ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ – Kannada News | Yash Sings Shankar Nag Song: Viral Video Proves Kannada Love

ನಟ ರಾಕಿಂಗ್ ಸ್ಟಾರ್ ಯಶ್ ಅವರು ಶಂಕರ್​ ನಾಗ್ ಅವರ ದೊಡ್ಡ ಅಭಿಮಾನಿ. ಇದು ಹಲವು ಬಾರಿ ಸಾಬೀತಾಗಿದೆ. ಯಶ್​ ಅವರು ‘ಗೂಗ್ಲಿ’ ಸಿನಿಮಾದಲ್ಲಿ ಶಂಕರ್ ನಾಗ್ ಗೆಟಪ್​​ನಲ್ಲಿಯೂ ಕಾಣಿಸಿಕೊಂಡಿದ್ದರು. ಈಗ ಯಶ್ ಅವರು ಪಾರ್ಟಿಯಲ್ಲಿ ಶಂಕರ್ ನಾಗ್ ಸಿನಿಮಾದ ಹಾಡು ಹಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಯಶ್ ಅವರ ಕನ್ನಡ ಪ್ರೀತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಅಂದಹಾಗೆ ಇದು ಅವರ ಬರ್ತ್​​​ಡೇ ಪಾರ್ಟಿ ಸಂದರ್ಭದ ವಿಡಿಯೋ ಹೌದೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಯಶ್ ಅವರು ಎಷ್ಟೇ ಎತ್ತರಕ್ಕೆ ಬೆಳೆದರೂ ಕನ್ನಡದ ಬಗ್ಗೆ ಅವರು ತೋರುವ ಪ್ರೀತಿ ಕಡಿಮೆ ಮಾಡಿಲ್ಲ. ಪರಭಾಷೆಯಲ್ಲಿ ಹೆಚ್ಚು ನಟಿಸೋ ಬದಲು, ಪರಭಾಷೆಯವರನ್ನು ಇಲ್ಲಿಗೆ ಕರೆಸಬೇಕು ಎಂಬ ಆಲೋಚನೆ ಅವರಿಗೆ ಯಾವಾಗಲೂ ಇತ್ತು. ‘ಟಾಕ್ಸಿಕ್’ ಚಿತ್ರ ಅದಕ್ಕೆ ಉತ್ತಮ ಉದಾಹರಣೆ. ಪರಭಾಷಾ ತಂತ್ರಜ್ಞರು ಹಾಗೂ ಕಲಾವಿದರನ್ನು ಯಶ್ ಈ ಚಿತ್ರಕ್ಕಾಗಿ ಕರೆಸಿಕೊಂಡಿದ್ದಾರೆ. ಹಾಲಿವುಡ್ ತಂತ್ರಜ್ಞರು ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ಕನ್ನಡ ಪ್ರಿತಿ ಕಡಿಮೆ ಆಗಿಲ್ಲ.

ಇದನ್ನೂ ಓದಿ: ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್; ಇದು ಯಶ್ ಹವಾ

ಜನವರಿ 8 ಯಶ್ ಬರ್ತ್​​ಡೇ. ಈ ಸಂದರ್ಭದ ವಿಡಿಯೋ ಎಂದು ವಿಡಿಯೋ ಒಂದು ವೈರಲ್ ಆಗುತ್ತಿದೆ.ಈ ವಿಡಿಯೋದಲ್ಲಿ ಯಶ್ ಅವರು ಶಂಕರ್ ನಾಗ್ ಅವರ ‘ಸಿಬಿಐ ಶಂಕರ್’ ಸಿನಿಮಾದ ‘ಗೀತಾಂಜಲಿ’ ಹಾಡನ್ನು ಹಾಡುತ್ತಿದ್ದಾರೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದು ಹಳೆಯ ವಿಡಿಯೋ ಎನ್ನಲಾಗುತ್ತಿದೆ.

ಯಶ್ ಅವರು ಸದ್ಯ ಮುಂಬೈನಲ್ಲಿದ್ದಾರೆ. ಅಲ್ಲದೆ, ಯಶ್ ಅವರು ಇತ್ತೀಚೆಗೆ ಗೆಟಪ್​ ಬದಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರು ಮುಖ ಹಾಗೂ ತಲೆಯನ್ನು ಮುಚ್ಚಿಕೊಂಡು ಹೋಗಿದ್ದರು. ಈ ವಿಡಿಯೋದಲ್ಲಿ ಅವರು ಹಳೆಯ ಗೆಟಪ್​​ನಲ್ಲೇ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RBI Sachet: ಆನ್​ಲೈನ್ ಫ್ರಾಡ್ ಆದರೆ, ಹೂಡಿಕೆ ಸ್ಕೀಮ್ ಬಗ್ಗೆ ಅನುಮಾನ ಬಂದರೆ ಆರ್​ಬಿಐನ ಸಚೇತ್ ಪೋರ್ಟಲ್ ಮೊರೆಹೋಗಿ – Kannada News | RBI Sachet Portal helps detecting online frauds and filing complaint

ಕಳ್ಳತನ, ದರೋಡೆ ಮಾಡುವವರ ಒಂದು ವರ್ಗವಾದರೆ, ಆನ್​ಲೈನ್​ನಲ್ಲಿ ವಿವಿಧ ಸ್ಕೀಮ್​ಗಳ ಮೂಲಕ ಒಮ್ಮೆಗೇ ನೂರಾರು, ಸಾವಿರಾರು, ಲಕ್ಷಾಂತರ ಜನರನ್ನು ಯಾಮಾರಿಸಿ ಕೋಟ್ಯಂತ ರೂ ಗುಳುಂ ಮಾಡುವ ವಂಚಕರು (Fraudsters) ಹೆಚ್ಚಾಗುತ್ತಿದ್ದಾರೆ. ಹಣ ಡಬಲ್ ಮಾಡುತ್ತೇವೆ, ಷೇರು ಹೂಡಿಕೆಯಿಂದ ಭರ್ಜರಿ ಲಾಭ ಕೊಡಿಸುತ್ತೇವೆ, ಅತ್ಯಧಿಕ ರಿಟರ್ನ್ ಕೊಡುತ್ತೇವೆ ಇತ್ಯಾದಿ ನಾನಾ ಪ್ರಲೋಬನೆಗಳನ್ನು ಒಡ್ಡಿ ಜನರಿಂದ ಹಣ ಪಡೆದು ಯಾಮಾರಿಸುವ ವಂಚಕರು ಹಲವರಿದ್ದಾರೆ.

ತಾವು ಸಾಚಾ ಎಂದು ತೋರಿಸಿಕೊಳ್ಳಲು ಸೆಬಿ, ಆರ್​ಬಿಐ, ಐಆರ್​ಡಿಎ ಇತ್ಯಾದಿ ರೆಗ್ಯುಲೇಟಿ ಸಂಸ್ಥೆಗಳ ನೊಂದಣಿ ಮಾಡಿಕೊಂಡಿದ್ದೇವೆ ಎಂದು ಹೇಳಿಕೊಳ್ಳುವುದುಂಟು. ಕೆಲವೊಮ್ಮೆ ಹೂಡಿಕೆದಾರರು ಅಧಿಕ ರಿಟರ್ನ್ಸ್​ನ ಆಶೆಗೆ ಒಳಗಾಗಿ ಆಫರ್ ಕೊಟ್ಟ ಕಂಪನಿಯ ಹಿನ್ನೆಲೆ ಕೂಡ ಪರಿಶೀಲಿಸುವ ಗೋಜಿಗೆ ಹೋಗುವುದಿಲ್ಲ. ನಿಮ್ಮಿಂದ ಹೂಡಿಕೆ ಪಡೆಯುತ್ತಿರುವ ಕಂಪನಿಯ ಹಿನ್ನೆಲೆ ಮತ್ತು ಸಾಚಾತನ ಪರಿಶೀಲಿಸಬೇಕಾದ್ದು ಬಹಳ ಮುಖ್ಯ. ನೀವು ಆರ್​ಬಿಐನ ಸಚೇತ್ ಪೋರ್ಟಲ್ ನೆರವು ಪಡೆಯಬಹುದು.

