Headlines

ಕೇವಲ 22 ಎಸೆತಗಳಲ್ಲಿ ಕ್ರಿಸ್ ಗೇಲ್ ಭರ್ಜರಿ ದಾಖಲೆ ಮುರಿದ ಹೆಟ್ಮೆಯರ್ – Kannada News | Shimron hetmyer breaks Chris Gayle’s Record in T20 World Cup 2026

ಟಿ20 ವಿಶ್ವಕಪ್​ನ ಆರಂಭದಲ್ಲೇ ವೆಸ್ಟ್ ಇಂಡೀಸ್ ದಾಂಡಿಗ ಶಿಮ್ರಾನ್ ಹೆಟ್ಮೆಯರ್ (Shimron hetmyer) ಅಬ್ಬರಿಸಿದ್ದಾರೆ. ಈ ಅಬ್ಬರದೊಂದಿಗೆ 15 ವರ್ಷಗಳ ಹಿಂದೆ ಕ್ರಿಸ್ ಗೇಲ್ ಬರೆದಿದ್ದ ಭರ್ಜರಿ ದಾಖಲೆಯನ್ನು ಮುರಿದಿದ್ದಾರೆ. ಅದು ಕೂಡ ಕೇವಲ 22 ಎಸೆತಗಳಲ್ಲಿ ಎಂಬುದು ವಿಶೇಷ. Source link

Read More

ಕರ್ನಾಟಕದಲ್ಲಿ ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ – Kannada News | Another Stone Quarry Tragedy in Karnataka: Massive Boulder Falls on JCB

ಕೊಪ್ಪಳ, ಜುಲೈ 08: ಇತ್ತೀಚೆಗೆ ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಬಳಿ ಕಲ್ಲು ಕ್ವಾರಿಯಲ್ಲಿ ಬಂಡೆ ಉರುಳಿ 7 ಜನ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ಭಾರೀ ಅನಾಹುತವೊಂದು ತಪ್ಪಿದೆ. ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದ ಜೆಸಿಬಿ ಮೇಲೆ ಬೃಹತ್ ಬಂಡೆ ಬಿದ್ದಿರುವಂತಹ ಘಟನೆ ಕೊಪ್ಪಳ ತಾಲೂಕಿನ ಶಿವಪುರ ಕೆರೆ ಬಳಿ ನಡೆದಿದೆ. ಕೆರೆ ಮೂಲೆಯಲ್ಲಿ ಕಲ್ಲು ಗಣಿಗಾರಿಕೆ ಮಾಡಲಾಗುತಿತ್ತು. ಈ ವೇಳೆ ಮಣ್ಣು ಕುಸಿತವಾಗಿ ಜೆಸಿಬಿ ಮೇಲೆ ಬೃಹತ್ ಬಂಡೆ ಬಿದ್ದಿದೆ. ಕೆಲಸ ಮಾಡುತ್ತಿದ್ದ…

Read More

ತರುಣ್-ಸೋನಲ್ ಹೊಸ ಮನೆ ಪ್ರವೇಶ; ವಿಶೇಷ ವ್ಯಕ್ತಿಯ ಫೋಟೋ ಇಟ್ಟು ಪೂಜೆ – Kannada News | Sonal Monteiro and Tharun Sudhir Enter New Home Sudhir Photo Is Highlight

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ಅವರು ಹೊಸ ಮನೆಗೆ ಪ್ರವೇಶಿಸಿದ್ದಾರೆ. ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ಇಡೀ ಮನೆ ತುಂಬಾನೇ ಸುಂದರವಾಗಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ. ಅಪಾರ್ಟ್​​ಮೆಂಟ್ ಒಂದರಲ್ಲಿ ಮನೆಯನ್ನು ಖರೀದಿಸಿದ್ದಾರೆ ಈ ಜೋಡಿ. ಪೂಜೆ ಮಾಡುವ ಮೂಲಕ ಮನೆಯನ್ನು ಪ್ರವೇಶ ಮಾಡಿದರು. ಹೊಸ ಮನೆ ಖರೀದಿಸಿದ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ. ಇಡೀ ಮನೆಯಲ್ಲಿ ಒಬ್ಬರ ಫೋಟೋ ಹೈಲೈಟ್ ಆಗಿದೆ. ಅದುವೇ ತರುಣ್ ತಂದೆ ಸುಧೀರ್. ಅವರ ಫೋಟೋವನ್ನು ಮನೆಯ…

Read More

Girl Child as Lakshmi: ಹೆಣ್ಣು ಮಗು ಜನಿಸಿದರೆ ಮನೆಯ ಅದೃಷ್ಟವೇ ಬದಲಾಗುತ್ತದೆಯೇ? ಶಾಸ್ತ್ರಗಳು ಹೇಳುವುದೇನು?

