ಹನಿಟ್ರ್ಯಾಪ್ ಕೇಸ್ಗೆ ಬಿಗ್ ಟ್ವಿಸ್ಟ್: ಪ್ರಭಾವಿ ವ್ಯಕ್ತಿಯೊಬ್ಬರ ಸಂಚು, ಕಣ್ಣೀರು ಹಾಕಿದ ಮಹಿಳೆ
ದಾವಣಗೆರೆ, ಮಾ.14: ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಹನಿಟ್ರ್ಯಾಪ್ ಪ್ರಕರಣ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಖಾಸಗಿ ಆಸ್ಪತ್ರೆ ನರ್ಸ್ ಎಂದು ಹೇಳಿಕೊಂಡು ಕಷ್ಟ ಅಂತ ಹೇಳಿಕೊಂಡು ಉದ್ಯಮಿ ಹನಿಟ್ರ್ಯಾಪ್ ಮಾಡಲು ಹೋಗಿದ್ದ ಮಹಿಳೆ ಮತ್ತು ಆಕೆಯ ಜತೆಗೆ ಇದ್ದ ವ್ಯಕ್ತಿಗಳು ಇದೀಗ ತಮ್ಮ ತಪ್ಪಿನ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎಂದು ಹೇಳಿದ್ದಾರೆ. ಆರೋಪ ಹೊತ್ತಿರುವ ಬಿಳಿಚೋಡು ಚನ್ನಬಸಪ್ಪ ಮತ್ತು ಸಂಬಂಧಪಟ್ಟ ಮಹಿಳೆ ಇಂದು ಸುದ್ದಿಗೋಷ್ಠಿ ನಡೆಸಿ, “ನಾವು ಹನಿಟ್ರ್ಯಾಪ್ ಮಾಡಿಲ್ಲ, ಬದಲಾಗಿ ನಮ್ಮನ್ನು ಪ್ರಭಾವಿಗಳು…