ಕೊಪ್ಪಳ, (ಡಿಸೆಂಬರ್ 19): ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ಕುರಿತು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಮತ್ತು ವಿವಾದ ಮುಂದುವರಿದಿದೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಹಾಕಿಲ್ಲ. ಆದ್ರೆ, ಆಗಸ್ಟ್ ವರೆಗೂ ಹಾಕಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನದಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದು, ಇದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ, ಏಕೆ ಸದನಕ್ಕೆ ತಪ್ಪು ನೀಡಿದ್ರು? ಕೂಡಲೇ ಸಚಿವರು ಕ್ಷಮೆ ಕೇಳಿಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಎರಡು ತಿಂಗಳ 5 ಸಾವಿರ ಕೋಟಿ ರೂಪಾಯಿ ಹಣ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ್ದಾರೆ. ಇದು ಕೋಲಾಹಲ ಸೃಷ್ಟಿಸಿಸುತ್ತಿದ್ದಂತೆಯೇ ಸಚಿವ ಹೆಬ್ಬಾಳ್ಕರ್, ಸದನದಲ್ಲಿ ತಮ್ಮಿಂದಾಗಿರುವ ತಪ್ಪನ್ನು ಒಪ್ಪಿಕೊಂಡರು. ಆರ್ಥಿಕ ಇಲಾಖೆಯಿಂದ ಎಡವಟ್ಟಾಗಿದೆ ಎಂದು ಸಿಎಂ ಬಳಿ ಇರುವ ಇಲಾಖೆ ಮೇಲೆ ಆರೋಪಿಸಿದ್ದರು. ಆಗ ಯಾವ ಆರ್ಥಿಕ ಇಲಾಖೆ ಅಧಿಕಾರಿಗಳು ಮಾತನಾಡಿಲ್ಲ.
ಆದ್ರೆ, ಇದೀಗ ಅಧಿವೇಶನ ಮುಗಿಯುತ್ತಿದ್ದಂತೆಯೇ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದು, 2024ರ ಫೆಬ್ರವರಿ, ಮಾರ್ಚ್ ತಿಂಗಳ ಹಣ ಹಾಕಿಲ್ಲ. ಅದು ನಿಜ ನನಗೆ ಗೊತ್ತಿದೆ. ಆದ್ರೆ ಮಾಹಿತಿ ಕೊರತೆಯಿಂದ ಕಣ್ತಪ್ಪಿನಿಂದ ಸಚಿವರು ಕೊಟ್ಬಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಅದನ್ನ ಸಚಿವರು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸೌಜನ್ಯಯುತವಾಗಿ ಒಪ್ಪಿಕೊಂಡೊದ್ದಾರೆ. ಅದನ್ನು ವಿರೋಧ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು.
ಈ ವೇಳೆ 2024ರ ಆರ್ಥಿಕ ವರ್ಷ ಮುಕ್ತಾಯ ಆಗಿದೆ ವಾಪಸ್ ಹಣ ಕೊಡೊಕೆ ಬರತ್ತಾ ಎಂಬ ಪತ್ರಕರ್ತರ ಪ್ರಶ್ನೆಗೆ ಹಾರಿಕೆ ಉತ್ತರ ನೀಡಿ ಹೋದರು. ಹಾಗಾದ್ರೆ, ಎರಡು ತಿಂಗಳ ಗೃಹಲಕ್ಷ್ಮೀ ಹಣ ಮನ್ನಾ ಆಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ನಟ ರಣವೀರ್ ಸಿಂಗ್ (Ranveer Singh) ವೃತ್ತಿ ಜೀವನದ ಅತಿ ದೊಡ್ಡ ಚಿತ್ರವಾಗಿ ‘ಧುರಂಧರ್’ (Dhurandhar) ಸಿನಿಮಾ ಹೊರಹೊಮ್ಮಿದೆ. ನೈಜ ಘಟನೆಗಳನ್ನು ಆಧರಿಸಿ ಸಿದ್ಧವಾದ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆ ಆಗಿ 15 ದಿನ ಕಳೆದಿದ್ದರೂ ಕೂಡ ‘ಧುರಂದರ್’ ಸಿನಿಮಾದ ಹವಾ ತಗ್ಗುತ್ತಲೇ ಇಲ್ಲ. ಅನೇಕ ಹಳೇ ದಾಖಲೆಗಳನ್ನು ಈ ಸಿನಿಮಾ ಮುರಿಯುತ್ತಿದೆ. ಈಗಾಗಲೇ ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 470 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ (Dhurandhar Collection) ಆಗಿದೆ. ಮುಂಬರುವ ದಿನಗಳಲ್ಲಿ ಕೂಡ ಉತ್ತಮ ಕಮಾಯಿ ಆಗಲಿದೆ.
ಡಿಸೆಂಬರ್ 5ರಂದು ‘ಧುರಂಧರ್’ ಸಿನಿಮಾ ಬಿಡುಗಡೆ ಆಯಿತು. ಮೊದಲ ದಿನದಿಂದಲೇ ಈ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿತು. ಬಳಿಕ ಜನರಿಂದ ಬಾಯಿ ಮಾತಿನ ಪ್ರಚಾರ ಸಿಕ್ಕಿದ್ದರಿಂದ ಕಲೆಕ್ಷನ್ ಜಾಸ್ತಿ ಆಯಿತು. ಮೊದಲ ವೀಕೆಂಡ್ ಮತ್ತು ಎರಡನೇ ವೀಕೆಂಡ್ನಲ್ಲಿ ಅಬ್ಬರಿಸಿದ ಈ ಸಿನಿಮಾ ಈಗ ಮೂರನೇ ವೀಕೆಂಡ್ನಲ್ಲಿ ಕೂಡ ಅಭೂತಪೂರ್ವ ಕಲೆಕ್ಷನ್ ಮಾಡುವ ಸೂಚನೆ ಸಿಕ್ಕಿದೆ.
