ದೇಶಿ ಪಂದ್ಯದಲ್ಲೂ ಗಿರ್ಕಿ ಹೊಡೆದ ಶುಭ್​ಮನ್ ಗಿಲ್; ಏಕದಿನ ಸರಣಿ ಕಥೆ ಏನು? – Kannada News | Shubman Gill’s Injury Return: Form Struggles Raise Team India Concerns

ಮೇಲೆ ಹೇಳಿದಂತೆ ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಲಿದ್ದಾರೆ, ಆದರೆ ಅವರ ಫಾರ್ಮ್ ಪ್ರಸ್ತುತ ಕಳಪೆಯಾಗಿದೆ. ಗಿಲ್ ಅವರ ದೊಡ್ಡ ಸಮಸ್ಯೆ ಎಂದರೆ ಟಿ20 ಮತ್ತು ಏಕದಿನ ಮಾದರಿಗಳಲ್ಲಿ ಅವರ ಕಳಪೆ ಪ್ರದರ್ಶನ. ಫೆಬ್ರವರಿ 20, 2025 ರಿಂದ ಗಿಲ್ ಏಕದಿನ ಪಂದ್ಯಗಳಲ್ಲಿ ಒಂದು ಅರ್ಧಶತಕವನ್ನೂ ಬಾರಿಸಿಲ್ಲ. ತಮ್ಮ ಕೊನೆಯ ಎಂಟು ಏಕದಿನ ಇನ್ನಿಂಗ್ಸ್‌ಗಳಲ್ಲಿ ರನ್ ಬರ ಎದುರಿಸಿರುವ ಗಿಲ್ ಅವರ ಅತ್ಯುತ್ತಮ ಸ್ಕೋರ್ ಕೇವಲ 46 ರನ್ ಆಗಿದೆ.

Source link

ಬಳ್ಳಾರಿಯಲ್ಲಿ ಶಾಂತಿಮಂತ್ರ ಜಪಿಸಿದ ಡಿಕೆ ಶಿವಕುಮಾರ್​: ರೆಡ್ಡಿ ಬ್ರದರ್ಸ್‌ ವಿರುದ್ಧ ವಾಗ್ದಾಳಿ – Kannada News | Ballari Violence: DK Shivakumar Peace Bid Amidst Firing, Political Blame

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ಗಲಾಟೆ ಮತ್ತು ಫೈರಿಂಗ್ ಪ್ರಕರಣ (Ballari Banner Violence) ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಶಾಸಕ ಭರತ್‌ ರೆಡ್ಡಿ ಕಡೆಯವರು ಫೈರಿಂಗ್‌ ಮಾಡುತ್ತಿರುವ ದೃಶ್ಯಗಳನ್ನ ಬಿಜೆಪಿ ನಾಯಕರು ರಿಲೀಸ್‌ ಮಾಡಿದ್ದರು. ಇತ್ತ ಬಿಜೆಪಿ ಕಡೆಯವರು ಖಾರದಪುಡಿ ಎರಚಿರೋದು, ಬ್ಯಾನರ್‌ ಹರಿಯುತ್ತಿರುವ ದೃಶ್ಯಗಳನ್ನ ಕಾಂಗ್ರೆಸ್​ ಪಡೆ ಕೂಡ ರಿಲೀಸ್ ಮಾಡಿದೆ. ಇದರ ನಡುವೆ ಬಳ್ಳಾರಿಗೆ ಇಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಭೇಟಿ ನೀಡಿದ್ದು, ಶಾಂತಿಮಂತ್ರ ಜಪಿಸಿದ್ದಾರೆ.

ಬ್ಯಾನರ್‌ ಗಲಾಟೆಯಿಂದ ಧಗಧಗಿಸಿದ್ದ ಬಳ್ಳಾರಿ ಸದ್ಯ ಸಹಜಸ್ಥಿತಿಗೆ ಮರಳಿದೆ. ಅದೇ ಬಳ್ಳಾರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಎಂಟ್ರಿಕೊಟ್ಟಿದ್ದರು. ಗಲಾಟೆಯಲ್ಲಿ ಫೈರಿಂಗ್‌ಗೆ ಬಲಿ ಆಗಿರುವ ರಾಜಶೇಖರ್‌ ಮನೆಗೆ ಭೇಟಿ ನೀಡಿದ ಡಿಸಿಎಂ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಮಗನನ್ನ ನೆನೆದು ರಾಜಶೇಖರ್‌ ತಾಯಿ ತುಳಸಿ ಕಣ್ಣೀರು ಹಾಕಿದರು.

ಶಾಂತಿ ಕಾಪಾಡುವಂತೆ ಡಿಕೆ ಶಿವಕುಮಾರ್​ ಮನವಿ

ಜಿಲ್ಲೆಯ ಶಾಸಕರನ್ನು ಹೊರಗಿಟ್ಟು ಅಧಿಕಾರಿಗಳ ಸಭೆ ಕೂಡ ಮಾಡಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್​, ನಮ್ಮ ಕಾಂಗ್ರೆಸ್​​ ಕಾರ್ಯಕರ್ತರು ಶಾಂತಿ ಕಾಪಾಡಬೇಕು. ಅಸೂಯೆಯಿಂದ ನಮ್ಮ ಕಾರ್ಯಕ್ರಮ ತಡೆಯಲು ಯತ್ನಿಸಿದ್ದಾರೆ. ಕಾರ್ಯಕ್ರಮದ ಬ್ಯಾನರ್ ಕಿತ್ತಾಕಿದ್ದಕ್ಕೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ನಮ್ಮ ಶಾಸಕ ತಡವಾಗಿ ಬಂದಿದ್ದಾರೆ. ಭರತ್​ ರೆಡ್ಡಿ ಹೊಸ ಶಾಸಕ, ಬಿಸಿ ರಕ್ತ ಮಾತಾಡಿರಬಹುದು. ಬಳ್ಳಾರಿಯಲ್ಲಿ ಶಾಂತಿ ಕಾಪಾಡಲು ಎಲ್ಲ ಪ್ರಯತ್ನ ಮಾಡಿದ್ದೇವೆ. ನಮ್ಮವರು ತಪ್ಪು ಮಾಡಿದರೆ ಖಂಡಿತ ತಪ್ಪು ಅಂತಾ ಹೇಳ್ಳುತ್ತೇವೆ. ಇಲ್ಲ ಅಂದರೆ ಅದನ್ನ ತಿದ್ದಲು ಆಗಲ್ಲ. ಮನೆಯಲ್ಲಿ ಬೈಯುವಂತೆ ನಮ್ಮ ಕಾರ್ಯಕರ್ತರಿಗೂ ಹೇಳ್ಳುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ

ಜನಾರ್ದನರೆಡ್ಡಿಯನ್ನು ಕೊಲ್ಲಲು ಬಂದಿದ್ದರೆ ಮಹಜರು ಮಾಡಿಸಬೇಕಿತ್ತು. ಆ ಬುಲೆಟ್ ಎಲ್ಲಿತ್ತು?, ಹೊರಗಡೆ ಬಿದ್ದಿತ್ತು, ಮನೆಯಲ್ಲಿ ಬಿದ್ದಿರಲಿಲ್ಲ. ಜನಾರ್ದನರೆಡ್ಡಿ ಬುಲೆಟ್‌ ತೋರಿಸ್ತಿದ್ರು, ಅವರಿಗೆ ಹೊಡೆದಿತ್ತಾ ಅದು? ತಪ್ಪು ಮಾಹಿತಿ ನೀಡೋದು ಸರಿಯಲ್ಲ, ಹೇಳಿದ್ದಕ್ಕೆಲ್ಲಾ ಉತ್ತರ ಕೊಡಲ್ಲ ಎಂದು ಡಿಕೆ ಶಿವಕುಮಾರ್​ ವಾಗ್ದಾಳಿ ಮಾಡಿದ್ದಾರೆ.

ಹೀಗಾದರೆ ನ್ಯಾಯ ಹೇಗೆ ಸಿಗುತ್ತೆ ಎಂದ ಶ್ರೀರಾಮುಲು 

ಇನ್ನು ಶಾಸಕ ಭರತ್‌ ರೆಡ್ಡಿ ಜತೆ ಕೂತು, ಡಿಸಿಎಂ ನಡೆಸಿದ ಸುದ್ದಿಗೋಷ್ಠಿ ಬಿಜೆಪಿ ನಾಯಕರನ್ನ ಕೆರಳಿಸಿದೆ. ಕೊಲೆ ಆರೋಪಿ ಜತೆ ಕೂತು ಮಾತನಾಡಿದ್ದಾರೆ. ಹೀಗಾದರೆ ನ್ಯಾಯ ಹೇಗೆ ಸಿಗುತ್ತೆ ಅಂತಾ ಶ್ರೀರಾಮುಲು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆಗೆ ಮತ್ತೊಂದು ಸ್ಫೋಟಕ ತಿರುವು! ಗಲಾಟೆ ಶುರುವಾಗಿದ್ದು ಹೇಗೆ ಗೊತ್ತಾ?

ಇದರ ನಡುವೆ ಶಾಸಕ ಜನಾರ್ದನರೆಡ್ಡಿ ಕರೆತಂದು ಇಂದು ಸ್ಥಳ ಪರಿಶೀಲನೆ ನಡೆಸಲಾಯ್ತು. ಜನಾರ್ದನ ರೆಡ್ಡಿ ದೂರು ಹಿನ್ನೆಲೆ ಅವರನ್ನೇ ಕರೆತಂದು ಮಹಜರು ನಡೆಸಿದರು. ಕೊಲೆ ಯತ್ನ, ಗುಂಪುಗಾರಿಕೆ ಬಗ್ಗೆ ತನಿಖಾಧಿಕಾರಿಗಳು ಸಾಕ್ಷ್ಯ ಕೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಮಾರ್ಚ್ ತಿಂಗಳವರೆಗೆ 4ನೇ ತ್ರೈಮಾಸಿಕ ತೆರಿಗೆ ಪಾವತಿಸಲಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ನಿವಾಸಿಯಾಗಿರುವ ರಶ್ಮಿಕಾ ಮಂದಣ್ಣ ಅವರು ಶೀಘ್ರದಲ್ಲೇ ಮದುವೆ ಆಗುತ್ತಾರೆ ಎಂಬ ಸುದ್ದಿ ಕೂಡ ಬಲವಾಗಿದೆ. ವಿಜಯ್ ದೇವರಕೊಂಡ ಜೊತೆ ಅವರು ಮದುವೆ ಆಗಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅರಸು ದಾಖಲೆ ಮುರಿದ ಸಿದ್ದರಾಮಯ್ಯ ಇಂದಿರಾ ಗಾಂಧಿಯನ್ನು ಖಂಡಿಸುತ್ತಾರಾ? ಸಂಸದ ಲೆಹರ್ ಸಿಂಗ್ ಪ್ರಶ್ನೆ – Kannada News | BJP leader Lehar Singh reaction on Siddaramaiah Surpassing Devaraj Urs Record on Longest Serving CM

ಬೆಂಗಳೂರು, ಜನವರಿ 6: ಕರ್ನಾಟಕದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಮೂಲಕ ದೇವರಾಜ ಅರಸು ಅವರ ದಾಖಲೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಮುರಿದಿದ್ದಾರೆ. ಕರ್ನಾಟಕದ ಅತ್ಯಂತ ಯಶಸ್ವಿ ರಾಜಕಾರಣಿಗಳಲ್ಲಿ ಒಬ್ಬರಾದ ಸಿದ್ದರಾಮಯ್ಯ 2 ಬಾರಿ ಉಪಮುಖ್ಯಮಂತ್ರಿಯಾಗಿ, ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದರು. ಜೆಡಿಎಸ್​​ನಿಂದ ಕಾಂಗ್ರೆಸ್​ ಪಕ್ಷಕ್ಕೆ ಬಂದ ನಂತರ ಮುಖ್ಯಮಂತ್ರಿ ಹುದ್ದೆಗೇರಿದ ಅವರು ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವುದಕ್ಕೆ ಹಲವು ನಾಯಕರು ಅಭಿನಂದಿಸಿದ್ದಾರೆ. ಇದರ ನಡುವೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿಎಂ ಸಿದ್ದರಾಮಯ್ಯನವರ ಈ ಸಾಧನೆಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ಧರಾಮಯ್ಯ ಅವರು ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆಯ ಬಗ್ಗೆ ನನ್ನ ಗಮನಕ್ಕೆ ಬಂದಿತು. ಇಂದಿನ ಪತ್ರಿಕೆಗಳು ಡಿ. ದೇವರಾಜ ಅರಸ್ ಅವರ ದಾಖಲೆಯನ್ನು ಮೀರಿ ಸಿದ್ದರಾಮಯ್ಯ ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದಾರೆ ಎಂದು ವರದಿ ಮಾಡಿವೆ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಆದರೆ ಅವರಿಗೆ ಒಂದು ಸಣ್ಣ ಸಂಗತಿಯನ್ನು ಪ್ರಸ್ತುತಪಡಿಸಲು ಬಯಸುತ್ತೇನೆ ಎಂದು ಲೆಹರ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ

ದೇವರಾಜ ಅರಸು ಮಾರ್ಚ್ 1972ರಿಂದ ಜನವರಿ 1980ರವರೆಗೆ ನಿರಂತರ ಅವಧಿಗೆ ಮುಖ್ಯಮಂತ್ರಿಯಾಗಿದ್ದರು. 2018ರಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಸೋತಾಗ ಅಧಿಕಾರ ಕಳೆದುಕೊಂಡ ಸಿದ್ದರಾಮಯ್ಯನವರಂತೆ ದೇವರಾಜ ಅರಸು ಅವರ ಅಧಿಕಾರಾವಧಿ ಮಧ್ಯಕ್ಕೆ ಬ್ರೇಕ್ ಆಗಿರಲಿಲ್ಲ. ಸಿದ್ದರಾಮಯ್ಯ ಸ್ವತಃ ಮೈಸೂರಿನ ಚಾಮುಂಡೇಶ್ವರಿ ಸ್ಥಾನವನ್ನು ಕಳೆದುಕೊಂಡಿದ್ದರು. ಅವರು ಸ್ಪರ್ಧಿಸಿದ್ದ ಇನ್ನೊಂದು ಸ್ಥಾನವಾದ ಬಾದಾಮಿಯಲ್ಲಿ ಸಾವಿರ ಮತಗಳಿಂದ ಗೆದ್ದಿದ್ದು ಅವರ ಅದೃಷ್ಟ ಎಂದಿದ್ದಾರೆ.

ದೇವರಾಜ ಅರಸ್ ವಿಷಯಕ್ಕೆ ಬಂದರೂ 1976ರ ಚುನಾವಣೆಯನ್ನು ಆಗಿನ ಪ್ರಧಾನಿ ಇಂದಿರಾ ಗಾಂಧಿ ಮುಂದೂಡಿದ್ದರಿಂದ ಅವರು ಬಹಳ ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕಿದ್ದರು. 1978ರ ಆರಂಭದಲ್ಲಿ ಕರ್ನಾಟಕದಲ್ಲಿ ಒಂದೆರಡು ತಿಂಗಳು ರಾಷ್ಟ್ರಪತಿ ಆಳ್ವಿಕೆ ಇತ್ತು. ಆದರೆ, ಮುಖ್ಯಮಂತ್ರಿಯಾಗಿ ಅರಸು ನಿರಂತರ ಅಧಿಕಾರಾವಧಿಯನ್ನು ಹೊಂದಿದ್ದರು ಎಂದು ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.

ದೇವರಾಜ ಅರಸು ಅವರ ದಾಖಲೆಯನ್ನು ಮುರಿದ ಸಂತೋಷದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ಖಂಡಿಸುತ್ತಾರೆಯೇ? ಇಂದಿರಾ ಗಾಂಧಿ ಅವರ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು ಅವರು ಖಂಡಿಸುತ್ತಾರೆಯೇ? ರಾಜಕೀಯದಲ್ಲಿ ಅವರಿಗೆ ಪುನರ್ಜನ್ಮ ನೀಡಿದ ಸಾಮಾಜಿಕ ನ್ಯಾಯದ ಪ್ರತಿಪಾದಕ ದೇವರಾಜ ಅರಸು ಅವರನ್ನು ಪದಚ್ಯುತಗೊಳಿಸಿದ್ದಕ್ಕಾಗಿ ಅವರು ಇಂದಿರಾ ಗಾಂಧಿಯನ್ನು ಖಂಡಿಸುತ್ತಾರೆಯೇ? ಎಂದು ಲೆಹರ್ ಸಿಂಗ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇವರಾಜ ಅರಸು ದಾಖಲೆ ಬ್ರೇಕ್​​: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ

ದೇವರಾಜ ಅರಸು ಎಲ್ಲಾ ಕಾಂಗ್ರೆಸ್ಸಿಗರಿಂದ ಕೈಬಿಡಲ್ಪಟ್ಟ ದುಃಖಿತ ವ್ಯಕ್ತಿಯಾಗಿ ನಿಧನರಾದರು. ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದರ ಬಗ್ಗೆ ಚೆನ್ನಾಗಿ ತಿಳಿದಿರುತ್ತದೆ. ಭಾರತದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಗಳಾದ ಪವನ್ ಕುಮಾರ್ ಚಾಮ್ಲಿಂಗ್, ಒಡಿಶಾದ ನವೀನ್, ಜ್ಯೋತಿ ಬಸು, ಮೋಹನ್ ಲಾಲ್ ಸುಖಾಡಿಯಾ, ಮಾಣಿಕ್ ಸರ್ಕಾರ್, ಮಮತಾ ಬ್ಯಾನರ್ಜಿ, ನರೇಂದ್ರ ಮೋದಿ ಸೇರಿದಂತೆ ಎಲ್ಲರೂ ಅತಿ ದೀರ್ಘವಾದ ಅವಧಿಯ ಅಧಿಕಾರವನ್ನು ಅನುಭವಿಸಿದ್ದಾರೆ, ಅದೂ ಒಂದು ದಶಕಕ್ಕೂ ಹೆಚ್ಚು ಕಾಲ ಎಂಬುದು ವಿಶೇಷ.

ಆದರೂ ಸಿದ್ದರಾಮಯ್ಯ ಮತ್ತು ಅವರ ಅನುಯಾಯಿಗಳು ಈ ಅವಧಿಯಲ್ಲಿ ಯಾವುದೇ ಸಾಧನೆ ಮಾಡದ ಬಗ್ಗೆ ದಾಖಲೆ ನಿರ್ಮಿಸಿರುವುದಕ್ಕೆ ಖುಷಿಪಡಬೇಕು. ಇಷ್ಟು ದೀರ್ಘ ಅವಧಿಯಲ್ಲಿ ಅಧಿಕಾರದಲ್ಲಿದ್ದರೂ ಯಾವುದೇ ಉತ್ತಮ ಕೆಲಸ ಮಾಡದೆ ಇರುವುದಕ್ಕೆ ಅವರನ್ನು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಅಥವಾ ಗಿನ್ನೆಸ್ ವಿಶ್ವ ದಾಖಲೆಗಳಿಗೆ ಸೇರಿಸಿದರೂ ತಪ್ಪಾಗದು ಎಂದು ಲೆಹರ್ ಸಿಂಗ್ ಲೇವಡಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇತ್ತ ಅಧ್ಯಕ್ಷರ ಸೆರೆ, ಅತ್ತ ವೆನೆಜುವೆಲಾ ಮಾರುಕಟ್ಟೆ ಹಿಗ್ಗು; ಕುಸಿಯಬೇಕಿದ್ದ ಷೇರುಪೇಟೆ ಹಿರಿಹಿರಿ ಹಿಗ್ಗುತ್ತಿರುವುದೇಕೆ? – Kannada News | Venezuela stock market rise 17pc in one day after US captures president Nicolas Maduro

