Horoscope Today 13 January: ಇಂದು ಈ ರಾಶಿಯವರಿಗೆ ಆಸೆಗಳ ಅಪೂರ್ಣತೆಯಿಂದ ಬೇಸರ – Kannada News | Horoscope Today 13 January: Today, these zodiac signs will be bored with the unfulfilled desires

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಪೌಷ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಮಂಗಳವಾರ ಹೋಲಿಕೆ, ಹೊಸ ಸಂಪರ್ಕ, ಮನೋರಂಜನೆ, ಆದಾಯ ಸ್ಥಿರ, ಗೆಲವು, ತಾಳ್ಮೆ, ನಿಂದನೆಗೆ ಕೋಪ ಇವೆಲ್ಲ ಇಂದಿನ ಭವಿಷ್ಯ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಹೇಮಂತ, ಚಾಂದ್ರ ಮಾಸ : ಪೌಷ, ಸೌರ ಮಾಸ : ಧನು, ಮಹಾನಕ್ಷತ್ರ : ಪೂರ್ವಾಷಾಢ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ವಿಶಾಖಾ ಯೋಗ : ಶೂಲಿ, ಕರಣ : ಭದ್ರ, ಸೂರ್ಯೋದಯ – 06 – 53 am, ಸೂರ್ಯಾಸ್ತ – 06 – 12 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 16-23 – 16:48, ಯಮಗಂಡ ಕಾಲ 09:43 – 11:08, ಗುಳಿಕ ಕಾಲ 12:33 – 13:58

ಮೇಷ ರಾಶಿ :

ಶತ್ರುಗಳು ಅನ್ಯ ಕಾರ್ಯದಲ್ಲಿ ತೊಡಗಿರುವ ಕಾರಣ ನಿಮಗೆ ಬಾಧೆ ಇರದು. ಕಲಾವಿದರು ಅವಕಾಶದ ಕದ ತಟ್ಟುವಿರಿ. ಎದುರಿಸಬಹುದಾದ ಸಮಸ್ಯೆಯನ್ನು ಧೈರ್ಯದಿಂದ ಮುನ್ನುಗ್ಗಿ. ಇಂದು ನಿಮಗೆ ಕೆಲಸವು ಆಗಬೇಕಾಗಿದ್ದು ಪ್ರಯಾಣವು ಅನಿವಾರ್ಯವಾಗುವುದು. ವಾಹನ ಸೌಕರ್ಯದಿಂದ ನಿಮಗೆ ಸಮಾಧನ. ಒಂದೇ ಸಾರಿ ಖರ್ಚಿನ ಎಲ್ಲ ಯೋಜನೆ ಇಟ್ಟುಕೊಳ್ಳಬೇಡಿ. ನಿಮ್ಮ ಮಾತು ಇನ್ನೊಬ್ಬರಿಗೆ ಸಿಟ್ಟು ಬರುವಂತೆ ಇರವುದು. ಮಕ್ಕಳ ವಿದ್ಯಾಭ್ಯಾಸದ ಖರ್ಚು ಸ್ವಲ್ಪ ಕಡಿಮೆ‌ ಆಗಿದ್ದು ಸಂತಸದ ಸಮಾಚಾರವಾಗಲಿದೆ. ‌ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ದೈವಾನುಕೂಲದಿಂದ ನಿಮಗೆ ಸಿಗಬೇಕಾದ ಸಂಪತ್ತು ಬರಲಿದೆ.

ವೃಷಭ ರಾಶಿ :

ಅಧಿಕ ಆದಾಯ ಕೆಲಸವನ್ನು ಇಂದು ಹುಡುಕುವಿರಿ. ಸಣ್ಣ ವಿಚಾರಕ್ಕೆ ಆದ ಅಪಮಾನವನ್ನು ಎಲ್ಲಿಯೂ ಹೇಳಲಾರಿರಿ. ಮನೆಯಲ್ಲಿ ನಡೆದು ಶುಭಕಾರ್ಯದ ತಯಾರಿಯಲ್ಲಿ ನೀವು ಇರುವಿರಿ. ಆಸ್ತಿಯ ವಿಚಾರದಲ್ಲಿ ನಿಮ್ಮ ನಿಲುವಿಗೆ ಅಪಜಯವಾಗಬಹುದು. ಇಂದು ನೀವು ಸಂಗಾತಿಯ ಮಾತನ್ನೇ ಹೆಚ್ಚು ಹೆಚ್ಚುಕೇಳಲಾರಿರಿ. ಎಲ್ಲೊ ಸಿಕ್ಕ ಬಂಧುಗಳ ಒಡನಾಟವು ಹಿತವೆನಿಸುವುದು. ಸ್ನೇಹಿತರಿಗೋಸ್ಕರ ನೀವು ಹಣವನ್ನು ಖರ್ಚು ಮಾಡಬೇಕಾದೀತು. ನಿಮ್ಮ‌ ವಸ್ತುಗಳನ್ನು ದುರುಪಯೋಗ ಮಾಡಿಕೊಳ್ಳುವಿರಿ. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ. ನಿಮ್ಮ ಸಹನೆಯನ್ನು ಬಿಡದೇ ಅದನ್ನೇ ಅಸ್ತ್ರವನ್ನಾಗಿ ಮಾಡಿಕೊಳ್ಳಿ. ಧಾರ್ಮಿಕ ಕಾರ್ಯದಲ್ಲಿ ನಂಬಿಕೆ ಹೆಚ್ಚಾಗುವುದು.

ಮಿಥುನ ರಾಶಿ :

ಖಾಸಗಿ ಸಂಸ್ಥೆಯ ಹುದ್ದೆಯನ್ನು ನೀವು ಪಡೆಯಲಿದ್ದೀರಿ. ಧಾರ್ಮಿಕ‌ಚಿಂತನೆಗಳು ನಿಮ್ಮ ಮನಸ್ಸಿನಲ್ಲಿ ಓಡಬಹುದು. ನೀವು ಇಂದು ಹಳೆಯ ಸ್ನೇಹಿತನ ಜೊತೆ ಸೇರಿ ಹೊಸ ಉದ್ಯೋಗವನ್ನು ಆರಂಭಿಸುವ ಯೋಚನೆ ಮಾಡುವಿರಿ. ಆದಾಯವು ಕುಗ್ಗಬಹುದು. ತಂದೆ ಹಾಗೂ ತಾಯಿಯರ ಜೊತೆ ಬಹಳ ದಿನಗಳ ಅನಂತರ ಹರಟೆ ಹೊಡೆಯುವಿರಿ. ತೀರ್ಥಕ್ಷೇತ್ರಗಳ ದರ್ಶನವನ್ನು ಮಕ್ಕಳ ಜೊತೆ ಮಾಡುವಿರಿ. ಚಂಚಲವಾದ ಮನಸ್ಸನ್ನು ಏಕಾಗ್ರವಾಗಿ ಇಡಲು ಪ್ರಯತ್ನಿಸುವಿರಿ. ತಿಳಿದವರ ಜೊತೆ ಸಂದೇಹವನ್ನು ಪರಿಹರಿಸಿಕೊಳ್ಳುವಿರಿ. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ನಿಮಗೆ ಕೊಟ್ಟ ಜವಾಬ್ದಾರಿಗಳನ್ನು ನೀವು ಇತರರಿಗೆ ಹಂಚಿ ನಿರಾಳರಾಗುವಿರಿ.

