Headlines

ತಮಿಳುನಾಡು ಸಿಎಂ ಪುತ್ರನಿಗೆ ಕನ್ನಡದ ಈ ಸಿನಿಮಾ ಬಲು ಇಷ್ಟವಂತೆ – Kannada News | Jason Vijay likes KGF movie said it is my favourite movie

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಈಗ ತಮಿಳುನಾಡು ಸಿಎಂ ಆಗಿದ್ದಾರೆ. ತಮಿಳುನಾಡು ಸಿಎಂ ಆದ ಬಳಿಕ ಅವರು ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಇದೀಗ ಅವರ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ವಿಜಯ್ ಅವರ ಮಗ ಜೇಸನ್ ಈ ಹಿಂದೆ ವಿಜಯ್ ಅವರ ಜೊತೆಗೆ ಕೆಲವು ಸಿನಿಮಾಗಳ ಹಾಡುಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಸ್ವತಂತ್ರ್ಯ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ತಮ್ಮ ಮೊದಲ ಸಿನಿಮಾನಲ್ಲಿ ನಟನೆ ಸಹ ಮಾಡಿದ್ದಾರೆ ವಿಜಯ್ ಪುತ್ರ….

Read More

ರಾಜೀನಾಮೆ ಬೆದರಿಕೆ ಹಾಕಿದವರು ಯಾರು? ಸಿಎಂಗೇ ನೇರ ಕಡೆ ಮಾಡಿ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್ – Kannada News | Who threatened to resign? The Congress High Command has sought information by the CM DK Shivakumar

ಬೆಂಗಳೂರು, ಆಗಸ್ಟ್ 4: ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಕೆಲವು ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಕೆಲವು ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಕರೆ ಮಾಡಿ, ರಾಜೀನಾಮೆ ಬೆದರಿಕೆ ಹಾಕುವವರ ವಿವರ ಕೇಳಿದೆ. ಅಲ್ಲದೆ, ರಾಜೀನಾಮೆ ನೀಡಿದರೆ ಅದನ್ನು ತಕ್ಷಣವೇ ಅಂಗೀಕರಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್‌ ಬೆಂಗಳೂರಿನಲ್ಲಿ…

Read More

‘ಬಾಲನ್: ದಿ ಬಾಯ್​’ ಚಿತ್ರವನ್ನು ಒಟಿಟಿಯಲ್ಲಿ ಮಿಸ್ ಮಾಡಲೇಬೇಡಿ – Kannada News | Balan: The Boy Malayalam Movie Review and ZEE5 OTT Release

‘ಮಂಜುಮ್ಮೇಲ್ ಬಾಯ್ಸ್’ ಸಿನಿಮಾ ಮೂಲಕ ಇಡೀ ದೇಶದ ಗಮನ ಸೆಳೆದಿದ್ದ ನಿರ್ದೇಶಕ ಚಿದಂಬರಂ ಇದೀಗ ‘ಬಾಲನ್: ದಿ ಬಾಯ್’ ಹೆಸರಿನ ಮತ್ತೊಂದು ಅದ್ಭುತ ಚಿತ್ರದ ಮೂಲಕ ಸುದ್ದಿಯಲ್ಲಿದ್ದಾರೆ. ಜೂನ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಜುಲೈ 31 ರಿಂದ ‘ಜೀ5’ ಒಟಿಟಿಯಲ್ಲಿ ಪ್ರಸಾರವಾಗುತ್ತಿದೆ. ತಾಯಿ ಮತ್ತು ಮಗನ ನಡುವಿನ ಭಾವುಕ ಕಥೆ ಸದ್ಯ ಒಟಿಟಿ ಪ್ರೇಕ್ಷಕರ ಮನ ಗೆಲ್ಲುತ್ತಿದೆ. ಕಥೆಯು ಜೈಲಿನಿಂದ ಪ್ರಾರಂಭವಾಗುತ್ತದೆ. ಅಲ್ಲಿ ಕೈದಿಯಾಗಿರುವ ನಾಯಕಿ ಗಂಡು ಮಗುವಿಗೆ ಜನ್ಮ ನೀಡುತ್ತಾಳೆ. ಆ…

Read More

Cabinet Expansion: ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ – Kannada News | K.N. Rajanna Criticises Karnataka Cabinet Over Lack of Womens Representation, Recalls Historical Leadership Changes

