ವಿಜಯ್ ಬಳಿಕ ತೆಲುಗು ರಾಜ್ಯಗಳಲ್ಲಿ ಜೂ ಎನ್​​ಟಿಆರ್, ರಾಜಕೀಯ ಎಂಟ್ರಿ ಸುಳಿವು ಕೊಟ್ಟ ನಟ? – Kannada News | Jr NTR to start 100 crore rs welfare fund, will he enter politics

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ಸೂಪರ್ ಸ್ಟಾರ್ ಆಗಿ ಸಿಕ್ಕ ಪ್ರಚಾರ, ಜನಪ್ರಿಯತೆಯನ್ನು ಅವರು ರಾಜಕೀಯ ಪ್ರವೇಶಕ್ಕೆ ಮೆಟ್ಟಿಲಾಗಿ ಬಳಸಿಕೊಂಡಿದ್ದು ಮಾತ್ರವಲ್ಲದೆ ಸಿಎಂ ಸಹ ಆಗಿದ್ದಾರೆ. ವಿಜಯ್ ಅವರ ಈ ಯಶಸ್ಸು, ಇತರೆ ಕೆಲವು ಸೂಪರ್ ಸ್ಟಾರ್​​ಗಳಲ್ಲಿ ರಾಜಕೀಯ ಮಹಾತ್ವಾಕಾಂಕ್ಷೆಯನ್ನು ಹುಟ್ಟಿಸಿರುವುದು ಸುಳ್ಳಲ್ಲ. ವಿಜಯ್ ಸಿಎಂ ಆದ ಬೆನ್ನಲ್ಲೆ, ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಜೂ ಎನ್​​ಟಿಆರ್ ಸಹ ತಮ್ಮ ರಾಜಕೀಯ ಎಂಟ್ರಿಯನ್ನು ಪರೋಕ್ಷವಾಗಿ ಪ್ರದರ್ಶಿಸಿದ್ದಾರೆ. ಅವರ ಹುಟ್ಟುಹಬ್ಬದಂದು…

Read More

ಕಮರ್ಷಿಯಲ್ ಗ್ಯಾಸ್ ಬೆಲೆ ಸತತ ಮೂರನೇ ತಿಂಗಳು ಏರಿಕೆ; ಬೆಂಗಳೂರು ಮೊದಲಾದೆಡೆ ಹೊಸ ಎಲ್​ಪಿಜಿ ದರಗಳಿವು – Kannada News | LPG cooking gas prices revised, commercial lpg cylinder prices hiked for 4th time in 6 months

ನವದೆಹಲಿ, ಮಾರ್ಚ್ 1: ಕಮರ್ಷಿಯಲ್ ಎಲ್​ಪಿಜಿ ದರಗಳು (Commercial LPG prices) ಸತತ ಮೂರನೇ ತಿಂಗಳು ಏರಿಕೆ ಆಗಿವೆ. ಕಳೆದ ಆರು ತಿಂಗಳಲ್ಲಿ ನಾಲ್ಕನೇ ಬಾರಿ ಕಮರ್ಷಿಯಲ್ ಗ್ಯಾಸ್ ಬೆಲೆ ಹೆಚ್ಚಳ ಆಗಿದೆ. ತಿಂಗಳ ಮೊದಲ ದಿನವಾದ ಮಾರ್ಚ್ 1ರಂದು ಭಾರತದಲ್ಲಿ 19 ಕಿಲೋ ಕಮರ್ಷಿಯಲ್ ಎಲ್​ಪಿಜಿ ದರಗಳು 28ರಿಂದ 31ರೂವರೆಗೆ ಏರಿವೆ. ದೆಹಲಿ, ಮುಂಬೈ ಮೊದಲಾದೆಡೆ ಇದರ ಬೆಲೆ 28 ರೂ ಹೆಚ್ಚಿದರೆ, ಕೋಲ್ಕತಾದಲ್ಲಿ 31 ರೂ ಹೆಚ್ಚಿದೆ. 47.5 ಕಿಲೋ ಕಮರ್ಷಿಯಲ್ ಎಲ್​ಪಿಜಿ ದರಗಳೂ…

Read More

ಪ್ರಯಾಣಿಕರಿದ್ದ ಕುವೈತ್ ವಿಮಾನ ನಿಲ್ದಾಣದ ಮೇಲೂ ಇರಾನ್ ದಾಳಿ – Kannada News | Iranian drone strike hit Kuwait International Airport flight Canceled Amid Iran Attacks

