Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ – Kannada News | Gold Price Today on 16th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,557 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,260 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,668 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,557 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,260 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 270 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,260 ರೂ
  • ಚೆನ್ನೈ: 14,360 ರೂ
  • ಮುಂಬೈ: 14,260 ರೂ
  • ದೆಹಲಿ: 14,275 ರೂ
  • ಕೋಲ್ಕತಾ: 14,260 ರೂ
  • ಕೇರಳ: 14,260 ರೂ
  • ಅಹ್ಮದಾಬಾದ್: 14,265 ರೂ
  • ಜೈಪುರ್: 14,275 ರೂ
  • ಲಕ್ನೋ: 14,275 ರೂ
  • ಭುವನೇಶ್ವರ್: 14,260 ರೂ

ಇದನ್ನೂ ಓದಿ: ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (13,909 ರುಪಾಯಿ)
  • ದುಬೈ: 535.25 ಡಿರಾಮ್ (13,590 ರುಪಾಯಿ)
  • ಅಮೆರಿಕ: 150 ಡಾಲರ್ (13,993 ರುಪಾಯಿ)
  • ಸಿಂಗಾಪುರ: 190.50 ಸಿಂಗಾಪುರ್ ಡಾಲರ್ (13,999 ರುಪಾಯಿ)
  • ಕತಾರ್: 534 ಕತಾರಿ ರಿಯಾಲ್ (13,664 ರೂ)
  • ಸೌದಿ ಅರೇಬಿಯಾ: 545 ಸೌದಿ ರಿಯಾಲ್ (13,550 ರುಪಾಯಿ)
  • ಓಮನ್: 57 ಒಮಾನಿ ರಿಯಾಲ್ (13,810 ರುಪಾಯಿ)
  • ಕುವೇತ್: 44.08 ಕುವೇತಿ ದಿನಾರ್ (13,422 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 270 ರೂ
  • ಚೆನ್ನೈ: 275 ರೂ
  • ಮುಂಬೈ: 270 ರೂ
  • ದೆಹಲಿ: 270 ರೂ
  • ಕೋಲ್ಕತಾ: 270 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 270 ರೂ
  • ಜೈಪುರ್: 270 ರೂ
  • ಲಕ್ನೋ: 270 ರೂ
  • ಭುವನೇಶ್ವರ್: 275 ರೂ
  • ಪುಣೆ: 270

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮಧ್ಯಪ್ರದೇಶ: ಅರಣ್ಯ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | MP Horror: College Student Assaulted in Isolated Forest Area, Friend Attacked

ಕ್ರೈಂ-ಸಾಂದರ್ಭಿಕ ಚಿತ್ರ Image Credit source: Taylor & Ring

ಇಂದೋರ್, ಏಪ್ರಿಲ್ 16: ಮಧ್ಯಪ್ರದೇಶದ ಡಾ. ಅಂಬೇಡ್ಕರ್ ನಗರದ (ಮೋವ್) ಸಮೀಪವಿರುವ ಬೆರ್ಚಾ ಅರಣ್ಯ ಪ್ರದೇಶವು ಒಂದು ಘೋರ ಅಪರಾಧಕ್ಕೆ ಸಾಕ್ಷಿಯಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಗೆಳೆಯನೊಂದಿಗೆ ಮಾತನಾಡುತ್ತಾ ಕುಳಿತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮೃಗೀಯವಾಗಿ ದಾಳಿ ನಡೆಸಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, ಕಾಲೇಜು ವಿದ್ಯಾರ್ಥಿನಿ ಮತ್ತು ಆಕೆಯ ಗೆಳೆಯ ಮಂಗಳವಾರ ಸಂಜೆ ಪ್ರಸಿದ್ಧ ಲಗ್ನಶಾ ಭೈರವ ಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದರ್ಶನದ ನಂತರ ಇಬ್ಬರೂ ಸಮೀಪದ ‘ಜೈ ಜವಾನ್ ಜೈ ಕಿಸಾನ್’ ಕೊಳದ ಬಳಿ ತೆರಳಿದ್ದರು. ಸಂಜೆ ಅಸ್ಪಷ್ಟ ಬೆಳಕಿರುವಾಗಲೇ ಪೊದೆಯ ಹಿಂದೆ ಹೊಂಚು ಹಾಕಿ ಕುಳಿತಿದ್ದ ಇಬ್ಬರು ಕಾಮುಕರು ಏಕಾಏಕಿ ಆಕಯ ಮೇಲೆರಗಿದ್ದಾರೆ.

ಗೆಳೆಯನಿಗೆ ಬರ್ಬರ ಥಳಿತ, ಯುವತಿಯ ಅಪಹರಣ
ದುಷ್ಕರ್ಮಿಗಳು ಮೊದಲು ವಿದ್ಯಾರ್ಥಿನಿಯ ಗೆಳೆಯನನ್ನು ಗುರಿಯಾಗಿಸಿಕೊಂಡರು. ಕೈಯಲ್ಲಿದ್ದ ಕೋಲುಗಳಿಂದ ಆತನ ತಲೆ ಮತ್ತು ಮೈಮೇಲೆ ಮನಬಂದಂತೆ ಹೊಡೆದು ಗಾಯಗೊಳಿಸಿದರು. ಆತ ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿದಾಗ, ಕಿಡಿಗೇಡಿಗಳು ಯುವತಿಯನ್ನು ಬಲವಂತವಾಗಿ ದಟ್ಟ ಕಾಡಿನೊಳಗೆ ಎಳೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಯ ಕಿರುಚಾಟಕ್ಕೂ ಕಿವಿಗೊಡದೆ ಇಬ್ಬರೂ ಅತ್ಯಾಚಾರ ಎಸಗಿದ್ದಾರೆ.

ಮತ್ತಷ್ಟು ಓದಿ: ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ

ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ಹೇಗೆ?
ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾದ ನಂತರ, ತೀವ್ರವಾಗಿ ಗಾಯಗೊಂಡಿದ್ದ ಯುವಕ ಹೇಗೋ ಧೈರ್ಯ ತಂದುಕೊಂಡು ರಸ್ತೆಗೆ ಬಂದು ತುರ್ತು ಸಹಾಯವಾಣಿಗೆ ಕರೆ ಮಾಡಿದ್ದಾನೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಕಾಡಿನೊಳಗೆ ನರಳುತ್ತಿದ್ದ ಯುವತಿಯನ್ನು ರಕ್ಷಿಸಿ ವೈದ್ಯಕೀಯ ಪರೀಕ್ಷೆಗೆ ರವಾನಿಸಿದೆ.

