Headlines

ಪ್ರೀತಿಯಲ್ಲಿ ನಂಬಿಕೆ ದ್ರೋಹದ ಕಥೆ? ‘ಲವ್ ಸೀಸನ್ಸ್’ ಕನ್ನಡ ಸಿನಿಮಾ ಟೀಸರ್ ನೋಡಿ – Kannada News | Love Seasons Kannada movie teaser released Ft Mukunda Ramaswami

ಶೀರ್ಷಿಕೆ ಮೂಲಕವೇ ‘ಲವ್ ಸೀಸನ್ಸ್’ (Love Seasons) ಸಿನಿಮಾ ಗಮನ ಸೆಳೆದಿದೆ. ಇದು ಹೊಸಬರ ತಂಡದ ಸಿನಿಮಾ. ತಿಂಗಳ ಹಿಂದಷ್ಟೇ ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಈಗ ಟೀಸರ್ (Love Seasons Teaser) ಬಿಡುಗಡೆ ಮಾಡಲಾಗಿದೆ. ಅದರ ಜೊತೆಗೆ ಸುದ್ದಿಗೋಷ್ಠಿ ನಡೆಯಸಲಾಗಿದೆ. ಈ ವೇಳೆ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಯಿತು. ಈ ಸಿನಿಮಾದಲ್ಲಿ ಮುಕುಂದ ರಾಮಸ್ವಾಮಿ ಅವರು ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನಾ ಗೌಡ ಮತ್ತು ಶ್ವೇತಾ ಕೊಗ್ಲೂರು ಅವರು ನಾಯಕಿಯರಾಗಿ ಅಭಿನಯಿಸಿದ್ದಾರೆ. ರಂಗಭೂಮಿ ಹಿನ್ನೆಲೆ…

Read More

RCB vs LSG: ರಿಷಭ್ ಪಂತ್ ಮೊಣಕೈಗೆ ಗಂಭೀರ ಗಾಯ ಮಾಡಿದ ಹೇಜಲ್‌ವುಡ್ ಬೆಂಕಿ ಚೆಂಡು – Kannada News | IPL 2026: Rishabh Pant Suffers Elbow Injury in LSG vs RCB Match, Retires Hurt

ಐಪಿಎಲ್ 2026 (IPL 2026) ರ 23ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್‌ಜೈಂಟ್ಸ್ (RCB vs LSG) ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಲಕ್ನೋ ತಂಡಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ಇದರ ನಡುವೆ ಲಕ್ನೋ ತಂಡದ ನಾಯಕ ರಿಷಭ್ ಪಂತ್ (Rishabh Pant) ತಮ್ಮ ಮೊಣ ಕೈಗೆ ಗಂಭೀರವಾಗಿ ಗಾಯ ಮಾಡಿಕೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿ ಮೈದಾನ ತೊರೆದಿದ್ದಾರೆ. ಪ್ರಸ್ತುತ ಪಂತ್ ರಿಟೈರ್ಡ್​ ಹರ್ಟ್​ ಆಗಿದ್ದು,…

Read More

ಮಲೇಷ್ಯಾ ಧರ್ಮಗುರುವಿನ ಲಿಂಕ್, ವಾಟ್ಸಾಪ್ ಚಾಟ್; ಕಗ್ಗಂಟಾಗುತ್ತಲೇ ಇದೆ ಟಿಸಿಎಸ್ ಮತಾಂತರ ಪ್ರಕರಣ – Kannada News | WhatsApp Chats, Malaysia Linked Preacher; TCS Nashik conversion case widens

