ಭಾರತದ ನಂ.1 ಬಿಜಿಯೆಸ್ಟ್ ರೈಲು ‘ಪರಶುರಾಮ್ ಎಕ್ಸ್‌ಪ್ರೆಸ್’; ಮಂಗಳೂರು ಮಾರ್ಗದಲ್ಲೇ ಅತಿ ಹೆಚ್ಚು ದಟ್ಟಣೆ – Kannada News | Southern India’s Rail Demand Soars: Vande Bharat and Coastal Routes Lead Nation’s Busiest Trains

ತಿರುವನಂತಪುರಂ, ಏ.16: ಕಾಯ್ದಿರಿಸಿದ ಸೀಟುಗಳ ಬುಕ್ಕಿಂಗ್ ಅಂಕಿಅಂಶಗಳ ಪ್ರಕಾರ, ಮಂಗಳೂರು ಮತ್ತು ಕೇರಳದ ನಡುವೆ ಸಂಚರಿಸುವ ರೈಲುಗಳು ದೇಶದಲ್ಲೇ ಅತಿ ಹೆಚ್ಚು ಬೇಡಿಕೆಯನ್ನು ಪಡೆದುಕೊಂಡಿವೆ. ಅದರಲ್ಲೂ ವಿಶೇಷವಾಗಿ ಪರಶುರಾಮ್ ಎಕ್ಸ್‌ಪ್ರೆಸ್ ದಾಖಲೆಯ ಮಟ್ಟದ ಆಕ್ಯುಪೆನ್ಸಿಯನ್ನು (Occupancy) ದಾಖಲಿಸಿದೆ.ಪರಶುರಾಮ್ ಎಕ್ಸ್‌ಪ್ರೆಸ್ ಕನ್ಯಾಕುಮಾರಿಯಿಂದ ಮಂಗಳೂರಿಗೆ ಸಂಚರಿಸುವಾಗ 267.67% ಆಕ್ಯುಪೆನ್ಸಿಯನ್ನು ಹೊಂದಿದೆ. ಅಂದರೆ, ಕಾಯ್ದಿರಿಸಿದ ಪ್ರತಿಯೊಂದು ಸೀಟಿಗೆ ಸರಾಸರಿ ಸುಮಾರು ನಾಲ್ವರು ಪ್ರಯಾಣಿಕರು ಲಭ್ಯವಿರುತ್ತಾರೆ (ಒಬ್ಬರು ಇಳಿದ ನಂತರ ಮತ್ತೊಬ್ಬರು ಅದೇ ಸೀಟನ್ನು ಬುಕ್ ಮಾಡುವ ಪ್ರಕ್ರಿಯೆ ಸೇರಿ).

ಭಾರತದ ಟಾಪ್ 10 ಅತ್ಯಂತ ಜನದಟ್ಟಣೆಯ ರೈಲುಗಳ ಪೈಕಿ 8 ರೈಲುಗಳು ಕೇರಳ ಮತ್ತು ಕರ್ನಾಟಕದ ಕರಾವಳಿ ಮಾರ್ಗಗಳಲ್ಲಿ ಸಂಚರಿಸುತ್ತಿವೆ. ಮಂಗಳೂರು-ಕನ್ಯಾಕುಮಾರಿ, ತಿರುವನಂತಪುರಂ-ನವದೆಹಲಿ ಕೇರಳ ಎಕ್ಸ್‌ಪ್ರೆಸ್ ಈ ಪಟ್ಟಿಯಲ್ಲಿ ಮುಂಚೂಣಿಯಲ್ಲಿವೆ.

ಸೆಮಿ ಹೈಸ್ಪೀಡ್ ರೈಲುಗಳಲ್ಲಿ ತಿರುವನಂತಪುರಂ-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ 187.78% ಆಕ್ಯುಪೆನ್ಸಿಯೊಂದಿಗೆ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಮಂಗಳೂರು-ತಿರುವನಂತಪುರಂ ವಂದೇ ಭಾರತ್ ಕೂಡ 173.33% ದಟ್ಟಣೆಯನ್ನು ಹೊಂದಿದೆ.ಈ ಅಂಕಿಅಂಶಗಳು ದಕ್ಷಿಣ ಭಾರತದ, ವಿಶೇಷವಾಗಿ ಮಂಗಳೂರು ಮತ್ತು ಕೇರಳ ಮಾರ್ಗಗಳಲ್ಲಿನ ರೈಲ್ವೆ ವ್ಯವಸ್ಥೆಯ ಮೇಲಿರುವ ಅಗಾಧ ಒತ್ತಡವನ್ನು ಸಾಬೀತುಪಡಿಸಿವೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್

ಹೆಚ್ಚು ದಟ್ಟಣೆ ಇರುವ ಟಾಪ್ ರೈಲುಗಳು:

ಪರಶುರಾಮ್ ಎಕ್ಸ್‌ಪ್ರೆಸ್ (ಕನ್ಯಾಕುಮಾರಿ–ಮಂಗಳೂರು) – 267.67%

ಇಂದೋರ್ ಎಕ್ಸ್‌ಪ್ರೆಸ್ (ತಿರುವನಂತಪುರಂ ನೋರ್ತ್–ಇಂದೋರ್) – 266.24%

ಕೇರಳ ಎಕ್ಸ್‌ಪ್ರೆಸ್ (ತಿರುವನಂತಪುರಂ–ನವದೆಹಲಿ) – 259.88%

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗು ಬೇಕಂದ್ರೆ ನಿನ್ನ ಹೆಂಡ್ತಿನ ನನ್ನ ಜತೆ ಕಳ್ಸು ಎಂದ ಟಿಸಿಎಸ್ ಬಾಸ್: ಐಟಿ ಉದ್ಯೋಗಿಯ ಸ್ಫೋಟಕ ಹೇಳಿಕೆ – Kannada News | TCS Nashik Boss: Send Wife for Child, IT Employee Alleges Religious Conversion, Harassment

ನಾಸಿಕ್, ಏಪ್ರಿಲ್ 16: ನಾಸಿಕ್‌ನ ಟಿಸಿಎಸ್ (TCS) ಶಾಖೆಯಲ್ಲಿ ಬಯಲಾಗಿರುವ ಈ ಘಟನೆಗಳು ಕಾರ್ಪೊರೇಟ್ ಜಗತ್ತನ್ನೇ ಬೆಚ್ಚಿಬೀಳಿಸಿವೆ. ಕೇವಲ ಕೆಲಸದ ಒತ್ತಡದ ಬಗ್ಗೆ ಕೇಳುತ್ತಿದ್ದ ಐಟಿ ಕ್ಷೇತ್ರದಲ್ಲಿ, ಈಗ ಮತಾಂತರದ ಸಂಚು ಮತ್ತು ನೈತಿಕ ಅಧಃಪತನದ ಆಘಾತಕಾರಿ ಕಥೆಗಳು ಹೊರಬರುತ್ತಿವೆ. ಒಂದೆಡೆ ಮಹಿಳಾ ಉದ್ಯೋಗಿಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿಬರುತ್ತಿದ್ದರೆ, ಮತ್ತೊಂದೆಡೆ ಟಿಸಿಎಸ್‌ನ ನಾಸಿಕ್ ಶಾಖೆಯ ಪುರುಷ ಉದ್ಯೋಗಿಯೊಬ್ಬರು ತಮಗಾದ ಅಮಾನವೀಯ ಕಿರುಕುಳವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಇದು ಕೇವಲ ಕಚೇರಿಯ ಕಿರುಕುಳವಾಗಿರದೆ, ಒಬ್ಬ ವ್ಯಕ್ತಿಯ ಧರ್ಮ, ವೈಯಕ್ತಿಕ ಜೀವನ ಮತ್ತು ಘನತೆಯನ್ನು ಹತ್ತಿಕ್ಕುವ ವ್ಯವಸ್ಥಿತ ಸಂಚಿನಂತೆ ಕಾಣುತ್ತಿದೆ.