ತನಿಖೆ ಮತ್ತು ಪೊಲೀಸರ ಕಾರ್ಯಾಚರಣೆ
ಪ್ರಸ್ತುತ ಪೊಲೀಸರು ಈ ಸಂಬಂಧ ಸಾಮೂಹಿಕ ಅತ್ಯಾಚಾರ ಮತ್ತು ಅಪಹರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳದಿಂದ ಕೆಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ಅರಣ್ಯದ ಸುತ್ತಮುತ್ತಲಿನ ಹಳ್ಳಿಗಳಲ್ಲಿ  ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳು ಸ್ಥಳೀಯರೇ ಇರಬಹುದೆಂಬ ಶಂಕೆಯಿದ್ದು, ಶೋಧ ಕಾರ್ಯ ತೀವ್ರಗೊಂಡಿದೆ. ದೇವಸ್ಥಾನದ ಇಂತಹ ಘೋರ ಕೃತ್ಯ ನಡೆದಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಕಾಡಿನ ದಾರಿಗಳಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಈಗ ದೊಡ್ಡ ಮಟ್ಟದ ಪ್ರಶ್ನೆಗಳು ಎದ್ದಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 10:52 am, Thu, 16 April 26

Source link

ನಂಬಿಕೆ ದ್ರೋಹ ಮಾಡಿದರು: ಬಾಲಿವುಡ್ ಸಿನಿಮಾ ವಿರುದ್ಧ ಮೃಣಾಲ್ ಠಾಕೂರ್ ಬೇಸರ – Kannada News | Mrunal Thakur express unhappy over her Hindi movie Son Of Sardar 2

ಪ್ಯಾನ್ ಇಂಡಿಯಾ ನಟಿ ಮೃಣಾಲ್ ಠಾಕೂರ್ (Mrunal Thakur), ಹಿಂದಿ ಮತ್ತು ದಕ್ಷಿಣದ ಸಿನಿಮಾಗಳಲ್ಲಿಯೂ ನಟಿಸುತ್ತಾ ಬರುತ್ತಿದ್ದಾರೆ. ಅದರಲ್ಲೂ ಅವರಿಗೆ ಹೆಚ್ಚು ಹಿಟ್ ನೀಡಿರುವುದು ಮತ್ತು ಒಳ್ಳೆಯ, ನೆನಪುಳಿಯುವ ಪಾತ್ರಗಳನ್ನು ನೀಡಿರುವುದು ತೆಲುಗು ಚಿತ್ರರಂಗ. ಮೂಲತಃ ಮರಾಠಿ ನಟಿಯಾದರೂ ಹಾಗೂ ನಟನೆಗೆ ಪ್ರವೇಶವನ್ನು ಹಿಂದಿ ಚಿತ್ರರಂಗದಿಂದ ಮಾಡಿದ್ದರೂ ಸಹ ಬಾಲಿವುಡ್ ಮೇಲೆ ಅವರಿಗೆ ಬೇಸರ ಇದೆ. ಇದೀಗ ಅವರು ಬಾಲಿವುಡ್​ನ ಸಿನಿಮಾ ತಂಡವೊಂದು ತಮಗೆ ದೊಡ್ಡ ನಂಬಿಕೆ ದ್ರೋಹ ಮಾಡಿದೆ ಎಂದು ನಟಿ ಮೃಣಾಲ್ ಠಾಕೂರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಜಯ್ ದೇವಗನ್ ನಟನೆಯ ‘ಸನ್ ಆಫ್ ಸರ್ದಾರ್ 2’ ಸಿನಿಮಾನಲ್ಲಿ ತಮಗಾದ ಕಹಿ ಅನುಭವದ ಬಗ್ಗೆ ಮೃಣಾಲ್ ಠಾಕೂರ್ ಮಾತನಾಡಿದ್ದಾರೆ.

‘ಸನ್ ಆಫ್ ಸರ್ದಾರ್ 2’ ಸಿನಿಮಾನಲ್ಲಿ ಮೃಣಾಲ್ ಠಾಕೂರ್ ಅವರು ರಾಬಿಯಾ ಅಖ್ತರ್ ಎಂಬ ಪಾತ್ರವನ್ನು ನಿರ್ವಹಿಸಿದ್ದಾರೆ. ಚಿತ್ರದಲ್ಲಿ ಅವರ ಪತಿಯ ಪಾತ್ರದಲ್ಲಿ ಹಿರಿಯ ನಟ ಚಂಕಿ ಪಾಂಡೆ ಡ್ಯಾನಿಶ್ ಪಾತ್ರದಲ್ಲಿ ನಟಿಸಿದ್ದಾರೆ. ಮೃಣಾಲ್ ಪ್ರಕಾರ, ಚಿತ್ರಕ್ಕೆ ಸಹಿ ಮಾಡುವಾಗ ಅಥವಾ ಚಿತ್ರೀಕರಣದ ಆರಂಭದಲ್ಲಿ ತಮ್ಮ ಪತಿಯ ಪಾತ್ರದಲ್ಲಿ ಇಷ್ಟು ಹಿರಿಯ ನಟ ನಟಿಸುತ್ತಾರೆ ಎಂಬುದು ಅವರಿಗೆ ತಿಳಿದಿರಲಿಲ್ಲವಂತೆ. ಅವರಿಗೆ ಈ ಬಗ್ಗೆ ಹೇಳಿರಲಿಲ್ಲವಂತೆ. ಇತ್ತೀಚೆಗೆ ಸಂದರ್ಶನದಲ್ಲಿ ಮಾತನಾಡುತ್ತಾ ಅವರು, ‘ಒಬ್ಬ ಹಿರಿಯ ನಟ ನನ್ನ ಪತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬುದು ನನಗೆ ಮೊದಲೇ ತಿಳಿದಿರಲಿಲ್ಲ. ಈ ಒಂದು ನಿರ್ಧಾರ ನನ್ನ ಪಾತ್ರದ ಗತಿಯನ್ನೇ ಬದಲಿಸಿತು. ಇದು ನಾನು ನಿರೀಕ್ಷಿಸಿದ್ದಲ್ಲ, ಇದರಿಂದಾಗಿ ಚಿತ್ರತಂಡದ ಮೇಲಿದ್ದ ನನ್ನ ನಂಬಿಕೆ ಅಲುಗಾಡಿತು’ ಎಂದು ಹೇಳಿದ್ದಾರೆ. ಆದರೂ, ಇದು ನನಗೆ ಒಂದು ರೀತಿಯ ಪಾಠವಾಗಿತ್ತು, ಈ ಬಗ್ಗೆ ತನಗೆ ಯಾವುದೇ ವಿಷಾದವಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ:ತೆಲುಗು ಕುಟುಂಬದ ಸೊಸೆ ಆಗುತ್ತಾರಾ ಮೃಣಾಲ್ ಠಾಕೂರ್?

ಕೇವಲ ಪಾತ್ರವರ್ಗದ ಆಯ್ಕೆ ಮಾತ್ರವಲ್ಲದೆ, ಚಿತ್ರದ ಎಡಿಟಿಂಗ್ ಹಂತದಲ್ಲಿ ತಮ್ಮ ಕೆಲವು ಪ್ರಮುಖ ಭಾವನಾತ್ಮಕ ದೃಶ್ಯಗಳನ್ನು ಕತ್ತರಿಸಿರುವುದಕ್ಕೆ ಮೃಣಾಲ್ ಬೇಸರ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ರೋಶ್ನಿ ವಾಲಿಯಾ (ಚಿತ್ರದಲ್ಲಿ ಅವರ ಮಗಳ ಪಾತ್ರ) ಜೊತೆಗಿನ ತಾಯಿ-ಮಗಳ ಬಾಂಧವ್ಯದ ಸುಂದರ ದೃಶ್ಯಗಳು ಸಿನಿಮಾದಿಂದ ತೆಗೆಯಲಾಗಿದೆ. ‘ತಾನು ಜನ್ಮ ನೀಡದಿದ್ದರೂ ಮಗುವನ್ನು ಹೇಗೆ ಪ್ರೀತಿಸುತ್ತೇನೆ ಎಂಬ ಭಾವನಾತ್ಮಕ ಅಂಶ ಚಿತ್ರದಲ್ಲಿ ಮಿಸ್ ಆಗಿದೆ’ ಎಂದು ಅವರು ತಿಳಿಸಿದ್ದಾರೆ.