‘ಧುರಂಧರ್’ ಬಿಡುಗಡೆ ಆದ ಬಳಿಕ ಕೆಲವು ಸ್ಟಾರ್ ಸಿನಿಮಾಗಳು ರಿಲೀಸ್ ಆದವು. ದರ್ಶನ್ ನಟನೆಯ ‘ದಿ ಡೆವಿಲ್’, ನಂದಮೂರಿ ಬಾಲಕೃಷ್ಣ ಅಭಿನಯದ ‘ಅಖಂಡ 2’ ಸಿನಿಮಾಗಳು ತೆರೆಕಂಡವು. ಹಾಗಿದ್ದರೂ ಕೂಡ ‘ಧುರಂಧರ್’ ಕಲೆಕ್ಷನ್ ಕಡಿಮೆ ಆಗಲಿಲ್ಲ. ಅಷ್ಟೇ ಅಲ್ಲ, ಈಗ ಹಾಲಿವುಡ್ನ ‘ಅವತಾರ್ 3’ ಸಿನಿಮಾ ಬಂದಿದೆ. ಆದರೂ ಸಹ ‘ಧುರಂಧರ್’ ಅಬ್ಬರಿಸುತ್ತಲೇ ಇದೆ.
15ನೇ ದಿನವಾದ ಡಿಸೆಂಬರ್ 19ರಂದು ‘ಧುರಂಧರ್’ ಸಿನಿಮಾ ಹಲವು ಕಡೆಗಳಲ್ಲಿ ಹೌಸ್ಫುಲ್ ಆಗಿದೆ. ಇನ್ನು, ಮೂರನೇ ವೀಕೆಂಡ್ ಆದ ಡಿಸೆಂಬರ್ 20 ಮತ್ತು 21ರಂದು ಹೆಚ್ಚಿನ ಪ್ರೇಕ್ಷಕರು ಸಿನಿಮಾ ವೀಕ್ಷಿಸುವ ನಿರೀಕ್ಷೆ ಇದೆ. ‘ಬಾಹುಬಲಿ 2’, ‘ಪುಷ್ಪ 2’ ಮುಂತಾದ ಸಿನಿಮಾಗಳ ದಾಖಲೆಗಳನ್ನು ಮುರಿಯುವತ್ತ ‘ಧುರಂಧರ್’ ಸಿನಿಮಾ ಮುನ್ನುಗ್ಗುತ್ತಿದೆ.
‘ಧುರಂಧರ್’ ಸಿನಿಮಾದ ಕಲೆಕ್ಷನ್ ಇಷ್ಟಕ್ಕೇ ನಿಲ್ಲುವುದಿಲ್ಲ. ಡಿಸೆಂಬರ್ 25ರಂದು ಕ್ರಿಸ್ಮಸ್ ರಜೆ ಬರಲಿದೆ. ಅದರ ಬೆನ್ನಲ್ಲೇ ನಾಲ್ಕನೇ ವೀಕೆಂಡ್ ಬರಲಿದೆ. ನಂತರ ಹೊಸ ವರ್ಷದ ಸೆಲೆಬ್ರೇಷನ್ ಕೂಡ ಇರುತ್ತದೆ. ಈ ಎಲ್ಲ ಸಂಭ್ರಮಗಳ ಕಾರಣದಿಂದ ‘ಧುರಂಧರ್’ ಸಿನಿಮಾಗೆ ಖಂಡಿತಾ ಉತ್ತಮವಾಗಿ ಕಲೆಕ್ಷನ್ ಆಗಲಿದೆ. ‘ಧುರಂಧರ್’ ಸಿನಿಮಾದ ಟೋಟಲ್ ಕಲೆಕ್ಷನ್ ಎಷ್ಟಾಗಲಿದೆ ಎಂಬುದನ್ನು ಕಾದು ನೋಡಬೇಕು.
ಬೆಳಗಾವಿ, ಡಿಸೆಂಬರ್ 19: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಆದರೆ, ಮತ್ತೊಂದೆಡೆ ವಿಧೇಯಕದ ವಿರುದ್ಧದ ವಿರೋಧದ ಧ್ವನಿ ರಾಜ್ಯಪಾಲರ ಅಂಗಳ ತಲುಪಿದೆ. ವಕೀಲ ಗಿರೀಶ್ ಭಾರದ್ವಾಜ್ ಎಂಬವರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿಧೇಯಕಕ್ಕೆ ಅಂಕಿತ ಹಾಕಬಾರದು ಎಂದು ಮನವಿ ಮಾಡಿದ್ದಾರೆ.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯುವಂತೆ ಮತ್ತು ಅದನ್ನು ವಿಧಿ 200 ರ ಅಡಿಯಲ್ಲಿ ರಾಷ್ಟ್ರಪತಿಗಳ ಪರಿಗಣನೆಗೆ ಕಾಯ್ದಿರಿಸುವಂತೆ ಒತ್ತಾಯಿಸಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿದ್ದೇನೆ ಎಂದು ವಕೀಲ ಗಿರೀಶ್ ಭಾರದ್ವಾಜ್ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ. ಅಲ್ಲದೆ, ರಾಜ್ಯಪಾಲರಿಗೆ ಬರೆದ ಪತ್ರದ ಪ್ರತಿಯನ್ನೂ ಲಗತ್ತಿಸಿದ್ದಾರೆ.
ವಿಧೇಯಕದ ವಿಭಾಗ 4 ಮತ್ತು 5 ಕಾರ್ಯಾಂಗದಲ್ಲಿ ಅನಿಯಂತ್ರಿತ ಅಧಿಕಾರವನ್ನು ನೀಡುತ್ತವೆ. ಇದು ವಿಧಿ 19(1)(ಎ), ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದ ಕಾನೂನು ಮತ್ತು ಮೂಲ ರಚನೆಯನ್ನು ಉಲ್ಲಂಘಿಸುತ್ತವೆ ಎಂದು ಗಿರೀಶ್ ಪ್ರತಿಪಾದಿಸಿದ್ದಾರೆ.
ವಕೀಲ ಗಿರೀಶ್ ಭಾರದ್ವಾಜ್ ಎಕ್ಸ್ ಸಂದೇಶ
I have Submitted a detailed representation to the Hon’ble Governor of Karnataka urging withholding of assent to the Karnataka Hate Speech & Hate Crimes (Prevention) Bill, 2025 and reserving it for Presidential consideration under Article 200.
