ಮೈಸೂರಿನಲ್ಲಿ ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು! – Kannada News | Mysuru K.R. Nagar: Two Electrocution Deaths Reported, Including Recently Married Youth

ಮೈಸೂರು, ಏಪ್ರಿಲ್ 24: ಜಿಲ್ಲೆಯ ಕೆ.ಆರ್. ನಗರ ತಾಲೂಕಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡಗಳಲ್ಲಿ ಇಬ್ಬರು ಮೃತಪಟ್ಟ (Death) ಘಟನೆ ನಡೆದಿದೆ. ಜಮೀನಿನಲ್ಲಿದ್ದ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಪಂಪ್​ಸೆಟ್ ಸರಿ ಮಾಡುತ್ತಿದ್ದ ವೇಳೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ಎರದೂ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಪಕ್ಕದ ಜಮೀನಿನಿಂದ ಬಂದಿದ್ದ ವಿದ್ಯುತ್ ತಂತಿ ಮೊದಲ ಘಟನೆಯಲ್ಲಿ, ಅಡಗೂರು ಮಾರಗೌಡನಹಳ್ಳಿ ಗ್ರಾಮದ ನಿವಾಸಿ ಮಹದೇವ್ (58) ಜಮೀನಿಗೆ…

Read More

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ – Kannada News | Bangladesh Quits T20 World Cup Over BCCI Spat; Scotland Steps In

ಬಿಸಿಸಿಐ ವಿರುದ್ಧ ತನ್ನ ಪಟ್ಟು ಸಡಿಲಿಸದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟಿ20 ವಿಶ್ವಕಪ್​ನಿಂದ ಹಿಂಪಡೆದಿದೆ. ಇದರರ್ಥ ಬಾಂಗ್ಲಾದೇಶ ತಂಡವು ಮುಂಬರುವ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ವಾಸ್ತವವಾಗಿ ಐಸಿಸಿ, ಬಾಂಗ್ಲಾದೇಶಕ್ಕೆ ತನ್ನ ನಿರ್ಧಾರ ತಿಳಿಸಲು 24 ಗಂಟೆಗಳ ಕಾಲಾವಕಾಶ ನೀಡಿತ್ತು. ಆ ಪ್ರಕಾರ ಗುರುವಾರ ಢಾಕಾದಲ್ಲಿ ಬಿಸಿಬಿ ಮತ್ತು ಬಾಂಗ್ಲಾದೇಶ ಸರ್ಕಾರದ ನಡುವೆ ಸಭೆ ನಡೆದಿದ್ದು, ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಟಿ20 ವಿಶ್ವಕಪ್‌ ಆಡಲು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಇದೀಗ ಬಾಂಗ್ಲಾದೇಶ ತಂಡ ಟಿ20…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 11ರ ದಿನಭವಿಷ್ಯ – Kannada News | *Numerology Horoscope Feb 11: Birth Number 7, 8, 9 Predictions & Anxiety Relief

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಫೆಬ್ರವರಿ 11ರ ಬುಧವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮಹಿಳೆಯರಿಗೆ ತವರು ಮನೆಯಲ್ಲಿನ ಕೆಲವು ಬೆಳವಣಿಗೆಗಳಿಂದ ಸಂತೋಷ ಆಗಲಿದೆ. ಸಮಾರಂಭಕ್ಕೆ ನಿಮ್ಮ ಉಪಸ್ಥಿತಿಯನ್ನು ಖಾತ್ರಿ ಪಡಿಸಬೇಕು ಎಂದು ಸ್ನೇಹಿತರು- ಸಂಬಂಧಿಗಳು ಒತ್ತಡ ಹಾಕಲಿದ್ದು, ಒಂದಲ್ಲಾ ಒಂದು ಕೆಲಸದ ಕಾರಣಕ್ಕೆ ಈ ಬಗ್ಗೆ ಏನೂ ಹೇಳುವ ಸ್ಥಿತಿಯಲ್ಲಿ ನೀವು…

Read More

ಬಿಸಿ ನೀರಿನಿಂದ ತಲೆಸ್ನಾನ ಮಾಡುವುದರಿಂದ ಆಗುವ ಪರಿಣಾಮಗಳೇನು ಗೊತ್ತಾ? – Kannada News | What happens if you wash your hair with hot water?