ನ್ಯೂಯಾರ್ಕ್, ಜನವರಿ 6: ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮೆಡುರೊರನ್ನು (Nicolas Maduro) ಅಮೆರಿಕ ಸೆರೆ ಹಿಡಿದ ಬೆನ್ನಲ್ಲೇ ಆ ದೇಶದ ಮಾರುಕಟ್ಟೆ ಜಿಗಿಜಿಗಿದಾಡತೊಡಗಿದೆ. ವೆನೆಜುವೆಲಾದ ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್ ಜನವರಿ 5ರಂದು ಒಂದೇ ದಿನ ಶೇ. 17ರಷ್ಟು ಏರಿದೆ. ಅಧ್ಯಕ್ಷರ ನಿರ್ಗಮನದ ಸುದ್ದಿಗೆ ಮಾರುಕಟ್ಟೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವಂತೆ ಕಾಣುತ್ತಿದೆ. ಜನವರಿ 5ರಂದು ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್​ನ (Carcas stock exchange) ಸೂಚ್ಯಂಕವು 2,597.7 ಅಂಕಗಳೊಂದಿಗೆ ಟ್ರೇಡಿಂಗ್ ಮುಗಿಸಿತು. ಒಂದು ದಿನದಲ್ಲಿ ಶೇ. 16.45ರಷ್ಟು ಏರಿಕೆ ಆಗಿದೆ. ಹಲವು ವರ್ಷಗಳಲ್ಲಿ ಒಂದು ದಿನದಲ್ಲಿ ಕಂಡ ಅತಿದೊಡ್ಡ ಹೆಚ್ಚಳ ಇದು.

ವೆನೆಜುವೆಲಾದ ಬಿವಿಸಿ (ಬೋಲ್ಸಾ ಡೀ ವೆಲೋರೆಸ್ ಡೀ ಕ್ಯಾರಕಾಸ್) ದಕ್ಷಿಣ ಅಮೆರಿಕದಲ್ಲೇ ಅತ್ಯಂತ ಚಿಕ್ಕ ಷೇರುಪೇಟೆ ಎನಿಸಿದೆ. ಇದರಲ್ಲಿ ಲಿಸ್ಟ್ ಆಗಿರುವ ಕಂಪನಿಗಳ ಸಂಖ್ಯೆ ಕೇವಲ 15 ಮಾತ್ರ. ಕಳೆದ ವರ್ಷದ ಅಂಕಿ ಅಂಶ ತೆಗೆದುಕೊಂಡರೆ ಇಲ್ಲಿ ದಿನಕ್ಕೆ ನಡೆಯುವ ಟ್ರೇಡಿಂಗ್ ಮೌಲ್ಯ 1 ಮಿಲಿಯನ್ ಡಾಲರ್ ಕೂಡ ಇಲ್ಲ. ಅಂದರೆ ಸುಮಾರು 9 ಕೋಟಿ ರೂನಷ್ಟು ಮಾತ್ರವೇ ಷೇರುಗಳ ಟ್ರೇಡಿಂಗ್ ಒಂದು ದಿನದಲ್ಲಿ ನಡೆಯುವುದು. ಆದರೂ ಕೂಡ ಒಂದು ದಿನದಲ್ಲಿ ಶೇ. 17ರಷ್ಟು ಏರಿಕೆ ಆಗಿರುವುದು ಗಮನಾರ್ಹ ಸಂಗತಿ.

ಇದನ್ನೂ ಓದಿ: ರಾಮ್​ಜೆಟ್ ಶಕ್ತ ಆರ್ಟಿಲರಿ ಶೆಲ್ ಹೊಂದಿರುವ ವಿಶ್ವದ ಮೊದಲ ಸೇನೆ ಭಾರತದ್ದು; ಏನಿದರ ವಿಶೇಷತೆ?

ವೆನೆಜುವಲಾ ಮಾರುಕಟ್ಟೆ ಖುಷಿಯಾಗಿದೆಯಾ?

ಅಸಮರ್ಪಕ ಆಡಳಿತ ನಿರ್ವಹಣೆ ಸೇರಿದಂತೆ ವಿವಿಧ ಕಾರಣಗಳಿಗೆ ವೆನಿಜುವೆಲಾದ ಆರ್ಥಿಕತೆ ಬಹಳ ಹೀನಾಯ ಸ್ಥಿತಿಯಲ್ಲಿದೆ. ಆದಾಯ ಹರಿವು ಸಂಕುಚಿತಗೊಂಡು, ಸಾಲ ಸೋಲ ವಿಪರೀತ ಮಾಡಿಕೊಂಡಿದೆ. ಅಮೆರಿಕದ ನಿರ್ಬಂಧದಿಂದಾಗಿ ಆ ದೇಶಕ್ಕೆ ಹೊಸ ಹೂಡಿಕೆಗಳು ವಿರಳವಾಗಿವೆ. ಬಾಂಡ್​ಗಳ ಹಣ (ಸಾಲ) ಮರುಪಾವತಿಸಲೂ ಸರ್ಕಾರಕ್ಕೆ ಹಣ ಇಲ್ಲದಂತಾಗಿದೆ.

ಇಂಥ ಪರಿಸ್ಥಿತಿಯಲ್ಲಿ, ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮೆಡುರೊರನ್ನು ಅಮೆರಿಕ ಸೆರೆ ಹಿಡಿದು ಕರೆದೊಯ್ದಿರುವ ಬೆಳವಣಿಗೆಯನ್ನು ಅಲ್ಲಿಯ ವ್ಯಾಪಾರ ವಲಯ ಸಕಾರಾತ್ಮಕವಾಗಿ ಪರಿಗಣಿಸಿರಬಹುದು. ಬೇರೆ ಆಡಳಿತ ಬಂದು, ನಿರ್ಬಂಧಗಳು ತೆರವುಗೊಂಡು, ಹೊಸ ಹೂಡಿಕೆಗಳು ಹರಿದು ಬಂದರೆ ಆರ್ಥಿಕತೆಗೆ ಪುಷ್ಟಿ ಸಿಗಬಹುದು ಎನ್ನುವ ನಿರೀಕ್ಷೆ ಉದ್ಯಮ ವಲಯದಲ್ಲಿದೆ.

ಇದನ್ನೂ ಓದಿ: ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ?

ಅಪಾರ ತೈಲ ಸಂಪತ್ತಿದ್ದರೂ ವೆನೆಜುವೆಲಾಗೆ ಯಾಕೆ ಈ ದುಸ್ಥಿತಿ?

