ಹಾಸ್ಯ ‘ಅಪಹಾಸ್ಯ’ವಾಗದಿರಲಿ: ಜೀವನಕ್ಕೆ ನಗು ಎಷ್ಟು ಮುಖ್ಯವೋ, ಅದರ ಇತಿಮಿತಿಗಳೂ ಅಷ್ಟೇ ಅಗತ್ಯ! – Kannada News | The Etiquette of Laughter: Guidelines for Appropriate Humour in Daily Life

ಬೆಂಗಳೂರು, ಏ.16: ಹಾಸ್ಯವು ಜೀವನದ ಒಂದು ಅವಿಭಾಜ್ಯ ಅಂಗವಾಗಿದ್ದು, ಮಾನಸಿಕ ಮತ್ತು ದೈಹಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಒತ್ತಡ ನಿವಾರಣೆ ಮತ್ತು ಆತ್ಮವಿಶ್ವಾಸ ವೃದ್ಧಿಗೆ ಸಹಾಯ ಮಾಡುತ್ತದೆ. ಆದರೆ, ಹಾಸ್ಯವು ಅಪಹಾಸ್ಯವಾಗಿ ಪರಿವರ್ತನೆಯಾಗಬಾರದು. ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಾಸ್ಯವನ್ನು ಮಾಡುವುದು ಅಸಮರ್ಪಕ. ದೇವಾಲಯಗಳಲ್ಲಿ, ಮೌನವಾಗಿ ಭಗವಂತನ ಮೇಲೆ ಗಮನವಿಡಬೇಕು, ಅಲ್ಲಿ ಹಾಸ್ಯ ಮಾಡಬಾರದು. ಯಾರಾದರೂ ನಿಧನರಾದಾಗ ಅಥವಾ ದುಃಖದಲ್ಲಿದ್ದಾಗ ಅವರ ಮನೆಯಲ್ಲಿ ಹಾಸ್ಯ ಮಾಡುವುದು ಶುಭವಲ್ಲ. ಪ್ರಾರ್ಥನಾ ಮಂದಿರಗಳು, ಧ್ಯಾನ ಕೇಂದ್ರಗಳು ಅಥವಾ ಪ್ರವಚನ ನಡೆಯುವ ಸ್ಥಳಗಳಲ್ಲಿ ಗಂಭೀರತೆ ಕಾಪಾಡಿಕೊಳ್ಳಬೇಕು. ಹಿರಿಯರು, ಧರ್ಮ ಚಿಂತಕರು, ಸನ್ಯಾಸಿಗಳು, ಮಠಾಧೀಶರು ಮತ್ತು ಸಾಧುಗಳ ಬಗ್ಗೆ ಹಾಸ್ಯದಿಂದ ಮಾತನಾಡುವುದು ಸರಿಯಲ್ಲ. ಸ್ತ್ರೀಯರ ಬಗ್ಗೆ ಅವರ ಮುಂದೆಯೇ ಹಾಸ್ಯ ಮಾಡುವುದು ಅಷ್ಟು ಶುಭಕರವಲ್ಲ. ತೊದಲುವವರು, ಕಿವುಡರು, ಅಂಗವಿಕಲರು ಅಥವಾ ಕುರುಡರ ಬಗ್ಗೆ ಹಾಸ್ಯ ಮಾಡಬಾರದು. ಹಾಸ್ಯವು ಪವಿತ್ರವಾಗಿದ್ದರೂ, ಸದಾ ಇತಿಮಿತಿಗಳನ್ನು ಅರಿತು ಸರಿಯಾದ ಸ್ಥಳ ಮತ್ತು ಸಮಯದಲ್ಲಿ ಬಳಸಬೇಕು ಎಂದು  ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು  ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಕೇರಳಕ್ಕೆ ಮೋಜು ಮಸ್ತಿಗೆ ಹೋಗಿರಲಿಲ್ಲ’: ಆಪ್ತರ ತಲೆದಂಡಕ್ಕೆ ಜಮೀರ್ ಕೆಂಡ, ಭುಗಿಲೆದ್ದ ಅಸಮಾಧಾನ – Kannada News | Congress Internal Rift: Zameer Ahmed Fumes Over Action Against Allies; Defensive Over Kerala Trip

ಬೆಂಗಳೂರು, ಏಪ್ರಿಲ್ 16: ದಾವಣಗೆರೆ ದಕ್ಷಿಣ ಉಪಚುನಾವಣೆಯ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಭಿನ್ನಮತದ ಸ್ಫೋಟಗೊಂಡಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರ ಪದಚ್ಯುತಿಯು ಪಕ್ಷದೊಳಗೆ ಸಂಚಲನ ಸೃಷ್ಟಿಸಿದೆ. ಈ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

‘ನಾನೇನು ಮೋಜು-ಮಸ್ತಿಗೆ ಹೋಗಿರಲಿಲ್ಲ’: ಜಮೀರ್ ಕಿಡಿ

ದಾವಣಗೆರೆ ಪ್ರಚಾರದಿಂದ ದೂರ ಉಳಿದು ಕೇರಳಕ್ಕೆ ತೆರಳಿದ್ದ ವಿಚಾರವಾಗಿ ಜಮೀರ್ ಅಹ್ಮದ್ ಖಡಕ್ ಉತ್ತರ ನೀಡಿದ್ದಾರೆ. ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿರಲಿಲ್ಲ. ಎಐಸಿಸಿ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಸೂಚನೆಯಂತೆ ಪಕ್ಷದ ಕೆಲಸಕ್ಕಾಗಿಯೇ ಅಲ್ಲಿಗೆ ಹೋಗಿದ್ದೆ. ನನ್ನ ಹಣೆಬರಹ ಬರೆಯಲು ಯಾರಿಂದಲೂ ಸಾಧ್ಯವಿಲ್ಲ, ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಆಗಲ್ಲ ಎಂದು ಜಮೀರ್ ಗುಡುಗಿದ್ದಾರೆ.

ಸರಣಿ ಕ್ರಮಗಳ ಹಿನ್ನೆಲೆ

ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತ ನಾಯಕರಿಗೆ ಟಿಕೆಟ್ ನೀಡಬೇಕೆಂದು ಜಮೀರ್ ಮತ್ತು ತಂಡ ಪಟ್ಟು ಹಿಡಿದಿತ್ತು. ಆದರೆ ಶಾಮನೂರು ಮಲ್ಲಿಕಾರ್ಜುನ್ ಪುತ್ರ ಸಮರ್ಥ್‌ಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅಬ್ದುಲ್ ಜಬ್ಬಾರ್ ಮತ್ತು ನಸೀರ್ ಅಹ್ಮದ್ ಪ್ರಚಾರದಿಂದ ದೂರ ಉಳಿದಿದ್ದರು ಎಂಬ ಆರೋಪ ಇದೆ. ಇದರ ಪರಿಣಾಮವಾಗಿ ನಸೀರ್ ಅಹ್ಮದ್‌ರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದ್ದರೆ, ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತು ಮಾಡಲಾಗಿದೆ.

ಸಿಎಂ ಬಣ ಟಾರ್ಗೆಟ್?

