ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು? – Kannada News | What did the CM Siddaramaiah say to Minister zameer ahmed about the by election results

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್ ಗೇಟ್‌ನಲ್ಲಿ ಸಚಿವ ಜಮೀರ್​​ ನಿಲ್ಲಿಸಿಕೊಂಡ ಸಿಎಂ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಗೆಲುವಿನ ಭವಿಷ್ಯ ನುಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

MI vs PBKS: ಈ ಸೀಸನ್​ನ ಬೆಸ್ಟ್ ಕ್ಯಾಚ್ ಹಿಡಿದ ಶ್ರೇಯಸ್ ಅಯ್ಯರ್; ನೀವೇ ನೋಡಿ – Kannada News | Watch: Shreyas Iyer’s Gravity Defying Boundary Line Catch in IPL 2026 MI vs PBKS

ಐಪಿಎಲ್ 2026 ರ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಅಸಾಧಾರಣ ಕ್ಯಾಚ್ ತೆಗೆದುಕೊಳ್ಳುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಲಾಂಗ್ ಆನ್ ಕಡೆಗೆ ಬಿಗ್ ಶಾಟ್ ಆಡಿದರು. ಈ ವೇಳೆ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಶ್ರೇಯಸ್ ಅಯ್ಯರ್ ಗಾಳಿಯಲ್ಲಿ ಹಾರಿ ಮೊದಲು ಚೆಂಡನ್ನು ಹಿಡಿದರು. ಆ ನಂತರ, ತಾನು ಬೌಂಡರಿ ಲೈನ್‌ ಅನ್ನು ದಾಡುತ್ತಿರುವುದನ್ನು ಗಮನಿಸಿದ ಶ್ರೇಯಸ್ ಗಾಳಿಯಲ್ಲಿ ಇರುವಾಗಲೇ ಚೆಂಡನ್ನು ಮೇಲಕ್ಕೆ ಎಸೆದರು. ಈ ವೇಳೆ ಅಲ್ಲಿಯೇ ಇದ್ದ ಕ್ಸೇವಿಯರ್ ಬಾರ್ಟ್ಲೆಟ್ ಕ್ಯಾಚ್ ಪೂರ್ಣಗೊಳಿಸಿದರು. ಶ್ರೇಯಸ್ ಅಯ್ಯರ್ ಹಿಡಿದ ಈ ಅದ್ಭುತ ಕ್ಯಾಚ್​ ಅನ್ನು ಡಗೌಟ್​ನಲ್ಲಿ ಕುಳಿತಿದ್ದ ಮುಂಬೈ ತಂಡದ ಎಲ್ಲಾ ಆಟಗಾರರು ದಿಗ್ಭ್ರಮೆಗೊಂಡರು.

Source link

ಐತಿಹಾಸಿಕ ದಾಖಲೆ ಬರೆದ ಕೊಬ್ಬರಿ ಬೆಲೆ: ಆದ್ರೂ ರೈತರಿಗಿಲ್ಲ ಖುಷಿ, ಆಗಿದ್ದೇನು? – Kannada News | Coconut Price Hits Record 38,000 Per Quintal: But farmers are not happy

ತುಮಕೂರು, ಏಪ್ರಿಲ್​ 16: ಪಾಶ್ಚಿಮಾತ್ಯ ದೇಶಗಳ ಯುದ್ಧದ ನಡುವೆ ಸದ್ಯ ಎಲ್ಲವೂ ದುಬಾರಿ ಎಂಬಂತಾಗಿದೆ. ಎಲ್​ಪಿಜಿ ಗ್ಯಾಸ್ ಅಭಾವದ ಜೊತೆಗೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರ ನಡುವೆ ಈಗ ಕಲ್ಪತರು ನಾಡು ತುಮಕೂರಿನ ಕೊಬ್ಬರಿಗೂ (Coconut) ಬಂಗಾರದ ಬೆಲ ಬಂದಿದ್ದು, ಐತಿಹಾಸಿಕ ದಾಖಲೆ ಮೊತ್ತ ತಲುಪಿದೆ. ಹೀಗಿದ್ದರೂ ತೆಂಗು ರೈತನ ಮುಖದಲ್ಲಿ ಮಂದಹಾಸ ಮೂಡಿಲ್ಲ.