‘ಸನ್ ಆಫ್ ಸರ್ದಾರ್ 2’ ಸಿನಿಮಾನಲ್ಲಿ ಅಜಯ್ ದೇವಗನ್, ನೀರು ಬಾಜ್ವಾ, ರವಿ ಕಿಶನ್ ಮತ್ತು ಸಂಜಯ್ ಮಿಶ್ರಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಂಜಯ್ ದತ್ ಅವರಿಗೆ ವೀಸಾ ಸಮಸ್ಯೆ ಎದುರಾದ ಕಾರಣ ಅವರ ಬದಲಿಗೆ ರವಿ ಕಿಶನ್ ಈ ಚಿತ್ರಕ್ಕೆ ಬಂದಿದ್ದರು. ಕಳೆದ ವರ್ಷ ಆಗಸ್ಟ್ 1 ರಂದು ಬಿಡುಗಡೆಯಾದ ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆಯಿತು. ಸುಮಾರು 32 ಕೋಟಿ ರೂಪಾಯಿಗಳ ಸಾಧಾರಣ ಗಳಿಕೆಯನ್ನು ಮಾಡಿತು. ಇತ್ತೀಚೆಗಷ್ಟೆ ತೆಲುಗು ನಟ ಅಡಿವಿ ಶೇಷ್ ಜೊತೆ ‘ಡಕಾಯ್ತ್’ ಸಿನಿಮಾನಲ್ಲಿ ಮೃಣಾಲ್ ಠಾಕೂರ್ ನಟಿಸಿದ್ದಾರೆ. ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರೊಂದಿಗೆ ವರುಣ್ ಧವನ್ ಅಭಿನಯದ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಮತ್ತು ‘ಪೂಜಾ ಮೇರಿ ಜಾನ್’ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ
ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ ಮೊಮ್ಮಗಳ ಕೈ ಮತ್ತು ಕಾಲುಗಳನ್ನು ಬಟ್ಟೆಯಿಂದ ಮನೆಯ ಗೇಟ್‌ಗೆ ಕಟ್ಟಿಹಾಕಿದ್ದರು. ಸುಡುವ ಬಿಸಿಲಿನಲ್ಲಿ ಮಗು ಅಳುತ್ತಾ ಮಲಗಿದ್ದರೂ ಕರುಣೆ ತೋರದ ಅಜ್ಜಿ, ಹಾಗೆಯೇ ಬಿಟ್ಟು ಹೋಗಿದ್ದಾರೆ.

ಮಗುವಿನ ಎದೆ ಸೀಳುವಂತಹ ಅಳುವಿನ ಧ್ವನಿ ಕೇಳಿ ಅಕ್ಕಪಕ್ಕದ ಮನೆಯವರು ಓಡಿ ಬಂದಿದ್ದಾರೆ. ಅಲ್ಲಿ ಕಂಡ ದೃಶ್ಯ ಅವರನ್ನು ಕಂಗಾಲು ಮಾಡಿದೆ. ಮಗು ಬಿಸಿಲಿನಲ್ಲಿ ನರಳುತ್ತಿರುವುದನ್ನು ಕಂಡ ಸಾರ್ವಜನಿಕರು ತಕ್ಷಣ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾರೆ ಮತ್ತು ಮಗುವಿನ ಕಟ್ಟುಗಳನ್ನು ಬಿಚ್ಚಿ ರಕ್ಷಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪಂಜಾಬ್ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ಮತ್ತಷ್ಟು ಓದಿ: Video: ಮಹಾರಾಷ್ಟ್ರ ಪೊಲೀಸ್ ಪಡೆಗೆ ಸೇರ್ಪಡೆಯಾದ ಖುಷಿ, ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು

ಪೋಷಕರು ವಿದೇಶದಲ್ಲಿದ್ದಾರೆ
ಬಾಲಕಿಯ ತಂದೆ-ತಾಯಿ ಕೆಲಸದ ನಿಮಿತ್ತ ಪೋರ್ಚುಗಲ್‌ನಲ್ಲಿ ವಾಸಿಸುತ್ತಿದ್ದಾರೆ. ಮಗುವನ್ನು ಉತ್ತಮವಾಗಿ ನೋಡಿಕೊಳ್ಳುತ್ತಾರೆಂಬ ಭರವಸೆಯ ಮೇಲೆ ಅಜ್ಜಿಯ ಬಳಿ ಬಿಟ್ಟು ಹೋಗಿದ್ದರು. ಆದರೆ ಅಜ್ಜಿಯೇ ಮಗುವಿನ ಮೇಲೆ ಈ ರೀತಿ ದರ್ಪ ತೋರಿರುವುದು ಪೋಷಕರಿಗೂ ಆಘಾತ ತಂದಿದೆ.

ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ
ಘಟನೆ ಬೆಳಕಿಗೆ ಬಂದ ತಕ್ಷಣ ಫರೀದ್‌ಕೋಟ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಪ್ರಜ್ಞಾ ಜೈನ್ ಅವರು ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಪೊಲೀಸ್ ಪಡೆಯಲ್ಲಿ ಶಿಸ್ತು ಮತ್ತು ಮಾನವೀಯತೆ ಮುಖ್ಯ. ಅಧಿಕಾರಿಯೊಬ್ಬರು ಮಗುವಿನ ಮೇಲೆ ಇಂತಹ ಕ್ರೌರ್ಯ ತೋರುವುದು ಸ್ವೀಕಾರಾರ್ಹವಲ್ಲ ಎಂದು ಡಿಎಸ್ಪಿ ತರ್ಲೋಚನ್ ಸಿಂಗ್ ತಿಳಿಸಿದ್ದಾರೆ.

ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ಒಪ್ಪಿಸಲಾಗಿದೆ ಮತ್ತು ಸಂರಕ್ಷಣೆ ನೀಡಲಾಗುತ್ತಿದೆ. ಪ್ರಕರಣದ ತನಿಖೆ ಮುಂದುವರೆದಿದ್ದು, ಆ ಅಜ್ಜಿಯ ವಿಕೃತ ವರ್ತನೆಯ ಹಿಂದೆ ಬೇರೆ ಏನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Pooja Rituals: ಹೋಮ-ಹವನ ಮಾಡುವಾಗ ಎದ್ದು ಹೊರಗೆ ಹೋಗಬಾರದು ಯಾಕೆ ಗೊತ್ತಾ? – Kannada News | The Sacred Discipline: Why Interrupting Homa and Pooja Rituals is Inauspicious

ಸಂಕಲ್ಪಪೂರ್ವಕವಾಗಿ ಮಾಡುವ ಪೂಜೆ, ವ್ರತ, ಯಜ್ಞ ಯಾಗಾದಿ, ಹೋಮಗಳ ಸಂದರ್ಭದಲ್ಲಿ, ಎಷ್ಟೇ ಕ್ಲಿಷ್ಟ ಅಥವಾ ಕಠಿಣ ಸಮಸ್ಯೆ ಎದುರಾದರೂ ಪೂಜಾ ಸ್ಥಳವನ್ನು ಬಿಟ್ಟು ಹೊರಗೆ ಬರಬಾರದು ಎಂಬುದು ನಿಯಮ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ.

