ಹೃದಯ ಸಂಬಂಧಿ ರೋಗಕ್ಕೂ ಆಹ್ವಾನ ನೀಡಬಹುದು ಬೆಂಗಳೂರಿನ ಏರ್ ಕ್ವಾಲಿಟಿ!
ಬೆಂಗಳೂರು, ಡಿಸೆಂಬರ್ 21:ರಾಜ್ಯದ ಹಲವೆಡೆ ಈಗಾಗಲೇ ಗಾಳಿಯ ಗುಣಮಟ್ಟ (Bengaluru Air Quality),ಹದಗೆಟ್ಟಿದೆ. ಬೆಂಗಳೂರಿನಲ್ಲಂತೂ ಏರ್ ಕ್ವಾಲಿಟಿ ಪಾತಾಳಕ್ಕಿಳಿದಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 190ಕ್ಕೆ ತಲುಪಿದೆ. ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವೂ ಹೆಚ್ಚಾಗಿದ್ದು, ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅನಾರೋಗ್ಯ ಉಂಟು ಮಾಡಬಹುದು ಬೆಂಗಳೂರಿನ ಗಾಳಿ
ಇಂದೂ ಬೆಂಗಳೂರಿನಲ್ಲಿ PM2.5 ಪ್ರಮಾಣ 112ಕ್ಕೆ ತಲುಪಿದ್ದು, PM10 ಪ್ರಮಾಣ 155ಕ್ಕೆ ಇಳಿದಿದೆ. ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ ಮತ್ತು ಹದಗೆಟ್ಟ ಗಾಳಿಯೂ ಸೇರಿ ಅನಾರೊಗ್ಯ ಉಂಟುಮಾಡಬಹುದೆಂದು ತಜ್ಞರು ಹೇಳುತ್ತಾರೆ. ಕಳೆದ ನಾಲ್ಕು ವರ್ಷದಲ್ಲಿ ಈ ವರ್ಷವೇ ಬೆಂಗಳೂರಿನ ಹವೆ ಇಷ್ಟರ ಮಟ್ಟಿಗೆ ಹದಗೆಟ್ಟಿದೆ.
ಮುನ್ನೆಚ್ಚರಿಕೆ ವಹಿಸಲು ಸೂಚನೆ
ನಿನ್ನೆ ಬೆಳಗ್ಗೆ 7 ಗಂಟೆಯ ಹೊತ್ತಿಗೆ 200 ರಷ್ಟಿದ್ದ ಏರ್ ಕ್ವಾಲಿಟಿ ಸಧ್ಯಕ್ಕೆ 190ಕ್ಕಿಳಿದಿದೆ. ಈ ಎರಡು ದಿನಗಳಲ್ಲಿ ಗಾಳಿಯ ಗುಣಮಟ್ಟದಲ್ಲಿ ಹೆಚ್ಚಿನ ಏರಿಳಿತವಾಗುತ್ತಿದ್ದು, ಪರಿಸ್ಥಿತಿ ಇನ್ನೂ ಹದಗೆಡುವ ಸಾಧ್ಯತೆ ಇದೆ. 150ಕ್ಕಿಂತ ಜಾಸ್ತಿ ಹದಗೆಟ್ಟ ಗಾಳಿಯ ಸೇವನೆಯಿಂದ ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಗಳು ಎದುರಾಗಲಿದ್ದು, ಮನೆಯಿಂದ ಹೊರ ಬೀಳುವಾಗ ಆದಷ್ಟು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index):
ಆ್ಯಶಸ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ರಣರೋಚಕ ಘಟ್ಟದತ್ತ ಸಾಗಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಪ್ರಥಮ ಇನಿಂಗ್ಸ್ನಲ್ಲಿ ಬರೋಬ್ಬರಿ 371 ರನ್ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವನ್ನು 286 ರನ್ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್ಗಳು ಯಶಸ್ವಿಯಾದರು.
ಮೊದಲ ಇನಿಂಗ್ಸ್ನಲ್ಲಿನ 85 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 349 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೊನೆಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡಕ್ಕೆ ಬರೋಬ್ಬರಿ 435 ರನ್ಗಳ ಗುರಿ ನೀಡಿದೆ.
ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 4ನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 207 ರನ್ಗಳಿಸಿದ್ದರು. ಇದೀಗ ಕೊನೆಯ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಿರುವ ಇಂಗ್ಲೆಂಡ್ 1 ವಿಕೆಟ್ ಕಳೆದುಕೊಂಡು 102 ರನ್ ಪೇರಿಸಿದೆ. ಅಷ್ಟೇ ಅಲ್ಲದೆ ಭೋಜನಾ ವಿರಾಮದ ವೇಳೆಗೆ ಆಂಗ್ಲರು 7 ವಿಕೆಟ್ ಕಳೆದುಕೊಂಡು 309 ರನ್ ಕಲೆಹಾಕಿದೆ.
ಸದ್ಯ ಕ್ರೀಸ್ನಲ್ಲಿ ವಿಲ್ ಜಾಕ್ಸ್ ಹಾಗೂ ಬ್ರೈಡನ್ ಕಾರ್ಸ್ ಬ್ಯಾಟಿಂಗ್ ಮುಂದುವರೆಸಿದ್ದು, ಇನ್ನು 126 ರನ್ಗಳಿಸಿದರೆ ಪಂದ್ಯವನ್ನು ಗೆಲ್ಲಬಹುದು. ಅತ್ತ ಆಸ್ಟ್ರೇಲಿಯಾ ತಂಡಕ್ಕೆ ಗೆಲ್ಲಲು 3 ವಿಕೆಟ್ಗಳ ಅವಶ್ಯಕತೆಯಿದೆ. ಹೀಗಾಗಿ ಈ ರಣರೋಚಕ ಪಂದ್ಯದಲ್ಲಿ ಗೆಲ್ಲೋರು ಯಾರು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
ಅಂಡರ್-19 ಏಷ್ಯಾಕಪ್ ಏಕದಿನ ಟೂರ್ನಿಯ ಫೈನಲ್ ಪಂದ್ಯವು ಇಂದು ನಡೆಯಲಿದೆ. ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ (India vs Pakistan) ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಲೀಗ್ ಹಂತದ ಪಂದ್ಯದಲ್ಲಿ ಪಾಕ್ ಪಡೆಯನ್ನು ಟೀಮ್ ಇಂಡಿಯಾ 90 ರನ್ಗಳಿಂದ ಬಗ್ಗು ಬಡಿದಿತ್ತು. ಹೀಗಾಗಿ ಈ ಮ್ಯಾಚ್ನಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ. ಇನ್ನು ಈ ಪಂದ್ಯದ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ…
ಎಷ್ಟು ಗಂಟೆಗೆ ಮ್ಯಾಚ್ ಶುರು?
