ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ – Kannada News | WEF annual meet at Davos, strong representation from India to include many CEOs, Chief Ministers, Union Ministers

ನವದೆಹಲಿ, ಡಿಸೆಂಬರ್ 19: ಮುಂದಿನ ತಿಂಗಳು ಸ್ವಿಟ್ಜರ್​ಲ್ಯಾಂಡ್​ನ ಡಾವೋಸ್​ನಲ್ಲಿ ನಡೆಯಲಿರುವ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಭಾರತದ ಪ್ರಬಲ ಉಪಸ್ಥಿತಿ ಇರಲಿದೆ. ಪ್ರಬಲವಾದ ಒಂದು ದೊಡ್ಡ ನಿಯೋಗವೇ ಡಾವೋಸ್​ಗೆ ತೆರಳಲಿದೆ. 2026ರ ಜನವರಿ 18ರಿಂದ 24ರವರೆಗೆ ನಡೆಯಲಿರುವ ಡಬ್ಲ್ಯುಇಎಫ್ ಸಭೆಯಲ್ಲಿ ಬ್ಯುಸಿನೆಸ್ ಮತ್ತು ರಾಜಕೀಯ ಕ್ಷೇತ್ರದ ನಾಯಕರು ಭಾರತದ ನಿಯೋಗದಲ್ಲಿದ್ದಾರೆ.

ವರದಿ ಪ್ರಕಾರ, ಭಾರತದ ನಿಯೋಗದಲ್ಲಿ ನೂರಕ್ಕೂ ಹೆಚ್ಚು ಸಿಇಒಗಳು, ಮೂವರು ಹಿರಿಯ ಕೇಂದ್ರ ಸಚವರು, ಐದು ರಾಜ್ಯಗಳ ಮುಖ್ಯಮಂತ್ರಿಗಳು ಇರಲಿದ್ದಾರೆ. ಇವರ ಜೊತೆ ಹಿರಿಯ ಸರ್ಕಾರಿ ಅಧಿಕಾರಿಗಳು, ಎನ್​ಜಿಒ ಪ್ರತಿನಿಧಿಗಳು ಮೊದಲಾದವರು ಸ್ವಿಟ್ಜರ್​ಲ್ಯಾಂಡ್​ಗೆ ಹೋಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಈ ವರ್ಷ ಸರ್ಕಾರಕ್ಕೆ ಸಿಕ್ಕಿದ ನಿವ್ವಳ ನೇರ ತೆರಿಗೆ ಸಂಗ್ರಹ 17 ಲಕ್ಷ ಕೋಟಿ ರೂ

ಉದ್ಯಮಿಗಳು ಮತ್ತು ಸಿಇಒಗಳ ಪೈಕಿ ರಿಲಾಯನ್ಸ್ ಛೇರ್ಮನ್ ಮುಕೇಶ್ ಅಂಬಾನಿ, ಟಾಟಾ ಗ್ರೂಪ್ ಛೇರ್ಮನ್ ಎನ್ ಚಂದ್ರಶೇಖರನ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಝೀರೋಧ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಮೊದಲಾದವರು ಇದ್ದಾರೆ.

ಇವರಷ್ಟೇ ಅಲ್ಲ, ಬಜಾಜ್ ಗ್ರೂಪ್​ನ ಸಂಜೀವ್ ಬಜಾಜ್, ಜುಬಿಲೆಂಟ್ ಭಾರ್ತಿಯಾ ಗ್ರೂಪ್​ನ ಹರಿ ಎಸ್ ಭಾರ್ತಿಯಾ, ಏರ್ಟೆಲ್​ನ ಸುನೀಲ್ ಭಾರ್ತಿ ಮಿಟ್ಟಲ್, ಇನ್ಫೋಸಿಸ್ ಸಿಇಒ ಸಲೀಲ್ ಪರೇಖ್, ವಿಪ್ರೋದ ರಿಷದ್ ಪ್ರೇಮ್​ಜಿ, ಎಸ್ಸಾರ್​ನ ಪ್ರಶಾಂತ್ ರುಯಾ, ಪೇಟಿಂನ ವಿಜಯ್ ಶೇಖರ್ ಶರ್ಮಾ, ರಿನ್ಯೂನ ಸುಮಂತ್ ಸಿನ್ಹಾ ಮೊದಲಾದವರೂ ಕೂಡ ಭಾರತದ ನಿಯೋಗದೊಂದಿಗೆ ಹೋಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

ಕೇಂದ್ರ ಸಚಿವರ ಪೈಕಿ ಪ್ರಲ್ಹಾದ್ ಜೋಷಿ, ಅಶ್ವಿನಿ ವೈಷ್ಣವ್ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಅವರು ಡಾವೋಸ್ ಸಭೆಯಲ್ಲಿ ಇರಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ ಮತ್ತು ಮಧ್ಯಪ್ರದೇಶ ಮುಖ್ಯಂತ್ರಿ ಮೋಹನ್ ಯಾದವ್ ಅವರೂ ಭಾರತೀಯ ನಿಯೋಗದಲ್ಲಿದ್ದಾರೆ. ಉತ್ತರಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಂದಲೂ ಪ್ರಾತಿನಿಧಿತ್ವ ಇರಲಿದೆ. ಬೇರೆ ರಾಜ್ಯಗಳೂ ಕೂಡ ಮುಖ್ಯಮಂತ್ರಿಯನ್ನೋ ಅಥವಾ ಹಣಕಾಸು ಸಚಿವರನ್ನೋ ಅಥವಾ ಇನ್ನಾರನ್ನಾದರೂ ಪ್ರತಿನಿಧಿಯನ್ನು ಕಳುಹಿಸಲು ಸ್ವತಂತ್ರವಾಗಿರುತ್ತವೆ. ಕರ್ನಾಟಕದಿಂದ ಇನ್ನೂ ನಿರ್ಧಾರ ಆಗಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಶಿಕ್ಷಕರೇ ಮೇಸ್ತ್ರಿ, ವಿದ್ಯಾರ್ಥಿಗಳೇ ಕಾರ್ಮಿಕರು: ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು – Kannada News | Teachers Using Students to Swarna School building construction work In Hassan Video Goes Viral

