ಪ್ರೀತಿಯಲ್ಲಿ ನಂಬಿಕೆ ದ್ರೋಹದ ಕಥೆ? ‘ಲವ್ ಸೀಸನ್ಸ್’ ಕನ್ನಡ ಸಿನಿಮಾ ಟೀಸರ್ ನೋಡಿ – Kannada News | Love Seasons Kannada movie teaser released Ft Mukunda Ramaswami

ಶೀರ್ಷಿಕೆ ಮೂಲಕವೇ ‘ಲವ್ ಸೀಸನ್ಸ್’ (Love Seasons) ಸಿನಿಮಾ ಗಮನ ಸೆಳೆದಿದೆ. ಇದು ಹೊಸಬರ ತಂಡದ ಸಿನಿಮಾ. ತಿಂಗಳ ಹಿಂದಷ್ಟೇ ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಈಗ ಟೀಸರ್ (Love Seasons Teaser) ಬಿಡುಗಡೆ ಮಾಡಲಾಗಿದೆ. ಅದರ ಜೊತೆಗೆ ಸುದ್ದಿಗೋಷ್ಠಿ ನಡೆಯಸಲಾಗಿದೆ. ಈ ವೇಳೆ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು. ಈ ಸಿನಿಮಾದಲ್ಲಿ ಮುಕುಂದ ರಾಮಸ್ವಾಮಿ ಅವರು ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ಅವರು ನಾಯಕಿಯರಾಗಿ ಅಭಿನಯಿಸಿದ್ದಾರೆ.

ರಂಗಭೂಮಿ ಹಿನ್ನೆಲೆ ಹೊಂದಿರುವ ಕೃತ್ವಿಕ್ ಅವರು ‘ಲವ್ ಸೀಸನ್ಸ್’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ‘ಕ್ಷತ್ರಿಯ’, ‘ಬುದ್ಧಿವಂತ 2’, ‘ಗುರುದೇವ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಈಗ ಅವರು ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಎನ್.ಆರ್. ಮಂಜುನಾಥ (ನೀಲೇರಿ) ಅವರು ‘ಲವ್ ಸೀಸನ್ಸ್’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ.

‘ಲವ್ ಸೀಸನ್ಸ್’ ಸಿನಿಮಾದ ಟೀಸರ್:

ಹಿರಿಯ ಕಲಾವಿದ ರಾಜೇಶ್ ನಟರಂಗ ಅವರು ‘ಲವ್ ಸೀಸನ್ಸ್’ ಚಿತ್ರದ ಬಹುಮುಖ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಿರ್ದೇಶಕರ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸಿದರು. ಜವಾಬ್ದಾರಿಯುತ ತಂದೆಯ ಪಾತ್ರವನ್ನು ಅವರು ಈ ಚಿತ್ರದಲ್ಲಿ ನಿಭಾಯಿಸಿದ್ದಾರೆ. ಪ್ರೀತಿ ಯಾವ ಕಾಲಕ್ಕೂ ಹಳತಾಗದ ವಿಷಯ. ಆ ಕಾನ್ಸೆಪ್ಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ ಎಂಬ ಸುಳಿವನ್ನು ಅವರು ನೀಡಿದರು.

Love Seasons Movie Team

ಈ ಸಿನಿಮಾಗೆ ವೀರ್ ಸಮರ್ಥ್ ಅವರು ಸಂಗೀತ ನೀಡಿದ್ದಾರೆ. ಕೆ. ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರಿ ಅವರ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನ, ಭಜರಂಗಿ ಮೋಹನ್‌ ಅವರ ನೃತ್ಯ ಸಂಯೋಜನೆ ಈ ಚಿತ್ರಕ್ಕಿದೆ. ಮಂಡ್ಯ ರಮೇಶ್, ಸಂಗೀತಾ ಅನಿಲ್, ಜಯತೀರ್ಥ, ಕಾಮಿಡಿ ಕಿಲಾಡಿ ಸದಾನಂದ, ಚೇತನ್ ದುರ್ಗ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಕೂಡ ಪಾತ್ರವರ್ಗದಲ್ಲಿ ಇದ್ದಾರೆ.

ಇದನ್ನೂ ಓದಿ: ಯಶಸ್ವಿಯಾಗಿ 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಹ್ಯಾಟ್ರಿಕ್ ಗೆಲುವು

‘ಲವ್ ಸೀಸನ್ಸ್’ ಸಿನಿಮಾ ಜೂನ್ ತಿಂಗಳಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ. ಸದ್ಯದಲ್ಲೇ ಹಾಡು ಮತ್ತು ಟ್ರೇಲರ್ ಬಿಡುಗಡೆ ಆಗಲಿದೆ. ಸಿನಿಮಾದ ಕಥೆ ಏನು ಎಂಬುದರ ಸುಳಿವು ಟೀಸರ್​ನಲ್ಲಿ ಸಿಕ್ಕಿದೆ. ‘ಹುಡುಗಿಯರನ್ನು ಅಷ್ಟು ಸುಲಭವಾಗಿ ನಂಬಬೇಡ’, ‘ನಮ್ ಹುಡುಗಿ ಸರಿಯಾಗಿದ್ದಾಳೆ ಎಂಬ ನಂಬಿಕೆ ನನಗೆ ಇದೆ’ ಎಂಬಿತ್ಯಾದಿ ಡೈಲಾಗ್​ಗಳು ಟೀಸರ್​ನಲ್ಲಿವೆ. ಆ ಮೂಲಕ ಇದು ಪ್ರೀತಿ, ನಂಬಿಕೆ ಮತ್ತು ದ್ರೋಹಕ್ಕೆ ಸಂಬಂಧಿಸಿದ ಕಥೆ ಇರುಬಹುದು ಎಂಬ ಸುಳಿವು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

RCB vs LSG: ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿದ ಹೇಜಲ್‌ವುಡ್ ಬೆಂಕಿ ಚೆಂಡು – Kannada News | IPL 2026: Rishabh Pant Suffers Elbow Injury in LSG vs RCB Match, Retires Hurt

ಐಪಿಎಲ್ 2026 (IPL 2026) ರ 23ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್‌ಜೈಂಟ್ಸ್ (RCB vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಲಕ್ನೋ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಇದರ ನಡುವೆ ಲಕ್ನೋ ತಂಡದ ನಾಯಕ ರಿಷಭ್ ಪಂತ್ (Rishabh Pant) ತಮ್ಮ ಮೊಣ ಕೈಗೆ ಗಂಭೀರವಾಗಿ ಗಾಯ ಮಾಡಿಕೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಪ್ರಸ್ತುತ ಪಂತ್ ರಿಟೈರ್ಡ್​ ಹರ್ಟ್​ ಆಗಿದ್ದು, ಆ ನಂತರ ಬ್ಯಾಟಿಂಗ್​ಗೆ ಬರಬಹುದು. ಆದರೆ ಅವರು ನೋವಿನಿಂದ ನರಳುತ್ತಿದ್ದನ್ನು ನೋಡಿದರೆ, ಅವರು ಮತ್ತೆ ಬ್ಯಾಟಿಂಗ್‌ ಮಾಡುವುದು ಕಷ್ಟ ಸಾಧ್ಯ.

