ಇಶಾನಿಯ ಆಸೆಯಿಂದ ಬೆತ್ತಲೆಯಾದ ಬೆಂಗಳೂರಿನ ಯುವಕ: ಖಾತೆಯಿಂದ ಹೋಯಿತು ಲಕ್ಷ ಲಕ್ಷ ಹಣ! – Kannada News | AI Dating Fraud: Bengaluru Man Loses 1.5 Lakhs to Online Blackmail

ಬೆಂಗಳೂರು, ಜ.11: ಬೆಂಗಳೂರಿನ (Bengaluru) ಯುವಕರೇ ಎಚ್ಚರ… ಹುಡುಗಿ ಚೆನ್ನಾಗಿದ್ದಾಳೆ ಎಂದು ಫೋನ್​​​​ ಎತ್ತಿದ್ರೆ, ಎಕೌಂಟ್​​​ನಲ್ಲಿದ್ದ ಹಣ ಖಾಲಿಯಾಗುವುದು ಖಂಡಿತ. ಇಂತಹ ಮೋಸದ ಜಾಲದಿಂದ ಅದೆಷ್ಟೋ ಯುವಕರು ಬೆತ್ತಲೆ ಆಗಿರುವ ಪ್ರಕರಣಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಕರ್ನಾಟಕದಲ್ಲಿ ಡೇಟಿಂಗ್ ಅಪ್ಲಿಕೇಶನ್‌ಗಳಿಂದ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಯುವಕನೊಬ್ಬ ಡೇಟಿಂಗ್ ಅಪ್ಲಿಕೇಶನ್‌ ಡೌನ್​​ಲೋಡ್​​ ಮಾಡಿಕೊಂಡು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಿ ರಚಿಸಲಾದ “ಇಶಾನಿ” ಹೆಸರಿನ ಪ್ರೊಫೈಲ್​​ನಿಂದ ಬಂದ​​​​ ರಿಕ್ವೆಸ್ಟ್​​ಗೆ ಕ್ಲಿಕ್ ಮಾಡಿದ್ದಾನೆ. ಈ “ಇಶಾನಿ” ಎಂಬ ಎಐ ಹುಡುಗಿ, ಯುವಕನನ್ನು ವಿವಸ್ತ್ರಗೊಳಿಸಿ, ಆ ವಿಡಿಯೋವನ್ನು ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಇದರಿಂದ ಭಯಗೊಂಡ ಯುವಕ ನಕಲಿ ಖಾತೆಗೆ ಒಟ್ಟು 1.5 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದಾನೆ.

