ಪ್ರಧಾನಿ ಮೋದಿಗೆ ಕರೆ ಮಾಡಿದ ಇಸ್ರೇಲ್ ಪಿಎಂ ನೆತನ್ಯಾಹು; ಗಾಜಾ ಶಾಂತಿ ಯೋಜನೆ ಕುರಿತು ಚರ್ಚೆ – Kannada News | Israeli PM Benjamin Netanyahu Calls PM Modi Discuss Strategic Partnership and Gaza Peace Plan Status

ನವದೆಹಲಿ, ಜನವರಿ 7: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿ ಕರೆ ಮಾಡಿದ್ದರು. ಫೋನ್​ನಲ್ಲಿ ತಮ್ಮ ಗೆಳೆಯ ನೆತನ್ಯಾಹು ಜೊತೆ ಮಾತನಾಡಿದ ಮೋದಿ (PM Modi) ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. “ಇಬ್ಬರು ನಾಯಕರು ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಎರಡೂ ದೇಶಗಳ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ಹಾರೈಸಿದರು” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. ಗಾಜಾ ಶಾಂತಿ ಯೋಜನೆಯ ಅನುಷ್ಠಾನದ ಕುರಿತು ನೆತನ್ಯಾಹು ಪ್ರಧಾನ ಮಂತ್ರಿ ಮೋದಿಗೆ ವಿವರಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು. ಎಕ್ಸ್​ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪವನ್ನು ಹೆಚ್ಚಿನ ದೃಢನಿಶ್ಚಯದಿಂದ ಪುನರುಚ್ಚರಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ

“ನನ್ನ ಸ್ನೇಹಿತರಾದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಕ್ಕೆ, ಅವರಿಗೆ ಮತ್ತು ಇಸ್ರೇಲ್ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿ ಸಂತೋಷವಾಗಿದೆ. ಮುಂಬರುವ ವರ್ಷದಲ್ಲಿ ಭಾರತ-ಇಸ್ರೇಲ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ನಾವು ಚರ್ಚಿಸಿದ್ದೇವೆ” ಎಂದು ನರೇಂದ್ರ ಮೋದಿ ಹೇಳಿದರು.

“ನಾವು ಪ್ರಾದೇಶಿಕ ಪರಿಸ್ಥಿತಿಯ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಇನ್ನೂ ಹೆಚ್ಚಿನ ದೃಢನಿಶ್ಚಯದಿಂದ ಭಯೋತ್ಪಾದನೆಯನ್ನು ಎದುರಿಸಲು ನಮ್ಮ ದೃಢಸಂಕಲ್ಪವನ್ನು ಪುನರುಚ್ಚರಿಸಿದ್ದೇವೆ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

2026ರಲ್ಲಿ ಭಾರತ ಮತ್ತು ಇಸ್ರೇಲ್ ನಾಯಕರ ನಡುವಿನ ಮೊದಲ ನೇರ ಸಂಭಾಷಣೆ ಇದಾಗಿದೆ. ಕಳೆದ ವರ್ಷ ಡಿಸೆಂಬರ್ 11ರಂದು ಪ್ರಧಾನಿ ಮೋದಿ ಅವರಿಗೆ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಬಂದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸ್ಟಾರ್ ಹೀರೋಗಳ ಜೊತೆ ಕೆಲಸ ಮಾಡಿದ ಆ ನಿರ್ದೇಶಕ ಸಲಿಂಗಿ – Kannada News | Bollywood’s Hidden Truth: Simi Chandhok Reveals Gay Director who work with Salman Khan

ಸ್ಟಾರ್ ಹಿರೋಗಳು, ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರು ತಮ್ಮ ಲೈಂಗಿಕತೆ ಬಗ್ಗೆ ಮಾತನಾಡೋಕೆ ಹೆಚ್ಚು ಇಷ್ಟಪಡೋದಿಲ್ಲ. ಕರಣ್ ಜೋಹರ್ ಅವರು ಪರುಷಪ್ರಿಯ ಎಂಬ ಆರೋಪ ಇದೆ. ಆದರೆ, ಇದನ್ನು ಅವರು ಒಪ್ಪಿಕೊಳ್ಳೋದಿಲ್ಲ. ಹೀಗಿರುವಾಗಲೇ ಹಿರಿಯ ಪತ್ರಕರ್ತೆ ಸಿಮಿ ಚಂದೋಕ್ ಅವರು ಒಂದು ಬಾಂಬ್ ಸಿಡಿಸಿದ್ದಾರೆ. ಹಲವು ಸ್ಟಾರ್​​ಗಳ ಜೊತೆ ಕೆಲಸ ಮಾಡಿದ ನಿರ್ದೇಶಕ ಸಲಿಂಗಿ ಎಂದು ಆರೋಪ ಮಾಡಿದ್ದಾರೆ.

ಬಾಲಿವುಡ್ ಹೀರೋಗಳು ಈ ವಿಷಯವನ್ನು ಯಾಕೆ ಓಪನ್ ಆಗಿ ಒಪ್ಪಿಕೊಳ್ಳೋದಿಲ್ಲ ಎಂಬುದಕ್ಕೆ ಸಿಮಿ ಉತ್ತಮ ಉದಾಹರಣೆ ನೀಡಿದ್ದಾರೆ. ‘ಬಾಲಿವುಡ್ ನಟನೋರ್ವ ತಾನು ಗೇ ಎಂದು ಒಪ್ಪಿಕೊಂಡ ಎಂದಿಟ್ಟುಕೊಳ್ಳಿ. ಆ ಬಳಿಕ ಆತ ಸಿನಿಮಾದಲ್ಲಿ ಹೀರೋಯಿನ್ ಜೊತೆ ರೊಮ್ಯಾಂಟಿಕ್ ಆಗಿ ಕಾಣಿಸಿಕೊಳ್ಳುತ್ತಾನೆ. ಇದನ್ನು ಪ್ರೇಕ್ಷಕ ಒಪ್ಪಿಕೊಳ್ಳುತ್ತಾನಾ’ಎಂದು ಅವರು ಪ್ರಶ್ನೆ ಮಾಡಿದ್ದಾರೆ.

