ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ

ಚೈತ್ರಾ ಅವರು ಬಿಗ್ ಬಾಸ್​ನಿಂದ ಹೊರ ಬಂದಿದ್ದಾರೆ. ಈ ವೇಳೆ ಅವರು ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದರು. ಈ ವೇಳೆ ಬಿಗ್ ಬಾಸ್ ಯಾರು ಗೆಲ್ಲುತ್ತಾರೆ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಿದ್ದಾರೆ. ‘ಯಾರು ಗೆಲ್ಲುತ್ತಾರೆ, ಯಾರು ಗೆಲ್ಲಬೇಕು ಎಂದು ನಾನು ಹೇಳೋದು ಸರಿ ಆಗೋದಿಲ್ಲ. ಎಲ್ಲರೂ ಚೆನ್ನಾಗಿ ಆಡುತ್ತಿದ್ದಾರೆ. ಫ್ಯಾಮಿಲಿ ವೀಕ್ ಆದ ಬಳಿಕ ಸ್ಪರ್ಧಿಗಳಲ್ಲಿ ಒಂದಷ್ಟು ಬದಲಾವಣೆ ಆಗಬಹುದು’ ಎಂದು ಚೈತ್ರಾ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ, ವಿಡಿಯೋ ವೈರಲ್ – Kannada News | Ashwin Balalu: 14 Yr Old Performs Bharatanatyam 20ft Deep for Marine Pollution Message

ಪುದುಚೇರಿ, ಡಿ.22: ಪುದುಚೇರಿಯ 14 ವರ್ಷದ ಬಾಲಕಿಯೊಬ್ಬಳು ಸಮುದ್ರದ ಒಳಗೆ ಭರತನಾಟ್ಯ ಮಾಡಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. 20 ಅಡಿ ನೀರಿನ ಒಳಗೆ ಭರತನಾಟ್ಯ ಮಾಡಿರುವ ವಿಡಿಯೋ ವೈರಲ್​​ ಆಗಿದೆ.  ಭರತನಾಟ್ಯ ಭಾರತೀಯ ಪ್ರಮುಖ ಕಲೆಯಾಗಿದ್ದು, ಗಡಿ, ಭಾಷೆಗಳನ್ನು ಮೀರಿ ನಿಂತಿದೆ. ಇದೀಗ ನೀರಿನ ಒಳಗೆ ಭರತಮಾಟ್ಯ ಮಾಡುವ ಮೂಲಕ ಹೊಸ ದಾಖಲೆಯನ್ನು ಈ ಹುಡುಗಿ ಮಾಡಿದ್ದಾಳೆ. ಅಶ್ವಿನ್ ಬಾಲಾಳು ಎಂಬು ಹುಡುಗಿ ಈ ನೃತ್ಯ ಪ್ರದರ್ಶನ ನೀಡಿದ್ದು, ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾಳೆ. ಇಂಟರ್ನ್ಯಾಷನಲ್ ಡಾನ್ಸ್ ಡೇಯಂದು ಈ ಪ್ರದರ್ಶನ ನೀಡಿದ್ದು, ಸಮುದ್ರಕ್ಕೆ ಫ್ಲಾಸ್ಟಿಕ್ ಎಸೆಯಬೇಡಿ ಎಂಬ ಜಾಗೃತಿಯನ್ನು ಮೂಡಿಸಲು ಈ ಸಾಹಸವನ್ನು ಮಾಡಿದ್ದಾಳೆ. ಈ ಮೂಲಕ ಪ್ರಪಂಚಕ್ಕೆ ಸಮುದ್ರವನ್ನು ಮಾಲಿನ್ಯ ಮಾಡುವುದನ್ನು ತಡೆಗಟ್ಟಲು ಸಂದೇಶ ನೀಡಿದ್ದಾಳೆ. 2025 ಏಪ್ರಿಲ್‌ನಲ್ಲಿ ನಡೆದ ಈ ಪ್ರದರ್ಶನಕ್ಕೆ ಸಂಬಂಧಿಸಿದ 51 ವೀಡಿಯೊ ಕ್ಲಿಪ್ ಡಿಸೆಂಬರ್ 19 ರಂದು ರಿಪೋಸ್ಟ್ ಆಗಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಡಿಯೋ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಮಹಿಳಾ ಬೋಗಿಗೆ ನುಗ್ಗಿ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ – Kannada News | Mumbai Local Incident: Teen Injured After Being Pushed From Train

