Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ – Kannada News | Cancer Yearly Horoscope 2026: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ಕಟಕ ರಾಶಿಯವರಿಗೆ ಪ್ರಮುಖ ಗ್ರಹಗಳ ಸ್ಥಾನಪಲ್ಲಟಗಳು ಗಮನಾರ್ಹ ಪರಿಣಾಮ ಬೀರಲಿವೆ. ಜೂನ್ 2ರ ನಂತರ ಗುರು ಜನ್ಮಕ್ಕೆ ಬಂದು ಉಚ್ಛ ಸ್ಥಾನವನ್ನು ಪಡೆಯುವುದರಿಂದ, ಹಂಸ ಯೋಗ ರೂಪುಗೊಳ್ಳಲಿದೆ. ಇದರಿಂದ ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ, ಶುಭ ಕಾರ್ಯಗಳು, ಮತ್ತು ಅನಿರೀಕ್ಷಿತ ಧನ ಲಾಭ ನಿರೀಕ್ಷಿಸಬಹುದು.

ಶನಿ ಭಾಗ್ಯ ಸ್ಥಾನದಲ್ಲಿರುವುದರಿಂದ ಮಹತ್ತರವಾದ ಬದಲಾವಣೆಗಳು ಮತ್ತು ಸ್ಥಾನಪಲ್ಲಟದ ಸಾಧ್ಯತೆಗಳಿವೆ. ಆದಾಯ 2, ವ್ಯಯ 11 ರ ಅನುಪಾತವಿದ್ದರೂ, ಪ್ರಯತ್ನಗಳಿಗೆ ತಕ್ಕ ಫಲ ಸಿಗಲಿದೆ. ರಾಜಪೂಜ್ಯ 4, ಅವಮಾನಗಳು 6 ರಂತಿದ್ದರೂ, ಉತ್ತಮ ನಡವಳಿಕೆಯಿಂದ ಅವಮಾನಗಳನ್ನು ತಪ್ಪಿಸಬಹುದು. ಅಷ್ಟಮ ರಾಹು ಸಪ್ತಮ ಸ್ಥಾನಕ್ಕೆ ಬರಲಿದ್ದು, ಪಾಲುದಾರಿಕೆ ವಿಷಯಗಳಲ್ಲಿ ಎಚ್ಚರ ಅಗತ್ಯ. ಕೇತು ಜನ್ಮ ಸ್ಥಾನಕ್ಕೆ ಬಂದು ಡಿಸೆಂಬರ್‌ನಲ್ಲಿ ಗುರು ಚಾಂಡಾಲ ಯೋಗವನ್ನು ಸೃಷ್ಟಿಸಲಿದೆ, ಈ ಸಮಯದಲ್ಲಿ ಮೌನವಾಗಿರುವುದು ಒಳಿತು.

ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳು, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಬರಬಹುದು. ದುಶ್ಚಟಗಳಿಂದ ಮತ್ತು ಅಕ್ರಮ ಸಂಪಾದನೆಯಿಂದ ದೂರವಿರಿ. ರಾಹು ಶಾಂತಿ, ಶಿವ ನಾಮ ಜಪ, ದುರ್ಗಾ ಸ್ತೋತ್ರಗಳು, ಮತ್ತು ಗಣಪತಿಗೆ ಗರಿಕೆಯನ್ನು ಅರ್ಪಿಸುವುದು ಉತ್ತಮ ಪರಿಹಾರಗಳಾಗಿವೆ. ವೃದ್ಧ ದಂಪತಿಗಳ ಪಾದ ಸ್ಪರ್ಶ ಶುಭ ತರಲಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಭಾರತ ತಂಡದ ಮುಂದಿನ ಸರಣಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯ..!

Source link

Pushya Masa: ಪಿತೃ, ಶನಿ ದೋಷದಿಂದ ಮುಕ್ತಿ ಪಡೆಯಲು ಪುಷ್ಯ ಮಾಸದಲ್ಲಿ ಈ ರೀತಿ ಮಾಡಿ – Kannada News | Pushya Masa: Spiritual Importance, Rituals and Shani, Pitru Dosha Remedies

ಪುಷ್ಯ ಮಾಸವೆಂದರೆ ಚಂದ್ರನ ಕ್ಯಾಲೆಂಡರ್ ಪ್ರಕಾರ, ಮಾಸಗಳಲ್ಲಿ 10ನೇ ಮಾಸ. ಈ ಮಾಸವು ಮಕರ ಸಂಕ್ರಾಂತಿ ಹಬ್ಬದೊಂದಿಗೆ ಆರಂಭವಾಗಿ, ನಂತರ ಮಾಘ ಮಾಸಕ್ಕೆ ದಾರಿ ಮಾಡಿಕೊಡುತ್ತದೆ. ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಪುಷ್ಯ ಮಾಸಕ್ಕೆ ಅತ್ಯಂತ ಆಧ್ಯಾತ್ಮಿಕ ಮಹತ್ವವಿದೆ. ಪುಷ್ಯ ಮಾಸದಲ್ಲಿ ಸೂರ್ಯನು ಉತ್ತರ ದಿಕ್ಕಿನತ್ತ ಸಂಚರಿಸುವ ಉತ್ತರಾಯಣ ಆರಂಭವಾಗುತ್ತದೆ. ಈ ಉತ್ತರಾಯಣವು ಮಕರ ಸಂಕ್ರಾಂತಿಯೊಂದಿಗೆ ಪ್ರಾರಂಭವಾಗಿ, ದೇವರಿಗೆ ಅತ್ಯಂತ ಪ್ರಿಯವಾದ ಕಾಲವೆಂದು ಪರಿಗಣಿಸಲಾಗಿದೆ. ಸಂಕ್ರಾಂತಿ ಮರುದಿನ ದೀಪ ದಾನ ಮಾಡಿದರೆ ಸಂತಾನ ಪ್ರಾಪ್ತಿ , ಹಾಗೆಯೇ ಪುಷ್ಯ ಮಾಸದ ಅಮಾವಾಸ್ಯೆಯಂದು ಶನಿಗೆ ತೈಲಾಭಿಷೇಕ ಮಾಡಿದರೆ ಶನಿ ದೋಷ, ಸಾಡೇಸಾತಿ ಪರಿಣಾಮ ಕಡಿಮೆಯಾಗುತ್ತದೆ ಎಂಬ ನಂಬಿಕೆ ಇದೆ.

​ಪುಷ್ಯ ಮಾಸದ ಮಹತ್ವವೇನು?

