ಆ ಬಳಿಕ 2009, 2010 ಮತ್ತು 2012 ರಲ್ಲಿ ನಡೆದ ನಂತರದ ಆವೃತ್ತಿಗಳಲ್ಲೂ ಬಾಂಗ್ಲಾ ತಂಡ ನಿರಾಶಾದಾಯಕ ಪ್ರದರ್ಶನ ನೀಡಿತು, ಗುಂಪು ಹಂತದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ವಿಫಲವಾಯಿತು. 2014 ಮತ್ತು 2016 ರಲ್ಲಿ ಸೂಪರ್ 10 ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಬಾಂಗ್ಲಾ, ಈ ಸುತ್ತಿನಲ್ಲಿ ಸತತ ಸೋಲುಗಳನ್ನು ಅನುಭವಿಸಿತು.
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (ಬಿಪಿ) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಚಳಿಗಾಲದಲ್ಲಿ ಈ ಸಮಸ್ಯೆ ವಿಶೇಷವಾಗಿ ಗಂಭೀರವಾಗುತ್ತದೆ. ಶೀತವು ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ. ಇದು ರಕ್ತದೊತ್ತಡ ಹೆಚ್ಚಿಸುತ್ತದೆ. ಹೈಬ್ಲಡ್ ಪ್ರೆಷರ್ ಸ್ಥಿತಿಯನ್ನು ದೀರ್ಘಕಾಲದವರೆಗೆ ನಿಯಂತ್ರಿಸದಿದ್ದರೆ, ಅದು ಹೃದಯ, ಮೂತ್ರಪಿಂಡಗಳು ಮತ್ತು ಮೆದುಳಿಗೆ ಹಾನಿಯನ್ನುಂಟುಮಾಡುತ್ತದೆ. ವೃದ್ಧರು, ಬೊಜ್ಜು ಹೊಂದಿರುವವರು ಮತ್ತು ಈಗಾಗಲೇ ಬಿಪಿ ಸಮಸ್ಯೆ ಹೊಂದಿರುವವರಿಗೆ ಈ ಚಳಿಗಾಲ ಹೆಚ್ಚಿನ ಅಪಾಯಕಾರಿಯಾಗಬಹುದು. ಆದ್ದರಿಂದ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡುವುದು ಬಹಳ ಮುಖ್ಯ. ಯೋಗ ಆಸನಗಳು ದೇಹವನ್ನು ಸಕ್ರಿಯವಾಗಿಡುವುದಲ್ಲದೆ, ಒತ್ತಡವನ್ನು ಕಡಿಮೆ ಮಾಡಲು ಮತ್ತು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ.
ಬಾಬಾ ರಾಮದೇವ್ ಸೂಚಿಸಿದ ಯೋಗ ಆಸನಗಳು ನೈಸರ್ಗಿಕವಾಗಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯಕವಾಗಿವೆ. ಚಳಿಗಾಲದಲ್ಲಿ ಹೈಬಿಪಿ ನಿಯಂತ್ರಿಸಲು ಯಾವ ಯೋಗಾಸನಗಳು ಪ್ರಯೋಜನಕಾರಿ ಎನ್ನುವ ಮಾಹಿತಿ ಇಲ್ಲಿದೆ.
ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಯೋಗಾಸನಗಳನ್ನು ಅನುಸರಿಸಿ
ಭುಜಂಗಾಸನ
ಭುಜಂಗಾಸನವು ಎದೆಯನ್ನು ಹಿಗ್ಗಿಸುತ್ತದೆ ಮತ್ತು ಶ್ವಾಸಕೋಶಗಳಿಗೆ ಆಮ್ಲಜನಕದ ಹರಿವನ್ನು ಸುಧಾರಿಸುತ್ತದೆ. ಚಳಿಗಾಲದಲ್ಲಿ, ಶೀತದಿಂದಾಗಿ ರಕ್ತನಾಳಗಳು ಸಂಕುಚಿತಗೊಂಡಾಗ, ಈ ಆಸನವು ರಕ್ತ ಪರಿಚಲನೆ ಸುಧಾರಿಸಲು ಸಹಾಯ ಮಾಡುತ್ತದೆ. ಇದು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡದ ಸಮತೋಲನವನ್ನು ಕಾಪಾಡಿಕೊಳ್ಳುತ್ತದೆ ಎಂದು ಬಾಬಾ ರಾಮದೇವ್ ಹೇಳುತ್ತಾರೆ.