ಭಾರತೀಯ ಪರಂಪರೆಯಲ್ಲಿ ಹೆಣ್ಣು ಮಗುವಿನ ಜನನವು ಕೇವಲ ಒಂದು ಕುಟುಂಬದ ವಿಸ್ತರಣೆಯಲ್ಲ, ಅದು ಸಾಕ್ಷಾತ್ ಲಕ್ಷ್ಮಿ ದೇವಿಯ ಆಗಮನವೆಂದೇ ಶತಶತಮಾನಗಳಿಂದ ನಂಬಿಕೊಂಡು ಬರಲಾಗಿದೆ. ಮನೆಯ ಅಂಗಳದಲ್ಲಿ ಹೆಣ್ಣು ಮಗುವಿನ ನಗು ಕೇಳಿಸಿದರೆ ಅಲ್ಲಿ ದಾರಿದ್ರ್ಯ ಸುಳಿಯುವುದಿಲ್ಲ ಎಂಬ ಮಾತು ಕೇವಲ ಭಾವನಾತ್ಮಕ ನುಡಿಯಲ್ಲ, ಅದರ ಹಿಂದೆ ಆಳವಾದ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಶಾಸ್ತ್ರದ ಕಾರಣಗಳಿವೆ. ಹೆಣ್ಣು ಮಗು ಜನಿಸಿದಾಗ ಆಕೆಯ ಜಾತಕದಲ್ಲಿರುವ ಗ್ರಹಗತಿಗಳು ಇಡೀ ಕುಟುಂಬದ ಅದೃಷ್ಟವನ್ನೇ ಬದಲಿಸುವ ಶಕ್ತಿ ಹೊಂದಿರುತ್ತವೆ ಎಂದು ಶಾಸ್ತ್ರಗಳು ಉಲ್ಲೇಖಿಸುತ್ತವೆ. ಜ್ಯೋತಿಷ್ಯ…

Read More

ಬಾಗಲಕೋಟೆ ಬೈ ಎಲೆಕ್ಷನ್​​: ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ – Kannada News | Bagalkot By poll: Congress’ Umesh Meti Wins Against BJP’s Veeranna Charantimath

ಗೆದ್ದು ಬೀಗಿದ ಕಾಂಗ್ರೆಸ್​​ನ ಉಮೇಶ್ ಮೇಟಿ ಬಾಗಲಕೋಟೆ, ಮೇ 04: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್​ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್​​.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್​​ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್,​​ ಮೇಟಿ ಪುತ್ರ ಉಮೇಶ್​​​​ರನ್ನು ಉಪಚುನಾವಣೆಯಲ್ಲಿ…

Read More

ಪರಪ್ಪನ ಅಗ್ರಹಾರದಲ್ಲಿ ‘ನೋ ಮೊಬೈಲ್, ನೋ ಆತಿಥ್ಯ’: ಕೈದಿಗಳ ಹೈಟೆಕ್ ಆಟಕ್ಕೆ ಬ್ರೇಕ್ ಹಾಕಲು ಡಿಜಿಪಿ ಅಲೋಕ್ ಕುಮಾರ್ ಮಾಸ್ಟರ್ ಪ್ಲಾನ್!

