Headlines

Video: ಮಗಳ ಭವಿಷ್ಯಕ್ಕಾಗಿ ತಂದೆಯ ಹೋರಾಟ; ತನ್ನ ಆಟೋದಲ್ಲಿ ಮಗಳನ್ನು ಮಲಗಿಸಿ ಆಟೋ ಓಡಿಸುವ ವ್ಯಕ್ತಿ – Kannada News | A father who drives his auto with his daughter sleeping in it

ಬದುಕು (life) ಯಾವಾಗ ಹೇಗೆ ತಿರುವು ಪಡೆದುಕೊಳ್ಳುತ್ತದೆ ಎಂದು ಹೇಳಲಾಗದು. ಕೆಲವೊಮ್ಮೆ ಒಂಟಿಯಾಗಿ ತಮ್ಮ ಮಕ್ಕಳ ಜವಾಬ್ದಾರಿ ಹೊತ್ತು ಕೊಂಡು ಅವರುಗಳಿಗೆ ಉತ್ತಮ ಭವಿಷ್ಯ ಕಟ್ಟಿ ಕೊಡಬೇಕಾಗುತ್ತದೆ. ಇಲ್ಲೊಬ್ಬ ಆಟೋ ಡ್ರೈವರ್‌ನದ್ದು (auto driver) ಅದೇ ಕಥೆ. ಪತ್ನಿಯನ್ನು ಕಳೆದುಕೊಂಡ ಆಟೋ ಡ್ರೈವರ್ ತನ್ನ ಮಗಳಿಗೆ ತಂದೆ ಮಾತ್ರವಲ್ಲ ತಾಯಿಯೂ ಆಗಿದ್ದಾನೆ. ಹೀಗಾಗಿ ಆಟೋದಲ್ಲೇ ತನ್ನ ಪುಟ್ಟ ಪ್ರಪಂಚವನ್ನು ಮಲಗಿಸಿಕೊಂಡು ದುಡಿಮೆಯನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿದ್ದಾನೆ. ಈ ವ್ಯಕ್ತಿಯ ಬದುಕಿನ ಕಣ್ಣೀರಿನ ಕಥೆಯನ್ನು ಪ್ರಯಾಣಿಕನೊಬ್ಬ ಬಿಚ್ಚಿಟ್ಟಿದ್ದಾನೆ. @SaffronChargers…

Read More

“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ – Kannada News | Belagavi Womans Death: Husband Accused of Murder Amidst Marital Discord.

ಬೆಳಗಾವಿ, ಫೆ.10: ಜಿಲ್ಲೆಯ ( Belagavi murder allegation) ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದು, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರೇ ತಮ್ಮ ಪತ್ನಿಯನ್ನು ಕೊಲೆ ಮಾಡಿ, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ…

Read More

Yadgir: ಮದ್ಯ ಕುಡಿಯಬೇಡಮ್ಮ ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂದ ತಾಯಿ – Kannada News | Drunk Mother Strangles Daughter in Yadgiri After Plea to Quit Drinking

ಯಾದಗಿರಿ, ಫೆಬ್ರವರಿ 10: ಮದ್ಯದ ದಾಸಿಯಾಗಿದ್ದ ಮಹಿಳೆಯೊಬ್ಬಳು ಎಣ್ಣೆ ನಶೆಯಲ್ಲಿ ಹೆತ್ತ ಮಗಳನ್ನೇ ಕೊಂದಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ. ಪ್ರತಿಭಾ (11) ಮೃತ ಬಾಲಕಿಯಾಗಿದ್ದು, ಆರೋಪಿ ನಿರ್ಮಲಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ತಂದೆಯನ್ನ ಕಳೆದುಕೊಂಡಿದ್ದ ಬಾಲಕಿ ಪಾಲಿಗೆ ತಾಯಿಯೇ ವಿಲನ್​​ ಆಗಿದ್ದು, ಬಡತನ ಹಿನ್ನೆಲೆ ಆಡಿ ಬೆಳೆಯಬೇಕಾದ ವಯಸ್ಸಲ್ಲೇ ಶಾಲೆ ಬಿಟ್ಟು ದುಡಿಯೋಕೆ ಹೋಗ್ತಿದ್ದ ಪ್ರತಿಭಾ ಕ್ರೂರವಾಗಿ ಹತ್ಯೆಯಾಗಿದ್ದಾಳೆ. ಮಗಳ ಕೊಂದು ತಾಯಿಯ ನಾಟಕ ಇನ್ನು…