‘ಬಾಲಿವುಡ್​ನ ಓರ್ವ ಖ್ಯಾತ ನಿರ್ದೇಶಕ ಸಲಿಂಗಿ. ಅವರ ಹೆಸರನ್ನು ನಾನು ಇಲ್ಲಿ ಹೇಳುವುದಿಲ್ಲ. ಅವರು ಸಲ್ಮಾನ್ ಖಾನ್, ರಣವೀರ್ ಸಿಂಗ್, ಹೃತಿಕ್ ರೋಷನ್, ಶಾಹಿದ್ ಕಪೂರ್ ಹಾಗೂ ಇತರರ ಜೊತೆ ಕೆಲಸ ಮಾಡಿದ್ದಾರೆ. ಅವರು ಗೇ ಎಂದು ಆ ನಟರೆಲ್ಲರಿಗೂ ಗೊತ್ತು. ಮಹಿಳೆಯರ ಜೊತೆ ಆತ ಹೆಚ್ಚು ಸಮಯ ಇರೋದಿಲ್ಲ’ ಎಂದಿದ್ದಾರೆ ಅವರು.
‘ಓರ್ವ ನಿರ್ದೇಶಕ ತನ್ನ ಲೈಂಗಿಕತೆಯ ಬಗ್ಗೆ ಬಹಿರಂಗವಾಗಿ ಹೇಳಿದರೆ, ಅನೇಕ ಪ್ರಮುಖ ನಟರು ಅವರೊಂದಿಗೆ ಕೆಲಸ ಮಾಡಲು ಹಿಂಜರಿಯುತ್ತಾರೆ. ಹೀರೋಗಳು ಕಾಸ್ಟಿಂಗ್ ಕೌಚ್‌ಗೆ ಹೆದರುತ್ತಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಲಿವುಡ್ ವೇದಿಕೆಯಲ್ಲಿ ತುಳು ಸಿನಿಮಾವನ್ನು ಕೊಂಡಾಡಿದ ಸುನಿಲ್ ಶೆಟ್ಟಿ

‘ಅನೇಕ ನಟರಿಗೆ ಆರಂಭಿಕ ದಿನಗಳಲ್ಲಿ ಕಾಂಪ್ರಮೈಸ್ ಆಗುವಂತೆ ಕೇಳಲಾಯಿತು. ಆಯುಷ್ಮಾನ್ ಖುರಾನಾ, ರಣವೀರ್ ಸಿಂಗ್ ಇದನ್ನು ಓಪನ್ ಆಗಿ ಹೇಳಿದ್ದಾರೆ. ಶಾರುಖ್ ಖಾನ್ ಹಾಗೂ ಕರಣ್ ಜೋಹರ್ ಸಂಬಂಧದ ಬಗ್ಗೆ ಚರ್ಚೆ ಆಗಿತ್ತು. ಶಾರುಖ್ ಖಾನ್ ಇದನ್ನು ತಳ್ಳಿ ಹಾಕಿದ್ದರು’ ಎಂದು ಹಳೆಯ ಘಟನೆ ನೆನಪಿಸಿಕೊಂಡಿದ್ದಾರೆ. ಈಗ ಆ ನಿರ್ದೇಶಕ ಯಾರು ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 3:04 pm, Wed, 7 January 26

Source link

ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು – Kannada News | Hubballi Police assault On BJP Worker During arrest Alleged By Woman Mother

ಹುಬ್ಬಳ್ಳಿ, (ಜನವರಿ 07): ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು, ಬಿಜೆಪಿ ಕಾರ್ಯಕರ್ತೆಯನ್ನ ಬಟ್ಟೆಬಿಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದ್ರೆ, ಮಹಿಳೆಯೇ ವಿವಸ್ತ್ರಗೊಂಡು ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ನಡುವೆ ಮಹಿಳೆಯ ತಾಯಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿ ಕಣ್ಣೀರಿಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ – Kannada News | Youth ODI: India U19 Dominates SA with 392 Runs; Vaibhav, Aaron Century Stars

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಯೂತ್ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 392 ರನ್​ಗಳ ಬೃಹತ್ ಮೊತ್ತ ಕಲೆಹಾಕಿದೆ. ಈ ಮೂಲಕ ಆಫ್ರಿಕಾ ಗೆಲುವಿಗೆ 393 ರನ್​ಗಳ ಟಾರ್ಗೆಟ್ ನೀಡಿದೆ. ಟೀಂ ಇಂಡಿಯಾ ಪರ ಆರಂಭಿಕರಿಬ್ಬರು ಶತಕದ ಇನ್ನಿಂಗ್ಸ್ ಆಡಿದರು. ಆರನ್ ಜಾರ್ಜ್​ 118 ರನ್​ಗಳ ಇನ್ನಿಂಗ್ಸ್ ಆಡಿದರೆ, ನಾಯಕ ವೈಭವ್ ಸೂರ್ಯವಂಶಿ ಕೂಡ ಸ್ಫೋಟಕ 127 ರನ್ ಬಾರಿಸಿದರು.

ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿರುವ ಭಾರತ ತಂಡ, ಈ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲಬೇಕಾದರೆ, ಟೀಂ ಇಂಡಿಯಾ ಬೃಹತ್ ಮೊತ್ತವನ್ನು ಕಲೆಹಾಕಬೇಕಿತ್ತು. ಅದರಂತೆ ಮೊದಲು ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪರ ಆರನ್ ಜಾರ್ಜ್​ ಹಾಗೂ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ಒದಗಿಸಿಕೊಟ್ಟರು.

ಈ ಜೋಡಿ ಮೊದಲ 6 ಓವರ್​ಗಳಲ್ಲೇ ತಂಡವನ್ನು 50 ರನ್​ಗಳ ಗಡಿ ದಾಟಿಸಿದರು. ಆರಂಭದಿಂದಲೂ ಎಂದಿನಂತೆ ಹೊಡಿಬಡಿ ಆಟವನ್ನಾಡಿದ ನಾಯಕ ವೈಭವ್ ಹಾಗೂ ಆರನ್ ಆಫ್ರಿಕಾ ಬೌಲರ್​ಗಳನ್ನು ಕಾಡಿದರು. ಇನ್ನಿಂಗ್ಸ್​ನ 7ನೇ ಓವರ್​ನಲ್ಲಿ ಬೌಂಡರಿಗಳ ಮಳೆಗರೆದ ವೈಭವ್ 2 ಸಿಕ್ಸರ್ ಹಾಗೂ 2 ಬೌಂಡರಿ ಬಾರಿಸಿ, 8ನೇ ಓವರ್​ನಲ್ಲಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಜಾರ್ಜ್​ ಕೂಡ 32 ಎಸೆತಗಳಲ್ಲಿ ಅರ್ಧಶತಕ ದಾಟಿದರು. ಇಲ್ಲಿಗೆ ನಿಲ್ಲದ ಇವರಿಬ್ಬರು ತಲಾ ಶತಕ ಕೂಡ ಬಾರಿಸಿದರು.

