ಬಾಗಲಕೋಟೆಯಲ್ಲಿ ಅಮಾನವೀಯ ಕೃತ್ಯ: ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ? – Kannada News | Bagalkot: Mentally Ill Woman physically Assaulted Near Hunagunda Highway

ಬಾಗಲಕೋಟೆ, ಜನವರಿ 11: ವಿಚ್ಛೇದಿತ ಮಹಿಳೆ‌ ಮೇಲೆ ಲೈಂಗಿಕ ದೌರ್ಜನ್ಯ (physically harassment) ನಡೆದಿರುವಂತಹ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಕ್ರಾಸ್​​​ನಲ್ಲಿ ನಡೆದಿದೆ. ಜನವರಿ 5ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ವರ್ಷದ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದು, ದೌರ್ಜನ್ಯವೆಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋಗಲಾಗಿದೆ. ಸದ್ಯ ಮಹಿಳೆ ಮೇಲೆ ಗ್ಯಾಂಗ್​ನಿಂದ​ ಅಥವಾ ಒಬ್ಬರಿಂದ ಅತ್ಯಾಚಾರ ನಡೆಯಿತಾ ಎಂಬುವುದು ಪೊಲೀಸ್​ ತನಿಖೆ ನಡೆಸಿದ್ದಾರೆ. ಹುನಗುಂದ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

ಕೃತ್ಯವೆಸಗಿ ಬಿಸಾಕಿ ಹೋದ ದುಷ್ಟರು

ವಿಚ್ಚೇದಿತ ಮಹಿಳೆ ಬಾಗಲಕೋಟೆ ತಾಲೂಕಿನ ಬೇವೂರು ಗ್ರಾಮದವರು. ರಾಷ್ಟ್ರೀಯ ಹೆದ್ದಾರಿ ಬಳಿ ಬಿಸಾಕಿ ಹೋದ ಮಹಿಳೆಯನ್ನು ನೋಡಿದ ಸಾರ್ವಜನಿಕರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಅವರನ್ನು ಮೊದಲಿಗೆ ಹುನಗುಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ‌ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ಮುಂದುವರಿದಿದೆ.

ದೌರ್ಜನ್ಯ ನೆನೆದು ಬಿಕ್ಕಿಬಿಕ್ಕಿ ಅತ್ತ ಮಹಿಳೆಯ ಸಹೋದರ  

ಇನ್ನು ಮಹಿಳೆಯ ಸಹೋದರ ತಮ್ಮ ಸಹೋದರಿ ಮೇಲಾದ ದೌರ್ಜನ್ಯ ನೆನೆದು ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾತನಾಡಿದ ಸಹೋದರ ರವಿ ಮಾದರ, ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಬಿಕ್ಕಿಬಿಕ್ಕಿ ಅತ್ತರು. ಯಾರು ಇಂತಹ ಕೆಲಸ ಮಾಡಿದ್ದಾರೆ ಅವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ!

ಸಂತ್ರಸ್ತೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಪರೀಕ್ಷೆ ಮಾಡಲಾಗಿದ್ದು, ಗುಪ್ತಾಂಗದ ಮೇಲೆ‌ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಅತ್ಯಾಚಾರ ಆಗಿದೆಯಾ ಎಂಬ ಬಗ್ಗೆ ವೈದ್ಯಕೀಯ ವರದಿ ಬಂದ ನಂತರ ಖಚಿತವಾಗಲಿದೆ ಎಂದು ಜಿಲ್ಲಾಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಬಾಗಲಕೋಟೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಹೇಳಿದ್ದಿಷ್ಟು

ಇನ್ನು ಘಟನೆ ಬಗ್ಗೆ ಬಾಗಲಕೋಟೆ ಎಸ್​ಪಿ ಸಿದ್ದಾರ್ಥ ಗೋಯಲ್‌ ಪ್ರತಿಕ್ರಿಯಿಸಿದ್ದು, ಈ ವಿಚಾರವಾಗಿ ಈಗಾಗಲೇ ಎಫ್​ಐಆರ್​​ ದಾಖಲಾಗಿದೆ. ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ ಮಾಡಿದ್ದು, 72 ಜನರ ಪಟ್ಟಿ ಸಿದ್ಧಪಡಿಸಿದ್ದೇವೆ. ಆ ಮೂಲಕ ಆರೋಪಿಗಳ ಪತ್ತೆಗೆ ಮುಂದಾಗಿದ್ದೇವೆ. ಆದಷ್ಟು ಬೇಗ ಆರೋಪಿಗಳ ಪತ್ತೆ ಹಚ್ಚುತ್ತೇವೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 4:12 pm, Sun, 11 January 26

Source link

Lohri Attire Ideas: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ – Kannada News | Lohri Outfit ideas: If you want to look beautiful on a festive day, try this traditional dress idea

ಭಾರತದಲ್ಲಿ ಸುಗ್ಗಿ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ನಮ್ಮ ಕರ್ನಾಟಕದಲ್ಲಿ ಈ ಹಬ್ಬವನ್ನು ಸಂಕ್ರಾತಿ, ತಮಿಳುನಾಡಿನಲ್ಲಿ ಪೊಂಗಲ್‌, ಪಂಜಾಬ್‌ನಲ್ಲಿ ಲೋಹ್ರಿ ಹಬ್ಬ ಎಂದು ಆಚರಿಸಲಾಗುತ್ತದೆ. ವರ್ಷದ ಈ ಮೊದಲ ಹಬ್ಬದ ದಿನ ವಿಶೇಷವಾಗಿ ಹೆಂಗಳೆಯರು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಚೆಂದವಾಗಿ ರೆಡಿಯಾಗುತ್ತಾರೆ. ಈ ಬಾರಿಯ ಹಬ್ಬದಂದು ಯಾವ ರೀತಿಯ ಬಟ್ಟೆ ಉಡೋದು, ಯಾವ ಡ್ರೆಸ್‌ (Outfit ideas) ಸೂಕ್ತ ಎಂಬ ಗೊಂದಲದಲ್ಲಿ ಇದ್ದೀರಾ? ಹಾಗಿದ್ದರೆ ಈ ಟ್ರೆಡೀಷನಲ್‌ ಡ್ರೆಸ್‌ ಐಡಿಯಾಗಳನ್ನೊಮ್ಮೆ ಪ್ರಯತ್ನಿಸಿ.

ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ:

ಸೀರೆ:

ಹಬ್ಬದ ದಿನ ಸೊಗಸಾದ, ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದು ಉತ್ತಮ. ಅದಕ್ಕಾಗಿ ನೀವು ಸೀರೆ ಧರಿಸಬಹುದು. ರೇಷ್ಮೆ ಸೀರೆಗಳು, ಕಾಂಜೀವರಂ ಸೀರೆಗಳು ಅಥವಾ ಕಾಟನ್‌ ಸಿಲ್ಕ್‌ ಸೀರೆಗಳು ಈ ಸಂದರ್ಭಕ್ಕೆ ಸೂಕ್ತವಾಗಿವೆ.