Sections 4 & 5 vest unguided power in… https://t.co/p8J4VVq4q8pic.twitter.com/2zYKlCnfT4
ವಾಕ್ ಸ್ವಾತಂತ್ರ್ಯ ಹಕ್ಕಿನ ಉಲ್ಲಂಘನೆ: ಶೋಭಾ ಕರಂದ್ಲಾಜೆ ಆಕ್ಷೇಪ, ರಾಜ್ಯಪಾಲರಿಗೆ ಪತ್ರ
ಸಂವಿಧಾನದ 200ನೇ ವಿಧಿಯ ಅಡಿಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025ಕ್ಕೆ ಒಪ್ಪಿಗೆ ನೀಡುವುದನ್ನು ತಡೆಹಿಡಿಯಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ದ್ವೇಷ ಭಾಷಣವನ್ನು ನಿಗ್ರಹಿಸುವ ಗುರಿಯನ್ನು ಹೊಂದಿರುವ ಈ ಮಸೂದೆಯು ಕಾರ್ಯಾಂಗಕ್ಕೆ ಅತಿಯಾದ ಮತ್ತು ಅಸ್ಪಷ್ಟ ಅಧಿಕಾರವನ್ನು ನೀಡುತ್ತದೆ, 19(1)(a) ವಿಧಿಯ ಅಡಿಯಲ್ಲಿ ವಾಕ್ ಸ್ವಾತಂತ್ರ್ಯಕ್ಕೆ ಬೆದರಿಕೆ ಹಾಕುತ್ತದೆ ಮತ್ತು ಸ್ಪಷ್ಟ ವ್ಯಾಖ್ಯಾನಗಳನ್ನು ಹೊಂದಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಶೋಭಾ ಕರಂದ್ಲಾಜೆ ಪ್ರತಿಪಾದಿಸಿದ್ದಾರೆ.
ಏತನ್ಮಧ್ಯೆ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ವಿಧಾನ ಮಂಡಲದ ಮೇಲ್ಮನೆಯಲ್ಲಿ ಅಂಗೀಕಾರ ದೊರೆತಿದೆ. ಇದರೊಂದಿಗೆ, ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ಕಾನೂನಾಗಿ ರೂಪುಗೊಳ್ಳುವುದು ಬಹುತೇಕ ಖಚಿತವಾಗಿದೆ. ಇನ್ನು ರಾಜ್ಯಪಾಲರ ಅಂಕಿತ ಬಿದ್ದ ಬೆನ್ನಲ್ಲೇ ಕಾನೂನಾಗಿ ಅಸ್ತಿತ್ವಕ್ಕೆ ಬರಲಿದೆ. ವ್ಯಕ್ತಿ, ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂಥ ಅಪರಾಧಗಳಿಗೆ ದಂಡನೆಯನ್ನು ಉಪಬಂಧಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕ ಜಾರಿ ಮಾಡಲಾಗುತ್ತಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಸದನಕ್ಕೆ ತಿಳಿಸಿದ್ದಾರೆ.
ಇದನ್ನೂ ಓದಿ: ಏನಿದು ದ್ವೇಷ ಅಪರಾಧಗಳ ಮಸೂದೆ? ದ್ವೇಷಾಪರಾಧಕ್ಕೆ ಶಿಕ್ಷೆಯೇನು? ಇಲ್ಲಿದೆ ಮಾಹಿತಿ
ಸುಧೀರ್ಘ ಅವಧಿಯ ಚರ್ಚೆಯ ನಂತರ ಪ್ರಸ್ತಾವವನ್ನು ಸಭಾಪತಿಯವರು ಧ್ವನಿಮತಕ್ಕೆ ಹಾಕಿದರು. ಸದಸ್ಯರ ಸಹಮತದೊಂದಿಗೆ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.
ವಿಶ್ವಾದ್ಯಂತ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಇಂಗ್ಲಿಷ್ನಲ್ಲಿ ಪ್ರಸಾರ ಕಾಣುವ ಅನೇಕ ರಿಯಾಲಿಟಿ ಶೋಗಳನ್ನು ಈಗ ಭಾರತಕ್ಕೆ ತರಲಾಗುತ್ತಿದೆ. ಬಿಗ್ ಬಾಸ್, ಶಾರ್ಕ್ ಟ್ಯಾಂಕ್ ಇಂಡಿಯಾ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಬೇರೆ ದೇಶಗಳಿಂದ ಎರವಲು ಪಡೆದಿದ್ದು. ಈಗ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ‘ವೀಲ್ಸ್ ಆಫ ಫಾರ್ಚೂನ್’ ಹೆಸರಿನ ರಿಯಾಲಿಟಿ ಶೋ ಆರಂಭಿಸುತ್ತಿದೆ. ಈ ಶೋನ ಅಕ್ಷಯ್ ಕುಮಾರ್ ನಡೆಸಿಕೊಡಲಿದ್ದಾರೆ.
ಸೋನಿ ಪಿಕ್ಚರ್ಸ್ನಲ್ಲಿ ‘ಶಾರ್ಕ್ ಟ್ಯಾಂಕ್’ ಪ್ರಸಾರ ಕಂಡಿದೆ. ‘ಕೌನ್ ಬನೇಗಾ ಕರೋಡ್ಪತಿ’ ಕೂಡ ಪ್ರಸಾರ ಕಾಣೋದು ಸೋನಿಯಲ್ಲಿ. ಈಗ ವೀಲ್ಸ್ ಆಫ್ ಫಾರ್ಚೂನ್ ಶೋ ಬರುತ್ತಿದೆ. ಶೋನ ಗೆದ್ದವರಿಗೆ ಕೋಟಿ ರೂಪಾಯಿವರೆಗೆ ಹಣ ಸಿಗೋ ನಿರೀಕ್ಷೆ ಇದೆ. ಈ ಆಟ ಯಾವ ರೀತಿಯಲ್ಲಿ ಇರುತ್ತದೆ ಎಂಬ ಕುತೂಹಲ ಇದೆ.
ವೀಲ್ಸ್ ಆಫ್ ಫಾರ್ಚೂನ್ ಅಮೇರಿಕದ ಗೇಮ್ ಶೋ. ಇದನ್ನು ಮೊದಲು ಬಾರಿಗೆ ಆರಂಭಿಸಿದ್ದು 1975ರಲ್ಲಿ. ಅಲ್ಲಿಂದ ಇಲ್ಲಿಯವರೆಗೂ ಶೋ ವಿವಿಧ ಹಂತದಲ್ಲಿ, ವಿವಿಧ ವಾಹಿನಿಗಳಲ್ಲಿ ಪ್ರಸಾರ ಕಾಣುತ್ತಲೇ ಬರುತ್ತಿದೆ. ಈ ಶೋನ ಭಾರತಕ್ಕೆ ತರಲು ಹೈಗೇಟ್ ಎಂಟರ್ಟೈನ್ಮೆಂಟ್ ಪರವಾನಿಗೆ ಪಡೆದಿದ್ದು, ಇದೇ ಸಂಸ್ಥೆ ಶೋನ ನಿರ್ಮಾಣ ಮಾಡಲಿದೆ.