ಬೆಂಗಳೂರು, ಏ.11: ರಾಜ್ಯದ ಬಂದೀಖಾನೆ ಮತ್ತು ಸುಧಾರಣಾ ಇಲಾಖೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಡಿಜಿಪಿ ಅಲೋಕ್ ಕುಮಾರ್ ಅವರು ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರದಂತಹ ಕೇಂದ್ರ ಕಾರಾಗೃಹಗಳಲ್ಲಿ ಪದೇ ಪದೇ ಮೊಬೈಲ್ ಫೋನ್‌ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಕೇವಲ ಕೈದಿಗಳಷ್ಟೇ ಅಲ್ಲದೆ ಮೊಬೈಲ್ ಸರ್ವೀಸ್ ಪ್ರೊವೈಡರ್‌ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಜೈಲುಗಳಲ್ಲಿ ಜಾಮರ್ ಅಳವಡಿಸಿದ್ದರೂ ಮೊಬೈಲ್ ಸಂಪರ್ಕ ಹೇಗೆ ಲಭ್ಯವಾಗುತ್ತಿದೆ ಎಂಬ ಬಗ್ಗೆ ಗಂಭೀರ ತನಿಖೆ ನಡೆಸಲಾಗುತ್ತಿದೆ. ತಪಾಸಣೆಯ ವೇಳೆ ಮಾತ್ರ ಸಿಗ್ನಲ್…

Read More

ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಗುರಿ; ಬಜೆಟ್​ನಲ್ಲಿ ಈ ಉದ್ದಿಮೆಗಳಿಗೆ ಸಿಗಲಿದೆ ಪುಷ್ಟಿ – Kannada News | Union Budget 2026, labour intensive sector to get boost

ನವದೆಹಲಿ, ಜನವರಿ 28: ಈ ಬಾರಿಯ ಬಜೆಟ್​ನಲ್ಲಿ (Union Budget) ಮ್ಯಾನುಫ್ಯಾಕ್ಚರಿಂಗ್ ಎಕನಾಮಿ ಸುದೃಢಗೊಳಿಸಲು ಪ್ರಯತ್ನಿಸುವ ನಿರೀಕ್ಷೆ ಇದೆ. ಉದ್ಯೋಗ ಸೃಷ್ಟಿ ಹೆಚ್ಚು ಆಗುವಂತೆ ಕ್ರಮಗಳನ್ನು ಕೈಗೊಳ್ಳಬಹುದು. ಕಾರ್ಮಿಕರ ಕೆಲಸ ಬೇಕಿರುವ ಉದ್ಯಮಗಳಿಗೆ ಉತ್ತೇಜನ ನೀಡಲು ಬಜೆಟ್​ನಲ್ಲಿ ಒತ್ತು ನೀಡುವ ನಿರೀಕ್ಷೆ ಇದೆ. ಜವಳಿ, ಲೆದರ್, ಆಭರಣ, ಕರಕುಶಲ ಸೆಕ್ಟರ್​ಗಳಿಗೆ ನೆರವು ಸಿಗಬಹುದು. ಈ ವಲಯದ ಮಧ್ಯಮ ಗಾತ್ರದ ಉದ್ದಿಮೆಗಳ ಪ್ರಬಲ ಸಮೂಹವನ್ನು ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ. ಆ ನಿಟ್ಟಿನಲ್ಲಿ ಬಜೆಟ್​ನಲ್ಲಿ ಕ್ರಮ ಕೈಗೊಳ್ಳಬಹುದು. ಎಂಎಸ್​ಎಂಇಗಳಿಗೆ ಇನ್ನಷ್ಟು…

Read More

ಇಪಿಎಫ್ ಅಕೌಂಟ್​ನಿಂದ ಎಲ್​​ಐಸಿ ಪ್ರೀಮಿಯಮ್ ಕಟ್ಟುವುದು ಹೇಗೆ? ಇಲ್ಲಿದೆ ಡೀಟೇಲ್ಸ್ – Kannada News | Facility to pay LIC policy premium using EPF account