ಲಂಗ ದಾವಣಿ:

ಸಾಂಪ್ರದಾಯಿಕ ಉಡುಗೆಗಳಲ್ಲಿ ಒಂದಾಗ ಲಂಗದಾವಣಿ ಹಬ್ಬದ ದಿನ ಉಡಲು ಹೇಳಿ ಮಾಡಿಸಿದಂತಹ ಉಡುಗೆಯಾಗಿದೆ. ಸೀರೆ ಉಡಲು ಇಷ್ಟಪಡದ ಹೆಣ್ಣು ಮಕ್ಕಳು ಲಂಗದಾವಣಿ ತೊಡಬಹುದು. ಲಂಗದಾವಣಿ ಜೊತೆಗೆ ಜಡೆಗೆ ಮಲ್ಲಿಗೆ, ಕೈತುಂಬಾ ಹಸಿರು ಗಾಜಿನ ಬಳೆಗಳನ್ನು ತೊಡುವುದರಿಂದ ನೀವು ಇನ್ನಷ್ಟು ಲಕ್ಷಣವಾಗಿ, ಮುದ್ದಾಗಿ ಕಾಣುವಿರಿ.

ಉದ್ದನೆಯ ಸ್ಕರ್ಟ್:

ಹಬ್ಬದ ದಿನ ಸಿಂಪಲ್‌ ಆಗಿ ಡ್ರೆಸ್‌ ಮಾಡಿಕೊಳ್ಳಲು ಬಯಸಿದರೆ ನಿಮಗೆ ಉದ್ದನೆಯ ಸ್ಕರ್ಟ್ ಉತ್ತಮ ಆಯ್ಕೆಯಾಗಿದೆ. ಸ್ಕರ್ಟ್ ಮತ್ತು ಟಾಪ್ ಸೊಗಸಾದ ಮತ್ತು ಆರಾಮದಾಯಕ ನೋಟವನ್ನುನೀಡುತ್ತದೆ.  ನೀವು ವಿವಿಧ ಬಣ್ಣಗಳ ಅಥವಾ ಹೂವಿನ ಮಾದರಿಗಳ ಸ್ಕರ್ಟ್‌ಗಳನ್ನು ಆಯ್ಕೆ ಮಾಡಬಹುದು.

ಕುರ್ತಿ ಜೊತೆ ಪಲಾಝೋ:

ಸೀರೆಗಳನ್ನು ಧರಿಸಲು ಇಷ್ಟಪಡದವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಕುರ್ತಿ ಮತ್ತು ಪಲಾಝೋ ಪ್ಯಾಂಟ್‌ ಕಾಂಬಿನೇಷನ್‌ ನಿಮ್ಮನ್ನು ಸುಂದರವಾಗಿ ಮತ್ತು ಸ್ಟೈಲಿಶ್ ಆಗಿ ಕಾಣುವಂತೆ ಮಾಡುತ್ತದೆ. ಅದನ್ನು ಉದ್ದವಾದ ಕುರ್ತಾ ಮತ್ತು ಡಿಸೈನರ್ ದುಪಟ್ಟಾ ಜೊತೆ ಜೋಡಿಸುವುದರಿಂದ ಇನ್ನಷ್ಟು ಅದ್ಭುತವಾದ ನೋಟ ದೊರೆಯುತ್ತದೆ.

ಶರಾರಾ ಸೂಟ್:

ಟ್ರೆಡೀಷನಲ್ ಹಾಗೆಯೇ ಸ್ಟೈಲಿಶ್‌ ಆಗಿ ಕಾಣಿಸಿಕೊಳ್ಳಬೇಕು ಎಂದು ಬಯಸುವವರು ಶರಾರಾ ಸೂಟ್‌ ಧರಿಸಬಹುದು. ಇದು ನಿಮಗೆ ಖಂಡಿತವಾಗಿಯೂ ವಿಶಿಷ್ಟವಾದ ಲುಕ್‌ ನೀಡುತ್ತದೆ.

ಇದನ್ನೂ ಓದಿ: ಆರೋಗ್ಯಯುತವಾಗಿ ಹೆಚ್ಚು ಕಾಲ ಬದುಕಲು ಬಯಸಿದರೆ ಅಭ್ಯಾಸಗಳನ್ನು ತಪ್ಪದೇ ಪಾಲಿಸಿ

ಪಟಿಯಾಲ ಸೂಟ್:‌

ಲೋಹ್ರಿ ಹಬ್ಬಕ್ಕೆ ನೀವು ಪಂಜಾಬ್‌ನ ಸಾಂಪ್ರದಾಯಿಕ ಉಡುಗೆಯಾದ ಪಟಿಯಾಲ ಸೂಟ್‌ ಧರಿಸಬಹುದು. ಪಂಜಾಬಿ ಲುಕ್‌ಗೆ ಪರಿಪೂರ್ಣವಾದ ಕೇಶವಿನ್ಯಾಸದ ಅಗತ್ಯವಿದೆ.

ಅನಾರ್ಕಲಿ ಸೂಟ್:‌

ಅನಾರ್ಕಲಿ ಸೂಟ್‌ಗಳು ಕ್ಲಾಸಿ ಮತ್ತು ಆರಾಮದಾಯಕ ಆಯ್ಕೆಯಾಗಿದೆ. ಇವು ಸಾಂಪ್ರದಾಯಿಕ ನೋಟವನ್ನು ನೀಡುವುದರ ಜೊತೆಗೆ ಆರಾಮದಾಯಕವೂ ಆಗಿರುತ್ತವೆ. ಹಾಗಾಗಿ ಈ ಬಾರಿಯ ಹಬ್ಬಕ್ಕೆ ಅನಾರ್ಕಲಿ ಸೂಟ್‌ ಸಹ ಧರಿಸಬಹುದು.

