RCB vs LSG: ಸಾಲ್ಟ್ ಸೂಪರ್ ಮ್ಯಾಚ್ ಕ್ಯಾಚ್; ಪಂತ್ ಒಂದೇ ರನ್​ಗೆ ಸುಸ್ತು – Kannada News | Phil Salt’s Superhuman IPL Catch: Rishabh Pant’s Dismissal vs LSG Highlights Fielding Prowess

ಸ್ಫೋಟಕ ಬ್ಯಾಟಿಂಗ್​ಗೆ ಹೆಸರು ವಾಸಿಯಾಗಿರುವ ಆರ್​ಸಿಬಿ ಸ್ಫೋಟಕ ಆರಂಭಿಕ ಆಟಗಾರ ಫಿಲ್ ಸಾಲ್ಟ್ ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಫಿಲ್ಡಿಂಗ್ ಮೂಲಕವು ಸಖತ್ ಸದ್ದು ಮಾಡುತ್ತಿದ್ದಾರೆ. ಈ ಅವೃತ್ತಿಯಲ್ಲಿ ಈಗಾಗಲೇ ಹಲವು ಅದ್ಭುತ ಕ್ಯಾಚ್​ಗಳನ್ನು ಹಿಡಿದು ಪಂದ್ಯದ ದಿಕ್ಕನ್ನು ಬದಲಿಸಿದ್ದ ಸಾಲ್ಟ್, ಇದೀಗ ಲಕ್ನೋ ಸೂಪರ್‌ಜೈಂಟ್ಸ್ ವಿರುದ್ಧದ ಪಂದ್ಯದಲ್ಲೂ ಮತ್ತದೇ ಅದ್ಭುತ ಫಿಲ್ಡಿಂಗ್ ಮಾಡುವ ಮೂಲಕ ಸೂಪರ್​ ಮ್ಯಾನ್​ನಂತೆ ಎಗರಿ ಅಸಾಧಾರಣವಾದ ಕ್ಯಾಚ್​ವೊಂದನ್ನು ಹಿಡಿದಿದ್ದಾರೆ.

ವಾಸ್ತವವಾಗಿ ಲಕ್ನೋ ತಂಡದ ನಾಯಕ ರಿಷಭ್ ಪಂತ್ ಮೊದಲ ವಿಕೆಟ್ ಪತನದ ಬಳಿಕವೇ ಬ್ಯಾಟಿಂಗ್​ಗೆ ಬಂದಿದ್ದರು. ಆದರೆ ಹೇಜಲ್‌ವುಡ್ ಎಸೆದ ಮೂರನೇ ಓವರ್​ನಲ್ಲಿ ರಿಷಭ್ ಪಂತ್ ಖಾತೆಯನ್ನು ತೆರೆಯುವುದಕ್ಕೂ ಮುನ್ನವೇ ತಮ್ಮ ಎಡ ಮೊಣಕೈಗೆ ಗಂಭೀರವಾಗಿ ಗಾಯಮಾಡಿಕೊಂಡರು. ಹೀಗಾಗಿ ಪಂತ್ ಅರ್ಧದಲ್ಲೇ ಬ್ಯಾಟಿಂಗ್‌ ನಿಲ್ಲಿಸಿ ಮೈದಾನ ತೊರೆದಿದ್ದರು.

ಆದರೆ ತಂಡದ ಇನ್ನಿಂಗ್ಸ್ ಕುಸಿದಿದ್ದರಿಂದ ಪಂತ್ 17ನೇ ಓವರ್​ನಲ್ಲಿ ಮತ್ತೆ ಬ್ಯಾಟಿಂಗ್​ಗೆ ಬಂದರು. ಭುವನೇಶ್ವರ್ ಕುಮಾರ್ ಎಸೆದ ಈ ಓವರ್​ನಲ್ಲಿ ಪಂತ್​ಗೆ ದೊಡ್ಡ ಹೊಡೆತಗಳನ್ನು ಆಡಲು ಸಾಧ್ಯವಾಗಲಿಲ್ಲ. ಹೀಗಾಗಿ ಓವರ್​ನ 5ನೇ ಎಸೆತದಲ್ಲಿ ಸಿಕ್ಸರ್ ಬಾರಿಸಲು ಪಂತ್ ಯತ್ನಿಸಿದರು. ಆದರೆ ಡೀಪ್ ಸ್ಕ್ವೈರ್​ನಲ್ಲಿ ನಿಂತಿದ್ದ ಸಾಲ್ಟ್ ಮುಂದಕ್ಕೆ ಓಡಿ ಬಂದು ಚಿರತೆಯಂತೆ ಎಗರಿ ಅದ್ಭುತ ಕ್ಯಾಚ್ ತೆಗೆದುಕೊಂಡರು. ಹೀಗಾಗಿ ಪಂತ್ 6 ಎಸೆತಗಳನ್ನು ಎದುರಿಸಿ ಕೇವಲ 1 ರನ್ ಬಾರಿಸಿ ಔಟಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ.

ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದು ಪುತ್ರ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.  ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಗ ವೆಂಕಟೇಶ್‌ನನ್ನ ಆರ್‌ಆರ್ ನಗರ ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

ಇದನ್ನೂ ನೋಡಿ: ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಮುಪ್ಪಾದ ಕಾಲಕ್ಕೆ ಒಂದು ಸೂರು, ತುತ್ತು ಅನ್ನ ಇದ್ರೆ ವಯೋವೃದ್ಧರು ಹೇಗೋ ಇರುವಷ್ಟು ದಿನ ಪಾಲಿಗೆ ಬಂದಿದ್ದು ಪಂಚಾಮೃತ ಅಂತ ಕಾಲ ದೂಡ್ತಾರೆ. ಆದ್ರೆ, ಪುತ್ರ ವೆಂಕಟೇಶ್ ಮಾತ್ರ ತಾಯಿಯ ಅನಾರೋಗ್ಯಕ್ಕೆ ಬೇಸತ್ತಿದ್ದು, ಕೈಯಾರೇ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಬಲಿಕೊಟ್ಟಿದ್ದಾನೆ.