ಕರ್ಕಾಟಕ ರಾಶಿ :

ಸಾಕೆನಿಸುವಷ್ಟು ಯಾವ ಆಹಾರವನ್ನೂ ಸೇವಿಸುವುದು ಬೇಡ. ಮಕ್ಕಳ ಶ್ರಮದಿಂದ ಪಾಲಕರಿಗೆ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ ಬೆಂಬಲದ ಕೊರತೆ ಇರುವುದು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಸಾವಾಗಿದ್ದು ತುರ್ತು ಚಿಕಿತ್ಸೆಯ ಅವಶ್ಯಕತೆ ಇರಲಿದೆ. ಹಲವು ದಿನಗಳ ನಿಮ್ಮ ಋಣವು ಮುಕ್ತಾಯವಾಗಿದ್ದು ಸಂತಸದ ವಿಚಾರವಾಗಿದೆ. ಸಣ್ಣ ವ್ಯಾಪಾರದಲ್ಲಿ ಲಾಭವನ್ನು ಕಾಣುವಿರಿ. ಉನ್ನತ ಹುದ್ದೆಗೆ ಆಯ್ಕೆಯಾದವರ ಪಟ್ಟಿಯಲ್ಲಿ ನಿಮ್ಮ ಹೆಸರೂ ಇರಲಿದೆ. ಮಕ್ಕಳ ಭವಿಷ್ಯಕ್ಕೆ ಹಣವನ್ನು ಉಳಿತಾಯ ಮಾಡವಿರಿ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ. ನಂಬಿಕೆಯನ್ನು ಪ್ರಯತ್ನಪೂರ್ವಕವಾಗಿ ಇರಿಸಿಕೊಳ್ಳುಬಿರಿ.

ಸಿಂಹ ರಾಶಿ :

ಮಾತಿನಿಂದ ಜೊತೆಗಾರರೇ ನಿಮ್ಮನ್ನು ದ್ವೇಷಿಸುವರು. ಸಾಧಿಸುವ ವಿಧಾನವವನ್ನು ಹೇಳಿಕೊಳ್ಳುವುದು ಬೇಡ.‌ ವಾಹನ ಚಾಲನೆಗೆ ಅತ್ಯುತ್ಸಾಹವಿದ್ದರೂ ಎಚ್ಚರಿಕೆಯನ್ನು ಹೆಚ್ಚು ಇಟ್ಟುಕೊಳ್ಳುವುದು ಮುಖ್ಯ. ಖಾಸಗಿ ಉದ್ಯೋಗ ಸಾಕೆನಿಸಿ, ಮನೆಯಲ್ಲಿ ಇರುವ ಯೋಚನೆ ಬರುವುದು. ಬಹಳ ಪ್ರಯತ್ನದ ಫಲವಾಗಿ ಅವಿವಾಹಿತರಿಗೆ ಯೋಗ್ಯವಾದ ಸಂಬಂಧವು ಬರಲಿದೆ. ಅತಿಯಾದ ಉದ್ಯೋಗದ ಬದಲಾವಣೆಯನ್ನು ಮಾಡುವುದು ಬೇಡ. ಮಾತ್ಸರ್ಯದಿಂದ ಸುಖವನ್ನು ನಾಶಮಾಡಿಕೊಳ್ಳುವಿರಿ. ಸಂಗಾತಿಯ ಜೊತೆ ಕೆಲವು ಸಮಯವನ್ನು ಕಳೆಯುವ ಮನಸ್ಸಾಗುವುದು. ದೂರಪ್ರಯಾಣವನ್ನು ಇಂದು ರದ್ದು ಮಾಡಿರಿ.

ಕನ್ಯಾ ರಾಶಿ :

ನಿಮ್ಮ ತಪ್ಪಿಗೆ ಯಾರನ್ನೋ‌ ದೂರಿ ಕಲಹವಾಗುವುದು. ಬಾಲಿಶವಾಗಿ ವರ್ತಿಸುವುದರಿಂದ ನಿಮ್ಮ ಬಗ್ಗೆ ತಪ್ಪು ಕಲ್ಪನೆ ಬರಬಹುದು. ಅವಶ್ಯಕ ವಸ್ತುಗಳನ್ನು ನೀವು ಕಳೆದುಕೊಳ್ಳುವಿರಿ‌. ಸಾಲ ಪಡೆದವರ ಹುಡುಕಾಟವನ್ನು ಕಷ್ಟ. ಶ್ರಮವಹಿಸಿದಷ್ಟು ಫಲವು ಸಿಗಲಿಲ್ಲ ಎಂಬ ಬೇಸರವಿದ್ದರೂ ತಕ್ಕಮಟ್ಟಿನ ಖುಷಿಯು ಇರಲಿದೆ. ಇಂದು ದೈವಾನುಕೂಲವನ್ನು ನಿರೀಕ್ಷಿಸದೇ ಪುರುಷ ಪ್ರಯತ್ನವು ಹೆಚ್ಚಿರಬೇಕಾಗುವುದು. ಹೇಳಬೇಕಾದ್ದನ್ನು ಹೇಳದೇ ‌ಮನಸ್ಸಿನಲ್ಲಿಯೇ ಮಂಡಿಗೆ ತಿನ್ನುವಿರಿ. ಪ್ರೇಮಿಯನ್ನು ನೀವು ಬಹಳ ಜೋಪಾನವಾಗಿ ನೋಡಿಕೊಳ್ಳಬೇಕಾಗುವುದು. ಆಪ್ತರಿಂದ ಸಣ್ಣ ನಿರ್ಲಕ್ಷ್ಯವನ್ನೂ ಸಹಿಸಲಾರಿರಿ. ಸ್ನೇಹಿತರು ನೆಚ್ಚುವ ಕಾರ್ಯವನ್ನು ಮಾಡುವಿರಿ.

ತುಲಾ ರಾಶಿ :

ಜವಾಬ್ದಾರಿಯ ಮಾತುಗಳಿಂದ ಅಚ್ಚರಿಯಾದೀತು. ಕೃಷಿಗೆ ಸಂಬಂಧಿಸಿದ ನೂತನ ಅನ್ವೇಷಣೆಯನ್ನು ಮಾಡುವ ಹೊಸ ಆಲೋಚನೆಯನ್ನು ಮಾಡುವಿರಿ. ಸಾಮಾಜಿಕ ಕಾರ್ಯದಿಂದ ಪ್ರೇರಣೆ ಪಡೆದು ಸಂಸ್ಥೆಯನ್ನು ಆರಂಭಿಸುವಿರಿ. ಹೇಳಿಕೊಟ್ಟ ಮಾತು ಎಲ್ಲಿಯವರೆಗೆ ಇದ್ದೀತು. ನಿಮ್ಮ ದುರಾಲೋಚನೆಗೆ ಸ್ನೇಹಿತರು ಅಡ್ಡಿ ಮಾಡುವರು. ಶತ್ರುವಿನ ಬಲವನ್ನು ನಿಯಂತ್ರಿಸಲು ಸಿದ್ಧತೆ ನಡೆಸುವಿರಿ. ನಿಮ್ಮ ದುಃಖಕ್ಕೆ ಬಂಧುಗಳಿಂದ ಸಾಂತ್ವನವು ಸಿಗುವುದು. ಸಿಕ್ಕಿದ್ದರಲ್ಲಿ ಸುಖ ಪಡುವುದನ್ನು ಬೆಳೆಸಿಕೊಳ್ಳುವಿರಿ. ಮಕ್ಕಳನ್ನು ಸ್ವತಂತ್ರವಾಗಿ ಬಿಡುವುದು ಬೇಡ. ಸಣ್ಣ ವಿರಸವೂ ದೂರಾಗಲು ಕಾರಣವಾಗಬಹುದು. ದುಃಸ್ವಪ್ನವು ನಿಮ್ಮನ್ನು ಕಾಡಬಹುದು.