ಪದಗಳ ಪಜಲ್, ದೈತ್ಯ ಕಾರ್ನಿವಾಲ್ ತಿರುಗಿಸೋದು ಸೇರಿದಂತೆ ವಿವಿಧ ಗೇಮ್ಗಳನ್ನು ಇದರಲ್ಲಿ ಇರಲಿವೆ. ಇಂಗ್ಲಿಷ್ನಲ್ಲಿ ಈಗಾಗಲೇ 8 ಸಾವಿರಕ್ಕೂ ಹೆಚ್ಚು ಎಪಿಸೋಡ್ಗಳು ಪ್ರಸಾರ ಕಂಡಿರೋದು ಇದರ ಹೆಚ್ಚುಗಾರಿಕೆ. ಭಾರತಕ್ಕೆ ತಕ್ಕಂತೆ ನಿಯಮ ಬದಲಿಸಿಕೊಳ್ಳುವ ಸಾಧ್ಯತೆ ಇದೆ.
ಅಂದಹಾಗೆ, ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ದಿನಕ್ಕೆ 2-3 ಸಿನಿಮಾಗಳನ್ನು ಶೂಟ್ ಮಾಡಿದ ಉದಾಹರಣೆ ಕೂಡ ಇದೆ. ಇವುಗಳ ಜೊತೆ ಅವರು ಈಗ ರಿಯಾಲಿಟಿ ಶೋ ಕೂಡ ಒಪ್ಪಿಕೊಂಡಿದ್ದಾರೆ. ಇದಕ್ಕಾಗಿ ಅವರು ಒಂದರಿಂದ ಎರಡು ದಿನ ಮೀಸಲಿಡಬೇಕಾಗುತ್ತದೆ.
ದೇವನಹಳ್ಳಿ, ಡಿಸೆಂಬರ್ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು
ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ ನಿವೇಶನ ಪಡೆಯಲು ಕಾದು ಕುಳಿತಿದ್ದರು. ಜೊತೆಗೆ ಜನರ ಮನವಿಗೆ ಸ್ಪಂದಿಸಿದ ಸ್ಥಳಿಯ ಶಾಸಕ ಹಾಗೂ ಸಚಿವ ಕೆಹೆಚ್ ಮುನಿಯಪ್ಪ ಪಂಚಾಯತಿಗಳಲ್ಲಿ ಭುಮಿ ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಲು ಸೂಚಿಸಿದ್ದರು. ಅದರಂತೆ ನಿವೇಶನಗಳಿಗೆ ಸೂಕ್ತವಾದ ಜಾಗ ನೀಡಬೇಕಾದ ಕಂದಾಯ ಅಧಿಕಾರಿಗಳು ಇದೀಗ ಪಕ್ಕದಲ್ಲೇ ಸಮತಟ್ಟಾದ ಭೂಮಿ ಇದ್ದರು ಕಲ್ಲು ಕ್ವಾರಿಯ ಜಮೀನನ್ನ ಮಂಜೂರು ಮಾಡಿದ್ದಾರಂತೆ.
ಹೀಗಾಗೆ ಕಲ್ಲು ಕ್ವಾರಿಯ ಜಮೀನಿನಲ್ಲಿ ಯಾವ ರೀತಿ ಮನೆ ಕಟ್ಟಲು ಸದ್ಯವಾಗುತ್ತೆ ಅಂತ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ರೊಚಿಗೆದ್ದಿದ್ದು, ಕಲ್ಲು ಕ್ವಾರಿ ಜಮೀನು ಮಂಜೂರು ಮಾಡಿರುವುದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರಿಗೆ ಅನುಕೂಲ ಮಾಡಲು ಈ ರೀತಿ ಉತ್ತಮ ಜಾಗ ಬಿಟ್ಟು ಕಲ್ಲುಗಳಿರುವ ಜಾಗ ನೀಡಿದ್ದಾರೆ ಅಂತ ಪಿಡಿಒ ಸೇರಿದಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರಾದ ಗೋವಿಂದರಾಜು ಎನ್ನುವವರು ಆಕ್ರೋಶ ಹೊರಹಾಕಿದ್ದಾರೆ.
ಆಶ್ರಯ ಯೋಜನೆಯಡಿಯಲ್ಲಿ ಬಡ ಜನರಿಗೆ ನಿವೇಶನ ನೀಡಲು ಕಲ್ಲು ಕ್ವಾರಿ ಜಾಗ ಗುರುತಿಸಿರುವುದು ಯಾವ ಮಾನದಂಡದ ಮೇಲೆ ಅಂತ ಇಓ ಮತ್ತು ತಹಶೀಲ್ದಾರ್ಗೆ ಗ್ರಾಮಸ್ಥರು ದೂರು ನೀಡಿದ್ದು, ಕಲ್ಲು ಬಂಡೆ ಜಮೀನು ಹಿಂಪಡೆದು ಸಮತಟ್ಟಾದ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.
ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಹೇಳಿದ್ದಿಷ್ಟು
ಇನ್ನು ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಮಾತನಾಡಿದ್ದು, ಕಂದಾಯ ಇಲಾಖೆ ನಮ್ಮ ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಿದ್ದು, ನಾವು ಆ ಜಮೀನು ಕೊಡುವಂತೆ ಕೇಳಿಲ್ಲ. ಇದೀಗ ಅದು ನಿವೇಶನಗಳಿಗೆ ಯೋಗ್ಯವಾಗದ ಕಾರಣ ಆ ಜಮೀನನ್ನ ವಾಪಸ್ ಪಡೆಯುವಂತೆ ಡಿಸಿ ಅವರಿಗೆ ಪತ್ರ ಬರೆದಿದ್ದು, ಬದಲಿಯಾಗಿ ಯೋಗ್ಯವಾದ ಜಮೀನು ನಿವೇಶನಗಳಿಗೆ ನೀಡುವಂತೆ ಕೇಳಿದ್ದೇವೆ ಎಂದರು.
ಒಟ್ಟಿನಲ್ಲಿ ಏರ್ಪೋಟ್ ಬಳಿ ಭೂಮಿ ಬೆಲೆ ಗಗನಕ್ಕೇರುತ್ತಿದ್ದು ಒಂದಿಚ್ಚು ಭೂಮಿ ಬಂಗಾರದ ಬೆಲೆಬಾಳುತ್ತಿದೆ. ಈ ನಡುವೆ ಸರ್ಕಾರದಿಂದ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಅಧಿಕಾರಿಗಳ ಎಡವಟ್ಟಿನಿಂದ ಆತಂಕ ಶುರುವಾಗಿದೆ. ಸದ್ಯ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಆಶ್ರಯ ಯೋಜನೆಗೆ ಸೂಕ್ತ ಭೂಮಿ ನೀಡುವ ಕೆಲಸ ಮಾಡಬೇಕಿದೆ.
ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ (Chaithra Kundapura) ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.
ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಕುಂದಾಪುರ ವಿರುದ್ಧ ಆದೇಶ ನೀಡಿದೆ. ‘ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ದೈಹಿಕ, ಮಾನಸಿಕ ಕಿರುಕುಳ ನೀಡುವಂತಿಲ್ಲ. ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಡಬೇಕು’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ, ಈ ಬಗ್ಗೆ ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.
ಬಾಲಕೃಷ್ಣ ನಾಯ್ಕ್ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮಗಳು ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದ್ದಾರೆ. ಇದರಿಂದ ಚೈತ್ರಾ ಕುಂದಾಪುರ ಅವರ ಬಿಗ್ ಬಾಸ್ ಆಟಕ್ಕೆ ತೊಂದರೆ ಆಗುತ್ತಾ ಎಂಬ ಪ್ರಶ್ನೆ ಉದ್ಭವ ಆಗಿದೆ.
ಈ ಮೊದಲು ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಸಂಘರ್ಷ ತಾರಕಕೇರಿತ್ತು. ಚೈತ್ರಾ ಮದುವೆ ವೇಳೆ ಬಾಲಕೃಷ್ಣ ಅವರ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಸಮಯದಲ್ಲಿ ತಂದೆಯ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಪರೋಕ್ಷವಾಗಿ ಚೈತ್ರಾ ಕುಂದಾಪುರ ಅವರ ಕಿಡಿಕಾರಿದ್ದರು. ಈ ಎಲ್ಲ ಕಾರಣಗಳಿಂದ ಅವರ ಕುಟುಂಬದಲ್ಲಿ ಬಿರುಕು ಮೂಡಿತ್ತು.
ಬಿಗ್ ಬಾಸ್ ಕನ್ನಡ 11ನೇ ಸೀಸನ್ನಲ್ಲಿ ಚೈತ್ರಾ ಕುಂದಾಪುರ ಅವರು ಸ್ಪರ್ಧಿಸಿದ್ದರು. ಈಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಆಗಿದ್ದಾರೆ. ಕೋರ್ಟ್ ಆದೇಶದ ಪರಿಣಾಮದಿಂದ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರಬೇಕಾದ ಪ್ರಮೇಯ ಬರುತ್ತಾ ಎಂಬುದನ್ನು ಕಾದುನೋಡಬೇಕು.
2026 ರ ಟಿ20 ವಿಶ್ವಕಪ್ (T20 World Cup 2026) ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಅದರಂತೆ ಈ ಮಿನಿ ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗುತ್ತಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವಿದೆ. ಇದೆಲ್ಲದರ ನಡುವೆ ಈ ಚುಟುಕು ವಿಶ್ವ ಸಮರಕ್ಕರ ಟೀಂ ಇಂಡಿಯಾವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐ (BCCI) ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಆ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾವನ್ನು ಡಿಸೆಂಬರ್ 20 ರಂದು ಪ್ರಕಟಿಸಲಾಗುತ್ತದೆ ಎಂಬ ಮಾಹಿತ ನೀಡಿದೆ.
ತಂಡವನ್ನು ಯಾವಾಗ ಪ್ರಕಟಿಸಲಾಗುತ್ತದೆ?
2026 ರ ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ಸರಣಿಗೆ ಡಿಸೆಂಬರ್ 20 ರಂದು ಟೀಂ ಇಂಡಿಯಾವನ್ನು ಘೋಷಿಸಲಾಗುವುದು ಎಂದು ಈಗಾಗಲೇ ವರದಿಗಳಿದ್ದವು. ಆದಾಗ್ಯೂ, ಬಿಸಿಸಿಐ ಈಗ ಅಧಿಕೃತವಾಗಿ ಸುದ್ದಿಯನ್ನು ದೃಢಪಡಿಸಿದೆ. ಭಾರತೀಯ ತಂಡದ ಆಯ್ಕೆ ಮಧ್ಯಾಹ್ನ 1:30 ಕ್ಕೆ ನಡೆಯಲಿದ್ದು, ನಂತರ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಸರಣಿ ಯಾವಾಗ?
ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ ವೈಟ್-ಬಾಲ್ ಸರಣಿಯನ್ನು ಆಡಲಿದೆ. ಈ ಸರಣಿಯು 2026 ರ ಟಿ20 ವಿಶ್ವಕಪ್ ಪ್ರಾರಂಭವಾಗುವ ಮೊದಲು ನಡೆಯಲಿದೆ. ಈ ಸರಣಿಯು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20ಪಂದ್ಯಗಳು ಸೇರಿದಂತೆ ಎಂಟು ಪಂದ್ಯಗಳನ್ನು ಒಳಗೊಂಡಿರುತ್ತದೆ. ಏಕದಿನ ಸರಣಿಯು ಜನವರಿ 11, 14 ಮತ್ತು 18 ರಂದು ವಡೋದರಾ, ರಾಜ್ಕೋಟ್ ಮತ್ತು ಇಂದೋರ್ನಲ್ಲಿ ನಡೆಯಲಿವೆ.
ಏಕದಿನ ಸರಣಿಯ ನಂತರ, ಐದು ಪಂದ್ಯಗಳ ಟಿ20 ಸರಣಿಯು ಜನವರಿ 21 ರಿಂದ 31 ರವರೆಗೆ ನಡೆಯಲಿದ್ದು, ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಎರಡನೇ ಟಿ20 ಜನವರಿ 23 ರಂದು ರಾಯ್ಪುರದಲ್ಲಿ, ಮೂರನೇ ಪಂದ್ಯ ಜನವರಿ 25 ರಂದು ಗುವಾಹಟಿಯಲ್ಲಿ ನಡೆಯಲಿದೆ. ನಾಲ್ಕನೇ ಟಿ20 ಜನವರಿ 28 ರಂದು ವೈಜಾಗ್ನಲ್ಲಿ ನಡೆಯಲಿದ್ದು, ಕೊನೆಯ ಟಿ20 ಜನವರಿ 31 ರಂದು ತಿರುವನಂತಪುರದಲ್ಲಿ ನಡೆಯಲಿದೆ.