Read More

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಬಿಜೆಪಿ ಮುಖಂಡನಿಗೆ ರಾಜ್ಯ ಸಚಿವ ಸ್ಥಾನಮಾನ!: ‘ಕೈ’ ಕಾರ್ಯಕರ್ತರ ಕಿಡಿ – Kannada News | Karnataka Government Grants Minister Status to 54 Corp Heads; BJP Leader Inclusion Fuels Congress Outrage

ಬಿಜೆಪಿ ಮುಖಂಡ ಬಿ.ಡಿ. ಭೂಕಾಂತ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 10: ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯಸರ್ಕಾರ ಮೊನ್ನೆಯಷ್ಟೇ ಆದೇಶಿಸಿದ್ದು, ಶಿಕಾರಿಪುರದ ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರೋದೀಗ ಕಾಂಗ್ರೆಸ್​ ಪಾಳಯದಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದೆ. ಪಕ್ಷದ ನಾಯಕರ ನಿರ್ಧಾರದ ವಿರುದ್ಧ ‘ಕೈ’ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಭಾರೀ ಅಸಮಾಧಾನ ಹೊರಹಾಕಿದ್ದಾರೆ. 54 ಮಂದಿ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ…

Read More

ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು: ಸಿದ್ದೇಶ್ವರನ ಸುತ್ತ ನಾಗಸರ್ಪ ಕಾವಲು – Kannada News | Siddeshwara Temple Architecture of Chalukya Period In Jantli Shirur at gadag

ಗದಗ, (ಫೆಬ್ರವರಿ 10): ಗದಗ ಜಿಲ್ಲೆಯ ಮುಂಡರಗಿ ಜಂತ್ಲಿಶಿರೂರ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಗಿದ್ದ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನದ ಅಡಿಯಲ್ಲಿ ಸಾಕಷ್ಟು ಸಿರಿ ಸಂಪತ್ತು ಇದೆ ಎನ್ನುವ ಚರ್ಚೆ ಶುರುವಾಗಿದೆ. ಹಳೇ ಕಾಲದ ಸಿದ್ದೇಶ್ವರ ದೇಗುಲ ಸಂಪೂರ್ಣ ಹಾಳಾಗಿದೆ. ನಿಧಿಗಳ್ಳರ ಅಟ್ಟಹಾಸಕ್ಕೆ ದೇವಸ್ಥಾನ ನಾಶವಾಗಿದೆ. ಇನ್ನು ಈ ದೇವಸ್ಥಾನದ ಕೆಳಗೆ ಮತ್ತೊಂದು ದೇಗುಲ ಇದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಸಂಜೀವ್ ಪಾಂಡ್ರೆ ಅವರು ಪ್ರತ್ಯಕ್ಷ ವರದಿ ನೀಡಿದ್ದಾರೆ. ಮತ್ತಷ್ಟು ಸುದ್ದಿ…

Read More

2027ರಿಂದ ಉದ್ಯೋಗಪತನ ಶುರು; ಶೇ. 99 ಮಂದಿಗೆ ಕೆಲಸವೇ ಇರಲ್ಲ: ಡಾ. ಯಾಂಪೋಲ್​ಸ್ಕಿ ಭಯಾನಕ ಭವಿಷ್ಯ – Kannada News | AGI’s Job Apocalypse: Expert Predicts Mass Unemployment by 2027. Are YOU Ready?

ನವದೆಹಲಿ, ಫೆಬ್ರುವರಿ 10: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ (AI Technology) ಬಹಳ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಟೆಕ್ನಾಲಜಿಯ ಮುಂದುವರಿದ ಭಾಗವಾಗಿರುವ ಆರ್ಟಿಫಿಶಿಯಲ್ ಜನರಲ್ ಇಂಟೆಲಿಜೆನ್ಸ್ ಅಥವಾ ಎಜಿಐ ಅನ್ನು ಸಾಧಿಸಲು ವಿಜ್ಞಾನಿಗಳು ಇನ್ನಿಲ್ಲದ ಪ್ರಯತ್ನದಲ್ಲಿದ್ದಾರೆ. ಒಂದು ವೇಳೆ ಎಜಿಐ ಸಿದ್ಧವಾಯಿತೆಂದರೆ ಯಂತ್ರದ ಬುದ್ಧಿಮತ್ತೆಯು ಮನುಷ್ಯರನ್ನು ಮೀರಿ ಹೆಚ್ಚುತ್ತದೆ. ಮನುಷ್ಯರ ಬಹುತೇಕ ಎಲ್ಲಾ ಕೆಲಸಗಳನ್ನೂ ಯಂತ್ರಗಳು ಮಾಡಬಲ್ಲುವು. ಆದರೆ, ಇಂಥದ್ದೊಂದು ಸ್ಥಿತಿ ಯಾವಾಗ ಬರುತ್ತೆ? ಅಮೆರಿಕದ ಲೂಯಿಸ್​ವಿಲೆ ಯೂನಿವರ್ಸಿಟಿಯ ಪ್ರೊಫೆಸರ್ ಹಾಗೂ ಕಂಪ್ಯೂಟರ್ ವಿಜ್ಞಾನಿ ಡಾ. ರೋಮನ್…

