Headlines

ದಾಖಲೆ ಬರೆಯಲು ‘ಧುರಂಧರ್ 2’ ಚಿತ್ರಕ್ಕೆ ಬೇಕಿರೋದು ಎಷ್ಟು ಕೋಟಿ ರೂಪಾಯಿ? – Kannada News | Dhurandhar 2 Box Office: How much to beat Pushpa 2 record? Ranveer Singh film collection nearing milestone

ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಾಲ್ಕು ವಾರಗಳನ್ನು ಪೂರ್ಣಗೊಳಿಸಿದೆ. ಈ ಚಿತ್ರ ಭಾರತದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ಹಲವು ದೇಶಗಳಲ್ಲಿ ಬ್ಯಾನ್ ಆಗಿದೆ. ಆದಾಗ್ಯೂ ಸಿನಿಮಾದ ಕಲೆಕ್ಷನ್ ಜೋರಾಗಿಯೇ ಇದೆ. ಭಾರತದಲ್ಲಿ ದಾಖಲೆಯ ಗಳಿಕೆ ಮಾಡಲು ಸಿನಿಮಾಗೆ ಬೇಕಿರುವುದು ಇನ್ನು ಕೆಲವೇ ಕೋಟಿ ರೂಪಾಯಿ ಮಾತ್ರ. ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಿದ್ದು ಮಾರ್ಚ್ 19ರಂದು. ಅಂದಿನಿಂದ ಇಂದಿನವರೆಗೂ ಸಿನಿಮಾ ಅಬ್ಬರಿಸುತ್ತಲೇ ಇದೆ. ವಾರಾಂತ್ಯದಲ್ಲಿ ಚಿತ್ರ…

Read More

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ; ಕಾವಾಡಿಗನ ಮೇಲೆ ದಾಳಿ ಮಾಡಿದ ಸಾಕಾನೆ ‘ಸುಗ್ರೀವ’! – Kannada News | Bikkodu Tragedy: Tamed Elephant ‘Sugreeva’ Severely Injures Mahout Raju in Hassan

ಹಾಸನ, ಏ.16: ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ನಡುವೆಯೇ ಭೀಕರ ದುರಂತವೊಂದು ಸಂಭವಿಸಿದೆ. ಕಾರ್ಯಾಚರಣೆಗೆಂದು ಕರೆತರಲಾಗಿದ್ದ ಸಾಕಾನೆ ‘ಸುಗ್ರೀವ’, ತನ್ನದೇ ಕಾವಾಡಿಗನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ. ಇಂದು (ಏಪ್ರಿಲ್ 16, 2026) ಬೆಳಿಗ್ಗೆ ಬಿಕ್ಕೋಡು ಗ್ರಾಮದ ತಾತ್ಕಾಲಿಕ ಆನೆ ಶಿಬಿರದಲ್ಲಿ ಆನೆಗಳಿಗೆ ಆಹಾರ ನೀಡುವ ವೇಳೆ ಈ ಘಟನೆ ನಡೆದಿದೆ. ಕಾವಾಡಿಗ ರಾಜು ಅವರು ಸುಗ್ರೀವನಿಗೆ ಆಹಾರ ನೀಡಲು ಹೋದಾಗ, ಆನೆಯು ದಿಢೀರನೆ ಆಕ್ರೋಶಗೊಂಡು ತನ್ನ ದಂತದಿಂದ…

Read More

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ – Kannada News | Gold Price Today on 16th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

ಮಧ್ಯಪ್ರದೇಶ: ಅರಣ್ಯ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | MP Horror: College Student Assaulted in Isolated Forest Area, Friend Attacked

ಕ್ರೈಂ-ಸಾಂದರ್ಭಿಕ ಚಿತ್ರ Image Credit source: Taylor & Ring ಇಂದೋರ್, ಏಪ್ರಿಲ್ 16: ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದ (ಮೋವ್) ಸಮೀಪವಿರುವ ಬೆರ್ಚಾ ಅರಣ್ಯ ಪ್ರದೇಶವು ಒಂದು ಘೋರ ಅಪರಾಧಕ್ಕೆ ಸಾಕ್ಷಿಯಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಗೆಳೆಯನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮೃಗೀಯವಾಗಿ ದಾಳಿ ನಡೆಸಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಮಂಗಳವಾರ ಸಂಜೆ ಪ್ರಸಿದ್ಧ ಲಗ್ನಶಾ ಭೈರವ ಬಾಬಾ ದೇವಸ್ಥಾನಕ್ಕೆ ಭೇಟಿ…

Read More

ನಂಬಿಕೆ ದ್ರೋಹ ಮಾಡಿದರು: ಬಾಲಿವುಡ್ ಸಿನಿಮಾ ವಿರುದ್ಧ ಮೃಣಾಲ್ ಠಾಕೂರ್ ಬೇಸರ – Kannada News | Mrunal Thakur express unhappy over her Hindi movie Son Of Sardar 2

