ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು – Kannada News | Hindu Young Woman Escaped With Muslim Youth at Mangaluru, Case Booked In surathkal Police station

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್ ರಿಜಿಸ್ಟರ್ ಮದುವೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಇನ್ನೊಂದೆಡೆ ವಿಷಯ ತಿಳಿದ ಪೋಷಕರು, ಆಕೆ ಇದ್ದ ಪಿಜಿಗೆ ಬಂದು ವಿಚಾರಿಸಿದ್ದು, ಫೆಬ್ರವರಿ‌ 9ರಂದು ಪಿಜಿಯಿಂದ ತೆರಳಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ ಅಷ್ಟೇ. ಆದ್ರೆ, ಆಕೆ ಎಲ್ಲಿ ಹೋಗಿದ್ದಾಳೆ ಎನ್ನುವುದು ಗೊತ್ತಾಗಿಲ್ಲ. ಇದರಿಂದ ಭಯಗೊಂಡ ವೈಶಾಲಿ ಪೋಷಕರು, ನೀಡಿದ ದೂರಿನ ಮೇರೆಗೆ ಸುರತ್ಕಲ್ ಠಾಣೆಯಲ್ಲಿ ಎಫ್​​ಐಆರ್​​ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ‘ಚಿನ್ನು ಪಾಪು’ ಶವ ಪತ್ತೆ

ಬೇರೆ ಕಾಲೇಜಿಗೆ ಸೇರಲು ವಿದ್ಯಾರ್ಥಿನಿ ಕಿಡ್ನಾಪ್ ನಾಟಕ

ಇನ್ನೊಂದು ಕಡೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಸುದೇಮುಗೇರು ಬಳಿ ನಿನ್ನೆ ಶಾಕಿಂಗ್ ಸುದ್ದಿ ಬಂದಿತ್ತು.. ಕಾಶಿಬೆಟ್ಟುನಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯು ಓದ್ತಿದ್ದ ವಿದ್ಯಾರ್ಥಿನಿ, ನನ್ನನ್ನು ಕಿಡ್ನ್ಯಾಪ್ ಮಾಡಲು ಯತ್ನಿಸಿದ್ರು ಅಂತೇಳಿದ್ಳು. ಪೊಲೀಸರು, ಶಾಸಕರೆಲ್ಲ ಸ್ಥಳಕ್ಕೆ ದೌಡಾಯಿಸಿದ್ರು.. ಸ್ಕೂಟಿಯಲ್ಲಿ ನಾನು ಕಾಲೇಜಿಗೆ ಹೋಗ್ತಿದ್ದಾಗ, ಓಮ್ನಿ ಕಾರಿನಲ್ಲಿ ಮೂವರು ಮಾಸ್ಕ್​​ ಧಾರಿಗಳು ನನ್ನ ಅಪಹರಿಸಲು ಯತ್ನಿಸಿದ್ರು. ನಾನು ಕಿರುಚಿಕೊಂಡಾಗ ಚೂರಿ ಇರಿದ್ರು. ನಾನು ಅವರಿಂದ ತಪ್ಪಿಸಿಕೊಂಡೇ, ನನ್ನ ಬ್ಯಾಗ್​​​ ಅವರೇ ಕೊಂಡೊಯ್ದರು ಅಂತೇಳಿದ್ದಳು. ಬಳಿಕ ತಂಡ ತಂಡವಾಗಿ ಪೊಲೀಸರು ತನಿಖೆಗೆ ಇಳಿದಾಗ, ಘಟನಾ ಸ್ಥಳದ ಅನತಿ ದೂರದಲ್ಲೇ ಬ್ಯಾಗ್ ಸಿಕ್ಕಿತ್ತು. ಅದರಲ್ಲಿ ನೀರಿನ ಬಾಟೆಲ್​ ಬಿಟ್ಟು ಪುಸ್ತಕಗಳು ನಾಪತ್ತೆ ಆಗಿದ್ದವು.

ಪೊಲೀಸರು ಯಾವ ಆ್ಯಂಗಲ್​​ನಲ್ಲಿ ಹುಡುಕಾಡಿದ್ರೂ ಕಿಡ್ನ್ಯಾಪರ್ಸ್​ ಸುಳಿವು ಸಿಗಲಿಲ್ಲ. ನಂತರ ಬಾಲಕಿಯನ್ನೇ ವಿಶ್ವಾಸಕ್ಕೆ ತೆಗೊಂಡು ವಿಚಾರಿಸಿದಾಗ, ಕಿಡ್ನಾಪ್ ನಡೆದೇ ಇಲ್ಲ ಅನ್ನೋದು ಗೊತ್ತಾಗಿದೆ. ಬೆಳ್ತಂಗಡಿ ಕಾಲೇಜಿನ ಬದಲು ಮಂಗಳೂರು ಕಾಲೇಜಿಗೆ ಸೇರಿಸುವಂತೆ ಬಾಲಕಿ ಕೇಳಿದ್ದಕ್ಕೆ ತಂದೆ ಒಪ್ಪಿರಲಿಲ್ವಂತೆ. ಹೀಗಾಗಿ ಬಾಲಕಿಯೇ ಕಿಡ್ನ್ಯಾಪ್​ ಕಥೆ ಕಟ್ಟಿರೋದು ಗೊತ್ತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ – Kannada News | Tamannaah Bhatia unveils new Mysore Sandal Soap in Bengaluru as brand ambassador