ಮುಪ್ಪಿನ ಕಾಲವು ಜೀವನದ ಅತ್ಯಂತ ಸೂಕ್ಷ್ಮ ಮತ್ತು ಹಿರಿಯರ ಆರೈಕೆ ಅಗತ್ಯವಿರುವ ಹಂತವಾಗಿದೆ. ಇಳಿ ವಯಸ್ಸಿನಲ್ಲಿ ಆರ್ಥಿಕ ಸ್ವಾವಲಂಬನೆ, ಮಕ್ಕಳ ಪ್ರೀತಿ-ವಿಶ್ವಾಸ, ಮತ್ತು ಉತ್ತಮ ಆರೋಗ್ಯ ಸೌಲಭ್ಯಗಳು ಅತ್ಯಗತ್ಯ. ಆದರೆ, ದುರದೃಷ್ಟವಶಾತ್ ಅನೇಕರು ಈ ಸಮಯದಲ್ಲಿ ಮೂಲೆಗುಂಪಾಗುತ್ತಿದ್ದು, ವೃದ್ಧಾಶ್ರಮಗಳ ಆಸರೆ ಪಡೆಯುವಂತಾಗಿದೆ. ಇನ್ನೊಂದೆಡೆ ವಯಸ್ಸಾದ ತಂದೆ ತಾಯಿ ಮಕ್ಕಳಿಂದ ಕೈಯಿಂದಲೇ ಜೀವ ಕಳೆದುಕೊಳ್ಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಕೊಂದ ಮಗ – Kannada News | A son kills his mother by pushing from home 3rd floor in rr nagar at bengaluru

ಬೆಂಗಳೂರು, (ಏಪ್ರಿಲ್ 15): ಬಹುಮಹಡಿ ಕಟ್ಟಡದಿಂದ ತಳ್ಳಿ ಹೆತ್ತ ತಾಯಿಯನ್ನು (Mother) ಮಗನೇ (Son) ಕೊಲೆ ಮಾಡಿರುವ ಘಟನೆ ಅಮಾನವೀಯ ಘಟನೆ ಬೆಂಗಳೂರಿನ ಆರ್‌ಆರ್ ನಗರ (RR Nagar) ಬೆಮಲ್ ಲೇಔಟ್‌ನಲ್ಲಿ ನಡೆದಿದೆ. ಪುತ್ರ ವೆಂಕಟೇಶ್ ಎನ್ನುವಾತನೆ ತನ್ನ ಹೆತ್ತ ತಾಯಿ ಸಾವಿತ್ರಮ್ಮ(72)ರನ್ನು ಮಹಡಿ ಮೇಲಿಂದ ತಳ್ಳಿ ಕೊಂದಿದ್ದಾನೆ. ಪಾರ್ಶ್ವವಾಯು ಪೀಡಿತರಾಗಿದ್ದ ಸಾವಿತ್ರಮ್ಮ,ಸುಮಾರು ಐದಾರು ವರ್ಷದಿಂದ ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ತಾಯಿ ಸಾವಿತ್ರಮ್ಮಳನ್ನ 3ನೇ ಮಹಡಿಯಿಂದ ತಳ್ಳಿದ್ದಾನೆ.

ಸುಮಾರು ವರ್ಷಗಳಿಂದ ಸಾವಿತ್ರಮ್ಮ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ತಾಯಿ ಅವಸ್ಥೆಯಿಂದ ನೊಂದು ಪುತ್ರ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.  ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆರ್‌ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮಗ ವೆಂಕಟೇಶ್‌ನನ್ನ ಆರ್‌ಆರ್ ನಗರ ಪೊಲೀಸರು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

ಇದನ್ನೂ ನೋಡಿ: ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?

ಮುಪ್ಪಾದ ಕಾಲಕ್ಕೆ ಒಂದು ಸೂರು, ತುತ್ತು ಅನ್ನ ಇದ್ರೆ ವಯೋವೃದ್ಧರು ಹೇಗೋ ಇರುವಷ್ಟು ದಿನ ಪಾಲಿಗೆ ಬಂದಿದ್ದು ಪಂಚಾಮೃತ ಅಂತ ಕಾಲ ದೂಡ್ತಾರೆ. ಆದ್ರೆ, ಪುತ್ರ ವೆಂಕಟೇಶ್ ಮಾತ್ರ ತಾಯಿಯ ಅನಾರೋಗ್ಯಕ್ಕೆ ಬೇಸತ್ತಿದ್ದು, ಕೈಯಾರೇ ತಾಯಿಯನ್ನು ಮಹಡಿ ಮೇಲಿಂದ ತಳ್ಳಿ ಬಲಿಕೊಟ್ಟಿದ್ದಾನೆ.