ಪಕ್ಷದಲ್ಲಿ ನಡೆಯುತ್ತಿರುವ ಈ ಬೆಳವಣಿಗೆಗಳು ಸಿಎಂ ಸಿದ್ದರಾಮಯ್ಯ ಅವರ ಆಪ್ತ ತಂಡವನ್ನು ಗುರಿಯಾಗಿಸಿಕೊಂಡು ನಡೆಯುತ್ತಿದೆಯೇ ಎಂಬ ಅನುಮಾನ ಮೂಡಿಸಿದೆ. ಈ ಬಗ್ಗೆ ವ್ಯಂಗ್ಯವಾಡಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣ, ‘ಕಾಂಗ್ರೆಸ್ ಶಿಸ್ತಿನ ಪಕ್ಷ, ಆದರೆ ಇಲ್ಲಿ ದೊರೆ ಮಾಡಿದ್ದಕ್ಕೆ ದಂಡ ಇಲ್ಲ’ ಎನ್ನುವ ಮೂಲಕ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಟೀಕೆ ಮಾಡಿದ್ದಾರೆ. ಒಟ್ಟಿನಲ್ಲಿ ಉಪಚುನಾವಣೆ ಫಲಿತಾಂಶ ಬರುವ ಮೊದಲೇ ಕೈ ಪಾಳೆಯದಲ್ಲಿ ಅಧಿಕಾರ ಮತ್ತು ಶಿಸ್ತಿನ ಸಮರ ತಾರಕಕ್ಕೇರಿದೆ.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ದಾವಣಗೆರೆ ಉಪಕದನ ಕಿಚ್ಚು: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಆಪ್ತರಿಂದಲೂ ಸಾಮೂಹಿಕ ರಾಜೀನಾಮೆ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದು ಈ ರಾಶಿಯಲ್ಲಿ ‘ಗಜಕೇಸರಿ ಯೋಗ’: ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Zodiac Forecasts: Dr. Basavaraj Gurujis Insights on 16 April 2026 for All Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 16 ಏಪ್ರಿಲ್ 2026 ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ಚತುರ್ದಶಿ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸಂಚಾರವು ರಾಶಿಗಳ ಮೇಲೆ ಬೀರುವ ಪ್ರಭಾವವನ್ನು ವಿವರಿಸಲಾಗಿದೆ. ರವಿ ಮೇಷದಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು ಗಜಕೇಸರಿ ಯೋಗ ಉಂಟಾಗಿದೆ. ಇಂದಿನ ರಾಹುಕಾಲ ಮಧ್ಯಾಹ್ನ 1:52 ರಿಂದ 3:22 ರವರೆಗೆ ಇದ್ದು, ಸರ್ವಸಿದ್ಧಿ ಸಂಕಲ್ಪ ಕಾಲವು 12:19 ರಿಂದ 1:52 ರವರೆಗೆ ಇದೆ. ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಆರೋಗ್ಯ, ಕುಟುಂಬ ಸಂಬಂಧಗಳು, ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ವಿಶೇಷ ಮಂತ್ರ ಜಪದ ಕುರಿತು ಗುರೂಜಿ ವಿವರವಾದ ಮಾರ್ಗದರ್ಶನ ನೀಡಿದ್ದಾರೆ. ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವ ಆಚರಿಸುವ ಎಲ್ಲರಿಗೂ ಶುಭ ಹಾರೈಸಿ, ಇಂದಿನ ದಿನವು ಸಕಲರಿಗೂ ಶುಭವಾಗಲಿ ಎಂದು ಪ್ರಾರ್ಥಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಸಿಲ ಬೇಗೆಯ ನಡುವೆ ಮಳೆಯ ಮುನ್ಸೂಚನೆ: ರಾಜ್ಯದ 10 ಜಿಲ್ಲೆಗಳಲ್ಲಿ ‘ಹೀಟ್ ವೇವ್’ ಎಚ್ಚರಿಕೆ; ಎಲ್ಲೆಲ್ಲಿ ಮಳೆಯಾಗಲಿದೆ? – Kannada News | Karnataka Weather Today: Soaring Heat, Bengaluru 35 37°C; IMD Forecasts Rain

ಬೆಂಗಳೂರು,  ಏ.16: ಕರ್ನಾಟಕದಾದ್ಯಂತ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟವನ್ನು ತಲುಪುತ್ತಿದೆ. ಇದರ ನಡುವೆಯೇ, ರಾಜ್ಯದ ಕೆಲವು ಭಾಗಗಳಲ್ಲಿ ವರುಣನ ಆಗಮನವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಇಂದಿನ ಹವಾಮಾನ ವರದಿ ಹೇಗಿದೆ, ಯಾವೆಲ್ಲ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಳೆ ಇದೆ ಎಂಬುದನ್ನು ಇಲ್ಲಿ ನೋಡುವ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸುಡುವ ಬಿಸಲು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನವು 35°C ನಿಂದ 37°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ನಗರದಲ್ಲಿ ಮೋಡಕವಿದ ವಾತಾವರಣ ಕಂಡುಬಂದರೂ, ಸೆಖೆಯ ಪ್ರಮಾಣ ಹೆಚ್ಚಿರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಹಗುರ ಮಳೆಯ ಮುನ್ಸೂಚನೆ ಇದೆ.

ಇದನ್ನೂ ಓದಿ: ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು

ಪ್ರಮುಖ ಜಿಲ್ಲೆಗಳ ಅಂದಾಜು ತಾಪಮಾನ (ಗರಿಷ್ಠ/ಕನಿಷ್ಠ):

ಜಿಲ್ಲೆ ಗರಿಷ್ಠ ತಾಪಮಾನ ಕನಿಷ್ಠ ತಾಪಮಾನ
ಬೆಂಗಳೂರು 36°C 22°C
ಕಲಬುರಗಿ 42°C 26°C
ಮಂಗಳೂರು 34°C 25°C
ಶಿವಮೊಗ್ಗ 37°C 23°C
ಹುಬ್ಬಳ್ಳಿ-ಧಾರವಾಡ 39°C 24°C

ಲಬುರಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನವು 40°C ದಾಟುವ ಸಾಧ್ಯತೆಯಿದ್ದು, ಜನರಿಗೆ ಬಿಸಿಲಿನಿಂದ ಜಾಗರೂಕರಾಗಿರಲು ಸೂಚಿಸಲಾಗಿದೆ.ಮಂಗಳೂರು, ಉಡುಪಿ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದ ಜೊತೆಗೆ ತೇವಾಂಶ ಭರಿತ ಹವಾಮಾನ ಇರಲಿದ್ದು, ಉಷ್ಣಾಂಶದ ಅನುಭವ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿನ ಭವಿಷ್ಯ: ಇಂದು ಈ ರಾಶಿಯವರಲ್ಲಿ ಆಕರ್ಷಣೆ ಹೆಚ್ಚಾಗಲಿದ್ದು, ಎಲ್ಲ ಕಡೆ ಹೊಳೆಯುವರು – Kannada News | Horoscope April 16 Thursday 2026; Dina Rashi Bhavishya Today, Checkout the details here

ಮೇಷ ರಾಶಿ:

ನಿಮ್ಮ ಉನ್ನತಸ್ಥಾನಕ್ಕೆ ಕಾರಣರಾದ ಎಲ್ಲರನ್ನೂ ಇಂದು ಸ್ಮರಿಸಿಕೊಳ್ಳುವಿರಿ. ಸಂತಾನದ ವಾರ್ತೆ ನಿಮಗೆ ಒಂದಿನ ಶುಭವಾರ್ತೆಯಾಗಲಿದೆ. ದುಡುಕುವುದು ನಿಮ್ಮ ಸ್ವಭಾವಕ್ಕೆ ವಿರುದ್ಧವಾದಂತೆ. ಹೊಸ ಮನೆಯನ್ನೋ ಜಾಗವನ್ನೋ ತೆಗದುಕೊಳ್ಳುವ ಪ್ರಸ್ತಾಪವಿರಲಿದೆ. ನಿಮ್ಮ ಮೇಲೆ ಅರೋಪವು ಬರುವ ಸಾಧ್ಯತೆ ಇದ್ದೆ. ಔಚಿತ್ಯ ಪೂರ್ಣವಾಗಿ ಮಾತನಾಡುವಿರಿ. ಸಣ್ಣ ಮಟ್ಟಿನ ಗೌರವಕ್ಕೆ ಪಾತ್ರರಾಗುವಿರಿ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿಯು ಹೆಚ್ಚಾಗುವುದು. ಒಂದೇ ಆಯಾಮದ ಕಾರ್ಯಗಳಿಂದ ವಿಶ್ರಾಂತಿಯು ಬೇಕೆನಿಸಬಹುದು.