ಪಂತ್ ಬಲ ಮೊಣಕೈಗೆ ಗಾಯ

ಲಕ್ನೋ ಇನ್ನಿಂಗ್ಸ್‌ನ ಐದನೇ ಓವರ್‌ನಲ್ಲಿ, ಜೋಶ್ ಹೇಲ್‌ವುಡ್ ಎಸೆದ ಚೆಂಡಿನ ಮೇಲೆ ರಿಷಭ್ ಪಂತ್ ಪುಲ್ ಶಾಟ್ ಆಡಲು ಪ್ರಯತ್ನಿಸಿದರು. ಆದಾಗ್ಯೂ ವೇಗದಲ್ಲಿ ಬಂದ ಚೆಂಡು ಪಂತ್ ಅವರ ಎಡ ಮೊಣಕೈಗೆ ಬಲವಾಗಿ ಬಡಿಯಿತು. ಚೆಂಡು ಮೊಣಕೈಗೆ ಬಿದ್ದ ಕೂಡಲೇ ಪಂತ್ ತೀವ್ರ ನೋವಿನಿಂದ ನರಳಲಾರಂಭಿಸಿದರು. ಇದನ್ನು ಗಮನಿಸಿದ ಅಂಪೈರ್‌ಗಳು ಸ್ವಲ್ಪ ಸಮಯದವರೆಗೆ ಆಟವನ್ನು ನಿಲ್ಲಿಸಿದರು.

ಲಕ್ನೋ ಫಿಸಿಯೋ ತಕ್ಷಣ ಮೈದಾನಕ್ಕೆ ಬಂದು ಪಂತ್ ಅವರ ಎಡಗೈಗೆ ಚಿಕಿತ್ಸೆ ನೀಡಿದರು. ನೋವು ನಿವಾರಿಸಲು ಮ್ಯಾಜಿಕ್ ಸ್ಪ್ರೇ ಬಳಸಿದರೂ, ಪಂತ್ ತಮ್ಮ ಎಡಗೈಯನ್ನು ಅಲುಗಾಡಿಸಲು ಸಹ ಸಾಧ್ಯವಾಗಲಿಲ್ಲ. ಫಿಸಿಯೋ ಜೊತೆ ದೀರ್ಘ ಚರ್ಚೆಯ ನಂತರ, ಪಂತ್ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳಲು ಬಯಸದೆ ಗಾಯಗೊಂಡು ನಿವೃತ್ತಿ ಹೊಂದಲು ನಿರ್ಧರಿಸಿದರು. ಕೇವಲ 3 ಎಸೆತಗಳನ್ನು ಎದುರಿಸಿದ ಪಂತ್ ಯಾವುದೇ ರನ್ ಗಳಿಸದೆ ಮೈದಾನವನ್ನು ತೊರೆದರು.

RCB vs LSG IPL 2026 Live Score: ಲಕ್ನೋ 4ನೇ ವಿಕೆಟ್ ಪತನ

ರೋಹಿತ್- ಕೊಹ್ಲಿಗೂ ಇಂಜುರಿ

ಪ್ರತಿ ಆವೃತ್ತಿಯಂತೆ ಈ ಆವೃತ್ತಿಯಲ್ಲೂ ಆಟಗಾರರ ಇಂಜುರಿ ಸರಣಿ ಮುಂದುವರೆದಿದೆ. ಇತ್ತೀಚೆಗೆ, ಮುಂಬೈ ಇಂಡಿಯನ್ಸ್‌ನ ರೋಹಿತ್ ಶರ್ಮಾ ಗಾಯದ ಕಾರಣದಿಂದಾಗಿ ನಿವೃತ್ತಿ ಹೊಂದಬೇಕಾಯಿತು. ಅವರು ಕೂಡ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿಯೇ ಗಾಯಗೊಂಡು ನಿವೃತ್ತರಾಗಿದ್ದರು. ಬ್ಯಾಟಿಂಗ್ ಮಾಡುವಾಗ ರೋಹಿತ್ ಅವರ ಬಲಗಾಲಿನಲ್ಲಿ ನೋವು ಕಾಣಿಸಿಕೊಂಡಿತು. ಹೀಗಾಗಿ ಮೈದಾನದಲ್ಲಿ ಚಿಕಿತ್ಸೆ ಪಡೆದ ರೋಹಿತ್ ಅವರ ಮೊಣಕಾಲಿಗೆ ಬ್ಯಾಂಡೇಜ್ ಹಾಕಲಾಯಿತು, ಆದರೆ ನೋವು ಉಲ್ಬಣಗೊಂಡ ಕಾರಣ ರೋಹಿತ್​ಗೆ ಬ್ಯಾಟಿಂಗ್‌ ಮುಂದುವರೆಸಲು ಸಾಧ್ಯವಾಗಲಿಲ್ಲ. ಏತನ್ಮಧ್ಯೆ, ವಿರಾಟ್ ಕೊಹ್ಲಿ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಇಂದಿನ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:34 pm, Wed, 15 April 26

Source link

ಮಲೇಷ್ಯಾ ಧರ್ಮಗುರುವಿನ ಲಿಂಕ್, ವಾಟ್ಸಾಪ್ ಚಾಟ್; ಕಗ್ಗಂಟಾಗುತ್ತಲೇ ಇದೆ ಟಿಸಿಎಸ್ ಮತಾಂತರ ಪ್ರಕರಣ – Kannada News | WhatsApp Chats, Malaysia Linked Preacher; TCS Nashik conversion case widens