ಬಹಳಷ್ಟು ಆಧ್ಯಾತ್ಮಿಕ ಮಹತ್ವವು ಪುಷ್ಯ ಮಾಸದೊಂದಿಗೆ ವೀಶೇಷ ಸಂಬಂಧವನ್ನು ಹೊಂದಿದೆ. ಪುಷ್ಯ ಮಾಸವನ್ನು ಶೂನ್ಯ ಮಾಸವೆಂದು ಪರಿಗಣಿಸಲಾಗುವುದರಿಂದ ಈ ಮಾಸದಲ್ಲಿ,ಮದುವೆಗಳನ್ನು, ಗೃಹ ಪ್ರವೇಶವನ್ನು ಅಥವಾ ಇನ್ನಿತರ ಮಂಗಳ ಕಾರ್ಯಕ್ರಮಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದಿಲ್ಲ. ಯಾಕೆಂದರೆ ಈ ಪುಷ್ಯ ಮಾಸದಲ್ಲಿ ಯಾವುದೇ ರೀತಿಯ ಶುಭ ಮುಹೂರ್ತವನ್ನು ನಾವು ಕಾಣಲು ಸಾಧ್ಯವಿಲ್ಲ.

ಪುಷ್ಯ ಮಾಸದಲ್ಲಿ ಏನು ಮಾಡಬೇಕು ?

ಪುಷ್ಯ  ಮಾಸದಲ್ಲಿ ಪೂಜೆಗಳನ್ನು ಮತ್ತು ಇನ್ನಿತರ ಸಾಮಾನ್ಯ ಆಚರಣೆಗಳನ್ನು ಮಾಡಲು ಪುಷ್ಯ ತಿಂಗಳು ಒಳ್ಳೆಯದು. ಪಿತೃಗಳಿಗೆ ಸಂತೋಷವನ್ನು ನೀಡಲು, ಪಿತೃ ದೋಷದಿಂದ ಮುಕ್ತಿಯನ್ನು ಹೊಂದಲು ಈ ಪುಷ್ಯ ಮಾಸವು ಉಪಯುಕ್ತಕಾರಿ. ಇನ್ನು ಪುಷ್ಯ ಮಾಸದಲ್ಲಿ ಬರುವ ಪೌರ್ಣಮಿ ವೇದಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ. ಪುಷ್ಯ ಪೌರ್ಣಮಿ ದಿನದಂದು ವೇದ ಅಧ್ಯಯನ ಅಥವಾ ವೇದಗಳ ಅಧ್ಯಯನವನ್ನು ಪ್ರಾರಂಭಿಸಲು ಉತ್ತಮ ದಿನವೆಂದು ಪರಿಗಣಿಸಲಾಗಿದೆ.

​ಪುಷ್ಯ ಮಾಸದ ಆರಾಧನೆ:

ಪುಷ್ಯ ಮಾಸದಲ್ಲಿ ದೇವರ ಆರಾಧನೆಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಲಕ್ಷ್ಮಿ ನಾರಾಯಣ ಅಂದರೆ ಲಕ್ಷ್ಮಿ ಮತ್ತು ವಿಷ್ಣು ಈ ಮಾಸದ ಪ್ರಧಾನ ದೇವ ಮತ್ತು ದೇವತೆಯಾಗಿದ್ದಾರೆ. ಅವರನ್ನು ಲಕ್ಷ್ಮಿ ನಾರಾಯಣ ಎನ್ನುವ ಹೆಸರಿನಲ್ಲಿ ಪೂಜಿಸಲಾಗುತ್ತದೆ. ಶನಿ ಗ್ರಹವು ಪುಷ್ಯ ಮಾಸದ ಪ್ರಧಾನ ಗ್ರಹವಾಗಿದೆ. ಮತ್ತು ಬೃಹಸ್ಪತಿ ಅಥವಾ ಗುರುವನ್ನು ಈ ಮಾಸದ ನಕ್ಷತ್ರ ದೇವತೆಯೆಂದು ಪರಿಗಣಿಸಲಾಗುತ್ತದೆ.

​ಪುಷ್ಯ ಮಾಸದ ಆಚರಣೆಗಳು:

ಪುಷ್ಯ ಮಾಸದಲ್ಲಿ ಸಾಮಾನ್ಯವಾಗಿ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವ ಪದ್ಧತಿಯಿದೆ. ಮಕರ ಸಂಕ್ರಾಂತಿಯಿಂದ ಪುಷ್ಯ ಮಾಸವು ಆರಂಭವಾಗಿ, ಈ ಮಾಸದಲ್ಲಿ ಅನೇಕ ಆಚರಣೆಗಳು ಕಂಡು ಬರುತ್ತದೆ. ಪುಷ್ಯ ಮಾಸದಲ್ಲಿ ಏಕಾದಶಿ, ಹುಣ್ಣಿಮೆ, ಕೃಷ್ಣ ಪಂಚಮಿ, ಮಕರ ಸಂಕ್ರಾಂತಿ, ಉತ್ತರಾಯಣ ಪರ್ವಕಾಲ ಸೇರಿದಂತೆ ಇನ್ನು ಅನೇಕ ಆಚರಣೆಗಳು ಪುಷ್ಯ ಮಾಸದಲ್ಲಿ ಇರುತ್ತದೆ.

ಪುಷ್ಯ ಮಾಸದಲ್ಲಿ ಪೂಜೆ:

ಪುಷ್ಯ ಮಾಸದಲ್ಲಿ ಬರುವ ಅಮಾವಾಸ್ಯೆಯ ದಿನದಂದು ಭಗವಾನ್‌ ಶನಿಗೆ ತೈಲಾಭಿಷೇಕವನ್ನು ಮಾಡಬೇಕು. ಇದು ನಿಮ್ಮ ಶನಿ ದೋಷದ ಪರಿಣಾಮವನ್ನು ಕಡಿಮೆ ಮಾಡುತ್ತದೆ ಎಂದು ಪರಿಗಣಿಸಲಾಗಿದೆ. ಭಕ್ತರು ಲಕ್ಷ್ಮಿ ದೇವಿಯನ್ನು ಧನ್ಯ ಲಕ್ಷ್ಮಿ ಮತ್ತು ಧನ ಲಕ್ಷ್ಮಿ ರೂಪದಲ್ಲಿ ಪುಷ್ಯ ಮಾಸದಲ್ಲಿ ಪೂಜಿಸಬೇಕು. ಇದರಿಂದ ಧನ – ಧಾನ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ನಿಮ್ಮ ಬಳಿ ಸುಳಿಯುವುದಿಲ್ಲ.