ಮುಪ್ಪಿನ ಕಾಲವು ಜೀವನದ ಅತ್ಯಂತ ಸೂಕ್ಷ್ಮ ಮತ್ತು ಹಿರಿಯರ ಆರೈಕೆ ಅಗತ್ಯವಿರುವ ಹಂತವಾಗಿದೆ. ಇಳಿ ವಯಸ್ಸಿನಲ್ಲಿ ಆರ್ಥಿಕ ಸ್ವಾವಲಂಬನೆ, ಮಕ್ಕಳ ಪ್ರೀತಿ-ವಿಶ್ವಾಸ, ಮತ್ತು ಉತ್ತಮ ಆರೋಗ್ಯ ಸೌಲಭ್ಯಗಳು ಅತ್ಯಗತ್ಯ. ಆದರೆ, ದುರದೃಷ್ಟವಶಾತ್ ಅನೇಕರು ಈ ಸಮಯದಲ್ಲಿ ಮೂಲೆಗುಂಪಾಗುತ್ತಿದ್ದು, ವೃದ್ಧಾಶ್ರಮಗಳ ಆಸರೆ ಪಡೆಯುವಂತಾಗಿದೆ. ಇನ್ನೊಂದೆಡೆ ವಯಸ್ಸಾದ ತಂದೆ ತಾಯಿ ಮಕ್ಕಳಿಂದ ಕೈಯಿಂದಲೇ ಜೀವ ಕಳೆದುಕೊಳ್ಳುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

‘ಭೂತ್ ಬಂಗ್ಲ’ ಅಡ್ವಾನ್ಸ್ ಬುಕ್ಕಿಂಗ್‌: ಅಕ್ಷಯ್ ಕುಮಾರ್ ಸಿನಿಮಾಗೆ 15 ಕೋಟಿ ರೂ. ಓಪನಿಂಗ್ ನಿರೀಕ್ಷೆ – Kannada News | Akshay Kumar Bhooth Bangla movie Advance Booking Box Office Collection

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ನಿರ್ದೇಶಕ ಪ್ರಿಯದರ್ಶನ್ ಜೋಡಿಯ ಬಹುನಿರೀಕ್ಷಿತ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆಗೆ ಸಜ್ಜಾಗಿದೆ. ಏಪ್ರಿಲ್ 17ರಂದು ಈ ಸಿನಿಮಾ ತೆರೆಕಾಣಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಶುರುವಾಗಿದೆ. ಟಿಕೆಟ್ ಬುಕ್ ಮಾಡುವಲ್ಲಿ ಜನರು ಆಸಕ್ತಿ ತೋರಿಸುತ್ತಿದ್ದಾರೆ. ಆ ಮೂಲಕ ‘ಭೂತ್ ಬಂಗ್ಲ’ ಸಿನಿಮಾ ಉತ್ತಮ ಓಪನಿಂಗ್ ಪಡೆಯುವ ಸೂಚನೆ ಸಿಕ್ಕಿದೆ. ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ ಮೊದಲ ದಿನ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

ಬುಧವಾರ (ಏಪ್ರಿಲ್ 15) ಸಂಜೆ 4.30ರ ಸುಮಾರಿಗೆ ಲಭ್ಯವಾದ ಅಂಕಿಅಂಶಗಳ ಪ್ರಕಾರ, ಪಿವಿಆರ್ ಐನಾಕ್ಸ್ ಮತ್ತು ಸಿನಿಪೊಲಿಸ್‌ ಮಲ್ಟಿಪ್ಲೆಕ್ಸ್​ಗಳಲ್ಲಿ ಸುಮಾರು 20 ಸಾವಿರ ಟಿಕೆಟ್‌ಗಳು ಮಾರಾಟವಾಗಿವೆ. ಗುರುವಾರ ಪ್ರಿವ್ಯೂ ಶೋಗೆ 10,500 ಟಿಕೆಟ್ ಹಾಗೂ ಶುಕ್ರವಾರದ ಶೋಗೆ 9,000 ಟಿಕೆಟ್ ಮಾರಾಟ ಆಗಿವೆ. ಇದರಿಂದ ಚಿತ್ರಕ್ಕೆ ಪಾಸಿಟಿವ್ ಫೀಲ್ ಸಿಕ್ಕಿದೆ.

ಏಪ್ರಿಲ್ 15ರ ರಾತ್ರಿಯ ವೇಳೆಗೆ ಒಟ್ಟು ಟಿಕೆಟ್ ಮಾರಾಟ 25,000ರಿಂದ 30,000 ಗಡಿಯನ್ನು ದಾಟುವ ಸಾಧ್ಯತೆಯಿದೆ. ಗುರುವಾರ ರಾತ್ರಿ ಪ್ರಿವ್ಯೂ ಶೋಗಳು ಆರಂಭವಾಗುವ ಹೊತ್ತಿಗೆ ಇದು 60,000ರಿಂದ 70,000ಕ್ಕೆ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ಹಾಗಾಗಿ ‘ಭೂತ್ ಬಂಗ್ಲ’ ಸಿನಿಮಾಗೆ ಬಿಡುಗಡೆಗೂ ಮೊದಲೇ ಗೆಲುವಿನ ಸೂಚನೆ ಸಿಗುತ್ತಿದೆ.

ಅಕ್ಷಯ್ ಕುಮಾರ್ ಅವರ ಈ ಹಿಂದಿನ ಚಿತ್ರಗಳಿಗೆ ಹೋಲಿಸಿದರೆ ‘ಭೂತ್ ಬಂಗ್ಲ’ ಟಿಕೆಟ್ ಬುಕಿಂಗ್ ಸಾಧಾರಣ ಎನಿಸುತ್ತಿದೆ. ‘ಹೌಸ್‌ಫುಲ್ 5’ ಸಿನಿಮಾಗೆ ಮೊದಲ ದಿನ 96,000 ಟಿಕೆಟ್ ಮಾರಾಟವಾಗಿತ್ತು. ಪ್ರಸ್ತುತ ಟ್ರೆಂಡ್ ಗಮನಿಸಿದರೆ, ‘ಭೂತ್ ಬಂಗ್ಲಾ’ ಚಿತ್ರವು ಮೊದಲ ದಿನ, ಪ್ರಿವ್ಯೂ ಶೋಗಳನ್ನೂ ಸೇರಿ, ಸುಮಾರು 15 ಕೋಟಿ ರೂಪಾಯಿ ಗಳಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ‘ಭೂತ್ ಬಂಗ್ಲ’ ಟ್ರೇಲರ್: ಮತ್ತದೇ ಹಳೇ ಕಥೆ ಹೇಳುತ್ತಾರಾ ಅಕ್ಷಯ್ ಕುಮಾರ್?