ಮಂಡೂಕಾಸನ
ಮಂಡೂಕಾಸನವು ಹೊಟ್ಟೆ ಮತ್ತು ನರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಚಳಿಗಾಲದಲ್ಲಿ ಬಿಪಿ ಹೆಚ್ಚಲು ಕಾರಣವಾಗುವ ಒತ್ತಡ ಹಾಗೂ ಆತಂಕವನ್ನು ಕಡಿಮೆ ಮಾಡಲು ಈ ಮಂಡೂಕಾಸನ ನೆರವಾಗುತ್ತದೆ. ಈ ಆಸನವು ದೇಹಕ್ಕೆ ಅಗತ್ಯ ವಿಶ್ರಾಂತಿ ಕೂಡ ನೀಡುತ್ತದೆ.
ಶಶಾಂಕಾಸನ
ಶಶಾಂಕಾಸನವು ಮನಸ್ಸನ್ನು ಶಾಂತಗೊಳಿಸುವ ಯೋಗಾಸನವಾಗಿದೆ. ಚಳಿಗಾಲದಲ್ಲಿ ಒತ್ತಡ ಮತ್ತು ಮಾನಸಿಕ ಒತ್ತಡವು ಬಿಪಿ ಹೆಚ್ಚಲು ಕಾರಣವಾಗಿರುತ್ತವೆ. ಮಂಡೂಕಾಸನದ ರೀತಿ ಶಶಾಂಕಾಸನವೂ ಒತ್ತಡ ನಿವಾರಿಸಿ, ಮನಸ್ಸನ್ನು ಹಗುರಗೊಳಿಸುತ್ತದೆ. ಹೃದಯದ ಬಡಿತವನ್ನು ಸಹಜ ಸ್ಥಿತಿಗೆ ತಂದು ರಕ್ತದೊತ್ತಡ ಕಡಿಮೆ ಮಾಡಲು ನೆರವಾಗುತ್ತದೆ.
ಸ್ಥಿತ ಕೋನಾಸನ
ಸ್ಥಿತ ಕೋನಾಸನವು ದೇಹದ ಸಮತೋಲನ ಮತ್ತು ರಕ್ತದ ಹರಿವನ್ನು ಸುಧಾರಿಸುತ್ತದೆ. ಇದು ಹೃದಯ ಮತ್ತು ಸ್ನಾಯುಗಳನ್ನು ಸಕ್ರಿಯವಾಗಿರಿಸುತ್ತದೆ. ಚಳಿಗಾಲದಲ್ಲಿ ರಕ್ತದೊತ್ತಡದಲ್ಲಿ ಹಠಾತ್ ಹೆಚ್ಚಳಗೊಳ್ಳುವ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ನಿಯಮಿತ ಅಭ್ಯಾಸವು ದೇಹವನ್ನು ಬೆಚ್ಚಗಿಡುತ್ತದೆ ಮತ್ತು ರಕ್ತದೊತ್ತಡವನ್ನು ಸಮತೋಲನದಲ್ಲಿಡುತ್ತದೆ.
ಪ್ರಸ್ತುತ ಕಾಲದಲ್ಲಿ ಬೊಜ್ಜಿನ (fat) ಸಮಸ್ಯೆ ಅಧಿಕ ಜನರನ್ನು ಕಾಡುತ್ತಿರುವ ಬಹು ದೊಡ್ಡ ಸಮಸ್ಯೆಯಾಗಿದೆ. ಅನಾರೋಗ್ಯಕರ ಆಹಾರ ಪದ್ಧತಿ, ಕೆಟ್ಟ ಜೀವನಶೈಲಿ ಇವೆಲ್ಲವೂ ಬೊಜ್ಜಿಗೆ ಪ್ರಮುಖ ಕಾರಣ. ಈ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡುತ್ತಾ ಹೋದರೆ ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಇದಲ್ಲದೆ ಹೊಟ್ಟೆಯ ಬೊಜ್ಜು ದೇಹ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಹೀಗಿರುವಾಗ ಆರೋಗ್ಯಕರ ಆಹಾರ ಸೇವನೆ ಮಾಡುವ ಮೂಲಕ, ವ್ಯಾಯಾಮ ಮಾಡುವ ಮೂಲಕ ಬೊಜ್ಜು, ತೂಕ ಇಳಿಕೆಯನ್ನು ಮಾಡಬಹುದು. ಇದಲ್ಲದೆ ಸೋರೆಕಾಯಿ ಜ್ಯೂಸ್ ಸೇವನೆ ಮಾಡುವ ಮೂಲಕವೂ ಹೊಟ್ಟೆಯ ಸುತ್ತಲಿನ ಬೊಜ್ಜನ್ನು ಕರಗಿಸಬಹುದು.
