ಹಸುಗೂಸು ಬಿಟ್ಟು ದೊಡ್ಡ ಮಗಳ ಮದ್ವೆಗೆ ಹೋದ ತಾಯಿ: ಕೂಸು ದುರಂತ ಸಾವು! – Kannada News | Tumakuru: Newborn Baby Dies After Mother Leaves Infant Behind to Attend Wedding

ಮಗು (ಪ್ರಾತಿನಿಧಿಕ ಚಿತ್ರ)Image Credit source: Freepik ತುಮಕೂರು, ಜನವರಿ 30: ಮಗುವೊಂದು (baby) ಜನನವಾಗಿ ಕೇವಲ ಒಂದು ದಿನ ಕಳೆದಿತ್ತು. ಪಿಳಿಪಿಳಿ ಅಂತ ಬಿಡುತ್ತಿದ್ದ ಪುಟ್ಟ ಕಣ್ಣು ಅಮ್ಮನನ್ನು ಹುಡುಕುತ್ತಿತ್ತು. ತಾಯಿಯ ಅಕ್ಕರೆ ಬಯಸಿ ಅಳುತ್ತಿದ್ದ ಆ ಮಗುವಿನ ಬದುಕಿಗೆ ತಮ್ಮವರೇ ಶತ್ರುಗಳಾಗಿದ್ದಾರೆ. ತಿಳಿದೋ ಅಥವ ತಿಳಿಯದೆಯೋ ಆದ ತಪ್ಪಿಗೆ ಪುಟ್ಟ ಕಂದ ಕಣ್ಬಿಟ್ಟು ಪ್ರಪಂಚ ನೊಡುವ ಮುಂಚೆಯೇ ಶಾಶ್ವತವಾಗಿ ಕಣ್ಮುಚ್ಚಿದೆ. ಈ ಕರುಳು ಹಿಂಡುವ ಘಟನೆಗೆ ತುಮಕೂರು (Tumakuru) ಜಿಲ್ಲೆ ಸಾಕ್ಷಿಯಾಗಿದೆ. ನಡೆದದ್ದೇನು? ಮಗುವಿಗೆ…

Read More

ದಾವಣಗೆರೆ ಬೈ ಎಲೆಕ್ಷನ್: ಬಿಎಸ್​​ವೈ ಬಣಕ್ಕೆ ತೀವ್ರ ಮುಖಭಂಗ, ಮೇಲುಗೈ ಸಾಧಿಸಿದ ಮಾಜಿ ಎಂಪಿ

ದಾವಣಗೆರೆ, (ಮಾರ್ಚ್ 19): ಕರ್ನಾಟಕದ ಎರಡು ವಿಧಾನಸಭಾ ಉಪಚುನಾವಣೆಗೆ (Davanagere By Election ) ಬಿಜೆಪಿಯ ಕೇಂದ್ರೀಯ ಆಯ್ಕೆ ಸಮಿತಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಯುಗಾದಿಯ ದಿನದಂದು, ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ದಾವಣಗೆರೆಯಲ್ಲಿ ಅಚ್ಚರಿಯ ಅಭ್ಯರ್ಥಿಯ ಘೋಷಣೆ ಮಾಡಲಾಗಿದೆ. ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ (Srinivas Dasakariyappa) ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ದಾವಣಗೆರೆ ರೆಬೆಲ್ ಬಣದ ಅಭ್ಯರ್ಥಿಗೆ ಮಣೆ ಹಾಕಿದ್ದು, ರಾಜ್ಯ ಬಿಜೆಪಿ ಘಟಕಕ್ಕೆ ಕೇಂದ್ರದ ನಾಯಕರು ಅಚ್ಚರಿಯನ್ನು ಮೂಡಿಸಿದ್ದಾರೆ. ಮಾಜಿ ಸಿಎಂ…

Read More

ಹೊಂಚುಹಾಕಿ ನಿಂತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ಅಪರಿಚಿತ ವ್ಯಕ್ತಿ

ಎಲೆಕ್ಟ್ರಿಕ್ ರೈಲಾಗಿರಬಹುದು ಅಥವಾ ಸಾಮಾನ್ಯ ರೈಲಾಗಿರಬಹುದು ರೈಲು ಬರುವ ಮುನ್ನ ಹಳಿಯಿಂದ ಅಂತರ ಕಾಯ್ದುಕೊಳ್ಳಲಾಗುತ್ತದೆ. ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕನನ್ನು ರೈಲು ಬಂದಾಕ್ಷಣ ಅಪರಿಚಿತ ವ್ಯಕ್ತಿಯೊಬ್ಬ ತಳ್ಳಿರುವ ವಿಡಿಯೋ ವೈರಲ್ ಆಗಿದೆ.ಅಮೆರಿಕದ ಸಿಯಾಟಲ್‌ನಲ್ಲಿರುವ ನಾರ್ತ್‌ಗೇಟ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಮಾರ್ಚ್ 19 ರಂದು ನಡೆದಿರುವುದಾಗಿ ವರದಿಯಾಗಿದೆ. ಆರೋಪಿ ಅಲ್ಲಿಂದ ಓಡುವ ಮೊದಲು ಎರಡು ಬಾರಿ ಪ್ರಯಾಣಿಕನನ್ನು ತಳ್ಳಲು ಯತ್ನಿಸಿದ್ದಾನೆ. ಅದೃಷ್ಟವಶಾತ್ ಪ್ರಯಾಣಿಕ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಅಂತಿಮವಾಗಿ ಆರೋಪಿ 26 ವರ್ಷದ ಎಲಿಸಿಯೊ ಮೆಲೆಂಡೆಜ್‌ನನ್ನು…

