Headlines

ಆರತಕ್ಷತೆಯಲ್ಲೂ ವಿಶೇಷ ಉಡುಗೆ ಧರಿಸಿ ಕಂಗೊಳಿಸಿದ ರಶ್ಮಿಕಾ-ವಿಜಯ್: ವಿಶೇಷತೆಯೇನು? – Kannada News | Vijay Deverakonda and Rashmika Mandanna reception dress decode

ಸ್ಟಾರ್ ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಅದ್ಧೂರಿಯಾಗಿ ಮದುವೆ ಆಗಿದ್ದಾರೆ. ಇವರ ಮದುವೆ ಚಿತ್ರಗಳು ನ್ಯಾಷನಲ್ ನ್ಯೂಸ್ ಆಗಿದ್ದವು. ಮದುವೆಯ ದಿನ ಈ ಜೋಡಿ ಶಿವ-ಪಾರ್ವತಿಯ ರೂಪದಲ್ಲಿ ಕಂಗೊಳಿಸಿದ್ದರು. ಇಬ್ಬರೂ ಧರಿಸಿದ್ದ ಚಿನ್ನದ ಆಭರಣಗಳ ಡಿಸೈನ್ ಅಂತೂ ಸಖತ್ ವೈರಲ್ ಆಗಿದ್ದವು. ರಿಸೆಪ್ಷನ್​​ಗೂ ಸಹ ಭಿನ್ನವಾದ ಕಂಗೊಳಿಸುವ ಉಡುಗೆಗಳೊಟ್ಟಿಗೆ ಕಾಣಿಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇತ್ತು. ಸಾಮಾನ್ಯವಾಗಿ ಮದುವೆಗೆ ಶಾಸ್ತ್ರೀಯ ಉಡುಪು ಧರಿಸುವ ಜೋಡಿ, ರಿಸೆಪ್ಷನ್​​ಗೆ ಆಧುನಿಕ…

Read More

ಎ ಖಾತಾ ವರ್ಗಾವಣೆಗೆ ಆನ್​ಲೈನ್​​ನಲ್ಲಿ ಹಣ ಪಾವತಿಸುವ ಮುನ್ನ ಎಚ್ಚರ: ಎ ಖಾತಾ ಮಾಡಿಸುವವರು ಇದನ್ನ ಓದಲೇಬೇಕು – Kannada News | Bangaluru: B Khata to A Khata Online: Payment Pending Glitches Worry Property Owners

ಬೆಂಗಳೂರು, ಫೆಬ್ರವರಿ 18: ಸಾರ್ವಜನಿಕರು ಪಾಲಿಕೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇತ್ತೀಚೆಗೆ ಬಿ ಖಾತಾ (B Khata) ಹೊಂದಿರುವ ಆಸ್ತಿ ಮಾಲೀಕರು ಎ ಖಾತಾಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಆನ್‌ಲೈನ್‌ ವ್ಯವಸ್ಥೆ ಕಲ್ಪಿಸಿದೆ. ಆದರೆ ಇದೇ ಆನ್​​​ಲೈನ್​​ ವ್ಯವಸ್ಥೆಯಲ್ಲಿ ಸಮಸ್ಯೆಗಳು ಉಂಟಾಗಿವೆ. ಆಸ್ತಿ ಮಾಲೀಕರು ಖಾತಾ ವರ್ಗಾವಣೆಗೆ ಲಕ್ಷಾಂತರ ರೂ ಹಣ ಪಾವತಿಸಿದ ಬಳಿಕವೂ ವೆಬ್​​ಸೈಟ್​ನಲ್ಲಿ ಮಾತ್ರ ಪೆಂಡಿಂಗ್​ ತೋರಿಸುತ್ತಿದೆ. ಹೀಗಾಗಿ ಆಸ್ತಿ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನೊಂದೆಡೆ ಸಾರ್ವಜನಿಕರಿಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 25ರ ದಿನಭವಿಷ್ಯ