ಹಾಸನ, (ಡಿಸೆಂಬರ್ 19): ಮಕ್ಕಳು ಓದಲು ಶಾಲೆಗೆ ಹೋಗುತ್ತಾರೆ. ಇನ್ನು ಪೋಷಕರು ಸಹ ಲಕ್ಷಾಂತರ ರೂಪಾಯಿ ಫೀ ಕಟ್ಟಿ ತಮ್ಮ ಮಕ್ಕಳು ನಾಲ್ಕು ಅಕ್ಷರ ಕಲಿತು ವಿದ್ಯಾವಂತರಾಗಲಿ ಎಂದು ಶಾಲೆಗೆ ಕಳುಹಿಸುತ್ತಾರೆ. ಆದ್ರೆ, ಶಿಕ್ಷಕರೇ ಮಕ್ಕಳನ್ನ ಕಟ್ಟಡ ಕಾರ್ಮಿಕರಂತೆ ದುಡಿಸಿಕೊಂಡಿರುವ ಪ್ರಕರಣವೊಂದು ಹಾಸನ ಜಿಲ್ಲೆಯ ಖಾಸಗಿ ಶಾಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು…ಶಿಕ್ಷಕರು ಮೇಸ್ತ್ರಿಯಂತೆ ಮುಂದೆ ನಿಂತುಕೊಂಡು ಮಕ್ಕಳಿಂದ ಶಾಲೆ ಕಟ್ಟಡ ನಿರ್ಮಾಣ ಕೆಲಸಕ್ಕೆ ಬಳಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಸ್ವರ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಿಂದ ರೆಡಿಯಾಗಿ ಶಾಲೆಗೆ ಬಂದ ಮಕ್ಕಳಿಂದ ಗಾರೆ ಕೆಲಸ ಮಾಡಿಸಲಾಗಿದೆ. ವಿದ್ಯಾರ್ಥಿಗಳು ಸಿಮೆಂಟ್ ಮತ್ತು ಇಟ್ಟಿಗೆ ಹೊತ್ತೊಯ್ಯುತ್ತಿರುವ ವೀಡಿಯೋ ವೈರಲ್ ಆಗಿದೆ.

ಇನ್ನು ಪುಟ್ಟ ಮಕ್ಕಳಿಂದ ಸಿಮೆಂಟ್ ಇಟ್ಟಿಗೆ ಸಾಗಿಸುವ ವಿಡಿಯೋ ನೋಡಿ ಸ್ಥಳೀಯರು ಆಕ್ರೋಶಗೊಂಡಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಿವುದು ವಿದ್ಯವಂತರಾಗಲೆಂದು. ನಾವೇ ಮಕ್ಕಳನ್ನು ಈ ರೀತಿಯ ಕೆಲಸ ಮಾಡಿಸಲ್ಲ.ಆದ್ರೆ, ಪ್ರಜ್ಞಾವಂತರಾಗಿರುವ ಶಿಕ್ಷಕರೇ ಮಕ್ಕಳಿಂದ ಸೀಮೆಂಟ್, ಇಟ್ಟಿಗೆ ಸಾಗಿಸುವ ಕೆಲಸ ಮಾಡಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಲಕ್ಷಾಂತರ ರೂಪಾಯಿ ಫೀ ಕಟ್ಟಿಸಿಕೊಂಡು ವಿದ್ಯಾರ್ಥಿಗಳಿಗೆ ವಿದ್ಯ ಕಲಿಸುವ ಬದಲು ಗಾರೆ ಕೆಲಸ ಮಾಡಿಸುತ್ತಿರುವುದು ಎಷ್ಟು ಸರಿ?.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧ್ಯಾನ ಫ್ಯಾಷನ್ ಅಲ್ಲ, ಇಂದಿನ ಸಮಾಜದ ಅಗತ್ಯ; ಜಿನೀವಾದಲ್ಲಿ ರವಿಶಂಕರ್ ಗುರೂಜಿ ಅಭಿಮತ – Kannada News | Meditation Is Not Fashion It Is Need says Sri Sri Ravi Shankar Guruji in Geneva Ahead of World Meditation Day

ನವದೆಹಲಿ, ಡಿಸೆಂಬರ್ 19: ಡಿಸೆಂಬರ್ 21ರಂದು ಜಗತ್ತಿನಾದ್ಯಂತ ವಿಶ್ವ ಧ್ಯಾನ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಆರೋಗ್ಯ, ಸಾಮಾಜಿಕ ಸ್ಥಿತಿಸ್ಥಾಪಕತ್ವ ಮತ್ತು ಅಂತಾರಾಷ್ಟ್ರೀಯ ಸಹಕಾರದ ಆಧಾರಸ್ತಂಭವಾಗಿ ಧ್ಯಾನವನ್ನು ಮುನ್ನಡೆಸುವಲ್ಲಿ ಭಾರತದ ನಾಯಕತ್ವವು ಇದೀಗ ಜಾಗತಿಕ ಗಮನಕ್ಕೆ ಬರುತ್ತಿದೆ. 2024ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂಗೀಕರಿಸಿದ ನಿರ್ಣಯದ ನಂತರ ಡಿಸೆಂಬರ್ 21 ಅನ್ನು ವಿಶ್ವ ಧ್ಯಾನ ದಿನವೆಂದು (World Meditation Day) ವಿಶ್ವಸಂಸ್ಥೆಯು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿನೀವಾದಲ್ಲಿ ಆರ್ಟ್ ಆಫ್ ಲಿವಿಂಗ್​ನ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ವಿಶ್ವ ಧ್ಯಾನ ದಿನಕ್ಕೂ ಮುನ್ನ ಭಾಷಣವನ್ನು ಮಾಡಿದ್ದಾರೆ.

ರವಿಶಂಕರ್ ಗುರೂಜಿ ಅವರು ಜಿನೀವಾದಲ್ಲಿರುವ ವಿಶ್ವಸಂಸ್ಥೆಯ ಕಚೇರಿಯಲ್ಲಿ ಭಾಗವಹಿಸಿದ್ದು, ವಿಶ್ವ ಧ್ಯಾನ ದಿನದ ಪ್ರಯುಕ್ತ ಧ್ಯಾನ ತರಬೇತಿಯನ್ನು ಕೂಡ ನೀಡಿದ್ದಾರೆ. ಅಲ್ಲಿ ಅವರು ಸಮಕಾಲೀನ ಸಾಮಾಜಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಧ್ಯಾನದಿಂದ ಯಾವ ರೀತಿಯ ಪರಿಹಾರವನ್ನು ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಜಿನೀವಾದಲ್ಲಿ ಅಂತಾರಾಷ್ಟ್ರೀಯ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ರವಿಶಂಕರ್ ಗುರೂಜಿ, ಸಮಾಜದಲ್ಲಿ ಹೆಚ್ಚುತ್ತಿರುವ ಒತ್ತಡ, ಒಂಟಿತನ ಮತ್ತು ಭಾವನಾತ್ಮಕ ಆಯಾಸಕ್ಕೆ ಧ್ಯಾನದ ಮೊರೆಹೋಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದರು. ಜಗತ್ತು ಧ್ಯಾನದ ಮಹತ್ವವನ್ನು ಗುರುತಿಸಿದೆ. ಧ್ಯಾನವೆಂಬುದು ಫ್ಯಾಷನ್ ಅಥವಾ ಐಷಾರಾಮಿ ಅಲ್ಲ, ಇದು ಇಂದಿನ ಸಮಾಜದ ಅಗತ್ಯವಾಗಿದೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕೆಂದು ಅವರು ಕರೆನೀಡಿದ್ದಾರೆ.