ಈಜಿಪುರದ ಈ ಯುವಕ, ಖಾಸಗಿ ಸಂಸ್ಥೆಯಲ್ಲಿ ಕ್ಲೌಡ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ಜನವರಿ 5 ರಂದು ಡೇಟಿಂಗ್ ಅಪ್ಲಿಕೇಶನ್ ಆ್ಯಪ್​​​ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ. ಇಬ್ಬರು ಕೂಡ ಏಕಾಂತವಾಗಿ ಮಾತನಾಡಲು ಶುರು ಮಾಡಿದ್ದರು. ಖಾಸಗಿ ವಿಚಾರಗಳನ್ನು ಹಂಚಿಕೊಂಡಿದ್ದರು. ನಂತರ ಈ ಇಬ್ಬರು ಕೂಡ ಮೊಬೈಲ್​​ ನಂಬರ್​​ ಶೇರ್​​ ಮಾಡಿಕೊಂಡು ಅಲ್ಲಿಯೂ ಮಾತನಾಡಲು ಶುರು ಮಾಡಿಕೊಂಡಿದ್ದರು ಎಂದು ದಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಅದೇ ದಿನ ಈ ಯುವಕನಿಗೆ ಯುವತಿ ಕಡೆಯಿಂದ ವಿಡಿಯೋ ಕಾಲ್​​ ಬಂದಿದೆ. ಬಟ್ಟೆಯನ್ನು ಬೆಚ್ಚಿ, ಆತನ ಮುಂದೆ ಬೆತ್ತಲೆಯಾಗಿದ್ದಾಳೆ. ನೀನು ಬಟ್ಟೆ ಬಿಚ್ಚು ಎಂದು ಹೇಳಿ, ಅವನನ್ನು ಬೆತ್ತಲೆ ಮಾಡಿದ್ದಾಳೆ. ಆತನ ಕೂಡ ಹುಡುಗಿಯ ತೆವಲಿನಲ್ಲಿ ಬಟ್ಟೆಯನ್ನು ಬಿಚ್ಚಿದ್ದಾನೆ. ವಿಡಿಯೋ ಕರೆ ಕೊನೆಗೊಳ್ಳುತ್ತದೆ. ಅಲ್ಲಿಯವರೆಗೆ ತಾನು ಮತ್ತು ಆಕೆ ಬೆತ್ತಲೆ ಆಗಿರುವ ವಿಡಿಯೋ ರೆಕಾರ್ಡ್​​ ಆಗಿದೆ ಎಂಬುದು ಆತನಿಗೆ ತಿಳಿದಿರುವುದಿಲ್ಲ. ಸ್ವಲ್ಪ ಸಮಯದ ನಂತರ, ಟೆಕ್ಕಿಗೆ ವೀಡಿಯೊ ಕರೆಯ ಸಮಯದಲ್ಲಿ ಸೆರೆಹಿಡಿಯಲಾದ ತನ್ನ ಖಾಸಗಿ ಚಿತ್ರಗಳ ಬಗ್ಗೆ ಸಂದೇಶ ಬಂದಿದೆ. ಈ ವೇಳೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಒಂದು ವೇಳೆ ಹಣ ನೀಡದಿದ್ದರೆ ಈ ವಿಡಿಯೋವನ್ನು ನಿನ್ನ ಸ್ನೇಹಿತರು, ಕುಟುಂಬಕ್ಕೆ ಕಳುಹಿಸಿವೆ. ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳುವೆ ಎಂದು ಹೇಳಿದ್ದಾಳೆ. ಇದರಿಂದ ಭಯಗೊಂಡ ಯುವಕ ಮೊದಲು 60 ಸಾವಿರ ಹಾಗೂ ನಂತರ 93,000 ರೂ.ಗಳನ್ನು ಕಳುಹಿಸಿದ್ದಾನೆ. ಇಷ್ಟು ಹಣ ನೀಡಿದ ನಂತರವೂ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ.

ಇದನ್ನೂ ಓದಿ: ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ

ಇದರಿಂದ ಬೇಸತ್ತು ಯುವಕ ತನ್ನ ಸ್ನೇಹಿತನಿಗೆ ಎಲ್ಲ ವಿಷಯ ಹೇಳಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ. ಅವರ ದೂರಿನ ಆಧಾರದ ಮೇಲೆ, ಕೇಂದ್ರ ಸೈಬರ್ ಅಪರಾಧ ಪೊಲೀಸ್ ಠಾಣೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 308 (ಸುಲಿಗೆ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನು ಈ ವಂಚನೆಗಾಗಿ ಎಐ ವಿಡಿಯೋವನ್ನು ಬಳಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಡೇಟಿಂಗ್ ಅಪ್ಲಿಕೇಶನ್‌ಗಳಿಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚುತ್ತಿವೆ ಮತ್ತು ಆನ್‌ಲೈನ್‌ನಲ್ಲಿ ಅಪರಿಚಿತರೊಂದಿಗೆ ಸಂವಹನ ನಡೆಸುವಾಗ ಬಳಕೆದಾರರು ಜಾಗರೂಕರಾಗಿರಬೇಕು ಎಂದು ಈ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ – Kannada News | Usman Khawaja shines on BBL return

ಕೆಲ ದಿನಗಳ ಹಿಂದೆಯಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ಆಸ್ಟ್ರೇಲಿಯಾ ಆಟಗಾರ ಉಸ್ಮಾನ್ ಖ್ವಾಜಾ ಇದೀಗ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಬಳಿಕ ನೇರವಾಗಿ ಟಿ20 ಪಂದ್ಯದಲ್ಲಿ ಕಣಕ್ಕಿಳಿದ ಖ್ವಾಜಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ದಿ ಗಬ್ಬಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಸಿಡ್ನಿ ಥಂಡರ್ ತಂಡಗಳು ಕಣಕ್ಕಿಳಿದಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 180 ರನ್​ಗಳು.