ವೈಭವ್ ಸೂರ್ಯವಂಶಿ ಕೇವಲ 63 ಎಸೆತಗಳಲ್ಲಿ ಎಂಟು ಸಿಕ್ಸರ್ ಮತ್ತು ಆರು ಬೌಂಡರಿಗಳ ಸಹಿತ ಶತಕ ಬಾರಿಸಿದರು. ಶತಕದ ಬಳಿಕ ಹೆಚ್ಚು ಹೊತ್ತು ನಿಲ್ಲದ ವೈಭವ್ 10 ಸಿಕ್ಸರ್ ಮತ್ತು ಒಂಬತ್ತು ಬೌಂಡರಿಗಳನ್ನು ಒಳಗೊಂಡಂತೆ ಒಟ್ಟು 127 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇದು ವೈಭವ್ ಅವರ ಅಂಡರ್-19 ಏಕದಿನ ವೃತ್ತಿಜೀವನದಲ್ಲಿ ಮೂರನೇ ಶತಕವಾಗಿದೆ. ಈ ಹಿಂದೆ ಅವರು ಇಂಗ್ಲೆಂಡ್ ಮತ್ತು ಯುಎಇ ಅಂಡರ್-19 ತಂಡದ ವಿರುದ್ಧ ಎರಡು ಶತಕಗಳನ್ನು ಬಾರಿಸಿದ್ದರು. ಆದರೆ ನಾಯಕನಾಗಿ ವೈಭವ್​ಗೆ ಇದು ಮೊದಲ ಶತಕವಾಗಿದೆ.

ಆದಾಗ್ಯೂ ಈ ಜೋಡಿ ಮೊದಲ ವಿಕೆಟ್​ಗೆ 227 ರನ್​ಗಳ ದಾಖಲೆಯ ಜೊತೆಯಾಟ ನೀಡಿತು. ಇದಕ್ಕೆ ತೆಗೆದುಕೊಂಡಿದ್ದು, ಕೇವಲ 26 ಓವರ್​ಗಳು ಮಾತ್ರ. ಇವರಿಬ್ಬರು ಇರುವವರೆಗೆ ತಂಡ 500 ರನ್ ಕಲೆಹಾಕುವ ಲಕ್ಷಣಗಳು ಗೋಚರಿಸಿದವು. ಆದರೆ ವೈಭವ್ ಔಟಾದ ಬಳಿಕ ಸ್ಕೋರ್ ಬೋರ್ಡ್​ ವೇಗ ಕುಸಿಯಿತು. ಜಾರ್ಜ್​ ಕೂಡ ಶತಕ ಬಾರಿಸಿದ ಬೆನ್ನಲ್ಲೇ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಜಾರ್ಜ್​ 106 ಎಸೆತಗಳಲ್ಲಿ 16 ಬೌಂಡರಿ ಸಹಿತ 118 ರನ್ ಬಾರಿಸಿದರು.

ಆ ಬಳಿಕ ಬಂದ ವೇದಾಂತ್ 34 ರನ್​ಗಳ ಕಾಣಿಕೆ ನೀಡಿದರೆ, ಅಭಿಗ್ಯಾನ್ ಇನ್ನಿಂಗ್ಸ್ ಕೂಡ 21 ರನ್​ಗಳಿಗೆ ಅಂತ್ಯವಾಯಿತು. ಇಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಆಫ್ರಿಕಾ ವೇಗಿಗಳು ಭಾರತ ತಂಡವನ್ನು 400 ರನ್​ಗಳ ಗಡಿ ದಾಟದಂತೆ ನೋಡಿಕೊಂಡರು. ಕೊನೆಯಲ್ಲಿ ಮೊಹಮ್ಮದ್ 28 ರನ್, ಹೆನಿಲ್ 19 ರನ್ ಬಾರಿಸಿ ತಂಡವನ್ನು 400 ರನ್​ಗಳ ಸನಿಹಕ್ಕೆ ತಂದರು. ಆಫ್ರಿಕಾ ಪರ ಸೋನಿ 3 ವಿಕೆಟ್ ಪಡೆದರು.

Source link

Personality Test: ಈ ಚಿತ್ರದಲ್ಲಿ ನಿಮಗೆ ಮೊದಲು ಕಾಣಿಸುವ ಅಂಶ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ರಿವೀಲ್‌ ಮಾಡುತ್ತೆ – Kannada News | Personality Test: Discover the secret of your personality through this optical illusion picture

ಪ್ರತಿಯೊಬ್ಬರ ವ್ಯಕ್ತಿತ್ವ, ಅವರ ನಡೆ ನುಡಿ, ಭಾವನಾತ್ಮಕ ನಿಲುವು, ಪ್ರೀತಿ ವ್ಯಕ್ತಪಡಿಸುವ ರೀತಿ ಇವೆಲ್ಲವೂ ಭಿನ್ನವಾಗಿರುತ್ತವೆ. ಸಂಖ್ಯಾಶಾಸ್ತ್ರ, ಜ್ಯೋತಿಷ್ಯಶಾಸ್ತ್ರಗಳ ಮೂಲಕ ಈ ನಿಗೂಢ ಸ್ವಭಾವಗಳ ಬಗ್ಗೆ ತಿಳಿದುಕೊಳ್ಳುವಂತೆ ವ್ಯಕ್ತಿತ್ವ ಪರೀಕ್ಷೆಯ ಮೂಲಕವೂ ಪರೀಕ್ಷಿಸಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಈ ವ್ಯಕ್ತಿತ್ವ ಪರೀಕ್ಷೆಯ ವಿಧವಾಗಿದ್ದು, ಈ ಚಿತ್ರಗಳಲ್ಲಿ ಮೊದಲು ಕಾಣಿಸುವ ಅಂಶಗಳ ಆಧಾರದ ಮೇಲೆ ನಾವು ನಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ತಿಳಿಯಬಹುದಾಗಿದೆ. ಇಲ್ಲೊಂದು ಅಂತಹದ್ದೇ ಚಿತ್ರ ಹರಿದಾಡುತ್ತಿದ್ದು, ಬೆಕ್ಕು, ಫ್ರೈಡ್‌ ಎಗ್‌ ಅಥವಾ ಕಿತ್ತಳೆ ಅದರಲ್ಲಿ ನಿಮ್ಮ ಕಣ್ಣಿಗೆ ಮೊದಲು ಕಾಣಿಸಿದ್ದೇನು ಎಂಬುದರ ಮೇರೆಗೆ ನೀವು ಭಾವನಾತ್ಮಕ ವ್ಯಕ್ತಿಯೇ ಎಂಬುದನ್ನು ಟೆಸ್ಟ್‌ ಮಾಡಿ.

ನಿಮ್ಮ ವ್ಯಕ್ತಿತ್ವದ ರಹಸ್ಯವನ್ನು ತಿಳಿಸುತ್ತೆ ಈ ಚಿತ್ರ:

ಈ ಚಿತ್ರದಲ್ಲಿ ಮಲಗಿರುವ ಬೆಕ್ಕು, ಫ್ರೈಡ್‌ ಎಗ್‌ ಮತ್ತು ಕಿತ್ತಳೆ ಈ ಮೂರು ಅಂಶಗಳಿದ್ದು, ಇದರಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು ಎಂಬುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೇಗಿದೆ ಎಂಬುದನ್ನು ಪರೀಕ್ಷಿಸಿ.

