Headlines

ಬೀದಿ ಬದಿ ವ್ಯಾಪಾರಿಗಳ ಎತ್ತಂಗಡಿಯಾದರೂ ಪಾದಚಾರಿಗಳಿಗೆ ಜಾಗವಿಲ್ಲ! ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟ – Kannada News | Bengaluru Gandhi Bazaar Footpath Encroachment and Illegal Parking Trouble Pedestrians

ಗಾಂಧಿ ಬಜಾರ್‌ನಲ್ಲಿ ಅಕ್ರಮ ಪಾರ್ಕಿಂಗ್ ಕಾಟImage Credit source: tv9 ಬೆಂಗಳೂರು, ಆಗಸ್ಟ್ 4: ಬೆಂಗಳೂರು (Bengaluru) ನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ, ಪಾದಚಾರಿಗಳ ಸುರಕ್ಷತೆಗೆ ಅಗತ್ಯವಾದ ಮೂಲಸೌಕರ್ಯ ಮಾತ್ರ ಇನ್ನೂ ಸಮರ್ಪಕವಾಗಿಲ್ಲ. ಬೆಂಗಳೂರಿನ ಗಾಂಧಿ ಬಜಾರ್‌ನಲ್ಲಿ ಫುಟ್‌ಪಾತ್‌ಗಳನ್ನೇ ವಾಹನಗಳ ಪಾರ್ಕಿಂಗ್ ಹಾಗೂ ಅತಿಕ್ರಮಣಕ್ಕೆ ಬಳಸುತ್ತಿರುವುದರಿಂದ ಪಾದಚಾರಿಗಳು ರಸ್ತೆಯಲ್ಲೇ ನಡೆದುಕೊಂಡು ಹೋಗುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಂಧಿ ಬಜಾರ್‌ನ ಹಲವು ಕಡೆ ಫುಟ್‌ಪಾತ್‌ಗಳ ಮೇಲೆ ಕಾರು, ಬೈಕ್‌ಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಲಾಗುತ್ತಿದೆ. ಮತ್ತೊಂದೆಡೆ ಬೀದಿ ಬದಿ…

Read More

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ; ರಾಜೀನಾಮೆ ಎಚ್ಚರಿಕೆ, ಬೆಂಬಲಿಗರ ಪ್ರತಿಭಟನೆ – Kannada News | Karnataka Cabinet Expansion: Congress MLAs Protest Over Denied Ministerial Berths

ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಂದರ್ಭದ ಚಿತ್ರImage Credit source: tv9 ಬೆಂಗಳೂರು, ಆಗಸ್ಟ್ 4: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ (Karnataka Cabinet Expansion) ನಡೆದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದೆ. ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದು ಅದು ಹುಸಿಯಾದ ಬೆನ್ನಲ್ಲೇ ಹಲವು ಶಾಸಕರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಕೆಲವರು ಶಾಸಕ ಸ್ಥಾನ ಹಾಗೂ ನಿಗಮ-ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ…

Read More

Karnataka Dam Water Level: ಕೆಆರ್‌ಎಸ್, ಆಲಮಟ್ಟಿಗೆ ಬೃಹತ್‌ ಒಳಹರಿವು! ಜಲಾಶಯಗಳ ಇಂದಿನ ನೀರಿನ ಮಟ್ಟ ಇಲ್ಲಿದೆ – Kannada News | Karnataka Reservoir Water Level on August 03; KRS, Almatti, Hemavathi Inflow Increases

ಬೆಂಗಳೂರು, ಆಗಸ್ಟ್ 04: ಕಾವೇರಿ, ಕೃಷ್ಣಾ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಪ್ರಮುಖ ಜಲಾಶಯಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ರೈತರ ಮುಖದಲ್ಲಿ ಹರ್ಷ ಮೂಡಿಸುವ ಜೊತೆಗೆ, ಕೆಲವು ಕಡೆ ಕಾಲುವೆ ದುರಸ್ತಿ ಕೊರತೆಯಿಂದ ಭೀತಿಯೂ ಎದುರಾಗಿದೆ. 1. ಕೆಆರ್‌ಎಸ್ ಜಲಾಶಯ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಡ್ಯಾಂಗೆ ಬೃಹತ್ ಪ್ರಮಾಣದ ಒಳಹರಿವು ದಾಖಲಾಗಿದೆ. ಗರಿಷ್ಠ ಮಟ್ಟ:…