ಗುರೂಜಿಯವರು ಹೇಳುವಂತೆ, ಅನೇಕ ಜನರು ಹೋಮ, ಯಜ್ಞಾದಿಗಳ ಸಮಯದಲ್ಲಿ ಫೋನ್ ಕರೆಗಳು, ವಿಐಪಿಗಳ ಆಗಮನ ಅಥವಾ ಇತರೆ ಕಾರಣಗಳಿಗಾಗಿ ಎದ್ದು ಹೋಗಿ ಮಾತನಾಡುತ್ತಾರೆ. ಇಂತಹ ಸಮಯದಲ್ಲಿ ಆ ಪೂಜೆಯು ಪರಿಪೂರ್ಣವಾಗುವುದಿಲ್ಲ.  ಅಷ್ಟೇ ಅಲ್ಲ, ಮನೆಯಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಹೋಮ, ಸುದರ್ಶನ ಹೋಮ, ನವಗ್ರಹ ಹೋಮ, ಆಯುಷ್ ಹೋಮಗಳಂತಹ ಯಾವುದೇ ಹೋಮ ಮಾಡುತ್ತಿರುವಾಗ, ಪುರೋಹಿತರು ಒಂದೆರಡು ನಿಮಿಷಗಳ ವಿರಾಮ ನೀಡಿದರೂ ಸಹ, ಹೋಮ ಮಾಡುವವರು ಹೊಸಲನ್ನು ದಾಟಿ ಹೊರಗೆ ಹೋಗಬಾರದು. ಇದರಿಂದ ಪೂಜೆಯ ಪಾವಿತ್ರತೆ ಮತ್ತು ಸಂಕಲ್ಪಕ್ಕೆ ಭಂಗ ಬರುತ್ತದೆ.

ಇದಕ್ಕೆ ಉದಾಹರಣೆಯಾಗಿ ರಾಮಾಯಣದಲ್ಲಿ ಬರುವ ಸೀತಾದೇವಿಯ ಪ್ರಸಂಗವನ್ನು ಸ್ಮರಿಸಬಹುದು. ವಾಲ್ಮೀಕಿ ಆಶ್ರಮದಲ್ಲಿ ಸೀತಾದೇವಿ ವ್ರತ ಮಾಡುತ್ತಿದ್ದಾಗ, ಮಧ್ಯದಲ್ಲಿ ಎದ್ದು ಸ್ವಲ್ಪ ಆಚೆ ಹೋದ ಕಾರಣದಿಂದ ಅನೇಕ ಸಂಕಟಗಳನ್ನು ಎದುರಿಸಬೇಕಾಯಿತು ಎಂದು ಹೇಳಲಾಗುತ್ತದೆ. ಹಾಗಾಗಿ, ಯಾವುದೇ ಪೂಜೆ, ವ್ರತ ಮಾಡುವಾಗ ಶ್ರದ್ಧೆ, ಭಕ್ತಿ, ನಂಬಿಕೆ, ಸಂಕಲ್ಪ, ವ್ರತದ ವಿಧಾನ ಮತ್ತು ಶಿಸ್ತು ಅತ್ಯಗತ್ಯ. ಇವುಗಳನ್ನು ಪಾಲಿಸಿದಾಗ ಮಾತ್ರ ವ್ರತವು ಪರಿಪೂರ್ಣವಾಗುತ್ತದೆ.

ಇದನ್ನೂ ಓದಿ: ದೇವರಿಗೆ ದೀಪ ಹಚ್ಚುವಾಗ ಈ ವಿಷ್ಯ ತಿಳಿದಿರಲಿ; ಇದು ನಿಮ್ಮ ಅದೃಷ್ಟವನ್ನೇ ಬದಲಿಸಲಿದೆ

ಗೃಹ ಪ್ರವೇಶದಂತಹ ದೊಡ್ಡ ಸಮಾರಂಭಗಳಲ್ಲಿ ಅಥವಾ ಶ್ರೀಮಂತರು, ರಾಜಕೀಯ ವ್ಯಕ್ತಿಗಳು ಮಾಡುವ ಪೂಜೆಗಳಲ್ಲಿಯೂ ಸಹ ಕೆಲವರು ಮಧ್ಯದಲ್ಲಿ ಎದ್ದು ಓಡಾಡುತ್ತಾರೆ. ಇದರಿಂದ ಸಂಪೂರ್ಣ ಪೂಜೆಯು ವ್ಯರ್ಥವಾಗುತ್ತದೆ ಮತ್ತು ಅದರ ಫಲ ಲಭಿಸುವುದಿಲ್ಲ. ಒಂದು ವೇಳೆ ಪೂಜೆ ಮಾಡುವವರಿಗೆ ಅನಿವಾರ್ಯ ಕಾರಣಗಳಿಂದ ಎದ್ದು ಹೋಗಬೇಕಾದರೆ, ಆರಂಭದಿಂದಲೂ ಪೂಜೆಯಲ್ಲಿ ಪಾಲ್ಗೊಂಡಿದ್ದ ಬೇರೊಬ್ಬರನ್ನು ಪೂರ್ಣಗೊಳಿಸಲು ಬಿಡಬೇಕು. ಮಧ್ಯದಲ್ಲಿ ಇನ್ನೊಬ್ಬರನ್ನು ಕೂರಿಸಲು ಸಾಧ್ಯವಿಲ್ಲ.

ಇವೆಲ್ಲವೂ ಆಚಾರದ ಭಾಗಗಳು. “ಆಚಾರವೇ ಸ್ವರ್ಗ, ಅನಾಚಾರವೇ ನರಕ” ಎಂಬ ಮಾತಿನಂತೆ, ಪ್ರತಿಯೊಂದು ನಂಬಿಕೆಯ ಆಧಾರದ ಮೇಲೆ ಈ ಆಚಾರಗಳನ್ನು ಪಾಲಿಸಬೇಕು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ (9972848937)

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:35 am, Thu, 16 April 26

Source link

ಜಯದೇವ್​​ಗೆ ಶಾಕ್ ಕೊಟ್ಟ ಗೌತಮ್; ಲೋಗೋ ವಿವಾದಕ್ಕೆ ತೆರೆ – Kannada News | Amruthadhare: Gautham Shocks Jayadev, Wins Logo Dispute and Exposes Villain

‘ಅಮೃತಧಾರೆ’ ಧಾರಾವಾಹಿಯಲ್ಲಿ ಸಾಕಷ್ಟು ತಿರುವುಗಳು ಬರುತ್ತಿವೆ. ಇದರಲ್ಲಿ ಜಯದೇವ್ ವಿಷಯ ಕೂಡ ಒಂದು. ಆತ, ಸದಾ ಒಂದಿಲ್ಲೊಂದು ವಿಷಯಕ್ಕೆ ಗೌತಮ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಿದ್ದ. ಈ ವಿಷಯದಲ್ಲಿ ಈಗಾಗಲೇ ಸಾಕಷ್ಟು ಪ್ರಯತ್ನ ನಡೆದಿದೆ. ಆದರೆ, ಅದು ಸಾಧ್ಯವೇ ಆಗುತ್ತಾ ಇರಲಿಲ್ಲ. ಈಗ ಗೌತಮ್ ಅವರು ಜಯದೇವ್​ಗೆ ಶಾಕ್ ಕೊಟ್ಟಿದ್ದಾನೆ. ಲೋಗೋ ವಿಷಯದ ಪ್ರಕರಣದಲ್ಲಿ ಎಲ್ಲವೂ ಗೌತಮ್ ಪರ ಆಗಿದೆ.