ವೆನೆಜುವೆಲಾದ ಆರ್ಥಿಕತೆಯು ತೈಲದಿಂದ ಬರುವ ಆದಾಯದ ಮೇಲೆ ಅವಲಂಬಿತವಾಗಿದೆ. ಪರ್ಯಾಯ ಉದ್ಯಮಗಳನ್ನು ಬೆಳೆಸಲಿಲ್ಲ. ಸರ್ಕಾರ ವಿಪರೀತ ಖರ್ಚು ಮಾಡಿತು. ನೋಟುಗಳನ್ನು ಮನಬಂದಂತೆ ಪ್ರಿಂಟ್ ಮಾಡಿತು. ಪರಿಣಾಮವಾಗಿ ವಿಪರೀತ ಹಣದುಬ್ಬರವಾಯಿತು. ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಿ, ಸರ್ಕಾರವೇ ಅವುಗಳನ್ನು ನಡೆಸತೊಡಗಿತು. ಉತ್ಪಾದನೆ ಕುಂಠಿತಗೊಂಡಿತು.

ತೈಲದಿಂದ ಬಂದ ಹಣವನ್ನು ಹೊಸ ತಂತ್ರಜ್ಞಾನ ಅಭಿವೃದ್ಧಿಗೂ ತೊಡಗಿಸಲಿಲ್ಲ. ಸಬ್ಸಿಡಿ ಮತ್ತಿತರ ಯೋಜನೆಗಳಿಗೆ ಹೆಚ್ಚಿನ ಹಣ ಹೋಯಿತು. ತೈಲ ಬೆಲೆ ಕಡಿಮೆ ಆಗತೊಡಗಿದಂತೆ ಅದರ ಆರ್ಥಿಕತೆ ತೀರಾ ಚಿಂತಾಜನಕ ಸ್ಥಿತಿ ತಲುಪಿತು. ಜೊತೆಗೆ, ಅಮೆರಿಕದ ನಿಷೇಧದ ಬರೆಯೂ ವೆನೆಜುವೆಲಾವನ್ನು ಜರ್ಝರಿತಗೊಳಿಸಿದೆ. ಈಗ ಅಲ್ಲಿಯ ಪರಿಸ್ಥಿತಿ ಬದಲಾವಣೆ ಆಗುವ ಸಾಧ್ಯತೆ ಕಾಣುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಪತಂಜಲಿ ದಿವ್ಯ ದಂತಮಂಜನ್ ಟೂತ್ ಪೇಸ್ಟ್; ಹಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಆಯುರ್ವೇದ ಉತ್ಪನ್ನ – Kannada News | Patanjali Divya Dantmanjan paste helps to overcome many dental problems

ಇತ್ತೀಚಿನ ದಿನಗಳಲ್ಲಿ ದಂತ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಕೆಟ್ಟ ಆಹಾರ ಪದ್ಧತಿ, ಅತಿಯಾದ ಸಕ್ಕರೆ ಸೇವನೆ, ತಂಬಾಕು ಸೇವನೆ ಮಾಡುವುದು, ಸರಿಯಾಗಿ ಹಲ್ಲುಜ್ಜದೇ ಇರುವುದು, ಮತ್ತು ಒತ್ತಡ ಇವೆಲ್ಲವೂ ಹಲ್ಲು ಮತ್ತು ಒಸಡುಗಳಿಗೆ ಹಾನಿ ಮಾಡುತ್ತವೆ. ಹಲ್ಲುನೋವು, ಒಸಡುಗಳಲ್ಲಿ ರಕ್ತಸ್ರಾವ, ಪಯೋರಿಯಾ ಮತ್ತು ಬಾಯಿಯ ದುರ್ವಾಸನೆಯಂತಹ ಸಮಸ್ಯೆಗಳು ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರಲ್ಲೂ ಸಾಮಾನ್ಯವಾಗುತ್ತಿವೆ. ಈ ಸಂದರ್ಭಗಳಲ್ಲಿ, ಆಯುರ್ವೇದ ಟೂತ್‌ಪೇಸ್ಟ್ ಉತ್ತಮ ಆಯ್ಕೆಯಾಗಿದೆ. ಪತಂಜಲಿಯ ದಿವ್ಯ ದಂತಮಂಜನ್ ಪೇಸ್ಟ್ (Patanjali Divya Dantmanjan toothpaste) ಹಲ್ಲು ಮತ್ತು ಒಸಡುಗಳ ಆರೈಕೆಗೆ ಸಹಾಯ ಮಾಡುವ ನೈಸರ್ಗಿಕ ಆಯುರ್ವೇದ ಉತ್ಪನ್ನವಾಗಿದೆ.

ಆಯುರ್ವೇದದಲ್ಲಿ, ದಂತ ಆರೋಗ್ಯವು ಒಟ್ಟಾರೆ ದೇಹದ ಆರೋಗ್ಯಕ್ಕೆ ಸಂಬಂಧಿಸಿದೆ. ದಿವ್ಯ ದಂತಮಂಜನ್ ಅನ್ನು ನೈಸರ್ಗಿಕ ಗಿಡಮೂಲಿಕೆಗಳಿಂದ ತಯಾರಿಸಲಾಗಿದೆ. ಇದು ಹಲ್ಲುಗಳನ್ನು ಸ್ವಚ್ಛಗೊಳಿಸಲು ಮತ್ತು ಒಸಡುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ದಿವ್ಯ ದಂತಮಂಜನ್ ಎಂಥ ಹಲ್ಲಿನ ಸಮಸ್ಯೆಗಳಿಗೆ ಪ್ರಯೋಜನಕಾರಿಯಾಗಿದೆ, ಅದರಲ್ಲಿ ಯಾವ್ಯಾವ ಅಂಶಗಳಿವೆ, ಆ ಪೇಸ್ಟ್ ಅನ್ನು ಹೇಗೆ ಬಳಸಬಹುದು ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: ಚರ್ಮದ ಸಮಸ್ಯೆಗಳನ್ನು ನಿವಾರಿಸಬಲ್ಲುದು ಪತಂಜಲಿಯ ಈ ಆಯುರ್ವೇದ ತೈಲ

ದಿವ್ಯ ದಂತಮಂಜನವು ಯಾವ ದಂತ ಸಮಸ್ಯೆಗಳಿಗೆ ಪ್ರಯೋಜನಕಾರಿ?