​ಪುಷ್ಯ ಮಾಸದಲ್ಲಿ ದಾನ:

ಪುಷ್ಯ ಮಾಸದಲ್ಲಿ ಬಹುಮುಖ್ಯವಾಗಿ ವಸ್ತ್ರ ದಾನ ಅಂದರೆ ಬಟ್ಟೆ ದಾನವನ್ನು ಮತ್ತು ಎಳ್ಳು ದಾನವನ್ನು ಮಾಡಬೇಕು. ಪುಷ್ಯ ಮಾಸದ ಅಮಾವಾಸ್ಯೆಯ ದಿನದಂದು ವಸ್ತ್ರದಾನ ಮತ್ತು ಎಳ್ಳು ದಾನ ಮಾಡುವುದರಿಂದ ಸಾಡೇಸಾತಿ ಶನಿ ದೋಷ ಸೇರಿದಂತೆ ಶನಿಗೆ ಸಂಬಂಧಿಸಿದ ಎಲ್ಲಾ ದೋಷಗಳು ದೂರಾಗುತ್ತದೆ. ಶಿಂಶುಮಾರನ ರಂಗೋಲಿ. ಒಂದು ತಿಂಗಳು ಪುಷ್ಯ ಮಾಸ ಪೂರ್ತಿ ಹಾಕಬೇಕು.

ಲೇಖನ: ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:31 am, Sat, 20 December 25

Source link

ಖ್ಯಾತ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ; ಮಾಡಿದ ಸಾಧನೆಯ ಪಟ್ಟಿ ದೊಡ್ಡದಿದೆ – Kannada News | Malayalam Actor Director Sreenivasan Passes Away at 69: A Legacy Remembered

ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು (ಡಿಸೆಂಬರ್ 20) ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೇರಳದ ಉದಯಂಪೆರೂರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ.

ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. ಇತ್ತೀಚೆಗೆ ಅವರನ್ನು ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು. ಆದರೆ, ಅವರನ್ನು ಬದುಕಿಸಿಕೊಳ್ಳಲು ವೈದ್ಯರ ಬಳಿ ಸಾಧ್ಯವಾಗಿಲ್ಲ.

ನಟನಾಗಿ, ಸಿನಿಮಾ ಬರಹಗಾರನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಅವರ ನಿಧನವು ಮಲಯಾಳಂ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋಗಳ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು.
ಕೇರಳದ ಕಣ್ಣೂರ್ ಜಿಲ್ಲೆಯಲ್ಲಿ 1956ರ ಏಪ್ರಿಲ್ 6ರಂದು ಶ್ರೀನಿವಾಸನ್ ಜನಿಸಿದರು. ಅವರು ಅರ್ಥ ಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಆ ಬಳಿಕ ಚೆನ್ನೈನಲ್ಲಿ ಅವರು ಫಿಲ್ಮ್​ ಆ್ಯಂಡ್ ಟೆಲಿವಿಷನ್ ಸಂಸ್ಥೆಯಲ್ಲಿ ಸಿನಿಮಾ ಸಂಬಂಧಿತ ತರಬೇತಿ ಪಡೆದರು.

1976ರ ‘ಮನಿಮುಳಕ್ಕಮ್’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಅಭಿನಯಿಸಿದರು. ವೃತ್ತಿ ಜೀವನದುದ್ದಕ್ಕೂ 2-3 ತಮಿಳು ಸಿನಿಮಾ ಮಾಡಿದ್ದು ಹೊರತುಪಡಿಸಿ ಉಳಿದ ಎಲ್ಲಾ ಚಿತ್ರಗಳನ್ನು ಅವರು ಮಾಡಿದ್ದು ಮಲಯಾಳಂನಲ್ಲಿಯೇ. ಸುಮಾರು 40 ವರ್ಷಗಳ ಕಾಲ ಚಿತ್ರರಂಗದಲ್ಲಿ ಶ್ರಮಿಸಿದ ಅವರು, 200ಕ್ಕೂ ಅಧಿಕ ಸಿನಿಮಾ ಮಾಡಿದ್ದಾರೆ. ಅವರು ಕೊನೆಯ ಬಾರಿಗೆ ಬಣ್ಣ ಹಚ್ಚಿದ್ದು 2018ರಲ್ಲಿ.

ಚಿತ್ರಕಥೆ ಬರಹಗಾರನಾಗಿಯೂ ಶ್ರೀನಿವಾಸನ್ ಕೆಲಸ ಮಾಡಿದ್ದಾರೆ. ಅವರು ಮಮ್ಮೂಟ್ಟಿ ಹಾಗೂ ನಿವೀನ್ ಪೌಳಿಗೆ ತಲಾ ಒಂದೊಂದು ಸಿನಿಮಾ ನಿರ್ದೇಶನ ಮಾಡಿದ್ದಾರೆ. ಎರಡು ಸಿನಿಮಾ ನಿರ್ಮಿಸಿದ್ದಾರೆ. ಶ್ರೀನಿವಾಸನ್ ಅವರು, ರಾಷ್ಟ್ರ ಪ್ರಶಸ್ತಿ, ಕೇರಳ ರಾಜ್ಯ ಪ್ರಶಸ್ತಿ, ಫಿಲ್ಮ್​ ಫೆರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಟನಾಗಿ, ಬರಹಗಾರನಾಗಿ ಈ ಗೌರವ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು

ಶ್ರೀನಿವಾಸನ್​ಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ವಿನೀತ್ ಹಾಗೂ ಧ್ಯಾನ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ವಿನೀತ್ ನಿರ್ದೇಶನದ ‘ಹೃದಯಪೂರ್ವಂ’ ಸೂಪರ್ ಹಿಟ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 11:05 am, Sat, 20 December 25

Source link

ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ! – Kannada News | How Caffeine on an Empty Stomach Affects Digestion and Energy

