ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: AQI Crosses 190, Heart disease can be caused by poor air quality

ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ!

ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality) ,ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ ಗಾಳಿ

ಇಂದೂ ಬೆಂಗಳೂರಿನಲ್ಲಿ PM2.5 ಪ್ರಮಾಣ 112ಕ್ಕೆ ತಲುಪಿದ್ದು, PM10 ಪ್ರಮಾಣ 155ಕ್ಕೆ ಇಳಿದಿದೆ. ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ ಮತ್ತು ಹದಗೆಟ್ಟ ಗಾಳಿಯೂ ಸೇರಿ ಅನಾರೊಗ್ಯ ಉಂಟುಮಾಡಬಹುದೆಂದು ತಜ್ಞರು ಹೇಳುತ್ತಾರೆ. ಕಳೆದ ನಾಲ್ಕು ವರ್ಷದಲ್ಲಿ ಈ ವರ್ಷವೇ ಬೆಂಗಳೂರಿನ ಹವೆ ಇಷ್ಟರ ಮಟ್ಟಿಗೆ ಹದಗೆಟ್ಟಿದೆ.

ಮುನ್ನೆಚ್ಚರಿಕೆ ವಹಿಸಲು ಸೂಚನೆ

ನಿನ್ನೆ ಬೆಳಗ್ಗೆ 7 ಗಂಟೆಯ ಹೊತ್ತಿಗೆ 200 ರಷ್ಟಿದ್ದ ಏರ್ ಕ್ವಾಲಿಟಿ ಸಧ್ಯಕ್ಕೆ 190ಕ್ಕಿಳಿದಿದೆ. ಈ ಎರಡು ದಿನಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಹೆಚ್ಚಿನ ಏರಿಳಿತವಾಗುತ್ತಿದ್ದು, ಪರಿಸ್ಥಿತಿ ಇನ್ನೂ ಹದಗೆಡುವ ಸಾಧ್ಯತೆ ಇದೆ. 150ಕ್ಕಿಂತ ಜಾಸ್ತಿ ಹದಗೆಟ್ಟ ಗಾಳಿಯ ಸೇವನೆಯಿಂದ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳು ಎದುರಾಗಲಿದ್ದು, ಮನೆಯಿಂದ ಹೊರ ಬೀಳುವಾಗ ಆದಷ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index):

  • ಬೆಂಗಳೂರು –196
  • ಮಂಗಳೂರು – 157
  • ಮೈಸೂರು – 112
  • ಬೆಳಗಾವಿ – 163
  • ಕಲಬುರ್ಗಿ – 137
  • ಶಿವಮೊಗ್ಗ – 84
  • ಬಳ್ಳಾರಿ – 196
  • ಹುಬ್ಬಳ್ಳಿ- 97
  • ಉಡುಪಿ – 124
  • ವಿಜಯಪುರ –96

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Ashes 2025: ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ – Kannada News | Australia vs England, 3rd Test: England need 126 runs

ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 371 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್​ಗಳು ಯಶಸ್ವಿಯಾದರು.

ಮೊದಲ ಇನಿಂಗ್ಸ್​ನಲ್ಲಿನ 85 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೊನೆಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡಕ್ಕೆ ಬರೋಬ್ಬರಿ 435 ರನ್​​ಗಳ ಗುರಿ ನೀಡಿದೆ.

ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 207 ರನ್​ಗಳಿಸಿದ್ದರು. ಇದೀಗ ಕೊನೆಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿರುವ ಇಂಗ್ಲೆಂಡ್ 1 ವಿಕೆಟ್ ಕಳೆದುಕೊಂಡು 102 ರನ್ ಪೇರಿಸಿದೆ. ಅಷ್ಟೇ ಅಲ್ಲದೆ ಭೋಜನಾ ವಿರಾಮದ ವೇಳೆಗೆ ಆಂಗ್ಲರು 7 ವಿಕೆಟ್ ಕಳೆದುಕೊಂಡು 309 ರನ್​ ಕಲೆಹಾಕಿದೆ.