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲೇ ಹೇಳುವ ಮೂಲಕ ತಮನ್ನಾ ಅವರು ಮಾತು ಆರಂಭಿಸಿದರು. ಬಳಿಕ ಅವರು ಇಂಗ್ಲಿಷ್​​ನಲ್ಲಿ ಮಾತು ಮುಂದುವರಿಸಿದರು. ‘ನನಗೆ ಇದು ತುಂಬಾ ದೊಡ್ಡ ಗೌರವ ಹಾಗೂ ಹೆಮ್ಮೆ. KSDL ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೇನೆ. 20 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದೀನಿ. ಇಂದಿನಿಂದ ನನ್ನ ಬದುಕಿನ ಹೊಸ ಚಾಪ್ಟರ್ ಶುರು ಆಗಿದೆ. ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ಎಂದರೆ ಎಮೋಷನ್ ಹಾಗೂ ಬಾಲ್ಯದ ನೆನಪು. ಎಷ್ಟೇ ಸೋಪ್​​ಗಳು ಮಾರುಕಟ್ಟೆಗೆ ಬಂದರೂ ಮೈಸೂರ್ ಸ್ಯಾಂಡಲ್​ ಸೋಪ್ ಜನರ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದೆ. ನಾನು ತುಂಬಾ ಅದೃಷ್ಟವಂತೆ. ಮೈಸೂರ್ ಸ್ಯಾಂಡಲ್​ ಸೋಪಿಗೆ ರಾಯಭಾರಿ ಆಗಿದ್ದೇನೆ’ ಎಂದು ತಮನ್ನಾ ಭಾಟಿಯಾ ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹೈಕಮಾಂಡ್ ನಾಯಕರ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು – Kannada News | Power Tussle In Karnataka Congress: DK Shivakumar Reacts after Meeting With High command Leaders In Delhi

ನವದೆಹಲಿ, ಫೆಬ್ರವರಿ 10) ವಿಶೇಷ ಅಧಿವೇಶನ ಮುಗಿಯುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಕುರ್ಚಿ ಕಂಪಿಸಿದೆ. ಹೌದು.. ಸದನದಲ್ಲಿ ಕದನ ಮುಗಿಯುತ್ತಿದ್ದಂತೆ ಕುರ್ಚಿ ಕದನ ತಾರಕಕ್ಕೇರಿದ್ದು, ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೌದು..ಡಿಸಿಎಂ ಡಿಕೆ ಡೆಲ್ಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕೆ.ಸಿ.ವೇಣುಗೋಪಾಲ್ ಭೇಟಿಗೆ ಡಿಸಿಎಂ ಡಿಕೆ ಸಮಯ ಕೇಳಿದ್ದಾರೆ. ರಾಜ್ಯ ವಿದ್ಯಮಾನಗಳ ಬಗ್ಗೆ ವಿವರವಾಗಿ ಡಿಕೆಶಿ ಮಾತುಕತೆ ನಡೆಸಲಿದ್ದಾರೆ. ಕಳೆದ ಬಾರಿಯೂ ದೆಹಲಿಗೆ ತೆರಳಿದ್ದಾಗ ವೇಣುಗೋಪಾಲ್​ರನ್ನ ಡಿಕೆ ಭೇಟಿ ಮಾಡಿದ್ರು. ಇದರ ಮಧ್ಯೆ ರಾಹುಲ್ ಗಾಂಧಿ ಭೇಟಿಗೆ ಇಬ್ಬರು ಕಾಂಗ್ರೆಸ್​ ಸಚಿವರು ಸಮಯ ಕೇಳಿದ್ರು. ಆದ್ರೆ ತಪ್ಪು ಸಂದೇಶ ರವಾನೆ ಹಿನ್ನೆಲೆ ಸಚಿವರಿಗೆ ಸಮಯವನ್ನ ರಾಹುಲ್ ಗಾಂಧಿ ನೀಡಿಲ್ಲ. ಈ ನಡುವೆ ದೆಹಲಿ ತಲುಪಿರೋ ಡಿಕೆ, ವರಿಷ್ಠರನ್ನ ಭೇಟಿಯಾಗೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯ ಅಸ್ಸಾಂ ಚುನಾವಣಾ ಉಸ್ತುವಾರಿಯಾಗಿರೋ ಡಿಕೆಶಿ, ಇಂದು (ಫೆಬ್ರವರಿ 10) ಹೈಕಮಾಂಡ್ ನಾಯಕರ ಜೊತೆ ಎಲೆಕ್ಷನ್ ಸಭೆಯಲ್ಲಿ ಭಾಗವಹಿಸಿದ್ದು, ಸಭೆಯಲ್ಲಿ ಏನೆಲ್ಲಾ ಆಯ್ತು ಎನ್ನುವ ಬಗ್ಗೆಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಹಾಗಾದ್ರೆ, ಸಭೆ ಬಳಿಕ ಡಿಕೆಶಿ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ; ಶುರುವಾಯ್ತು ಯುದ್ಧ! – Kannada News | Married man shopping with girlfriend in Sonbhadra his wife also arrived there with children

ಸೋನಭದ್ರ, ಫೆಬ್ರವರಿ 10: ಉತ್ತರ ಪ್ರದೇಶದ ಸೋನಭದ್ರದಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಪ್ರೇಯಸಿಯೊಂದಿಗೆ ಪ್ರೇಮಿಗಳ ದಿನಕ್ಕಾಗಿ (Valentines Day) ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅವರ ಹೆಂಡತಿ ಶಾಕ್ ನೀಡಿದ್ದಾರೆ. ಅದೇ ಮಾಲ್​ಗೆ ತನ್ನ ಮಕ್ಕಳ ಜೊತೆ ಬಂದ ಹೆಂಡತಿ ತನ್ನ ಗಂಡ ಬೇರೆ ಯುವತಿಯೊಂದಿಗೆ ಶಾಪಿಂಗ್ ಮಾಡುತ್ತಿರುವುದನ್ನು ನೋಡಿ ಅಳುತ್ತಾ ಗೋಳಾಡಿದ್ದಾರೆ. ನಂತರ ಅದೇ ಮಾಲ್​ನಲ್ಲಿ ಗಂಡ ಮತ್ತು ಆತನ ಪ್ರೇಯಸಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ – Kannada News | Indigestion Triggers: What to Eat and Avoid