ಈ ಕಠಿಣ ಗುರಿ ಬೆನ್ನತ್ತಿದ ಬ್ರಿಸ್ಬೇನ್ ಹೀಟ್ ತಂಡದಕ್ಕೆ ಉಸ್ಮಾನ್ ಖ್ವಾಜಾ ಅತ್ಯುತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಖ್ವಾಜಾ ಸಿಡ್ನಿ ಥಂಡರ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು.

ಪರಿಣಾಮ ಉಸ್ಮಾನ್ ಖ್ವಾಜಾ ಬ್ಯಾಟ್​ನಿಂದ 3 ಸಿಕ್ಸರ್ ಹಾಗೂ 7 ಫೋರ್​ಗಳನ್ನು ಒಳಗೊಂಡಂತೆ ಕೇವಲ 48 ಎಸೆತಗಳಲ್ಲಿ 78 ರನ್​ಗಳು ಮೂಡಿಬಂದವು. ಈ ಅರ್ಧಶತಕ ನೆರವಿನೊಂದಿಗೆ ಬ್ರಿಸ್ಬೇನ್ ಹೀಟ್ ತಂಡವು 16.2 ಓವರ್​ಗಳಲ್ಲಿ 183 ರನ್ ಬಾರಿಸುವ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

 

Source link

ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ – Kannada News | Kannada actor Rakshit Shetty attends Nemotsava in Udupi

ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ (Udupi) ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ (Nemotsava) ಇದು. ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ಆಗಿರುವ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತ ಬಳಿಕ ರಕ್ಷಿತ್ ಶೆಟ್ಟಿ ಅವರು ವಾಪಸಾದರು. ಸದ್ಯ ಮುಂಬರುವ ಸಿನಿಮಾಗಳ ಸ್ಕ್ರಿಪ್ಟ್ ಕೆಲಸದಲ್ಲಿ ರಕ್ಷಿತ್ ಶೆಟ್ಟಿ ಅವರು ಬ್ಯುಸಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಕುತ್ತಿಗೆಗೆ ಕತ್ತಿ ಹಿಡಿದು ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು – Kannada News | Blades, Bikes and Bystanders: Amritsar Robbery Plays Out Like a Movie Scene

ಅಮೃತಸರ, ಜನವರಿ 11: ಪಂಜಾಬ್‌ನ ಅಮೃತಸರದಲ್ಲಿ ನಡೆದ ಆಘಾತಕಾರಿ ಹಗಲು ದರೋಡೆ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಸ್ತ್ರಸಜ್ಜಿತ ದಾಳಿಕೋರರು ಸಾರ್ವಜನಿಕರ ಮುಂದೆಯೇ ಆಭರಣ ವ್ಯಾಪಾರಿಯ ಮೇಲೆ ದಾಳಿ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಆಭರಣ ವ್ಯಾಪಾರಿಯನ್ನು ಮೊದಲು ಕಾರಿನಿಂದ ಗುದ್ದಿ, ನಂತರ ಕತ್ತಿಗಳನ್ನು ಹಿಡಿದ ಗೂಂಡಾಗಳು ಆತನ ಹಿಂದೆ ಓಡುತ್ತಿರುವುದು ಕಂಡುಬರುತ್ತಿದೆ.