ಕೂದಲಿನ (hair) ಆರೈಕೆಯ ದೃಷ್ಟಿಯಿಂದ ತಲೆ ಸ್ನಾನ ಮಾಡುವಾಗ ಕೆಲ ಸೂಕ್ಷ್ಮತೆಗಳ ಬಗ್ಗೆ ತಿಳಿದುಕೊಳ್ಳಲೇಬೇಕು. ವಾರಕ್ಕೆ ಎಷ್ಟು ಬಾರಿ ತಲೆ ಸ್ನಾನ ಮಾಡಬೇಕು, ಯಾವ ಶ್ಯಾಂಪೂ ಕಂಡೀಷನರ್‌ ಬಳಸಿದರೆ ಉತ್ತಮ ಎಂಬುದನ್ನು ನೋಡುವಂತೆ ತಲೆ ಸ್ನಾನ ಮಾಡುವಾಗ ನೀರಿನ ತಾಪಮಾನದ ಬಗ್ಗೆಯೂ ಗಮನ ಕೊಡಬೇಕು. ತಪ್ಪಿಯೂ ಬಿಸಿ ಬಿಸಿ ನೀರಿನಿಂದ ತಲೆ ಸ್ನಾನ ಮಾಡಲೇಬಾರದಂತೆ. ಹೀಗೆ ಬಿಸಿ ನೀರಿನಿಂದ ತಲೆಸ್ನಾನ ಮಾಡುವ ಅಭ್ಯಾಸ ನಿಮಗೂ ಇದ್ಯಾ? ಹಾಗಿದ್ರೆ ಇದರಿಂದ ಕೂದಲಿಗೆ ಸಂಬಂಧಿಸಿದ ಯಾವೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

ಮಾರುಕಟ್ಟೆಯನ್ನು ಪ್ರಭಾವಿಸುವ ಗ್ರಾಹಕ ಅಭ್ಯಾಸಗಳು; ಒಂದು ಅವಲೋಕನ – Kannada News | The Impact of Fluctuations: How Consumer Habits Influence Market Movements

ಬಜಾಜ್ ಫಿನ್​ಸರ್ವ್ ಎಎಂಸಿಯ ಸೌರಭ್ ಗುಪ್ತಾ ಭಾರತದ ಬೆಳವಣಿಗೆಯ ಕಥೆಯಲ್ಲಿ ಗ್ರಾಹಕ ಅಥವಾ ಅನುಭೋಗಿಯೇ ಸೂತ್ರಧಾರ. ತುಂಬಿತುಳುಕುತ್ತಿರುವ ಮಾಲ್​ಗಳಿಂದ ಹಿಡಿದು, ಗಿಜಿಗಿಜಿಗುಡುತ್ತಿರುವ ಇ-ಕಾಮರ್ಸ್​ವರೆಗೆ ಈ ಅನುಭೋಗ ಅಥವಾ ಕನ್ಸಮ್ಷನ್ ಸೆಕ್ಟರ್ ಉತ್ತಮವಾಗಿ ಬೆಳೆಯುತ್ತಿದೆ. ಜನರ ಆದಾಯದಲ್ಲಿ ಹೆಚ್ಚಳ ಆಗುತ್ತಿರುವುದು, ವೇಗವಾಗಿ ನಗರೀಕರಣ ಆಗುತ್ತಿರುವುದು, ಜೀವನಶೈಲಿಯಲ್ಲಿ ಬದಲಾವಣೆ ಆಗುತ್ತಿರುವುದು ರಚನಾತ್ಮಕವಾಗಿ ಪುಷ್ಟಿ ಕೊಡುತ್ತಿದೆ. ಭಾರತೀಯ ಆರ್ಥಿಕತೆಯಲ್ಲಿ ಅನುಭೋಗಕ್ಕೆ ಪ್ರಾಧಾನ್ಯ ಸ್ಥಾನ ಸಿಗುವಂತೆ ಮಾಡಿದೆ. ಅನುಭೋಗ ಶಕ್ತಿಯಿಂದ ನಡೆಯುವ ಬ್ಯುಸಿನೆಸ್​ಗಳು ಈ ಒಂದು ಟ್ರೆಂಡ್​ನ ಲಾಭ ಪಡೆಯುತ್ತಿವೆ. ಇಲ್ಲಿ ಒಂದು…

Read More

ಮಾರ್ಚ್ ತಿಂಗಳಲ್ಲಿ 27 ದಿನಗಳಲ್ಲಿ 1.14 ಲಕ್ಷ ಕೋಟಿ ರೂ ವಿದೇಶೀ ಹೂಡಿಕೆಗಳ ಹೊರಹರಿವು; ಇದು ಹೊಸ ಮಾಸಿಕ ದಾಖಲೆ

ನವದೆಹಲಿ, ಮಾರ್ಚ್ 29: ಭಾರತದ ಈಕ್ವಿಟಿಗಳಿಂದ ಮಾರ್ಚ್ ತಿಂಗಳಲ್ಲಿ 12.3 ಬಿಲಿಯನ್ ಡಾಲರ್​ನಷ್ಟು ಎಫ್​ಪಿಐಗಳ ಹೂಡಿಕೆಗಳು ಹೊರಹೋಗಿವೆ. ಅಂದರೆ, ಮಾರ್ಚ್​ನಲ್ಲಿ ಈವರೆಗೂ (27, ಶುಕ್ರವಾರ) 1.14 ಲಕ್ಷ ಕೋಟಿ ರೂ ಈಕ್ವಿಟಿಗಳನ್ನು ವಿದೇಶೀ ಹೂಡಿಕೆದಾರರು ಮಾರಿದ್ದಾರೆ. ಇನ್ನೂ ಎರಡು ಟ್ರೇಡಿಂಗ್ ಸೆಷನ್​ಗಳು ಉಳಿದಿದ್ದು, ಮತ್ತಷ್ಟು ಸಾವಿರಾರು ಕೋಟಿ ರೂ ಎಫ್​ಪಿಐಗಳ (FPI- Foreign Portfolio Investors) ಹೊರಹರಿವು ಆಗುವ ನಿರೀಕ್ಷೆ ಇದೆ. ಯಾವುದೇ ಒಂದು ತಿಂಗಳಲ್ಲಿ ಇಷ್ಟು ಮೊತ್ತದ ವಿದೇಶೀ ಹೂಡಿಕೆಗಳ ಹೊರಹರಿವು ಕಂಡಿದ್ದು ಇದೇ ಮೊದಲು….