2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಿ ಮಾರ್ಚ್ 8 ರವರೆಗೆ ನಡೆಯಲಿದೆ. ಈ ಐಸಿಸಿ ಟೂರ್ನಮೆಂಟ್ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿವೆ. ಆದ್ದರಿಂದ, ಈ ಟೂರ್ನಮೆಂಟ್ನಲ್ಲಿ ಭಾರತ ತಂಡವು ಪ್ರಬಲ ಸ್ಪರ್ಧಿಯಾಗಲಿದೆ.
ಭಾರತ ಸಂಭಾವ್ಯ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್. ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.
ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.
“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಲಿಂಗ ಸಮಾನತೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಆ ಪ್ರಕಾರ ಹೇಳುವುದಾದರೆ ಮಹಿಳೆಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಆದರೆ, ಈ ಪ್ರಕರಣದಲ್ಲಿ ವಿಲ್ ಬರೆದ ವ್ಯಕ್ತಿಯ ಇಚ್ಛೆ ಮುಖ್ಯವಾಗಿದೆ. ಅವರೇನಾದರೂ ವಿಲ್ ಬರೆಯದೇ ಇದ್ದಿದ್ದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೂ ಪಾಲು ಇರುತ್ತಿತ್ತು. ಆದರೆ, ಅವರು ಮಗಳಿಗೆ ಆಸ್ತಿ ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ವಿಲ್ ಬರೆದಿರುವುದರಿಂದ ಮತ್ತು ಇದು ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಷ್ಟೆ ಬಾಕಿ ಇದೆ. ಸಿನಿಮಾನಲ್ಲಿ ನಟಿಸುವ ಜೊತೆಗೆ ಸಿನಿಮಾದ ಸಹ ನಿರ್ಮಾಪಕರೂ ಆಗಿದ್ದಾರೆ ನಟ ಸುದೀಪ್. ಅಂದಹಾಗೆ ಈ ಸಿನಿಮಾ ಮೂಲಕ ಸುದೀಪ್ ಅವರ ಪುತ್ರಿ ಸಾನ್ವಿ ಮತ್ತು ಸುದೀಪ್ ಅವರ ಪತ್ನಿ ಪ್ರಿಯಾ ಅವರು ವಿತರಕಿಯರಾಗುತ್ತಿದ್ದಾರೆ. ಸುದೀಪ್ ಅವರ ಪುತ್ರಿ ಹಾಡುಗಾರ್ತಿಯಾಗಿದ್ದು, ಒಂದೆರಡು ಸಿನಿಮಾ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಆದರೆ ಇದೀಗ ತಂದೆಯ ಸಿನಿಮಾ ಮೂಲಕ ವಿತರಣೆ ಜವಾಬ್ದಾರಿಯನ್ನೂ ಸಹ ಹೆಗಲಿಗೆತ್ತಿಕೊಳ್ಳುತ್ತಿದ್ದಾರೆ.
ಡಿಸೆಂಬರ್ 25 ರಂದು ಬಿಡುಗಡೆ ಆಗುತ್ತಿರುವ ‘ಮಾರ್ಕ್’ ಸಿನಿಮಾವನ್ನು ಕರ್ನಾಟಕದಲ್ಲಿ ಕೆಆರ್ಜಿ ವಿತರಣೆ ಮಾಡುತ್ತಿದೆ. ಆದರೆ ಅದರ ಜೊತೆಗೆ ಸಾನ್ವಿ ಅವರು ಸಹ ಸಿನಿಮಾದ ವಿತರಣೆ ಜವಾಬ್ದಾರಿ ಹೊತ್ತಿದ್ದಾರೆ. ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ (ಪ್ರಿಯಾ ಮತ್ತು ಸಾನ್ವಿ) ಹೆಸರಿನ ಸಂಸ್ಥೆ ಮೂಲಕ ವಿತರಣೆ ಮಾಡಲಿದ್ದಾರೆ. ಸುದೀಪ್ ಅವರು ಸಹ ನಿರ್ಮಾಪಕ ಆಗಿರುವ ಕಾರಣ, ಸಾನ್ವಿ ಅವರಿಗೆ ವಿತರಣೆ ಸುಲಭವಾಗುವ ಸಾಧ್ಯತೆ ಇದೆ. ಸಾನ್ವಿ ಅವರು ಮುಂದಿನ ದಿನಗಳಲ್ಲಿ ಸಿನಿಮಾ ನಿರ್ಮಾಣಕ್ಕೆ ಇಳಿದರೂ ಆಶ್ಚರ್ಯ ಇಲ್ಲ.
ಸಾನ್ವಿ ಅವರು ತೆಲುಗಿನಲ್ಲಿ ನಟ ನಾನಿ ನಟಿಸಿರುವ ‘ಹಿಟ್ 3’ ಸಿನಿಮಾಕ್ಕೆ ಹಾಡೊಂದಕ್ಕೆ ದನಿ ನೀಡಿದ್ದರು. ಇದೀಗ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ಮಲೈಕಾ ಹಾಡನ್ನು ಸಹ ಹಾಡಿದ್ದಾರೆ. ಇನ್ನೂ ಸುದೀಪ್ ಅವರ ಸಹೋದರಿಯ ಪುತ್ರನ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆಗೆ ರೆಡಿಯಾಗುತ್ತಿದೆ. ಆ ಸಿನಿಮಾನಲ್ಲೂ ಸಾನ್ವಿ ಹಾಡಿದ್ದಾರೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ, ‘ಮ್ಯಾಂಗೊ ಪಚ್ಚ’ ಸಿನಿಮಾವನ್ನೂ ಸಹ ಸಾನ್ವಿ ಅವರು ಸುಪ್ರಿಯಾನ್ವಿ ಸ್ಟುಡಿಯೋಸ್ ಮೂಲಕ ವಿತರಣೆ ಮಾಡುವ ಸಾಧ್ಯತೆ ಇದೆ. ಒಟ್ಟಾರೆ ಚಿತ್ರರಂಗದಲ್ಲಿಯೇ ನೆಲೆ ನಿಲ್ಲುವ ಸುಳಿವನ್ನು ಸಾನ್ವಿ ಸುದೀಪ್ ಅವರು ನೀಡಿದ್ದಾರೆ. ಅವರಿಗೆ ತಂದೆಯ ಮಾರ್ಗದರ್ಶನವೂ ಇದೆ.