ದಾಳಿಕೋರರು ಕತ್ತಿಗಳು ಸೇರಿದಂತೆ ಹರಿತವಾದ ಆಯುಧಗಳನ್ನು ಹೊಂದಿದ್ದರು. ಅವರು ಆಭರಣ ವ್ಯಾಪಾರಿಯನ್ನು ಸುತ್ತುವರೆದು ಹಿಂಸಾತ್ಮಕ ಹಲ್ಲೆ ನಡೆಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸುಮಾರು 425 ಗ್ರಾಂ ಚಿನ್ನವನ್ನು ಲೂಟಿ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 11th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 11: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇದರ ಬೆಲೆ (gold rate) ಗ್ರಾಮ್​ಗೆ 160 ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಮೊನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಬರೋಬ್ಬರಿ 9 ರೂ ಹೆಚ್ಚಿದೆ. ಮತ್ತೊಮ್ಮೆ ಇದರ ಬೆಲೆ 260 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,40,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,046 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,875 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,534 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,046 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,875 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,875 ರೂ
  • ಚೆನ್ನೈ: 12,900 ರೂ
  • ಮುಂಬೈ: 12,875 ರೂ
  • ದೆಹಲಿ: 12,890 ರೂ
  • ಕೋಲ್ಕತಾ: 12,875 ರೂ
  • ಕೇರಳ: 12,875 ರೂ
  • ಅಹ್ಮದಾಬಾದ್: 12,880 ರೂ
  • ಜೈಪುರ್: 12,890 ರೂ
  • ಲಕ್ನೋ: 12,890 ರೂ
  • ಭುವನೇಶ್ವರ್: 12,875 ರೂ

ಇದನ್ನೂ ಓದಿ: ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 577 ರಿಂಗಿಟ್ (12,783 ರುಪಾಯಿ)
  • ದುಬೈ: 503 ಡಿರಾಮ್ (12,358 ರುಪಾಯಿ)
  • ಅಮೆರಿಕ: 140 ಡಾಲರ್ (12,634 ರುಪಾಯಿ)
  • ಸಿಂಗಾಪುರ: 180.90 ಸಿಂಗಾಪುರ್ ಡಾಲರ್ (12,680 ರುಪಾಯಿ)
  • ಕತಾರ್: 501 ಕತಾರಿ ರಿಯಾಲ್ (12,403 ರೂ)
  • ಸೌದಿ ಅರೇಬಿಯಾ: 511 ಸೌದಿ ರಿಯಾಲ್ (12,297 ರುಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (12,505 ರುಪಾಯಿ)
  • ಕುವೇತ್: 40.97 ಕುವೇತಿ ದಿನಾರ್ (12,098 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 275 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 275 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:44 am, Sun, 11 January 26

Source link

ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್: ಮಹತ್ವದ ಸಾಕ್ಷ್ಯ ಲಭ್ಯ – Kannada News | Arvind Reddy Case Twist: Exclusive Photos Reveal Expensive Gifts to Sandalwood Actress

ಬೆಂಗಳೂರು, ಜನವರಿ 11: ಸ್ಯಾಂಡಲ್​ವುಡ್​ ನಟಿ ಮತ್ತು ಉದ್ಯಮಿ ಅರವಿಂದ್​ ರೆಡ್ಡಿ ನಂಟಿನ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಬಹಳ ಚರ್ಚೆಗೆ ಕಾರಣವಾಗಿದ್ದ ಈ ಪ್ರಕರಣದಲ್ಲಿ, ನಟಿಗೆ ಉದ್ಯಮಿ ಅರವಿಂದ್​ ರೆಡ್ಡಿ ಕೇವಲ ಕಾರು ಮಾತ್ರವಲ್ಲದೆ ಲಕ್ಷಾಂತರ ಮೌಲ್ಯದ ದುಬಾರಿ ಉಡುಗೊರೆಗಳನ್ನು ನೀಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಗಳು ಲಭ್ಯವಾಗಿವೆ.  ಅರವಿಂದ್​ ರೆಡ್ಡಿ ನಟಿಯೊಂದಿಗೆ ಲಿವಿನ್​ ರಿಲೇಶನ್​ಶಿಪ್​ನಲ್ಲಿದ್ದಾಗ, ಆಕೆಗೆ 7 ಲಕ್ಷ ಮೌಲ್ಯದ ಟಿವಿ, 1 ಲಕ್ಷ ಮೌಲ್ಯದ ಹಾಸಿಗೆ, 10 ಲಕ್ಷ ಮೌಲ್ಯದ ಫರ್ನಿಚರ್, 33 ಸಾವಿರ ಮೌಲ್ಯದ ಡೈನಿಂಗ್ ಸೆಟ್, 1.30 ಲಕ್ಷ ಮೌಲ್ಯದ ಬೆಡ್, ಮತ್ತು 15 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಾವಣಗೆರೆ: ಕೌಟುಂಬಿಕ ಕಲಹಕ್ಕೆ ಮನನೊಂದು ಬಿಜೆಪಿ ಮುಖಂಡ ಆತ್ಮಹತ್ಯೆ – Kannada News | A BJP leader committed suicide due to family feud

