U19 Asia Cup 2025: 41 ಬೌಂಡರಿ, 19 ಸಿಕ್ಸರ್‌, 471 ರನ್‌..! ಇತಿಹಾಸ ಸೃಷ್ಟಿಸಿದ ಪಾಕ್ ಬ್ಯಾಟ್ಸ್‌ಮನ್

Source link

ನೀವೇ ಎಂಎಲ್​​ಸಿ ಅಂತ ಗ್ಯಾರಂಟಿ ಏನು? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ – Kannada News | What proof Your MLC? toll plaza staff Stops BJP MLC keshav prasad Car One hour at Vijayapura

ವಿಜಯಪುರ, (ಡಿಸೆಂಬರ್ 21): ನೀವು ಎಂಎಲ್​​ಸಿ ಎನ್ನುವುದನ್ನು ಏನು ಗ್ಯಾರಂಟಿ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ (BJP MLC keshav prasad) ಅವರನ್ನು ಟೋಲ್ ಸಿಬ್ಬಂದಿ ಪ್ರಶ್ನಿಸಿದ್ದು, ಬರೋಬ್ಬರಿ 1 ಗಂಟೆಗಳ ಕಾಲ ತಡೆ ನಿಲ್ಲಿಸಿದ್ದಾನೆ. ವಿಜಯಪುರ (Vijayapura) ಹೊರವಲಯದಲ್ಲಿರುವ ಟೋಲ್ ನಲ್ಲಿ ಈ ಘಟನೆ ನಡೆದಿದೆ. ನಾಳೆ‌ ಕೆಡಿಪಿ ಸಭೆ ಹಿನ್ನೆಲೆಯಲ್ಲಿ ಕೇಶವಪ್ರಸಾದ್ ಅವರು ಇಂದು (ಡಿಸೆಂಬರ್ 21) ವಿಜಯಪುರಕ್ಕೆ ಹೊರಟ್ಟಿದ್ದರು. ಮಾರ್ಗಮಧ್ಯೆ ಟೋಲ್ ಸಿಬ್ಬಂದಿ ಕಾರು ಬಿಡದೇ ನಿಲ್ಲಿಸಿದ್ದಾನೆ. ನೀವು ಎಂಎಲ್​​ಸಿ ಎನ್ನುವುದಕ್ಕೆ ಏನು ಗ್ಯಾರಂಟಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದಾನೆ. ಇದನ್ನು ಕಾರು ಚಾಲಕ ವಿಡಿಯೋ ವಿಡಿಯೋ ಮಾಡಲು ಮುಂದಾಗಿದ್ದ ವೇಳೆ ಮೊಬೈಲ್ ಕಿತ್ತುಕೊಂಡಿದ್ದಾನೆ. ಇದರಿಂದ ಕೆಂಡಾಮಂಡಲರಾದ ಕೇಶವ ಪ್ರಸಾದ್ ಕೂಡಲೇ ವಿಜಯಪುರ ಎಸ್ಪಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಸಿಪಿಐ, ಡಿವೈಎಸ್​ಪಿ ದೌಡಾಯಿಸಿದ್ದಾರೆ. ಆಗ ಟೋಲ್ ಸಿಬ್ಬಂದಿ ಕೇಶವ ಪ್ರಸಾದ್ ಅವರ ಕಾರು ಬಿಟ್ಟಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Gold Rate Today Bangalore: ಚಿನ್ನದ ಬೆಲೆ 12,300 ರೂ; ಬೆಳ್ಳಿ ದಾಖಲೆ ಬೆಲೆ – Kannada News | Gold Price Today on 21st December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 21: ಬೆಳ್ಳಿ ಬೆಲೆ (Silver rate) ಮತ್ತೂ ಹೊಸ ದಾಖಲೆ ಬರೆದಿದೆ. ಭಾನುವಾರ ಇದರ ಬೆಲೆ 4 ರೂ ಏರಿ, ದಾಖಲೆಯ 214 ರೂ ಬೆಲೆ ಮುಟ್ಟಿದೆ. ತಮಿಳುನಾಡು, ಕೇರಳದಂತಹ ರಾಜ್ಯಗಳಲ್ಲಿ ಇದರ ಬೆಲೆ ಗ್ರಾಮ್​ಗೆ 226 ರೂ ಆಗಿಹೋಗಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 13 ರೂಗಳಷ್ಟು ಏರಿಕೆ ಕಂಡಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ ಕಂಡಿಲ್ಲದೆ ಶಾಂತವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,23,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,34,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 21,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,23,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 21,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 22,600 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಡಿಸೆಂಬರ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,064 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 214 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,418 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,300 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 214 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,300 ರೂ
  • ಚೆನ್ನೈ: 12,380 ರೂ
  • ಮುಂಬೈ: 12,300 ರೂ
  • ದೆಹಲಿ: 12,315 ರೂ
  • ಕೋಲ್ಕತಾ: 12,300 ರೂ
  • ಕೇರಳ: 12,300 ರೂ
  • ಅಹ್ಮದಾಬಾದ್: 12,305 ರೂ
  • ಜೈಪುರ್: 12,315 ರೂ
  • ಲಕ್ನೋ: 12,315 ರೂ
  • ಭುವನೇಶ್ವರ್: 12,300 ರೂ