ವೃಷಭ ರಾಶಿ:

ಇಂದು ಸ್ಪರ್ಧಾತ್ಮಕ ವಿಚಾರಗಳಿಂದ ಸೋಲಾಗುವುದು. ಶತ್ರುಗಳು ನಿಮ್ಮ ಹಿಂದೇ ಇದ್ದು ನಿಮ್ಮನ್ನು ಎಲ್ಲ ಕೆಲಸಗಳಿಗೆ ಪ್ರೋತ್ಸಾಹಿಸಿ ಕೈ ಬಿಡವರು.‌ ವಿದ್ಯುದುಪಕರಣಗಳ ಖರೀದಿಯಿಂದ ನಿಮಗೆ ಧನವ್ಯಯವಾಗುವ ಸಾಧ್ಯತೆಯಿದೆ. ಹಣಬೇಕೆಂದು ಸಲ್ಲದ ದಾರಿಯಲ್ಲಿ ನಡೆದರೆ ಬಂದುದೆಲ್ಲ ಹಾಗೇ ಹೋಗುವುದು. ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವುದು ಉತ್ತಮ. ಉದ್ಯಮವು ಸಕ್ರಿಯವಾಗಿದ್ದು ಇದನ್ನು ವಿಸ್ತರಿಸುವಿರಿ.

ಮಿಥುನ ರಾಶಿ:

ದೈವಾನುಕೂಲ ಬಂದಾಗ ನಿಮ್ಮಲ್ಲಿ ಹೊಳಪು ಬರಲಿದೆ. ಯಾರನ್ನೂ ಪೂರ್ಣ ನಂಬುವ ಸ್ಥಿತಿ ಇರದು. ಸಂಗಾತಿಯೊಡನೆ ಸಮಾರಂಭಕ್ಕೆ ಹೋಗಲಿದ್ದೀರಿ. ನಿಮ್ಮ ಮಾತುಗಳು ಸಭೆಯನ್ನು ವಿಸ್ಮಿತಗೊಳಿಸಲಿದೆ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಲಿದ್ದೀರಿ. ಹಿಂದಿನ ಹಣಕಾಸಿನ ಸಮಸ್ಯೆಯು ಇಂದೂ ಕಾಣಿಸಿಕೊಳ್ಳಬಹುದು. ಒಳ್ಳೆಯತನವನ್ನು ತಮ್ಮ ವೈಯಕ್ತಿಕ ಲಾಭಕ್ಕಾಗಿ ಉಪಯೋಗಿಸಿಕೊಳ್ಳಬಹುದು. ಅನನುಕೂಲತೆಯನ್ನು ಬಳಸಿಕೊಂಡು ಸಕಾರಾತ್ಮಕವಾಗಿ ಸಾಧಿಸುವಿರಿ.

ಕರ್ಕಾಟಕ ರಾಶಿ:

ಮಾಡಲು ಏನೂ ಕೆಲಸವಿಲ್ಲವೆಂದು ಹೇಳಿ ನಿಮ್ಮರ ಬಾಯಿಗೆ ಸಿಗಬೇಡಿ. ಏನಾದರೂ ಉತ್ತಮವಾದ ಕೆಲಸವನ್ನು ಮಾಡಿ, ಅದನ್ನೇ ಹೇಳಿ. ಕರ್ತವ್ಯಶೂನ್ಯತೆಯಿಂದ ತಂದೆಗೆ ಬೇಸರವಾಗಬಹುದು. ಆಗ ತಾನಾಗಿಯೇ ಬಾಯಿ ಮುಚ್ಚುವುದು. ಜೀವನದಲ್ಲಿ ಚುರುಕುತನ ಕಂಡುಕೊಳ್ಳಲು ದಾರಿಯನ್ನು ಕಂಡುಕೊಳ್ಳಿ. ಬಂಧುಗಳು ನಿಮ್ಮನ್ನು ಪ್ರಶಂಸಿಸಿ ಕಾರ್ಯವನ್ನು ಸಾಧಿಸಿಕೊಳ್ಳುವರು. ವಾಸದ ಸ್ಥಳವನ್ನು ನೀವು ಬದಲಿಸಬೇಕಾಗಬಹುದು.

ಸಿಂಹ ರಾಶಿ:

ಅನಿರೀಕ್ಷಿತ ಹಣದ ವ್ಯಯದಿಂದ ಚಂಚಲರಾಗುವಿರಿ. ಪರಿಶ್ರಮದಿಂದ ಸಕಾಲಕ್ಕೆ ಸರಿಯಾಗಿ ಫಲವನ್ನು ಪಡೆಯುವಿರಿ. ಮೊದಲ ವೇತನವನ್ನು ಪಡೆದು ಖುಷಿ ಪಡುವಿರಿ. ಮನೆಯ ನಿರ್ಮಾಣದ ಯೋಜನೆಯನ್ನು ರೂಪಿಸುವಿರಿ. ಆಕಸ್ಮಿಕ ಸುದ್ದಿಯಿಂದ ಮನಸ್ಸು ಖೇದಪಡುವುದು. ನಿಮ್ಮ ವರ್ತನೆಗಳಲ್ಲಿ ಬದಲಾವಣೆಯನ್ನು ಆಪ್ತರು ಗಮನಿಸುವರು. ನಿಮ್ಮ ಸುತ್ತಮುತ್ತಲಿನವರಿಂದ ತೊಂದರೆಯಾಗಬಹುದು. ಇಂದು ನೀವು ಒತ್ತಡದ ಕೆಲಸದಿಂದ ವಿರಾಮ ಪಡೆದುಕೊಳ್ಳಲು ಬಯಸುವಿರಿ.

ಕನ್ಯಾ ರಾಶಿ:

ಯಾರದ್ದೋ ವಿಷಯಕ್ಕೆ ನೀವು ಮೂಗು ತೂರಿಸಿ ಅಪಮಾನಕ್ಕೆ ಸಿಕ್ಕಿಹಾಕಿಕೊಳ್ಳುವಿರಿ. ಅನಗತ್ಯ ಮಾತುಗಳಿಂದ ಸಣ್ಣವರಾಗುವಿರಿ. ವಿದ್ಯಾರ್ಥಿಗಳು ಶ್ರಮಕ್ಕೆ ತಕ್ಕ ಫಲವನ್ನು ಪಡೆಯಲಿದ್ದಾರೆ. ನಿದ್ರಾಹಿನತೆಯಿಂದ ಆಲಸ್ಯವೂ ಬರಬಹುದು. ವಿದ್ಯಾಭ್ಯಾಸಕ್ಕೆ ಮನೆಯನ್ನು ಬಿಟ್ಟು ದೂರವಿರಲು ನಿಮಗೆ ಮನಸ್ಸಾಗದು. ದಿವ್ಯಸ್ಥಳಕ್ಕೆ ಭೇಟಿ ನೀಡುವಿರಿ. ನಿಮ್ಮ ಇಂದಿನ ಆರ್ಥಿಕಲಾಭವು ನಿಮಗೆ ಹೆಚ್ಚು ಸುಖವನ್ನು ಕೊಡಬಹುದು. ಸಂಗಾತಿಯು ನಿಮಗೆ ಬೇಸರವಾಗುವಂತೆ ಮಾತನಾಡಬಹುದು.

