Headlines

ವೆನೆಜುವೆಲಾದ ತೈಲ ಟ್ಯಾಂಕರ್ ವಶಪಡಿಸಿಕೊಂಡ ಅಮೆರಿಕಕ್ಕೆ ರಷ್ಯಾದ ಸಂಸದರ ಎಚ್ಚರಿಕೆ – Kannada News | Russian MP Zhuravlev warning to US after Venezuelan oil tanker seize

ನವದೆಹಲಿ, ಜನವರಿ 8: ಉತ್ತರ ಅಟ್ಲಾಂಟಿಕ್‌ನಲ್ಲಿ ಯುಎಸ್ ಪಡೆಗಳು ರಷ್ಯಾದ ಧ್ವಜ ಹೊತ್ತ ತೈಲ ಟ್ಯಾಂಕರ್ ಅನ್ನು ವಶಪಡಿಸಿಕೊಂಡ ನಂತರ ಇಂದು ರಷ್ಯಾದ (Russia) ಸಂಸದ ಅಲೆಕ್ಸಿ ಜುರಾವ್ಲೆವ್ ಅವರು ಅಮೆರಿಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಮಾಸ್ಕೋದ ಸಮುದ್ರಗಳಲ್ಲಿ ಅಮೆರಿಕ ಕಾನೂನುಬಾಹಿರ ಕ್ರಮಗಳನ್ನು ಮುಂದುವರಿಸಿದರೆ ನಮ್ಮ ದೇಶದ ಮಿಲಿಟರಿ ಪ್ರತಿಕ್ರಿಯೆಯನ್ನು ಎದುರಿಸಬೇಕಾಗುತ್ತದೆ. ಹಾಗೇ, ಅಮೆರಿಕದ ಹಡಗುಗಳನ್ನೂ ಮುಳುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಹಿಂದೆ ಬೆಲ್ಲಾ 1 ಎಂದು ಕರೆಯಲಾಗುತ್ತಿದ್ದ ಟ್ಯಾಂಕರ್ ಮರಿನೆರಾವನ್ನು ವಶಪಡಿಸಿಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಜುರಾವ್ಲೆವ್, ಅಮೆರಿಕವು ನಿರ್ಭಯದಿಂದ…

Read More

Viral: ಬೆಂಗಳೂರಿಗೆ ಸ್ಥಳಾಂತರಗೊಂಡ ಬಳಿಕ ಮೊದಲ ವಾರದ ತನ್ನ ಖರ್ಚು ವೆಚ್ಚ ಹಂಚಿಕೊಂಡ ವ್ಯಕ್ತಿ – Kannada News | Bengaluru: Man reveals his one week expenses in Bengaluru

ಬೆಂಗಳೂರು, ಫೆಬ್ರವರಿ 19: ಓದು ಮುಗಿಯುತ್ತಿದ್ದಂತೆ ಬೆಂಗಳೂರಿನತ್ತ (Bengaluru) ಹೆಜ್ಜೆ ಹಾಕುವವರೇ ಹೆಚ್ಚು. ಇಲ್ಲಿ ಒಂದೊಳ್ಳೆ ಕೆಲಸ ಗಿಟ್ಟಿಸಿಕೊಂಡು ಸೆಟಲ್ ಆಗಬೇಕೆನ್ನುವ ಕನಸು ಅನೇಕರದ್ದು. ಆದರೆ ಈ ದುಬಾರಿ ದುನಿಯಾದಲ್ಲಿ ಕೈಯಲ್ಲಿ ಎಷ್ಟು ದುಡ್ಡಿದ್ರು ಸಾಲದು. ಇದೇ ರೀತಿ ಅನುಭವ ವ್ಯಕ್ತಿಯೊಬ್ಬರಿಗೆ ಆಗಿದೆ. ಬೆಂಗಳೂರಿಗೆ ಬಂದ ಒಂದೇ ವಾರಕ್ಕೆ ತಮ್ಮ ಖರ್ಚು ವೆಚ್ಚಗಳನ್ನು ಬಹಿರಂಗ ಪಡಿಸಿದ್ದಾರೆ. ತಿಂಗಳ ಬಾಡಿಗೆ 18 ಸಾವಿರ, ಏಳು ದಿನದ ಊಟಕ್ಕೆ ಸರಿಸುಮಾರು 12 ಸಾವಿರ ರೂ ಖರ್ಚು ಆಯ್ತು ಎಂದು ಹೇಳಿದ್ದಾರೆ….