ಸಚೇತ್ ಪೋರ್ಟಲ್​ನಲ್ಲಿ ಸಂಸ್ಥೆಗಳ ಮಾನ್ಯತೆ ಪರಿಶೀಲಿಸಿ…

ಹಣಕಾಸು ಸ್ಕೀಮ್ ಆಫರ್ ಮಾಡುವ ಒಂದು ಕಂಪನಿಯು ಯಾವುದಾದರೂ ರೆಗ್ಯುಲೇಟರ್​ನಲ್ಲಿ ಮಾನ್ಯತೆ ಹೊಂದಿರಬೇಕು. ಷೇರು ಟಿಪ್ಸ್ ಕೊಡುವವರು ಸೆಬಿ ನೊಂದಾವಣಿ ಪಡೆದಿರಬೇಕು. ಠೇವಣಿ ಪಡೆಯುವವರು ಆರ್​ಬಿಐ ನೊಂದಾವಣಿ ಹೊಂದಿರಬೇಕು. ಹೀಗೆ ಆ ಕ್ಷೇತ್ರಕ್ಕೆ ಸಂಬಂಧಿಸಿದ ರೆಗ್ಯುಲೇಟರ್​ಗಳ ಮಾನ್ಯತೆ ಹೊಂದಿರಬೇಕು.

ಇದನ್ನೂ ಓದಿ: ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು…

ನಿಮಗೆ ಆಫರ್ ಮಾಡಿರುವ ಕಂಪನಿ ಮಾನ್ಯತೆ ಹೊಂದಿದೆಯಾ ಎಂದು ಪರಿಶೀಲಿಸಲು ಆರ್​ಬಿಐನ ಸಚೇತ್ ಪೋರ್ಟಲ್​ಗೆ ಭೇಟಿ ನೀಡಿ. ಅದರ ವಿಳಾಸ ಇಂತಿದೆ: sachet.rbi.org.in/

ಇಲ್ಲಿ ಮುಖ್ಯಪುಟದ ತಳದಲ್ಲಿ ರಿಜಿಸ್ಟರ್ಡ್ ಎಂಟಿಟೀಸ್ ಎನ್ನುವ ಟ್ಯಾಬ್ ಕಾಣುತ್ತದೆ. ಅದರಲ್ಲಿ ಆರ್​ಬಿಐ, ಸೆಬಿ, ಎನ್​ಎಚ್​ಬಿ ಇತ್ಯಾದಿ ರೆಗ್ಯುಲೇಟರ್​ಗಳ ಪಟ್ಟಿ ಇದೆ. ಸಂಬಂಧಿತ ರೆಗ್ಯುಲೇಟರ್ ಹೆಸರಿನ ಮೇಲೆ ಕ್ಲಿಕ್ ಮಾಡಿದರೆ, ಅದರಲ್ಲಿ ಮಾನ್ಯತೆ ಪಡೆದ ಎಲ್ಲಾ ಸಂಸ್ಥೆಗಳ ಅಪ್​ಡೇಟೆಡ್ ಪಟ್ಟಿ ಕಾಣುತ್ತದೆ. ಅದನ್ನು ಪರಿಶೀಲಿಸಿ.

ವಂಚನೆಯಾಗಿದ್ದರೆ ದೂರು ಕೊಡಲು ಅವಕಾಶ

ನಿಮಗೆ ಆನ್​ಲೈನ್ ಫ್ರಾಡ್ ಆಗಿದ್ದರೆ ಇದೇ ಸಚೇತ್ ಪೋರ್ಟಲ್​​ನಲ್ಲಿ ದೂರು ಕೊಡುವ ಅವಕಾಶ ಇದೆ. ಪೋರ್ಟಲ್ ಮುಖಪುಟದಲ್ಲಿ ‘ಫೈಲ್ ಎ ಕಂಪ್ಲೇಂಟ್’ ಟ್ಯಾಬ್ ಮೇಲೆ ಕ್ಲಿಕ್ ಮಾಡಿದರೆ ಪ್ರತ್ಯೇಕ ಪೇಜ್ ಓಪನ್ ಆಗುತ್ತದೆ.

ಇದನ್ನೂ ಓದಿ: ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ?

ನಿಮ್ಮನ್ನು ವಂಚಿಸಿದ ಸಂಸ್ಥೆ ಯಾವ ರೆಗ್ಯುಲೇಟರ್ ವ್ಯಾಪ್ತಿಗೆ ಬರುತ್ತದೆ ಎಂಬುದು ಗೊತ್ತಿದ್ದರೆ ಅದನ್ನು ಆಯ್ದುಕೊಂಡು ದೂರು ಕೊಡಬಹುದು. ಒಂದು ವೇಳೆ ರೆಗ್ಯುಲೇಟರ್ ಯಾವುದು ಎಂದು ಗೊತ್ತಿಲ್ಲದಿದ್ದರೆ ಅದನ್ನೂ ಪರಿಗಣಿಸಲಾಗುತ್ತದೆ. ಅಂಥ ಸಂದರ್ಭದಲ್ಲಿ ನಿಮ್ಮ ದೂರು ಯಾವ ರೆಗ್ಯುಲೇಟರ್ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಅಡ್ಮಿನಿಸ್ಟ್ರೇಟರ್ ನಿರ್ಧರಿಸಿ ದೂರನ್ನು ಸಂಬಂಧಿತ ಅಧಿಕಾರಿಗಳಿಗೆ ವರ್ಗಾಯಿಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸುಖಾಂತ್ಯವಾಯ್ತು ‘ಜನ ನಾಯಗನ್’ ವಿವಾದ, ‘ಪರಾಶಕ್ತಿ’ ಕತೆ ಏನಾಯ್ತು? – Kannada News | Sivakarthikeyan starrer Parasakthi Tamil movie got UA certificate from CBFC

ತಮಿಳು ಸಿನಿಮಾಗಳಿಗೆ ಸೆನ್ಸಾರ್ (Censor) ಸಮಸ್ಯೆ ಕಾಡುತ್ತಿದೆ. ಇಂದು (ಜನವರಿ 09) ಬಿಡುಗಡೆ ಆಗಬೇಕಿದ್ದ ‘ಜನ ನಾಯಗನ್’ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕಿತ್ತು. ಇದೇ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ ನಿರ್ಮಾಪಕರು ‘ಯು/ಎ’ ಪ್ರಮಾಣ ಪತ್ರ ಪಡೆಯಲು ಯಶಸ್ವಿ ಆಗಿದ್ದಾರೆ. ನಾಳೆ (ಜನವರಿ 10) ಬಿಡುಗಡೆ ಆಗಲಿದ್ದ ಮತ್ತೊಂದು ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ ‘ಪರಾಶಕ್ತಿ’ ಸಿನಿಮಾಕ್ಕೂ ಸಹ ಸಿಬಿಎಫ್​​ಸಿ ಪ್ರಮಾಣ ಪತ್ರ ಕುರಿತಂತೆ ಸಮಸ್ಯೆ ಎದುರಾಗಿತ್ತು.

ಸುಧಾ ಕೊಂಗರ ನಿರ್ದೇಶಿಸಿ, ಶಿವಕಾರ್ತಿಕೇಯನ್ ಮತ್ತು ಶ್ರೀಲೀಲಾ ನಟಿಸಿದ್ದ ‘ಪರಾಶಕ್ತಿ’ ಸಿನಿಮಾಕ್ಕೆ ತಮಿಳುನಾಡಿ ಸಿಬಿಎಫ್​​ಸಿ ಸಮಿತಿ ಬರೋಬ್ಬರಿ 23 ಕಟ್​​ಗಳನ್ನು ಸೂಚಿಸಿತ್ತು. ಇದನ್ನು ನಿರ್ದೇಶಕಿ ಸುಧಾ ಕೊಂಗರ ವಿರೋಧಿಸಿದ್ದರು. ಸೆನ್ಸಾರ್ ಮಂಡಳಿ ಹೇಳಿರುವ ದೃಶ್ಯಗಳಿಗೆ ಕತ್ತರಿ ಹಾಕಿದರೆ ಸಿನಿಮಾದ ವಿಷಯ ಗೌಣವಾಗುತ್ತದೆ ಎಂದು ವಾದಿಸಿದ್ದರು. ಬಳಿಕ ಸಿನಿಮಾವನ್ನು ಮುಂಬೈನ ರಿವ್ಯೂ ಕಮಿಟಿಗೆ ಕಳಿಸಿದ್ದರು. ಇಂದು (ಜನವರಿ 09) ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ನೀಡಲಾಗಿದೆ.

