Headlines

ಕರ್ನಾಟಕದಾದ್ಯಂತ ಎರಡೇ ವರ್ಷಗಳಲ್ಲಿ 90 ಸಾವಿರ ಸರ್ಕಾರಿ ಭೂಮಿ ಅಕ್ರಮ ಒತ್ತುವರಿ! – Kannada News | Land Beat digital surveillance found 90000 Government Lands Encroached Across Karnataka in Just Two Years

ಬೆಂಗಳೂರು, ಜನವರಿ 19: ಕರ್ನಾಟಕದಲ್ಲಿ (Karnataka) ಕಳೆದ ಎರಡು ವರ್ಷಗಳಲ್ಲಿ 90 ಸಾವಿರದಷ್ಟು ಸರ್ಕಾರಿ ಜಾಗಗಳನ್ನು ಉತ್ತುವರಿ ಮಾಡಿಕೊಂಡಿರುವ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಸರ್ಕಾರಿ ಭೂಮಿಯ ಸಂರಕ್ಷಣೆಗಾಗಿ ತಂತ್ರಜ್ಞಾನ ಆಧಾರಿತ ಪ್ರಯತ್ನವಾಗಿ ಕಂದಾಯ ಇಲಾಖೆಯು ‘ಲ್ಯಾಂಡ್ ಬಿಟ್ ಡಿಜಿಟಲ್ ಸರ್ವೈಲೆನ್ಸ್ (Land Beat digital surveillance)’ ಕಾರ್ಯಕ್ರಮ ಅನುಷ್ಠಾನಗೊಳಿಸಿತ್ತು. ಇದರಡಿ ಕಳೆದ ಎರಡು ವರ್ಷಗಳಲ್ಲಿ 13.9 ಲಕ್ಷಕ್ಕೂ ಹೆಚ್ಚು ಸರ್ಕಾರಿ ಭೂಮಿಗಳನ್ನು ಪರಿಶೀಲನೆ ಮಾಡಲಾಗಿದೆ. ಈ ವೇಳೆ, ಒತ್ತುವರಿ ವಿಚಾರ ಬಯಲಾಗಿದೆ. ಲ್ಯಾಂಡ್ ಬಿಟ್ ಡಿಜಿಟಲ್…

Read More

ಕಿರುತೆರೆಗೆ ಬಿ.ಸಿ. ಪಾಟೀಲ್ ಗ್ರ್ಯಾಂಡ್ ಎಂಟ್ರಿ; ರಾಯರ ಧಾರಾವಾಹಿಯಲ್ಲಿ ಮಹತ್ವದ ಪಾತ್ರ – Kannada News | BC Patil TV Debut: Sri Raghavendra Mahatme Welcomes Karatagiriya Desai

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಬಿ.ಸಿ. ಪಾಟೀಲ್ ಅವರು ಇದೇ ಮೊದಲ ಬಾರಿಗೆ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಜನಪ್ರಿಯ ಭಕ್ತಿ ಪ್ರಧಾನ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಅವರು ಹೊಚ್ಚಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ. ವೀಕ್ಷಕರ ಮನಗೆದ್ದಿರುವ ಈ ಸರಣಿಯಲ್ಲಿ ಬಿ.ಸಿ. ಪಾಟೀಲ್ ಅವರು ಅತ್ಯಂತ ಪ್ರಮುಖವಾದ ‘ಕರಟಗಿರಿಯ ದೇಸಾಯಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದಾ ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರನ್ನು ಈಗ ರಾಯರ ಮಹಿಮೆಯ…

Read More

ಪಹಲ್ಗಾಮ್ ದಾಳಿ ತನಿಖೆಯಲ್ಲಿ ಮಹತ್ವದ ಸುಳಿವು: ಉಗ್ರರು ಬಳಸಿದ್ದ ಫೋನ್​ಗೆ ಪಾಕಿಸ್ತಾನ ಬ್ಯಾಂಕ್​ ಲಿಂಕ್

ಶ್ರೀನಗರ, ಜೂನ್ 01: ಕಳೆದ ವರ್ಷ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌(Pahalgam)ನಲ್ಲಿ ನಡೆದ ಭಯೋತ್ಪಾದಕ ದಾಳಿಯ ತನಿಖೆಯನ್ನು ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಜಮ್ಮು-ಕಾಶ್ಮೀರ ಪೊಲೀಸರಿಗೆ ಅತ್ಯಂತ ಪ್ರಮುಖ ಸುಳಿವು ಲಭ್ಯವಾಗಿದೆ. ದಾಳಿ ನಡೆಸಿದ ಉಗ್ರರು ಬಳಸಿದ್ದ ಎರಡು ಪ್ರಮುಖ ಮೊಬೈಲ್ ಫೋನ್‌ಗಳ ಮೂಲವನ್ನು ಪತ್ತೆಹಚ್ಚಲಾಗಿದ್ದು, ಅದರಲ್ಲಿ ಒಂದು ಫೋನ್‌ಗೆ ಪಾಕಿಸ್ತಾನದ ಕರಾಚಿ ಮೂಲದ ಪ್ರಮುಖ ಬ್ಯಾಂಕ್‌ವೊಂದು ಹಣಕಾಸು ನೆರವು ನೀಡಿರುವುದು ತನಿಖೆಯಲ್ಲಿ ಬಯಲಾಗಿದೆ . ಈ ಕುರಿತು ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದೆ. ದಾಳಿಕೋರರ…

