Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 11ರ ದಿನಭವಿಷ್ಯ – Kannada News | *Numerology Horoscope Feb 11: Birth Number 7, 8, 9 Predictions & Anxiety Relief

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮಹಿಳೆಯರಿಗೆ ತವರು ಮನೆಯಲ್ಲಿನ ಕೆಲವು ಬೆಳವಣಿಗೆಗಳಿಂದ ಸಂತೋಷ ಆಗಲಿದೆ. ಸಮಾರಂಭಕ್ಕೆ ನಿಮ್ಮ ಉಪಸ್ಥಿತಿಯನ್ನು ಖಾತ್ರಿ ಪಡಿಸಬೇಕು ಎಂದು ಸ್ನೇಹಿತರು- ಸಂಬಂಧಿಗಳು ಒತ್ತಡ ಹಾಕಲಿದ್ದು, ಒಂದಲ್ಲಾ ಒಂದು ಕೆಲಸದ ಕಾರಣಕ್ಕೆ ಈ ಬಗ್ಗೆ ಏನೂ ಹೇಳುವ ಸ್ಥಿತಿಯಲ್ಲಿ ನೀವು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 11ರ ದಿನಭವಿಷ್ಯ – Kannada News | Feb 11 numerology daily predictions for birth numbers 1 2 3

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನಿಮ್ಮಲ್ಲಿ ಕೆಲವರು ಯೋಗ, ರೇಕಿ, ಪ್ರಾಣಾಯಾಮ ಇಂಥ ಕೋರ್ಸ್ ಗಳಿಗೆ ಸೇರ್ಪಡೆ ಆಗುವ ಬಗ್ಗೆ ಆಲೋಚನೆ ಮಾಡುತ್ತೀರಿ. ಈಗಾಗಲೇ ಹಣ ಪಾವತಿ ಮಾಡಿ, ಕಾಯ್ದಿರಿಸಿದ್ದ ಸೈಟು, ವಿಲ್ಲಾ ಅಥವಾ ಫ್ಲ್ಯಾಟ್ ಬಗ್ಗೆ ಈ ದಿನ ಅಪ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಭಾರವನ್ನು ಕಳೆದಿಕೊಳ್ಳುವಿರಿ – Kannada News | Horoscope 11 February 2026; Dina Rashi Bhavishya Today, Checkout the details here

ಮೇಷ ರಾಶಿ : ಆತುರದಲ್ಲಿ ಏನನ್ನಾದರೂ ಮಾಡಿಕೊಂಡೀರ. ನಿಮ್ಮ ಮಾತಿನಲ್ಲಿ ತಾರ್ಕಿಕತೆ ಹೆಚ್ಚು ಕಾಣುವುದು. ಅಮೂಲ್ಯ ವಸ್ತುಗಳ ಖರೀದಿಯಿಂದ ಹಣದ ಉಳಿತಾಯ. ಸಮಯೋಚಿತ ಮಾತುಗಳಿಂದ ಪ್ರಶಂಸೆಯು ಸಿಗಬಹುದು. ವಿವಾಹಯೋಗವು ಬಂದರೂ ಅದನ್ನು ನೀವು ಸ್ವೀಕರಿಸುವ ರೀತಿ ಭಿನ್ನವಾಗಿ ಇರಲಿದೆ. ಇಂದಿನ ನಿಮ್ಮ ಸಮಯದ ವ್ಯತ್ಯಾಸದಿಂದ ಕೆಲವು ಕಾರ್ಯಗಳು ಬದಲಾವಣೆ ಆಗಬಹುದು. ಸಂಗಾತಿಗೆ ಸುಳ್ಳು ಹೇಳಿ ನಿಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವಿರಿ. ಪಕ್ಷಪಾತದಿಂದ ನಿಮಗೇ ತೊಂದರೆ ಎದುರಾದೀತು. ವೃಷಭ ರಾಶಿ: ಇಂದು ಸಮಯದ ಹೊಂದಾಣಿಕೆಯಲ್ಲಿ ನೀವು ಸೋಲಬಹುದು. ಸಭ್ಯರಂತೆ ಇಂದು…

Read More

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ, ಆತಂಕದಲ್ಲಿ ಆಕೆಯ ಪೋಷಕರು – Kannada News | Hindu Young Woman Escaped With Muslim Youth at Mangaluru, Case Booked In surathkal Police station