ಭಾರತ-ಪಾಕ್ ನಡುವಣ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಇನ್ನು 10 ಗಂಟೆಗೆ ಟಾಸ್ ಪ್ರಕ್ರಿಯೆ ಜರುಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯವನ್ನು ಸೋನಿ ನೆಟ್ವರ್ಕ್ನ ಚಾನೆಲ್ಗಳಲ್ಲಿ ಲೈವ್ ವೀಕ್ಷಿಸಬಹುದು. ಸೋನಿ ಸ್ಪೋರ್ಟ್ಸ್ 1, ಸೋನಿ ಸ್ಪೋರ್ಟ್ಸ್ 3, ಸೋನಿ ಸ್ಪೋರ್ಟ್ಸ್ 4 ಚಾನೆಲ್ಗಳಲ್ಲಿ ನೇರ ಪ್ರಸಾರ ಇರಲಿದ್ದು, ಹಾಗೆಯೇ ಸೋನಿ ಲೈವ್ ಆ್ಯಪ್ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.
ಬೆಂಗಳೂರು, ಡಿಸೆಂಬರ್ 21: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಬದಲಾವಣೆ ಉಂಟಾಗುತ್ತಿದೆ. ಈ ಹವಾಮಾನ ಬದಲಾವಣೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಸದ್ಯ ಸೀಸನಲ್ ಫ್ಲೂ (seasonal flu) ಭೀತಿ ಶುರುವಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆಯಿಂದ (Karnataka Health Department) ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಡಿಸೆಂಬರ್ ಸೇರಿದಂತೆ ಜನವರಿಯಿಂದ ಮಾರ್ಚ್ ವರೆಗೆ ಸೀಸನಲ್ ಫ್ಲೂ ಹೆಚ್ಚಳ ಭೀತಿ ಹಿನ್ನಲೆ ಸೂಕ್ತ ಕ್ರಮಕೈಗೊಳ್ಳುವಂತೆ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಲ್ಯಾಬ್ಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ಗಳನ್ನು ಇರಿಸಿಕೊಳ್ಳುವುದು, ಫ್ಲೂ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್ಗೆ ಸೂಚಿಸಲಾಗಿದೆ.
ಇನ್ನು ಸೋಂಕಿತರ ಎಂಜಿಲಿನಿಂದ ಸೋಂಕು ಹರಡುತ್ತದೆ. ಮಕ್ಕಳು, ಹಿರಿಯರು, ಗರ್ಭಿಣಿಯರು, ಔಷಧಿಗಳ ಮೇಲೆ ಅವಲಂಬಿತರಾದವರಿಗೆ ಹೆಚ್ಚಿನ ಅಪಾಯವಿದೆ. ಸೀಸನಲ್ ಫ್ಲೂ ತಗುಲಿದರೆ ಆಸ್ಪತ್ರೆಗೆ ದಾಖಲಾಗುವ ಅಪಾಯವಿದೆ. ಹೀಗಾಗಿ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ಸೀಸನಲ್ ಫ್ಲೂ ಲಕ್ಷಣಗಳು
ಜ್ವರ, ಕೆಮ್ಮು, ಕೆಂಪು ಗುಳ್ಳೆ, ಹಸಿವು ಆಗದಿರುವುದು, ಮೈ-ಕೈ ನೋವು, ಶೀತ, ಒಣ ಕೆಮ್ಮು ಇದರ ಪ್ರಮುಖ ಗುಣಲಕ್ಷಣಗಳು. ಸೀಸನಲ್ ಫ್ಲೂ ಸಾಮಾನ್ಯವಾಗಿ ಒಂದು ವಾರಗಳ ಕಾಲ ಇರಬಹುದು ಅಥವಾ ಕೆಲವೊಮ್ಮೆ 3 ವಾರಗಳ ಕಾಲ ಇರಬಹುದು.
ಆರೋಗ್ಯ ಇಲಾಖೆ ಸೂಚನೆಗಳೇನು?
ಪ್ರತಿ ದಿನ ಕನಿಷ್ಟ 5ರಷ್ಟು ಐಎಲ್ಐ ಕೇಸ್, 100ರಷ್ಟು ಸಾರಿ (SARI) ಕೇಸ್ಗಳ ಪರೀಕ್ಷೆಗೆ ಸೂಚನೆ.
ಎಲ್ಲಾ ಪ್ರಯೋಗಾಲಯಗಳಲ್ಲಿ ಸೂಕ್ತ ಟೆಸ್ಟಿಂಗ್ ಕಿಟ್ಗಳನ್ನು ಇರಿಸಿಕೊಳ್ಳುವುದು
ಪಿಪಿಇ ಕಿಟ್ಗಳು, ಎನ್95 ಮಾಸ್ಕ್, oseltamivir ಮಾತ್ರೆಗಳು ಸೇರಿ ಅಗತ್ಯ ಔಷಧಗಳ ಶೇಖರಣೆಗೆ ಸೂಚನೆ
ಇನ್ಫ್ಲೂಯೆನ್ಸ್ ಲಸಿಕೆ ಶೇಖರಣೆ
ಹೆಲ್ತ್ ಕೇರ್ ವರ್ಕರ್ಸ್, ಗರ್ಭಿಣಿಯರು, ಹೆಚ್ಚಿನ ಅಪಾಯವುಳ್ಳ ರೋಗಿಗಳು ಸೂಕ್ತ ಲಸಿಕೆ ಪಡೆಯುವಂತೆ ಸಲಹೆ
ಕ್ಲಿನಿಕಲ್ ಮ್ಯಾನೇಜ್ಮೆಂಟ್ ಹಾಗೂ ಕ್ರಿಟಿಕಲ್ ಕೇರ್ ಸಿದ್ಧತೆ
ವೆಂಟಿಲೇಟರ್ಗಳ ಸಿದ್ಧತೆಗೆ ಸಲಹೆ
ಜಾಗೃತಿ ಮೂಡಿಸುವುದು ಮತ್ತು ಸರಿಯಾದ ಸಮಯದಲ್ಲಿ ಮಾನಿಟರಿಂಗ್ಗೆ ಕರೆ ನೀಡಲಾಗಿದೆ.
