Headlines

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ…

Read More

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ. ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ…

Read More

ಇನ್ನೂ ಸಹ 100% ಫಿಟ್ ಆಗಿಲ್ಲ: ಗಾಯದ ಬಗ್ಗೆ ಮಾಹಿತಿ ಹಂಚಿಕೊಂಡ ಕೊಹ್ಲಿ – Kannada News | ‘I’m still not 100%’ Says Virat Kohli

ಕ್ರಿಕೆಟ್ ಮೈದಾನದಲ್ಲಿ ವಿರಾಟ್ ಕೊಹ್ಲಿ (Virat Kohli) ಎಂದರೆ ಕೇವಲ ಒಬ್ಬ ಆಟಗಾರನಲ್ಲ, ಅದೊಂದು ಅದಮ್ಯ ಉತ್ಸಾಹದ ಜ್ವಾಲೆ. ಆದರೆ, ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಂಡಿದ್ದಾರೆ. ಅಂದರೆ ಫೀಲ್ಡಿಂಗ್ ಮಾಡದೇ ಬ್ಯಾಟಿಂಗ್​ಗೆ ಮಾತ್ರ ಆಗಮಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ. ಈ ಫಿಟ್​ನೆಸ್ ಸಮಸ್ಯೆಯ ನಡುವೆಯೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಕೇವಲ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 49 ರನ್ ಬಾರಿಸಿದ್ದಾರೆ. ಈ…

Read More

‘ನಾ ನಿನ್ನ ಬಿಡಲಾರೆ’: ದುರ್ಗಾಗೆ ಗೊತ್ತಾಯ್ತು ಅಂಬಿಕಾ ತನ್ನ ಅಕ್ಕ ಅನ್ನೋ ಸತ್ಯ – Kannada News | Naa Ninna Bidalaare Twist: Durga and Ambika Are Sisters! Shocking Revelation

‘ನಾ ನಿನ್ನ ಬಿಡಲಾರೆ’ ಧಾರಾವಾಹಿ (Na Ninna Bidalre) ಪ್ರಮುಖ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ದುರ್ಗಾ ಹಾಗೂ ಅಂಬಿಕಾ ಮಧ್ಯೆ ಸಾಕಷ್ಟು ಬಾಂಧವ್ಯ ಬೆಳೆದಿತ್ತು. ಅಂಬಿಕಾ ಆತ್ಮವಾದರೂ ಅದು ಕಾಣಿಸುತ್ತಾ ಇದ್ದಿದ್ದು ದುರ್ಗಾಗೆ ಮಾತ್ರ ಆಗಿತ್ತು. ಹೀಗೇಕೆ ಎಂಬ ಪ್ರಶ್ನೆ ದುರ್ಗಾಗೆ ಅನೇಕ ಬಾರಿ ಕಾಡಿದ್ದೂ ಇದೆ ಎಂದರೂ ತಪ್ಪಾಗಲಾರದು. ಈಗ ಈ ಪ್ರಶ್ನೆಗೆ ಉತ್ತರ ಏನೋ ಸಿಕ್ಕಿದೆ. ಆದರೆ, ಅದು ತುಂಬಾ ತಡವಾಯಿತೇ ಎಂಬ ಪ್ರಶ್ನೆ ಮೂಡಿದೆ. ಮಾಳವಿಕಾ ಮಾಡುತ್ತಿದ್ದ ಮಾಟದ ತಂತ್ರಕ್ಕೆ ಅಂಬಿಕಾ ಬಲಿಪಶುವಾಗಿದ್ದು…

Read More

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ – Kannada News | TCS Nashik Closure: ATS,NIA Probe into Organized Physical Harassment and Conversion Plot

ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)  ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ. ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ…

Read More

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ? ಇಲ್ಲಿದೆ ಮಾಹಿತಿ – Kannada News | Lok Sabha Delimitation 2026: Karnataka’s Seats May Rise to 42 as India Plans Up to 850 MP Constituencies

ಬೆಂಗಳೂರು, ಏಪ್ರಿಲ್ 16: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ರೂಪಿಸಿದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 816 ಅಥವಾ 850ಕ್ಕೆ ಏರಿಸುವ ಸಾಧ್ಯತೆ ಇದೆ. ಇದು ಹಲವು ದಶಕಗಳ ನಂತರ ದೇಶದ ಲೋಕಸಭಾ ಸ್ಥಾನಗಳಲ್ಲಿ ನಡೆಯುತ್ತಿರುವ ಅತಿ ದೊಡ್ಡ ಹೆಚ್ಚಳವಾಗಿದೆ. ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರಬಹುದು. ಒಂದು ವೇಳೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಾದರೆ, ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಸ್ಥಾನಗಳು 2011ರ ಜನಗಣತಿ ಆಧಾರದಲ್ಲಿ 41ಕ್ಕೆ…

Read More

ಭಾರತದ ನಂ.1 ಬಿಜಿಯೆಸ್ಟ್ ರೈಲು ‘ಪರಶುರಾಮ್ ಎಕ್ಸ್‌ಪ್ರೆಸ್’; ಮಂಗಳೂರು ಮಾರ್ಗದಲ್ಲೇ ಅತಿ ಹೆಚ್ಚು ದಟ್ಟಣೆ – Kannada News | Southern India’s Rail Demand Soars: Vande Bharat and Coastal Routes Lead Nation’s Busiest Trains