ವೃಶ್ಚಿಕ ರಾಶಿ :

ಯಾವುದೋ ಆಲೋಚನೆಯಲ್ಲಿ ಮುಖ್ಯ ಕೆಲಸವನ್ನು ಮರೆಯಬಹುದು. ನಿಮ್ಮ ಉತ್ಪಾದನೆಯು ಆದಾಯಕ್ಕಿಂತ ನೆಮ್ಮದಿಯನ್ನು ಹೆಚ್ಚು ಕೊಡುವುದು. ಪ್ರಭಾವಿ ಜನರ ಸಂಸರ್ಗದಿಂದ ಹೊಸ ಆಯಾಮವು ತೆರೆದುಕೊಳ್ಳುವುದು. ಯಾವ ಮಾರ್ಗದಿಂದ ಹಣ ಬಂದರೂ ಸ್ವೀಕರಿಸುವಿರಿ. ನಿಮ್ಮದು ಉದ್ದೇಶಪೂರ್ವಕ ಆಡಿದ ಮಾತಾಗಿದ್ದು ಸಮಸ್ಯೆಗಳನ್ನು ಎದುರಿಸಬೇಕಾದೀತು. ರಕ್ಷಣಾ ವ್ಯವಸ್ಥೆಯಲ್ಲಿ ಇರುವವರಿಗೆ ಕಾರ್ಯದ ಒತ್ತಡ ಹೆಚ್ಚಿರುವುದು. ಕಾರ್ಯವನ್ನೇ ಸರಿಯಾಗಿ ಮಾಡಿ ಆದಾಯವು ಹೆಚ್ಚಾಗುವಂತೆ ಮಾಡಿಕೊಳ್ಳಿ. ಇಂದು ಕೋಪವು ಬಂದರೂ ವ್ಯಕ್ತಪಡಿಸದೇ ಸುಮ್ಮನಿದ್ದು ನುಂಗಿಕೊಳ್ಳುವಿರಿ.

ಧನು ರಾಶಿ :

ಅನಿರೀಕ್ಷಿತವಾಗಿ ಕುಟುಂಬದ ಜವಾಬ್ದಾರಿಯು ನಿಮ್ಮ ಮೇಲೇ ಬರಬಹುದು‌. ಇಂದು ನಿಮ್ಮ ಮಾತಿನ ಮಾರ್ಗಗಳು ಎಲ್ಲವೂ ಮುಚ್ಚಿದಂತೆ ಅನ್ನಿಸಬಹುದು. ವೇಗದ ನಡಿಗೆಯಿಂದ ಬೀಳುವಿರಿ. ನಿಮಗೆ ಆರ್ಥಿಕ ನೆರವನ್ನು ನೀಡಿದವರಿಗೆ ಕೃತಜ್ಞತೆಯನ್ನು ಸಲ್ಲಿಸುವಿರಿ. ಸ್ತ್ರೀಯರಿಂದ ನಿಮಗೆ ಬೈಗುಳವು ಬರಲಿದೆ. ಅವಿವಾಹಿತರು ವಿವಾಹದ ಬಗ್ಗೆ ಮಾಡಿ ಪ್ರಯೋಜನವಾಗದು, ಕಾರ್ಯದಲ್ಲು ಪ್ರವೃತ್ತರಾಗಿ.‌ ಉದ್ಯೋಗದಲ್ಲಿ ಪ್ರಾಮಾಣಿಕರಾಗಿದ್ದರೂ ಅಪವಾದವು ಬರಬಹುದು. ಸಾಮಾಜಿಕ ಕಾರ್ಯಕ್ಕೆ ಜನಬೆಂಬಲವು ಸಿಗಬಹುದು. ಸಂಗಾತಿಯಿಂದ ಸಿಗಬೇಕಾದ ಪ್ರೀತಿಯು ಕಡಿಮೆ ಆಗಲಿದೆ. ಇಂದಿನ ಸಮಯ ಮಿತಿಯನ್ನು ಅರಿತು ಕಾರ್ಯವನ್ನು ಮಾಡುವಿರಿ.

ಮಕರ ರಾಶಿ :

ಸರ್ಕಾರಿ ಉದ್ಯೋಗದ ಕಡೆ ನಿಮ್ಮ ಮನಸ್ಸು ಹೊರಳುವುದು. ನಿಶ್ಚಿತ ಕಾರ್ಯವು ನಿಮ್ಮಿಂದ ಆಗದೇ ಹೋಗಬಹುದು. ಪ್ರಯಾಣದ ಅನಿವಾರ್ಯತೆ ಇದ್ದರೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿ. ವಿದ್ಯಾಭ್ಯಾಸದ ಗೊಂದಲವನ್ನು ನೀವು ಸರಿಮಾಡಿಕೊಳ್ಳುವುದು ಕಷ್ಟವಾದೀತು. ಶತ್ರುಗಳನ್ನು ಹಿಮ್ಮೆಟ್ಟಿಸುವ ಕಾರ್ಯವು ನಿಮ್ಮ ಕಡೆಯಿಂದ ಆಗುವುದು. ಮತ್ತೆ ಮತ್ತೆ ನಿಮಗೆ ಆಗದ ವಿಚಾರಗಳೇ ಕಿವಿಗೆ ಬೀಳಬಹುದು. ಒತ್ತಡಗಳು ನಿಮ್ಮ ಕೆಲಸದ ವಿಧಾನವನ್ನು ಬದಲಿಸುವುದು. ಇಂದು ಹೊಂದಾಣಿಕೆಯ ಸ್ವಭಾವವನ್ನು ಬಿಡಬಹುದು. ಎಲ್ಲರಿಂದ ಗೌರವವನ್ನು ಪಡೆಯುವ ಬಯಕೆ ಇರಲಿದೆ. ಸಹೋದ್ಯೋಗಿಗಳ ಅನಾದರವನ್ನು ನೀವು ಲೆಕ್ಕಿಸದೇ ನಿಮ್ಮ ಕಾರ್ಯದಲ್ಲಿ ಮಗ್ನರಾಗುವಿರಿ.