ಮಂಗಳೂರು, (ಫೆಬ್ರವರಿ 10): ಅನ್ಯಕೋಮಿನ ಯುವಕನೊಂದಿಗೆ ಹಿಂದೂ (Hindu) ಯುವತಿ ಪರಾರಿಯಾಗಿರುವ ಘಟನೆ ಮಂಗಳೂರಿನ (Mangaluru) ಸುರತ್ಕಲ್​​ನಲ್ಲಿ ನಡೆದಿದೆ. ಸುರತ್ಕಲ್​ನ ಮುಕ್ಕ ಕಾಲೇಜಿನಲ್ಲಿ ಓದುತ್ತಿದ್ದ ಕಾಸರಗೋಡು ಆರ್.ಡಿ‌.ನಗರದ ಮೀಪುಗುರಿ ನಿವಾಸಿಯಾದ ವೈಶಾಲಿ ಪರಾರಿಯಾಗಿದ್ದು, ಜನವರಿ 31ರಂದು ಮಿದ್ಲಾಜ್ ಜತೆ ರಿಜಿಸ್ಟರ್​ ಮ್ಯಾರೇಜ್ ಆಗಿರುವ ಮಾಹಿತಿ ತಿಳಿದುಬಂದಿದೆ. ಆದ್ರೆ, ಮಗಳು ಸಂಪರ್ಕಕ್ಕೆ ಸಿಗದಿದ್ದರಿಂದ ಕಂಗಾಲಾಗಿರುವ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಯವರೆಗೆ ತಿಳಿಸದೇ ಜನವರಿ 31ರಂದು ಕೇರಳದ ವಯನಾಡು ನೋಂದಣಾಧಿಕಾರಿ ಕಚೇರಿಯಲ್ಲಿ ವೈಶಾಲಿ ಹಾಗೂ ಮಿದ್ಲಾಜ್…

Read More

ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ – Kannada News | Tamannaah Bhatia unveils new Mysore Sandal Soap in Bengaluru as brand ambassador

ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರು ಮೈಸೂರು ಸ್ಯಾಂಡಲ್​ ಸೋಪ್​​ಗೆ ಪ್ರಚಾರ ರಾಯಭಾರಿ. ಇಂದು (ಫೆಬ್ರವರಿ 10) ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮನ್ನಾ ಭಾಗಿಯಾದರು. ಹೊಸ ರೂಪದ ಸೋಪನ್ನು ಅವರು ಬಿಡುಗಡೆ ಮಾಡಿದರು. ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲೇ ಹೇಳುವ ಮೂಲಕ ತಮನ್ನಾ ಅವರು ಮಾತು ಆರಂಭಿಸಿದರು. ಬಳಿಕ ಅವರು ಇಂಗ್ಲಿಷ್​​ನಲ್ಲಿ ಮಾತು ಮುಂದುವರಿಸಿದರು. ‘ನನಗೆ ಇದು ತುಂಬಾ ದೊಡ್ಡ ಗೌರವ ಹಾಗೂ ಹೆಮ್ಮೆ. KSDL ಕುಟುಂಬದಲ್ಲಿ ನಾನೂ ಒಬ್ಬಳಾಗಿದ್ದೇನೆ. 20 ವರ್ಷಗಳಿಂದ ಚಿತ್ರರಂಗದಲ್ಲಿ…

Read More

ಹೈಕಮಾಂಡ್ ನಾಯಕರ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು – Kannada News | Power Tussle In Karnataka Congress: DK Shivakumar Reacts after Meeting With High command Leaders In Delhi

ನವದೆಹಲಿ, ಫೆಬ್ರವರಿ 10) ವಿಶೇಷ ಅಧಿವೇಶನ ಮುಗಿಯುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಕುರ್ಚಿ ಕಂಪಿಸಿದೆ. ಹೌದು.. ಸದನದಲ್ಲಿ ಕದನ ಮುಗಿಯುತ್ತಿದ್ದಂತೆ ಕುರ್ಚಿ ಕದನ ತಾರಕಕ್ಕೇರಿದ್ದು, ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಹೌದು..ಡಿಸಿಎಂ ಡಿಕೆ ಡೆಲ್ಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕೆ.ಸಿ.ವೇಣುಗೋಪಾಲ್ ಭೇಟಿಗೆ ಡಿಸಿಎಂ ಡಿಕೆ ಸಮಯ ಕೇಳಿದ್ದಾರೆ. ರಾಜ್ಯ ವಿದ್ಯಮಾನಗಳ ಬಗ್ಗೆ ವಿವರವಾಗಿ ಡಿಕೆಶಿ ಮಾತುಕತೆ ನಡೆಸಲಿದ್ದಾರೆ. ಕಳೆದ ಬಾರಿಯೂ ದೆಹಲಿಗೆ ತೆರಳಿದ್ದಾಗ ವೇಣುಗೋಪಾಲ್​ರನ್ನ ಡಿಕೆ ಭೇಟಿ ಮಾಡಿದ್ರು. ಇದರ ಮಧ್ಯೆ…

Read More

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ; ಶುರುವಾಯ್ತು ಯುದ್ಧ! – Kannada News | Married man shopping with girlfriend in Sonbhadra his wife also arrived there with children