ಲಾಂಗ್‌ ಕುರ್ತಾ:

ಹಬ್ಬ ಹರಿದಿನಗಳ ಸಂದರ್ಭದಲ್ಲಿ ಸೀರೆಯನ್ನು ತೊಡಲು ಇಷ್ಟಪಡದವರು ಕುರ್ತಾ ಧರಿಸಬಹುದು. ಇದು ನಿಮಗೆ ಸರಳ ಮತ್ತು ಸೊಗಸಾದ ನೋಟವನ್ನು ನೀಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ – Kannada News | An Unattended Bag, A Moment of Alarm Outside a Minister’s Home in Mumbai

ಮುಂಬೈ, ಜನವರಿ 11: ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ ಮನೆ ಎದುರು ನಿಗೂಢ ಬ್ಯಾಕ್ ಪತ್ತೆಯಾಗಿದೆ. ಇದರಿಂದಾಗಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದರು. ಭದ್ರತಾ ಸಿಬ್ಬಂದಿ ಅನುಮಾನಾಸ್ಪದ ಬ್ಯಾಗ್ ಗಮನಿಸಿದ ತಕ್ಷಣ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದರು, ಪೊಲೀಸರು ಸಂಪೂರ್ಣ ಪರಿಶೀಲನೆಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆರಂಭಿಕ ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಅಥವಾ ಬೆದರಿಕೆಗಳು ಕಂಡುಬಂದಿಲ್ಲವಾದರೂ, ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ನಾಯಕರಾಗಿರುವ ಸಚಿವ ನಿತೇಶ್ ರಾಣೆ ತಮ್ಮ ಉಗ್ರ ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ರೆಸ್ಟೋರೆಂಟ್​ಗಿಂತ ಜೊಮಾಟೋದಲ್ಲಿ ಭಾರೀ ರೇಟ್; ಆನ್​ಲೈನ್​ನಲ್ಲಿ ಡಿಬೇಟ್; ಕರ್ಮ ಫುಡ್ ಆ್ಯಪ್​ನದ್ದೋ, ಹೋಟೆಲ್​ನದ್ದೋ? – Kannada News | X user shows price difference in Zomato and Restaurant, netizens react

ನವದೆಹಲಿ, ಜನವರಿ 11: ಸ್ವಿಗ್ಗಿ, ಜೊಮಾಟೋ ಇತ್ಯಾದಿ ಫುಡ್ ಆ್ಯಪ್​ಗಳು (food delivery platforms) ಜನರ ಮನೆ ಬಾಗಿಲಿಗೆ ಆಹಾರವನ್ನು ತಂದೊದಗಿಸುವ ಸೇವೆ ನೀಡುತ್ತವೆ. ಪ್ಲಾಟ್​ಫಾರ್ಮ್ ಕಾರ್ಯನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳನ್ನು ಭರಿಸಲು ವಿವಿಧ ಶುಲ್ಕ ಸೇರಿ ಹೆಚ್ಚಿನ ಹಣವನ್ನು ಗ್ರಾಹಕರಿಗೆ ವಿಧಿಸಲಾಗುತ್ತದೆ. ಆದರೆ, ರೆಸ್ಟೋರೆಂಟ್​ಗೆ ಹೋಗಿ ಊಟ ಮಾಡುವುದಕ್ಕೂ ಆನ್ಲೈನ್​ನಲ್ಲಿ ಆರ್ಡರ್ ಮಾಡಿ ಊಟ ಮಾಡುವುದಕ್ಕೂ ಬೆಲೆಯಲ್ಲಿ ನೂರಾರು ರೂ ವ್ಯತ್ಯಾಸ ಆಗಿ ಹೋದರೆ? ಆನ್​ಲೈನ್​ನಲ್ಲಿ ಇಂಥದ್ದುಂದು ಡಿಬೇಟ್ ನಡೆದಿದೆ.

ನಳಿನಿ ಉನಾಗರ್ ಎಂಬಾಕೆ ಜೊಮಾಟೋ ಹೇಗೆ ವಿಪರೀತ ಬೆಲೆ ಹಾಕುತ್ತಿದೆ ಎಂದು ವಿವರಿಸಿ ಎಕ್ಸ್​ನಲ್ಲಿ ಟ್ವೀಟ್ ಮಾಡಿದ್ದಾಳೆ. ರೆಸ್ಟೋರೆಂಟ್​ನಲ್ಲಿ 320 ರೂ ಬೆಲೆಯ ಆಹಾರವು ಜೊಮಾಟೊದಲ್ಲಿ 655 ರೂ ಆಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಗ್ರೋಕ್ ಅಶ್ಲೀಲ ಅವಾಂತರಗಳು; ತಪ್ಪೊಪ್ಪಿಕೊಂಡು ಭಾರತ ಸರ್ಕಾರದ ಆದೇಶ ಪಾಲಿಸಿದ ಎಕ್ಸ್

ಒಂದೇ ಆಹಾರವನ್ನು ರೆಸ್ಟೋರೆಂಟ್ ಹಾಗೂ ಜೊಮಾಟೊ ಎರಡರಲ್ಲೂ ಬೆಲೆ ಹೋಲಿಕೆ ಮಾಡಿದ್ದಾರೆ. ಚೈನೀಸ್ ಭೇಲ್ ಮತ್ತು ಮಂಚೂರಿಯನ್ ಅನ್ನು ರೆಸ್ಟೋರೆಂಟ್​ನಿಂದ ಪಾರ್ಸಲ್ ಕಟ್ಟಿಸಿಕೊಂಡು, ಅದರ ಬಿಲ್ 320 ರೂ ಆಗಿದೆ. ಅದೇ ರೆಸ್ಟೋರೆಂಟ್​ನಲ್ಲಿ ಅದೇ ಚೈನೀಸ್ ಭೇಲ್ ಮತ್ತು ಮಂಚೂರಿಯನ್ ಅನ್ನು ಬುಕ್ ಮಾಡಿದಾಗ ಅವುಗಳ ಬೆಲೆ 600 ರೂ ಸೇರಿ ಒಟ್ಟು ಬಿಲ್ 655 ರು ಆಗಿದೆ. ಇದರ ಫೋಟೋವನ್ನು ನಳಿನಿ ಅವರು ಶೇರ್ ಮಾಡಿದ್ದಾರೆ.

‘ಜೊಮಾಟೊದವರೆ, ನನ್ನ ಆರ್ಡರ್​ನ ವಾಸ್ತವ ಬೆಲೆ 320 ರೂ. ಆದರೆ, ಜೊಮಾಟೊದಲ್ಲಿ 655 ರು ಆಗಿದೆ. ಎಲ್ಲಾ ಡಿಸ್ಕೌಂಟ್​ಗಳನ್ನು ಹಾಕಿಯೂ ನಾನು 550 ರೂ ಪಾವತಿಸಬೇಕು. ಇಷ್ಟು ಬೆಲೆ ವ್ಯತ್ಯಾಸ ನಿಜಕ್ಕೂ ಅಸಹಜ. ಗ್ರಾಹಕರಿಂದ ಸಿಕ್ಕಾಪಟ್ಟೆ ವಸೂಲಿ ಮಾಡಲಾಗುತ್ತಿದೆ’ ಎಂದು ಈ ಮಹಿಳೆ ಟ್ವೀಟ್ ಮಾಡಿದ್ದಾರೆ.