ಆಸ್ತಿ ವಿಷಯಕ್ಕೆ ಗೌತಮ್ ಸಾಕಷ್ಟು ಕಷ್ಟಪಟ್ಟಿದ್ದ. ಆದರೆ, ಇದನ್ನು ಕಬಳಿಸಿಕೊಂಡ ಜಯದೇವ್​. ಆ ಬಳಿಕ ಅವನ ಆಸೆ ಈಡೇರಲೇ ಇಲ್ಲ. ಆತ ಬೇರೆಯದೇ ಪ್ಲ್ಯಾನ್ ಮಾಡಿದ. ಗೌತಮ್​​​ಗೆ ತೊಂದರೆಕೊಡಬೇಕು ಎಂದು ಪ್ರಯತ್ನಿಸಿದ. ಈಗ ಗೌತಮ್ ಬಿಸ್ನೆಸ್ ಆರಂಭಿಸಿದ್ದಾನೆ ಮತ್ತು ಈ ಬಿಸ್ನೆಸ್​​ಗೆ ದೀವಾನ್ ಕಂಪನಿಯ ಲೋಗೋ ಬಳಕೆ ಮಾಡಿದ್ದಾನೆ.

ಇದು ಚರ್ಚೆಯ ವಿಷಯ ಆಯಿತು. ಜಯದೇವ್ ಲೋಗೋ ತನ್ನದು ಎಂದು ಬೀಗುತ್ತಿದ್ದ. ಹೀಗಿರುವಾಗಲೇ ದೀವಾನ್ ಕಂಪನಿಯ ಲೋಗೋ ಗೌತಮ್ ಹೆಸರಿಗೆ ನೋಂದಣಿ ಆಗಿರುವ ಪತ್ರ ಸಿಕ್ಕಿತು. ಈ ಪತ್ರವನ್ನು ಜಯದೇವ್ ತಮ್ಮ ಪಾರ್ಥ ಗೌತಮ್​​ಗೆ ನೀಡಿದ್ದಾನೆ. ಈ ಮೂಲಕ ಲೋಗೋ ಗೌತಮ್​​ ಹೆಸರಲ್ಲಿ ಇದೆ ಎಂದು ಸಾಬೀತಾಗಿದೆ. ಇದರಿಂದ ಜಯದೇವ್​​ಗೆ ದೊಡ್ಡ ಮುಖಭಂಗ ಆಗಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ಅಮೃತಧಾರೆ’: ದೊಡ್ಡ ಸಾಧನೆ ಮಾಡಿದ ಮಲ್ಲಿ; ಜಯದೇವ್ ಬಾಳಲ್ಲಿ ಕತ್ತಲು

ಜಯದೇವ್ ಸದಾ ಕೆಟ್ಟದನ್ನು ಮಾಡಲು ಪ್ರಯತ್ನಿಸುತ್ತಲೇ ಇರುವವನು ಎಂಬುದು ಗೊತ್ತೇ ಇದೆ. ಈಗಲೂ ಆತ ಹಾಗೆಯೇ ಮಾಡುವ ಎಲ್ಲಾ ಸಾಧ್ಯತೆ ಇದೆ. ಆದರೆ, ಹೀರೋ ಎಂದಮೇಲೆ ಗೆಲುವು ಆತನ ಕಡೆಗೆ ಒಲಿಯಲೇ ಬೇಕಲ್ಲವೇ? ಹೀಗಾಗಿ. ಪ್ರತಿ ಹಂತದಲ್ಲೂ ಗೌತಮ್​​ಗೆ ಗೆಲುವು ಸಿಗುತ್ತಾ ಹೋಗುತ್ತಿದೆ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇನ್ನೂ ಸಹ 100% ಫಿಟ್ ಆಗಿಲ್ಲ: ಗಾಯದ ಬಗ್ಗೆ ಮಾಹಿತಿ ಹಂಚಿಕೊಂಡ ಕೊಹ್ಲಿ – Kannada News | ‘I’m still not 100%’ Says Virat Kohli

ಕ್ರಿಕೆಟ್ ಮೈದಾನದಲ್ಲಿ ವಿರಾಟ್ ಕೊಹ್ಲಿ (Virat Kohli) ಎಂದರೆ ಕೇವಲ ಒಬ್ಬ ಆಟಗಾರನಲ್ಲ, ಅದೊಂದು ಅದಮ್ಯ ಉತ್ಸಾಹದ ಜ್ವಾಲೆ. ಆದರೆ, ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಾಣಿಸಿಕೊಂಡಿದ್ದಾರೆ. ಅಂದರೆ ಫೀಲ್ಡಿಂಗ್ ಮಾಡದೇ ಬ್ಯಾಟಿಂಗ್​ಗೆ ಮಾತ್ರ ಆಗಮಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಫಿಟ್​ನೆಸ್ ಸಮಸ್ಯೆ.

ಈ ಫಿಟ್​ನೆಸ್ ಸಮಸ್ಯೆಯ ನಡುವೆಯೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರಿಸಿದ್ದಾರೆ. ಕೇವಲ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 49 ರನ್ ಬಾರಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್ ಬಳಿಕ ಮಾತನಾಡಿದ ಕೊಹ್ಲಿ ದೈಹಿಕವಾಗಿ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿರುವ ಆತಂಕಕಾರಿ ವಿಷಯವನ್ನು ಸ್ವತಃ ಕೊಹ್ಲಿ ಅವರೇ ಬಹಿರಂಗಪಡಿಸಿದ್ದಾರೆ.

“ನಾನು ಇನ್ನೂ 100% ಫಿಟ್ ಆಗಿಲ್ಲ”

ಪಂದ್ಯ ಮುಗಿದ ಬಳಿಕ ತಮ್ಮ ಫಿಟ್​ನೆಸ್ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, “ನಾನಿನ್ನೂ ನೂರಕ್ಕೆ ನೂರರಷ್ಟು ಫಿಟ್ ಆಗಿಲ್ಲ. ಕಳೆದ ಪಂದ್ಯದಲ್ಲಿ ಮೊಣಕಾಲು ನೋವು ಕಾಣಿಸಿಕೊಂಡಿತ್ತು. ಅಷ್ಟೇ ಅಲ್ಲದೆ, ಕಳೆದ 4-5 ದಿನಗಳಿಂದ ಆರೋಗ್ಯದ ಏರುಪೇರಿನಿಂದಾಗಿ ವೈದ್ಯಕೀಯ ತಪಾಸಣೆಯಲ್ಲಿದ್ದೆ. ಆದರೂ, ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿರುವುದು ನನಗೆ ತೃಪ್ತಿ ನೀಡಿದೆ,” ಎಂದು ಹೇಳಿದ್ದಾರೆ.