ಹೊಟ್ಟೆಯ ಬೊಜ್ಜನ್ನು ಕರಗಿಸಲು ಸಹಕಾರಿ ಸೋರೆಕಾಯಿ ಜ್ಯೂಸ್:
ಸೋರೆಕಾಯಿ ಅತ್ಯಂತ ಪೌಷ್ಟಿಕ ತರಕಾರಿಯಾಗಿದ್ದು, ಇದರಲ್ಲಿ ನೀರು, ನಾರು ಮತ್ತು ವಿಟಮಿನ್ ಸಿ, ಬಿ6, ಫೋಲೇಟ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ನಂತಹ ಅನೇಕ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಈ ಪೋಷಕಾಂಶಗಳು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇದಲ್ಲದೆ, ಸೋರೆಕಾಯಿಯು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಸೋರೆಕಾಯಿ ರಸವು ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದ್ದು, ಇದು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಅಲ್ಲದೆ ಬೊಜ್ಜನ್ನು ಕರಗಿಸಲು, ತೂಕ ಇಳಿಕೆಗೂ ಕೂಡ ಇದು ಸಹಕಾರಿ. ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿನಿತ್ಯ ಸೋರೆಕಾಯಿ ಜ್ಯೂಸ್ ಸೇವನೆ ಮಾಡಬಹುದು.
ಇದರಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ ಮತ್ತು ಫೈಬರ್ ಅಧಿಕವಾಗಿದ್ದು, ಇದು ದೀರ್ಘಕಾಲದವರೆಗೆ ಹೊಟ್ಟೆಯನ್ನು ತುಂಬಿರುವಂತೆ ಮಾಡುತ್ತದೆ.
ಇದು ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿರಿಸುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ.
ಇದರಲ್ಲಿರುವ ನೀರು ಮತ್ತು ಪೋಷಕಾಂಶಗಳು ದೇಹವನ್ನು ತಂಪಾಗಿಸಿ ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.
ಇದು ಚಯಾಪಚಯ ಕ್ರಿಯೆಯನ್ನು ಸಕ್ರಿಯವಾಗಿರಿಸುತ್ತದೆ, ಇದು ಕೊಬ್ಬನ್ನು ವೇಗವಾಗಿ ಸುಡಲು ಸಹಾಯ ಮಾಡುತ್ತದೆ.
ಸೋರೆಕಾಯಿ ಜ್ಯೂಸ್ ಹೇಗೆ ತಯಾರಿಸುವುದು?
ಈ ಜ್ಯೂಸ್ ತಯಾರಿಸಲು, ಮೊದಲು ಸೋರೆಕಾಯಿಯನ್ನು ತೊಳೆದು ಸಣ್ಣ ತುಂಡುಗಳಾಗಿ ಕತ್ತರಿಸಿ. ನಂತರ ಇದನ್ನು ಒಂದು ಬ್ಲೆಂಡರ್ಗೆ ಹಾಕಿ ಅದಕ್ಕೆ ಪುದೀನ ಎಲೆ, ಜೀರಿಗೆ ಮತ್ತು ಬ್ಲ್ಯಾಕ್ ಸಾಲ್ಟ್ ಸೇರಿಸಿ ನುಣ್ಣಗೆ ರುಬ್ಬಿ, ಬಳಿಕ ಸೋಸಿ, ಕುಡಿಯಿರಿ.