Read More

Haveri: ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು! – Kannada News | Serial Home Thefts Reported in Nagendramatti, Haveri

ಹಾವೇರಿ, ಡಿಸೆಂಬರ್​​ 23: ನಾಗೇಂದ್ರಮಟ್ಟಿಯಲ್ಲಿ ಮನೆಗಳ‌ ಸರಣಿ ಕಳ್ಳತನ ನಡೆದಿದ್ದು, ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳರು ಕೈಚಳಕ ತೋರಿದ್ದಾರೆ. 7ಕ್ಕೂ ಅಧಿಕ ಮನೆಗಳಲ್ಲಿ ಕಳ್ಳತನ ನಡೆದಿದ್ದು, ನಗದು ಮತ್ತು ಚಿನ್ನಾಭರಣ ಸೇರಿದಂತೆ ವಿವಿಧ ವಸ್ತುಗಳನ್ನ ಕದ್ದು ಖದೀಮರು ಎಸ್ಕೇಪ್​​ ಆಗಿದ್ದಾರೆ. ಜೊತೆಗೆ ಚಳಿಯ ವಾತಾವರಣ ಹಿನ್ನೆಲೆ ಕಳವು ಮಾಡಿರುವ ಮನೆಯಲ್ಲೇ ಚಹಾ ಮಾಡಿಕೊಂಡು ಸೇವಿಸಿ ಹೋಗಿದ್ದಾರೆ. ಕಳ್ಳರ ಕೃತ್ಯಕ್ಕೆ ನಾಗೇಂದ್ರಮಟ್ಟಿ ಜನ ಕಂಗಾಲಾಗಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಹಾವೇರಿ ನಗರ ಪೊಲೀಸರು…

Read More

ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್‌ ಥ್ರಿಲ್ಲರ್‌ ಸಿನಿಮಾ ‘ವಿಕಲ್ಪ’ – Kannada News | Psychological thriller Kannada movie Vikalpa getting ready for release

ಹೊಸಬರ ತಂಡದ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಸೈಕಲಾಜಿಕಲ್‌ ಥ್ರಿಲ್ಲರ್‌ ಕಥಾಹಂದರ ಈ ಸಿನಿಮಾದಲ್ಲಿ ಇದೆ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ ತಲ್ಲಣಗಳನ್ನು ಈ ಸಿನಿಮಾದ ಮೂಲಕ ತೆರೆಮೇಲೆ ತರುತ್ತಿದ್ದಾರೆ ಯುವ ನಟ, ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್‌. ಕನ್ನಡ ಚಿತ್ರರಂಗದಲ್ಲಿ ಸೈಕಲಾಜಿಕಲ್‌ ಥ್ರಿಲ್ಲರ್‌ (Psychological Thriller) ಸಿನಿಮಾಗಳ ಸಂಖ್ಯೆ ಕಡಿಮೆ. ಅಂಥ ವಿರಳ ಸಿನಿಮಾಗಳ ಸಾಲಿಗೆ ‘ವಿಕಲ್ಪ’ ಸಿನಿಮಾ ಕೂಡ ಸೇರುತ್ತಿದೆ. ‘ವಿಕಲ್ಪ’ ಎಂದರೆ ವಾಸ್ತವ ಹಾಗೂ ಕಲ್ಪನೆಗಳ ನಡುವಿನ ಒಂದು ಸ್ಥಿತಿ…