ತುಲಾ ರಾಶಿ:

ಸ್ತ್ರೀಯರು ಇಂದು ತಾಳ್ಮೆಯನ್ನು ಕಳೆದುಕೊಂಡು ದುಃಖಿಸಬೇಕಾದ ಸ್ಥಿತಿ ಬಂದರೂ ಆಶ್ಚರ್ಯವಿಲ್ಲ. ಎಲ್ಲದಕ್ಕೂ ಮಿತಿಯಿದೆ ಎಂದು ಅಂದುಕೊಂಡು ಸಮಾಧಾನವನ್ನು ಪಡೆಯುವಿರಿ. ವೈಷಮ್ಯವನ್ನು ನಾಜೂಕಿನಿಂದ ದೂರಮಾಡಬೇಕು. ಒತ್ತಡ ಕಡಿಮೆಯಾಗಿ ಮನೆಯಲ್ಲಿ ನೆಮ್ಮದಿಯಿಂದ ಇರುವಿರಿ. ಮಕ್ಕಳ ವೃತ್ತಿಯಲ್ಲಿ ಹೆಚ್ಚಿನ ಏಳ್ಗೆಯನ್ನು ಕಂಡು ಸುಖಿಸುವಿರಿ. ಬರಲಿರುವ ಹಣವನ್ನು ಸರಿಯಾಗಿ ವಿನಿಯೋಗಿಸಿ. ಮಕ್ಕಳ ವಿಚಾರದಲ್ಲಿ ನಿಮಗೆ ಬಹಳ ಮೃದು ಸ್ವಭಾವವಿರುವುದು.

ವೃಶ್ಚಿಕ ರಾಶಿ:

ಧಾನ್ಯ ವ್ಯಾಪಾರದವರಿಗೆ ಹೆಚ್ಚಿನ ಲಾಭವಿದೆ. ಸಂಗಾತಿಯ ಜೊತೆ ಇಂದು ಹಣದ ವಿಚಾರದಲ್ಲಿ ವೈಮನಸ್ಯ ಉಂಟಾಗಲಿದೆ. ಸುಮ್ಮನಿರುವವರ ಬಾಯಿಗೆ ಕೋಲುಹಾಕಿ ಹಾಳುಮಾಡಿಲೊಳ್ಳುವಿರಿ. ನಿಮ್ಮ ಪ್ರಭಾವವು ಅಷ್ಟಾಗಿ‌ ನಡೆಯದು. ಸಹೋದರನ ಜೊತೆ ನಿಮ್ಮ ಕಲಹವಿರಲಿದೆ. ಮನೆಯ ಸಂತೋಷದಿಂದ ಕಾಲವನ್ನು ಕಳೆಯುವಿರಿ. ಸ್ತ್ರೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ಸಿಗಬಹುದು. ಇನ್ನೊಬ್ಬರ ನೋವಿಗೆ ಸ್ಪಂದಿಸುವಿರಿ.

ಧನು ರಾಶಿ:

ನಿಮ್ಮ ಬಗ್ಗೆ ಇಲ್ಲದ ಆಪಾದನೆಗಳು ಬರಬಹುದು. ಸ್ತ್ರೀಯರಿಗೆ ಶತ್ರು ಬಾಧೆ ಹೆಚ್ಚಾಗುವುದು. ಯಂತ್ರಾಗಾರದಲ್ಲಿ ಕೆಲಸ ಮಾಡುವವರಿಗೆ ಶುಭವಿದೆ. ಮಾನಸಿಕ ತುಮುಲಗಳು ಇಂದಿರಲಿವೆ. ವ್ಯವಹಾರದಲ್ಲಿ ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ವ್ಯಾಪಾರದ ಉದ್ದೇಶಕ್ಕೆ ಹೊರ ನಿಮ್ಮ ವಿದೇಶ ಪ್ರವಾಸವು ಶುಭವನ್ನು ತರಲಿದೆ. ಕಠಿಣ ವ್ಯಾಯಾಮವನ್ನು ಮಾಡುವ ಮುಂಚೆ ದೇಹದ ಸಾಮರ್ಥ್ಯವನ್ನು ತಿಳಿಯಲು ವೈದ್ಯರನ್ನು ಭೇಟಿಯಾಗಿ.

ಮಕರ ರಾಶಿ:

ಗೃಹಬಳಕೆಯ ವಸ್ತುಗಳನ್ನು ಖರೀದಿಸುವ ಕೆಲಸಕ್ಕೆ ಹೋಗುವಿರಿ. ವಿವೇಚನೆ ಇಲ್ಲದೇ ಬೇಗನೆ ಕೋಪಗೊಳ್ಳುವಿರಿ. ಕಬ್ಬಿಣದ ವ್ಯಾಪಾರದಲ್ಲಿ ನಷ್ಟವಾಗಬಹುದು. ಇಂದಿನ ಬೆಳಗಿನ ನಿಮ್ಮ ಮನಃಸ್ಥಿತಿಯೇ ಇಂದಿನ ದಿನವನ್ನು ಹೇಳುತ್ತದೆ. ಅನ್ಯರಿಂದ ಹಣಕಾಸಿನ ವಿಷಯದಲ್ಲಿ ಮೋಸ ಹೋಗುವ ಸನ್ನಿವೇಶವು ಬರಬಹುದು. ದಾಂಪತ್ಯದಲ್ಲಿ ಸಲುಗೆಯು ಅತಿಯಾಗಲಿದೆ. ತಂದೆಯಿಂದ ಧನಾಗಮನವನ್ನು ನಿರೀಕ್ಷಿಸುವಿರಿ. ಪ್ರೇಯಸಿಯನ್ನು ದೂರಮಾಡಿಕೊಂಡು ದುಃಖಿಸುವ ಸಾಧ್ಯತೆ ಇದೆ.

ಕುಂಭ ರಾಶಿ:

ನಿಮ್ಮ ಮಾತು ಕಿರಿಕಿರಿ ಎನಿಸಿ, ಇತರರಿಗೆ ಕೇಳಲಾಗದು. ಸ್ನೇಹಿತರ ಭೇಟಿಯಿಂದ ಸಂತಸವಾಗಲಿದೆ. ಆರ್ಥಿಕವಾಗಿ ಗಟ್ಟಿ ಇದ್ದರೂ, ಅಕಸ್ಮಾತ್ ಆದ ಖರ್ಚು ನಿಮ್ಮನ್ನು ಕಂಗೆಡಿಸುವುದು. ನಿಮಗೆ ಬದಲಾವಣೆ ದೀರ್ಘಕಾಲ ಉಳಿಸಿಕೊಳ್ಳಲಾಗದು. ಹೊಸ ಉದ್ಯೋಗದ ಕಡೆಗೆ ಮನಸ್ಸು ಮಾಡುವಿರಿ. ವ್ಯಾಪಾರದ ಗುಣಮಟ್ಟ ಹೆಚ್ಚಿಸಲು ಖರ್ಚು ಮಾಡಬೇಕಾಗುತ್ತದೆ. ಪ್ರಯತ್ನಪಟ್ಟು ಮಾಡುವ ಕೆಲಸವು ನಿಮಗೆ ಅನುಕೂಲವನ್ನು ಮಾಡುವುದು.