ಇತ್ತೀಚಿನ ದಿನಗಳಲ್ಲಿ, ಅನೇಕರಲ್ಲಿ ಕಂಡುಬರುತ್ತಿರುವ ಹೆಚ್ಚಿನ ಆರೋಗ್ಯ ಸಮಸ್ಯೆಗಳಲ್ಲಿ ಅಜೀರ್ಣವು (Indigestion) ಒಂದು. ವೇಗದ ಜೀವನ, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಹೆಚ್ಚು ಹುರಿದ ಮತ್ತು ಕರಿದ ಆಹಾರಗಳ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಾಗಿದೆ. ಇದರಿಂದ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ, ಸುಡುವ ಸಂವೇದನೆ, ಉಬ್ಬುವುದು ಮತ್ತು ಅಸ್ವಸ್ಥತೆ ಕಂಡುಬರಬಹುದು. ಕೆಲವೊಮ್ಮೆ, ತಿಂದ ನಂತರ, ಹೊಟ್ಟೆ ನೋವು (Stomach Pain), ವಾಕರಿಕೆ ಅಥವಾ ಎದೆಯಲ್ಲಿ ಸುಡುವ ಸಂವೇದನೆ ಕೂಡ ಅನುಭವಕ್ಕೆ ಬರಬಹುದು. ಆದರೆ ಈ ಸಮಸ್ಯೆ ದೀರ್ಘಕಾಲದವರೆಗೆ ಮುಂದುವರಿದರೆ, ಅದು ಹಸಿವು ಕಡಿಮೆಯಾಗುವುದಕ್ಕೆ ಮತ್ತು ದೇಹದಲ್ಲಿ ದೌರ್ಬಲ್ಯಕ್ಕೆ ಕಾರಣವಾಗಬಹುದು. ಹಾಗಾಗಿ ಈ ರೀತಿಯ ಲಕ್ಷಣ ಕಂಡುಬಂದಾಗ ಅದನ್ನು ಲಘುವಾಗಿ ತೆಗೆದುಕೊಳ್ಳಬಾರದು. ಹಾಗಾದರೆ ಯಾವ ರೀತಿಯ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು, ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ರೀತಿಯ ಆಹಾರಗಳು ಅಜೀರ್ಣಕ್ಕೆ ಕಾರಣವಾಗುತ್ತವೆ?

ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕರಾದ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ಹೇಳುವ ಪ್ರಕಾರ, ಹುರಿದ ಮತ್ತು ಹೆಚ್ಚು ಮಸಾಲೆಯುಕ್ತ ಆಹಾರಗಳು ಅಜೀರ್ಣಕ್ಕೆ ಪ್ರಮುಖ ಕಾರಣ. ಜೊತೆಗೆ ಫಾಸ್ಟ್ ಫುಡ್, ಜಂಕ್ ಫುಡ್ ಮತ್ತು ಹೆಚ್ಚಿನ ಎಣ್ಣೆಯಲ್ಲಿ ಬೇಯಿಸಿದ ಆಹಾರಗಳು ಕೂಡ ಜೀರ್ಣಿಸಿಕೊಳ್ಳಲು ಕಷ್ಟವಾಗುತ್ತದೆ. ಅತಿಯಾದ ಸಿಹಿತಿಂಡಿ, ತಂಪು ಪಾನೀಯ ಮತ್ತು ಕೆಫೀನ್ ಹೊಂದಿರುವ ಪಾನೀಯಗಳು ಸಹ ಜೀರ್ಣಕ್ರಿಯೆಯನ್ನು ಅಡ್ಡಿಪಡಿಸಬಹುದು. ಅಷ್ಟೇ ಅಲ್ಲ ತಡರಾತ್ರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಊಟ ಮಾಡುವುದರಿಂದ ಹೊಟ್ಟೆಗೆ ವಿಶ್ರಾಂತಿ ಸಿಗದಿರಬಹುದು, ಇದು ಕೂಡ ಅಜೀರ್ಣ ಸಮಸ್ಯೆಗಳನ್ನು ಹೆಚ್ಚಿಸಬಹುದು. ಅತಿಯಾದ ಮಸಾಲೆ, ಸಂಸ್ಕರಿಸಿದ ಆಹಾರಗಳು ಮತ್ತು ಪ್ಯಾಕ್ ಮಾಡಿದ ತಿಂಡಿಗಳು ಸಹ ಅನಿಲ ಮತ್ತು ಆಮ್ಲೀಯತೆಯನ್ನು ಉಂಟುಮಾಡುತ್ತವೆ. ಕೆಲವರಿಗೆ ಹಾಲು ಅಥವಾ ಡೈರಿ ಉತ್ಪನ್ನಗಳ ಸೇವನೆ ಮಾಡುವುದರಿಂದಲೂ ಕೂಡ ಅಜೀರ್ಣವಾಗಬಹುದು.

ಇದನ್ನೂ ಓದಿ: ಸ್ಟ್ರೆಸ್ ಮಲಬದ್ದತೆಗೆ ಹೇಗೆ ಕಾರಣವಾಗುತ್ತೆ ಗೊತ್ತಾ? ಈ ಬಗ್ಗೆ ಡಾ ಅನುರಾಗ್ ಶೆಟ್ಟಿ ಏನ್ ಹೇಳ್ತಾರೆ ನೋಡಿ

ಅಜೀರ್ಣದಂತಹ ಸಮಸ್ಯೆಗಳನ್ನು ತಡೆಯುವುದು ಹೇಗೆ?

