ಸಂಸದ ಶಶಿ ತರೂರ್ ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ
ಕೇರಳ, ಏ.4: ಮಲಪ್ಪುರಂ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಬೆಂಗಾವಲು ವಾಹನವನ್ನು ತಡೆಹಿಡಿಯಲಾಗಿದೆ ಎಂದು ಆರೋಪಿಸಲಾಗಿದೆ. ಇದರ ಜತೆಗೆ ಅವರ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಎಕ್ಸ್ ಖಾತೆಯಲ್ಲಿ ವೈರಲ್ ಆಗಿದೆ. ಶಶಿ ತರೂರ್ ಅವರು ವಂಡೂರಿನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ತಿರುವಳ್ಳಿ ಚೆಲ್ಲಿತೋಡು ಸೇತುವೆ ಬಳಿ ಬೆಂಗಾವಲು ಪಡೆಯನ್ನು ತಡೆಹಿಡಿಯಲಾಯಿತು. ಭದ್ರತಾ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ವಂದೂರು ಪೊಲೀಸರು ಪ್ರಕರಣ…