ಸದ್ಯ ಕ್ರೀಸ್​ನಲ್ಲಿ ವಿಲ್ ಜಾಕ್ಸ್ ಹಾಗೂ ಬ್ರೈಡನ್ ಕಾರ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, ಇನ್ನು 126 ರನ್​ಗಳಿಸಿದರೆ ಪಂದ್ಯವನ್ನು ಗೆಲ್ಲಬಹುದು. ಅತ್ತ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 3 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ಈ ರಣರೋಚಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

 

Source link

ಇಂದು IND vs PAK ನಡುವೆ ಫೈನಲ್: ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ – Kannada News | India vs Pakistan U19 Asia Cup final Today

ಅಂಡರ್-19 ಏಷ್ಯಾಕಪ್​ ಏಕದಿನ ಟೂರ್ನಿಯ ಫೈನಲ್ ಪಂದ್ಯವು ಇಂದು ನಡೆಯಲಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಪಡೆಯನ್ನು ಟೀಮ್ ಇಂಡಿಯಾ 90 ರನ್​ಗಳಿಂದ ಬಗ್ಗು ಬಡಿದಿತ್ತು. ಹೀಗಾಗಿ ಈ ಮ್ಯಾಚ್​ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…

ಎಷ್ಟು ಗಂಟೆಗೆ ಮ್ಯಾಚ್ ಶುರು?

ಭಾರತ-ಪಾಕ್ ನಡುವಣ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಇನ್ನು 10 ಗಂಟೆಗೆ ಟಾಸ್ ಪ್ರಕ್ರಿಯೆ ಜರುಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸೋನಿ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು. ಸೋನಿ ಸ್ಪೋರ್ಟ್ಸ್ 1, ಸೋನಿ ಸ್ಪೋರ್ಟ್ಸ್ 3, ಸೋನಿ ಸ್ಪೋರ್ಟ್ಸ್ 4 ಚಾನೆಲ್​ಗಳಲ್ಲಿ ನೇರ ಪ್ರಸಾರ ಇರಲಿದ್ದು, ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಉಭಯ ತಂಡಗಳು:

ಭಾರತ U19 ತಂಡ: ಆಯುಷ್ ಮ್ಹಾತ್ರೆ (ನಾಯಕ), ವೈಭವ್ ಸೂರ್ಯವಂಶಿ, ಆರೋನ್ ಜಾರ್ಜ್, ವಿಹಾನ್ ಮಲ್ಹೋತ್ರಾ, ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂದು (ವಿಕೆಟ್ ಕೀಪರ್), ಕಾನಿಷ್ಕ್ ಚೌಹಾಣ್, ಹೆನಿಲ್ ಪಟೇಲ್, ಖಿಲನ್ ಪಟೇಲ್, ದೀಪೇಶ್ ದೇವೇಂದ್ರನ್, ಕಿಶನ್ ಕುಮಾರ್ ಸಿಂಗ್, ಉಧವ್ ಮೋಹನ್, ನಮನ್ ಪುಷ್ಪಾಕ್, ಹರ್ವಂಶ್ ಪಂಗಾಲಿಯ, ಯುವರಾಜ್ ಗೊಯಿಲ್.

ಇದನ್ನೂ ಓದಿ: ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!

ಪಾಕಿಸ್ತಾನ್ U19 ತಂಡ: ಸಮೀರ್ ಮಿನ್​ಹಾಸ್, ಹಮ್ಝ ಝಹೂರ್ (ವಿಕೆಟ್ ಕೀಪರ್), ಉಸ್ಮಾನ್ ಖಾನ್, ಅಹ್ಮದ್ ಹುಸೇನ್, ಫರ್ಹಾನ್ ಯೂಸಫ್ (ನಾಯಕ), ಹುಝೈಫಾ ಅಹ್ಸಾನ್, ದನಿಯಾಲ್ ಅಲಿ ಖಾನ್, ಮೊಹಮ್ಮದ್ ಶಯಾನ್, ಅಬ್ದುಲ್ ಸುಭಾನ್, ಮೊಹಮ್ಮದ್ ಸಯ್ಯಾಮ್, ಅಲಿ ರಾಝ, ಮೊಮಿನ್ ಕಮರ್, ಅಲಿ ಹಸ್ಸಾನ್ ಬಲಾಚ್.

Source link

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ – Kannada News | Seasonal Flu Alert in Karnataka: Children and Pregnant Women at Higher Risk; Health Department Issues Guidelines

ಬೆಂಗಳೂರು, ಡಿಸೆಂಬರ್​​ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್​​ ಸೇರಿದಂತೆ ಜನವರಿಯಿಂದ ಮಾರ್ಚ್​​ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್‌ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್‌ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್‌ಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಾದ್ಯಂತ ಇಂದಿನಿಂದ ಡಿ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಔಷಧಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಸೀಸನಲ್ ಫ್ಲೂ ಲಕ್ಷಣಗಳು

ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.

ಆರೋಗ್ಯ ಇಲಾಖೆ ಸೂಚನೆಗಳೇನು?