T20 World Cup 2026: ಟಿ20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ 7 ಆಟಗಾರರು ಕಾಣಿಸಿಕೊಂಡಿಲ್ಲ. ಅಂದರೆ 2024 ರಲ್ಲಿ ಟೀಮ್ ಇಂಡಿಯಾ ಪರ ಟಿ20 ವಿಶ್ವಕಪ್ ಆಡಿದ ಏಳು ಪ್ಲೇಯರ್ಸ್ ಈ ಬಾರಿ ತಂಡದಲ್ಲಿಲ್ಲ. ಹೀಗೆ ಭಾರತ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿರುವ ಆಟಗಾರರು ಯಾರೆಂದರೆ…
ಯಶಸ್ವಿ ಜೈಸ್ವಾಲ್: 2024 ಟಿ20 ವಿಶ್ವಕಪ್ ತಂಡದಲ್ಲಿ ಹೆಚ್ಚುವರಿ ಆರಂಭಿಕ ದಾಂಡಿಗನಾಗಿ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದರು. ಎರಡು ವರ್ಷಗಳ ಹಿಂದೆ 15 ಸದಸ್ಯರುಗಳ ಬಳಗದಲ್ಲಿದ್ದ ಜೈಸ್ವಾಲ್ ಮುಂಬರುವ ಟಿ20 ವಿಶ್ವಕಪ್ಗೆ ಆಯ್ಕೆಯಾಗಿಲ್ಲ.
ರಿಷಭ್ ಪಂತ್: ಕಳೆದ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ರಿಷಭ್ ಪಂತ್ ಅವರನ್ನು ಸಹ ಈ ಬಾರಿ ಕೈ ಬಿಡಲಾಗಿದೆ. ಅವರ ಬದಲಿಗೆ ಈ ಬಾರಿ ಭಾರತ ತಂಡದಲ್ಲಿ ವಿಕೆಟ್ ಕೀಪರ್ಗಳಾಗಿ ಆಯ್ಕೆಯಾಗಿರುವುದು ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್.
ಯುಜ್ವೇಂದ್ರ ಚಹಲ್: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡದಲ್ಲಿ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಇದೀಗ ಮುಂಬರುವ ಟಿ20 ವಿಶ್ವಕಪ್ಗೆ ಆಯ್ಕೆ ಮಾಡಲಾದ ತಂಡದಲ್ಲಿ ಚಹಲ್ಗೆ ಸ್ಥಾನ ನೀಡಲಾಗಿಲ್ಲ.
ಮೊಹಮ್ಮದ್ ಸಿರಾಜ್: 2024ರ ಟಿ20 ವಿಶ್ವಕಪ್ನಲ್ಲಿ ಜಸ್ಪ್ರೀತ್ ಬುಮ್ರಾ ಜೊತೆಗೂಡಿ ಮೊಹಮ್ಮದ್ ಸಿರಾಜ್ ಕೂಡ ದಾಳಿ ಸಂಘಟಿಸಿದ್ದರು. ಆದರೆ ಈ ಬಾರಿ ಟೀಮ್ ಇಂಡಿಯಾದ 15 ಸದಸ್ಯರುಗಳ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಿರಾಜ್ ವಿಫಲರಾಗಿದ್ದಾರೆ.
ರೋಹಿತ್ ಶರ್ಮಾ: ಟಿ20 ವಿಶ್ವಕಪ್ 2024 ರಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ಹಿಟ್ಮ್ಯಾನ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿತ್ತು. ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಹೀಗಾಗಿ ಈ ಬಾರಿಯ ಭಾರತ ತಂಡದಲ್ಲಿ ಅವರು ಕಾಣಿಸಿಕೊಂಡಿಲ್ಲ.
ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮತ್ತೋರ್ವ ಆಟಗಾರ ವಿರಾಟ್ ಕೊಹ್ಲಿ. 2024 ರ ಟಿ20 ವಿಶ್ವಕಪ್ ಫೈನಲ್ ಪಂದ್ಯದೊಂದಿಗೆ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ಹೀಗಾಗಿ ಅವರು ಸಹ ಪ್ರಸ್ತುತ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ.
ರವೀಂದ್ರ ಜಡೇಜಾ: ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಬಳಿಕ ಟಿ20 ವಿಶ್ವಕಪ್ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಮೂರನೇ ಆಟಗಾರ ರವೀಂದ್ರ ಜಡೇಜಾ. 2024 ರಲ್ಲಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಜಡ್ಡು ಸದ್ಯ ಟೆಸ್ಟ್ ಹಾಗೂ ಏಕದಿನ ತಂಡಗಳಲ್ಲಿ ಮಾತ್ರ ಮುಂದುವರೆದಿದ್ದಾರೆ. ಹೀಗಾಗಿ ಅವರು ಸಹ 2026ರ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿಲ್ಲ.
ರಾಜ್ಯದಲ್ಲಿ ಚಳಿಯೋ ಚಳಿ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
ಬೆಂಗಳೂರು, ಡಿಸೆಂಬರ್ 20: ರಾಜ್ಯದಲ್ಲಿ ತೀವ್ರ ಚಳಿಯಿಂದಾಗಿ (Weather Forecast) ಜನ ಜೀವನ ತತ್ತರಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿರುವ ಇಲಾಖೆ, ಮಂಡ್ಯ, ಮೈಸೂರು ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಯಾವ ಜಿಲ್ಲೆಗಳಿಗೆ ಅಲರ್ಟ್?
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಬೆಳಗಾವಿ ಜಿಲ್ಲೆಗಳಲ್ಲಿ ತೀವ್ರ ಚಳಿಗಾಳಿ ಬೀಸುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಎಲ್ಲೆಲ್ಲಿ ಒಣ ಹವೆ
ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮುಂದುವರೆದ ಚಳಿ
ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ.
ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾ ಇಷ್ಟು ದೊಡ್ಡ ಹಿಟ್ ಆಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಆರಂಭದಲ್ಲಿ ಸಾಧಾರಣ ಓಪನಿಂಗ್ ಪಡೆದುಕೊಂಡ ಈ ಸಿನಿಮಾ, ನಂತರದಲ್ಲಿ ಭಾರಿ ಕಲೆಕ್ಷನ್ ಮಾಡಲು ಆರಂಭಿಸಿತು. ನೋಡನೋಡುತ್ತಿದ್ದಂತೆಯೇ ಭಾರತದ ಬಾಕ್ಸ್ ಆಫೀಸ್ನಲ್ಲಿ ‘ಧುರಂಧರ್’ ಸಿನಿಮಾದ ಕಲೆಕ್ಷನ್ (Dhurandhar Box Office Collection) 500 ಕೋಟಿ ರೂಪಾಯಿ ಮೀರಿದೆ. ಈಗಾಗಲೇ ಅನೇಕ ಸಿನಿಮಾಗಳ ದಾಖಲೆಗಳನ್ನು ಈ ಚಿತ್ರ ಮುರಿದಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಈ ಸಿನಿಮಾದಿಂದ ಭರ್ಜರಿ ಗೆಲುವು ಸಿಕ್ಕಿದೆ.