ಶಿರಸಿ, (ಜನವರಿ 04): ರಂಜಿತಾ ಎನ್ನುವ ಹಿಂದೂ ಯುವತಿಯ ಹತ್ಯೆ ಪ್ರಕಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಳಮ್ಮನಗರದ ಆರೋಪಿ ಮಹಮ್ಮದ್ ರಫೀಕ್ ಇಮಾಮ್ಸಾಬ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಾಪುರ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ರಫಿಕ್ನ ಮೃತದೇಹ ಪತ್ತೆಯಾಗಿದೆ. ನಿನ್ನೆ ಆಶ್ರಯ ನಗರ ನಿವಾಸಿ ರಂಜಿತಾ ಮಲ್ಲಪ್ಪ ಬನ್ಸೊಡೆ (30) ಎಂಬ ಮಹಿಳೆಯ ಕೊಲೆಯಾಗಿತ್ತು. ಆರೋಪಿ ಮಹಮ್ಮದ್ ರಫೀಕ್ ಇಮಾಮ್ಸಾಬ್ ಕೊಲೆ ಮಾಡಿ ಪರಾರಿಯಾದ ಆರೋಪ ಕೇಳಿಬಂದಿತ್ತು. ಇನ್ನು ಈ ಕೊಲೆ ಖಂಡಿಸಿ ಇಂದು (ಜನವರಿ 04) ಹಿಂದೂಪರ ಸಂಘಟನೆಗಳು ಕರೆ ನೀಡಿದ್ದ ಯಲ್ಲಾಪುರ ಬಂದ್ ಯಶಸ್ವಿಯಾಗಿದೆ. ಇನ್ನು ಈ ಪ್ರಕರಣ ಸಂಬಂಧ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ
ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಆಶಸ್ ಸರಣಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಸರಣಿಯ ಕೊನೆಯ ಪಂದ್ಯ ಸಿಡ್ನಿ ಮೈದಾನದಲ್ಲಿ ಇಂದಿನಿಂದ ಆರಂಭವಾಗಿದೆ. ಆದರೆ ಪಂದ್ಯದ ಮೊದಲ ದಿನದಾಟ ಭಾಗಶಃ ಮಳೆಗೆ ಆಹುತಿಯಾಯಿತು. ಹೀಗಾಗಿ ಆರಂಭಿಕ ಆಘಾತದಿಂದ ಹೊರಬಂದಿದ್ದ ಇಂಗ್ಲೆಂಡ್ಗೆ ಬೃಹತ್ ಮೊತ್ತವನ್ನು ಕಲೆಹಾಕಲು ಸಾಧ್ಯವಾಗಲಿಲ್ಲ.
ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿರುವ ಇಂಗ್ಲೆಂಡ್ ಮೊದಲ ದಿನದಾಟದಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿದೆ. ಆದಾಗ್ಯೂ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಡುವಲ್ಲಿ ತಂಡದ ಮೂವರು ಆರಂಭಿಕ ಆಟಗಾರರು ವಿಫಲರಾದರು. ಈ ಮೂವರು ಸೇರಿ ಕೇವಲ 53 ರನ್ಗಳನಷ್ಟೇ ಕಲೆಹಾಕಿದರು.
ಆದರೆ ಆ ಬಳಿಕ ಜೊತೆಯಾದ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಇವರಿಬ್ಬರ ಆಟದಿಂದಾಗಿ ತಂಡ 200 ರನ್ಗಳ ಗಡಿ ಕೂಟ ದಾಡಿತು. ಅಷ್ಟರಲ್ಲಾಗಲೇ ಇವರಿಬ್ಬರ ನಡುವೆ 154 ರನ್ಗಳ ಜೊತೆಯಾಟ ಕೂಡ ನಡೆದಿತ್ತು. ಆದರೆ ಈ ಹಂತದಲ್ಲಿ ಸಿಡ್ನಿ ಟೆಸ್ಟ್ ಹಠಾತ್ತನೆ ರದ್ದಾಯಿತು. ಇದಕ್ಕೆ ಕಾರಣ ಮಂದ ಬೆಳಕು ಮತ್ತು ಮಳೆ.
ಸಿಡ್ನಿ ಟೆಸ್ಟ್ನ ಮೊದಲ ದಿನದ ಮೊದಲ ಸೆಷನ್ ಯಾವುದೇ ಅಡೆತಡೆ ಇಲ್ಲದೆ ನಡೆಯಿತು. ಊಟದ ನಂತರ ಎರಡನೇ ಸೆಷನ್ ಇಂಗ್ಲೆಂಡ್ ಪರವಾಗಿತ್ತು. ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಇಬ್ಬರೂ ಜವಾಬ್ದಾರಿಯುತವಾಗಿ ತಮ್ಮ ಇನ್ನಿಂಗ್ಸ್ ನಿಭಾಯಿಸಿದರು. ಆದಾಗ್ಯೂ, ಕಳಪೆ ಬೆಳಕಿನಿಂದಾಗಿ ಆಟವು ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ಆ ಬಳಿಕ ಸಿಡ್ನಿಯಲ್ಲಿ ಭಾರೀ ಮಳೆ ಬೀಳಲು ಪ್ರಾರಂಭಿಸಿತು.
ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಕಳಪೆ ಬೆಳಕಿನಿಂದ ಆಟ ನಿಂತಾಗ , ಜೋ ರೂಟ್ 103 ಎಸೆತಗಳಲ್ಲಿ 72 ರನ್ ಗಳಿಸಿ, ತಮ್ಮ 67ನೇ ಟೆಸ್ಟ್ ಅರ್ಧಶತಕ ದಾಖಲಿಸಿದರೆ, ಹ್ಯಾರಿ ಬ್ರೂಕ್ 92 ಎಸೆತಗಳಲ್ಲಿ 78 ರನ್ ಗಳಿಸಿದ್ದರು. ಹಾಗೆಯೇ ಆಟ ಸ್ಥಗಿತಗೊಳ್ಳುವ ಮೊದಲು ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ 193 ಎಸೆತಗಳಲ್ಲಿ ಅಜೇಯ 154 ರನ್ಗಳ ಪಾಲುದಾರಿಕೆಯನ್ನು ಹಂಚಿಕೊಂಡಿದ್ದರು.
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada) ಇನ್ನೇನು ಮುಗಿಯುವ ಹಂತದಲ್ಲಿದೆ. ಫಿನಾಲೆಗೆ ಇನ್ನು ಕೆಲವೇ ದಿನಗಳಷ್ಟೆ ಬಾಕಿ ಇದೆ. ಮನೆಯಲ್ಲಿ ಈಗ ಉಳಿದಿರುವುದು ಬಹುತೇಕ ಗಟ್ಟಿ ಸ್ಪರ್ಧಿಗಳೇ. ಇಂದು ಭಾನುವಾರದ ಎಪಿಸೋಡ್ ಆಗಿದ್ದು, ಇಂದು (ಡಿಸೆಂಬರ್ 04) ಮನೆಯಿಂದ ಒಬ್ಬರು ಹೊರಗೆ ನಡೆಯಲಿದ್ದಾರೆ. ಇದೀಗ ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳು ತಮಗೆ ಆಗದ ಸ್ಪರ್ಧಿಯ ಮುಖವನ್ನು ಪಂಚಿಂಗ್ ಬ್ಯಾಗಿಗೆ ಅಂಟಿಸಿ ಮನಸೋ ಇಚ್ಛೆ ಗುದ್ದಿದ್ದಾರೆ. ರಕ್ಷಿತಾ ಅಂತೂ ಕಂಟ್ರೋಲ್ ತಪ್ಪಿ, ಬ್ಯಾಗ್ ಕಿತ್ತು ಹೋಗುವಂತೆ ಗುದ್ದಿದ್ದಾರೆ. ವಿಡಿಯೋ ನೋಡಿ…
ಬೆಂಗಳೂರು, (ಜನವರಿ 04): ಸದ್ಯ ಕರ್ನಾಟಕ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (dk Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.
ವಾಸ್ತು ಶಾಸ್ತ್ರವು ಮನೆಯಲ್ಲಿ ಯಾವ ರೀತಿಯ ವಸ್ತುಗಳನ್ನು ಇಡಬೇಕು? ಯಾವ ರೀತಿಯ ವಸ್ತುಗಳನ್ನು ಇಡಬಾರದು ಎಂಬುದನ್ನು ಹೇಳುತ್ತದೆ. ಅವುಗಳನ್ನು ಎಲ್ಲಿ ಇಡಬೇಕು ಎಂಬುದನ್ನು ಸಹ ಇದು ವಿವರಿಸುತ್ತದೆ. ಅನೇಕ ಜನರು ತಮ್ಮ ಮನೆ ನಿರ್ಮಾಣ ಮತ್ತು ಮನೆಯಲ್ಲಿರುವ ವಸ್ತುಗಳನ್ನು ವಾಸ್ತು ಪ್ರಕಾರ ಆಯಾ ದಿಕ್ಕಿನಲ್ಲಿ ಜೋಡಿಸುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಕೆಲವು ಚಿತ್ರಗಳು ಅಥವಾ ಪ್ರತಿಮೆಗಳನ್ನು ಹೊಂದಿರುವುದು ಒಳ್ಳೆಯದು. ಇವುಗಳನ್ನು ಮನೆಯಲ್ಲಿ ಇಡುವುದು ಪವಿತ್ರವೆಂದು ಪರಿಗಣಿಸಲಾಗುತ್ತದೆ.