  • ಪ್ರತಿ ದಿನ ಕನಿಷ್ಟ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ (SARI) ಕೇಸ್​​ಗಳ ಪರೀಕ್ಷೆಗೆ ಸೂಚನೆ.
  • ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್​​ಗಳನ್ನು ಇರಿಸಿಕೊಳ್ಳುವುದು
  • ಪಿಪಿಇ ಕಿಟ್​​ಗಳು, ಎನ್95 ಮಾಸ್ಕ್, oseltamivir ಮಾತ್ರೆಗಳು ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ
  • ಇನ್ಫ್ಲೂಯೆನ್ಸ್ ಲಸಿಕೆ ಶೇಖರಣೆ
  • ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು, ಹೆಚ್ಚಿನ ಅಪಾಯವುಳ್ಳ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಸಲಹೆ
  • ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ
  • ವೆಂಟಿಲೇಟರ್​​ಗಳ ಸಿದ್ಧತೆಗೆ ಸಲಹೆ
  • ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್​​ಗೆ ಕರೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 7:19 am, Sun, 21 December 25

Source link

ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature: Extreme cold weather Karnataka, Orange alert for 7 districts, yellow alert for 15

ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (Weather Forecast) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಯಾವ ಜಿಲ್ಲೆಗಳಿಗೆ ಅಲರ್ಟ್​?

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಒಣ ಹವೆ

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಭಾರತದಲ್ಲೇ 500 ಕೋಟಿ ರೂ. ದಾಟಿದ ಧುರಂಧರ್ ಕಲೆಕ್ಷನ್: ಮುಂದಿನ ಟಾರ್ಗೆಟ್ ಏನು? – Kannada News | Dhurandhar box office collection update on Day 16 Total Collection in India

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಸಾಧಾರಣ ಓಪನಿಂಗ್ ಪಡೆದುಕೊಂಡ ಈ ಸಿನಿಮಾ, ನಂತರದಲ್ಲಿ ಭಾರಿ ಕಲೆಕ್ಷನ್ ಮಾಡಲು ಆರಂಭಿಸಿತು. ನೋಡನೋಡುತ್ತಿದ್ದಂತೆಯೇ ಭಾರತದ ಬಾಕ್ಸ್ ಆಫೀಸ್​​ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ (Dhurandhar Box Office Collection) 500 ಕೋಟಿ ರೂಪಾಯಿ ಮೀರಿದೆ. ಈಗಾಗಲೇ ಅನೇಕ ಸಿನಿಮಾಗಳ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ.

‘ಧುರಂಧರ್’ ಸಿನಿಮಾ ಬಿಡುಗಡೆ ಆಗಿ 17 ದಿನಗಳ ಕಳೆದಿವೆ. ಹಾಗಿದ್ದರೂ ಕೂಡ ಈ ಚಿತ್ರದ ನಾಗಾಲೋಟ ನಿಂತಿಲ್ಲ. ಪ್ರತಿ ದಿನ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತ ಮುಂದುವರಿದಿದೆ. ವೀಕೆಂಡ್ ಮಾತ್ರವಲ್ಲದೇ ಇನ್ನುಳಿದ ದಿನಗಳಲ್ಲಿ ಕೂಡ ಈ ಸಿನಿಮಾ ಪ್ರತಿ ದಿನ 20 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತಿರುವುದು ವಿಶೇಷ.

3ನೇ ಶನಿವಾರ, ಅಂದರೆ 16ನೇ ದಿನ ‘ಧುರಂಧರ್’ ಸಿನಿಮಾ ಅಂದಾಜು 33.5 ಕೋಟಿ ರೂಪಾಯಿ ಗಳಿಸಿದೆ. sacnilk ನೀಡಿರುವ ಆರಂಭಿಕ ವರದಿಗಳ ಪ್ರಕಾರ, 16 ದಿನಕ್ಕೆ ಭಾರತದಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್ 516 ಕೋಟಿ ರೂಪಾಯಿ ಮೀರಿದೆ. ಭಾನುವಾರ (ಡಿಸೆಂಬರ್ 21) ಕೂಡ ಈ ಸಿನಿಮಾಗೆ ಉತ್ತಮವಾಗಿ ಕಲೆಕ್ಷನ್ ಆಗುವ ಸಾಧ್ಯತೆ ದಟ್ಟವಾಗಿದೆ.