ಕೆಲವರಿಗೆ ಚಹಾ (Tea) ಕೇವಲ ಪಾನೀಯವಲ್ಲ, ಅದು ಅವರ ದಿನಚರಿಯ ಪ್ರಮುಖ ಭಾಗ. ಪ್ರತಿದಿನವನ್ನು ಚಹಾದೊಂದಿಗೆ ಪ್ರಾರಂಭಿಸುವುದು ಹಲವರಿಗೆ ಅಭ್ಯಾಸ. ಅದರಲ್ಲಿಯೂ ಹಾಸಿಗೆಯಿಂದ ಎದ್ದ ತಕ್ಷಣ ಚಹಾ ಕುಡಿಯುವವರಿದ್ದಾರೆ, ಇನ್ನು ಕೆಲವರು ಚಹಾ ಕುಡಿದ ಮೇಲೆಯೇ ಶಕ್ತಿ ಬರುತ್ತದೆ ಎಂದು ಅದನ್ನೇ ಅವಲಂಬಿಸಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದು ಮನಸ್ಸಿಗೆ ಖುಷಿ ನೀಡಬಹುದು. ಆದರೆ ಆರೋಗ್ಯಕ್ಕೆ… ಹೌದು, ಆರೋಗ್ಯ ತಜ್ಞರು ಈ ಅಭ್ಯಾಸ ಆರೋಗ್ಯಕ್ಕೆ ಹಾನಿಕಾರಕ ಎಂದು ಹೇಳುತ್ತಾರೆ. ಅದರಲ್ಲಿಯೂ 7 ರೀತಿಯ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಎಂದಿಗೂ ಚಹಾ ಕುಡಿಯಬಾರದು ಎಂದು ಹೇಳಲಾಗುತ್ತದೆ. ಹಾಗಾದರೆ ಇದಕ್ಕೆ ಕಾರಣವೇನು? ಈ ಅಭ್ಯಾಸದಿಂದ ಯಾವ ರೀತಿಯ ಸಮಸ್ಯೆಗಳು ಕಂಡು ಬರುತ್ತದೆ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಈ 7 ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು!

ಚಹಾ ಎಲೆಗಳಲ್ಲಿ ಕೆಫೀನ್ ಮತ್ತು ಟ್ಯಾನಿನ್‌ಗಳಿರುತ್ತದೆ. ಅದರಲ್ಲಿಯೂ ಚಹಾ ತಯಾರಿಸುವಾಗ, ಹಾಲು ಮತ್ತು ಸಕ್ಕರೆಯನ್ನು ಸೇರಿಸುವುದರಿಂದ ಇದು ದೇಹದಲ್ಲಿ ತಾತ್ಕಾಲಿಕವಾಗಿ ಶಕ್ತಿಯನ್ನು ನೀಡುತ್ತದೆ, ಆದರೆ ವಾಸ್ತವದಲ್ಲಿ, ಅವು ದೇಹದ ಚಯಾಪಚಯ ಕ್ರಿಯೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಅಷ್ಟೇ ಅಲ್ಲ, ರಕ್ತಹೀನತೆ (ಕಬ್ಬಿಣದ ಕೊರತೆ) ಇರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು, ಏಕೆಂದರೆ ಚಹಾದಲ್ಲಿರುವ ಖನಿಜಗಳು ಕಬ್ಬಿಣದ ಹೀರಿಕೊಳ್ಳುವಿಕೆಗೆ ಅಡ್ಡಿಯಾಗಬಹುದು. ಅತಿಯಾದ ಕೂದಲು ಉದುರುವಿಕೆ ಸಮಸ್ಯೆ ಇರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯಬಾರದು. ಜೊತೆಗೆ ಮಧುಮೇಹ, ಪಿಸಿಓಎಸ್, ಆತಂಕ, ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್‌ನಿಂದ ಬಳಲುತ್ತಿರುವವರು ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದನ್ನು ತಪ್ಪಿಸಬೇಕು.

ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದಾಗುವ ಸಮಸ್ಯೆಗಳು:

ಜೀರ್ಣಕಾರಿ ಸಮಸ್ಯೆ: ಚಹಾದಲ್ಲಿರುವ ಕೆಫೀನ್ ಮತ್ತು ಟ್ಯಾನಿನ್‌ಗಳು ಜೀರ್ಣಕಾರಿ ರಸಗಳ ಸ್ರವಿಸುವಿಕೆಯ ಮೇಲೆ ಪರಿಣಾಮ ಬೀರುತ್ತವೆ, ಇದು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳುವುದನ್ನು ತಡೆಯುತ್ತದೆ. ಕಾಲಾನಂತರದಲ್ಲಿ, ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು.

ಎದೆಯುರಿ ಮತ್ತು ಆಮ್ಲೀಯತೆ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಹೊಟ್ಟೆಯಲ್ಲಿ ಆಮ್ಲದ ಮಟ್ಟ ಹೆಚ್ಚಾಗುತ್ತದೆ, ಇದು ಅನಿಲ, ಆಮ್ಲೀಯತೆ ಮತ್ತು ಎದೆಯುರಿ ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈಗಾಗಲೇ ಈ ಸಮಸ್ಯೆಗಳನ್ನು ಹೊಂದಿರುವವರು ಜಾಗರೂಕರಾಗಿರಬೇಕು.

ಇದನ್ನೂ ಓದಿ: ನಿಮಗೂ ಕೂಡ ಚಹಾ ಜೊತೆ ಬಿಸ್ಕತ್ತು ತಿನ್ನುವ ಅಭ್ಯಾಸ ಇದ್ಯಾ, ಹಾಗಿದ್ರೆ ಈ ಸ್ಟೋರಿಯನ್ನು ಮಿಸ್ ಮಾಡ್ದೆ ನೋಡಿ

ಒತ್ತಡ ಮತ್ತು ಚಡಪಡಿಕೆ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ಕೆಫೀನ್ ದೇಹಕ್ಕೆ ಬೇಗನೆ ಹೀರಲ್ಪಡುತ್ತದೆ, ಇದು ಹೃದಯ ಬಡಿತವನ್ನು ಹೆಚ್ಚಿಸುತ್ತದೆ ಮತ್ತು ಚಡಪಡಿಕೆಗೆ ಕಾರಣವಾಗಬಹುದು.