‘ಧುರಂಧರ್’ ಸಿನಿಮಾ ಬಿಡುಗಡೆ ಆಗಿ 17 ದಿನಗಳ ಕಳೆದಿವೆ. ಹಾಗಿದ್ದರೂ ಕೂಡ ಈ ಚಿತ್ರದ ನಾಗಾಲೋಟ ನಿಂತಿಲ್ಲ. ಪ್ರತಿ ದಿನ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತ ಮುಂದುವರಿದಿದೆ. ವೀಕೆಂಡ್ ಮಾತ್ರವಲ್ಲದೇ ಇನ್ನುಳಿದ ದಿನಗಳಲ್ಲಿ ಕೂಡ ಈ ಸಿನಿಮಾ ಪ್ರತಿ ದಿನ 20 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುತ್ತಿರುವುದು ವಿಶೇಷ.
3ನೇ ಶನಿವಾರ, ಅಂದರೆ 16ನೇ ದಿನ ‘ಧುರಂಧರ್’ ಸಿನಿಮಾ ಅಂದಾಜು 33.5 ಕೋಟಿ ರೂಪಾಯಿ ಗಳಿಸಿದೆ. sacnilk ನೀಡಿರುವ ಆರಂಭಿಕ ವರದಿಗಳ ಪ್ರಕಾರ, 16 ದಿನಕ್ಕೆ ಭಾರತದಲ್ಲಿ ಈ ಸಿನಿಮಾದ ಒಟ್ಟು ಕಲೆಕ್ಷನ್ 516 ಕೋಟಿ ರೂಪಾಯಿ ಮೀರಿದೆ. ಭಾನುವಾರ (ಡಿಸೆಂಬರ್ 21) ಕೂಡ ಈ ಸಿನಿಮಾಗೆ ಉತ್ತಮವಾಗಿ ಕಲೆಕ್ಷನ್ ಆಗುವ ಸಾಧ್ಯತೆ ದಟ್ಟವಾಗಿದೆ.
ಇಂದಿಗೂ ಹಲವು ಕಡೆಗಳಲ್ಲಿ ‘ಧುರಂಧರ್’ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಇದರಿಂದಾಗಿ ಇನ್ನೂ ಹಲವು ದಿನಗಳ ಕಾಲ ಈ ಚಿತ್ರಕ್ಕೆ ಬಹುಕೋಟಿ ರೂಪಾಯಿ ಕಲೆಕ್ಷನ್ ಆಗಲಿದೆ. ಆದ್ದರಿಂದ ಈ ಚಿತ್ರ ಅನಾಯಾಸವಾಗಿ 600 ಕೋಟಿ ರೂಪಾಯಿ ಗಳಿಕೆ ಮಾಡಲಿದೆ. ಹೊಸ ಸಿನಿಮಾಗಳು ಬಿಡುಗಡೆ ಆದರೂ ಕೂಡ ‘ಧುರಂದರ್’ ಅಬ್ಬರವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ.
‘ಗದರ್ 2’ (525 ಕೋಟಿ), ಪಠಾಣ್ (543 ಕೋಟಿ), ‘ಅನಿಮಲ್’ (553 ಕೋಟಿ) ಸಿನಿಮಾಗಳನ್ನು ಶೀಘ್ರದಲ್ಲೇ ‘ಧುರಂಧರ್’ ಚಿತ್ರ ಹಿಂದಿಕ್ಕಲಿದೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾಗಳಾದ ‘ಸ್ತ್ರೀ’ (598 ಕೋಟಿ), ‘ಛಾವ’ (601 ಕೋಟಿ) ಹಾಗೂ ‘ಜವಾನ್’ (640 ಕೋಟಿ) ದಾಖಲೆಯನ್ನು ಮುರಿಯುವ ಟಾರ್ಗೆಟ್ ಈಗ ‘ಧುರಂಧರ್’ ಸಿನಿಮಾದ ಮುಂದಿದೆ.
ಬೆಂಗಳೂರು, ಡಿಸೆಂಬರ್ 21: ಮನೆ, ದೇವಾಲಯ ಅಥವಾ ಯಾವುದೇ ಕಟ್ಟಡ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ಶಂಕುಸ್ಥಾಪನೆ ಮಾಡುವುದು ಹಿಂದೂ ಸಂಪ್ರದಾಯದ ಒಂದು ಪ್ರಮುಖ ಭಾಗವಾಗಿದೆ. ಇದು ಕೇವಲ ಒಂದು ಪೂಜೆಗಿಂತ ಹೆಚ್ಚಾಗಿ, ಭೂಮಿಯನ್ನು ಶುದ್ಧೀಕರಿಸುವ ಮತ್ತು ನಿರ್ಮಾಣಕ್ಕೆ ಸದ್ಭಾವನೆಯನ್ನು ಆಹ್ವಾನಿಸುವ ಒಂದು ವಿಧಿಯಾಗಿದೆ. ಶಾಸ್ತ್ರೋಕ್ತವಾಗಿ ನಡೆಸುವ ಶಂಕುಸ್ಥಾಪನೆಯು ಆ ಜಾಗಕ್ಕೆ ನೂರು ವರ್ಷಗಳ ಕಾಲ ಬಲವನ್ನು ನೀಡುತ್ತದೆ ಎಂದು ನಂಬಲಾಗಿದೆ, ಇದರಿಂದಾಗಿ ಆಸ್ತಿಯು ವಂಶಪಾರಂಪರ್ಯವಾಗಿ ಸುಭದ್ರವಾಗಿ ಉಳಿಯುತ್ತದೆ.