ಕಿತ್ತಳೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಕಿತ್ತಳೆ ಹಣ್ಣನ್ನು ನೋಡಿದ್ದರೆ, ಅದರರ್ಥ ನೀವು ಪ್ರಕಾಶಮಾನವಾದ ಆಂತರಿಕ ಶಕ್ತಿ ಮತ್ತು ಬಲವಾದ ಜೀವ ಶಕ್ತಿ ಹೊಂದಿರುವ ವ್ಯಕ್ತಿ. ನೀವು ಸಂತೋಷ, ಮತ್ತು ಭಾವನಾತ್ಮಕ ಪ್ರಾಮಾಣಿಕತೆಯನ್ನು ಹಂಬಲಿಸುತ್ತೀರಿ. ಏನಾದರೂ ಕೆಟ್ಟದ್ದು ಸಂಭವಿಸಿದರೆ ನೀವು ಬಹಳ ಬೇಗನೇ ಬೇಸರಗೊಳ್ಳುತ್ತೀರಿ. ಇನ್ನೂ ನಿಮ್ಮ ಮನಸ್ಥಿತಿ ಉತ್ತಮವಾಗಿದ್ದಾಗ, ನೀವು ಇತರರಿಗೆ ಸ್ಫೂರ್ತಿಯನ್ನು ತುಂಬುತ್ತೀರಿ.

ಇದನ್ನೂ ಓದಿ: ಕಣ್ಣಿನ ಬಣ್ಣದಿಂದ ತಿಳಿಯಬಹುದು ವ್ಯಕ್ತಿಯ ವ್ಯಕ್ತಿತ್ವದ ರಹಸ್ಯ

ಬೆಕ್ಕು: ಈ ನಿರ್ಧಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಬೆಕ್ಕನ್ನು ನೋಡಿದರೆ, ನೀವು ಅರ್ಥಗರ್ಭಿತರು, ಸ್ವತಂತ್ರರು ಮತ್ತು ಆಳವಾಗಿ ಗ್ರಹಿಸುವ ಸಾಮರ್ಥ್ಯವನ್ನು ಹೊಂದಿರುವವರು ಎಂದರ್ಥ.  ನೀವು ವೈಯಕ್ತಿಕ ಸ್ಥಳ ಮತ್ತು ಭಾವನಾತ್ಮಕ ಸುರಕ್ಷತೆಯನ್ನು ಗೌರವಿಸುವ ವ್ಯಕ್ತಿಯಾಗಿರುತ್ತೀರಿ.

ಫ್ರೈಡ್‌ ಎಗ್:‌ ನೀವು ಮೊದಲು ಹುರಿದ ಮೊಟ್ಟೆಗಳನ್ನು ನೋಡಿದರೆ, ನೀವು ದೃಢ ಮನಸ್ಸಿನವರು, ಪ್ರಾಯೋಗಿಕರು ಮತ್ತು ಭಾವನಾತ್ಮಕವಾಗಿ ಪ್ರಾಮಾಣಿಕರು ಎಂದರ್ಥ. ನೀವು ಇಷ್ಟವಾದರೂ ಇಷ್ಟವಾಗದಿದ್ದರೂ ಜನ ನಿಮ್ಮ ಬಳಿ ಸಲಹೆ ಕೇಳಲು ಯಾವಾಗಲೂ ಬರುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು – Kannada News | I Don’t Know How Long Will I Stay In Politics Says Siddaramaiah Amid Power Tussle

ಹಾವೇರಿ (ಜನವರಿ 07): ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ (Siddaramaiah) ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಹೌದು…ದೇವರಾಜು ಅರಸು ಅವರ ದಾಖಲೆ ಅಳಿಸಿ ಇವತ್ತಿಗೆ ಸಿದ್ದರಾಮಯ್ಯ ತಮ್ಮ ಹೆಸರಲ್ಲಿ ದಾಖಲೆ ಬರೆದಿದ್ದಾರೆ. ಕರ್ನಾಟಕದ ದೀರ್ಘಾವಧಿ ಸಿಎಂ ಆಗಿ ಸಿದ್ದರಾಮಯ್ಯ ರಾಜಕೀಯದಲ್ಲಿ ಮಿಂಚಿದ್ದಾರೆ. ಈ ನಡುವೆ ಪವರ್ ಶೇರ್ ಕಥೆ ಏನು? ಸಿದ್ದರಾಮಯ್ಯ ನೆಕ್ಸ್ಟ್ ಗೇಮ್ ಏನು? ಎಂಬ ಕುತೂಹಲ ಇದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನರ ಆಶೀರ್ವಾದದಿಂದ ದಾಖಲೆ ಬರೆದಿದ್ದೀನಿ, ಇನ್ನೆಷ್ಟು ದಿನ ಇರ್ತಿನೋ ಎನ್ನುವ ಅಚ್ಚರಿ ಮಾತುಗಳನ್ನಾಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಕಾಂಗ್ರೆಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರ ವಿರುದ್ಧ ಸಿಎಂ ಫಡ್ನವೀಸ್ ವಾಗ್ದಾಳಿ, ಕಠಿಣ ಕ್ರಮದ ಎಚ್ಚರಿಕೆ – Kannada News | Devendra Fadnavis angry on BJP Leaders for alliance with Congress in Ambernath local body

ಮುಂಬೈ, ಜನವರಿ 7: ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು (ಜನವರಿ 7) ಕಾಂಗ್ರೆಸ್ ಜೊತೆಗಿನ ಯಾವುದೇ ಮೈತ್ರಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಂತಹ ಒಪ್ಪಂದವನ್ನು “ಸ್ವೀಕಾರಾರ್ಹವಲ್ಲ” ಎಂದು ಕರೆದಿದ್ದಾರೆ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಫಡ್ನವೀಸ್ ಅಸಮಾಧಾನ ಹೊರಹಾಕಿದ್ದಾರೆ. ಅವರು ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಂಬರ್ನಾಥ್ ಮುನ್ಸಿಪಲ್ ಕೌನ್ಸಿಲ್‌ನಲ್ಲಿ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ಬಂದಿದೆ. ಅಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಕೈಜೋಡಿಸಿವೆ ಎಂದು ವರದಿಯಾಗಿದೆ. ಈ ಕ್ರಮವು ಮಹಾರಾಷ್ಟ್ರ ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ

“ಕಾಂಗ್ರೆಸ್ ಜೊತೆಗಿನ ಮೈತ್ರಿ ಸ್ವೀಕಾರಾರ್ಹವಲ್ಲ. ಅಂಬರ್ನಾಥ್‌ನಲ್ಲಿ ಸ್ಥಳೀಯ ಮಟ್ಟದಲ್ಲಿ ತೆಗೆದುಕೊಂಡ ನಿರ್ಧಾರವನ್ನು ಸರಿಪಡಿಸಲಾಗುವುದು. ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇರುವುದಿಲ್ಲ” ಎಂದು ಫಡ್ನವೀಸ್ ಹೇಳಿದ್ದಾರೆ.