ಇದನ್ನೂ ಓದಿ: ಅಂಗವಿಕಲರಿಗಾಗಿ ಮಿರಾಕಲ್ ಆಫ್ ಮೈಂಡ್ ಧ್ಯಾನ ಪರಿಚಯಿಸಿದ ಸದ್ಗುರುವಿನ ಇಶಾ ಫೌಂಡೇಷನ್​

ನಮ್ಮ ಜನಸಂಖ್ಯೆಯ ಅರ್ಧದಷ್ಟು ಜನರು ಒಂಟಿತನದಿಂದ ಬಳಲುತ್ತಿದ್ದಾರೆ. ನಮ್ಮ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಜನರು ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ನಮ್ಮೊಂದಿಗೆ ಸಂಪರ್ಕ ಸಾಧಿಸಲು ಸಹಾಯ ಮಾಡುವಂತಹ ಪ್ರಯತ್ನ ಮಾಡಬೇಕಾಗಿದೆ. ಅದು ನಮ್ಮ ಎಲ್ಲಾ ಒತ್ತಡವನ್ನು ತೊಡೆದುಹಾಕಲು ನಮಗೆ ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: World Meditation Day: ಡಿ. 21 ವಿಶ್ವ ಧ್ಯಾನ ದಿನ; ಅಶಾಂತ ಜಗತ್ತಿಗೆ ಧ್ಯಾನವೇ ಶಾಂತಿಯ ದಾರಿ: ರವಿಶಂಕರ್ ಗುರೂಜಿ

ನಮ್ಮ ಪ್ರಜ್ಞಾಪೂರ್ವಕ ಸ್ಥಿತಿಯು ದಾರಿಯಾದರೆ, ಧ್ಯಾನವು ಮನೆ ಇದ್ದಂತೆ. ಧ್ಯಾನವು ನಿಮ್ಮನ್ನು ನಿಮ್ಮ ಅಂತರಾಳಕ್ಕೆ ಕೊಂಡೊಯುತ್ತದೆ ಹಾಗೂ ನೆಮ್ಮದಿಯನ್ನು ನೀಡುತ್ತದೆ. ಧ್ಯಾನ ಮಾಡುವುದು ಕಷ್ಟವೇನಲ್ಲ. ಕಂಪ್ಯೂಟರ್‌ನಲ್ಲಿ ಅನಾವಶ್ಯಕ ಫೈಲ್​ಗಳನ್ನು ತೆಗೆದುಹಾಕಲು ಡಿಲೀಟ್ ಬಟನ್‌ ಒತ್ತುವಂತೆ ಧ್ಯಾನ ಮಾಡುವುದರಿಂದ ಮನಸ್ಸಿನಲ್ಲಿರುವ ಅನವಶ್ಯಕ ವಿಷಯಗಳಿಂದ ಮುಕ್ತಿ ದೊರೆಯುತ್ತದೆ ಎಂದು ರವಿಶಂಕರ್ ಗುರೂಜಿ ಹೇಳಿದ್ದಾರೆ.

ವಿಶ್ವ ಧ್ಯಾನ ದಿನದಂದು ಭಾರತದ ಪಾಲ್ಗೊಳ್ಳುವಿಕೆಯು ಸಾರ್ವಜನಿಕ ಆರೋಗ್ಯ ಆದ್ಯತೆಗಳು, ಸಾಂಸ್ಕೃತಿಕ ರಾಜತಾಂತ್ರಿಕತೆ ಮತ್ತು ಬಹುಪಕ್ಷೀಯ ಸಂವಾದದ ಒಮ್ಮುಖವನ್ನು ಪ್ರತಿಬಿಂಬಿಸುತ್ತದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ – Kannada News | Speaker Om Birla holds all party meeting over Tea as Parliament winter session concludes

ನವದೆಹಲಿ, ಡಿಸೆಂಬರ್ 19: ಸಂಸತ್ತಿನ ಚಳಿಗಾಲದ ಅಧಿವೇಶನ (Parliament Session)  ಮುಕ್ತಾಯಗೊಳ್ಳುತ್ತಿದ್ದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ಸಂಸತ್ ಭವನದಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಈ ಚಹಾ ಪಾರ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ಇಂದು ಮುಕ್ತಾಯಗೊಂಡ ಬಳಿಕ ಸಂಸತ್ ಭವನದ ಸ್ಪೀಕರ್ ಕೊಠಡಿಯಲ್ಲಿ ಸಭೆ ನಡೆಯಿತು. ಓಂ ಬಿರ್ಲಾ ಇಂದು 18ನೇ ಲೋಕಸಭೆಯ ಅಧಿವೇಶನವನ್ನು ಮುಕ್ತಾಯಗೊಳಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಗ್ರೀಮೆಂಟ್ ಮುಗಿದರೂ ಬಾಡಿಗೆದಾರ ಮನೆ ಖಾಲಿ ಮಾಡುತ್ತಿಲ್ಲವಾ? ಬೀಗ ಜಡಿಯದಿರಿ ಮಾಲೀಕರೆ; ಹೀಗೆ ಮಾಡಿ – Kannada News | How to vacate tenants without complications after the expiry of rent agreement

ಮನೆಯನ್ನು ಬಾಡಿಗೆಗೆ ಕೊಡುವಾಗ ಹೆಚ್ಚಿನ ಮಾಲೀಕರು (House Owners) ಬಾಡಿಗೆ ಕರಾರು ಅಥವಾ ರೆಂಟಲ್ ಅಗ್ರೀಮೆಂಟ್ (Rent Agreement) ಮಾಡಿಕೊಳ್ಳುವುದಿಲ್ಲ. ಕಾನೂನು ಸುರಕ್ಷತೆ ದೃಷ್ಟಿಯಿಂದ ಕರಾರು ಮಾಡಿಕೊಳ್ಳುವುದು ಯಾವಾಗಲೂ ಉತ್ತಮ. ಸಾಮಾನ್ಯವಾಗಿ 11 ತಿಂಗಳ ಅಗ್ರೀಮೆಂಟ್ ಇರುತ್ತದೆ. ಈ 11 ತಿಂಗಳ ಬಳಿಕ ಮಾಲೀಕರ ಇಚ್ಛಿಸಿದರೆ ಮತ್ತು ಬಾಡಿಗೆದಾರರು ಒಪ್ಪಿದರೆ ಕರಾರು ಮುಂದುವರಿಸಬಹುದು. ಅದಕ್ಕಾಗಿ ಮತ್ತೆ 11 ತಿಂಗಳಿಗೆ ಹೊಸ ಕರಾರು ಮಾಡಿಕೊಳ್ಳಬೇಕಾಗುತ್ತದೆ.

