Headlines

ಅಂಚೆ ಮತಗಳ ಮರು ಎಣಿಕೆಯಲ್ಲಿ ಗೆದ್ದ ಜೀವರಾಜ್​​ ಈಗ ಶೃಂಗೇರಿಗೆ ಹೊಸ ಶಾಸಕ: MLA ಪ್ರಮಾಣಪತ್ರ ಪಡೆದ ಬಿಜೆಪಿಗ – Kannada News | D.N. Jeevaraj Emerges Winner in Sringeri After Recount; Official Certificate Issued

MLA ಪ್ರಮಾಣಪತ್ರ ಪಡೆದ ಜೀವರಾಜ್​​Image Credit source: Tv9 Kannada ಚಿಕ್ಕಮಗಳೂರು, ಮೇ 04: ಭಾರಿ ಕುತೂಹಲ ಮೂಡಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಡಿ.ಎನ್. ಜೀವರಾಜ್ ಚುನಾವಣಾ ಅಧಿಕಾರಿಗಳಿಂದ ಅಂತಿಮವಾಗಿ ಪ್ರಮಾಣಪತ್ರ ಸ್ವೀಕರಿಸಿದ್ದಾರೆ. ಆ ಮೂಲಕ ಮರುಎಣಿಕೆಯಲ್ಲಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್​​ನ ಟಿ.ಡಿ. ರಾಜೇಗೌಡಗೆ ಸೋಲಾಗಿದೆ. ಅಂಚೆ ಮತಗಳ ಮರು ಎಣಿಕೆ ವೇಳೆ 52 ಮತಗಳಿಂದ ಜೀವರಾಜ್​ ಗೆಲುವು ಸಾಧಿಸಿದ್ದು,  ಚಿಕ್ಕಮಗಳೂರು ಜಿಲ್ಲೆಯ 5 ಕ್ಷೇತ್ರಗಳ ಪೈಕಿ…

Read More

ಮಹಿಳೆಯರ ವಿರುದ್ಧದ ಅಪರಾಧ: ದೇಶದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ – Kannada News | NCRB Report 2024: Bengaluru Ranks 3rd in Crimes Against Women; Leads in Criminal Force with Intent to Outrage Modesty

ಪ್ರಾತಿನಿಧಿಕ ಚಿತ್ರImage Credit source: MediaForge AI ಬೆಂಗಳೂರು, ಮೇ 8: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ನಗರವು ಇಂದಿಗೂ ದೇಶದ ಮೊದಲ ಮೂರು ಸ್ಥಾನಗಳಲ್ಲೇ ಮುಂದುವರಿದಿದೆ. ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ದೇಶದ 19 ಪ್ರಮುಖ ಮೆಟ್ರೋಪಾಲಿಟನ್ ನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ದೆಹಲಿ ಮತ್ತು ಮುಂಬೈ…

Read More

Bengaluru Traffic advisory: ವಾಹನ ಸವಾರರ ಗಮನಕ್ಕೆ, ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ – Kannada News

ಬೆಂಗಳೂರು, ಜೂನ್ 11: ಬೆಂಗಳೂರಿನ (Bengaluru) ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ….

Read More

ಶ್ರೇಯಸ್ ಅಯ್ಯರ್​ಗೆ ಟಿ20 ತಂಡದ ನಾಯಕತ್ವ; ಯಾರಿಗೆ ಸಿಗಲಿದೆ ಉಪನಾಯಕತ್ವ? – Kannada News

ಇದೇ ಜೂನ್ 6 ರಿಂದ ಅಫ್ಘಾನಿಸ್ತಾನ ಹಾಗೂ ಭಾರತದ ನಡುವೆ ಟೆಸ್ಟ್ ಹಾಗೂ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿ ಮುಗಿದ ಬಳಿಕ ಜೂನ್ 26 ರಿಂದ ಐರ್ಲೆಂಡ್ ವಿರುದ್ಧ ಮತ್ತು ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಬೇಕಾಗಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾವನ್ನು ಯಾರು ಮುನ್ನಡೆಸುತ್ತಾರೆ ಎಂಬುದು ಇದುವರೆಗೆ ಖಚಿತವಾಗಿಲ್ಲ. ಏಕೆಂದರೆ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದಿಂದ ಕೈಬಿಡುವ ಬಗ್ಗೆ ಬಿಸಿಸಿಐ ಚಿಂತಿಸುತ್ತಿದೆ. ಹೀಗಾಗಿ ಅವರ ಸ್ಥಾನದಲ್ಲಿ ಯಾರು ತಂಡವನ್ನು…

Read More

ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್, 21 ಮಂದಿ ರಕ್ಷಣೆ, 3 ಭಾರತೀಯರು ಇನ್ನೂ ನಾಪತ್ತೆ – Kannada News

ಒಮಾನ್, ಜೂನ್ 11: ಒಮಾನ್​ನಲ್ಲಿ ಭಾರತದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ದಾಳಿ ನಡೆಸಿದೆ.  24 ಮಂದಿ ಭಾರತೀಯರ ಪೈಕಿ, 21 ಮಂದಿಯನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ. ಒಮಾನ್‌ನಲ್ಲಿರುವ ನಮ್ಮ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮಾನಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ರಾಸಾಯನಿಕ ಮತ್ತು ತೈಲ ಉತ್ಪನ್ನಗಳ ಟ್ಯಾಂಕರ್ ಸೆಟ್ಟೆಬೆಲ್ಲೊ ಒಮಾನಿ ಕರಾವಳಿಯಲ್ಲಿ ಡಿಕ್ಕಿ ಹೊಡೆದಿದ್ದು, ಇದು ಅಮೆರಿಕದ ಕ್ಷಿಪಣಿ ದಾಳಿ…