ಇನ್ನು ಸುದೀಪ್ ನಟಿಸಿರುವ ‘ಮಾರ್ಕ್’ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೆ ಬೇರೆ ಕೆಲ ಭಾಷೆಗಳಲ್ಲಿಯೂ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ಅನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಮ್ಯಾಕ್ಸ್’ ಸಿನಿಮಾವನ್ನೂ ಸಹ ಅವರೇ ನಿರ್ದೇಶನ ಮಾಡಿದ್ದರು. ‘ಮಾರ್ಕ್’ ಸಿನಿಮಾಕ್ಕೆ ಸುದೀಪ್ ಮತ್ತು ಸತ್ಯಜ್ಯೋತಿ ಫಿಲಮ್ಸ್ ಬಂಡವಾಳ ಹೂಡಿದೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾನಲ್ಲಿ ಯೋಗಿ ಬಾಬು, ಶೈನ್ ಟಾಮ್ ಚಾಕೊ, ನವೀನ್ ಚಂದ್ರ ಅಂಥಹ ಪ್ರತಿಭಾವಂತ ಕಲಾವಿದ್ದಾರೆ.
ಪತಂಜಲಿ ಸಂಸ್ಥಾಪಕ ಮತ್ತು ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ತಮ್ಮ ಆಯುರ್ವೇದ ಮತ್ತು ಪರಿಣಾಮಕಾರಿ ದೇಶೀಯ ಆರೋಗ್ಯ ಪರಿಹಾರಗಳಿಗೆ ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ಗೆ ಅಪ್ಲೋಡ್ ಮಾಡಿದ ವೀಡಿಯೊವೊಂದರಲ್ಲಿ ಅವರು ಶೀತ ಮತ್ತು ಕೆಮ್ಮಿಗೆ ಚಿಕಿತ್ಸೆಗಳನ್ನು ವಿವರಿಸಿದ್ದಾರೆ. ವಿಶೇಷವಾಗಿ ಮಕ್ಕಳು ಕೆಮ್ಮು ಮತ್ತು ಶೀತಕ್ಕಿಂತ ಹೆಚ್ಚಾಗಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಯೋಗ ಗುರುಗಳ ಪ್ರಕಾರ, ಬಾಲ್ಯದಿಂದಲೂ ಯಾರಿಗಾದರೂ ಶೀತವಿದ್ದರೆ, ಅದು ಯಾವಾಗಲೂ ಕಣ್ಣು, ಮೂಗು, ಕಿವಿ ಮತ್ತು ಗಂಟಲಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತವವಾಗಿ, ದೆಹಲಿ-ಎನ್ಸಿಆರ್ನಲ್ಲಿ ಹೆಚ್ಚಿದ ಮಾಲಿನ್ಯ (pollution) ಮತ್ತು ಶೀತದಿಂದಾಗಿ, ಉಸಿರಾಟದ ಸಮಸ್ಯೆಗಳ ಅಪಾಯ ಹೆಚ್ಚಾಗಿದೆ. ಬೆಂಗಳೂರಿನಂತಹ ನಗರಗಳಲ್ಲಿ ವಿಪರೀತ ಟ್ರಾಫಿಕ್ ಇರುವುದರಿಂದ ವಾಹನದಿಂದ ಹೊರಬರುವ ಹೊಗೆ ಸಾಕಷ್ಟು ವಾಯುಮಾಲಿನ್ಯ ಸೃಷ್ಟಿಸಿದೆ. ಚಿಕ್ಕವರು ಅಥವಾ ದೊಡ್ಡವರು, ಬಹುತೇಕ ಎಲ್ಲರೂ ಕೆಮ್ಮು ಅಥವಾ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ-ಎನ್ಸಿಆರ್ನಲ್ಲಿ GRAP-4 ಅನ್ನು ಜಾರಿಗೆ ತರಲಾಗಿದೆ ಮತ್ತು ಶಾಲೆಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.
ಮಕ್ಕಳಲ್ಲಿ ಕಣ್ಣಿನ ಕಿರಿಕಿರಿ ಅಥವಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ದೀರ್ಘಕಾಲದ ಶೀತ ಇರುವವರು ಮಾಲಿನ್ಯ ಮತ್ತು ಶೀತದಿಂದಾಗಿ ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ದೀರ್ಘಕಾಲದ ಶೀತಗಳನ್ನು ಗುಣಪಡಿಸಬಲ್ಲ ಬಾಬಾ ರಾಮದೇವ್ ಅವರ ಮನೆಮದ್ದುಗಳನ್ನು ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.
ಬಾಬಾ ರಾಮದೇವ್ ಅವರ ಪ್ರಕಾರ, ಆಯುರ್ವೇದ ವಿಧಾನಗಳು ದೀರ್ಘಕಾಲದ ಶೀತ, ಕೆಮ್ಮು, ಬ್ರಾಂಕೈಟಿಸ್, ಸೈನುಟಿಸ್ ಮತ್ತು ಅಲರ್ಜಿಗಳನ್ನು ನಿವಾರಿಸುವಲ್ಲಿ ಅಥವಾ ಕಡಿಮೆ ಮಾಡುವಲ್ಲಿ ಅತ್ಯಂತ ಪರಿಣಾಮಕಾರಿ ಎನಿಸುತ್ತವೆ. ಈ ಚಿಕಿತ್ಸೆಗಳಿಗೆ ಔಷಧೀಯ ತೈಲಗಳನ್ನು ಬಳಸಲಾಗುತ್ತದೆ. ಕಾಕರಸಿಂಘಿ, ಲೈಕೋರೈಸ್, ಸಾಸಿವೆ, ಅರಿಶಿನ ಮತ್ತು ಹಸುವಿನ ತುಪ್ಪದ ಮಿಶ್ರಣವನ್ನು ಬಳಸಿಕೊಂಡು ನಶ್ಯ ತಯಾರು ಮಾಡಿ ನೀಡಲು ಬಾಬಾ ರಾಮದೇವ್ ಶಿಫಾರಸು ಮಾಡುತ್ತಾರೆ. ಪತಂಜಲಿಯ ಜ್ಯೋತಿಷ್ಮತಿ ಎಣ್ಣೆಯನ್ನು ಮಿಶ್ರಣಕ್ಕೆ ಸೇರಿಸುವುದರಿಂದ ಎರಡು ಪಟ್ಟು ಪ್ರಯೋಜನಗಳನ್ನು ಪಡೆಯಬಹುದು. ಇದನ್ನು ಉಸಿರಾಡುವ ವಿಧಾನವು ಹುಕ್ಕಾವನ್ನು ಹೋಲಬಹುದಾದರೂ, ಅದು ಅಲ್ಲ. ನೀವು ಒಂದು ಮೂಗಿನ ಹೊಳ್ಳೆಯ ಮೂಲಕ ಹೊಗೆಯನ್ನು ಒಳಗೆ ಎಳೆದುಕೊಳ್ಳುತ್ತೀರಿ, ಮತ್ತು ಇನ್ನೊಂದು ಮೂಗಿನ ಹೊಳ್ಳೆಯ ಮೂಲಕ ಹೊಗೆಯನ್ನು ಹೊರಬಿಡುತ್ತೀರಿ. ಇದು ದೀರ್ಘಕಾಲದ ಶೀತ, ಕಫ, ಬ್ಯಾಕ್ಟೀರಿಯಾ ಮತ್ತು ಫಂಗಸ್ ಅನ್ನು ನಿರ್ಮೂಲನೆ ಮಾಡಬಹುದು.