Read More

‘ಗೂಗ್ಲಿ’ಯಲ್ಲಿ ಯಶ್​​ಗೆ ಬರೆದ ಡೈಲಾಗ್ ನಿಜವಾಯ್ತು; ಜಾಗತಿಕ ಮಟ್ಟದಲ್ಲಿ ‘ಟಾಕ್ಸಿಕ್’ ಹವಾ – Kannada News | From Googly to Toxic: Yash Global Success Proves Pavan Wadeyar Dialogue Right

ರಾಕಿಂಗ್ ಸ್ಟಾರ್ ಯಶ್ ಅವರ ‘ಕೆಜಿಎಫ್’ ಸರಣಿಯ ಯಶಸ್ಸಿನ ನಂತರ, ಅವರ ಪ್ರತಿಯೊಂದು ಸಿನಿಮಾ ಕೂಡ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸಾಲಿಗೆ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಸೇರ್ಪಡೆಯಾಗಿದೆ . ಚಿತ್ರದ ಗ್ಲೋಬಲ್ ಮಟ್ಟದ ಕ್ರೇಜ್ ನೋಡಿದ ‘ಗೂಗ್ಲಿ’ ಚಿತ್ರದ ನಿರ್ದೇಶಕ ಪವನ್ ಒಡೆಯರ್, ಅಂದು ತಾವು ಸಿನಿಮಾಗಾಗಿ ಬರೆದಿದ್ದ ಡೈಲಾಗ್‌ ಒಂದನ್ನು ನೆನಪಿಸಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ. ‘ಗೂಗ್ಲಿ’ಯ ಆ ಒಂದು ಮಾತು ಇಂದು ಅಕ್ಷರಶಃ ಸತ್ಯ…

Read More

ಪಾಕಿಸ್ತಾನ್​ ಸೂಪರ್ ಲೀಗ್​ನಲ್ಲಿ ಮೊಹಮ್ಮದ್ ಅಮಿರ್ ‘ವಿದೇಶಿ ಆಟಗಾರ’! – Kannada News | Mohammad Amir to play as overseas player in PSL 2027

ಪಾಕಿಸ್ತಾನ್ ಕ್ರಿಕೆಟ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮಿರ್ ಮುಂಬರುವ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ವಿದೇಶಿ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಅಮಿರ್ ಬ್ರಿಟನ್ ಪೌರತ್ವ ಪಡೆದುಕೊಂಡಿರುವುದೇ ಇದಕ್ಕೆ ಕಾರಣ. ಇತ್ತ ಬ್ರಿಟನ್ ಪ್ರಜೆಯಾಗಿರುವ ಮೊಹಮ್ಮದ್ ಅಮಿರ್ ಅವರನ್ನು ಇನ್ಮುಂದೆ ವಿದೇಶಿ ಕೋಟಾದಲ್ಲಿ ಆಡಿಸಬೇಕಾದ ಅನಿವಾರ್ಯತೆ ರಾವಲ್ಪಿಂಡಿ ಫ್ರಾಂಚೈಸಿಗೆ ಎದುರಾಗಿದೆ. ಅಂದರೆ ಕಳೆದ ಬಾರಿ ಅಮಿರ್ ಸ್ಥಳೀಯ ಆಟಗಾರನಾಗಿ ಕಣಕ್ಕಿಳಿದಿದ್ದರು. ಇದೀಗ ಅವರನ್ನು ರಿಟೈನ್ ಮಾಡಿಕೊಂಡರೆ, ವಿದೇಶಿ ಆಟಗಾರನಾಗಿ ಆಡಿಸಬೇಕಾಗುತ್ತದೆ. ಇದುವೇ ಈಗ ಹೊಸ ಗೊಂದಲಕ್ಕೆ ಕಾರಣವಾಗಿದೆ. ಏನಿದು ಗೊಂದಲ?…

Read More

Naga Panchami 2026: ನಾಗರ ಪಂಚಮಿಯಂದು ಜೀವಂತ ಹಾವಿಗೆ ಹಾಲು ಎರೆಯುವುದು ಶಾಸ್ತ್ರ ಸಮ್ಮತವೇ? – Kannada News | Naga panchami 2026 offering milk to snakes sacred tradition or harmful myth