ನವದೆಹಲಿ, ಏಪ್ರಿಲ್ 15: ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಬಿಪಿಒ ಕಚೇರಿಯಲ್ಲಿನ ಮತಾಂತರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದು ಕಾರ್ಪೋರೇಟ್ ಜಿಹಾದ್​ ಎಂದು ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ. ಈ ಪ್ರಕರಣದ ತನಿಖೆಯಲ್ಲಿ ಅಂತಾರಾಷ್ಟ್ರೀಯ ಸಂಪರ್ಕವಿರುವ ಮತಾಂತರ ಜಾಲವೊಂದು ಬೆಳಕಿಗೆ ಬಂದಿದೆ. ಫೆಬ್ರವರಿಯಲ್ಲಿ ಗುಪ್ತ ಪೊಲೀಸ್ ಕಾರ್ಯಾಚರಣೆ ನಡೆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಟಿಸಿಎಸ್​​ನಲ್ಲಿ (TCS) ರಹಸ್ಯವಾಗಿ ಹೌಸ್ ಕೀಪಿಂಗ್ ಸಿಬ್ಬಂದಿಯಂತೆ ನಿಯೋಜಿಸಲಾಗಿತ್ತು. ವಾಟ್ಸಾಪ್ ಚಾಟ್‌ಗಳು, ಕಿರುಕುಳಕ್ಕೊಳಗಾದವರ ಹೇಳಿಕೆಗಳು ಮತ್ತು ಶಂಕಿತ ಮಲೇಷ್ಯಾ ಸಂಬಂಧಿ ಧರ್ಮಗುರುವಿನ ವಿರುದ್ಧದ ಸಾಕ್ಷಿಗಳು ಆ ಕಚೇರಿಯೊಳಗೆ ಮತಾಂತರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬುದಕ್ಕೆ ಪುರಾವೆಗಳಾಗಿದ್ದವು ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಎಸ್‌ಐಟಿ ಮೂಲಗಳ ಪ್ರಕಾರ, ಆರೋಪಿಗಳ ಹೊರತಾಗಿ ಇನ್ನೂ 12 ಉದ್ಯೋಗಿಗಳನ್ನು ಗುರುತಿಸಲಾಗಿದೆ. ಇಲ್ಲಿಯವರೆಗೆ 8 ಮಹಿಳೆಯರು ಮತ್ತು ಒಬ್ಬ ಪುರುಷನ ದೂರುಗಳ ಆಧಾರದ ಮೇಲೆ 9 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಆರೋಪಗಳಲ್ಲಿ ಲೈಂಗಿಕ ಕಿರುಕುಳ, ಮದುವೆಯ ನೆಪದಲ್ಲಿ ಅತ್ಯಾಚಾರ, ಧಾರ್ಮಿಕ ಕುಶಲತೆ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡುವುದು ಸೇರಿವೆ.

ಇದನ್ನೂ ಓದಿ: ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು

ಆರೋಪಿಗಳಾದ ಟಿಸಿಎಸ್ ಉದ್ಯೋಗಿಗಳು ಮಹಿಳಾ ಸಹೋದ್ಯೋಗಿಗಳಿಗೆ ಕಿರುಕುಳ ನೀಡಿದ್ದಾರೆ ಮತ್ತು ಧಾರ್ಮಿಕ ಮತಾಂತರಕ್ಕೆ ಒತ್ತಡ ಹೇರಲು ಪ್ರಯತ್ನಿಸಿದ್ದಾರೆ ಎಂದು ಎಫ್‌ಐಆರ್‌ಗಳು ಹೇಳುತ್ತವೆ. ಈ ಘಟನೆಗಳ ಬಗ್ಗೆ 18ರಿಂದ 25 ವರ್ಷ ವಯಸ್ಸಿನ ಮಹಿಳೆಯರು ದೂರು ನೀಡಿದ್ದರು. 2022ರಿಂದ ಆರಂಭವಾಗಿ 3 ವರ್ಷಗಳಲ್ಲಿ ಈ ಘಟನೆಗಳು ನಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇಲ್ಲಿಯವರೆಗೆ, ಟಿಸಿಎಸ್​​ನ ಟೀಂ ಲೀಡರ್ ಮತ್ತು ಎಂಜಿನಿಯರ್‌ಗಳು ಸೇರಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇತರರ ವಿರುದ್ಧ ತನಿಖೆ ಮುಂದುವರೆದಿದೆ. ಹೆಚ್​ಆರ್​ ಮ್ಯಾನೇಜರ್ ನಿದಾ ಖಾನ್ ಅವರು ತಲೆಮರೆಸಿಕೊಂಡಿದ್ದು, ಅಧಿಕಾರಿಗಳು ಸಂಸ್ಥೆಯೊಳಗಿನ ಅವರ ಪಾತ್ರ ಮತ್ತು ನೇಮಕಾತಿ ಪದ್ಧತಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಜಾಲವನ್ನು ಪತ್ತೆಹಚ್ಚಲು ರಹಸ್ಯ ಕಾರ್ಯಾಚರಣೆ ನಡೆಸಲಾಗಿತ್ತು.

ಇದನ್ನೂ ಓದಿ: ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

ಪೊಲೀಸರು 4 ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಟಿಸಿಎಸ್​ ಕ್ಯಾಂಪಸ್‌ನೊಳಗೆ ನಿಯೋಜಿಸಿದ್ದರು. ಅವರ ಸಂಶೋಧನೆಗಳು ಈ ಆರೋಪಗಳನ್ನು ಪರಿಶೀಲಿಸಲು ಸಹಾಯ ಮಾಡಿದೆ. ಮಲೇಷ್ಯಾದೊಂದಿಗೆ ಸಂಪರ್ಕ ಹೊಂದಿದ್ದಾರೆಂದು ನಂಬಲಾದ ಇಮ್ರಾನ್ ಎಂದು ಗುರುತಿಸಲಾದ ವ್ಯಕ್ತಿ ವಾಟ್ಸಾಪ್ ಸಂಭಾಷಣೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ವೀಡಿಯೊ ಕರೆಗಳ ಮೂಲಕ ಪರಿಚಯಿಸಲ್ಪಟ್ಟ ಧರ್ಮಗುರು ಎಂದು ಶಂಕಿಸಲಾಗಿದೆ. ಅವರ ಗುರುತು ಮತ್ತು ಪಾತ್ರದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ.