ಇಂದಿಗೂ ಹಲವು ಕಡೆಗಳಲ್ಲಿ ‘ಧುರಂಧರ್’ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಇನ್ನೂ ಹಲವು ದಿನಗಳ ಕಾಲ ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಕಲೆಕ್ಷನ್ ಆಗಲಿದೆ. ಆದ್ದರಿಂದ ಈ ಚಿತ್ರ ಅನಾಯಾಸವಾಗಿ 600 ಕೋಟಿ ರೂಪಾಯಿ ಗಳಿಕೆ ಮಾಡಲಿದೆ. ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ‘ಧುರಂದರ್’ ಅಬ್ಬರವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ: ಬ್ಯಾನ್ ಮಧ್ಯೆಯೂ ಕಳ್ಳ ಮಾರ್ಗದಲ್ಲಿ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ

‘ಗದರ್ 2’ (525 ಕೋಟಿ), ಪಠಾಣ್ (543 ಕೋಟಿ), ‘ಅನಿಮಲ್’ (553 ಕೋಟಿ) ಸಿನಿಮಾಗಳನ್ನು ಶೀಘ್ರದಲ್ಲೇ ‘ಧುರಂಧರ್’ ಚಿತ್ರ ಹಿಂದಿಕ್ಕಲಿದೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾಗಳಾದ ‘ಸ್ತ್ರೀ’ (598 ಕೋಟಿ), ‘ಛಾವ’ (601 ಕೋಟಿ) ಹಾಗೂ ‘ಜವಾನ್’ (640 ಕೋಟಿ) ದಾಖಲೆಯನ್ನು ಮುರಿಯುವ ಟಾರ್ಗೆಟ್ ಈಗ ‘ಧುರಂಧರ್’ ಸಿನಿಮಾದ ಮುಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Daily Devotional: ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ? – Kannada News | Daily Devotional:The Significance of Shanku Sthapana in Traditional Construction

ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ.

ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು: ಸ್ಪರ್ಶ ದೋಷ, ದೃಷ್ಟಿ ದೋಷ ಮತ್ತು ಶಲ್ಯಾ ದೋಷ (ಮೃತ್ಯು ದೋಷ). ಈ ದೋಷಗಳು ಭೂಮಿಯ ಹಿಂದಿನ ಉಪಯೋಗ ಅಥವಾ ಅಲ್ಲಿ ನೆಲೆಸಿರಬಹುದಾದ ಋಣಾತ್ಮಕ ಶಕ್ತಿಗಳಿಂದ ಉಂಟಾಗಬಹುದು. ಶಂಕುಸ್ಥಾಪನೆಯ ಸಮಯದಲ್ಲಿ, ಈಶಾನ್ಯ ದಿಕ್ಕಿನಲ್ಲಿ ಬಿಲ್ವ, ಅತ್ತಿ ಅಥವಾ ತುಳಸಿ ಗಿಡವನ್ನು ನೆಡುವುದು ಮತ್ತು ನವಗ್ರಹ ದೋಷ ನಿವಾರಣೆಗಾಗಿ ವಾಸ್ತು ಪೂಜೆ ಮಾಡುವುದು ವಾಡಿಕೆ. ಗಂಗಾಜಲ ಮತ್ತು ಪಂಚಗವ್ಯಗಳನ್ನು ಭೂಮಿಯ ಮೇಲೆ ಸಿಂಪಡಿಸುವುದರಿಂದ ಭೂಶುದ್ಧಿ ಆಗುತ್ತದೆ. ಈ ವಿಧಿಯು ನಿರ್ಮಾಣ ಕಾರ್ಯ ಸುಗಮವಾಗಿ ನಡೆಯಲು ಮತ್ತು ನಿವಾಸಿಗಳಿಗೆ ಸಮೃದ್ಧಿ ತರಲು ಸಹಾಯಕವಾಗಿದೆ ಎಂದು ಗುರೂಜಿ ಹೇಳಿದ್ದಾರೆ.

Source link

Horoscope Today 21 December: ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ.

ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು ರಾಶಿಯಲ್ಲಿ ಸಂಚರಿಸುತ್ತಿದ್ದು, ಜಗನ್ನಾಥ ತೀರ್ಥರ ಆರಾಧನೆ ಮತ್ತು ಚಂದ್ರ ದರ್ಶನಕ್ಕೆ ಸೂಕ್ತ ದಿನವಾಗಿದೆ. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸುವವರಿಗೆ ಶುಭ ಹಾರೈಸಿರುವ ಗುರೂಜಿ, ಇಂದು ಐದು ನಿಮಿಷಗಳ ಕಾಲ ಜಪ ಮಾಡುವುದರಿಂದ ವರ್ಷಪೂರ್ತಿ ಶಕ್ತಿ ಮತ್ತು ಸಕಾರಾತ್ಮಕ ಯೋಗ ಇರುತ್ತದೆ ಎಂದು ತಿಳಿಸಿದ್ದಾರೆ. ಮೇಷದಿಂದ ತುಲಾವರೆಗಿನ ರಾಶಿಗಳಿಗೆ ಈ ದಿನದ ಪ್ರಮುಖ ಪ್ರಭಾವಗಳನ್ನು ವಿವರಿಸಿದ್ದಾರೆ.