ಇದನ್ನೂ ಓದಿ: 2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 556 ರಿಂಗಿಟ್ (12,216 ರುಪಾಯಿ)
  • ದುಬೈ: 482.75 ಡಿರಾಮ್ (11,774 ರುಪಾಯಿ)
  • ಅಮೆರಿಕ: 135.50 ಡಾಲರ್ (12,138 ರುಪಾಯಿ)
  • ಸಿಂಗಾಪುರ: 173.70 ಸಿಂಗಾಪುರ್ ಡಾಲರ್ (12,033 ರುಪಾಯಿ)
  • ಕತಾರ್: 483 ಕತಾರಿ ರಿಯಾಲ್ (11,871 ರೂ)
  • ಸೌದಿ ಅರೇಬಿಯಾ: 493 ಸೌದಿ ರಿಯಾಲ್ (11,774 ರುಪಾಯಿ)
  • ಓಮನ್: 51.40 ಒಮಾನಿ ರಿಯಾಲ್ (11,961 ರುಪಾಯಿ)
  • ಕುವೇತ್: 39.60 ಕುವೇತಿ ದಿನಾರ್ (11,546 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 214 ರೂ
  • ಚೆನ್ನೈ: 226 ರೂ
  • ಮುಂಬೈ: 214 ರೂ
  • ದೆಹಲಿ: 214 ರೂ
  • ಕೋಲ್ಕತಾ: 214 ರೂ
  • ಕೇರಳ: 226 ರೂ
  • ಅಹ್ಮದಾಬಾದ್: 214 ರೂ
  • ಜೈಪುರ್: 214 ರೂ
  • ಲಕ್ನೋ: 214 ರೂ
  • ಭುವನೇಶ್ವರ್: 226 ರೂ
  • ಪುಣೆ: 214

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ – Kannada News | Children Opposes father Second Marriage In 68 age at Hassan, complaint Lodge

ಹಾಸನ, (ಡಿಸೆಂಬರ್ 21): ಜಿಲ್ಲೆಯ ಹೊಳೆನರಸೀಪುರದಲ್ಲಿ ಪಟ್ಟಣದಲ್ಲಿ ವೃದ್ಧರ ಮದುವೆ ಸಂಘರ್ಷ ನಡೆದಿದ್ದು, ಇಳಿ ವಯಸ್ಸಿನಲ್ಲಿ ಮದುವೆಯಾದ ತಂದೆ ವಿರುದ್ಧ ಮಕ್ಕಳ ಆಕ್ರೋಶಗೊಂಡಿದ್ದಾರೆ. ಮೊದಲ ಪತ್ನಿ ಮೃತಪಟ್ಟಿದ್ದರಿಂದ 68 ವರ್ಷದ ರಾಜಣ್ಣ ಎನ್ನುವರು ಪತಿಯಿಂದ ದೂರವಾಗಿರುವ 58 ವರ್ಷದ ಗೀತಾ ಎನ್ನುವರನ್ನು ಎರಡನೇ ಮದುವೆಯಾಗಿದ್ದಾರೆ. ಆದ್ರೆ, ಇದೀಗ ಈ ವಯಸ್ಸಿಯನಲ್ಲೇ ತಂದೆ ಮದುವೆಯಾಗಿದ್ದಕ್ಕೆ ಮಕ್ಕಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಂದೆ ರಾಜಣ್ಣ ಅವರು ಮಕ್ಕಳ ವಿರುದ್ಧವೇ ದೂರು ನೀಡಿದ್ದಾರೆ. ಆಸ್ತಿಗಾಗಿ ಮಕ್ಕಳಿಂದಲೇ ಜೀವ ಬೆದರಿಕೆ ಇದೆ. ಇಬ್ಬರು ಹೆಣ್ಣುಮಕ್ಕಳು, ಓರ್ವ ಪುತ್ರನಿಗೆ ಮದುವೆ ಮಾಡಿ ಆಸ್ತಿ ನೀಡಿದ್ದೇನೆ. ನನ್ನ ಬಳಿ ಒಂದು ಮನೆಯಿದ್ದು ಅದನ್ನು ತಮಗೆ ನೀಡುವಂತೆ ನನ್ನ ಮಕ್ಕಳು ಹಲ್ಲೆ ನಡೆಸಿದ್ದಾರೆ. ನನ್ನ ಕಷ್ಟ-ಸುಖಕ್ಕೆ ನೆರವಾಗಲಿ ಎಂದು ಎರಡನೇ ವಿವಾಹ ಆಗಿದ್ದೇನೆ. ಸೂಕ್ತ ರಕ್ಷಣೆ ನೀಡುವಂತೆ ರಾಜಣ್ಣ-ಗೀತಾ ದಂಪತಿ ಮನವಿ ಪೊಲೀಸರಿಗೆ ಮನವಿ ಮಾಡಿದ್ದಾರೆ.