ಶಂಕುಸ್ಥಾಪನೆಯ ಮುಖ್ಯ ಉದ್ದೇಶ ಭೂಮಿಯಲ್ಲಿರಬಹುದಾದ ಮೂರು ದೋಷಗಳನ್ನು ನಿವಾರಿಸುವುದು: ಸ್ಪರ್ಶ ದೋಷ, ದೃಷ್ಟಿ ದೋಷ ಮತ್ತು ಶಲ್ಯಾ ದೋಷ (ಮೃತ್ಯು ದೋಷ). ಈ ದೋಷಗಳು ಭೂಮಿಯ ಹಿಂದಿನ ಉಪಯೋಗ ಅಥವಾ ಅಲ್ಲಿ ನೆಲೆಸಿರಬಹುದಾದ ಋಣಾತ್ಮಕ ಶಕ್ತಿಗಳಿಂದ ಉಂಟಾಗಬಹುದು. ಶಂಕುಸ್ಥಾಪನೆಯ ಸಮಯದಲ್ಲಿ, ಈಶಾನ್ಯ ದಿಕ್ಕಿನಲ್ಲಿ ಬಿಲ್ವ, ಅತ್ತಿ ಅಥವಾ ತುಳಸಿ ಗಿಡವನ್ನು ನೆಡುವುದು ಮತ್ತು ನವಗ್ರಹ ದೋಷ ನಿವಾರಣೆಗಾಗಿ ವಾಸ್ತು ಪೂಜೆ ಮಾಡುವುದು ವಾಡಿಕೆ. ಗಂಗಾಜಲ ಮತ್ತು ಪಂಚಗವ್ಯಗಳನ್ನು ಭೂಮಿಯ ಮೇಲೆ ಸಿಂಪಡಿಸುವುದರಿಂದ ಭೂಶುದ್ಧಿ ಆಗುತ್ತದೆ. ಈ ವಿಧಿಯು ನಿರ್ಮಾಣ ಕಾರ್ಯ ಸುಗಮವಾಗಿ ನಡೆಯಲು ಮತ್ತು ನಿವಾಸಿಗಳಿಗೆ ಸಮೃದ್ಧಿ ತರಲು ಸಹಾಯಕವಾಗಿದೆ ಎಂದು ಗುರೂಜಿ ಹೇಳಿದ್ದಾರೆ.
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 21 ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯಮಾಸ, ಹೇಮಂತ ಋತು, ಶುಕ್ಲಪಕ್ಷ, ಪಾಡ್ಯ, ಪೂರ್ವಾಷಾಢ ನಕ್ಷತ್ರ, ವೃದ್ಧಿಯೋಗ ಮತ್ತು ಭವಕರಣ ಇರತಕ್ಕಂತ ಈ ದಿನದ ರಾಹುಕಾಲ 4:33 ರಿಂದ 5:59 ರ ವರೆಗೆ ಇರಲಿದೆ. ಶುಭಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 1:42 ರಿಂದ 3:07 ರವರೆಗೆ ಇರಲಿದೆ.
ಇಂದು ರವಿ ಮತ್ತು ಚಂದ್ರ ಇಬ್ಬರೂ ಧನುಸ್ಸು ರಾಶಿಯಲ್ಲಿ ಸಂಚರಿಸುತ್ತಿದ್ದು, ಜಗನ್ನಾಥ ತೀರ್ಥರ ಆರಾಧನೆ ಮತ್ತು ಚಂದ್ರ ದರ್ಶನಕ್ಕೆ ಸೂಕ್ತ ದಿನವಾಗಿದೆ. ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸುವವರಿಗೆ ಶುಭ ಹಾರೈಸಿರುವ ಗುರೂಜಿ, ಇಂದು ಐದು ನಿಮಿಷಗಳ ಕಾಲ ಜಪ ಮಾಡುವುದರಿಂದ ವರ್ಷಪೂರ್ತಿ ಶಕ್ತಿ ಮತ್ತು ಸಕಾರಾತ್ಮಕ ಯೋಗ ಇರುತ್ತದೆ ಎಂದು ತಿಳಿಸಿದ್ದಾರೆ. ಮೇಷದಿಂದ ತುಲಾವರೆಗಿನ ರಾಶಿಗಳಿಗೆ ಈ ದಿನದ ಪ್ರಮುಖ ಪ್ರಭಾವಗಳನ್ನು ವಿವರಿಸಿದ್ದಾರೆ.
ನಿಮ್ಮ ಸಮಯಪ್ರಜ್ಞೆ ನಿರ್ಧಾರಗಳಿಗೆ ಇತರರು ಅಚ್ಚರಿ ಪಡುತ್ತಾರೆ. ಯಾಕೆ ಬೇಕು- ಯಾಕೆ ಬೇಡ ಎಂಬ ಬಗ್ಗೆ ನಿಮಗಿರುವಂಥ ಸ್ಪಷ್ಟತೆ ಕಾರಣಕ್ಕೆ ಕಷ್ಟ ಎನಿಸಿದಂಥ ಕೆಲಸ -ಕಾರ್ಯಗಳು ಅಚ್ಚುಕಟ್ಟಾಗಿ ಆಗಲಿವೆ. ಈಚೆಗಷ್ಟೇ ನಿವೃತ್ತರಾಗಿದ್ದೀರಿ ಅಂತಾದಲ್ಲಿ ನಿಮಗೆ ಬರಬೇಕಾದ ಫೈನಲ್ ಸೆಟ್ಲ್ ಮೆಂಟ್ ಹಣಕಾಸಿನ ವ್ಯವಹಾರಗಳಿಗೆ ಓಡಾಟ ಇರುತ್ತದೆ. ಹೌಸಿಂಗ್ ಸೊಸೈಟಿಯಲ್ಲಿ ಸೈಟಿಗಾಗಿ ಈಗಾಗಲೇ ಹಣ ಕಟ್ಟಿಯಾಗಿದೆ, ವಿತರಣೆ ಮಾತ್ರ ಬಾಕಿ ಇದೆ ಎಂದಾದಲ್ಲಿ ಆ ಬಗ್ಗೆ ಮಾಹಿತಿ ದೊರೆಯಲಿದೆ. ನೀರು ಮಾರಾಟದ ಮೂಲಕ ಆದಾಯವನ್ನು ಪಡೆಯುತ್ತಾ ಇರುವವರಿಗೆ ದೀರ್ಘಾವಧಿಗೆ- ದೊಡ್ಡ ಪ್ರಮಾಣದ ಆರ್ಡರ್ ದೊರೆಯುವಂಥ ಸಾಧ್ಯತೆ ಇದೆ. ಕನಿಷ್ಠ ಪ್ರಮಾಣದ ಹೂಡಿಕೆ ಜತೆಗೆ ಆರಂಭಿಸಿದ ವ್ಯವಹಾರವೊಂದು ಹೆಚ್ಚಿನ ಪ್ರಮಾಣದ ಲಾಭ ತಂದುಕೊಡಲಿದೆ. ನಿಮ್ಮ ಬಗ್ಗೆ ಹರಿದಾಡುವಂಥ ಗಾಸಿಪ್ ಗಳ ಕುರಿತು ತಲೆ ಕೆಡಿಸಿಕೊಳ್ಳಬೇಡಿ.