ನೈತಿಕತೆಯ ಎಲ್ಲ ಮಿತಿ ಮೀರಿದ ಬಾಸ್
ಇಂಡಿಯಾ ಟುಡೇ ಜೊತೆ ಮಾತನಾಡಿದ ಸಂತ್ರಸ್ತ ಉದ್ಯೋಗಿ, ಟೀಮ್ ಲೀಡರ್ ತೌಸಿಫ್ ಅತ್ತರ್ ಮತ್ತು ಸಹೋದ್ಯೋಗಿ ಡ್ಯಾನಿಶ್ ಶೇಖ್ ನೀಡಿದ ಕಿರುಕುಳದ ಬಗ್ಗೆ ವಿವರಿಸಿದ್ದಾರೆ. 2022ರಲ್ಲಿ ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಆರಂಭವಾದ ಈ ಕಿರುಕುಳ 2026ರ ಮಾರ್ಚ್‌ವರೆಗೆ ಮುಂದುವರೆದಿದೆ.

ಸಂತ್ರಸ್ತ ಉದ್ಯೋಗಿ ಮತ್ತು ಅವರ ಪತ್ನಿಗೆ ಹಲವು ವರ್ಷಗಳಿಂದ ಮಕ್ಕಳಾಗಿರಲಿಲ್ಲ. ಈ ಸೂಕ್ಷ್ಮ ವಿಷಯವನ್ನೇ ಗುರಿಯಾಗಿಸಿಕೊಂಡ ವ್ಯಕ್ತಿ, ವೈದ್ಯಕೀಯ ಚಿಕಿತ್ಸೆಯಿಂದ ಮಗು ಪಡೆಯಲು ಸಾಧ್ಯವಿಲ್ಲ, ಮಗು ಬೇಕಾದರೆ ನಿನ್ನ ಹೆಂಡತಿಯನ್ನು ನನ್ನ ಬಳಿಗೆ ಕಳುಹಿಸು ಎಂದು ವಿಕೃತವಾಗಿ ಹೇಳಿದ್ದಾರೆಂದು ಕಣ್ಣೀರಿಟ್ಟಿದ್ದಾರೆ.

ಮತ್ತಷ್ಟು ಓದಿ:
ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ಬಲವಂತದ ನಮಾಜ್ ಮತ್ತು ಮತಾಂತರದ ಸಂಚು
ಕಟ್ಟಾ ಹಿಂದೂ ನಂಬಿಕೆಯುಳ್ಳ ಈ ಉದ್ಯೋಗಿ ರುದ್ರಾಕ್ಷಿ ಮಾಲೆ ಧರಿಸುವುದನ್ನೇ ಆತ ವಿವಾದ ಮಾಡಿದ್ದ, 2023ರ ಈದ್ ಸಂದರ್ಭದಲ್ಲಿ ಸಂತ್ರಸ್ತನನ್ನು ಮನೆಗೆ ಕರೆದೊಯ್ದು, ಬಲವಂತವಾಗಿ ತಲೆಗೆ ಟೋಪಿ ಹಾಕಿ, ನಮಾಜ್ ಮಾಡಿಸಿ ಆ ಫೋಟೋಗಳನ್ನು ಕಂಪನಿಯ ಅಧಿಕೃತ ಗ್ರೂಪ್‌ಗಳಲ್ಲಿ ಹಂಚಿ ಅವಮಾನಿಸಲಾಗಿತ್ತು.

ಹಿಂದೂ ದೇವರುಗಳನ್ನು ಅಪಹಾಸ್ಯ ಮಾಡುವುದು, ಮಾಂಸಾಹಾರ ಸೇವಿಸಲು ಒತ್ತಾಯಿಸುವುದು ಮತ್ತು ಕಲ್ಮಾ ಪಠಿಸುವಂತೆ ಪೀಡಿಸುವುದು ನಿರಂತರವಾಗಿ ನಡೆಯುತ್ತಿತ್ತು. ಸಂತ್ರಸ್ತನ ತಂದೆಗೆ ಪಾರ್ಶ್ವವಾಯು ಆದಾಗ, ನಿಮ್ಮ ತಂದೆ ಇಸ್ಲಾಂಗೆ ಮತಾಂತರಗೊಂಡರೆ ಮಾತ್ರ ಚೇತರಿಸಿಕೊಳ್ಳುತ್ತಾರೆ ಎಂದು ಆರೋಪಿ ಹೇಳಿದ್ದ ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಕೆಲಸದ ಸ್ಥಳವೇ ಯುದ್ಧಭೂಮಿ
ಕೇವಲ ಮಾನಸಿಕವಲ್ಲದೆ ದೈಹಿಕವಾಗಿಯೂ ಸಂತ್ರಸ್ತನನ್ನು ಕಾಡಲಾಗಿತ್ತು. ಸಂತ್ರಸ್ತ ಪ್ರತಿಭಟಿಸಿದಾಗ ತೌಸಿಫ್ ಅತ್ತರ್ ಆತನ ಮೇಲೆ ಟೇಬಲ್ ಫ್ಯಾನ್ ಎಸೆದು ಕೊಲ್ಲುವ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಸಂತ್ರಸ್ತನನ್ನು ಕೆಲಸದಿಂದ ತೆಗೆಯಲು ಪ್ರಧಾನ ಕಚೇರಿಗೆ ಸುಳ್ಳು ದೂರುಗಳನ್ನು ನೀಡುವ ಮೂಲಕ ಆತನ ವೃತ್ತಿಜೀವನವನ್ನೇ ಹಾಳು ಮಾಡಲು ಈ ತಂಡ ಯತ್ನಿಸಿತ್ತು.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೌಸಿಫ್ ಅತ್ತರ್, ಡ್ಯಾನಿಶ್ ಶೇಖ್ ಮತ್ತು ಮಾನವ ಸಂಪನ್ಮೂಲ (HR) ವಿಭಾಗದ ನಿದಾ ಖಾನ್ ಸೇರಿದಂತೆ 9 ಮಂದಿಯನ್ನು ಬಂಧಿಸಿದ್ದಾರೆ. ಈ ತಂಡವು ಕೇವಲ ಈತನನ್ನು ಮಾತ್ರವಲ್ಲದೆ, ಮಹಿಳಾ ಉದ್ಯೋಗಿಗಳಿಗೂ ಲೈಂಗಿಕ ಕಿರುಕುಳ ನೀಡಿ ಮದುವೆಯಾಗಲು ಪೀಡಿಸುತ್ತಿತ್ತು ಎಂಬುದು ಎಫ್‌ಐಆರ್‌ನಿಂದ ತಿಳಿದುಬಂದಿದೆ.

ಈ ಘಟನೆಯು ಕಾರ್ಪೊರೇಟ್ ವಲಯದಲ್ಲಿ ಉದ್ಯೋಗಿಗಳ ಸುರಕ್ಷತೆ ಮತ್ತು ಅಲ್ಲಿ ನಡೆಯುತ್ತಿರುವ ಧಾರ್ಮಿಕ ಪ್ರಚೋದನೆಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ದೇಶದ ಪ್ರತಿಷ್ಠಿತ ಐಟಿ ಸಂಸ್ಥೆಯೊಂದರ ಒಳಗೆ ಇಂತಹ ಘಟನೆಗಳು ವರ್ಷಗಟ್ಟಲೆ ನಡೆಯುತ್ತಿದ್ದರೂ ಮ್ಯಾನೇಜ್‌ಮೆಂಟ್ ಗಮನಕ್ಕೆ ಬರದಿರುವುದು ಆಶ್ಚರ್ಯದ ಸಂಗತಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:39 am, Thu, 16 April 26

Source link

RCB ನಮಗೆ ಅವಮಾನ ಮಾಡಿದ್ದಾರೆ! ದೂರು ದಾಖಲಿಸಿದ CSK – Kannada News | IPL 2026: CSK complaint on RCB Match

IPL 2026: ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಅಂದರೆ ಅದು ಬರೀ ಪಂದ್ಯವಲ್ಲ, ಅದೊಂದು ಎಮೋಷನ್. ಈ ಬಾರಿಯ ‘ಸೌತ್ ಡರ್ಬಿ’ ಪಂದ್ಯವು ಬ್ಯಾಟ್-ಬಾಲ್ ಕಾಳಗವನ್ನು ಮೀರಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯ ವಿರುದ್ಧ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ (BCCI) ಅಧಿಕೃತ ದೂರು ನೀಡಿದೆ.

ವಿವಾದದ ಮೂಲವೇನು?

ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧ ಪಂದ್ಯದ ವೇಳೆ ಸಿಎಸ್‌ಕೆ ಆಟಗಾರರು ಔಟಾದಾಗ ಮತ್ತು ಕ್ರೀಡಾಂಗಣದಲ್ಲಿ ಪ್ರೇಕ್ಷಕರನ್ನು ರಂಜಿಸುವ ನೆಪದಲ್ಲಿ ಡಿಜೆ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ “ದೋಸೆ, ಇಡ್ಲಿ, ಸಾಂಬಾರ್, ಚಟ್ನಿ…” ಎಂಬ ಹಾಡನ್ನು ಪದೇ ಪದೇ ಪ್ಲೇ ಮಾಡಿದ್ದಾರೆ. ಈ ಹಾಡನ್ನು ಸಾಮಾನ್ಯವಾಗಿ ದಕ್ಷಿಣ ಭಾರತೀಯರನ್ನು, ವಿಶೇಷವಾಗಿ ತಮಿಳು ಜನರನ್ನು ಅಣಕಿಸಲು ಮೀಮ್‌ಗಳಲ್ಲಿ ಬಳಸಲಾಗುತ್ತದೆ. ಇದು ಸಿಎಸ್‌ಕೆ ಆಟಗಾರರು ಮತ್ತು ಮ್ಯಾನೇಜ್‌ಮೆಂಟ್‌ನ ಕೆಂಗಣ್ಣಿಗೆ ಗುರಿಯಾಗಿದೆ.

ಸಿಎಸ್‌ಕೆ ನೀಡಿದ ದೂರಿನಲ್ಲಿ ಏನಿದೆ?

ಚೆನ್ನೈ ಸೂಪರ್ ಕಿಂಗ್ಸ್‌ನ ಮ್ಯಾನೇಜಿಂಗ್ ಡೈರೆಕ್ಟರ್ ಕಾಶಿ ವಿಶ್ವನಾಥನ್ ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ದೂರಿನಲ್ಲಿರುವ ಮುಖ್ಯ ಅಂಶಗಳು ಈ ಕೆಳಗಿನಂತಿವೆ…

  • ಗೌರವಕ್ಕೆ ಧಕ್ಕೆ: “ದೋಸೆ ಇಡ್ಲಿ” ಹಾಡನ್ನು ವ್ಯಂಗ್ಯದ ರೂಪದಲ್ಲಿ ಬಳಸಿರುವುದು ಆಟಗಾರರ ಮತ್ತು ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದೆ. ಇದು ಕ್ರೀಡಾ ಮನೋಭಾವಕ್ಕೆ ವಿರುದ್ಧವಾದದ್ದು ಎಂದು ಅವರು ವಾದಿಸಿದ್ದಾರೆ.
  • ಅವಹೇಳನಕಾರಿ ಕಾಮೆಂಟ್: ಸಿಎಸ್‌ಕೆ ಆಟಗಾರರು ಔಟಾಗಿ ಪೆವಿಲಿಯನ್‌ಗೆ ಮರಳುವಾಗ ಆರ್​ಸಿಬಿ ನೇಮಿಸಿದ ಡಿಜೆ ಮೈಕ್‌ನಲ್ಲಿ ಕೆಲವು ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂಬುದು ತಂಡದ ಆರೋಪ.
  • ಅವಮಾನ: “ಡಿಜೆಗಳು ತವರು ತಂಡವನ್ನು ಬೆಂಬಲಿಸಲಿ, ಆದರೆ ಎದುರಾಳಿ ತಂಡವನ್ನು ಅವಮಾನಿಸುವುದು ಸರಿಯಲ್ಲ” ಎಂದು ಸಿಎಸ್‌ಕೆ ಸ್ಪಷ್ಟಪಡಿಸಿದೆ.

ಹಳೆಯ ದ್ವೇಷದ ಮುಂದುವರಿಕೆ?

ಈ ವಿವಾದಕ್ಕೆ 2025ರ ಐಪಿಎಲ್ ಸೀಸನ್‌ನ ನಂಟೂ ಇದೆ. ಕಳೆದ ವರ್ಷ ಆರ್‌ಸಿಬಿ ಆಟಗಾರ ಜಿತೇಶ್ ಶರ್ಮಾ ಈ ಹಾಡನ್ನು ಹಾಡಿರುವ ವಿಡಿಯೋ ವೈರಲ್ ಆಗಿತ್ತು. ಅಷ್ಟೇ ಅಲ್ಲದೆ, ಚನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದಾಗ ಅಲ್ಲಿನ ಡಿಜೆ ಕೂಡ ಇದಕ್ಕೆ ತಿರುಗೇಟು ನೀಡಲು ಪ್ರಯತ್ನಿಸಿದ್ದರು. ಆಗ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಮಧ್ಯಪ್ರವೇಶಿಸಿ ಇದನ್ನು ತಡೆದಿತ್ತು. ಈಗ ಬೆಂಗಳೂರಿನಲ್ಲಿ ಅದೇ ರೀತಿಯ ಘಟನೆ ಮರುಕಳಿಸಿರುವುದು ಸಂಘರ್ಷಕ್ಕೆ ಕಾರಣವಾಗಿದೆ.

ಬಿಸಿಸಿಐನ ಮುಂದಿನ ಹೆಜ್ಜೆ:

ಐಪಿಎಲ್ ಆಡಳಿತ ಮಂಡಳಿಯು ಈ ದೂರನ್ನು ಗಂಭೀರವಾಗಿ ಪರಿಗಣಿಸಿದೆ. ಕ್ರೀಡಾಂಗಣಗಳಲ್ಲಿ ಮನರಂಜನೆಯ ಹೆಸರಿನಲ್ಲಿ ವರ್ಣಭೇದ ಅಥವಾ ಪ್ರಾದೇಶಿಕ ನಿಂದನೆಯಂತಹ ಅಂಶಗಳು ನುಸುಳದಂತೆ ನೋಡಿಕೊಳ್ಳಲು ಹೊಸ ಮಾರ್ಗಸೂಚಿಗಳನ್ನು ಹೊರಡಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು?

ಒಟ್ಟಾರೆಯಾಗಿ, ಐಪಿಎಲ್ ಅಂಗಳದಲ್ಲಿ ತಂಡಗಳ ನಡುವಿನ ಪೈಪೋಟಿ ಆರೋಗ್ಯಕರವಾಗಿದ್ದಷ್ಟು ಕ್ರಿಕೆಟ್‌ಗೆ ಚಂದ. ತವರು ತಂಡವನ್ನು ಬೆಂಬಲಿಸುವುದು ಡಿಜೆಗಳ ಕರ್ತವ್ಯವಾದರೂ, ಅದು ಎದುರಾಳಿ ತಂಡದ ಗೌರವಕ್ಕೆ ಧಕ್ಕೆ ತರುವಂತಿರಬಾರದು ಎಂಬುದು ಕ್ರಿಕೆಟ್ ಅಭಿಮಾನಿಗಳ ಆಶಯ. ಈಗ ಬಿಸಿಸಿಐ ಈ ದೂರನ್ನು ಹೇಗೆ ನಿಭಾಯಿಸಲಿದೆ ಮತ್ತು ಮುಂಬರುವ ಪಂದ್ಯಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

Source link

RCB ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ನಿಕೋಲಸ್ ಪೂರನ್ – Kannada News | Nicholas pooran post match interview after RCB vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕಲೆಹಾಕಿದ್ದು ಕೇವಲ 146 ರನ್​ಗಳು ಮಾತ್ರ. 147 ರನ್​ಗಳ ಸುಲಭ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 15.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್​ಸಿಬಿ ತಂಡ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಇನ್ನು ಈ ಪಂದ್ಯದ ವೇಳೆ ಗಾಯಗೊಂಡಿದ್ದ ರಿಷಭ್ ಪಂತ್ ಬದಲಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸಿದ್ದರು. ಇದಾಗ್ಯೂ ಎಲ್​ಎಸ್​ಜಿ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗಲಿಲ್ಲ.

ಈ ಸೋಲಿನ ಬಳಿಕ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹಂಗಾಮಿ ನಾಯಕ ನಿಕೋಲಸ್ ಪೂರನ್, ಈ ಸೀಸನ್ ನಮಗೆ ನಿಜಕ್ಕೂ ಕಠಿಣವಾಗಿದೆ. ನಾವು ಬ್ಯಾಟಿಂಗ್‌ನಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡುವಲ್ಲಿ ಪದೇ ಪದೇ ವಿಫಲವಾಗುತ್ತಿದ್ದೇವೆ.