ಸೋನಭದ್ರ, ಫೆಬ್ರವರಿ 10: ಉತ್ತರ ಪ್ರದೇಶದ ಸೋನಭದ್ರದಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಪ್ರೇಯಸಿಯೊಂದಿಗೆ ಪ್ರೇಮಿಗಳ ದಿನಕ್ಕಾಗಿ (Valentines Day) ಶಾಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಅವರ ಹೆಂಡತಿ ಶಾಕ್ ನೀಡಿದ್ದಾರೆ. ಅದೇ ಮಾಲ್​ಗೆ ತನ್ನ ಮಕ್ಕಳ ಜೊತೆ ಬಂದ ಹೆಂಡತಿ ತನ್ನ ಗಂಡ ಬೇರೆ ಯುವತಿಯೊಂದಿಗೆ ಶಾಪಿಂಗ್ ಮಾಡುತ್ತಿರುವುದನ್ನು ನೋಡಿ ಅಳುತ್ತಾ ಗೋಳಾಡಿದ್ದಾರೆ. ನಂತರ ಅದೇ ಮಾಲ್​ನಲ್ಲಿ ಗಂಡ ಮತ್ತು ಆತನ ಪ್ರೇಯಸಿಯನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.   ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ…

Read More

ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ – Kannada News | Indigestion Triggers: What to Eat and Avoid

ಇತ್ತೀಚಿನ ದಿನಗಳಲ್ಲಿ, ಅನೇಕರಲ್ಲಿ ಕಂಡುಬರುತ್ತಿರುವ ಹೆಚ್ಚಿನ ಆರೋಗ್ಯ ಸಮಸ್ಯೆಗಳಲ್ಲಿ ಅಜೀರ್ಣವು (Indigestion) ಒಂದು. ವೇಗದ ಜೀವನ, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಹೆಚ್ಚು ಹುರಿದ ಮತ್ತು ಕರಿದ ಆಹಾರಗಳ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಾಗಿದೆ. ಇದರಿಂದ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ, ಸುಡುವ ಸಂವೇದನೆ, ಉಬ್ಬುವುದು ಮತ್ತು ಅಸ್ವಸ್ಥತೆ ಕಂಡುಬರಬಹುದು. ಕೆಲವೊಮ್ಮೆ, ತಿಂದ ನಂತರ, ಹೊಟ್ಟೆ ನೋವು (Stomach Pain), ವಾಕರಿಕೆ ಅಥವಾ ಎದೆಯಲ್ಲಿ ಸುಡುವ ಸಂವೇದನೆ ಕೂಡ…

Read More

9ನೇ ಕ್ಲಾಸ್ ವಿದ್ಯಾರ್ಥಿನಿಯ ಕೆನ್ನೆಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ – Kannada News | Gujarat Teacher gets 3 years Jail sentence For Slapping Class 9 Student Leaving Her Partially Deaf

ನವದೆಹಲಿ, ಫೆಬ್ರವರಿ 10: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳಿಗೆ ಹೋಂ ವರ್ಕ್ ಪೂರ್ಣಗೊಳಿಸದ ಕಾರಣದಿಂದಾಗಿ ಶಿಕ್ಷಕರೊಬ್ಬರು ಕಪಾಳಮೋಕ್ಷ ಮಾಡಿದ್ದರು. ಹೀಗಾಗಿ ಗುಜರಾತ್ ನ್ಯಾಯಾಲಯವು ಆ ಶಾಲಾ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಹಲ್ಲೆಯಿಂದಾಗಿ ಬಾಲಕಿಯ ಕಿವಿಯೋಲೆ ಕಿತ್ತುಬಂದು ಒಂದು ಕಿವಿಯೇ ಕೇಳದಂತಾಗಿದೆ. ಜನವರಿ 30ರಂದು ನೀಡಿದ ತೀರ್ಪಿನಲ್ಲಿ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಹಿಮಾಂಶು ಚೌಧರಿ ಈ ಅಪರಾಧದ ಮೂಲಕ ಶಿಕ್ಷಕಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಇದರಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ ಎಂದು…

Read More

‘ಧುರಂಧರ್’ ನಟ ರಣವೀರ್ ಸಿಂಗ್​ಗೆ ಬೆದರಿಕೆ; ಭದ್ರತೆ ಹೆಚ್ಚಿಸಿದ ಪೊಲೀಸರು – Kannada News | Dhurandhar actor Ranveer Singh receives threat from Lawrence Bishnoi gang

ಕೆಲವೇ ದಿನಗಳ ಹಿಂದೆ ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದರ ಬೆನ್ನಲ್ಲೇ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗಿದೆ. ವಾಟ್ಸಪ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ರಣವೀರ್ ಸಿಂಗ್, ದೀಪಿಕಾ ಪಡುಕೋಣೆ (Deepika Padukone) ದಂಪತಿಯ ನಿವಾಸಕ್ಕೆ ಭದ್ರತೆ ಒದಗಿಸಿದ್ದಾರೆ. ಬೆದರಿಕೆ ಬಂದಿರುವುದರಿಂದ ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಮೊದಲು ಬಾಲಿವುಡ್​​ನ…

Read More