ಇವರ ಟ್ವೀಟ್​ಗೆ ಜೊಮಾಟೊ ಪ್ರತಿಕ್ರಿಯಿಸಿದೆ. ನಮ್ಮ ಪ್ಲಾಟ್​ಫಾರ್ಮ್​ನಲ್ಲಿ ಬೆಲೆಯನ್ನು ನಿರ್ಧರಿಸುವುದು ರೆಸ್ಟೋರೆಂಟ್ ಪಾರ್ಟ್ನರ್​ಗಳೇ. ಗ್ರಾಹಕರು ಹಾಗು ರೆಸ್ಟೋರೆಂಟ್​ಗಳಿಗೆ ಮಧ್ಯವರ್ತಿಯಾಗಷ್ಟೇ ಜೊಮಾಟೊ ಕೆಲಸ ಮಾಡುತ್ತದೆ ಎಂದು ಹೇಳಿದೆ.

ಇದನ್ನೂ ಓದಿ: ಬಿಲ್​ನಲ್ಲಿ ನಕಲಿ ಜಿಎಸ್​ಟಿ ನಂಬರ್ ಕೊಟ್ಟು ಸರ್ಕಾರಕ್ಕೂ, ಗ್ರಾಹಕರಿಗೂ ಯಾಮಾರಿಸುತ್ತಾರೆ; ಅಸಲಿ ಪತ್ತೆ ಹಚ್ಚೋದು ಹೇಗೆ?

ಇದು ಆನ್​ಲೈನ್​ನಲ್ಲಿ ಚರ್ಚೆ ಹುಟ್ಟುಹಾಕಿದೆ. ರೆಸ್ಟೋರೆಂಟ್ ಪ್ಲಾಟ್​ಫಾರ್ಮ್​ಗಳಿಂದ ಜೊಮಾಟೊ ಶೇ. 35ರಷ್ಟು ಕಮಿಷನ್ ಪಡೆಯುತ್ತದೆ ಎಂದು ಹಲವರು ಎತ್ತಿತೋರಿಸಿದ್ದಾರೆ.

ನಳಿನಿ ಅವರ ಟ್ವೀಟ್

ಪ್ಲಾಟ್​ಫಾರ್ಮ್​ಗಳಲ್ಲಿ ಕಾಣುವ ಆಹಾರಗಳ ಬೆಲೆಯನ್ನು ನಿರ್ಧರಿಸುವುದು ರೆಸ್ಟೋರೆಂಟ್​ಗಳೇ. ಆದರೆ, ಭಾರೀ ದೊಡ್ಡ ಮೊತ್ತದ ಕಮಿಷನ್ ಅನ್ನು ಸರಿದೂಗಿಸಲು ರೆಸ್ಟೋರೆಂಟ್​ಗಳು ಬೆಲೆ ಏರಿಸುತ್ತವೆ. ರೆಸ್ಟೋರೆಂಟ್ ಬೆಲೆ ಏರಿಸಿದರೆ ಅದರಿಂದಲೂ ಫುಡ್ ಪ್ಲಾಟ್​ಫಾರ್ಮ್​ಗಳಿಗೆ ಲಾಭವಾಗುತ್ತದೆ. ಅಂತಿಮವಾಗಿ ಗ್ರಾಹಕರಿಗೆ ಹೊರೆ ಆಗುವುದು ಎಂದು ಹಲವು ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ – Kannada News | Bigg Boss Kannada 12: Ashwini against asks Rakshita’s apology

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿಯುವ ಹಂತ ಬಂದಿದೆ. ಇನ್ನೊಂದು ವಾರವಷ್ಟೆ ಬಾಕಿ ಇದೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳೂ ಸಹ ತಮಗೆ ತೋಚಿದಂತೆ ಆಡಿಕೊಂಡು ಬಂದಿದ್ದಾರೆ. ಆದರೆ ಈ ಹಂತದಲ್ಲಿ ನಿಂತು ತಾವು ಹೀಗೆ ಆಡಬಹುದಿತ್ತು, ಅದೊಂದನ್ನು ಬದಲಾಯಿಸಬೇಕಿತ್ತು ಎಂಬ ಯೋಚನೆ ಸಹಜ, ಇಂದಿನ (ಭಾನುವಾರ) ಎಪಿಸೋಡ್​​ನಲ್ಲಿ ಸುದೀಪ್, ಸ್ಪರ್ಧಿಗಳಿಗೆ ಅಂಥಹದ್ದೊಂದು ಅವಕಾಶ ಕೊಟ್ಟಿದ್ದಾರೆ. ಸೀಸನ್​​ನಲ್ಲಿ ಯಾವುದಾದರೂ ಒಂದು ದಿನಕ್ಕೆ ಹೋಗಿ ಏನಾದರೂ ಬದಲಾವಣೆ ಮಾಡುವ ಅವಕಾಶ ಸಿಕ್ಕರೆ ಏನು ಬದಲಾವಣೆ ಮಾಡುತ್ತೀರ ಎಂದು ಕೇಳಿದ್ದಾರೆ. ಸ್ಪರ್ಧಿಗಳ ಉತ್ತರಗಳನ್ನು ಕೇಳಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Mark Movie: ಮೂರು ವಾರಗಳಲ್ಲಿ ‘ಮಾರ್ಕ್’ ಸಿನಿಮಾ ಗಳಿಸಿದ್ದೆಷ್ಟು? – Kannada News | Sudeep starrer Mark collects 51 crore rs in three weeks of its release

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆಯ್ತು. 2025 ರಲ್ಲಿ ಏಕೈಕ ಸುದೀಪ್ ಸಿನಿಮಾ ‘ಮಾರ್ಕ’. ಅದರ ಜೊತೆಗೆ ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಹ ಬಿಡುಗಡೆ ಆಗಿತ್ತು. ಈ ಎರಡೂ ಸಿನಿಮಾಗಳ ಬಿಡುಗಡೆಗೆ ಕೆಲ ದಿನಗಳ ಮುಂಚೆ ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಸಹ ತೆರೆಗೆ ಬಂದಿತ್ತು. ಇವೆಲ್ಲವುದರ ಜೊತೆಗೆ ‘ಮಾರ್ಕ್’ ಸಿನಿಮಾಕ್ಕೆ ಪೈರಸಿ ಸಮಸ್ಯೆ ಸಹ ಎದುರಾಗಿತ್ತು. ಇಷ್ಟೆಲ್ಲ ಸ್ಪರ್ಧೆ, ಬೆದರಿಕೆಗಳ ಮಧ್ಯವೂ ‘ಮಾರ್ಕ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಇದೀಗ ಸಿನಿಮಾ ಬಿಡುಗಡೆ ಆಗಿ ಮೂರು ವಾರಗಳಾಗಿದ್ದು, ಸಿನಿಮಾ ಗಳಿಸಿರುವುದೆಷ್ಟು?

