BSNL Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ? – Kannada News | BSNL General Manager Recruitment 2026: 15 Posts, 2.25 Lakh rs Salary, No Exam! Apply Now

ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರಮುಖ ದೂರಸಂಪರ್ಕ ಸಂಸ್ಥೆಯಾದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ವಿಶೇಷ ನೇಮಕಾತಿ ಪ್ರಕಟಣೆಯಡಿ ಒಟ್ಟು 15 ಜನರಲ್ ಮ್ಯಾನೇಜರ್ (ಹಣಕಾಸು ಮತ್ತು ಖಾತೆಗಳು) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಉನ್ನತ ಮಟ್ಟದ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

ಈ ಹುದ್ದೆಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆಗಳು:

ಬಿಎಸ್‌ಎನ್‌ಎಲ್‌ನ ಹಣಕಾಸು ಮತ್ತು ಲೆಕ್ಕಪತ್ರ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಇಲಾಖೆಯಲ್ಲಿ ಉನ್ನತ ಶಿಕ್ಷಣ ಪಡೆದಿರಬೇಕು. ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ (CA), ಕಾಸ್ಟ್ ಅಂಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (CMA), MBA (ಹಣಕಾಸು) ಅಥವಾ ಮ್ಯಾನೇಜ್ಮೆಂಟ್‌ನಲ್ಲಿ ಪಿಜಿ ಡಿಪ್ಲೊಮಾ (ಹಣಕಾಸು) ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಅಧಿಕೃತ ಅಧಿಸೂಚನೆಯಲ್ಲಿ ಸೂಚಿಸಿರುವಂತೆ ಸಂಬಂಧಿತ ಹಣಕಾಸು ವಲಯದಲ್ಲಿ ಸೂಕ್ತ ಕಾರ್ಯಾನುಭವ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರಗಳು:

ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವೇಳೆಗೆ ಅಭ್ಯರ್ಥಿಗಳ ವಯಸ್ಸು 50 ವರ್ಷಗಳನ್ನು ಮೀರಬಾರದು. ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಸಾಮಾನ್ಯ ಅಭ್ಯರ್ಥಿಯು ರೂ. 1000 ಅರ್ಜಿ ಶುಲ್ಕವನ್ನು ಆನ್‌ಲೈನ್ ಬ್ಯಾಂಕಿಂಗ್ ಅಥವಾ ಕಾರ್ಡ್‌ಗಳ ಮೂಲಕ ಕಡ್ಡಾಯವಾಗಿ ಪಾವತಿಸಬೇಕಾಗುತ್ತದೆ.

ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ ಪ್ರಕ್ರಿಯೆ:

ಈ ಉದ್ಯೋಗ ನೇಮಕಾತಿಯ ಅತ್ಯಂತ ಪ್ರಮುಖ ಆಕರ್ಷಣೆಯೆಂದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳು ಮತ್ತು ಅವರ ಶೈಕ್ಷಣಿಕ/ಕಾರ್ಯಾನುಭವದ ಆಧಾರದ ಮೇಲೆ ಮೊದಲಿಗೆ ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ತದನಂತರ ಶಾರ್ಟ್‌ಲಿಸ್ಟ್ ಆದ ಅರ್ಹ ಅಭ್ಯರ್ಥಿಗಳಿಗೆ ಗುಂಪು ಚರ್ಚೆ (Group Discussion), ವಿಷಯ ಪ್ರಸ್ತುತಿ (Presentation) ಮತ್ತು ಅಂತಿಮವಾಗಿ ವೈಯಕ್ತಿಕ ಸಂದರ್ಶನದ (Interview) ಮೂಲಕ ಅರ್ಹರನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: 16 ಸರ್ಕಾರಿ ಉದ್ಯೋಗ ತಿರಸ್ಕರಿಸಿ IPS ಆದ ಯುವತಿ; ಮೊದಲ ಪ್ರಯತ್ನದಲ್ಲೇ UPSC ಪಾಸ್ ಮಾಡಿದ ತೃಪ್ತಿ ಭಟ್ ಯಶೋಗಾಥೆ

ಆಕರ್ಷಕ ವೇತನ ಶ್ರೇಣಿ ಮತ್ತು ವಾರ್ಷಿಕ ಭತ್ಯೆ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಿಎಸ್‌ಎನ್‌ಎಲ್ ಸಂಸ್ಥೆಯು ಅತ್ಯಂತ ಆಕರ್ಷಕ ವೇತನ ಪ್ಯಾಕೇಜ್ ಅನ್ನು ನೀಡಲಿದೆ. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಆರಂಭದಲ್ಲೇ ತಿಂಗಳಿಗೆ ರೂ. 2,25,000 ಸ್ಥಿರ ವೇತನ ಸಿಗಲಿದೆ. ಇದರೊಂದಿಗೆ, ಪ್ರತಿ ವರ್ಷ ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ಅವರ ಮೂಲ ವೇತನದಲ್ಲಿ ಶೇ. 5 ರಷ್ಟು ವಾರ್ಷಿಕ ಹೆಚ್ಚಳ (Annual Increment) ಇರಲಿದೆ ಎಂದು ಬಿಎಸ್‌ಎನ್‌ಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಿಎಸ್‌ಎನ್‌ಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಜೂನ್ 24ರ ಬೆಳಿಗ್ಗೆ 10:00 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ಅವಕಾಶವಿರುತ್ತದೆ. ಕೊನೆಯ ಕ್ಷಣದ ಸರ್ವರ್ ಸಮಸ್ಯೆ ತಪ್ಪಿಸಲು ಅರ್ಹ ಅಭ್ಯರ್ಥಿಗಳು ಗಡುವಿಗಿಂತ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಸೂಕ್ತವಾಗಿದೆ.

ಬಿಎಸ್ಎನ್ಎಲ್ ನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹೊಸ ನಿಯಮಗಳ ಹೈಡ್ರಾಮಾ! ಒಂದೇ ದಿನ 3 ರೆಡ್ ಕಾರ್ಡ್​..! – Kannada News | Fifa World Cup 2026: 3 Red Cards on Day 1 as New Rules Hit Hard

ಫಿಫಾ ವಿಶ್ವಕಪ್​ನ 23ನೇ ಸೀಸನ್​ಗೆ ಅದ್ಧೂರಿ ಚಾಲನೆ ದೊರೆತಿದೆ. ಮೆಕ್ಸಿಕೋದ ಪ್ರತಿಷ್ಠಿತ ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಮೆಕ್ಸಿಕೋ ಮತ್ತು ಸೌತ್ ಆಫ್ರಿಕಾ ನಡುವಿನ ಉದ್ಘಾಟನಾ ಪಂದ್ಯವು ಇದೀಗ ಇತಿಹಾಸ ಪುಟ ಸೇರಿದೆ. ಆದರೆ ಇದು ಆಟದಿಂದಲ್ಲ. ಬದಲಾಗಿ ರೆಡ್​ ಕಾರ್ಡ್​ನಿಂದಾಗಿ..!

ಇತಿಹಾಸ ಬರೆದ ಉದ್ಘಾಟನಾ ಪಂದ್ಯ!

ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಮೆಕ್ಸಿಕೋ ತಂಡವು ಸೌತ್ ಆಫ್ರಿಕಾವನ್ನು 2-0 ಗೋಲುಗಳಿಂದ ಮಣಿಸಿತು. ಆದರೆ, ಎಸ್ಟಾಡಿಯೋ ಅಝಟೆಕಾ ಕ್ರೀಡಾಂಗಣದಲ್ಲಿ ನಡೆದ ಈ ಹಣಾಹಣಿ ಫುಟ್‌ಬಾಲ್ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ ಹಾಗೂ ಕಠಿಣ ಪಂದ್ಯವಾಗಿ ದಾಖಲಾಗಿದೆ. ಇದಕ್ಕೆ ಮುಖ್ಯ ಕಾರಣ ಮೂವರು ಆಟಗಾರರು ರೆಡ್ ಕಾರ್ಡ್ ಪಡೆದಿರುವುದು.

ಈ ಪಂದ್ಯದಲ್ಲಿ ರೆಫರಿಯಾಗಿ ಕಾಣಿಸಿಕೊಂಡ ಬ್ರೆಝಿಲ್​ನ ವಿಲ್ಟನ್ ಪೆರೇರಾ ಸಂಪಾಯೊ ಅವರು ದ್ವಿತೀಯಾರ್ಧದಲ್ಲಿ ಒಟ್ಟು 3 ನೇರ ರೆಡ್ ಕಾರ್ಡ್‌ಗಳನ್ನು ಪ್ರದರ್ಶಿಸಿ ಇತಿಹಾಸ ನಿರ್ಮಿಸಿದರು.  ಅಂದರೆ ವಿಶ್ವಕಪ್ ಇತಿಹಾಸದಲ್ಲಿ ಉದ್ಘಾಟನಾ ಪಂದ್ಯವೊಂದರಲ್ಲೇ ಮೂವರು ಆಟಗಾರರು ಮೈದಾನದಿಂದ ಹೊರಹಾಕಲ್ಪಟ್ಟಿರುವುದು ಇದೇ ಮೊದಲು.

ಕಟ್ಟುನಿಟ್ಟಾದ ಫಿಫಾ ನಿಯಮಗಳ ಪ್ರಭಾವ!

ಈ ಬಾರಿಯ ಫಿಫಾ ವಿಶ್ವಕಪ್​ನಲ್ಲಿ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಅಂತಾರಾಷ್ಟ್ರೀಯ ಫುಟ್‌ಬಾಲ್ ಅಸೋಸಿಯೇಷನ್ ಮಂಡಳಿ (IFAB) ಜಾರಿಗೆ ತಂದಿರುವ ಹೊಸ ಶಿಸ್ತಿನ ನಿಯಮಗಳೇ 3 ರೆಡ್ ಕಾರ್ಡ್ ಸಿಗಲು ಮುಖ್ಯ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

  • ಬಾಯಿ ಮುಚ್ಚಿಕೊಂಡರೆ ರೆಡ್ ಕಾರ್ಡ್: ಮೈದಾನದಲ್ಲಿ ಆಟಗಾರರು ಗಲಾಟೆ ಅಥವಾ ವಾಗ್ವಾದದ ಸಮಯದಲ್ಲಿ ಎದುರಾಳಿ ಅಥವಾ ರೆಫರಿಯನ್ನು ನಿಂದಿಸುವುದನ್ನು ಬಚ್ಚಿಡಲು ತಮ್ಮ ಬಾಯಿಯನ್ನು ಕೈ ಅಥವಾ ಜೆರ್ಸಿಯಿಂದ ಮುಚ್ಚಿಕೊಂಡರೆ ನೇರವಾಗಿ ರೆಡ್ ಕಾರ್ಡ್ ನೀಡುವ ನಿಯಮ ತರಲಾಗಿದೆ.
  • ಪ್ರತಿಭಟನೆಗೆ ಶಿಕ್ಷೆ: ತೀರ್ಪುಗಾರರ ನಿರ್ಧಾರವನ್ನು ಪ್ರತಿಭಟಿಸಿ ಅಶಿಸ್ತು ತೋರಿದರೆ ಅಥವಾ ಮೈದಾನ ಬಿಟ್ಟು ಹೊರನಡೆದರೆ ಕಠಿಣ ಕಾರ್ಡ್ ಶಿಕ್ಷೆ ಕಾಯಂ ಆಗಿದೆ.

