ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಸಿನಿಮಾಗಳನ್ನು ನಿರ್ಮಾಣ ಮಾಡುವುದು, ಅದನ್ನು ತೆರೆಗೆ ತರುವುದು ದೊಡ್ಡ ಚಾಲೆಂಜ್. ಅದೇ ರೀತಿ ಆ ಸಿನಿಮಾನ ಥಿಯೇಟರ್​​​ನಲ್ಲಿ ಉಳಿಸಿಕೊಂಡು ಹೋಗೋದು ಇನ್ನೂ ದೊಡ್ಡ ಸವಾಲು. ಸ್ಟಾರ್ ಸಿನಿಮಾ ಆದರಂತೂ ಪೈರಸಿಗಳ ಕಾಟಕ್ಕೆ ಚಿತ್ರ ನಲುಗಿ ಹೋಗುತ್ತದೆ. ಇದರ ಜೊತೆಗೆ, ಫ್ಯಾನ್ಸ್ ವಾರ ಕೂಡ ಸಿನಿಮಾನ ಬಲಿ ಪಡೆಯುತ್ತದೆ. ಈಗ ಚಿತ್ರರಂಗದಲ್ಲಿ ಆಗುತ್ತಿರುವ ಒಂದು ಬದಲಾವಣೆಯಿಂದ ಸಾಕಷ್ಟು ಸಿನಿಮಾಗಳು ಉಳಿದುಕೊಂಡಿವೆ.

ಮೊದಲೆಲ್ಲ ಸುದ್ದಿ ಪತ್ರಿಕೆಯಲ್ಲಿ ಬರುವ ವಿಮರ್ಶೆ ನೋಡಿ ಚಿತ್ರವನ್ನು ನೋಡಬೇಕೋ ಅಥವಾ ಬೇಡವೋ ಎಂದು ಜನರು ನಿರ್ಧಾರ ಮಾಡುತ್ತಿದ್ದರು. ಆದರೆ, ಈಗ ರೇಟಿಂಗ್ ಕಾಲ. ಕೈಬೆರಳ ತುದಿಯಲ್ಲಿ ರೇಟಿಂಗ್ ಸಿಗುತ್ತದೆ. ಸಿನಿಮಾಗೆ ಎಷ್ಟು ರೇಟಿಂಗ್ ಸಿಕ್ಕಿದೆ ಎಂಬುದನ್ನು ಆಧರಿಸಿ ಸಿನಿಮಾ ನೋಡಬೇಕೋ ಅಥವಾ ಇಲ್ಲವೋ ಎಂಬುದನ್ನು ಪ್ರೇಕ್ಷಕ ನಿರ್ಧಾರ ಮಾಡುತ್ತಾನೆ. ಆದರೆ, ಫ್ಯಾನ್ಸ್ ವಾರ್​ಗಳ ಕಾರಣಕ್ಕೆ ಈ ರೇಟಿಂಗ್ ಅನ್ನು ಕೂಡ ನಂಬುವ ಹಾಗಿಲ್ಲ. ಈಗ ರೇಟಿಂಗ್​​​ನೇ ಆಫ್ ಮಾಡಿಸುವ ಟ್ರೆಂಡ್ ಜೋರಾಗಿದ್ದು, ಇದು ಅನೇಕ ಸಿನಿಮಾಗಳನ್ನು ಉಳಿಸಿದೆ.

ದರ್ಶನ್ ನಟನೆಯ ‘ದಿ: ಡೆವಿಲ್’ ಸಿನಿಮಾಗೆ ಕೆಲವರು ಉದ್ದೇಶಪೂರ್ವಕವಾಗಿ ನೆಗೆಟಿವ್ ವಿಮರ್ಶೆ ನೀಡಬಹುದು ಎಂಬ ಭಯ ಇತ್ತು. ಈ ಕಾರಣದಿಂದ ಕೋರ್ಟ್​​ನಿಂದ ಆದೇಶ ತರುವ ಮೂಲಕ ರೇಟಿಂಗ್ ಕೊಡೋದನ್ನು ತಡೆಯಲಾಯಿತು. ನಂತರ ಸುದೀಪ್ ನಟನೆಯ ‘ಮಾರ್ಕ್’, ಮಲ್ಟಿ ಸ್ಟಾರರ್ ಸಿನಿಮಾ ‘45’ ಸಿನಿಮಾ ಕೂಡ ಇದೇ ತಂತ್ರ ಉಪಯೋಗಿಸಿದವು. ಕನ್ನಡದಲ್ಲಿ ಈ ಪ್ರಯೋಗ ಯಶಸ್ಸು ಕಂಡ ಬಳಿಕ ತೆಲುಗಿನವರು ಕೂಡ ಇದೇ ಮಾದರಿಯ ಮೊರೆ ಹೋದರು. ‘ಮನ ಶಂಕರ ವರಪ್ರಸಾದ ಗಾರು’, ‘ನಾರಿ ನಾರಿ ನಡುಮ ಮುರಾರಿ’, ‘ಅನಗನಗ ಒಕರಾಜು’ ತಂಡಗಳು ಕೂಡ ಇದೇ ಮಾದರಿಯನ್ನು ಅನುಸರಿಸಿದವು. ಈ ತಂತ್ರವನ್ನು ಮೊದಲು ಕಂಡು ಹಿಡಿದಿದ್ದು ಬೆಂಗಳೂರಿನ ಆ್ಯಂಟಿ ಪರೈಸಿ ಸಂಸ್ಥೆ ಐಪ್ಲೆಕ್ಸ್ ಅನ್ನೋದು ವಿಶೇಷ.

‘ಮೊದಲ ಮೂರು ದಿನ ಆನ್​​ಲೈನ್ ಅಲ್ಲಿ ವಿಮರ್ಶೆ ಹಂಚಿಕೊಳ್ಳಬಾರದು’, ‘ಥಿಯೇಟರ್​ ಹೊರ ಭಾಗದಲ್ಲಿ ಯೂಟ್ಯೂಬರ್​​ಗಳು ವಿಮರ್ಶೆ ಪಡೆಯದಂತೆ ಮಾಡಬೇಕು’ ಎಂಬಿತ್ಯಾದಿ ನಿಯಮ ತರಲು ಕೆಲ ಚಿತ್ರರಂಗದವರು ಪ್ರಯತ್ನಿಸಿದರು. ಆದರೆ, ಅದು ಸಾಧ್ಯವಾಗಿಲ್ಲ. ಟಿಕೆಟ್ ಬುಕ್ ಮಾಡಲು ಎಲ್ಲರೂ ಬಹುವಾಗಿ ಅವಲಂಬಿತವಾಗಿರುವ ‘ಬುಕ್ ಮೈ ಶೋ’ ರೇಟಿಂಗ್ ಅನ್ನೇ ಬಂದ್ ಮಾಡಿಸೋ ಮೂಲಕ ಕೆಲವು ಸಿನಿಮಾಗಳು ಬಚಾವ್ ಆಗಿವೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಅಭಿಪ್ರಾಯ.