ಬದಲಾದ ಪಿಚ್​!

ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಸಾಮಾನ್ಯವಾಗಿ ಬ್ಯಾಟಿಂಗ್‌ಗೆ ಪೂರಕವಾಗಿರುತ್ತದೆ. ಆದರೆ ಇಂದಿನ ಪಿಚ್ ಬಗ್ಗೆ ಮಾತನಾಡಿದ ಕೊಹ್ಲಿ, “ಕಳೆದ ಕೆಲವು ದಿನಗಳಿಂದ ವಿಪರೀತ ಬಿಸಿಲು ಇರುವುದರಿಂದ ಪಿಚ್ ಒಣಗಿದಂತಾಗಿತ್ತು. ಚೆಂಡು ನಿಧಾನವಾಗಿ ಬರುತ್ತಿತ್ತು. ಹಾಗಾಗಿ, ಆರಂಭದ 5-6 ಓವರ್‌ಗಳಲ್ಲೇ ಹೆಚ್ಚಿನ ರನ್ ಗಳಿಸಿ ಎದುರಾಳಿ ತಂಡದ ಮೇಲೆ ಒತ್ತಡ ಹೇರುವುದು ನಮ್ಮ ಯೋಜನೆಯಾಗಿತ್ತು. ಸಾಲ್ಟ್ ಜೊತೆಗೂಡಿ ಪವರ್‌ಪ್ಲೇನಲ್ಲಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದು ಪಂದ್ಯದ ಮೇಲೆ ಹಿಡಿತ ಸಾಧಿಸಲು ನೆರವಾಯಿತು,” ಎಂದಿದ್ದಾರೆ.

ಪಾಟಿದಾರ್​ಗೆ ಬಹುಪರಾಕ್

ಆರ್​​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅವರ ಬ್ಯಾಟಿಂಗ್​ ಅನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ, “ರಜತ್ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಆಡುವ ರೀತಿ ಅದ್ಭುತವಾಗಿದೆ. ನಮ್ಮ ತಂಡದ ಮ್ಯಾನೇಜ್‌ಮೆಂಟ್, ಬ್ಯಾಟಿಂಗ್ ಕ್ರಮಾಂಕವನ್ನು ರೂಪಿಸಿರುವ ರೀತಿ ನಮಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿದೆ. ನನ್ನ ನಂತರ ರಜತ್, ರೊಮಾರಿಯೋ ಮತ್ತು ಟಿಮ್ ಡೇವಿಡ್ ಅವರಂತಹ ಸ್ಫೋಟಕ ಆಟಗಾರರು ಇರುವುದು ನಮಗೆ ಭಯವಿಲ್ಲದೆ ಆಡಲು ಧೈರ್ಯ ನೀಡುತ್ತದೆ. ಐದು ವಿಕೆಟ್ ಬಿದ್ದರೂ ಈ ಆಟಗಾರರು ಕೇವಲ ನಾಲ್ಕು ಓವರ್‌ಗಳಲ್ಲಿ 50 ರನ್ ಸಿಡಿಸಬಲ್ಲರು. ಹೀಗಾಗಿ ನಾವು ಯಾವುದೇ ಒತ್ತಡದಿಂದ ಆಡಬೇಕಾದ ಪರಿಸ್ಥಿತಿ ತಂಡದಲ್ಲಿಲ್ಲ ಎಂದಿದ್ದಾರೆ.

ಮುಂದಿನ ಸವಾಲು

ಬದಲಾಗುತ್ತಿರುವ ಕ್ರಿಕೆಟ್ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, “ಪ್ರತಿ ಪಂದ್ಯವೂ 230-240 ರನ್ ಗಳಿಸುವ ಪಂದ್ಯವಾಗಿರುವುದಿಲ್ಲ. ಪಂದ್ಯಾವಳಿಯ ದ್ವಿತೀಯಾರ್ಧದಲ್ಲಿ ಒತ್ತಡ ಹೆಚ್ಚಾದಾಗ ಕೇವಲ ವೇಗದ ಆಟವಷ್ಟೇ ಅಲ್ಲದೆ, ಚಾಕಚಕ್ಯತೆಯೂ ಮುಖ್ಯವಾಗುತ್ತದೆ.

ಪರಿಸ್ಥಿತಿಗೆ ತಕ್ಕಂತೆ ಯಾರು ಹೊಂದಿಕೊಂಡು ಆಡುತ್ತಾರೋ ಅವರು ಸುದೀರ್ಘ ಕಾಲ ಪಂದ್ಯಾವಳಿಯಲ್ಲಿ ಉಳಿಯುತ್ತಾರೆ. ನಾನು ಕೂಡ ಆಧುನಿಕ ಕ್ರಿಕೆಟ್‌ನ ಬೇಡಿಕೆಗೆ ತಕ್ಕಂತೆ ನನ್ನ ಆಟವನ್ನು ಬದಲಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಇದನ್ನೂ ಓದಿ: ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

ತಂಡಕ್ಕೆ ಸ್ಫೂರ್ತಿಯಾದ ಕೊಹ್ಲಿ

ಮೊಣಕಾಲು ನೋವು ಮತ್ತು ಜ್ವರದಂತಹ ಸಮಸ್ಯೆಯಿದ್ದರೂ ತಂಡಕ್ಕಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಅವರ ಬದ್ಧತೆಗೆ ಕ್ರಿಕೆಟ್ ಅಭಿಮಾನಿಗಳು ಫಿದಾ ಆಗಿದ್ದಾರೆ. ತಾನು ಕೇವಲ “10 ಪ್ರತಿಶತದಷ್ಟು ರಿದಮ್‌ನಲ್ಲಿದ್ದೇನೆ” ಎಂದು ಅವರು ಹೇಳಿದ್ದರೂ, ಆ 10 ಪ್ರತಿಶತವೇ ಎದುರಾಳಿ ಬೌಲರ್‌ಗಳಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿದ್ದಂತು ಸುಳ್ಳಲ್ಲ.

Source link

‘ನಾ ನಿನ್ನ ಬಿಡಲಾರೆ’: ದುರ್ಗಾಗೆ ಗೊತ್ತಾಯ್ತು ಅಂಬಿಕಾ ತನ್ನ ಅಕ್ಕ ಅನ್ನೋ ಸತ್ಯ – Kannada News | Naa Ninna Bidalaare Twist: Durga and Ambika Are Sisters! Shocking Revelation

‘ನಾ ನಿನ್ನ ಬಿಡಲಾರೆ’ ಧಾರಾವಾಹಿ (Na Ninna Bidalre) ಪ್ರಮುಖ ಟ್ವಿಸ್ಟ್​​ಗಳನ್ನು ಪಡೆದು ಸಾಗುತ್ತಿದೆ. ದುರ್ಗಾ ಹಾಗೂ ಅಂಬಿಕಾ ಮಧ್ಯೆ ಸಾಕಷ್ಟು ಬಾಂಧವ್ಯ ಬೆಳೆದಿತ್ತು. ಅಂಬಿಕಾ ಆತ್ಮವಾದರೂ ಅದು ಕಾಣಿಸುತ್ತಾ ಇದ್ದಿದ್ದು ದುರ್ಗಾಗೆ ಮಾತ್ರ ಆಗಿತ್ತು. ಹೀಗೇಕೆ ಎಂಬ ಪ್ರಶ್ನೆ ದುರ್ಗಾಗೆ ಅನೇಕ ಬಾರಿ ಕಾಡಿದ್ದೂ ಇದೆ ಎಂದರೂ ತಪ್ಪಾಗಲಾರದು. ಈಗ ಈ ಪ್ರಶ್ನೆಗೆ ಉತ್ತರ ಏನೋ ಸಿಕ್ಕಿದೆ. ಆದರೆ, ಅದು ತುಂಬಾ ತಡವಾಯಿತೇ ಎಂಬ ಪ್ರಶ್ನೆ ಮೂಡಿದೆ.