ಬಾಹ್ಯ ಚಿಕಿತ್ಸೆಗಳನ್ನು ಬಳಸಲು ನೀವು ಬಯಸಿದರೆ, ಅದಕ್ಕೂ ಪರಿಣಾಮಕಾರಿ ಆಯುರ್ವೇದ ವಿಧಾನವಿದೆ ಎಂದು ಅವರು ವಿವರಿಸುತ್ತಾರೆ. ಅರಿಶಿನ, ಶುಂಠಿ, ಬೆಳ್ಳುಳ್ಳಿ ಮತ್ತು ಈರುಳ್ಳಿಯ ಪೇಸ್ಟ್ ಅನ್ನು ಎದೆಗೆ ಹಚ್ಚುವ ಆಯುರ್ವೇದ ಪಾಕವಿಧಾನವನ್ನು ಅವರು ಹಂಚಿಕೊಂಡಿದ್ದಾರೆ. ಅಥವಾ, ನೀವು ಮಗುವಿನ ಎದೆಗೆ ಸೆಲರಿ, ಪುದೀನ, ಕರ್ಪೂರ, ಲವಂಗ ಮತ್ತು ನೀಲಗಿರಿ ಎಣ್ಣೆಯ ಮಿಶ್ರಣವನ್ನು ಸಹ ಹಚ್ಚಬಹುದು. ಈ ಪೇಸ್ಟ್ ಅನ್ನು ಎದೆಗೆ ಹಚ್ಚಿದ ನಂತರ, ಅದನ್ನು ಬೆಚ್ಚಗಿನ ಬಟ್ಟೆಯಿಂದ ಮುಚ್ಚಿ. ಎದೆಯ ಮೇಲೆ ಉದ್ದಿನ ಹಿಟ್ಟಿನಿಂದ ಗಡಿಯನ್ನು ಮಾಡಿ ಅದರ ಮೇಲೆ ಬೆಚ್ಚಗಿನ ಎಣ್ಣೆಯನ್ನು ಸುರಿಯಬೇಕು. ಈ ವಿಧಾನವನ್ನೂ ಬಾಬಾ ರಾಮದೇವ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.
ಬಾಬಾ ರಾಮದೇವ್ ಅವರ ಪ್ರಕಾರ, ಹಾಲು ಕಫವನ್ನು ಉಂಟುಮಾಡಬಹುದಾದರೂ ಅದನ್ನು ಚಿಕಿತ್ಸೆಗಾಗಿ ಬಳಸಬಹುದು. ಅರಿಶಿನ, ಶಿಲಾಜಿತ್, ಮುಲೇಥಿ, ಅಶ್ವಗಂಧ ಮತ್ತು ಒಣ ಶುಂಠಿಯನ್ನು ತಲಾ ಒಂದು ಗ್ರಾಂ ಬಿಸಿ ಮಾಡಿ ಹಾಲಿಗೆ ಹಾಕಿ ಕುಡಿಯಲು ಕೊಡಬಹುದು. ಕೆಮ್ಮು ಹೆಚ್ಚಾದಾಗ, ತುಪ್ಪ, ಎಣ್ಣೆ, ಬೇಳೆ, ಅನ್ನ ಮತ್ತು ರೊಟ್ಟಿಯನ್ನು ತಪ್ಪಿಸಿ. ಬದಲಾಗಿ, ಕಡಲೆ, ಖರ್ಜೂರ ಮತ್ತು ಬೇಯಿಸಿದ ಸೇಬುಗಳನ್ನು ತಿನ್ನಿರಿ. ನಿಮಗೆ ಹಸಿವಾಗಿದ್ದರೆ, ಚಳಿಗಾಲದಲ್ಲಿ ಬಾಜ್ರಾ ಮತ್ತು ಕಡಲೆ ರೊಟ್ಟಿಗಳನ್ನು ತಿನ್ನಿರಿ. ಹಾಲಿಗೆ ಚ್ಯವನಪ್ರಾಶವನ್ನು ಹಚ್ಚಿ ತಿನ್ನುವುದರಿಂದ ಮತ್ತಷ್ಟು ಪರಿಣಾಮಕಾರಿ ಎನಿಸುತ್ತದೆ.
ಬಾಬಾ ರಾಮದೇವ್ ನೈಸರ್ಗಿಕವಾಗಿ ಮೂಗು ಸ್ವಚ್ಛಗೊಳಿಸಲು ಜಲ ನೇತಿ ಮತ್ತು ಸೂತ್ರ ನೇತಿಯನ್ನು ಶಿಫಾರಸು ಮಾಡುತ್ತಾರೆ. ಜಲ ನೇತಿ ಎಂದರೆ ಒಂದು ಮಡಕೆಯಿಂದ ನೀರನ್ನು ಒಂದು ಮೂಗಿನ ಹೊಳ್ಳೆಗೆ ಸುರಿಯುವುದು ಮತ್ತು ಇನ್ನೊಂದು ಮೂಗಿನ ಹೊಳ್ಳೆಯಿಂದ ನೀರನ್ನು ಹೊರಹಾಕುವುದು. ಇನ್ನು, ಸೂತ್ರ ನೇತಿ ಎಂದರೆ ಮೂಗಿನ ಹೊಳ್ಳೆಯ ಮೂಲಕ ದಾರವನ್ನು ಸೇರಿಸಿ ಬಾಯಿಯ ಮೂಲಕ ಹೊರತೆಗೆಯುವುದು. ಇದು ಮೂಗನ್ನು ಸ್ವಚ್ಛಗೊಳಿಸುತ್ತದೆ ಎಂದು ಸಹ ಹೇಳಲಾಗುತ್ತದೆ.