ಆರ್​ಸಿಬಿ ವಿರುದ್ಧ  ಕನಿಷ್ಠ 175 ರನ್ ಗಳಿಸಿದ್ದರೆ ನಾವು ಪೈಪೋಟಿ ನೀಡಬಹುದಿತ್ತು. ಆದರೆ ಬ್ಯಾಟಿಂಗ್ ಕ್ರಮಾಂಕದ ವೈಫಲ್ಯಕ್ಕೆ ಇಂದು ನಾವು ದೊಡ್ಡ ಬೆಲೆ ತೆತ್ತಿದ್ದೇವೆ. ಅಂದರೆ ಸೋಲಿಗೆ ನಮ್ಮ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದು ನಿಕೋಲಸ್ ಪೂರನ್ ಹೇಳಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದು ಸವಾಲಿನ ಕೆಲಸ. ಹುಡುಗರು ಮೈದಾನದಲ್ಲಿ ತುಂಬಾ ಶ್ರಮಪಡುತ್ತಿದ್ದಾರೆ, ಅದಕ್ಕೆ ಅವರಿಗೆ ಕ್ರೆಡಿಟ್ ಸಲ್ಲಬೇಕು. ಆದರೆ ಕ್ರೀಸ್‌ನಲ್ಲಿ ಜವಾಬ್ದಾರಿಯುತ ಆಟದ ಅವಶ್ಯಕತೆಯಿದೆ. ತಾಳ್ಮೆಯಿಂದಿದ್ದು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುವುದು ಮುಖ್ಯ ಎಂದು ಇದೇ ವೇಳೆ ಪೂರನ್ ಅಭಿಪ್ರಾಯಪಟ್ಟರು.

ನಿಕೋಲಸ್ ಪೂರನ್ ಅವರ ವೈಯಕ್ತಿಕ ಬ್ಯಾಟಿಂಗ್ ಕೂಡ ಈ ಬಾರಿ ದೊಡ್ಡ ಮಟ್ಟದ ಸದ್ದು ಮಾಡಿಲ್ಲ. ಈ ಬಗ್ಗೆ ಮಾತನಾಡಿದ ಅವರು, ನಾನು ಚೆಂಡನ್ನು ಚೆನ್ನಾಗಿ ಬಾರಿಸುತ್ತಿದ್ದೇನೆ, ಬ್ಯಾಟಿಂಗ್ ಫೀಲ್ ಚೆನ್ನಾಗಿದೆ. ಆದರೆ ದುರದೃಷ್ಟವಶಾತ್ ಅದು ದೊಡ್ಡ ಮೊತ್ತವಾಗಿ ಪರಿವರ್ತನೆಯಾಗುತ್ತಿಲ್ಲ. ನಾನು ಈ ಹಿಂದೆಯೂ ಇಂತಹ ಕಠಿಣ ಪರಿಸ್ಥಿತಿಗಳನ್ನು ಎದುರಿಸಿದ್ದೇನೆ, ಇದರಿಂದ ಹೇಗೆ ಹೊರಬರಬೇಕೆಂದು ನನಗೆ ತಿಳಿದಿದೆ. ಶೀಘ್ರದಲ್ಲೇ ಲಯಕ್ಕೆ ಮರಳುವ ನಂಬಿಕೆಯಿದೆ ಎಂದರು.

ಇದನ್ನೂ ಓದಿ: ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು?

ಒಟ್ಟಾರೆಯಾಗಿ, ಲಕ್ನೋ ತಂಡವು ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ಪುಟಿದೇಳಬೇಕಾದರೆ ತನ್ನ ಬ್ಯಾಟಿಂಗ್ ವಿಭಾಗವನ್ನು ಬಲಪಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಅದರಂತೆ ಏಪ್ರಿಲ್ 19 ರಂದು ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಗೆಲುವಿನ ಲಯಕ್ಕೆ ಮರಳಲಿದೆಯಾ ಕಾದು ನೋಡಬೇಕಿದೆ.

Source link

ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ: ಚಿಕ್ಕಮಗಳೂರು ಮೂಲದ ಕಿಲಾಡಿ ಮಿಥುನ್ ಬೆಂಗಳೂರಿನಲ್ಲಿ ಅರೆಸ್ಟ್! – Kannada News | Fake IAS Officer Arrested in Bengaluru: Chikkamagaluru Man Conned Doctors and Businessmen of Crores

ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್‌ಗಳ ಸಭೆ ನಡೆಸಿದ್ದ ಆರೋಪಿ ಮಿಥುನ್Image Credit source: tv9

ಬೆಂಗಳೂರು, ಏಪ್ರಿಲ್ 16: ತಾನು 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಎಂದು ನಂಬಿಸಿ, ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದ ಕಿಲಾಡಿ ಮಿಥುನ್ ಎಂಬಾತನನ್ನು ಬೆಂಗಳೂರಿನ (Bangalore) ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವಂಚಕ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ಮೂಲದವನಾಗಿದ್ದು, ಈತನ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಕೂಡ ಬಿದ್ದಿರುವುದು ಬೆಳಕಿಗೆ ಬಂದಿದೆ.

ವಂಚನೆಯ ಜಾಲ ಹೆಣೆದಿದ್ದು ಹೇಗೆ?

ಬಂಧಿತ ಮಿಥುನ್ ತಾನು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ವಿಭಾಗದ ಮುಖ್ಯಸ್ಥ ಹಾಗೂ ಆರೋಗ್ಯ ಸೌಧದಲ್ಲಿ ಉನ್ನತ ಅಧಿಕಾರಿಯಾಗಿದ್ದೇನೆ ಎಂದು ನಂಬಿಸಿದ್ದ. ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರಿಗೆ, ತಾನು ಐಎಎಸ್ ಅಧಿಕಾರಿ ಎಂದು ಪರಿಚಯ ಮಾಡಿಕೊಂಡಿದ್ದ ಈತ, ಸ್ವತಃ ಆಸ್ಪತ್ರೆಯಲ್ಲೇ ವೈದ್ಯರು ಮತ್ತು ನರ್ಸ್‌ಗಳ ಸಭೆ ನಡೆಸಿ ಎಲ್ಲರನ್ನೂ ನಂಬಿಸುವಲ್ಲಿ ಯಶಸ್ವಿಯಾಗಿದ್ದ.

41 ಲಕ್ಷ ರೂಪಾಯಿ ವಂಚನೆ

ಜಿಲ್ಲಾ ಸರ್ಜನ್ ಮೂಲಕ ಪರಿಚಯವಾದ ಶ್ರೇಯಸ್ ಮೆಡಿಕಲ್ ಮಾಲೀಕ ಸತೀಶ್ ಅವರಿಗೆ ಸುಮಾರು 1.8 ಕೋಟಿ ರೂಪಾಯಿ ಮೌಲ್ಯದ ಔಷಧ ಸರಬರಾಜು ಟೆಂಡರ್ ಕೊಡಿಸುವುದಾಗಿ ಮಿಥುನ್ ನಂಬಿಸಿದ್ದ. ಇದಕ್ಕಾಗಿ ಶೇ 20ರಷ್ಟು ಕಮಿಷನ್ ನೀಡಬೇಕೆಂದು ಒಪ್ಪಂದ ಮಾಡಿಕೊಂಡು, ಜಕ್ಕೂರು ಬಳಿ ಬರೋಬ್ಬರಿ 36 ಲಕ್ಷ ರೂ. ಸೇರಿದಂತೆ ಒಟ್ಟು 41 ಲಕ್ಷ ರೂಪಾಯಿಗಳನ್ನು ಪಡೆದು ವಂಚಿಸಿದ್ದಾನೆ.

ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಹೇಗೆ?

ತನ್ನ ಪ್ರಭಾವ ತೋರಿಸಲು ಬೆಂಗಳೂರಿನ ಓರ್ವ ಡಿಸಿಪಿ ಹೆಸರನ್ನು ಬಳಸಲು ಹೋಗಿ ಅಮೃತಹಳ್ಳಿ ಪೊಲೀಸರಿಗೆ ಅನುಮಾನ ಬರುವಂತೆ ಮಾಡಿದ್ದ. ಪೊಲೀಸರು ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತನ ಅಸಲಿ ಬಣ್ಣ ಬಯಲಾಗಿದೆ. ತಾನು 10 ಲಕ್ಷ ಜನರಲ್ಲಿ ಪರೀಕ್ಷೆ ಬರೆದು ಪಾಸಾದ 900 ಅಧಿಕಾರಿಗಳಲ್ಲಿ ಒಬ್ಬ ಎಂದು ಸುಳ್ಳು ಹೇಳಿ ಪ್ರಭಾವಿ ಸ್ವಾಮೀಜಿಗಳನ್ನೂ ಈತ ನಂಬಿಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಭೂಪ!