ನೇಮಕಾತಿ ಪದ್ಧತಿಗಳು ಸೇರಿದಂತೆ ಟಿಸಿಎಸ್‌ನಲ್ಲಿ ಆಂತರಿಕ ಪ್ರಕ್ರಿಯೆಗಳನ್ನು ಪೊಲೀಸ್ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಮಹಾರಾಷ್ಟ್ರದ ಸಚಿವ ಗಿರೀಶ್ ಮಹಾಜನ್ ಕೆಲವು ಉದ್ಯೋಗಿಗಳು ಮಹಿಳೆಯರಿಗೆ ಉದ್ಯೋಗ ಮತ್ತು ಸಂಬಳದ ಭರವಸೆ ನೀಡಿ ಆಮಿಷವೊಡ್ಡಿದ್ದಾರೆ ಮತ್ತು ಅವರ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಪ್ರೋತ್ಸಾಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವಿಷಯ ಹೊರಬೀಳುತ್ತಿದ್ದಂತೆ ಟಿಸಿಎಸ್ ಕಟ್ಟುನಿಟ್ಟಾದ ಕ್ರಮ ತೆಗೆದುಕೊಂಡಿದ್ದು, ಆರೋಪಿಗಳಾಗಿರುವ ಉದ್ಯೋಗಿಗಳನ್ನು ಅಮಾನತುಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಕೋರ್ಟ್ ತೀರ್ಪಿನ ಬಳಿಕ ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ – Kannada News | Dharwad Yogesh Gowda Murder Case: Main Accused Basavaraj muttagi talks after Court verdict

ಧಾರವಾಡ, (ಏಪ್ರಿಲ್ 15): ಯೋಗೇಶ್ ಗೌಡ ಹತ್ಯೆ ಪ್ರಕರಣದ (Yogesh Gowda Murder Case) ಸುದೀರ್ಘ 10 ವರ್ಷಗಳ ಕಾಲ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದ್ದು, ಒಟ್ಟು ಆರೋಪಿಗಳ ಪೈಕಿ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಆದೇಶ ಹೊರಡಿಸಿದೆ. ಉಳಿದ ಆರೋಪಿಗಳಲ್ಲಿ ಇಬ್ಬರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ಮಾಫಿ ಸಾಕ್ಷಿಗಳೆಂದು ಪರಿಗಣಿಸಲಾಗಿದೆ. ಇನ್ನು ಕೋರ್ಟ್ ತೀರ್ಪಿನ ಬಳಿಕ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಪ್ರತಿಕ್ರಿಯಿಸಿದ್ದು, ಇದು ನ್ಯಾಯಕ್ಕೆ ಸಿಕ್ಕ ಜಯ. ನ್ಯಾಯಾಂಗ ಮೇಲೆ ವಿಶ್ವಾಸ ಹೆಚ್ಚಾಗಿದೆ. ಈ ತೀರ್ಪಿನಿಂದ ನ್ಯಾಯಾಂಗದ ಮೇಲೆ ವಿಶ್ವಾಸ ಬರುವಂತಾಗಿದೆ. ರಾಜಕಾರಣಿಗಳ ಮಾತು ಕೇಳದಂತೆ ಯುವಕರಿಗೆ ವಿನಂತಿಸಿಕೊಳ್ಳುವೆ. ನನಗೆ, ನನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ನನಗೆ ಪಾಪಪ್ರಜ್ಞೆ ಕಾಡುತ್ತಿತ್ತು. ಅದಕ್ಕೆ ಬಂದು ಸಾಕ್ಷಿ ನುಡಿದಿದ್ದೇನೆ. ನಾವು ದಾರಿ ತಪ್ಪಿದಾಗ ಕುಟುಂಬವೂ ದೂರವಾಗುತ್ತದೆ. ನಾವು ಮಾದರಿಯಾಗಿ ಜೀವನ ಮಾಡಬೇಕಾಗಿದೆ. ಕೆಲವು ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಆಗಲ್ಲ ಎಂದಿದ್ದಾರೆ.

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು

Source link

42 ವರ್ಷ ವಯಸ್ಸಿನ ಧನುಷ್​ಗೆ 20ರ ಪ್ರಾಯದ ಸಾರಾ ಅರ್ಜುನ್ ಜೋಡಿ – Kannada News | Sara Arjun Dhanush D56 movie casting age gap controversy details

ಬಾಲನಟಿಯಾಗಿ ಭಾರತೀಯ ಚಿತ್ರರಂಗಕ್ಕೆ ಪರಿಚಿತರಾಗಿ ಈಗ ನಾಯಕಿಯಾಗಿ ಯಶಸ್ಸು ಕಂಡಿರುವ ಸಾರಾ ಅರ್ಜುನ್ (Sara Arjun) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾದಲ್ಲಿ ಅವರ ನಟನೆ ಗಮನ ಸೆಳೆಯಿತು. ಈಗ ಕಾಲಿವುಡ್ ಸ್ಟಾರ್ ನಟ ಧನುಷ್ ಅಭಿನಯದ ಮುಂದಿನ ಚಿತ್ರಕ್ಕೆ (D56) ನಾಯಕಿಯಾಗಿ ಸಾರಾ ಅರ್ಜುನ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಹರದಾಡುತ್ತಿದೆ. ಧನುಷ್ (Dhanush) ಮತ್ತು ಸಾರಾ ಅರ್ಜುನ್ ನಡುವೆ ಇರುವ ವಯಸ್ಸಿನ ಅಂತರದ ಕಾರಣದಿಂದ ಈ ವಿಷಯ ಚರ್ಚೆ ಆಗುತ್ತಿದೆ.

ಸಾರಾ ಅರ್ಜುನ್ ಅವರು ಧನುಷ್​ಗೆ ನಾಯಕಿ ಆಗುತ್ತಾರೆ ಎಂಬ ವಿಷಯ ಕೇಳಿಬರುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ಶುರುವಾಗಿವೆ. ಇದಕ್ಕೆ ಮುಖ್ಯ ಕಾರಣ ಧನುಷ್ ಮತ್ತು ಸಾರಾ ನಡುವಿನ ವಯಸ್ಸಿನ ಅಂತರ. ಧನುಷ್ ಅವರಿಗೆ ಈಗ 42 ವರ್ಷ ವಯಸ್ಸು. ಆದರೆ ಸಾರಾ ಅರ್ಜುನ್ ಅವರಿಗೆ ಕೇವಲ 20 ವರ್ಷ ವಯಸ್ಸು!