ಇಪಿಎಫ್ ಅಕೌಂಟ್​ನಲ್ಲಿರುವ ಹಣವನ್ನು ಹಿಂಪಡೆಯುವುದು ಈಗ ಸುಲಭ. ಇದೇ ವೇಳೆ, ಇಪಿಎಫ್ ಹಣವನ್ನು ಎಲ್​ಐಸಿ ಪಾಲಿಸಿಯ ಪ್ರೀಮಿಯಮ್ ಕಟ್ಟಲು ಬಳಸುವ ಅವಕಾಶ ಇದೆ. ಇಪಿಎಫ್ ಸ್ಕೀಮ್​ನ ಪ್ಯಾರಾಗ್ರಾಫ್ 68ರ ಅಡಿಯಲ್ಲಿ ಈ ಸೌಲಭ್ಯ ಒದಗಿಸಲಾಗಿದೆ. ಇಪಿಎಫ್ (EPFO) ಮೂಲಕ ಒಂದೇ ಎಲ್​ಐಸಿ ಪ್ರೀಮಿಯಮ್ ಕಟ್ಟಬಹುದು, ಅಥವಾ ಇಡೀ ಪಾಲಿಸಿ ಅವಧಿಗೆ ಇಪಿಎಫ್​ನಿಂದ ಪ್ರೀಮಿಯಮ್ ಹಣ ಕಾಲ ಕಾಲಕ್ಕೆ ಸ್ವಯಂ ಆಗಿ ಸಂದಾಯವಾಗುವಂತೆ ಮಾಡಬಹುದು. ಎಲ್​ಐಸಿ ಪಾಲಿಸಿ ನಿಮ್ಮ ಹೆಸರಲ್ಲೇ ಇರಬೇಕು… ಇಪಿಎಫ್ ಅಕೌಂಟ್​ನಿಂದ ಎಲ್​ಐಸಿ ಪ್ರೀಮಿಯಮ್ ಹಣ…

Read More

‘ಯಾರೇ ಗೆದ್ರು ಖುಷೀನೆ’; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ

ಗಿಲ್ಲಿ ನಟ ಅವರು ಅಶ್ವಿನಿ ಗೌಡ ಬಗ್ಗೆ ಮಾತನಾಡಿದ್ದಾರೆ. ‘ಗಿಲ್ಲಿ ಗೆಲುವಿಗೆ ಅರ್ಹನಲ್ಲ. ಬಡವ ಕಾರ್ಡ್ ಬಳಸಿದ್ದಾನೆ’ ಎಂದು ಅಶ್ವಿನಿ ಹೇಳಿದ್ದರು. ಅಶ್ವಿನಿ ಗೌಡ ಅವರ ಹೇಳಿಕೆ ಬಗ್ಗೆ ಗಿಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಬಿಗ್ ಬಾಸ್​ ಫಿನಾಲೆ ವೇಳೆ ನಾನು, ರಕ್ಷಿತಾ ಹಾಗೂ ಅಶ್ವಿನಿ ಇದ್ದೆವು.ಯಾರೇ ಗೆದ್ದರೂ ಖುಷಿನೇ ಎಂದು ಅಶ್ವಿನಿ ಹೇಳಿದ್ದರು. ಈಗ ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ’ ಎಂದಿದ್ದಾರೆ ಗಿಲ್ಲಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಹಸಿದ ಶ್ವಾನಕ್ಕೆ ಆಹಾರ ನೀಡಿ ಹಸಿವು ನೀಗಿಸಿದ ಪುಣ್ಯಾತ್ಮ – Kannada News | Young man satisfies dog’s hunger, video goes viral

ಸೋಶಿಯಲ್ ಮೀಡಿಯಾದಲ್ಲಿ ಕೆಲ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗುತ್ತಿರುತ್ತವೆ. ಕೆಲ ದೃಶ್ಯಗಳು ವ್ಯಕ್ತಿಯ ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗುತ್ತದೆ. ಇಲ್ಲೊಬ್ಬ ಯುವಕನು (young man) ಹಸಿದ ಶ್ವಾನಕ್ಕೆ (dog) ಆಹಾರವನ್ನು ನೀಡಿ ಮೂಕ ಪ್ರಾಣಿಯ ಹಸಿವನ್ನು ನೀಗಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಈ ಯುವಕನ ಒಳ್ಳೆತನಕ್ಕೆ ಮೆಚ್ಚುಗೆ ವ್ಯಕ್ತವಾಗಿವೆ. ಮಂಜುನಾಥ್ ಲೋಕಪುರ್ (Manjunath lokapur) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಯುವಕನೊಬ್ಬ ಫುಡ್ ಸ್ಟಾಲ್ ಮುಂಭಾಗದಲ್ಲಿ ನಿಂತು ಕೊಂಡಿದ್ದಾನೆ. ಆತನ ಹಿಂಭಾಗದಲ್ಲಿ ಶ್ವಾನವೊಂದು…

Read More