ಮುಂಬೈ, ಡಿಸೆಂಬರ್ 22: ವ್ಯಕ್ತಿಯೊಬ್ಬ ರೈಲಿನ ಮಹಿಳಾ ಬೋಗಿಗೆ ನುಗ್ಗಿದ್ದಷ್ಟೇ ಅಲ್ಲದೆ ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈ ಸ್ಥಳೀಯ ರೈಲಿನ ಮಹಿಳಾ ಕೋಚ್ ಹತ್ತಿದ ನಂತರ 50 ವರ್ಷದ ವ್ಯಕ್ತಿಯೊಬ್ಬ 18 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುವ ರೈಲಿನಿಂದ ತಳ್ಳಿದ್ದಾನೆ ಎಂದು ಆರೋಪಿಸಲಾಗಿದೆ. ಮಹಿಳಾ ಬೋಗಿಗೆ ಹತ್ತಿದ್ದಕ್ಕೆ ವ್ಯಕ್ತಿಯನ್ನು ಯುವತಿ ಪ್ರಶ್ನಿಸಿದ್ದಳು, ಅದಕ್ಕೆ ಕೋಪಗೊಂಡ ವ್ಯಕ್ತಿ ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾನೆ.

ಆಕೆ ತನ್ನ ಸ್ನೇಹಿತೆಯೊಂದಿಗೆ ಖಾರ್ಘರ್‌ನಲ್ಲಿರುವ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಪನ್ವೇಲ್ ಮತ್ತು ಖಂಡೇಶ್ವರ ರೈಲು ನಿಲ್ದಾಣಗಳ ನಡುವೆ ಈ ಘಟನೆ ವರದಿಯಾಗಿದೆ.ಪನ್ವೇಲ್ ನಿಲ್ದಾಣದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ವಿದ್ಯಾರ್ಥಿನಿ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯ ತಲೆ, ಸೊಂಟ ಮತ್ತು ಕೈಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಈಗ ಆಕೆಯ ಸ್ಥಿತಿ ಸ್ಥಿರವಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್; ಹೈಕಮಾಂಡ್​ಗೆ ಪತ್ರ ಬರೆದು ಪೋಸ್ಟ್ – Kannada News | Kalaburagi backward community Seers Push DK Shivakumar for Karnataka CM Post

ಕಲಬುರಗಿ, ಡಿಸೆಂಬರ್ 22: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ  ಆಡಳಿತ ಹಂಚಿಕೆ ಸಂಬಂಧಿಸಿದ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಇಲ್ಲಿಯವರೆಗೂ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳು ಸಾಥ್ ಕೊಡುತ್ತಲೇ ಬಂದಿವೆ. ಆದರೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಹಿಂದುಳಿದ ಸಮುದಾಯದ ಮಠಾಧೀಶರು ಮುನ್ನಡೆಸಿರುವ ಮಹತ್ವದ ಚಳವಳಿ ಕಲಬುರಗಿಯಲ್ಲಿ ಆರಂಭವಾಗಿದೆ. ಬ್ರಹ್ಮ ಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ.

ಈ ಸಂಬಂಧ ಹತ್ತರಿಂದ ಹದಿನೈದು ಮಂದಿ ಮಠಾಧೀಶರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್‌ ನಾಯಕರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡದೇ ಹೋದರೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ ಎಂದು ಪ್ರಣವಾನಂದ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಡಿಕೆಶಿಗೆ ಅವಕಾಶ ನೀಡದಿದ್ದರೆ ಪಕ್ಷ ಸರ್ವನಾಶದ ಹಾದಿಗೆ ಹೋಗುವ ಸಾಧ್ಯತೆ ಇದೆ ಎಂದೂ ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನ್ಯೂಜಿಲೆಂಡ್ ಜೊತೆಗೂ ಟ್ರೇಡ್ ಡೀಲ್ ಮುಗಿಸಿದ ಭಾರತ; ಈ ವರ್ಷದಲ್ಲೇ ಭಾರತಕ್ಕಿದು 3ನೇ ಎಫ್​ಟಿಎ – Kannada News | India and New Zealand finalize the FTA, expected to boost the trade between them