ಸದ್ಯ ಪೊಲೀಸರು ಜಿಲ್ಲಾ ಸರ್ಜನ್ ಡಾ. ಚಂದ್ರಶೇಖರ್ ಅವರನ್ನು ವಿಚಾರಣೆ ನಡೆಸುತ್ತಿದ್ದು, ಇನ್ನೂ ಹಲವು ಆಸ್ಪತ್ರೆ ಮಾಲೀಕರಿಗೆ ಈತ ವಂಚಿಸಿರುವ ಶಂಕೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಪತ್ತೆ ಆಗಿದ್ದ ದರ್ಶನ್ ಮಾಜಿ ಮ್ಯಾನೇಜರ್ ದಿಢೀರ್ ಪತ್ತೆ; ಹೇಳಿದ್ದೇನು? – Kannada News | Darshan’s Ex Manager Mallikarjun Resurfaces, Reveals Disappearance Reason

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದಾಗ ಸಾಕಷ್ಟು ಟೀಕೆಗಳು ಬಂದವು. ಇದೇ ವೇಳೆ ಅವರ ಮಾಜಿ ಮ್ಯಾನೇಜರ್ ಮಲ್ಲಿ ಅಲಿಯಾಸ್ ಮಲ್ಲಿಕಾರ್ಜುನ್ ವಿಷಯ ಕೂಡ ಮುನ್ನೆಲೆಗೆ ಬಂತು. ‘ಅವರನ್ನು ಕೊಲೆ ಮಾಡಲಾಗಿದೆ. ಈ ಪ್ರಕರಣದಲ್ಲಿ ತನಿಖೆ ಆಗಬೇಕು’ ಎಂದೆಲ್ಲ ಒತ್ತಾಯಿಸಲಾಯಿತು. ಈಗ ಈ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಎದುರಾಗಿದೆ. ಮಲ್ಲಿಕಾರ್ಜುನ್ ಅವರೇ ಎಲ್ಲರ ಎದುರು ಬಂದಿದ್ದು, ಇಷ್ಟು ದಿನ ತಲೆಮರಿಸಿಕೊಂಡಿದ್ದಕ್ಕ ಕಾರಣ ನೀಡಿದ್ದಾರೆ.

ಮಲ್ಲಿಕಾರ್ಜುನ ಅವರು ವೃತ್ತಿಯಲ್ಲಿ ನಿರ್ಮಾಪಕರಾಗಿದ್ದರು. ವಿತರಣೆ ಕೂಡ ಮಾಡುತ್ತಿದ್ದರು. ಅವರು ಯಶ್ ಅಭಿನಯದ ‘ಮೊದಲ ಸಲ’ ಚಿತ್ರದ ನಿರ್ಮಾಣದಲ್ಲಿ ಕೈ ಜೋಡಿಸಿದ್ದರು. ಅವರು ಹೋಟೆಲ್ ಉದ್ಯಮ ಕೂಡ ನಡೆಸುತ್ತಿದ್ದರು ಎನ್ನಲಾಗಿದೆ. ಆ ಬಳಿಕ ದರ್ಶನ್ ಮ್ಯಾನೇಜರ್ ಆದರು. ನಂತರ ಅವರು ಕೆಲವು ವರ್ಷ ಮಾಯ ಆದರು. ರೇಣುಕಾಸ್ವಾಮಿ ಕೊಲೆ ಪ್ರಕರಣ ಚರ್ಚೆಗೆ ಬಂದಾಗ ಮಲ್ಲಿಕಾರ್ಜುನ ನಾಪತ್ತೆ ಪ್ರಕರಣದ ತನಿಖೆಯೂ ಆಗಬೇಕು ಎಂಬ ಒತ್ತಾಯ ಕೇಳಿ ಬಂತು.

ಈಗ ಮಲ್ಲಿಕಾರ್ಜುನ ಪತ್ತೆಯಾಗಿದ್ದಾರೆ. ಇಂದು (ಏಪ್ರಿಲ್ 16) ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಬಗ್ಗೆ ಸುತ್ತೋಲೆ ನೀಡಿರೋ ಅವರು, ‘ನಾನು ಮಲ್ಲಿಕಾರ್ಜುನ್ ಬಿ ಸಂಕನಗೌಡರ. ಮೂಲತಃ ಗದಗದವನು. 18 ವರ್ಷಗಳ ಕಾಲ ನಾನು ಚಲನಚಿತ್ರ ಕ್ಷೇತ್ರದಲ್ಲಿ ಹಲವಾರು ಪ್ರಾಜೆಕ್ಟ್‌ಗಳಲ್ಲಿ ಸಹಾಯಕ ನಿರ್ದೇಶಕ ನಾಗಿ,ಸಹ ನಿರ್ದೇಶಕನಾಗಿ, ನಿರ್ಮಾಪಕನಾಗಿ, ವಿತರಕನಾಗಿ, ಕೆಲಸ ಮಾಡಿದ್ದೇನೆ. ಕೆಲವು ಅನಿವಾರ್ಯ ಕಾರಣಗಳಿಂದ, ವೈಯಕ್ತಿಕ ಸಮಸ್ಯೆಗಳ ಹಿನ್ನೆಲೆ ಮತ್ತು ಉದ್ಯಮದಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಕೆಲವು ವರ್ಷಗಳ ಹಿಂದೆ ನಾನು ಬೆಂಗಳೂರನ್ನು ತಾತ್ಕಾಲಿಕವಾಗಿ ಬಿಡುವಂತಹ ಪರಿಸ್ಥಿತಿ ಬಂತು’ ಎಂದು ಅವರು ನಾಪತ್ತೆ ಹಿಂದಿನ ಉದ್ದೇಶ ರಿವೀಲ್ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್ ಫಾರಂ ಹೌಸ್ ಮ್ಯಾನೇಜರ್ ಎನ್ನಲಾದ ವ್ಯಕ್ತಿಯ ಆತ್ಮಹತ್ಯೆ: ಪ್ರಕರಣದ ಮರು ತನಿಖೆ?

‘ಕೆಲವು ವರ್ಷಗಳಾದ ಮೇಲೆ ಮತ್ತೆ ನಾನು ವಾಪಾಸ್ ಬಂದಿದ್ದೀನಿ. ನನ್ನ ಮುಂದಿನ ಯೋಜನೆಗಳ ಬಗ್ಗೆ ನಿಮ್ಮೊಂದಿಗೆ ಮಾತನಾಡುತ್ತೇನೆ’ ಎಂದು ಅವರು ಹೇಳಿದ್ದಾರೆ. ಈ ವೇಳೆ ದರ್ಶನ್ ಬಗ್ಗೆಯೂ ಅವರು ಮಾತನಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಒಂದೇ ಒಂದು ವಿಕೆಟ್ ಪಡೆದ ಹೇಝಲ್​ವುಡ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ! ಕಾರಣವೇನು? – Kannada News | RCB vs LSG: Josh Hazlewood awarded the player of the match

IPL 2026: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 23ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್​ಗಳಲ್ಲಿ ಕೇವಲ 146 ರನ್​ಗಳಿಸಿ ಆಲೌಟ್ ಆಯಿತು.

ಹೀಗೆ ಎಲ್​ಎಸ್​ಜಿ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಲು ಮುಖ್ಯ ಕಾರಣ ಯುವ ವೇಗಿ ರಾಸಿಖ್ ಸಲಾಂ ದಾರ್, ಅನುಭವಿ ಬೌಲರ್​ಗಳಾದ ಭುವನೇಶ್ವರ್ ಕುಮಾರ್ ಹಾಗೂ ಜೋಶ್ ಹೇಝಲ್​ವುಡ್.

  • ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದಿದ್ದ ರಾಸಿಖ್ ಸಲಾಂ ದಾರ್ ಕೇವಲ 24 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು.
  • ಭುವನೇಶ್ವರ್ ಕುಮಾರ್ 4 ಓವರ್​ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದಿದ್ದರು.
  • ಜೋಶ್ ಹೇಝಲ್​ವುಡ್ 4 ಓವರ್​ಗಳಲ್ಲಿ 20 ರನ್ ನೀಡಿ 1 ವಿಕೆಟ್ ಕಬಳಿಸಿದ್ದರು.