Source link

Chanakya Niti: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ಈ ವಿಚಾರಗಳನ್ನು ಅನುಸರಿಸಿ – Kannada News | Chanakya Niti: Follow these tips to avoid financial shortage in life

ಆದಾಯ ಕಡಿಮೆ ಇದ್ದರೂ ಪರವಾಗಿಲ್ಲ ಆದರೆ ಜೀವನದಲ್ಲಿ ಎಂದಿಗೂ ಆರ್ಥಿಕ ಸಂಕಷ್ಟ (financial difficulties) ಬರಬಾರದು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಂದು ಅಭ್ಯಾಸಗಳ ಕಾರಣ ಹಣದ ಕೊರತೆ ಎದುರಾಗುತ್ತದೆ. ಹೌದು ಆದಾಯಕ್ಕಿಂತ ಖರ್ಚು ಹೆಚ್ಚಾದಾಗ, ದುಂದುವೆಚ್ಚ, ಕೆಟ್ಟವರ ಸಹವಾಸ ಇತ್ಯಾದಿ ಕಾರಣಗಳಿಂದ ಸಂಪಾದಿಸಿ ಹಣವೆಲ್ಲಾ ಖಾಲಿಯಾಗುತ್ತದೆ, ಆರ್ಥಿಕ ಸಂಕಷ್ಟ ಎದುರಾಗುತ್ತವೆ. ಹೀಗಿರುವಾಗ ಆದಾಯ ಕಡಿಮೆ ಇದ್ದರೂ ಹಣದ ಸಮಸ್ಯೆ ಕಾಣಿಸಿಕೊಳ್ಳಬಾರದು ಈ ಕೆಲವೊಂದು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಸಲಹೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಹಣದ ಕೊರತೆ ಕಾಣಿಸಿಕೊಳ್ಳಬಾರದೆಂದರೆ ಈ ಸಲಹೆಗಳನ್ನು ಪಾಲಿಸಿ:

ಹೂಡಿಕೆ ಮಾಡಿ: ನಿಮ್ಮಲ್ಲಿರುವ ಹಣ ಹೆಚ್ಚಾಗಬೇಕೆಂದರೆ, ಗಳಿಸಿದ ಹಣವನ್ನು ಒಂದೇ ಕಡೆ ಕೂಡಿಡುವುದಕ್ಕಿಂತ ಸರಿಯಾದ ಜಾಗದಲ್ಲಿ ಹೂಡಿಕೆ ಮಾಡುವುದನ್ನು ಕಲಿಯಬೇಕು ಎನ್ನುತ್ತಾರೆ ಚಾಣಕ್ಯ. ನೀವು ಸರಿಯಾದ ಸಲಹೆಯೊಂದಿಗೆ ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ, ಅದು ಹೆಚ್ಚಾಗುತ್ತದೆ. ಹೂಡಿಕೆ ಮಾಡುವುದು ತಿಳಿದಿದ್ದರೆ ಕಡಿಮೆ ಆದಾಯವಿದ್ದರೂ ಶ್ರೀಮಂತಿಕೆಯನ್ನು ಗಳಿಸಬಹುದು.

ಯೋಜನೆ ಅತ್ಯಗತ್ಯ: ನೀವು ಶ್ರೀಮಂತರಾಗಲು ಬಯಸಿದರೆ, ಹಣದ ಕೊರತೆ ಕಾಣಿಸಿಕೊಳ್ಳಬಾರದು ಎಂದಾದರೆ ಹಣದ ಬಗ್ಗೆ ಸೂಕ್ತ ಯೋಜನೆಗಳನ್ನು ರೂಪಿಸಿ. ಆ ಯೋಜನೆಯ ಪ್ರಕಾರ ಹಣವನ್ನು ಉಳಿಸಿ ಮತ್ತು ಖರ್ಚು ಮಾಡಿ. ಸಾಧ್ಯವಾದಷ್ಟು ವ್ಯರ್ಥ ಖರ್ಚು ಮಾಡುವುದನ್ನು ತಪ್ಪಿಸಿ. ಈ ರೀತಿಯಾಗಿ, ಭವಿಷ್ಯಕ್ಕಾಗಿ ಹಣವನ್ನು ಉಳಿಸುವ ವ್ಯಕ್ತಿಗೆ ಹಣದ ಸಮಸ್ಯೆ ಇರುವುದಿಲ್ಲ.