ನವದೆಹಲಿ, ಏಪ್ರಿಲ್ 15: ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ಬಿಪಿಒ ಕಚೇರಿಯಲ್ಲಿನ ಮತಾಂತರ ಮತ್ತು ಲೈಂಗಿಕ ಕಿರುಕುಳ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಇದು ಕಾರ್ಪೋರೇಟ್ ಜಿಹಾದ್​ ಎಂದು ಟೀಕೆಗಳು ಕೂಡ ವ್ಯಕ್ತವಾಗುತ್ತಿವೆ. ಈ ಪ್ರಕರಣದ ತನಿಖೆಯಲ್ಲಿ ಅಂತಾರಾಷ್ಟ್ರೀಯ ಸಂಪರ್ಕವಿರುವ ಮತಾಂತರ ಜಾಲವೊಂದು ಬೆಳಕಿಗೆ ಬಂದಿದೆ. ಫೆಬ್ರವರಿಯಲ್ಲಿ ಗುಪ್ತ ಪೊಲೀಸ್ ಕಾರ್ಯಾಚರಣೆ ನಡೆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಹಿಳಾ ಕಾನ್‌ಸ್ಟೆಬಲ್‌ಗಳನ್ನು ಟಿಸಿಎಸ್​​ನಲ್ಲಿ (TCS) ರಹಸ್ಯವಾಗಿ ಹೌಸ್ ಕೀಪಿಂಗ್ ಸಿಬ್ಬಂದಿಯಂತೆ ನಿಯೋಜಿಸಲಾಗಿತ್ತು. ವಾಟ್ಸಾಪ್…

Read More

ಪಾಪಪ್ರಜ್ಞೆಯಿಂದ ಸಾಕ್ಷಿ ನುಡಿದೆ: ಕೋರ್ಟ್ ತೀರ್ಪಿನ ಬಳಿಕ ಮಾಫಿ ಸಾಕ್ಷಿ ಸ್ಫೋಟಕ ಹೇಳಿಕೆ – Kannada News | Dharwad Yogesh Gowda Murder Case: Main Accused Basavaraj muttagi talks after Court verdict

ಧಾರವಾಡ, (ಏಪ್ರಿಲ್ 15): ಯೋಗೇಶ್ ಗೌಡ ಹತ್ಯೆ ಪ್ರಕರಣದ (Yogesh Gowda Murder Case) ಸುದೀರ್ಘ 10 ವರ್ಷಗಳ ಕಾಲ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಂತಿಮ ತೀರ್ಪು ಪ್ರಕಟಿಸಿದ್ದು, ಒಟ್ಟು ಆರೋಪಿಗಳ ಪೈಕಿ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಆದೇಶ ಹೊರಡಿಸಿದೆ. ಉಳಿದ ಆರೋಪಿಗಳಲ್ಲಿ ಇಬ್ಬರನ್ನು ನಿರ್ದೋಷಿಗಳೆಂದು ಬಿಡುಗಡೆ ಮಾಡಲಾಗಿದ್ದು, ಇನ್ನಿಬ್ಬರನ್ನು ಮಾಫಿ ಸಾಕ್ಷಿಗಳೆಂದು ಪರಿಗಣಿಸಲಾಗಿದೆ. ಇನ್ನು ಕೋರ್ಟ್ ತೀರ್ಪಿನ ಬಳಿಕ…

Read More

42 ವರ್ಷ ವಯಸ್ಸಿನ ಧನುಷ್​ಗೆ 20ರ ಪ್ರಾಯದ ಸಾರಾ ಅರ್ಜುನ್ ಜೋಡಿ – Kannada News | Sara Arjun Dhanush D56 movie casting age gap controversy details

ಬಾಲನಟಿಯಾಗಿ ಭಾರತೀಯ ಚಿತ್ರರಂಗಕ್ಕೆ ಪರಿಚಿತರಾಗಿ ಈಗ ನಾಯಕಿಯಾಗಿ ಯಶಸ್ಸು ಕಂಡಿರುವ ಸಾರಾ ಅರ್ಜುನ್ (Sara Arjun) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾದಲ್ಲಿ ಅವರ ನಟನೆ ಗಮನ ಸೆಳೆಯಿತು. ಈಗ ಕಾಲಿವುಡ್ ಸ್ಟಾರ್ ನಟ ಧನುಷ್ ಅಭಿನಯದ ಮುಂದಿನ ಚಿತ್ರಕ್ಕೆ (D56) ನಾಯಕಿಯಾಗಿ ಸಾರಾ ಅರ್ಜುನ್ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಹರದಾಡುತ್ತಿದೆ. ಧನುಷ್ (Dhanush) ಮತ್ತು ಸಾರಾ ಅರ್ಜುನ್ ನಡುವೆ ಇರುವ ವಯಸ್ಸಿನ ಅಂತರದ ಕಾರಣದಿಂದ ಈ ವಿಷಯ ಚರ್ಚೆ…