Read More

ಟಾಕ್ಸಿಕ್ ಟೀಸರ್: ಹಸಿಬಿಸಿ ದೃಶ್ಯ ನೋಡಿ ರುಕ್ಮಿಣಿ ವಸಂತ್ ಅಭಿಮಾನಿಗಳಿಗೆ ಆತಂಕ – Kannada News | Will Rukmini Vasanth be seen in Toxic movie bold scene with Yash

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಸಪ್ತ ಸಾಗರದಾಚೆ ಎಲ್ಲೋ’, ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳಲ್ಲಿ ಅವರು ಗಮನಾರ್ಹವಾಗಿ ನಟಿಸಿದ್ದಾರೆ. ಈಗ ಅವರಿಗೆ ದೊಡ್ಡ ದೊಡ್ಡ ಅವಕಾಶಗಳು ಸಿಗುತ್ತಿವೆ. ‘ಟಾಕ್ಸಿಕ್’ (Toxic) ಸಿನಿಮಾದಲ್ಲಿ ಕೂಡ ರುಕ್ಮಿಣಿ ವಸಂತ್ ಅವರು ಅಭಿನಯಿಸಿದ್ದು, ಅವರ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಆದರೆ, ‘ಟಾಕ್ಸಿಕ್’ ಟೀಸರ್ (Toxic Teaser) ನೋಡಿದ ಮೇಲೆ ಕೆಲವರಿಗೆ ಆತಂಕ ಕಾಡಲು ಶುರುವಾಗಿದೆ! ಅದಕ್ಕೆ ಕಾರಣ ಆಗಿರುವುದು ಒಂದು ಬೋಲ್ಡ್…

Read More

IPL 2026: ಆರ್​ಸಿಬಿ ವೇಗಿ ರಸಿಕ್ ಸಲಾಂಗೆ 2 ವರ್ಷ ನಿಷೇಧ ಹೇರಿದ್ದ ಬಿಸಿಸಿಐ..! – Kannada News | Rasikh Salam Dar’s IPL 2026 Brilliance: RCB’s Star Bowler Overcomes Age Fraud Ban

ಹಾಲಿ ಚಾಂಪಿಯನ್ ಆರ್​ಸಿಬಿ (RCB) 2026 ರ ಐಪಿಎಲ್​ನಲ್ಲೂ (IPL 2026) ತನ್ನ ಅಮೋಘ ಪ್ರದರ್ಶನವನ್ನು ಮುಂದುವರೆಸಿದೆ. ತಂಡದ ಈ ಗೆಲುವಿನ ಓಟಕ್ಕೆ ಸಾಂಘಿಕ ಪ್ರದರ್ಶನವೇ ಪ್ರಮುಖ ಕಾರಣವಾಗಿದೆ. ಅದರಲ್ಲೂ ಭಾರತದ ಯುವ ವೇಗಿ ರಸಿಕ್ ಸಲಾಂ ದಾರ್ (Rasikh Salam Dar) ಬೌಲಿಂಗ್ ವಿಭಾಗವನ್ನು ಕೂಡಿಕೊಂಡ ಬಳಿಕ ತಂಡ ಮತ್ತಷ್ಟು ಸಮತೋಲಿತವಾಗಿ ಕಾಣಿಸಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಈ ವೇಗದ ಬೌಲರ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿ, 4 ಓವರ್‌ಗಳಲ್ಲಿ ಕೇವಲ…

Read More

ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು? – Kannada News | Ganavi and Suraj Suicide Case Takes Love Angle, FIR Filed Against Womans Family

ಬೆಂಗಳೂರು, ಡಿಸೆಂಬರ್​​ 28: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ…

Read More

ಹೊಸ ವರ್ಷಾಚರಣೆ: ಹೋಟೆಲ್, ಬಾರ್-ಪಬ್‌ ಎಷ್ಟು ಗಂಟೆ ತನಕ ಓಪನ್? ಕಮಿಷನರ್ ಕೊಟ್ಟ 30 ಸೂಚನೆಗಳು – Kannada News | New Year 2026: Until What Time Are Hotels, Bars, and Pubs Open, Commissioner Issues 30 instructions