Read More

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಗುಜರಾತ್ ಭೇಟಿಯ ಎರಡನೇ ದಿನವಾದ ಭಾನುವಾರ “ಶೌರ್ಯ ಯಾತ್ರೆ”ಯ ನೇತೃತ್ವ ವಹಿಸಿದ್ದರು. ಸೋಮನಾಥ ಸ್ವಾಭಿಮಾನ್ ಪರ್ವ್‌ನ ಭಾಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ಶೌರ್ಯ ಮತ್ತು ತ್ಯಾಗವನ್ನು ಸಂಕೇತಿಸುವ 108 ಕುದುರೆಗಳ ಮೆರವಣಿಗೆ ಇತ್ತು. ಕ್ರಿ.ಶ. 1299 ರಲ್ಲಿ ದೆಹಲಿ ಸುಲ್ತಾನರ ಸೈನ್ಯದ ದಾಳಿಯ ವಿರುದ್ಧ ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನ ಮಂತ್ರಿಯವರು ಈ ಸಂದರ್ಭದಲ್ಲಿ ಗೌರವ ಸಲ್ಲಿಸಿದರು….

Read More

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ಮಾಜಿ ಸಚಿವ ಕೆ.ಎನ್​​. ರಾಜಣ್ಣ: ಮಹತ್ವದ ವಿಷಯಗಳ ಉಲ್ಲೇಖ – Kannada News | K.N. Rajanna writes to Rahul Gandhi, clarifying his ‘Vote Chori’ statement

ರಾಹುಲ್​​ ಗಾಂಧಿಗೆ ಮತ್ತೊಂದು ಪತ್ರ ಬರೆದ ರಾಜಣ್ಣ ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್​ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ…

Read More

Bengaluru: ಬಿಡಿಎ ನೌಕರನಿಂದಲೇ ಅಧಿಕಾರಿಗೆ ಧಮ್ಕಿ; ವಿಡಿಯೋ ವೈರಲ್​​ – Kannada News | BDA Employee Disrupts Anti Encroachment Drive, Threatens Officer in Bengaluru

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡೆಸುತ್ತಿದ್ದ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಬಿಡಿಎ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಅಧಿಕಾರಿಯೊಬ್ಬರಿಗೆ ಧಮ್ಕಿ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಿಡಿಎ ಎಇಇ ಎಂಜಿನಿಯರ್ ಅಶೋಕ್ ಬಾಗಿ ಅವರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ, ಆಯುಕ್ತರ ಆದೇಶವನ್ನೇ ಪ್ರಶ್ನಿಸಿ ಮಂಜುನಾಥ್ ಗಲಾಟೆ ನಡೆಸಿದ್ದಾರೆ. ಘಟನೆ ಬಳಿಕ ಬಿಡಿಎ ಆಯುಕ್ತ ಮಹೇಶ್ವರ್ ರಾವ್ ಅವರು ತಕ್ಷಣವೇ ಮಂಜುನಾಥ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ, ಅವರ…

Read More

ಟಿವಿಕೆ ಬಾವುಟ ತೋರಿಸಿದ ವಿಜಯ್ ಅಭಿಮಾನಿಗೆ ಥಳಿಸಿದ ಅಜಿತ್ ಫ್ಯಾನ್ಸ್ – Kannada News | Ajith Kumar fans beat up Thalapathy Vijay fans during Mankatha re release for this reason

ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್ ಅವರ ಅಭಿಮಾನಿಗಳ ನಡುವೆ ಯಾವಾಗಲೂ ಕಿರಿಕ್ ಆಗುತ್ತದೆ. ಅದಕ್ಕೆ ಈಗ ಹೊಸದೊಂದು ಉದಾಹರಣೆ ಸಿಕ್ಕಿದೆ. ಅಜಿತ್ ಕುಮಾರ್ (Ajith Kumar) ನಟನೆಯ ‘ಮಂಗಾತ’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಅಜಿತ್ ಅವರ ಅಭಿಮಾನಿಗಳನ್ನು ಕೆಣಕಲು ವಿಜಯ್ (Thalapathy Vijay) ಫ್ಯಾನ್ಸ್ ಪ್ರಯತ್ನಿಸಿದ್ದಾರೆ. ಅದರಿಂದಾಗಿ ಗಲಾಟೆ ಆಗಿದೆ. ವಿಜಯ್ ಅಭಿಮಾನಿಗೆ ಅಜಿತ್ ಫ್ಯಾನ್ಸ್ ಥಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಸಿನಿಮಾದಿಂದ…

Read More

Horoscope Today 09 January: ಇಂದು ಈ ರಾಶಿಯವರನ್ನು ಯಾವ ವಿಚಾರಕ್ಕೂ ನಿಯಂತ್ರಿಸಲಾಗದು – Kannada News | Horoscope Today: January 9, 2026 Daily Zodiac Predictions and Lucky Signs

ಮೇಷ ರಾಶಿ: ಕಾನೂನಿನ ಕ್ರಮದಲ್ಲಿ ನಿಮ್ಮ ಯೋಜನೆ ಇರಲಿ. ಹೂಡಿಕೆಯನ್ನು ಮಾಡಲು ಒತ್ತಡ ಬರಬಹುದು. ದುರಾಸೆ ಪಡದೆ ಬಂದಿದ್ದನ್ನು ಸುಮ್ಮನೇ ಸ್ವೀಕರಿಸಿ. ಜೀವನಕ್ಕೆ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ನಿಮಗೆ ತಿಳಿದ ವಿಚಾರವನ್ನು ಬೇರೆಯವರಿಗೆ ಯಾವುದೇ ನಿರೀಕ್ಷೆಯಿಲ್ಲದೆ ಹೇಳಿಕೊಡುವಿರಿ. ದಾಂಪತ್ಯದ ಸುಖವು ನಿಮಗೆ ಹೆಚ್ಚು ಇಷ್ಟವಾದೀತು. ಮನಸ್ಸಿನಲ್ಲಿ ಸಂಯಮವಿರಲಿ. ವಾತಾವಣವು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು. ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ಸಂಗಾತಿ ಮತ್ತು ಮಕ್ಕಳ ಜೊತೆ ಅನವಶ್ಯಕ ವಾದ ವಿವಾದವು ಆಗಬಹುದು. ನಿಮ್ಮ ತಪ್ಪಿಗೆ ಬೇರೆಯವರನ್ನು ಬೆರಳು…

Read More

ತಂದೆ-ಮಗನನ್ನು ಔಟ್ ಮಾಡಿ ವಿಶ್ವ ದಾಖಲೆ ಬರೆದ ಜೇಮ್ಸ್ ಅ್ಯಂಡರ್ಸನ್

ವಯಸ್ಸು ಜಸ್ಟ್ ನಂಬರ್  ಎಂಬುದನ್ನು ಇಂಗ್ಲೆಂಡ್‌ನ ದಿಗ್ಗಜ ವೇಗಿ ಜೇಮ್ಸ್ ಅ್ಯಂಡರ್ಸನ್ (James Anderson) ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. 43ನೇ ವಯಸ್ಸಿನಲ್ಲೂ ತಮ್ಮ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಬೆಚ್ಚಿಬೀಳಿಸುತ್ತಿರುವ ಅ್ಯಂಡರ್ಸನ್, 2026ರ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಒಂದು ಅದ್ಭುತ ಮತ್ತು ಅಪರೂಪದ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. 21 ವರ್ಷಗಳಲ್ಲಿ ವಿಶೇಷ ದಾಖಲೆ: ಲಂಕಾಶೈರ್ ಪರ ಆಡುತ್ತಿರುವ ಅ್ಯಂಡರ್ಸನ್, ನಾರ್ಥಾಂಪ್ಟನ್‌ಶೈರ್ ತಂಡದ ಯುವ ಬ್ಯಾಟರ್ ಜೇಮ್ಸ್ ಸೇಲ್ಸ್ (James Sales) ಅವರನ್ನು ಔಟ್ ಮಾಡುವ ಮೂಲಕ ಇತಿಹಾಸ ಬರೆದಿದ್ದಾರೆ. ವಿಶೇಷವೆಂದರೆ,…

Read More