ನವದೆಹಲಿ, ಫೆಬ್ರವರಿ 28: ಅಮೆರಿಕ ಮತ್ತು ಇಸ್ರೇಲ್ ಸೇರಿ ತಮ್ಮ ದೇಶದ ಮೇಲೆ ದಾಳಿ ನಡೆಸಿದೆ ಎಂಬ ಕಾರಣಕ್ಕೆ ಇರಾನ್ (Iran War) ಕಂಡ-ಕಂಡ ದೇಶಗಳ ಮೇಲೆಲ್ಲ ವೈಮಾನಿಕ ದಾಳಿ ನಡೆಸುತ್ತಿದೆ. ದುಬೈ, ಬಹ್ರೇನ್, ಅಬುಧಾಬಿಯಲ್ಲಿ ಅಮೆರಿಕದ ವಾಯುನೆಲೆಯ ಮೇಲೆ ದಾಳಿ ನಡೆಸಲಾಗಿದೆ. ದುಬೈನಲ್ಲಿ ಜನಪ್ರಿಯ ಕಟ್ಟಡಗಳ ಮೇಲೂ ದಾಳಿ ನಡೆಸಲಾಗಿದೆ. ಇದೀಗ ಕುವೈತ್​​ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆಸಿರುವ ಇರಾನ್ ಅಮಾಯಕ ಜನರಿರುವ ಸ್ಥಳಗಳನ್ನು ಕೂಡ ಗುರಿಯಾಗಿಸಿಕೊಂಡಿದೆ. ಇರಾನ್‌ನಿಂದ ಹಾರಿಸಲಾದ ಡ್ರೋನ್ ಕುವೈತ್…

Read More

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!

ಬೆಂಗಳೂರು, ಜೂನ್ 03):  ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ…

Read More

BCCI Awards: ಕನ್ನಡಿಗ ರಾಹುಲ್ ದ್ರಾವಿಡ್​ಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಪ್ರತಿ ವರ್ಷದಂತೆ ಈ ವರ್ಷವೂ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯಲ್ಲಿ ಹಮ್ಮಿಕೊಂಡಿತ್ತು. ಈ ಸಮಾರಂಭದಲ್ಲಿ ಕಳೆದ ವರ್ಷದಲ್ಲಿ ಅಂತರರಾಷ್ಟ್ರೀಯ ಹಾಗೂ ದೇಶಿಯ ಕ್ರಿಕೆಟ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಆಟಗಾರರು ಮತ್ತು ಆಟಗಾರ್ತಿಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ಐಸಿಸಿ ಟ್ರೋಫಿಗಳನ್ನು ಗೆದ್ದಿದ್ದ ಪುರುಷರ ಹಾಗೂ ಮಹಿಳಾ ತಂಡಗಳನ್ನು ಗೌರವಿಸಲಾಯಿತು. ಇದೇ ವೇಳೆ ಕನ್ನಡಿಗ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್​ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬಿಸಿಸಿಐ, ಕನ್ನಡಿಗ ರಾಹುಲ್…

Read More

Video: ಏಳು ಅಭ್ಯಾಸಗಳನ್ನು ಅಳವಡಿಸಿಕೊಂಡು ತನ್ನ ಖರ್ಚು ವೆಚ್ಚಕ್ಕೆ ಬ್ರೇಕ್ ಹಾಕಿದ ಬೆಂಗಳೂರಿಗ – Kannada News | Bengaluru: A Bengaluru man put a stop to spending by adopting seven habits

ಬೆಂಗಳೂರು, ಮೇ 26: ಬೆಂಗಳೂರು (Bengaluru) ಅಂದ್ರೆ ದುಬಾರಿ. ಇಲ್ಲಿ ಕೈ ತುಂಬಾ ಸಂಬಳ ಇರುವ ಉದ್ಯೋಗವೇನೋ ಸಿಗುತ್ತದೆ. ಆದರೆ ಖರ್ಚು ಅಷ್ಟೇ ಇದೆ ಅನ್ನೋದು ಅನೇಕರ ಅಭಿಪ್ರಾಯ. ಮಾಯಾನಗರದಲ್ಲಿ ತಿಂಗಳ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಉಳಿತಾಯ ಮಾಡುವುದು ಸುಲಭವಲ್ಲ. ಆದರೆ ಬೆಂಗಳೂರಿನ ವ್ಯಕ್ತಿಯೊಬ್ಬರು ತನ್ನ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿದ್ದಾರೆ. ಉತ್ತಮ ಅಭ್ಯಾಸಗಳು ಚುರುಕಾದ ಆಯ್ಕೆಗಳಿಂದ ದುಡ್ಡು ಖರ್ಚಾಗುವುದನ್ನು ತಪ್ಪಿಸಿದ್ದಾರೆ. ತಾನು ಅಳವಡಿಸಿಕೊಂಡ ಏಳು ಅಭ್ಯಾಸಗಳನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ….