ಇವರಿಬ್ಬರ ನಡುವೆ ಸುಮಾರು 22 ವರ್ಷಗಳಿಗೂ ಹೆಚ್ಚು ಅಂತರವಿದೆ. ಆದ್ದರಿಂದ ಚರ್ಚೆ ಜೋರಾಗಿದೆ. ಸಾರಾ ಅರ್ಜುನ್ ಅವರಿಗೆ ಇಂತಹ ಟೀಕೆಗಳು ಎದುರಾಗುತ್ತಿರುವುದು ಇದೇ ಮೊದಲಲ್ಲ. ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆ ನಟಿಸುವಾಗಲೂ ಇದೇ ರೀತಿಯ ವಯಸ್ಸಿನ ಅಂತರದ ಚರ್ಚೆಗಳು ನಡೆದಿದ್ದವು. ಆದರೆ, ಚಿತ್ರ ತೆರೆಕಂಡ ಮೇಲೆ ತಮ್ಮ ಪ್ರಬುದ್ಧ ಅಭಿನಯದ ಮೂಲಕ ಸಾರಾ ಅವರು ಟ್ರೋಲಿಗರಿಗೆ ತಕ್ಕ ಉತ್ತರ ನೀಡಿದ್ದರು.

ಈಗ ಎಲ್ಲರ ಕಣ್ಣು ಧನುಷ್ ಅಭಿನಯದ 56ನೇ ಚಿತ್ರದ ಮೇಲಿದೆ. ಸಾರಾ ಅವರು ಧನುಷ್ ಜೊತೆಗೂ ‘ಧುರಂಧರ್’ ರೀತಿಯ ಮ್ಯಾಜಿಕ್ ಮಾಡುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಚಿತ್ರದ ಕಥೆ ಮತ್ತು ಪಾತ್ರಕ್ಕೆ ಈ ಜೋಡಿ ಪೂರಕವಾಗಿದ್ದರೆ, ವಯಸ್ಸಿನ ಅಂತರದ ಬಗ್ಗೆ ನಡೆಯುತ್ತಿರುವ ಈ ಟೀಕೆ ತಾನಾಗಿಯೇ ತಣ್ಣಗಾಗಬಹುದು ಎಂಬುದು ಫ್ಯಾನ್ಸ್ ಅಭಿಪ್ರಾಯ.

ಇದನ್ನೂ ಓದಿ: ಮಧುಬಾಲಾ ಪಾತ್ರ ಮಾಡಲಿರುವ ಧುರಂಧರ್ ನಟಿ ಸಾರಾ ಅರ್ಜುನ್? ಬನ್ಸಾಲಿ ನಿರ್ಮಾಣದ ಚಿತ್ರಕ್ಕೆ ಸಿದ್ಧತೆ

‘ಧುರಂಧರ್ 2’ ದೊಡ್ಡ ಸಕ್ಸಸ್ ಆಗಿರುವುದರಿಂದ ಸಾರಾ ಅರ್ಜುನ್ ಅವರಿಗೆ ಭರ್ಜರಿ ಆಫರ್​ಗಳು ಬರುತ್ತಿವೆ. ಅವರ ವೃತ್ತಿಜೀವನದಲ್ಲಿ ‘D56’ ಒಂದು ಪ್ರಮುಖ ಮೈಲಿಗಲ್ಲಾಗುವ ಸಾಧ್ಯತೆಯಿದೆ. ವಯಸ್ಸಿನ ಅಂತರದ ಬಗ್ಗೆ ಕೇಳಿಬರುತ್ತಿರುವ ಟೀಕೆಗೆ ಸಾರಾ ಅರ್ಜುನ್ ಅವರು ಯಾವ ರೀತಿ ಉತ್ತರ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು? – Kannada News | May lose Vinay Kulkarni mla position for convicted In Yogesh Gowda Murder Case, What Next Option for Safe

ಬೆಂಗಳೂರು, (ಏಪ್ರಿಲ್ 15): ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ (Dharwad Yogesh Gowda Murder Case) ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಕೋರ್ಟ್​​ನಲ್ಲೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಇನ್ನು ನಾಳೆ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ ಕೋರ್ಟ್​​ನಲ್ಲಿ ವಾದಮಂಡನೆ ನಡೆಯಲಿದ್ದು, ಬಳಿಕ ಕೋರ್ಟ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ. ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಜೀವಾವಧಿ ಶಿಕ್ಷೆ, ಗರಿಷ್ಠ ಮರಣದಂಡನೆಗೆ ಅವಕಾಶವಿದ್ದು, ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನವನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು

ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಆತನ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ವಿನಯ್ ಕುಲಕರ್ಣಿ ಪ್ರಕರಣ ಸಂಬಂಧ ಕೊಲೆ, ಹಾಗೂ ಒಳಸಂಚು ಆರೋಪ ಸಾಬೀತು ಹಿನ್ನೆಲೆ ಕನಿಷ್ಠ ಜೀವಾವಧಿ ಶಿಕ್ಷೆ, ಗರಿಷ್ಠ ಮರಣದಂಡನೆಗೆ ಅವಕಾಶವಿದ್ದು, 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ ಶಾಸಕ ಸ್ಥಾನದಿಂದ ಅನರ್ಹತೆಗೊಳ್ಳಲಿದ್ದಾರೆ. ಹೀಗಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನಕ್ಕೆ ಕುತ್ತು ಬಂದಿದೆ.

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಕೇಸ್: ಕೈ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಜನ ದೋಷಿ, ಕೋರ್ಟ್ ಮಹತ್ವದ ತೀರ್ಪು

ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆ ಏನು?

ಸದ್ಯ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ನಾಳೆ ಅಂದರೆ ಏಪ್ರಿಲ್ 16) ಶಿಕ್ಷೆ ಪ್ರಮಾಣ ಎಷ್ಟು ಎನ್ನುವುದನ್ನು ಕೋರ್ಟ್ ಪ್ರಕಟಿಸಲಿದೆ. ಇನ್ನು ವಿನಯ್ ಕುಲಕರ್ಣಿ ಮುಂದಿರುವ ಆಯ್ಕೆಗಳೇನು ಎನ್ನುವುದನ್ನು ನೋಡುವುದಾರೆ, ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಜಾಮೀನು ಕೋರಬಹುದು. ಇಲ್ಲ ದೋಷಿಯನ್ನಾಗಿಸಿದ ತೀರ್ಪಿಗೂ ತಡೆಯಾಜ್ಞೆ ಕೋರಬಹುದು. ಒಂದು ವೇಳೆ ತಡೆಯಾಜ್ಞೆ ಸಿಕ್ಕರೆ ಮಾತ್ರ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಉಳಿಯಲಿದೆ. ಅಲ್ಲಿ ಒಂದು ವೇಳೆ ಅವರ ವಿರುದ್ಧ ತೀರ್ಪು ಬಂದರೆ ಜೈಲು ಸೇರಬೇಕು ಮಾತ್ರವಲ್ಲ ಅವರ ಶಾಸಕ ಸ್ಥಾನ ಕೂಡ ವಜಾಗೊಳ್ಳಲಿದೆ.