 

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ ಎಂದಾದಲ್ಲಿ ಆ ಬಗ್ಗೆ ಮಾಹಿತಿ ದೊರೆಯಲಿದೆ. ನೀರು ಮಾರಾಟದ ಮೂಲಕ ಆದಾಯವನ್ನು ಪಡೆಯುತ್ತಾ ಇರುವವರಿಗೆ ದೀರ್ಘಾವಧಿಗೆ- ದೊಡ್ಡ ಪ್ರಮಾಣದ ಆರ್ಡರ್ ದೊರೆಯುವಂಥ ಸಾಧ್ಯತೆ ಇದೆ. ಕನಿಷ್ಠ ಪ್ರಮಾಣದ ಹೂಡಿಕೆ ಜತೆಗೆ ಆರಂಭಿಸಿದ ವ್ಯವಹಾರವೊಂದು ಹೆಚ್ಚಿನ ಪ್ರಮಾಣದ ಲಾಭ ತಂದುಕೊಡಲಿದೆ. ನಿಮ್ಮ ಬಗ್ಗೆ ಹರಿದಾಡುವಂಥ ಗಾಸಿಪ್ ಗಳ ಕುರಿತು ತಲೆ ಕೆಡಿಸಿಕೊಳ್ಳಬೇಡಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಂತ ನಿಲವಿನಲ್ಲೇ ನಿಮ್ಮ ಅಭಿಪ್ರಾಯ ತಿಳಿಸಿಬಿಡಬೇಕು ಎಂದು ಪಟ್ಟು ಹಿಡಿಯುವಂಥವರ ಜತೆಗಿನ ವ್ಯವಹಾರ ಮುಂದುವರಿಸಲಿಕ್ಕೆ ಹೋಗಬೇಡಿ. ಬ್ಯಾಂಕ್ ಗೆ ಕಟ್ಟಲೇಬೇಕಾದ ಹಣವನ್ನು ಹೊಂದಿಸಲು ಹೆಚ್ಚು ಶ್ರಮ ಹಾಕಲಿದ್ದೀರಿ. ಇನ್ನು ನಿಮ್ಮಲ್ಲಿ ಕೆಲವರು ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು, ಸಾಲವನ್ನು ಚುಕ್ತಾ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ. ಭರತನಾಟ್ಯ ಕಲಾವಿದರಿಗೆ ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡುವುದಕ್ಕೆ ಅವಕಾಶ ದೊರೆಯಲಿದೆ. ಇಷ್ಟು ಕಾಲ ಯಾವುದು ನಿಮಗೆ ಹವ್ಯಾಸ ಆಗಿತ್ತೋ ಅದನ್ನೇ ಆದಾಯ ಮೂಲ ಆಗುವಂಥ ವೃತ್ತಿಯಾಗಿ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಬರಲಿದೆ. ಪಶು ಸಾಕಣೆ ಮಾಡುತ್ತಾ ಇರುವವರಿಗೆ ವ್ಯವಹಾರ ವಿಸ್ತಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ನಿಮ್ಮ ಸ್ನೇಹಿತರು ತಾವಾಗಿಯೇ ಬಂದು, ಇದಕ್ಕೆ ಅಗತ್ಯ ಇರುವ ಹಣಕಾಸಿನ ಹೂಡಿಕೆಯನ್ನು ತಾವು ಮಾಡುವುದಾಗಿ ಹೇಳಲಿದ್ದಾರೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಪರಿಚಿತರ ಅಗತ್ಯಗಳಿಗೆ ನೆರವು ನೀಡಲಿದ್ದೀರಿ. ಸೈಟು- ಮನೆ ಖರೀದಿ ಮಾಡಬೇಕು ಎಂದಿರುವವರು ತಮ್ಮ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೌಕಾಶಿ ಮಾಡಿ, ಈ ದಿನ ಕೆಲವು ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಬರೀ ಮಾತಿನಿಂದ ಆಗುವುದಿಲ್ಲ ಎಂಬಂಥ ಕಡೆಗಳಲ್ಲಿ ಕೆಲಸ- ಕಾರ್ಯಗಳನ್ನು ಪೂರ್ಣ ಮಾಡುವುದಕ್ಕೆ ಪ್ರಭಾವ ಬಳಕೆ ಮಾಡಲಿದ್ದೀರಿ. ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ಮಕ್ಕಳನ್ನು ಹಾಸ್ಟೆಲ್ ನಲ್ಲಿ ಬಿಟ್ಟು ಓದಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮ್ಮ ಹಳೇ ಚಿನ್ನದ ಆಭರಣಗಳ ವಿನಿಮಯಕ್ಕೆ ನಿರ್ಧಾರ ಕೈಗೊಳ್ಳುವ ಯೋಗ ಇದೆ. ಸ್ವಲ್ಪ ಪ್ರಮಾಣದಲ್ಲಿಯಾದರೂ ಸಾಲ ಮಾಡುವ ಸಾಧ್ಯತೆ ಇದೆ. ಅಥವಾ ಕೆಲವರು ಪಿಎಫ್, ಎಫ್.ಡಿ., ಇಂಥವುಗಳಿಂದ ಹಣ ತೆಗೆದುಕೊಳ್ಳಲು ಪ್ರಯತ್ನ ಮಾಡಲಿದ್ದೀರಿ. ಸ್ವಾದಿಷ್ಟವಾದ ಊಟ- ತಿಂಡಿ ಸವಿಯುವ ಯೋಗ ಇದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು ಖರೀದಿಸುವ ಸಾಧ್ಯತೆ ಇದೆ. ಚರ್ಮ- ಕೂದಲಿನ ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯ ನೀಡಬೇಕು. ತಲೆಹೊಟ್ಟಿನ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣ ಆಗಬಹುದು. ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳುವುದಕ್ಕೆ ಪ್ರಾಮುಖ್ಯ ನೀಡಿ. ಪಿತ್ರಾರ್ಜಿತ ಆಸ್ತಿ ಹಂಚಿಕೆ ಬಗ್ಗೆ ಈ ಹಿಂದೆ ಯಾವಾಗಲೋ ನಿಮಗೆ ಇಂಥದ್ದನ್ನು ನೀಡುತ್ತೇನೆ ಎಂದು ಹೇಳಿದ್ದಿದ್ದು, ಈಗ ತೀರ್ಮಾನ ಬದಲಾವಣೆ ಮಾಡಿಕೊಂಡಿರುವುದಾಗಿ ಹೇಳಲಿದ್ದಾರೆ. ಅಡ್ವರ್ಟೈಸ್ ಮೆಂಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಒತ್ತಡ ಇರಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಕುಟುಂಬಕ್ಕೆ ಅಗತ್ಯ ಇರುವ ವಸ್ತುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಸಮಯವನ್ನು ಇಡಲಿದ್ದೀರಿ. ನಿಮ್ಮಲ್ಲಿ ಕೆಲವರು ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳಲಿದ್ದು, ಹೋಟೆಲ್ ಬುಕ್ಕಿಂಗ್, ಕಾರು ಬುಕ್ಕಿಂಗ್ ಇಂಥವು ಮಾಡಿಕೊಳ್ಳುವುದಕ್ಕೆ ಸ್ನೇಹಿತರ ಸಹಾಯವನ್ನು ಕೇಳಲಿದ್ದೀರಿ. ಆದಾಯ ತೆರಿಗೆಗೆ ಸಂಬಂಧಿಸಿದ ವಿಷಯದ ಬಗ್ಗೆ ಚರ್ಚೆ ಮಾಡುವುದಕ್ಕೆ ಆ ಕ್ಷೇತ್ರದಲ್ಲಿ ಪರಿಣತ ಆದಂಥ ವ್ಯಕ್ತಿಗಳ ಜತೆಗೆ ಮಾತುಕತೆ ನಡೆಸಲಿದ್ದೀರಿ. ಮಾತು ಪ್ರಧಾನವಾದ ವೃತ್ತಿ- ಉದ್ಯೋಗದಲ್ಲಿ ಇರುವವರಿಗೆ ವಿಪರೀತ ಕೆಲಸಗಳು ಬರುತ್ತವೆ. ಪ್ರಮುಖ ಜವಾಬ್ದಾರಿಯೊಂದನ್ನು ಹೆಚ್ಚುವರಿಯಾಗಿ ವಹಿಸಿಕೊಳ್ಳಲು ಸೂಚನೆ ಕೂಡ ಬರಲಿದೆ. ಫ್ರೀಲ್ಯಾನ್ಸರ್ ಆಗಿ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದ್ದು, ಸ್ನೇಹಿತರ ಮೂಲಕ ಉದ್ಯೋಗದ ರೆಫರೆನ್ಸ್ ಸಹ ಬರಬಹುದು. ಅವಕಾಶಗಳನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂಬ ಕಡೆಗೆ ಲಕ್ಷ್ಯ ನೀಡಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸಂಗೀತ ಸಾಧನಗಳ ಕಲಿಕೆಯನ್ನು ಆರಂಭಿಸುವುದಕ್ಕೆ ಮನಸ್ಸು ಮಾಡಲಿದ್ದೀರಿ. ಫ್ಯಾಷನ್ ಡಿಸೈನಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ದೊರೆಯಲಿವೆ. ದೊಡ್ಡ ವೇದಿಕೆಯಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶನ ಮಾಡುವುದಕ್ಕೆ ಆಹ್ವಾನ ಬರಲಿದೆ. ಎಂಎಸ್ಎಂಇ ಕೈಗಾರಿಕೆ ಆರಂಭಿಸುವುದಕ್ಕೆ ಸಿದ್ಧತೆ- ಬಜೆಟ್ ಮಾಡಿಕೊಳ್ಳಲಿದ್ದೀರಿ. ಸಬ್ಸಿಡಿ ಸಹಿತವಾಗಿ ಸಾಲವನ್ನು ಪಡೆಯುವುದಕ್ಕೆ ಬ್ಯಾಂಕ್ ಗೆ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸುವ ಸಾಧ್ಯತೆ ಇದೆ. ಹೊಸ ಹೂಡಿಕೆ ಅವಕಾಶಗಳಿಗೆ ತಕ್ಷಣವೇ ಸ್ಪಂದಿಸಿದ್ದರಿಂದ ಆರಂಭದಲ್ಲಿಯೇ ಲಾಭದಲ್ಲಿ ಇರುವಂತೆ ಆಗಲಿದೆ. ಮಕ್ಕಳ ಶಿಕ್ಷಣಕ್ಕೆ ಸಹಾಯ ಆಗಲಿ ಎಂಬ ದೃಷ್ಟಿಕೋನದಿಂದ ಕೊಂಡಿದ್ದ ಷೇರುಗಳು, ಹೂಡಿಕೆ ಮಾಡಿಕೊಂಡು ಬಂದಿದ್ದ ಮ್ಯೂಚುವಲ್ ಫಂಡ್ ನಿಂದ ಹಣವನ್ನು ತೆಗೆದುಕೊಳ್ಳುವ ತೀರ್ಮಾನವನ್ನು ಮಾಡಲಿದ್ದೀರಿ. ಸ್ನೇಹಿತರ ವರ್ತನೆಯಿಂದ ಬೇಸರ ಆಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮಗೆ ಎಷ್ಟೇ ಆಪ್ತರೇ ಆದರೂ ಇತರರ ಹಣಕಾಸು ವ್ಯವಹಾರಗಳಿಗೆ ಮಧ್ಯಸ್ಥಿಕೆ ಮಾಡುವುದಕ್ಕೆ ನೀವು ಹೋಗಬೇಡಿ. ನೀವಾಗಿಯೇ ವಹಿಸಿಕೊಂಡ ಕೆಲವು ಜವಾಬ್ದಾರಿಗಳನ್ನು ಗಡುವಿನೊಳಗಾಗಿ ಮಾಡಿ ಮುಗಿಸುವುದಕ್ಕೆ ಹರಸಾಹಸ ಮಾಡಬೇಕಾಗುತ್ತದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ರಜಾ ಕೇಳಿಕೊಂಡು ಬಂದಲ್ಲಿ ಅವರ ಅಗತ್ಯಕ್ಕೆ ಸ್ಪಂದಿಸುವ ಕಡೆಗೆ ಗಮನವನ್ನು ನೀಡಿ. ವಿವಾಹ ವಯಸ್ಕರಾಗಿದ್ದು ಮದುವೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ಸೂಕ್ತ ಸಂಬಂಧ ದೊರೆಯುವ ಸಾಧ್ಯತೆ ಹೆಚ್ಚಿದೆ. ಮುಖ್ಯವಾಗಿ ಸಂಬಂಧಿಗಳ ಮೂಲಕ ಬರುವಂಥ ರೆಫರೆನ್ಸ್ ಗಂಭೀರವಾಗಿ ಪರಿಗಣಿಸಿ. ದೇವತಾ ಕಾರ್ಯಗಳ ಆಯೋಜನೆಗಾಗಿ ಓಡಾಟ ನಡೆಸಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿವೆ. ಆದಾಯದಲ್ಲಿ ಹೆಚ್ಚಳ ಆಗುವುದರಿಂದ ನಿಮ್ಮ ಆತ್ಮವಿಶ್ವಾಸವು ಹೆಚ್ಚಲಿದೆ. ಪ್ರಶ್ನಿಸದೆ ಯಾವುದೇ ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಡಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಯಾರ ಬಳಿಯೂ ಸಹಾಯ ಕೇಳಬಾರದು ಎಂದುಕೊಳ್ಳುತ್ತಾ ಇರುವವರಿಗೆ ಇತರರ ನೆರವು ಅನಿವಾರ್ಯ ಆಗಲಿದೆ. ಕೂಡಿಟ್ಟುಕೊಂಡಿದ್ದ ಉಳಿತಾಯದ ಹಣವನ್ನು ಹಿಂತೆಗೆದುಕೊಂಡು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವ ಆಲೋಚನೆ ಮೂಡಲಿದೆ. ಇನ್ನು ನಿಮ್ಮಲ್ಲಿ ಯಾರು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ, ಅಂಥವರಿಗೆ ಬಡ್ತಿ, ವೇತನ ಹೆಚ್ಚಳ ಆಗುವ ಯೋಗ ಇದೆ. ನಿವೃತ್ತ ಸರ್ಕಾರಿ ನೌಕರರಿಗೆ ಕನ್ಸಲ್ಟಂಟ್ ಆಗಿ ಕಾರ್ಯ ನಿರ್ವಹಿಸುವಂತೆ ಆಹ್ವಾನ ದೊರೆಯಲಿದೆ. ವಾಹನ ಚಾಲನೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆ ವಹಿಸಿ. ಅದರ ಜೊತೆಗೆ ಒನ್ ವೇ, ನೋ ಪಾರ್ಕಿಂಗ್ ಇಂಥವುಗಳನ್ನು ಗಮನಿಸಿಕೊಳ್ಳಿ. ಇಲ್ಲದಿದ್ದಲ್ಲಿ ಅಂಥವುಗಳಿಗೆ ದೊಡ್ಡ ಮೊತ್ತದ ದಂಡ ಪಾವತಿಸುವಂತೆ ಆಗಲಿದೆ. ಬಹಳ ವರ್ಷಗಳಿಂದ ಭೇಟಿ ಸಾಧ್ಯವೇ ಆಗಿರಲಿಲ್ಲ ಎಂಬಂಧ ಸ್ನೇಹಿತರ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯಲಿದ್ದೀರಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಬರಹಗಾರರಿಗೆ ಒತ್ತಡದ ಸನ್ನಿವೇಶ ಎದುರಾಗಲಿದೆ. ಗಡುವಿನ ಒಳಗಾಗಿ ಪೂರ್ಣಗೊಳಿಸಲು ಸಾಧ್ಯವಾಗದೆ ಕೆಲವು ಕೆಲಸದ ವಿಚಾರದಲ್ಲಿ ಮನಸ್ಸು ಕಹಿ ಆಗುವಂಥ ಬೆಳವಣಿಗೆ ಆಗಲಿದೆ. ಆಸಕ್ತಿಯಿಂದ ಕಟ್ಟಿದ್ದ ಸಂಸ್ಥೆ, ಪತ್ರಿಕೆ ಅಥವಾ ಯೂ ಟ್ಯೂಬ್ ಚಾನೆಲ್ ಅನ್ನು ಬೇರೆಯವರಿಗೆ ವಹಿಸಿಕೊಡಬೇಕು ಎಂಬ ಸನ್ನಿವೇಶ ಸೃಷ್ಟಿ ಆಗುತ್ತದೆ. ಸಿಹಿ ಪದಾರ್ಥಗಳ ಸೇವನೆಯನ್ನು ಈ ದಿನ ಕಡಿಮೆ ಮಾಡುವುದು ಒಳ್ಳೆಯದು. ಅದರಲ್ಲೂ ದೇಹದ ತೂಕ ಹೆಚ್ಚಾಗಿ, ಮಧುಮೇಹದಂಥ ಸಮಸ್ಯೆಯಿಂದ ಬಳಲುತ್ತಾ ಇರುವವರು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ. ಮನೆಗೆ ಟೀವಿ ಅಥವಾ ಹೋಮ್ ಥಿಯೇಟರ್ ಅಳವಡಿಕೆ ಅಥವಾ ಪ್ರೊಜೆಕ್ಟರ್ ಖರೀದಿ ಮಾಡುವುದಕ್ಕೆ ಸದಸ್ಯರ ಜತೆಗೆ ಮಾತುಕತೆ ನಡೆಸಲಿದ್ದೀರಿ. ಸ್ನೇಹಿತರಿಂದ ಸಾಲವನ್ನು ಪಡೆದುಕೊಂಡಿದ್ದಲ್ಲಿ ಅದನ್ನು ಮರುಪಾವತಿ ಮಾಡುವುದಕ್ಕೆ ಆದ್ಯತೆ ನೀಡಲಿದ್ದೀರಿ.

ಲೇಖನ- ಎನ್‌.ಕೆ.ಸ್ವಾತಿ

Source link

Exit mobile version