ಮೂರನೇ ವಾರದ ಬಳಿಕವೂ ‘ಮಾರ್ಕ್’ ಮೇನಿಯಾ ಹಲವೆಡೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಸಹ ಮೂರನೇ ವಾರದ ಬಳಿಕವೂ ಹಲವು ಚಿತ್ರಮಂದಿರಗಳಲ್ಲಿ ‘ಮಾರ್ಕ್’ ಸಿನಿಮಾದ ಶೋಗಳು ತುಂಬಿದ ಗೃಹಗಳ ಪ್ರದರ್ಶನ ಕಾಣುತ್ತಿವೆ. ಮೊದಲ ಎರಡು ವಾರ ಉತ್ತಮ ಕಲೆಕ್ಷನ್ ಮಾಡಿರುವ ಸಿನಿಮಾವೀಗ ಮೂರನೇ ವಾರಕ್ಕೆ ಕಾಲಿಟ್ಟಿದೆ. ಮೂರನೇ ವಾರದ ವೇಳೆಗೆ ‘ಮಾರ್ಕ್’ ಸಿನಿಮಾದ ಒಟ್ಟು ಕಲೆಕ್ಷನ್ 50 ಕೋಟಿ ರೂಪಾಯಿ ದಾಟಿದೆ.

ಇಲ್ಲಿಯವರೆಗೆ ‘ಮಾರ್ಕ್’ ಸಿನಿಮಾ ಬರೋಬ್ಬರಿ 51 ಕೋಟಿ 30 ಲಕ್ಷವನ್ನು ಬಾಚಿಕೊಂಡಿದೆ. ಸುದೀಪ್ ಅವರ ಅಭಿಮಾನಿಗಳ ಜೊತೆಗೆ ಕುಟುಂಬ ಪ್ರೇಕ್ಷಕರು ಸಹ ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. 2024ರ ಅಂತ್ಯದಲ್ಲಿ ಬಿಡುಗಡೆ ಆಗಿದ್ದ ‘ಮ್ಯಾಕ್ಸ್’ ಸಿನಿಮಾ ಸಹ ಇದೇ ರೀತಿಯ ಮೋಡಿ ಮಾಡಿತ್ತು. ಆ ಸಿನಿಮಾ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ‘ಮಾರ್ಕ್’ ಸಿನಿಮಾ ಸಹ ‘ಮ್ಯಾಕ್ಸ್’ನ ಹಾದಿಯಲ್ಲೇ ಇದೆ.

ಇದನ್ನೂ ಓದಿ:‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್

ಟೈಟ್ ಆದ ಚಿತ್ರಕತೆ ಹೊಂದಿರುವ ‘ಮಾರ್ಕ್’ ಸಿನಿಮಾವನ್ನು ನಿರ್ದೇಶನ ಮಾಡಿರುವುದು ವಿಜಯ್ ಕಾರ್ತಿಕೇಯ. ‘ಮ್ಯಾಕ್ಸ್’ ಸಿನಿಮಾಕ್ಕೂ ಇವರದ್ದೆ ನಿರ್ದೇಶನ. ಈ ಸಿನಿಮಾದಲ್ಲಿ ಸುದೀಪ್ ಜೊತೆ ತಮಿಳಿನ ಯೋಗಿ ಬಾಬು, ಮಲಯಾಳಂನ ಶೈನ್ ಟಾಮ್ ಚಾಕೊ, ನವೀನ್ ಚಂದ್ರ ಮೊದಲಾದವರು ನಟಿಸಿದ್ದಾರೆ. ನಾಯಕಿಯರಾಗಿ ನಿಶ್ವಿಕಾ ನಾಯ್ಡು, ರೋಶಿಕಾ ಅವರುಗಳು ಇದ್ದಾರೆ. ಸಿನಿಮಾಕ್ಕೆ ಸತ್ಯಜ್ಯೋತಿ ಕ್ರಿಯೇಷನ್ಸ್ ಮತ್ತು ಸ್ವತಃ ಸುದೀಪ್ ಅವರ ನಿರ್ಮಾಣ ಸಂಸ್ಥೆಯಾದ ಕಿಚ್ಚ ಕ್ರಿಯೇಷನ್ಸ್ ಬಂಡವಾಳ ಹೂಡಿದೆ. ಸಿನಿಮಾದ ವಿತರಣೆಯಲ್ಲಿ ಸುದೀಪ್ ಪುತ್ರಿ ಸಾನ್ವಿ ಸಹ ಕೈಜೋಡಿಸಿರುವುದು ವಿಶೇಷ.

ಸುದೀಪ್ ಅವರು ಪ್ರಸ್ತುತ ಬಿಗ್​​ಬಾಸ್ ನಿರೂಪಣೆ ಮಾಡುತ್ತಿದ್ದು, ಮುಂದಿನ ವಾರ ಅದು ಸಹ ಅಂತ್ಯಗೊಳ್ಳಲಿದೆ. ಪ್ರಸ್ತುತ ಸುದೀಪ್ ಅವರು ‘ಬಿಲ್ಲ ರಂಗ ಭಾಷಾ’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಸ್ಕೇಲ್​​ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾ ಇದಾಗಿದ್ದು, ಸಿನಿಮಾ ಏಪ್ರಿಲ್ ತಿಂಗಳಲ್ಲಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಅದರ ಬಳಿಕ ರೊಮ್ಯಾಂಟಿಕ ಕಾಮಿಡಿ ಸಿನಿಮಾ ಒಂದರಲ್ಲಿ ಕಿಚ್ಚ ನಟಿಸಲಿದ್ದು, ತಮಿಳಿನ ಹೆಸರಾಂತ ನಿರ್ದೇಶಕರೊಬ್ಬರು ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪರಶುರಾಮ ಥೀಮ್​ ಪಾರ್ಕ್​​ನ ತಾಮ್ರ ಹೊದಿಕೆ ಕದ್ದಿದ್ದ ಕಳ್ಳರಿಬ್ಬರು ಸೆರೆ: ಕದ್ದವರು ಕಾಂಗ್ರೆಸ್ ಬ್ರದರ್ಸ್‌ ಎಂದ ಶಾಸಕ – Kannada News | Karkala Parashurama Park Copper Theft: Two Arrested, mla sunil kumar spark on congress

ಉಡುಪಿ, ಜನವರಿ 11: ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ (parashurama theme park) ತಾಮ್ರ ಹೊದಿಕೆ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ (arrest). ಮಂಗಳೂರು ಮೂಲದ ಆರಿಫ್(37) ಮತ್ತು ಅಬ್ದುಲ್ ಹಮೀದ್(32) ಬಂಧಿತರು. ಬಂಧಿತರಿಂದ 45 ಸಾವಿರ ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಮುಂದುವರಿದಿದೆ.

ಪ್ರತಿಮೆಯ ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪಿಸಿ ಯೋಜನಾ ಸ್ಥಳವನ್ನು ಮುಚ್ಚಲಾಗಿದೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿದ್ದ ದುಷ್ಕರ್ಮಿಗಳು, ಪರಶುರಾಮ ಸನ್ನಿಧಾನದ ಮೇಲ್ಚಾವಣಿಯಿಂದ ತಾಮ್ರದ ತಗಡುಗಳನ್ನು ಎಗರಿಸಿದ್ದರು. ಜನವರಿ 3ರಂದು ಘಟನೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು 3 ತಂಡ ರಚಿಸಿ ತನಿಖೆ ನಡೆಸಿದ್ದರು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

ಶಾಸಕ ಸುನಿಲ್ ಕುಮಾರ್ ಟ್ವೀಟ್​ 

ಮೇಲ್ಚಾವಣಿ ಕದ್ದವರು ಕಾಂಗ್ರೆಸ್​ನ ಬ್ರದರ್ಸ್: ಶಾಸಕ ಸುನಿಲ್ ಕುಮಾರ್

ಇನ್ನು ಈ ಬಗ್ಗೆ ಟ್ವೀಟ್​ ಮಾಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ಪರಶುರಾಮ ಥೀಂ ಪಾರ್ಕ್ ಮೇಲ್ಚಾವಣಿ ಕದ್ದವರು ಕಾಂಗ್ರೆಸ್​ನ ಬ್ರದರ್ಸ್..! ಥೀಂಪಾರ್ಕ್ ಪಾಳು ಬೀಳುವಂತೆ ಮಾಡಿದ್ದು ಕಾಂಗ್ರೆಸ್. ಕಳೆದ ವಾರ ಥೀಂ ಪಾರ್ಕ್​ನಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದಿದ್ದಾರೆ.

‘ಭಾರತದ ಶ್ರದ್ಧಾ ಕೇಂದ್ರಗಳನ್ನು ಘಜ್ನಿ, ಘೋರಿ, ಖಿಲ್ಜಿ, ಮೊಘಲರು ಒಡೆದರೆ ಥೀಂ ಪಾರ್ಕ್​ನ ಮೇಲ್ಚಾವಣಿ ಕದ್ದವರು ಅವರ ವಂಶಸ್ಥರು. ಕಾರ್ಕಳ ಕಾಂಗ್ರೆಸ್ ಮಖಂಡರು ಈಗ ಏನೆನ್ನುತ್ತಾರೆ? ಪರಶುರಾಮ ಸೃಷ್ಟಿ ಎಂದು ಹೆಸರಾದ ಕರಾವಳಿಯಲ್ಲಿ ಪರಶುರಾಮನ ಹೆಜ್ಜೆಗುರುತುಗಳು ಇರಬಾರದು ಎಂದು ಥೀಂ ಪಾರ್ಕ್ ಕಾಮಗಾರಿಯನ್ನು ನೀವು ಅರ್ಧಕ್ಕೆ ನಿಲ್ಲಿಸಿದ್ದಿರಿ’ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ

‘ಹಿಂದು ಭಾವನೆಗಳಿಗೆ ಘಾಸಿ ಮಾಡಿರುವ ಜತೆಗೆ ಪ್ರವಾಸೋದ್ಯಮಕ್ಕೆ ಅಡ್ಡಿ ಮಾಡಿದ ನಿಮ್ಮ ತಪ್ಪು ಮುಂದಿನ ಚುನಾವಣೆಯವರೆಗಲ್ಲ, ಶತಶತಮಾನಗಳವರೆಗೂ ಸ್ಥಾಯಿಯಾಗಿರುತ್ತದೆ. ಇಲ್ಲಿಂದಲೇ ಕಾಂಗ್ರೆಸ್ ಅಧಃಪತನದ ಕ್ಷಣಗಣನೆ ಪ್ರಾರಂಭ’ ಎಂದು ಶಾಸಕ ಸುನಿಲ್ ಕುಮಾರ್​​ ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿ ಈಗ ವಾಪಸ್ ಕೇಳುತ್ತಿರುವುದೇಕೆ ಕುಟುಂಬ? – Kannada News | Gold Treasure Found: Is Lakkundi ‘Treasure’ Family Property?

ಸಿಕ್ಕ ನಿಧಿ ಸರ್ಕಾರಕ್ಕೆ ಕೊಟ್ಟು ಕೆಟ್ಟಿತಾ ಕುಟುಂಬ?

ಗದಗ, ಜನವರಿ 11: ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬುವವರ ಮನೆ ಜಾಗದಲ್ಲಿ ಅಡಿಪಾಯ ಅಗೆಯುವ ಸಂದರ್ಭದಲ್ಲಿ 1 ಕೆಜಿಗೂ ಹೆಚ್ಚು ತೂಕದ ಚಿನ್ನಾಭರಣಗಳು ತುಂಬಿದ್ದ ತಂಬಿಗೆಯೊಂದು ದೊರೆತಿತ್ತು. ಹೀಗೆ ಸಿಕ್ಕ ನಿಧಿಯನ್ನು ತಾಯಿ-ಮಗ ಸರ್ಕಾರಕ್ಕೊಪ್ಪಿಸಿದ್ದರು. ಈ ಹಿನ್ನೆಲೆ ಕುಟುಂಬಕ್ಕೆ ಜಿಲ್ಲಾಡಳಿತ ಸನ್ಮಾನವನ್ನೂ ಮಾಡಿತ್ತು. ಆದರೆ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿ, ಸಿಕ್ಕಿರುವ ಚಿನ್ನ ನಿಧಿಯಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ ಅನುಮತಿಯಿಲ್ಲದೆ ಮನೆ ಕಟ್ಟಲು ಮುಂದಾಗಿದ್ದ ಕುಟುಂಬದ ಜಾಗವೂ ಕೈತಪ್ಪುವ ಹಂತದಲ್ಲಿದೆ.