Read More

ಚಾಮರಾಜನಗರ: ತನಗೆ ತಾನೇ ಬೆಂಕಿ ಹಚ್ಚಿಕೊಂಡ ಕುಡುಕ! ಮುಂದೇನಾಯ್ತು ನೋಡಿ – Kannada News | Kollegala Incident: Drunk Man Sets Self on Fire in Chamarajanagar, Rushed to Hospital

ಚಾಮರಾಜನಗರ, ಫೆ.17: ಕುಡುಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡ ಘಟನೆಯೊಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ನಡೆದಿದೆ. ಆನಂದ್ (45) ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಬಸ್ತಿಪುರ ಗ್ರಾಮದ ಕಾಲುವೆ ಬಳಿ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ್ದಾನೆ. ಮದ್ಯದ ಅಮಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅದೇನಾಯಿತೋ ತಿಳಿಯದು, ಇದ್ದಕ್ಕಿದ್ದಂತೆ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮೈಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಆತ ತಕ್ಷಣ ಪಕ್ಕದಲ್ಲಿದ್ದ ಕಾಲುವೆಗೆ ಹಾರಿದ್ದಾನೆ. ಇದರಿಂದ ಗಂಭೀರವಾಗಿ…

Read More

ಚೀತಾಗಳು ಮನುಷ್ಯರ ಮೇಲೆ ದಾಳಿ ಮಾಡಿದ ಇತಿಹಾಸವೇ ಇಲ್ಲ: ಯಾಕೆ ಗೊತ್ತಾ? – Kannada News | Why cheetahs dont attack humans understanding their nature and anatomy

ಚೀತಾಗಳು (Cheetahs) ಮನುಷ್ಯರ ಮೇಲೆ ದಾಳಿ ಮಾಡಿದ ನಿದರ್ಶನಗಳು ಇಲ್ಲವೇ ಇಲ್ಲ ಎನ್ನುವಷ್ಟು ಅಪರೂಪ. ಇದಕ್ಕೆ ಮುಖ್ಯವಾದ ಕಾರಣಗಳು ಅವುಗಳ ದೇಹದ ರಚನೆ ಮತ್ತು ಅವುಗಳ ಸ್ವಭಾವದಲ್ಲಿವೆ. ಚೀತಾಗಳ ದವಡೆಗಳು ಚಿಕ್ಕದಾಗಿರುತ್ತವೆ ಮತ್ತು ಅವುಗಳ ಹಲ್ಲುಗಳು ಮನುಷ್ಯನಂತಹ ದೊಡ್ಡ ಗಾತ್ರದ ಪ್ರಾಣಿಯನ್ನು ಕೊಲ್ಲುವಷ್ಟು ಬಲವಾಗಿರುವುದಿಲ್ಲ. ಇವುಗಳ ನಖಗಳು (ಉಗುರು) ನಾಯಿಗಳ ನಖಗಳಂತೆ ಇರುತ್ತವೆ (Non-retractable). ಇವು ಕೇವಲ ಓಡುವಾಗ ವೇಗಕ್ಕೆ ಹಿಡಿತ ನೀಡಲು ಬಳಕೆಯಾಗುತ್ತವೆಯೇ ಹೊರತು, ಬೇಟೆಯನ್ನು ಸೀಳಲು ಅಥವಾ ಗಾಯಗೊಳಿಸಲು ಹುಲಿ-ಸಿಂಹಗಳ ನಖಗಳಂತೆ ಚೂಪಾಗಿರುವುದಿಲ್ಲ. ಚೀತಾಗಳು…

Read More

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು – Kannada News | Tiger Population Rises in Chamarajanagar: Frequent Sightings in Bandipur, BRT and MM Hills Forests Trigger Fear

ಚಾಮರಾಜನಗರ, ಡಿಸೆಂಬರ್ 24: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಸಂತತಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವುದು ಅರಣ್ಯ ಇಲಾಖೆ ಗಮನಕ್ಕೆ ಬಂದಿದೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್, ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಹುಲಿಗಳ ಸಂಖ್ಯೆ ಏರಿಕೆಯಾಗಿದ್ದು, ದಿನಕ್ಕೊಂದು ಕಡೆ ವ್ಯಾಘ್ರಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಮೂಡಿಸುತ್ತಿವೆ. ಇತ್ತೀಚೆಗೆ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ನ ಕೆ.ಗುಡಿ ಸಮೀಪ ಬೃಹತ್ ಗಂಡು ಹುಲಿ ಪ್ರತ್ಯಕ್ಷವಾಗಿದ್ದು, ತನ್ನ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಓಡಾಟ ನಡೆಸಿದ್ದೇನೋ…