ಇದನ್ನೂ ಓದಿ: ‘ಡೆವಿಲ್’ಗೆ ರೇಟಿಂಗ್ ಕೊಡಂಗಿಲ್ಲ; ಕೋರ್ಟ್​ನಿಂದ ಆರ್ಡರ್ ತಂದಿದ್ದಕ್ಕೆ ಕಾರಣ ತಿಳಿಸಿದ ದಿನಕರ್

ಇನ್ನು, ‘ನಮ್ಮ ಸಿನಿಮಾಗೆ ಆ ಹೀರೋ ಅಭಿಮಾನಿಗಳು ನಗೆಟಿವ್ ವಿಮರ್ಶೆ ಕೊಟ್ಟರು, ಈ ಹೀರೋಗಳು ನೆಗೆಟಿವ್ ವಿಮರ್ಶೆ ಕೊಟ್ಟರು’ ಎಂಬ ದೂರು ಬರೋದಿಲ್ಲ. ಹೀಗಾಗಿ, ಈ ಕ್ರಮದಿಂದ ದೊಡ್ಡ ಮಟ್ಟದಲ್ಲಿ ಫ್ಯಾನ್ಸ್ ವಾರ ಕೂಡ ನಿಂತಿದೆ. ಮುಂದಿನ ದಿನಗಳಲ್ಲಿ ಹಲವು ಸಂಸ್ಥೆಗಳು ಇದೇ ತಂತ್ರ ಬಳಸಬಹುದು. ಅಲ್ಲದೆ, ಮಲಯಾಳಂ, ತಮಿಳು ಹಾಗೂ ಹಿಂದಿ ಚಿತ್ರರಂಗದವರೂ ಇದೇ ಮಾದರಿಯನ್ನು ಜಾರಿಗೆ ತರಲು ಹೆಚ್ಚು ಉತ್ಸುಕರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

PSL 2026: ಪಾಕ್ ಪ್ರೀಮಿಯರ್ ಲೀಗ್ ಪಂದ್ಯದ ವೇಳೆ ಭಾರೀ ಬಿರುಗಾಳಿ: ಕಂಟ್ರೋಲ್ ತಪ್ಪಿ ಏನೆಲ್ಲ ಆಯಿತು ನೋಡಿ

ಬೆಂಗಳೂರು (ಏ. 01): ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಪ್ರೀಮಿಯರ್ ಲೀಗ್ 2026 ರ (Pakistan Premier League) ಏಳನೇ ಪಂದ್ಯವು ಪ್ರಕೃತಿಯ ಕೋಪಕ್ಕೆ ಸಾಕ್ಷಿಯಾಯಿತು. ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯಕ್ಕೆ ಸ್ವಲ್ಪ ಮೊದಲು, ಗಡಾಫಿ ಕ್ರೀಡಾಂಗಣದಲ್ಲಿ ಭೀಕರ ಬಿರುಗಾಳಿ ಮತ್ತು ಮಳೆಯು ಆಟವನ್ನು ಸ್ಥಗಿತಗೊಳಿಸಿದ್ದಲ್ಲದೆ, ಮೈದಾನದ ಸಿಬ್ಬಂದಿಯ ಜೀವಕ್ಕೂ ಅಪಾಯವನ್ನುಂಟುಮಾಡಿತು. ಇದರ ಬೆನ್ನಲ್ಲೇ, ಪಾಕಿಸ್ತಾನದ ಕ್ರಿಕೆಟ್ ಮೂಲಸೌಕರ್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯ ಮಾಡಲಾಗುತ್ತಿದೆ.

ಪಿಎಸ್​ಎಲ್ ಪಂದ್ಯದ ವೇಳೆ ಭಾರೀ ಬಿರುಗಾಳಿ

ಮಂಗಳವಾರ ಇಸ್ಲಾಮಾಬಾದ್ ಯುನೈಟೆಡ್ ಮತ್ತು ಪೇಶಾವರ್ ಝಲ್ಮಿ ನಡುವಿನ ಪಂದ್ಯಕ್ಕೆ ಟಾಸ್ ಪ್ರಕ್ರಿಯೆ ನಡೆಯುವ ಮುನ್ನ ಗಡಾಫಿ ಕ್ರೀಡಾಂಗಣದಲ್ಲಿ ಭೀಕರ ಬಿರುಗಾಳಿ ಮತ್ತು ಧಾರಾಕಾರ ಮಳೆ ಸುರಿಯಿತು. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ವೀಡಿಯೊಗಳು ಗಾಳಿ ಎಷ್ಟು ಬಲವಾಗಿ ಬೀಸುತ್ತಿದೆಯೆಂದರೆ ಪಿಚ್ ಹೊದಿಕೆಗಳು ಗಾಳಿಪಟಗಳಂತೆ ಹಾರಲು ಪ್ರಾರಂಭಿಸಿದವು.

ಈ ಕವರ್‌ಗಳನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವಾಗ, ಹಲವಾರು ಮೈದಾನದ ಸಿಬ್ಬಂದಿ ಗಾಳಿಯ ವೇಗಕ್ಕೆ ಸಿಲುಕಿ ಸಮತೋಲನ ಕಳೆದುಕೊಂಡು ನೆಲಕ್ಕೆ ಬಿದ್ದರು. ಧಾರಾಕಾರ ಮಳೆಯಿಂದಾಗಿ ಹೊರಾಂಗಣ ಸಂಪೂರ್ಣವಾಗಿ ಒದ್ದೆಯಾಗಿತ್ತು ಮತ್ತು ಸಂಜೆ 6:30 ಕ್ಕೆ ನಿಗದಿಯಾಗಿದ್ದ ಟಾಸ್ ಅನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಈ ಘಟನೆಯಿಂದ ಪಾಕಿಸ್ತಾನಿ ಕ್ರಿಕೆಟ್ ಪ್ರಪಂಚದಾದ್ಯಂತ ನಗೆಪಾಟಲಿಗೆ ಈಡಾಗುತ್ತಿದೆ.