‘ಇದು ನಿಧಿಯೇ ಅಲ್ಲ’

ಚಿನ್ನ ಸಿಕ್ಕ ಸ್ಥಳಕ್ಕೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಧಾರವಾಡ ವಲಯದ ಅಧೀಕ್ಷಕರಾದ ರಮೇಶ್ ಮೂಲಿಮನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಧಿ, ನಿಧಿ ಎಂದು ಹೇಳಲಾಗುತ್ತಿದೆ, ಆದರೆ ಇದು ನಿಧಿಯ ಲಕ್ಷಣಗಳನ್ನು ಹೊಂದಿಲ್ಲ. ಚಿನ್ನ ಯಾವ ಕಾಲಕ್ಕೆ ಸೇರಿದ್ದು ಎಂಬುದನ್ನು ತಾಂತ್ರಿಕವಾಗಿ ಪರಿಶೀಲಿಸಲಾಗುತ್ತದೆ. ಮೇಲ್ನೋಟಕ್ಕೆ ನೋಡಿದಾಗ ಬಹಳ ಹಳೆಯದಾಗಿ ಕಾಣಿಸುತ್ತಿಲ್ಲ. ಬಂಗಾರ ಮನೆಯಲ್ಲಿ ಸಿಕ್ಕಿದೆ ಅಂದ್ರೆ ಇದು ಕುಟುಂಬಕ್ಕೆ ಸೇರಿದ್ದು. ದೇವಸ್ಥಾನದಲ್ಲಿ ಸಿಕ್ಕಿದರೆ ಅದು ರಾಜಮನೆತನದ್ದು. ಇದು ರಾಜ ಮನೆತನಕ್ಕೆ ಸೇರಿದ್ದಾದರೆ ಲಾಂಛನ ಇರುತ್ತಿತ್ತು ಎಂದು ರಮೇಶ್ ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಬಂಗಾರ ವಾಪಾಸ್ ನೀಡಿ ಎನ್ನುತ್ತಿರುವ ಕುಟುಂಬ

ಅಧಿಕಾರಿಯ ಈ ಹೇಳಿಕೆಯ ಬೆನ್ನಲ್ಲೇ ಗ್ರಾಮಸ್ಥರು ಹಾಗೂ ಚಿನ್ನ ಸಿಕ್ಕ ಜಾಗದ ಮಾಲೀಕರು ಹೊಸ ಆಗ್ರಹ ಮುಂದಿಟ್ಟಿದ್ದಾರೆ. ನಿಧಿಯೇ ಅಲ್ಲ ಎಂದಾದರೆ, ಅದು ತಮ್ಮ ಪೂರ್ವಜರು ಮನೆಯಲ್ಲಿ ಇಟ್ಟುಕೊಂಡಿದ್ದ ಚಿನ್ನಾಭರಣಗಳಾಗಿದ್ದು, ಅವುಗಳನ್ನು ಕುಟುಂಬಕ್ಕೆ ವಾಪಸ್ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬಂಗಾರ ಮನೆ ಒಳಗೇ ಪತ್ತೆಯಾಗಿರುವುದರಿಂದ ಅದು ಕುಟುಂಬದ ಸ್ವತ್ತು ಎನ್ನುವುದು ಅವರ ವಾದವಾಗಿದೆ.

ಇದನ್ನೂ ಓದಿ ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ನಡೆಯುತ್ತಾ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!

ಚಿನ್ನ ಸಿಕ್ಕ ಜಾಗದಲ್ಲಿ ಉತ್ಖನನದ ಸಾಧ್ಯತೆ

ಈ ನಡುವೆ, ಚಿನ್ನ ಸಿಕ್ಕ ಸ್ಥಳವನ್ನು ನಿಷಿದ್ಧ ಪ್ರದೇಶವೆಂದು ಘೋಷಿಸಲಾಗಿದ್ದು, ಮನೆ ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತಿದೆ. ಪ್ರಾಚೀನ ಟಂಕಶಾಲೆ ಹಾಗೂ ರಾಜವಂಶಗಳ ಅವಶೇಷಗಳನ್ನು ಹೊಂದಿರುವ ಈ ಜಾಗದಲ್ಲಿ ರಾಜ್ಯ ಸರ್ಕಾರದಿಂದ ಮತ್ತಷ್ಟು ಉತ್ಖನನ ಕಾರ್ಯಕ್ಕೆ ಸಿದ್ಧತೆ ನಡೆದಿದೆ. ಮನೆಯ ಯಜಮಾನನನ್ನು ಕಳೆದುಕೊಂಡಿರುವ ಆ ಬಡ ಕುಟುಂಬ ಸಿಕ್ಕ ನಿಧಿಯನ್ನೂ ಸರ್ಕಾರಕ್ಕೊಪ್ಪಿಸಿ, ಮನೆಯನ್ನೂ ಕಟ್ಟಿಕೊಳ್ಳಲಾಗದೆ ಸಂಕಷ್ಟ ಎದುರಿಸುತ್ತಿದೆ. ತಾಯಿ ಹಾಗೂ ಚಿಕ್ಕ ಮಗನಿರುವ ಕುಟುಂಬಕ್ಕೆ ಸರ್ಕಾರ ಮನೆ ನಿರ್ಮಿಸಿಕೊಡಬೇಕು ಅಥವಾ ನಿವೇಶನ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Black Color Astrology: ಈ ರಾಶಿಯವರು ಕಪ್ಪು ಬಣ್ಣದ ಬಟ್ಟೆ ಧರಿಸಲೇಬೇಡಿ, ಕಾರಣ ಇಲ್ಲಿದೆ – Kannada News | Black Color Astrology: Zodiac Signs Who Should Avoid It for Good Luck

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 12 ರಾಶಿಗಳಲ್ಲಿ ಪ್ರತಿಯೊಂದು ರಾಶಿಗೂ ಅದರದೇ ಆದ ಆಳುವ ಗ್ರಹವಿದ್ದು, ಆ ಗ್ರಹಗಳ ಪ್ರಭಾವಕ್ಕೆ ಅನುಗುಣವಾಗಿ ಬಣ್ಣಗಳಿಗೂ ವಿಶೇಷ ಮಹತ್ವವಿದೆ. ಪ್ರತಿಯೊಂದು ಸಂಖ್ಯೆ, ಗ್ರಹ ಮತ್ತು ಚಕ್ರಕ್ಕೂ ಒಂದು ವಿಶಿಷ್ಟ ಬಣ್ಣ ಸಂಬಂಧ ಹೊಂದಿದೆ ಎಂದು ನಂಬಲಾಗುತ್ತದೆ. ಕೆಲವು ಬಣ್ಣಗಳು ಬಹುತೇಕ ಎಲ್ಲಾ ರಾಶಿಗಳಿಗೆ ಅನುಕೂಲಕರವಾಗಿದ್ದರೂ, ಕಪ್ಪು ಬಣ್ಣವು ಎಲ್ಲರಿಗೂ ಸಮಾನವಾಗಿ ಶುಭಕರವಲ್ಲ. ಜ್ಯೋತಿಷಿಗಳ ಪ್ರಕಾರ, ಕಪ್ಪು ಬಟ್ಟೆಗಳನ್ನು ಧರಿಸುವುದು ಕೆಲವು ರಾಶಿಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಅಂಥವರು ಈ ಬಣ್ಣವನ್ನು ತಪ್ಪಿಸುವುದು ಉತ್ತಮವೆಂದು ಸಲಹೆ ನೀಡಲಾಗುತ್ತದೆ.