“ಕಾಂಗ್ರೆಸ್ ಮುಕ್ತ ಭಾರತ”ಕ್ಕಾಗಿ ಬಿಜೆಪಿಯ ದೀರ್ಘಕಾಲದ ಅಭಿಯಾನದ ಹೊರತಾಗಿಯೂ ಮುಂಬೈನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಅಂಬರ್ನಾಥ್​​ನಲ್ಲಿ ಶಿವಸೇನೆಯ ಶಿಂಧೆ ಬಣವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದಾಗಿ ಬಿಜೆಪಿ-ಕಾಂಗ್ರೆಸ್ ಮೈತ್ರಿಯು ರಾಜಕೀಯ ವಲಯಗಳಲ್ಲಿ ತೀಕ್ಷ್ಣ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಅಲ್ಲಿನ ಕಾಂಗ್ರೆಸ್-ಬಿಜೆಪಿ ಮೈತ್ರಿಕೂಟಕ್ಕೆ ಅಂಬರ್ನಾಥ್ ವಿಕಾಸ್ ಅಘಾಡಿ ಎಂದು ಹೆಸರಿಸಲಾಗಿದೆ. ಈ ಬೆಳವಣಿಗೆಗಳು ಶಿವಸೇನೆಯ ಶಿಂಧೆ ಬಣದಲ್ಲಿ ಗಮನಾರ್ಹ ಅಸಮಾಧಾನವನ್ನು ಉಂಟುಮಾಡಿದೆ. ಬಿಜೆಪಿ-ಕಾಂಗ್ರೆಸ್ ಮೈತ್ರಿಕೂಟದ ನಂತರ ಶಿಂಧೆ ಬಣವು ಕೋಪಗೊಂಡಿದೆ.

ಇದನ್ನೂ ಓದಿ: ಸ್ಥಳೀಯ ಸಂಸ್ಥೆ ಚುನಾವಣೆ: JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ

ಶಿವಸೇನೆಯ ಶಿಂಧೆ ಬಣದ ಭದ್ರಕೋಟೆ ಎಂದು ಅಂಬರ್ನಾಥ್ ಪರಿಗಣಿಸಲಾಗಿದೆ. ಏಕನಾಥ್ ಶಿಂಧೆ ಅವರ ಮಗ ಶ್ರೀಕಾಂತ್ ಶಿಂಧೆ ಈ ಕ್ಷೇತ್ರದ ಸಂಸದರಾಗಿದ್ದಾರೆ. ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಯಲ್ಲಿ ಶಿಂಧೆ ಬಣವು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಆದರೆ ಬಹುಮತಕ್ಕೆ ಸ್ವಲ್ಪ ಕಡಿಮೆ ಇತ್ತು. ಬಿಜೆಪಿಯ ಅಭ್ಯರ್ಥಿಯನ್ನು ಮೇಯರ್ ಆಗಿ ಆಯ್ಕೆ ಮಾಡಲಾಯಿತು. ಮುನ್ಸಿಪಲ್ ಕೌನ್ಸಿಲ್ ಸರ್ಕಾರ ರಚಿಸಲು ಬಿಜೆಪಿ ತಮ್ಮೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಶಿಂಧೆ ಬಣ ನಿರೀಕ್ಷಿಸಿತ್ತು. ಆದರೆ, ಅನಿರೀಕ್ಷಿತ ತಿರುವಿನಲ್ಲಿ ಶಿಂಧೆ ಬಣವನ್ನು ಬೈಪಾಸ್ ಮಾಡಿ ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಜೊತೆ ಕೌನ್ಸಿಲ್ ಸರ್ಕಾರವನ್ನು ಬಿಜೆಪಿ ರಚಿಸಿತು. ಈ ನಿರ್ಧಾರವು ತೀಕ್ಷ್ಣವಾದ ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 3:57 pm, Wed, 7 January 26

Source link

‘ನಮ್ಮ ಬ್ಯಾಟ್ ಬಳಸಬೇಡಿ’; ಬಾಂಗ್ಲಾ ಆಟಗಾರರೊಂದಿಗಿನ ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ – Kannada News | BCCI vs BCB: SG Ends Bangladesh Cricket Sponsorship After IPL Ban

ಏಟಿಗೆ ಎದುರೇಟು ನೀಡುವುದನ್ನು ಭಾರತೀಯರಿಗೆ ಹೊಸದಾಗಿ ಕಲಿಸಿಕೊಡಬೇಕಿಲ್ಲ. ಅದರಲ್ಲೂ ಕ್ರಿಕೆಟ್ ವಿಚಾರಕ್ಕೆ ಬಂದರೆ ಭಾರತೀಯರ ಮುಂದೆ ನಿಲ್ಲುವವರಿಲ್ಲ. ಹೀಗಿರುವಾಗ ವಿಶ್ವ ಕ್ರಿಕೆಟ್​ನ ದೊಡ್ಡಣ್ಣ ಎನಿಸಿಕೊಂಡಿರುವ ಬಿಸಿಸಿಐನ (BCCI) ಎದುರು ಹಾಕಿಕೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (BCB) ಸಂಕಷ್ಟದ ದಿನಗಳು ಆರಂಭವಾಗಿವೆ ಎನ್ನಬಹುದು. ಬಾಂಗ್ಲಾದೇಶದಲ್ಲಿ ಐಪಿಎಲ್ (IPL) ಪ್ರದರ್ಶನವನ್ನು ನಿಷೇಧಿಸಿದ ನಂತರ, ಅಲ್ಲಿನ ಬ್ಯಾಟ್ಸ್‌ಮನ್‌ಗಳು ಇನ್ನು ಮುಂದೆ ಭಾರತದ ಪ್ರಮುಖ ಬ್ಯಾಟ್ ತಯಾರಿಕಾ ಕಂಪನಿಯಾದ ಎಸ್‌ಜಿ ತಯಾರಿಸಿದ ಬ್ಯಾಟ್‌ಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ. ವರದಿಗಳ ಪ್ರಕಾರ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ಕ್ರಿಕೆಟಿಗರೊಂದಿಗಿನ ಒಪ್ಪಂದವನ್ನು ಎಸ್‌ಜಿ ಕೊನೆಗೊಳಿಸಲು ನಿರ್ಧರಿಸಿದೆ.