ಪಿಎಸ್​ಎಲ್​ ಪಂದ್ಯದ ವೇಳೆ ಬಿರುಗಾಳಿ ಬೀಸಿದ ವೀಡಿಯೊ:

 

ಕೆಲ ಸಮಯ ಕಾದರೂ ಮಳೆ ಕಡಿಮೆಯಾಗದ ಪರಿಣಾಮ ಅಂತಿಮವಾಗಿ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು. ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಯಿತು. ಈ ಫಲಿತಾಂಶದೊಂದಿಗೆ, ಪೇಶಾವರ್ ಝಲ್ಮಿ ತಂಡವು ಎರಡು ಪಂದ್ಯಗಳಿಂದ ಮೂರು ಅಂಕಗಳನ್ನು ಗಳಿಸಿ, ಲಾಹೋರ್ ಖಲಂದರ್ ಮತ್ತು ಮುಲ್ತಾನ್ ಸುಲ್ತಾನ್ಸ್‌ಗಿಂತ ಮುಂದಿರುವ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿತು. ಏತನ್ಮಧ್ಯೆ, ಇಸ್ಲಾಮಾಬಾದ್ ಯುನೈಟೆಡ್ ತಂಡವು ಋತುವಿನ ತಮ್ಮ ಮೊದಲ ಪಾಯಿಂಟ್ ಅನ್ನು ದಾಖಲಿಸಿ ಆರನೇ ಸ್ಥಾನಕ್ಕೆ ಏರಿತು.

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಫಖರ್ ಜಮಾನ್​ಗೆ ನಿಷೇಧ:

ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಪಿಎಸ್‌ಎಲ್ ಚೆಂಡು ವಿರೂಪ ವಿವಾದದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ನಂತರ, ಪಾಕಿಸ್ತಾನದ ಆರಂಭಿಕ ಬ್ಯಾಟ್ಸ್‌ಮನ್ ಫಖರ್ ಜಮಾನ್ ಅವರಿಗೆ ಎರಡು ಪಂದ್ಯಗಳ ನಿಷೇಧ ಹೇರಲಾಗಿದೆ. “ಭಾನುವಾರ ನಡೆದ ಲಾಹೋರ್ ಖಲಂದರ್ಸ್ vs ಕರಾಚಿ ಕಿಂಗ್ಸ್ ಪಂದ್ಯದ ಸಂದರ್ಭದಲ್ಲಿ ಆಟಗಾರರು ಮತ್ತು ಆಟಗಾರರ ಬೆಂಬಲ ಸಿಬ್ಬಂದಿಗೆ ಅನ್ವಯವಾಗುವ ನೀತಿ ಸಂಹಿತೆಯ ಆರ್ಟಿಕಲ್ 2.14 ಅನ್ನು ಉಲ್ಲಂಘಿಸಿದ್ದಕ್ಕಾಗಿ ಲೆವೆಲ್ 3 ಅಪರಾಧದಲ್ಲಿ ಫಖರ್ ಜಮಾನ್ ತಪ್ಪಿತಸ್ಥರೆಂದು ಕಂಡುಬಂದ ನಂತರ ಅವರನ್ನು ಎರಡು HBL PSL ಪಂದ್ಯಗಳಿಗೆ ಅಮಾನತುಗೊಳಿಸಲಾಗಿದೆ” ಎಂದು PSL ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ತುಮಕೂರು, (ಏಪ್ರಿಲ್.01): ಡಾ. ಶಿವಕುಮಾರ ಸ್ವಾಮೀಜಿಗಳ (Dr Shivakumar Swamiji) 119ನೇ ಜನ್ಮದಿನೋತ್ಸಕ್ಕೆಂದು ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ (siddaganga mutt) ಬಂದಿದ್ದ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ (Mysuru) ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟರಾಜು(60) ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್ ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿಯಾಗಿದ್ದಾರೆ. ಇದರಿಂದ ಪ್ರತಿ ವರ್ಷ ಶಿವಕುಮಾರ್ ಸ್ವಾಮೀಜಿ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಆದ್ರೆ, ಈ ಬಾರಿ ಮಠದಲ್ಲೇ ಅಸುನೀಗಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್, ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿ. ಹೀಗಾಗಿ ಪ್ರತಿ ವರ್ಷವೂ ಸಹ ಡಾ. ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸಕ್ಕೆಂದು ಬರುತ್ತಿದ್ದರು. ಅದರಂತೆ ಶ್ರೀಗಳ 119ನೇ ಜನ್ಮದಿನೋತ್ಸ ಕಾರ್ಯಕ್ರದಲ್ಲಿ ಪಾಲ್ಗೊಳ್ಳಲು ಸ್ನೇಹಿತರೊಂದಿಗೆ ನಿನ್ನೆ (ಮಾರ್ಚ್ 31) ರಾತ್ರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದರು. ಆದ್ರೆ, ದುರದೃಷ್ಟವಶಾತ್ ಇಂದು (ಏಪ್ರಿಲ್ 01) ಶೌಚಾಲಯಕ್ಕೆ ಹೋಗಿ ಬರುವಾಗ ಶಿವಕುಮಾರ ಶ್ರೀಗಳ ಗದ್ದುಗೆ ಹಿಂಭಾಗದಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರತಿವರ್ಷ ಶಿವಕುಮಾರ ಶ್ರೀಗಳ ಕಾರ್ಯಕ್ರಮಕ್ಕೆ ಬರುತ್ತಿದ್ದ ನಟರಾಜ್ ಅವರಿಗೆ ಕೆಲ ದಿನಗಳ ಹಿಂದೆ ಹಾರ್ಟ್​ ಸರ್ಜರಿತಾಗಿತ್ತು ಎಂದು ತಿಳಿದುಬಂದಿದೆ. ಇನನ್ಉ ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಿ ರಸ್ತೆಯ ಅಂಚಿಗೆ ತಲುಪುತ್ತಿದ್ದಂತೆ, ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಕಾರು ಇವರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಭಾರತಿ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs ZIM: ಜಿಂಬಾಬ್ವೆ ತೆರಳಲಿದೆ ಟೀಮ್ ಇಂಡಿಯಾ: ಬಿಸಿಸಿಐಯಿಂದ ಟಿ20 ಸರಣಿಯ ವೇಳಾಪಟ್ಟಿ ಪ್ರಕಟ