ಬಾಡಿಗೆದಾರ ಮನೆ ಖಾಲಿ ಮಾಡಲು ಒಪ್ಪದೇ ಇದ್ದರೆ?

ಬಾಡಿಗೆ ಕರಾರಿನಲ್ಲಿ ಸಾಮಾನ್ಯವಾಗಿರುವ ನಿಯಮವೆಂದರೆ ಮನೆ ಖಾಲಿ ಮಾಡುವ ಮುನ್ನ 1-3 ತಿಂಗಳು ನೋಟೀಸ್ ಕೊಡಬೇಕು ಎಂದಿರುತ್ತದೆ. ಬಾಡಿಗೆದಾರರನ್ನು ಖಾಲಿ ಮಾಡಿಸಲೂ ಮಾಲೀಕರು ಮುಂಚಿತವಾಗಿ ನೋಟೀಸ್ ಕೊಡಬೇಕು. 11 ತಿಂಗಳ ಅಗ್ರೀಮೆಂಟ್ ಮುಗಿದು, ಮನೆ ತೆರವು ಮಾಡಲು ಹೇಳಿದರೂ ಬಾಡಿಗೆದಾರ ಮನೆ ಖಾಲಿ ಮಾಡದೇ ಇದ್ದಾಗ ಮಾಲೀಕ ಏನು ಮಾಡಬೇಕು?

ಇದನ್ನೂ ಓದಿ: ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ?

ಬಾಡಿಗೆದಾರರ ಮೇಲೆ ಮಾಲೀಕ ಜಗಳ ಆಡುವುದು ತಪ್ಪು. ಮನೆಗೆ ಬೀಗ ಹಾಕುವುದೋ, ಗೇಟಿಗೆ ಬೀಗ ಹಾಕುವುದೋ, ಅಥವಾ ಮನೆಯ ಸಾಮಾನನ್ನು ಹೊರಗೆ ಹಾಕುವುದೋ, ಕರೆಂಟ್ ಕನೆಕ್ಷನ್ ಕಡಿತಗೊಳಿಸುವುದೋ, ನೀರಿನ ಕನೆಕ್ಷನ್ ಕಡಿತಗೊಳಿಸುವುದೋ ಇತ್ಯಾದಿ ಕ್ರಮಗಳು ಅಪರಾಧ ಎನಿಸುತ್ತವೆ. ಅಂಥ ತಪ್ಪನ್ನು ಮಾಲೀಕರು ಮಾಡಬಾರದು.

ಅದಕ್ಕೆ ಬದಲಾಗಿ, ಬಾಡಿಗೆದಾರರಿಗೆ ವಕೀಲರೊಬ್ಬರ ಮೂಲಕ ಲೀಗಲ್ ನೋಟೀಸ್ ಕೊಡಬೇಕು. ಬಾಡಿಗೆ ಕರಾರು ಮುಗಿದಿದೆ, ಇಂತಿಷ್ಟು ದಿನದೊಳಗೆ ಮನೆ ಖಾಲಿ ಮಾಡಿ ಎಂದು ಸಿಂಪಲ್ ಆಗಿ ನೋಟೀಸ್ ಕೊಟ್ಟರೆ ಸಾಕು.

ಖಾಲಿ ಮಾಡಿಸಬೇಕೆಂದಿರುವ ಬಾಡಿಗೆದಾರರಿಂದ ಬಾಡಿಗೆ ಪಡೆಯದಿರಿ…

ಕರಾರು ಮುಗಿದ ಬಳಿಕ ಬಾಡಿಗೆದಾರರನ್ನು ಮುಂದುವರಿಸಲು ಇಷ್ಟವಿಲ್ಲದಿದ್ದರೆ ನೀವು ಅವರಿಂದ, ನಂತರದ ತಿಂಗಳ ಬಾಡಿಗೆ ಸ್ವೀಕರಿಸಬಾರದು. ಹಾಗೆ ನೀವು ಬಾಡಿಗೆ ಸ್ವೀಕರಿಸಿದರೆ ಮನೆಯಲ್ಲಿ ವಾಸ್ತವ್ಯ ಮುಂದುವರಿಸಲು ನೀವು ಅನುಮತಿಸಿದಂತಾಗುತ್ತದೆ. ಬಾಡಿಗೆ ಹಣ ಕೊಡಲು ಮಂದಾದಾಗ, ಅದನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿ. ನಿಮ್ಮ ತಿರಸ್ಕಾರವು ಲಿಖಿತ ರೂಪದಲ್ಲಿ ಇದ್ದರೆ ಉತ್ತಮ.

ಇದನ್ನೂ ಓದಿ: ಅಮೆರಿಕ ಏನೇ ಮಾಡಿದರೂ ಛಲ ಬಿಡದ ಚೀನಾ; ಇಯುವಿ ಮೆಷೀನ್​ನ ಪ್ರೋಟೋಟೈಪ್ ತಯಾರು; ಮುಂದಿದೆ ಟೆಕ್ನಾಲಜಿ ಜಟಾಪಟಿ

ಒಂದು ವೇಳೆ, ಬಾಡಿಗೆ ಬೇಡವೆಂದರೂ ಹಣವನ್ನು ಯುಪಿಐ ಪೇಮೆಂಟ್ ಮಾಡಿದರೆ ಆಗ ಮಾಲೀಕರು ಅದನ್ನು ವಾಪಸ್ ಹಾಕಿ, ವಾಟ್ಸಾಪ್ ಮೂಲಕವಾದರೂ ಮನೆ ಖಾಲಿ ಮಾಡಬೇಕಿರುವ ವಿಚಾರವನ್ನು ಕಮ್ಯೂನಿಕೇಟ್ ಮಾಡಬೇಕು. ಅಕಸ್ಮಾತ್, ಬಾಡಿಗೆದಾರ ಲೀಗಲ್ ನೋಟೀಸ್​ಗೂ ಜಗ್ಗಲಿಲ್ಲವೆಂದಾದಾಗ ಕೋರ್ಟ್​ನಲ್ಲಿ ಇವೆಲ್ಲವೂ ಪ್ರಬಲ ಸಾಕ್ಷ್ಯವಾಗಿರಲು ಸಾಧ್ಯವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