Read More

ಸುಳ್ವಾಡಿಯಲ್ಲಿ ಭಾರೀ ದುರಂತ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ, ಜನರಲ್ಲಿ ಆರೋಗ್ಯ ಸಮಸ್ಯೆಗಳ ಸರಮಾಲೆ – Kannada News | Fluoride Water Tragedy in Chamarajanagar: 47 Suffer Kidney Failure in Sulvadi Martalli Villages

‘ಟಿವಿ9’ ಜತೆ ಅಳಲು ತೋಡಿಕೊಂಡ ಗ್ರಾಮಸ್ಥರುImage Credit source: tv9 ಚಾಮರಾಜನಗರ, ಫೆಬ್ರವರಿ 2: ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ (Fluoride-contaminated water) ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮಗಳ 47 ಜನರಿಗೆ ಕಿಡ್ನಿ ವೈಫಲ್ಯ ಸಂಭವಿಸಿರುವ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಅಷ್ಟೇ ಅಲ್ಲದೆ, ಈ ಗ್ರಾಮಗಳ ಹತ್ತಾರು ಜನರು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವುದು ‘ಟಿವಿ9’ ನಡೆಸಿದ ರಿಯಾಲಿಟಿ ಚೆಕ್‌ನಲ್ಲಿ ಬೆಳಕಿಗೆ ಬಂದಿದೆ. ಮಾರ್ಟಳ್ಳಿ–ಸುಳ್ವಾಡಿ ಗ್ರಾಮಗಳಲ್ಲಿ ಕಳೆದ 30 ವರ್ಷಗಳಿಂದ…

Read More

ಅಪೋಲೋ ಆಸ್ಪತ್ರೆಗಳು 24×7 ಆರೋಗ್ಯ ಸೇವೆಗೆ ಬದ್ಧ: ಐಎಚ್​ಡಿ ಸಮಾವೇಶದಲ್ಲಿ ಘೋಷಣೆ – Kannada News | Apollo Hyderabad: 24/7 Healthcare and Future Hospital Vision from Int’l Health Dialogue

ಹೈದರಾಬಾದ್, ಫೆಬ್ರುವರಿ 01: ಅಪೋಲೋ ಹಾಸ್ಪಿಟಲ್ಸ್ (Apollo Hospitals)​​ ವತಿಯಿಂದ ಹೈದರಾಬಾದ್​​​ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ (International Health Dialogue)​​ ಸಂವಾದ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವರ್ಷದ 365 ದಿನವೂ ತನ್ನ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಭವಿಷ್ಯದ ಆಸ್ಪತ್ರೆ ನಿರ್ಮಿಸುವ ಯೋಜನೆಯನ್ನು ಅಪೋಲೋ ಘೋಷಿಸಿದೆ. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯವಾಗಿ ಹಾಗೂ ಆನ್‌ಲೈನ್ ಮೂಲಕ 27,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಜನರು ಅನಾರೋಗ್ಯಕ್ಕೆ ಒಳಗಾದಾಗ ಆರೋಗ್ಯ ಕ್ಷೇತ್ರ ನಿದ್ರಿಸಲು…

Read More

ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರಿಂದ ಗಲಾಟೆ!

ಹಾಸನ, ಫೆಬ್ರುವರಿ 08: ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ ಮಾಡುತ್ತಿದ್ದ ಶಶಿಕುಮಾರ್, ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯಿಂದ ದೂರವಾಗಿದ್ದಾನೆ. ಅರ್ಪಿತಾ ಉಳಿದುಕೊಳ್ಳಲು ಪತಿ ಮನೆಯ ಮೇಲಿನ ರೂಂನ್ನು ಶಶಿಕುಮಾರ್ ಪೋಷಕರು ನೀಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿ ಮಗುವನ್ನು ಸಾಕುತ್ತಿದ್ದ ಅರ್ಪಿತಾ, ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ…

Read More

ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿದ ವೈಭವ್ ಸೂರ್ಯವಂಶಿ – Kannada News | Vaibhav suryavanshi Smashed 10 Sixes in Just 24 Balls

ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್​ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2…

Read More