ರಕ್ತದ ಸಕ್ಕರೆ ಮಟ್ಟದ ಮೇಲೆ ಪರಿಣಾಮ: ಖಾಲಿ ಹೊಟ್ಟೆಯಲ್ಲಿ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆ ಅಥವಾ ಇಳಿಕೆ ಉಂಟಾಗಬಹುದು, ಇದು ಮಧುಮೇಹ ಇರುವವರಿಗೆ ಅಪಾಯಕಾರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Puja Tips: ಪೂಜೆಯಲ್ಲಿ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು? ಯಾವುದನ್ನು ಬಳಸಬಾರದು? – Kannada News | Reusable Puja Items: What You Can and Cannot Use Again in Worship

ಪೂಜೆಯ ಸಮಯದಲ್ಲಿ ದೇವರಿಗೆ ಹಲವು ರೀತಿಯ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಪೂಜೆಯ ನಂತರ, ತುಪ್ಪ, ಹೂವುಗಳು, ಶ್ರೀಗಂಧ ಇತರ ಪೂಜೆಗಿಟ್ಟ ವಸ್ತುಗಳು ಉಳಿದುಬಿಡುತ್ತವೆ. ಕೆಲವು ವಸ್ತುಗಳು ದೇವರಿಗೆ ಅರ್ಪಿಸಿದರೂ ಹಾಳಾಗುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಅವುಗಳನ್ನು ಶುದ್ಧೀಕರಿಸಿ ಮತ್ತೆ ಪೂಜೆಯಲ್ಲಿ ಬಳಸಬಹುದೇ ಅಥವಾ ಇಲ್ಲವೇ ಎಂಬ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿ ಉದ್ಭವಿಸುತ್ತದೆ. ಪೂಜಾ ಸಾಮಗ್ರಿಗಳ ಬಗ್ಗೆ ಹಲವು ಸಂದೇಹಗಳಿವೆ. ಹಾಗಾಗಿ ಪೂಜೆಯಲ್ಲಿ ಬಳಸುವ ಯಾವ ವಸ್ತುಗಳನ್ನು ಮರುಬಳಕೆ ಮಾಡಬಹುದು ಮತ್ತು ಯಾವುದನ್ನು ಬಳಸಬಾರದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಪೂಜೆಯಲ್ಲಿ ಬೆಳ್ಳಿ, ಹಿತ್ತಾಳೆ ಅಥವಾ ತಾಮ್ರದ ಪಾತ್ರೆಗಳನ್ನು ಬಳಸಿದರೆ, ಅವುಗಳನ್ನು ಮರುಬಳಕೆ ಮಾಡಬಹುದು. ಅದೇ ರೀತಿ, ದೇವರ ವಿಗ್ರಹ, ಗಂಟೆ, ಶಂಖ, ಮಂತ್ರ ಜಪಮಾಲೆ, ಶಂಖ, ಆಸನ ಮುಂತಾದ ಶಾಶ್ವತ ವಸ್ತುಗಳನ್ನು ಸಹ ಮರುಬಳಕೆ ಮಾಡಬಹುದು. ಆದರೆ ಪ್ರಸಾದ, ನೀರು, ಹೂವುಗಳು, ಹೂಮಾಲೆಗಳು, ಶ್ರೀಗಂಧ, ಕುಂಕುಮ, ಧೂಪ, ತೆಂಗಿನಕಾಯಿ, ಬತ್ತಿಗಳು, ಎಣ್ಣೆ ಅಥವಾ ತುಪ್ಪ ಇತ್ಯಾದಿಗಳನ್ನು ಒಮ್ಮೆ ಬಳಸಿದ ನಂತರ ಪೂಜೆಯಲ್ಲಿ ಮತ್ತೆ ಬಳಸಬಾರದು. ಅವುಗಳನ್ನು ಮರುಬಳಕೆ ಮಾಡುವುದರಿಂದ ಅವುಗಳ ಶುದ್ಧತೆ ಹಾಳಾಗುತ್ತದೆ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ದೇವರಿಗೆ ಅರ್ಪಿಸಿದ ತುಳಸಿ ಎಲೆಗಳನ್ನು ನೀವು ಮತ್ತೆ ಪೂಜೆಯಲ್ಲಿ ಬಳಸಬಹುದು. ತುಳಸಿ ಎಲೆಗಳು ಲಭ್ಯವಿಲ್ಲದಿದ್ದರೆ, ನೀವು ಮತ್ತೆ ಪೂಜೆಯಲ್ಲಿ ತುಳಸಿಯನ್ನು ಬಳಸಬಹುದು. ಏಕೆಂದರೆ ತುಳಸಿ ಎಂದಿಗೂ ಅಶುದ್ಧವಲ್ಲ. ಅದು ಸ್ವತಃ ಶುದ್ಧವೆಂದು ಪರಿಗಣಿಸಲಾಗುತ್ತದೆ. ಬಿಲ್ವ ಎಲೆಗಳನ್ನು ತೊಳೆದು ದೇವರಿಗೆ ಅರ್ಪಿಸಿದ ನಂತರ ಮತ್ತೆ ಬಳಸಬಹುದು, ಇದರಲ್ಲಿ ಯಾವುದೇ ಹಾನಿ ಇಲ್ಲ. ಆದಾಗ್ಯೂ, ಬಿಲ್ವ ಎಲೆಗಳು ಹರಿದಿಲ್ಲ ಅಥವಾ ಕಲೆಗಳಾಗಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಶಿವ ಪುರಾಣದ ಪ್ರಕಾರ, ಬಿಲ್ವ ಎಲೆಗಳು 6 ತಿಂಗಳವರೆಗೆ ಹಳೆಯದಾಗಿರುವುದಿಲ್ಲ. ಆದ್ದರಿಂದ ಅವುಗಳನ್ನು ಬಳಸುವುದರಲ್ಲಿ ತಪ್ಪಿಲ್ಲ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಿರಿಯಾದ ಐಸಿಸ್ ನೆಲೆಗಳ ಮೇಲೆ ಅಮೆರಿಕದಿಂದ ವಾಯು ದಾಳಿ, ಹೊಸ ಯುದ್ಧಕ್ಕೆ ನಾಂದಿ ಹಾಡಿದರೇ ಟ್ರಂಪ್? – Kannada News | US Airstrikes on ISIS Syria: Trump Retaliates After Soldier Deaths

ಸಿರಿಯಾ, ಡಿಸೆಂಬರ್ 20: ಅಮೆರಿಕ(America)ವು ಮಧ್ಯರಾತ್ರಿ ಸಿರಿಯಾದ 70 ಐಸಿಸ್ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಿರಿಯಾದಲ್ಲಿ ಅಮೆರಿಕದ ಸೈನಿಕರ ಮೇಲಿನ ದಾಳಿಯ ನಂತರ ಅಮೆರಿಕವು ಈ ಪ್ರತೀಕಾರದ ಕ್ರಮವನ್ನು ಕೈಗೊಂಡಿದೆ. ಅಮೆರಿಕದ ಅಧಿಕಾರಿಗಳ ಪ್ರಕಾರ, ಕಳೆದ ವಾರ ಅಮೆರಿಕದ ಮಿಲಿಟರಿ ಸಿಬ್ಬಂದಿಯ ಮೇಲಿನ ದಾಳಿಗೆ ಪ್ರತೀಕಾರವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟಪಡಿಸಿದ್ದರು.

ಡಿಸೆಂಬರ್ 13 ರಂದು ಮಧ್ಯ ಸಿರಿಯಾದ ಪಾಲ್ಮಿರಾ ಪ್ರದೇಶದಲ್ಲಿ ಅಮೆರಿಕ ಮತ್ತು ಮಿತ್ರ ಪಡೆಗಳ ಮೇಲೆ ನಡೆದ ದಾಳಿಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯಡಿಯಲ್ಲಿ, 70 ಕ್ಕೂ ಹೆಚ್ಚು ಐಸಿಸ್ ಭಯೋತ್ಪಾದಕ ನೆಲೆಗಳನ್ನು ಮತ್ತು ಶಸ್ತ್ರಾಸ್ತ್ರಗಳನ್ನು ನೇರವಾಗಿ ಗುರಿಯಾಗಿರಿಸಿಕೊಳ್ಳಲಾಗಿದೆ ಎಂದು ಹೆಗ್ಸೆತ್ ಹೇಳಿದರು.

ಹೊಸ ಯುದ್ಧ ಹುಟ್ಟುಹಾಕಿತೇ ಅಮೆರಿಕ?
ಇದು ಹೊಸ ಯುದ್ಧದ ಆರಂಭವಲ್ಲ, ಬದಲಾಗಿ ಅಮೆರಿಕದ ಸೈನಿಕರ ಮೇಲಿನ ದಾಳಿಗೆ ಪ್ರತೀಕಾರ ಎಂದು ಹೆಗ್ಸತ್ ಸ್ಪಷ್ಟವಾಗಿ ಹೇಳಿದ್ದಾರೆ. ವಿಶ್ವದ ಎಲ್ಲಿಯಾದರೂ ಅಮೆರಿಕನ್ನರನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ದಾಳಿಕೋರರನ್ನು ಬೇಟೆಯಾಡಿ ನಿರ್ಮೂಲನೆ ಮಾಡುತ್ತದೆ ಎಂದು ಹೆಗ್ಸೆತ್ ಎಚ್ಚರಿಸಿದ್ದಾರೆ. ಅವರ ಪ್ರಕಾರ, ಯುಎಸ್ ಮಿಲಿಟರಿ ತನ್ನ ಶತ್ರುಗಳನ್ನು ಕೊಂದಿದೆ ಮತ್ತು ಈ ಪ್ರವೃತ್ತಿ ಮುಂದುವರಿಯುತ್ತದೆ. ಯುಎಸ್ ಅಧಿಕಾರಿಗಳ ಪ್ರಕಾರ, ಮಧ್ಯ ಸಿರಿಯಾದಲ್ಲಿ ವೈಮಾನಿಕ ದಾಳಿ ನಡೆಸಲಾಯಿತು.

ಮತ್ತಷ್ಟು ಓದಿ: ಅಮೆರಿಕದಿಂದ ಪಾಕಿಸ್ತಾನಕ್ಕೆ ಮಿಲಿಟರಿ ಪ್ಯಾಕೇಜ್; ಪಾಕ್ ಅಂದ್ರೆ ಅಮೆರಿಕ, ಚೀನಾಗೆ ಯಾಕೆ ಪ್ರೀತಿ?

ಅಮೆರಿಕ ಏಕೆ ಕೋಪಗೊಂಡಿದೆ?
ಕಳೆದ ಶನಿವಾರ, ಮಧ್ಯ ಸಿರಿಯಾದ ಪಾಲ್ಮಿರಾ ನಗರದಲ್ಲಿ ಒಂದು ಪ್ರಮುಖ ದಾಳಿ ನಡೆದಿತ್ತು. ಇಬ್ಬರು ಅಮೆರಿಕ ಸೈನಿಕರು ಮತ್ತು ಸ್ಥಳೀಯ ಭಾಷಾಂತರಕಾರ ಸಾವನ್ನಪ್ಪಿದ್ದರು. ದಾಳಿಕೋರ ಯುಎಸ್ ಮತ್ತು ಸಿರಿಯನ್ ಪಡೆಗಳನ್ನು ಸಾಗಿಸುತ್ತಿದ್ದ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದ.
ಪ್ರತೀಕಾರದ ಗುಂಡಿನ ದಾಳಿಯಲ್ಲಿ ದಾಳಿಕೋರ ಕೊಲ್ಲಲ್ಪಟ್ಟಿದ್ದ. ದಾಳಿಯಲ್ಲಿ ಇತರ ಮೂವರು ಅಮೆರಿಕ ಸೈನಿಕರು ಸಹ ಗಾಯಗೊಂಡಿದ್ದರು. ಯುಎಸ್ ಮಿಲಿಟರಿಯ ಪ್ರಕಾರ, ದಾಳಿಕೋರನು ಸಿರಿಯನ್ ಭದ್ರತಾ ಪಡೆಗಳಿಗೆ ಹೊಸದಾಗಿ ನೇಮಕಗೊಂಡ ಸದಸ್ಯನಾಗಿದ್ದು, ಐಸಿಸ್‌ನೊಂದಿಗೆ ಸಂಬಂಧ ಹೊಂದಿದ್ದಾನೆಂದು ಶಂಕಿಸಲಾಗಿದೆ.