2025ರ ಮಾರ್ಚ್​ನಲ್ಲಿ ನ್ಯೂಜಿಲೆಂಡ್ ಪ್ರಧಾನಿಯ ಭಾರತ ಭೇಟಿ ಸಂದರ್ಭದ ಫೋಟೋ

ನವದೆಹಲಿ, ಡಿಸೆಂಬರ್ 22: ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ (India New Zealand Trade Deal) ಅಂತಿಮಗೊಂಡಿದೆ. ಇದೇ ಮಾರ್ಚ್ ತಿಂಗಳಿಂದ ಎರಡೂ ಕಡೆಗಳಿಂದ ನಡೆದ ಮಾತುಕತೆಗಳು ಫಲಪ್ರದ ಎನಿಸಿವೆ. ಎರಡೂ ದೇಶಗಳ ಮಧ್ಯೆ ಮುಂದಿನ ದಿನಗಳಲ್ಲಿ ವ್ಯಾಪಾರ ವಹಿವಾಟು ಬಹುತೇಕ ಮುಕ್ತವಾಗಿರಲಿವೆ. ಭಾರತ ಸರ್ಕಾರ ವಿವಿಧ ದೇಶಗಳೊಂದಿಗೆ ವ್ಯಾಪಾರ ಒಪ್ಪಂದ ಕುದುರಿಸಲು ಕ್ಷಿಪ್ರವಾಗಿ ಹೆಜ್ಜೆಗಳನ್ನು ಇಡುತ್ತಿದೆ. ಈ ವರ್ಷದಲ್ಲೇ ನ್ಯೂಜಿಲೆಂಡ್​ನದ್ದೂ ಸೇರಿ ಮೂರು ಟ್ರೇಡ್ ಡೀಲ್​ಗಳು ಅಂತಿಮಗೊಂಡಿವೆ. ಬ್ರಿಟನ್ ಮತ್ತು ಓಮನ್ ದೇಶಗಳೊಂದಿಗೂ ಭಾರತ ಈ ವರ್ಷ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ.

ಇತ್ತೀಚಿನ ವರ್ಷಗಳಲ್ಲಿ ಭಾರತ ಮಾಡಿಕೊಂಡ ಏಳನೇ ಎಫ್​ಟಿಎ ಕೂಡ ಇದಾಗಿದೆ. ಆಸ್ಟ್ರೇಲಿಯಾ, ಯುಎಇ, ಮಾರಿಷಸ್, ಇಎಫ್​ಟಿಎ ಜೊತೆಗೂ ಭಾರತವು ವ್ಯಾಪಾರ ಒಪ್ಪಂದಗಳನ್ನು ಕುದುರಿಸಿದೆ. ಅಮೆರಿಕ, ಯೂರೋಪ್ ಜೊತೆಗೂ ಟ್ರೇಡ್ ಡೀಲ್ ಮಾಡಿಕೊಳ್ಳಲು ಭಾರತ ಸತತವಾಗಿ ಮಾತುಕತೆಗಳನ್ನು ನಡೆಸುತ್ತಿದೆ.

ಇದನ್ನೂ ಓದಿ: ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್

ನ್ಯೂಜಿಲ್ಯಾಂಡ್​ಗೆ ಸಖತ್ ಡೀಲ್; ಭಾರತಕ್ಕೇನು ಲಾಭ?

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಅವರು ಜಂಟಿಯಾಗಿ ಈ ಟ್ರೇಡ್ ಡೀಲ್ ಅಂತಿಮಗೊಂಡಿರುವುದನ್ನು ಘೋಷಿಸಿದ್ದಾರೆ. ಇದಕ್ಕೂ ಮುನ್ನ ಇಬ್ಬರೂ ಕೂಡ ದೂರವಾಣಿ ಮೂಲಕ ಮಾತನಾಡಿದ್ದರು. ಲುಕ್ಸನ್ ಅವರು 2025ರ ಮಾರ್ಚ್​ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದಾಗ ಟ್ರೇಡ್ ಡೀಲ್ ಸಂಬಂಧ ಮಾತುಕತೆಗೆ ಚಾಲನೆ ಸಿಕ್ಕಿತ್ತು. ಕೆಲವೇ ತಿಂಗಳಲ್ಲಿ ಒಪ್ಪಂದ ಸಾಕಾರಗೊಂಡಿರುವುದು ಗಮನಾರ್ಹ ಸಂಗತಿ.