ರೆಡ್ ಕಾರ್ಡ್ ಪಡೆದ ಆಟಗಾರರು ಯಾರು?

  • ಸ್ಪೆಫೆಲೊ ‘ಯಾಯಾ’ ಸಿಥೋಲ್ (ಸೌತ್ ಆಫ್ರಿಕಾ): ಮೆಕ್ಸಿಕೋ ತಂಡದ ಆಟಗಾರ ಬ್ರಿಯಾನ್ ಗುಟಿಯೆರೆಸ್​ಗೆ ಗೋಲು ಗಳಿಸಲು ಉತ್ತಮ ಅವಕಾಶವಿತ್ತು. ಈ ವೇಳೆ ಸಿಥೋಲ್ ಅವರು ನಿಯಮಬಾಹಿರವಾಗಿ ಅತ್ಯಂತ ಅಪಾಯಕಾರಿ ಟ್ಯಾಕಲ್ ಮಾಡಿ ಬೀಳಿಸಿದರು. ಈ ಅಪಾಯಕಾರಿ ಟ್ಯಾಕಲ್ ಕಾರಣ ಮ್ಯಾಚ್ ರೆಫರಿ ತಕ್ಷಣವೇ ಸ್ಪೆಫೆಲೊ ‘ಯಾಯಾ’ ಸಿಥೋಲ್​ಗೆ ನೇರ ರೆಡ್ ಕಾರ್ಡ್ ನೀಡಿದ್ದಾರೆ.
  •  ಥೆಂಬಾ ಝ್ವಾನೆ (ಸೌತ್ ಆಫ್ರಿಕಾ): ಮೆಕ್ಸಿಕೋ ತಂಡದ ರಾಬರ್ಟೊ ಅಲ್ವಾರಾಡೊ ಅವರೊಂದಿಗೆ ನಡೆದ ಗಲಾಟೆಯ ಸಂದರ್ಭದಲ್ಲಿ, ಝ್ವಾನೆ ಅವರು ಅಶಿಸ್ತಿನ ವರ್ತನೆ ತೋರಿದ್ದರು. ವಿಡಿಯೋ ಅಸಿಸ್ಟೆಂಟ್ ರೆಫರಿ (VAR) ಮರುಪರಿಶೀಲನೆಯ ನಂತರ, ಅವರು ಎದುರಾಳಿಯ ಮುಖಕ್ಕೆ ಹೊಡೆದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ರೆಫರಿ ಥೆಂಬಾ ಝ್ವಾನೆಗೆ ನೇರ ರೆಡ್ ಕಾರ್ಡ್ ನೀಡಿದ್ದಾರೆ.
  • ಸೆಸಾರ್ ಮಾಂಟೆಸ್ (ಮೆಕ್ಸಿಕೋ): ಪಂದ್ಯ ಮುಗಿಯಲು ಕೇವಲ ಕೆಲವು ನಿಮಿಷಗಳು ಬಾಕಿ ಇರುವಾಗ ಮೆಕ್ಸಿಕೋದ ಡಿಫೆಂಡರ್ ಸೆಸಾರ್ ಮಾಂಟೆಸ್ ಸೌತ್ ಆಫ್ರಿಕಾ ಆಟಗಾರನನ್ನು ಕೆಳಗೆ ಉರುಳಿಸಿದ್ದರು. ಈ ಆಕ್ರಮಣಕಾರಿ ಆಟಕ್ಕೆ  ಸೆಸಾರ್ ಮಾಂಟೆಸ್​ಗೆ ರೆಡ್ ಕಾರ್ಡ್ ನೀಡಲಾಗಿದೆ.

ರೆಡ್ ಕಾರ್ಡ್ ಪಡೆದರೆ ಏನು ಸಮಸ್ಯೆ?

ರೆಡ್ ಕಾರ್ಡ್ ಪಡೆದ ಆಟಗಾರ ತಕ್ಷಣವೇ ಮೈದಾನವನ್ನು ಬಿಟ್ಟು ಹೊರಹೋಗಬೇಕು. ಅವರು ಪಂದ್ಯದ ಉಳಿದ ಅವಧಿಯಲ್ಲಿ ಮೈದಾನದಲ್ಲಿ ಆಡುವಂತಿಲ್ಲ ಮತ್ತು ಸಬ್‌ಸ್ಟಿಟ್ಯೂಟ್ ಬೆಂಚ್‌ನಲ್ಲಿಯೂ ಕುಳಿತುಕೊಳ್ಳುವಂತಿಲ್ಲ.

ಹಾಗೆಯೇ ರೆಡ್ ಕಾರ್ಡ್ ಪಡೆದ ಆಟಗಾರನ ಬದಲಿಗೆ ಸಬ್ಸ್​ಟಿಟ್ಯೂಟ್ ಆಗಿ ಮತ್ತೊಬ್ಬ ಆಟಗಾರನನ್ನು ಮೈದಾನಕ್ಕೆ ಇಳಿಸಲು ಅವಕಾಶವಿರುವುದಿಲ್ಲ. ಇದರಿಂದಾಗಿ ಆ ತಂಡವು ಉಳಿದ ಪಂದ್ಯವನ್ನು ಕೇವಲ 10 ಆಟಗಾರರೊಂದಿಗೆ ಆಡಬೇಕಾಗುತ್ತದೆ. ಇದು ತಂಡದ ಮೇಲೆ ಭಾರಿ ಒತ್ತಡವನ್ನು ಉಂಟುಮಾಡುವುದಲ್ಲದೆ, ಸೋಲಿನ ಸಾಧ್ಯತೆಯನ್ನು ಹೆಚ್ಚಿಸುತ್ತದೆ.

ಇನ್ನು ರೆಡ್ ಕಾರ್ಡ್ ಪಡೆದ ಆಟಗಾರನಿಗೆ ಕೇವಲ ಆ ಪಂದ್ಯ ಮಾತ್ರವಲ್ಲದೆ, ಅವರ ತಂಡ ಆಡುವ ಮುಂದಿನ ಕನಿಷ್ಠ ಒಂದು ಪಂದ್ಯದಲ್ಲಿ ಆಡದಂತೆ ನಿಷೇಧ ಹೇರಲಾಗುತ್ತದೆ. ತಪ್ಪು ತುಂಬಾ ಗಂಭೀರವಾಗಿದ್ದರೆ (ಉದಾಹರಣೆಗೆ ಮೈದಾನದಲ್ಲಿ ಹೊಡೆದಾಟ ನಡೆಸಿದ್ದರೆ), ಫಿಫಾ ಶಿಸ್ತು ಸಮಿತಿಯು ಈ ನಿಷೇಧವನ್ನು 3 ಪಂದ್ಯಗಳವರೆಗೆ ವಿಸ್ತರಿಸಬಹುದು.

ಇದನ್ನೂ ಓದಿ: ಬರೋಬ್ಬರಿ 27 ಪಂದ್ಯಗಳು… ಟೀಮ್ ಇಂಡಿಯಾದ ವಿಶ್ವಕಪ್​ ಸಿದ್ಧತೆ ಶುರು!

4 ರೆಡ್ ಕಾರ್ಡ್​!

2022ರ ಇಡೀ ಖತಾರ್ ವಿಶ್ವಕಪ್‌ನ ಒಟ್ಟು 64 ಪಂದ್ಯಗಳಲ್ಲಿ ಕೇವಲ 4 ರೆಡ್ ಕಾರ್ಡ್‌ಗಳನ್ನು ಮಾತ್ರ ನೀಡಲಾಗಿತ್ತು. ಆದರೆ, 2026ರ ವಿಶ್ವಕಪ್‌ನಲ್ಲಿ ಕೇವಲ ಉದ್ಘಾಟನಾ ದಿನವೇ 3 ರೆಡ್ ಕಾರ್ಡ್‌ಗಳು ಹೊರಬಿದ್ದಿರುವುದು ಟೂರ್ನಿಯು ಎಷ್ಟು ಆಕ್ರಮಣಕಾರಿ ಮತ್ತು ಕಟ್ಟುನಿಟ್ಟಾಗಿ ಸಾಗಲಿದೆ ಎಂಬುದಕ್ಕೆ ಮುನ್ಸೂಚನೆಯಾಗಿದೆ.

Source link

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಪ್ರತ್ಯೇಕ ದುರಂತಗಳಲ್ಲಿ ನಾಲ್ವರ ದುರ್ಮರಣ, ಮೂವರಿಗೆ ಗಾಯ – Kannada News | Bengaluru: Four Killed in Three Separate Accidents Across Whitefield and Kengeri; Three Critically Injured

ಅಪಘಾತಕ್ಕೀಡಾಗಿರುವ ಕಾರುImage Credit source: tv9

ಬೆಂಗಳೂರು, ಜೂನ್ 13: ಬೆಂಗಳೂರಿನಲ್ಲಿ (Bengaluru) ಶನಿವಾರ ಪ್ರತ್ಯೇಕವಾಗಿ ಸಂಭವಿಸಿದ ಮೂರು ಭೀಕರ ರಸ್ತೆ ಅಪಘಾತಗಳಲ್ಲಿ ನಾಲ್ಕು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಮಗಳನ್ನು ಕಾಲೇಜಿಗೆ ಬಿಡಲು ತೆರಳುತ್ತಿದ್ದ ತಾಯಿ ಶಾಲಾ ಬಸ್‌ ಅಡಿ ಸಿಲುಕಿ ಮೃತಪಟ್ಟರೆ, ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಬೈಕ್ ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮುಖ್ಯಾಂಶಗಳು

  • ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾರ್ವಜನಿಕರ ಸಾವು.
  • ಮಗಳ ಕಣ್ಣೆದುರೇ ಶಾಲಾ ಬಸ್‌ಗೆ ಬಲಿಯಾದ ತಾಯಿ.
  • ಡಿವೈಡರ್‌ಗೆ ಡಿಕ್ಕಿಯಾಗಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು.