ಒಪ್ಪಂದ ಮುರಿದ ಭಾರತೀಯ ಬ್ಯಾಟ್ ಕಂಪನಿ

ಬಾಂಗ್ಲಾದೇಶದ ಅನೇಕ ಬ್ಯಾಟ್ಸ್‌ಮನ್‌ಗಳು ಎಸ್‌ಜಿ ಬ್ಯಾಟ್‌ಗಳನ್ನು ಬಳಸುತ್ತಾರೆ. ಅದರಲ್ಲಿ ಪ್ರಮುಖರು ಬಾಂಗ್ಲಾದೇಶ ಟಿ20 ವಿಶ್ವಕಪ್ ತಂಡದ ನಾಯಕ ಲಿಟ್ಟನ್ ದಾಸ್. ವರದಿಗಳ ಪ್ರಕಾರ, ಎಸ್‌ಜಿ ಬಾಂಗ್ಲಾದೇಶ ಆಟಗಾರರೊಂದಿಗಿನ ಎಲ್ಲಾ ಕಿಟ್ ಪ್ರಾಯೋಜಕತ್ವ ಒಪ್ಪಂದಗಳನ್ನು ರದ್ದುಗೊಳಿಸಿದೆ. ಭಾರತೀಯ ಕಂಪನಿಯು ಬಾಂಗ್ಲಾದೇಶದ ಆಟಗಾರರೊಂದಿಗಿನ ತನ್ನ ಒಪ್ಪಂದವನ್ನು ವಿಸ್ತರಿಸಲು ಯಾವುದೇ ಆಸಕ್ತಿಯನ್ನು ತೋರಿಸಿಲ್ಲ ಎಂದು ವರದಿಯಾಗಿದೆ.

ವಿವಾದ ಹುಟ್ಟಿಕೊಂಡಿದ್ದು ಎಲ್ಲಿ?

ಭಾರತ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗಳ ನಡುವೆ ಸಂಘರ್ಷ ಹುಟ್ಟಿಕೊಳ್ಳಲು ಕಾರಣ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್​ನಿಂದ ಹೊರಗಿಟ್ಟಿದ್ದು. ಬಿಸಿಸಿಐ ಮುಸ್ತಾಫಿಜುರ್ ಅವರನ್ನು ಐಪಿಎಲ್‌ನಿಂದ ಹೊರಗಿಟ್ಟಿರುವುದು ಬಾಂಗ್ಲಾದೇಶ ಕ್ರೀಡಾ ಸಚಿವಾಲಯ ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯನ್ನು ಕೆರಳುವಂತೆ ಮಾಡಿದೆ. ಕ್ರೀಡಾ ಸಚಿವಾಲಯದ ಸೂಚನೆಗಳನ್ನು ಅನುಸರಿಸಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಐಸಿಸಿಗೆ ಇಮೇಲ್ ಮಾಡಿ, ಬಾಂಗ್ಲಾ ತಂಡದ ಟಿ20 ವಿಶ್ವಕಪ್ ಪಂದ್ಯಗಳ ಸ್ಥಳವನ್ನು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದೆ. ಏತನ್ಮಧ್ಯೆ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ಸಹ ನಿಷೇಧಿಸಿದೆ.

ಮುಸ್ತಾಫಿಜುರ್ ಐಪಿಎಲ್​ನಿಂದ ಔಟ್; ಭಾರತದಲ್ಲಿ ಟಿ20 ವಿಶ್ವಕಪ್ ಆಡುವುದಿಲ್ಲ ಎಂದ ಬಾಂಗ್ಲಾ

ಬೇಡಿಕೆ ತಿರಸ್ಕರಿಸಿದ ಐಸಿಸಿ

ಬಾಂಗ್ಲಾದೇಶದ ಟಿ20 ವಿಶ್ವಕಪ್ ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಐಸಿಸಿ ಸ್ಪಷ್ಟವಾಗಿ ನಿರಾಕರಿಸಿದೆ. ವರದಿಗಳ ಪ್ರಕಾರ, ಬಾಂಗ್ಲಾದೇಶ ತಂಡವು ತಮ್ಮ ಪಂದ್ಯಗಳನ್ನು ಈಗ ಪ್ರಕಟವಾಗಿರುವ ವೇಳಾಪಟ್ಟಿಯ ಪ್ರಕಾರವೇ ಆಡಬೇಕೆಂದು ಐಸಿಸಿ ಸ್ಪಷ್ಟವಾಗಿ ಹೇಳಿದೆ. ಇದರರ್ಥ ಬಾಂಗ್ಲಾದೇಶವು ತಮ್ಮ ಟಿ20 ವಿಶ್ವಕಪ್ 2026 ರ ಗುಂಪು ಪಂದ್ಯಗಳನ್ನು ಭಾರತದಲ್ಲಿ ಆಡಬೇಕಾಗುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:01 pm, Wed, 7 January 26

Source link

ಐಪಿಎಲ್​ಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಲಿದ್ದಾರೆ ಅರ್ಜುನ್- ಸಾನಿಯಾ; ದಿನಾಂಕ ಬಹಿರಂಗ – Kannada News | Arjun Tendulkar Wedding: Sachin’s Son Marries Sania Chandok in 2026. Date Revealed!

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಮಗ ಅರ್ಜುನ್ ತೆಂಡೂಲ್ಕರ್ (Arjun Tendulkar) ಶೀಘ್ರದಲ್ಲೇ ತಮ್ಮ ದೀರ್ಘಕಾಲದ ಸಂಗಾತಿ ಸಾನಿಯಾ ಚಾಂದೋಕ್ (Sania Chandok) ಅವರನ್ನು ವಿವಾಹವಾಗಲಿದ್ದಾರೆ. ವರದಿಗಳ ಪ್ರಕಾರ, ಈ ಜೋಡಿ ಮಾರ್ಚ್ 2026 ರಲ್ಲಿ ವಿವಾಹವಾಗಲಿದ್ದು, ದಿನಾಂಕವನ್ನೂ ಸಹ ಬಹಿರಂಗಪಡಿಸಲಾಗಿದೆ. ವಾಸ್ತವವಾಗಿ ಕಳೆದ ಆಗಸ್ಟ್​ನಲ್ಲಿ ಅರ್ಜುನ್ ಹಾಗೂ ಸಾನಿಯಾ ಅವರ ನಿಶ್ಚಿತಾರ್ಥ ಬಹಳ ಖಾಸಗಿಯಾಗಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಇಬ್ಬರ ಕುಟುಂಬ ಸದಸ್ಯರು ಮತ್ತು ಕೆಲವು ಆಪ್ತರು ಮಾತ್ರ ಹಾಜರಿದ್ದರು. ಅದಾದ ಕೆಲವು ದಿನಗಳ ಬಳಿಕ ಸ್ವತಃ ಸಚಿನ್ ತೆಂಡೂಲ್ಕರ್ ಅವರೇ ತಮ್ಮ ಮಗನ ನಿಶ್ಚಿತಾರ್ಥದ ವಿಚಾರವನ್ನು ಸಾರ್ವಜನಿಕಗೊಳಿಸಿದ್ದರು. ಇದೀಗ 2026 ರಲ್ಲಿ ಅರ್ಜುನ್ ಹಾಗೂ ಸಾನಿಯಾ ಹಸೆಮಣೆ ಏರಲಿದ್ದಾರೆ.