ಬೆಂಗಳೂರು (ಏ. 01): ಭಾರತ ಕ್ರಿಕೆಟ್ ತಂಡದ (Indian Cricket Team) ಆಟಗಾರರು ಸದ್ಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಬಿಸಿಸಿಐ, ಭಾರತ ತಂಡವು ಜುಲೈ 2026 ರಲ್ಲಿ ಮೂರು ಪಂದ್ಯಗಳ ಟಿ20ಐ ಸರಣಿಗಾಗಿ ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಲಿದೆ ಎಂದು ಘೋಷಿಸಿದೆ. ಇದು 2024 ರಲ್ಲಿ ಐದು ಪಂದ್ಯಗಳನ್ನು ಆಡಿದ ನಂತರ ಅವರ ಮೊದಲ ಭೇಟಿಯಾಗಿದೆ. ಸರಣಿಯು ಜುಲೈ 23 ರ ಗುರುವಾರ ಹರಾರೆಯಲ್ಲಿ ಮೊದಲ ಟಿ20 ಯೊಂದಿಗೆ ಆರಂಭಗೊಳ್ಳಲಿದೆ. ಜುಲೈ 19 ರಂದು ಮುಕ್ತಾಯಗೊಳ್ಳಲಿರುವ ಇಂಗ್ಲೆಂಡ್ ವಿರುದ್ಧದ ವೈಟ್-ಬಾಲ್ ಸರಣಿ ಬಳಿಕ ಭಾರತ ತಂಡ ಜಿಂಬಾಬ್ವೆಗೆ ತೆರಳಲಿದೆ. ಈ ಸರಣಿಯಲ್ಲಿ ಒಟ್ಟು ಮೂರು ಟಿ20 ಪಂದ್ಯ ನಡೆಯಲಿದೆ.

ಈ ಸರಣಿಯು ಯುವ ಮತ್ತು ಉದಯೋನ್ಮುಖ ಭಾರತೀಯ ಆಟಗಾರರಿಗೆ ಅವಕಾಶಗಳನ್ನು ನೀಡಬಹುದು. ಜೊತೆಗೆ ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಯುವ ಆಟಗಾರರ ಪ್ರದರ್ಶನದ ಮೇಲೆ ಬಿಸಿಸಿಐ ಗಮನ ಕೊಡಲಿದೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರಿಗೆ, ಪ್ರವಾಸಕ್ಕೆ ಕರೆ ಬರುವ ನಿರೀಕ್ಷೆಯಿದೆ. ಅತ್ತ ಜಿಂಬಾಬ್ವೆ ಬಲಿಷ್ಠ ಪ್ರವಾಸಿ ತಂಡದ ವಿರುದ್ಧ ತವರು ನೆಲದಲ್ಲಿ ಆಡುವುದನ್ನು ಸದುಪಯೋಗಪಡಿಸಿಕೊಳ್ಳಲು ನೋಡುತ್ತದೆ.

ಜುಲೈನಲ್ಲಿ ಟೀಮ್ ಇಂಡಿಯಾದ ಜಿಂಬಾಬ್ವೆ ಪ್ರವಾಸ

ಜುಲೈನಲ್ಲಿ ಜಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಅಂತರರಾಷ್ಟ್ರೀಯ ಸರಣಿಯನ್ನು ಆಡಲಿದೆ. ಸರಣಿಯ ಮೊದಲ ಪಂದ್ಯ ಜುಲೈ 23 ರಂದು ನಡೆಯಲಿದೆ ಎಂದು ಬಿಸಿಸಿಐ ಘೋಷಿಸಿದೆ. ಎರಡನೇ ಪಂದ್ಯ ಜುಲೈ 25 ರಂದು ನಡೆಯಲಿದೆ. ಮೂರನೇ ಮತ್ತು ಅಂತಿಮ ಪಂದ್ಯ ಜುಲೈ 26 ರಂದು ನಡೆಯಲಿದೆ. ಎಲ್ಲಾ ಪಂದ್ಯಗಳು ಹರಾರೆಯಲ್ಲಿರುವ ಹರಾರೆ ಕ್ರೀಡಾ ಕ್ರೀಡಾಂಗಣದಲ್ಲಿ ನಡೆಯಲಿವೆ. ಇದರರ್ಥ ತಂಡವು ಬೇರೆಡೆಗೆ ಪ್ರಯಾಣಿಸಬೇಕಾಗಿಲ್ಲ. ಅದಕ್ಕಾಗಿಯೇ ಕೊನೆಯ ಎರಡು ಪಂದ್ಯಗಳನ್ನು ಕೇವಲ ಎರಡು ದಿನಗಳಲ್ಲಿ ಆಯೋಜನೆ ಮಾಡಲಾಗಿದೆ.

ಅತೀ ವೇಗ… ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!

ಭಾರತ vs ಜಿಂಬಾಬ್ವೆ 2026 ಟಿ20 ವೇಳಾಪಟ್ಟಿ:

  • ಮೊದಲ ಟಿ20ಐ: ಗುರುವಾರ, ಜುಲೈ 23, ಹರಾರೆ
  • ಎರಡನೇ ಟಿ20ಐ: ಶನಿವಾರ, ಜುಲೈ 25, ಹರಾರೆ
  • ಮೂರನೇ ಟಿ20ಐ: ಭಾನುವಾರ, ಜುಲೈ 26, ಹರಾರೆ

ಬಿಸಿಸಿಐ ಪ್ರಕಟಿಸಿದ ಭಾರತ-ಜಿಂಬಾಬ್ವೆ ವೇಳಾಪಟ್ಟಿಯ ಟ್ವೀಟ್:

ಈ ವರ್ಷ ಯಾವುದೇ ಪ್ರಮುಖ ಟಿ20 ಟೂರ್ನಿ ಇಲ್ಲ

ಈ ವರ್ಷ ಪ್ರಸ್ತುತ ಯಾವುದೇ ಪ್ರಮುಖ ಪಂದ್ಯಾವಳಿಗಳಿಲ್ಲ. ಆದ್ದರಿಂದ, ಭಾರತದ ಅಗ್ರ ಆಟಗಾರರು ಈ ಸರಣಿಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ. ಇದರರ್ಥ ಭಾರತದ ಕಿರಿಯ ಆಟಗಾರರು ಆಯ್ಕೆ ಆಗಬಹುದು. ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುವುದು ಅನುಮಾ. ಹೊಸ ಆಟಗಾರನನ್ನು ನಾಯಕನನ್ನಾಗಿ ನೇಮಿಸಬಹುದು. ಈ ವರ್ಷ ಅಥವಾ ಮುಂದಿನ ವರ್ಷ ಯಾವುದೇ ಪ್ರಮುಖ ಐಸಿಸಿ ಟಿ20 ಪಂದ್ಯಾವಳಿಗಳಿಲ್ಲ, ಆದರೆ ಹೊಸ ಆಟಗಾರರಿಗೆ ಅವಕಾಶ ನೀಡಲು ಮತ್ತು ಅವರನ್ನು ಪರೀಕ್ಷಿಸಲು ಟೀಮ್ ಇಂಡಿಯಾ ಇನ್ನೂ ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಮಧ್ಯಂತರವಾಗಿ ಆಡುತ್ತಿದೆ. ಇತ್ತೀಚೆಗೆ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದಿತ್ತು. ಮುಂದಿನ ಟಿ20 ವಿಶ್ವಕಪ್ 2028 ರಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ, ಮೈ ಜುಂ ಎನ್ನಿಸುವ ದೃಶ್ಯ

ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ ನೇರವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರರು ಸುಮಾರು ಹತ್ತಾರು ಅಡಿಗಳಷ್ಟು ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ದಂಪತಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಬಸ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕನ್ಯಾಕುಮಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಇರಾನ್​ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾದಲ್ಲಿದ್ದಾರಾ? ರಾಯಭಾರಿ ಹೇಳಿದ್ದೇನು?