‘ಪರಾಶಕ್ತಿ’ ಸಿನಿಮಾ ತಮಿಳುನಾಡಿನ ಹಿಂದಿ ವಿರೋಧಿ ಚಳವಳಿಯ ಕುರಿತಾದ ಕತೆಯನ್ನು ಒಳಗೊಂಡಿದೆ. ಇದೇ ಕಾರಣಕ್ಕೆ ಸಹಜವಾಗಿಯೇ ಕೇಂದ್ರ ಸರ್ಕಾರದ ವಿರುದ್ಧ ಕೆಲವಾರು ಸಂಭಾಷಣೆಗಳು ಸಹ ಇವೆ, ಹಾಗಾಗಿ ಈ ಸಿನಿಮಾ ಭಾಷಾವಾರು ದ್ವೇಷಕ್ಕೆ ಕಾರಣ ಆಗಬಹುದೆಂದು ತಮಿಳುನಾಡು ಸಿಬಿಎಫ್​​ಸಿ ಹಲವು ದೃಶ್ಯಗಳಿಗೆ ಕಟ್ ಸೂಚಿಸಿತ್ತು. ಆದರೆ ಚಿತ್ರತಂಡ ಇದನ್ನು ವಿರೋಧಿಸಿತ್ತು. ಇದೇ ಕಾರಣಕ್ಕೆ ‘ಜನ ನಾಯಗನ್’ ರೀತಿ ‘ಪರಾಶಕ್ತಿ’ ಸಿನಿಮಾದ ಬಿಡುಗಡೆ ಸಹ ಇಕ್ಕಟ್ಟಿಗೆ ಸಿಲುಕಿತ್ತು. ಇದೀಗ ಸಿನಿಮಾಕ್ಕೆ ‘ಯು/ಎ’ ಪ್ರಮಾಣ ಪತ್ರ ದೊರೆತಿದ್ದು, ಸಿನಿಮಾ ನಿಗದಿಯಂತೆ ನಾಳೆ ಅಂದರೆ ಜನವರಿ 10 ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ:‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ

ಇದೇ ದಿನ ನ್ಯಾಯಾಲಯದ ಮೂಲಕ ‘ಜನ ನಾಯಗನ್’ ಸಿನಿಮಾಕ್ಕೂ ‘ಯು/ಎ’ ಪ್ರಮಾಣ ಪತ್ರ ದೊರೆತಿದೆ. ಆದರೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿಲ್ಲ. ಒಂದೊಮ್ಮೆ ‘ಜನ ನಾಯಗನ್’ ಸಿನಿಮಾದ ಬಿಡುಗಡೆ ತಡವಾದರೆ ಅದು ‘ಪರಾಶಕ್ತಿ’ ಸಿನಿಮಾಕ್ಕೆ ಒಳಿತೇ ಆಗಲಿದೆ. ‘ಪರಾಶಕ್ತಿ’ ಸಿನಿಮಾವು ತಮಿಳು ಜನರು ಹಿಂದಿ ಭಾಷಾ ಹೇರಿಕೆ ವಿರುದ್ಧ ಮಾಡಿದ ಹೋರಾಟದ ಕತೆಯನ್ನು ಒಳಗೊಂಡಿದೆ. ನಾಯಕ ಶಿವಕಾರ್ತಿಕೇಯನ್ ಕ್ರಾಂತಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಶ್ರೀಲೀಲಾ, ಹಿಂದಿ ಶಿಕ್ಷಕಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾನಲ್ಲಿ ಜಯಂ ರವಿ ವಿಲನ್ ಪಾತ್ರದಲ್ಲಿ ನಟಿಸಿರುವುದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Viral: ಗೆಳೆಯನನ್ನು ಭೇಟಿಯಾಗಲು ಬೆಂಗಳೂರಿಗೆ ಬಂದ ವಿದೇಶಿ ಮಹಿಳೆ ಹೀಗೆಂದಿದ್ದೇಕೆ? – Kannada News | Italian woman meets boyfriend and expresses admiration for Bengaluru

ಭಾರತಕ್ಕೆ ಬರುವ ವಿದೇಶಿಗರು ಬೆಂಗಳೂರಿಗೂ (Bengaluru) ಭೇಟಿ ನೀಡಿ ಇಲ್ಲಿನ ತಿಂಡಿ ತಿನಿಸುಗಳನ್ನು ಸವಿಯುವುದಿದೆ. ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಇಲ್ಲಿನ ಸೌಂದರ್ಯಕ್ಕೆ ಮನಸೋಲುತ್ತಾರೆ. ಇದೀಗ ಇಟಾಲಿಯನ್ ಮಹಿಳೆಯೊಬ್ಬರು (Italian woman) ಬೆಂಗಳೂರಿಗೆ ಮೊದಲ ಬಾರಿಗೆ ಏಕಾಂಗಿಯಾಗಿ ಪ್ರಯಾಣ ಬೆಳೆಸಿದ್ದಾರೆ. ತನ್ನ ಗೆಳೆಯನನ್ನು ಭೇಟಿ ಮಾಡಲು ವಿದೇಶದಿಂದ ಇಲ್ಲಿಗೆ ಬಂದಿದ್ದು ತಮಗೆ ಏನು ಅನಿಸಿತು ಎಂಬ ಬಗ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ. ಸಲಹೆ ಹಾಗೂ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ರೆಡ್ಡಿಟ್ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇವರ ಪ್ರಾಮಾಣಿಕ ಅಭಿಪ್ರಾಯಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿವೆ.

ರೆಡ್ಡಿಟ್ ಖಾತೆಯಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ತಿಂಗಳ ಹಿಂದೆ ನಾನು ನನ್ನ ಗೆಳೆಯನನ್ನು ಭೇಟಿ ಮಾಡಲು ಬೆಂಗಳೂರಿಗೆ ವಿಮಾನದಲ್ಲಿ ಹೋಗಲು ಯೋಜಿಸುತ್ತಿದ್ದರಿಂದ ಕೆಲವು ಸಲಹೆಗಳು ಮತ್ತು ಭೇಟಿ ನೀಡಲು ಸ್ಥಳಗಳನ್ನು ಕೇಳುವ ಪೋಸ್ಟ್ ಅನ್ನು ಮಾಡಿದ್ದೆ. ನಾನು ನನ್ನ ಅನುಭವವನ್ನು ಹಂಚಿಕೊಳ್ಳಲು ಬಯಸಿದ್ದೆ, ಆದರೆ ಎಲ್ಲಕ್ಕಿಂತ ಹೆಚ್ಚಾಗಿ ತಮ್ಮ ಆಲೋಚನೆಗಳನ್ನು ಹಂಚಿಕೊಂಡು ನನಗೆ ಸಲಹೆ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದಿದ್ದಾರೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಇಲ್ಲಿನ ರುಚಿಕರವಾದ ಆಹಾರ ಇಷ್ಟ ಪಟ್ಟು ಸವಿದೆ. ಭೇಟಿ ನೀಡಿದ ಎಲ್ಲಾ ಸ್ಥಳಗಳು ಇಷ್ಟ ಆಯ್ತು. ಆದರೆ ನಾನು ತನ್ನ ವಸತಿ ಸೌಕರ್ಯದ ವಿಷಯದಲ್ಲಿ ಸ್ವಲ್ಪ ಮೋಸ ಹೋದೆ. ಆದರೆ ಇದು ನಿಜವಾಗಿಯೂ ಅನ್ವೇಷಿಸಲು ಆಸಕ್ತಿದಾಯಕ ನಗರವಾಗಿತ್ತು. ನಾನು ಮತ್ತೆ ಭೇಟಿ ನೀಡುವ ಬಗ್ಗೆ ಯೋಚಿಸುತ್ತಿದ್ದೇನೆ ಅದು ಶೀಘ್ರದಲ್ಲೇ ಆಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಜೀವನ ದುಬಾರಿಯಲ್ಲ; ತಿಂಗಳ ಖರ್ಚು ವೆಚ್ಚ ಹಂಚಿಕೊಂಡ ಯುವಕ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಮತ್ತೆ ಬನ್ನಿ ಎಂದಿದ್ದಾರೆ. ಇನ್ನೊಬ್ಬರು, ನೀವು ನಿಮ್ಮ ಗೆಳೆಯನನ್ನು ಹೇಗೆ ಭೇಟಿಯಾದಿರಿ ಎಂದು ಕೇಳಿದ್ದಾರೆ. ಮತ್ತೊಬ್ಬರು, ಬೆಂಗಳೂರು ಎಲ್ಲರಿಗೂ ಇಷ್ಟವಾಗುತ್ತೆ, ನಿಮ್ಮ ಅಭಿಪ್ರಾಯ ಕೇಳಿ ಖುಷಿಯಾಯ್ತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ – Kannada News | Central University of Karnataka Admissions 2026: UG Admissions Open, CUET Exam, 8 percent reservation for candidates from Kalyan Karnataka region

ಕೇಂದ್ರೀಯ ವಿ.ವಿ.ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ

ಕಲಬುರಗಿ, ಜನವರಿ 09: ರಾಜ್ಯದ ಏಕೈಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ 2026ನೇ ಶೈಕ್ಷಣಿಕ ಸಾಲಿನಲ್ಲಿ 15 ವಿವಿಧ ಪದವಿ ಕೋರ್ಸ್ ಗಳ ವ್ಯಾಸಂಗಕ್ಕೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ 8ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದ್ದಾರೆ.