ಪ್ರತಿ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ನಾಗರ ಪಂಚಮಿ ಹಬ್ಬವನ್ನು ದೇಶಾದ್ಯಂತ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ಆಚರಿಸಲಾಗುತ್ತದೆ. ದೃಕ್ ಪಂಚಾಂಗದ ಪ್ರಕಾರ, 2026 ರಲ್ಲಿ ಆಗಸ್ಟ್ 17 ರಂದು ಸೋಮವಾರ ನಾಗರ ಪಂಚಮಿ ಬಂದಿದೆ. ಕುಟುಂಬದ ಕ್ಷೇಮ, ಅಭಿವೃದ್ಧಿ, ಸಂತಾನ ಭಾಗ್ಯ ಹಾಗೂ ದೀರ್ಘಾಯುಷ್ಯಕ್ಕಾಗಿ ಭಕ್ತರು ಈ ದಿನ ನಾಗ ದೇವತೆಯನ್ನು ಪೂಜಿಸುತ್ತಾರೆ. ನಾಗ ಆರಾಧನೆಯ ಆಧ್ಯಾತ್ಮಿಕ ಹಾಗೂ ಪೌರಾಣಿಕ ಹಿನ್ನೆಲೆ: ಹಿಂದೂ ಸಂಪ್ರದಾಯದಲ್ಲಿ ನಾಗ ದೇವತೆಗೆ ಅತ್ಯಂತ ಪವಿತ್ರ ಸ್ಥಾನವಿದೆ. ಪೌರಾಣಿಕ ನಂಬಿಕೆಗಳ…

Read More

ಅರಣ್ಯ ಇಲಾಖೆ ವೈಫಲ್ಯ: ಚಿರತೆ ಹಿಡಿಯಲು ಟಾಸ್ಕ್ ಫೋರ್ಸ್ ರಚಿಸಿಕೊಂಡ ಬ್ಯಾಡರಹಳ್ಳಿ ಜನ! – Kannada News | Bengaluru Byadarahalli Leopard Scare: Locals Form Own Task Force After Forest Department Fails

ಚಿರತೆ ಹಿಡಿಯಲು ಟಾಸ್ಕ್ ಫೋರ್ಸ್ ರಚಿಸಿಕೊಂಡ ಬ್ಯಾಡರಹಳ್ಳಿ ಜನ! ಬೆಂಗಳೂರು, ಆಗಸ್ಟ್ 04: ಬ್ಯಾಡರಹಳ್ಳಿಯಲ್ಲಿ ಒಂಟಿ ಚಿರತೆಯ ಕಣ್ಣಾಮುಚ್ಚಾಲೆ ಆಟ ಮುಂದುವರಿದಿದ್ದು, ಇಡೀ ಏರಿಯಾದ ಜನರು ಭಯದಿಂದ ದಿನ ದೂಡುವಂತಾಗಿದೆ. ಕಳೆದ ಹಲವು ದಿನಗಳಿಂದ ಸಾರ್ವಜನಿಕ ನಿದ್ರೆ ಗೆಡಿಸಿರುವ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳ ಈ ಉದಾಸೀನತೆ ಹಾಗೂ ನಿರ್ಲಕ್ಷ್ಯದಿಂದ ಎಚ್ಚೆತ್ತ ಬ್ಯಾಡರಹಳ್ಳಿಯ ಸ್ಥಳೀಯರೇ ಈಗ ಸ್ವತಃ ಅಖಾಡಕ್ಕಿಳಿದಿದ್ದು, ‘ಚಿರತೆ ಟಾಸ್ಕ್ ಫೋರ್ಸ್’ ರಚಿಸಿಕೊಂಡು ಕಾರ್ಯಾಚರಣೆಗೆ ಧುಮುಕಿದ್ದಾರೆ! 6 ಡೇಂಜರ್ ಜೋನ್‌ಗಳಲ್ಲಿ ನಿರಂತರ…

Read More

18 ಸೈನಿಕರ ಸಾವು, ಭೂಗತ ಬಂಕರ್‌ಗಳ ಸವಾಲು: ಇರಾನ್ ಬಿಕ್ಕಟ್ಟಿನಲ್ಲಿ ಸಿಲುಕಿ ಅಸಾಂಪ್ರದಾಯಿಕ ಹಾದಿ ತುಳಿದ ಟ್ರಂಪ್ ಆಡಳಿತ – Kannada News | US Iran Crisis: Trump’s Unconventional Path, Underground Bunkers and 18 Casualties