ಕೊಬ್ಬರಿಗೆ ಡಿಮ್ಯಾಂಡ್ 

ಪಾಶ್ಚಿಪಾತ್ಯ ದೇಶಗಳಾದ ಇರಾನ್ ಹಾಗೂ ಇಸ್ರೇಲ್ ಯುದ್ಧದ ಕಾರ್ಮೋಡದ ನಡುವೆ ಇತರೆ ರಾಷ್ಟ್ರಗಳಲ್ಲಿ ಸಮಸ್ಯೆ ಎದುರಾಗಿವೆ. ಅದೇ ರೀತಿ ಭಾರತ ಹಾಗೂ ನಮ್ಮ ರಾಜ್ಯ ಕರ್ನಾಟಕ ಸಹ ಈ ಸಮಸ್ಯೆಗಳಿಗೆ ಹೊರತಾಗಿಲ್ಲ. ವಿವಿಧ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಜನ ಪರದಾಡುವ ಪರಿಸ್ಥಿತಿ ಸೃಷ್ಟಿಯಾಗಿದೆ. ಈ ನಡುವೆ ಕಲ್ಪತರು ನಾಡು ಎಂದೇ ಖ್ಯಾತಿ ಪಡೆದ ತುಮಕೂರಿನಲ್ಲಿ ಕೊಬ್ಬರಿಗೆ ಎಲ್ಲಿಲ್ಲದ ಡಿಮ್ಯಾಂಡ್ ಹೆಚ್ಚಾಗಿದ್ದು, ಬೆಲೆ 38 ಸಾವಿರ ರೂ ತಲುಪಿದೆ.

ಕ್ವಿಂಟಾಲ್ 38 ಸಾವಿರಕ್ಕೆ ಕೊಬ್ಬರಿ ಹರಾಜು

ಅಸಲಿಗೆ ಕ್ವಿಂಟಾಲ್ ಕೊಬ್ಬರಿಗೆ 38 ಸಾವಿರ ರೂ ಮೊತ್ತ ತಲುಪಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಈ ಹಿಂದೆ ಹಾವು ಏಣಿಯಂತೆ ಏರಿಳಿತ ಕಾಣುತಿದ್ದ ಕೊಬ್ಬರಿ ಬೆಲೆ ಅಬ್ಬಾಬ ಎಂದರೇ 32 ಸಾವಿರ ರೂ ತಲುಲಿದರೇ ಹೆಚ್ಚು ಎನ್ನುತಿದ್ದರು. ಆದರೆ ತಿಪಟೂರಿನಲ್ಲಿ ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಕ್ವಿಂಟಾಲ್ 38 ಸಾವಿರಕ್ಕೆ ಕೊಬ್ಬರಿ ಹರಾಜಾಗಿದ್ದು, ಸರ್ವಕಾಲಿಕ ದಾಖಲೆ ಸರಿಗಟ್ಟಿದೆ.

ಭರ್ಜರಿ ಬೆಲೆ ಬಂದರೂ ರೈತರಿಗಿಲ್ಲ ಖುಷಿ

ಈ ಬೆಲೆ ಏರಿಕೆ ಮಾತ್ರ ಕೊಬ್ಬರಿ ಅವಲಂಬಿತ ತೆಂಗು ಬೆಳಗಾರರಲ್ಲಿ ಅಷ್ಟರ ಮಟ್ಟಿಗೆ ಸಂತಸ ಮೂಡಿಸಿಲ್ಲ. ಕಾರಣ ಇಳುವರಿ ಕಡಿಮೆ. ತೆಂಗು ಬೆಳೆಗಳಲ್ಲಿ ಕಾಣಿಸಿಕೊಳ್ಳುವ ನಾನಾ ರೀತಿಯ ರೋಗಗಳಿಗೆ ಪರಿಹಾರ ತಿಳಿಯದೇ ಬೆಳೆಗಾರರು ಕಂಗಾಲಾದರೆ, ಇತ್ತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆ ಆಲಿಸುತ್ತಿಲ್ಲ. ಹೀಗಾಗಿ ತೆಂಗು ಬೆಳೆಯ ಇಳುವರಿ ಕಡಿಮೆಯಾಗಿದ್ದು, ಬೆಲೆ ಹೆಚ್ಚಾದರೂ ಲಾಭವಿಲ್ಲ ಎನ್ನುತ್ತಾರೆ ರೈತರು. ಮತ್ತೊಂದೆಡೆ ವ್ಯಾಪಾರಿಗಳಿಗೂ ಸಹ ಬೆಲೆ ಏರಿಕೆ ಲಾಭ ಅಷ್ಟಕಷ್ಟೇ ಎನ್ನಲಾಗುತ್ತಿದೆ.