ಮಾಳವಿಕಾ ಮಾಡುತ್ತಿದ್ದ ಮಾಟದ ತಂತ್ರಕ್ಕೆ ಅಂಬಿಕಾ ಬಲಿಪಶುವಾಗಿದ್ದು ಗೊತ್ತೇ ಇದೆ. ಅಂಬಿಕಾಗೆ ತನ್ನ ಮನಸ್ಸು ಹಿಡಿತಕ್ಕೆ ಸಿಗದೆ ಕೆಟ್ಟದನ್ನು ಮಾಡುತ್ತಿದ್ದಳು. ಇದರಿಂದ ದುರ್ಗಾ ತುಂಬಾನೇ ಭಯಗೊಂಡಳು. ಆ ಬಳಿಕ ದುರ್ಗಾ ಒಂದು ಗಟ್ಟಿ ನಿರ್ಧಾರ ತೆಗೆದುಕೊಂಡಳು. ಹೇಗಾದರೂ ಮಾಡಿ ಅಂಬಿಕಾ ಆತ್ಮಕ್ಕೆ ಶಾಂತಿಕೊಡಬೇಕು ಎಂದು ಮನೆಯವರು ನಿರ್ಧರಿಸಿದಾಗ ಇದಕ್ಕೆ ಒಪ್ಪಿಗೆ ಕೊಟ್ಟಳು.

ಅಂಬಿಕಾ ಸತ್ತ ದಿನದಿಂದಲೂ ಆಕೆಗೆ ಶ್ರಾದ್ಧ ಆಗಿರಲಿಲ್ಲ. ಹೀಗಾಗಿ, ಅವಳ ಆತ್ಮ ಎಲ್ಲ ಕಡೆಗಳಲ್ಲಿ ಸುತ್ತಾಡುತ್ತಾ ಇತ್ತು. ಕೊನೆಗೂ ಅವಳ ಶ್ರಾದ್ಧ ಮಾಡಲಾಗಿದೆ. ಈ ಮೂಲಕ ಅಂಬಿಕಾ ಆತ್ಮವನ್ನು ಮಾಳವಿಕಾ ಬಂಧಿಸಿಟ್ಟುಕೊಂಡಿದ್ದಾಳೆ. ಈ ವಿಷಯ ಮಾಳವಿಕಾಗೆ ಮಾತ್ರ ಗೊತ್ತು. ಈ ಮಧ್ಯೆ ಅಂಬಿಕಾ ಶ್ರಾದ್ಧ ಮುಗಿದ ಬಳಿಕ ದುರ್ಗಾಗೆ ನಿಜ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಕೊನೆ ಆಗುತ್ತಿದೆ ಮಾಯಾ ಪಾತ್ರ?

ಅಂಬಿಕಾ ಹಾಗೂ ದುರ್ಗ ಅಕ್ಕ ತಂಗಿ. ಈ ವಿಷಯ ತಡವಾಗಿ ಅವಳಿಗೆ ಗೊತ್ತಾಗಿದೆ. ಇದನ್ನು ಕೇಳಿ ದುರ್ಗಾ ಶಾಕ್​​ಗೆ ಒಳಗಾಗಿದ್ದಾಳೆ. ಇದಕ್ಕೂ ಕಾರಣ ಇದೆ. ಅಕ್ಕನ ಹುಡುಕಬೇಕು ಎಂಬ ಏಕೈಕ ಕಾರಣಕ್ಕೆ ದುರ್ಗಾ ಬೆಂಗಳೂರಿಗೆ ಬಂದಿದ್ದಳು. ಬೆಂಗಳೂರಿಗೆ ಬಂದರೂ ಅಕ್ಕ ಸಿಗಲಿಲ್ಲ. ಇದಕ್ಕೆ ಆಕೆ ದೇವರಿಗೆ ಶಾಪ ಹಾಕುತ್ತಿದ್ದಳು. ಈಗ ನೋಡಿದರೆ ಎಲ್ಲವೂ ಬದಲಾಗಿದೆ. ಗೆಜ್ಜೆ ಮೂಲಕ ಈ ವಿಷಯ ಗೊತ್ತಾಗಿದೆ.ಅಂಬಿಕಾ ಅನ್ನೋದು ಪ್ರಮುಖ ಪಾತ್ರ. ಆ ಪಾತ್ರವೇ ಯಾವ ಕಾರಣಕ್ಕೂ ಕೊನೆಯಾಗಲ್ಲ ಎಂಬುದು ಅನೇಕರ ನಂಬಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಐಟಿ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ, ಮತಾಂತರಕ್ಕೆ ಯತ್ನ, ನಾಸಿಕ್​ನ ಟಿಸಿಎಸ್ ಕಚೇರಿಗೆ ಬೀಗ – Kannada News | TCS Nashik Closure: ATS,NIA Probe into Organized Physical Harassment and Conversion Plot

ನಾಸಿಕ್, ಏಪ್ರಿಲ್ 16: ಭಾರತದ ಐಟಿ ದೈತ್ಯ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS)  ತನ್ನ ನಾಸಿಕ್ ಕಚೇರಿಯ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಕೇವಲ ಕೆಲಸದ ಕಿರುಕುಳ ಎಂದು ಆರಂಭವಾದ ದೂರುಗಳು ಈಗ ಅತ್ಯಾಚಾರ, ಮತಾಂತರದ ಸಂಚು ಮತ್ತು ಅಂತರರಾಷ್ಟ್ರೀಯ ಸಂಪರ್ಕಗಳಂತಹ ಭಯಾನಕ ಸ್ವರೂಪ ಪಡೆದುಕೊಂಡಿವೆ.

ನಾಸಿಕ್ ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರು ಈ ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ. “ಇದು ಕೇವಲ ವೈಯಕ್ತಿಕ ಘರ್ಷಣೆಯಲ್ಲ, ಬದಲಿಗೆ ಇದೊಂದು ಸಂಘಟಿತ ಜಾಲದಂತೆ ಕಂಡುಬರುತ್ತಿದೆ. ಹಿರಿಯ ಅಧಿಕಾರಿಗಳೇ ತಮ್ಮ ಕೈಕೆಳಗಿನ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿದ್ದಾರೆ,” ಎಂದು ಅವರು ತಿಳಿಸಿದ್ದಾರೆ ಎಂದು ನ್ಯೂಸ್​ 18 ವರದಿ ಮಾಡಿದೆ.