ಕ್ಷೇತ್ರಕ್ಕೆ ಕಾಲಿಡದೇ ಗೆದ್ದು ಬೀಗಿದ ವಿನಯ್ ಕುಲಕರ್ಣಿ

ಇದೇ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವಿನಯ್ ಕುಲಕರ್ಣಿಗೆ ಕ್ಷೇತ್ರ ಪ್ರವೇಶಕ್ಕೆ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಧಾರವಾಡ ಕ್ಷೇತ್ರಕ್ಕೆ ಪ್ರವೇಶ ಇಲ್ಲದಿದ್ದರೂ ಸಹ ವಿನಯ್ ಕುಲಕರ್ಣಿ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಕ್ಷೇತ್ರದಿಂದ ಹೊರಗಿದ್ದುಕೊಂಡೇ ಅಂದು ಹಾಲಿ ಬಿಜೆಪಿ ಶಾಸಕರಾಗಿದ್ದ ಅಮೃತ್ ದೇಸಾಯಿ ಅವರನ್ನು ಸೋಲಿಸಿ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು.

2016ರಲ್ಲಿ ಧಾರವಾಡದ ಜಿಮ್​​ನಲ್ಲಿ ಯೋಗೇಶ್ ಗೌಡ ಕೊಲೆ ನಡೆದಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈ ಪ್ರೊಫೈಲ್‌ ಕೇಸ್ ಆಗಿತ್ತು. ಈ ಕೊಲೆಯಲ್ಲಿ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು. ಬಳಿಕ ಈ ಕೊಲೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ವಿನಯ್ ಕುಲಕರ್ಣಿ ಅವರನ್ನು 15ನೇ ಆರೋಪಿಯನ್ನಾಗಿ ಉಲ್ಲೇಖಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Video: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ – Kannada News | The father burst into laughter at his daughter’s scolding.

ಮಗಳು ಎಲ್ಲರಿಗೂ ಹುಟ್ಟೋದಿಲ್ಲ, ಪುಣ್ಯವಂತರಿಗೆ ಮಾತ್ರ ಮಗಳು ಹುಟ್ಟೋದು ಎನ್ನುವ ಮಾತಿದೆ. ಮಗಳು ಹುಟ್ಟಿದರೆ ಸಂಭ್ರಮಿಸುವ ಅಪ್ಪಂದಿರು (father) ಇದ್ದಾರೆ. ಹೌದು, ಪ್ರತಿಯೊಬ್ಬ ಅಪ್ಪನಿಗೆ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಇತ್ತ ತಂದೆ ಮಗಳ ತೊದಲ ನುಡಿ ಕೇಳುತ್ತ  ಎಲ್ಲಾ ನೋವನ್ನು ಮರೆಯುತ್ತಾನೆ. ಈ ದೃಶ್ಯ ನೋಡಿದ್ರೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಆದರೆ ಇಲ್ಲೊಂದು ಪುಟಾಣಿ ತನ್ನ ತಂದೆಗೆ ತನ್ನದೇ ಭಾಷೆಯಲ್ಲಿ ಬೈಯುತ್ತಿದೆ. ಮಗಳ ಮುದ್ದು ಮುದ್ದಾದ ಬೈಗುಳದ ಮಾತು ಕೇಳಿ ತಂದೆ ಮುಗುಳುನಗೆ ಬೀರಿರುವ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ತಂದೆ ಮಗಳ ಬಾಂಧವ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Acrostic ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ತಂದೆಯೂ ಬೆಡ್ ಮೇಲೆ ಕುಳಿತಿರುವುದನ್ನು ಕಾಣಬಹುದು. ಎದುರಿಗೆ ನಿಂತಿದ್ದ ಪುಟಾಣಿ ತನ್ನ ತೊದಲು ಭಾಷೆಯಲ್ಲಿ ಅಪ್ಪನಿಗೆ ಬೈಯುತ್ತಿದೆ. ಮುದ್ದಿನ ಮಗಳ ಬೈಗುಳ ಕೇಳುತ್ತಾ ಆ ವ್ಯಕ್ತಿ ಮುಗುಳು ನಗುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮಗಳ ತೊಡೆ ಮೇಲೆ ತಲೆಯಿಟ್ಟು ಹಾಯಾಗಿ ಮಲಗಿದ ತಂದೆ; ಎಷ್ಟು ಚಂದ ನೋಡಿ ಈ ಬಾಂಧವ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಕ್ಯೂಟ್ ಎಂದರೆ ಮತ್ತೊಬ್ಬರು, ತಂದೆಗೆ ಮಗಳೇ ಎರಡನೇ ತಾಯಿ ಎಂದು ಹೇಳಿದ್ದಾರೆ. ಇನ್ನೊಬ್ಬರು ಪುಣ್ಯವಂತರಿಗೆ ಮಾತ್ರ ಮಗಳು ಹುಟ್ಟೋದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್ – Kannada News | China president will give me a big hug Donald Trump announces Hormuz opening

ವಾಷಿಂಗ್ಟನ್, ಏಪ್ರಿಲ್ 15: ಇರಾನ್​ಗೆ ಚೀನಾ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ, ನಾವು ಯಾವುದೇ ಆಯುಧಗಳ ಪೂರೈಕೆ ಮಾಡುತ್ತಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿತ್ತು. ಅದರ ಬೆನ್ನಲ್ಲೇ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್ (Donald Trump), ‘ಚೀನಾ ಇರಾನ್​ಗೆ ಶಸ್ತ್ರಾಸ್ತ್ರ ಒದಗಿಸುವುದಿಲ್ಲ ಎಂದಿದೆ. ನಾನು ಹಾರ್ಮುಜ್ ಜಲಸಂಧಿಯನ್ನು ತೆರೆಸುತ್ತಿರುವುದರಿಂದ ಚೀನಾ ಅಧ್ಯಕ್ಷರು ಬಹಳ ಖುಷಿಯಾಗಿದ್ದಾರೆ. ಅವರಿಂದ ನನಗೆ ಬಿಗಿಯಾದ ಅಪ್ಪುಗೆ ಸಿಗುವುದು ಖಚಿತ’ ಎಂದು ಹೇಳಿದ್ದಾರೆ.

ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವುದರ ವಿರುದ್ಧ ಇತರೆ ದೇಶಗಳಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚೀನಾ ತಾನು ಇರಾನ್​ಗೆ ಯಾವುದೇ ಶಸ್ತ್ರಾಸ್ತ್ರ ಪೂರೈಕೆ ಮಾಡುವುದಿಲ್ಲ ಎಂದು ಹೇಳಿದೆ. ಕಳೆದ ವಾರ, ಟೆಹ್ರಾನ್‌ಗೆ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿರುವ ರಾಷ್ಟ್ರದ ಮೇಲೆ ತಕ್ಷಣ 50% ಸುಂಕವನ್ನು ವಿಧಿಸುವುದಾಗಿ ಅವರು ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

“ನಾನು ಶಾಸ್ವತವಾಗಿ ಹಾರ್ಮುಜ್ ಜಲಸಂಧಿಯನ್ನು ತೆರೆಸಲು ಮುಂದಾಗಿರುವುದಕ್ಕೆ ಚೀನಾ ತುಂಬಾ ಖುಷಿಯಾಗಿದೆ.ನಾನು ಕೆಲವು ವಾರಗಳಲ್ಲಿ ಅಲ್ಲಿಗೆ ಹೋಗಲಿದ್ದೇನೆ. ಆಗ ಚೀನಾದ ಅಧ್ಯಕ್ಷ ಕ್ಸಿ ನನಗೆ ಬಿಗಿಯಾದ ಅಪ್ಪುಗೆಯನ್ನು ನೀಡುತ್ತಾರೆಂಬ ನಿರೀಕ್ಷೆಯಿದೆ. ನಾವು ಒಟ್ಟಿಗೆ ಬುದ್ಧಿವಂತಿಕೆಯಿಂದ ಕೆಲಸ ಮಾಡುತ್ತಿದ್ದೇವೆ, ನಾವು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದೇವೆ!” ಎಂದು ಟ್ರಂಪ್ ಬರೆದಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ? – Kannada News | India’s economy size lower than UK and Japan in 2025, as per IMF data, Know why India slipped on place

ನವದೆಹಲಿ, ಏಪ್ರಿಲ್ 15: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು (Indian economy) ಹೊಂದಿರುವ ದೇಶ. ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಮತ್ತು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ದೌಡಾಯಿಸಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತ ಅತಿದೊಡ್ಡ ಆರ್ಥಿಕತೆಗಳ ಸಾಲಿನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಪ್ರಕಾರ 2025ರಲ್ಲಿ ಭಾರತದ ಆರ್ಥಿಕತೆ 3.92 ಟ್ರಿಲಿಯನ್ ಡಾಲರ್ ಗಾತ್ರದ್ದಾಗಿರುತ್ತದೆ. ಆ ವರ್ಷ ಯುಕೆ ಅಥವಾ ಬ್ರಿಟನ್​ನದ್ದು 4 ಟ್ರಿಲಿಯನ್ ಡಾಲರ್ ಜಿಡಿಪಿ ಇದೆ. ಜಪಾನ್ 4.44 ಟ್ರಿಲಿಯನ್ ಡಾಲರ್ ಗಾತ್ರದ ಜಿಡಿಪಿ ಹೊಂದಿದೆ.

ಹಿಂದಿನ ವರ್ಷದಲ್ಲಿ (2024) ಭಾರತದ ಜಿಡಿಪಿಯು ಬ್ರಿಟನ್​ನದಕ್ಕಿಂತ ಹೆಚ್ಚಿತ್ತು. ಅತಿದೊಡ್ಡ ಆರ್ಥಿಕತೆಗಳ ಪಟ್ಟಿಯಲ್ಲಿ ಭಾರತ 5ನೇ ಸ್ಥಾನದಲ್ಲಿತ್ತು. ಆದರೆ, 2025ರಲ್ಲಿ ಭಾರತ ಒಂದು ಸ್ಥಾನ ಕುಸಿದಿದ್ದು ಹೇಗೆ? ಈ ಒಂದು ವರ್ಷದಲ್ಲಿ ಭಾರತದ ಬೆಳವಣಿಗೆ ವೇಗವೇನೂ ಕಡಿಮೆ ಆಗಲಿಲ್ಲ. ಬ್ರಿಟನ್​ನ ವೇಗವೇನೂ ಭಾರತದ ಸಮಕ್ಕೂ ಇರಲಿಲ್ಲ. ಆದರೂ ಕೂಡ ಭಾರತ ಒಂದು ಸ್ಥಾನ ಕಡಿಮೆಗೊಂಡಿದೆ. ಅದಕ್ಕೆ ಸಕಾರಣಗಳೂ ಇವೆ.

ಇದನ್ನೂ ಓದಿ: ಕಳೆದ ವರ್ಷ ಭಾರತದಿಂದ 860 ಬಿಲಿಯನ್ ಡಾಲರ್ ರಫ್ತು; ಇದು ಹೊಸ ದಾಖಲೆ

2025ರ ವರ್ಷದಲ್ಲಿ ಭಾರತ ರುಪಾಯಿ ಲೆಕ್ಕದಲ್ಲಿ ಶೇ. 9ರಷ್ಟು ನಾಮಿನಲ್ ಗ್ರೋತ್ ದಾಖಲಿಸಿದೆ. ಆದರೆ, ಜಿಡಿಪಿ ಲೆಕ್ಕಾಚಾರಕ್ಕೆ ಹೊಸ ಸರಣಿಯನ್ನು ಆಧಾರವಾಗಿರಿಸಲಾಗಿದೆ. ಇದರಿಂದ ಜಿಡಿಜಿ ಲೆಕ್ಕಾಚಾರದಲ್ಲಿ ಬದಲಾವಣೆಗಳಾಗಿ, ಜಿಡಿಪಿ ಕಡಿಮೆಗೊಂಡಿದೆ. ಇದು ಒಂದು ಕಾರಣ. ಹಾಗೆಯೇ, ಡಾಲರ್ ಎದುರು ರುಪಾಯಿ ಮೌಲ್ಯ ಬಹಳಷ್ಟು ಕಡಿಮೆಗೊಂಡಿದ್ದೂ ಜಿಡಿಪಿಗೆ ಹಿನ್ನಡೆ ತಂದಿದೆ. 2024ರಲ್ಲಿ ಒಂದು ಡಾಲರ್​ಗೆ 84.6 ರುಪಾಯಿ ಇತ್ತು. 2025ರಲ್ಲಿ ಅದು 88.5ಕ್ಕೆ ಇಳಿಯಿತು. ಜಿಡಿಪಿಯು ಡಾಲರ್ ಲೆಕ್ಕದಲ್ಲಿ ಇರುವುದರಿಂದ ಒಟ್ಟಾರೆ ಜಿಡಿಪಿ ಗಾತ್ರ ಕುಸಿದಿದೆ.