ಇದನ್ನೂ ಓದಿ: ಕೊಬ್ಬರಿಗೆ ಬಂಪರ್ ಬೆಲೆ: ರೈತರಿಗೆ ಸಿಗದ ಲಾಭ, ಭಾರೀ ನಿರೀಕ್ಷೆಯಲ್ಲಿದ್ದ ಅನ್ನದಾತ ನಿರಾಸೆ

ಒಟ್ಟಾರೆ, ಇತರೆ ವಸ್ತುಗಳ ಬೆಲೆ ಏರಿಕೆ ನಡುವೆ ಈಗ ಕಲ್ಪತರು ನಾಡು ತುಮಕೂರಿನಲ್ಲೂ ಸಹ ಕೊಬ್ಬರಿ ಬೆಲೆ ಗಗನಕ್ಕೇರಿದ್ದು, ಖರೀದಿ ಬಲು ದುಬಾರಿ ಎಂಬಂತಾಗಿದೆ. ಈ ಬೆಲೆಗೆ ನಷ್ಟ ಕಡಿಮೆಯಾಗುತ್ತದೇ ಹೊರತು ಲಾಭವಿಲ್ಲ ಎನ್ನುವುದು ರೈತರ ಮಾತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 10:14 pm, Thu, 16 April 26

Source link

ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ, ಎಷ್ಟು ವರ್ಷ? – Kannada News | karnataka government extends DG and IGP Dr MA saleem Working service Till 2027

ಬೆಂಗಳೂರು, (ಏಪ್ರಿಲ್ 16): ಕರ್ನಾಟಕ ರಾಜ್ಯ ಪೊಲೀಸ್ ಮುಖ್ಯಸ್ಥ(ಡಿಜಿ-ಐಜಿಪಿ) ಎಂ.ಎ.ಸಲೀಂ (DG and IGP Dr MA saleem) ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ರಾಜ್ಯ ಸರ್ಕಾರ ಇಂದು ಏಪ್ರಿಲ್ 16) ಆದೇಶ ಹೊರಡಿಸಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕರಾಗಿದ್ದು, ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಆದ್ರೆ, 22.09.2006ರ ಸುಪ್ರೀಂಕೋರ್ಟ್​ ತೀರ್ಪಿನ ಅನುಸಾರ ಎಂ.ಎ.ಸಲೀಂ ಅವರ ಸೇವಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ.

Source link

ಪ್ರಧಾನಿ ಮೋದಿಗೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಫೋನ್; ಮಧ್ಯ ಏಷ್ಯಾ, ಹಾರ್ಮುಜ್ ಜಲಸಂಧಿ ಬಗ್ಗೆ ಚರ್ಚೆ – Kannada News | PM Modi Spoke with French President Macron discusses West Asia crisis, Strait of Hormuz security

ನವದೆಹಲಿ, ಏಪ್ರಿಲ್ 16: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ದೂರವಾಣಿ ಕರೆ ಮಾಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರದ ಸ್ವಾತಂತ್ರ್ಯವನ್ನು ತುರ್ತಾಗಿ ಮರುಸ್ಥಾಪಿಸಲು ಕರೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮಧ್ಯ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿದ್ದಾಗಿ ತಿಳಿಸಿದ್ದಾರೆ.

“ನನ್ನ ಆತ್ಮೀಯ ಸ್ನೇಹಿತರಾದ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಂದ ಫೋನ್ ಕರೆ ಸ್ವೀಕರಿಸಿದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯನ್ನು ನಾವು ಚರ್ಚಿಸಿದ್ದೇವೆ. ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷತೆ ಮತ್ತು ಸಂಚಾರದ ಸ್ವಾತಂತ್ರ್ಯವನ್ನು ತುರ್ತಾಗಿ ಪುನಃಸ್ಥಾಪಿಸುವ ಅಗತ್ಯವನ್ನು ಒಪ್ಪಿಕೊಂಡಿದ್ದೇವೆ” ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗದು; ಪ್ರಧಾನಿ ಮೋದಿ ಭರವಸೆ

ಏಪ್ರಿಲ್ 14ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ಕರೆ ಇದಾಗಿತ್ತು. 40 ನಿಮಿಷಗಳಿಗೂ ಹೆಚ್ಚು ಕಾಲ ಇಬ್ಬರೂ ದೂರವಾಣಿಯಲ್ಲಿ ಮಾತನಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ; ಕ್ಯಾಮೆರಾ ನೋಡಿ ಪ್ರತಿಕ್ರಿಯಿಸಿದ್ದು ಹೇಗೆ ನೋಡಿ.. – Kannada News | Darshan wife Vijayalakshmi reaction after noticing media camera in Parappana Agrahara jail