ಸಾಮಾನ್ಯವಾಗಿ ಅಜೀರ್ಣವಾಗದಂತೆ ತಡೆಯಲು, ಹಗುರವಾದ ಮತ್ತು ಸಮತೋಲಿತ ಆಹಾರ ಸೇವನೆ ಮಾಡಿ. ಸಮಯಕ್ಕೆ ಸರಿಯಾಗಿ ತಿನ್ನುವುದರ ಮೂಲಕ ದೀರ್ಘಕಾಲದ ವರೆಗೆ ಹಸಿವಿನಿಂದ ಇರುವುದನ್ನು ತಪ್ಪಿಸಿ. ಕರಿದ ಮತ್ತು ಜಂಕ್ ಆಹಾರಗಳಿಂದ ದೂರವಿರಿ. ಆಹಾರವನ್ನು ಚೆನ್ನಾಗಿ ಅಗಿಯಿರಿ ಮತ್ತು ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಪ್ರತಿದಿನ ಬಿಡುವಿದ್ದಾಗ ಸ್ವಲ್ಪ ಸಮಯ ನಡೆಯುವುದು ಅಥವಾ ಲಘು ವ್ಯಾಯಾಮ ಮಾಡುವುದು ಜೀರ್ಣಕ್ರಿಯೆಗೆ ಪ್ರಯೋಜನಕಾರಿ. ಒತ್ತಡವನ್ನು ಕಡಿಮೆ ಮಾಡಲು ಪ್ರಯತ್ನಿಸಿ ಮತ್ತು ತಡರಾತ್ರಿಯಲ್ಲಿ ಆಹಾರ ಸೇವನೆ ಮಾಡುವುದನ್ನು ತಪ್ಪಿಸಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

9ನೇ ಕ್ಲಾಸ್ ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ – Kannada News | Gujarat Teacher gets 3 years Jail sentence For Slapping Class 9 Student Leaving Her Partially Deaf

ನವದೆಹಲಿ, ಫೆಬ್ರವರಿ 10: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಹೋಂ ವರ್ಕ್ ಪೂರ್ಣಗೊಳಿಸದ ಕಾರಣದಿಂದಾಗಿ ಶಿಕ್ಷಕರೊಬ್ಬರು ಕಪಾಳಮೋಕ್ಷ ಮಾಡಿದ್ದರು. ಹೀಗಾಗಿ ಗುಜರಾತ್ ನ್ಯಾಯಾಲಯವು ಆ ಶಾಲಾ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಲ್ಲೆಯಿಂದಾಗಿ ಬಾಲಕಿಯ ಕಿವಿಯೋಲೆ ಕಿತ್ತುಬಂದು ಒಂದು ಕಿವಿಯೇ ಕೇಳದಂತಾಗಿದೆ. ಜನವರಿ 30ರಂದು ನೀಡಿದ ತೀರ್ಪಿನಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹಿಮಾಂಶು ಚೌಧರಿ ಈ ಅಪರಾಧದ ಮೂಲಕ ಶಿಕ್ಷಕಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಎಂದು ಹೇಳಿದ್ದಾರೆ.

14 ವರ್ಷದ ಬಾಲಕಿಯ ಎಡ ಕಿವಿಯೋಲೆಯ ರಂಧ್ರ ಹರಿದುಬಂದಿದ್ದು, ಅದಕ್ಕಾಗಿ ಹಲವು ದಿನಗಳವರೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಬೇಕಾಯಿತು ಎಂದು ನ್ಯಾಯಾಲಯ ಹೇಳಿದೆ. ಈ ಘಟನೆ ಜನವರಿ 1, 2020ರಂದು ಗಾಂಧಿನಗರದ ಖಾಸಗಿ ಶಾಲೆಯಾದ ಬಾ ಶ್ರೀ ವಸಂತಕುವರ್ಬಾ ಶಾಲೆಯಲ್ಲಿ ನಡೆದಿತ್ತು. ಶಿಕ್ಷಕಿ ಪರುಲ್ಬೆನ್ ಪಟೇಲ್ ತನ್ನ ವಿದ್ಯಾರ್ಥಿನಿ ಹೋಂ ವರ್ಕ್ ಪೂರ್ಣಗೊಳಿಸಿಲ್ಲ ಎಂದು ಕೋಪಗೊಂಡು ಅವಳ ಎಡ ಕಿವಿಗೆ 3 ಬಾರಿ ಹೊಡೆದಿದ್ದರು. ಈ ಹೊಡೆತಗಳಿಂದ ಕಿವಿಗೆ ತೀವ್ರ ಗಾಯವಾಗಿತ್ತು.

ಇದನ್ನೂ ಓದಿ: 2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ!

ಆ ಬಾಲಕಿಯ ಕುಟುಂಬ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಈ ಘಟನೆ ನಡೆದ 2 ದಿನಗಳ ನಂತರ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಿದರು. ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೈದ್ಯಕೀಯ ಪುರಾವೆಗಳು ಗಾಯದ ಸ್ವರೂಪ ಮತ್ತು ಗಂಭೀರತೆಯನ್ನು ದೃಢಪಡಿಸಿದವು. ಹಲ್ಲೆ ನಡೆದು ನಾಲ್ಕೂವರೆ ವರ್ಷಗಳ ನಂತರವೂ ಆ ಬಾಲಕಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ನ್ಯಾಯಾಲಯ ಗಮನಿಸಿದೆ.

ಹೀಗಾಗಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 325 ಮತ್ತು ಮಗುವಿನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75ರ ಅಡಿಯಲ್ಲಿ ಆ ಶಿಕ್ಷಕಿ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆಕೆಗೆ 3 ವರ್ಷ ಮತ್ತು 3 ತಿಂಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗಿದೆ. ದಂಡದ ಮೊತ್ತವನ್ನು ಆ ಬಾಲಕಿಗೆ ಪರಿಹಾರವಾಗಿ ಪಾವತಿಸಲು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು – Kannada News | Dhurandhar actor Ranveer Singh receives threat from Lawrence Bishnoi gang