ಅರ್ಜುನ್ ಮದುವೆ ದಿನಾಂಕ ಬಹಿರಂಗ

ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ಐಪಿಎಲ್ 2026 ಕ್ಕೂ ಮುಂಚಿತವಾಗಿ ವಿವಾಹದ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅರ್ಜುನ್ ಮತ್ತು ಸಾನಿಯಾ ಚಾಂದೋಕ್ ಅವರ ವಿವಾಹ ದಿನಾಂಕವನ್ನು ಮಾರ್ಚ್ 5, 2026 ಕ್ಕೆ ನಿಗದಿಪಡಿಸಲಾಗಿದೆ. ಮಾರ್ಚ್ 3 ರಂದು ವಿವಾಹಪೂರ್ವ ಸಮಾರಂಭಗಳು ಪ್ರಾರಂಭವಾಗಲಿವೆ. ಸಾನಿಯಾ ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳಾಗಿದ್ದು, ತೆಂಡೂಲ್ಕರ್ ಕುಟುಂಬಕ್ಕೆ ಬಹಳ ಹಿಂದಿನಿಂದಲೂ ಹತ್ತಿರವಾಗಿದ್ದಾರೆ. ವಿವಾಹ ಆಚರಣೆಗಳು ಮುಂಬೈನಲ್ಲಿ ನಡೆಯಲಿದ್ದು, ಕುಟುಂಬ, ಆಪ್ತ ಸ್ನೇಹಿತರು ಮತ್ತು ಕ್ರಿಕೆಟ್ ಜಗತ್ತಿನ ಆಯ್ದ ಕೆಲವರು ಮಾತ್ರ ಭಾಗವಹಿಸುವ ಖಾಸಗಿ ಕಾರ್ಯಕ್ರಮವಾಗಿರಲಿದೆ ಎಂದು ವರದಿಯಾಗಿದೆ.

SMAT 2025: W,W,W.. ಅರ್ಜುನ್ ಮಾರಕ ದಾಳಿಗೆ ತತ್ತರಿಸಿದ ಮಧ್ಯಪ್ರದೇಶ; ಗೋವಾಗೆ 2ನೇ ಜಯ

ಲಕ್ನೋ ಪರ ಆಡಲಿರುವ ಅರ್ಜುನ್

ಇತ್ತೀಚೆಗೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ನಿಂದ ಲಕ್ನೋ ಸೂಪರ್ ಜೈಂಟ್ಸ್‌ ತಂಡಕ್ಕೆ ವರ್ಗಾವಣೆಗೊಂಡಿರುವ ಅರ್ಜುನ್ ತೆಂಡೂಲ್ಕರ್ ವೃತ್ತಿಜೀವನದಂತೆ ವೈಯಕ್ತಿಕ ಜೀವನದಲ್ಲೂ ಎರಡನೇ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಹೀಗಾಗಿ 2026 ರ ವರ್ಷವು ಅರ್ಜುನ್‌ಗೆ ಅವರ ವೃತ್ತಿಜೀವನ ಮತ್ತು ವೈಯಕ್ತಿಕ ಜೀವನದಲ್ಲಿ ಸ್ಮರಣೀಯ ವರ್ಷವಾಗಲಿದೆ. ಪ್ರಸ್ತುತ ಗೋವಾ ತಂಡದ ಪರ ವಿಜಯ್ ಹಜಾರೆ ಟ್ರೋಫಿಯನ್ನು ಆಡುತ್ತಿರುವ ಅರ್ಜುನ್ ಬೌಲಿಂಗ್‌ನಲ್ಲಿ ಮಿಂಚುತ್ತಿದ್ದಾರೆಯಾದರೂ, ಬ್ಯಾಟಿಂಗ್​ನಲ್ಲಿ ಅವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬಂದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:15 pm, Wed, 7 January 26

Source link

ಹೆಣ್ಣು ತಾಯಿಯಾಗುವುದು ದುರ್ಬಲತೆಯೇ? 30 ಲಕ್ಷ ರೂ. ಸಂಬಳದ ಉದ್ಯೋಗ ನಿರಾಕರಿಸಿದ ಬೆಂಗಳೂರಿನ ಮಹಿಳೆ – Kannada News | Workplace Bias: Bengaluru Woman Refuses 30L Salary Post Maternity

ಬೆಂಗಳೂರು, ಜ.7: ಬೆಂಗಳೂರು ಮೂಲದ ಮಹಿಳೆಯೊಬ್ಬರು 30 ಲಕ್ಷ ಸಂಬಳ ಸಿಗುವ ಬ್ಯಾಂಕ್ (Motherhood Discrimination)​​  ಉದ್ಯೋಗವನ್ನು ನಿರಾಕರಿಸಿದ್ದಾರೆ. ಈ ಬಗ್ಗೆ ಸೋಶಿಯಲ್​​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮೊದಲ ಬಾರಿ ತಾಯಿ ಆಗಿರುವ ಬಗ್ಗೆ ಹಾಗೂ ಆ ತಾಯಿತನದ ಸುಖದ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆಯಾಗಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೋಮಲ್​​​ ಎಂಬ ಮಹಿಳೆ ಈ ಬಗ್ಗೆ ಹೇಳಿಕೊಂಡಿದ್ದಾರೆ. ತನ್ನ ನಿರ್ಧಾರವು ಹಣದ ಬಗ್ಗೆ ಅಲ್ಲ, ಹೆರಿಗೆಯ ನಂತರ ಕೆಲಸಕ್ಕೆ ಮರಳುವ ಮಹಿಳೆಯರಿಗೆ ಕಚೇರಿಯಲ್ಲಿ ಸಿಗುವ ಬೆಲೆ ಹೇಗಿರುತ್ತದೆ ಎಂಬುದನ್ನು ತಿಳಿಸಿದ್ದಾರೆ. ಮಗು ಪಡೆದ ನಂತರ ಮಹಿಳೆಯರು ದುರ್ಬಲರು ಎಂಬ ಭಾವನೆ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಕೋಮಲ್​​ ಅವರು ಹೇರಿಗೆ ಕಾರಣಕ್ಕೆ ಹಿಂದಿನ ಕೆಲಸವನ್ನು ಐದನೇ ತಿಂಗಳಲ್ಲಿ ತೊರೆದು ನಂತರ, ತಾಯಿತನದ ಸುಖವನ್ನು ಪಡೆದಿದ್ದಾರೆ ಎಂದು ಈ ಪೋಸ್ಟ್​​​ನಲ್ಲಿ ಹೇಳಿದ್ದಾರೆ. ಕೋಮಲ್​​ ಅವರ ಗಂಡ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದರು, ಆದರೆ ಕೋಮಲ್​ ಮುಂಬೈನಲ್ಲಿ ವಾಸವಾಗಿದ್ದರು. ನಂತರ ಅವರು ಕೂಡ ಬೆಂಗಳೂರಿಗೆ ಬಂದಿದ್ದಾರೆ. ಈ ವೇಳೆ ಇಲ್ಲಿನ ಬ್ಯಾಂಕ್​​​ವೊಂದು, ಅವರ ಪ್ರೊಫೈಲ್ ಮತ್ತು ಆದ್ಯತೆಯ ಸ್ಥಳ ಎರಡಕ್ಕೂ ಹೊಂದಿಕೆಯಾಗುವ ಕೆಲಸ ನೀಡಲು ಮುಂದಾಗಿತ್ತು. ಅದಕ್ಕಾಗಿ ಅವರಿಗೆ ಸಂದರ್ಶನವನ್ನು ಕೂಡ ಮಾಡಿತ್ತು. ಸಂದರ್ಶನಕ್ಕಾಗಿ 8 ತಿಂಗಳು ತೆಗೆದುಕೊಂಡಿದೆ.