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಅವರು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ಅವರನ್ನು ನೋಡಲು ಇಂದು (ಏಪ್ರಿಲ್ 16) ಪತ್ನಿ ವಿಜಯಲಕ್ಷ್ಮಿ ಅವರು ಆಗಮಿಸಿದ್ದರು. ಅವರ ಜೊತೆ ನಟ ಧನ್ವೀರ್ ಕೂಡ ಬಂದಿದ್ದಾರೆ. ಜೈಲಿನ ಆವರಣದಲ್ಲಿ ನಡೆದು ಬರುವಾಗ ಮಾಧ್ಯಮಗಳ ಕ್ಯಾಮೆರಾ ನೋಡಿ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ವಿಡಿಯೋ ಸೆರೆ ಹಿಡಿಯುತ್ತಿರುವುದು ಏಕೆ ಎಂದು ವಿಜಯಲಕ್ಷ್ಮಿ (Vijayalakshmi Darshan) ಕಡೆಯವರು ಪ್ರಶ್ನಿಸಿದ್ದಾರೆ. ‘ಮಾಧ್ಯಮದವರು’ ಎಂದು ಹೇಳಿದ ಬಳಿಕ ಅವರು ಸುಮ್ಮನಾಗಿದ್ದಾರೆ. ವಾರಕ್ಕೆ ಎರಡು ಬಾರಿ ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮಿ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬರುತ್ತಿದ್ದಾರೆ. ಆದಷ್ಟು ಬೇಗ ದರ್ಶನ್ ಅವರಿಗೆ ಜಾಮೀನು ಸಿಗಲಿ ಎಂಬುದು ಅಭಿಮಾನಿಗಳ ಬಯಕೆ. ಸದ್ಯಕ್ಕೆ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

MI vs PBKS: ಐಪಿಎಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್ – Kannada News | Quinton de Kock’s IPL 2026 Heroics: First Century, MI’s Savior, New Records!

ಇದು ಐಪಿಎಲ್ 2026 ರಲ್ಲಿ ಡಿ ಕಾಕ್ ಅವರ ಮೊದಲ ಶತಕ ಮತ್ತು ಅವರ ಐಪಿಎಲ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಶತಕದೊಂದಿಗೆ ಡಿ ಕಾಕ್ ಪ್ರಮುಖ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ ಶತಕಗಳನ್ನು ಬಾರಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಡಿ ಕಾಕ್ ಪಾತ್ರರಾಗಿದ್ದಾರೆ.

Source link

ದಾಖಲೆ ಬರೆದ ಕಲಬುರಗಿ ಬಿಸಿಲು: ಆರೆಂಜ್ ಅಲಟ್೯ ಘೋಷಣೆ, ಈ ಸಮಯದಲ್ಲಿ ಹೊರಬಾರದಂತೆ ಸೂಚನೆ – Kannada News | Extreme Heat Alert in Kalyana Karnataka Districts: Orange Alert, advice not to venture out during this time

ಕಲಬುರಗಿ, ಏಪ್ರಿಲ್​ 16: ಕಲಬುರಗಿ (kalaburagi) ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ. ಇದೀಗ ರಣಬಿಸಿಲಿನ (Heatwave) ಕೇಂದ್ರವಾಗಿಯೂ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ ಇದೀಗ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದ್ದು, ಜನರು ಮನೆ ಬಿಟ್ಟು ಹೊರಬರಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂದು ಜಿಲ್ಲೆಯಲ್ಲಿ ಬರೋಬ್ಬರಿ 44 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ರಣಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಜಿಲ್ಲೆಯ ಜನ 

ಕಲಬುರಗಿ ಅದುವೆ ಕಲ್ಯಾಣ ಕರ್ನಾಟಕದ ಕೇಂದ್ರ ಭಾಗ. ರಣಬಿಸಿಲಿನ ಹೊಡೆತಕ್ಕೆ ಜಿಲ್ಲೆಯ ಜನ ತತ್ತರಿಸಿ ಹೋಗಿದ್ದಾರೆ. ಬೇಸಿಗೆ ಆರಂಭ ಬಳಿಕ ರಾಜ್ಯದಲ್ಲಿಯೇ ಅತಿ ಹೆಚ್ಚು ‌ಬಿಸಿಲು ಜಿಲ್ಲೆಯಲ್ಲಿ ದಾಖಲಾಗಿದೆ. ಇದು ಜನರನ್ನು ಬೆಚ್ಚಿಬಿಳಿಸಿದೆ. ನಿನ್ನೆಯಷ್ಟೆ ಕಲಬುರಗಿ ತಾಲೂಕಿನ ಔರಾದನಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಇದು ಯಾರೋ ಹೇಳುತ್ತಿರುವ ಮಾತಲ್ಲ, ಹವಾಮಾನ ಇಲಾಖೆಯೇ ನೀಡಿರುವ ಮಾಹಿತಿ.

ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂದ ಕರ್ನಾಟಕ: ಬೆಂಗಳೂರು ಸೇರಿ ವಿವಿಧೆಡೆ ಹೀಟ್‌ವೇವ್ ಅಲರ್ಟ್