ಅನುಪಯುಕ್ತ ವಸ್ತುಗಳಿಗೆ ಖರ್ಚು ಮಾಡಬೇಡಿ: ನಿಮ್ಮ ಬಳಿ ಹಣವಿದ್ದರೆ, ಅದನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡಬೇಕು. ನೀವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅನುಪಯುಕ್ತ ವಸ್ತುಗಳಿಗೆ ಖರ್ಚು ಮಾಡಬಾರದು. ಆದ್ದರಿಂದ, ನಿಮ್ಮ ಹಣವನ್ನು ಬುದ್ಧಿವಂತಿಕೆಯಿಂದ ಖರ್ಚು ಮಾಡಿ. ಭವಿಷ್ಯಕ್ಕಾಗಿ ದೊಡ್ಡ ಭಾಗವನ್ನು ಹೂಡಿಕೆ ಮಾಡಿ.

ಸರಳ ಜೀವನ ನಡೆಸಿ: ಸರಳ ಜೀವನ ನಡೆಸುವವರು ತಮ್ಮ ಸಂಪತ್ತನ್ನು ಎಂದಿಗೂ ವ್ಯರ್ಥ ಮಾಡುವುದಿಲ್ಲ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ. ನೀವು ಅಗತ್ಯವಿರುವಷ್ಟು ಮಾತ್ರ ಖರ್ಚು ಮಾಡಲು ಕಲಿತರೆ, ನಿಮ್ಮ ಖಜಾನೆ ಎಂದಿಗೂ ಖಾಲಿಯಾಗುವುದಿಲ್ಲ. ನಿಮ್ಮ ಜೀವನ ಸರಳವಾದಷ್ಟೂ, ನಿಮ್ಮ ಅಗತ್ಯಗಳು ಕಡಿಮೆಯಾಗುತ್ತವೆ ಮತ್ತು ನಿಮ್ಮ ಸಂಪತ್ತು ವೃದ್ಧಿಯಾಗುತ್ತಲೇ ಇರುತ್ತದೆ.

ಇದನ್ನೂ ಓದಿ: ಚಾಣಕ್ಯರ ಪ್ರಕಾರ ಗುಣಗಳಿರುವ ಹೆಣ್ಣು ಮನೆಯ ನಿಜವಾದ ಶಕ್ತಿ

ಸಮಯವನ್ನು ಚೆನ್ನಾಗಿ ಬಳಸಿಕೊಳ್ಳಿ: ಚಾಣಕ್ಯ ನೀತಿಯ ಪ್ರಕಾರ, ಸಮಯಕ್ಕಿಂತ ದೊಡ್ಡ ಸಂಪತ್ತು ಇನ್ನೊಂದಿಲ್ಲ, ಆದ್ದರಿಂದ ನೀವು ಅದನ್ನು ಯಾವಾಗಲೂ ಬುದ್ಧಿವಂತಿಕೆಯಿಂದ ಬಳಸಬೇಕು. ನೀವು ಸಮಯವನ್ನು ಬುದ್ಧಿವಂತಿಕೆಯಿಂದ ಬಳಸಿದರೆ, ಹಣವು ಯಾವಾಗಲೂ ನಿಮ್ಮ ಕಡೆಗೆ ಸೆಳೆಯಲ್ಪಡುತ್ತದೆ. ಮತ್ತು ಸ್ವಲ್ಪ ಸಂಪಾದಿಸಿದರೂ  ನಿಮ್ಮ ಖಜಾನೆಯು ಎಂದಿಗೂ ಖಾಲಿಯಾಗುವುದಿಲ್ಲ ಎನ್ನುತ್ತಾರೆ ಚಾಣಕ್ಯ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ – Kannada News | Power Tussle In Karnataka Congress: AICC President Mallikarjun Kharge Passed message to Siddaramaiah And DK Shivakumar