ನ್ಯೂಜಿಲ್ಯಾಂಡ್ ಪ್ರಧಾನಿ ಲುಕ್ಸನ್ ಅವರು ಎಕ್ಸ್​ನಲ್ಲಿ ಈ ಟ್ರೇಡ್ ಡೀಲ್ ಅಂತಿಮಗೊಂಡಿರುವ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಭಾರತಕ್ಕೆ ನ್ಯೂಜಿಲ್ಯಾಂಡ್​ನ ರಫ್ತು ವರ್ಷಕ್ಕೆ 1.1-1.3 ಬಿಲಿಯನ್ ಡಾಲರ್ ದಾಟುವ ನಿರೀಕ್ಷೆ ಇದೆ ಎಂದಿದ್ದಾರೆ.

ನ್ಯೂಜಿಲೆಂಡ್ ಪ್ರಧಾನಿಗಳ ಎಕ್ಸ್ ಪೋಸ್ಟ್

ಇದನ್ನೂ ಓದಿ: ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ

ಒಪ್ಪಂದದ ಪ್ರಕಾರ, ನ್ಯೂಜಿಲ್ಯಾಂಡ್​ನ ಶೇ. 95ರಷ್ಟು ಉತ್ಪನ್ನಗಳಿಗೆ ಭಾರತದ ಟ್ಯಾರಿಫ್ ನಿರ್ಮೂಲನೆ ಆಗಲಿದೆ ಅಥವಾ ತಗ್ಗಲಿದೆ ಎಂದು ಹೇಳಲಾಗಿದೆ. ಭಾರತದ ಬಹಳ ಡೊಡ್ಡ ಮಾರುಕಟ್ಟೆಯ ಪ್ರವೇಶವು ನ್ಯೂಜಿಲ್ಯಾಂಡ್​ಗೆ ಮುಕ್ತವಾಗಿ ಸಿಗುತ್ತದೆ. ಅಲ್ಲಿಯ ಹಣ್ಣು, ಕಬ್ಬಿಣ, ಉಕ್ಕು, ಮರ, ಕಲ್ಲಿದ್ದಲು, ಉಣ್ಣೆ, ಡೈರಿ ಉತ್ಪನ್ನಗಳು ಭಾರತಕ್ಕೆ ಹೆಚ್ಚಾಗಿ ರಫ್ತಾಗುವುದು.

ಭಾರತದಿಂದ ನ್ಯೂಜಿಲ್ಯಾಂಡ್​ಗೆ ಔಷಧೋತ್ಪನ್ನಗಳು, ಪೆಟ್ರೋಲಿಯಂ, ಕಾಟನ್ ಬಟ್ಟೆ, ಮೋಟಾರು ವಾಹನ, ರೆಡಿಮೇಡ್ ಬಟ್ಟೆ ಇತ್ಯಾದಿಗಳು ರಫ್ತಾಗುತ್ತವೆ. ನ್ಯೂಜಿಲ್ಯಾಂಡ್​ನಿಂದ ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ 20 ಬಿಲಿಯನ್ ಡಾಲರ್ ಹೂಡಿಕೆಯಾಗುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ! – Kannada News | Devanahalli affair: Woman Gang Attacks Lover over breakup in Doddaballapur, got arrested

ಅನೈತಿಕ ಸಂಬಂಧಕ್ಕೆ ಗುಡ್ ಬೈ ಹೇಳಿದ ಯುವಕನ ಮೇಲೆ ಮಹಿಳೆಯಿಂದಲೇ ಮಾರಣಾಂತಿಕ ಹಲ್ಲೆ!

ದೇವನಹಳ್ಳಿ, ಡಿಸೆಂಬರ್ 22: ಅನೈತಿಕ ಸಂಬಂಧ ಇಟ್ಟುಕೊಂಡು ಸಂಗಾತಿ ಕೈಲಿ ಸಿಕ್ಕಿಬಿದ್ದು ಒದೆ ತಿಂದಿರುವ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿವೆ. ಆದರೆ ಅನೈತಿಕ ಸಂಬಂಧ ಮುಂದುವರೆಸುವುದು ಬೇಡವೆಂದ ಯುವಕನ ಮೇಲೆ ಮಹಿಳೆಯೇ ಗ್ಯಾಂಗ್‌ ಕಟ್ಟಿಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಗ್ಯಾಂಗ್ ಕಟ್ಟಿ ದಾಳಿ ಮಾಡಿಸಿದ ಮಹಿಳೆ