ಮಗಳ ಕಣ್ಣೆದುರೇ ಶಾಲಾ ಬಸ್‌ಗೆ ಬಲಿಯಾದ ತಾಯಿ

ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಕರುಳು ಹಿಂಡುವಂಥ ಘಟನೆ ಸಂಭವಿಸಿದೆ. ಕಾಂತಾ ಎಂಬಾಕೆ ಮಗಳು ನೇಹಾಳನ್ನು ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಕರೆದೊಯ್ಯುತ್ತಿದ್ದರು. ಮಾರತ್‌ಹಳ್ಳಿಯಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದಾಗ ಹಠಾತ್ತನೆ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಕಾಂತಾ ಮೇಲೆ ಹಿಂಬದಿಯಿಂದ ಬರುತ್ತಿದ್ದ ಶಾಲಾ ಬಸ್ ಹರಿದಿದೆ. ಘಟನೆಯಲ್ಲಿ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದು, ಮಗಳು ನೇಹಾ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ತಾಯಿಯ ಭೀಕರ ಸಾವನ್ನು ಕಣ್ಣಾರೆ ಕಂಡ ಮಗಳು ತೀವ್ರ ಆಘಾತಕ್ಕೆ ಒಳಗಾಗಿದ್ದಾಳೆ.

ಡಿವೈಡರ್‌ಗೆ ಬೈಕ್ ಡಿಕ್ಕಿ: ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಸಾವು

ನಗರದ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಆರ್. ಡೆಂಟಲ್ ಕಾಲೇಜು ಬಳಿ ಮಧ್ಯರಾತ್ರಿ ಸುಮಾರು 2 ಗಂಟೆಗೆ ಮತ್ತೊಂದು ಭೀಕರ ಅಪಘಾತ ನಡೆದಿದೆ. ಮೈಸೂರು ಕಡೆಯಿಂದ ಬೆಂಗಳೂರಿಗೆ ಬೈಕ್‌ನಲ್ಲಿ ಬರುತ್ತಿದ್ದ ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಅತುಲ್ ಮತ್ತು ಗೌರಿಶಂಕರ್ ಪ್ರಯಾಣಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ವಿದ್ಯಾರ್ಥಿಗಳು ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಡ್ಡಾದಿಡ್ಡಿ ಕಾರು ಚಾಲನೆಗೆ ಓರ್ವ ಬಲಿ, ಮೂವರಿಗೆ ಗಾಯ

ಮೈಸೂರು ರಸ್ತೆಯ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್ ಬಳಿ ಅತಿ ವೇಗ ಮತ್ತು ಅಡ್ಡಾದಿಡ್ಡಿ ಚಾಲನೆಗೆ ಮತ್ತೊಂದು ಜೀವ ಬಲಿಯಾಗಿದೆ. ವೇಗವಾಗಿ ಬಂದ ಇಕೋ ಕಾರಿನ ಚಾಲಕ ರಸ್ತೆಯಲ್ಲಿದ್ದ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಸುಖದೇವ್ ಎಂಬಾತ ಕಾರಿನಿಂದ ಹೊರಗೆ ಬಿದ್ದಿದ್ದು, ಅದೇ ಕಾರು ಆತನ ಮೇಲೆಯೇ ಉರುಳಿ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಪಘಾತದಲ್ಲಿ ಎರಡು ಬೈಕ್‌ಗಳಲ್ಲಿದ್ದ ಮೂವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೃಹ ಇಲಾಖೆ ಆದೇಶದಿಂದ ಪ್ರಣೀತ್ ಮೊರೆಗೆ ಹೆಚ್ಚಿತು ಸಂಕಷ್ಟ – Kannada News | Praneeth More Controversy: Vulgar Comedy Sparks Outrage, Home Dept Probes

ಖ್ಯಾತ ಸ್ಟ್ಯಾಂಡ್‌ಅಪ್ ಕಮಿಡಿಯನ್ ಪ್ರಣೀತ್ ಮೋರೆ ಅವರ ಕಾರ್ಯಕ್ರಮಗಳು ಈಗ ಭಾರಿ ವಿವಾದಕ್ಕೆ ಸಿಲುಕಿದ್ದು, ಅವರ ಸಂಕಷ್ಟಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಪ್ರಣೀತ್ ಅವರ ಹಾಸ್ಯ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಗೂ ವಿಕೃತ ವಿಷಯಗಳು ತುಂಬಿರುತ್ತವೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ.

ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಇಎಂ (KEM) ಆಸ್ಪತ್ರೆಯ ಮಹಿಳಾ ವೈದ್ಯರೊಬ್ಬರು ಮೃತದೇಹದ ಖಾಸಗಿ ಭಾಗಗಳ ಬಗ್ಗೆ ನೇರವಾಗಿ ನೀಡಿರುವ ಆಘಾತಕಾರಿ ಹೇಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರೊಂದಿಗೆ ಬಿರಿಯಾನಿಯ ಕಥೆಯೂ ಅಷ್ಟೇ ಆಘಾತಕಾರಿಯಾಗಿದ್ದು, ಇವೆಲ್ಲವೂ ಹಾಸ್ಯದ ಹೆಸರಿನಲ್ಲಿ ನಡೆದಿರುವ ವಿಕೃತಿ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಈ ವಿವಾದಾತ್ಮಕ ಹೇಳಿಕೆ ನೀಡಿದ ಮಹಿಳಾ ವೈದ್ಯರ ವಿರುದ್ಧವೂ ಕ್ರಮ ಕೈಗೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

ಈ ಇಡೀ ಬೆಳವಣಿಗೆಯನ್ನು ಮಹಾರಾಷ್ಟ್ರ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಪ್ರಣೀತ್ ಮೋರೆ ಅವರು ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿರುವ ಇತ್ತೀಚಿನ ಎರಡು ವಿಡಿಯೋಗಳು ಮಾತ್ರವಲ್ಲದೆ, ಅವರ ಹಿಂದಿನ ಎಲ್ಲಾ ಹಳೆಯ ವಿಡಿಯೋಗಳ ವಿಷಯವನ್ನು ಸೈಬರ್ ಪೊಲೀಸರು ಸಂಪೂರ್ಣವಾಗಿ ತನಿಖೆ ನಡೆಸಲಿದ್ದಾರೆ ಎಂದು ಗೃಹ ಇಲಾಖೆಯ ರಾಜ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇದು ಪ್ರಣೀತ್ ಮೋರೆ ಅವರಿಗೆ ದೊಡ್ಡ ಹೊಡೆತ ನೀಡಿದಂತಾಗಿದೆ.

ಮಹಿಳಾ ಆಯೋಗದಿಂದ ನೋಟಿಸ್; ನಿಷೇಧಕ್ಕೆ ಆಗ್ರಹ:

ಈ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಿಳಾ ಆಯೋಗವು ಪ್ರಣೀತ್ ಮೋರೆ ಅವರಿಗೆ ನೋಟಿಸ್ ಜಾರಿ ಮಾಡಿದೆ. ಜೊತೆಗೆ ಸೈಬರ್ ಸೆಲ್ ಕೂಡ ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಇಂತಹ ವಿಕೃತ ಮತ್ತು ಅಶ್ಲೀಲ ಕಾರ್ಯಕ್ರಮಗಳನ್ನು ಸಮಾಜದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಎಂಬ ಬೇಡಿಕೆಯೂ ಸಾರ್ವಜನಿಕ ವಲಯದಿಂದ ಬಲವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: ಪ್ರಣೀತ್ ಮೋರೆ ಶೋನಲ್ಲಿ ಮತ್ತೊಂದು ಕರ್ಮಕಾಂಡ; ಮೃತದೇಹದ ಖಾಸಗಿ ಅಂಗಗಳ ಬಗ್ಗೆ ಲೇವಡಿ

ಪ್ರಣೀತ್ ಮೋರೆ ಅವರ ಕಾರ್ಯಕ್ರಮಗಳು ಈ ಹಿಂದೆಯೂ ಹಲವು ಬಾರಿ ಅಶ್ಲೀಲ ವಿಷಯಗಳ ಕಾರಣಕ್ಕೆ ವಿವಾದಕ್ಕೀಡಾಗಿದ್ದವು. ಆದರೆ ಈ ಬಾರಿ ಗೃಹ ಇಲಾಖೆಯೇ ನೇರ ತನಿಖೆಗೆ ಆದೇಶಿಸಿರುವುದರಿಂದ ಅವರು ಕಾನೂನು ಕತ್ತರಿ ಸಿಲುಕುವುದು ಬಹುತೇಕ ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬರೋಬ್ಬರಿ 27 ಪಂದ್ಯಗಳು… ಟೀಮ್ ಇಂಡಿಯಾದ ವಿಶ್ವಕಪ್​ ಸಿದ್ಧತೆ ಶುರು! – Kannada News | Team India’s Road to 2027 ODI WC Begins

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ (ODI World Cup 2027) ತಯಾರಿ ಇಂದಿನಿಂದ (ಜೂನ್ 13) ಶುರುವಾಗಲಿದೆ. ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ದ್ವಿಪಕ್ಷೀಯ ಸರಣಿಯೊಂದಿಗೆ ಭಾರತ ತಂಡ ವಿಶ್ವಕಪ್ ಸಿದ್ಧತೆ ಆರಂಭವಾಗುತ್ತಿದ್ದು, ಈ ಸರಣಿಯ ಬಳಿಕ ಟೀಮ್ ಇಂಡಿಯಾ ಒಟ್ಟು 24 ಪಂದ್ಯಗಳನ್ನಾಡಲಿದೆ. ಅಂದರೆ 2027ರ ಏಕದಿನ ವಿಶ್ವಕಪ್​ಗೂ ಮುನ್ನ ಒಟ್ಟು 27 ಒನ್​ಡೇ ಮ್ಯಾಚ್​ಗಳಲ್ಲಿ ಕಣಕ್ಕಿಳಿಯಲಿದೆ.