ಕಲಬುರಗಿ, (ಡಿಸೆಂಬರ್ 21): ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಕುರ್ಚಿ ಕದನ ದಿನೇ ದಿನೇ ತಾರಕಕ್ಕೇರುತ್ತಿದೆ. ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕುರ್ಚಿ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ. ಹೈಕಮಾಂಡ್ ಹೇಳೋವರೆಗೂ ನಾನೇ ಸಿಎಂ ಅಂತ ಸಿದ್ದರಾಮಯ್ಯ (Siddaramaiah)  ಅಧಿವೇಶನದಲ್ಲೇ ಹೇಳಿಕೆ ಕೊಟ್ಟ ಬೆನ್ನಲ್ಲೇ ಸಿಎಂ ಆಪ್ತರ ಭೇಟಿಗೆ ಡಿಕೆಶಿ ಮುಂದಾಗಿದ್ದಾರೆ. ಈ ನಡುವೆ ಸ್ಥಳೀಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಸೂಕ್ಷ್ಮ ಸಂದೇಶ ಕೊಟ್ಟಿದ್ದಾರೆ. ಜೊತೆಗೆ ಇಲ್ಲಿನ ಸಮಸ್ಯೆಯನ್ನ ಇಲ್ಲೇ ಬಗೆಹರಿಸಿಕೊಳ್ಳುವಂತೆ ತಾಕೀತು ಮಾಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವದ ಗೊಂದಲ ವಿಚಾರದ ಬಗ್ಗೆಇಂದು (ಡಿಸೆಂಬರ್ 21) ಕಲಬುರಗಿಯಲ್ಲಿ ಮಾತನಾಡಿರುವ ಖರ್ಗೆ. ಗೊಂದಲವನ್ನ ಹೈಕಮಾಂಡ್‌ ಮಾಡಿಲ್ಲ. ಇಲ್ಲಿನ ನಾಯಕರು ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌ ಅಂತ ಹೇಳಿದ್ರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಯಾರೋ ಒಬ್ಬ ನಾಯಕನಿಂದ ಬೆಳಿದಿದ್ದಲ್ಲ. ಹೀಗಾಗಿ ಯಾರೊಬ್ಬರೂ ನನ್ನಿಂದ ಅಧಿಕಾರಕ್ಕೆ ಬಂತು, ನಾನೇ ಪಕ್ಷ ಕಟ್ಟಿದ್ದೇನೆಂದು ಹೇಳಬಾರದು. ಕಾಂಗ್ರೆಸ್ ಪಕ್ಷ ಕಾರ್ಯಕರ್ತರಿಂದ ಕಟ್ಟಿದ ಪಕ್ಷ. ಪಕ್ಷದ ಅಂದ ಮೇಲೆ ಎಲ್ಲರ ಪಾತ್ರವೂ ಇರುತ್ತೆ. ಕೆಲ ಕಾರ್ಯಕರ್ತರು ಕೂಡ ಒಬ್ಬರಿಂದಲೇ ಪಕ್ಷ ಇದೆ ಎನ್ನಬಾರದು ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ – Kannada News | 2026 T20 World Cup India Squad: IPL Team Breakdown, RCB, LSG, RR Players Miss Out

2026 ರ ಟಿ20 ವಿಶ್ವಕಪ್‌ಗಾಗಿ (T20 World Cup 2026) ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ ಈ ಟೂರ್ನಿಗೆ ಆಯ್ಕೆಯಾದ ಆಟಗಾರರಲ್ಲಿ ಆರ್‌ಸಿಬಿ (RCB) ಸೇರಿದಂತೆ ಮೂರು ಐಪಿಎಲ್ ತಂಡಗಳ ಆಟಗಾರರು ಆಯ್ಕೆಯಾಗದಿರುವುದು ಗಮನಿಸಬೇಕಾದ ಸಂಗತಿಯಾಗಿದೆ. ಇದರರ್ಥ 10 ಐಪಿಎಲ್ (IPL) ತಂಡಗಳಲ್ಲಿ, ಏಳು ತಂಡಗಳ ಆಟಗಾರರು ಮಾತ್ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಯಾವ ಐಪಿಎಲ್ ತಂಡಗಳ ಆಟಗಾರರಿಗೆ ಅವಕಾಶ ಸಿಕ್ಕಿಲ್ಲ?

ಆ ಮೂರು ತಂಡಗಳಲ್ಲಿ ಆರ್‌ಸಿಬಿ, ಲಕ್ನೋ ಸೂಪರ್​ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಿಂದ ಒಬ್ಬರು ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಈ ಮೂರು ತಂಡಗಳನ್ನು ಹೊರತುಪಡಿಸಿ ಉಳಿದ 7 ತಂಡಗಳಲ್ಲಿ ಒಬ್ಬರಾದರೂ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಯಾವ ತಂಡದಿಂದ ಹೆಚ್ಚಿನ ಆಟಗಾರರ ಆಯ್ಕೆ?

2026 ರ ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಟೀಂ ಇಂಡಿಯಾದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಪಾರುಪತ್ಯ ಮೇರೆದಿದ್ದಾರೆ. ಈ ತಂಡದಿಂದ ನಾಲ್ವರು ಆಟಗಾರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ತಿಲಕ್ ವರ್ಮಾ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ. ಅವರಲ್ಲಿ ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ರಿಂಕು ಸಿಂಗ್ ಸೇರಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಂದ ತಲಾ ಇಬ್ಬರು ಆಟಗಾರರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ನಿಂದ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಆಯ್ಕೆಯಾಗಿದ್ದರೆ, ಸಿಎಸ್‌ಕೆ ತಂಡದಿಂದ ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಆಯ್ಕೆಯಾಗಿದ್ದಾರೆ.

ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ 2026 ರ ಟಿ20 ವಿಶ್ವಕಪ್‌ನಲ್ಲಿ ಆಡಲು ಅವಕಾಶ ಪಡೆದಿದ್ದಾರೆ. ಇವರೆಲ್ಲರ ಹೊರತಾಗಿ, ಪಂಜಾಬ್ ಕಿಂಗ್ಸ್‌ ತಂಡದಿಂದ ಅರ್ಷದೀಪ್ ಸಿಂಗ್ ಮತ್ತು ಗುಜರಾತ್ ಟೈಟಾನ್ಸ್‌ ತಂಡದಿಂದ ವಾಷಿಂಗ್ಟನ್ ಸುಂದರ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಅಕ್ಷರ್ ಪಟೇಲ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:18 pm, Sun, 21 December 25

Source link

ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ – Kannada News | South Africa, gunmen kills several people near Johannesburg

ಜೋಹಾನ್ಸ್​ಬರ್ಗ್, ಡಿಸೆಂಬರ್ 21: ಜಗತ್ತಿನ ವಿವಿಧೆಡೆ ಭಯೋತ್ಪಾದನೆ ಮತ್ತು ಅಪರಾಧ ದಾಳಿಗಳು ಹೆಚ್ಚುತ್ತಲೇ ಇವೆ. ಆಸ್ಟ್ರೇಲಿಯಾದಲ್ಲಿ ಉಗ್ರರು ಸಾರ್ವಜನಿಕರ ಮೇಲೆ ಗುಂಡಿನ ದಾಳಿ ಎಸಗಿದ ಘಟನೆ ಮರೆಯಾಗುವ ಮುನ್ನವೇ ಸೌತ್ ಆಫ್ರಿಕಾದಲ್ಲಿ ಬಂದೂಕುದಾರಿಗಳಿಂದ ಭೀಕರ ದಾಳಿಯಾಗಿದೆ. ಜೋಹಾನ್ಸ್​ಬರ್ಗ್​ನ ಹೊರವಲಯದ ಚಿನ್ನದ ಗಣಿ ಸಮೀಪ ಇರುವ ಬೆಕ್ಕೆರ್ಸ್​ಡನ್ ಟೌನ್​ಶಿಪ್ ಬಳಿ ಆಗಂತುಕ ಬಂದೂಕುದಾರಿಗಳು ಸಾರ್ವಜನಿಕರ ಮೇಲೆ ದಾಳಿ (gunmen attack) ಎಸಗಿದ್ದಾರೆ. ಈ ಘಟನೆಯಲ್ಲಿ 9 ಮಂದಿ ಬಲಿಯಾಗಿದ್ದಾರೆ. ಹತ್ತು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಬೆಕ್ಕೆರ್ಸ್ಡಲ್ ಬಾರ್ ಮೇಲೆ ದಾಳಿಕೋರರು ನುಗ್ಗಿ ಸಿಕ್ಕಸಿಕ್ಕವರ ಮೇಲೆ ಗುಂಡಿನ ದಾಳಿ ಎಸಗಿದ್ದಾರೆ. ಸ್ಥಳೀಯ ಕಾಲಮಾನ ರಾತ್ರಿ 1 ಗಂಟೆಯಲ್ಲಿ ಈ ಘಟನೆ ನಡೆದಿದೆ. ಭಾರತೀಯ ಕಾಲಮಾನ ಬೆಳಗ್ಗೆ 4:30ರ ಸಮಯ ಆಗಿರಬಹುದು. ಈ ಗುಂಡಿನ ದಾಳಿಯಲ್ಲಿ ಬಲಿಯಾದ ಒಂಬತ್ತು ಮಂದಿಯಲ್ಲಿ ಮೂವರು ಬಾರ್​ನ ಒಳಗೆಯೇ ಅಸು ನೀಗಿದ್ಧಾರೆ. ಇನ್ನುಳಿದವರು ಹೊರಗೆ ತಪ್ಪಿಸಿಕೊಳ್ಳಲು ಹೋಗುವಾಗ ಗುಂಡೇಟು ತಿಂದು ಸತ್ತಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಹತ್ಯೆ; ಯೂನಸ್ ಸರ್ಕಾರದಿಂದ 7 ಜನರ ಬಂಧನ

ಬಾರ್ ಮೇಲೆ ದಾಳಿ ನಡೆಸಿದವರು ಎಷ್ಟು ಮಂದಿ ಇದ್ದರು ಎಂಬುದು ಗೊತ್ತಾಗಿಲ್ಲ. ಆದರೆ, ಹೆಚ್ಚಿನವರ ಬಳಿ ಪಿಸ್ತೂಲ್ ಗನ್​ಗಳಿದ್ದವು. ಒಬ್ಬನ ಬಳಿ ಎಕೆ-47 ರೈಫಲ್ ಕೂಡ ಇತ್ತು. ಇವರು ಬಾರ್​ಗೆ ನುಗ್ಗಿ, ವಿನಾಕಾರಣ ಕಂಡ ಕಂಡವರ ಮೇಲೆ ಗುಂಡಿನ ದಾಳಿ ಎಸಗಿರುವುದು ಗೊತ್ತಾಗಿದೆ.

ಈ ಆಗಂತುಕ ದಾಳಿಕೋರರು ತಮ್ಮ ಗುಂಡೇಟಿನಿಂದ ಸತ್ತಾದ ಜನರಿಂದ ಸೆಲ್ ಫೋನ್ ಇತ್ಯಾದಿ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾರೆ. ಈ ಕಾರಣಕ್ಕೆ, ದಾಳಿಕೋರರು ಕ್ರಿಮಿನಲ್​ಗಳಾಗಿದ್ದಿರಬಹುದು, ಇದು ಪೂರ್ಣ ಅಪರಾಧ ಕೃತ್ಯವಾಗಿದೆ ಎಂಬುದು ಪೊಲೀಸರ ಆರಂಭಿಕ ಸಂದೇಹವಾಗಿದೆ.