‘ಅವತಾರ್ 3’ ಸಿನಿಮಾ ಹೇಗಿದೆ? ನೋಡಿದವರು ಹೇಳಿದ್ದೇನು? – Kannada News | Avatar Fire and Ash movie twitter review in Kannada

ಅವತಾರ್’ (Avatar) ಸಿನಿಮಾ ವಿಶ್ವದ ಅತ್ಯಂತ ಜನಪ್ರಿಯ ಸಿನಿಮಾಗಳಲ್ಲಿ ಒಂದು. 2009 ರಲ್ಲಿ ಬಿಡುಗಡೆ ಆಗಿದ್ದ ಮೊದಲ ‘ಅವತಾರ್’ ಸಿನಿಮಾ ವಿಶ್ವದಾದ್ಯಂತ ಮೋಡಿಯನ್ನೇ ಮಾಡಿಬಿಟ್ಟಿತ್ತು. ‘ಟೈಟಾನಿಕ್’ ಸಿನಿಮಾ ನಿರ್ದೇಶಿಸಿ ವಿಶ್ವವನ್ನೇ ಬೆಕ್ಕಸ ಬೆರಗಾಗಿಸಿದ್ದ ಜೇಮ್ಸ್ ಕ್ಯಾಮರನ್ 2009 ರ ‘ಅವತಾರ್’ ಸಿನಿಮಾ ಮೂಲಕ ಮತ್ತೊಮ್ಮೆ ವಿಶ್ವವೇ ತಮ್ಮತ್ತ ನೋಡುವಂತೆ ಮಾಡಿದ್ದರು. ಅದಾದ ಬಳಿಕ ಸುಮಾರು 13 ವರ್ಷಗಳ ಬಳಿಕ ‘ಅವತಾರ್ 2’ ಸಿನಿಮಾ ಬಿಡುಗಡೆ ಮಾಡಿದರು ಜೇಮ್ಸ್ ಕ್ಯಾಮರನ್. ಇಂದು (ಡಿಸೆಂಬರ್ 19) ‘ಅವತಾರ್ 3’ (ಅವತಾರ್: ಫೈರ್ ಆಂಡ್ ಆಶ್) ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾ ನೋಡಿದ ಮಂದಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದವರು ಹೇಳಿದ್ದೇನು? ಇಲ್ಲಿದೆ ಮಾಹಿತಿ…

ಕಿಂಗ್ ಎಂಬುವರು ಟ್ವೀಟ್ ಮಾಡಿ, ‘ಇದು ‘ಅವತಾರ್’ ಸರಣಿಯ ಈ ವರೆಗಿನ ಅದ್ಭುತ ಸಿನಿಮಾ. ಅದ್ಭುತವಾದ ಸಿನಿಮ್ಯಾಟಿಕ್ ಅನುಭವವನ್ನು ಈ ಸಿನಿಮಾ ನೀಡುತ್ತದೆ. ಒಂದೇ ಒಂದು ನೆಗೆಟಿವ್ ವಿಷಯವೆಂದರೆ ಸಿನಿಮಾದ ಕೆಲ ದೃಶ್ಯಗಳು ಈ ಹಿಂದಿನ ಸಿನಿಮಾಗಳಲ್ಲಿ ನೋಡಿದಂತೆ ಅನಿಸುತ್ತವೆ ಮತ್ತು ಸಿನಿಮಾದ ಕೆಲ ತಿರುವುಗಳನ್ನು ಮೊದಲೇ ಊಹಿಸಬಹುದು’ ಎಂದಿದ್ದಾರೆ. ಸಿನಿಮಾಕ್ಕೆ ಐದರಲ್ಲಿ 4.5 ರೇಟಿಂಗ್ ನೀಡಿದ್ದಾರೆ.

ಪ್ರಿನ್ಸ್ ಪೃಥ್ವಿ ಎಂಬುವರು ಟ್ವೀಟ್ ಮಾಡಿ, ‘ಇದೊಂದು ಅತ್ಯದ್ಭುತವಾದ ಸಿನಿಮಾ. ಪರದೆಯ ಮೇಲೆ ಪಾತ್ರಗಳಿಗೆ ಆಗುತ್ತಿರುವ ಎಲ್ಲ ಅನುಭವಗಳು ಪ್ರೇಕ್ಷಕನಿಗೂ ಆಗುತ್ತದೆ. ಸಿಟ್ಟು, ಆಕ್ರೋಶ, ಅಸಹನೆ ಎಲ್ಲವೂ ಮೂಡುತ್ತದೆ. ಅದರಲ್ಲಿಯೂ ಸಿನಿಮಾದ ಕ್ಲೈಮ್ಯಾಕ್ಸ್ ಅದ್ಭುತವಾಗಿದೆ. ಸಿನಿಮಾದ ಕ್ಲೈಮ್ಯಾಕ್ಸ್​​ ಮೇಲೆ ಜೇಮ್ಸ್ ಕ್ಯಾಮರನ್ ತಮ್ಮ ಎಲ್ಲ ಪ್ರತಿಭೆ ಪ್ರಯೋಗಿಸಿದ್ದಾರೆ. ಸಿನಿಮಾನಲ್ಲಿ ಟುರುಕ್ ಮಕ್ಟೋ ಎಂಟ್ರಿ ಅತ್ಯದ್ಭುತವಾಗಿದೆ’ ಎಂದಿದ್ದಾರೆ ಅವರು.