ತನ್ನದೇ ಕಾರಿನಲ್ಲಿ ಬೆಂಕಿಹಚ್ಚಿಕೊಂಡು ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆ

ದಾವಣಗೆರೆ, ಜನವರಿ 11: ಜಿಲ್ಲೆಯಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಬಿಜೆಪಿ ಮುಖಂಡ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇತ್ತೀಚೆಗೆ ಅವರ ಮಕ್ಕಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಮನನೊಂದ ಮುಖಂಡ ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿನ ನಾಗನೂರು ಸಮೀಪದ ತೋಟದಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ಚಂದ್ರಶೇಖರ್ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಿಂದ ಮನನೊಂದಿದ್ದ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಯುವತಿ ಆತ್ಮಹತ್ಯೆ ಕೇಸ್, ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರ ಎಸ್ಕೇಪ್

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾದಲ್ಲಿ ಯುವತಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರಾರಿಯಾಗಿದ್ದಾನೆ. ಜೆಡಿಎಸ್ ಸ್ಥಳೀಯ ನಾಯಕಿ ಚೈತ್ರಾ ಕೊಠಾರಕರ್ ಅವರ ಪುತ್ರ ಚಿರಾಗ್ ಕೊಠಾರಕರ್ ವಿರುದ್ಧ  ಆರೋಪ ಕೇಳಿಬಂದಿದ್ದು, ತನ್ನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಆತ ಪರಾರಿಯಾಗಿದ್ದಾನೆ.

ಇದನ್ನೋ ಓದಿ ಪ್ರೀತಿಸುವಂತೆ ಕಾಟ: ಜೆಡಿಎಸ್‌ ಸ್ಥಳೀಯ ನಾಯಕಿಯ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ

ಕಳೆದ ಕೆಲ ದಿನಗಳಿಂದ ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿಯ ನಿವಾಸಿ ರಿಶೇಲ್ ಡಿಸೋಜಾ (20) ಮನೆ ಬಳಿ ಬಂದು ಹೋಗುತ್ತಿದ್ದ ಚಿರಾಗ್, ತನ್ನ ಪ್ರೀತಿಸುವಂತೆ ರಿಶೇಲ್ಗೆ ಕಿರುಕುಳ ನೀಡುತ್ತಿದ್ದ. ಆದರೆ ರಿಶೇಲ್ ಮಾತ್ರ ಆತನ ಪ್ರೀತಿಯನ್ನು ಖಡಾ ಖಂಡಿತವಾಗಿ ನಿರಾಕರಿಸಿದ್ದಳು. ಆದರೂ ಬೆಂಬಿಡದ ಯುವಕ, ತನ್ನ ಪ್ರೀತಿ ನಿರಾಕರಿಸಿದ ನೀನು ಇದ್ರು ಸತ್ತ ಹಾಗೆ ಬೇಗ ಸತ್ತು ಹೋಗೆಂದು ಪಿಡಿಸುತ್ತಿದ್ದ. ಆತನ ಈ ದುರ್ವರ್ತನೆಯಿಂದ ಬೇಸತ್ತ ಯುವತಿ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರೀತಿ ನಿರಾಕರಿಸಿದ್ದಕ್ಕೆ ಚಿರಾಗ್ ನಿರಂತರ ಕಿರುಕುಳ ನೀಡಿದ್ದೇ ಆತ್ಮಹತ್ಯೆಗೆ ಕಾರಣವೆಂದು ಮೃತಳ ತಂದೆ ಕ್ರಿಸ್ತೋದ್ ಡಿಸೋಜಾ ದೂರು ನೀಡಿದ್ದಾರೆ. ಕದ್ರಾ ಪೊಲೀಸರು ಆರೋಪಿಗಾಗಿ ತಂಡ ರಚಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Sun Transit 2026: ಸೂರ್ಯ ಪೂರ್ವಾಷಾಢಾ ನಕ್ಷತ್ರದಿಂದ ಉತ್ತರಾಷಾಢಾಕ್ಕೆ ಸಂಚಾರ; ಈ ರಾಶಿಗೆ ಅದೃಷ್ಟದ ಸುರಿಮಳೆ! – Kannada News | Sun Transit 2026: Ravi Sanchara’s Auspicious and Inauspicious Effects on Zodiac Signs