ಪ್ಯಾನ್ ಇಂಡಿಯಾ ನಟಿ ಮೃಣಾಲ್ ಠಾಕೂರ್ (Mrunal Thakur), ಹಿಂದಿ ಮತ್ತು ದಕ್ಷಿಣದ ಸಿನಿಮಾಗಳಲ್ಲಿಯೂ ನಟಿಸುತ್ತಾ ಬರುತ್ತಿದ್ದಾರೆ. ಅದರಲ್ಲೂ ಅವರಿಗೆ ಹೆಚ್ಚು ಹಿಟ್ ನೀಡಿರುವುದು ಮತ್ತು ಒಳ್ಳೆಯ, ನೆನಪುಳಿಯುವ ಪಾತ್ರಗಳನ್ನು ನೀಡಿರುವುದು ತೆಲುಗು ಚಿತ್ರರಂಗ. ಮೂಲತಃ ಮರಾಠಿ ನಟಿಯಾದರೂ ಹಾಗೂ ನಟನೆಗೆ ಪ್ರವೇಶವನ್ನು ಹಿಂದಿ ಚಿತ್ರರಂಗದಿಂದ ಮಾಡಿದ್ದರೂ ಸಹ ಬಾಲಿವುಡ್ ಮೇಲೆ ಅವರಿಗೆ ಬೇಸರ ಇದೆ. ಇದೀಗ ಅವರು ಬಾಲಿವುಡ್​ನ ಸಿನಿಮಾ ತಂಡವೊಂದು ತಮಗೆ ದೊಡ್ಡ ನಂಬಿಕೆ ದ್ರೋಹ ಮಾಡಿದೆ ಎಂದು ನಟಿ ಮೃಣಾಲ್ ಠಾಕೂರ್ ಬೇಸರ…

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…

Read More

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ. ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ…

Read More

ಇನ್ನೂ ಸಹ 100% ಫಿಟ್ ಆಗಿಲ್ಲ: ಗಾಯದ ಬಗ್ಗೆ ಮಾಹಿತಿ ಹಂಚಿಕೊಂಡ ಕೊಹ್ಲಿ – Kannada News | ‘I’m still not 100%’ Says Virat Kohli

ಕ್ರಿಕೆಟ್ ಮೈದಾನದಲ್ಲಿ ವಿರಾಟ್ ಕೊಹ್ಲಿ (Virat Kohli) ಎಂದರೆ ಕೇವಲ ಒಬ್ಬ ಆಟಗಾರನಲ್ಲ, ಅದೊಂದು ಅದಮ್ಯ ಉತ್ಸಾಹದ ಜ್ವಾಲೆ. ಆದರೆ, ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಂಡಿದ್ದಾರೆ. ಅಂದರೆ ಫೀಲ್ಡಿಂಗ್ ಮಾಡದೇ ಬ್ಯಾಟಿಂಗ್​ಗೆ ಮಾತ್ರ ಆಗಮಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಈ ಫಿಟ್​ನೆಸ್ ಸಮಸ್ಯೆಯ ನಡುವೆಯೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಕೇವಲ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 49 ರನ್ ಬಾರಿಸಿದ್ದಾರೆ. ಈ…

Read More

‘ನಾ ನಿನ್ನ ಬಿಡಲಾರೆ’: ದುರ್ಗಾಗೆ ಗೊತ್ತಾಯ್ತು ಅಂಬಿಕಾ ತನ್ನ ಅಕ್ಕ ಅನ್ನೋ ಸತ್ಯ – Kannada News | Naa Ninna Bidalaare Twist: Durga and Ambika Are Sisters! Shocking Revelation

‘ನಾ ನಿನ್ನ ಬಿಡಲಾರೆ’ ಧಾರಾವಾಹಿ (Na Ninna Bidalre) ಪ್ರಮುಖ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ದುರ್ಗಾ ಹಾಗೂ ಅಂಬಿಕಾ ಮಧ್ಯೆ ಸಾಕಷ್ಟು ಬಾಂಧವ್ಯ ಬೆಳೆದಿತ್ತು. ಅಂಬಿಕಾ ಆತ್ಮವಾದರೂ ಅದು ಕಾಣಿಸುತ್ತಾ ಇದ್ದಿದ್ದು ದುರ್ಗಾಗೆ ಮಾತ್ರ ಆಗಿತ್ತು. ಹೀಗೇಕೆ ಎಂಬ ಪ್ರಶ್ನೆ ದುರ್ಗಾಗೆ ಅನೇಕ ಬಾರಿ ಕಾಡಿದ್ದೂ ಇದೆ ಎಂದರೂ ತಪ್ಪಾಗಲಾರದು. ಈಗ ಈ ಪ್ರಶ್ನೆಗೆ ಉತ್ತರ ಏನೋ ಸಿಕ್ಕಿದೆ. ಆದರೆ, ಅದು ತುಂಬಾ ತಡವಾಯಿತೇ ಎಂಬ ಪ್ರಶ್ನೆ ಮೂಡಿದೆ. ಮಾಳವಿಕಾ ಮಾಡುತ್ತಿದ್ದ ಮಾಟದ ತಂತ್ರಕ್ಕೆ ಅಂಬಿಕಾ ಬಲಿಪಶುವಾಗಿದ್ದು…

Read More