Headlines

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು…

Read More

ಇರಾನ್ ಮೇಲೆ ಟ್ರಂಪ್ ಯುದ್ಧ ಘೋಷಿಸಲು ಕಾರಣರಾದ ಪೀಟ್ ಹೆಗ್ಸೆತ್ ಯಾರು?

ವಾಷಿಂಗ್ಟನ್, ಮಾರ್ಚ್ 24: ಅಮೆರಿಕ-ಇಸ್ರೇಲ್-ಇರಾನ್ ಯುದ್ಧದಲ್ಲಿ ಇದೀಗ ಗಮನ ಸೆಳೆಯುತ್ತಿರುವ ವ್ಯಕ್ತಿ ಅಮೆರಿಕದ ಪೀಟ್ ಹೆಗ್ಸೆತ್. ಇವರು ಡೊನಾಲ್ಡ್ ಟ್ರಂಪ್ (Donald Trump) ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು. ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿರುವ ಪೀಟ್ ಹೆಗ್ಸೆತ್ ಅವರೇ ಇರಾನ್ ಮೇಲೆ ದಾಳಿ ನಡೆಸೋಣ ಎಂದು ಟ್ರಂಪ್​ ಕಿವಿಯೂದಿದ್ದಾರೆ ಎಂಬ ವಿಷಯ ಬಯಲಾಗಿದೆ. ಹೀಗಾಗಿ, ಈ ಪೀಟ್ ಹೆಗ್ಸೆತ್ ಬಗ್ಗೆ ಭಾರೀ ಚರ್ಚೆಗಳು ಶುರುವಾಗಿವೆ. ಇರಾನ್ ಮೇಲೆ ಯುದ್ಧ ಮಾಡೋಣ ಎಂದು ಮೊದಲು ಹೇಳಿದ್ದೇ ಪೀಟ್ ಹೆಗ್ಸೆತ್ ಎಂದು…

Read More

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ…

Read More

ರಶ್ಮಿಕಾ-ವಿಜಯ್ ಮದುವೆ ಮಾಡಿಸಿದ್ದು ಇವರೇ ನೋಡಿ

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದವು. ಅದರಲ್ಲೂ ಮುಹೂರ್ತದ ದಿನ ರಶ್ಮಿಕಾ ಮತ್ತು ವಿಜಯ್ ಅವರುಗಳ ಧರಿಸಿದ್ದ ಉಡುಗೆ, ಧರಿಸಿದ್ದ ಚಿನ್ನದ ಆಭರಣಗಳಂತೂ ಎಲ್ಲರ ಮನಗೆದ್ದವು. ಇಡೀ ಮದುವೆ ಸಂಪ್ರದಾಯಿಕವಾಗಿ, ಸಾಂಸ್ಕೃತಿಕವಾಗಿ ರಿಚ್​ ಆಗಿತ್ತು. ಸುಮಾರು ಒಂದು ವಾರ ನಡೆದ ಇವರ ಮದುವೆಯನ್ನು ಅರೇಂಜ್ ಮಾಡಿದ್ದು ಇವೆಂಟ್ ಮ್ಯಾನೇಜ್​​ಮೆಂಟ್ ಸಂಸ್ಥೆಯಾದ ‘ಆರ್​​ವಿಆರ್…

Read More

ಸಿಂಗಲ್ ಪೇರೆಂಟ್ ಆಗಿ ಮಗನ ಬೆಳೆಸುವುದು ತುಂಬಾ ಕಷ್ಟ: ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಚಿರಂಜೀವಿ ಸರ್ಜಾ (Chiranjeevi Sarja) ನಿಧನದ ಬಳಿಕ ಅವರು ಸಖತ್ ನೋವು ಅನುಭವಿಸಿದರು. ಪುತ್ರ ರಾಯನ್ (Raayan) ಜನಿಸಿದ ಬಳಿಕ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ಆ ಬಗ್ಗೆ ಮೇಘನಾ ರಾಜ್ (Meghana Raj) ಅವರು ಮಾತನಾಡಿದ್ದಾರೆ. ‘ರೆಯಾನ್ ಮಿಥುನ್’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಖಾಸಗಿ ಜೀವನದ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

152820324000 ರೂಗೆ ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿದ ಉದ್ಯಮಿ ಕಾಲ್ ಸೊಮಾನಿ ಯಾರು? ಐಪಿಎಲ್​ಗೂ ಅವರಿಗೂ ಏನು ಸಂಬಂಧ?