ಯಾರ ವಿರುದ್ಧ 27 ಪಂದ್ಯಗಳು?

ಭಾರತ ತಂಡವು 2027ರ ಏಕದಿನ ವಿಶ್ವಕಪ್‌ಗೂ ಮುನ್ನ ಒಟ್ಟು 27 ಏಕದಿನ ಪಂದ್ಯಗಳನ್ನು (ODIs) ಆಡಲಿದೆ. ಐಸಿಸಿ (ICC) ಭವಿಷ್ಯದ ಪ್ರವಾಸ ಯೋಜನೆ (FTP) ಹಾಗೂ BCCI ಪ್ರಕಟಿಸಿರುವ ಅಧಿಕೃತ ವೇಳಾಪಟ್ಟಿಯ ಪ್ರಕಾರ ಈ ಪಂದ್ಯಗಳು ನಿಗದಿಯಾಗಿವೆ.

ವಿಶ್ವಕಪ್ ಸಿದ್ಧತೆಯ ಭಾಗವಾಗಿ ಭಾರತ ತಂಡವು ಯಾವೆಲ್ಲಾ ದೇಶಗಳ ವಿರುದ್ಧ ಎಷ್ಟು ಏಕದಿನ ಪಂದ್ಯಗಳನ್ನು ಆಡಲಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ:

  • ಅಫ್ಘಾನಿಸ್ತಾನ್: ಜೂನ್ 13 ರಿಂದ ಶುರುವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.
  • ಇಂಗ್ಲೆಂಡ್: ಜುಲೈ 2026 ರಲ್ಲಿ ಭಾರತ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಿದೆ.
  • ವೆಸ್ಟ್ ಇಂಡೀಸ್: ಸೆಪ್ಟೆಂಬರ್-ಅಕ್ಟೋಬರ್ 2026 ರಲ್ಲಿ ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಪ್ರವಾಸ ಬರಲಿದ್ದು, ತವರಿನಲ್ಲಿ 3 ಪಂದ್ಯಗಳು ನಡೆಯಲಿವೆ.
  • ನ್ಯೂಝಿಲೆಂಡ್: ಅಕ್ಟೋಬರ್-ನವೆಂಬರ್ 2026 ರಲ್ಲಿ ನ್ಯೂಝಿಲೆಂಡ್ ಪ್ರವಾಸದಲ್ಲಿ ಭಾರತ ತಂಡವು 5 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.
  • ಶ್ರೀಲಂಕಾ: ಡಿಸೆಂಬರ್ 2026 ರಲ್ಲಿ ಶ್ರೀಲಂಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಭಾರತದಲ್ಲಿ 3 ಪಂದ್ಯಗಳು ನಡೆಯಲಿವೆ.
  • ಝಿಂಬಾಬ್ವೆ: ಜನವರಿ 2027 ರ ಆರಂಭದಲ್ಲಿ ಝಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.
  • ಏಷ್ಯಾ ಕಪ್: 2027ರ ಮಧ್ಯಭಾಗದಲ್ಲಿ (ವಿಶ್ವಕಪ್‌ಗೂ ಮುನ್ನ) ಏಕದಿನ ಮಾದರಿಯ ಏಷ್ಯಾ ಕಪ್ ಟೂರ್ನಿ ನಡೆಯಲಿದ್ದು, ಭಾರತ ಫೈನಲ್ ತಲುಪಿದರೆ ಕನಿಷ್ಠ 7 ಪಂದ್ಯಗಳನ್ನು ಆಡಲಿದೆ.

ಈ ಸರಣಿ ಮತ್ತು ಟೂರ್ನಿಗಳ ಮೂಲಕ ಟೀಮ್ ಇಂಡಿಯಾ ಒಟ್ಟು 27 ಏಕದಿನ ಪಂದ್ಯಗಳನ್ನು ಆಡುವ ಮೂಲಕ ಅಕ್ಟೋಬರ್ 2027 ರಲ್ಲಿ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿರುವ ವಿಶ್ವಕಪ್‌ಗೆ ಸಂಪೂರ್ಣವಾಗಿ ಸಜ್ಜಾಗಲಿದೆ.

ಇದನ್ನೂ ಓದಿ: ಯುದ್ಧದ ನಡುವೆ ಫಿಫಾ ವಿಶ್ವಕಪ್​​ಗೆ ಇರಾನ್ ಎಂಟ್ರಿ..!

ಭಾರತ vs ಅಫ್ಘಾನಿಸ್ತಾನ್ ಏಕದಿನ ಸರಣಿ ವೇಳಾಪಟ್ಟಿ:

  • ಮೊದಲ ಏಕದಿನ ಪಂದ್ಯ: ಜೂನ್ 13 – ಧರ್ಮಶಾಲಾ.
  • ಎರಡನೇ ಏಕದಿನ ಪಂದ್ಯ: ಜೂನ್ 17 – ಲಕ್ನೋ.
  • ಮೂರನೇ ಏಕದಿನ ಪಂದ್ಯ: ಜೂನ್ 20 – ಚೆನ್ನೈ.

ಭಾರತ ಏಕದಿನ ತಂಡ

ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

Source link

ಕರ್ನಾಟಕದಲ್ಲಿ ಭಾರೀ ಗಳಿಕೆ ಮಾಡಿದ ಹಾಲಿವುಡ್ ಚಿತ್ರ; ಕನ್ನಡ ಸಿನಿಮಾಗಳಿಗೇ ಇಲ್ಲ ಬೇಡಿಕೆ – Kannada News | Why Kannada Films Fail to Earn While Hollywood Thrives in Karnataka Box Office?

ಈ ವರ್ಷದ ಮೊದಲಾರ್ಧ ಕಳೆಯಲು ಬಾಕಿ ಇರೋದು ಕೆಲವೇ ವಾರ ಮಾತ್ರ. ಈ ಅವಧಿಯಲ್ಲಿ ಸುಮಾರು 100ಕ್ಕೂ ಅಧಿಕ ಕನ್ನಡ ಸಿನಿಮಾಗಳು ರಿಲೀಸ್ ಆಗಿವೆ. ಆದರೆ, ಇದರಲ್ಲಿ ಉತ್ತಮ ಕಲೆಕ್ಷನ್ ಮಾಡಿದ್ದು ಕೆಲವೇ ಸಿನಿಮಾಗಳು ಮಾತ್ರ. ಉತ್ತಮ ಗಳಿಕೆ ಮಾಡಿದ ಹೊರತಾಗಿಯೂ ಗೆದ್ದ ಸಿನಿಮಾಗಳು ತುಂಬಾನೇ ಕಡಿಮೆ ಎಂದು ವರದಿ ಆಗಿದೆ. ವಿಚಿತ್ರ ಎಂದರೆ ಹಾಲಿವುಡ್ ಸಿನಿಮಾಗಳು ಕರ್ನಾಟಕದಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿವೆ. ಆದರೆ, ಕನ್ನಡದ ಸಿನಿಮಾಗಳೇ ಇಲ್ಲಿ ಮಂಕಾಗಿವೆ.

ಇತ್ತೀಚೆಗೆ ರಿಲೀಸ್ ಆದ ಹಾಲಿವುಡ್​ನ ‘ಒಬ್ಸೆಷನ್’ ಸಿನಿಮಾ ಮೆಚ್ಚುಗೆ ಪಡೆದಿದೆ. ಕೇವಲ 7 ಕೋಟಿ ರೂಪಾಯಿ ಬಜೆಟ್​​ನಲ್ಲಿ ಸಿದ್ಧವಾದ ಈ ಸಿನಿಮಾ ವರ್ಡ್​​ವೈಡ್ 2000 ಕೋಟಿ ರೂಪಾಯಿ ಅಷ್ಟು ಗಳಿಕೆ ಮಾಡಿದೆ ಎನ್ನಲಾಗಿದೆ. ಇನ್ನು, ಭಾರತದಲ್ಲಿ ಸಿನಿಮಾದ ಗಳಿಕೆ 50 ಕೋಟಿ ರೂಪಾಯಿ ದಾಟಿದೆ. ಇದು ಚಿತ್ರದ ಹೆಚ್ಚುಗಾರಿಕೆ. ಕರ್ನಾಟಕದಲ್ಲೇ ಈ ಸಿನಿಮಾ 10 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಾ ಇದೆ.

ಹಾಗೆ ನೋಡಿದರೆ ಈ ವರ್ಷ ಕನ್ನಡದ ಸಿನಿಮಾಗಳು 10 ಕೋಟಿ ರೂಪಾಯಿ ಗಳಿಕೆ ಮಾಡಲು ಒದ್ದಾಡಿವೆ. ವಿಕಿಪೀಡಿಯಾ 2026ರನೇ ಸಾಲಿನ ಸಿನಿಮಾಗಳ ಪಟ್ಟಿ ನೀಡಿದೆ. ಇದರಲ್ಲಿ ಈ ವರ್ಷದ ಟಾಪ್ 10 ಸಿನಿಮಾಗಳ ಹೆಸರನ್ನು ಉಲ್ಲೇಖಿಸಿದೆ. ಇದರಲ್ಲಿ ಮೊದಲ ಸ್ಥಾನದಲ್ಲಿ ಕೆಡಿ ಚಿತ್ರ ಇದ್ದು 20 ಕೋಟಿ ರೂಪಾಯಿ ಅಷ್ಟು (ವರ್ಡ್​ ವೈಡ್ ಗ್ರಾಸ್) ಗಳಿಸಿದೆ ಎಂದು ಹೇಳಲಾಗಿದೆ. ಚಿತ್ರದ ಬಜೆಟ್​​ಗೆ ಹೋಲಿಕೆ ಮಾಡಿದರೆ ಸಿನಿಮಾಗೆ ನಷ್ಟ ಆಗಿರುವ ಸಾಧ್ಯತೆ ಹೆಚ್ಚಿದೆ.

ಎರಡನೇ ಸ್ಥಾನದಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ಇದೆ. ಈ ಚಿತ್ರ 14 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಮೂರನೇ ಸ್ಥಾನದಲ್ಲಿ ವಿಜಯ್ ಅವರ ‘ಲ್ಯಾಂಡ್​ ಲಾರ್ಡ್’ ಸಿನಿಮಾ ಇದ್ದು, 13 ಕೋಟಿ ರೂಪಾಯಿ ಗಳಿಸಿದೆ. ಇಷ್ಟು ಸಿನಿಮಾಗಳು ಉತ್ತಮ ಕಲೆಕ್ಷನ್ ಮಾಡಿರುವ ಚಿತ್ರಗಳು.

ಇದನ್ನೂ ಓದಿ: 7 ಕೋಟಿ ರೂ. ಸಿನಿಮಾ, ಗಳಿಸಿದ್ದು 1,700 ಕೋಟಿ; ಅಬ್ಬಬ್ಬಾ ಹೊಸ ದಾಖಲೆ

ಮುಂದಿನ ದಿನಗಳಲ್ಲಿ ‘ಒಬ್ಸೆಷನ್’ ಸಿನಿಮಾದ ಕರ್ನಾಟಕದ ಗಳಿಕೆ ಮತ್ತಷ್ಟು ಹೆಚ್ಚಬಹುದು. ಈ ವರ್ಷ ಕನ್ನಡ ಸಿನಿಮಾ ಮಾಡಿದ ಅತಿ ಹೆಚ್ಚು ಗ್ರಾಸ್ ಅನ್ನು ಕೂಡ ಇದು ಹಿಂದಿಕ್ಕಬಹುದು. ಈ ಎಲ್ಲಾ ಬೆಳವಣಿಗೆ ಮಧ್ಯೆ ಕನ್ನಡ ಸಿನಿಮಾಗಳು ಏಕೆ ಹೆಚ್ಚು ಉತ್ತಮ ಕಲೆಕ್ಷನ್ ಮಾಡುತ್ತಿಲ್ಲ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟದ ವಿಡಿಯೋ ವೈರಲ್: ಸೈಲೆನ್ಸರ್‌ನಲ್ಲಿ ಬೆಂಕಿ ಉಗುಳುತ್ತಾ ಏರ್ಪೋರ್ಟ್ ರಸ್ತೆಯಲ್ಲಿ ಕಾರು ರೇಸಿಂಗ್ – Kannada News | Bengaluru Outrage: Ricky Rai’s Lamborghini Caught Overspeeding on KIA Road, Modified Exhaust

ರಿಕ್ಕಿ ರೈ ಲ್ಯಾಂಬೋರ್ಗಿನಿImage Credit source: Tv9 kannada

ಬೆಂಗಳೂರು, ಜೂ,13: ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಒಡೆತನದ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಮತ್ತೊಮ್ಮೆ ಭಾರಿ ಸದ್ದು ಮಾಡಿದೆ. ಕೆಲವು ತಿಂಗಳುಗಳ ಹಿಂದಷ್ಟೇ ನಗರದ ಹೃದಯಭಾಗದಲ್ಲಿ ರೇಸಿಂಗ್ ಸ್ಟಂಟ್ (ಡ್ರಿಫ್ಟಿಂಗ್) ಮಾಡಿ ಸಿಕ್ಕಿಬಿದ್ದಿದ್ದ ಇದೇ ಕಾರು, ಇದೀಗ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರಸ್ತೆಯಲ್ಲಿ ಅತಿವೇಗದ ಚಾಲನೆ ಮತ್ತು ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.

ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ಹಾಗೂ ಅತಿ ವೇಗವಾಗಿ ಚಾಲನೆ ಮಾಡಲಾಗಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ವೀಡಿಯೋದಲ್ಲಿ ಕಾರಿನ ಸೈಲೆನ್ಸರ್ ಅನ್ನು ಮಾಡಿಫೈ (ಮಾರ್ಪಾಡು) ಮಾಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದ್ದು, ಕಾರು ವೇಗವಾಗಿ ಚಲಿಸುವಾಗ ಸೈಲೆನ್ಸರ್‌ನಿಂದ ಕರ್ಕಶ ಶಬ್ದದೊಂದಿಗೆ ಬೆಂಕಿ ಉಗುಳುವ ದೃಶ್ಯಗಳು ಸೆರೆಯಾಗಿವೆ. ಈ ಪುಂಡಾಟದ ವೀಡಿಯೋ ಭಾರಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೋವನ್ನು ಆಧರಿಸಿ ಸಂಚಾರಿ ಪೊಲೀಸರು ಮತ್ತು ಕಾನೂನು ಸುವ್ಯವಸ್ಥೆ ಪೊಲೀಸರು ಜಂಟಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಘಟನೆ ನಿಖರವಾಗಿ ಯಾವಾಗ ನಡೆದಿದೆ? ಆ ಸಮಯದಲ್ಲಿ ಕಾರಿನೊಳಗೆ ಯಾರ್ಯಾರು ಇದ್ದರು? ಕಾರನ್ನು ಸ್ವತಃ ರಿಕ್ಕಿ ರೈ ಚಲಾಯಿಸುತ್ತಿದ್ದರೇ ಅಥವಾ ಅವರ ಡ್ರೈವರ್ ಚಲಾಯಿಸುತ್ತಿದ್ದರೇ? ಎಂಬಿತ್ಯಾದಿ ಮಾಹಿತಿಗಳನ್ನು ಕಲೆಹಾಕಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪ್ರಾಥಮಿಕ ತನಿಖೆ ನಡೆಸಿ, ಶೀಘ್ರದಲ್ಲೇ ಅತಿವೇಗದ ಚಾಲನೆ ಹಾಗೂ ಸೈಲೆನ್ಸರ್ ಮಾರ್ಪಾಡು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳು ನಿರ್ಧರಿಸಿದ್ದಾರೆ.

ಇದೇ ಕಾರು ಈ ಹಿಂದೆ ಕಳೆದ ಮಾರ್ಚ್ 21 ರಂದು ಬೆಂಗಳೂರಿನ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ಕಾರ್ ಡ್ರೈವಿಂಗ್ ಮಾಡಿ ‘ಡ್ರಿಫ್ಟಿಂಗ್’ ಪ್ರಕರಣದಲ್ಲಿ ಸಿಲುಕಿತ್ತು. ಘಟನೆ ನಡೆದ ಆರಂಭದಲ್ಲಿ “ಅಲ್ಲಿ ಇದ್ದದ್ದು ನಾನಲ್ಲ” ಎಂದು ರಿಕ್ಕಿ ರೈ ವಾದಿಸಿದ್ದರು. ಆದರೆ ಕಬ್ಬನ್ ಪಾರ್ಕ್ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ರಿಕ್ಕಿ ರೈ ಅವರೇ ಕಾರು ಓಡಿಸುತ್ತಿರುವುದು ಪತ್ತೆಯಾಗಿ ಎಫ್‌ಐಆರ್ (FIR) ದಾಖಲಾಗಿತ್ತು.

ಇದನ್ನೂ ಓದಿ: ಸಿನಿಮಾ ಸ್ಟೈಲ್​​ನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್: ರಾಜಾರೋಷವಾಗಿ ರಸ್ತೆ ಮಧ್ಯೆ ಶೋಕಿ

ಆ ಸಮಯದಲ್ಲಿ ರಿಕ್ಕಿ ರೈ ಪರ ವಕೀಲರು, “ರಸ್ತೆ ಸರಿಯಿರಲಿಲ್ಲ, ಹಾಗಾಗಿ ಕಾರು ಸ್ಕಿಡ್ ಆಗಿದೆ. ಈ ವೇಳೆ ನಮ್ಮ ಕಕ್ಷಿದಾರರು ತಮ್ಮ ಚಾಲನಾ ನೈಪುಣ್ಯತೆ ಮೆರೆದು ಅಪಘಾತ ತಪ್ಪಿಸಿದ್ದಾರೆ” ಎಂದು ಕೋರ್ಟ್‌ನಲ್ಲಿ ವಾದಿಸಿದ್ದು ಭಾರಿ ಅಪಹಾಸ್ಯ ಹಾಗೂ ಟ್ರೋಲ್‌ಗೆ ಒಳಗಾಗಿತ್ತು. ನಂತರ ತಪ್ಪು ಒಪ್ಪಿಕೊಂಡು ಕೋರ್ಟ್ ಮುಂದೆ ದಂಡ ಕಟ್ಟಿದ್ದ ರಿಕ್ಕಿ ರೈ, ಈಗ ಮತ್ತೊಮ್ಮೆ ಅದೇ ಕಾರಿನೊಂದಿಗೆ ಸಂಚಾರ ನಿಯಮ ಉಲ್ಲಂಘಿಸಿ ಪೊಲೀಸರ ರಾಡಾರ್‌ಗೆ ಸಿಲುಕಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Thiruvarapu Krishna Temple: ನೈವೇದ್ಯ ತಡವಾದರೆ ಇಲ್ಲಿನ ಕೃಷ್ಣನ ಮೂರ್ತಿ ಸಣ್ಣಗಾಗುತ್ತೆ; ವಿಜ್ಞಾನಕ್ಕೂ ನಿಲುಕದ ವಿಸ್ಮಯ ದೇವಾಲಯವಿದು – Kannada News | Thiruvarappu Krishna Temple: Kerala’s Unique Shrine Where Idol Shrinks Without Food

ತಿರುವರಪ್ಪು ಶ್ರೀಕೃಷ್ಣ ಸ್ವಾಮಿ ದೇವಾಲಯImage Credit source: Pinterest

ಭಾರತವು ತನ್ನ ಪ್ರಾಚೀನ ಸಂಸ್ಕೃತಿ, ಭವ್ಯ ಇತಿಹಾಸ ಮತ್ತು ನಿಗೂಢ ದೇವಾಲಯಗಳಿಗೆ ಜಗತ್ಪ್ರಸಿದ್ಧಿಯಾಗಿದೆ. ನಮ್ಮ ದೇಶದಲ್ಲಿ ಇಂದಿಗೂ ಹಲವು ದೇವಾಲಯಗಳ ಚಮತ್ಕಾರ ಹಾಗೂ ರಹಸ್ಯಗಳು ವಿಜ್ಞಾನಕ್ಕೆ ಸವಾಲಾಗಿವೆ. ಅಂತಹದೇ ಒಂದು ಅಪರೂಪದ ಮತ್ತು ವಿಸ್ಮಯಕಾರಿ ದೇವಾಲಯ ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿದೆ. ಇದು ಭಗವಾನ್ ಶ್ರೀಕೃಷ್ಣನಿಗೆ ಸಮರ್ಪಿತವಾದ ಅತ್ಯಂತ ಪವಿತ್ರ ಕ್ಷೇತ್ರವಾಗಿದೆ.