ಟೆಹ್ರಾನ್, ಏಪ್ರಿಲ್ 1: ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ(Murder) ನಡೆದು ಒಂದು ತಿಂಗಳು ಕಳೆದಿದೆ. ಅವರ ಸಾವಿನ ಬಳಿಕ ಮಗ ಮೊಜ್ತಬಾ ಖಮೇನಿಯವರನ್ನು ನೂತನ ಸರ್ವೋಚ್ಚ ನಾಯಕನನ್ನಾಗಿ ನೇಮಿಸಲಾಯಿತು. ಅಧಿಕಾರ ವಹಿಸಿಕೊಂಡ ಬಳಿಕ ಮೊಜ್ತಬಾ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ಅವರು ತಮ್ಮ ತಂದೆಯ ಅಂತ್ಯಕ್ರಿಯೆಗೂ ಬಂದಿಲ್ಲ.ಅವರು ಪತ್ರದ ಮೂಲದ ತಮ್ಮ ಹೇಳಿಕೆ ನೀಡುತ್ತಿದ್ದು, ಅವರ ಆರೋಗ್ಯ ಹಾಗೂ ಅವರೆಲ್ಲಿದ್ದಾರೆ ಎನ್ನುವ ಅನುಮಾನ ಕಾಡಿದೆ.
ಕೆಲವರು ಗಂಭೀರವಾಗಿ ಗಾಯಗೊಂಡಿರಬಹುದು ಅಥವಾ ಮೃತಪಟ್ಟಿರಬಹುದು ಎಂದು ಹೇಳಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ ಇರಾನ್​ಗೆ ರಷ್ಯಾದ ರಾಯಭಾರಿ ಅಲೆಕ್ಸಿ ಡೆಡೋವ್ ಮೊಜ್ತಾಬಾ ಖಮೇನಿ ಇರಾನ್‌ನಲ್ಲಿದ್ದಾರೆ ಆದರೆ ಕೆಲವು ಕಾರಣಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕೆಲವು ಮಾಧ್ಯಮ ವರದಿಗಳು ಮೊಜ್ತಬಾ ಅವರನ್ನು ಚಿಕಿತ್ಸೆಗಾಗಿ ರಷ್ಯಾಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಅವರನ್ನು ಮಾಸ್ಕೋಗೆ ಕಳುಹಿಸಲಾಯಿತು ಎಂದು ಹೇಳಿವೆ.

ಮೊಜ್ತಬಾ ಅನುಪಸ್ಥಿತಿಯ ಹೊರತಾಗಿಯೂ, ಅವರ ಬೆಂಬಲಿಗರ ಉತ್ಸಾಹ ಕಡಿಮೆಯಾಗಿಲ್ಲ. ಕಳೆದ ತಿಂಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೂ ಇರಾನ್‌ನ ಹೊಸ ನಾಯಕನ ನಿರಂತರ ಅನುಪಸ್ಥಿತಿಯು ಯುದ್ಧದ ಸಮಯದಲ್ಲಿ ದೇಶವನ್ನು ನಿಜವಾಗಿಯೂ ಯಾರು ನಡೆಸುತ್ತಿದ್ದಾರೆ ಎಂಬ ಆಳವಾದ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಮತ್ತಷ್ಟು ಓದಿ: ಪಾರ್ಟಿಗೆಂದು ಹೋದವ ಸಿಕ್ಕಿದ್ದು ಶವವಾಗಿ: ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ್ಯಾರು?

56 ವರ್ಷದ ಮೊಜ್ತಾಬಾ ಖಮೇನಿ ತಮ್ಮ ತಂದೆಯ ಆಳ್ವಿಕೆಯಲ್ಲಿ ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ವಿರಳವಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದರು. ಈಗ ಅವರು ದೇಶದ ಅತ್ಯಂತ ಶಕ್ತಿಶಾಲಿ ಸ್ಥಾನವನ್ನು ಹೊಂದಿದ್ದಾರೆ, ಅವರ ಅನುಪಸ್ಥಿತಿಯು ಇರಾನ್‌ನಲ್ಲಿ ನಿಜವಾದ ಅಧಿಕಾರವು ಒಬ್ಬ ವ್ಯಕ್ತಿಯ ಮೇಲೆ ಅಲ್ಲ, ಬದಲಾಗಿ ಸಂಸ್ಥೆಗಳು ಮತ್ತು ಭದ್ರತಾ ಸಂಸ್ಥೆಗಳ ಮೇಲೆ ಅವಲಂಬಿತವಾಗಿದೆ ಎಂಬುದನ್ನು ತೋರಿಸುತ್ತದೆ. ಇಸ್ರೇಲಿ ಮತ್ತು ಯುಎಸ್ ಅಧಿಕಾರಿಗಳು ಮೊಜ್ತಾಬಾ ಖಮೇನಿ ಜೀವಂತವಾಗಿದ್ದಾರೆ ಎಂಬುದನ್ನು ನಂಬಿದ್ದಾರೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Source link

ಅತೀ ವೇಗ… ಬೆನ್​ ಡಕೆಟ್​ಗೆ ಬರೋಬ್ಬರಿ 1,100 ಪೌಂಡ್ ಫೈನ್..!

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಬೆನ್ ಡಕೆಟ್ ಇತ್ತೀಚೆಗೆ ಎರಡು ಪ್ರಮುಖ ಕಾರಣಗಳಿಗಾಗಿ ಸುದ್ದಿಯಲ್ಲಿದ್ದಾರೆ. ಒಂದು, ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿರುವುದು. ಮತ್ತೊಂದು, ಅತಿವೇಗದ ಚಾಲನೆಗಾಗಿ ನ್ಯಾಯಾಲಯದಿಂದ ದಂಡಕ್ಕೆ ಗುರಿಯಾಗಿರುವುದು.