ಸೂರ್ಯನು ಸದ್ಯ ಧನು ರಾಶಿಯ ಪೂರ್ವಾಷಾಢಾ ನಕ್ಷದಲ್ಲಿ ಇದ್ದು ಉತ್ತರಾಷಾಢಾ ನಕ್ಷತ್ರಕ್ಕೆ ಹೋಗುವನು. ಶುಕ್ರನ ಆಧಿಪತ್ಯದಿಂದ ತನ್ನ ಆಧಿಪತ್ಯಕ್ಕೆ ಹೋಗುವನು. ಉತ್ತಮ ಸ್ಥಿತಿಯಲ್ಲಿ ಇರುವ ಕಾರಣ ಫಲವೂ ಉತ್ತಮವಾಗಿರಲಿದೆ. ಸೂರ್ಯನು ಯಾವೆಲ್ಲ ರಾಶಿಗೆ ಶುಭವನ್ನು ಕೊಡುವನು ಎನ್ನುವುದನ್ನು ನೋಡಬಹುದು. ಮುಖ್ಯವಾಗಿ, ಆತ್ಮವಿಶ್ವಾಸ, ಆರೋಗ್ಯ, ಸರ್ಕಾರಿ ಕಾರ್ಯ, ಸಂಪತ್ತು, ತಂದೆಗೆ ಸಂಧಿಸಿದ ಕಾರ್ಯಗಳು ಅಗುವ ಕಾರಣ ಸೂರ್ಯಾನುಗ್ರಹ ಬೇಕಾಗುತ್ತದೆ. ಗುರುವಿನ ದೃಷ್ಟಿಯೂ ಇನ್ನಷ್ಟು ಪುಷ್ಟಿಯನ್ನು ನೀಡುತ್ತದೆ.

ಮೇಷ ರಾಶಿ:

ಸರ್ಕಾರ ಅಥವಾ ಧಾರ್ಮಿಕ ಕ್ಷೇತ್ರದಲ್ಲಿ ಬೆಳವಣಿಗೆ. ಹಂತ ಹಂತವಾಗಿ ಆದಾಯ ಹೆಚ್ಚಳ. ಅತಿವ್ಯಯ ತಪ್ಪಿಸಿ
ಭೂಮಿ ಅಥವಾ ಮನೆ, ಕಚೇರಿ, ಜಾಗ ಖರೀದಿ ಮಾಡುವಿರಿ. ಆರೋಗ್ಯದಲ್ಲಿ ತೊಡೆ, ಸೊಂಟದ ಬಗ್ಗೆ ಜಾಗ್ರತೆ ಬೇಕು. ವಿದ್ಯಾಭ್ಯಾಸದಲ್ಲಿ ಹೊಸ ವಿಷಯಗಳಿಗೆ ಒತ್ತು, ಪರೀಕ್ಷೆಯಲ್ಲಿ ಯಶಸ್ಸು ಆತ್ಮವಿಶ್ವಾಸದಿಂದ ಧೈರ್ಯ, ನಿರ್ಧಾರದಲ್ಲಿ ಸ್ಪಷ್ಟತೆ ಸಿಗಕಿದೆ.