ಜನವರಿ 3ರಿಂದಲೆ ಅರ್ಜಿ ಸಲ್ಲಿಕೆ ಆರಂಭ

ಕಲಬುರಗಿ ನಗರದ ಕಡಗಂಚಿ ಬಳಿ ಇರೋ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಜನವರಿ 3 ರಿಂದಲೆ https://cuet.nta.nic.in/ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಗೊಂಡಿದ್ದು, ಅನ್ ಲೈನ್ ಮೂಲಕ ಶುಲ್ಕ ಪಾವತಿಯೊಂದಿಗೆ ಅರ್ಜಿ ಸಲ್ಲಿಸಲು ಜನವರಿ 31 ಕೊನೆ ದಿನವಾಗಿದೆ. ಫೆಬ್ರವರಿ 2 ರಿಂದ 4ರ ವರೆಗೆ ಸಲ್ಲಿಸಿದ ಅರ್ಜಿಯಲ್ಲಿ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಕುಲಪತಿ ಹೇಳಿದ್ದಾರೆ.

ಯಾವೆಲ್ಲಾ ಭಾಷೆಯಲ್ಲಿ ಪರೀಕ್ಷೆ?

ಮೇ-2026ರಲ್ಲಿ ಪ್ರವೇಶ ಪರೀಕ್ಷೆ ನಡೆಯುವುದರಿಂದ ಈಗಾಗಲೆ ದ್ವಿತೀಯ ಪಿ.ಯು.ಸಿ. ತೇರ್ಗಡೆಯಾದ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಸಹ ಪ್ರವೇಶಾತಿ ಪರೀಕ್ಷೆ ಬರೆಯಬಹುದಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಇದಾಗಿದ್ದು, ಇಂಗ್ಲೀಷ್, ಹಿಂದಿ, ಬಂಗಾಳಿ, ಗುಜರಾತಿ, ಕನ್ನಡ, ಮಲಯಾಳಂ, ಮರಾಠಿ, ಓಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು ಭಾಷೆಯಲ್ಲಿ ಪರೀಕ್ಷೆ ಬರೆಯಬಹುದಾಗಿದೆ.

ಯಾವೆಲ್ಲಾ ಕೋರ್ಸ್​ಗಳು ಲಭ್ಯ?

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ (ಎಲೆಕ್ಟ್ರಿಕಲ್ ಇಂಜಿನಿಯರಿಂಗ್), (ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್), (ಆರ್ಟಿಫಿಷಿಯಲ್ ಇಂಟಲಿಜನ್ಸ್ ಅಂಡ್ ಮಷೀನ್ ಲರ್ನಿಂಗ್), (ಗಣಿತ ಮತ್ತು ಕಂಪ್ಯೂಟಿಂಗ್), (ಕಂಪ್ಯೂಟರ್ ಸೈನ್ಸ್), ಬಿ.ಎಸ್ಸಿ (ಭೌತಶಾಸ್ತ್ರ), (ರಸಾಯನಶಾಸ್ತ್ರ), (ಭೂವಿಜ್ಞಾನ), (ಮನೋವಿಜ್ಞಾನ), ಬಿಬಿಎ, ಸಮಾಜ ಕಾರ್ಯದಲ್ಲಿ ಪದವಿ (ಬಿ ಎಸ್ ಡಬ್ಲ್ಯೂ), ಬಿ.ಎ (ಅರ್ಥಶಾಸ್ತ್ರ), (ಇತಿಹಾಸ), (ಇಂಗ್ಲಿಷ್), (ಎಲ್.ಎಲ್.ಬಿ ಐದು ವರ್ಷದ ಇಂಟಿಗ್ರೇಟೆಡ್ ಪ್ರೋಗ್ರಾಮ್) ಲಭ್ಯವಿದೆ. ಪರೀಕ್ಷೆ ನಡೆಯುವ ಸ್ಥಳ, ದಿನಾಂಕ, ಪ್ರವೇಶ ಕಾರ್ಡ್‌, ಫಲಿತಾಂಶ ಎಲ್ಲವು ಎನ್.ಟಿ.ಎ. ಅಂತರ್ಜಾಲದಲ್ಲಿ ತಿಳಿಸಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ನಿರಂತರ ವೆಬ್ ಸೈಟ್ ವೀಕ್ಷಿಸಬೇಕೆಂದು ಕುಲಪತಿಗಳು ತಿಳಿಸಿದ್ದಾರೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ?

ಅರ್ಜಿ ಸಲ್ಲಿಸುವಲ್ಲಿ ಅಭ್ಯರ್ಥಿಗಳಿಗೆ ತೊಂದರೆ ಎದುರಾದಲ್ಲಿ ದೂ.ಸಂ. 011-40759000 ಅಥವಾ cuet-ug@nta.ac.in ಗೆ ಇಮೇಲ್ ಮೂಲಕ ಸಂಪರ್ಕಿಸಬಹುದಾಗಿದೆ. ಕರ್ನಾಟಕದ ಬೆಳಗಾವಿ, ಬಳ್ಳಾರಿ, ಕಲಬುರಗಿ, ಬೀದರ್, ದಾವಣಗೆರೆ, ಹಾಸನ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ಧಾರವಾಡ ಮತ್ತು ಚಿಕ್ಕಮಗಳೂರಿನಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಪ್ರೊ.ಬಟ್ಟು ಸತ್ಯನಾರಾಯಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ. ಆರ್.ಆರ್.ಬಿರಾದಾರ, ಪರೀಕ್ಷಾ ನಿಯಂತ್ರಣಾಧಿಕಾರಿ ಕೋಟಾಸಾಯಿ ಕೃಷ್ಣಾ, ಪ್ರೊ. ಹನುಮೇಗೌಡ, ಪ್ರೊ. ಹೆಗಡಿ, ಸಹಾಯಕ ಸಂಪರ್ಕಾಧಿಕಾರಿ ಪ್ರಕಾಶ ಬಾಳಿಕಾಯಿ, ಡಾ. ಟಿ.ಎಸ್. ಕಟ್ಟಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್​​, ಪ್ರತಾಪ್​​, ಸುಮಲತಾ ಪ್ಲ್ಯಾನ್​​? – Kannada News | Karnataka Elections 2028: Early Political Plans of Nikhil, Pratap, and Sumalatha

ಪ್ರತಾಪ್​​ ಸಿಂಹ, ಸುಮಲತಾ ಮತ್ತು ನಿಖಿಲ್​.

ಬೆಂಗಳೂರು, ಜನವರಿ 09: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಹಲವು ನಾಯಕರು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ . ಯಾವ ಕ್ಷೇತ್ರದಲ್ಲಿ ತಾವು ಚುನಾವಣೆಗೆ ಸ್ಪರ್ಧಿಸಿದ್ರೆ ಒಳಿತು, ರಣತಂತ್ರ ಹೇಗಿರಬೇಕು ಎಂಬ ಬಗ್ಗೆ ಲೆಕ್ಕಾಚಾರ ನಡೆಸುತ್ತಿದ್ದಾರೆ. ಈ ಸಾಲಿನಲ್ಲಿ ಈಗಾಗಲೇ ಬಿಜೆಪಿಯ ಪ್ರತಾಪ್​​ ಸಿಂಹ ಮತ್ತು ಸುಮಲತಾ ಹೆಸರು ಕೇಳಿಬಂದಿತ್ತು. ಇದಕ್ಕೀಗ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್​​ ಹೆಸರೂ ಸೇರ್ಪಡೆಯಾಗಿದೆ. ಹ್ಯಾಟ್ರಿಕ್​​ ಸೋಲಿನ ಬಳಿಕ ಪುಟಿದೇಳಲು ಜೆಡಿಎಸ್​​ ಯುವ ನಾಯಕ ತೆರೆಮರೆಯ ತಯಾರಿ ನಡೆಸಿದ್ದಾರೆ.