ಮೇಷ ರಾಶಿಯವರಿಗೆ ಕಪ್ಪು ಬಣ್ಣ ಹೆಚ್ಚು ಹೊಂದಿಕೆಯಾಗುವುದಿಲ್ಲ ಎಂದು ಹೇಳಲಾಗುತ್ತದೆ. ಅವರು ಹೆಚ್ಚು ಕಪ್ಪು ಬಟ್ಟೆಗಳನ್ನು ಧರಿಸಿದರೆ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ ಹಾಗೂ ಕೆಲಸ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಅಡಚಣೆಗಳು ಎದುರಾಗಬಹುದು . ಆದ್ದರಿಂದ ಮೇಷ ರಾಶಿಯವರು ಕೆಂಪು, ಕಿತ್ತಳೆ, ಚಿನ್ನದ ಬಣ್ಣಗಳು ಅಥವಾ ಗುಲಾಬಿ ಮತ್ತು ಕೆನೆ ಬಣ್ಣದಂತಹ  ಚೈತನ್ಯ ತುಂಬಿದ ಬಣ್ಣಗಳನ್ನು ಆಯ್ಕೆ ಮಾಡುವುದು ಶುಭಕರವೆಂದು ಜ್ಯೋತಿಷ್ಯ ಶಾಸ್ತ್ರ ಸೂಚಿಸುತ್ತದೆ.

ಕರ್ಕಾಟಕ ರಾಶಿಯವರಿಗೂ ಕಪ್ಪು ಬಣ್ಣವನ್ನು ಅತಿಯಾಗಿ ಬಳಸುವುದು ಅನುಕೂಲಕರವಲ್ಲ ಎಂದು ಹೇಳಲಾಗುತ್ತದೆ. ಕಪ್ಪು ಬಣ್ಣವು ಅವರ ಮನಸ್ಸಿನಲ್ಲಿ ಅಸ್ಥಿರತೆ ಅಥವಾ ಭಾರೀ ಭಾವನೆಗಳನ್ನು ಹೆಚ್ಚಿಸಬಹುದು. ಈ ಕಾರಣದಿಂದ ಕರ್ಕಾಟಕ ರಾಶಿಯವರು ನೀಲಿ ಮತ್ತು ಹಳದಿ ಬಣ್ಣಗಳಂತಹ ಶಾಂತ ಮತ್ತು ಹಿತಕರ ಬಣ್ಣಗಳನ್ನು ಧರಿಸುವುದು ಉತ್ತಮವೆಂದು ನಂಬಲಾಗಿದೆ.

ಇದನ್ನೂ ಓದಿ: ಮೃತ ವ್ಯಕ್ತಿ ನಿಮ್ಮ ಶತ್ರುವೇ ಆಗಿದ್ದರೂ ಅವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡಬಾರದು?

ಕನ್ಯಾರಾಶಿಯವರ ವಿಷಯಕ್ಕೆ ಬಂದರೆ, ಕಪ್ಪು ಬಣ್ಣವು ಒತ್ತಡ, ಖಿನ್ನತೆ ಮತ್ತು ಆತಂಕವನ್ನು ಹೆಚ್ಚಿಸಬಹುದು ಎಂದು ಜ್ಯೋತಿಷಿಗಳು ಎಚ್ಚರಿಸುತ್ತಾರೆ. ಕನ್ಯಾರಾಶಿಯವರು ಸಹಜವಾಗಿಯೇ ಸೂಕ್ಷ್ಮ ಸ್ವಭಾವ ಹೊಂದಿರುವುದರಿಂದ, ಗಾಢ ಬಣ್ಣಗಳು ಅವರ ಮನಸ್ಥಿತಿಯ ಮೇಲೆ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ ಹಸಿರು, ಗುಲಾಬಿ ಹಾಗೂ ಚಿನ್ನದ ಬಣ್ಣದ ಬಟ್ಟೆಗಳು ಅವರಿಗೆ ಹೆಚ್ಚು ಅನುಕೂಲಕರವಾಗಿದ್ದು, ಮನಸ್ಸಿಗೆ ಶಾಂತಿ ಮತ್ತು ಸಮತೋಲನವನ್ನು ನೀಡುತ್ತವೆ ಎಂದು ಹೇಳಲಾಗುತ್ತದೆ.

ಒಟ್ಟಾರೆ ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದ ನೋಡಿದರೆ, ಕಪ್ಪು ಮತ್ತು ಗಾಢ ಬೂದು ಬಣ್ಣಗಳಂತಹ ಗಾಢ ಬಣ್ಣಗಳನ್ನು ದೀರ್ಘಕಾಲ ಧರಿಸುವುದರಿಂದ ಕೆಲ ರಾಶಿಗಳಲ್ಲಿ ನಕಾರಾತ್ಮಕ ಪರಿಣಾಮಗಳು ಉಂಟಾಗಬಹುದು ಎಂದು ಜ್ಯೋತಿಷಿಗಳು ಎಚ್ಚರಿಕೆ ನೀಡುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ತಮ್ಮ ರಾಶಿಗೆ ಅನುಗುಣವಾಗಿ ಶುಭ ಬಣ್ಣಗಳನ್ನು ಆಯ್ಕೆ ಮಾಡಿಕೊಂಡು ಧರಿಸಿದರೆ, ಜೀವನದಲ್ಲಿ ಅದೃಷ್ಟ, ಸಕಾರಾತ್ಮಕತೆ ಮತ್ತು ಸಂತೋಷ ಹೆಚ್ಚುತ್ತದೆ ಎಂಬ ನಂಬಿಕೆಯಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ – Kannada News | Modi at Somnath: Shaurya Yatra Honors Sacrifices, Celebrates Temple’s Enduring Spirit

ಅಹಮದಾಬಾದ್, ಜನವರಿ 11: ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಶೌರ್ಯ ಯಾತ್ರೆಯನ್ನು ನಡೆಸಿದ್ದಾರೆ. ಈ ವೇಳೆ ಕೇರಳದ ಚೆಂಡೆಯನ್ನು ಬಾರಿಸಿ ಎಲ್ಲರ ಗಮನ ಸೆಳೆದರು. ಇದೀಗ ಈ ವಿಡಿಯೋವನ್ನು ಬಿಜೆಪಿ ಈ ಬಗ್ಗೆ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದೆ. ಶೌರ್ಯ ಯಾತ್ರೆಯು ಶೌರ್ಯ ಮತ್ತು ತ್ಯಾಗವನ್ನು ಪ್ರತಿಬಿಂಬಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆಯನ್ನು ಒಳಗೊಂಡಿತ್ತು. ಪ್ರಧಾನಿ ಮೋದಿ ಮತ್ತೆ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು. ಆದರೆ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಅಲ್ಲೇ ನಿಂತಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version