ಡೊನಾಲ್ಡ್ ಟ್ರಂಪ್ ಹೇಳಿದ್ದೇನು?
ಈ ಕ್ರಮದ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಬಲವಾದ ಹೇಳಿಕೆ ನೀಡಿದ್ದಾರೆ. ಸಿರಿಯಾದಲ್ಲಿ ಐಸಿಸ್ ನಿಂದ ಅಮೆರಿಕ ಸೈನಿಕರ ಕ್ರೂರ ಹತ್ಯೆಯ ನಂತರ, ಈಗ ಪ್ರತೀಕಾರ ಆರಂಭವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ. ಹುತಾತ್ಮರಾದ ಸೈನಿಕರ ಮೃತದೇಹವನ್ನು ಪೂರ್ಣ ಮಿಲಿಟರಿ ಗೌರವಗಳೊಂದಿಗೆ ಮನೆಗೆ ಕರೆತರಲಾಗಿದೆ ಮತ್ತು ಅವರ ಗೌರವಾರ್ಥವಾಗಿ ಈ ಪ್ರತೀಕಾರದ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಿರಿಯಾದಲ್ಲಿರುವ ಐಸಿಸ್ ನೆಲೆಗಳ ಮೇಲೆ ಅಮೆರಿಕ ತೀವ್ರವಾಗಿ ದಾಳಿ ಮಾಡುತ್ತಿದೆ ಎಂದು ಟ್ರಂಪ್ ಹೇಳಿದ್ದಾರೆ. ಅವರ ಪ್ರಕಾರ, ಸಿರಿಯಾ ದೀರ್ಘಕಾಲದವರೆಗೆ ಹಿಂಸಾಚಾರ ಮತ್ತು ಸಂಘರ್ಷದಿಂದ ಹೋರಾಡುತ್ತಿದೆ. ಐಸಿಸ್ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಿದರೆ ದೇಶದ ಭವಿಷ್ಯವನ್ನು ಸುಧಾರಿಸಬಹುದು. ಸಿರಿಯನ್ ಸರ್ಕಾರವೂ ಈ ಅಭಿಯಾನವನ್ನು ಬೆಂಬಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಧರ್ಮಸ್ಥಳ ಬುರುಡೆ ಪ್ರಕರಣ: ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ! – Kannada News | Dharmasthala Case Twist: Mask Man Chinnayya Files Life Threat Complaint After Jail Release

ಜೈಲಿನಿಂದ ಹೊರಬರುತ್ತಲೇ ಹೋರಾಟಗಾರರ ವಿರುದ್ಧವೇ ತಿರುಗಿ ಬಿದ್ದ ಚಿನ್ನಯ್ಯ!

ಮಂಗಳೂರು, ಡಿಸೆಂಬರ್ 20: ಧರ್ಮಸ್ಥಳ ಪ್ರಕರಣಕ್ಕೆ (dharmasthala mass burial case ) ಹೊಸ ತಿರುವು ಸಿಕ್ಕಿದ್ದು, ಮಾಸ್ಕ್​ ಮ್ಯಾನ್ ಚಿನ್ನಯ್ಯ (Mask man chinnayya) ಜೈಲಿನಿಂದ ಹೊರಬಂದಕೂಡಲೇ ಹೊಸ ಬುರುಡೆ ಬಿಡುತ್ತಿದ್ದಾನೆ. ಜೈಲಿನಿಂದ ಬಿಡುಗಡೆಯಾಗಿ ಹೊರಬಂದ ತಕ್ಷಣವೇ ಪೊಲೀಸ್ ಠಾಣೆಗೆ ಹಾಜರಾದ ಚಿನ್ನಯ್ಯ, ತಮಗೂ ಹಾಗೂ ಪತ್ನಿಗೂ ಜೀವ ಬೆದರಿಕೆ ಇರುವುದಾಗಿ ಹೋರಾಟಗಾರರ ವಿರುದ್ಧವೇ ದೂರು ನೀಡಿದ್ದಾನೆ.

ಮಹೇಶ್ ತಿಮರೋಡಿ ಸೇರಿ ಐವರ ವಿರುದ್ಧವೇ ದೂರು

ಬುರುಡೆ ಪ್ರಕರಣದಲ್ಲಿ ನಾಲ್ಕು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನಿಗೆ ನವೆಂಬರ್ 24ರಂದು ಜಾಮೀನು ಸಿಕ್ಕಿತ್ತು. 1 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಆದ್ರೆ, ಜಾಮೀನು ಸಿಕ್ಕಿದರೂ ಚಿನ್ನಯ್ಯನಿಗೆ ಶ್ಯೂರಿಟಿ ನೀಡಲು ಯಾರೂ ಮುಂದೆ ಬಂದಿರಲಿಲ್ಲ. ಇದೀಗ ಜಾಮೀನಿನಿಂದ ಹೊರಬಂದಿರುವ ಮಾಸ್ಕ್ ಮ್ಯಾನ್, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ. ವಿರುದ್ಧವೇ ಜೀವ ಬೆದರಿಕೆಯ ದೂರು ನೀಡಿದ್ದಾನೆ.

ಇದನ್ನೂ ಓದಿ ಧರ್ಮಸ್ಥಳ ಕೇಸ್: ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ, ಕೋರ್ಟಿಗೆ ಶ್ಯೂರಿಟಿ ಕೊಟ್ಟವರ್ಯಾರು?

ರಕ್ಷಣೆ ಕೋರಿ ಪೊಲೀಸರ ಮೊರೆ ಹೋದ ಮಾಸ್ಕ್ ಮ್ಯಾನ್

ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಈ ಐವರು ಹೋರಾಟಗಾರರು ತನಗೆ ಹಾಗೂ ತನ್ನ ಹೆಂಡತಿಯ ಜೀವಕ್ಕೆ ಕುತ್ತು ತರಬಹುದು. ಹೀಗಾಗಿ ನಮಗೆ ರಕ್ಷಣೆ ನೀಡಿ ಎಂದು ಉಲ್ಲೇಖಿಸಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಬೆಳ್ತಂಗಡಿ ಠಾಣೆಯಲ್ಲಿ ಮನವಿ ಸಲ್ಲಿಸಲು ಸೂಚಿಸಿದ್ದು, ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗೋಕರ್ಣ ದೇಗುಲದಲ್ಲಿ ಡಿಕೆ ಶಿವಕುಮಾರ್​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟು ಆಶಿರ್ವದಿಸಿದ ಮಹಾಗಣಪತಿ – Kannada News | Gokarna Maha Ganapathi Blessing: Auspicious Sign During Special Prayer for Karnataka CM Aspirations