ಮಿಥುನ ರಾಶಿ:

ಸಂಘಟನೆ, ಮಾರ್ಗದರ್ಶನ, ತರಬೇತಿಯ‌ ಉದ್ಯೋಗದಿಂದ ಲಾಭ. ಹಣಕಾಸಿಗೆ ಸಂಬಂಧಿಸದಂತೆ ಆದಾಯದಲ್ಲಿ ಸ್ಥಿರತೆ. ಭೂಮಿಯ ದಾಖಲೆ ಪರಿಶೀಲನೆ ಅಗತ್ಯ, ಲಾಭವೂ ಸಾಧ್ಯ. ಆರೋಗ್ಯ ರಕ್ಷಣೆಗೆ ವ್ಯಾಯಾಮ, ಆಹಾರ ಸಮತೋಲನವಿರಲಿ.
ವಿದ್ಯಾಭ್ಯಾಸದಲ್ಲಿ ಹಳೆಯ ವಿಚಾರಗಳು ಗಟ್ಟಿಯಾಗಲಿದೆ. ಆತ್ಮವಿಶ್ವಾಸ ಬೆಳವಣಿಗೆಯಾಗಿ ನಿರ್ಧಾರದಲ್ಲಿ ಸ್ಪಷ್ಟತೆ, ಪ್ರಶಂಸೆ ಪ್ರಾಪ್ತಿ.

ಸಿಂಹ ರಾಶಿ:

ಉದ್ಯೋಗದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ. ಹಣಕಾಸು ಸ್ಥಿರವಾಗುವ ಕಾರಣ ಮನಸ್ಸೂ ಸ್ಥಿರವಾಗಲಿದೆ. ಕೃಷಿ ಭೂಮಿ ಮತ್ತು ಮನೆ ಖರೀದಿಗೆ ಯಶಸ್ಸಿನ ಹೆಜ್ಜೆ.ಆರೋಗ್ಯದಲ್ಲಿ ಉಷ್ಣತೆ, ಸೊಂಟ, ಹೆಗಲು ನೋವಾಗಲಿದ್ದು ಜಾಗ್ರತೆ ಬೇಕು. ವಿದ್ಯಾಭ್ಯಾಸದಲ್ಲಿ ಪರೀಕ್ಷೆ ಫಲಕಾರಿಯಾಗಲಿದೆ.
ಆತ್ಮವಿಶ್ವಾಸವಿದ್ದರೆ ಸಾಮಾಜಿಕ ಗೌರವದಿಂದ ತೃಪ್ತಿ.

ಧನು ರಾಶಿ:

ಉದ್ಯೋಗದಲ್ಲಿ ನಾಯಕತ್ವ, ಹೊಣೆಗಾರಿಕೆಯನ್ನು ಯಶಸ್ವಿಯಾಗಿ ಪೂರ್ಣಮಾಡುವಿರಿ. ಹಣಕಾಸಿನಲ್ಲಿ ಹಂತ ಹಂತವಾಗಿ ವೃದ್ಧಿಯಿಂದ ನೆಮ್ಮದಿ ನಿಮ್ಮದು. ಚರಾಸ್ತಿಯ ಖರೀದಿಯನ್ನು ಮಾಡಲು ಒತ್ತಡ ಬರಲಿದೆ. ಆರೋಗ್ಯದಲ್ಲಿ ಉಷ್ಣತೆ, ರಕ್ತದೊತ್ತಡ ಅಧಿಕವಗಲಿದ್ದು, ಆಹಾರದ ಬಗ್ಗೆ ಜಾಗ್ರತೆ ಇರಲಿ. ವಿದ್ಯಾಭ್ಯಾಸದಲ್ಲಿ ಅಧ್ಯಯನ ಸುಸಂಪನ್ನವಗಲಿದೆ.
ಆತ್ಮವಿಶ್ವಾಸವಿದ್ದು ಧೈರ್ಯ, ಒತ್ತಡವಿಲ್ಲದೇ ಎಲ್ಲವನ್ನೂ ಸಾಧಿಸುವಿರಿ.