ಇದನ್ನೂ ಓದಿ:ಶುಕ್ರ ಹಾಗೂ ರವಿಯ ಅಪರೂಪದ ಸಂಯೋಗ, ಗುರುದೃಷ್ಟಿಯ ಯೋಗ

ಕುಂಭ ರಾಶಿ :

ಆರ್ಥಿಕತೆಯು ದುರ್ಬಲವಾಗಗುತ್ತಿದ್ದು ಇದೇ ದೊಡ್ಡ ಚಿಂತೆಯಾಗಬಹುದು. ಏಕಕಾಲಕ್ಕೆ ಹತ್ತಾರು ಚಿಂತನೆಯನ್ನು ಮನಸ್ಸು ಮಾಡಲಿದೆ. ಯಾರ ಬೆಂಬಲವನ್ನು ಬಯಸದೇ ಸ್ವತಂತ್ರವಾಗಿ ಕೆಲಸವನ್ನು ಮಾಡುವಿರಿ. ಮನೆಯಲ್ಲಿ ನಿಮಗೆ ಪೂರಕವಾದ ವಾತಾವರಣವಿದ್ದರೂ ಸಂತೋಷವು ಇರದು. ಇಂದು ನಿಮ್ಮ ಬಗ್ಗೆಯೇ ನಿಮಗೆ ಅಸಮಾಧಾನವಿರಬಹುದು. ಬರಬೇಕಿದ್ದ ಹಣವು ಬಹಳ ದಿನವಾದರೂ ಬಾರದೇ ಇದ್ದುದು ಚಿಂತೆಯಾಗುವುದು. ಇಂದು ಎಲ್ಲರಿಂದ ದೂರವಿರುವುದು ನಿಮಗೆ ಇಷ್ಟವಾಗುವುದು. ಹೊಸ ಸ್ಥಳವು ನೀವು ಒಗ್ಗಿಕೊಳ್ಳುವುದು ಕಷ್ಟವಾದೀತು. ದೇವರಲ್ಲಿ ನಂಬಿಕೆ ಕಡಿಮೆಯಾಗುವುದು. ನೀವು ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ನಿಮ್ಮೊಳಗೇ ಸಂಕಟಪಡುವಿರಿ.

ಮೀನ ರಾಶಿ :

ನಂಬಿಕೆಯನ್ನು ಗಳಿಸುವುದು ನಿಮಗೆ ಸವಾಲಾಗಬಹುದು. ನಿರೀಕ್ಷಿತ ಉಡುಗೊರೆಯಿಂದ ಸಂತೋಷವಾಗಲಿದೆ. ಕಾರ್ಯದಲ್ಲಿ ಉಂಟಾದ ತೊಂದರೆಯನ್ನು ನೀವು ಲೆಕ್ಕಿಸದೇ ಮುನ್ನಡೆಯುವಿರಿ. ಆಭರಣ ಪ್ರಿಯರಿಗೆ ಸಂತೋಷವಾಗುವುದು. ಹಳೆಯ ವ್ಯವಹಾರವು ಪುನಃ ಮುನ್ನೆಲೆಗೆ ಬಂದು ಕಲಹದಲ್ಲಿ ಅಂತ್ಯವಾಗಬಹುದು. ನಿಮ್ಮ ಅಶಿಸ್ತಿನ ಕಾರ್ಯಕ್ಕೆ ಅಪಹಾಸ್ಯ ಮಾಡಬಹುದು. ಮಾತಿನಲ್ಲಿ ಮಿತಿ ಇರಲಿದ್ದು ಎಲ್ಲರಿಗೂ ಅಚ್ಚರಿಯಾದೀತು. ಆಲಸ್ಯದಿಂದ ದೂರವಿದ್ದರೂ ಸೋಮಾರಿ ಬಿರುದು ಬರಬಹುದು. ‌ವಿವಾದಕ್ಕೆ ಹೋಗಿ ಮೂರ್ಖರಾಗುವುದು ಬೇಡ. ಆಲಸ್ಯವನ್ನು ಬಿಡುವುದು ಅನಿವಾರ್ಯವಾದೀತು.

-ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಒಂದೇ ಓವರ್​ನಲ್ಲಿ 32 ರನ್..! 22 ಎಸೆತಗಳಲ್ಲಿ 50 ರನ್ ಚಚ್ಚಿದ ಹ್ಯಾರಿಸ್; ವಿಡಿಯೋ

ಯುಪಿ ವಾರಿಯರ್ಸ್​ ತಂಡ ನೀಡಿರುವ 144 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಭರ್ಜರಿ ಆರಂಭ ಕಂಡಿತು. ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಸ್ಫೋಟಕ ಬ್ಯಾಟರ್ ಗ್ರೇಸ್ ಹ್ಯಾರಿಸ್ ಅಜೇಯ ಶತಕದ ಜೊತೆಯಾಟ ಕಟ್ಟಿದ್ದಾರೆ. ಅದರಲ್ಲೂ ಕೇವಲ 8 ಓವರ್​ಗಳಲ್ಲಿ ತಂಡ ಶತಕದ ಗಡಿ ದಾಟಿತು. ಈ ವೇಳೆ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಗ್ರೇಸ್ ಹ್ಯಾರಿಸ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅದರಲ್ಲೂ ವೆಸ್ಟ್ ಇಂಡೀಸ್​ನ ಸ್ಟಾರ್ ಆಲ್‌ರೌಂಡರ್ ಡಿಯಾಂಡ್ರಾ ಡಾಟಿನ್ ಬೌಲ್​ ಮಾಡಿದ ಪವರ್​ ಪ್ಲೇನ ಕೊನೆಯ ಓವರ್​ನಲ್ಲಿ ಅಂದರೆ 6ನೇ ಓವರ್​ನಲ್ಲಿ ಉಗ್ರರೂಪ ತಾಳಿದ ಹ್ಯಾರಿಸ್ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದು ಬರೋಬ್ಬರಿ 32 ರನ್ ಕಲೆಹಾಕಿದರು. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಜಂಟಿ ದಾಖಲೆ ನಿರ್ಮಿಸಿದರು. ನಿನ್ನೆಯಷ್ಟೇ ಮಾಜಿ ಆರ್​ಸಿಬಿ ಆಟಗಾರ್ತಿ ಸೋಫಿ ಡಿವೈನ್ ಒಂದೇ ಓವರ್​ನಲ್ಲಿ 32 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು.