ಆರ್​ಸಿಬಿ ಪರ ಮೂವರು ಅತ್ಯುತ್ತಮ ದಾಳಿ ಸಂಘಟಿಸಿದರೂ ಅಂತಿಮವಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿದ್ದು ಜೋಶ್ ಹೇಝಲ್​ವುಡ್​ಗೆ. ಇದರ ಬೆನ್ನಲ್ಲೇ 4 ಹಾಗೂ 3 ವಿಕೆಟ್​ಗಳನ್ನು ಕಬಳಿಸಿದ್ದರೂ ರಾಸಿಖ್ ಸಲಾಂ ಹಾಗೂ ಭುವನೇಶ್ವರ್ ಕುಮಾರ್​ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಯಾಕೆ ನೀಡಲಾಗಿಲ್ಲ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ…

ಎಕಾನಮಿ ರೇಟ್​: ಸಾಮಾನ್ಯವಾಗಿ ಬ್ಯಾಟರ್‌ಗಳ ಸ್ವರ್ಗ ಎನಿಸಿಕೊಂಡಿರುವ ಚಿನ್ನಸ್ವಾಮಿ ಮೈದಾನದಲ್ಲಿ ಜೋಶ್ ಹೇಝಲ್‌ವುಡ್ ರನ್ ಬಿಟ್ಟುಕೊಡಲು ಜಿಪುಣತನ ತೋರಿದರು. ತಮ್ಮ 4 ಓವರ್‌ಗಳ ಕೋಟಾದಲ್ಲಿ ಕೇವಲ 20 ರನ್ ನೀಡಿ 1 ಪ್ರಮುಖ ವಿಕೆಟ್ ಪಡೆದರು. ಅಂದರೆ ಕೇವಲ 5 ರನ್​ಗಳ ಎಕಾನಮಿ ರೇಟ್​ನಲ್ಲಿ ಅವರು ರನ್ ಬಿಟ್ಟು ಕೊಟ್ಟಿದ್ದರು. ಇದು ಟಿ20 ಕ್ರಿಕೆಟ್‌ನಲ್ಲಿ ಅತ್ಯಂತ ಅಪರೂಪದ ಸಾಧನೆ.

ಡಾಟ್ ಬಾಲ್​: ಹೇಝಲ್‌ವುಡ್ ತಮ್ಮ ವಿಶಿಷ್ಟವಾದ ‘ಹಾರ್ಡ್ ಲೆಂತ್’ ಮೂಲಕ ಎಲ್‌ಎಸ್‌ಜಿ ಬ್ಯಾಟರ್‌ಗಳನ್ನು ಕಟ್ಟಿಹಾಕಿದರು. ಅವರು ತಮ್ಮ 4 ಓವರ್​ಗಳಲ್ಲಿ ಬರೋಬ್ಬರಿ 13 ಡಾಟ್ ಬಾಲ್‌ಗಳನ್ನು ಎಸೆದಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ನಿಕೋಲಸ್ ಪೂರನ್ ವಿಕೆಟ್: ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಅವರ ವಿಕೆಟ್ ಪಡೆಯುವ ಮೂಲಕ ಲಕ್ನೋ ತಂಡದ ಮಧ್ಯಮ ಕ್ರಮಾಂಕಕ್ಕೆ ಆಘಾತ ನೀಡುವಲ್ಲಿಯೂ ಹೇಝಲ್​ವುಡ್ ಯಶಸ್ವಿಯಾದರು.

ಕಂಬ್ಯಾಕ್ ಪಂದ್ಯ: ಫಿಟ್​ನೆಸ್ ಸಮಸ್ಯೆ ಕಾರಣ ಜೋಶ್ ಹೇಝಲ್​ವುಡ್ ಸೀಸನ್‌ನ ಆರಂಭಿಕ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದರು. ಇದಾಗ್ಯೂ ಕಂಬ್ಯಾಕ್ ಪಂದ್ಯದಲ್ಲಿ ಮಾರಕ ದಾಳಿ ಸಂಘಟಿಸುವಲ್ಲಿ ಹೇಝಲ್​ವುಡ್ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ದಾಖಲೆಯಲ್ಲ… ಕಿಂಗ್ ಕೊಹ್ಲಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಧೂಳೀಪಟ

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಕೇವಲ ಒಂದು ವಿಕೆಟ್ ಪಡೆದಿದ್ದರೂ ಜೋಶ್ ಹೇಝಲ್​ವುಡ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಲಾಗಿದೆ.

Source link

ಬೆಂಗಳೂರಿನಲ್ಲಿ ‘ಲವ್ ಜಿಹಾದ್’ ಆರೋಪ: ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ ಜುಹೇಬ್ – Kannada News | Karnataka Love Jihad Concerns: Actress Assaulted in Bengaluru; Juheb Booked

ಬೆಂಗಳೂರು, ಏ,16: ರಾಜ್ಯದಲ್ಲಿ ಲವ್​​ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈಗಾಗಲೇ ಹಲವು ಕಡೆ ಲವ್​​​​​ ಜಿಹಾದ್​​​ ಕೃತ್ಯಕ್ಕೆ ಹಿಂದೂ ಹುಡುಗಿಯರು ಬಲಿಯಾಗಿರುವ ಘಟನೆಗಳು ಆಗ್ಗಾಗೆ ಬೆಳಕಿಗೆ ಬರುತ್ತಿದೆ. ಇತ್ತಿಚೆಗೆ ಹುಬ್ಬಳ್ಳಿಯಲ್ಲಿ ಜಿಮ್​​ ಟ್ರೈನರ್​​​​ ಹಿಂದೂ ಹುಡುಗಿಯ ವಿಡಿಯೋ ಮಾಡಿ ಮತಾಂತರ ಆಗುವಂತೆ ಒತ್ತಾಯ ಮಾಡಿದ್ದಾನೆ ಎಂಬೆಲ್ಲ ಆರೋಪಗಳು ಕೇಳಿ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಲವ್​​ ಜಿಹಾದ್​​​ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಡೆಲ್​ ಹಾಗೂ ನಟಿಯೊಬ್ಬರು ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದನ್ನು ವೈರಲ್​ ಆಗಿದೆ. ಈ ವಿಡಿಯೋವನ್ನು @KarnatakaPortfolio ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ರಾಜಧಾನಿಯ ಫ್ರೇಜರ್ ಟೌನ್‌ನಲ್ಲಿ ಈ ಪ್ರಕರಣ ನಡೆದಿದೆ ಎಂದು ಹೇಳಲಾಗಿದೆ.

ಮದುವೆಯಾಗುವಂತೆ ಒತ್ತಾಯಿಸಿ, ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಮನಬಂದಂತೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಮತ್ತು ನಟಿಯಾಗಿದ್ದು, ಮಾಡೆಲಿಂಗ್ ಇಂಡಸ್ಟ್ರಿಯಲ್ಲಿರುವ ಜುಹೇಬ್ ಎಂಬಾತನ ಪರಿಚಯವಾಗಿತ್ತು. ಆರಂಭದಲ್ಲಿ ಕೆಲಸದ ನಿಮಿತ್ತ ಭೇಟಿಯಾಗಿದ್ದ ಇವರು ನಂತರ ಸ್ನೇಹಿತರಾಗಿದ್ದರು.