ನಿಂತ ನಿಲವಿನಲ್ಲೇ ನಿಮ್ಮ ಅಭಿಪ್ರಾಯ ತಿಳಿಸಿಬಿಡಬೇಕು ಎಂದು ಪಟ್ಟು ಹಿಡಿಯುವಂಥವರ ಜತೆಗಿನ ವ್ಯವಹಾರ ಮುಂದುವರಿಸಲಿಕ್ಕೆ ಹೋಗಬೇಡಿ. ಬ್ಯಾಂಕ್ ಗೆ ಕಟ್ಟಲೇಬೇಕಾದ ಹಣವನ್ನು ಹೊಂದಿಸಲು ಹೆಚ್ಚು ಶ್ರಮ ಹಾಕಲಿದ್ದೀರಿ. ಇನ್ನು ನಿಮ್ಮಲ್ಲಿ ಕೆಲವರು ಉಳಿತಾಯ ಅಥವಾ ಹೂಡಿಕೆ ಹಣವನ್ನು ಹಿಂತೆಗೆದುಕೊಂಡು, ಸಾಲವನ್ನು ಚುಕ್ತಾ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ. ಭರತನಾಟ್ಯ ಕಲಾವಿದರಿಗೆ ಪ್ರತಿಷ್ಠಿತ ವೇದಿಕೆಯಲ್ಲಿ ಪ್ರದರ್ಶನ ನೀಡುವುದಕ್ಕೆ ಅವಕಾಶ ದೊರೆಯಲಿದೆ. ಇಷ್ಟು ಕಾಲ ಯಾವುದು ನಿಮಗೆ ಹವ್ಯಾಸ ಆಗಿತ್ತೋ ಅದನ್ನೇ ಆದಾಯ ಮೂಲ ಆಗುವಂಥ ವೃತ್ತಿಯಾಗಿ ಮಾಡಿಕೊಳ್ಳುವ ಬಗ್ಗೆ ಆಲೋಚನೆ ಬರಲಿದೆ. ಪಶು ಸಾಕಣೆ ಮಾಡುತ್ತಾ ಇರುವವರಿಗೆ ವ್ಯವಹಾರ ವಿಸ್ತಣೆಗೆ ಅವಕಾಶಗಳು ತೆರೆದುಕೊಳ್ಳಲಿವೆ. ನಿಮ್ಮ ಸ್ನೇಹಿತರು ತಾವಾಗಿಯೇ ಬಂದು, ಇದಕ್ಕೆ ಅಗತ್ಯ ಇರುವ ಹಣಕಾಸಿನ ಹೂಡಿಕೆಯನ್ನು ತಾವು ಮಾಡುವುದಾಗಿ ಹೇಳಲಿದ್ದಾರೆ.
ಪರಿಚಿತರ ಅಗತ್ಯಗಳಿಗೆ ನೆರವು ನೀಡಲಿದ್ದೀರಿ. ಸೈಟು- ಮನೆ ಖರೀದಿ ಮಾಡಬೇಕು ಎಂದಿರುವವರು ತಮ್ಮ ನಿರ್ಧಾರದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೌಕಾಶಿ ಮಾಡಿ, ಈ ದಿನ ಕೆಲವು ಸೆಕೆಂಡ್ ಹ್ಯಾಂಡ್ ವಸ್ತುಗಳನ್ನು ಖರೀದಿ ಮಾಡಲಿದ್ದೀರಿ. ಬರೀ ಮಾತಿನಿಂದ ಆಗುವುದಿಲ್ಲ ಎಂಬಂಥ ಕಡೆಗಳಲ್ಲಿ ಕೆಲಸ- ಕಾರ್ಯಗಳನ್ನು ಪೂರ್ಣ ಮಾಡುವುದಕ್ಕೆ ಪ್ರಭಾವ ಬಳಕೆ ಮಾಡಲಿದ್ದೀರಿ. ಮಕ್ಕಳ ಶಿಕ್ಷಣದ ಬಗ್ಗೆ ಚಿಂತೆ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ಮಕ್ಕಳನ್ನು ಹಾಸ್ಟೆಲ್ ನಲ್ಲಿ ಬಿಟ್ಟು ಓದಿಸುವ ಬಗ್ಗೆ ಆಲೋಚನೆ ಮಾಡಲಿದ್ದೀರಿ. ನಿಮ್ಮ ಹಳೇ ಚಿನ್ನದ ಆಭರಣಗಳ ವಿನಿಮಯಕ್ಕೆ ನಿರ್ಧಾರ ಕೈಗೊಳ್ಳುವ ಯೋಗ ಇದೆ. ಸ್ವಲ್ಪ ಪ್ರಮಾಣದಲ್ಲಿಯಾದರೂ ಸಾಲ ಮಾಡುವ ಸಾಧ್ಯತೆ ಇದೆ. ಅಥವಾ ಕೆಲವರು ಪಿಎಫ್, ಎಫ್.ಡಿ., ಇಂಥವುಗಳಿಂದ ಹಣ ತೆಗೆದುಕೊಳ್ಳಲು ಪ್ರಯತ್ನ ಮಾಡಲಿದ್ದೀರಿ. ಸ್ವಾದಿಷ್ಟವಾದ ಊಟ- ತಿಂಡಿ ಸವಿಯುವ ಯೋಗ ಇದೆ.
ಮೀನುಗಾರಿಕೆ- ಮೀನು ಸಾಕಣೆ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗಲಿದೆ. ದ್ವಿಚಕ್ರ ವಾಹನ ಖರೀದಿ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೀರಿ. ನೀವೇನಾದರೂ ವ್ಯಾಪಾರ- ವ್ಯವಹಾರ ಮಾಡುವಂಥವರಾದರೆ ಅದಕ್ಕೆ ಅಗತ್ಯ ಇರುವಂಥ ಟ್ರಕ್, ಲಾರಿ, ಲಗೇಜ್ ಆಟೋ ಇಂಥವುಗಳನ್ನು ಖರೀದಿಸುವ ಸಾಧ್ಯತೆ ಇದೆ. ಚರ್ಮ- ಕೂದಲಿನ ಆರೋಗ್ಯದ ಬಗ್ಗೆ ಹೆಚ್ಚು ಲಕ್ಷ್ಯ ನೀಡಬೇಕು. ತಲೆಹೊಟ್ಟಿನ ಸಮಸ್ಯೆ ಈಗಾಗಲೇ ಇದ್ದಲ್ಲಿ ಅದು ಉಲ್ಬಣ ಆಗಬಹುದು. ಸೂಕ್ತ ವೈದ್ಯೋಪಚಾರ ಪಡೆದುಕೊಳ್ಳುವುದಕ್ಕೆ ಪ್ರಾಮುಖ್ಯ ನೀಡಿ. ಪಿತ್ರಾರ್ಜಿತ ಆಸ್ತಿ ಹಂಚಿಕೆ ಬಗ್ಗೆ ಈ ಹಿಂದೆ ಯಾವಾಗಲೋ ನಿಮಗೆ ಇಂಥದ್ದನ್ನು ನೀಡುತ್ತೇನೆ ಎಂದು ಹೇಳಿದ್ದಿದ್ದು, ಈಗ ತೀರ್ಮಾನ ಬದಲಾವಣೆ ಮಾಡಿಕೊಂಡಿರುವುದಾಗಿ ಹೇಳಲಿದ್ದಾರೆ. ಅಡ್ವರ್ಟೈಸ್ ಮೆಂಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುವವರಿಗೆ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಒತ್ತಡ ಇರಲಿದೆ.