Source link

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ – Kannada News | AAP MP Raghav Chadha Turns Blinkit delivery agent Amid Row Over Gig Workers Demands

ನವದೆಹಲಿ, ಜನವರಿ 12: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ (Raghav Chadha) ಇಂದು ಒಂದು ದಿನದ ಮಟ್ಟಿಗೆ ಡೆಲಿವರಿ ಬಾಯ್ ಆಗಿ ಬದಲಾಗಿದ್ದರು. ಡೆಲಿವರಿ ಬಾಯ್​​ಗಳು ಎದುರಿಸುತ್ತಿರುವ ತೊಂದರೆಗಳನ್ನು ಅರ್ಥಮಾಡಿಕೊಳ್ಳಲು ಅವರು ವೈಯಕ್ತಿಕವಾಗಿ ಜನರ ಮನೆಗಳಿಗೆ ದಿನಸಿ ಮತ್ತಿತರ ಪದಾರ್ಥಗಳನ್ನು ತಲುಪಿಸಿದರು. ಅವರು ಇದರ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿಯ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಘವ್ ಚಡ್ಡಾ ಅವರು ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ವಿಷಯವನ್ನು ಎತ್ತಿದ್ದರು. ಈ ಕಾರ್ಮಿಕರ ಪರಿಸ್ಥಿತಿ ದಿನಗೂಲಿ ಕಾರ್ಮಿಕರಿಗಿಂತ ಕೆಟ್ಟದಾಗಿದೆ ಎಂದು ಅವರು ಹೇಳಿದ್ದರು. 10 ನಿಮಿಷದಲ್ಲಿ ಡೆಲಿವರಿ ಎಂಬ ಆಯ್ಕೆಯನ್ನು ತೆಗೆದುಹಾಕಬೇಕೆಂದು ಅವರು ಒತ್ತಾಯಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಹ್ಯಾರಿಸ್ ಆರ್ಭಟ; ಏಕಪಕ್ಷೀಯ ಗೆಲುವು ಸಾಧಿಸಿದ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಆರ್​ಸಿಬಿ ಅದ್ಭುತ ಆರಂಭ ಪಡೆದುಕೊಂಡಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಸ್ಮೃತಿ ಮಂಧಾನ ಪಡೆ 4 ಪಾಯಿಂಟ್​ಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ತನ್ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಸೋಲಿಸಿದ್ದ ಆರ್​ಸಿಬಿ, ಇದೀಗ ತನ್ನ ಎರಡನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 9 ವಿಕೆಟ್​ಗಳಿಂದ ಮಣಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಪಿ ತಂಡ 144 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 12.1 ಓವರ್​ಗಳಲ್ಲಿ ಕೇವಲ 1 ವಿಕೆಟ್​ ಕಳೆದುಕೊಂಡು ಜಯದ ನಗೆ ಬೀರಿತು.

Source link

ಮತ್ತೆ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ ಮಾಡಿದ ಮಲ್ಲಮ್ಮ: ಕಾರಣ ಏನು? – Kannada News | Mallamma performs Urulu Seve in Bigg Boss Kannada Season 12 house

ಸೋಶಿಯಲ್ ಮೀಡಿಯಾ ಮೂಲಕ ಫೇಮಸ್ ಆಗಿ, ನಂತರ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಬಂದಿದ್ದ ಮಲ್ಲಮ್ಮ ಅವರು ಜನಪ್ರಿಯತೆ ಹೆಚ್ಚಿಸಿಕೊಂಡರು. ಒಂದಷ್ಟು ವಾರಗಳ ಬಳಿಕ ಅವರು ಎಲಿಮಿನೇಟ್ ಆದರು. ಆದರೆ ಕೊನೆಯ ವಾರದಲ್ಲಿ ಮಲ್ಲಮ್ಮ (Mallamma) ಅವರು ಮತ್ತೆ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಬಂದಿದ್ದು ಎಲ್ಲರಿಗೂ ಖುಷಿ ಆಗಿದೆ. ಆದರೆ ಮಲ್ಲಮ್ಮ ಅವರು ಏಕಾಏಕಿ ಬಿಗ್ ಬಾಸ್ ಮನೆಗೆ ಬಂದು ಉರುಳು ಸೇವೆ (Urulu Seve) ಮಾಡಿದ್ದಾರೆ! ಯಾಕೆ ಎಂದು ಎಲ್ಲರಿಗೂ ಅಚ್ಚರಿ ಆಗಿದೆ. ಬಳಿಕ ಸ್ವತಃ ಮಲ್ಲಮ್ಮ ಅವರು ಕಾರಣ ತಿಳಿಸಿದರು.

ಮಲ್ಲಮ್ಮ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಒಂದು ಹರಕೆ ಮಾಡಿಕೊಂಡಿದ್ದರು. ‘ಸೊಸೆಗೆ ನಾರ್ಮಲ್ ಹೆರಿಗೆ ಆಗಬೇಕು’ ಎಂದು ಅವರು ಬೇಡಿಕೊಂಡಿದ್ದರು. ಮಲ್ಲಮ್ಮ ಅವರ ಕೋರಿಕೆ ಈಡೇರಿದೆ. ಅವರ ಪ್ರಾರ್ಥನೆಯಂತೆಯೇ ಸೊಸೆಗೆ ನಾರ್ಮಲ್ ಡೆಲಿವರಿ ಆಗಿದೆ. ಅದಕ್ಕಾಗಿ ಅವರು ಬಿಗ್ ಬಾಸ್ ಮನೆಗೆ ಮರಳಿಬಂದು ಹರಕೆ ತೀರಿಸಿದ್ದಾರೆ.

‘ನಾವು ಬಡವರು. ಕೆಲಸ ಮಾಡಬೇಕಲ್ಲವಾ? ಹಾಗಾಗಿ ನಾರ್ಮಲ್ ಡೆಲಿವರಿ ಆಗಲಿ ಅಂತ ಬೇಡಿಕೊಂಡಿದ್ದೆ. ದೇವರು ನಮ್ಮ ಆಸೆ ಈಡೇರಿಸಿದ ಮೇಲೆ ನಾವು ಹರಕೆ ತೀರಿಸಬೇಕಲ್ಲವೇ’ ಎಂದು ಮಲ್ಲಮ್ಮ ಅವರು ಹೇಳಿದ್ದಾರೆ. ಈ ಕ್ಷಣದಲ್ಲಿ ಎಲ್ಲರೂ ಮಲ್ಲಮ್ಮ ಅವರಿಗೆ ವಿಶ್ ಮಾಡಿದರು. ಆದರೆ ಮಲ್ಲಮ್ಮ ಯಾಕೋ ಮೊದಲಿನ ರೀತಿ ಮಾತನಾಡುತ್ತಿಲ್ಲ ಎಂದು ಧ್ರುವಂತ್ ಹೇಳಿದರು.

ಮೊಮ್ಮಗನಿಗೆ ಯಾವ ಹೆಸರು ಇಡಬೇಕು ಎಂಬುದನ್ನು ಬಿಗ್ ಬಾಸ್ ಮನೆಯಲ್ಲೇ ನಿರ್ಧರಿಸಲಾಯಿತು. ಗಣೇಶ ಎಂದು ಮೊಮ್ಮಗನಿಗೆ ಬಿಗ್ ಬಾಸ್ ಮನೆಯಲ್ಲಿ ನಾಮಕರಣ ಮಾಡಲಾಯಿತು. ಇದರಿಂದ ಮಲ್ಲಮ್ಮ ಖುಷಿಪಟ್ಟರು. ತಾವು ಎಂದೆಂದಿಗೂ ಬಿಗ್ ಬಾಸ್ ಮನೆಗೆ ಚಿರಋಣಿ ಆಗಿರುವುದಾಗಿ ಮಲ್ಲಮ್ಮ ಅವರು ಹೇಳಿದರು. ಸ್ವಲ್ಪ ಹೊತ್ತು ಬಿಗ್ ಬಾಸ್ ಮನೆಯಲ್ಲಿ ಇದ್ದ ಅವರು ನಂತರ ಹೊರಬಂದರು.

