‘ಭಾರತವನ್ನು ಇರಾನ್ ಎಂದೂ ಮರೆಯುವುದಿಲ್ಲ’; ಅಯತೊಲ್ಲಾ ಖಮೇನಿ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಿದ್ದಕ್ಕೆ ಟೆಹ್ರಾನ್ ಕೃತಜ್ಞತೆ – Kannada News | Iran will never forget India; Tehran Thank You Note Amid Ayatollah Ali Khamenei Funeral
ಟೆಹ್ರಾನ್, ಜುಲೈ 6: ಭಾರತವು ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇರಾನ್ ಸರ್ಕಾರವು ಇಂದು (ಸೋಮವಾರ) ಭಾರತಕ್ಕೆ ತನ್ನ ಕೃತಜ್ಞತೆಯನ್ನು ಸಲ್ಲಿಸಿದೆ. ಕಳೆದ ಫೆಬ್ರವರಿ 28ರಂದು ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Seyyed Ali Khamene) ಮೃತಪಟ್ಟಿದ್ದರು. ಇರಾನ್ನಲ್ಲಿ ನಡೆದ ಅವರ ಅಂತಿಮ ಸಂಸ್ಕಾರದ ವಿಧಿವಿಧಾನಗಳಲ್ಲಿ ಭಾರತೀಯ ನಿಯೋಗ ಭಾಗವಹಿಸಿದ್ದಕ್ಕಾಗಿ ಇರಾನ್ ಕೃತಜ್ಞತೆ ಸಲ್ಲಿಸಿದೆ. ಫೆಬ್ರವರಿ ತಿಂಗಳಲ್ಲಿ ಟೆಹ್ರಾನ್ನಲ್ಲಿ…