ತಿರುಪತಿಗೆ ರೈಲು ಸಿಗದಿದ್ದಕ್ಕೆ ಎಣ್ಣೆ ಮತ್ತಿನಲ್ಲಿ ಆರ್ಟಿಸಿ ಬಸ್ಸನ್ನೇ ಕದ್ದು ಓಡಿಸಿದ ವ್ಯಕ್ತಿ, ಟೋಲ್ ಗೇಟ್ನಲ್ಲಿ ಸಿಕ್ಕಿಬಿದ್ದ – Kannada News | Telangana: Drunk Man Steals RTC Bus for Tirupati After Missing Train, Caught at Toll
ಜನಗಾಂವ್, ಜುಲೈ 10: ಮದ್ಯದ ಅಮಲಿನಲ್ಲಿ ಮನುಷ್ಯ ಏನೆಲ್ಲಾ ಮಾಡಲು ಸಾಧ್ಯ ಎಂಬುದಕ್ಕೆ ತೆಲಂಗಾಣದ ಜನಗಾಂವ್ ಜಿಲ್ಲೆಯಲ್ಲಿ ನಡೆದಿರುವ ಈ ವಿಲಕ್ಷಣ ಘಟನೆಯೇ ಸಾಕ್ಷಿ. ತಿರುಪತಿಗೆ ಹೋಗಲು ರೈಲು ಸಿಗಲಿಲ್ಲ ಎಂಬ ಒಂದೇ ಒಂದು ಕಾರಣಕ್ಕೆ, ಟ್ರ್ಯಾಕ್ಟರ್ ಚಾಲಕನೊಬ್ಬ ಬಸ್ ನಿಲ್ದಾಣದಲ್ಲಿದ್ದ ಸರ್ಕಾರಿ ಆರ್ಟಿಸಿ (RTC) ಬಸ್ಸನ್ನೇ ಕದ್ದು ಬರೋಬ್ಬರಿ 21 ಕಿಲೋಮೀಟರ್ ಓಡಿಸಿಕೊಂಡು ಹೋಗಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಂತಿಮವಾಗಿ ಟೋಲ್ ಪ್ಲಾಜಾ ಬಳಿ ಬಸ್ ಅಪಘಾತ(Accident)ಕ್ಕೀಡಾದಾಗ ಈ ಕಳ್ಳತನ ಬಯಲಾಗಿದೆ. ಪೊಲೀಸರ ಪ್ರಕಾರ,…