ಕಾರ್ತಿಕ್ ಎಂಬ ಯುವಕ ದೀಪಾ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಮನೆಯವರ ಬುದ್ದಿವಾದದ ಬಳಿಕ ಆಕೆಯ ಸಹವಾಸವನ್ನೇ ಮಾಡಬಾರದೆಂದು ನಿರ್ಧಾರ ಮಾಡಿ, ಆಕೆಯ ಸಹವಾಸವನ್ನು ಸಂಪೂರ್ಣವಾಗಿ ತೊರೆದಿದ್ದ. ಇದರಿಂದ ಆಕ್ರೋಶಗೊಂಡ ದೀಪಾ, ಆತನ ಮೇಲೆ ಅಟ್ಯಾಕ್ ಮಾಡಿಸಲು ಮುಂದಾಗಿದ್ದಳು. ಡಿಸೆಂಬರ್ 13ರ ಮುಸ್ಸಂಜೆ, ಕಾರ್ತಿಕ್ ಅಂಗಡಿಯೊಂದರಲ್ಲಿದ್ದಾಗ ಕಾರಿನಲ್ಲಿ ಗ್ಯಾಂಗ್ ಕಟ್ಟಿಕೊಂಡು ಬಂದ ದೀಪಾ, ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿಸಿದ್ದಾಳೆ.

ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ ಪೊಲೀಸರು

ಘಟನೆ ವೇಳೆ ದೀಪಾ ಕಾರಿನಲ್ಲೇ ಕುಳಿತಿದ್ದರೆ, ಆಕೆಯೊಂದಿಗೆ ಬಂದಿದ್ದ ಆರೋಪಿಗಳು ಅಂಗಡಿಯ ಬಳಿ ಇದ್ದ ಕಾರ್ತಿಕ್ ಮೇಲೆ ಲಾಂಗ್‌ ಹಾಗೂ ಮಚ್ಚುಗಳಿಂದ ದಾಳಿ ನಡೆಸಿದ್ದರು. ಯುವಕನ ಅದೃಷ್ಟವೆಂಬಂತೆ ದಾಳಿಯ ವೇಳೆ ಸಾರ್ವಜನಿಕರು ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದರು. ಇದರಿಂದ ಭಯಗೊಂಡ ದೀಪಾ ಆ್ಯಂಡ್ ಗ್ಯಾಂಗ್, ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ಕುರಿತು ದೂರು ದಾಖಲಾಗುತ್ತಿದ್ದಂತೆ ದೊಡ್ಡಬೆಳವಂಗಲ ಪೊಲೀಸರು ತನಿಖೆ ಆರಂಭಿಸಿದ್ದು, ಇದೀಗ ಹಲ್ಲೆಗೆ ಸಂಚು ರೂಪಿಸಿ ಎಸ್ಕೇಪ್ ಆಗಿದ್ದ ದೀಪಾ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳ ಪಾತ್ರವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ – Kannada News | Unpaid for Half a Year, Contract Medical Officer Dr. Kuldeep MD Resigns in Kollamogaru

ಮಂಗಳೂರು, ಡಿಸೆಂಬರ್ 22: ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಎಂ.ಡಿ. ಅವರು ಕಳೆದ ಆರು ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಈ ನಿರ್ಧಾರ, ಸರ್ಕಾರವು ಗುತ್ತಿಗೆ ವೈದ್ಯಾಧಿಕಾರಿಗಳ ಸಂಬಳವನ್ನು ಬಾಕಿ ಉಳಿಸಿಕೊಂಡಿರುವ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದೆ. ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಕುಲದೀಪ್ ಅವರಿಗೆ ಆರು ತಿಂಗಳ ಕಾಲ ವೇತನ ಲಭಿಸದಿರುವುದು ವೈಯಕ್ತಿಕ ಜೀವನ ನಿರ್ವಹಣೆಗೆ ಅತೀವ ಕಷ್ಟಕರವಾಗಿ ಪರಿಣಮಿಸಿತ್ತು. ಒಂದು ಅಥವಾ ಎರಡು ತಿಂಗಳು ಸಂಬಳದಲ್ಲಿ ವ್ಯತ್ಯಾಸವಾದರೂ ಜೀವನ ನಡೆಸಲು ಕಷ್ಟವಾಗುವ ಈ ಪ್ರಸ್ಕತ ಕಾಲಘಟ್ಟದಲ್ಲಿ, ಸತತ ಆರು ತಿಂಗಳ ವೇತನವಿಲ್ಲದೆ ಅವರು ಮಾನಸಿಕವಾಗಿ ನೊಂದಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ಡಾ. ಕುಲದೀಪ್ ಅವರ ಪ್ರಕರಣ, ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ವೃತ್ತಿಪರರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಎತ್ತಿ ತೋರಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಳೆದ ವರ್ಷ ಒಗ್ಗಟ್ಟಿನ ಮಂತ್ರ ಪಠಿಸಿದ್ದ ಸುದೀಪ್ ಈ ಬಾರಿ ಏಕಾಏಕಿ ಸಿಟ್ಟಿಗೆದ್ದಿದ್ದು ಏಕೆ? – Kannada News | Kiccha Sudeep’s ‘Mark’ Movie Anger: Why the Sudden Shift from Unity