ಇದನ್ನೂ ಓದಿ: ಈ ಬಾರಿ ಬಿಗ್​​ಬಾಸ್ ಯಾರು ಗೆಲ್ಲಬೇಕು? ಮಲ್ಲಮ್ಮನ ಫೇವರೇಟ್ ಸ್ಪರ್ಧಿ ಯಾರು?

ಕೊನೆಯ ವಾರದಲ್ಲಿ ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ, ಕಾವ್ಯ ಶೈವ, ಗಿಲ್ಲಿ ನಟ, ಧ್ರುವಂತ್, ಮ್ಯೂಟೆಂಟ್ ರಘು ಅವರು ಪೈಪೋಟಿ ನೀಡುತ್ತಿದ್ದಾರೆ. ಈ ವಾರ ಒಬ್ಬರು ಮಿಡ್ ವೀಕ್ ಎಲಿಮಿನೇಷನ್ ಮೂಲಕ ಔಟ್ ಆಗಲಿದ್ದಾರೆ. ಧನುಷ್ ಅವರು ನೇರವಾಗಿ ಫಿನಾಲೆ ತಲುಪಿದ್ದಾರೆ. ಅಂತಿಮವಾಗಿ ಯಾರು ವಿನ್ ಆಗುತ್ತಾರೆ ಎಂಬುದನ್ನು ನೋಡುವ ಕೌತುಕ ನಿರ್ಮಾಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒರಿಜಿನಲ್ ಅಂತ ನಕಲಿ 2nd PU ಪ್ರಶ್ನೆಪತ್ರಿಕೆ ಹರಿಬಿಟ್ಟಿದ್ದ ಕಿಡಿಗೇಡಿಗಳು: ಯೂಟ್ಯೂಬ್ ಖಾತೆ ವಿರುದ್ಧ ದೂರು – Kannada News | Complaint Filed Against YouTube Over Miscreants Who Leaked Fake 2nd PUC Question Paper Claiming It Was Original

ಬೆಂಗಳೂರು, ಜನವರಿ 12: ದ್ವೀತಿಯ ಪಿಯುಸಿ (2nd PUC) ವಾರ್ಷಿಕ ಪರೀಕ್ಷೆಗೆ ದಿನಗಣನೆ ಶುರುವಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಪ್ರಿಪರೇಟರಿ ಎಕ್ಸಾಂ ನಡೆಸಲಾಗುತ್ತಿದೆ. ಪರೀಕ್ಷೆ ಆರಂಭ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಲೀಕ್​ ಹಾವಳಿ ಕೂಡ ಜೋರಾಗಿದೆ. ಶಿಕ್ಷಣ ಇಲಾಖೆ ವೈಫಲ್ಯವನ್ನೇ ಖದೀಮರು ಬಂಡವಾಳ ಮಾಡಿಕೊಂಡಿದ್ದಾರೆ. ಕೆಎಸ್​​ಇಎಬಿ (KSEAB) ತಯಾರು ಮಾಡಿದ ಪ್ರಶ್ನೆ ಪತ್ರಿಕೆ ರೀತಿಯೇ ಹೋಲುವಂತೆ ಪ್ರಶ್ನೆಪತ್ರಿಕೆ ತಯಾರಿಸಿದ್ದಾರೆ. ಆ ಮೂಲಕ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದೇ ಒರಿಜಿನಲ್ ಅಂತ ಬಿಂಬಿಸಿದ್ದಾರೆ. ಸದ್ಯ ಈ ಬಗ್ಗೆ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯೂಟ್ಯೂಬ್ ಖಾತೆ ವಿರುದ್ಧ ದೂರು

ಪಿಯು ಮಂಡಳಿಯ ಜಂಟಿ ನಿರ್ದೇಶಕರು NiranjanShetty@NiranjanShetty9581 ಯೂಟ್ಯೂಬ್ ಖಾತೆ ವಿರುದ್ಧ ಬೆಂಗಳೂರು ನಾರ್ತ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್​ಐಆರ್​ ದಾಖಲಾಗಿದೆ. ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ಇದು ಒರಿಜಿನಲ್​​, ಇದರ ಪ್ರತಿ ಬೇಕಾದಲ್ಲಿ ಫಾಲೋ, ಸಬ್ಸ್ಕ್ರೈಬ್ ಮಾಡಿ ಅಂತ ಲಿಂಕ್ ಶೇರ್ ಮಾಡಿದ್ದಾರೆ. ಕೇವಲ ಯೂಟ್ಯೂಬ್ ಸಬ್ಸ್ಕ್ರೈಬ್ ಗೋಸ್ಕರ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ ಅಂತ ಬಿಂಬಿಸಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹರಡಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಲಾಗಿದೆ.

ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ: ಭರತ್. ಎಸ್

ದ್ವಿತೀಯ ಪಿಯು ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕ ಭರತ್. ಎಸ್​ ಪ್ರತಿಕ್ರಿಯಿಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಯಾರು ಲೀಕ್ ಮಾಡಿದ್ದಾರೆಂದು ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್

ಕೆಲವೊಂದು ಹಳೆಯ ಪ್ರಶ್ನೆ ಪತ್ರಿಕೆಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಫೇಕಾಗಿ ಲೀಕ್‌ ಮಾಡುತ್ತಿದ್ದಾರೆ. ಅವರ ಬಗ್ಗೆಯೂ ಹದ್ದಿನ ಕಣ್ಣಿಟ್ಟಿದ್ದೇವೆ. ಪೋಷಕರಿಗೆ ಆತಂಕ ಬೇಡ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ. ತನಿಖೆ ನಡೆಯುತ್ತಿರುವ ಹಿನ್ನೆಲೆ ನಾವು ಏನೂ ಮಾತನಾಡಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸರ್ಕಾರಿ ಆಸ್ಪತ್ರೆಗೆ ಹೆಂಡತಿಯನ್ನು ನೋಡಲು ಬಂದಿದ್ದ ರೌಡಿಯ ಕೊಲೆ – Kannada News | Gangster killed in Chennai government hospital shocking news in kannada

ಚೆನ್ನೈ, ಜನವರಿ 12: ತಮಿಳುನಾಡಿನ ಚೆನ್ನೈನ ಕಿಲ್ಪಾಕ್ ಆಸ್ಪತ್ರೆಯಲ್ಲಿ ರೌಡಿಯನ್ನು ಕೊಲೆ ಮಾಡಲಾಗಿದೆ. ಚೆನ್ನೈನ (Chennai) ರಾಜಧಾನಿ ಕಿಲ್ಪಾಕ್‌ನಲ್ಲಿ ಸರ್ಕಾರಿ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿದೆ. ಈ ಆಸ್ಪತ್ರೆ ಯಾವಾಗಲೂ ಜನದಟ್ಟಣೆಯಿಂದ ಕೂಡಿರುತ್ತದೆ. ಪ್ರತಿದಿನ ನೂರಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ, ಹೊರರೋಗಿಗಳು ಸಹ ಆಗಾಗ ಕಿಲ್ಪಾಕ್ ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇಂದು (ಜನವರಿ 12) ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ರೌಡಿಗಳ ಗುಂಪೊಂದು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ನುಗ್ಗಿ ಆತನನ್ನು ಕೊಲೆ ಮಾಡಿದೆ.