ಪೂರ್ವ ದಿಕ್ಕಿನಲ್ಲಿ ಹಂಸಗಳ ಚಿತ್ರ ಇದ್ದರೆ ಶುಭ:
ವಾಸ್ತು ದೋಷಗಳನ್ನು ನಿವಾರಿಸಲು ಕೆಲವು ವಸ್ತುಗಳು ಉಪಯುಕ್ತ. ನಿಮ್ಮ ಮನೆಯಲ್ಲಿ ಹಂಸಗಳ ಚಿತ್ರಗಳನ್ನು ಇಡಲು ಬಯಸಿದರೆ ವಾಸ್ತು ಶಾಸ್ತ್ರ ಹಲವಾರು ಸಲಹೆಗಳನ್ನು ನೀಡುತ್ತದೆ. ನೀವು ಹಾಲ್ ಅಥವಾ ಡ್ರಾಯಿಂಗ್ ರೂಮ್ ಅಥವಾ ಅತಿಥಿ ಕೋಣೆಯಲ್ಲಿ ಹಂಸಗಳ ಚಿತ್ರವನ್ನು ಇಟ್ಟರೆ, ಅದನ್ನು ಕೋಣೆಯ ಪೂರ್ವ ದಿಕ್ಕಿನಲ್ಲಿ ಇಡಬೇಕು. ಹಾಗೆ ಮಾಡುವುದು ಶುಭ. ಆದಾಗ್ಯೂ, ನೀವು ಎಲ್ಲಿ ಬೇಕಾದರೂ ಒಂದು ಜೋಡಿ ಹಂಸಗಳನ್ನು ಅಥವಾ ಒಂದೇ ಹಂಸ ಚಿತ್ರವನ್ನು ಇಡಬಹುದು.
ಆರ್ಥಿಕವಾಗಿ ಲಾಭ ಪಡೆಯಲು ಹೀಗೆ ಮಾಡಿ:
ನೀವು ಆರ್ಥಿಕ ಲಾಭವನ್ನು ಬಯಸಿದರೆ, ನಿಮ್ಮ ಡ್ರಾಯಿಂಗ್ ರೂಮ್ ಅಥವಾ ಅತಿಥಿ ಕೋಣೆಯಲ್ಲಿ ಹಂಸದ ಚಿತ್ರವನ್ನು ನೇತುಹಾಕಿ. ನೀವು ಗೋಡೆಯ ಮೇಲೆ ಒಂದು ಜೋಡಿ ಹಂಸಗಳು ಅಥವಾ ಹಂಸದ ಚಿತ್ರವನ್ನು ನೇತುಹಾಕಬಹುದು.
ನಕಾರಾತ್ಮಕ ಶಕ್ತಿ ದೂರ:
ನಿಮ್ಮ ಮನೆಯಲ್ಲಿ ಹಂಸಗಳ ಚಿತ್ರವನ್ನು ಇಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಅಥವಾ ನಿಮ್ಮ ವ್ಯವಹಾರ ಅಥವಾ ಉದ್ಯೋಗದಲ್ಲಿ ಪ್ರಗತಿ ಸಿಗುತ್ತದೆ. ನಿಮ್ಮ ಕೆಲಸದಲ್ಲಿ ನೀವು ಯಶಸ್ಸನ್ನು ಸಾಧಿಸುವಿರಿ.
ಮಲಗುವ ಕೋಣೆಯಲ್ಲಿ ಹಂಸಗಳ ಜೋಡಿಯ ಫೋಟೋ ಇಡುವುದರಿಂದಲೂ ಹಲವು ಪ್ರಯೋಜನಗಳಿವೆ. ಈ ಫೋಟೋವನ್ನು ಮಲಗುವ ಕೋಣೆಯಲ್ಲಿ ಇಡುವುದರಿಂದ ದಾಂಪತ್ಯ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದು ಗಂಡ ಮತ್ತು ಹೆಂಡತಿಯ ನಡುವಿನ ಉದ್ವಿಗ್ನತೆ ಮತ್ತು ಸಂಘರ್ಷವನ್ನು ಕಡಿಮೆ ಮಾಡುತ್ತದೆ. ಇದು ಪ್ರೀತಿಯನ್ನು ಹೆಚ್ಚಿಸುತ್ತದೆ.
