ಟೀಮ್ ಇಂಡಿಯಾದಿಂದ ಮೂವರು ಆಟಗಾರರು ಔಟ್
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಿದರೆ, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಸರಣಿಗೆ ಜಸ್ಪ್ರೀತ್ ಬುಮ್ರಾ ಅಲಭ್ಯರಾಗಿದ್ದು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಇನ್ನು ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಂಡಿದ್ದ ಮೂವರು ಆಟಗಾರರು ಈ ಬಾರಿ ತಂಡದಲ್ಲಿ ಸ್ಥಾನ ಪಡೆದಿಲ್ಲ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿದ್ದ ಆಟಗಾರನನ್ನು 15 ಸದಸ್ಯರುಗಳ ತಂಡದಿಂದ ಕೈ ಬಿಟ್ಟಿರುವುದು ಹೊಸ…