ಬೆನ್ ಡಕೆಟ್ ಅವರು ತಮ್ಮ ಲ್ಯಾಂಡ್ ರೋವರ್ ಕಾರನ್ನು ನಿಗದಿಗಿಂತ ಹೆಚ್ಚಿನ ವೇಗದಲ್ಲಿ ಚಲಾಯಿಸಿದ್ದಕ್ಕಾಗಿ ದಂಡ ತೆತ್ತಿದ್ದಾರೆ. ಆಗಸ್ಟ್ 24, 2025 ರಂದು ಸ್ಟಾಫರ್ಡ್‌ಶೈರ್‌ನ ಎ50 ರಸ್ತೆಯಲ್ಲಿ ಡಕೆಟ್​ 93 ಮೈಲಿ ವೇಗದಲ್ಲಿ ಕಾರು ಚಲಾಯಿಸಿದ್ದರು. ಈ ರಸ್ತೆಯಲ್ಲಿ ಗಂಟೆಗೆ 70 ಮೈಲಿ ವೇಗದಲ್ಲಿ ಮಾತ್ರ ಕಾರು ಓಡಿಸಬೇಕೆಂಬ ನಿಯಮವಿದೆ. ಈ ನಿಯಮವನ್ನು ಮೀರಿ ಬೆನ್ ಡಕೆಟ್ ಅತೀ ವೇಗದಲ್ಲಿ ಕಾರು ಚಲಾಯಿಸಿದ್ದರು.

ಹೀಗೆ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಇದೀಗ ನ್ಯಾಯಾಲಯವು ಬೆನ್ ಡಕೆಟ್​ಗೆ ಒಟ್ಟು £1,100 (ಸುಮಾರು ₹1.2 ಲಕ್ಷ) ದಂಡ ವಿಧಿಸಿದೆ. ಇದರಲ್ಲಿ £700 ದಂಡ, £120 ನ್ಯಾಯಾಲಯದ ವೆಚ್ಚ ಮತ್ತು £280 ಸಂತ್ರಸ್ತರ ಸರ್‌ಚಾರ್ಜ್ ಸೇರಿದೆ. ಹಾಗೆಯೇ ಅವರ ಚಾಲನಾ ಪರವಾನಗಿಗೆ (Driving Licence) 4 ಪೆನಾಲ್ಟಿ ಪಾಯಿಂಟ್‌ಗಳನ್ನು ಸೇರಿಸಲಾಗಿದೆ.

ಐಪಿಎಲ್​ಗೆ ಕೈ ಕೊಟ್ಟ ಡಕೆಟ್:

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ಬೆನ್ ಡಕೆಟ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಬರೋಬ್ಬರಿ 2 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ಐಪಿಎಲ್ ಆರಂಭಕ್ಕೆ ದಿನಗಳು ಮಾತ್ರ ಉಳಿದಿದ್ದಾಗ ಡಕೆಟ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ ಮೇಲೆ ಗಮನ ಹರಿಸಲು ಮತ್ತು ದೈಹಿಕ ಹಾಗೂ ಮಾನಸಿಕವಾಗಿ ವಿಶ್ರಾಂತಿ ಪಡೆಯಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಬೆನ್ ಡಕೆಟ್ ತಿಳಿಸಿದ್ದಾರೆ.

ಡಕೆಟ್ ಬ್ಯಾನ್:

ಐಪಿಎಲ್ ನಿಯಮಗಳ ಪ್ರಕಾರ, ಯಾವುದೇ ವೈದ್ಯಕೀಯ ಕಾರಣವಿಲ್ಲದೆ ಕೊನೆಯ ಕ್ಷಣದಲ್ಲಿ ಟೂರ್ನಿಯಿಂದ ಹಿಂದೆ ಸರಿದರೆ, ಆಟಗಾರನ ಮೇಲೆ ಮುಂದಿನ ಎರಡು ವರ್ಷಗಳ ಕಾಲ ನಿಷೇಧ ಹೇರಲಾಗುತ್ತದೆ.

ಇದನ್ನೂ ಓದಿ: Adam Zampa: IPL ತೊರೆದು PSL ಆಡಲು ಇದುವೇ ಮುಖ್ಯ ಕಾರಣ..!

ಅದರಂತೆ ಇದೀಗ ಬೆನ್ ಡಕೆಟ್ ಅವರ ಮೇಲೆ ಎರಡು ವರ್ಷಗಳ ನಿಷೇಧ ಹೇರಲಾಗಿದೆ. ಇದಕ್ಕೂ ಮುನ್ನ ಐಪಿಎಲ್ 2025 ರಲ್ಲಿ ನಿರ್ದಿಷ್ಟ ಕಾರಣವಿಲ್ಲದೇ, ಇಂಗ್ಲೆಂಡ್ ಆಟಗಾರ ಹ್ಯಾರಿ ಬ್ರೂಕ್ ಟೂರ್ನಿಯಿಂದ ಹಿಂದೆ ಸರಿದಿದ್ದರು. ಹೀಗಾಗಿ ಅವರಿಗೆ ಈ ಬಾರಿಯ ಐಪಿಎಲ್​ನಲ್ಲಿ ಚಾನ್ಸ್ ನೀಡಿರಲಿಲ್ಲ. ಇದೀಗ ಬೆನ್ ಡಕೆಟ್ ಕೂಡ ಐಪಿಎಲ್​ಗೆ ಕೈ ಕೊಟ್ಟಿರುವ ಕಾರಣ ಮುಂದಿನ ಸೀಸನ್​ನಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

 

Source link

ತೆಲಂಗಾಣ ಟೆಕ್ಕಿ ದಂಪತಿಯ ಜೀವವನ್ನೇ ತೆಗೆಯಿತು ಎಐ! ಆಗಿದ್ದೇನು ಗೊತ್ತಾ?