ಸದ್ಯ ಬಾಲಿವುಡ್ ಬಿಸ್ನೆಸ್ ಚೆನ್ನಾಗಿದೆ. ‘ಧುರಂಧರ್: ದಿ ರಿವೇಂಜ್’ ದೊಡ್ಡ ಮಟ್ಟದ ಹಿಟ್ ಆಗಿದೆ. ಇದರ ಜೊತೆ ‘ಮರ್ದಾನಿ 3’ ಮತ್ತು ‘ದಿ ಕೇರಳ ಸ್ಟೋರಿ 2’ ಕೂಡ ಯಶಸ್ಸು ಕಂಡಿವೆ. ‘ಭೂತ್ ಬಂಗ್ಲ’ ಸಿನಿಮಾದ ನಿರ್ಮಾಣ ವೆಚ್ಚ ಮಿತವಾಗಿದ್ದು, ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳಿಂದ ಈಗಾಗಲೇ ಉತ್ತಮ ಲಾಭ ಕಂಡಿದೆ. ಮೊದಲ ದಿನ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕರೆ ಅಕ್ಷಯ್ ಕುಮಾರ್ ಖಾತೆಗೆ ಒಂದು ಸಕ್ಸಸ್ ಸೇರ್ಪಡೆ ಆಗುವುದು ಗ್ಯಾರಂಟಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Vivo T5 Pro 5G: ಭಾರತದಲ್ಲಿ ಬರೋಬ್ಬರಿ 9,020mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ.. – Kannada News | Vivo launched its new 9020mah big battery smartphone called vivo t5 pro 5g

ಬೆಂಗಳೂರು (ಏ. 15): ಪ್ರಸಿದ್ಧ ವಿವೋ (Vivo) ಕಂಪನಿ ಭಾರತದಲ್ಲಿ ತನ್ನ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರಲಿದೆ. ಹೊಸ ವಿವೋ ಟಿ5 ಪ್ರೊ 5ಜಿ ಎರಡು ಬಣ್ಣ ಆಯ್ಕೆಗಳು ಮತ್ತು ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಸರಣಿ ಚಿಪ್‌ಸೆಟ್‌ನಿಂದ ಚಾಲಿತವಾಗಿರುವ ಈ ಫೋನ್​ನಲ್ಲಿ ಬರೋಬ್ಬರಿ 9,020mAh ಬ್ಯಾಟರಿಯನ್ನು ನೀಡಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಭಾರತದಲ್ಲಿ ವಿವೋ T5 ಪ್ರೊ 5G ಬೆಲೆ, ಲಭ್ಯತೆ

ಭಾರತದಲ್ಲಿ ವಿವೋ ಟಿ5 ಪ್ರೊ 5ಜಿಯ 8 ಜಿಬಿ RAM ಮತ್ತು 128 ಜಿಬಿ ಸ್ಟೋರೇಜ್ ಹೊಂದಿರುವ ಬೇಸ್ ರೂಪಾಂತರದ ಬೆಲೆ 29,999 ರೂ. ಗಳಿಂದ ಪ್ರಾರಂಭವಾಗುತ್ತದೆ. 8 ಜಿಬಿ + 256 ಜಿಬಿ RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್ ಬೆಲೆ 33,999 ರೂ. ಕೊನೆಯದಾಗಿ, 12 ಜಿಬಿ RAM ಮತ್ತು 256 ಜಿಬಿ ಸ್ಟೋರೇಜ್ ನೀಡುವ ಟಾಪ್-ಆಫ್-ಲೈನ್ ಆಯ್ಕೆಯ ಬೆಲೆ 39,999 ರೂ. ಆಗಿದೆ.

ಕಂಪನಿಯು HDFC ಬ್ಯಾಂಕ್, SBI ಮತ್ತು Axis ಬ್ಯಾಂಕ್ ಕಾರ್ಡ್‌ಗಳೊಂದಿಗೆ ರೂ. 3,000 ವರೆಗೆ ತಕ್ಷಣದ ಬ್ಯಾಂಕ್ ರಿಯಾಯಿತಿ ಮತ್ತು ಆರು ತಿಂಗಳವರೆಗೆ ಬಡ್ಡಿರಹಿತ EMI ಆಯ್ಕೆಗಳನ್ನು ನೀಡುತ್ತಿದೆ. ಹೊಸ ಹ್ಯಾಂಡ್‌ಸೆಟ್ ಭಾರತದಲ್ಲಿ ಏಪ್ರಿಲ್ 21 ರಂದು ಮಧ್ಯಾಹ್ನ 12 ಗಂಟೆಗೆ ಫ್ಲಿಪ್‌ಕಾರ್ಟ್ ಮತ್ತು ವಿವೋ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ.