ಇಲ್ಲಿದೆ ನೋಡಿ ವಿಡಿಯೋ:

2024 ರಿಂದ ಜುಹೇಬ್ ಯುವತಿಯ ಹಿಂದೆ ಬಿದ್ದಿದ್ದು, ತನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆದರೆ ಯುವತಿ ಆತನನ್ನು ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿಯು, “ನೀನು ನನ್ನನ್ನು ಮದುವೆಯಾಗದಿದ್ದರೆ ನಿನ್ನನ್ನು ಕೊಲೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಲು ಪ್ರಾರಂಭಿಸಿದ್ದ. ಯುವತಿಯು ಫ್ರೇಜರ್ ಟೌನ್‌ನಲ್ಲಿದ್ದಾಗ ಆರೋಪಿಯು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಯುವತಿಯ ಮುಖ ಮತ್ತು ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ವಿಡಿಯೋದಲ್ಲಿ ಯುವತಿ ತನ್ನ ಗಾಯಗಳನ್ನು ತೋರಿಸಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ

ಜುಹೇಬ್ ತನ್ನ ವಾಟ್ಸಾಪ್ ಸಂದೇಶಗಳಲ್ಲಿ “ನಾನು ಆಕೆಯನ್ನು ಸಾಯಿಸುತ್ತೇನೆ,” “ಯುವತಿ ಸಾಯಲೇಬೇಕು,” ಎಂದು ಹಸಿಬಿಸಿಯಾಗಿ ಸಂದೇಶ ಕಳುಹಿಸಿದ್ದಾನೆ. ಅಲ್ಲದೆ, “ನನಗೆ ಹುಡುಗಿಯರ ಕೊರತೆಯಿಲ್ಲ, ಹಣದ ಕೊರತೆಯಿಲ್ಲ” ಎಂದು ಅಹಂಕಾರ ಮಾತುಗಳನ್ನು ಆಡಿದ್ದಾನೆ ಎಂದು ಆರೋಪಿಸಲಾಗಿದೆ.ಸಂತ್ರಸ್ತ ಯುವತಿಯು ಧೈರ್ಯವಾಗಿ ಫ್ರೇಜರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ಆರೋಪಿ ಜುಹೇಬ್‌ನನ್ನು ಈಗಾಗಲೇ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟ್ರಂಪ್ ಆಡಳಿತದ ಕಠಿಣ ನಿಲುವು: ರಷ್ಯಾ ಮತ್ತು ಇರಾನ್ ತೈಲ ವಿನಾಯಿತಿ ರದ್ದು, ಭಾರತದ ಮುಂದಿನ ನಡೆಯೇನು? – Kannada News | US Signals End to Waiver, Puts Spotlight on India’s Russian Oil Purchases

ವಾಷಿಂಗ್ಟನ್, ಏಪ್ರಿಲ್ 16: ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿ ಅಮೆರಿಕ, ರಷ್ಯಾ ಮತ್ತು ಇರಾನ್(Iran) ವಿರುದ್ಧ ತನ್ನ ‘ಆರ್ಥಿಕ ಅಸ್ತ್ರ’ವನ್ನು ಮತ್ತಷ್ಟು ಹರಿತಗೊಳಿಸಿದೆ. ಮಾರ್ಚ್ 11 ರ ಮೊದಲು ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ವಿಲೇವಾರಿ ಮಾಡಲು ನೀಡಲಾಗಿದ್ದ ವಿಶೇಷ ಪರವಾನಗಿಯನ್ನು ನವೀಕರಿಸದಿರಲು ಅಮೆರಿಕ ನಿರ್ಧರಿಸಿದೆ. ಇದರೊಂದಿಗೆ, ಇಂಧನಕ್ಕಾಗಿ ಈ ಎರಡು ದೇಶಗಳನ್ನು ಅವಲಂಬಿಸಿರುವ ರಾಷ್ಟ್ರಗಳಿಗೆ ಅಮೆರಿಕ ಕಠಿಣ ಎಚ್ಚರಿಕೆ ನೀಡಿದೆ.

ಭಾರತವು ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದು. ಇತ್ತೀಚಿನ ಸಡಿಲಿಕೆಯ ಅವಧಿಯಲ್ಲಿ ಭಾರತವು ರಷ್ಯಾದಿಂದ ಭಾರಿ ಪ್ರಮಾಣದ ತೈಲ ಖರೀದಿಸಿತ್ತು.ಕಳೆದ ವಾರವಷ್ಟೇ ಭಾರತವು ಏಳು ವರ್ಷಗಳ ಸುದೀರ್ಘ ವಿರಾಮದ ನಂತರ ಇರಾನ್‌ನಿಂದ 4 ಮಿಲಿಯನ್ ಬ್ಯಾರೆಲ್ ತೈಲವನ್ನು ಎರಡು ಬೃಹತ್ ಹಡಗುಗಳ ಮೂಲಕ ಪಡೆದುಕೊಂಡಿತ್ತು.

ಏನಿದು ಅಮೆರಿಕದ ಹೊಸ ನಿಲುವು?
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, “ರಷ್ಯಾ ಮತ್ತು ಇರಾನ್ ತೈಲದ ಮೇಲಿನ ಸಾಮಾನ್ಯ ಪರವಾನಗಿಯನ್ನು ನಾವು ಇನ್ನು ಮುಂದೆ ವಿಸ್ತರಿಸುವುದಿಲ್ಲ. ಮಾರ್ಚ್ 11 ರ ಒಳಗೆ ಸಮುದ್ರ ಮಾರ್ಗದಲ್ಲಿದ್ದ ತೈಲವನ್ನು ಈಗಾಗಲೇ ಬಳಸಲಾಗಿದೆ. ಹಾಗಾಗಿ ಈ ವಿನಾಯಿತಿಯನ್ನು ಮುಂದುವರಿಸುವ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.
ಭಾರತ ಸರ್ಕಾರವು ತನ್ನಲ್ಲಿ ಸಾಕಷ್ಟು ದಾಸ್ತಾನು ಇರುವುದಾಗಿ ಹೇಳಿಕೊಂಡಿದ್ದರೂ, ಅಮೆರಿಕದ ಈ ಕಠಿಣ ನಿಲುವು ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯ ಭೀತಿ ಹುಟ್ಟಿಸಿದೆ.

ಮತ್ತಷ್ಟು ಓದಿ: ಇರಾನ್ ಮತ್ತೆ ಮಾತುಕತೆಗೆ ಬರಲಿ, ಬರ್ದೇ ಇರ್ಲಿ ಡೋಂಟ್ ಕೇರ್: ಡೊನಾಲ್ಡ್​ ಟ್ರಂಪ್

ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದಾಗ, ತೈಲ ಬೆಲೆ ಏರಿಕೆಯನ್ನು ತಡೆಯಲು ಟ್ರಂಪ್ ಸರ್ಕಾರವು ಈ ವಿನಾಯಿತಿಗಳನ್ನು ನೀಡಿತ್ತು. ಆದರೆ ಈಗ ಆ ಅವಧಿ ಮುಕ್ತಾಯಗೊಳ್ಳುತ್ತಿದ್ದು, ಅಮೆರಿಕವು ಮತ್ತೆ ಈ ದೇಶಗಳ ಮೇಲೆ ‘ಗರಿಷ್ಠ ಒತ್ತಡ’ (Maximum Pressure) ಹೇರುವ ತಂತ್ರಕ್ಕೆ ಮರಳಿದೆ.
ಒಂದೆಡೆ ಅಮೆರಿಕ ಬಿಗಿ ನಿಲುವು ತಳೆದಿದ್ದರೆ, ಮತ್ತೊಂದೆಡೆ ಒಮಾನ್‌ನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಎರಡನೇ ಸುತ್ತಿನ ಶಾಂತಿ ಮಾತುಕತೆ ನಡೆಯುವ ಸಾಧ್ಯತೆ ಇದೆ. ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರಕ್ಕೆ ಇರಾನ್ ಅವಕಾಶ ನೀಡಬಹುದು ಎಂಬ ವರದಿಗಳ ಬೆನ್ನಲ್ಲೇ ತೈಲ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ.

ಭಾರತವು ತನ್ನ ಇಂಧನ ಭದ್ರತೆ ಮತ್ತು ಅಮೆರಿಕದೊಂದಿಗಿನ ರಾಜತಾಂತ್ರಿಕ ಸಂಬಂಧದ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಸವಾಲಿನಲ್ಲಿದೆ. ಏಪ್ರಿಲ್ ತಿಂಗಳಿನಲ್ಲಿ ಈ ನಿರ್ಬಂಧಗಳ ವಿನಾಯಿತಿ ಸಂಪೂರ್ಣ ಮುಕ್ತಾಯಗೊಳ್ಳಲಿದ್ದು, ಜಾಗತಿಕ ಮಾರುಕಟ್ಟೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದು ಕುತೂಹಲಕಾರಿಯಾಗಿದೆ.