ಕೆಲವೇ ದಿನಗಳ ಹಿಂದೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ (Deepika Padukone) ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಬೆದರಿಕೆ ಬಂದಿರುವುದರಿಂದ ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಮೊದಲು ಬಾಲಿವುಡ್​​ನ ಹಲವು ಸೆಲೆಬ್ರಿಟಿಗಳಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನವರು ಬೆದರಿಕೆ ಹಾಕಿದ್ದರು. ಈಗಲೂ ರಣವೀರ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯರೇ ಬೆದರಿಕೆ ಸಂದೇಶ ಕಳಿಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೆದರಿಕೆ ಸಂದೇಶ ಬಂದ ಬಳಿಕ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅವರು ಮನೆಯ ಸುತ್ತಮುತ್ತ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದ್ದಾರೆ. ಭದ್ರತೆ ನೀಡುವ ದೃಷ್ಟಿಯಿಂದ ರಣವೀರ್ ಸಿಂಗ್ ನಿವಾಸದ ಬಳಿ ಶಸ್ತ್ರಾಸ್ತ್ರ ಹಿಡಿದ ಭದ್ರತಾ ಸಿಬ್ಬಂದಿ ಒಡಾಡುತ್ತಿದ್ದಾರೆ. ಇದರಿಂದಾಗಿ ನೆರೆಹೊರೆಯವರಿಗೆ ಆತಂಕ ಹೆಚ್ಚಾಗಿದೆ. ಅಪಾರ್ಟ್​​ಮೆಂಟ್​​ನಲ್ಲಿ ಇರುವ ಇನ್ನುಳಿದ ನಿವಾಸಿಗಳು ಈ ಬಗ್ಗೆ ಪೊಲೀಸರ ಬಳಿ ಆತಂಕ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ರಣವೀರ್ ಸಿಂಗ್ ಅವರಿಗೆ ಬೆದರಿಕೆ ಹಾಕಿರುವ ಕಿಡಿಗೇಡಿಗಳು ಕೋಟ್ಯಂತರ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ವಾಟ್ಸಪ್ ವಾಯ್ಸ್ ನೋಟ್ ಮೂಲಕ ಅವರಿಗೆ ಬೆದರಿಕೆ ಹಾಕಲಾಗಿದೆ. ಬೆದರಿಕೆ ಸಂದೇಶ ಬಂದ ಕೂಡಲೇ ರಣವೀರ್ ಸಿಂಗ್ ಅವರು ಮುಂಬೈ ಪೊಲೀಸರಿಗೆ ಮಾಹಿತಿ ತಿಳಿಸಿದರು. ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿದ್ದಾರೆ.

ಇದನ್ನೂ ಓದಿ: ‘ಗೋಲ್​​ಮಾಲ್’ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ

ಕಳೆದ ವರ್ಷ ಬಿಡುಗಡೆ ಆದ ‘ಧುರಂಧರ್’ ಸಿನಿಮಾದಿಂದ ರಣವೀರ್ ಸಿಂಗ್ ಅವರಿಗೆ ದೊಡ್ಡ ಗೆಲುವು ಸಿಕ್ಕಿತು. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚಾಯಿತು. ಅದಕ್ಕೆ ತಕ್ಕಂತೆ ಅವರ ಸಂಭಾವನೆ ಕೂಡ ಜಾಸ್ತಿ ಆಗಿದೆ. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ರಣವೀರ್ ಸಿಂಗ್ ಬಳಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಬೆದರಿಕೆ ಸಂದೇಶ ಕಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪ್ರತಿಯೊಂದು ವೈರಲ್​​​ ವಿಡಿಯೋದಲ್ಲೂ ಈ ಹುಡುಗ ಇರಲೇಬೆಕು: ಬಾಲಕನ ಜೀವನ ಬದಲಾಯಿಸಿತು ಆ ಒಂದೇ ಒಂದು ನಗು – Kannada News | The Viral Laugh That Changed a Life: Arun’s Inspiring Story from Poverty to Fame

ಸೋಶಿಯಲ್​​ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಈ ಹುಡುಗನ ವಿಡಿಯೋ ಸಖತ್​​​ ವೈರಲ್​ ಆಗುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿಕ್ಕ ವಿಷಯವು ದೊಡ್ಡದಾಗಿ ವೈರಲ್​ ಆಗುತ್ತದೆ. ಎಲ್ಲ ಮೀಮ್ಸ್​​​​​​ಗಳಲ್ಲಿ ಈ ಹುಡುಗನ ವಿಡಿಯೋವನ್ನು ನೋಡಿರಬಹುದು. ಟೀ ಹಿಡಿದುಕೊಂಡು ನಗುವ ನಗು ಇದೀಗ ದೇಶದಲ್ಲಿ ದೊಡ್ಡ ಸದ್ದು ಮಾಡಿದೆ. ಅಷ್ಟಕ್ಕೂ ಈ ಹುಡುಗ ಯಾರು ಗೊತ್ತಾ? ಸೋಷಿಯಲ್ ಮೀಡಿಯಾದಲ್ಲಿ ಇಂದು ಪ್ರತಿಯೊಂದು ಮೀಮ್ (Meme) ಅಥವಾ ಟ್ರೋಲ್ ವಿಡಿಯೋಗಳಲ್ಲಿ ಕಾಣಿಸಿಕೊಳ್ಳುವ ಆ ಪ್ರಸಿದ್ಧ ನಗುಮೊಗದ ಚಹಾ ಹುಡುಗನ ಕಥೆ ನಿಜಕ್ಕೂ ಸ್ಫೂರ್ತಿದಾಯಕ. ಆತನ ಬಗ್ಗೆ  ಕುತೂಹಲಕಾರಿ ಮಾಹಿತಿಗಳು ಇಲ್ಲಿವೆ.