ಇಲ್ಲಿನ ನಂಬಿಕೆಯ ಪ್ರಕಾರ, ದೇವರಿಗೆ ಒಂದು ದಿನ ನೈವೇದ್ಯ (ಭೋಜನ) ಅರ್ಪಿಸದಿದ್ದರೂ ಸಹ ಇಲ್ಲಿರುವ ಕೃಷ್ಣನ ವಿಗ್ರಹವು ದಿನದಿಂದ ದಿನಕ್ಕೆ ಸಣ್ಣಗಾಗುತ್ತಾ ಹೋಗುತ್ತದೆ. ಇದೇ ಕಾರಣಕ್ಕೆ ಇಲ್ಲಿ ದಿನದ 24 ಗಂಟೆಯೂ ಸಮಯಕ್ಕೆ ಸರಿಯಾಗಿ ಪೂಜೆ, ನೈವೇದ್ಯ ನಡೆಯುತ್ತದೆ. ರಾತ್ರಿ 9 ಗಂಟೆಗೆ ಮುಚ್ಚುವ ದೇವಸ್ಥಾನದ ಬಾಗಿಲನ್ನು, ಮಧ್ಯರಾತ್ರಿ 2 ಗಂಟೆಗೇ ತೆರೆಯಲಾಗುತ್ತದೆ ಮತ್ತು ಮುಂಜಾನೆ 3 ಗಂಟೆಗೆ ದೇವರಿಗೆ ಆಹಾರವನ್ನು ಅರ್ಪಿಸಲಾಗುತ್ತದೆ. ಈ ವಿಶಿಷ್ಟ ದೇವಾಲಯದ ರೋಚಕ ಕಥೆ ಇಲ್ಲಿದೆ:

ಗ್ರಹಣ ಕಾಲದಲ್ಲೂ ಮುಚ್ಚದ ಗರ್ಭಗುಡಿ:

ಸಾಮಾನ್ಯವಾಗಿ ಸೂರ್ಯಗ್ರಹಣ ಅಥವಾ ಚಂದ್ರಗ್ರಹಣದ ಸಮಯದಲ್ಲಿ ದೇಶದಾದ್ಯಂತ ಎಲ್ಲಾ ದೇವಾಲಯಗಳನ್ನು ಮುಚ್ಚಲಾಗುತ್ತದೆ. ಯಾವುದೇ ಪೂಜೆ ಅಥವಾ ನೈವೇದ್ಯಗಳು ನಡೆಯುವುದಿಲ್ಲ. ಆದರೆ, ಕೇರಳದ ತಿರುವರಪ್ಪು ಶ್ರೀಕೃಷ್ಣ ಸ್ವಾಮಿ ದೇವಾಲಯದಲ್ಲಿ (Thiruvarappu Sree Krishna Swamy Temple) ನಿಯಮಗಳೇ ಬೇರೆ!

ಕೇರಳದ ಮೀನಾಚಿಲ್ ನದಿಯ ದಂಡೆಯ ಮೇಲೆ ನೆಲೆಸಿರುವ ಈ ಸುಂದರ ದೇವಾಲಯವು ತನ್ನ ಭವ್ಯ ವಾಸ್ತುಶಿಲ್ಪಕ್ಕೆ ಹೆಸರಾಗಿದೆ. ಹಿಂದೆ ಒಮ್ಮೆ ಸೂರ್ಯಗ್ರಹಣದ ಸಮಯದಲ್ಲಿ ಇತರ ದೇವಾಲಯಗಳಂತೆ ಈ ಮಂದಿರವನ್ನೂ ಮುಚ್ಚಲಾಗಿತ್ತು. ಆದರೆ ಮರುದಿನ ಅರ್ಚಕರು ಗರ್ಭಗುಡಿಯನ್ನು ತೆರೆದಾಗ ಕೃಷ್ಣನ ಮೂರ್ತಿಯನ್ನು ನೋಡಿ ದಂಗಾಗಿದ್ದರು. ದೇವರಿಗೆ ನೈವೇದ್ಯ ಸಿಗದೆ ಕೃಷ್ಣನ ಮೂರ್ತಿ ತೀರಾ ಸಣ್ಣದಾಗಿ, ಕೃಶವಾಗಿ ಕಂಡುಬಂದಿತ್ತು.

ಅರ್ಚಕರು ಕೈಯಲ್ಲಿ ಕೀ ಜೊತೆ ಸುತ್ತಿಗೆಯನ್ನು ಏಕೆ ಇಟ್ಟುಕೊಳ್ಳುತ್ತಾರೆ?

ಗ್ರಹಣದ ದಿನ ನಡೆದ ಈ ಘಟನೆಯಿಂದ ಅರ್ಚಕರೆಲ್ಲರೂ ಕಂಗಾಲಾಗಿದ್ದರು. ಅದೇ ಸಮಯದಲ್ಲಿ ಆದಿ ಶಂಕರಾಚಾರ್ಯರು ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರು ಜ್ಞಾನದೃಷ್ಟಿಯಿಂದ ನೋಡಿ, “ಶ್ರೀಕೃಷ್ಣನನ್ನು ಇಡೀ ದಿನ ಹಸಿದಿಟ್ಟಿದ್ದರಿಂದಲೇ ಮೂರ್ತಿ ಹೀಗಾಗಿದೆ” ಎಂದು ತಿಳಿಸಿದರು. ಅಂದಿನಿಂದ ಇಂದಿನವರೆಗೆ ಗ್ರಹಣವೇ ಇರಲಿ, ಯಾವುದೇ ಸೂತಕವೇ ಇರಲಿ ಈ ದೇವಾಲಯದಲ್ಲಿ ಕೃಷ್ಣನಿಗೆ ನೈವೇದ್ಯ ನಿಲ್ಲಿಸುವುದೇ ಇಲ್ಲ.

ವಿಶ್ವದಲ್ಲೇ ಅತಿ ಮುಂಜಾನೆ, ಅಂದರೆ ರಾತ್ರಿ 3 ಗಂಟೆಗೆ ದೇವರಿಗೆ ಭೋಜನ ಉಣಿಸುವ ಏಕೈಕ ಕೃಷ್ಣ ದೇವಾಲಯ ಇದಾಗಿದೆ. ಸರಿಯಾದ ಸಮಯಕ್ಕೆ ನೈವೇದ್ಯ ಅರ್ಪಿಸಬೇಕಾದ ಕಾರಣ, ರಾತ್ರಿ 2 ಗಂಟೆಗೇ ಗರ್ಭಗುಡಿಯ ಬಾಗಿಲು ತೆರೆಯಲಾಗುತ್ತದೆ. ದೇವಸ್ಥಾನದ ಮುಖ್ಯ ಅರ್ಚಕರು ಬಾಗಿಲಿನ ಚಾವಿ(Door Key) ಯ ಜೊತೆಗೆ ಕೈಯಲ್ಲಿ ಒಂದು ಸುತ್ತಿಗೆಯನ್ನು (Hammer) ಸದಾ ಹಿಡಿದುಕೊಂಡಿರುತ್ತಾರೆ. ಒಂದು ವೇಳೆ ಚಾವಿಯಿಂದ ಬಾಗಿಲು ತೆರೆಯುವುದು ತಡವಾದರೆ, ತಕ್ಷಣವೇ ಸುತ್ತಿಗೆಯಿಂದ ಬೀಗ ಮುರಿದು ಒಳಹೋಗಿ ದೇವರಿಗೆ ಆಹಾರ ನೀಡಲು ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಭಕ್ತರಿಗಾಗಿ ಈ ದೇವಾಲಯ ಬೆಳಿಗ್ಗೆ 5 ರಿಂದ ಸಂಜೆ 7 ರವರೆಗೆ ತೆರೆದಿರುತ್ತವೆ.

ಇದನ್ನೂ ಓದಿ: ಅನುಷ್ಕಾ ಶರ್ಮಾ ಕತ್ತಿನಲ್ಲಿರುವ ತುಳಸಿ ಮಾಲೆ ಗಮನಿಸಿದ್ದೀರಾ? ಧರಿಸುವುದರ ಹಿಂದಿನ ಅಸಲಿ ಕಾರಣ ಇಲ್ಲಿದೆ

ಕೃಷ್ಣನಿಗೆ ನೈವೇದ್ಯ ಅರ್ಪಿಸುವುದು ಏಕೆ ಅಷ್ಟು ಕಡ್ಡಾಯ?

ಪುರಾಣಗಳ ಪ್ರಕಾರ, ಈ ದೇವಾಲಯದಲ್ಲಿ ಸ್ಥಾಪಿಸಲಾದ ಶ್ರೀಕೃಷ್ಣನ ಮೂರ್ತಿಯು ಕಂಸನನ್ನು ವಧಿಸಿದ ನಂತರದ ರೂಪವನ್ನು ಬಿಂಬಿಸುತ್ತದೆ. ಮಹಾ ಯುದ್ಧದ ನಂತರ ಶ್ರೀಕೃಷ್ಣನಿಗೆ ತೀವ್ರವಾದ ಹಸಿವು ಉಂಟಾಗಿತ್ತು ಎನ್ನಲಾಗುತ್ತದೆ. ಆದ್ದರಿಂದಲೇ ಇಲ್ಲಿನ ಕೃಷ್ಣನಿಗೆ ಸರಿಯಾದ ಸಮಯಕ್ಕೆ ಆಹಾರ ನೀಡುವುದು ಅತ್ಯಂತ ಕಡ್ಡಾಯವಾಗಿದೆ. ಇಲ್ಲದಿದ್ದರೆ ಮೂರ್ತಿ ಕರಗಲು ಆರಂಭವಾಗುತ್ತದೆ ಎಂಬುದು ಭಕ್ತರ ಗಾಢ ನಂಬಿಕೆ.

ಇಲ್ಲಿನ ಪ್ರಸಾದದ ವಿಶೇಷತೆ:

ಈ ದೇವಸ್ಥಾನಕ್ಕೆ ಬರುವ ಭಕ್ತರು ಇಲ್ಲಿನ ಪ್ರಸಾದವನ್ನು ಪಡೆದುಕೊಳ್ಳದೇ ವಾಪಸ್ ಹೋಗಬಾರದು ಎಂಬ ಕಠಿಣ ನಿಯಮವಿದೆ. ಇಲ್ಲಿನ ಪ್ರಸಾದವನ್ನು ಸೇವಿಸುವುದರಿಂದ ನವಗ್ರಹ ದೋಷ, ಗ್ರಹಣ ದೋಷ, ಸಂತಾನ ದೋಷ, ಸರ್ಪ ದೋಷ, ವಿವಾಹದ ಅಡೆತಡೆಗಳು ಮತ್ತು ಬ್ರಹ್ಮಹತ್ಯೆಯಂತಹ ಮಹಾ ಪಾಪಗಳೂ ಸಹ ನಿವಾರಣೆಯಾಗುತ್ತವೆ ಎಂದು ಸ್ಥಳೀಯರು ನಂಬುತ್ತಾರೆ.