Read More

ಜಯತೀರ್ಥ ಮೆಚ್ಚಿದ ‘ವಿಕಲ್ಪ’ ಸಿನಿಮಾ ಟ್ರೇಲರ್; ಜನವರಿ 30ಕ್ಕೆ ಚಿತ್ರ ರಿಲೀಸ್ – Kannada News | Jayatheertha released Vikalpa Kannada movie Trailer ft Pruthviraj Patil and Nagashree Hebbar

ಖ್ಯಾತ ನಿರ್ದೇಶಕ ಜಯತೀರ್ಥ ಅವರು ‘ವಿಕಲ್ಪ’ ಸಿನಿಮಾದ ಟ್ರೇಲರ್ (Vikalpa Trailer) ಬಿಡುಗಡೆ ಮಾಡಿದ್ದಾರೆ. ಪೃಥ್ವಿರಾಜ್‌ ಪಾಟೀಲ್‌ (Pruthviraj Patil) ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಲ್ಲದೇ, ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಗಶ್ರೀ ಹೆಬ್ಬಾರ್‌ (Nagashree Hebbar), ಸಂಧ್ಯಾ ವಿನಾಯಕ್‌, ಹರಿಣಿ ಶ್ರೀಕಾಂತ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಜಯಂತ್‌ ಡೇವಿಡ್‌, ಪೂಜಾ ಬಚ್ಚ್‌, ಡಾ. ಪ್ರಕೃತಿ, ಗಿರೀಶ್‌ ಹೆಗಡೆ, ಮಾಸ್ಟರ್‌ ಆಯುಷ್ ಸಂತೋಷ್‌ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜನವರಿ 30ರಂದು…

Read More

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ. ಅದು ಸಹ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ. ಮಳೆ ಬಾಧಿತ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿಗದಿತ 10 ಓವರ್​ಗಳಲ್ಲಿ ಕಲೆಹಾಕಿದ್ದು 114 ರನ್​ಗಳು ಮಾತ್ರ. ಆದರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ, ಸೌತ್ ಆಫ್ರಿಕಾ ತಂಡಕ್ಕೆ 10 ಓವರ್​ಗಳಲ್ಲಿ 125 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತಿದ ಆಫ್ರಿಕಾ…

Read More

ಜಪಾನ್‌ನಲ್ಲಿರುವ ಬೆಂಗಳೂರಿನ ಟೆಕ್ಕಿಗಳಿಗೆ ತಿಂಗಳಿಗೆ 17 ಲಕ್ಷ ರೂ. ಸಂಬಳ: ಸರ್ಕಾರಕ್ಕೆ 3 ಲಕ್ಷ ರೂ. ತೆರಿಗೆ ನೀಡಬೇಕು – Kannada News | Japan Tech Salary Shock: Why Bangalore Engineers Earn More After Tax and Costs

ಯೂಟ್ಯೂಬ್​​​​​​ ಕಂಟೆಂಟ್​​​​ ಕ್ರಿಯೆಟರ್ ಒಬ್ಬರು ಜಪಾನ್​​ ಹಾಗೂ ಬೆಂಗಳೂರು ಸಂಬಳದ ಬಗ್ಗೆ ಹೊಲಿಕೆ ಮಾಡಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೀ ಭಾರೀ ವೈರಲ್​ ಆಗಿದೆ. ಜಪಾನ್‌ನಲ್ಲಿ ನೆಲೆಸಿರುವ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್‌ಗಳ ಆರ್ಥಿಕ ಜೀವನದ ಕುರಿತು ಯೂಟ್ಯೂಬರ್ ಡೋಲೇಶ್ (Dolesh) ಹಂಚಿಕೊಂಡಿರುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಬೆಂಗಳೂರಿನ ಇಬ್ಬರು ಟೆಕ್ಕಿಗಳು ಜಪಾನ್‌ನ ವಾಸ್ತವ ಸ್ಥಿತಿಯನ್ನು ಈ ವಿಡಿಯೋದಲ್ಲಿ ಬಿಚ್ಚಿಟ್ಟಿದ್ದಾರೆ. ಜಪಾನ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ವೃತ್ತಿ ಆರಂಭಿಸುವವರಿಗೆ ವರ್ಷಕ್ಕೆ ಸುಮಾರು…

Read More

Bengaluru Air Quality: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ, ಸಿಲ್ಕ್ ಬೋರ್ಡ್–ವೈಟ್‌ಫೀಲ್ಡ್‌ನಲ್ಲಿ ಉಸಿರಾಡಲೂ ಕಷ್ಟ – Kannada News | Bangalore Air Pollution Crisis: Bengaluru, Other district of karnataka face severe Air pollution

ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಲ್ಲಿ ಅತೀ ಕಳಪೆ ಏರ್ ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 86…

Read More