ಭಾರತಕ್ಕೆ ಸಿಕ್ಕಿದ್ದ ಲಾಭವೇನು?
ಈ ನಿರ್ಬಂಧಗಳ ವಿನಾಯಿತಿಯ ಅತಿದೊಡ್ಡ ಫಲಾನುಭವಿ ಭಾರತ ಎಂದರೆ ತಪ್ಪಾಗಲಾರದು. ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟಿನ ನಡುವೆಯೂ ಭಾರತದ ಸಂಸ್ಕರಣಾಗಾರಗಳು ಸುಮಾರು 30 ಮಿಲಿಯನ್ ಬ್ಯಾರೆಲ್ ರಷ್ಯಾದ ತೈಲಕ್ಕೆ ಆರ್ಡರ್ ನೀಡಿದ್ದವು. ಕಳೆದ ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ಎರಡು ಬೃಹತ್ ತೈಲ ಹಡಗುಗಳು ಭಾರತದ ಬಂದರನ್ನು ತಲುಪಿದ್ದವು. 2018 ರ ಮೊದಲು ಭಾರತದ ಒಟ್ಟು ತೈಲ ಆಮದಿನಲ್ಲಿ ಇರಾನ್ ಪಾಲು ಶೇ. 11.5 ರಷ್ಟಿತ್ತು.

ಕುತೂಹಲಕಾರಿ ವಿಷಯವೆಂದರೆ, ಟ್ರಂಪ್ ಆಡಳಿತವು ರಷ್ಯಾಕ್ಕೆ ಈ ಹಿಂದೆ ನೀಡಿದ್ದ ವಿನಾಯಿತಿಯನ್ನು ಅಮೆರಿಕದ ವಿರೋಧ ಪಕ್ಷವಾದ ಡೆಮೋಕ್ರಾಟ್‌ಗಳು ತೀವ್ರವಾಗಿ ಖಂಡಿಸಿದ್ದರು. ಟ್ರಂಪ್ ನೀಡಿದ ವಿನಾಯಿತಿಯು ರಷ್ಯಾದ ಯುದ್ಧ ಯಂತ್ರಕ್ಕೆ ದಿನಕ್ಕೆ ಸುಮಾರು 150 ಬಿಲಿಯನ್ ಡಾಲರ್ ಹಣ ಸಿಗುವಂತೆ ಮಾಡಿತು. ಇದು ಉಕ್ರೇನಿಯನ್ ಮಕ್ಕಳ ಹತ್ಯೆಗೆ ರಷ್ಯಾ ಬಳಸುತ್ತಿರುವ ಹಣ ಎಂದು ಸೆನೆಟರ್ ರಿಚರ್ಡ್ ಬ್ಲೂಮೆಂಥಾಲ್ ಕಿಡಿಕಾರಿದ್ದರು.

ಇನ್ನು ಮುಂದೆ ಭಾರತವು ರಷ್ಯಾ ಅಥವಾ ಇರಾನ್‌ನಿಂದ ತೈಲ ಖರೀದಿಸಿದರೆ ಅಮೆರಿಕದ ಕಠಿಣ ನಿರ್ಬಂಧಗಳನ್ನು ಎದುರಿಸಬೇಕಾಗಬಹುದು. ಇದರಿಂದಾಗಿ ರಿಲಯನ್ಸ್‌ನಂತಹ ಪ್ರಮುಖ ಕಂಪನಿಗಳು ಈಗಾಗಲೇ ತಮ್ಮ ಆಮದು ಕಾರ್ಯತಂತ್ರವನ್ನು ಬದಲಾಯಿಸಲು ಶುರು ಮಾಡಿದ್ದು, ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ ಮತ್ತೆ ಬೇರೆ ದೇಶಗಳತ್ತ ಮುಖ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

‘ರಾಮಾಯಣ’ ಚಿತ್ರದ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿ ತಪ್ಪು ಮಾಡಿದ್ರಾ ಯಶ್? – Kannada News | Ramayana Movie: Yash Clarifies No Ram Ravan Meet in Part 1. Is it a Spoiler?

‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ರಾವಣನ ಪಾತ್ರ ಮಾಡುತ್ತಿದ್ದು, ರಣಬೀರ್ ಕಪೂರ್ ಅವರು ರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಅವರದ್ದು ಸೀತೆಯ ಪಾತ್ರ. ಈ ಚಿತ್ರ ಎರಡು ಭಾಗದಲ್ಲಿ ತೆರೆಗೆ ಬರಲಿದೆ. ಅದಕ್ಕೂ ಮೊದಲೇ ಯಶ್ ಅವರು ಸಂದರ್ಶನಗಳನ್ನು ನೀಡುತ್ತಿದ್ದಾರೆ. ಈ ರೀತಿ ಸಂದರ್ಶನ ನೀಡುವಾಗ ಅವರು ಒಂದು ಪ್ರಮುಖ ವಿಷಯ ರಿವೀಲ್ ಮಾಡಿದರೇ ಎನ್ನುವ ವಿಷಯ ಚರ್ಚೆಗೆ ಕಾರಣ ಆಗಿದೆ. ಆದರೆ, ಅದರ ಅಸಲಿಯತ್ತು ಬೇರೆಯೇ ಇದೆ.

ಯಶ್ ಅವರು ‘ಸಿನಿಮಾಕಾನ್ 2026’ರಲ್ಲಿ ಪಾಲ್ಗೊಂಡು ತಮ್ಮ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಯಶ್ ಅವರಿಗೆ ರಣಬೀರ್ ಕಪೂರ್ ಬಗ್ಗೆ ಕೇಳಲಾಯಿತು. ಆಗ ಯಶ್ ಅವರು ಮಾತನಾಡುತ್ತಾ, ‘ನಾನು ಹಾಗೂ ರಣಬೀರ್ ಕಪೂರ್ ರಾಮಾಯಣದಲ್ಲಿ ಈವರೆಗೆ ಒಟ್ಟಿಗೆ ಕಾಣಿಸಿಕೊಂಡಿಲ್ಲ’ ಎಂದು ಹೇಳಿದ್ದಾರೆ. ಅಂದರೆ, ಮೊದಲ ಭಾಗದಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುವುದಿಲ್ಲ ಎಂಬುದನ್ನು ಖಚಿತ ಮಾಡಿದಂತಾಯ್ತು.

ಆದರೆ, ಕೆಲವರು ಇದನ್ನು ಬೇರೆ ರೀತಿಯಲ್ಲಿ ಬಣ್ಣಿಸುತ್ತಿದ್ದಾರೆ. ‘ಯಶ್ ಹಾಗೂ ರಣಬೀರ್ ಕಪೂರ್​ ದೃಶ್ಯ ಮೊದಲ ಪಾರ್ಟ್​​​ನಲ್ಲಿ ಇರಲಿದೆ ಎಂದು ನಿರೀಕ್ಷಿಸಿದವರಿಗೆ ಇದು ನಿರಾಸೆ ಮೂಡಿಸಿದೆ. ಯಶ್ ದೊಡ್ಡ ಸ್ಪಾಯ್ಲರ್ ರಿವೀಲ್ ಮಾಡಿದ್ದಾರೆ’ ಎಂದೆಲ್ಲ ಹೇಳಿದರು.

ಇದನ್ನೂ ಓದಿ: ತಮ್ಮನ್ನು ಬೆಂಬಲಿಸದವರನ್ನು ಅಮೆರಿಕದಲ್ಲೂ ನೆನಪಿಸಿಕೊಂಡ ಯಶ್

ಆದರೆ, ಅಸಲಿಯತ್ತು ಹಾಗಿಲ್ಲ. ವಾಲ್ಮೀಕಿ ರಾಮಾಯಣದ ಪ್ರಕಾರ, ಲಂಕಾದಲ್ಲಿ ಅಂತಿಮ ಯುದ್ಧ ನಡೆಯುವವರೆಗೂ ರಾಮ ಮತ್ತು ರಾವಣ ಮುಖಾಮುಖಿಯಾಗಲಿಲ್ಲ. ಈ ಸಿನಿಮಾ ಎರಡು ಭಾಗದಲ್ಲಿ ಬರಲಿದೆ ಎಂದು ಮೊದಲೇ ಹೇಳಲಾಗಿದೆ. ಹೀಗಿರುವಾಗ ಯಶ್ ಹೇಳಿದ್ದು ಸ್ಪಾಯ್ಲರ್ ಹೇಗಾಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು, ‘ಇವರು ಕ್ಲೈಮ್ಯಾಕ್ಸ್​​ನ ಮೊದಲ ಭಾಗದಲ್ಲೇ ನಿರೀಕ್ಷೆ ಮಾಡಿತ್ತಿದ್ದಾರೆ’ ಅನಿಸುತ್ತದೆ ಎಂದು ಟೀಕೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 8:27 am, Thu, 16 April 26

Source link

Exit mobile version