ವಿವೋ T5 ಪ್ರೊ 5G ಫೀಚರ್ಸ್

ವಿವೋ T5 ಪ್ರೊ 5G ಡ್ಯುಯಲ್ ಸಿಮ್ ಹ್ಯಾಂಡ್‌ಸೆಟ್ ಆಗಿದ್ದು ಅದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್ 6.83-ಇಂಚಿನ 1.5K (1,260×2,800 ಪಿಕ್ಸೆಲ್‌ಗಳು) AMOLED ಡಿಸ್ಪ್ಲೇಯನ್ನು ಹೊಂದಿದ್ದು, 144Hz ವರೆಗೆ ರಿಫ್ರೆಶ್ ದರ, HDR10+ ಬೆಂಬಲ, ಸ್ಲೀಪ್ ಕಂಫರ್ಟ್ ಮೋಡ್ ಮತ್ತು ಆಂಟಿ-ಮೋಷನ್ ಸಿಕ್‌ನೆಸ್ ಮೋಡ್ ಜೊತೆಗೆ SGS ಕಡಿಮೆ ನೀಲಿ ಬೆಳಕು ಮತ್ತು ಕಡಿಮೆ ಫ್ಲಿಕರ್ ಪ್ರಮಾಣೀಕರಣಗಳನ್ನು ಹೊಂದಿದೆ.

Tech Tips: ಆಂಡ್ರಾಯ್ಡ್ ಬಳಕೆದಾರರು ಇನ್ಮುಂದೆ ಸ್ಟೋರೇಜ್ ಬಗ್ಗೆ ಚಿಂತಿಸಬೇಕಿಲ್ಲ, ಗೂಗಲ್ ಮಾಸ್ಟರ್ ಪ್ಲ್ಯಾನ್

ಈ ಫೋನ್​ನಲ್ಲಿ ಕ್ವಾಲ್ಕಾಮ್‌ನ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಶಕ್ತಿಯನ್ನು ನೀಡಲಾಗಿದ್ದು, AnTuTu ಬೆಂಚ್‌ಮಾರ್ಕಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಹ್ಯಾಂಡ್‌ಸೆಟ್ 11,80,000 ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದೆ.

ಕ್ಯಾಮೆರಾ ವಿಚಾರಕ್ಕೆ ಬಂದರೆ, ವಿವೋ T5 ಪ್ರೊ 5G ಡ್ಯುಯಲ್ ಹಿಂಬದಿಯ ಕ್ಯಾಮೆರಾ ವ್ಯವಸ್ಥೆಯನ್ನು ಹೊಂದಿದೆ, ಇದರಲ್ಲಿ 50-ಮೆಗಾಪಿಕ್ಸೆಲ್ ಮುಖ್ಯ ಶೂಟರ್, ಸೋನಿ IMX882 ಸಂವೇದಕ, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಮತ್ತು 10x ವರೆಗೆ ಜೂಮ್, ಜೊತೆಗೆ 2-ಮೆಗಾಪಿಕ್ಸೆಲ್ ಬೊಕೆ ಕ್ಯಾಮೆರಾ ಇದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಳಿಗಾಗಿ ಹ್ಯಾಂಡ್‌ಸೆಟ್ ಮುಂಭಾಗದಲ್ಲಿ 32-ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಸಹ ಹೊಂದಿದೆ. ಇದು ಮುಂಭಾಗ ಮತ್ತು ಹಿಂಭಾಗದ ಕ್ಯಾಮೆರಾಗಳೊಂದಿಗೆ 4K ವಿಡಿಯೋಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

ಈ ಫೋನ್​ ಬರೋಬ್ಬರಿ 9,020mAh ಸಿಲಿಕಾನ್ ಕಾರ್ಬನ್ ಬ್ಯಾಟರಿಯಿಂದ ಬೆಂಬಲಿತವಾಗಿದೆ. 90W ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಆನ್‌ಬೋರ್ಡ್ ಸೆನ್ಸರ್‌ಗಳ ಪಟ್ಟಿಯಲ್ಲಿ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಇ-ದಿಕ್ಸೂಚಿ, ಸಾಮೀಪ್ಯ ಸೆನ್ಸರ್ ಮತ್ತು ಗೈರೊಸ್ಕೋಪ್ ಸೇರಿವೆ. ಸಂಪರ್ಕಕ್ಕಾಗಿ 5G, 4G LTE, Wi-Fi 6, ಬ್ಲೂಟೂತ್ 5.2, GPS ಮತ್ತು USB ಟೈಪ್-C ಪೋರ್ಟ್ ಅನ್ನು ಸಹ ಬೆಂಬಲಿಸುತ್ತದೆ.

ತಂತ್ರಜ್ಞಾನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟರ್ಕಿಯ ಶಾಲೆಯಲ್ಲಿ ಗುಂಡಿನ ದಾಳಿ; ನಾಲ್ವರು ಸಾವು, 20 ಜನರಿಗೆ ಗಾಯ, ಶಂಕಿತ ಆತ್ಮಹತ್ಯೆ – Kannada News | Turkey School Shooting 4 Dead and 20 Injured Suspect Kills Himself

ನವದೆಹಲಿ, ಏಪ್ರಿಲ್ 15: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಮಾಧ್ಯಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20 ಜನರು ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಶಿಕ್ಷಕ ಮತ್ತು ಮೂವರು ವಿದ್ಯಾರ್ಥಿಗಳು ಸೇರಿದ್ದಾರೆ. ಗುಂಡು ಹಾರಿಸಿದ ವಿದ್ಯಾರ್ಥಿ ತನ್ನ ಬ್ಯಾಗ್‌ನಲ್ಲಿ ತನ್ನ ತಂದೆಯ ಗನ್ ತಂದಿದ್ದ. ಗುಂಡು ಹಾರಿಸಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

 