ಇದನ್ನೂ ಓದಿ: ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ

ಇದೇ ಡಿಸೆಂಬರ್ 6ರಂದು ಸೌತ್ ಆಫ್ರಿಕಾದ ಪ್ರಿಟೋರಿಯಾ ನಗರದ ಬಳಿಯೂ ಪಬ್​ವೊಂದರ ಮೇಲೆ ಕ್ರಿಮಿನಲ್​ಗಳು ದಾಳಿ ಎಸಗಿ ಹಲವರನ್ನು ಬಲಿಪಡೆದಿದ್ದರು. ಆವತ್ತಿನ ದಾಳಿಯಲ್ಲಿ ಮೂವರು ಮಕ್ಕಳೂ ಬಲಿಯಾಗಿದ್ದರು. ಅವರಲ್ಲಿ ಮೂರು ವರ್ಷದ ಮಗುವೂ ಸೇರಿದೆ. ವಲಸೆ ಕಾರ್ಮಿಕರ ಹಾಸ್ಟೆಲ್​ನೊಳಗೆ ಇದ್ದ ಪಬ್ ಮೇಲೆ ಆ ದಾಳಿಯಾಗಿತ್ತು.

ಆಫ್ರಿಕಾ ಖಂಡದಲ್ಲೇ ಹೆಚ್ಚು ಮುಂದುವರಿದ ದೇಶವಾಗಿರುವ ಸೌತ್ ಆಫ್ರಿಕಾದಲ್ಲಿ ಇತ್ತೀಚೆಗೆ ಅಪರಾಧ ಕೃತ್ಯಗಳು ಗಣನೀಯವಾಗಿ ಹೆಚ್ಚುತ್ತಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಶೆಡ್‌, ಶೀಟ್‌ ಮನೆಗಳು ನೆಲಸಮ: ಸಿಡಿದೆದ್ದ ಸ್ಥಳೀಯರು

ಬೆಂಗಳೂರು, (ಡಿಸೆಂಬರ್ 21) : ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಗೆ ಮೀಸಲಿಟ್ಟ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 150ಕ್ಕೂ ಅಧಿಕ ಶೆಡ್‌ ಹಾಗೂ ಶೀಟ್‌ ಮನೆಗಳನ್ನು ಶನಿವಾರ ತೆರವುಗೊಳಿಸಲಾಗಿದೆ.ಹೌದು.. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಕೋಗಿಲು 14.36 ಎಕರೆ ಜಮೀನಿನಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ಬಯೋ ಮೆಥನೈಸೇಶನ್ ಪ್ಲಾಂಟ್, ಅನಿಮಲ್ ರೆಂಡರಿಂಗ್, ಅನಿಮಲ್ ಇನ್ಸಿನರೇಷನ್, ಎಳನೀರು ಬುರುಡೆ ಸಂಸ್ಕರಣಾ ಮತ್ತು ಸ್ಯಾನಿಟರಿ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿತ್ತು. ಈ ಪ್ರದೇಶದಲ್ಲಿ ಸುಮಾರು 5 ಎಕರೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ತಾತ್ಕಾಲಿಕ 150 ಕ್ಕೂ ಹೆಚ್ಚು ಶೆಡ್, ಮನೆಗಳನ್ನು 9 ಟ್ರ್ಯಾಕ್ಟರ್, 9 ಜೆಸಿಬಿ ಯಂತ್ರ ಬಳಸಿ ನೆಲಸಮಗೊಳಿಸಲಾಗಿದೆ.

ಇದರಿಂದ ರೊಚ್ಚಿಗೆದ್ದ ಸ್ಥಳೀಯರು ಯಾವುದೇ ನೋಟಿಸ್ ನೀಡಿದ ಏಕಾಏಕಿ ಬಂದು ಮನೆ ಕೆಡವಿದ್ದಾರೆ ಎಂದು ಆಕ್ರೋಶಗೊಂಡಿದ್ದು, ಇಂದು (ಡಿಸೆಂಬರ್ 21) ಸಹಕಾರ ನಗರ ಬಳಿ ಇರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆ ಕಳೆದುಕೊಂಡ ನಿವಾಸಿಗಳಿಂದ ಸ್ಥಳೀಯ ಕೃಷ್ಣಬೈರೇಗೌಡ ಮನೆ ಬಳಿ ಜಮಾಯಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಣ ಮಾಡಲು ಪೊಲೀಸರ ಹರಸಾಹಸಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು – Kannada News | Foods to eat to relieve stress