ತಿರುವನಂತಪುರಂ, ಏ.16: ಕಾಯ್ದಿರಿಸಿದ ಸೀಟುಗಳ ಬುಕ್ಕಿಂಗ್ ಅಂಕಿಅಂಶಗಳ ಪ್ರಕಾರ, ಮಂಗಳೂರು ಮತ್ತು ಕೇರಳದ ನಡುವೆ ಸಂಚರಿಸುವ ರೈಲುಗಳು ದೇಶದಲ್ಲೇ ಅತಿ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿವೆ. ಅದರಲ್ಲೂ ವಿಶೇಷವಾಗಿ ಪರಶುರಾಮ್ ಎಕ್ಸ್‌ಪ್ರೆಸ್ ದಾಖಲೆಯ ಮಟ್ಟದ ಆಕ್ಯುಪೆನ್ಸಿಯನ್ನು (Occupancy) ದಾಖಲಿಸಿದೆ.ಪರಶುರಾಮ್ ಎಕ್ಸ್‌ಪ್ರೆಸ್ ಕನ್ಯಾಕುಮಾರಿಯಿಂದ ಮಂಗಳೂರಿಗೆ ಸಂಚರಿಸುವಾಗ 267.67% ಆಕ್ಯುಪೆನ್ಸಿಯನ್ನು ಹೊಂದಿದೆ. ಅಂದರೆ, ಕಾಯ್ದಿರಿಸಿದ ಪ್ರತಿಯೊಂದು ಸೀಟಿಗೆ ಸರಾಸರಿ ಸುಮಾರು ನಾಲ್ವರು ಪ್ರಯಾಣಿಕರು ಲಭ್ಯವಿರುತ್ತಾರೆ (ಒಬ್ಬರು ಇಳಿದ ನಂತರ ಮತ್ತೊಬ್ಬರು ಅದೇ ಸೀಟನ್ನು ಬುಕ್ ಮಾಡುವ ಪ್ರಕ್ರಿಯೆ ಸೇರಿ). ಭಾರತದ ಟಾಪ್…

Read More

ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿಯ ಸ್ಫೋಟಕ ಹೇಳಿಕೆ – Kannada News | TCS Nashik Boss: Send Wife for Child, IT Employee Alleges Religious Conversion, Harassment

ನಾಸಿಕ್, ಏಪ್ರಿಲ್ 16: ನಾಸಿಕ್‌ನ ಟಿಸಿಎಸ್ (TCS) ಶಾಖೆಯಲ್ಲಿ ಬಯಲಾಗಿರುವ ಈ ಘಟನೆಗಳು ಕಾರ್ಪೊರೇಟ್ ಜಗತ್ತನ್ನೇ ಬೆಚ್ಚಿಬೀಳಿಸಿವೆ. ಕೇವಲ ಕೆಲಸದ ಒತ್ತಡದ ಬಗ್ಗೆ ಕೇಳುತ್ತಿದ್ದ ಐಟಿ ಕ್ಷೇತ್ರದಲ್ಲಿ, ಈಗ ಮತಾಂತರದ ಸಂಚು ಮತ್ತು ನೈತಿಕ ಅಧಃಪತನದ ಆಘಾತಕಾರಿ ಕಥೆಗಳು ಹೊರಬರುತ್ತಿವೆ. ಒಂದೆಡೆ ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬರುತ್ತಿದ್ದರೆ, ಮತ್ತೊಂದೆಡೆ ಟಿಸಿಎಸ್‌ನ ನಾಸಿಕ್ ಶಾಖೆಯ ಪುರುಷ ಉದ್ಯೋಗಿಯೊಬ್ಬರು ತಮಗಾದ ಅಮಾನವೀಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಇದು ಕೇವಲ ಕಚೇರಿಯ ಕಿರುಕುಳವಾಗಿರದೆ, ಒಬ್ಬ ವ್ಯಕ್ತಿಯ ಧರ್ಮ,…

Read More

RCB ನಮಗೆ ಅವಮಾನ ಮಾಡಿದ್ದಾರೆ! ದೂರು ದಾಖಲಿಸಿದ CSK – Kannada News | IPL 2026: CSK complaint on RCB Match

IPL 2026: ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಅಂದರೆ ಅದು ಬರೀ ಪಂದ್ಯವಲ್ಲ, ಅದೊಂದು ಎಮೋಷನ್. ಈ ಬಾರಿಯ ‘ಸೌತ್ ಡರ್ಬಿ’ ಪಂದ್ಯವು ಬ್ಯಾಟ್-ಬಾಲ್ ಕಾಳಗವನ್ನು ಮೀರಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯ ವಿರುದ್ಧ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ (BCCI) ಅಧಿಕೃತ ದೂರು ನೀಡಿದೆ. ವಿವಾದದ ಮೂಲವೇನು? ಏಪ್ರಿಲ್ 5…

Read More

RCB ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ನಿಕೋಲಸ್ ಪೂರನ್ – Kannada News | Nicholas pooran post match interview after RCB vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ. 147 ರನ್​ಗಳ ಸುಲಭ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ ತಂಡ 5 ವಿಕೆಟ್​ಗಳ ಭರ್ಜರಿ…

Read More