ಬೆಂಗಳೂರು, ಆಗಸ್ಟ್ 04: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇತಿಹಾಸ ಗಮನಿಸಿದರೆ, ಐದು ವರ್ಷದ ಅವಧಿಯಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಿದಾಗಲೆಲ್ಲಾ ಮುಂದಿನ ಚುನಾವಣೆಯಲ್ಲಿ ಆ ಪಕ್ಷ ನೆಲಕಚ್ಚಿದೆ. ಹಿಂದೆ ವೀರೇಂದ್ರ ಪಾಟೀಲ್, ಬಂಗಾರಪ್ಪ ಹಾಗೂ ಬಿಜೆಪಿಯ ಯಡಿಯೂರಪ್ಪ ಅವರ ಬದಲಾವಣೆ ವೇಳೆ ಇದು ಸಾಬೀತಾಗಿದೆ ಎಂದು ನೆನಪಿಸಿದರು. ಇದೇ ವೇಳೆ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ…

Read More

DHFWS Recruitment 2026: ವಿಜಯಪುರದಲ್ಲಿ 26 ನರ್ಸಿಂಗ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ – Kannada News | DHFWS Vijayapura Recruitment 2026: Apply Offline for 26 Nursing Officer and Other Posts by August 7

ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಕರ್ನಾಟಕ ಸರ್ಕಾರದ ಅಡಿಯಲ್ಲಿ ಬರುವ ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS) 2026ನೇ ಸಾಲಿನ ನೂತನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 26 ನರ್ಸಿಂಗ್ ಆಫೀಸರ್, ಲ್ಯಾಬೊರೇಟರಿ ಟೆಕ್ನಿಕಲ್ ಆಫೀಸರ್ ಹಾಗೂ ಫಾರ್ಮಸಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿಜಯಪುರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಖಾಲಿ ಇರುವ ಹುದ್ದೆಗಳ…

Read More

ಹೋಟೆಲ್ ರೂಮ್‌ಗಳಲ್ಲಿ ಬೆಡ್ ಮುಂದೆ ಕನ್ನಡಿ ಅಳವಡಿಸುವುದರ ಹಿಂದಿದೆ ಈ ಕಾರಣ – Kannada News | Why are mirrors installed in front of the bed in hotel rooms?

ಸಾಮಾನ್ಯವಾಗಿ ಟ್ರಾವೆಲ್, ಟ್ರಿಪ್ ಎಂದು ಹೊರಗಡೆ ಹೋಟೆಲ್ ರೂಮ್ (Hotel Room) ಅಥವಾ ಲಾಡ್ಜ್ ಬುಕ್ ಮಾಡುವುದು ಸಹಜ. ವಿಶ್ರಾಂತಿ ಪಡೆಯಲೆಂದು ಹೋಟೆಲ್ ರೂಮ್‌ಗೆ ಹೋಗಿ ಬೆಡ್ ಮೇಲೆ ಕುಳಿತುಕೊಂಡಾಗ ಕಣ್ಣ ಮುಂದೆ ಕಾಣುವುದೇ ಈ ಫಳ ಫಳ ಹೊಳೆಯುವ ಕನ್ನಡಿ. ಬೆಡ್ ಮುಂದೆಯೆ ಯಾಕೆ ಕನ್ನಡಿ ಅಳವಡಿಸಲಾಗಿರುತ್ತದೆ ಎಂಬ ಬಗ್ಗೆ ಯಾರು ಕೂಡ ಯೋಚನೆ ಮಾಡಲ್ಲ. ಹೋಟೆಲ್ ರೂಮ್‌ನಲ್ಲಿ ಮಿರರ್‌ಗಳನ್ನು ಅಳವಡಿಸುವುದರ ಹಿಂದೆ ಕೆಲ ಕಾರಣಗಳಿವೆ. ಈ ಮಿರರ್‌ಗಳು ಬೆಳಕನ್ನು ರೂಮ್ ಒಳಗೆ ಬರುವಂತೆ ಮಾಡುತ್ತದೆ. …

Read More

ಗೌತಮ್ ಗಂಭೀರ್ ವಿರುದ್ಧ ತಿರುಗಿ ನಿಂತ ಟೀಮ್ ಇಂಡಿಯಾ ಆಟಗಾರರು! – Kannada News | Seniors Revolt Against Gautam Gambhir’s Rigid Coaching Style

ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಆತಂಕಕಾರಿ ಸುದ್ದಿ ಹೊರಬಿದ್ದಿದೆ! ಸರಣಿ ಸೋಲುಗಳಿಂದ ಕಂಗೆಟ್ಟಿರುವ ಬೆನ್ನಲ್ಲೇ, ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಕಠಿಣ ಆಡಳಿತ ಮತ್ತು ಕೋಚಿಂಗ್ ಶೈಲಿಯ ವಿರುದ್ಧ ಹಿರಿಯ ಆಟಗಾರರು ಬಿಸಿಸಿಐ ಅಪೆಕ್ಸ್ ಕೌನ್ಸಿಲ್​ಗೆ ಕೌನ್ಸಿಲ್​ಗೆ ದೂರು ನೀಡಿರುವ ವಿಚಾರ ಬಹಿರಂಗವಾಗಿದೆ. ಗಂಭೀರ್ ಅವರ ನಡೆಗೆ ತೀವ್ರ ಬೇಸತ್ತಿರುವ ತಂಡದ  ಸೀನಿಯರ್ ಆಟಗಾರರು, ಈ ಕುರಿತು ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಹಾಗೂ ಮಾಜಿ ಕ್ರಿಕೆಟಿಗರ ಬಳಿ ರಹಸ್ಯವಾಗಿ ತಮ್ಮ ತೀವ್ರ…