ಮೀನ ರಾಶಿ:

ಮಕ್ಕಳು ನಿಮ್ಮನ್ನು ನಡತೆಯನ್ನು ಪ್ರಶ್ನಿಸಬಹುದು. ಮೌನವನ್ನೇ ಉತ್ತರವಾಗಿ ನೀಡಿ. ಸಮಯ ಬಂದಾಗ ತಾನಾಗಿಯೇ ಉತ್ತರವು ಅವರಿಗೆ ಗೋಚರಿಸುವುದು. ಅನುಕಂಪಕ್ಕೆ ಕರುಗುವಿರಿ. ನಿಮ್ಮವರ ಜೊತೆ ದೀರ್ಘಕಾಲದಿಂದ ಬಿಟ್ಟಿದ್ದ ಮಾತುಗಳನ್ನು ಇಂದಿನಿಂದ ಮುಂದುವರಿಸುವಿರಿ. ಇಂದು ನೀವು ಹೊಸ ಹೂಡಿಕೆಗೆ ಮನಸ್ಸು ಮಾಡುವಿರಿ. ಅತಿಯಾದ ಆಸೆಯಿಂದ ನಿಮಗೆ ಕೆಲವು ತೊಂದರೆಗಳು ಬರಬಹುದು.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ಚತುರ್ದಶೀ, ನಿತ್ಯನಕ್ಷತ್ರ : ರೇವತೀ, ಯೋಗ : ಬ್ರಹ್ಮ, ಕರಣ : ತೈತಿಲ, ಸೂರ್ಯೋದಯ – 06 – 11 am, ಸೂರ್ಯಾಸ್ತ – 06 – 37 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:57 – 15:31, ಯಮಗಂಡ ಕಾಲ 06:12 – 07:45, ಗುಳಿಕ ಕಾಲ 09:18 – 10:50

-ಲೋಹಿತಶರ್ಮಾ – 8762924271 (what’s app only)

Source link

ಚೀನಾ ಭಾರತದ ಅತಿದೊಡ್ಡ ವ್ಯಾಪಾರ ಪಾಲುದಾರ: ಅಮೆರಿಕ ಹಿಂದಿಕ್ಕಿ ಅಗ್ರಸ್ಥಾನ, ಹೆಚ್ಚಿದ ವ್ಯಾಪಾರ ಕೊರತೆ – Kannada News | China Overtakes US: India’s Top Trade Partner in FY26, Trade Deficit Soars

ನವದೆಹಲಿ, ಏಪ್ರಿಲ್ 15: ಜಾಗತಿಕ ವ್ಯಾಪಾರ ಮಾರುಕಟ್ಟೆಯಲ್ಲಿ ಮಹತ್ವದ್ದೆಂದು ಪರಿಗಣಿಸಬಹುದಾದ ಬೆಳವಣಿಗೆಯೊಂದರಲ್ಲಿ, ಭಾರತದ ಅತಿದೊಡ್ಡ ಟ್ರೇಡ್ ಪಾರ್ಟ್ನರ್ ದೇಶವಾಗಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ. 2025-26ನೇ ಹಣಕಾಸು ವರ್ಷದಲ್ಲಿ ಭಾರತದ ಅತ್ಯಂತ ದೊಡ್ಡ ವ್ಯಾಪಾರ ಪಾಲುದಾರ ರಾಷ್ಟ್ರವಾಗಿ ಚೀನಾ ಹೊರಹೊಮ್ಮಿದೆ. ಸರ್ಕಾರದ ಇತ್ತೀಚಿನ ದತ್ತಾಂಶಗಳ ಪ್ರಕಾರ, ಉಭಯ ದೇಶಗಳ (ಭಾರತ ಚೀನಾ) ನಡುವಿನ ದ್ವಿಪಕ್ಷೀಯ ವ್ಯಾಪಾರವು (bilateral trade) ಬರೋಬ್ಬರಿ 151.1 ಬಿಲಿಯನ್ ಡಾಲರ್ ತಲುಪಿದೆ.

ಕಳೆದ ನಾಲ್ಕು ಸತತ ವರ್ಷಗಳಿಂದ (2021-22 ರಿಂದ 2024-25ರವರೆಗೆ) ಅಮೆರಿಕವು ಭಾರತದ ಅಗ್ರ ವ್ಯಾಪಾರ ಪಾಲುದಾರನಾಗಿತ್ತು. ಆದರೆ ಈ ಬಾರಿ ಚೀನಾ ಆ ಸ್ಥಾನವನ್ನು ಮರಳಿ ಪಡೆದಿದೆ. ಈ ಹಿಂದೆ 2013-14 ರಿಂದ 2017-18ರ ಅವಧಿಯಲ್ಲಿ ಹಾಗೂ 2020-21ರಲ್ಲಿ ಕೂಡ ಚೀನಾವೇ ಅಗ್ರಸ್ಥಾನದಲ್ಲಿತ್ತು.

ಹೆಚ್ಚಿದ ಟ್ರೇಡ್ ಡೆಫಿಸಿಟ್ ಆತಂಕ

ವ್ಯಾಪಾರ ವಹಿವಾಟು ಹೆಚ್ಚಾಗಿದ್ದರೂ, ಚೀನಾದೊಂದಿಗೆ ಭಾರತದ ವ್ಯಾಪಾರ ಕೊರತೆಯು ಗಣನೀಯವಾಗಿ ಏರಿರುವುದು ಕಳವಳಕಾರಿ ಸಂಗತಿಯಾಗಿದೆ. ಕಳೆದ ಹಣಕಾಸು ವರ್ಷದಲ್ಲಿ ಚೀನಾಕ್ಕೆ ಭಾರತದ ರಫ್ತು ಶೇ. 36.66 ರಷ್ಟು ಏರಿಕೆಯಾಗಿ 19.47 ಶತಕೋಟಿ ಡಾಲರ್ ತಲುಪಿದೆ. ಚೀನಾದಿಂದ ಭಾರತಕ್ಕೆ ಆಗುವ ಆಮದು ಶೇ. 16 ರಷ್ಟು ಹೆಚ್ಚಾಗಿದ್ದು, 131.63 ಶತಕೋಟಿ ಡಾಲರ್ ಮುಟ್ಟಿದೆ. ಇದರಿಂದಾಗಿ ವ್ಯಾಪಾರ ಕೊರತೆಯು 112.16 ಶತಕೋಟಿ ಡಾಲರ್​ಗೆ ಏರಿಕೆಯಾಗಿದೆ. ಕಳೆದ ವರ್ಷ ಇದು 99.2 ಶತಕೋಟಿ ಡಾಲರ್ ಇತ್ತು.

ಇದನ್ನೂ ಓದಿ: ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ?

ಮತ್ತೊಂದೆಡೆ, ಅಮೆರಿಕದೊಂದಿಗಿನ ವ್ಯಾಪಾರದಲ್ಲಿ ಭಾರತವು ಸರ್​ಪ್ಲಸ್​ನಲ್ಲಿದೆ. ಅಮೆರಿಕಕ್ಕೆ ಭಾರತದ ರಫ್ತು 87.3 ಶತಕೋಟಿ ಡಾಲರ್ ಆಗಿದ್ದು, ಆಮದು 52.9 ಶತಕೋಟಿ ಡಾಲರ್ ಆಗಿದೆ. ಆದರೂ, ಅಮೆರಿಕದೊಂದಿಗಿನ ವ್ಯಾಪಾರ ಮಿಗುತೆಯು ಅಥವಾ ಟ್ರೇಡ್ ಸರ್​ಪ್ಲಸ್ ಕಳೆದ ವರ್ಷದ 40.89 ಶತಕೋಟಿ ಡಾಲರ್‌ನಿಂದ 34.4 ಶತಕೋಟಿ ಡಾಲರ್‌ಗೆ ಕುಸಿದಿದೆ.

