೇ ಟಿ20 ಪಂದ್ಯ (ಚಟ್ಟೋಗ್ರಾಮ್)
  • ಸೆಪ್ಟೆಂಬರ್ 12: 2ನೇ ಟಿ20 ಪಂದ್ಯ (ಮೀರ್‌ಪುರ)
  • ಸೆಪ್ಟೆಂಬರ್ 13: 3ನೇ ಟಿ20 ಪಂದ್ಯ (ಮೀರ್‌ಪುರ)

ಇದನ್ನೂ ಓದಿ: ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ

ಪ್ರಮುಖ ಮಾಹಿತಿ:

ಭಾರತ ತಂಡವು ಆಗಸ್ಟ್ 28, 2026 ರಂದು ಬಾಂಗ್ಲಾದೇಶಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈ ಸರಣಿಗಾಗಿ ಬಾಂಗ್ಲಾದೇಶವು ತನ್ನ ಐರ್ಲೆಂಡ್ ಪ್ರವಾಸವನ್ನೇ ಮುಂದೂಡಿ ಭಾರತಕ್ಕೆ ಆತಿಥ್ಯ ವಹಿಸಲು ಆದ್ಯತೆ ನೀಡಿದೆ. ಸದ್ಯದ ವರದಿಗಳ ಪ್ರಕಾರ, ಬಿಸಿಸಿಐ ಈ ಪ್ರವಾಸಕ್ಕೆ ಭಾರತ ಸರ್ಕಾರದ ಅಂತಿಮ ಅನುಮತಿಯನ್ನು ಎದುರು ನೋಡುತ್ತಿದೆ.

 

 

Source link

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು. ಅವರು ಅದನ್ನು ಕದ್ದು ಸಿನಿಮಾ ಮಾಡಿದ್ದಾರೆ. ನಾನು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳುಗೆ ಕಥೆ ಹೇಳಿದ್ದೆ. ನಾನು ದೊಡ್ಡ ದೊಡ್ಡ ಕಲಾವಿದರನ್ನು ಸಿನಿಮಾದಲ್ಲಿ ಹಾಕಿಕೊಳ್ಳುವ ಪ್ಲ್ಯಾನ್ ಇತ್ತು’ ಎಂದಿದ್ದರು.

ಈ ವಿಷಯವಾಗಿ ಆದಿತ್ಯ ಧಾರ್ ಅವರು ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಬದಲಿಗೆ ಕಾನೂನಾತ್ಮಕವಾಗಿಯೇ ಉತ್ತರಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ವರದಿಗಳ ಪ್ರಕಾರ, ತಮ್ಮ ಕಾನೂನು ತಂಡದ ಜೊತೆ ಮಾತನಾಡಿರುವ ಆದಿತ್ಯ ಧಾರ್ ಅವರು ಸಂತೋಷ್​​ ಕುಮಾರ್ ಅವರಿಗೆ ನೋಟಿಸ್ ಕಳುಹಿಸಿದ್ದಾರೆ. ಈ ರೀತಿ ಸುಳ್ಳು ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.

ಆದರೆ, ಇದಕ್ಕೆ ಸಂತೋಷ್ ಕುಮಾರ್ ಸುಮ್ಮನಾಗಿಲ್ಲ. ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸಂತೋಷ್ ಕುಮಾರ್ ನೇರವಾಗಿ ಹೇಳಿದ್ದಾರೆ. ಮೌನವಾಗಿರಲು ತನ್ನ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಕೋರ್ಟ್​​​ನಲ್ಲಿ ವಿಷಯ ಹೋರಾಡುವುದಾಗಿ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಧುರಂಧರ್ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಇದರಿಂದ ಸಿಟ್ಟಾಗಿರೋ ಆದಿತ್ಯ ಧಾರ್ ಅವರಿಗೆ ಮತ್ತಷ್ಟು ಸಿಟ್ಟಾಗಿದ್ದಾರೆ. ಎಚ್ಚರಿಕೆಯ ಬಳಿಕವೂ ಸಂತೋಷ್ ಅವರು ಆಧಾರ ರಹಿತ ಹೇಳಿಕೆ ಮುಂದುವರಿಸಿದ್ದಾರೆ ಎಂಬುದು ಆದಿತ್ಯ ಧಾರ್ ಅವರ ಆರೋಪ. ಈ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Indian Army Agniveer 2026: ಭಾರತೀಯ ಸೇನಾ ಅಗ್ನಿವೀರ್ ನೇಮಕಾತಿ; ಅರ್ಜಿ ಸಲ್ಲಿಕೆಯ ಕಾಲಾವಕಾಶ ವಿಸ್ತರಣೆ

ಭಾರತೀಯ ಸೇನೆಯು 2026 ರ ಅಗ್ನಿವೀರ್ ನೇಮಕಾತಿಯ ಅರ್ಜಿ ಸಲ್ಲಿಕೆಯ ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ಮೂಲತಃ ಏಪ್ರಿಲ್ 1 ರಂದು ಮುಕ್ತಾಯಗೊಳ್ಳಬೇಕಿದ್ದ ಈ ಗಡುವನ್ನು ಈಗ ಏಪ್ರಿಲ್ 10 ರವರೆಗೆ ವಿಸ್ತರಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ದೇಶ ಸೇವೆ ಮಾಡಲು ಬಯಸುವ ಅವಿವಾಹಿತ ಪುರುಷ ಅಭ್ಯರ್ಥಿಗಳು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವಿವಿಧ ಹುದ್ದೆಗಳ ವಿವರ ಮತ್ತು ಅರ್ಹತೆ:

ಈ ನೇಮಕಾತಿಯು ಅಗ್ನಿವೀರ್ ಜನರಲ್ ಡ್ಯೂಟಿ (GD), ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಕ್ಲರ್ಕ್/ಸ್ಟೋರ್ ಕೀಪರ್ (SKT) ಹಾಗೂ 8ನೇ ಮತ್ತು 10ನೇ ತರಗತಿ ಉತ್ತೀರ್ಣರಾದವರಿಗಾಗಿ ಅಗ್ನಿವೀರ್ ಟ್ರೇಡ್ಸ್‌ಮನ್ ಹುದ್ದೆಗಳನ್ನು ಒಳಗೊಂಡಿದೆ.

  • ಜನರಲ್ ಡ್ಯೂಟಿ: ಕನಿಷ್ಠ ಶೇ. 45 ಅಂಕಗಳೊಂದಿಗೆ 10ನೇ ತರಗತಿ ಪಾಸಾಗಿರಬೇಕು.
  • ತಾಂತ್ರಿಕ ಹುದ್ದೆ: ಪಿಸಿಎಂ (Physics, Chemistry, Maths) ವಿಷಯಗಳೊಂದಿಗೆ 12ನೇ ತರಗತಿ ಪಾಸಾಗಿರಬೇಕು.
  • ಕ್ಲರ್ಕ್/ಎಸ್‌ಕೆಟಿ: ಯಾವುದೇ ವಿಭಾಗದಲ್ಲಿ ಶೇ.60 ಅಂಕಗಳೊಂದಿಗೆ 12ನೇ ತರಗತಿ ಪಾಸಾಗಿರಬೇಕು.
  • ಟ್ರೇಡ್ಸ್‌ಮನ್: ಹುದ್ದೆಗೆ ಅನುಗುಣವಾಗಿ 8ನೇ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1, 2026 ಕ್ಕೆ ಅನ್ವಯವಾಗುವಂತೆ 17.5 ರಿಂದ 21 ವರ್ಷ ವಯಸ್ಸಿನವರಾಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ಮೀಸಲು ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಇನ್ನು ಅರ್ಜಿ ಶುಲ್ಕವಾಗಿ ರೂ.250 ನಿಗದಿಪಡಿಸಲಾಗಿದ್ದು, ಇದನ್ನು ನೆಟ್ ಬ್ಯಾಂಕಿಂಗ್, UPI ಅಥವಾ ಕಾರ್ಡ್‌ಗಳ ಮೂಲಕ ಪಾವತಿಸಬಹುದು. ಅರ್ಜಿಯೊಂದಿಗೆ ಭಾವಚಿತ್ರ, ಸಹಿ ಮತ್ತು ಗುರುತಿನ ಚೀಟಿಯ ಸ್ಕ್ಯಾನ್ ಪ್ರತಿಗಳನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಆಯ್ಕೆ ಪ್ರಕ್ರಿಯೆಯ ಹಂತಗಳು:

ಅಗ್ನಿವೀರ್ ಆಯ್ಕೆ ಪ್ರಕ್ರಿಯೆಯು ಪ್ರಮುಖವಾಗಿ ಐದು ಹಂತಗಳಲ್ಲಿ ನಡೆಯುತ್ತದೆ:

  • ಆನ್‌ಲೈನ್ ಲಿಖಿತ ಪರೀಕ್ಷೆ (ಜೂನ್ 1 ರಿಂದ 15, 2026 ರವರೆಗೆ).
  • ದೈಹಿಕ ದಕ್ಷತೆ ಪರೀಕ್ಷೆ (PET) ಮತ್ತು ದೈಹಿಕ ಮಾಪನ ಪರೀಕ್ಷೆ (PMT).
  • ಟೈಪಿಂಗ್ ಅಥವಾ ಟ್ರೇಡ್ ಪರೀಕ್ಷೆ (ಅನ್ವಯವಾಗುವ ಹುದ್ದೆಗಳಿಗೆ ಮಾತ್ರ).
  • ದಾಖಲೆಗಳ ಪರಿಶೀಲನೆ.
  • ಅಂತಿಮ ವೈದ್ಯಕೀಯ ಪರೀಕ್ಷೆ.

ಬಹು ವಿಭಾಗಗಳಲ್ಲಿ ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ತಮ್ಮ ಅರ್ಹತೆಗೆ ಅನುಗುಣವಾಗಿ ನಿಯಮಿತ ವಿಭಾಗದ ಜೊತೆಗೆ ಇನ್ನು ಎರಡು ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ, ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಗಮನಿಸಬೇಕಾದ ಅಂಶವೆಂದರೆ, ಅಭ್ಯರ್ಥಿಯು ಕೇವಲ ಒಂದು ನೇಮಕಾತಿ ರ‍್ಯಾಲಿಯಲ್ಲಿ ಮಾತ್ರ ಭಾಗವಹಿಸಲು ಸಾಧ್ಯವಿದ್ದು, ಅಲ್ಲಿಯೇ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version