ವಾಷಿಂಗ್ಟನ್, ಆಗಸ್ಟ್​ 04: ಮಧ್ಯಪ್ರಾಚ್ಯದಲ್ಲಿ ಇರಾನ್‌(Iran)ನೊಂದಿಗಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಇರಾನ್ ಮೇಲೆ ಒತ್ತಡ ಹೇರಲು ಹಾಗೂ ಶಿಕ್ಷಿಸಲು ಹೊಸ, ಸೃಜನಶೀಲ ಮತ್ತು ಅಸಾಂಪ್ರದಾಯಿಕ ಮಾರ್ಗಗಳನ್ನು ಹುಡುಕುವಂತೆ ಅಮೆರಿಕ ಮಿಲಿಟರಿಯ ಜಂಟಿ ಪಡೆ ಯುಎಸ್ ಸೆಂಟ್ರಲ್ ಕಮಾಂಡ್ ತನ್ನ ಮಿಲಿಟರಿ ವಿಶ್ಲೇಷಕರಿಗೆ ಮತ್ತು ಕಿರಿಯ ಶ್ರೇಣಿಯ ಸೈನಿಕರಿಗೆ ಸೂಚಿಸಿದೆ. ಸಿಎನ್‌ಎನ್ ವರದಿಯ ಪ್ರಕಾರ, ಸೆಂಟ್ಕಾಮ್‌ನ ಗುಪ್ತಚರ ವಿಭಾಗವು ಸೈನಿಕರಿಗೆ ಇ-ಮೇಲ್ ಕಳುಹಿಸುವ ಮೂಲಕ ಹೊಸ ತಂತ್ರಗಳಿಗೆಆಹ್ವಾನ ನೀಡಿದೆ. ಸಾಂಪ್ರದಾಯಿಕ ಸೈನಿಕ ಆಯ್ಕೆಗಳು ಮುಗಿಯುತ್ತ ಬಂದಿರುವುದರಿಂದ ಈ ರೀತಿ…

Read More

ಕ್ರಿಕೆಟ್‌ನಿಂದ ಅಖಿಲೇಶ್ ರೆಡ್ಡಿಗೆ 8 ವರ್ಷಗಳ ನಿಷೇಧ! – Kannada News | USA Cricketer Akhilesh Reddy Banned for 8 Years

ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಭ್ರಷ್ಟಾಚಾರ ನಿರೋಧಕ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಯುನೈಟೆಡ್ ಸ್ಟೇಟ್ಸ್ (USA) ತಂಡದ ಆಫ್-ಸ್ಪಿನ್ನರ್ ಬೋಡುಗುಮ್ ಅಖಿಲೇಶ್ ರೆಡ್ಡಿ ಅವರಿಗೆ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಎಂಟು ವರ್ಷಗಳ ಕಾಲ ಕಠಿಣ ನಿಷೇಧ ಹೇರಿದೆ. ನಿಷೇಧಕ್ಕೆ ಕಾರಣವೇನು? 2025ರಲ್ಲಿ ನಡೆದ ಅಬುಧಾಬಿ ಟಿ10 ಟೂರ್ನಿಯಲ್ಲಿ ಅಖಿಲೇಶ್ ರೆಡ್ಡಿ ‘ಆಸ್ಪಿನ್ ಸ್ಟಾಲಿಯನ್ಸ್’ ತಂಡದ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು ತನ್ನದೇ ತಂಡದ ಸಹ ಆಟಗಾರನೊಬ್ಬನನ್ನು ಭೇಟಿಯಾಗಿ, ಬೌಲಿಂಗ್ ಮಾಡುವಾಗ ಉದ್ದೇಶಪೂರ್ವಕವಾಗಿ ಹೆಚ್ಚು ರನ್…

Read More

ಟೀಮ್ ಇಂಡಿಯಾದ 7 ಆಟಗಾರರು ಗಾಯಾಳು! – Kannada News | Team India’s Injury Crisis: 7 Key Players Sidelined

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಎಡಗೈ ಬ್ಯಾಟರ್ ಸಾಯಿ ಸುದರ್ಶನ್ ಕಾಲಿನ ಹೆಬ್ಬೆರಳಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದಾಗ್ಯೂ, ಅವರನ್ನು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಅವರಿಗೆ ಫಿಟ್‌ನೆಸ್ ಪರೀಕ್ಷೆ ನಡೆಯಲಿದ್ದು, ಅವರು ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. (PC: Getty Images) Source link

Read More