ಇತರ ದೇಶಗಳೊಂದಿಗಿನ ವಹಿವಾಟು ಹೇಗಿದೆ?

ವಾಣಿಜ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಭಾರತದ ರಫ್ತು ಮತ್ತು ಆಮದು ಪ್ರವೃತ್ತಿ ವಿವಿಧ ದೇಶಗಳೊಂದಿಗೆ ಈ ಕೆಳಗಿನಂತಿದೆ:

  • ಧನಾತ್ಮಕ ರಫ್ತು ಬೆಳವಣಿಗೆ: ಯುಎಇ (UAE), ಜರ್ಮನಿ, ಹಾಂಗ್ ಕಾಂಗ್, ಇಟಲಿ, ನೇಪಾಳ, ಬ್ರೆಜಿಲ್ ಮತ್ತು ವಿಯೆಟ್ನಾಂ ದೇಶಗಳಿಗೆ ಭಾರತದ ರಫ್ತು ಹೆಚ್ಚಾಗಿದೆ.
  • ಋಣಾತ್ಮಕ ರಫ್ತು ಬೆಳವಣಿಗೆ: ನೆದರ್ಲೆಂಡ್ಸ್, ಯುಕೆ (UK), ಸಿಂಗಾಪುರ, ಬಾಂಗ್ಲಾದೇಶ, ಸೌದಿ ಅರೇಬಿಯಾ ಮತ್ತು ಆಸ್ಟ್ರೇಲಿಯಾದಂತಹ ದೇಶಗಳಿಗೆ ಭಾರತದ ರಫ್ತು ಪ್ರಮಾಣ ಕುಸಿದಿದೆ.
  • ಆಮದು ಇಳಿಕೆ: ರಷ್ಯಾ, ಇರಾಕ್, ಇಂಡೋನೇಷ್ಯಾ ಮತ್ತು ಕತಾರ್‌ನಿಂದ ಭಾರತಕ್ಕೆ ಆಗುವ ಆಮದು ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
  • ಆಮದು ಏರಿಕೆ: ಯುಎಇ, ಸೌದಿ ಅರೇಬಿಯಾ, ಸ್ವಿಟ್ಜರ್ಲೆಂಡ್, ಜಪಾನ್ ಮತ್ತು ಜರ್ಮನಿಯಿಂದ ಭಾರತಕ್ಕೆ ಆಗುವ ಆಮದು ಪ್ರಮಾಣದಲ್ಲಿ ಏರಿಕೆಯಾಗಿದೆ.

ಇದನ್ನೂ ಓದಿ: ಕಳೆದ ವರ್ಷ ಭಾರತದಿಂದ 860 ಬಿಲಿಯನ್ ಡಾಲರ್ ರಫ್ತು; ಇದು ಹೊಸ ದಾಖಲೆ

ಒಟ್ಟಾರೆಯಾಗಿ, 2025-26ರ ಸಾಲಿನಲ್ಲಿ ಭಾರತದ ವಿದೇಶಿ ವ್ಯಾಪಾರದಲ್ಲಿ ಚೀನಾ ಮತ್ತೆ ತನ್ನ ಪ್ರಾಬಲ್ಯ ಮೆರೆದಿದ್ದು, ಆಮದು ಅವಲಂಬನೆಯನ್ನು ತಗ್ಗಿಸುವುದು ಭಾರತದ ಮುಂದಿರುವ ದೊಡ್ಡ ಸವಾಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ ಯುವತಿ ಆತ್ಮಹತ್ಯೆ, ಲವ್ ಜಿಹಾದ್ ಆರೋಪ – Kannada News | A Young Woman Commits Suicide Who Loves Muslim youth at Bagalkot

ಬಾಗಲಕೋಟೆ, (ಏಪ್ರಿಲ್ 15): ಅನ್ಯಕೋಮಿನ ಯುವಕನನ್ನ ಪ್ರೀತಿಸುತ್ತಿದ್ದ (Love) ಯುವತಿ ಆತ್ಮಹತ್ಯೆಗೆ(Suicide) ಮಾಡಿಕೊಂಡಿರುವ ಘಟನೆ ಬಾಗಲಕೋಟೆ ನಗರದ (Bagalkote) ಸೆಕ್ಟರ್ ನಂಬರ್ 48ರ ಮನೆಯಲ್ಲಿ ನಡೆದಿದೆ. ಟೈರ್ ಅಂಗಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ತಿಪ್ಪಣ್ಣವರ್ (19) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನದಾಫ್ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಇನ್ನೊಂದಡೆ ಇದೊಂದು ಪಕ್ಕಾ ಲವ್ ಜಿಹಾದ್ ಎಂದು ಹಿಂದೂಪರ ಸಂಘಟನೆಗಳ ಆರೋಪವಾಗಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದಿದೆ.

ಟಯರ್‌ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದ ಭೂಮಿಕಾ ಮತ್ತು ಟಾಂಟಾಂ ಚಾಲಕ ಡೊಂಗ್ರಿಸಾಬ್ ನದಾಫ್‌ ಮಧ್ಯೆ ಕಳೆದ 2 ವರ್ಷಗಳಿಂದ ಪ್ರೀತಿಯಿತ್ತು. ಆದ್ರೆ, ಅದೇನಾಯ್ತೋ ಏನೋ ಇಂದು (ಏಪ್ರಿಲ್ 15) ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಹಿಜಾಬ್‌ನಲ್ಲಿ ಕಾಣಿಸಿಕೊಂಡಿದ್ದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಎಸ್‌ಪಿ ಸಿದ್ಧಾರ್ಥ್‌ ಗೋಯಲ್ ಭೇಟಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬಾಗಲಕೋಟೆ ನವನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಪ್ರೇಮ ಸಂಬಂಧವೋ? ಲವ್​​ ಜಿಹಾದೋ?: ಅಸಲಿಗೆ ಹುಬ್ಬಳ್ಳಿ, ಧಾರವಾಡದಲ್ಲಿ ಆಗ್ತಿರೋದೇನು?

ನದಾಫ್‌  ಕಿರುಕಳದಿಂದಲೇ ಆತ್ಮಹತ್ಯೆ

ಇನ್ನು ಆತ್ಮಹತ್ಯೆಗೆ ಶರಣಾಗಿರುವ ಭೂಮಿಕಾ ಅತ್ತೆ ಲಕ್ಷ್ಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಆತ ನಿತ್ಯ ಟಂಟಂ ತಂದು ನಮ್ಮ ಮನೆ ಮುಂದೆ ನಿಲ್ಲಿಸುತ್ತಿದ್ದ. ಆಕೆಗೆ ಕರೆ ಮಾಡಿ, ಮೆಸ್ಸೇಜ್ ಮಾಡಿ ಮಾತನಾಡುವಂತೆ ಪೀಡಿಸುತ್ತಿದ್ದ. ತನ್ನೊಂದಿಗೆ ಓಡಾಡಲು ಬರುವಂತೆ ಹೇಳುತ್ತಿದ್ದ. ರಾತ್ರಿ 12 ರಿಂದ 1 ಗಂಟೆಯವರೆಗೂ ಫೋನಿನಲ್ಲೇ ಮಾತನಾಡುತ್ತಿದ್ದರು. ಮದುವೆ ಬೇಡ ಆದ್ರೆ ತನ್ನೊಂದಿಗೆ ಇರು ಅಂತ ಕಿರುಕುಳ ಕೊಡುತ್ತಿದ್ದ. ಅವನ ಕಿರುಕಳದಿಂದಲೇ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ಇದೊಂದು ಪಕ್ಕಾ ಲವ್ ಜಿಹಾದ್