ಬುದ್ಧಿವಂತಿಕೆ:
ಹಂಸವು ಜ್ಞಾನದ ರೂಪದಲ್ಲಿರುವ ಸರಸ್ವತಿ ದೇವಿಯ ವಾಹನವಾಗಿದೆ. ಆದ್ದರಿಂದ, ನಿಮ್ಮ ಮನೆಯ ಅಧ್ಯಯನ ಕೋಣೆಯಲ್ಲಿ ಹಂಸದ ಚಿತ್ರವನ್ನು ಇಡುವುದರಿಂದ ಸರಸ್ವತಿ ದೇವಿಯ ಆಶೀರ್ವಾದ ಸಿಗುತ್ತದೆ. ಅವರು ಕುಟುಂಬದಲ್ಲಿ ಜ್ಞಾನವನ್ನು ದಯಪಾಲಿಸುತ್ತಾರೆ. ಅಂತಹ ಮನೆಯಲ್ಲಿ ಶಿಕ್ಷಣದ ಕೊರತೆ ಎಂದಿಗೂ ಇರುವುದಿಲ್ಲ. ಮಗುವಿನ ಸ್ಟಡಿ ಟೇಬಲ್ ಮೇಲೆ ಹಂಸ ಪ್ರತಿಮೆ ಇಡುವುದರಿಂದ ಅವರು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡಲು ಮಾತ್ರವಲ್ಲದೆ ಪರೀಕ್ಷೆಗಳಲ್ಲಿಯೂ ಯಶಸ್ವಿಯಾಗುತ್ತಾರೆ. ಸ್ಟಡಿ ಟೇಬಲ್ ಮೇಲೆ ಹಂಸ ಪ್ರತಿಮೆ ಮಕ್ಕಳು ತಮ್ಮ ಅಧ್ಯಯನದ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ.
ಗಾಯದಿಂದ ಬಳಲುತ್ತಿರುವ ನಾಲ್ವರು ಆರ್ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು ಆರ್ಸಿಬಿ ತಂಡದ ಪ್ರಮುಖ ಆಟಗಾರರಾಗಿದ್ದು, ಏಕಾಂಗಿಯಾಗಿ ತಂಡವನ್ನು ಗೆಲ್ಲಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದ್ದರಿಂದ, ಈ ನಾಲ್ವರು ಇಂಜುರಿ ಆರ್ಸಿಬಿ ತಂಡವನ್ನು ಚಿಂತೆಗೀಡುಮಾಡಿದೆ.
ಫಿಲ್ ಸಾಲ್ಟ್ ಪ್ರಸ್ತುತ ILT20 ಲೀಗ್ನಲ್ಲಿ ಅಬುದಾಭಿ ನೈಟ್ ರೈಡರ್ಸ್ ತಂಡದ ಪರ ಕಣಕ್ಕಿಳಿಯುತ್ತಿದ್ದಾರೆ. ಆದರೆ ಈ ಟಿ20 ಲೀಗ್ನಲ್ಲಿ ಬೆನ್ನಿನ ಗಾಯದಿಂದ ಬಳಲುತ್ತಿರುವ ಫಿಲ್ ಸಾಲ್ಟ್ ILT20 ಲೀಗ್ನ ಅರ್ಹತಾ ಪಂದ್ಯಗಳಿಂದ ಹೊರಗುಳಿದಿದ್ದರು.
ಹಾಗೆಯೇ ಆರ್ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಮತ್ತು ನಾಯಕ ರಜತ್ ಪಾಟಿದಾರ್ ಕೂಡ ಗಾಯಕ್ಕೆ ತುತ್ತಾಗಿದ್ದಾರೆ. ಪ್ರಸ್ತುತ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿರುವ ಪಾಟಿದಾರ್ ಅವರ ಗಾಯದ ತೀವ್ರತೆ ಸದ್ಯಕ್ಕೆ ತಿಳಿದಿಲ್ಲ. ಆದರೆ ಪಾಟಿದರ್ ಗಾಯಗೊಂಡಿರುವುದು ಐಪಿಎಲ್ 2026 ರ ಆರಂಭಕ್ಕೂ ಮುಂಚಿತವಾಗಿ ಆರ್ಸಿಬಿ ತಂಡದ ಉದ್ವಿಗ್ನತೆಯನ್ನು ಹೆಚ್ಚಿಸಿದೆ.