ಬಿಸಿಲೂರು ಎಂದೇ ಎಂದು ಹೆಸರಾಗಿರುವ ಕಲಬುರಗಿ ಜಿಲ್ಲೆಯಲ್ಲಿ ಇದೇ ವಾರದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಝಳಕ್ಕೆ ಕೆಲಸಕ್ಕೆ ಹೋಗುವ ಜನರು ಭಯಭೀತಗೊಂಡಿದ್ದಾರೆ. ಕೆಲ ಜನರು ತಂಪು ಪಾನಿಯಗಳ ಮೊರೆ ಹೋಗ್ತಿದ್ದಾರೆ. ನಿಂಬೆ ಹಣ್ಣಿನ ರಸ, ಕಬ್ಬಿನ ಹಾಲು, ತೆಂಗಿನಕಾಯಿ ನೀರು, ಸೇರಿದಂತೆ ಕಲ್ಲಂಗಡಿ ಹಣ್ಣಿನ ಸೇವನೆ ಮಾಡ್ತಿದ್ದಾರೆ. ಬಿರು ಬಿಸಿಲಿನ ಹೊಡೆತಕ್ಕೆ ಸರ್ಕಾರಿ ಕಚೇರಿಯ ಸಮಯದಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಆದರೆ ಜನ ಮಾತ್ರ ಪಾರ್ಕ್​​ಗಳಲ್ಲಿನ ಗಿಡ ಮರಗಳ ನೆರಳಿನ ಆಶ್ರಯ ಪಡೆಯುತ್ತಿದ್ದಾರೆ.

ಕಲಬುರಗಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಜನ ತತ್ತರಿಸಿ ಹೋಗ್ತಿದ್ದಾರೆ. ಔರಾದನಲ್ಲಿ 45 ಡಿಗ್ರಿ ಸೆಲ್ಸಿಯಸ್, ಚಿಂಚೋಳಿ ತಾಲೂಕಿನ ಐನಾಪೂರದಲ್ಲಿ 44 ಡಿಗ್ರಿ ಸೆಲ್ಸಿಯಸ್, ಅಫಜಲಪುರ ತಾಲೂಕಿನ ಆನೂರ್​ನಲ್ಲಿ 44 ಸೆಲ್ಸಿಯಸ್, ಆಳಂದ ತಾಲೂಕಿನ ಮಾದನಹಿಪ್ಪರಗಾದಲ್ಲಿ 44 ಡಿಗ್ರಿ ಸೆಲ್ಸಿಯಸ್ ಹೀಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಹೆಚ್ಚಿನ ತಾಪಮಾನ ದಾಖಲಾಗ್ತಿದೆ.

ಮನೆಯಿಂದ ಹೊರಹೋಗದಂತೆ ಆದೇಶ

ಜಿಲ್ಲೆಯಲ್ಲಿ ಬಿಸಿಲಿನ ತಾಪದಿಂದ ಕೆಲವು ದಿನ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆ ಇದೆ. ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೂ ಮನೆಯಿಂದ ಹೊರಹೋಗುವುದನ್ನು ತಪ್ಪಿಸಬೇಕಿದೆ‌. ಬಿಸಿ ಗಾಳಿ ಬೀಸುತ್ತಿರುವ ಹಿನ್ನಲೆ ಈಗಾಗಲೇ ಆರೇಂಜ್ ಅಲಟ್೯ ಘೋಷಣೆ ಸಹ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಂ ಆದೇಶ ಹೊರಡಿಸಿದ್ದಾರೆ.

ಆರೋಗ್ಯದ ಮೇಲೂ ಪರಿಣಾಮ

ಬಿಸಿಲಿನ ಪರಿಣಾಮ ಆರೋಗ್ಯದ ಮೇಲೂ ಗಂಭಿರ ಪರಿಣಾಮ ಬೀರುವ ಸಾಧ್ಯತೆ ಇದೆ. ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ವಯೋವೃದ್ಧರಲ್ಲಿ ಡಿಹೈಡ್ರೇಶನ್ ಉಂಟಾಗಿ ವಾಂತಿ, ಭೇದಿ ಸೇರಿದಂತೆ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಸುಡು ಬಿಸಿಲಿಗೆ ಬೆಂದ ಕರ್ನಾಟಕ: ಬೆಂಗಳೂರಿನಲ್ಲಿ ದಾಖಲೆ ಬರೆದ ತಾಪಮಾನ

ಇನ್ನು ಪ್ರತಿ ಬಾರಿಗಿಂತ ಈ ಬಾರಿ ಸಹ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗ್ತಿದೆ. ಮುಂದಿನ ತಿಂಗಳು ಮೇ ಇನ್ನೂ ‌ಹೆಚ್ಚಿನ ಗರಿಷ್ಠ ಮಟ್ಟದ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೇವಲ ಕಲಬುರಗಿ ಅಷ್ಟೇ ಅಲ್ಲದೆ ಯಾದಗಿರಿ, ರಾಯಚೂರು, ಬೀದರ್, ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಸೂರ್ಯನ ಪ್ರಖರತೆಗೆ ಜಿಲ್ಲೆಯ ಜನ ತತ್ತರಿಸಿರುವುದಂತು ನಿಜ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬದಲಾಗುತ್ತಿರುವ ಹವಾಮಾನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? ಇಲ್ಲಿದೆ ಆಯುರ್ವೇದ ತಜ್ಞರು ನೀಡಿದ ಸಲಹೆ – Kannada News | Ayurvedic Tips to Stay Healthy During Seasonal Change

ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಅಕಸ್ಮಿಕ ಬದಲಾವಣೆಗಳು ಕಾಣಿಸುತ್ತಿವೆ. ಹಗಲು ಸಮಯದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದ್ದು, ಸಂಜೆ ವೇಳೆಗೆ ಸ್ವಲ್ಪ ತಂಪು ಅನುಭವವಾಗುತ್ತಿದೆ. ಕೆಲವೊಮ್ಮೆ ಏಕಾಏಕಿ ಮಳೆ, ಮತ್ತೆ ತೀವ್ರ ಬಿಸಿಲು ಈ ರೀತಿಯ ಬದಲಾವಣೆಗಳು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಆದರೆ ಹವಾಮಾನ ಬದಲಾವಣೆ ಈ ರೀತಿ ಬದಲಾಗುತ್ತಿರುವಾಗ ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಕೆಲವು ಸರಳ ಸಲಹೆಗಳನ್ನು ಅನುಸರಿಸುವುದು ಬಹಳ ಮುಖ್ಯವಾಗುತ್ತದೆ. ಇಲ್ಲವಾದಲ್ಲಿ ಪದೇ ಪದೇ ಅನಾರೋಗ್ಯಕ್ಕೆ ಒಳಗಾಗಬೇಕಾಗಬಹುದು. ಹಾಗಾದರೆ ಆಹಾರದಲ್ಲಿ ಯಾವ ರೀತಿಯ ಬದಲಾವಣೆ ಮಾಡಿಕೊಳ್ಳಬೇಕು, ರೋಗನಿರೋಧಕ ಶಕ್ತಿ (Immune System) ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹವಾಮಾನ ಬದಲಾವಣೆಯಿಂದ ಉಂಟಾಗುವ ಸಮಸ್ಯೆಗಳು:

ಆಯುರ್ವೇದದ ಪ್ರಕಾರ, ಹವಾಮಾನ ಬದಲಾವಣೆ ದೇಹದ ವಾತ, ಪಿತ್ತ ಮತ್ತು ಕಫ ದೋಷಗಳ ಸಮತೋಲನವನ್ನು ಹಾಳು ಮಾಡುತ್ತದೆ. ಇದರಿಂದ ಜ್ವರ, ಶೀತ, ಕೆಮ್ಮು, ಅಲರ್ಜಿ ಹಾಗೂ ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ. ವೈರಲ್ ಸೋಂಕುಗಳ ಅಪಾಯವೂ ಹೆಚ್ಚಾಗುತ್ತದೆ. ವೈದ್ಯರಾದ ಡಾ. ಚಂಚಲ ಅವರ ಪ್ರಕಾರ, ಈ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ಆಹಾರ ಮತ್ತು ಜೀವನಶೈಲಿ ಬಹಳ ಮುಖ್ಯ ಎನ್ನುತ್ತಾರೆ.

ಇದನ್ನೂ ಓದಿ: ಬೆಂಗಳೂರಿಗರೇ ಆರೋಗ್ಯದ ಬಗ್ಗೆ ಬೇಡ ನಿರ್ಲಕ್ಷ್ಯ; ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಯಾವ ರೀತಿಯ ಆಹಾರ ಸೇವನೆ ಮಾಡಬೇಕು?

ಈ ಹವಾಮಾನದಲ್ಲಿ ಹಗುರವಾಗಿ ಜೀರ್ಣವಾಗುವ ಆಹಾರ ಸೇವಿಸುವುದು ಉತ್ತಮ. ಪಪ್ಪಾಯಿ, ದಾಳಿಂಬೆ, ಕಿತ್ತಳೆ ಹಣ್ಣುಗಳನ್ನು ಆಹಾರದಲ್ಲಿ ಸೇರಿಸಬಹುದು. ಜೊತೆಗೆ ಶುಂಠಿ ಮತ್ತು ತುಳಸಿ ಚಹಾ ಸೇವಿಸುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಫಾಸ್ಟ್ ಫುಡ್ ಮತ್ತು ಎಣ್ಣೆ ಪದಾರ್ಥಗಳನ್ನು ತಪ್ಪಿಸುವುದು ಉತ್ತಮ, ಏಕೆಂದರೆ ಇವು ಪಿತ್ತ ಮತ್ತು ಕಫವನ್ನು ಹೆಚ್ಚಿಸಬಹುದು. ತಣ್ಣೀರು ಬದಲಾಗಿ ಕೊಂಚ ಬೆಚ್ಚಗಿನ ಅಥವಾ ಸಾಮಾನ್ಯ ನೀರನ್ನು ಕುಡಿಯುವುದು ಆರೋಗ್ಯಕರ. ಇದರ ಜೊತೆಗೆ ತುಳಸಿ, ಗಿಲೋಯ್ ಮತ್ತು ಅಶ್ವಗಂಧಾ ಮುಂತಾದ ಔಷಧೀಯ ಸಸ್ಯಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಕ. ಇವು ದೇಹವನ್ನು ಹವಾಮಾನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುತ್ತವೆ.