ಆಸ್ಟಿನ್ ಎಂಬುವರು ಟ್ವೀಟ್ ಮಾಡಿ, ಸಿನಿಮಾ ಸಾಧಾರಣಕ್ಕಿಂತ ಸ್ವಲ್ಪವೇ ಚೆನ್ನಾಗಿದೆ ಎಂದಿದ್ದಾರೆ. ಅದ್ಭುತ ದೃಶ್ಯಗಳು ಸಿನಿಮಾನಲ್ಲಿವೆ. ಪಾತ್ರಗಳ ನಡುವೆ ಕೆಲವು ಒಳ್ಳೆಯ ಸನ್ನಿವೇಶಗಳು, ಸಂಕೀರ್ಣತೆಗಳು ಇವೆ. ಈ ಸಿನಿಮಾದಲ್ಲಿ ತೋರಿಸಲಾಗಿರುವ ‘ಫೈರ್ ಸಮುದಾಯ’ ಅದ್ಭುತವಾಗಿದೆ. ಅವರ ಪಾತ್ರಗಳು, ಅವರಿಗೆ ನೀಡಿರುವ ವಿಶೇಷಣಗಳು ಚೆನ್ನಾಗಿದೆ. ಆದರೆ ಸಿನಿಮಾದ ಥೀಮ್ ಮತ್ತೆ ಮತ್ತೆ ಬಳಸಿದ್ದರಿಂದ ಸವಕಲು ಎನಿಸುತ್ತಿದೆ. ಈಗ ಸಿನಿಮಾಕ್ಕೆ ಹೊಸ ವಿಲನ್​​ನ ಅಗತ್ಯತೆ ಇದೆ. ‘ಫೈರ್ ಸಮುದಾಯ’ದ ವರಾಂಗ್ ಒಳ್ಳೆಯ ವಿಲನ್ ಆಗಬಹುದಿತ್ತು ಅನಿಸುತ್ತದ ಎಂದಿದ್ದಾರೆ. 10 ರಲ್ಲಿ 7 ಅಂಕಗಳನ್ನು ನೀಡಿದ್ದಾರೆ.

ಮ್ಯಾನ್ ಆಫ್ ಫಿಕ್ಷನ್ ಎಂಬ ಟ್ವೀಟ್ ಖಾತೆ ಹಂಚಿಕೊಂಡಿರುವ ಟ್ವೀಟ್​​ನಲ್ಲಿ, ಸಿನಿಮಾದ ಪಾಸಿಟಿವ್ ಮತ್ತು ನೆಗಟಿವ್​​ಗಳನ್ನು ಪಟ್ಟಿ ಮಾಡಲಾಗಿದೆ. ‘ಅವತಾರ್ 3’ನಲ್ಲಿ ಭಾವನಾತ್ಮಕ ದೃಶ್ಯಗಳು ಸಖತ್ ಆಗಿ ಕ್ಲಿಕ್ ಆಗಿವೆ. ಆದರೆ ಸಂಭಾಷಣೆ ಅಷ್ಟು ಚೆನ್ನಾಗಿಲ್ಲ. ಸಿನಿಮಾದ ಪಾತ್ರಗಳು ಚೆನ್ನಾಗಿವೆ. ಫೈರ್ ಸಮುದಾಯವನ್ನು ವಿಚಿತ್ರವಾಗಿ ತೋರಿಸಲಾಗಿದೆ. ಸಿನಿಮಾದ ದೃಶ್ಯಗಳು, ವಿಎಫ್​ಎಕ್ಸ್ ಎಲ್ಲವೂ ಅತ್ಯದ್ಭುತವಾಗಿವೆ’ ಎಂದಿದ್ದಾರೆ.

Source link

ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ – Kannada News | Davangere: Police return stolen property worth 20.38 crore to rightful owners

ಕಳುವಾಗಿದ್ದ ವಸ್ತು ಮಾಲೀಕರಿಗೆ ಹಸ್ತಾಂತರ

ದಾವಣಗೆರೆ, ಡಿಸೆಂಬರ್​ 19: ಸದ್ಯ ಇಯರ್​​ ಎಂಡ್​​ ಮೂಡ್​​ನಲ್ಲಿರುವ ಜನರು ಹೊಸ ವರ್ಷವನ್ನು ಸ್ವಾಗತಿಸುವುದಕ್ಕೆ ಸಜ್ಜಾಗುತ್ತಿದ್ದಾರೆ. ಇದಕ್ಕಾಗಿ ನಾನಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ವರ್ಷ ದಾವಣಗೆರೆ ಪೊಲೀಸರಿಗೆ (Davangere Police) ಒಂದು ರೀತಿ ಸುವರ್ಣ ಕಾಲವೆಂದರೆ ತಪ್ಪಾಗಲಿಕ್ಕಿಲ್ಲ. ಇಡೀ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ನ್ಯಾಮತಿ ಬ್ಯಾಂಕ್ ದರೋಡೆ ಕೇಸ್​, ಕ್ಷಣದಲ್ಲಿ ಚಿನ್ನ ಕಣ್ಮರೆ ಮಾಡುವ ಬಾಂಡ್ ಬಾಜಾ ಗ್ಯಾಂಗ್​​ ಸೇರಿ ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ. ಅಷ್ಟೇ ಅಲ್ಲದೆ 20.38 ಕೋಟಿ ರೂ. ಮೌಲ್ಯದ ಪ್ರಾಪರ್ಟಿ ರಿಟರ್ನ್ಸ್ ಪರೇಡ್ ಮೂಲಕ ಮಾಲೀಕರಿಗೆ ಹಸ್ತಾಂತರಿಸಿದ್ದಾರೆ.

ಅದು ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ. ಸುಮಾರು 17 ಕೋಟಿ ರೂ. ಮೌಲ್ಯದ ಚಿನ್ನದೋಚಿಕೊಂಡು ಹೋಗಿದ್ದರು. ನ್ಯಾಮತಿ ಪಟ್ಟಣದ ನೆಹರು ರಸ್ತೆಯ ಎಸ್​ಬಿಐ ಬ್ಯಾಂಕ್ ಗ್ರಾಹಕರು ಕಣ್ಣೀರು ಹಾಕುವಂತಾಗಿತ್ತು. ಬ್ಯಾಂಕ್ ಪಕ್ಕದಲ್ಲಿ ಬೇಕರಿ ನಡೆಸುತ್ತಿದ್ದ ಅಜಯ್​​ ಮತ್ತು ವಿಜಯ್ ಎಂಬ ಇಬ್ಬರು ಸಹೋದರು ಚಿನ್ನ ಕದ್ದು ತಮಿಳುನಾಡಿನ ಬಾವಿಯೊಂದರಲ್ಲಿ ಇಟ್ಟಿದ್ದರು. ಅದನ್ನ ಪೊಲೀಸರು ಪತ್ತೆ ಹಚ್ಚಿದ್ದರು.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!