ದೇವಾಲಯದ ಆವರಣದ ವಿಶೇಷತೆ:

ಈ ವಿಶಿಷ್ಟ ದೇವಾಲಯದ ನಾಲ್ಕೂ ದಿಕ್ಕುಗಳ ಗೋಡೆಗಳ ಮೇಲೆ ವಿವಿಧ ದೇವತೆಗಳ ಮೂರ್ತಿಗಳಿವೆ. ಮೂಡಣದಲ್ಲಿ (ಪೂರ್ವ) ಕೋಚಂಬಲಂ ಜಿ ದೇವಸ್ಥಾನವಿದ್ದರೆ, ಉತ್ತರದಲ್ಲಿ ಶಿವ ಮತ್ತು ನರಸಿಂಹ ಸ್ವಾಮಿಯ ಮೂರ್ತಿಗಳಿವೆ. ಪಶ್ಚಿಮದಲ್ಲಿ ಗಣಪತಿ, ಸುಬ್ರಹ್ಮಣ್ಯ ಹಾಗೂ ಶಾಸ್ತಾ (ಅಯ್ಯಪ್ಪ) ನೆಲೆಸಿದ್ದರೆ, ದಕ್ಷಿಣದಲ್ಲಿ ಯಕ್ಷ ಮತ್ತು ಗಂಧರ್ವರ ಸನ್ನಿಧಿಯಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದುಬೈ ರಸ್ತೆ ಅಪಘಾತ ಸಂತ್ರಸ್ತರಿಗೆ ನೆರವಾದ ಅನಿವಾಸಿ ಭಾರತೀಯ ಉದ್ಯಮಿ: 2.6 ಕೋಟಿ ರೂ. ನೆರವು ಘೋಷಿಸಿದ ಡಾ. ಶಂಶೀರ್ ವಯಾಲಿಲ್ – Kannada News | Dubai Road Accident: NRI Philanthropist Dr Shamsheer Vayalil Announces Rs 2.6 Crore Relief Package for Deceased Families

ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಚಿತ್ರImage Credit source: tv9

ದುಬೈ, ಜೂನ್ 13: ದುಬೈನ ಎಮಿರೇಟ್ಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಾಗೂ ಗಾಯಗೊಂಡ ಕಾರ್ಮಿಕರ ಕುಟುಂಬಗಳಿಗೆ ನೆರವಾಗಲು ಪ್ರಮುಖ ಅನಿವಾಸಿ ಭಾರತೀಯ ಉದ್ಯಮಿ, ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಸಿಇಒ ಡಾ. ಶಂಶೀರ್ ವಯಾಲಿಲ್ 2.6 ಕೋಟಿ ರೂ. ಮೊತ್ತದ ಬೃಹತ್ ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟ ಏಳು ಕಾರ್ಮಿಕರ ಕುಟುಂಬಗಳು ಹಾಗೂ ಗಾಯಗೊಂಡ ಒಂಬತ್ತು ಮಂದಿಗೆ ಆರ್ಥಿಕ ಚೇತರಿಕೆ, ತುರ್ತು ಪ್ರಯಾಣ ಮತ್ತು ಮಕ್ಕಳ ಶಿಕ್ಷಣಕ್ಕಾಗಿ ಈ ನೆರವು ಒದಗಿಸಲಾಗುತ್ತಿದೆ.

ಮುಖ್ಯಾಂಶಗಳು

  • ಸಂತ್ರಸ್ತರ ಕುಟುಂಬಗಳಿಗೆ ಭಾರಿ ಆರ್ಥಿಕ ನೆರವು.
  • ಮೃತರ ಕುಟುಂಬಕ್ಕೆ ತಲಾ 26 ಲಕ್ಷ ರೂ.
  • ಗಾಯಾಳುಗಳ ವೈದ್ಯಕೀಯ ಚಿಕಿತ್ಸೆಗೆ ವಿಶೇಷ ಧನಸಹಾಯ.

ಯಾರಿಗೆ ಎಷ್ಟೆಷ್ಟು ಆರ್ಥಿಕ ಸಹಾಯ?

ಡಾ. ಶಂಶೀರ್ ವಯಾಲಿಲ್ ಅವರ ಈ ಮಾನವೀಯ ಕಾರ್ಯಕ್ರಮದ ಅಡಿಯಲ್ಲಿ, ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಏಳು ಸಂತ್ರಸ್ತರ ಕುಟುಂಬಗಳಿಗೆ ತಲಾ 26 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು. ಇನ್ನು ತೀವ್ರವಾಗಿ ಗಾಯಗೊಂಡಿರುವ ಒಂಬತ್ತು ಮಂದಿ ಬದುಕುಳಿದವರ ವೈದ್ಯಕೀಯ ಮತ್ತು ಚಿಕಿತ್ಸೆ ಅಗತ್ಯತೆಗಳ ಆಧಾರದ ಮೇಲೆ ಒಟ್ಟು 47 ಲಕ್ಷ ರೂ. ಹಣವನ್ನು ಹಂಚಿಕೆ ಮಾಡಲಾಗಿದೆ. ಇದರೊಂದಿಗೆ, ಸಂತ್ರಸ್ತರ ಕುಟುಂಬಸ್ಥರ ತುರ್ತು ದುಬೈ ಪ್ರಯಾಣ ಮತ್ತು ವಸತಿ ಸೌಕರ್ಯಕ್ಕಾಗಿ 18 ಲಕ್ಷ ರೂ. ಹಾಗೂ ಅಪಘಾತದಿಂದ ಆಧಾರ ಕಳೆದುಕೊಂಡ ಕುಟುಂಬಗಳ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ 13 ಲಕ್ಷ ರೂ. ನೆರವನ್ನು ಮೀಸಲಿಡಲಾಗಿದೆ.

ಅಪಘಾತದ ಹಿನ್ನೆಲೆ ಮತ್ತು ಸಂತ್ರಸ್ತರ ವಿವರ

ದುಬೈ ಮೂಲದ ಕಂಪನಿಯೊಂದರ ಉದ್ಯೋಗಿಗಳನ್ನು ಹೊತ್ತೊಯ್ಯುತ್ತಿದ್ದ ಮಿನಿಬಸ್, ತಾಂತ್ರಿಕ ದೋಷದಿಂದ ರಸ್ತೆಯಲ್ಲಿ ನಿಂತಿದ್ದ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿತ್ತು. ಅಪಘಾತಕ್ಕೊಳಗಾದವರಲ್ಲಿ ಭಾರತ, ಶ್ರೀಲಂಕಾ ಮತ್ತು ನೇಪಾಳದ ಕಾರ್ಮಿಕರಿದ್ದಾರೆ. ಮೃತಪಟ್ಟ ಏಳು ಜನರಲ್ಲಿ ಆರು ಮಂದಿ ಭಾರತೀಯರು (ಮೂವರು ಉತ್ತರ ಪ್ರದೇಶ ಹಾಗೂ ಮೂವರು ತೆಲಂಗಾಣದವರು) ಮತ್ತು ಒಬ್ಬರು ಶ್ರೀಲಂಕಾದ ಪ್ರಜೆಯಾಗಿದ್ದಾರೆ. ಗಾಯಗೊಂಡ ಒಂಬತ್ತು ಜನರಲ್ಲಿ ಎಂಟು ಮಂದಿ ಭಾರತೀಯರಾಗಿದ್ದು (ಇಬ್ಬರು ಕೇರಳದವರು), ಒಬ್ಬರು ನೇಪಾಳದವರಾಗಿದ್ದಾರೆ. ಗಾಯಾಳುಗಳ ಪೈಕಿ ಐವರು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಮೂವರು ಭಾರತೀಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತೀಯ ರಾಯಭಾರ ಕಚೇರಿ ಜೊತೆ ಸಮನ್ವಯ

ಈ ಆರ್ಥಿಕ ಸಹಾಯವನ್ನು ಅರ್ಹ ಕುಟುಂಬಗಳಿಗೆ ಸಮರ್ಪಕವಾಗಿ ತಲುಪಿಸಲು ದುಬೈನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ (Indian Consulate) ಸಮನ್ವಯ ಸಾಧಿಸಲಾಗುತ್ತಿದೆ. ‘ನಾವು ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ಮಾನವೀಯತೆಯ ದೃಷ್ಟಿಯಿಂದ ಈ ಅಪಘಾತದಿಂದ ತೊಂದರೆಗೊಳಗಾದ ಎಲ್ಲಾ ದೇಶಗಳ ಸಂತ್ರಸ್ತರಿಗೂ ನೆರವು ವಿಸ್ತರಿಸಲಾಗುವುದು’ ಎಂದು ಡಾ. ಶಂಶೀರ್ ತಿಳಿಸಿದ್ದಾರೆ.

ಬುರ್ಜೀಲ್ ಹೋಲ್ಡಿಂಗ್ಸ್ ಸಂಸ್ಥೆಯ ಚೇರ್ಮನ್ ಹಾಗೂ ಸಿಇಒ ಡಾ. ಶಂಶೀರ್ ವಯಾಲಿಲ್

ಈ ಹಿಂದೆಯೂ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಗಳಿಗೆ ಡಾ. ಶಂಶೀರ್ 6 ಕೋಟಿ ರೂ. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದರು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಯುದ್ಧದ ನಡುವೆ ಫಿಫಾ ವಿಶ್ವಕಪ್​​ಗೆ ಇರಾನ್ ಎಂಟ್ರಿ..! – Kannada News | Iran football team arrives in Mexico for fifa World Cup 2026

2026ರ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಇರಾನ್ ಕಣಕ್ಕಿಳಿಯಲಿದೆಯಾ? ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಏಕೆಂದರೆ ಫಿಫಾ ವಿಶ್ವಕಪ್​ಗಾಗಿ ಈಗಾಗಲೇ ಇರಾನ್ ರಾಷ್ಟ್ರೀಯ ಫುಟ್‌ಬಾಲ್ ಮೆಕ್ಸಿಕೋದ ಟಿಜುವಾನಾ ನಗರಕ್ಕೆ ಬಂದು ತಲುಪಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ವೀಸಾ ಗೊಂದಲಗಳಿಂದಾಗಿ ಈ ಬಾರಿ ಇರಾನ್ ಕಣಕ್ಕಿಳಿಯುವುದು ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ಇರಾನ್ ಪಡೆ ವಿಶ್ವಕಪ್​ ಆಡಲು ಸಕಲ ರೀತಿಯಲ್ಲೂ ಸಜ್ಜಾಗಿ ನಿಂತಿದೆ.