ಧನ್ವಂತರಿ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆಯುವುದು ಉತ್ತಮ. ಒಂದು ವೇಳೆ ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಧನ್ವಂತರಿಯ ಸ್ಮರಣೆ ಮಾಡಿಕೊಳ್ಳಿ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದರಿಂದ ನಿವಾರಣೆ ಕಾಣುವ ಮಾರ್ಗೋಪಾಯ ದೊರೆಯುತ್ತದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಪ್ರೀತಿಯಲ್ಲಿ ಇರುವವರು- ದಂಪತಿ ಮಧ್ಯೆ ಪರಸ್ಪರ ಗೌರವ ಹೆಚ್ಚಾಗಿ, ಸಂಬಂಧ ಗಾಢವಾಗಲಿದೆ. ಹೆಚ್ಚು ಖಾರದ ಪದಾರ್ಥಗಳ ಆಹಾರ ಸೇವನೆಯಿಂದ ದೂರ ಇರುವುದು ಬಹಳ ಮುಖ್ಯ. ವಿದ್ಯಾರ್ಥಿಗಳು ಹೊಸ ವಿಷಯಗಳನ್ನು…

Read More

ನ್ಯೂಯಾರ್ಕ್​​ ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ

ನ್ಯೂಯಾರ್ಕ್​, ಮಾರ್ಚ್​ 23:ನ್ಯೂಯಾರ್ಕ್​ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನ ಟ್ರಕ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ಮತ್ತು ಅಗ್ನಿಶಾಮಕ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸುವಿಕೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದನ್ನು ತೋರಿಸುವ ಡಿಕ್ಕಿಯ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ….

Read More

ಬಿಬಿಎಲ್​​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ ಲಿನ್ – Kannada News | Chris Lynn becomes the FIRST batter to blast 4000 runs

Big Bash 2026: ಬಿಗ್ ಬ್ಯಾಷ್​ ಲೀಗ್​​ನಲ್ಲಿ ಸ್ಪೋಟಕ ದಾಂಡಿಗ ಕ್ರಿಸ್ ಲಿನ್ (Chris Lynn) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ಪರ ಕಣಕ್ಕಿಳಿಯುತ್ತಿರುವ ಲಿನ್ ಈವರೆಗೆ ಒಟ್ಟು 111 ರನ್ ಕಲೆಹಾಕಿದ್ದಾರೆ. Source link

Read More

‘ಆಸೆ’ ಧಾರಾವಾಹಿಯಲ್ಲಿ ಭಾವನೆಗಳ ಪಯಣ; ಸೂರ್ಯ ಪಾತ್ರಧಾರಿ ನಿನಾದ್ ಏನಂತಾರೆ?

ಸ್ಟಾರ್ ಸುವರ್ಣದಲ್ಲಿ ಪ್ರಸಾರ ಆಗುತ್ತಿರುವ ‘ಆಸೆ’ ಧಾರಾವಾಹಿಗೆ (Serial) ದೊಡ್ಡ ವೀಕ್ಷಕರ ಬಳಗ ಇದೆ. ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದ್ದು, ಈ ಸೀರಿಯಲ್​ನ ನಿನಾದ್ ಹರಿತ್ಸ ಮಾಡುತ್ತಿರುವ ಸೂರ್ಯ ಪಾತ್ರ. ಅವರ ಸ್ಮೈಲ್, ಸ್ಟೈಲ್, ಡೈಲಾಗ್ ಎಲ್ಲರಿಗೂ ಇಷ್ಟ ಆಗಿದೆ. ಒಂದು ಸೀರಿಯಲ್ 800 ಪ್ರಸಾರ ಕಾಣುತ್ತದೆ ಎಂದರೆ ಅದು ಸಣ್ಣ ವಿಷಯ ಅಲ್ಲವೇ ಅಲ್ಲ. ನಿನಾದ್ ಅವರು ಈ ಜರ್ನಿಯನ್ನು ನೆನೆದಿದ್ದಾರೆ. ‘ಆಸೆ’ ಧಾರಾವಾಹಿಯಲ್ಲಿ ಹಲವು ಭಾವನೆಗಳನ್ನು ಬೆರೆಸಲಾಗಿದೆ. ಇಲ್ಲಿ ಮಧ್ಯಮ ವರ್ಗದವರ ಒದ್ದಾಟ ಇದೆ,…

Read More

Ugadi 2026: ಮಾ.19ಕ್ಕೆ ಹೊಸ ವರ್ಷದ ಆರಂಭ; ಯುಗಾದಿ ಹಬ್ಬದ ಮಹತ್ವ ಮತ್ತು ಆಚರಣೆಯ ಬಗ್ಗೆ ಇಲ್ಲಿದೆ ಮಾಹಿತಿ