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ ಪದ್ಧತಿಗಳು ನಮ್ಮನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸುತ್ತವೆ. ಈ ಒತ್ತಡದ ಕಾರಣದಿಂದ ಖುಷಿ ಖುಷಿಯಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ ಈ ಅತಿಯಾದ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು, ನೆಮ್ಮದಿಯ ಜೀವನ ನಡೆಸಲು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ಸೇವನೆ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಆ ಆಹಾರಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಒತ್ತಡದಿಂದ ಮುಕ್ತಿ ಪಡೆಯಲು ನೀವು ಸೇವನೆ ಮಾಡಬೇಕಾದ ಆಹಾರಗಳಿವು:

ಡಾರ್ಕ್ ಚಾಕೊಲೇಟ್: ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ದೇಹದಲ್ಲಿ ಸಂತೋಷದ ಹಾರ್ಮೋನುಗಳು ಬಿಡುಗಡೆಯಾಗುತ್ತವೆ. ಇದು ಮನಸ್ಥಿತಿಯನ್ನು ಸುಧಾರಿಸುತ್ತದೆ. ಇದರಲ್ಲಿ ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುವ ಉತ್ಕರ್ಷಣ ನಿರೋಧಕಗಳು ಸಹ ಇರುತ್ತವೆ. ಹೆಚ್ಚು ಡಾರ್ಕ್ ಚಾಕೊಲೇಟ್ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಹಾಗಾಗಿ ಇದನ್ನು ಮಿತವಾಗಿ ಸೇವಿಸಿ.

ಬಾಳೆಹಣ್ಣು: ಬಾಳೆಹಣ್ಣುಗಳು ಸುಲಭವಾಗಿ ಜೀರ್ಣವಾಗುವ ಹಣ್ಣು. ಅಲ್ಲದೆ ಅವು ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಟ್ರಿಪ್ಟೊಫಾನ್ ಅಂಶವನ್ನು ಒಳಗೊಂಡಿರುತ್ತವೆ, ಇದು ಮನಸ್ಸನ್ನು ಶಾಂತಗೊಳಿಸಲು, ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಒತ್ತಡದಿಂದ ಮುಕ್ತಿ ಪಡೆಯಲು ನೀವು ಬಾಳೆಹಣ್ಣನ್ನು ಸಹ ಸೇವನೆ ಮಾಡಬಹುದು.

ಬಾದಾಮಿ ಮತ್ತು ವಾಲ್ನಟ್ಸ್: ನಟ್ಸ್‌ಗಳು ಉತ್ತಮ ಪ್ರಮಾಣದ ಮೆಗ್ನೀಸಿಯಮ್ ಮತ್ತು ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಅವು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ವಾಲ್ನಟ್ಸ್ ಮಾನಸಿಕ ಆರೋಗ್ಯಕ್ಕೆ ವಿಶೇಷವಾಗಿ ಪ್ರಯೋಜನಕಾರಿ. ಹಾಗಾಗಿ ನೀವು ಪ್ರತಿನಿತ್ಯ ಬೆಳಗ್ಗೆ ಬಾದಾಮಿ, ವಾಲ್ನಟ್‌ ಸೇವನೆ ಮಾಡಿ.

ಬೆರ್ರಿ  ಹಣ್ಣು: ಬೆರ್ರಿ ಹಣ್ಣುಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಹಣ್ಣು. ಅವು ದೇಹವನ್ನು ಒತ್ತಡಗಳಿಂದ ರಕ್ಷಿಸುತ್ತವೆ, ಸಂತೋಷದ ಹಾರ್ಮೋನುಗಳನ್ನು ಸಹ ಬಿಡುಗಡೆ ಮಾಡುತ್ತವೆ. ಆದ್ದರಿಂದ ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡಿ.

ಇದನ್ನೂ ಓದಿ: ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಪ್ರತಿದಿನ ಬೆಳಗ್ಗೆ ನಾಲ್ಕು ಕೆಲಸಗಳನ್ನು ಮಾಡಿ

ಸಿಹಿ ಗೆಣಸು: ಸಿಹಿ ಗೆಣಸಿನಲ್ಲಿ ಗಮನಾರ್ಹ ಪ್ರಮಾಣದ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಇದ್ದು, ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಗ್ರೀನ್‌ ಟೀ: ಗ್ರೀನ್‌ ಟೀ ಎಲ್-ಥಿಯಾನೈನ್ ಎಂಬ ವಿಶಿಷ್ಟ ಸಂಯುಕ್ತವನ್ನು ಹೊಂದಿರುತ್ತದೆ. ಇದು ಮನಸ್ಸನ್ನು ವಿಶ್ರಾಂತಿಗೊಳಿಸಲು ಮತ್ತು ಒತ್ತಡದ ಪರಿಣಾಮಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಇದರಲ್ಲಿ ಕೆಫೀನ್ ಕೂಡ ಕಡಿಮೆ ಇದ್ದು, ಇದು ನಿಮಗೆ ಉತ್ತಮವಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version