Read More

ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ: 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ – Kannada News | Hoskote Teen Kalyani’s Suspicious Death: Inter District Body Transfer Raises Police Questions

ಚಿಕ್ಕಬಳ್ಳಾಪುರ, ಫೆ.10: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಕಲ್ಯಾಣಿಯ ನಿಗೂಢ ಸಾವು ಮತ್ತು ಆಕೆಯ ಶವವನ್ನು ಪೊಲೀಸರಿಗೆ ತಿಳಿಸದೆ ಒಂದು ಜಿಲ್ಲೆಯಿಂದ ಇನ್ನೊಂದು ಜಿಲ್ಲೆಗೆ ಸಾಗಿಸಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗಿಡ್ನಹಳ್ಳಿ ಗ್ರಾಮದಲ್ಲಿ ದೊಡ್ಡಪ್ಪ-ದೊಡ್ಡಮ್ಮನ ಮನೆಯಲ್ಲಿ ಬೆಳೆದಿದ್ದ ಕಲ್ಯಾಣಿ ಇಂದು ಬೆಳಿಗ್ಗೆ ಗಿಡ್ನಹಳ್ಳಿ ಗ್ರಾಮದ ತೋಟವೊಂದರ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿ ಸಾವನ್ನಪ್ಪಿದ ನಂತರ, ಪೋಷಕರು ಮತ್ತು ಸಂಬಂಧಿಕರು ಸ್ಥಳೀಯ ನಂದಗುಡಿ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೆ ಶವವನ್ನು…

Read More

2 ಲಕ್ಷಕ್ಕಾಗಿ 14 ವರ್ಷದ ಮಗಳನ್ನು ಕೋಲಾರದ 54 ವರ್ಷದ ವ್ಯಕ್ತಿಗೆ ಮಾರಿದ ತಾಯಿ! – Kannada News | Mother Sold 14 year old Daughter for Rs 2 Lakhs to 54 year Old Kolar Man in Andhra Pradesh

ಹೈದರಾಬಾದ್, ಫೆಬ್ರವರಿ 10: ಆಂಧ್ರಪ್ರದೇಶದ (Andhra Pradesh) ಅಣ್ಣಮಯ್ಯ ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ತಾಯಿಯೊಬ್ಬಳು ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ಮಾರಾಟಕ್ಕೆ ಇಟ್ಟಿದ್ದಾರೆ. 2 ಲಕ್ಷ ರೂ.ಗೆ ತಾಯಿ ತನ್ನನ್ನೇ ನಂಬಿಕೊಂಡಿದ್ದ ಮಗಳ ಜೀವನವನ್ನೇ ಹಾಳು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುಂಗನೂರಿನ ಬೀಡಿ ಕಾಲೋನಿಯ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ರಾಜಶೇಖರ್ ರೆಡ್ಡಿ ಎಂಬ 54 ವರ್ಷದ ವ್ಯಕ್ತಿಗೆ ಮಾರಾಟ ಮಾಡಲಾಗಿದೆ. ಬೀಡಿ ಕಾಲೋನಿಯಲ್ಲಿ ವಾಸಿಸುವ ರಾಮರಾಜು ಹಾಗೂ ಶೋಭಾ…

Read More

ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್ – Kannada News | Priya Hassan said sandalwood 93 year celebration is not needed

ಕನ್ನಡ ಚಿತ್ರರಂಗದ (Sandalwood) 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂಬ ನಿರ್ಣಯದ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದಕ್ಕೆ ಕೆಲವು ನಿರ್ಮಾಪಕರುಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು (ಫೆಬ್ರವರಿ 10) ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕಿ ಪ್ರಿಯಾ ಹಾಸನ್, 93ರ ಸಂಭ್ರಮಾಚರಣೆ ಬೇಡ, ಚಿತ್ರರಂಗ ಈಗ ಸಂಕಷ್ಟದಲ್ಲಿದೆ, ಹೀಗಿರುವಾಗ ದುಂದು ವೆಚ್ಚ ಬೇಡ, 100ನೇ ವರ್ಷದ ಆಚರಣೆ ಮಾಡುವುದು ಹೆಚ್ಚು ಅರ್ಥಪೂರ್ಣವಾಗಿರುತ್ತದೆ ಎಂಬ…

Read More

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು? – Kannada News | Ranbir Kapoor to act in Dhoom 4 as villain here is the detail in Kannada

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ. ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ….

Read More