– ಲೋಹಿತ್ ಹೆಬ್ಬಾರ್

Source link

Bengaluru: ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ; ಪ್ರಯಾಣಿಕರು ಬದುಕಿದ್ದೇ ಪವಾಡ! – Kannada News | Auto Accident in Mahalakshmi Layout, Bengaluru Caught on CCTV

ಬೆಂಗಳೂರು, ಜನವರಿ 11: ರಸ್ತೆಗುಂಡಿಗೆ ಇಳಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿ ಆಟೋ ಪಲ್ಟಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ನ ನಾಲ್ಕನೇ ಕ್ರಾಸ್​​ನಲ್ಲಿ ನಡೆದಿದೆ. ಪಲ್ಟಿಯಾದ ರಭಸಕ್ಕೆ ಆಟೋದಿಂದ‌ ಪ್ರಯಾಣಿಕ ಹಾರಿ ಬಿದ್ದಿದ್ದರೆ, ಗ್ಲಾಸ್​​ ಒಡೆದು ಚಾಲಕ ಹೊರ ಬಂದಿದ್ದಾನೆ. ನೀರು ಲೀಕೇಜ್ ಆಗಿ ರಸ್ತೆಯಲ್ಲಿ ಗುಂಡಿ ಆಗಿದ್ದರೂ ಅದರ ಸುತ್ತ ಯಾವುದೇ ಬ್ಯಾರಿಕೇಡ್​​ ಹಾಕದಿರುವುದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

In Pics: ಪ್ರಧಾನಿ ಮೋದಿ ಸೋಮನಾಥ ಭೇಟಿ, ಓಂಕಾರ ಪಠಣ, ಆಗಸದಲ್ಲಿ ಡ್ರೋನ್​ಗಳ ಝಲಕ್, ಎಲ್ಲೆಲ್ಲೂ ಶಿವಭಕ್ತಿ ಮಯ – Kannada News | Swabhiman Parv at Somnath: PM Modi Recalls a Thousand Years of Resistance, shares pictures

ಸೋಮನಾಥ ದೇವಾಲಯದ ಇತಿಹಾಸವು ಹೋರಾಟ ಮತ್ತು ವಿಜಯೋತ್ಸವದ ಅದ್ಭುತ ಕಥೆಯಾಗಿದೆ. ಮೊಹಮ್ಮದ್ ಘಜ್ನಿ 1026 ರಲ್ಲಿ ದೇವಾಲಯದ ಮೇಲೆ ಮೊದಲ ಪ್ರಮುಖ ದಾಳಿಯನ್ನು ನಡೆಸಿದ್ದ. ಆ ದಾಳಿ ನಡೆದು ಸಾವಿರ ವರ್ಷಗಳು ಕಳೆದಿವೆ. ಭಾರತ ತನ್ನ ಪರಂಪರೆಯನ್ನು ಎಂದಿಗೂ ಮರೆಯುವುದಿಲ್ಲ. ಸೋಮನಾಥವು ನಮ್ಮ ಅಚಲ ನಂಬಿಕೆಯ ಕೇಂದ್ರವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ವಿದೇಶಿ ಆಕ್ರಮಣಕಾರರು ಇದನ್ನು ಹಲವಾರು ಬಾರಿ ನಾಶಮಾಡಲು ಪ್ರಯತ್ನಿಸಿದ್ದರು, ಆದರೆ ಪ್ರತಿ ಬಾರಿಯೂ ದೇವಾಲಯವು ಇನ್ನೂ ಹೆಚ್ಚಿನ ಭವ್ಯತೆಯಿಂದ ಎದ್ದು ನಿಂತಿತ್ತು. ಸ್ವಾತಂತ್ರ್ಯದ ನಂತರ, ಸರ್ದಾರ್ ವಲ್ಲಭಭಾಯಿ ಪಟೇಲ್ ಅದನ್ನು ಪುನರ್ನಿರ್ಮಿಸಲು ಪ್ರತಿಜ್ಞೆ ಮಾಡಿದ್ದರು. 1951 ರಲ್ಲಿ, ದೇಶದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಇದನ್ನು ಸಾರ್ವಜನಿಕರಿಗೆ ಅರ್ಪಿಸಿದರು. 2026 ಈ ಐತಿಹಾಸಿಕ ಪುನಃಸ್ಥಾಪನೆಯ 75 ನೇ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.

Source link

Exit mobile version