ಈ ಪ್ರಕರಣ ಸಂಬಂಧ ಹಿಂದೂ ಜಾಗರಣ ವೇದಿಕೆ ಮುಖಂಡ ಕುಮಾರಸ್ವಾಮಿ ಹಿರೇಮಠ ಮಾತನಾಡಿ, ಇದೊಂದು ಪಕ್ಕಾ ಲವ್ ಜಿಹಾದ್ ಪ್ರಕರಣ. ನವನಗರದಲ್ಲಿ ಮುಸ್ಲಿಂ ಕಿಡಿಗೇಡಿಗಳು ಇದನ್ನೇ ದಂಧೆ ಮಾಡಿಕೊಂಡಿದ್ದಾರೆ. 46 ಗ್ಯಾಂಗ್ ಅಂತ ಮಾಡಿಕೊಂಡು ಗದ್ದಲ ಗಲಾಟೆ ಮಾಡುತ್ತಾರೆ. ಕಳೆದ ನಾಲ್ಕೈದು ವರ್ಷದಿಂದ ಯುವತಿ ಜೊತೆ ಡೋಂಗ್ರಿಸಾಬ್ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ರಸ್ತೆಯ ಮಧ್ಯೆ ಅಡ್ಡ ಹಾಕಿ ಕಾಡಿಸುತ್ತಿದ್ದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗು ಎಂದು ಪ್ರಚೋದನೆ ಮಾಡುತ್ತಿದ್ದನಂತೆ. ಅಲ್ಲದೇ ರಂಜಾನ್ ವೇಳೆ ಹಿಜಾಬ್ ಬುರ್ಖಾ ಹಾಕಿಸಿ ಕರೆದುಕೊಂಡು ಓಡಾಡುತ್ತಿದ್ದ. ಇದನ್ನೆಲ್ಲಾ ನೋಡಿದ್ರೆ ಇದೊಂದು ಪಕ್ಕಾ ಲವ್ ಜಿಹಾದ್ ಪ್ರಕರಣ ಎನಿಸುತ್ತೆ. ಯುವತಿ ಡೆತ್ ನೋಟು ಬರೆದಿದ್ದಳು ಅನ್ನೋ ಮಾಹಿತಿ ಇದೆ. ಪೊಲೀಸರು ಅದನ್ನು ತೆಗೆದಿರಿಸಿದ್ದಾರೆ ಎನ್ನುವ ಸಂಶಯ ಇದೆ. ಘಟನೆ ಬಗ್ಗೆ ನಾಳೆ (ಏಪ್ರಿಲ್ 16) ಹಿಂದೂಪರ ಸಂಘಟನೆಗಳೆಲ್ಲಾ ಸೇರಿ ಮುಂದಿನ ಹೋರಾಟ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಒಟ್ಟಿನಲ್ಲಿ ಭೂಮಿಕಾ ಆತ್ಮಹತ್ಯೆ ಹಿಂದೆ ಹಲವು ಆರೋಪಗಳು ಕೇಳಿಬರುತ್ತಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಹಂತಕ್ಕೆ ಹೋಗಿ ನಿಲ್ಲುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಫಸ್ಟ್​ ನೈಟ್​ಗೂ ಮೊದಲು ಹೆಂಡತಿಯ ಬೇಡಿಕೆ ಕೇಳಿ ಶಾಕ್ ಆದ ಗಂಡ! – Kannada News | Delhi Bride demands 90 lakh Rs to Touch her on First night groom shocked

ನವದೆಹಲಿ, ಏಪ್ರಿಲ್ 15: ಮದುವೆಯಾದ ಮೊದಲ ರಾತ್ರಿ ಹೆಂಡತಿಗಾಗಿ ಬೆಡ್​ ರೂಂನಲ್ಲಿ ಕಾದು ಕುಳಿತಿದ್ದ ಗಂಡನಿಗೆ ಶಾಕ್ (Viral News) ಕಾದಿತ್ತು. ಪ್ರೀತಿಯಿಂದ ಹೆಂಡತಿಯನ್ನು ಮುಟ್ಟಲು ಹೋದ ಗಂಡ ತನ್ನ ಹೆಂಡತಿಯ ಡಿಮ್ಯಾಂಡ್ ಕೇಳಿ ಆಘಾತಗೊಂಡಿದ್ದಾನೆ. ರೂಂನೊಳಗೆ ಬಂದ ಗಂಡನಿಗೆ ತನ್ನನ್ನು ಮುಟ್ಟಬೇಕೆಂದರೆ 90 ಲಕ್ಷ ರೂ. ಹಣ ಕೊಡಬೇಕೆಂದು ಹೆಂಡತಿ ಬೇಡಿಕೆ ಇಟ್ಟಿದ್ದಾಳೆ. ಇದನ್ನು ಕೇಳಿ ಗಂಡ ತಲೆ ತಿರುಗಿ ಬೀಳುವುದೊಂದೇ ಬಾಕಿ.

ದೆಹಲಿಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ ಮೊದಲ ರಾತ್ರಿಯೇ ವಧು ತನ್ನ ಪತಿಗೆ ಶಾಕ್ ನೀಡಿದ್ದಾಳೆ. ತನ್ನನ್ನು ಮುಟ್ಟಿದರೆ 90 ಲಕ್ಷ ರೂ. ನೀಡಬೇಕಾಗುತ್ತದೆ ಎಂದು ಹೇಳಿದ ಆಕೆಯ ಮಾತುಗಳನ್ನು ಕೇಳಿ ವರ ಆಘಾತಕ್ಕೊಳಗಾಗಿದ್ದಾನೆ. ಆಗ್ರಾದಲ್ಲಿ ವಧುವಿನೊಬ್ಬಳು ತನ್ನ ಗಂಡನಿಂದ ಮೊದಲ ರಾತ್ರಿಯೇ 90 ಲಕ್ಷ ರೂ. ಕೇಳಿದ್ದ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಜಗದೀಶಪುರದ ಯುವಕನೊಬ್ಬ ಇತ್ತೀಚೆಗೆ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಹತ್ರಾಸ್‌ನ ಯುವತಿಯನ್ನು ವಿವಾಹವಾಗಿದ್ದ. ಮದುವೆ ಸಮಾರಂಭ ಮುಗಿದ ತಕ್ಷಣ ಕುಟುಂಬ ಸದಸ್ಯರು ಮೊದಲ ರಾತ್ರಿಗೆ ಸಿದ್ಧತೆ ಮಾಡಿದ್ದರು. ಆದರೆ, ಮಲಗುವ ಕೋಣೆಯಲ್ಲಿ ವಧು 90 ಲಕ್ಷ ರೂ. ನೀಡಿದರೆ ಮಾತ್ರ ನನ್ನನ್ನು ಮುಟ್ಟಬಹುದು ಎಂದು ಹೇಳಿದ್ದಾಳೆ. ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದು ಆತ ಹೇಳಿದಾಗ ಆಕೆ ಜಗಳವಾಡಿದ್ದಾಳೆ.