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ‘ಮಾರ್ಕ್’ ಸಿನಿಮಾ ಈವೆಂಟ್​​​ನಲ್ಲಿ ಭಾಗಿಯಾದರು. ಹುಬ್ಬಳಿಯ ಬೃಹತ್ ವೇದಿಕೆ ಮೇಲೆ ನಡೆದ ಕಾರ್ಯಕ್ರಮದಲ್ಲಿ ಕಿಚ್ಚನ ಮಾತಿಗಾಗಿ ಎಲ್ಲರೂ ಕಾದಿದ್ದರು. ಸಿನಿಮಾ ಬಗ್ಗೆ ಮಾತನಾವುದುರ ಜೊತೆ ಕಿಚ್ಚ ಅವರು ಆಡಿದ ಒಂದು ಮಾತು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಈಗಾಗಲೇ ಚಿತ್ರರಂಗದಲ್ಲಿ ಫ್ಯಾನ್ ವಾರ್ ಜೋರಾಗಿದೆ. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ್ದು ಎಂದು ಹೇಳಲಾಗುತ್ತಾ ಇದೆ. ವಿಜಯಲಕ್ಷ್ಮೀ ಕೂಡ ಕೌಂಟರ್ ಕೊಟ್ಟಿದ್ದಾರೆ. ಹೇಳಿಕೆ ಹಾಗೂ ಪ್ರತಿ ಹೇಳಿಕೆಗಳು ಚರ್ಚೆಯನ್ನು ಹುಟ್ಟುಹಾಕಿವೆ.

ಒಗ್ಗಟ್ಟಿನ ಮಂತ್ರ ಪಟಿಸಿದ್ದ ಸುದೀಪ್

ಕಳೆದ ವರ್ಷ ‘ಮ್ಯಾಕ್ಸ್’ ರಿಲೀಸ್ ಆಗುವ ಸಂದರ್ಭದಲ್ಲಿ ದರ್ಶನ್​ ಬಗ್ಗೆ ಸುದೀಪ್​ಗೆ ಪ್ರಶ್ನೆ ಮಾಡಲಾಯಿತು. ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಕೂಲ್ ಆಗೇ ಉತ್ತರಿಸಿದ್ದರು. ‘ನನ್ನ ಮತ್ತು ದರ್ಶನ್​ ನಡುವೆ ಯಾವುದೇ ಸಮಸ್ಯೆ ಇಲ್ಲ. ದರ್ಶನ್​ ಕಷ್ಟಪಟ್ಟು ಮೇಲೆ ಬಂದಿದ್ದಾರೆ’ ಎಂದಿದ್ದರು ಕಿಚ್ಚ. ಅಲ್ಲದೆ, ‘ಯಶ್, ದರ್ಶನ್, ಉಪ್ಪಿ ಸರ್, ಶಿವಣ್ಣ ಎಲ್ಲಾ ಸೇರಿದ್ರೆನೆ ಕನ್ನಡ ಚಿತ್ರರಂಗ’ ಎಂದು ಒಗ್ಗಟ್ಟಿನ ಮಾತು ಆಡಿದ್ದರು.

ಈ ಬಾರಿ ಹೇಳಿದ್ದು ಏನು?

ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಪ್ರೀ ರಿಲೀಸ್​ ಈವೆಂಟ್​​ ಅಲ್ಲಿ ಸಾವಿರಾರು ಜನರು ಸೇರಿದ್ದರು. ಈ ವೇಳೆ ಕಿಚ್ಚ ಅವರು ರೊಚ್ಚಿಗೆದ್ದು ಮಾತನಾಡಿದರು. ‘ಜುಲೈ 5ರಂದು ಒಂದು ಪ್ರಾಮಿಸ್ ಮಾಡಿದ್ದೆ. ಅಂತೆಯೇ ಡಿಸೆಂಬರ್ 25ನೇ ತಾರೀಕಿಗೆ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ಆದರೆ ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿ ಆಗುತ್ತಾ ಇದೆ. ಈ ವೇದಿಕೆ ಮೇಲಿಂದ ಹೇಳ್ತಾ ಇದ್ದೇನೆ. ಯುದ್ಧಕ್ಕೆ ಸಿದ್ಧ, ಏಕೆಂದರೆ ನಾವು ನಮ್ಮ ಮಾತಿಗೆ ಬದ್ಧ’ ಎಂದಿದ್ದರು ಸುದೀಪ್.

ಇದನ್ನೂ ಓದಿ: ನಾನು ಬಾಯಿ ಮುಚ್ಕೊಂಡು ಇದ್ದೆ, ಯಾಕಂದ್ರೆ; ಹುಬ್ಬಳಿಯಿಂದ ಇಡೀ ರಾಜ್ಯಕ್ಕೆ ಸುದೀಪ್ ಖಡಕ್ ಸಂದೇಶ

ಕಾರಣ ಏನಿರಬಹುದು?

ಸುದೀಪ್ ಈ ರೀತಿ ಮಾತನಾಡಲು ಕಾರಣ ಏನಿರಬಹುದು ಎಂಬ ಚರ್ಚೆ ಶುರುವಾಗಿದೆ. 2019ರಲ್ಲಿ ‘ಪೈಲ್ವಾನ್’ ಸಿನಿಮಾ ರಿಲೀಸ್ ಆದ ಬಳಿಕ ಕೆಲವರು ಇದನ್ನು ಪೈರಸಿ ಮಾಡಿದ್ದರು. ಈ ಪೈರಸಿಯಿಂದ ಸಿನಿಮಾಗೆ ಸಾಕಷ್ಟು ತೊಂದರೆ ಆಯಿತು. ದೂರು ನೀಡಿ ಕೆಲವರನ್ನು ಅರೆಸ್ಟ್ ಕೂಡ ಮಾಡಿಸಲಾಯಿತು. ಈ ಬಾರಿಯೂ ಸುದೀಪ್​​ಗೆ ಈ ರೀತಿಯ ಸೂಚನೆ ಏನಾದರೂ ಸಿಕ್ಕಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕಾಗಿ ಸುದೀಪ್ ಆ ರೀತಿ ಹೇಳಿರಬಹದು ಎಂದು ಅರ್ಥೈಸಲಾಗುತ್ತಿದೆ. ಇದಕ್ಕೆ ಸುದೀಪ್ ಅವರೇ ಸ್ಪಷ್ಟನೆ ಕೊಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು – Kannada News | Hyderabad Woman Dies After Falling From Apartment During Family Confrontation

ಹೈದರಾಬಾದ್, ಡಿಸೆಂಬರ್ 22: ಅಪ್ಪ(Father)ನಿಂದ ತಪ್ಪಿಸಿಕೊಳ್ಳಲು ಹೋಗಿ ಯುವತಿ ಬಾಲ್ಕನಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೆಳೆಯನ ಜತೆ ತನ್ನ ಫ್ಲಾಟ್​ನಲ್ಲಿ ಯುವತಿ ಇದ್ದಳು. ಏಕಾಏಕಿ ತಂದೆ ಫ್ಲಾಟ್​ಗೆ ಬಂದಿದ್ದರು. ಬಾಗಿಲು ತಟ್ಟಿದಾಗ ಇಬ್ಬರೂ ಗಾಬರಿಗೊಂಡರು. ಕೂಡಲೇ ಗೆಳೆಯನ ಜತೆ ಪರಾರಿಯಾಗಲು ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ.

ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಆ ಫ್ಲ್ಯಾಟ್​ನಲ್ಲಿ ಯಾರೂ ಇಲ್ಲದ ಕಾರಣ ಸಕೀನಾ ಅಪ್ಪನ ಬಳಿ ಇದ್ದ ಕೀ ತೆಗೆದುಕೊಂಡು ತನ್ನ ಗೆಳೆಯನ ಜತೆ ಫ್ಲ್ಯಾಟ್​ಗೆ ಬಂದಿದ್ದರು. ಆದರೆ, ಅವರು ಒಳಗೆ ಇದ್ದಾಗ ಆಕೆಯ ತಂದೆ ಫ್ಲಾಟ್‌ಗೆ ಬಂದಿದ್ದರು.ಫ್ಲಾಟ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ತಂದೆ ಒಳಗೆ ಹೋಗಲು ಪ್ರಯತ್ನಿಸಿದರು. ಬಾಗಿಲಲ್ಲಿ ಯಾರಿದ್ದಾರೆಂದು ಅರಿತ ಯುವತಿ ಮತ್ತು ಆಕೆಯ ಗೆಳೆಯ ಭಯಭೀತರಾದರು.

ಮತ್ತಷ್ಟು ಓದಿ: Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಇಬ್ಬರೂ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಪ್ರಯತ್ನಿಸಿದರು. ಆಕೆಯ ಗೆಳೆಯ ಆಕೆಯ ಕೈ ಹಿಡಿದಿದ್ದ ಸಕೀನಾ ಏಳನೇ ಮಹಡಿಗೆ ಇಳಿಯಲು ಪ್ರಯತ್ನಿಸಿದರು. ದುರಂತವಶಾತ್, ಅವರು ಎತ್ತರದಿಂದ ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯ ನಂತರ, ಪೊಲೀಸರು ಸಕೀನಾ ಗೆಳಯ ಅಲಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್​ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 21,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 21,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,100 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,528 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,400 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,146 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 219 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,528 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,400 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 219 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,400 ರೂ
  • ಚೆನ್ನೈ: 12,480 ರೂ
  • ಮುಂಬೈ: 12,400 ರೂ
  • ದೆಹಲಿ: 12,415 ರೂ
  • ಕೋಲ್ಕತಾ: 12,400 ರೂ
  • ಕೇರಳ: 12,400 ರೂ
  • ಅಹ್ಮದಾಬಾದ್: 12,405 ರೂ
  • ಜೈಪುರ್: 12,415 ರೂ
  • ಲಕ್ನೋ: 12,415 ರೂ
  • ಭುವನೇಶ್ವರ್: 12,400 ರೂ

ಇದನ್ನೂ ಓದಿ: ಬೆಂಗಳೂರಿನ ಐಫೋನ್ ಫ್ಯಾಕ್ಟರಿಯಲ್ಲಿ ಕ್ಷಿಪ್ರವೇಗದಲ್ಲಿ 30,000 ಉದ್ಯೋಗಿಗಳ ನೇಮಕ; ಭಾರತದಲ್ಲಿ ಸಿಕ್ಕಾಪಟ್ಟೆ ಆಗುತ್ತಿದೆ ಐಟಿ ಹೈರಿಂಗ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 557 ರಿಂಗಿಟ್ (12,241 ರುಪಾಯಿ)
  • ದುಬೈ: 484 ಡಿರಾಮ್ (11,813 ರುಪಾಯಿ)
  • ಅಮೆರಿಕ: 135 ಡಾಲರ್ (12,101 ರುಪಾಯಿ)
  • ಸಿಂಗಾಪುರ: 176.60 ಸಿಂಗಾಪುರ್ ಡಾಲರ್ (12,252 ರುಪಾಯಿ)
  • ಕತಾರ್: 482.50 ಕತಾರಿ ರಿಯಾಲ್ (11,866 ರೂ)
  • ಸೌದಿ ಅರೇಬಿಯಾ: 492 ಸೌದಿ ರಿಯಾಲ್ (11,759 ರುಪಾಯಿ)
  • ಓಮನ್: 51.35 ಒಮಾನಿ ರಿಯಾಲ್ (11,957 ರುಪಾಯಿ)
  • ಕುವೇತ್: 39.46 ಕುವೇತಿ ದಿನಾರ್ (11,519 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 219 ರೂ
  • ಚೆನ್ನೈ: 231 ರೂ
  • ಮುಂಬೈ: 219 ರೂ
  • ದೆಹಲಿ: 219 ರೂ
  • ಕೋಲ್ಕತಾ: 219 ರೂ
  • ಕೇರಳ: 231 ರೂ
  • ಅಹ್ಮದಾಬಾದ್: 219 ರೂ
  • ಜೈಪುರ್: 219 ರೂ
  • ಲಕ್ನೋ: 219 ರೂ
  • ಭುವನೇಶ್ವರ್: 231 ರೂ
  • ಪುಣೆ: 219

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version