ಕುಟುಂಬಕ್ಕೆ ಅಗತ್ಯ ಇರುವ ವಸ್ತುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಸಮಯವನ್ನು ಇಡಲಿದ್ದೀರಿ. ನಿಮ್ಮಲ್ಲಿ ಕೆಲವರು ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಳ್ಳಲಿದ್ದು, ಹೋಟೆಲ್ ಬುಕ್ಕಿಂಗ್, ಕಾರು ಬುಕ್ಕಿಂಗ್ ಇಂಥವು ಮಾಡಿಕೊಳ್ಳುವುದಕ್ಕೆ ಸ್ನೇಹಿತರ ಸಹಾಯವನ್ನು ಕೇಳಲಿದ್ದೀರಿ. ಆದಾಯ ತೆರಿಗೆಗೆ ಸಂಬಂಧಿಸಿದ ವಿಷಯದ ಬಗ್ಗೆ ಚರ್ಚೆ ಮಾಡುವುದಕ್ಕೆ ಆ ಕ್ಷೇತ್ರದಲ್ಲಿ ಪರಿಣತ ಆದಂಥ ವ್ಯಕ್ತಿಗಳ ಜತೆಗೆ ಮಾತುಕತೆ ನಡೆಸಲಿದ್ದೀರಿ. ಮಾತು ಪ್ರಧಾನವಾದ ವೃತ್ತಿ- ಉದ್ಯೋಗದಲ್ಲಿ ಇರುವವರಿಗೆ ವಿಪರೀತ ಕೆಲಸಗಳು ಬರುತ್ತವೆ. ಪ್ರಮುಖ ಜವಾಬ್ದಾರಿಯೊಂದನ್ನು ಹೆಚ್ಚುವರಿಯಾಗಿ ವಹಿಸಿಕೊಳ್ಳಲು ಸೂಚನೆ ಕೂಡ ಬರಲಿದೆ. ಫ್ರೀಲ್ಯಾನ್ಸರ್ ಆಗಿ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದ್ದು, ಸ್ನೇಹಿತರ ಮೂಲಕ ಉದ್ಯೋಗದ ರೆಫರೆನ್ಸ್ ಸಹ ಬರಬಹುದು. ಅವಕಾಶಗಳನ್ನು ಹೇಗೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಬಹುದು ಎಂಬ ಕಡೆಗೆ ಲಕ್ಷ್ಯ ನೀಡಿ.
ಸಂಗೀತ ಸಾಧನಗಳ ಕಲಿಕೆಯನ್ನು ಆರಂಭಿಸುವುದಕ್ಕೆ ಮನಸ್ಸು ಮಾಡಲಿದ್ದೀರಿ. ಫ್ಯಾಷನ್ ಡಿಸೈನಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಅವಕಾಶಗಳು ದೊರೆಯಲಿವೆ. ದೊಡ್ಡ ವೇದಿಕೆಯಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶನ ಮಾಡುವುದಕ್ಕೆ ಆಹ್ವಾನ ಬರಲಿದೆ. ಎಂಎಸ್ಎಂಇ ಕೈಗಾರಿಕೆ ಆರಂಭಿಸುವುದಕ್ಕೆ ಸಿದ್ಧತೆ- ಬಜೆಟ್ ಮಾಡಿಕೊಳ್ಳಲಿದ್ದೀರಿ. ಸಬ್ಸಿಡಿ ಸಹಿತವಾಗಿ ಸಾಲವನ್ನು ಪಡೆಯುವುದಕ್ಕೆ ಬ್ಯಾಂಕ್ ಗೆ ಪ್ರಾಜೆಕ್ಟ್ ರಿಪೋರ್ಟ್ ಸಲ್ಲಿಸುವ ಸಾಧ್ಯತೆ ಇದೆ. ಹೊಸ ಹೂಡಿಕೆ ಅವಕಾಶಗಳಿಗೆ ತಕ್ಷಣವೇ ಸ್ಪಂದಿಸಿದ್ದರಿಂದ ಆರಂಭದಲ್ಲಿಯೇ ಲಾಭದಲ್ಲಿ ಇರುವಂತೆ ಆಗಲಿದೆ. ಮಕ್ಕಳ ಶಿಕ್ಷಣಕ್ಕೆ ಸಹಾಯ ಆಗಲಿ ಎಂಬ ದೃಷ್ಟಿಕೋನದಿಂದ ಕೊಂಡಿದ್ದ ಷೇರುಗಳು, ಹೂಡಿಕೆ ಮಾಡಿಕೊಂಡು ಬಂದಿದ್ದ ಮ್ಯೂಚುವಲ್ ಫಂಡ್ ನಿಂದ ಹಣವನ್ನು ತೆಗೆದುಕೊಳ್ಳುವ ತೀರ್ಮಾನವನ್ನು ಮಾಡಲಿದ್ದೀರಿ. ಸ್ನೇಹಿತರ ವರ್ತನೆಯಿಂದ ಬೇಸರ ಆಗಲಿದೆ.