ಕಾರವಾರ, ಡಿಸೆಂಬರ್ 20: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ದೇಗುಲಕ್ಕೆ ಭೇಟಿ ನೀಡಿ ಡಿಸಿಎಂ ಡಿಕೆ ಶಿವಕುಮಾರ್ ಶುಕ್ರವಾರ ಪೂಜೆ ಸಲ್ಲಿಸಿದ್ದರು. ಆ ಸಂದರ್ಭದಲ್ಲಿ ಗೋಕರ್ಣದ ಮಹಾಗಣಪತಿ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಪರ ಶುಭ ಸೂಚನೆ ಸಿಕ್ಕಿದೆ ಎನ್ನಲಾಗಿದೆ. ಡಿಕೆಶಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದ ವೇಳೆ, ಮಹಾಗಣಪತಿಗೆ ತಲೆಯ ಮೇಲೆ ಹೂ ಇಟ್ಟು ಪ್ರಾರ್ಥನೆ ಸಲ್ಲಿಸಲಾಗಿತ್ತು. ಪೂಜೆ ವೇಳೆ ಮಹಾಗಣಪತಿ ಬಲಗಡೆಯಿಂದ ಹೂ ನೀಡಿದ್ದು, ಇದು ಭವಿಷ್ಯದ ಉತ್ತಮ ಬೆಳವಣಿಗೆಯ ಸಂಕೇತ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಆಂಡ್ಲೇ ಗ್ರಾಮದಲ್ಲಿರುವ ಪ್ರಸಿದ್ಧ ಶಕ್ತಿ ದೇವತೆ ಜಗದೀಶ್ವರಿ ದೇವಸ್ಥಾನದಲ್ಲಿಯೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಜಗದೀಶ್ವರಿ ದೇವಿಗೆ ಐದು ಬಾರಿ ಬೇಡಿಕೆ ಇಟ್ಟಾಗಲೂ ಪ್ರತಿಬಾರಿಯೂ ಒಳ್ಳೆಯ ಮುನ್ಸೂಚನೆ ದೊರೆತಿದೆ ಎಂದು ದೇವಸ್ಥಾನದ ಅರ್ಚಕರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬ್ಯಾಟ್ಸ್​ಮನ್ ಸೂರ್ಯ ಕಾಣೆಯಾಗಿದ್ದಾರೆ: ಸೂರ್ಯಕುಮಾರ್ ಯಾದವ್ – Kannada News | Surya, the batter, is missing Says Surykumar Yadav

ಸೌತ್ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 231 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 30 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯನ್ನು ಭಾರತ ತಂಡ 3-1 ಅಂತರದಿಂದ ಗೆದ್ದುಕೊಂಡಿದೆ.

ಈ ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಈ ಸರಣಿಯ ಆರಂಭದಿಂದಲೂ, ನಾವು ಒಂದು ನಿರ್ದಿಷ್ಟ ಬ್ರಾಂಡ್ ಕ್ರಿಕೆಟ್‌ಗೆ ಅಂಟಿಕೊಳ್ಳಬೇಕೆಂದು ಬಯಸಿದ್ದೆವು. ಇದೀಗ ನಾವು ಅದನ್ನೇ ಮಾಡಿದ್ದೇವೆ. ನಾವು ವಿಭಿನ್ನವಾಗಿ ಏನನ್ನೂ ಮಾಡಲು ಪ್ರಯತ್ನಿಸಲಿಲ್ಲ. ನಾವು ಎಲ್ಲಾ ವಿಭಾಗಗಳಲ್ಲಿ ನಮ್ಮನ್ನು ಸಂಪೂರ್ಣ ತೊಡಗಿಸಿಕೊಳ್ಳಲು ಬಯಸಿದ್ದೆವು. ಇದೀಗ ಫಲಿತಾಂಶ ನಮ್ಮ ಮುಂದೆಯಿದೆ.

ಕಳೆದ ಕೆಲ ಸರಣಿಗಳಲ್ಲಿ ಟೀಮ್ ಇಂಡಿಯಾ ಕಡೆಯಿಂದ ಇಂತಹದೊಂದು ಪ್ರದರ್ಶನ ಮಾಯವಾಗಿತ್ತು. ನಾವು ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಲು ಬಯಸಿದ್ದೆವು. ಇದೀಗ ಈ ಯೋಜನೆಯು ಫಲ ನೀಡಿದೆ. ಇದಾಗ್ಯೂ ನನ್ನ ಕಡೆಯಿಂದ ಉತ್ತಮ ಪ್ರದರ್ಶನ ಮೂಡಿಬಂದಿಲ್ಲ ಎಂದು ಸೂರ್ಯಕುಮಾರ್ ಯಾದವ್ ಒಪ್ಪಿಕೊಂಡಿದ್ದಾರೆ.

ಬಹುಶಃ ನಮಗೆ “ಸೂರ್ಯ ದಿ ಬ್ಯಾಟರ್” ಕಾಣಿಸದಿರುವುದು ಒಂದೇ ಕೊರತೆ. ಅವನು ಎಲ್ಲೋ ಕಾಣೆಯಾಗಿದ್ದಾನೆ ಅಂತ ನನಗೆ ಅನಿಸುತ್ತದೆ!. ಆದರೆ ಖಂಡಿತವಾಗಿಯೂ ಅವನು ಇನ್ನೂ ಬಲಿಷ್ಠನಾಗಿ ಕಂಬ್ಯಾಕ್ ಮಾಡಲಿದ್ದಾನೆ ಎಂದು ಸೂರ್ಯಕುಮಾರ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಒಂದು ತಂಡವಾಗಿ, ನಾನು ನಿಜವಾಗಿಯೂ ಸಂತೋಷವಾಗಿದ್ದೇನೆ. ಏಕೆಂದರೆ ತಂಡವು ಸಂಕಷ್ಟದಲ್ಲಿದ್ದಾಗಲೆಲ್ಲಾ, ಯಾರಾದರೂ ಯಾವಾಗಲೂ ಕೊಡುಗೆ ನೀಡುತ್ತಾರೆ. ತಂಡದ ಇಂತಹ ಪ್ರದರ್ಶನದಿಂದ ನಾಯಕನಾಗಿ, ಅದು ತುಂಬಾ ತೃಪ್ತಿಕರವಾಗಿದೆ ಎಂದು ಸೂರ್ಯಕುಮಾರ್ ಯಾದವ್ ಇದೇ ವೇಳೆ ಹೇಳಿದರು.

ಇದನ್ನೂ ಓದಿ:  ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ

ಒಟ್ಟಿನಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಕಡೆಯಿಂದ ಪಾಸಿಟಿವ್ ಪ್ರದರ್ಶನ ಮೂಡಿಬಂದಿದೆ. ಇದಾಗ್ಯೂ ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ವೈಫಲ್ಯ ಮುಂದುವರೆದಿದೆ. ಈ ವೈಫಲ್ಯದಿಂದ ಶೀಘ್ರದಲ್ಲೇ ಹೊರಬರಲಿದ್ದೇನೆ ಎಂದು ಖುದ್ದು ಸೂರ್ಯಕುಮಾರ್ ಯಾದವ್ ಅವರೇ ಹೇಳಿದ್ದಾರೆ. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಸೂರ್ಯನ ಕಡೆಯಿಂದ ಪ್ರಚಂಡ ಬ್ಯಾಟಿಂಗ್ ನಿರೀಕ್ಷಿಸಬಹುದು.

Published On – 9:32 am, Sat, 20 December 25

Source link

Exit mobile version