ಈ ವೈರಲ್ ಹುಡುಗನ ಹೆಸರು ಅರುಣ್. ಈತ ನಮ್ಮ ಪಕ್ಕದ ತೆಲಂಗಾಣ ರಾಜ್ಯದ ಜಯಶಂಕರ್ ಬೊಪ್ಪಳಪಲ್ಲಿ ಜಿಲ್ಲೆಯ ನಾಲಪ್ಪುಚಟುವಲ್ಲಿ ಗ್ರಾಮದವನು. ಅತ್ಯಂತ ಬಡತನದ ಕುಟುಂಬದಿಂದ ಬಂದ ಅರುಣ್, ಜೀವನೋಪಾಯಕ್ಕಾಗಿ ಲಾರಿಯಲ್ಲಿ ಕ್ಲೀನರ್ (ಸಹಾಯಕ) ಆಗಿ ಕೆಲಸ ಮಾಡುತ್ತಿದ್ದಾನೆ. ಈ ವಿಡಿಯೋ ಯಾವುದೇ ಪ್ಲಾನಿಂಗ್ ಮಾಡಿ ಮಾಡಿದ್ದಲ್ಲ, ಬದಲಾಗಿ ಅದೊಂದು ಆಕಸ್ಮಿಕ ಸುಂದರ ಕ್ಷಣ, ಲಾರಿ ಚಾಲಕ ನೆಹರು ಅವರು ಚಹಾ ಕುಡಿಯುವಾಗ ಒಂದು ಜೋಕ್ ಹೇಳುತ್ತಾರೆ. ಅದನ್ನು ಕೇಳಿ ಅರುಣ್ ತನ್ನ ಮುಗ್ಧತೆಯಿಂದ ಗಹಗಹಿಸಿ ನಗುತ್ತಾನೆ.

ಅರುಣ್ ನಗುವನ್ನು ನೆಹರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ. ಅಪ್‌ಲೋಡ್ ಆದ ಕೇವಲ ಒಂದೂವರೆ ತಿಂಗಳಲ್ಲೇ ಈ ವಿಡಿಯೋ 40 ಮಿಲಿಯನ್ (4 ಕೋಟಿ) ವೀಕ್ಷಣೆಗಳನ್ನು ದಾಟಿ ದಾಖಲೆ ಬರೆಯಿತು. ಅರುಣ್ ಬಡತನದ ಕಾರಣದಿಂದ ಕೇವಲ 4ನೇ ತರಗತಿಗೆ ಶಾಲೆಯನ್ನು ಅರ್ಧಕ್ಕೆ ಬಿಟ್ಟಿದ್ದನು. ಆದರೆ, ಈ ವಿಡಿಯೋ ವೈರಲ್ ಆದ ನಂತರ ಚಾಲಕ ನೆಹರು ಅವರ ಬೆಂಬಲದಿಂದ ಅರುಣ್ ಮತ್ತೆ ಓದಿನತ್ತ ಮುಖ ಮಾಡಿದ್ದಾನೆ. ಇತ್ತೀಚಿನ ವರದಿಗಳ ಪ್ರಕಾರ, ಅರುಣ್ 10ನೇ ತರಗತಿ ಪರೀಕ್ಷೆ ಬರೆದು ಉತ್ತೀರ್ಣನಾಗಿದ್ದಾನೆ. ರಾತ್ರೋರಾತ್ರಿ ಪ್ರಸಿದ್ಧಿ ಪಡೆದ ಅರುಣ್ ಈಗ ತೆಲಂಗಾಣದಲ್ಲಿ ಸೆಲೆಬ್ರಿಟಿ. ಅನೇಕ ದೊಡ್ಡ ದೊಡ್ಡ ಯೂಟ್ಯೂಬ್ ಚಾನೆಲ್‌ಗಳು ಈತನನ್ನು ಸಂದರ್ಶನ ಮಾಡಿವೆ.

ಇಲ್ಲಿದೆ ನೋಡಿ ವಿಡಿಯೋ:

ಈಗ ಅರುಣ್ ತಾನೇ ಒಂದು ಇನ್‌ಸ್ಟಾಗ್ರಾಂ ಖಾತೆ ತೆರೆದು ಕಾಮಿಡಿ ವಿಡಿಯೋಗಳನ್ನು ಮಾಡುತ್ತಾ ಸಾವಿರಾರು ಫಾಲೋವರ್ಸ್ ಹೊಂದಿದ್ದಾನೆ. ನಗುವಿಗೆ ಜಾತಿ, ಧರ್ಮ ಅಥವಾ ಭಾಷೆಯ ಹಂಗಿಲ್ಲ ಎಂಬುದು ಅರುಣ್ ವಿಷಯದಲ್ಲಿ ಸಾಬೀತಾಗಿದೆ. ಆತನ  ಮುಗ್ಧ ನಗು ಎಂತಹ ಒತ್ತಡದಲ್ಲಿರುವವರಿಗೂ ಒಂದು ಕ್ಷಣ ನಗು ತರಿಸುತ್ತದೆ. ಅದಕ್ಕಾಗಿಯೇ ಇಂದಿಗೂ ಟ್ರೋಲಿಗರು ಯಾವುದೇ ಕಾಮಿಡಿ ವಿಡಿಯೋ ಎಡಿಟ್ ಮಾಡುವಾಗ ಅರುಣ್ ನಗುವಿನ ಕ್ಲಿಪ್ ಇಲ್ಲದೆ ಪೂರ್ಣಗೊಳಿಸುವುದಿಲ್ಲ. ಈ ಬಗ್ಗೆ ಸಂದರ್ಶನವೊಂದರಲ್ಲಿ ಅರುಣ್​​ ಹೀಗೆ ಹೇಳಿದ್ದಾನೆ. ಅರುಣ್ ಹೇಳುವಂತೆ, ಆತ ನಗುವಾಗ ಆತನಿಗೆ ತಾನು ಒಬ್ಬ ಬಡ ಲಾರಿ ಕ್ಲೀನರ್ ಎಂಬ ನೆನಪೇ ಇರಲಿಲ್ಲ. “ನನ್ನ ನಗು ಇಷ್ಟೊಂದು ಜನರಿಗೆ ಇಷ್ಟವಾಗುತ್ತದೆ ಎಂದು ನಾನು ಕನಸಿನಲ್ಲೂ ಅಂದುಕೊಂಡಿರಲಿಲ್ಲ. ಬಡತನದ ನೋವಿನ ನಡುವೆಯೂ ಆ ಒಂದು ಕ್ಷಣದ ನಗು ನನ್ನ ಜೀವನವನ್ನೇ ಬದಲಿಸಿತು” ಎಂದು ಭಾವುಕನಾಗಿ ಹೇಳಿದ್ದಾನೆ.