ಮಂಡ್ಯ ಅಥವಾ ಮದ್ದೂರಿನಿಂದ ನಿಖಿಲ್​​ ಸ್ಪರ್ಧೆ?

2028ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ನಿಖಿಲ್, ಮಂಡ್ಯಕ್ಕೆ ಮತ್ತೆ ಎಂಟ್ರಿ ಕೊಡಲು ಪ್ಲ್ಯಾನ್​​ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಸ್ಪರ್ಧಿಸಿದ್ದ ನಿಖಿಲ್​ ಪರಾಭವಗೊಂಡಿದ್ದರು. ಈ ನಡುವೆ ಇಲ್ಲಿಂದಲೇ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಇರಾದೆ ಇವರದ್ದು ಎನ್ನಲಾಗಿದೆ. ಹೀಗಾಗಿ ಮಂಡ್ಯದಲ್ಲೇ ಮನೆ ಮಾಡಲು ನಿಖಿಲ್ ಕುಮಾರಸ್ವಾಮಿ ಮುಂದಾಗಿದ್ದು, ಮಂಡ್ಯ ಅಥವಾ ಮದ್ದೂರು ವಿಧಾನಸಭಾ ಕ್ಷೇತ್ರದ ಮೇಲೆ ಒಲವು ಹೊಂದಿದ್ದಾರೆ ಎನ್ನಲಾಗಿದೆ. ರಾಮನಗರಕ್ಕಿಂತ ಮಂಡ್ಯವೇ ಸುಲಭ ಎಂಬುದು ಜೆಡಿಎಸ್​ ಲೆಕ್ಕಾಚಾರವೂ ಆಗಿರುವ ಕಾರಣ ಈ ಹಿನ್ನೆಲೆ ಮತ್ತೆ ಮಂಡ್ಯಕ್ಕೆ ಬರಲು ನಿಖಿಲ್​​ ಸಿದ್ಧತೆ ನಡೆಸಿದ್ದಾರೆ. ಸದ್ಯ ಮಂಡ್ಯದಲ್ಲಿ ಮನೆ ಹುಡುಕಲು ಬೆಂಬಲಿಗರಿಗೆ ನಿಖಿಲ್‌ ಸೂಚಿಸಿದ್ದು, ವಾರಕ್ಕೊಮ್ಮೆ ಮಂಡ್ಯದಲ್ಲೇ ಉಳಿಯಲು ನಿರ್ಧರಿಸಿದ್ದಾರಂತೆ. ಈ ಹಿಂದೆ ವಾರಕೊಮ್ಮೆ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೆಚ್​ಡಿಕೆ ಹೇಳಿದ್ದರೂ ಅಪರೂಪಕ್ಕೊಮ್ಮೆ ಮಾತ್ರ ಮಂಡ್ಯ ಜಿಲ್ಲೆಗೆ ಬರುತ್ತಿದ್ದಾರೆ. ಕೇಂದ್ರ ಸಚಿವ ಜವಾಬ್ದಾರಿ, ಅನಾರೋಗ್ಯದಿಂದ ವಾರಕ್ಕೊಮ್ಮೆ ಭೇಟಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಈಗ ಮಗನ ಮೂಲಕ ಜಿಲ್ಲೆ ಮೇಲೆ ಹಿಡಿತ ಸಾಧಿಸಲು HDK ಕೂಡ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೇಂದ್ರದ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ಸರ್ಕಾರ; ವಿಶೇಷ ಅಧಿವೇಶನ ಕರೆಯಲು ತೀರ್ಮಾನ

ಇನ್ನು ಮಾಜಿ ಸಂಸದ ಪ್ರತಾಪ್​​ ಸಿಂಹ ಕೂಡ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿದ್ದಾರೆ. ಜನವರಿ 5ರಂದು ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ನೇಹ ಬಳಗದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿದ ಬಳಿಕ ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣದತ್ತ ಹೆಜ್ಜೆ ಇಡುವುದಾಗಿ ಪರೋಕ್ಷವಾಗಿ ಹೇಳಿದ್ದ ಪ್ರತಾಪ್ , ಚಾಮರಾಜ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗ್ತಿದೆ. ಮತ್ತೊಂದೆಡೆ ಮಾಜಿ ಸಂಸದೆ ಸುಮಲತಾ ಕೂಡ ರಾಜ್ಯ ರಾಜಕಾರಣದತ್ತ ಒಲವು ತೋರಿದ್ದು, ಮುಂದಿನ ಚುನಾವಣಾ ರಾಜಕೀಯದ ಬಗ್ಗೆ ನಮ್ಮ ಪಕ್ಷದ ನಾಯಕರ ಜೊತೆ ಚರ್ಚಿಸುವೆ ಎಂದಿದ್ದಾರೆ. ಆದರೆ ಅವರು ಯಾವ ಕ್ಷೇತ್ರದಿಂದ ಕಣಕ್ಕಿಳಿಯುವ ಇರಾದೆ ಹೊಂದಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:10 pm, Fri, 9 January 26

Source link

ಸೋಮನಾಥ ದೇವಾಲಯದ ಮೇಲೆ 1026ರಿಂದ ಎಷ್ಟು ಬಾರಿ ನಡೆದಿತ್ತು ದಾಳಿ ಮತ್ತು ಯಾವಾಗ? ಇಲ್ಲಿದೆ ಮಾಹಿತಿ – Kannada News | A Thousand Year Journey of Somnath Temple: Destruction, Revival and Faith

ಪದೇ ಪದೇ ದಾಳಿ ನಡೆದ ನಂತರ, ಭಾರತದ ಉಕ್ಕಿನ ಮನುಷ್ಯ ಮತ್ತು ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ನವೆಂಬರ್ 12, 1947 ರಂದು ಜುನಾಗಢಕ್ಕೆ ಭೇಟಿ ನೀಡಿದಾಗ ದೇವಾಲಯದ ಭವ್ಯತೆಯು ಹೆಚ್ಚಾಯಿತು. ಅವರು ಸೋಮನಾಥ ದೇವಾಲಯದ ಪುನರ್ನಿರ್ಮಾಣಕ್ಕೆ ಆದೇಶಿಸಿದರು. ದೇವಾಲಯದ ನಿರ್ಮಾಣವನ್ನು ಮೇಲ್ವಿಚಾರಣೆ ಮಾಡಲು ಮತ್ತು ಹಣಕಾಸು ವ್ಯವಸ್ಥೆ ಮಾಡಲು ಅವರು ಸೋಮನಾಥ ಟ್ರಸ್ಟ್ ಅನ್ನು ಸ್ಥಾಪಿಸಿದರು. ತರುವಾಯ, ಮೇ 11, 1951 ರಂದು, ಭಾರತದ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರು ದೇವಾಲಯದಲ್ಲಿ ವಿಗ್ರಹ ಪ್ರತಿಷ್ಠಾಪನಾ ಸಮಾರಂಭವನ್ನು ನೆರವೇರಿಸಿದರು.

Source link

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ! – Kannada News | Foreign Couple Thrilled at Koppal’s Gavi Matha Jatre

ಕೊಪ್ಪಳ, ಜನವರಿ 09: ದಕ್ಷಿಣ ಭಾರತದ ಕುಂಭಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಮಹಾಶಿವಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಜನ ಸಾಗರವೇ ಹರಿದು ಬಂದಿದ್ದು, ಮುಖ್ಯವಾಗಿ ವಿದೇಶಿ ದಂಪತಿಗಳು ಆಗಮಿಸಿರುವುದು ಎಲ್ಲರ ಗಮನ ಸೆಳೆದಿದೆ. ಹಂಪಿಗೆ ಪ್ರವಾಸಕ್ಕೆ ಬಂದಿದ್ದ ಇಸ್ರೇಲ್ ಮೂಲದ ದಂಪತಿಗಳಾದ ಹೀಲಾ ಮತ್ತು ನೋಯಿಂ, ಜಾತ್ರೆಯ ಹಿನ್ನಲೆಯಲ್ಲಿ ಗವಿ ಮಠಕ್ಕೆ ಭೇಟಿ ನೀಡಿದ್ದರು. ಮಠದ ಸಂಪ್ರದಾಯ, ಜಾತ್ರೆಯ ವೈಭವ ನೋಡಿ ಸಂತಸ ವ್ಯಕ್ತಪಡಿಸಿದ ದಂಪತಿಗಳು, ಸ್ಥಳೀಯ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Vastu Tips: ವಾಸ್ತು ಪ್ರಕಾರ ಹೊಸ ವರ್ಷದ ಕ್ಯಾಲೆಂಡರನ್ನು ತಪ್ಪಿಯೂ ಈ ದಿಕ್ಕಿನಲ್ಲಿ ನೇತುಹಾಕಬೇಡಿ – Kannada News | Vastu Tips for Calendar Placement: Attract Good Luck and Prosperity to Your Home