ಮೃತ ವ್ಯಕ್ತಿಯ ಹೆಸರು ಆದಿ ಎಂದು ತಿಳಿದುಬಂದಿದೆ. ರೌಡಿ ಆದಿ ವಿರುದ್ಧ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ಬಾಕಿ ಇದ್ದು, ಕೊಲೆ ಪ್ರಕರಣದಲ್ಲಿ ಪ್ರಮುಖ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಪೊಲೀಸರು ಆತನನ್ನು ತನಿಖೆ ನಡೆಸುತ್ತಿದ್ದರು. ಆತನ ಹೆಂಡತಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೀಗಾಗಿ ರೌಡಿ ಆದಿ ನಿನ್ನೆ ರಾತ್ರಿ ಹೆಂಡತಿಯನ್ನು ನೋಡಲು ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಬಂದಿದ್ದ. ಆ ಸಮಯದಲ್ಲಿ, ಆಸ್ಪತ್ರೆ ಕಚೇರಿಯ ಆವರಣದ ಬಳಿ ಅಡಗಿಕೊಂಡಿದ್ದ ಮೂವರು ನಿಗೂಢ ವ್ಯಕ್ತಿಗಳು ಆದಿಯನ್ನು ಸುತ್ತುವರೆದು ಹರಿತವಾದ ಆಯುಧಗಳಿಂದ ಆತನನ್ನು ಕಡಿದು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ!

ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೌಡಿ ಆದಿ ರಕ್ತದ ಮಡುವಿನಲ್ಲಿ ಆಸ್ಪತ್ರೆ ಆವರಣದ ಹೆರಿಗೆ ವಾರ್ಡ್‌ಗೆ ಓಡಿಹೋದನೆಂದು ಹೇಳಲಾಗಿದೆ. ಆದರೆ, ಆ ಸ್ಥಳದಲ್ಲೇ ದುರಂತವಾಗಿ ಸಾವನ್ನಪ್ಪಿದ್ದಾನೆ. ಸರ್ಕಾರಿ ಆಸ್ಪತ್ರೆಯಂತಹ ಸುರಕ್ಷಿತ ಸ್ಥಳದಲ್ಲಿ ರಾತ್ರಿ ವೇಳೆ ನಡೆದ ಈ ಭೀಕರ ಕೊಲೆ ಆಸ್ಪತ್ರೆ ಸಿಬ್ಬಂದಿ, ರೋಗಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಭಯ ಹುಟ್ಟಿಸಿದೆ.

ಈ ಬಗ್ಗೆ ಮಾಹಿತಿ ಪಡೆದ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆ ಆಡಳಿತ ಮಂಡಳಿಯು ತಕ್ಷಣ ಪೊಲೀಸರಿಗೆ ದೂರು ನೀಡಿತು. ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಘಟನಾ ಸ್ಥಳದಲ್ಲಿ ಕಂಡುಬಂದ ರಕ್ತದ ಕಲೆಗಳು, ಶಸ್ತ್ರಾಸ್ತ್ರದ ಕುರುಹುಗಳು ಮತ್ತು ಹತ್ತಿರದ ಕಣ್ಗಾವಲು ಕ್ಯಾಮೆರಾ ದೃಶ್ಯಗಳನ್ನು ತೀವ್ರವಾಗಿ ಪರಿಶೀಲಿಸಲಾಗುತ್ತಿದೆ. ಆದರೆ, ಕೊಲೆಗಾರರು ಹೆಲ್ಮೆಟ್ ಧರಿಸಿದ್ದರಿಂದ ಮುಖದ ಸುಳಿವು ಸಿಕ್ಕಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಸತತ 3 ಎಸೆತಗಳಲ್ಲಿ 3 ವಿಕೆಟ್‌ ಉರುಳಿಸಿದ ಆರ್​ಸಿಬಿ; ಆದರೂ ಹ್ಯಾಟ್ರಿಕ್ ಸಿಗಲಿಲ್ಲ

Source link

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ – Kannada News | Kalaburagi Police ISO 9001: Enhanced Public Service and Efficiency

ಪೊಲೀಸ್ ಕಮಿಷನರ್​​ಗೆ ಪ್ರಶಸ್ತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ಜನವರಿ 12: ಜನಸ್ನೇಹಿ ವ್ಯವಸ್ಥೆ, ತ್ವರಿತ ನಾಗರಿಕ ಸೇವೆ, ವೃತ್ತಿಪರತೆ ಹಾಗೂ ಆಡಳಿತದಲ್ಲಿ ಗುಣಮಟ್ಟ ಸೇರಿದಂತೆ ಹಲವಾರು ವಿಭಾಗಗಳಲ್ಲಿ ಕಲಬುರಗಿ (Kalaburagi) ನಗರ ಪೊಲೀಸ್ ಕಮಿಷನರೇಟ್ ಅಮೂಲಾಗ್ರ ಸುಧಾರಣೆ ಹೊಂದಿದೆ. ಎಲ್ಲಾ ಮಾನದಂಡಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ISO 9001: 2015 ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಕಾರಣರಾಗಿರುವ ಪ್ರತಿಯೊಬ್ಬ ಸಿಬ್ಬಂದಿಗಳಿಗೆ ಅಭಿನಂದನೆಗಳು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸರು ಮತ್ತಷ್ಟು ಜನಸ್ನೇಹಿಯಾಗಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ಅವರಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ ಮಾತನಾಡಿದ ಅವರು, ಪೊಲೀಸ್ ಆಯುಕ್ತಾಲಯಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸಿಕ್ಕಿದೆ. ಆದರೆ ಜನರಿಂದ ಹೊಗಳಿಕೆಯ ಪ್ರಶಸ್ತಿ ಪಡೆಯುವಲ್ಲಿ ಪೊಲೀಸರು ಮತ್ತಷ್ಟು ಜನಸ್ನೇಹಿ ಆದಾಗ ಮಾತ್ರ ಪೊಲೀಸರಿಗೆ ಜನರ ಸರ್ಟಿಫಿಕೇಟ್ ಸಿಗಲಿದೆ. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಶ್ರಮಿಸಬೇಕು ಎಂದು ಪೊಲೀಸರಿಗೆ ಸಲಹೆ ನೀಡಿದರು.