Read More

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

ತವರಿನಲ್ಲಿ ತನ್ನ ಮೊದಲ ಪಂದ್ಯವನ್ನಾಡುತ್ತಿರುವ ಸನ್‌ರೈಸರ್ಸ್ ಹೈದರಾಬಾದ್‌ ತಂಡ, ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಸನ್‌ರೈಸರ್ಸ್ ತಂಡಕ್ಕೆ ಆರಂಭದಲ್ಲೇ 4 ಆಘಾತಗಳು ಎದುರಾಗಿವೆ. ಲೀಗ್​ನಲ್ಲಿ ಮೂರನೇ ಪಂದ್ಯವನ್ನಾಡುತ್ತಿರುವಸನ್‌ರೈಸರ್ಸ್ ತಂಡಕ್ಕೆ ಮೊದಲ ಪಂದ್ಯಸಲ್ಲಿ ಸಾಧಾರಣ ಆರಂಭ ಸಿಕ್ಕಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆರಂಭಿಕರಿಬ್ಬರು ಅಬ್ಬರಿಸಿದ್ದರು. ಹೀಗಾಗಿ ಮೂರನೇ ಪಂದ್ಯದಲ್ಲೂ ಅದನ್ನೇ ನಿರೀಕ್ಷಿಸಲಾಗಿತ್ತು. ಆದರೆ ಮೂರನೇ ಪಂದ್ಯದಲ್ಲಿ…

Read More

ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್​​ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ? – Kannada News | Kalaburagi pocso case accused hanged police probe suicide or foul play

ಕಲಬುರಗಿ, ಏಪ್ರಿಲ್​​ 20: ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾಗಿ ಪೋಕ್ಸೋ ಕೇಸ್​​ ಎದುರಿಸುತ್ತಿದ್ದ ಯುವಕನೋರ್ವನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನಲ್ಲಿ ನಡೆದಿದೆ. ರೇವಣಸಿದ್ದಪ್ಪ ತಳಕೇರಿ (26) ಮೃತನಾಗಿದ್ದು, ಶೌಚಕ್ಕೆ ಹೋಗಿ ಬರೋದಾಗಿ ಹೇಳಿ ಹೋರಹೋದವ ಊರಾಚೆಗಿನ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ರೇವಣಸಿದ್ದಪ್ಪ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಟಂಟಂ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ರೇವಣಸಿದ್ದಪ್ಪ, ತನ್ನದೇ ಆಟೋದಲ್ಲಿ ನಿತ್ಯ…

Read More

ಸಿನೆಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​! – Kannada News | Vijayapura Police Crack Raju Khari Murder: Property Dispute Behind Brutal Cinema Style Killing

ವಿಜಯಪುರ, ಏಪ್ರಿಲ್​​ 24: ಅಲಿಯಾಬಾದ್ ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ರಾಜು ಖರಿ (48) ಏಪ್ರಿಲ್ 14ರಂದು ಭೀಕರವಾಗಿ ಕೊಲೆಯಾಗಿದ್ದರು. ಅಲಿಯಾಬಾದ್ ಬಳಿಯ ಕೈಗಾರಿಕಾ ಪ್ರದೇಶದ ಬಳಿ ಸಿನಿಮಾ ಸ್ಟೈಲ್​​ನಲ್ಲಿ ದಾಳಿ ನಡೆಸಿದ್ದ ಆರೋಪಿಗಳು ರಾಜು ಅವರನ್ನು ಬರ್ಬರವಾಗಿ ಕೊಂದಿದ್ದರು. ಪ್ರಕರಣ ಸಂಬಂಧ ಆರೋಪಿಗಳ ಕೈಗೆ ಕೋಳ ತೊಡಿಸಿರುವ ಪೊಲೀಸರು, ಆಸ್ತಿ ವಿವಾದವೇ ಡೆಡ್ಲಿ ಮರ್ಡರ್​​ಗೆ ಕಾರಣ ಎಂಬುದನ್ನು ಬಹಿರಂಗಪಡಿಸಿದ್ದಾರೆ. ಆ ಮೂಲಕ ಗ್ರಾಮ ಪಂಚಾಯತಿಯ ಮಾಜಿ ಸದಸ್ಯನ ಕೊಲೆಗೆ ಅಸಲಿ ಕಾರಣ ಏನೆಂಬುದು ಬಹಿರಂಗಗೊಂಡಿದೆ. ತಮ್ಮ…

Read More

‘ಧುರಂದರ್ 2’ ಚಿತ್ರದ ಎದುರು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಗಳಿಸಿದ್ದೆಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ಎಷ್ಟು ದೊಡ್ಡ ಸಿನಿಮಾ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ರಿಲೀಸ್ ಆಗಬೇಕು ಎಂದರೆ ಚಿತ್ರದ ಬಗ್ಗೆ ಅಷ್ಟು ಕಾನ್ಫಿಡೆನ್ಸ್ ಇರಬೇಕು. ಡಾರ್ಲಿಂಗ್ ಕೃಷ್ಣ ಅವರಿಗೆ ‘ಲವ್ ಮಾಕ್ಟೇಲ್ 3’ ಚಿತ್ರದ ಬಗ್ಗೆ ಆ ವಿಶ್ವಾಸ ಇದೆ. ಈ ಕಾರಣದಿಂದಲೇ ‘ಧುರಂಧರ್ 2’ ಸಿನಿಮಾ ಎದುರು ‘ಲವ್ ಮಾಕ್ಟೇಲ್ 3’ ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಈ ಸಿನಿಮಾ ಮೊದಲ ದಿನ ಒಳ್ಳೆಯ ಕಲೆಕ್ಷನ್ ಮಾಡಿದೆ. ‘ಲವ್ ಮಾಕ್ಟೇಲ್’, ‘ಲವ್…

Read More