ಇರಾನ್ ಹೋಗಿದ್ದು ಹೇಗೆ?

ಈ ಬಾರಿಯ ಫಿಫಾ ವಿಶ್ವಕಪ್ ಆಯೋಜಿಸುತ್ತಿರುವುದು ಅಮೆರಿಕ, ಕೆನಡಾ ಮತ್ತು ಮೆಕ್ಸಿಕೋ. ಆದರೆ ಇರಾನ್ ದೇಶದ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ಇರಾನ್ ಏರ್ ವಿಮಾನಗಳು ಅಮೆರಿಕದ ವಾಯುಪ್ರದೇಶವನ್ನು ಪ್ರವೇಶಿಸಲು ಅನುಮತಿ ನೀಡಿರಲಿಲ್ಲ. ಹೀಗಾಗಿಯೇ ಇರಾನ್ ಈ ಬಾರಿ ಕಣಕ್ಕಿಳಿಯುವುದಿಲ್ಲ ಎಂದು ಎಲ್ಲರೂ ಭಾವಿಸಿದ್ದರು.

ಅದರಲ್ಲೂ ಇರಾನ್ ಮೇಲೆ ಅಮೆರಿಕ/ಇಸ್ರೇಲ್ ದಾಳಿ ಮಾಡುತ್ತಿದ್ದರಿಂದ ವಿಶ್ವಕಪ್​ಗೆ ತೆರಳುವುದು ಸವಾಲಾಗಿತ್ತು. ಆದರೆ ಎಲ್ಲರ ಲೆಕ್ಕಾಚಾರಗಳನ್ನು ತಲೆಕಳಗಾಗಿಸಿ ಇರಾನ್ ರಾಷ್ಟ್ರೀಯ ಫುಟ್​ಬಾಲ್ ತಂಡ ಪ್ರಯಾಣಿಸಿದೆ.

ಇರಾನ್​ನಿಂದ ಟರ್ಕಿಗೆ ತೆರಳಿದ ಇರಾನ್ ಫುಟ್​ಬಾಲ್ ತಂಡವು ಅಲ್ಲಿಂದೆ ಸ್ಲೇನ್​ಗೆ ಹೋಗಿದ್ದಾರೆ. ಸ್ಪೇನ್​ನಿಂದ ನೇರವಾಗಿ ಮೆಕ್ಸಿಕೋದ ಗಡಿ ನಗರವಾದ ಟಿಜುವಾನಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇದೀಗ ಮೆಕ್ಸಿಕೋದಲ್ಲಿ ಇರಾನ್ ತಂಡವು ಅಭ್ಯಾಸವನ್ನು ಆರಂಭಿಸಿದ್ದಾರೆ.

ಅಮೆರಿಕದ ವೀಸಾ ನಿರಾಕರಣೆ!

ವಿಶ್ವಕಪ್‌ನ ಗ್ರೂಪ್ ‘ಜಿ’ ನಲ್ಲಿರುವ ಇರಾನ್ ತಂಡದ ಎಲ್ಲಾ ಮೂರು ಪಂದ್ಯಗಳು ಅಮೆರಿಕದ ಮೈದಾನಗಳಲ್ಲೇ ನಿಗದಿಯಾಗಿವೆ. ಆದಾಗ್ಯೂ, ಇರಾನ್ ಆಟಗಾರರು ಮತ್ತು ಸಿಬ್ಬಂದಿಗೆ ಅಮೆರಿಕ ಕಠಿಣ ನಿಯಮಗಳನ್ನು ವಿಧಿಸಿದೆ.

ಇರಾನ್ ಫುಟ್‌ಬಾಲ್ ಫೆಡರೇಶನ್ ಮೊದಲು ಅರಿಜೋನಾದಲ್ಲಿ ತರಬೇತಿ ಪಡೆಯಲು ಯೋಜಿಸಿತ್ತು. ಆದರೆ ಅಮೆರಿಕ ಸರ್ಕಾರವು ಆಟಗಾರರಿಗೆ ವೀಸಾ ನೀಡಿದರೂ, ತಂಡದ ಮ್ಯಾನೇಜರ್ ಮಹ್ದಿ ಮೊಹಮ್ಮದ್ ನಬಿ ಮತ್ತು ಪ್ರಧಾನ ಕಾರ್ಯದರ್ಶಿ ಹೆದಾಯತ್ ಮೊಂಬೆನಿ ಸೇರಿದಂತೆ 15 ಪ್ರಮುಖ ಸಹಾಯಕ ಸಿಬ್ಬಂದಿಗೆ ವೀಸಾ ನಿರಾಕರಿಸಿದೆ. ಅಲ್ಲದೆ ಇರಾನ್ ತಂಡದ ಸದಸ್ಯರು ಅಮೆರಿಕದಲ್ಲಿ ರಾತ್ರಿ ತಂಗುವಂತಿಲ್ಲ ಎಂದು ತಿಳಿಸಿದೆ.

ಇದೀಗ ಇರಾನ್ ಆಟಗಾರರು ಪಂದ್ಯ ನಡೆಯುವ ದಿನದಂದೇ ಮೆಕ್ಸಿಕೋದಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿ, ಪಂದ್ಯ ಮುಗಿದ ತಕ್ಷಣವೇ ವಾಪಸ್ ಮೆಕ್ಸಿಕೋಗೆ ಮರಳಲು ಯೋಜನೆ ರೂಪಿಸಿದ್ದಾರೆ. ಈ ಮೂಲಕ ಫಿಫಾ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದನ್ನು ಇರಾನ್ ಖಚಿತಪಡಿಸಿದೆ.

ಇರಾನ್ ಅಭಿಮಾನಿಗಳಿಗೆ ನಿರ್ಬಂಧ!

ಇರಾನ್ ತಂಡಕ್ಕೆ ಅಮೆರಿಕಕ್ಕೆ ಬರಲು ನಿಯಮ ಸಡಿಸಿದರೂ, ಯುಎಸ್​ಎ ಇರಾನ್ ಅಭಿಮಾನಿಗಳಿಗೆ ನಿರ್ಬಂಧ ವಿಧಿಸಿದೆ. ಅಲ್ಲದೆ ಭದ್ರತಾ ಕಾರಣಗಳಿಂದಾಗಿ ಫಿಫಾ (FIFA) ಇರಾನ್ ಅಭಿಮಾನಿಗಳಿಗೆ ನಿಗದಿಪಡಿಸಿದ್ದ ಟಿಕೆಟ್ ಕೋಟಾವನ್ನು ರದ್ದುಗೊಳಿಸಿದೆ. ಇದರಿಂದಾಗಿ ಇರಾನ್ ತಂಡವು ಮೈದಾನದಲ್ಲಿ ಅಭಿಮಾನಿಗಳ ಬೆಂಬಲವಿಲ್ಲದೆ ಆಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2026ರ ಫಿಫಾ ವಿಶ್ವಕಪ್‌ನಲ್ಲಿ ಇರಾನ್ ಫುಟ್‌ಬಾಲ್ ತಂಡದ ಪಯಣವು ಕೇವಲ ಕ್ರೀಡೆಯಾಗಿ ಉಳಿದಿಲ್ಲ. ಬದಲಿಗೆ ರಾಜತಾಂತ್ರಿಕ ಸಂಘರ್ಷಗಳು ಮತ್ತು ಕಠಿಣ ಸವಾಲುಗಳ ನಡುವಿನ ಹೋರಾಟವಾಗಿ ಮಾರ್ಪಟ್ಟಿದೆ. ಅಮೆರಿಕದ ಕಠಿಣ ನಿರ್ಬಂಧಗಳ ನಡುವೆಯೂ ಮೆಕ್ಸಿಕೋವನ್ನು ತಮ್ಮ ತಾತ್ಕಾಲಿಕ ನೆಲೆಯಾಗಿಸಿಕೊಂಡಿರುವ ಇರಾನ್ ಆಟಗಾರರು, ಕೇವಲ ಎದುರಾಳಿ ತಂಡಗಳ ವಿರುದ್ಧ ಮಾತ್ರವಲ್ಲದೆ ಭೌಗೋಳಿಕ ಸವಾಲುಗಳ ವಿರುದ್ಧವೂ ಹೋರಾಡಬೇಕಿದೆ.  ಅಭಿಮಾನಿಗಳ ಅಬ್ಬರವಿಲ್ಲದ, ಸ್ವಂತ ತರಬೇತುದಾರರ ಬೆಂಬಲ ಕಳೆದುಕೊಂಡಿರುವ ಇರಾನ್ ತಂಡವು ಮೈದಾನದಲ್ಲಿ ಹೇಗೆ ಪ್ರದರ್ಶನ ನೀಡಲಿದೆ ಎಂಬುದು ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: 7 ಭರ್ಜರಿ ದಾಖಲೆಗಳನ್ನು ಬದಿಗಿಟ್ಟು ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್!

ಇರಾನ್ ತಂಡದ ಪಂದ್ಯಗಳ ವೇಳಾಪಟ್ಟಿ (ಗ್ರೂಪ್ G):

  •  ಜೂನ್ 15: ಇರಾನ್ vs ನ್ಯೂಝಿಲೆಂಡ್ (ಲಾಸ್ ಏಂಜಲೀಸ್ ಸ್ಟೇಡಿಯಂ, ಕ್ಯಾಲಿಫೋರ್ನಿಯಾ)
  • ಜೂನ್ 21: ಇರಾನ್ vs ಬೆಲ್ಜಿಯಂ (ಲಾಸ್ ಏಂಜಲೀಸ್ ಸ್ಟೇಡಿಯಂ, ಕ್ಯಾಲಿಫೋರ್ನಿಯಾ)
  • ಜೂನ್ 26: ಇರಾನ್ vs ಈಜಿಪ್ಟ್ (ಸಿಯಾಟಲ್ ಸ್ಟೇಡಿಯಂ, ವಾಷಿಂಗ್ಟನ್)

Source link

Exit mobile version