ಇಂದು ದಾವಣಗೆರೆ ನಗರದ ಪೊಲೀಸ್ ಕವಾಯತ್ ಮೈದಾನದಲ್ಲಿ ಪೂರ್ವ ವಲಯ ಐಜಿಪಿ ರವಿಕಾಂತೇಗೌಡ, ಎಸ್​​ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 20.38 ಕೋಟಿ ರೂ. ಮೌಲ್ಯದ ಪ್ರಾಪರ್ಟಿ ರಿಟರ್ನ್ಸ್ ಪರೇಡ್ ಕಾರ್ಯಕ್ರಮ ನಡೆಯಿತು.​ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಭೇದಿಸಿ ಮಾಲೀಕರಿಗೆ ಅವರ ವಸ್ತುಗಳು ಹಸ್ತಾಂತರಿಸಲಾಯಿತು. ಈ ವೇಳೆ ಚಿನ್ನ, ನಗದು, ಬೆಳ್ಳಿ ಕಳೆದುಕೊಂಡಿದ್ದವರ ಮುಖದಲ್ಲಿ ಮಂದಹಾಸ ಮೂಡಿತ್ತು.

20.38 ಕೋಟಿ ರೂ. ಮೌಲ್ಯದ ಪ್ರಾಪರ್ಟಿ ರಿಟರ್ನ್ಸ್

ಈ ಪ್ರಾಪರ್ಟಿ ರಿಟರ್ನ್ಸ್ ಪರೇಡ್​​ನಲ್ಲಿ 2025 ವರ್ಷದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ತಂಡ ಕಾರ್ಯಚರಣೆ ನಡೆಸಿ ಒಟ್ಟು 173 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಈ ಪ್ರಕರಣಗಳಿಂದ ಅಂದಾಜು 19,64,52,459 ರೂ. ಮೌಲ್ಯದ ಸುಮಾರು 24 ಕೆಜಿ 726 ಗ್ರಾಂ ತೂಕದ ಚಿನ್ನ, 24,35,362 ರೂ. ಮೌಲ್ಯದ 26 ಕೆಜಿ 672 ಗ್ರಾಂ ಬೆಳ್ಳಿಯ ಆಭರಣಗಳು, ಜೊತೆಗೆ ಒಟ್ಟು 85,68,938 ರೂ ನಗದು, 46,28,517 ರೂ ಮೌಲ್ಯದ 90 ವಿವಿಧ ಮಾದರಿ ಬೈಕ್​​​ಗಳು, 73,80,000 ರೂ ಮೌಲ್ಯದ 492 ವಿವಿಧ ಕಂಪನಿಯ ಮೊಬೈಲ್​​ಗಳು, 16,81,000 ರೂ ಮೌಲ್ಯದ ಕೃಷಿ ಉಪಕರಣಗಳು, ಒಟ್ಟು 20,38,32,459 ರೂ ಮೌಲ್ಯದ ವಸ್ತುಗಳನ್ನು ಆಯಾ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಮುಖಂಡನಿಂದಲೇ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ: ಮಾಲು ಸಮೇತ ಸಿಕ್ಕಿಬಿದ್ದ

2025ನೇ ವರ್ಷ ದಾವಣಗೆರೆ ಪೊಲೀಸರ ಪಾಲಿಗೆ ಒಂದು ರೀತಿಯಲ್ಲಿ ಹರ್ಷದ ವರ್ಷ. ಸುಮಾರು ಆರು ತಿಂಗಳ ಕಾಲ ಶೋಧ ನಡೆಸಿ ನ್ಯಾಮತಿ ಎಸ್​​ಬಿಐ ಕೇಸ್ ಪತ್ತೆ ಹಚ್ಚಿದ್ದಾರೆ. ಇನ್ನೊಂದು ಕಡೆ ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯದಲ್ಲಿ ವೃತ್ತಿಪರ ಕಳ್ಳರ ತಂಡಗಳನ್ನ ಪತ್ತೆ ಹಚ್ಚಿದ್ದಾರೆ. ಇನ್ನು ದಾವಣಗೆರೆ ಓರ್ವ ಖಾಸಗಿ ಬ್ಯಾಂಕ್ ಉದ್ಯೋಗಿ ನಕಲಿ ಚಿನ್ನ ಅಡವಿಟ್ಟು ಯಾಮಾರಿಸಿದ್ದು, ಎಸ್​ಎಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಶರೀಫ್ ಎಂಬಾತ ಏಳು ಲಕ್ಷ ರೂ ಎಗರಿಸಿದ್ದು ಪತ್ತೆಯಾಗಿದ್ದು ವಿಶೇಷ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

RBI Recruitment 2025: ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿ ಲಿಖಿತ ಪರೀಕ್ಷೆಯಿಲ್ಲದೆ 93 ತಜ್ಞರ ಹುದ್ದೆಗೆ ನೇಮಕಾತಿ – Kannada News | RBI Recruitment 2025: 93 Specialist Officer Vacancies – Apply Online Now!

ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶಾದ್ಯಂತದ ತನ್ನ ಶಾಖೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 93 ತಜ್ಞರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಡಿಸೆಂಬರ್ 17 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 6 ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಇಲಾಖೆವಾರು ಹುದ್ದೆಗಳ ವಿವರಗಳು:

ಮಾಹಿತಿ ತಂತ್ರಜ್ಞಾನ ಇಲಾಖೆ (ಡಿಐಟಿ) ವಿಭಾಗದಲ್ಲಿ ಒಟ್ಟು 22 ಹುದ್ದೆಗಳಿವೆ. ಅಂದರೆ:

  • ಡೇಟಾ ಸೈಂಟಿಸ್ಟ್ ಹುದ್ದೆ: 2
  • ಐಟಿ ಭದ್ರತಾ ತಜ್ಞ: 7
  • ಐಟಿ ಸಿಸ್ಟಮ್ ಅಡ್ಮಿನಿಸ್ಟ್ರೇಟರ್: 5
  • AI/ML ಸ್ಪೆಷಲಿಸ್ಟ್ ಹುದ್ದೆಗಳು: 3
  • ಐಟಿ – ಸೈಬರ್ ಸೆಕ್ಯುರಿಟಿ ವಿಶ್ಲೇಷಕ: 5

ಮೇಲ್ವಿಚಾರಣಾ ಇಲಾಖೆ (DoS)ಯಲ್ಲಿ ಒಟ್ಟು 66 ಹುದ್ದೆಗಳಿದ್ದು, ಇವು ಐಟಿ – ಸೈಬರ್ ಸೆಕ್ಯುರಿಟಿ ವಿಶ್ಲೇಷಕ, ಡೇಟಾ ಸೈಂಟಿಸ್ಟ್ ಹುದ್ದೆಗಳನ್ನು ಒಳಗೊಂಡಿದೆ. ಇದಲ್ಲದೇ ಆವರಣ ಇಲಾಖೆಯಲ್ಲಿ 5 ಯೋಜನಾ ವ್ಯವಸ್ಥಾಪಕ ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಬಿಬಿಎ, ಬಿಎಸ್ಸಿ, ಬಿಟೆಕ್/ಬಿಇ, ಎಲ್ಎಲ್ಬಿ, ಸಿಎ, ಎಲ್ಎಲ್ಎಂ, ಎಂಎಸ್ಸಿ, ಎಂಇ/ಎಂಟೆಕ್, ಎಂಬಿಎ/ಪಿಜಿಡಿಎಂ, ಎಂಸಿಎ, ಪಿಜಿಡಿಬಿಎ ಉತ್ತೀರ್ಣರಾಗಿರಬೇಕು. ಅಧಿಸೂಚನೆಯಲ್ಲಿ ಸೂಚಿಸಿದಂತೆ ಅವರು ಸಂಬಂಧಿತ ಕೆಲಸದ ಅನುಭವವನ್ನು ಹೊಂದಿರಬೇಕು.