Read More

ಒಂದೇ ಪಂದ್ಯದಲ್ಲಿ 4 ವೈಭವಯುತ ದಾಖಲೆ ಬರೆದ ವೈಭವ್ ಸೂರ್ಯವಂಶಿ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿ ವೈಭವ್ ಸೂರ್ಯವಂಶಿ (Vaibhav Sooryavanshi) ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅದು ಕೂಡ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಹೀಗೆ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ವೈಭವ್ ಬರೆದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. …

Read More

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್ – Kannada News | Shivarajkumar condemns fans bad comments on Vijayalakshmi Darshan

ಸೋಶಿಯಲ್ ಮೀಡಿಯಾದಲ್ಲಿ ಕೆಲವು ಕಿಡಿಗೇಡಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದೂರು ನೀಡಿದ್ದಾರೆ. ಈ ಮೊದಲು ನಟಿ ರಮ್ಯಾಗೆ ಇದೇ ರೀತಿ ಕೆಟ್ಟ ಕಮೆಂಟ್ ಬಂದಿತ್ತು. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಫ್ಯಾನ್ಸ್ ವಾರ್ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಎಲ್ಲ ಅಭಿಮಾನಿಗಳಲ್ಲೂ ನಾನು ಕೇಳಿಕೊಳ್ಳುತ್ತೇನೆ. ಒಬ್ಬರಿಂದ ಇನ್ನೊಬ್ಬರಿಗೆ ಆ ಕಿಡಿ…

Read More

ಝಿಂಬಾಬ್ವೆ ಸರಣಿಯಿಂದ ಹೊರಗುಳಿಯಲಿರುವ ಗೌತಮ್ ಗಂಭೀರ್! – Kannada News | Gautam Gambhir out of Zimbabwe tour

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಝಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಜುಲೈ 23 ರಿಂದ ಶುರುವಾಗಲಿರುವ ಈ ಸರಣಿಯಿಂದ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿ. ಇಂಗ್ಲೆಂಡ್ ವಿರುದ್ಧದ ಸರಣಿ ಬಳಿಕ ಭಾರತ ತಂಡವು ಬ್ಯಾಕ್ ಟು ಬ್ಯಾಕ್ ಸರಣಿ ಹಾಗೂ ಟೂರ್ನಿಗಳನ್ನು ಆಡಲಿದೆ. ಹೀಗಾಗಿ ಕೋಚಿಂಗ್ ಸಿಬ್ಬಂದಿ ವಿಭಾಗವನ್ನು ವಿಭಜಿಸಿ ವಿಶ್ರಾಂತಿ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ….

Read More

ಕಿಡ್ನಿ ವೈಫಲ್ಯಕ್ಕೆ ಟ್ರಾನ್ಸ್‌ಪ್ಲಾಂಟ್ ಯಾವಾಗ ಅಗತ್ಯ ಎಂಬುದನ್ನು ಡಾ. ರವಿಶಂಕರ್ ಅವರಿಂದ ತಿಳಿದುಕೊಳ್ಳಿ – Kannada News | End Stage Renal Disease Treatment: Signs You May Need A Kidney Transplant

ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಅನೇಕರಿಗೆ ಡಯಾಲಿಸಿಸ್ ಅನಿವಾರ್ಯವಾಗುತ್ತದೆ. ಇದು ಹಾನಿಗೊಳಗಾದ ಕಿಡ್ನಿ (Kidney) ಮಾಡಲಾಗದ ಕೆಲಸವನ್ನು ಮಾಡುತ್ತದೆ. ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕಲು ಮತ್ತು ದ್ರವಗಳ ಸಮತೋಲನ, ಹಾಗೂ ಆರೋಗ್ಯವನ್ನು ಕಾಪಾಡಲು ಇದು ಸಹಕಾರಿ. ಆದರೆ, ಡಯಾಲಿಸಿಸ್ ಕೇವಲ ಚಿಕಿತ್ಸೆಯಲ್ಲ, ಇದು ವ್ಯಕ್ತಿಯ ವೃತ್ತಿ, ಸಂಬಂಧಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನೇ ಬದಲಾಯಿಸುತ್ತದೆ. ವೈದ್ಯರ ಪ್ರಕಾರ, ಡಯಾಲಿಸಿಸ್ ಅಂತಿಮ ಹಂತ ಎಂದು ಪರಿಗಣಿಸುವುದು ಸರಿಯಲ್ಲ, ಬದಲಿಗೆ ರೋಗಿಗಳಿಗೆ ಹೊಸ ಜೀವನದ ದಾರಿ ಎಂದು ಪರಿಗಣಿಸಬೇಕು. ಆದರೆ ಹಲವು…

Read More

ಕಾಂಗ್ರೆಸ್​​ನಲ್ಲಿ ಮತ್ತೊಂದು ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ

ಬೆಂಗಳೂರು, (ಮಾರ್ಚ್ 12): 2026ನೇ ಸಾಲಿನ ಕರ್ನಾಟಕ ಬಜೆಟ್ ಮುಗಿಯುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್​​ನ್ಲಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಪಟ್ಟಕ್ಕಾಗಿ ಹಠಕ್ಕೆ ಬಿದ್ದಿರುವ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಲ್ಲದೆ ಇತ್ತ ಅವರ ಬೆಂಬಲಿಗರು ಗೌಪ್ಯ ಸಭೆ ನಡೆಸುತ್ತಿದ್ದಾರೆ. ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ನಡುವೆ ಸಂಪುಟ ಪುನಾರಚನೆಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವಾಕಾಂಕ್ಷಿಗಳು ಇಂದು (ಮಾರ್ಚ್ 12) ಪ್ರತ್ಯೇಕ ಸಭೆ ನಡೆಸಿರುವ ಭಾರೀ ಸಂಚನ…

Read More