2026ರ ಹೊಸ ವರ್ಷ ಆರಂಭವಾಗುತ್ತಿದ್ದಂತೆ, ವರ್ಷವಿಡೀ ಹಬ್ಬ, ವಿಶೇಷ ದಿನಗಳು ಮತ್ತು ರಜಾದಿನಗಳ ದಿನಾಂಕಗಳನ್ನು ನೆನಪಿಟ್ಟುಕೊಳ್ಳಲು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಹೊಸ ಕ್ಯಾಲೆಂಡರ್‌ಗಳನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಬಹುತೇಕ ಜನರು ಮಾಡುವ ಸಾಮಾನ್ಯ ತಪ್ಪೆಂದರೆ, ಕ್ಯಾಲೆಂಡರ್ ಅನ್ನು ಸರಿಯಾದ ಸ್ಥಳ ಅಥವಾ ದಿಕ್ಕನ್ನು ಪರಿಗಣಿಸದೆ ಗೋಡೆಯ ಮೇಲೆ ನೇತುಹಾಕುವುದು. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿರುವ ಪ್ರತಿಯೊಂದು ವಸ್ತುವಿನ ಸ್ಥಾನಕ್ಕೂ ತನ್ನದೇ ಆದ ಮಹತ್ವವಿದೆ. ಕ್ಯಾಲೆಂಡರ್ ಕೂಡ ಇದಕ್ಕೆ ಹೊರತಲ್ಲ. ನೀವು ಹೊಸ ವರ್ಷದ ಕ್ಯಾಲೆಂಡರ್ ಖರೀದಿಸಿದ್ದರೆ, ಅದನ್ನು ಕೇವಲ ಕಾಣುವಂತೆ ಇಡುವುದಕ್ಕಿಂತ ಸರಿಯಾದ ದಿಕ್ಕಿನಲ್ಲಿ ನೇತುಹಾಕಿರುವುದನ್ನು ಖಚಿತಪಡಿಸಿಕೊಳ್ಳುವುದು ಉತ್ತಮವೆಂದು ವಾಸ್ತು ತಜ್ಞರು ಹೇಳುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ ಗೋಡೆಯ ಮೇಲೆ ಕ್ಯಾಲೆಂಡರ್ ನೇತುಹಾಕುವ ದಿಕ್ಕು ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. ತಪ್ಪಾದ ದಿಕ್ಕಿನಲ್ಲಿ ಇಡಲಾದ ಕ್ಯಾಲೆಂಡರ್ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಬಹುದು ಎಂದು ನಂಬಲಾಗುತ್ತದೆ. ಆದರೆ ಸರಿಯಾದ ದಿಕ್ಕಿನಲ್ಲಿ ನೇತುಹಾಕಿದ ಕ್ಯಾಲೆಂಡರ್ ಮನೆಗೆ ಶುಭಶಕ್ತಿ, ಅದೃಷ್ಟ ಮತ್ತು ಯಶಸ್ಸನ್ನು ತರಲು ಸಹಕಾರಿಯಾಗುತ್ತದೆ ಎಂಬುದು ವಾಸ್ತು ಶಾಸ್ತ್ರದ ಅಭಿಪ್ರಾಯ.

ಹೊಸ ವರ್ಷದ ಆರಂಭದೊಂದಿಗೆ ಹೊಸ ಗುರಿಗಳು ಮತ್ತು ಹೊಸ ಆಶಯಗಳನ್ನು ಹೊಂದಿರುವವರು ತಮ್ಮ ಕ್ಯಾಲೆಂಡರ್ ಅನ್ನು ಪೂರ್ವಕ್ಕೆ ಎದುರಾಗಿರುವ ಗೋಡೆಯ ಮೇಲೆ ಇಡುವುದು ಉತ್ತಮವೆಂದು ಹೇಳಲಾಗುತ್ತದೆ. ಪೂರ್ವ ದಿಕ್ಕನ್ನು ಸೂರ್ಯೋದಯದ ದಿಕ್ಕು ಎಂದು ಪರಿಗಣಿಸಲಾಗುತ್ತದೆ. ಇದು ಹೊಸ ಆರಂಭ, ಬೆಳವಣಿಗೆ ಮತ್ತು ಪ್ರಗತಿಯ ಸಂಕೇತವಾಗಿದೆ. ನಿಮ್ಮ ಕನಸುಗಳು ಮತ್ತು ಗುರಿಗಳನ್ನು ನೆನಪಿಸುವ ಉಲ್ಲೇಖಗಳು ಅಥವಾ ಚಿತ್ರಗಳಿರುವ ಕ್ಯಾಲೆಂಡರ್‌ಗಳು ಈ ದಿಕ್ಕಿನಲ್ಲಿ ವಿಶೇಷ ಶಕ್ತಿ ನೀಡುತ್ತವೆ.

ನೀವು ವ್ಯಾಪಾರದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಮತ್ತು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಬಯಸಿದರೆ, ಕ್ಯಾಲೆಂಡರ್ ಅನ್ನು ಉತ್ತರ ದಿಕ್ಕಿನಲ್ಲಿ ಇಡುವುದು ಶುಭಕರ. ಉತ್ತರ ದಿಕ್ಕು ಕಾಂತೀಯ ಶಕ್ತಿಯೊಂದಿಗೆ ಸಂಬಂಧ ಹೊಂದಿದ್ದು ಸ್ಥಿರತೆ ಮತ್ತು ಸಮೃದ್ಧಿಯನ್ನು ಸೂಚಿಸುತ್ತದೆ. ಸರಳ ಮತ್ತು ವೃತ್ತಿಪರ ವಿನ್ಯಾಸದ ಕ್ಯಾಲೆಂಡರ್‌ಗಳು ಈ ದಿಕ್ಕಿನಲ್ಲಿ ಇರಿಸಿದರೆ ವ್ಯವಹಾರ ಮತ್ತು ಉದ್ಯೋಗದಲ್ಲಿ ಉತ್ತಮ ಫಲ ನೀಡುತ್ತವೆ ಎಂಬ ನಂಬಿಕೆಯಿದೆ.

ಆಧ್ಯಾತ್ಮಿಕ ಬೆಳವಣಿಗೆ ಮತ್ತು ಮನಸ್ಸಿನ ಶಾಂತಿಯನ್ನು ಬಯಸುವವರು ತಮ್ಮ ಕ್ಯಾಲೆಂಡರ್ ಅನ್ನು ಈಶಾನ್ಯ ದಿಕ್ಕಿನಲ್ಲಿ ನೇತುಹಾಕಬಹುದು. ಈ ದಿಕ್ಕು ಆಧ್ಯಾತ್ಮಿಕ ಶಕ್ತಿಗೆ ಅತ್ಯಂತ ಪ್ರಮುಖವೆಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತ್ತದೆ. ಧ್ಯಾನ, ಶಾಂತಿ ಮತ್ತು ಆತ್ಮವಿಕಾಸವನ್ನು ಪ್ರತಿಬಿಂಬಿಸುವ ಚಿತ್ರಗಳು ಅಥವಾ ಉಲ್ಲೇಖಗಳಿರುವ ಕ್ಯಾಲೆಂಡರ್‌ಗಳು ಈ ದಿಕ್ಕಿನಲ್ಲಿ ಉತ್ತಮ ಪರಿಣಾಮ ನೀಡುತ್ತವೆ.

ಇದನ್ನೂ ಓದಿ: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು

ಮನೆಯಲ್ಲಿನ ಸಂಬಂಧಗಳು ಮತ್ತು ಪ್ರೀತಿಯನ್ನು ಬಲಪಡಿಸಲು ನೈಋತ್ಯ ದಿಕ್ಕಿನಲ್ಲಿ ಕ್ಯಾಲೆಂಡರ್ ಇಡುವುದು ಸಹಾಯಕವಾಗುತ್ತದೆ ಎಂದು ನಂಬಲಾಗಿದೆ. ಈ ದಿಕ್ಕನ್ನು ಬಾಂಧವ್ಯ, ವಾತ್ಸಲ್ಯ ಮತ್ತು ಕುಟುಂಬದ ಸ್ಥಿರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೃದಯ ಸ್ಪರ್ಶಿಸುವ ಚಿತ್ರಗಳು ಅಥವಾ ಕುಟುಂಬ ಭಾವನೆಗಳನ್ನು ಪ್ರತಿಬಿಂಬಿಸುವ ವಿನ್ಯಾಸಗಳು ಈ ದಿಕ್ಕಿನಲ್ಲಿ ಸೂಕ್ತವಾಗಿರುತ್ತವೆ.