ಇದನ್ನೂ ಓದಿ: ಜೈಲಿನಲ್ಲಿರುವ ಮಗನಿಗೆ ಖಾಸಗಿ ಭಾಗದಲ್ಲಿ ಮೊಬೈಲ್​ ಕೊಂಡೊಯ್ದು ಸಿಕ್ಕಿಬಿದ್ದ ತಾಯಿ

ಜಿಲ್ಲೆಯಲ್ಲಿ ಕ್ರೈಂನಲ್ಲಿ ಸಾಕಷ್ಟು ಇಳಿಮುಖವಾಗಿದೆ. ಎಸ್ಸಿ-ಎಸ್.ಟಿ ಸಂಬಂಧಿಸಿದ ಕೇಸ್, ಸಾಮಾನ್ಯ ಅಪರಾಧ ಪ್ರಕರಣಗಳು ಗಣನೀಯವಾಗಿ ಕಮ್ಮಿಯಾಗಿವೆ. ಚೈನ್ ಕಳ್ಳತನಗಳು ಕೂಡಾ ಕಡಿಮೆಯಾಗಿವೆ ಎಂದ ಸಚಿವರು ಡ್ರಗ್ಸ್​​ಗೆ ಸಂಬಂಧಿಸಿದಂತೆ ಕೇಸ್​ಗಳು ಏರಿಕೆ ಆಗಿವೆ. ಡ್ರಗ್ಸ್ ಹಾಗೂ ಮಾದಕ ಪದಾರ್ಥಗಳ ಮಾರಾಟ ಚಟುವಟಿಕೆಯ ಮೇಲೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರಿಂದ ಡ್ರಗ್ಸ್​ಗೆ ಸಂಬಂಧಿಸಿದ ಕೇಸ್​ಗಳು ಹೆಚ್ಚಳವಾಗಿವೆ. ಡ್ರಗ್ಸ್ ವಿರುದ್ದದ‌ ಮತ್ತಷ್ಟು ಕಠಿಣ ಕ್ರಮವಹಿಸಬೇಕಾಗಿದೆ ಎಂದರು.

ಸಕಾಲ, ಅಟಲ್‌ ಜನಸ್ನೇಹಿ ಕೇಂದ್ರದಿಂದ ಸಾರ್ವಜನಿಕ ಸೇವೆ ವಿಲೇವಾರಿಯಲ್ಲಿ ರಾಜ್ಯಕ್ಕೆ ಕಲಬುರಗಿ ಮೊದಲ ಸ್ಥಾನ, ಜಿಲ್ಲಾ ಪಂಚಾಯತನಲ್ಲಿ ತೆರಿಗೆ ವಸೂಲಾತಿಯಲ್ಲಿ ಕಲಬುರಗಿ ಜಿಲ್ಲೆ 13ನೇ ಸ್ಥಾನ ಪಡೆದಿದೆ. ಈಗ ಪೊಲೀಸ್ ಕಮಿಷನರೇಟ್ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪಡೆದಿರುವುದು ಅತ್ಯಂತ ಖಷಿಯ ವಿಚಾರವಾಗಿದೆ ಎಂದು ಹೇಳಿದ್ದಾರೆ.

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಿಷ್ಟು 

ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಲಶ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಕಲಬುರಗಿ ಪೊಲೀಸ್ ಕಮಿಷನರೇಟ್ ತನ್ನ ಅಮೂಲಾಗ್ರ ಬದಲಾವಣೆ, ಸಾರ್ವಜನಿಕರ ಸೇವೆ ವಿಸ್ತರಣೆ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ. ಇದಕ್ಕೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಗಣನೀಯ ಸುಧಾರಣೆ: ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಮಾತನಾಡಿ, ಸಾರ್ವಜನಿಕರ ಸೇವೆಗಳಲ್ಲಿ ಹಾಗೂ ಇತರೆ ವಿಭಾಗಗಳಲ್ಲಿ ಸುಧಾರಣೆ ತಂದ ಹಿನ್ನೆಲೆಯಲ್ಲಿ ಐ.ಎಸ್.ಓ-9001 2021 ಪ್ರಶಸ್ತಿಯನ್ನು ಕಲಬುರಗಿ ಪೊಲೀಸ್ ಕಮೀಷನರ್ ಕಚೇರಿಗೆ ನೀಡಲಾಗಿದೆ. ಸಾರ್ವಜನಿಕರ ಫೈಲ್​ಗಳು‌ ತ್ವರಿತವಾಗಿ ವಿಲೇವಾರಿಯಾಗುತ್ತಿವೆ. ಸಿಬ್ಬಂದಿಗಳ ರಜೆ,‌ ವೈದ್ಯಕೀಯ ಸೇವೆ, ವಿವಿಧ ವಿಭಾಗಗಳಲ್ಲಿ ಗಣನೀಯ ಬದಲಾವಣೆಯಾಗಿವೆ. ಕಮಿಷನರೇಟ್ ಅಡಿಯಲ್ಲಿನ ಪೊಲೀಸ್ ಠಾಣೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲಾಗಿದೆ. ಮಾಹಿತಿ ಹಾಗೂ ತಂತ್ರಜ್ಞಾನ ವಿಭಾಗದಲ್ಲಿ ಗಣನೀಯ ಸುಧಾರಣೆ ಕಂಡಿದೆ. ಸಾರ್ವಜನಿಕ ಸೇವೆ ಮುಖ್ಯವಾಗಿ ಪಾಸ್ ಪೋರ್ಟ್ ವೆರಿಫಿಕೇಶನ್​ನಲ್ಲಿ ಸುಧಾರಣೆ ತರಲಾಗಿದೆ. ಒಂದು ವಾರದ ಒಳಗಾಗಿ ವಿಲೇವಾರಿ ಮಾಡಲು‌ ಕ್ರಮವಹಿಸಲಾಗಿದೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿದ್ರೆ ಎಲ್ಲ ಗೊತ್ತಾಗತ್ತೆ: ವಿನಯ್ ಗೌಡ – Kannada News | Bigg Boss Kannada Ex contestant Vinay Gowda talks about Toxic Teaser controversy

‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ (Toxic Teaser) ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಟೀಸರ್ ಅಮೇಜಿಂಗ್ ಆಗಿದೆ. ಹಾಲಿವುಡ್ ಮಟ್ಟಕ್ಕೆ ನಮ್ಮ ಕನ್ನಡ ಸಿನಿಮಾ ಆಗುತ್ತಿದೆ. ಅದರ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅದನ್ನು ಗೇಲಿ ಮಾಡಬಾರದು. ಈಗ ಮಾತನಾಡೋರೆಲ್ಲ ಏನೂ ಮಾಡೇ ಇಲ್ಲವಾ? ಆ ರೀತಿಯದ್ದು ಏನೂ ನೋಡೇ ಇಲ್ಲವಾ? ಹೋಗಿ ಅವರ ಮೊಬೈಲ್​​ನಲ್ಲಿ ಗೂಗಲ್ ಸರ್ಚ್ ಹಿಸ್ಟರಿ ತೆಗೆದು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಟಾಕ್ಸಿಕ್ ಚಿತ್ರತಂಡಕ್ಕೆ ನಾವು ಸಪೋರ್ಟ್ ಮಾಡಬೇಕು. ನಮ್ಮ ಕನ್ನಡ ಚಿತ್ರರಂಗವನ್ನು ಅವರು ಹಾಲಿವುಡ್ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ನಮ್ಮವರೇ ಅದನ್ನು ಹಾಳು ಮಾಡಬಾರದು’ ಎಂದು ವಿನಯ್ ಗೌಡ (Vinay Gowda) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version