ಹೊಸ ವರ್ಷಾಚರಣೆ, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷವನ್ನು (New Year) ಭರ್ಜರಿಯಾಗಿ ವೆಲ್​ಕಂ ಮಾಡಲು ಜನರು ತುದಿಗಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಬೆಂಗಳೂರಿನ ಎಂಜಿ ರೋಡ್‌ನಲ್ಲಿ ಕುಣಿದು ಕುಪ್ಪಳಿಸಲು ಯುವ ಸಮೂಹ ಸಜ್ಜಾಗಿದೆ. ಇತ್ತ ಪೊಲೀಸರು ಸಭೆ ಮೇಲೆ ಸಭೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ (Seemanth Kumar) ನೇತೃತ್ವದಲ್ಲಿ ಹೋಟೆಲ್, ಪಬ್ ಮತ್ತು ಬಾರ್ ಮಾಲೀಕರ ಜೊತೆ ಸಭೆ ನಡೆಯಿತು. ಸಿಸಿಕ್ಯಾಮರಾ ಅಳವಡಿಕೆ, ಶಬ್ದ ಮಾಲಿನ್ಯ…

Read More

ರೂಂ ಬಿಲ್ ಪಾವತಿಸಲು ಹಣವಿರಲಿಲ್ಲ; ಅರ್ಹತಾ ಸುತ್ತನ್ನಾಡಿ ಫೈನಲ್​ಗೇರಿದ ಚ್ವಾಲಿನ್ಸ್ಕ ಯಶೋಗಾಥೆ – Kannada News

2026 ರ ಫ್ರೆಂಚ್ ಓಪನ್ (French Open 2026) ಅಂತಿಮ ಹಂತಕ್ಕೆ ಬಂದು ನಿಂತಿದೆ. ಇಂದು ನಡೆಯಲಿರುವ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ 24 ವರ್ಷದ ಪೋಲಿಷ್ ಟೆನಿಸ್ ಆಟಗಾರ್ತಿ ಮಜಾ ಚ್ವಾಲಿನ್ಸ್ಕ (Maja Chwalinska), ರಷ್ಯಾದ ಮೀರಾ ಆಂಡ್ರೀವಾ ಅವರನ್ನು ಎದುರಿಸಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ರಷ್ಯಾದ ಡಯಾನಾ ಶ್ನೈಡರ್ ಅವರನ್ನು 7-6(4), 6-4 ಸೆಟ್‌ಗಳಿಂದ ಸೋಲಿಸುವ ಮೂಲಕ ತಮ್ಮ ಮೊದಲ ಗ್ರ್ಯಾಂಡ್ ಸ್ಲ್ಯಾಮ್ ಫೈನಲ್​ಗೇರಿರುವ ಚ್ವಾಲಿನ್ಸ್ಕ, ತಮ್ಮ ಅದ್ಭುತ ಪ್ರದರ್ಶನದ ಮೂಲಕ ಟೆನಿಸ್…

Read More

ವಿಧಾನಸೌಧದ ಮುಂದೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ! ವ್ಯಕ್ತಿಯ ಸ್ಥಿತಿ ಗಂಭೀರ – Kannada News | Dr. Nagendra Shirur Attempts Suicide at Bengaluru Vidhana Soudha

ವಿಧಾನಸೌಧದ ಮುಂದೆ ವಿಷಸೇವಿಸಿದ ವ್ಯಕ್ತಿ! ಬೆಂಗಳೂರು, ಜನವರಿ 24: ಡಾ. ನಾಗೇಂದ್ರ ಶಿರೂರು ಎಂಬುವವರು ವಿಧಾನಸೌಧದ (Vidhana Soudha) ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಸೋಲದೇವನಹಳ್ಳಿ ಪ್ರದೇಶದಲ್ಲಿ ತಮಗೆ ಉಂಟಾದ ಸಮಸ್ಯೆ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದ ಅವರು ವಿಧಾನಸೌಧದ ಬಳಿ ಬಂದು ಈ…

Read More

ಕ್ರಿಸ್ಮಸ್ ಸಂಭ್ರಮದ ಮಧ್ಯೆ ಭೀಕರ ದುರಂತ: ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Nelamangala Car Accident: Two Family Members Killed, Four in Critical Condition

ಅಪಘಾತದಲ್ಲಿ ನುಜ್ಜುಗುಜ್ಜಾದ ಕಾರು ನೆಲಮಂಗಲ, ಡಿಸೆಂಬರ್​​ 26: ಕ್ರಿಸ್ ಮಸ್ ಹಬ್ಬದ ರಜೆಗೆಂದು ಹುಟ್ಟೂರಿಗೆ ಹೋಗಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (accident) ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು (death), ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತೋಟಗೆರೆ ಕ್ರಾಸ್​ನಲ್ಲಿ ಘಟನೆ ನಡೆದಿದೆ. ಗೌರಿಬಿದನೂರು ಮೂಲದ ಹರೀಶ್(39) ಮತ್ತು ವೀರಭದ್ರ(80) ಮೃತರು. ಕಾರಿನಲ್ಲಿದ್ದ ಗೌರಮ್ಮ, ಮೈತ್ರಿ, ಸಿರಿ, ವಂದನಾಗೆ ಗಂಭೀರ ಗಾಯಗಳಾಗಿದ್ದು, ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ….

Read More