ಒಟ್ಟಾರೆ, ಕ್ಯಾಲೆಂಡರ್ ಅನ್ನು ನೇತುಹಾಕಲು ಸರಿಯಾದ ದಿಕ್ಕನ್ನು ಆರಿಸುವುದು ಬಹಳ ಮುಖ್ಯ. ವಾಸ್ತು ಶಾಸ್ತ್ರದ ಪ್ರಕಾರ, ದಕ್ಷಿಣಕ್ಕೆ ಎದುರಾಗಿ ಗೋಡೆಯ ಮೇಲೆ ಕ್ಯಾಲೆಂಡರ್ ಅನ್ನು ನೇತುಹಾಕುವುದನ್ನು ತಪ್ಪಿಸಬೇಕು. ಅದೇ ರೀತಿ ಬಾಗಿಲು ಅಥವಾ ಕಿಟಕಿಗಳ ಮೇಲೆ ಕ್ಯಾಲೆಂಡರ್ ಇಡುವುದು ಕೂಡ ಸೂಕ್ತವಲ್ಲ, ಏಕೆಂದರೆ ಅದು ಸಕಾರಾತ್ಮಕ ಶಕ್ತಿಯ ಹರಿವಿಗೆ ಅಡ್ಡಿಯಾಗುತ್ತದೆ. ಸರಿಯಾದ ಸ್ಥಳ ಮತ್ತು ದಿಕ್ಕಿನಲ್ಲಿ ಇಡಲಾದ ಕ್ಯಾಲೆಂಡರ್ ಹೊಸ ವರ್ಷದಲ್ಲಿ ನಿಮ್ಮ ಜೀವನಕ್ಕೆ ಶುಭಶಕ್ತಿ ಮತ್ತು ಸಮೃದ್ಧಿಯನ್ನು ತರಲಿದೆ ಎಂಬ ನಂಬಿಕೆ ಇದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಿಎಫ್ ಹಣಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತಾ? ವಿತ್​ಡ್ರಾ ಮಾಡಿದಾಗ ಟ್ಯಾಕ್ಸ್ ಎಷ್ಟು? ನೀವು ತಿಳಿದಿರಬೇಕಾದ ಸಂಗತಿಗಳಿವು… – Kannada News | Different tax rules on EPF contributions and withdrawals

ಇಪಿಎಫ್ (EPF) ಎಂಬುದು ಕಾರ್ಮಿಕರು ಅಥವಾ ಉದ್ಯೋಗಿಗಳ ನಿವೃತ್ತಿ ಭವಿಷ್ಯಕ್ಕೆಂದು ರೂಪಿಸಲಾಗಿರುವ ರಿಟೈರ್ಮೆಂಟ್ ಸ್ಕೀಮ್. ಇದರಲ್ಲಿ ಉದ್ಯೋಗಿಯ ಮೂಲವೇತನದ ಶೇ. 12ರಷ್ಟನ್ನು ಮುರಿದುಕೊಂಡು ಇಪಿಎಫ್ ಅಕೌಂಟ್​ಗೆ ವರ್ಗಾಯಿಸಲಾಗುತ್ತದೆ. ಉದ್ಯೋಗದಾತರು ಅಥವಾ ಕಂಪನಿಯು ಕೂಡ ಶೇ. 12ರಷ್ಟನ್ನು ತಮ್ಮ ಪಾಲಿನ ಕೊಡುಗೆಯಾಗಿ ಇಪಿಎಫ್ ಫಂಡ್​ಗೆ ಸೇರಿಸುತ್ತದೆ. ವಾಲಂಟರಿ ಪಿಎಫ್ ಸ್ಕೀಮ್ ಅಡಿಯಲ್ಲಿ ಉದ್ಯೋಗಿಗಳು ಬಯಸಿದರೆ ಶೇ. 12ಕ್ಕಿಂತ ಹೆಚ್ಚಿನ ಮೊತ್ತವನ್ನು ಇಪಿಎಫ್ ಅಕೌಂಟ್​ಗೆ ಹಾಕುತ್ತಾ ಹೋಗಬಹುದು ಪ್ರತೀ ತಿಂಗಳು. ಈ ರೀತಿ ಇಪಿಎಫ್ ಅಕೌಂಟ್​ನಲ್ಲಿ ಜಮೆಯಾದ ಹಣಕ್ಕೆ ಸರ್ಕಾರ ಪ್ರತೀ ವರ್ಷ ಬಡ್ಡಿ ತುಂಬುತ್ತಾ ಹೋಗುತ್ತದೆ. ಉದ್ಯೋಗಿ, ಕೊಡುಗೆ ಮತ್ತು ಸರ್ಕಾರದಿಂದ ಬರುವ ಕೊಡುಗೆಗಳಿಂದ ಇಪಿಎಫ್ ಅಕೌಂಟ್ ಸಮೃದ್ಧಗೊಂಡು ಬೆಳೆಯುತ್ತಾ ಹೋಗುತ್ತದೆ. ಹಾಗಾದರೆ, ಇಷ್ಟೂ ಆದಾಯಕ್ಕೆ ತೆರಿಗೆ ಇರುವುದಿಲ್ಲವಾ? ಇಪಿಎಫ್​ಗೆ ಯಾವಾಗ ಟ್ಯಾಕ್ಸ್ ಅನ್ವಯ ಆಗುತ್ತೆ, ಹೇಗೆ ಆಗುತ್ತೆ ಎನ್ನುವ ವಿವರ ಇಲ್ಲಿದೆ.

ಇಪಿಎಫ್​ನ ನಿಮ್ಮ ಅಕೌಂಟ್​ನಲ್ಲಿ ಮೂರು ರೀತಿಯ ಕೊಡುಗೆಗಳಿರುತ್ತವೆ. ಉದ್ಯೋಗಿ, ಉದ್ಯೋಗದಾತರು ಮತ್ತು ಬಡ್ಡಿ ಹಣ, ಈ ಮೂರು ಕೊಡುಗೆಗಳಿರುತ್ತವೆ. ಈ ಮೂರಕ್ಕೂ ಕೂಡ ಟ್ಯಾಕ್ಸ್ ಬೇರೆ ಬೇರೆ ರೀತಿಯಲ್ಲಿ ಕೆಲಸ ಮಾಡುತ್ತದೆ.

ಉದ್ಯೋಗಿಯ ಪಿಎಫ್ ಕೊಡುಗೆಗೆ ಟ್ಯಾಕ್ಸ್ ಡಿಡಕ್ಷನ್

ಉದ್ಯೋಗಿಯ ಪಿಎಫ್ ಕೊಡುಗೆಯ ಹಣಕ್ಕೆ ಸೆಕ್ಷನ್ 80ಸಿ ಅಡಿಯಲ್ಲಿ ಡಿಡಕ್ಷನ್ ಅವಕಾಶ ಇರುತ್ತದೆ. ಉದ್ಯೋಗಿಯ ಪಿಎಫ್ ಕೊಡುಗೆ ವರ್ಷದಲ್ಲಿ 1.5 ಲಕ್ಷ ರೂವರೆಗೂ ಇದ್ದರೆ ಅದಕ್ಕೆ ಡಿಡಕ್ಷನ್ ಕ್ಲೇಮ್ ಮಾಡಬಹುದು.

ಇದನ್ನೂ ಓದಿ: ಲಕ್ಷ ರೂ ಸಂಬಳ ಪಡೆಯುತ್ತಿರುವ ಪಾಕಿಸ್ತಾನೀಯರ ಸಂಖ್ಯೆ ಎಷ್ಟು ಗೊತ್ತಾ?