ಇದನ್ನೂ ಓದಿ: 946 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು 21 ರಿಂದ 62 ವರ್ಷಗಳ ನಡುವೆ ಇರಬೇಕು. ಸರ್ಕಾರಿ ನಿಯಮಗಳ ಪ್ರಕಾರ, ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕಕ್ಕೆ ಸಂಬಂಧಿಸಿದಂತೆ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 600 ಮತ್ತು ಎಸ್ಸಿ, ಎಸ್ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ತಲಾ ರೂ. 100 ಪಾವತಿಸಬೇಕಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಶೈಕ್ಷಣಿಕ ಅರ್ಹತೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ ತಿಂಗಳಿಗೆ 3,10,000 – 6,00,000 ರೂ. ವರೆಗಿನ ವೇತನ ನೀಡಲಾಗುವುದು.

ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:48 pm, Fri, 19 December 25

Source link

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಇಡಿ ಬಿಗ್ ಶಾಕ್ – Kannada News | Valmiki Development Corporation Scam: ED Attaches Rs 8 Crore Assets of Former Karnataka Minister B Nagendra

ಬಿ. ನಾಗೇಂದ್ರ

ನವದೆಹಲಿ, ಡಿಸೆಂಬರ್ 19: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Case) ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಬಿ. ನಾಗೇಂದ್ರ (Nagendra) ಅವರ ಸುಮಾರು 8 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ED) ಶುಕ್ರವಾರ ತಿಳಿಸಿದೆ. ನಾಲ್ಕು ವಸತಿ ಮತ್ತು ವಾಣಿಜ್ಯ ಆಸ್ತಿ, ಒಂದು ಕಟ್ಟಡ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಸೇರಿವೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್​ಗಳ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಈ ಆಸ್ತಿಗಳನ್ನು PMLA ಅಡಿಯಲ್ಲಿ ‘ಅಪರಾಧದ ಆದಾಯ’ ಎಂದು ಇಡಿ ಕರೆದಿದೆ. ಅಪರಾಧದ ಉಳಿದ ಆದಾಯವನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಅವುಗಳಿಗೆ ಬಿ ನಾಗೇಂದ್ರ ಈಗಾಗಲೇ ಬೇರೆ ವ್ಯವಸ್ಥೆ ಮಾಡಿರಬಹುದು ಅಥವಾ ಮರೆಮಾಡಿರಬಹುದು ಎಂದು ಇಡಿ ತಿಳಿಸಿದೆ.

ಜಾರಿ ನಿರ್ದೇಶನಾಲಯದ ಪ್ರಕಾರ, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳ ಮೌಲ್ಯ 8.07 ಕೋಟಿ ರೂ. ಆಗಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮದ ಖಾತೆಗಳಿಂದ ಕೋಟ್ಯಂತರ ರೂಪಾಯಿಗಳ ಹಣವನ್ನು ಬೇರೆಡೆಗೆ ತಿರುಗಿಸಿ ‘ನಕಲಿ ಖಾತೆಗಳಿಗೆ’ ವರ್ಗಾವಣೆ ಮಾಡಲಾಗಿತ್ತು. ನಂತರ ಶೆಲ್ ಘಟಕಗಳ ಮೂಲಕ ಅಕ್ರಮವಾಗಿ ವರ್ಗಾಯಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಸಂಬಂಧ ಕರ್ನಾಟಕ ಪೊಲೀಸರು ಮತ್ತು ಸಿಬಿಐ ಎಫ್‌ಐಆರ್‌ ದಾಖಲಿಸಿದ್ದವು. ಅವುಗಳ ತನಿಖೆ ವೇಳೆ ಹಣ ಅಕ್ರಮ ವರ್ಗಾವಣೆ ಪ್ರಕರಣ ಉದ್ಭವಿಸಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ: ಕರ್ನಾಟಕದಲ್ಲಿ ಏಕಕಾಲಕ್ಕೆ 8 ಕಡೆ ಇ.ಡಿ ದಾಳಿ

ವಾಲ್ಮೀಕಿ ಅಭಿೃದ್ಧಿ ನಿಗಮ ಹಗರಣದಲ್ಲಿ ಜೈಲು ಪಾಲಾಗಿದ್ದ ಬಿ ನಾಗೇಂದ್ರ ನಂತರ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಸಿಎಂ ಡಿಕೆ ಶಿವಕುಮಾರ್ – Kannada News | Amid Leadership Buzz, Karnataka DyCM DK Shivakumar Offers Special Puja to Shakti Devate at Andle Jagadeeshwari Temple in Ankola

ಕಾರವಾರ, ಡಿಸೆಂಬರ್ 19: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಆಂಡ್ಲೇ ಜಗದೀಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುರ್ಚಿ ಕಾಳಗದ ನಡುವೆ ಅವರು ಶಕ್ತಿ ದೇವತೆ ಮೊರೆ ಹೋಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆಂಡ್ಲೇ ದೇವಸ್ಥಾನದ ಗರ್ಭಗುಡಿ ಬಾಗಿಲು ಹಾಕಿ ಡಿಕೆಶಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ನಂತರ, ಗೋಕರ್ಣದ ಮಹಾಬಲೇಶ್ವರ ದೇಗುಲಕ್ಕೆ ಭೇಟಿ ನೀಡಿ ಮಹಾಗಣಪತಿ ಮತ್ತು ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಹಿಂದೆ ಸಿಎಂ ಕುರ್ಚಿ ಕದನ ತೀವ್ರಗೊಂಡಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಹಾಸನದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಯನ್ನು ಮನೆಗೆ ಕರೆಸಿಕೊಂಡು ಪೂಜೆ ನೆರವೇರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version