ಪಾಲಿಸಬೇಕಾದ ಮುನ್ನೆಚ್ಚರಿಕೆಗಳು

ಮಧ್ಯಾಹ್ನ 12ರಿಂದ 4 ಗಂಟೆಯ ನಡುವೆ ತೀವ್ರ ಬಿಸಿಲಿಗೆ ಹೋಗುವುದನ್ನು ತಪ್ಪಿಸಬೇಕು. ಹೊರಗೆ ಹೋಗುವಾಗ ತಲೆ ಮುಚ್ಚಿಕೊಳ್ಳುವುದು ಉತ್ತಮ. ಸಾಕಷ್ಟು ನೀರು ಕುಡಿಯುವುದು ಮತ್ತು ದೇಹವನ್ನು ಹೈಡ್ರೇಟ್ ಇಟ್ಟುಕೊಳ್ಳುವುದು ಅಗತ್ಯ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಲ್​ಐಸಿಯಿಂದ ಎರಡು ಹೊಸ ಆ್ಯಪ್​ಗಳು ಬಿಡುಗಡೆ; ಗ್ರಾಹಕರಿಗೆ MyLIC, ಮಾರಾಟಗಾರರಿಗೆ Super Sales Saathi ಆ್ಯಪ್ – Kannada News | LIC of India introduces MyLIC App and Super Sales Saathi App

ಮುಂಬೈ, ಏಪ್ರಿಲ್ 16: ಭಾರತೀಯ ಜೀವ ವಿಮಾ ನಿಗಮ (LIC) ತನ್ನ ಡಿಜಿಟಲ್ ರೂಪಾಂತರದ ಭಾಗವಾಗಿ ಗ್ರಾಹಕರು ಮತ್ತು ಮಾರಾಟ ಪ್ರತಿನಿಧಿಗಳಿಗಾಗಿ (Intermediaries) ಎರಡು ಅತ್ಯಾಧುನಿಕ ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಿಡುಗಡೆ ಮಾಡಿದೆ. ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಎಂ. ನಾಗರಾಜು ಅವರು ಈ ಆಪ್‌ಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್‌ಐಸಿ ಸಿಇಒ ಮತ್ತು ಎಂಡಿ ಆರ್. ದೊರೈಸ್ವಾಮಿ ಹಾಗೂ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಹಕರಿಗಾಗಿ ಇರುವ MyLIC ಆಪ್

MyLIC ತನ್ನ ಪಾಲಿಸಿದಾರರಿಗಾಗಿ ವಿನ್ಯಾಸಗೊಳಿಸಲಾದ ಮುಂದಿನ ಪೀಳಿಗೆಯ ಆಪ್ ಆಗಿದ್ದು, ಇನ್ಷೂರೆನ್ಸ್ ಪೋರ್ಟ್‌ಫೋಲಿಯೋ ನಿರ್ವಹಣೆಯನ್ನು ಸುಲಭಗೊಳಿಸಲಿದೆ. ಇದರಲ್ಲಿ ಇರುವ ಪ್ರಮುಖ ಫೀಚರ್ಸ್ ಇಂತಿವೆ:

  • ಪೋರ್ಟ್‌ಫೋಲಿಯೋ ನಿರ್ವಹಣೆ: ನಿಮ್ಮ ಎಲ್ಲಾ ಪಾಲಿಸಿಗಳನ್ನು ಒಂದೇ ಕಡೆ ನೋಡಬಹುದು ಮತ್ತು ನಿರ್ವಹಿಸಬಹುದು.
  • ತ್ವರಿತ ಪ್ರೀಮಿಯಂ ಪಾವತಿ: ಯಾವುದೇ ವಿಳಂಬವಿಲ್ಲದೆ ಆನ್‌ಲೈನ್ ಮೂಲಕ ಪ್ರೀಮಿಯಂ ಕಟ್ಟಬಹುದು.
  • ಪೇಪರ್‌ಲೆಸ್ ಲೋನ್: ಪಾಲಿಸಿ ಮೇಲೆ ಸಾಲ ಪಡೆಯಲು ಕಚೇರಿಗೆ ಹೋಗುವ ಅಗತ್ಯವಿಲ್ಲ, ಡಿಜಿಟಲ್ ಆಗಿಯೇ ಸಾಲ ಸೌಲಭ್ಯ ಪಡೆಯಬಹುದು.
  • ಪಾಲಿಸಿ ನವೀಕರಣ: ಸ್ಥಗಿತಗೊಂಡಿರುವ (Lapsed) ಪಾಲಿಸಿಗಳನ್ನು ಆನ್‌ಲೈನ್‌ನಲ್ಲಿಯೇ ಪುನಶ್ಚೇತನಗೊಳಿಸಬಹುದು.
  • ಇ-ಕೆವೈಸಿ (e-KYC): ವೇಗವಾದ ಮತ್ತು ಕಾಗದರಹಿತ ಕೆವೈಸಿ ಪ್ರಕ್ರಿಯೆ.