ಉದ್ಯೋಗದಾತರಿಂದ 7.5 ಲಕ್ಷ ರೂವರೆಗಿನ ಕೊಡುಗೆಗೆ ಟ್ಯಾಕ್ಸ್ ಇಲ್ಲ

ಕಂಪನಿಯ ಕೊಡುಗೆಗೆ ವಿಭಿನ್ನವಾಗಿ ಟ್ಯಾಕ್ಸ್ ಅನ್ವಯ ಆಗುತ್ತದೆ. ಅಕೌಂಟ್​ಗೆ ಇವರಿಂದ ಹಣ ಜಮೆಯಾಗುವಾಗ ಟ್ಯಾಕ್ಸ್ ಕಡಿತ ಆಗುವುದಿಲ್ಲ. ಆದರೆ, ಒಂದು ವರ್ಷದಲ್ಲಿ ಇಪಿಎಫ್, ಎನ್​ಪಿಎಸ್ ಇತ್ಯಾದಿ ಸ್ಕೀಮ್​ಗಳಿಗೆ ಕಂಪನಿ 7.5 ಲಕ್ಷ ರೂಗಿಂತ ಹೆಚ್ಚಿನ ಕೊಡುಗೆ ಕೊಟ್ಟಿದ್ದರೆ ಆಗ ಹೆಚ್ಚುವರಿ ಹಣವು ಟ್ಯಾಕ್ಸಬಲ್ ಇನ್ಕಮ್ ಆಗುತ್ತದೆ. ಆ ಹೆಚ್ಚುವರಿ ಹಣಕ್ಕೆ ಸಿಗುವ ಬಡ್ಡಿಯೂ ಕೂಡ ಟ್ಯಾಕ್ಸಬಲ್ ಎನಿಸುತ್ತದೆ. ಭಾರತದಲ್ಲಿರುವ ಹೆಚ್ಚಿನ ಉದ್ಯೋಗಿಗಳ ಸಂಬಳವು ಆ ಮಟ್ಟದಲ್ಲಿರುವುದಿಲ್ಲವಾದ್ದರಿಂದ ಚಿಂತಿಸುವ ಅಗತ್ಯ ಇಲ್ಲ.

ವರ್ಷದಲ್ಲಿ ಬಡ್ಡಿ ಹಣ 2.5 ಲಕ್ಷ ರೂಗಿಂತ ಹೆಚ್ಚಿದ್ದರೆ ಟ್ಯಾಕ್ಸ್

ಇನ್ನು, ಇಪಿಎಫ್ ಅಕೌಂಟ್​ನಲ್ಲಿರುವ ಹಣಕ್ಕೆ ಸರ್ಕಾರದಿಂದ ಸಿಗುವ ಬಡ್ಡಿ ಟ್ಯಾಕ್ಸಬಲ್ ಆಗಿರುತ್ತದೆ. ಉದ್ಯೋಗಿಯ ಇಪಿಎಫ್ ಕೊಡುಗೆ ಒಂದು ಹಣಕಾಸು ವರ್ಷದಲ್ಲಿ 2.5 ಲಕ್ಷ ರೂ ಮೀರಿದ್ದರೆ, ಹೆಚ್ಚುವರಿ ಮೊತ್ತಕ್ಕೆ ಸಿಗುವ ಬಡ್ಡಿಯು ಟ್ಯಾಕ್ಸಬಲ್ ಇನ್ಕಮ್ ಎನಿಸುತ್ತದೆ. ಉದಾಹರಣೆಗೆ, ಒಂದು ವರ್ಷದಲ್ಲಿ ನಿಮ್ಮ ಇಪಿಎಫ್ ಕೊಡುಗೆ 3 ಲಕ್ಷ ರೂ ಇದ್ದಲ್ಲಿ 50,000 ರೂಗೆ ಸಿಗುವ ಬಡ್ಡಿಯು ಟ್ಯಾಕ್ಸಬಲ್ ಇನ್ಕಮ್ ಎನಿಸುತ್ತದೆ.

ಇಪಿಎಫ್ ಹಣ ವಿತ್​ಡ್ರಾ ಮಾಡಿದರೆ ಎಷ್ಟು ಟ್ಯಾಕ್ಸ್…

ನೀವು ಇಪಿಎಫ್ ಹಣವನ್ನು ವಿತ್​ಡ್ರಾ ಮಾಡುವುದು ಈಗ ಹೆಚ್ಚು ಸುಲಭ. ಆದರೆ, ಐದು ವರ್ಷದ ಸೇವೆ ಮುಗಿಯುವುದರೊಳಗೆ ಪಿಎಫ್ ಹಣ ವಿತ್​ಡ್ರಾ ಮಾಡಿದರೆ ಅದಕ್ಕೆ ಟ್ಯಾಕ್ಸ್ ಅನ್ವಯ ಆಗುತ್ತದೆ. 5 ವರ್ಷ ಸೇವೆ ಪೂರ್ಣಗೊಂಡ ನಂತರ ವಿತ್​ಡ್ರಾ ಮಾಡುವ ಪಿಎಫ್ ಹಣಕ್ಕೆ ಯಾವುದೇ ಟ್ಯಾಕ್ಸ್ ಇರುವುದಿಲ್ಲ.

ಇದನ್ನೂ ಓದಿ: ಈ ಬಾರಿ ಬಹಳ ಜನರಿಗೆ ಸಿಕ್ಕಿಲ್ಲ ಇನ್ಕಮ್ ಟ್ಯಾಕ್ಸ್ ರೀಫಂಡ್; ಏನು ಕಾರಣ?

ಇಲ್ಲಿ ಐದು ವರ್ಷದ ಸೇವಾವಧಿ ಎಂದರೆ ಒಂದೇ ಕಂಪನಿಯಲ್ಲೇ ಐದು ವರ್ಷ ನಿರಂತರ ಇರಬೇಕೆಂದಿಲ್ಲ. ಬೇರೆ ಬೇರೆ ಕಂಪನಿಗಳಲ್ಲಿ ಕೆಲಸ ಮಾಡಿ ಅಲ್ಲೆಲ್ಲಾ ಇಪಿಎಫ್ ಅಕೌಂಟ್ ಹೊಂದಿದ್ದರೂ ಸಾಕು, ಅಷ್ಟೂ ಅವಧಿಯನ್ನು ಕ್ರೋಢೀಕರಿಸಬಹುದು.

ಪಿಎಫ್ ವಿತ್​ಡ್ರಾಯಲ್​ಗೆ ಟಿಡಿಎಸ್

ಒಂದು ವೇಳೆ ಐದು ವರ್ಷ ಸೇವಾವಧಿ ಪೂರ್ಣಗೊಳ್ಳುವ ಮುನ್ನ ಪಿಎಫ್ ವಿತ್​ಡ್ರಾ ಮಾಡಿದರೆ ಟಿಡಿಎಸ್ ಅನ್ವಯ ಆಗುತ್ತದೆ. 50,000 ರೂ ಒಳಗಿನ ಹಣವಾದರೆ ಟ್ಯಾಕ್ಸ್ ಇರುವುದಿಲ್ಲ. ಹೆಚ್ಚಿನ ಮೊತ್ತಕ್ಕೆ ಟಿಡಿಎಸ್ ಕಡಿತ ಆಗುತ್ತದೆ.

ಪ್ಯಾನ್ ನಂಬರ್ ಇದ್ದರೆ ಶೇ 10 ಟಿಡಿಎಸ್ ಮಾತ್ರವೇ ಕಡಿತ ಆಗುತ್ತದೆ. ಪ್ಯಾನ್ ಸಲ್ಲಿಸದಿದ್ದರೆ ಶೇ. 30ರವರೆಗೂ ಟಿಡಿಎಸ್ ಕಡಿತ ಆಗುತ್ತದೆ. ಅಕಸ್ಮಾತ್ ನಿಮ್ಮ ಹಣಕ್ಕೆ ಟಿಡಿಎಸ್ ಮುರಿದುಕೊಂಡಿದ್ದರೆ ನೀವು ಐಟಿ ರಿಟರ್ನ್ ಸಲ್ಲಿಸುವಾಗ ರೀಫಂಡ್ ಕ್ಲೇಮ್ ಮಾಡಬಹುದು. ಹೀಗೆ ಮಾಡಬೇಕೆಂದರೆ ನಿಮ್ಮ ಆ ವರ್ಷದ ಒಟ್ಟೂ ಟ್ಯಾಕ್ಸಬಲ್ ಇನ್ಕಮ್ ಟ್ಯಾಕ್ಸ್ ಎಕ್ಸೆಂಪ್ಷನ್ ಲಿಮಿಟ್​ನಲ್ಲಿ ಇರಬೇಕಾಗುತ್ತದೆ.

ಪಿಎಫ್ ವಿತ್​ಡ್ರಾ ಮಾಡುವಾಗ ಟಿಡಿಎಸ್ ಕಡಿತ ಆಗಬಾರದು ಎಂದಿದ್ದಲ್ಲಿ ಫಾರ್ಮ್ 15ಜಿ ಅಥವಾ 15ಎಚ್ ಅನ್ನು ಸಲ್ಲಿಸಬಹುದು.

ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version