2026ರಲ್ಲಿ ಭಾರತದ ಸ್ಥಾನ ಏರುತ್ತಾ?

ಐಎಂಎಫ್ ಅಂದಾಜು ಪ್ರಕಾರ 2026ರಲ್ಲೂ ಭಾರತದ ಸ್ಥಾನದಲ್ಲಿ ಬದಲಾವಣೆ ಆಗುವುದಿಲ್ಲ. ಅತಿದೊಡ್ಡ ಆರ್ಥಿಕತೆಯ ದೇಶಗಳ ಸಾಲಿನಲ್ಲಿ ಭಾರತ 6ನೇ ಸ್ಥಾನದಲ್ಲೇ ಮುಂದುವರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಆದರೆ 2027ರಲ್ಲಿ ಭಾರತ ಐದನೇ ಸ್ಥಾಕ್ಕೆ ಏರಬಹುದು. 2028ಕ್ಕೆ ಜಪಾನ್ ಅನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೆ ಏರಬಹುದು.

ಇದನ್ನೂ ಓದಿ: ಜಾಗತಿಕ ಬಿಕ್ಕಟ್ಟುಗಳ ನಡುವೆಯೂ ಭಾರತದ ಉತ್ತಮ ಆರ್ಥಿಕ ಬೆಳವಣಿಗೆ ಸಾಧ್ಯತೆ: ಐಎಂಎಫ್ ಅಂದಾಜು

2027ರಲ್ಲಿ ಬ್ರಿಟನ್​ನ ಜಿಡಿಪಿ 4.47 ಟ್ರಿಲಿಯನ್ ಡಾಲರ್ ಇರಲಿದ್ದು, ಭಾರತದ ಜಿಡಿಪಿ 4.58 ಟ್ರಿಲಿಯನ್ ಡಾಲರ್​ಗೆ ಏರಬಹುದು. 2028ರಲ್ಲಿ ಜಪಾನ್ ಜಿಡಿಪಿ 4.75 ಟ್ರಿಲಿಯನ್ ಡಾಲರ್ ಇದ್ದರೆ, ಭಾರತದ ಜಿಡಿಪಿ 5 ಟ್ರಿಲಿಯನ್ ಡಾಲರ್ ಗಡಿ ದಾಟಬಹುದು.

ಅಮೆರಿಕ, ಚೀನಾ ಮತ್ತು ಜರ್ಮನಿ ದೇಶಗಳು ಟಾಪ್-3ಯಲ್ಲಿ ಮುಂದುವರಿಯಲಿವೆ. 2030ಕ್ಕೆ ಭಾರತದ ಜಿಡಿಪಿ 6 ಟ್ರಿಲಿಯನ್ ಡಾಲರ್ ಗಡಿದಾಟಲಿದ್ದು, ಜರ್ಮನಿಯ ಆರ್ಥಿಕತೆಯ ಗಾತ್ರಕ್ಕೆ ಸಮೀಪ ಹೋಗಬಹುದು. 2030ರ ನಂತರ ಭಾರತ ಜರ್ಮನಿಯನ್ನು ಮೀರಿಸಿ ಬೆಳೆಯುವ ನಿರೀಕ್ಷೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

RCB vs LSG Playing XI: ಲಕ್ನೋ ಮೊದಲು ಬ್ಯಾಟಿಂಗ್‌; ಆರ್​ಸಿಬಿ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ ಇಲ್ಲ..! – Kannada News | RCB vs LSG Playing XI Royal Challengers Bengaluru vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮತ್ತೆ ತನ್ನ ತವರು ನೆಲದಲ್ಲಿ ಕಣಕ್ಕಿಳಿದಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ ಆಡುತ್ತಿದೆ. ಲೀಗ್​ನಲ್ಲಿ ಇದುವರೆಗೆ 4 ಪಂದ್ಯಗಳನ್ನಾಡಿರುವ ಆರ್​ಸಿಬಿ ಮೂರು ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯವನ್ನು ಸೋತಿದೆ. ಈ ಮೂಲಕ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೇಲೇರುವ ಇರಾದೆಯಲ್ಲಿ ರಜತ್ ಪಡೆ ಇದೆ.

ಟಾಸ್ ಗೆದ್ದ ಆರ್​ಸಿಬಿ

ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇನ್ನು ಕಳೆದ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಲಿದ್ದಾರೆ. ಅಂದರೆ ಕೊಹ್ಲಿ ಬ್ಯಾಟಿಂಗ್‌ ಮಾತ್ರ ಮಾಡಲಿದ್ದಾರೆ. ಉಳಿದಂತೆ ಆರ್​ಸಿಬಿ ತಂಡದಲ್ಲಿ 1 ಬದಲಾವಣೆಯಾಗಿದ್ದು, ಜೆಕೋಬ್ ಡಫ್ಫಿ ಬದಲಿಗೆ ಜೋಸ್ ಹೇಜಲ್‌ವುಡ್ ತಂಡದಲ್ಲಿ ಆಡಲಿದ್ದಾರೆ. ಇತ್ತ ಲಕ್ನೋ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಮುಖಾಮುಖಿ ದಾಖಲೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇದುವರೆಗೆ ಆರು ಪಂದ್ಯಗಳನ್ನು ಆಡಿವೆ. ಆರ್‌ಸಿಬಿ ಈ ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ ಎರಡರಲ್ಲಿ ಗೆದ್ದಿದೆ. ಆದಾಗ್ಯೂ, ಎಂಎ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಎರಡೂ ಪಂದ್ಯಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಗೆದ್ದಿದೆ. ಹೀಗಾಗಿ ಈ ಪಂದ್ಯ ಆರ್‌ಸಿಬಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

RCB vs LSG IPL 2026 Live Score: ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ಕೆ

ಆಡುವ ಹನ್ನೊಂದರ ಬಳಗ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್​​ವುಡ್, ಮತ್ತು ಸುಯಾಶ್ ಶರ್ಮಾ.

ಲಕ್ನೋ ಪ್ಲೇಯಿಂಗ್ XI: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್ (ನಾಯಕ), ಆಯುಷ್ ಬಡೋನಿ, ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಅವೇಶ್ ಖಾನ್, ದಿಗ್ವೇಶ್ ರಾಠಿ, ಪ್ರಿನ್ಸ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:09 pm, Wed, 15 April 26

Source link

Exit mobile version