ಇದನ್ನೂ ಓದಿ: “ಅಯ್ಯೋ So Cute​​ ದೀದಿ”: ಬೆಂಗಳೂರಿನ ದಂಪತಿಗಳ ವಿವಾಹ ವಾರ್ಷಿಕೋತ್ಸವಕ್ಕೆ ಅದ್ಭುತ ಗಿಫ್ಟ್​​​ ಕೊಟ್ಟ ಮನೆಗೆಲಸದಾಕೆ

ನನ್ನ ಜೀವನದಲ್ಲಿ ನೆಹರು ಅಣ್ಣ (ಲಾರಿ ಡ್ರೈವರ್) ದೇವರಿಗಿಂತ ಕಡಿಮೆ ಇಲ್ಲ. ಅವರು ಆ ವಿಡಿಯೋ ಮಾಡದಿದ್ದರೆ. ನಾನು ಓದಬೇಕು ಎಂದು ಹಠ ಹಿಡಿಯದಿದ್ದರೆ ನಾನು ಇಂದಿಗೂ ಕೇವಲ ಕ್ಲೀನರ್ ಆಗಿಯೇ ಇರುತ್ತಿದ್ದೆ. ನಾನು 10ನೇ ತರಗತಿ ಓದಲು ಅವರೇ ಕಾರಣ. ವೈರಲ್ ಆದ ಮೇಲೆ ದೊಡ್ಡ ದೊಡ್ಡ ತೆಲುಗು ನಟರು ಮತ್ತು ಯೂಟ್ಯೂಬರ್‌ಗಳು ತನ್ನನ್ನು ಗುರುತಿಸಿ ಮಾತನಾಡಿಸಿದಾಗ ಆರಂಭದಲ್ಲಿ ತುಂಬಾ ಭಯವಾಗಿತ್ತು ಎಂದು ಅರುಣ್ ನೆನಪಿಸಿಕೊಂಡಿದ್ದಾನೆ. “ಈಗ ಜನರು ನನ್ನ ಜೊತೆ ಸೆಲ್ಫಿ ಕೇಳಿದಾಗ ವಿಚಿತ್ರ ಎನಿಸಿದರೂ ಖುಷಿಯಾಗುತ್ತದೆ. ಕೇವಲ ವಿಡಿಯೋ ಮಾಡುವುದು ಮಾತ್ರವಲ್ಲ, ಚೆನ್ನಾಗಿ ಓದಿ ಗೌರವಯುತವಾದ ಕೆಲಸ ಮಾಡಬೇಕು ಮತ್ತು ತನ್ನಂತೆಯೇ ಬಡತನದಲ್ಲಿರುವ ಮಕ್ಕಳಿಗೆ ಸಹಾಯ ಮಾಡಬೇಕು ಎಂದು ಹೇಳಿದರು.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ: ತನಿಖೆ ವೇಳೆ ಸ್ಫೋಟಕ ಅಂಶ ಬಯಲಿಗೆ – Kannada News | Bengalru DCP Yatish Talks about Woman Sent Mother’s Private Photos To Boyfriend case

ಬೆಂಗಳೂರು, (ಫೆಬ್ರವರಿ 10): ನಗರದ ಬ್ಯಾಟರಾಯನಪುರದಲ್ಲಿ (Byatarayanapura) ಯುವತಿಯೋರ್ವಳು ತನ್ನ ಹೆತ್ತ ತಾಯಿ ಹಾಗೂ ದೊಡ್ಡಮ್ಮಳ ಖಾಸಗಿ ಫೋಟೋಗಳನ್ನು ಪ್ರಿಯಕರನಿಗೆ ಕಳುಹಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಪೊಲೀಸರೇ ಶಾಕ್ ಆಗಿದ್ದಾರೆ.  ತಮ್ಮ ಹಾಗೂ ಅಕ್ಕನ ಖಾಸಗಿ ಫೋಟೋಗಳನ್ನು ಮಗಳು ಆಕೆಯ ಪ್ರಿಯಕರನಿಗೆ ಕಳಿಸಿದ್ದಾಳೆ ಎಂದು ತಾಯಿ ನೀಡಿದ್ದು, ಈ ಸಂಬಂಧ ಯುವತಿ ಹಾಗೂ ಆಕೆಯ ಪ್ರಿಯಕರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕೆಲ ಅಂಶಗಳು ಬಯಲಿಗೆ ಬಂದಿವೆ. ಕುಟುಂಬಸ್ಥರು ಮದುವೆಗೆ ಒಪ್ಪದಿದ್ದರೆ ಈ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುವಂತೆ ಯುವತಿಗೆ ತಿಳಿಸಿದ್ದಾಗಿ ಪ್ರಿಯಕರ ಸತ್ಯ ಬಾಯ್ಬಿಟ್ಟಿದ್ದಾನೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ.

ಫೋಟೋ ಕಳುಹಿಸಿರುವುದು ಗೊತ್ತಾಗಿದ್ಹೇಗೆ?

ಪ್ರಿಯಕರನಿಗೆ ತಾಯಿ ಮತ್ತು ದೊಡ್ಡಮ್ಮನ ಖಾಸಗಿ ಫೋಟೋ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಯತೀಶ್.ಎನ್ ಪ್ರತಿಕ್ರಿಯಿಸಿದ್ದು, ಮಗಳೇ ತನ್ನ ತಾಯಿ ಹಾಗೂ ದೊಡ್ಡಮ್ಮಳ ಖಾಸಗಿ ಫೋಟೋಗಳನ್ನು ಲವರ್ ಗೆ ಕಳುಹಿಸಿರುವುದು ಹೇಗೆ ಬೆಳಕಿಗೆ ಬಂದಿದೆ ಎಂದು ಎಳೆ ಎಳೆಯಾಗಿಬಿಚ್ಚಿಟ್ಟಿದ್ದಾರೆ.