Read More

ಕೊಲೆ ಅಪರಾಧಿಯ ಶಾಸಕ ಸ್ಥಾನಕ್ಕೂ ಕುತ್ತು: ವಿನಯ್ ಕುಲಕರ್ಣಿ ಮುಂದಿರುವ ಕಾನೂನು ಆಯ್ಕೆಗಳೇನು? – Kannada News | May lose Vinay Kulkarni mla position for convicted In Yogesh Gowda Murder Case, What Next Option for Safe

ಬೆಂಗಳೂರು, (ಏಪ್ರಿಲ್ 15): ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣದಲ್ಲಿ (Dharwad Yogesh Gowda Murder Case) ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ಸಿಬಿಐ ಅಧಿಕಾರಿಗಳು ಕೋರ್ಟ್​​ನಲ್ಲೇ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ. ಇನ್ನು ನಾಳೆ (ಏಪ್ರಿಲ್ 16) ಶಿಕ್ಷೆ ಪ್ರಮಾಣದ ಬಗ್ಗೆ…

Read More

Video: ಪುಟಾಣಿ ತೊದಲು ನುಡಿಯಲ್ಲಿ ಬೈಯುತ್ತಿದ್ದರೆ ಮುಗುಳುನಗೆ ಬೀರಿದ ತಂದೆ – Kannada News | The father burst into laughter at his daughter’s scolding.

ಮಗಳು ಎಲ್ಲರಿಗೂ ಹುಟ್ಟೋದಿಲ್ಲ, ಪುಣ್ಯವಂತರಿಗೆ ಮಾತ್ರ ಮಗಳು ಹುಟ್ಟೋದು ಎನ್ನುವ ಮಾತಿದೆ. ಮಗಳು ಹುಟ್ಟಿದರೆ ಸಂಭ್ರಮಿಸುವ ಅಪ್ಪಂದಿರು (father) ಇದ್ದಾರೆ. ಹೌದು, ಪ್ರತಿಯೊಬ್ಬ ಅಪ್ಪನಿಗೆ ಮುದ್ದಿನ ಮಗಳು ಪುಟ್ಟ ರಾಜಕುಮಾರಿಯಾಗಿರುತ್ತಾಳೆ. ಇತ್ತ ತಂದೆ ಮಗಳ ತೊದಲ ನುಡಿ ಕೇಳುತ್ತ  ಎಲ್ಲಾ ನೋವನ್ನು ಮರೆಯುತ್ತಾನೆ. ಈ ದೃಶ್ಯ ನೋಡಿದ್ರೆ ನಿಮಗೂ ಕೂಡ ಹಾಗೆ ಅನಿಸುತ್ತದೆ. ಆದರೆ ಇಲ್ಲೊಂದು ಪುಟಾಣಿ ತನ್ನ ತಂದೆಗೆ ತನ್ನದೇ ಭಾಷೆಯಲ್ಲಿ ಬೈಯುತ್ತಿದೆ. ಮಗಳ ಮುದ್ದು ಮುದ್ದಾದ ಬೈಗುಳದ ಮಾತು ಕೇಳಿ ತಂದೆ ಮುಗುಳುನಗೆ ಬೀರಿರುವ…

Read More

ನನ್ನಿಂದ ಖುಷಿಯಾಗಿರುವ ಚೀನಾದ ಅಧ್ಯಕ್ಷ ಬಿಗಿ ಅಪ್ಪುಗೆ ನೀಡುತ್ತಾರೆ; ಟ್ರಂಪ್ – Kannada News | China president will give me a big hug Donald Trump announces Hormuz opening