Read More

Gold Rates 04 Aug: ಚಿನ್ನದ ಬೆಲೆ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 4th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 4: ಚಿನ್ನದ ಬೆಲೆ ಇವತ್ತು ಮಂಗಳವಾರ ಅಲ್ಪ ಇಳಿಕೆ ಕಂಡಿದೆ. ಹಳದಿ ಲೋಹದ ಬೆಲೆ (Gold Price) ಗ್ರಾಮ್​ಗೆ 20-22 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಅಲ್ಪ ಏರಿಕೆಯಾದರೆ, ಇನ್ನೂ ಕೆಲವೆಡೆ ತುಸು ತಗ್ಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500…

Read More

ಸಚಿವರ ಪ್ರಮಾಣವಚನ ಸ್ವೀಕಾರಕ್ಕೆ ಸಿದ್ದರಾಮಯ್ಯ ಗೈರಾಗಿದ್ದೇಕೆ: ಯತೀಂದ್ರ ಕೊಟ್ಟರು ಕಾರಣ! – Kannada News | Why Did Siddaramaiah Skip New Ministers’ Oath Ceremony? Yathindra Gives Clarification

ಬೀದರ್, ಆಗಸ್ಟ್ 4: ನೂತನ ಸಚಿವ ಸಂಪುಟ ರಚನೆಯಾದ ಬಳಿಕ, ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಭವನಕ್ಕೆ ಆಗಮಿಸದಿರುವ ಬಗ್ಗೆ ಅವರ ಪುತ್ರ ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಬೀದರ್​​ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಡಪಡಿಸಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಸಿದ್ದರಾಮಯ್ಯನವರಿಗೆ ಲೋಕಭವನಕ್ಕೆ ತೆರಳಲು ಆಗಿಲ್ಲ. ಸಚಿವರೇ ಅವರ ಮನೆಗೆ ಬಂದು ಶುಭಾಶಯ ಕೋರಿದ್ದಾರೆ. ಸಿದ್ದರಾಮಯ್ಯನವರು ಕೂಡ ಎಲ್ಲರಿಗೂ ಶುಭ ಹಾರೈಸಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ. ಕೆಲವು ಶಾಸಕರು ಸಚಿವ ಸ್ಥಾನದ…

Read More

ಮೃತ ಕೋತಿಗೆ ವೈಕುಂಠ ಸಮಾರಾಧನೆ: ನೂರಾರು ಜನರಿಗೆ ಅನ್ನಸಂತರ್ಪಣೆ – Kannada News | Unique Faith: Kolar Village Honors Deceased Monkey with Grand Vaikuntha Samaradhane

ಕೋಲಾರ ಆ 4: ಕೋತಿಯನ್ನು ಆಂಜನೇಯನ ಪ್ರತಿರೂಪವೆಂದು ಪೂಜಿಸುವ ಭಾರತೀಯ ಕೃಷಿ ಹಾಗೂ ಗ್ರಾಮೀಣ ಸಂಸ್ಕೃತಿಯ ಅಪರೂಪದ ಭಕ್ತಿಪ್ರಧಾನ ಘಟನೆಯೊಂದು ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೋತಿಯೊಂದಕ್ಕೆ ಗ್ರಾಮಸ್ಥರೆಲ್ಲರೂ ಸೇರಿ ಸಕಲ ಶಾಸ್ತ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಲ್ಲದೆ, ಇದೀಗ 11ನೇ ದಿನದ ‘ವೈಕುಂಠ ಸಮಾರಾಧನೆ’ ಕಾರ್ಯಕ್ರಮವನ್ನೂ ಅತ್ಯಂತ ವೈಭವದಿಂದ ನೆರವೇರಿಸಿದ್ದಾರೆ. ಕೆಲವು ದಿನಗಳ ಹಿಂದೆ ತೊಟ್ಲಿ ಗ್ರಾಮದ ವ್ಯಾಪ್ತಿಯಲ್ಲಿ ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟಿದ್ದ ಕೋತಿಯನ್ನು ಕಂಡ ಗ್ರಾಮಸ್ಥರು, ಅದನ್ನು ಕೇವಲ ಪ್ರಾಣಿ ಎಂದು…

Read More