ಇದನ್ನೂ ಓದಿ: ಇದ್ದಕ್ಕಿದ್ದಂತೆ ಗಂಡ ನಾಪತ್ತೆ, ಮೈದುನನ ಜತೆ ಪತ್ನಿ ಮದುವೆ, 25 ವರ್ಷಗಳ ಬಳಿಕ ಬಂದ ಮೊದಲ ಪತಿ

ಕೋಣೆಯಿಂದ ಬರುತ್ತಿದ್ದ ಜಗಳದ ಶಬ್ದಗಳನ್ನು ಕೇಳಿ ಕುಟುಂಬದವರೆಲ್ಲರೂ ಅಲ್ಲಿಗೆ ಬಂದಿದ್ದಾರೆ. ಆಗ ವರನು ತನ್ನ ಕುಟುಂಬದ ಸದಸ್ಯರಿಗೆ ಅಲ್ಲಿ ನಡೆದ ಘಟನೆಯ ಬಗ್ಗೆ ತಿಳಿಸಿದನು. ಅವರೆಲ್ಲರೂ ಅವಳನ್ನು ಸುಮ್ಮನಾಗಿಸಲು ಪ್ರಯತ್ನಿಸಿದರೂ ಅವಳು ಸ್ವಲ್ಪವೂ ಶಾಂತವಾಗಲಿಲ್ಲ. ಅವಳು ತನ್ನ ಸಂಬಂಧಿಕರಿಗೆ ಕರೆ ಮಾಡಿದಳು. ಅಲ್ಲಿಗೆ ಬಂದ ಅವರು ವರನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ಮಾಡಿದರು. ಇದಾದ ನಂತರ, ವರನ ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿದರು.

ಆದರೆ, ದೂರಿನಲ್ಲಿ ವರನ ಕುಟುಂಬದ ಸದಸ್ಯರು ವಧುವಿನ ಕಡೆಯವರು ತಮ್ಮನ್ನು ರೂಂನಲ್ಲಿ ಕೂಡಿಹಾಕಿ ಗ್ಯಾಸ್ ಸಿಲಿಂಡರ್ ಪೈಪ್ ತೆಗೆದು ಕೊಲ್ಲಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಆರಂಭದಲ್ಲಿ ಪ್ರಕರಣ ದಾಖಲಿಸಲು ನಿರಾಕರಿಸಿದರು. ಕೊನೆಗೆ ವರನ ಕುಟುಂಬ ನ್ಯಾಯಾಲಯದ ಮೆಟ್ಟಿಲೇರಿತು, ನ್ಯಾಯಾಲಯವು ಪೊಲೀಸರಿಗೆ ಪ್ರಕರಣ ದಾಖಲಿಸುವಂತೆ ಆದೇಶಿಸಿತು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದರು.

ಇದನ್ನೂ ಓದಿ: ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಆದರೆ, ಪೊಲೀಸ್ ತನಿಖೆಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದವು. ತನಿಖೆಯ ಸಮಯದಲ್ಲಿ ವಧು ಸಂಪೂರ್ಣ ಸತ್ಯವನ್ನು ಬಹಿರಂಗಪಡಿಸಿದಳು. ಈ ಮದುವೆ ತನಗೆ ಬೇಡವೆಂದು ಮತ್ತು ಹಣಕ್ಕಾಗಿ ಮಾತ್ರ ಮದುವೆಗೆ ಒಪ್ಪಿಕೊಂಡೆ ಎಂದು ಅವಳು ಒಪ್ಪಿಕೊಂಡಳು. ಇದರಿಂದ ಪೊಲೀಸರು ಆಕೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs LSG: ತವರಿನಲ್ಲಿ ಲಕ್ನೋ ವಿರುದ್ಧ ಆರ್​ಸಿಬಿಗೆ ಮೊಟ್ಟ ಮೊದಲ ಜಯ – Kannada News | RCB Dominates LSG at Chinnaswamy: Tops IPL Points Table 2026 with Second Straight Win

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆತಿಥೇಯ ಆರ್​ಸಿಬಿ ಸತತ ಎರಡನೇ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಲೀಗ್​ನಲ್ಲಿ ಇದುವರೆಗೆ 5 ಪಂದ್ಯಗಳನ್ನಾಡಿರುವ ಆರ್​​ಸಿಬಿ ಇದರಲ್ಲಿ 4 ಪಂದ್ಯಗಳನ್ನು ಗೆದ್ದು, ಒಂದು ಪಂದ್ಯವನ್ನು ಸೋತಿದೆ. ಹೀಗಾಗಿ 8 ಅಂಕಗಳು ಮತ್ತು ನೆಟ್​ ರನ್​ರೇಟ್​ನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹಿಂದಿಕ್ಕಿ ಆ ಸ್ಥಾನವನ್ನು ಆಕ್ರಮಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 147 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ 15.1 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.

Source link

RCB vs LSG: 4,4,4,4,4,4.. ಅರ್ಧಶತಕದಂಚಿನಲ್ಲಿ ಎಡವಿದ ವಿರಾಟ್ ಕೊಹ್ಲಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಒಂದೊಳ್ಳೆ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ನೋ ನೀಡಿದ 147 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಎಂದಿನಂತೆ ಆರಂಭಿಕರಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಲಕ್ನೋ ಬ್ಯಾಟರ್​ಗಳು ರನ್​ ಗಳಿಸಲು ಹೆಣಗಾಡಿದ ಪಿಚ್​ನಲ್ಲಿ ಬೌಂಡರಿಗಳ ಮಳೆಗರೆದರು. ತಮ್ಮ ಇನ್ನಿಂಗ್ಸ್​ನಲ್ಲಿ 34 ಎಸೆತಗಳನ್ನು ಎದುರಿಸಿದ ಕೊಹ್ಲಿ 6 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್ ಸಹಿತ 49 ರನ್ ಬಾರಿಸಿ ಔಟಾದರು. ಇದರ ಜೊತೆಗೆ ಕೊಹ್ಲಿ, ಪಡಿಕ್ಕಲ್ ಜೊತೆಗೂಡಿ ಎರಡನೇ ವಿಕೆಟ್​ಗೆ ಅರ್ಧಶತಕದ ಜೊತೆಯಾಟವನ್ನು ನಿರ್ಮಿಸಿದರು.

ವಿರಾಟ್ ಕೊಹ್ಲಿ 49 ರನ್ ಗಳಿಸಿ ಅವೇಶ್ ಖಾನ್ ಎಸೆತದಲ್ಲಿ ಕ್ಯಾಚ್ ನೀಡಿ ಔಟ್ ಆದರು. ಆದಾಗ್ಯೂ ಕೊಹ್ಲಿ ಈ 49 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್‌ನ ಹೆನ್ರಿಕ್ ಕ್ಲಾಸೆನ್‌ ಅವರನ್ನು ಹಿಂದಿಕ್ಕಿದರು. ವಾಸ್ತವವಾಗಿ ಹೆನ್ರಿಕ್ ಕ್ಲಾಸೆನ್ 5 ಇನ್ನಿಂಗ್ಸ್‌ಗಳಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 224 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಆದರೀಗ ವಿರಾಟ್ ಕೊಹ್ಲಿ ಐದು ಪಂದ್ಯಗಳಲ್ಲಿ ಎರಡು ಅರ್ಧಶತಕಗಳ ಸಹಾಯದಿಂದ 228 ರನ್ ಗಳಿಸಿದ್ದು, ಆರೆಂಜ್ ಕ್ಯಾಪ್ ವಿಜೇತರಾಗಿದ್ದಾರೆ. ಮುಂದಿನ ಪಂದ್ಯದಲ್ಲಿ ಈ ಕ್ಯಾಪ್ ಅನ್ನು ಯಾರು ಧರಿಸುತ್ತಾರೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿದೆ.

Source link

Exit mobile version