ಇದನ್ನೂ ಓದಿ: ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ!

ಬ್ಯಾಟರಾಯನಪುರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು. ಓರ್ವ ಮಹಿಳೆ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ ಅವರು ಸ್ವತಃ ಅವರ ಮಗಳ ವಿರುದ್ಧ ಆರೋಪ ಮಾಡಿದ್ದರು. ಅವರ ಹಾಗೂ ಅವರ ಅಕ್ಕನ ಖಾಸಗಿ ಫೋಟೋ ತೆಗೆದು ಇನ್ನೊಬ್ಬ ವ್ಯಕ್ತಿಗೆ ಕಳಿಸಿದ್ದಾಗಿ ಹೇಳಿದ್ದಾರೆ. ಮಹಿಳೆಯ ಎರಡನೇ ಮಗಳು ಮನೆಬಿಟ್ಟು ಹೋಗಿ ಪ್ರೀತಿಸಿದ ಹುಡಗನನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದ್ರೆ, ಹುಡುಗಿ ಮನೆಯಲ್ಲಿ ತನ್ನ ಮೊಬೈಲ್ ಮತ್ತು ಲ್ಯಾಪ್ ಟಾಪ್ ಬಿಟ್ಟು ಹೋಗಿದ್ದಳು. ಆಗ ಮನೆಯವರು ಮಗಳ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಚೆಕ್ ಮಾಡಿದಾಗ ತಾಯಿ ಹಾಗೂ ದೊಡ್ಡಮ್ಮನ ಖಾಸಗಿ ಫೋಟೋ ಕಳಿಸಿರುವುದು ಬೆಳಕಿಗೆ ಬಂದಿದೆ ಎಂದು ಮಾಹಿತಿ ನೀಡಿದರು.

ಮಗಳು ಆಕೆಯ ಪತಿಗೆ ತಾಯಿ‌ ಹಾಗೂ ಸಂಬಂಧಿಕರ ಫೋಟೋ ಕಳಿಸಿದ್ದಾಳೆ. ಯಾವ ಉದ್ದೇಶಕ್ಕಾಗಿ ಈ‌ ಕೃತ್ಯ ಆಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಮೊಬೈಲ್ ಅನ್ನು ಎಫ್ ಎಸ್ ಎಲ್ ಗೆ ರವಾನೆ ಮಾಡಿ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಒಟ್ಟಿನಲ್ಲಿ ಯುವತಿ ಹೆತ್ತಮ್ಮನ ಖಾಸಗಿ ಫೋಟೋಗಳನ್ನು ಏಕೆ ತನ್ನ ಬಾಯ್​ ಫ್ರೆಂಡ್ ಗೆ ಕಳುಹಿಸಿದ್ದಳು? ಇದರ ಹಿಂದಿನ ಉದ್ದೇಶ ಏನಾಗಿತ್ತು ಎನ್ನುವ ಅಸಲಿ ಕಾರಣ ಪೊಲೀಸ್ ತನಿಖೆಯಲ್ಲಿ ಗೊತ್ತಾಗಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಫೆ. 17ರಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಭೇಟಿ – Kannada News | French President Emmanuel Macron to visit India on February 17

ನವದೆಹಲಿ, ಫೆಬ್ರವರಿ 10: ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಭಾರತಕ್ಕೆ ಫೆಬ್ರವರಿ 17ರಿಂದ 3 ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಭೇಟಿಯ ಸಮಯದಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಇಬ್ಬರೂ ನಾಯಕರು ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಚರ್ಚೆ ನಡೆಸಲಿದ್ದಾರೆ.

ಇಬ್ಬರೂ ನಾಯಕರು ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರ ಸೇರಿದಂತೆ ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಪ್ರಧಾನಿ ಮೋದಿ ಮತ್ತು ಮ್ಯಾಕ್ರನ್ ‘ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ’ವನ್ನು ಜಂಟಿಯಾಗಿ ಉದ್ಘಾಟಿಸಲು ಮುಂಬೈಗೆ ತೆರಳಲಿದ್ದಾರೆ. ಇದರ ಜೊತೆಗೆ ಹಾರಿಜಾನ್ 2047 ಮಾರ್ಗಸೂಚಿಯಲ್ಲಿ ಪಟ್ಟಿ ಮಾಡಲಾದ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಕುರಿತು ಇಬ್ಬರು ನಾಯಕರು ಚರ್ಚೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಟ್ರಂಪ್​ಗಾಗಿ ಫ್ರೆಂಚ್ ಅಧ್ಯಕ್ಷರನ್ನೇ ನಡುರಸ್ತೆಯಲ್ಲಿ ನಿಲ್ಲಿಸಿದ ನ್ಯೂಯಾರ್ಕ್​ ಪೊಲೀಸರು

ಹಾರಿಜಾನ್ 2047 ಮಾರ್ಗಸೂಚಿಯು ರಕ್ಷಣೆ, ಬಾಹ್ಯಾಕಾಶ, ತಂತ್ರಜ್ಞಾನ ಮತ್ತು ಸುಸ್ಥಿರತೆಯಲ್ಲಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸಲು ವಿನ್ಯಾಸಗೊಳಿಸಲಾದ ಎರಡು ದೇಶಗಳ ನಡುವಿನ 25 ವರ್ಷಗಳ (2023-2047) ಕಾರ್ಯತಂತ್ರದ ನೀಲನಕ್ಷೆಯಾಗಿದೆ. ಇದಲ್ಲದೆ, ಇಂಡೋ-ಪೆಸಿಫಿಕ್ ಅನ್ನು ಸ್ಥಿರತೆ ಮತ್ತು ಸುಸ್ಥಿರ ಅಭಿವೃದ್ಧಿಯ ಪ್ರದೇಶವನ್ನಾಗಿ ಮಾಡಲು ಪರಿಹಾರಗಳನ್ನು ಒದಗಿಸುವ ಚೌಕಟ್ಟನ್ನು ಇದು ಒಳಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version