ದಿವ್ಯ ದಂತಮಂಜನ್ ಅನ್ನು ಅನೇಕ ಸಾಮಾನ್ಯ ದಂತ ಸಮಸ್ಯೆಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಇದು ಹಲ್ಲುನೋವು, ಒಸಡು ಊತ ಮತ್ತು ಒಸಡು ರಕ್ತಸ್ರಾವ ನಿವಾರಿಸಲು ಸಹಾಯ ಮಾಡುತ್ತದೆ. ಪಯೋರಿಯಾ ಸಮಸ್ಯೆ ಇದ್ದರೆ, ಈ ದಂತಮಂಜನದ ನಿಯಮಿತ ಬಳಕೆಯಿಂದ ಒಸಡುಗಳನ್ನು ಬಲಪಡಿಸಬಹುದು. ಇದು ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡಲು ಮತ್ತು ಹಲ್ಲುಗಳಿಂದ ಪ್ಲೇಕ್ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ದುರ್ಬಲ ಹಲ್ಲುಗಳನ್ನು ಬಲಪಡಿಸಲು ಮತ್ತು ಕುಳಿಗಳನ್ನು ತಡೆಗಟ್ಟಲು ಸಹ ಇದನ್ನು ಬಳಸಲಾಗುತ್ತದೆ. ಆಯುರ್ವೇದ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ಇದನ್ನು ದೀರ್ಘಕಾಲೀನ ಬಳಕೆಗೆ ಸಹ ಸುರಕ್ಷಿತವೆಂದು ಪರಿಗಣಿಸಲಾಗುತ್ತದೆ.

ದಿವ್ಯ ಟೂತ್‌ಪೇಸ್ಟ್‌ನಲ್ಲಿರುವ ಪದಾರ್ಥಗಳು ಯಾವುವು?

ಹಲ್ಲು ಮತ್ತು ಒಸಡುಗಳಿಗೆ ಪ್ರಯೋಜನಕಾರಿ ಎಂದು ಹೇಳಲಾಗುವ ಹಲವಾರು ಆಯುರ್ವೇದ ಪದಾರ್ಥಗಳನ್ನು ಈ ದಿವ್ಯ ದಂತಮಂಜನ್ ಒಳಗೊಂಡಿದೆ. ಬೇವು ಮತ್ತು ಬಾಬುಲ್ (ಅಗಸೆ) ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಲು ಹೆಸರುವಾಸಿಯಾಗಿದೆ. ಲವಂಗವು ಹಲ್ಲುನೋವುಗಳನ್ನು ನಿವಾರಿಸುತ್ತದೆ ಎಂದು ತಿಳಿದುಬಂದಿದೆ. ವಜ್ರದಂತಿ ಒಸಡುಗಳನ್ನು ಬಲಪಡಿಸುತ್ತದೆ . ಪುದೀನ ಬಾಯಿಯನ್ನು ತಾಜಾಗೊಳಿಸುತ್ತದೆ ಮತ್ತು ಬಾಯಿಯ ದುರ್ವಾಸನೆಯನ್ನು ಕಡಿಮೆ ಮಾಡುತ್ತದೆ. ಒಟ್ಟಾಗಿ, ಈ ನೈಸರ್ಗಿಕ ಪದಾರ್ಥಗಳು ಹಲ್ಲುಗಳನ್ನು ಸ್ವಚ್ಛಗೊಳಿಸಲು ಮತ್ತು ಬಾಯಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಚಳಿಗಾಲದಲ್ಲಿ ರಕ್ತದೊಡ್ಡ ಅಪಾಯ ಹೆಚ್ಚು; ಇಲ್ಲಿದೆ ಉಪಯುಕ್ತವಾಗಬಲ್ಲ ಕೆಲ ಯೋಗಾಸನಗಳು

ದಿವ್ಯ ದಂತಮಂಜನ್ ಟೂತ್ ಪೇಸ್ಟ್ ಹೇಗೆ ಬಳಸುವುದು?

ದಿವ್ಯ ದಂತಮಂಜನವನ್ನು ಪ್ರತಿದಿನ ಬೆಳಿಗ್ಗೆ ಮತ್ತು ರಾತ್ರಿ ಬಳಸಬಹುದು. ಹಲ್ಲುಜ್ಜುವ ಬ್ರಷ್ ಅಥವಾ ಬೆರಳಿಗೆ ಸ್ವಲ್ಪ ಪೇಸ್ಟ್ ಹಚ್ಚಿ ಮತ್ತು ಅದನ್ನು ನಿಮ್ಮ ಹಲ್ಲು ಮತ್ತು ಒಸಡುಗಳಿಗೆ ನಿಧಾನವಾಗಿ ಮಸಾಜ್ ಮಾಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ಉತ್ತಮ ಫಲಿತಾಂಶಗಳಿಗಾಗಿ, ನಿಯಮಿತವಾಗಿ ಬಳಸಿ. ಅತಿಯಾದ ಪೇಸ್ಟ್ ಹಾಕಿಕೊಂಡು ಉಜ್ಜುವುದನ್ನು ತಪ್ಪಿಸಿ. ನಿಮ್ಮ ಹಲ್ಲುಗಳು ಅಥವಾ ಒಸಡುಗಳ ಸಮಸ್ಯೆ ನಿವಾರಣೆ ಆಗದಿದ್ದರೆ ದಂತ ವೈದ್ಯರನ್ನು ಸಂಪರ್ಕಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

600 ಕ್ಕೂ ಹೆಚ್ಚು ರನ್‌ಗಳ ಹ್ಯಾಟ್ರಿಕ್; ಮಹಾ ದಾಖಲೆ ಬರೆದ ದೇವದತ್ ಪಡಿಕ್ಕಲ್

Source link

ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ – Kannada News | Will Trump Kidnap India’s PM Modi? Congress Leader Prithviraj Chavan Remark Sparks Controversy

ಮುಂಬೈ, ಜನವರಿ 6: ಭಾರತ-ಅಮೆರಿಕಾ ದೇಶಗಳ ನಡುವಿನ ವ್ಯಾಪಾರ ಮತ್ತು ರಾಷ್ಟ್ರೀಯ ಭದ್ರತೆಯ ಕುರಿತು ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಇಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಪ್ರಸ್ತಾವಿತ ಶೇ. 50ರಷ್ಟು ಸುಂಕವು ಭಾರತ-ಅಮೆರಿಕಾ ನಡುವಿನ ವ್ಯಾಪಾರವನ್ನು ಅದರಲ್ಲೂ ವಿಶೇಷವಾಗಿ ಅಮೆರಿಕಕ್ಕೆ ಭಾರತದ ರಫ್ತುಗಳನ್ನು ಪರಿಣಾಮಕಾರಿಯಾಗಿ ಸ್ಥಗಿತಗೊಳಿಸುತ್ತದೆ ಎಂದು ಎಚ್ಚರಿಸಿದ ಪೃಥ್ವಿರಾಜ್ ಚೌಹಾಣ್, ವೆನೆಜುವೆಲಾವನ್ನು (Venezuela) ಉಲ್ಲೇಖಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಭಾರತದ ಪ್ರಧಾನಿಯನ್ನೂ ಅಪಹರಿಸುತ್ತಾರಾ? ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ.