ಯುಗಾದಿ ಹಬ್ಬದ ಆಚರಣೆ ಮತ್ತು ಅದರ ಹಿನ್ನೆಲೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಯುಗಾದಿ ಹಬ್ಬಕ್ಕೆ ಅಗ್ರಮಾನ್ಯ ಸ್ಥಾನವಿದೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬವನ್ನು ಕರ್ನಾಟಕ, ಆಂಧ್ರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಭಿನ್ನತೆಯಿಂದ ಆಚರಿಸಲಾಗುತ್ತದೆ. ಯುಗಸ್ಯ ಆದಿ ಅಂದರೆ ಯುಗದ ಪ್ರಾರಂಭ ಎಂಬ ಅರ್ಥವನ್ನು ಹೊಂದಿರುವ ಯುಗಾದಿಯು ಪ್ರಕೃತಿಯಲ್ಲಿ ಹೊಸತನದ…

Read More

ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ: ಗ್ರಾಹಕರಿಲ್ಲದೇ ಹೋಟೆಲ್‌ಗಳು ಖಾಲಿ.. ಖಾಲಿ – Kannada News | Ketugrasta Lunar Eclipse Sparks Traditional Beliefs and Community Impact

ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು, ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣಗಳನ್ನು ವೀಕ್ಷಿಸಬಹುದಾಗಿದೆ. ಲಾಸ್ ಏಂಜಲೀಸ್‌ನಲ್ಲಿ ಗೋಚರಿಸುತ್ತಿರುವ ಈ ಗ್ರಹಣ ಭಾರತದಲ್ಲಿ ಕೊನೆಯ 21 ನಿಮಿಷಗಳ ಕಾಲ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಚಂದ್ರನ ಕಾಲು ಭಾಗ ಮಾತ್ರ ಗೋಚರಿಸುತ್ತದೆ, ಉಳಿದ ಭಾಗ ತಾತ್ಕಾಲಿಕವಾಗಿ ನೆರಳಿನಲ್ಲಿ ಆವೃತವಾಗಿರುತ್ತದೆ. ಚಂದ್ರಗ್ರಹಣದ ಬಗ್ಗೆ ವೈಜ್ಞಾನಿಕ ಹಾಗೂ ಧಾರ್ಮಿಕ ನಂಬಿಕೆಗಳು ಭಾರತದಲ್ಲಿ ಮಾತ್ರವಲ್ಲದೆ, ಜಪಾನ್, ಚೀನಾ, ಅಮೆರಿಕಾದಂತಹ ದೇಶಗಳಲ್ಲೂ ಇವೆ. ಈ ಗ್ರಹಣದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜನಸಂಚಾರ ಕಡಿಮೆಯಾಗಿ, ಹೋಟೆಲ್‌ಗಳು ಖಾಲಿ ಹೊಡೆದಿವೆ. ಇದು…

Read More

ಪಾಟ್ನಾದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆ – Kannada News | Patna Crime, Minor Girl’s Decapitated Head Found Police Probe Begin

ಪಾಟ್ನಾ, ಜನವರಿ 20: ಬಿಹಾರ(Bihar)ದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆಯಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೋಮವಾರ ರಾತ್ರಿ ರಾಜಧಾನಿಯ ನಾಡಿ ಪೊಲೀಸ್ ಠಾಣೆ ಪ್ರದೇಶದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ಕತ್ತರಿಸಿದ ತಲೆ ಪತ್ತೆಯಾಗಿದೆ. ಪೊಲೀಸರು ರುಂಡ ವಶಕ್ಕೆ ಪಡೆದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ತಲೆಯನ್ನು ಕತ್ತರಿಸಿದ ರೀತಿ ನೋಡಿದರೆ, ಆ ಬಾಲಕಿಯನ್ನು ಅಪರಾಧಿಗಳು ಎಷ್ಟು ಭಯಾನಕವಾಗಿ ಕೊಲೆ ಮಾಡಿರಬಹುದು ಎಂಬುದು…

Read More

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು? – Kannada News | Raichur: Chaos during landing of CM Siddaramaiah helicopter; what exactly happened

ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್​​ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್​ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ….

Read More