ಇತ್ತ ತಂಡದ ಸ್ಫೋಟಕ ಬ್ಯಾಟ್ಸ್ಮನ್ ಟಿಮ್ ಡೇವಿಡ್ ಬಿಗ್ ಬ್ಯಾಷ್ ಲೀಗ್ ಸಮಯದಲ್ಲಿ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದರು. ಪರ್ತ್ ಕ್ರೀಡಾಂಗಣದಲ್ಲಿ ನಡೆದ ಹೋಬಾರ್ಟ್ ಹರಿಕೇನ್ಸ್ ಮತ್ತು ಪರ್ತ್ ಸ್ಕಾರ್ಚರ್ಸ್ ನಡುವಿನ ಪಂದ್ಯದ ಸಮಯದಲ್ಲಿ ಡೇವಿಡ್ ಗಾಯಗೊಂಡಿದ್ದರು. ಇದು ಆರ್ಸಿಬಿ ತಂಡಕ್ಕೆ ದೊಡ್ಡ ಆಘಾತ ಮಾತ್ರವಲ್ಲದೆ 2026 ರ ಟಿ20 ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾಕ್ಕೂ ಅಷ್ಟೇ ಆತಂಕಕಾರಿಯಾಗಿದೆ.
ಇವರುಗಳ ಜೊತೆಗೆ ಆರ್ಸಿಬಿ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಜೋಶ್ ಹೇಜಲ್ವುಡ್ ಐಪಿಎಲ್ 2026 ಕ್ಕೂ ಮುನ್ನ ಗಾಯಗೊಂಡಿರುವುದು ಆರ್ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಹೇಜಲ್ವುಡ್ ಕಳೆದ ನವೆಂಬರ್ನಿಂದಲೂ ಗಾಯದಿಂದ ಬಳಲುತ್ತಿದ್ದು, ಇದರ ಪರಿಣಾಮವಾಗಿ ಅವರನ್ನು ಆಶಸ್ ಸರಣಿಯಿಂದಲೂ ಹೊರಗಿಡಲಾಗಿದೆ.
ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ
ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(pralhad joshi) ವಾಗ್ದಾಳಿ ನಡೆಸಿದ್ದಾರೆ.
ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು . ಈಗ 125 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ (ಪ್ರತಿದಿನ ಕೂಲಿ 370 ರೂ ಆಗಿದೆ). ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆಯ ಕೇಂದ್ರವಾಗಿರಲಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದು ಕಿಡಿಕಾರಿದರು.
ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು ವರ್ಷದಲ್ಲಿ 60 ದಿನಗಳ ಬಿಡುವು ನೀಡಲಾಗಿದೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಲಾಗುತ್ತಿತ್ತು. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚ ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿ ಮಾಡಲಾಗಿದೆ ಎಂದು ಹೇಳಿದರು
ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳ್ಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ನಿಟ್ಟಿನಲ್ಲಿ ಕೆಲ ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿರುತ್ತದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಬಲಪಡಿಸುವ ಕಲ್ಯಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಿದೆ. ಏಕೆಂದರೆ ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು.
MGNAREGA ಯೋಜನೆಯು ಬೇಡಿಕೆ ಆಧಾರಿತ (Demand Driven Scheme) ಯೋಜನೆಯಾಗಿತ್ತು.
ಆದರೆ ಇದು Off the record Target based scheme ಆಗಿ ಪರಿವರ್ತಿತವಾಗಿತ್ತು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಇದ್ದ ಅತಿ ದೊಡ್ಡ ಸಮಸ್ಯೆ ಎಂದರೆ ಸೂಕ್ತ ಸಮಯದಲ್ಲಿ ಕೂಲಿ ಮತ್ತು ಸಾಮಗ್ರಿ ವೆಚ್ಚದ ಪಾವತಿ (Wage & material payment). ಹೊಸ ಪರಿಷ್ಕೃತ ಯೋಜನೆಯಡಿ Centralized payment system ಇರುವುದರಿಂದ ಈ ಮೊದಲು ಇದ್ದ ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬೀಳಲಿದೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.