ಅವರ ಈ ಹೇಳಿಕೆಗಳು ವಿವಾದವನ್ನು ಹುಟ್ಟುಹಾಕಿದೆ. ಇಂದು ವರದಿಗಾರರೊಂದಿಗೆ ಮಾತನಾಡಿದ ಪೃಥ್ವಿರಾಜ್ ಚೌಹಾಣ್, “ಭಾರೀ ಸುಂಕವು ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ವಹಿವಾಟು ಸಾಧ್ಯವಾಗದಂತೆ ಮಾಡುತ್ತದೆ. ಇದು ಭಾರತವು ಪರ್ಯಾಯ ರಫ್ತು ಮಾರುಕಟ್ಟೆಗಳನ್ನು ಹುಡುಕುವಂತೆ ಮಾಡುತ್ತದೆ. ಹಾಗಾದರೆ, ಮುಂದೆ ಏನು? ವೆನೆಜುವೆಲಾದಲ್ಲಿ ನಡೆದಂತಹ ಘಟನೆಯೇ ಭಾರತದಲ್ಲಿ ನಡೆಯುತ್ತದೆಯೇ? ಟ್ರಂಪ್ ನಮ್ಮ ದೇಶದ ಪ್ರಧಾನಿಯನ್ನು ಕೂಡ ಅಪಹರಿಸುತ್ತಾರೆಯೇ?” ಎಂದು ಕೇಳಿದ್ದಾರೆ.

ಇದನ್ನೂ ಓದಿ: ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್​​ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ!

ವೆನೆಜುವೆಲಾದ ಅಧ್ಯಕ್ಷ ಮಡುರೋ ಮತ್ತು ಅವರ ಪತ್ನಿಯನ್ನು ಟ್ರಂಪ್ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತದ ಪರಿಸ್ಥಿತಿಯನ್ನು ಪೃಥ್ವಿರಾಜ್ ಚೌಹಾಣ್ ವೆನೆಜುವೆಲಾದ ಜೊತೆ ಹೋಲಿಕೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪೃಥ್ವಿರಾಜ್ ಚೌಹಾಣ್ ವಿವಾದಕ್ಕೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಆಪರೇಷನ್ ಸಿಂಧೂರ್ ಬಗ್ಗೆ ಕೂಡ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೊದಲ ದಿನವೇ ಭಾರತ ಹಿನ್ನಡೆ ಅನುಭವಿಸಿತ್ತು ಎಂದು ಅವರು ಆರೋಪಿಸಿದ್ದರು. ಆ ಹೇಳಿಕೆಗೆ ರಕ್ಷಣಾ ತಜ್ಞರು ಮತ್ತು ಕೇಂದ್ರ ಸರ್ಕಾರದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅದು ಭಾರತೀಯ ಸೇನೆಗೆ ಮಾಡಿದ ಅವಮಾನ ಎಂದು ಟೀಕೆ ವ್ಯಕ್ತವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ದಿ ಫ್ಯಾಮಿಲಿ ಮ್ಯಾನ್’ ನಿರ್ದೇಶಕರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ? – Kannada News | Salman Khan likely to do action comedy movie with The Family Man director Raj DK

ನಟ ಸಲ್ಮಾನ್ ಖಾನ್ (Salman Khan) ಅವರು ಇತ್ತೀಚಿನ ವರ್ಷಗಳಲ್ಲಿ ದೊಡ್ಡ ಗೆಲುವು ಕಂಡಿಲ್ಲ. ಬೇರೆ ಹೀರೋಗಳೆಲ್ಲ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮೇಲೆ ಕಣ್ಣಿಟ್ಟಿದ್ದರೆ ಸಲ್ಮಾನ್ ಖಾನ್ ಅವರ ಸಿನಿಮಾಗಳು ಜಸ್ಟ್ ಪಾಸ್ ಆಗಲು ಕಷ್ಟಪಡುತ್ತಿವೆ. ಹಾಗಾಗಿ ಅವರು ಒಂದು ಗೊಡ್ಡ ಗೆಲುವಿಗಾಗಿ ಕಾಯುತ್ತಿದ್ದಾರೆ. ಅವರು ನಟಿಸಿರುವ ‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅದರ ನಡುವೆ ಅವರು ಹೊಸ ಸಿನಿಮಾದ ಮಾತುಕಥೆಯಲ್ಲಿ ತೊಡಗಿಕೊಂಡಿದ್ದಾರೆ. ಈಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ರಾಜ್-ಡಿಕೆ (Raj DK) ಜೊತೆಯಲ್ಲಿ ಸಿನಿಮಾ ಮಾಡಲು ಸಲ್ಮಾನ್ ಖಾನ್ ಆಲೋಚಿಸುತ್ತಿದ್ದಾರೆ.

ನಿರ್ದೇಶಕರಾದ ರಾಜ್ ಮತ್ತು ಡಿಕೆ ಅವರಿಗೆ ಚಿತ್ರರಂಗದಲ್ಲಿ ಮತ್ತು ವೆಬ್ ಸಿರೀಸ್ ಕ್ಷೇತ್ರದಲ್ಲಿ ಸಖತ್ ಬೇಡಿಕೆ ಇದೆ. ‘ದಿ ಫ್ಯಾಮಿಲಿ ಮ್ಯಾನ್’ ವೆಬ್ ಸರಣಿ ಮೂಲಕ ಅವರಿಬ್ಬರು ಅಪಾರ ಖ್ಯಾತಿ ಗಳಿಸಿದ್ದಾರೆ. ಅವರ ಜೊತೆ ಸಲ್ಮಾನ್ ಖಾನ್ ಹೊಸ ಸಿನಿಮಾ ಮಾಡುವ ಸಾಧ್ಯತೆ ಇದೆ. ಈಗಾಗಲೇ ರಾಜ್ ಮತ್ತು ಡಿಕೆ ಜೊತೆ ಸಲ್ಮಾನ್ ಖಾನ್ ಅವರು ಒಂದು ಸುತ್ತಿನ ಮಾತುಕಥೆ ನಡೆಸಿದ್ದಾರೆ ಎನ್ನಲಾಗಿದೆ.

ರಾಜ್ ಮತ್ತು ಡಿಕೆ ಜೊತೆ ಸಲ್ಮಾನ್ ಖಾನ್ ಅವರು ಆ್ಯಕ್ಷನ್-ಕಾಮಿಡಿ ಶೈಲಿಯ ಸಿನಿಮಾ ಮಾಡುವ ನಿರೀಕ್ಷೆ ಇದೆ. ನಿರ್ದೇಶಕರು ಹೇಳಿರುವ ಬೇಸಿಕ್ ಐಡಿಯಾ ಕೇಳಿ ಸಲ್ಮಾನ್ ಖಾನ್ ಮೆಚ್ಚಿಕೊಂಡಿದ್ದಾರಂತೆ. ಆದರೆ ಈ ಸಿನಿಮಾ ಸೆಟ್ಟೇರಲು ಇನ್ನೂ ಹಲವು ಅಂಶಗಳು ಕೂಡಿಬರಬೇಕು. ಅಂತಿಮವಾಗಿ ಸಲ್ಮಾನ್ ಖಾನ್ ಅವರು ಗ್ರೀನ್ ಸಿಗ್ನಲ್ ನೀಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.