ಬೆಂಗಳೂರು, ಏಪ್ರಿಲ್ 01: ಮಂಗಳವಾರ ಬೆಳಗ್ಗೆ ತೆಲಂಗಾಣ ಮೂಲದ ಟೆಕ್ಕಿ ದಂಪತಿ ಆತ್ಮಹತ್ಯೆ (Suicide) ಮಾಡಿಕೊಂಡಿರುವುದು ಬೆಳಕಿಗೆ ಬಂದಿತ್ತು. ಪ್ರಾಥಮಿಕವಾಗಿ ಕೌಟುಂಬಿಕ ಕಲಹದ ಹಿನ್ನೆಲೆ ಗಂಡ-ಹೆಂಡತಿ ಇಬ್ಬರೂ ಈ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ ಟೆಕ್ಕಿ ಸಾವಿಗೆ ನಿಜವಾದ ಕಾರಣ ಈಗ ಬಯಲಾಗಿದೆ. ಕೃತಕ ಬುದ್ಧಿಮತ್ತೆ (AI) ಹೊಡೆತಕ್ಕೆ ಕೆಲಸ ಕಳೆದುಕೊಂಡಿದ್ದ ಭಾನು ಚಂದರ್ ರೆಡ್ಡಿ, ಖಿನ್ನತೆಯಿಂದ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ತೆಲಂಗಾಣ ಮೂಲದ 32 ವರ್ಷದ ಭಾನು ಚಂದರ್ ರೆಡ್ಡಿ ಕುಂಟಾ ಮತ್ತು ಪತ್ನಿ ಬಿಬಿ ಶಾಜಿಯಾ ಸಿರಾಜ್ (31) ಎರಡು ವರ್ಷಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅವರ ಅಂತರ್​ಧರ್ಮೀಯ ವಿವಾಹದ ಬಗ್ಗೆ ಶಾಜಿಯಾ ಕುಟುಂಬಕ್ಕೆ ತಿಳಿದೇ ಇರಲಿಲ್ಲ ಎಂದು ತನಿಖೆ ವೇಳೆ ಗೊತ್ತಾಗಿದೆ. ಹೀಗಾಗಿಯೇ ತೆಲಂಗಾಣದಲ್ಲಿ ಸಮಸ್ಯೆ ಆಗಿರಬಹುದು ಅದಕ್ಕಾಗಿಯೇ 8 ತಿಂಗಳ ಹಿಂದೆ ದಂಪತಿ ಬೆಂಗಳೂರಿಗೆ ಬಂದು ನೆಲೆಸಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಕ್ಕಿ ಮೃತ ದೇಹದ ಪಕ್ಕ ಸಿಕ್ಕ ಚೀಟಿ

ಮಲ್ಟಿ ನ್ಯಾಶನಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಾಜಿಯಾ, ಮಂಗಳವಾರ ಬೆಳಗ್ಗೆ 7.30ಕ್ಕೆ ತನ್ನ ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳಿದ್ದಳು. ಈ ವೇಳೆ ಪತಿ ಬಾಗಿಲು ತೆರೆಯದ ಕಾರಣ ಬಳಿಕ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಳು. ಒಳಗಿನಿಂದ ಲಾಕ್ ಆಗಿದ್ದ ಬಾಗಿಲು ಒಡೆದು ನೋಡಿದಾಗ ರೆಡ್ಡಿ ಮೃತ ಪತ್ತೆಯಾಗಿತ್ತು. ಮೃತದೇಹದ ಪಕ್ಕ ಒಂದು ಚೀಟಿಯೂ ಪತ್ತೆಯಾಗಿತ್ತು. ಈ ವೇಳೆ ಸುಮಾರು 20 ನಿಮಿಷಗಳ ಕಾಲ ಘಟನಾ ಸ್ಥಳದಲ್ಲೇ ಇದ್ದ ಶಾಜಿಯಾ, ದಿಕ್ಕು ತೋಚದಂತಾಗಿ, ಯಾರಿಗೂ ತಿಳಿಯದಂತೆ 17ನೇ ಮಹಡಿಗೆ ತೆರಳಿ ಅಲ್ಲಿಂದ ಜಿಗಿದು ಪ್ರಾಣ ಬಿಟ್ಟಿದ್ದಾಳೆ ಎನ್ನಲಾಗಿದೆ.

ವರ್ಷಕ್ಕೆ 80 ಲಕ್ಷ ರೂ, ಪ್ಯಾಕೇಜ್ ಇದ್ದವ ಜಾಬ್ ಎಐಗೆ ಬಲಿ!

ಅಮೆರಿಕಾದಲ್ಲಿ ಕೆಲಸ ಮಾಡುತ್ತಿದ್ದ ಭಾನು ಚಂದರ್ ರೆಡ್ಡಿ ವರ್ಷಕ್ಕೆ ಸುಮಾರು 80 ಲಕ್ಷ ರೂಪಾಯಿ ಸಂಬಳ ಪಡೆಯುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಕುಟುಂಬ ಹೇಳುವಂತೆ ಅಮೆರಿಕಾದಲ್ಲೇ ಒಂದು ಸಣ್ಣ ಮನೆ ಖರೀದಿಸಿದ್ದಲ್ಲದೆ, ತನ್ನ ಕುಟುಂಬಕ್ಕಾಗಿ ತೆಲಂಗಾಣದಲ್ಲೂ ಮತ್ತೊಂದು ಮನೆ ನಿರ್ಮಿಸಿದ್ದನು. ಆದರೆ ಕೃತಕ ಬುದ್ಧಿಮತ್ತೆ (AI) ಪರಿಣಾಮದಿಂದ ಉದ್ಯೋಗ ಕಳೆದುಕೊಂಡಿದ್ದು ಆತನಿಗೆ ಮಾನಸಿಕ ಆಘಾತವನ್ನುಂಟುಮಾಡಿತ್ತು.ಇದೇ ಕಾರಣವನ್ನು ಆತ ತನ್ನ ಡೆತ್​ನೋಟ್​ನಲ್ಲಿಯೂ ಬರೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ತೆಲಂಗಾಣದ ಯುವ ದಂಪತಿ ಸಾವು; ಪತಿಯ ಶವ ಕಂಡು 17ನೇ ಮಹಡಿಯಿಂದ ಜಿಗಿದ ಪತ್ನಿ!