ಇದನ್ನೂ ಓದಿ: ಗುಜರಾತ್​ನಲ್ಲಿ ಟಾಟಾದ ಚಿಪ್ ಘಟಕಕ್ಕೆ ಸರ್ಕಾರದ ಅನುಮೋದನೆ; 91,000 ಕೋಟಿ ರೂ ಹೂಡಿಕೆಗೆ ಯೋಜನೆ

ಸೂಪರ್ ಸೇಲ್ಸ್ ಸಾಥಿ ಆ್ಯಪ್ (Super Sales Saathi)

ಇದು ಎಲ್‌ಐಸಿ ವಿಮಾ ಏಜೆಂಟ್‌ಗಳು ಮತ್ತು ಮಾರ್ಕೆಟಿಂಗ್ ಸಿಬ್ಬಂದಿಗಾಗಿ ರೂಪಿಸಲಾದ ಆಪ್ ಆಗಿದೆ. ಇದರಲ್ಲಿರುವ ಪ್ರಮುಖ ಫೀಚರ್ಸ್ ಇಂತಿವೆ:

  • ರಿಯಲ್-ಟೈಮ್ ಟ್ರ್ಯಾಕಿಂಗ್: ಗ್ರಾಹಕರ ಪಾಲಿಸಿ ಸ್ಥಿತಿಗತಿಗಳನ್ನು ಕ್ಷಣಕ್ಷಣಕ್ಕೂ ಗಮನಿಸಬಹುದು.
  • AI ಆಧಾರಿತ ನೆರವು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಗ್ರಾಹಕರಿಗೆ ಸೂಕ್ತ ಸಲಹೆ ನೀಡಲು ಇದು ನೆರವಾಗಲಿದೆ.
  • ಡಿಜಿಟಲ್ ಸೇಲ್ಸ್ ಕಿಟ್: ಪಾಲಿಸಿಗಳ ಬಗ್ಗೆ ವಿವರಿಸಲು ಬೇಕಾದ ಡಿಜಿಟಲ್ ಮಾಹಿತಿಗಳು ಮತ್ತು ಪ್ರೆಸೆಂಟೇಶನ್‌ಗಳು ಈ ಆಪ್‌ನಲ್ಲಿ ಲಭ್ಯವಿರುತ್ತವೆ.
  • ಸ್ವಯಂಚಾಲಿತ ರಿಮೈಂಡರ್: ಗ್ರಾಹಕರನ್ನು ಫಾಲೋ-ಅಪ್ ಮಾಡಲು ಇದು ಏಜೆಂಟ್‌ಗಳಿಗೆ ನೆನಪಿಸುತ್ತದೆ.

ಡಿಜಿಟಲ್ ರೂಪಾಂತರದ ‘ಡೈವ್’ (DIVE)

ಈ ಎರಡೂ ಅಪ್ಲಿಕೇಶನ್‌ಗಳನ್ನು ಎಲ್‌ಐಸಿಯ ‘ಡೈವ್’ (DIVE- Digital Innovation & Value Enhancement) ಎಂಬ ಡಿಜಿಟಲ್ ರೂಪಾಂತರ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಎಲ್‌ಐಸಿ ತನ್ನ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ಮತ್ತು ಗ್ರಾಹಕರಿಗೆ ತಡೆರಹಿತ ಸೇವೆ ನೀಡಲು ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ಎನ್​ಬಿಎಫ್​ಸಿಗಳಿಗೆ ಆರ್​ಬಿಐ ನಿಯಮಗಳು ಸಡಿಲ; ಪೂರ್ವಾನುಮತಿ ಇಲ್ಲದೇ ಹೊಸ ಶಾಖೆಗಳ ಸ್ಥಾಪನೆಗೆ ಅವಕಾಶ

ಈ ಆಪ್‌ಗಳ ಬಳಕೆಯಿಂದಾಗಿ ಎಲ್‌ಐಸಿ ಗ್ರಾಹಕರು ಈಗ ವಿಮಾ ಸೇವೆಗಳಿಗಾಗಿ ಕಚೇರಿಗಳಿಗೆ ಅಲೆಯುವ ಕೆಲಸ ತಪ್ಪಲಿದ್ದು, ಬೆರಳ ತುದಿಯಲ್ಲೇ ಎಲ್ಲಾ ಸೇವೆಗಳನ್ನು ಪಡೆಯಬಹುದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version