Source link

ದಾವಣಗೆರೆಯಲ್ಲಿ ಭುಗಿಲೆದ್ದ ಆಕ್ರೋಶ: ಕಾಂಗ್ರೆಸ್​​ಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ದಾವಣಗೆರೆ, (ಏಪ್ರಿಲ್ 15): ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಟಿಕೆಟ್ ಸಂಬಂಧ ಕಾಂಗ್ರೆಸ್​​ನಲ್ಲಿ ಶುರುವಾದ ಯುದ್ಧ ಇದೀಗ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ಪಕ್ಷ ವಿರೋಧಿ ಚಟುವಟಿಕೆ ಆರೋಪ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರಿಂದ ಅವರ ಅಭಿಮಾನಿಗಳು ಹಾಗೂ ಮುಸ್ಲಿಮರು ಆಕ್ರೋಶಗೊಂಡಿದ್ದು, ದಾವಣಗೆರೆಯಲ್ಲಿ ಜಸ್ಟೀಸ್ ಫಾರ್ ಅಬ್ದುಲ್ ಜಬ್ಬಾರ್ ಎಂದು ಘೋಷಣೆ ಕೂಗುತ್ತಾ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಅಬ್ದುಲ್ ಜಬ್ಬಾರ್ ಅಭಿಮಾನಿಯೋರ್ವ ಮಾತನಾಡಿ, ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Source link

ನಮ್ಮ ವಿರೋಧ ಮಹಿಳಾ ಮೀಸಲಾತಿಗಲ್ಲ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ – Kannada News | We are Against Centre’s Approach not women’s reservation Mallikarjun Kharge After Key Meet

ನವದೆಹಲಿ, ಏಪ್ರಿಲ್ 15: ಹಲವಾರು ವಿರೋಧ ಪಕ್ಷಗಳು ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯಲ್ಲಿನ ಕ್ಷೇತ್ರ ಪುನರ್ವಿಂಗಡಣೆ ನಿಬಂಧನೆಗಳ ವಿರುದ್ಧ ಒಗ್ಗಟ್ಟಿನಿಂದ ಮತ ಚಲಾಯಿಸಲು ನಿರ್ಧರಿಸಿವೆ. ಆದರೆ ಮಹಿಳಾ ಮೀಸಲಾತಿಯನ್ನು ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ನಮ್ಮ ವಿರೋಧ ಕೇಂದ್ರ ಸರ್ಕಾರ ಮಸೂದೆಯನ್ನು ಜಾರಿಗೆ ತರುತ್ತಿರುವ ವಿಧಾನಕ್ಕೇ ವಿನಃ ಮಹಿಳಾ ಮೀಸಲಾತಿಗಲ್ಲ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷ (ಎಎಪಿ) ಹೊರತುಪಡಿಸಿ, ಇಂಡಿಯಾ ಬಣದ ಹಲವಾರು ಪಕ್ಷಗಳ ನಾಯಕರು ಇಂದು ದೆಹಲಿಯ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ್ದರು. ಗುರುವಾರದಿಂದ ಪ್ರಾರಂಭವಾಗುವ ಮೂರು ದಿನಗಳ ವಿಶೇಷ ಸಂಸತ್ತಿನ ಅಧಿವೇಶನದಲ್ಲಿ ಜಂಟಿ ಕಾರ್ಯತಂತ್ರವನ್ನು ರೂಪಿಸಲು ಸಭೆ ನಡೆಸಲಾಯಿತು.

ಈ ಸಭೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ನಾವೆಲ್ಲರೂ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿದ್ದೇವೆ, ಆದರೆ ಅದನ್ನು ತರುವ ವಿಧಾನಕ್ಕೆ ನಮ್ಮ ವಿರೋಧ ಇದೆ. ಇದು ರಾಜಕೀಯ ಪ್ರೇರಿತ ನಡೆಯಾಗಿದೆ. ವಿರೋಧ ಪಕ್ಷಗಳನ್ನು ಹತ್ತಿಕ್ಕಲು ಮತ್ತು ನಿಗ್ರಹಿಸಲು, ಸರ್ಕಾರ ಈ ರೀತಿ ಮಾಡುತ್ತಿದೆ. ನಾವು ನಿರಂತರವಾಗಿ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತಿದ್ದೇವೆ. ಅಂಗೀಕರಿಸಲಾದ ಹಿಂದಿನ ತಿದ್ದುಪಡಿಯನ್ನು ಜಾರಿಗೆ ತರಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ಬಿಜೆಪಿ ನೇತೃತ್ವದ ಸರ್ಕಾರ ಸೀಮಾ ನಿರ್ಣಯದೊಂದಿಗೆ ತಂತ್ರಗಳನ್ನು ಆಡುತ್ತಿದ್ದಾರೆ. ಆದ್ದರಿಂದ, ಈ ಮಸೂದೆಯನ್ನು ವಿರೋಧಿಸಲು ಎಲ್ಲಾ ಪಕ್ಷಗಳು ಒಗ್ಗಟ್ಟಿನಿಂದ ನಿರ್ಧಾರ ತೆಗೆದುಕೊಂಡಿವೆ” ಎಂದು ಸಭೆಯ ನಂತರ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ

ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮಾತನಾಡಿ, ಸೀಮಾ ನಿರ್ಣಯ ಆಡಳಿತ ಪಕ್ಷಕ್ಕೆ ಬಹುಮತವನ್ನು ಗಳಿಸುವ ಸಾಧನವಾಗಿದೆ ಎಂಬುದು ಸ್ಪಷ್ಟವಾಗಿದೆ. ಸೀಮಾ ನಿರ್ಣಯ ಕ್ರಮಕ್ಕೆ ನಾವು ಸಂಪೂರ್ಣವಾಗಿ ವಿರೋಧಿಯಾಗಿದ್ದೇವೆ. ಮಹಿಳಾ ಮೀಸಲಾತಿ ಜಾರಿಗೆ ತರಬೇಕು, ಆದರೆ ನಾವು ಕ್ಷೇತ್ರ ಪುನರ್ವಿಂಗಡಣೆಯನ್ನು ಸಂಪೂರ್ಣವಾಗಿ ವಿರೋಧಿಸುತ್ತೇವೆ” ಎಂದು ಹೇಳಿದ್ದಾರೆ.