ಉದ್ಯೋಗ ಕಳೆದುಕೊಂಡ ನಂತರ ಭಾರತಕ್ಕೆ ಮರಳಿದ ರೆಡ್ಡಿ, ಹೊಸ ಕೆಲಸಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದ್ದನು. ಆದರೆ ಅವಕಾಶಗಳು ಸಿಗದೇ ಹೋದ ಕಾರಣ ಆತಂಕ ಮತ್ತು ಒತ್ತಡ ಹೆಚ್ಚಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಕುಟುಂಬದವರು ಮತ್ತು ಪತ್ನಿ ಶಾಜಿಯಾ ಅವನಿಗೆ ಬೆಂಬಲವಾಗಿ ನಿಂತಿದ್ದರು ಎಂಬುದೂ ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಎಲೆಕ್ಟ್ರಿಕ್ ಕಾರು ಪ್ರಿಯರಿಗೆ ಶಾಕ್: ಇನ್ಮುಂದೆ ಕರ್ನಾಟಕದಲ್ಲಿ ಇವಿ ವಾಹನಗಳೂ ದುಬಾರಿ! ಕಾರಣ ಇಲ್ಲಿದೆ

ಬೆಂಗಳೂರು, ಏಪ್ರಿಲ್ 1: ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು (Electric Vehicle) ಉತ್ತೇಜಿಸಲು ಕಳೆದ ಹತ್ತು ವರ್ಷಗಳಿಂದ ನೀಡಲಾಗುತ್ತಿದ್ದ ರಸ್ತೆ ತೆರಿಗೆ (Road Tax) ವಿನಾಯಿತಿಯನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಈ ಸಂಬಂಧ ‘ಕರ್ನಾಟಕ ಮೋಟಾರು ವಾಹನ ತೆರಿಗೆ (ತಿದ್ದುಪಡಿ) ವಿಧೇಯಕ 2026’ಕ್ಕೆ ಈಗಾಗಲೇ ಅನುಮೋದನೆ ಪಡೆಯಲಾಗಿದ್ದು, ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಯಾವ ಇವಿ ವಾಹನಕ್ಕೆ ಎಷ್ಟು ತೆರಿಗೆ?

ಹೊಸ ನಿಯಮದ ಪ್ರಕಾರ, ಎಲೆಕ್ಟ್ರಿಕ್ ಕಾರುಗಳು, ಜೀಪುಗಳು ಮತ್ತು ಖಾಸಗಿ ಬಸ್‌ಗಳ ಬೆಲೆಯ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಆ ಮಾಹಿತಿ ಇಲ್ಲಿದೆ.

  • 10 ಲಕ್ಷ ರೂ.ವರೆಗಿನ ಕಾರುಗಳಿಗೆ: ಶೇ 5 ರಷ್ಟು ತೆರಿಗೆ.
  • 10 ರೂ.ನಿಂದ 25 ಲಕ್ಷ ರೂ.ವರೆಗಿನ ಕಾರುಗಳಿಗೆ: ಶೇ 8 ರಷ್ಟು ತೆರಿಗೆ.
  • 25 ಲಕ್ಷ ರೂ.ಗಿಂತ ಹೆಚ್ಚಿನ ಬೆಲೆಯ ಕಾರುಗಳಿಗೆ: ಶೇ 10 ರಷ್ಟು ತೆರಿಗೆ.

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗಿಲ್ಲ ಟ್ಯಾಕ್ಸ್

ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಈ ಹೊಸ ತೆರಿಗೆ ಅನ್ವಯಿಸುವುದಿಲ್ಲ, ಅವುಗಳಿಗೆ ಹಳೆಯ ವಿನಾಯಿತಿ ಮುಂದುವರಿಯಲಿದೆ.

ಸರ್ಕಾರದ ನಿರ್ಧಾರಕ್ಕೆ ಕಾರಣವೇನು?

ಈ ಹೊಸ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ ಸುಮಾರು 259 ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ. 2016 ರಿಂದ ನೀಡಲಾಗುತ್ತಿದ್ದ ಸಂಪೂರ್ಣ ವಿನಾಯಿತಿಯನ್ನು ಈಗ ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಆದರೂ, ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ಇಂದಿಗೂ ಕಡಿಮೆ ಇದೆ (ಸಾಮಾನ್ಯ ಕಾರುಗಳಿಗೆ ಶೇ 13 ರಿಂದ ಶೇ 18 ರಷ್ಟು ತೆರಿಗೆ ಇದೆ) ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

2024 ರಲ್ಲೇ ಎಲ್ಲಾ ಎಲೆಕ್ಟ್ರಿಕ್ ಕಾರುಗಳ ಮೇಲೆ ಒಂದು ಬಾರಿಯ ಲೈಫ್​ಟೈಂ ತೆರಿಗೆ ವಿಧಿಸುವ ಯೋಜನೆಗಳಿದ್ದವು. ಆದರೆ ತೀವ್ರ ವಿರೋಧದ ನಂತರ 25 ಲಕ್ಷ ರೂ.ಗಿಂತ ಹೆಚ್ಚಿನ ಬೆಲೆಯ ವಾಹನಗಳಿಗೆ ಮಾತ್ರ ತೆರಿಗೆ ವಿಧಿಸುವ ನಿರ್ಧಾರಕ್ಕೆ ಬರಲಾಗಿತ್ತು. ನೋಂದಣಿ ವಿಷಯದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ತಮಿಳುನಾಡಿನ ನಂತರ ಕರ್ನಾಟಕವು ಭಾರತದಲ್ಲಿ ನಾಲ್ಕನೇ ಅತಿದೊಡ್ಡ ವಾಹನ ಮಾರುಕಟ್ಟೆಯಾಗಿದೆ. ಹೆಚ್ಚಿನ ರಾಜ್ಯಗಳು ವಿದ್ಯುತ್ ವಾಹನಗಳಿಗೆ ತೆರಿಗೆ ವಿನಾಯಿತಿ ಅಥವಾ ರಿಯಾಯಿತಿಗಳನ್ನು ನೀಡುತ್ತವೆ. ಆದಾಗ್ಯೂ ಗುಜರಾತ್ ಮತ್ತು ಕೇರಳದಂತಹ ಕೆಲವು ರಾಜ್ಯಗಳು ತೆರಿಗೆ ವಿಧಿಸುತ್ತವೆ.

ಖರೀದಿದಾರರ ಮೇಲೆ ಪ್ರಭಾವ

ಬೆಂಗಳೂರಿನಲ್ಲಿ ಈಗಾಗಲೇ 4.1 ಲಕ್ಷ ಎಲೆಕ್ಟ್ರಿಕ್ ವಾಹನಗಳಿದ್ದು, ಅದರಲ್ಲಿ ಕಾರುಗಳ ಸಂಖ್ಯೆ ಸುಮಾರು 37,000 ದಾಟಿದೆ. ಈಗ ಏಕಾಏಕಿ ತೆರಿಗೆ ವಿಧಿಸಿರುವುದರಿಂದ ಹೊಸದಾಗಿ ಕಾರು ಖರೀದಿಸುವವರ ಜೇಬಿಗೆ ಕತ್ತರಿ ಬೀಳಲಿದ್ದು, ಎಲೆಕ್ಟ್ರಿಕ್ ವಾಹನಗಳ ಖರೀದಿ ಪ್ರಮಾಣ ತುಸು ಕಡಿಮೆಯಾಗುವ ಆತಂಕ ಎದುರಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version