ವಾಷಿಂಗ್ಟನ್, ಏಪ್ರಿಲ್ 15: ಇರಾನ್​ಗೆ ಚೀನಾ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುತ್ತಿದೆ ಎಂಬ ವದಂತಿಗಳು ಎಲ್ಲೆಡೆ ಹರಿದಾಡಿತ್ತು. ಆದರೆ, ನಾವು ಯಾವುದೇ ಆಯುಧಗಳ ಪೂರೈಕೆ ಮಾಡುತ್ತಿಲ್ಲ ಎಂದು ಚೀನಾ ಸ್ಪಷ್ಟನೆ ನೀಡಿತ್ತು. ಅದರ ಬೆನ್ನಲ್ಲೇ ತಮ್ಮ ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್ (Donald Trump), ‘ಚೀನಾ ಇರಾನ್​ಗೆ ಶಸ್ತ್ರಾಸ್ತ್ರ ಒದಗಿಸುವುದಿಲ್ಲ ಎಂದಿದೆ. ನಾನು ಹಾರ್ಮುಜ್ ಜಲಸಂಧಿಯನ್ನು ತೆರೆಸುತ್ತಿರುವುದರಿಂದ ಚೀನಾ ಅಧ್ಯಕ್ಷರು ಬಹಳ ಖುಷಿಯಾಗಿದ್ದಾರೆ. ಅವರಿಂದ ನನಗೆ ಬಿಗಿಯಾದ ಅಪ್ಪುಗೆ ಸಿಗುವುದು ಖಚಿತ’ ಎಂದು ಹೇಳಿದ್ದಾರೆ. ಇರಾನ್‌ಗೆ…

Read More

ವಿಶ್ವದ ದೊಡ್ಡ ಆರ್ಥಿಕತೆ: 5ನೇ ಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ ಭಾರತ; ಕಾರಣ ಏನು ಗೊತ್ತಾ? – Kannada News | India’s economy size lower than UK and Japan in 2025, as per IMF data, Know why India slipped on place

ನವದೆಹಲಿ, ಏಪ್ರಿಲ್ 15: ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯನ್ನು (Indian economy) ಹೊಂದಿರುವ ದೇಶ. ವಿಶ್ವದ ಅತಿದೊಡ್ಡ ಆರ್ಥಿಕತೆಯ ದೇಶಗಳ ಪಟ್ಟಿಯಲ್ಲಿ ಬ್ರಿಟನ್ ಮತ್ತು ಜಪಾನ್ ಅನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ದೌಡಾಯಿಸಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಐಎಂಎಫ್ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಭಾರತ ಅತಿದೊಡ್ಡ ಆರ್ಥಿಕತೆಗಳ ಸಾಲಿನಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಸಂಸ್ಥೆ ಪ್ರಕಾರ 2025ರಲ್ಲಿ ಭಾರತದ ಆರ್ಥಿಕತೆ 3.92 ಟ್ರಿಲಿಯನ್ ಡಾಲರ್ ಗಾತ್ರದ್ದಾಗಿರುತ್ತದೆ. ಆ ವರ್ಷ ಯುಕೆ ಅಥವಾ…

Read More

RCB vs LSG Playing XI: ಲಕ್ನೋ ಮೊದಲು ಬ್ಯಾಟಿಂಗ್‌; ಆರ್​ಸಿಬಿ ಪ್ಲೇಯಿಂಗ್ 11 ನಲ್ಲಿ ಕೊಹ್ಲಿ ಇಲ್ಲ..! – Kannada News | RCB vs LSG Playing XI Royal Challengers Bengaluru vs Lucknow Super Giants Today IPL 2026 match Confirmed playing 11 details with name in Kannada

ಐಪಿಎಲ್​ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್​ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಮತ್ತೆ ತನ್ನ ತವರು ನೆಲದಲ್ಲಿ ಕಣಕ್ಕಿಳಿದಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್​ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್​ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ ಆಡುತ್ತಿದೆ. ಲೀಗ್​ನಲ್ಲಿ…

Read More