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಏಪ್ರಿಲ್ 16ರಿಂದ 18ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸುವ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುವುದು. 2029ರಲ್ಲಿ ಇದನ್ನು ಜಾರಿಗೆ ತರಲಾಗುವುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

RCB vs LSG: ಬರೋಬ್ಬರಿ 102 ಮೀಟರ್; ಸ್ಟೇಡಿಯಂನಿಂದ ಹೊರ ಹೋದ ಚೆಂಡು – Kannada News | IPL 2026: Mitchell Marsh’s Monstrous 102m Six Off Bhuvneshwar Kumar Goes Viral

ಐಪಿಎಲ್ 2026 ರ 23ನೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಲಕ್ನೋದ ಆರಂಭಿಕ ಆಟಗಾರ ಮಿಚೆಲ್ ಮಾರ್ಷ್ ಆರ್‌ಸಿಬಿಯ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್‌ನಲ್ಲಿ ಅಮೋಘ ಸಿಕ್ಸರ್ ಬಾರಿಸಿದರು. ಮಾರ್ಷ್​ ಅವರ ಮಸಲ್ ಪವರ್ ಎಷ್ಟಿತ್ತೆಂದರೆ ಬ್ಯಾಟ್​ಗೆ ಬಡಿದ ಚೆಂಡು ಸ್ಟೇಡಿಯಂನಿಂದ ಹೊರ ಹೋಯಿತು. ಇದೀಗ ಅದರ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ ಎಲ್‌ಎಸ್‌ಜಿ ಮೊದಲು ಬ್ಯಾಟಿಂಗ್ ಮಾಡಿತು. ಮೂರನೇ ಓವರ್‌ ಎಸೆದ ಭುವನೇಶ್ವರ ಕುಮಾರ್ ಬೌಲಿಂಗ್‌ನಲ್ಲಿ ಮಿಚೆಲ್ ಮಾರ್ಷ್ ಬೃಹತ್ ಸಿಕ್ಸರ್ ಬಾರಿಸಿದರು. ಭುವನೇಶ್ವರ ಕುಮಾರ್ ಅವರ ಶಾರ್ಟ್ ಎಸೆತವನ್ನು ಆನ್‌ಸೈಡ್ ಕಡೆಗೆ ಮಾರ್ಷ್​ ಪುಲ್ ಶಾಟ್ ಹೊಡೆದರು. ಕ್ರೀಡಾಂಗಣದ ಛಾವಣಿಯ ಮೇಲೆ ಹಾರಿದ ಚೆಂಡು 102 ಮೀಟರ್ ದೂರ ಹೋಗಿ ಬಿತ್ತು. ಇದು ಈ ಆವೃತ್ತಿಯ ಮೂರನೇ ಅತಿ ಉದ್ದದ ಸಿಕ್ಸ್ ಆಗಿದೆ.

ಐಪಿಎಲ್ 2026 ರ ಅತಿ ಉದ್ದದ ಸಿಕ್ಸ್ ಪ್ರಸ್ತುತ ಟಿಮ್ ಡೇವಿಡ್ ಅವರ ಹೆಸರಿನಲ್ಲಿದೆ. ಅವರು ಇದೇ ಮೈದಾನದಲ್ಲಿ 106 ಮೀಟರ್ ಸಿಕ್ಸ್ ಹೊಡೆದಿದ್ದರು. ಕೂಪರ್ ಕಾನೊಲಿಯ ಅವರು ಬಾರಿಸಿದ್ದ 103 ಮೀಟರ್ ಸಿಕ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸಣ್ಣ ಬೌಂಡರಿಗಳು ಮತ್ತು ಬ್ಯಾಟ್ಸ್‌ಮನ್ ಸ್ನೇಹಿ ಪಿಚ್‌ನಲ್ಲಿ ಇಂತಹ ದೀರ್ಘ ಸಿಕ್ಸರ್‌ಗಳು ಹೆಚ್ಚಾಗಿ ಕಂಡುಬರುತ್ತವೆ.

ಲಕ್ನೋ ಸೂಪರ್ ಜೈಂಟ್ಸ್ ತಂಡವು ಕಳಪೆ ಆರಂಭ ಪಡೆಯಿತು. ಆದಾಗ್ಯೂ, ಮಿಚೆಲ್ ಮಾರ್ಷ್ 32 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಒಳಗೊಂಡಂತೆ ನಿರ್ಣಾಯಕ 40 ರನ್ ಗಳಿಸುವ ಮೂಲಕ ಇನ್ನಿಂಗ್ಸ್ ಅನ್ನು ಸ್ಥಿರಗೊಳಿಸಿದರು. ಆದಾಗ್ಯೂ, ಕೃನಾಲ್ ಪಾಂಡ್ಯ ಅವರ ಅದ್ಭುತ ಎಸೆತವು ಅವರ ಅರ್ಧಶತಕವನ್ನು ತಲುಪುವುದನ್ನು ತಡೆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ! – Kannada News | Karnataka youth congress leader And Zameer Close Aide afreen khan expelled from Party