ತನಿಖೆಯ ತೀವ್ರತೆಯನ್ನು ಪರಿಗಣಿಸಿ, ಪ್ರಕರಣದ ವಿವರಗಳನ್ನು ಭಯೋತ್ಪಾದನಾ ನಿರೋಧಕ ದಳ (ATS) ಮತ್ತು ರಾಷ್ಟ್ರೀಯ ತನಿಖಾ ದಳ (NIA) ಗೆ ನೀಡಲಾಗಿದೆ. ಈ ಜಾಲಕ್ಕೆ ವಿದೇಶಿ ಹಣಕಾಸಿನ ನೆರವು ಅಥವಾ ಅಂತಾರಾಷ್ಟ್ರೀಯ ಸಂಪರ್ಕಗಳಿವೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಎಫ್‌ಐಆರ್ ದಾಖಲಾದ ಪ್ರಮುಖ ಆರೋಪಿಗಳು
ಪ್ರಸ್ತುತ ಎಂಟು ಉದ್ಯೋಗಿಗಳ ವಿರುದ್ಧ 9 ಎಫ್‌ಐಆರ್‌ಗಳು ದಾಖಲಾಗಿದ್ದು, ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದೆ.

ಮತ್ತಷ್ಟು ಓದಿ: ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿಯ ಸ್ಫೋಟಕ ಹೇಳಿಕೆ

ನಿದಾ ಖಾನ್: ಧಾರ್ಮಿಕ ಕಿರುಕುಳ ನೀಡಿದ ಆರೋಪ, ಅಶ್ವಿನಿ ಚಿನಾನಿ (ಮಾಜಿ ಎಚ್‌ಆರ್ ಹೆಡ್): ದೂರು ನೀಡಲು ಬಂದವರನ್ನು ಹೆದರಿಸಿ, ಆರೋಪಿಗಳಿಗೆ ಸಾಥ್ ನೀಡಿದ ಆರೋಪ. ಉಳಿದಂತೆ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ನೀಡಿದ ಹಿರಿಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗಿದೆ.

ರಾಷ್ಟ್ರೀಯ ಮಹಿಳಾ ಆಯೋಗದಿಂದ ತನಿಖಾ ಸಮಿತಿ ರಚನೆ
ಈ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ, ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಸತ್ಯಶೋಧನೆಗಾಗಿ ವಿಶೇಷ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಏಪ್ರಿಲ್ 18 ರಂದು ನಾಸಿಕ್‌ಗೆ ಭೇಟಿ ನೀಡಿ ಸಂತ್ರಸ್ತರಿಂದ ಮಾಹಿತಿ ಸಂಗ್ರಹಿಸಲಿದೆ.

ಬಲಿಪಶುಗಳಿಗೆ ಪೊಲೀಸರ ಕರೆ
ದೌರ್ಜನ್ಯಕ್ಕೊಳಗಾದ ಇನ್ನೂ ಹೆಚ್ಚಿನ ಮಹಿಳೆಯರು ಅಥವಾ ಪುರುಷ ಉದ್ಯೋಗಿಗಳು ಇದ್ದಲ್ಲಿ, ಅವರು ಯಾವುದೇ ಭಯವಿಲ್ಲದೆ ಮುಂದೆ ಬಂದು ದೂರು ನೀಡುವಂತೆ ಪೊಲೀಸ್ ಆಯುಕ್ತರು ವಿನಂತಿಸಿದ್ದಾರೆ. ಕೆಲಸದ ಸ್ಥಳದ ಸುರಕ್ಷತೆಯ ಬಗ್ಗೆ ಈಗ ದೊಡ್ಡ ಮಟ್ಟದ ಆತಂಕ ಮೂಡಿದ್ದು, ಕಾರ್ಪೊರೇಟ್ ವಲಯದಲ್ಲಿ ಇಂತಹ ‘ಸಂಘಟಿತ ಮತಾಂತರ’ದ ಯತ್ನಗಳು ನಡೆಯುತ್ತಿರುವುದು ಬೆಚ್ಚಿಬೀಳಿಸುವಂತಿದೆ.

ಟಿಸಿಎಸ್ ನಾಸಿಕ್ ಶಾಖೆಯು ಈಗ ಬಿಕೋ ಎನ್ನುತ್ತಿದೆ. ಒಂದು ಕಡೆ ಕಾನೂನು ಹೋರಾಟ ನಡೆಯುತ್ತಿದ್ದರೆ, ಮತ್ತೊಂದೆಡೆ ಐಟಿ ಕ್ಷೇತ್ರದ ಸುರಕ್ಷತೆಯ ಬಗ್ಗೆ ಜನರಲ್ಲಿ ಪ್ರಶ್ನೆಗಳು ಎದ್ದಿವೆ. ತನಿಖೆ ಮುಂದುವರೆದಂತೆ ಇನ್ನಷ್ಟು ಆಘಾತಕಾರಿ ಸತ್ಯಗಳು ಹೊರಬರುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಲೋಕಸಭಾ ಕ್ಷೇತ್ರ ಮರುವಿಂಗಡಣೆ ಮಾಡಿದ್ರೆ ಕರ್ನಾಟಕದಲ್ಲೆಷ್ಟಾಗುತ್ತೆ? ಇಲ್ಲಿದೆ ಮಾಹಿತಿ – Kannada News | Lok Sabha Delimitation 2026: Karnataka’s Seats May Rise to 42 as India Plans Up to 850 MP Constituencies

ಬೆಂಗಳೂರು, ಏಪ್ರಿಲ್ 16: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆಯನ್ನು ರೂಪಿಸಿದೆ. ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳನ್ನು 816 ಅಥವಾ 850ಕ್ಕೆ ಏರಿಸುವ ಸಾಧ್ಯತೆ ಇದೆ. ಇದು ಹಲವು ದಶಕಗಳ ನಂತರ ದೇಶದ ಲೋಕಸಭಾ ಸ್ಥಾನಗಳಲ್ಲಿ ನಡೆಯುತ್ತಿರುವ ಅತಿ ದೊಡ್ಡ ಹೆಚ್ಚಳವಾಗಿದೆ. ಮುಂದಿನ ಲೋಕಸಭಾ ಚುನಾವಣೆ ಹೊತ್ತಿಗೆ ಈ ಬದಲಾವಣೆಗಳು ಕಾರ್ಯರೂಪಕ್ಕೆ ಬರಬಹುದು. ಒಂದು ವೇಳೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಾದರೆ, ಕರ್ನಾಟಕದಲ್ಲಿ ಪ್ರಸ್ತುತ ಇರುವ 28 ಸ್ಥಾನಗಳು 2011ರ ಜನಗಣತಿ ಆಧಾರದಲ್ಲಿ 41ಕ್ಕೆ ಅಥವಾ ಶೇ 50 ಹೆಚ್ಚಳ ಸೂತ್ರದ ಪ್ರಕಾರ 42ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ. ಯಾವ್ಯಾವ ರಾಜ್ಯಗಳಲ್ಲಿ ಲೆಕ್ಕಾಚಾರ ಹೇಗೆ ಬದಲಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version