‘ಎಲ್ಲವೂ ಅಂದುಕೊಂಡಂತೆ ನಡೆದರೆ ಸಲ್ಮಾನ್ ಖಾನ್ ಅವರು ಸಿನಿಮಾ ಒಪ್ಪಿಕೊಳ್ಳುತ್ತಾರೆ. 2026ರ ಅಂತ್ಯದ ವೇಳೆ ಸಿನಿಮಾದ ಶೂಟಿಂಗ್ ಆರಂಭಿಸಲು ರಾಜ್ ಮತ್ತು ಡಿಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ’ ಎಂದು ಮೂಲಗಳು ಹೇಳಿರುವುದಾಗಿ ಪಿಂಕ್​ವಿಲ್ಲಾ ವರದಿ ಮಾಡಿದೆ. ಸದ್ಯಕ್ಕೆ ಎಲ್ಲವೂ ಅಂತೆ-ಕಂತೆಗಳ ಹಂತದಲ್ಲಿ ಇವೆ.

ಇದನ್ನೂ ಓದಿ: ‘ಗಲ್ವಾನ್’ ಟ್ರೇಲರ್ ಮೂಲಕ ಟ್ರೋಲ್ ಆದ ಸಲ್ಮಾನ್ ಖಾನ್; ನೆನಪಾಯ್ತು GOT ದೃಶ್ಯ

ಸಲ್ಮಾನ್ ಖಾನ್ ನಟನೆಯ ‘ಸಿಕಂದರ್’ ಸಿನಿಮಾ 2025ರಲ್ಲಿ ಬಿಡುಗಡೆ ಆಯಿತು. ಆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ ಆಗಿದ್ದರು. ಎ.ಆರ್. ಮುರುಗದಾಸ್ ನಿರ್ದೇಶನ ಮಾಡಿದ್ದ ಆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸೋತಿತು. ಈಗ ‘ಬ್ಯಾಟಲ್ ಆಫ್ ಗಲ್ಮಾನ್’ ಚಿತ್ರವಾದರೂ ಗೆಲ್ಲುತ್ತಾ ಎಂಬ ಕೌತುಕದೊಂದಿಗೆ ಸಿನಿಪ್ರಿಯರು ಈ ಸಿನಿಮಾದ ಬಿಡುಗಡೆಯನ್ನು ಎದುರುನೋಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraja Urs Record; CM Says, I Am Eternally Grateful for the Opportunity to Serve You All

ಬೆಂಗಳೂರು, ಜನವರಿ 06: ದೇವರಾಜ ಅರಸು (Devaraj Urs) ಅವರ ದಾಖಲೆಯನ್ನು ಮುರಿಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಬಳಗ ಸೇರಿದಂತೆ ರಾಜ್ಯಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ: ಸಿದ್ದರಾಮಯ್ಯ

ದೀರ್ಘಾವಧಿ ಮುಖ್ಯಮಂತ್ರಿ ಆಗಿ ದಾಖಲೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​​

ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ಕೆಎನ್​​ ರಾಜಣ್ಣ ಖಡಕ್​​ ಮಾತು

ಸಾಮಾಜಿಕ ನ್ಯಾಯದ ಬಂಡಿಯ ಪಯಣಕ್ಕೆ ಕರ್ನಾಟಕದಲ್ಲಿ ದೀರ್ಘ ಪರಂಪರೆ ಇದೆ. ಬಸವಣ್ಣನವರಿಂದ ಪ್ರಾರಂಭಗೊಂಡು ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಡಿ.ದೇವರಾಜ ಅರಸು ವರೆಗೆ ಹಲವಾರು ಮಹನೀಯರು ಈ ಬಂಡಿಯನ್ನು ಎಳೆದುಕೊಂಡು ಬಂದಿದ್ದಾರೆ. ಇದನ್ನು ಇನ್ನಷ್ಟು ಮುಂದಕ್ಕೆ ಎಳೆದುಕೊಂಡು ಹೋಗುವ ಅವಕಾಶ ನನಗೆ ಸಿಕ್ಕಿದೆ. ಈ ಅವಕಾಶವನ್ನು ಬದಲಾಗಿರುವ ಸಾಮಾಜಿಕ ಮತ್ತು ರಾಜಕೀಯದ ಸ್ಥಿತ್ಯಂತರಗಳ ಇತಿ-ಮಿತಿಯಲ್ಲಿ ಜವಾಬ್ದಾರಿಯಾಗಿ ನಾನು ಸ್ವೀಕರಿಸಿ, ಮುನ್ನಡೆಯುತ್ತಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ದೇವರಾಜ ಅರಸು ದಾಖಲೆ ಬ್ರೇಕ್​​: ಹೊಸ ಇತಿಹಾಸ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ

ಅಧಿಕಾರ, ಸಂಪತ್ತು ಮತ್ತು ಅವಕಾಶಗಳ ಹೆಬ್ಬಾಗಿಲನ್ನು ಸರ್ವರಿಗೂ ತೆರೆದು ಸಮಾನವಾಗಿ ಹಂಚಿಕೆ ಮಾಡದ ಹೊರತು ಸುಸ್ಥಿರವಾದ ಅಭಿವೃದ್ದಿಯನ್ನು ಕಾಣಲು ಸಾಧ್ಯ ಇಲ್ಲ ಎನ್ನುವುದು ಅರಸರ ಅಚಲ ನಂಬಿಕೆಯಾಗಿತ್ತು. ಇದಕ್ಕಾಗಿಯೇ ಅವಕಾಶ ವಂಚಿತ ಸಮುದಾಯಗಳಿಗೆ ಸೇರಿರುವ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದರು. ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ‌ ಹಂಚಿಕೆಯ ಪ್ರಕ್ರಿಯೆ ಪ್ರಾರಂಭಿಸಿದರು. ಮೀಸಲಾತಿಯ ಮೂಲಕ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೂಡಾ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು. ಜನಪ್ರತಿನಿಧಿಗಳೆಲ್ಲರಿಗೂ ಈ ಸಾಧನೆ ಪ್ರೇರಣೆಯಾಗಬೇಕು. ಇಂದಿನ ದಿನದ ವಿಶೇಷ ಸಂದರ್ಭದಲ್ಲಿ ನಮಗೆಲ್ಲ ಪ್ರೇರಣಾದಾಯಿಗಳು ಮತ್ತು ಪೂಜನೀಯರೂ ಆಗಿರುವ ಡಿ.ದೇವರಾಜ ಅರಸು ಅವರಿಗೆ ನಾನು ಗೌರವದ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version