ಬೆಂಗಳೂರು, (ಏಪ್ರಿಲ್ 15): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರಸ್​​ನಲ್ಲಿ  (Congress) ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಕೆಲವು ದಿನಗಳಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆ ನಡೆಯುತ್ತಿವೆ. ಬೈ ಎಲೆಕ್ಷನ್​​ ವೇಳೆ ಪಕ್ಷ ವಿರೋಧ ಚಟುವಟಿಕೆ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ಸಂಕಷ್ಟ ಎದುರಾಗಿದ್ದು, ಹೈಕಮಾಂಡ್ ಕ್ರಮದ ಬಗ್ಗೆ ಚಿಂತನೆ ನಡೆಸಿದೆ. ಇದರ ಮಧ್ಯೆ ಇದೀಗ ಜಮೀರ್ ಅಹ್ಮದ್ ಖಾನ್ ಆಪ್ತೆ, ಬೆಂಗಳೂರು ಉತ್ತರ ಜಿಲ್ಲಾ ಉಪಾಧ್ಯಕ್ಷೆ ಅಫ್ರಿನ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಸಣ್ಣಪುಟ್ಟ ನಾಯಕರ ತಪ್ಪನ್ನು ಗಂಭೀರವಾಗಿ ಪರಿಗಣಿಸುತ್ತಿರುವ ಕೆಪಿಸಿಸಿ, ಪಕ್ಷ ವಿರೋಧಿ, ಅಶಿಸ್ತು ರೀತಿ ನಡೆದುಕೊಳ್ಳುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಅದರಂತೆ ತೆ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತೆ ಅಫ್ರಿನ್ ಖಾನ್ ಅವರನ್ನ ಸಹ ಕಾಂಗ್ರೆಸ್​​ನಿಂದ ಉಚ್ಛಾಟನೆ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಬಣಕ್ಕೆ ಮತ್ತೊಂದು ಪೆಟ್ಟು ನೀಡಿದ ಡಿಕೆ ಶಿವಕುಮಾರ್: ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವದಿಂದ ಜಬ್ಬಾರ್ ಅಮಾನತು

ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಅಫ್ರಿನ್ ಖಾನ್ ಅವಹೇಳನಕಾರಿ ವಿಡಿಯೊವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಅಲ್ಲದೆ ರಿಜ್ವಾನ್ ಅರ್ಷದ್ ಅವರನ್ನು ‘ಮೀರ್ ಸಾದಿಕ್’ ಎಂದು ಉಲ್ಲೇಖಿಸಿ ಪೋಸ್ಟ್ ಮಾಡಿದ್ದು ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಅಫ್ರಿನ್ ಖಾನ್ ತಲೆದಂಡವಾಗಿದೆ.

ಮೂರ್ಖತನದ ನಿರ್ಧಾರ ಎಂದ ಅಫ್ರಿನ್ ಖಾನ್

ಇನ್ನು ಪಕ್ಷದಿಂದ ಉಚ್ಚಾಟನೆ ಆದೇಶಕ್ಕೆ ಪ್ರತಿಕ್ರಿಯಿಸಿದ ಅಫ್ರಿನ್ ಖಾನ್ ಪಕ್ಷದ ವಿರುದ್ಧ ಸಿಡಿದೆದ್ದಾರೆ. ʼʼನಾನು ಏಪ್ರಿಲ್ 4ರಂದೇ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ. ಆದರೆ ಇಂದು ನನ್ನನ್ನು ಹೊರಹಾಕಲಾಗಿದೆ. ಇದು ಮೂರ್ಖತನದ ನಿರ್ಧಾರʼʼ ಎಂದು ಲೇವಡಿ ಮಾಡಿದ್ದಾರೆ.

ಜಮೀರ್ ವಿರುದ್ಧವೂ ಕ್ರಮಕ್ಕೆ ಚಿಂತನೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗದೆ, ಪಕ್ಷದ ಒಂದಿಷ್ಟು ಅಲ್ಪಸಂಖ್ಯಾತ ಹಿರಿಯ ಮುಖಂಡರು ಪಕ್ಷವನ್ನು ಸೋಲಿಸಲು ಹುನ್ನಾರ ಮಾಡಿದ್ದಾರೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವರಿಷ್ಠರು, ಮೇಲ್ಮನೆ ಸದಸ್ಯರಾದ ಅಬ್ದುಲ್‌ ಜಬ್ಬಾರ್‌ ಮತ್ತು ನಸೀರ್‌ ಅಹ್ಮದ್ ವಿರುದ್ಧ ಕ್ರಮಕೈಗೊಂಡಿದೆ. ಇದೀಗ ಹಿಟ್ ಲಿಸ್ಟ್​​ನಲ್ಲಿ ಜಮೀರ್ ಅಹ್ಮದ್ ಖಾನ್ ಸಹ ಇದ್ದು, ಅವರನ್ನು ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆ. ಆದ್ರೆ, ಮಂತ್ರಿಮಂಡಲದಿಂದ ವಜಾ ಮಾಡಿದರೆ ತಪ್ಪು ಸಂದೇಶ ಹೋಗುತ್ತೆ. ಇದರಿಂದ ಬೇರೆ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ. ಹೀಗಾಗಿ ಜಮೀರ್ ಅವರನ್ನ ಏಕಾಏಕಿ ಸಚಿವ ಸ್ಥಾನದಿಂದ ವಜಾ ಮಾಡುವುದು ಅಷ್ಟು ಸರಿಯಲ್ಲ ಎಂದು ಹೈಕಮಾಂಡ್​​ಗೆ ತಿಳಿಸಿಲಾಗಿದೆ. ಹೀಗಾಗಿ ಹೈಕಮಾಂಡ್ ಜಮೀರ್ ಅಹ್ಮದ್ ಖಾನ್ ವಿಷಯದಲ್ಲಿ ಕಾದು ನೋಡುವ ಮೊರೆ ಹೋಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:08 pm, Wed, 15 April 26

Source link

Exit mobile version