ಉದ್ಯೋಗ ಪಡೆಯುವವರಿಗೆ ಬ್ಯಾಂಕ್​​​ ಯಾವುದೇ ಆಂತರಿಕ ನಿಯಮಗಳನ್ನು ಮಾಡಿರಲಿಲ್ಲ. ಆ ಕಾರಣಕ್ಕೆ ಇವರು ತಾಯಿ ಆಗಿರುವ ಬಗ್ಗೆ ಬ್ಯಾಂಕ್​​​ಗೆ ಹೇಳಿಲ್ಲ. ತಾಯೊಯಾದ ಕೇವಲ 14 ದಿನಗಳ ನಂತರ ಸಂದರ್ಶನವನ್ನು ಅಂತಿಮ ಮಾಡಿ, ಅವರಿಗೆ ಕೆಲಸ ಪಕ್ಕಾ ಮಾಡಿತ್ತು. ಆದರೆ ಈ ವೇಳೆ ಕೋಮಲ್​​ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಬ್ಯಾಂಕ್​​ಗೆ ತಿಳಿಯಿತು. ಅದಕ್ಕೆ ಕೋಮಲ್​​ ಕೂಡ ನಾನು ಇತ್ತೀಚೆಗೆ ತಾಯಿಯಾಗಿರುವುದು ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ ಬ್ಯಾಂಕ್​​ ಇದಕ್ಕೆ ಒಪ್ಪಿಲ್ಲ. ಆದರೆ ಇದರ ಹೊರತಾಗಿಯೂ, ಪ್ರಕ್ರಿಯೆ ಮುಂದುವರೆದಿದೆ ಎಂದು ಕೋಮಲ್ ಹೇಳಿದ್ದಾರೆ. ಮುಖಾಮುಖಿ ಸಂದರ್ಶನದಲ್ಲಿ, ಸಂದರ್ಶಕರು, 3 ತಿಂಗಳ ಮಗು ಇರಬೇಕಾದರೆ ಇಷ್ಟು ಬೇಗ ಯಾಕೆ ಮತ್ತೆ ಕೆಲಸ ಬಂದಿದ್ದೀರಾ ಎಂದು ಕೇಳಿದ್ದಾರೆ. ಇದಕ್ಕೆ ವೈಯಕ್ತಿಕ ಕಾರಣ ನೀಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

“ಸಂಸ್ಥೆಯು ನನ್ನ ಪ್ರೊಫೈಲ್ ಅನ್ನು ಇಷ್ಟಪಟ್ಟಿದ್ದರೂ, ತಾಯಿ ಎಂದು ತಿಳಿದ ನಂತರ ಆಫರ್​​ನ್ನು ಕೂಡ ಕಡಿಮೆ ಮಾಡಲಾಗಿತ್ತು. 30 ಲಕ್ಷ ರೂ. ಆಫರ್ ಅನ್ನು ಸ್ವೀಕರಿಸಿ ಅಥವಾ ಆಫರ್ ಹಿಂಪಡೆಯಬಹುದು ಎಂದು ಹೇಳಿದ್ದಾರೆ. ಇಲ್ಲಿ ಹಣದ ಮೌಲ್ಯಕ್ಕಿಂತ, ಕೆಲಸ, ಸಾಮರ್ಥ್ಯ, ಭಾವನೆಗಳಿಗೆ ಬೆಲೆ ಇಲ್ಲ. ಮಗುವಿದೆ ಎಂಬ ಕಾರಣಕ್ಕೆ ನನ್ನನ್ನು ದುರ್ಬಲ ಎಂದು ನಿರ್ಧರಿಸಿದ್ದಾರೆ. ಹಾಗಾಗಿ ನಾನು ಅಲ್ಲಿಂದ ಹೊರನಡೆದೆ, ಅವರ ಈ ಪ್ರಸ್ತಾಪವನ್ನು ತಿರಸ್ಕರಿಸುವುದು ನನ್ನ ಜೀವನದ ಉತ್ತಮ ನಿರ್ಧಾರವಾಗಿತ್ತು. ನಾನು ಈ ಬಗ್ಗೆ ಯಾವುದೇ ವಿಷಾದ ವ್ಯಕ್ತಪಡಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಹೊಸ ಪ್ಲಾನ್: ಶಾಲಾ ಬಸ್‌ನಲ್ಲಿ ಬಯೋ-ಟಾಯ್ಲೆಟ್ ಸೌಲಭ್ಯ

ಈ ಪೋಸ್ಟ್​​ಗೆ​ ಹಲವು ನೆಟ್ಟಿಗರು ಕಮೆಂಟ್​​ ಮಾಡಿದ್ದಾರೆ. ಒಳ್ಳೆಯ ನಿರ್ಧಾರ ಮಾತೃತ್ವ ರಜೆಯ ನಂತರ ಕೆಲಸಕ್ಕೆ ಮರಳುವವರ ದುಃಸ್ಥಿತಿ ಮತ್ತೊಂದು ವೃತ್ತಾಂತ ಎಂದು ಒಬ್ಬರು ಕಮೆಂಟ್​​ ಮಾಡಿದ್ದಾರೆ. ಇದು ಕಂಪನಿಯ ಸಮಸ್ಯೆ ಮಾತ್ರವಲ್ಲ, ಹಲವು ಕಡೆ ಇಂತಹ ಘಟನೆಗಳು ನಡೆದಿದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ. ವೇತನ, ಮನ್ನಣೆ ಮತ್ತು ನಿರೀಕ್ಷೆಗಳ ವಿಷಯದಲ್ಲಿ ಕಾರ್ಪೊರೇಟ್ ಸಂಸ್ಥೆಗಳಲ್ಲಿ ಮಹಿಳೆಯರ ಕಡೆಗೆ ಪಕ್ಷಪಾತ ಹೊಂದಿದೆ ಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version