ನವದೆಹಲಿ, ಮಾರ್ಚ್ 24: ಸೇಲ್​ಗೆ ಇಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಮಾರಾಟವಾಗುವ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ (Rajasthan Royals) ಬಿಕರಿಯಾಗಿದೆ. ಐಪಿಎಲ್​ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ಅನ್ನು ಕಾಲ್ ಸೊಮಾನಿ (Kal Somani) ಅವರ ನೇತೃತ್ವದ ಕನ್ಸಾರ್ಟಿಯಂ 1.63 ಬಿಲಿಯನ್ ಡಾಲರ್​ಗೆ ಖರೀದಿ ಮಾಡಿದೆ. 1.63 ಬಿಲಿಯನ್ ಡಾಲರ್ ಎಂದರೆ ಸುಮಾರು 152820324000 ರೂ (15.28 ಸಾವಿರ ಕೋಟಿ ರೂ) ಆಗುತ್ತದೆ. ಅಮೆರಿಕದ ರೀಟೇಲ್ ಕಿಂಗ್ ಎನಿಸಿದ ವಾಲ್ಮಾರ್ಟ್…

Read More

‘ಧುರಂಧರ್ 2’ ಸಿನಿಮಾದಿಂದ ನಿಂತೇ ಹೋಯ್ತು ಅಮಿತಾಬ್ ಬಚ್ಚನ್ ಸಿನಿಮಾ

‘ಧುರಂಧರ್ 2’ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆ ಆದ ವಾರಕ್ಕೂ ಮುಂಚೆಯೇ 500 ಕೋಟಿಗೂ ಹೆಚ್ಚು ಗಳಿಕೆಯನ್ನು ಭಾರತದಲ್ಲಿ ಮಾಡಿದೆ. ಎಲ್ಲೆಡೆ ಸಿನಿಮಾದ ಶೋಗಳು ಹೌಸ್​​ಫುಲ್ ಆಗುತ್ತಿವೆ. ಅಲ್ಲು ಅರ್ಜುನ್, ರಾಜಮೌಳಿ, ರಜನೀಕಾಂತ್, ರಾಮ್ ಚರಣ್ ಇನ್ನೂ ಹಲವು ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಸಿನಿಮಾವನ್ನು ಕೊಂಡಾಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತೂ ಸಿನಿಮಾ ಬಗ್ಗೆ ಪ್ರಶಂಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ‘ಧುರಂಧರ್ 2’ ಸಿನಿಮಾದಿಂದಾಗಿ ಅಮಿತಾಬ್ ಬಚ್ಚನ್ ಅವರ…

Read More

ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ…

Read More

ಐಪಿಎಲ್ ಇತಿಹಾಸದಲ್ಲೇ ದಾಖಲೆ: 15,286 ಕೋಟಿ ರೂ.ಗೆ ಮಾರಾಟವಾಯ್ತು ರಾಜಸ್ಥಾನ ರಾಯಲ್ಸ್!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ದೊಡ್ಡ ಮೊತ್ತದ ಡೀಲ್ ಒಂದು ನಡೆದಿದೆ. ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕತ್ವದ ರೇಸ್ ಕೊನೆಗೊಂಡಿದ್ದು, ಅಮೆರಿಕ ಮೂಲದ ಉದ್ಯಮಿ ಕಲ್ ಸೋಮನಿ (Kal Somani) ನೇತೃತ್ವದ ಒಕ್ಕೂಟವು ತಂಡವನ್ನು ಬರೋಬ್ಬರಿ 1.63 ಬಿಲಿಯನ್ ಡಾಲರ್ (ಸುಮಾರು 15,286 ಕೋಟಿ ರೂ.) ಮೌಲ್ಯಕ್ಕೆ ಖರೀದಿಸಿದೆ.ಈ ಒಪ್ಪಂದದೊಂದಿಗೆ ರಾಜಸ್ಥಾನ ರಾಯಲ್ಸ್ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರಾಂಚೈಸಿಯಾಗಿ ಹೊರಹೊಮ್ಮಿದೆ. ಸೋಮನಿ ಅವರಿಗೆ ವಾಲ್‌ಮಾರ್ಟ್ ಕುಟುಂಬದ ರಾಬ್ ವಾಲ್ಟನ್ ಮತ್ತು ಎನ್‌ಎಫ್‌ಎಲ್ ತಂಡವಾದ…

Read More

ಟ್ರಂಪ್ ಕದನ ವಿರಾಮ ಬಯಸುತ್ತಿದ್ದಾರೆ, ಇರಾನ್ ಅಮೆರಿಕದ ಷರತ್ತಿಗೆ ಒಪ್ಪುವುದು ಅನುಮಾನ; ಇಸ್ರೇಲ್ ಅಭಿಮತ

ಜೆರುಸಲೇಂ, ಮಾರ್ಚ್ 24: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump)  ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ನಿಲ್ಲಿಸಲು ಇರಾನ್ ಜೊತೆ ಒಪ್ಪಂದ ಮಾಡಿಕೊಳ್ಳಲು ಬಯಸುತ್ತಿದ್ದಾರೆ. ಅಮೆರಿಕ ಏಪ್ರಿಲ್ 9ರೊಳಗೆ ಯುದ್ಧವನ್ನು ಕೊನೆಗೊಳಿಸಲು ಬಯಸಿದೆ. ಆದರೆ, ಹೊಸ ಮಾತುಕತೆಗಳಲ್ಲಿ ಹಾಕಲಾದ ಷರತ್ತುಗಳನ್ನು ಒಪ್ಪಲು ಇರಾನ್ ಒಪ್ಪುವುದು ಅನುಮಾನ ಎಂದು ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದೆ. ಫೆಬ್ರವರಿ 28ರಂದು ಇರಾನ್ ವಿರುದ್ಧ ಯುಎಸ್- ಇಸ್ರೇಲ್ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿತ್ತು. ಇದು ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯದಲ್ಲಿ ನಡೆದ…

Read More