ನಿಮಗೆ ಎಷ್ಟೇ ಆಪ್ತರೇ ಆದರೂ ಇತರರ ಹಣಕಾಸು ವ್ಯವಹಾರಗಳಿಗೆ ಮಧ್ಯಸ್ಥಿಕೆ ಮಾಡುವುದಕ್ಕೆ ನೀವು ಹೋಗಬೇಡಿ. ನೀವಾಗಿಯೇ ವಹಿಸಿಕೊಂಡ ಕೆಲವು ಜವಾಬ್ದಾರಿಗಳನ್ನು ಗಡುವಿನೊಳಗಾಗಿ ಮಾಡಿ ಮುಗಿಸುವುದಕ್ಕೆ ಹರಸಾಹಸ ಮಾಡಬೇಕಾಗುತ್ತದೆ. ನಿಮ್ಮ ಕೈ ಕೆಳಗೆ ಕೆಲಸ ಮಾಡುವವರು ರಜಾ ಕೇಳಿಕೊಂಡು ಬಂದಲ್ಲಿ ಅವರ ಅಗತ್ಯಕ್ಕೆ ಸ್ಪಂದಿಸುವ ಕಡೆಗೆ ಗಮನವನ್ನು ನೀಡಿ. ವಿವಾಹ ವಯಸ್ಕರಾಗಿದ್ದು ಮದುವೆ ಪ್ರಯತ್ನ ಮಾಡುತ್ತಾ ಇದ್ದಲ್ಲಿ ಸೂಕ್ತ ಸಂಬಂಧ ದೊರೆಯುವ ಸಾಧ್ಯತೆ ಹೆಚ್ಚಿದೆ. ಮುಖ್ಯವಾಗಿ ಸಂಬಂಧಿಗಳ ಮೂಲಕ ಬರುವಂಥ ರೆಫರೆನ್ಸ್ ಗಂಭೀರವಾಗಿ ಪರಿಗಣಿಸಿ. ದೇವತಾ ಕಾರ್ಯಗಳ ಆಯೋಜನೆಗಾಗಿ ಓಡಾಟ ನಡೆಸಲಿದ್ದೀರಿ. ಸಿನಿಮಾ ರಂಗದಲ್ಲಿ ಕಾರ್ಯ ನಿರ್ವಹಿಸುವವರಿಗೆ ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಲಿವೆ. ಆದಾಯದಲ್ಲಿ ಹೆಚ್ಚಳ ಆಗುವುದರಿಂದ ನಿಮ್ಮ ಆತ್ಮವಿಶ್ವಾಸವು ಹೆಚ್ಚಲಿದೆ. ಪ್ರಶ್ನಿಸದೆ ಯಾವುದೇ ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಡಿ.
ಯಾರ ಬಳಿಯೂ ಸಹಾಯ ಕೇಳಬಾರದು ಎಂದುಕೊಳ್ಳುತ್ತಾ ಇರುವವರಿಗೆ ಇತರರ ನೆರವು ಅನಿವಾರ್ಯ ಆಗಲಿದೆ. ಕೂಡಿಟ್ಟುಕೊಂಡಿದ್ದ ಉಳಿತಾಯದ ಹಣವನ್ನು ಹಿಂತೆಗೆದುಕೊಂಡು ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಮಾಡುವ ಆಲೋಚನೆ ಮೂಡಲಿದೆ. ಇನ್ನು ನಿಮ್ಮಲ್ಲಿ ಯಾರು ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ, ಅಂಥವರಿಗೆ ಬಡ್ತಿ, ವೇತನ ಹೆಚ್ಚಳ ಆಗುವ ಯೋಗ ಇದೆ. ನಿವೃತ್ತ ಸರ್ಕಾರಿ ನೌಕರರಿಗೆ ಕನ್ಸಲ್ಟಂಟ್ ಆಗಿ ಕಾರ್ಯ ನಿರ್ವಹಿಸುವಂತೆ ಆಹ್ವಾನ ದೊರೆಯಲಿದೆ. ವಾಹನ ಚಾಲನೆ ಮಾಡುವಾಗ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜಾಗ್ರತೆ ವಹಿಸಿ. ಅದರ ಜೊತೆಗೆ ಒನ್ ವೇ, ನೋ ಪಾರ್ಕಿಂಗ್ ಇಂಥವುಗಳನ್ನು ಗಮನಿಸಿಕೊಳ್ಳಿ. ಇಲ್ಲದಿದ್ದಲ್ಲಿ ಅಂಥವುಗಳಿಗೆ ದೊಡ್ಡ ಮೊತ್ತದ ದಂಡ ಪಾವತಿಸುವಂತೆ ಆಗಲಿದೆ. ಬಹಳ ವರ್ಷಗಳಿಂದ ಭೇಟಿ ಸಾಧ್ಯವೇ ಆಗಿರಲಿಲ್ಲ ಎಂಬಂಧ ಸ್ನೇಹಿತರ ಜೊತೆಗೆ ಉತ್ತಮವಾದ ಸಮಯವನ್ನು ಕಳೆಯಲಿದ್ದೀರಿ.
ಬರಹಗಾರರಿಗೆ ಒತ್ತಡದ ಸನ್ನಿವೇಶ ಎದುರಾಗಲಿದೆ. ಗಡುವಿನ ಒಳಗಾಗಿ ಪೂರ್ಣಗೊಳಿಸಲು ಸಾಧ್ಯವಾಗದೆ ಕೆಲವು ಕೆಲಸದ ವಿಚಾರದಲ್ಲಿ ಮನಸ್ಸು ಕಹಿ ಆಗುವಂಥ ಬೆಳವಣಿಗೆ ಆಗಲಿದೆ. ಆಸಕ್ತಿಯಿಂದ ಕಟ್ಟಿದ್ದ ಸಂಸ್ಥೆ, ಪತ್ರಿಕೆ ಅಥವಾ ಯೂ ಟ್ಯೂಬ್ ಚಾನೆಲ್ ಅನ್ನು ಬೇರೆಯವರಿಗೆ ವಹಿಸಿಕೊಡಬೇಕು ಎಂಬ ಸನ್ನಿವೇಶ ಸೃಷ್ಟಿ ಆಗುತ್ತದೆ. ಸಿಹಿ ಪದಾರ್ಥಗಳ ಸೇವನೆಯನ್ನು ಈ ದಿನ ಕಡಿಮೆ ಮಾಡುವುದು ಒಳ್ಳೆಯದು. ಅದರಲ್ಲೂ ದೇಹದ ತೂಕ ಹೆಚ್ಚಾಗಿ, ಮಧುಮೇಹದಂಥ ಸಮಸ್ಯೆಯಿಂದ ಬಳಲುತ್ತಾ ಇರುವವರು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ. ಮನೆಗೆ ಟೀವಿ ಅಥವಾ ಹೋಮ್ ಥಿಯೇಟರ್ ಅಳವಡಿಕೆ ಅಥವಾ ಪ್ರೊಜೆಕ್ಟರ್ ಖರೀದಿ ಮಾಡುವುದಕ್ಕೆ ಸದಸ್ಯರ ಜತೆಗೆ ಮಾತುಕತೆ ನಡೆಸಲಿದ್ದೀರಿ. ಸ್ನೇಹಿತರಿಂದ ಸಾಲವನ್ನು ಪಡೆದುಕೊಂಡಿದ್ದಲ್ಲಿ ಅದನ್ನು ಮರುಪಾವತಿ ಮಾಡುವುದಕ್ಕೆ ಆದ್ಯತೆ ನೀಡಲಿದ್ದೀರಿ.